ಡಾ. ರಾಜ್‌, ರಂಜನಿಕಾಂತ್‌, ಅನಂತ್‌ನಾಗ್‌ ಮತ್ತಿತರ ಹಿರಿಯ ನಟರಿಗೆ ಮೇಕಪ್‌ ಮಾಡಿದ್ದ ಕೇಶವಣ್ಣ ನಿಧನ - Vistara News

ಶ್ರದ್ಧಾಂಜಲಿ

ಡಾ. ರಾಜ್‌, ರಂಜನಿಕಾಂತ್‌, ಅನಂತ್‌ನಾಗ್‌ ಮತ್ತಿತರ ಹಿರಿಯ ನಟರಿಗೆ ಮೇಕಪ್‌ ಮಾಡಿದ್ದ ಕೇಶವಣ್ಣ ನಿಧನ

ಕನ್ನಡ ಚಿತ್ರರಂಗದ ವರ್ಣಾಲಂಕಾರ ಕಲಾವಿದ ಎಂ.ಎಸ್‌. ಕೇಶವಣ್ಣ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

VISTARANEWS.COM


on

ಎಂ.ಎಸ್ ಕೇಶವಣ್ಣ ನಿಧನ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು : ಕನ್ನಡ ಚಿತ್ರರಂಗದ ಹಿರಿಯ ವರ್ಣಾಲಂಕಾರ ಕಲಾವಿದ ಎಂ.ಎಸ್. ಕೇಶವಣ್ಣ ಅವರು ಶನಿವಾರ (ಜು.16)ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗದಲ್ಲಿ 53 ವರ್ಷಗಳ ಕಾಲ ಇವರು ಸೇವೆ ಸಲ್ಲಿಸಿದ್ದರು.

ಇವರ ತಂದೆ ಸುಬ್ಬಣ್ಣ ಅವರೂ ಸಹ ನಟ ರಾಜ್‌ಕುಮಾರ್‌ ಅವರ ಮೇಕಪ್‌ ಮ್ಯಾನ್‌ ಆಗಿದ್ದರು. ಸುಮಾರು 30 ವರ್ಷಗಳ ಕಾಲ ರಾಜ್‌ಕುಮಾರ್‌ ಅವರ ಕಂಪನಿಯಲ್ಲಿ ಎಂ.ಎಸ್. ಕೇಶವಣ್ಣ ಅವರು ವರ್ಣಾಲಂಕಾರ ಕಲಾವಿದರಾಗಿದ್ದರು. ಈಶ್ವರಿ ಪ್ರೊಡಕ್ಷನ್‌ನಲ್ಲಿ ಹಲವು ವರ್ಷ ಸೇವೆ ಸಲ್ಲಿಸಿದ್ದಾರೆ. ಇವರು ಮೊದಲ ಬಾರಿಗೆ ಮೇಕಪ್‌ ಮಾಡಿದ್ದು ನಟ ನರಸಿಂಹ ರಾಜು ಅವರಿಗೆ ಎನ್ನುವುದು ವಿಶೇಷ. ಪೃಥ್ವಿರಾಜ್ ಕಪೂರ್, ಬಾಲಣ್ಣ, ಉದಯ ಕುಮಾರ್, ವಜ್ರ ಮುನಿ ಹೀಗೆ ಹಲವು ಕಲಾವಿದರಿಗೆ ಮೇಕಪ್‌ ಮಾಡಿದ್ದಾರೆ.

ಇದನ್ನೂ ಓದಿ | ಖ್ಯಾತ ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ ನಿಧನ

ಕನ್ನಡದ ʻನಾನಿನ್ನ ಬಿಡಲಾರೆʼ ಸಿನಿಮಾದಲ್ಲಿ ಅನಂತ್‌ ನಾಗ್‌ ಅವರಿಗೆ ದೆವ್ವದ ಪಾತ್ರಕ್ಕೆ ಕೇಶವಣ್ಣ ಮೇಕಪ್‌ ಮಾಡಿದ್ದರು. ಸಾಕ್ಷಾತ್ಕಾರ, ಮಯೂರ, ಮುರುವರೆ ವಜ್ರ, ಪ್ರೇಮಲೋಕ, ಶಾಂತಿ ಕ್ರಾಂತಿ, ಸಂಗೊಳ್ಳಿ ರಾಯಣ್ಣ ಚಿತ್ರದ ನಟರಿಗೆ ಬಣ್ಣ ಹಚ್ಚಿದ್ದಾರೆ.

ಎರಡು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಆಗಿದ್ದ ಕಾರಣ ಚಿಕಿತ್ಸೆ ಪಡೆಯುತ್ತಿದ್ದ ಇವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರಿನಲ್ಲಿ ಭಾನುವಾರ (ಜು.17)ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

K Vasantha Bangera: ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

K Vasantha Bangera
Koo

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಅವರು (K Vasantha Bangera) ಬುಧವಾರ ಸಂಜೆ ನಿಧನರಾದರು. ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಅವರು, ಬೆಳ್ತಂಗಡಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು.

ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ. ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಅವರು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು 1946ರ ಜನವರಿ 15ರಂದು ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮುಗಿಸಿದ ಅವರು ಮುಲ್ಕಿ, ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲವು ಸಾಧಿಸಿ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. ಇನ್ನು 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ | EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಂತ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

Continue Reading

ಬಳ್ಳಾರಿ

A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

A Devendra Gowda: ಬಳ್ಳಾರಿ ತಾಲೂಕಿನ ಎಂ‌.ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರಗೌಡ (90) ಶುಕ್ರವಾರ ಸಂಜೆ ನಗರದ ದೊಡ್ಡಬಸವೇಶ್ವರ ನಗರದ ಅವರ ಪುತ್ರನ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

VISTARANEWS.COM


on

A Devendra Gowda passed away in Ballari
Koo

ಬಳ್ಳಾರಿ: ಬಳ್ಳಾರಿ ತಾಲೂಕಿನ ಎಂ‌. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ (90) (A Devendra Gowda) ಶುಕ್ರವಾರ ಸಂಜೆ ನಗರದ ದೊಡ್ಡಬಸವೇಶ್ವರ ನಗರದ ಅವರ ಪುತ್ರನ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.

ಮೃತರು ಪುತ್ರ ನಟರಾಜ್‌ ಗೌಡ ಸೇರಿದಂತೆ ನಾಲ್ಕು ಜನ ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Continue Reading

ಬಳ್ಳಾರಿ

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Dr Vinayaka Prasanna: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ(50) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

VISTARANEWS.COM


on

Dr Vinayaka Prasanna passed away
Koo

ಬಳ್ಳಾರಿ: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ (50) (Dr Vinayaka Prasanna) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ತಾಯಿ ಶಕುಂತಲ, ಪತ್ನಿ ಡಾ‌. ವನಜ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಯಿತು. ಬಳಿಕ ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರೊ. ಡಾ.ವಿನಾಯಕ ಪ್ರಸನ್ನ ಅವರ ನಿಧನಕ್ಕೆ ವಿಮ್ಸ್ ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

Continue Reading

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading
Advertisement
Narendra modi
ದೇಶ1 min ago

Narendra Modi : ಬಿಹಾರದಲ್ಲಿ 2019 ರಲ್ಲಿ ಒಂದು ಸ್ಥಾನದಲ್ಲಿ ಸೋತವು. ಈ ಬಾರಿ ಎಲ್ಲವೂ ನಮ್ಮದೇ ಎಂದ ಮೋದಿ

Viral Video
ದೇಶ23 mins ago

Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

Sean Williams
ಪ್ರಮುಖ ಸುದ್ದಿ24 mins ago

Sean Williams : ಜಿಂಬಾಬ್ವೆ ತಂಡದ ಹಿರಿಯ ಆಲ್​ರೌಂಡರ್​ ಟಿ20 ಕ್ರಿಕೆಟ್​ನಿಂದ ನಿವೃತ್ತಿ

Hoax bomb threat
ಕರ್ನಾಟಕ36 mins ago

Hoax Bomb Threat: ದೆಹಲಿ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌; ಆತಂಕ ಸೃಷ್ಟಿ

IPL 2024
ಕ್ರೀಡೆ45 mins ago

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

Prajwal Revanna Case Basavaraj Bommai says DK Shivakumar should be questioned
ಕರ್ನಾಟಕ47 mins ago

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Bomb Threat
ದೇಶ1 hour ago

Bomb Threat:  ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

BDA Complex
ಕರ್ನಾಟಕ1 hour ago

BDA Complex: ವಿರೋಧದ ನಡುವೆ ಖಾಸಗಿ ಕಂಪನಿ ತೆಕ್ಕೆಗೆ 7 ಬಿಡಿಎ ಕಾಂಪ್ಲೆಕ್ಸ್; ಆದಾಯದಲ್ಲಿ 70:30 ಪಾಲು

IPL 2024
ಐಪಿಎಲ್ 20242 hours ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ2 hours ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ3 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ3 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ3 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ16 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌