Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ! - Vistara News

ಸಿನಿಮಾ

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Vettaiyan Movie: ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ.

VISTARANEWS.COM


on

Vettaiyan Movie Rajinikanth And Amitabh Bachchan Poses Together
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ʼವೆಟ್ಟೈಯಾನ್ʼ (Vettaiyan Movie) ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿತ್ತು.  ಅಮಿತಾಭ್‌ ಬಚ್ಚನ್ ಸೇರಿದಂತೆ ಬೃಹತ್ ತಾರಾಗಣವನ್ನು ಒಳಗೊಂಡಿರುವ ʼವೆಟ್ಟೈಯಾನ್ʼ ನಿರ್ಮಾಣದ ಕೊನೆಯ ಹಂತದಲ್ಲಿದೆ. ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.

‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ತಮಿಳು ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ನಿರ್ದೇಶಕ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ. ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

ಇದನ್ನೂ ಓದಿ: Jailer Cinema : ಬದರೀನಾಥ್​​ ದೇಗುಲಕ್ಕೆ ಭೇಟಿ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್​

ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

Hc grants interim bail to actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading

ಪ್ರಮುಖ ಸುದ್ದಿ

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Actor Darshan : ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು. ಇದೀಗ ನವಗ್ರಹ ಸಿನಿಮಾ ರೀ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ.

VISTARANEWS.COM


on

actor darshan

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಬೆನ್ನು ನೋವಿನಿಂದ ಒದ್ದಾಡುತ್ತಿರುವುದನ್ನು ಕಂಡು ಬೇಸರದಲ್ಲಿರುವ ಅಭಿಮಾನಿಗಳಿಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲೇ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಿಲೀಸ್ ಆಗ್ಬೇಕಿತ್ತು. ಆದರೆ ಇದೀಗ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಬಂಧಿಯಾಗಿದ್ದಾರೆ.

ದಾಸನ ಸಿನಿಮಾ ರೀ-ರಿಲೀಸ್, ಡೇಟ್ ಅನೌನ್ಸ್

ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಈ ವರ್ಷ ‘DEVIL THE HERO’ ಸಿನಿಮಾವನ್ನು ನೋಡಬೇಕು ಎಂಬುದು ದರ್ಶನ್ ಅಭಿಮಾನಿಗಳ ಆಸೆ ಆಗಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ ಬಳಿಕ ಆ ಸಿನಿಮಾದ ಕೆಲಸಕ್ಕೆ ಬ್ರೇಕ್​ ಬಿತ್ತು. ಹಾಗಾಗಿ ದೊಡ್ಡ ಪರದೆ ಮೇಲೆ ದರ್ಶನ್ ಹೊಸ ಸಿನಿಮಾ ತೆರೆಕಾಣಲಿಲ್ಲ. ಈ ಸಂದರ್ಭದಲ್ಲಿ ಅಭಿಮಾನಿಗಳು ದರ್ಶನ್​ ಅವರನ್ನು ಬಹಳ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವರ ಈ ಹಿಂದಿನ ಹಿಟ್ ಸಿನಿಮಾಗಳನ್ನು ಮತ್ತೆ ತೆರೆಗೆ ತರಲಾಗುತ್ತಿದೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು.

Actor darshan

‘ನವಗ್ರಹ’ ಸಿನಿಮಾ ಹಿಟ್‌ ಆದ ನಂತರ ಸಿನಿಮಾದ ಸೀಕ್ವೆಲ್‌ ಬರಲಿದೆ ಅಂತ ಹೇಳಲಾಗಿತ್ತಾದರೂ ಕೊನೆವರೆಗೂ ಈ ಸಿನಿಮಾದ ಸೀಕ್ವೆಲ್‌ ಬರಲೇ ಇಲ್ಲ. ಇದೊಂದು ವಿಷಯ ಡಿ ಬಾಸ್‌ ಫ್ಯಾನ್ಸ್‌ ಅಲ್ಲಿ ನಿರಾಶೆ ಉಂಟು ಮಾಡಿತ್ತು. ಕೆಲವು ದಿನಗಳ ಹಿಂದೆ, ‘ನವಗ್ರಹ’ ಸಿನಿಮಾ ರೀ ರಿಲೀಸ್‌ ಮಾಡಬೇಕೆಂದು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಅಭಿಯಾನವನ್ನು ಸ್ಟಾರ್ಟ್‌ ಮಾಡಿದ್ದರು. #WeWantNavagrahaReRelease ಎಂಬ ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಈ ಟ್ರೆಂಡ್‌ ಅನ್ನು ವೈರಲ್‌ ಆಗಿತ್ತು. ಇದೀಗ ಮತ್ತೆ ಈ ಸಿನಿಮಾ ನೋಡೋ ಆಸೆಯಿಂದ ಅಭಿಮಾನಿಗಳು ಚಿತ್ರದ ರೀ ರಿಲೀಸ್‌ಗಾಗಿ ಪಟ್ಟು ಹಿಡಿದಿದ್ದಾರೆ.

ಕುತೂಹಲ ಮೂಡಿಸಿದ ದಿನಕರ್​ ಪೋಸ್ಟ್

‘ನವಗ್ರಹ’ ಕನ್ನಡ ಚಿತ್ರರಂಗದ ಸೂಪರ್ ಹಿಟ್​ ಸಿನಿಮಾ. 2008ರಲ್ಲಿ ತೆರೆಕಂಡ ನಟ ದರ್ಶನ್​​ ಮುಖ್ಯಭೂಮಿಕೆಯ ಈ ಚಿತ್ರ ಸೂಪರ್ ಹಿಟ್​ ಆಗಿತ್ತು. ಬಹುತಾರಾಗಣದ ಈ ಚಿತ್ರ ‘ಅಂಬಾರಿ’ ಕಳ್ಳತನಕ್ಕೆ ಪ್ರಯತ್ನಿಸುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾ ರೀ-ರಿಲೀಸ್​ ಆಗುತ್ತಿರುವ ಹಿನ್ನೆಲೆಯಲ್ಲಿ ನಿರ್ದೇಶಕ ದಿನಕರ್ ತೂಗುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ‘ನನ್ನ ನಿರ್ದೇಶನದ 2ನೇ ಸಿನಿಮಾ ನವಗ್ರಹ. ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳಿ ತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನವಗ್ರಹ’ ಸಿನಿಮಾಗೆ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದಾರೆ. ದರ್ಶನ್ ಜೊತೆ ತರುಣ್ ಸುಧೀರ್​, ಧರ್ಮ ಕೀರ್ತಿರಾಜ್, ವಿನೋದ್ ಪ್ರಭಾಕರ್​, ಸೃಜನ್ ಲೋಕೇಶ್, ಗಿರಿ ದಿನೇಶ್, ನಾಗೇಂದ್ರ ಅರಸ್​, ವರ್ಷಾ, ಶರ್ಮಿಳಾ ಮಾಂಡ್ರೆ, ಕುರಿ ಪ್ರತಾಪ್, ಡೇರಿಂಗ್ ಸ್ಟಾರ್ ಧರ್ಮ ಸೇರಿದಂತೆ ಅನೇಕರು ನಟಿಸಿದ್ದಾರೆ. ಎ.ವಿ ಕೃಷ್ಣಕುಮಾರ್​ ಕ್ಯಾಮರಾ ಕೈಳಚಕವಿರುವ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಒದಗಿಸಿದ್ದರು. ಟಿ ಶಶಿಕುಮಾರ್​ ಸಂಕಲನದ ಹೊಣೆ ಹೊತ್ತಿದ್ದರು. ತೂಗುದೀಪ ಪ್ರೊಡಕ್ಷನ್ಸ್ ಅಡಿ ನಿರ್ಮಾಣಗೊಂಡ ಈ ಚಿತ್ರ 2008ರ ನವೆಂಬರ್​​ 7ರಂದು ಚಿತ್ರಮಂದಿರ ಪ್ರವೇಶಿಸಿ ಯಶಸ್ವಿಯಾಗಿತ್ತು. ಇದೀಗ ಅದೇ ದಿದಂದೇ ಮರು ಬಿಡುಗಡೆಗೆ ಸನ್ನದ್ಧವಾಗಿದೆ.

Continue Reading

ಬಿಗ್ ಬಾಸ್

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

ವಾರದ ಕತೆ ಕಿಚ್ಚನ ಜೊತೆ ಪಂಚಾಯ್ತಿಯಲ್ಲಿ ಯಾವೆಲ್ಲ ವಿಷ್ಯಗಳು ಚರ್ಚೆಗೆ ಬರುತ್ತೆ ಗೊತ್ತಾ?
ಕಿಚ್ಚನ ಪಂಚಾಯ್ತಿಗೆ ವೀಕ್ಷಕರು ಇಟ್ಟ ಬೇಡಿಕೆಗಳೇನು?

VISTARANEWS.COM


on

Bigg boss kannada

ಬೆಂಗಳೂರು: ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಶೋನಲ್ಲಿ ಕಿಚ್ಚು ಹೆಚ್ಚಾಗಿದೆ. ಇದೆ ಮೊದಲ ಸಲ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಸ್ಪರ್ಧಿಗಳು ನಿಯಮ ಮೀರಿದ ಹಿನ್ನೆಲೆಯಲ್ಲಿ ನೇರವಾಗಿ ಎಲಿಮಿನೇಟ್‌ ಆಗಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಲಾಯರ್‌ ಜಗದೀಶ್‌, ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಶುಕ್ರವಾರ ಮನೆ ತೊರೆದಿದ್ದರು.

ಇದೀಗ ವಾರದ ಕಥೆ ಕಿಚ್ಚ ಜತೆಯಲ್ಲಿ ನಟ ಸುದೀಪ್‌ ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ? ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು ಯಾವುದು ಎಂಬ ಕುತೂಹಲ ಮೂಡಿದೆ.

ಅಸಲಿಗೆ ದೊಡ್ಡ ಮನೆಯಲ್ಲಿ ಆ ದಿನ ನಡೆದಿದ್ದೇನು ಗೊತ್ತಾ?

ಕಳೆದ (ಬುಧವಾರ) ಟಾಸ್ಕ್‌ ಮುಗಿದ ಬಳಿಕ ಗಾರ್ಡನ್‌ ಏರಿಯಾದಲ್ಲಿ ಜಗದೀಶ್‌ ಮತ್ತು ಗೋಲ್ಡ್‌ ಸುರೇಶ್‌ ಮಾತನಾಡುತ್ತ ಕೂತಿದ್ದರು. ಈ ವೇಳೆ ಮಾತಿನ ಭರದಲ್ಲಿ ಜಗದೀಶ್‌ ಮನೆಯ ಸ್ಪರ್ಧಿಗಳ ಬಗ್ಗೆ ಇಲ್ಲ ಸಲ್ಲದ ಪದ ಬಳಕೆ ಮಾಡಿ ಮಾತನಾಡಲು ಶುರುಮಾಡಿದರು. ಜಗದೀಶ್‌ ಅವರ ಮಾತುಗಳು ಸುರೇಶ್‌ಗೆ ಅಸಹನೀಯ ಎನಿಸತೊಡಗಿದವು. ಕೂಡಲೇ ಇಂಥ ಪದಗಳ ಪ್ರಯೋಗ ನನ್ನ ಮುಂದೆ ಮಾಡಬೇಡ ಎಂದು ಬೇಡಿಕೊಂಡರು. ಮುಂದುವರಿದು, ಆ ಹಂಸಾ ಮುಂ* ಎಂಬ ಪದ ಬಳಕೆ ಪ್ರಯೋಗಿಸಿದರು .

ಅಲ್ಲಿಂದ ಶುರುವಾಯ್ತು ವಾರ್‌.. ಹಂಸಾಗೆ ಆ ಪದ ಪ್ರಯೋಗಿಸಿದ ವಿಚಾರ, ನಂತರ ಇಡೀ ಮನೆಗೂ ಗೊತ್ತಾಯ್ತು. ಮುಂದುವರಿದು ದೊಡ್ಡ ಮಟ್ಟದ ಮಾತಿನ ಚಕಮಕಿ ನಡೆಯಿತು. ಮಾತಿಗೆ ಮಾತು ಬೆಳೆಯಿತು. ತಳ್ಳಾಟ ನೂಕಾಟವೂ ನಡೆಯಿತು. ಲಾಯರ್‌ ಜಗದೀಶ್‌ ಅವರ ಮೇಲೆ ಇಡೀ ಮನೆಯ ಮಹಿಳಾ ಸ್ಪರ್ಧಿಗಳು ಮುಗಿಬಿದ್ದರು. ಇದೇ ವೇಳೆ ಮಾತುಕತೆ ಅತಿರೇಕಕ್ಕೆ ಹೋಗುತ್ತಿದ್ದಂತೆ, ಜಗದೀಶ್‌ ಅವರನ್ನು ಅಲ್ಲೇ ಇದ್ದ ರಂಜಿತ್‌ ತಳ್ಳಿದರು. ಇದೆಲ್ಲವನ್ನು ಗಮನಿಸಿದ ಬಿಗ್‌ಬಾಸ್‌ ಸಹ ತಾಳ್ಮೆ ಕಳೆದುಕೊಂಡು, ಮೊದಲ ಸಲ ಜೋರಾಗಿ ಕೂಗಿ ಎಲ್ಲರನ್ನು ಒಂದೆಡೆ ಕೂರಿಸಿದರು.

ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಹೊರಕ್ಕೆ

ಇತ್ತ, ಕೆಲ ಹೊತ್ತಿನ ಬಳಿಕ ಮಹಿಳೆಯರಿಗೆ ನಿಂದನೆ, ಅಪಮಾನ ಸಹಿಸುವುದಿಲ್ಲ ಎಂಬ ಆರೋಪದ ಮೇಲೆ ಜಗದೀಶ್‌ ಅವರನ್ನು ಬಿಗ್‌ಬಾಸ್‌ನಿಂದ ನೇರವಾಗಿ ಎಲಿಮಿನೇಟ್‌ ಮಾಡಿ, ಹೊರಗೆ ಕಳಿಸಲಾಯಿತು. ಇತ್ತ ದೈಹಿಕ ಹಲ್ಲೆ ಅಕ್ಷಮ್ಯ ಅಪರಾಧ ಎಂಬ ನಿಯಮದಡಿ ರಂಜಿತ್‌ ಅವರನ್ನೂ ಹೊರಗೆ ಕಳಿಸಲಾಯಿತು. ಈ ಮೂಲಕ ಶುಕ್ರವಾರ ಅಚ್ಚರಿಯ ಬೆಳವಣಿಗೆಯಲ್ಲಿ ಡಬಲ್‌ ಶಾಕಿಂಗ್‌ ಎಲಿಮಿನೇಷನ್‌ ಆಯ್ತು. ಇತ್ತ ರಂಜಿತ್‌ ಮಾಡಿದ್ದು ಸರಿಯಿದೆ. ಅವರ ಉದ್ದೇಶ ಒಳ್ಳೆಯದು ಎಂದು ಸ್ಪರ್ಧಿಗಳು ಕಣ್ಣೀರಿಟ್ಟರೂ, ನಿಯಮ ಗೌರವಿಸುವ ಸಲುವಾಗಿ ಔಟ್‌ ಮಾಡಲಾಯಿತು.

ಇದೀಗ.. ವಾರದ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಲಿರುವ ‘ಗರಮಾ ಗರಂ’ ವಿಷಯಗಳು ಯಾವವು ಎಂಬುದನ್ನು ಕಲರ್ಸ್‌ ಕನ್ನಡ ಸೋಶಿಯಲ್‌ ಮೀಡಿಯಾದಲ್ಲಿ ನಿನ್ನೆ ಪೋಸ್ಟ್‌ ಹಂಚಿಕೊಂಡಿದೆ . ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳ ಮಹಾಪೂರವೇ ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚನ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ

ಈ ಸಲದ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರಲ್ಲಿ ಶಾಕಿಂಗ್‌ ಎಲಿಮಿನೇಷನ್‌ ನಡೆದಿದೆ. ಮಹಿಳಾ ಸ್ಪರ್ಧಿಗಳ ಬಗ್ಗೆ ಕೆಟ್ಟ ಪದ ಪ್ರಯೋಗ ಬಳಸಿದ್ದಕ್ಕೆ ಜಗದೀಶ್‌ ಎಲಿಮಿನೇಟ್‌ ಆದರೆ, ಒಳ್ಳೆಯ ಉದ್ದೇಶ ಇದ್ದರೂ, ದೈಹಿಕ ಹಲ್ಲೆ ಮಾಡಿದ ಆರೋಪದ ಮೇಲೆ ರಂಜಿತ್‌ ಮನೆಯಿಂದ ಹೊರ ನಡೆದಿದ್ದಾರೆ. ಇತ್ತ ಮನೆಯ ಸ್ಪರ್ಧಿಗಳು ರಂಜಿತ್‌ ತೆರಳಿದ್ದಕ್ಕೆ ಬೇಸರದಲ್ಲಿದ್ದರೆ, ಜಗದೀಶ್‌ ಹೊರ ನಡೆದಿದ್ದಕ್ಕೆ ಕುಣಿದು ಕುಪ್ಪಳಿಸಿದ್ದಾರೆ. ಇದೆಲ್ಲದರ ನಡುವೆಯೇ ವಾರಾಂತ್ಯವೂ ಬಂದಿದೆ. ಕಿಚ್ಚನ ಆಗಮನಕ್ಕೂ ಕ್ಷಣಗಣನೆ ಆರಂಭವಾಗಿದೆ.

ಕಳೆದ ವಾರ ಯಾವುದೇ ಎಲಿಮಿನೇಷನ್‌ ಇರಲಿಲ್ಲ. ಅಚ್ಚರಿಯ ಬೆಳವಣಿಗೆಯಲ್ಲಿ ಎಲ್ಲರೂ ಸೇವ್‌ ಆಗಿದ್ದರು. ಆದರೆ, ಈ ವಾರ ಹಾಗಾಗಲಿಲ್ಲ. ಯಾರೂ ನಿರೀಕ್ಷಿಸದೇ ಇಬ್ಬರು ಸ್ಪರ್ಧಿಗಳು ನೇರವಾಗಿ ಹೊರ ನಡೆಯಬೇಕಾಯಿತು. ಹೀಗಿರುವಾಗ ಈ ವಾರ ಎಲಿಮಿನೇಷನ್‌ ಇರುತ್ತಾ? ಎಂಬ ಒಂದಷ್ಟು ಪ್ರಶ್ನೆಗಳಂತೂ ಎಲ್ಲರ ಮನಸಿನಲ್ಲೂ ಮೂಡಿದೆ. ಅದರಲ್ಲೂ ವೀಕ್ಷಕರು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇದೀಗ ಕಿಚ್ಚನ ಪಂಚಾಯ್ತಿಯಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಸಿಗಬಹುದಾ?

ಹೌದು. ಸೋಷಿಯಲ್‌ ಮೀಡಿಯಾದಲ್ಲಿ ಈ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಬೇಕಿರೋ ‘ಗರಮಾ ಗರಂ’ ವಿಷಯಗಳು ಯಾವವು” ಎಂದು ಪೋಸ್ಟ್‌ ಹಂಚಿಕೊಂಡಿದೆ ಕಲರ್ಸ್‌ ಕನ್ನಡ. ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳು ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚ ಸುದೀಪ್‌ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ ಆಯ್ದ ಕೆಲವು ಪ್ರಶ್ನೆಗಳು ಮತ್ತು ಬೇಡಿಕೆಗಳು.

ಸುದೀಪ್‌ಗೆ ವೀಕ್ಷಕರ ಪ್ರಶ್ನೆ ಮತ್ತು ಬೇಡಿಕೆ:

  • -ಜಗ್ಗು ಇಲ್ಲದ ಬಿಗ್‌ ಬಾಸ್ ನಾವು ನೋಡಲ್ಲ.‌ ಲಾಯರ್ ಜಗದೀಶ್‌ಗೆ ನ್ಯಾಯ ಸಿಗಬೇಕು. ಪುರುಷರಿಗೆ ಆದ ನಿಂದನೆ ಅಪಮಾನದ ಬಗ್ಗೆ ಕರ್ನಾಟಕದ ಜನತೆ ಸಹಿಸುವುದಿಲ್ಲ. ಅವರನ್ನ ಮತ್ತೆ ಅಖಾಡಕ್ಕೆ ಇಳಿಸಲೇಬೇಕು. ಹೆಣ್ಣಿಗೆ ಮಾತ್ರ ಅವಮಾನ ಆಗಿರಲಿಲ್ಲ ಗಂಡಿಗೂ ಅವಮಾನ ಆಗಿದೆ ಇದರ ಬಗ್ಗೆ ನೀವು ಪ್ರಶ್ನೆ ಎತ್ತಲೇಬೇಕು. ಗಂಡಿನ ಮರ್ಯಾದೆಗೆ ಧಕ್ಕೆ ಬರ್ತಿದೆ ಈ ಬಿಗ್ ಬಾಸ್ ಮನೆಯ ಹೆಣ್ಣು ಮಕ್ಕಳಿಂದ. ಮುಂದೆ ಪುರುಷ ರಕ್ಷಣಾ ವೇದಿಕೆಯನ್ನು ತೆರೆದರು ತೆರೆಯಬಹುದು.
  • -ಸುದೀಪ್‌ ಸರ್‌, ಜಗದೀಶ್‌ ಅವರನ್ನ ಏಕವಚನದಲ್ಲಿ ಮಾತಾಡುವುದಲ್ಲದೇ ಹೋರ್ಗಡೆ ಎನ್ ತಗೊಂಡು ಹೊಡೀತಾರೆ ನಿಂಗೆ ಎನ್ನುತ್ತ ತಳ್ಳಿದ್ದಾರೆ ಭವ್ಯ ಇದಕ್ಕೆ ನ್ಯಾಯ ಸಿಗುತ್ತಾ?
  • -ಮಾನಸ ಅವರು ಒಬ್ಬ ಗಂಡಸಿಗೆ ಸೀರೆ ಕೊಡ್ತೀನಿ ಉಟ್ಕೋ, ಅಂತಾರೆ ಅವಳ ಗಂಡ ತುಕಾಲಿ, ಹೆಂಡತಿ ತುಕಾಲಿ ಪ್ರೊ ಮ್ಯಾಕ್ಸ್ ಅಂತ ನೆಟ್ಟಿಗರು ಕಿಡಿಕಾರಿದ್ದಾರೆ. ಗಂಡಿನ ಘನತೆಗೆ ಧಕ್ಕೆ ಆದಾಗ ತಿರುಗೇಟು ಕೊಟ್ಟರೆ ಅದು ಮಹಿಳೆಗೆ ಅಗೌರವವೇ? ಕಿಚ್ಚ ಸುದೀಪ್ ಇದಕ್ಕೆ ನ್ಯಾಯ ಒದಗಿಸುವ ಮೂಲಕ ಪುರುಷರ ಘನತೆ ಕಾಪಾಡಬೇಕು ಅಂದಿದ್ದಾರೆ.
  • -ಜಗ್ಗುನ ಪ್ರವೋಕ್ ಮಾಡಿದ ಎಲ್ಲರಿಗೂ ಅವರ ತಪ್ಪಿನ ಅರಿವು ಮಾಡಿಸಬೇಕು. ಹೆಣ್ಣಿನ ಬಗ್ಗೆ ಕೆಟ್ಟದಾಗಿ ಮಾತಾಡುವುದು ತಪ್ಪು. ಜಗದೀಶ್‌ಗೆ ಶಿಕ್ಷೆಯಾಗಿದ್ದು ಸರಿ. ಆದರೆ ಚೈತ್ರ ಹೇಳ್ತಾರೆ ಅಪ್ಪನಿಗೆ ಹುಟ್ಟಿದರೆ ಬಾ, ಒಬ್ಬ ಅಪ್ಪನಿಗೆ ಹುಟ್ಟಿದ್ದರೆ ಬಾ ಅಂತ ಇದರಲ್ಲಿ ಆಗಿರುವುದು ಒಂದು ಹೆಣ್ಣಿಗೆ ಅವಮಾನ ಅಂದರೇ (ಜಗದೀಶ್ ತಾಯಿಯ ಬಗ್ಗೆ ) ಇದರ ಬಗ್ಗೆನೂ ಚರ್ಚೆ ಆಗಲೇಬೇಕು.
  • -ಜಗ್ಗು ಮಾತಾಡಿದ್ದು ತಪ್ಪು ಅದರಲ್ಲಿ 2 ಮಾತಿಲ್ಲ.. ಆದ್ರೆ ಸತತ 3 ದಿನಗಳಿಂದ ರಂಜಿತ್, ಮಂಜು, ತ್ರಿವಿಕ್ರಮ ಜಗಳ ಆಡೋ ತರ ಪ್ರಚೋದನೆ ಮಾಡಿದ್ದು ತಪ್ಪಲ್ವಾ?.. ಮಾನಸ ಮಾತು ಅಸಹ್ಯವಾಗಿತ್ತು ಅವಳನ್ನು ಯಾಕೆ ಹೊರಗೆ ಹಾಕಿಲ್ಲ. . ಚೈತ್ರ, ಭವ್ಯ, ಮಾನಸ 3 ಜನ ಅಮ್ಮ ಅಪ್ಪ ಹೆಂಡ್ತಿ ಅನ್ನೋ ಶಬ್ದ ಬಳಸಿ ಮಾತನಾಡುವುದಲ್ಲದೇ ಜಗದೀಶ್‌ ಅವರನ್ನ ಥಳಿಸಿದ್ದಾರೆ.

ರಂಜಿತ್‌ಗೆ ವೀಕ್ಷಕರ ಮೆಚ್ಚುಗೆ

ರಂಜಿತ್‌ ನೇರವಾಗಿ ಮನೆಯಿಂದ ಹೊರಬರುತ್ತಿದ್ದಂತೆ, ಸೋಷಿಯಲ್‌ ಮೀಡಿಯಾದಲ್ಲಿ ರಂಜಿತ್‌ ಪರವಾಗಿ ಮೆಚ್ಚುಗೆಯ ಕಾಮೆಂಟ್‌ಗಳು ಸಂದಾಯವಾಗುತ್ತಿವೆ. “ನಿಮ್ಮ ಹೆಸರು ಬಿಗ್‌ಬಾಸ್‌ನಲ್ಲಿ ಶಾಶ್ವತ. ಒಂದೊಳ್ಳೆಯ ಉದ್ದೇಶಕ್ಕೆ ನೀವು ನಿಯಮ ಮುರಿದಿದ್ದೀರಿ. ಇದನ್ನು ಬೇರೆಯವರೂ ಮಾಡಲು ಅಸಾಧ್ಯ” ಎಂದು ಧ್ರುವ ಎಂಬುವವರು ಟ್ವಿಟ್‌ ಮಾಡಿದ್ದಾರೆ. “ಉದ್ದೇಶ ಸರಿ. ಅಸಲಿ ವಿಚಾರ ಬಿಗ್‌ಬಾಸ್‌ಗೂ ಗೊತ್ತು, ಅಷ್ಟೇ ಸಾಕು.. ಮಿಸ್‌ ಯೂ ರಂಜಿತ್”‌ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಒಳ್ಳೆಯ ಉದ್ದೇಶಕ್ಕೆ ಹೋಗ್ತಿದ್ದೀಯಾ ಮಗ. ಸೂರ್ಯ ರಂಜಿತ್‌ ಬಿಬಿ ಇರೋವರೆಗೂ ಇದು ಒಂದು ಉದಾಹರಣೆಯಾಗಿ ನಿಲ್ಲಲಿದೆ. ಒಂದೊಳ್ಳೆಯ ಕಾರಣಕ್ಕೆ ನೀವು ಆಚೆ ಹೋಗಿದ್ದೀರಿ” ಎಂದು ವೀಕ್ಷಕರು ಟ್ವಿಟ್‌ ಮಾಡಿದ್ದಾರೆ.

Continue Reading
Advertisement
Latest2 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ3 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ3 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

Bengaluru airport
ಬೆಂಗಳೂರು1 ವರ್ಷ ago

Bengaluru Airport : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೈಗರ್‌ ವಿಂಗ್ಸ್‌; 2ನಲ್ಲಿ ಅತಿದೊಡ್ಡ ವರ್ಟಿಕಲ್‌ ಗಾರ್ಡನ್‌ ಅನಾವರಣ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌