Vijay Sankeshwar | ಇತಿಹಾಸ ಸೃಷ್ಟಿಸಿದವರೆಲ್ಲರೂ ಅಪ್ಪನ ವಿರುದ್ಧ ಹೋದವರು!: ವಿಜಯಾನಂದ ಟೀಸರ್‌ ವೈರಲ್‌ - Vistara News

ಸಿನಿಮಾ

Vijay Sankeshwar | ಇತಿಹಾಸ ಸೃಷ್ಟಿಸಿದವರೆಲ್ಲರೂ ಅಪ್ಪನ ವಿರುದ್ಧ ಹೋದವರು!: ವಿಜಯಾನಂದ ಟೀಸರ್‌ ವೈರಲ್‌

ವಿಜಯ್‌ ಸಂಕೇಶ್ವರ್‌ (Vijay Sankeshwar) ಅವರ ಜೀವನಾಧರಿತ ಸಿನಿಮಾ ವಿಜಯಾನಂದ ಟೀಸರ್‌ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಂಡಿದೆ.
ಎರಡು ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡು ವೈರಲ್‌ ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉತ್ತರ ಕರ್ನಾಟಕದ ಖಡಕ್ ಭಾಷೆ, ಪವರ್‌ ಫುಲ್ ಹಿನ್ನೆಲೆ ಸಂಗೀತ‌, ಪಂಚಿಂಗ್‌ ಡೈಲಾಗ್‌ ಮೂಲಕ ಮೊದಲ ನೋಟದಲ್ಲೇ ಥ್ರಿಲ್‌ ನೀಡುತ್ತದೆ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾದ ವಿಜಯಾನಂದ (Vijay Sankeshwar) ಟೀಸರ್‌. ಸಾರಿಗೆ, ಮಾಧ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೆಸರು ಮಾಡಿದವರು ಆನಂದ ಸಂಕೇಶ್ವರ. ಇದೀಗ ವಿಆರ್‌ಎಲ್‌ ಮೀಡಿಯಾ ಸಂಸ್ಥೆಯ ಅಡಿಯಲ್ಲಿ ʻವಿ.ಆರ್‌.ಎಲ್‌ʼ ಫಿಲ್ಮ್ಸ್‌ ಪ್ರೊಡಕ್ಷನ್‌ ಹೆಸರಿನಲ್ಲಿ ಸ್ವಂತ ನಿರ್ಮಾಣದ ಸಂಸ್ಥೆಯ ಮೂಲಕ ವಿಜಯಾನಂದ ಚಿತ್ರ ನಿರ್ಮಿಸುತ್ತಿದ್ದಾರೆ. ಅದರ ಟೀಸರ್‌ ಬಿಡುಗಡೆಗೊಂಡಿದ್ದು ಕೆಲವೇ ದಿನದಲ್ಲಿ ೨ ಕೋಟಿ ಮಂದಿ ಇದನ್ನು ವೀಕ್ಷಿಸಿದ್ದಾರೆ. ಟೀಸರ್‌ ನೋಡಿದ ಜನರು ಕಮೆಂಟ್‌ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ʻʻಇತಿಹಾಸ ಸೃಷ್ಟಿಸಿದವರೆಲ್ಲರೂ ಅವರ ಅಪ್ಪನ ವಿರುದ್ಧ ಹೋದವರುʼʼ ಎಂಬ ಡೈಲಾಗ್‌ ಮೂಲಕ ವಿಜಯ ಸಂಕೇಶ್ವರ ಅವರ ಒಟ್ಟು ಜೀವನದ ಕಥೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದೆ ಟೀಸರ್‌. ಹುಬ್ಬಳ್ಳಿ ಭಾಷೆ ಸೊಗಡು ಟೀಸರ್‌ನಲ್ಲಿ ಖದರ್‌ ಸೃಷ್ಟಿ ಮಾಡಿದೆ.

ಇದನ್ನೂ ಓದಿ | Liger | ಲೈಗರ್ ಸಿನಿಮಾದ ಥೀಮ್ ಸಾಂಗ್ ರಿಲೀಸ್‌: ಸಖತ್‌ ಮಾಸ್‌ ಸಾಂಗ್‌ ಎಂದ ಫ್ಯಾನ್ಸ್‌

ವಿಜಯ್‌ ಸಂಕೇಶ್ವರ್‌ ಅವರ ಜೀವನಾಧರಿತ ಚಿತ್ರ

ಇದು ವಿಜಯ ಸಂಕೇಶ್ವರ ಅವರ ಜೀವಾನಾಧರಿತ ಚಿತ್ರ ಆಗಿದ್ದು,1976ರಲ್ಲಿ ಒಂದೇ ಟ್ರಕ್‌ನೊಂದಿಗೆ ತನ್ನ ಪ್ರಯಾಣವನ್ನು ಪ್ರಾರಂಭಿಸಿ ಭಾರತದ ಅತಿ ದೊಡ್ಡ ಲಾಜಿಸ್ಟಿಕ್ಸ್‌ ಕಂಪನಿಯ ಮಾಲೀಕರು ಎಂದೆನಿಸಿಕೊಳ್ಳುವ ಕಥಾ ಹಂದರ ಹೊಂದಿದೆ. ಈ ಕಥೆಯು ವಿಜಯ ಸಂಕೇಶ್ವರ ಮತ್ತು ಅವರ ಮಗ ಆನಂದ ಸಂಕೇಶ್ವರ ಅವರು ಲಾಜಿಸ್ಟಿಕ್ಸ್‌ ಕಂಪನಿ ಕಟ್ಟಲು ಮಾಡಿದ ಹೋರಾಟ, ಬದ್ಧತೆ, ಪತ್ರಿಕೆ ಮತ್ತು ಮಾಧ್ಯಮದ ಸಕ್ಸಸ್‌ಫುಲ್ ಪ್ರಯಾಣದ ಕಥೆಯನ್ನು ಒಳಗೊಂಡಿದೆ. ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾ ದಕ್ಷಿಣ ಭಾರತದ ಇತರ ಭಾಷೆಗಳಾದ ತಮಿಳು, ತೆಲುಗು ಮತ್ತು ಮಲಯಾಳಂಗಳಿಗೆ ಡಬ್ ಆಗಲಿದೆ. ಹಾಗಾಗಿ ಸಿನಿಮಾದ ಟ್ರೈಲರ್ ಅಷ್ಟೂ ಭಾಷೆಯಲ್ಲಿ ಬಿಡುಗಡೆ ಆಗಿದೆ.

ಪ್ರಮುಖ ಪಾತ್ರದಲ್ಲಿ ತಾರಾಗಣ

ಈ ಹಿಂದೆ ʻಟ್ರಂಕ್‌ʼ ಎಂಬ ಹಾರರ್‌ ಥ್ರಿಲರ್‌ ಸಿನಿಮಾಗೆ ರಿಷಿಕಾ ಶರ್ಮಾ ಅವರು ನಿರ್ದೇಶನ ಮಾಡಿದ್ದರು. ಈ ಚಿತ್ರಕ್ಕೆ ಟ್ರಂಕ್‌ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ ನಿಹಾಲ್‌ ಅವರು ವಿಜಯ್‌ ಸಂಕೇಶ್ವರ್‌ ಅವರ ಪಾತ್ರವನ್ನು ನಿಭಾಯಿಸುತ್ತಿದ್ದಾರೆ.

ಪ್ರಮುಖ ಪಾತ್ರದಲ್ಲಿ ಕ್ರೇಜಿ ಸ್ಟಾರ್‌ ರವಿಚಂದ್ರನ್‌, ಪ್ರಕಾಶ್‌ ಬೆಳವಾಡಿ, ತಂದೆಯ ಪಾತ್ರದಲ್ಲಿ ಅನಂತ್‌ ನಾಗ್‌, ಅನೀಶ್ ಕುರುವಿಲ್ಲಾ, ಸಿರಿ ಪ್ರಹ್ಲಾದ್ ಮತ್ತು ಭರತ್ ಬೋಪಣ್ಣ, ಶರಣ್ಯ ಕಾಣಿಸಿಕೊಳ್ಳುತ್ತಿದ್ದಾರೆ. ದಕ್ಷಿಣ ಭಾರತೀಯ ಚಿತ್ರ ರಂಗದ ಖ್ಯಾತ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ʼವಿಜಯಾನಂದʼ ಚಿತ್ರಕ್ಕೆ ಹಿನ್ನೆಲೆ ಸಂಗೀತ ಮತ್ತು ಸಂಗೀತ ನಿರ್ದೇಶಕರಾಗಿ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ | Laal Singh Chaddha | ದಯವಿಟ್ಟು ನನ್ನ ಸಿನಿಮಾ ಬಹಿಷ್ಕರಿಸಬೇಡಿ: ಮನವಿ ಮಾಡಿದ ಆಮಿರ್‌ ಖಾನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

Kamal Haasan: ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

VISTARANEWS.COM


on

Kamal Haasan predicts Deepika Padukone baby choose cinema career
Koo

ಬೆಂಗಳೂರು: : ನಾಗ್ ಅಶ್ವಿನ್ ಅವರ ಕಲ್ಕಿ 2898 ADಯ (Kalki 2898 AD) ಪ್ರೀ-ರಿಲೀಸ್ ಈವೆಂಟ್ ಮುಂಬೈನಲ್ಲಿ ಇತ್ತೀಚೆಗೆ ನಡೆದಿತ್ತು. ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಚಿತ್ರದ ತಂಡದಲ್ಲಿ ಕಲ್ಕಿ ಕ್ರಾನಿಕಲ್ಸ್ ಎಂಬ ಶೀರ್ಷಿಕೆಯ ಚರ್ಚೆಯ (Kamal Haasan) ಸಂದರ್ಭದಲ್ಲಿ, ಕಮಲ್ ಹಾಸನ್ ಅವರು ದೀಪಿಕಾ ಅವರ ಮಗು ಮುಂದೊಂದು ದಿನ ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದರು.

ನಿರ್ದೇಶಕ ನಾಗ್ ಅಶ್ವಿನ್ ಅವರು ಮಗುವಿನಂತೆ ಎಂದು ದೀಪಿಕಾ ಚರ್ಚೆ ನಡೆಯುತ್ತಿರುವಾಗ ಹೇಳಿದರು. ಈ ಬಗ್ಗೆ ದೀಪಿಕಾ ಮಾತನಾಡಿ ʻʻನಾಗ್ ಅಶ್ವಿನ್ ಅವರು ಕಾಲ್‌ ಮಾಡಿದ್ದಾಗ, ನಾನು ಬಾಂಬೆಯಲ್ಲಿದ್ದೆ. ಬೇರೆ ಬೇರೆ ಶೆಡ್ಯೂಲ್‌ಗಳಲ್ಲಿ ಚಿತ್ರೀಕರಣ ನಡೆಸುತ್ತಿದ್ದರಿಂದ ಸಿನಿಮಾಗೆ ಲಾಂಗ್‌ ಬ್ರೇಕ್‌ ಹಾಕಿದ್ದೆ. ಹೀಗಾಗಿ ಒಂದು ದಿನ ನಾಗ್ ಅಶ್ವಿನ್ ಅವರು ನನಗೆ ಕರೆ ಮಾಡಿದ್ದು. ಅವರಿಂದ ತುಂಬ ಮಿಸ್ಡ್ ಕಾಲ್ ಇತ್ತು. ಹೀಗಾಗಿ ನಾನು ಏನಾಯಿತು ಎಂದು ಕೇಳಿದಾಗ, ‘ನಾವು ಕಮಲ್ ಸರ್ ಜೊತೆಗೆ ನಮ್ಮ ಮೊದಲ ದಿನವನ್ನು ಶೂಟ್ ಮಾಡಿದ್ದೇವೆ ಎಂದು ಹೇಳಲು ನಾನು ನಿಮಗೆ ಕರೆ ಮಾಡಿದ್ದೇನೆ.’ ಎಂದು ಮಗುವಿನಂತೆ ಹೇಳಿದರುʼʼಎಂದರು. ಈ ವೇಳೆ ಕಮಲ್‌ ಅವರು ನಟಿಯ ಬೇಬಿ ಬಂಪ್‌ ಕಡೆ ತೋರಿಸಿ ʻʻಮುಂದೊಂದು ದಿನ ಈ ಮಗು ಕೂಡ ಸಿನಿಮಾ ಮಾಡಲಿ ಎಂದು ಆಶಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಪತ್ನಿ, ಮಗ ನೋಡುತ್ತಿದ್ದಂತೆ ಕಣ್ಣೀರಿಟ್ಟ ನಟ ದರ್ಶನ್; ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ʻದಾಸʼ!

Actor Darshan: ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮೀ ಧೈರ್ಯ ತುಂಬಿದರು. . ಮಗ ವಿನೀಶ್ ನನ್ನು ತಬ್ಬಿಕೊಂಡೇ ಅಳುತ್ತಾ ಮಾತನಾಡಿದ್ದಾರೆ. ಅರ್ಧ ಘಂಟೆಯ ಭೇಟಿಯಲ್ಲಿ ದರ್ಶನ್ ಭಾವುಕದಿಂದಲೇ ಮಾತನಾಡಿದರು. ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯವನ್ನು ಮಗನ ಜೊತೆಗೆ ಕಳೆದರು.

VISTARANEWS.COM


on

Actor Darshan crying In Jail while seeing wife and son
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಬಂಧನವಾಗಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್‌ ಆಪ್ತ ವಿನೋದ್‌ ಪ್ರಭಾಕರ್‌ ಕೂಡ ಸ್ನೇಹಿತರ ಜತೆ ಆಗಮಿಸಿ ಭೇಟಿ ಮಾಡಿದರು. ಈ ವೇಳೆ ದರ್ಶನ್‌ ಅವರು ಮಗನ್ನು ನೋಡಿ ಕಣ್ಣೀರಿಟ್ಟರು. ಮಗ ವಿನೀಶ್ ಹಾಗೂ ಪತ್ನಿ ವಿಜಯಲಕ್ಷ್ಮಿ ನೋಡುತ್ತಿದ್ದಂತೆ ದರ್ಶನ್ ಭಾವುಕರಾದರು.

ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ದರ್ಶನ್‌ ಕಣ್ಣೀರಿಟ್ಟರು. ಪತ್ನಿ ಬಳಿ ನಡೆದ ಘಟನೆಯ ಬಗ್ಗೆ ದರ್ಶನ್‌ ಕೆಲ ಮಾತುಗಳನ್ನಾಡಿದರು. ಕಾನೂನು ಹೋರಾಟದ ಬಗ್ಗೆ ಪತ್ನಿ ದರ್ಶನ್‌ಗೆ ಮಾಹಿತಿ ನೀಡಿದರು. ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮೀ ಧೈರ್ಯ ತುಂಬಿದರು. . ಮಗ ವಿನೀಶ್ ನನ್ನು ತಬ್ಬಿಕೊಂಡೇ ಅಳುತ್ತಾ ಮಾತನಾಡಿದ್ದಾರೆ. ಅರ್ಧ ಘಂಟೆಯ ಭೇಟಿಯಲ್ಲಿ ದರ್ಶನ್ ಭಾವುಕದಿಂದಲೇ ಮಾತನಾಡಿದರು. ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯವನ್ನು ಮಗನ ಜೊತೆಗೆ ಕಳೆದರು.

ಇದನ್ನೂ ಓದಿ: Actor Darshan: ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದರು.

ಇನ್ನು ಜೈಲಿನಲ್ಲಿದ್ದರೂ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾಗಿದೆ. ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಬಂದರೆ ನೂರೊಂದು ಕಂಡಿಷನ್ಸ್‌ ವಿಧಿಸುವ ಪೊಲೀಸರು, ಸೆಲೆಬ್ರಿಟಿ, ರಾಜಕಾರಣಿಗಳು, ಬಲಾಢ್ಯರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ದರ್ಶನ್ ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬದಂದು ಭೇಟಿ ಮಾಡಿದ್ದೆ. ಮಾಧ್ಯಮಗಳಲ್ಲಿ ಬರುವುದನ್ನು ನೋಡಿ ವಿಚಾರ ತಿಳಿದುಕೊಂಡೆ, ಪೊಲೀಸ್ ಸ್ಟೇಷನ್ ಹತ್ತಿರ ಹೋಗಿ ಭೇಟಿಯಾಗಲು ಪ್ರಯತ್ನಪಟ್ಟೆ, ಆದರೆ ಸಾಧ್ಯವಾಗಿರಲಿಲ್ಲ. ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಭೇಟಿ ಮಾಡಿದ್ದೇನೆ. ದರ್ಶನ್ ಅವರು ಮೌನವಾಗಿದ್ದರು, ಏನ್ ಟೈಗರ್ ಅಂತ ಹೇಳಿದರು ಅಷ್ಟೇ… ಅವರಿಗೆ ಶೆಕ್ ಹ್ಯಾಂಡ್ ಮಾಡಿ ಬಂದೆ ಎಂದು ತಿಳಿಸಿದರು.

ಪ್ರಕರಣದ ಬಗ್ಗೆ ಎಲ್ಲೂ ಪ್ರತಿಕ್ರಿಯಿಸಿಲ್ಲ ಎಂಬ ಬಗ್ಗೆ ಸ್ಪಂದಿಸಿ, ಎಲ್ಲಾ ಕಡೆ ವಿನೋದ್ ಪ್ರಭಾಕರ್ ಪೋಸ್ಟ್ ಮಾಡಿಲ್ಲ, ಮಾತನಾಡಿಲ್ಲ ಎನ್ನುತ್ತಿದ್ದರು. ಪೋಸ್ಟ್ ಹಾಕಿ ಈ ಪ್ರಾಬ್ಲಮ್ ಸರಿಹೋಗುತ್ತೆ ಎಂದರೆ ನಾನೇ ಸಾವಿರ ಪೋಸ್ಟ್ ಹಾಕುತ್ತಿದ್ದೆ. ಈ ಪ್ರಕರಣ ಬಹಳ ಗಂಭೀರವಾಗಿದೆ. ಪೊಲೀಸ್ ತನಿಖೆಯಲ್ಲಿ ಕೇಸ್ ಇದೆ. ಏನು ಮಾತನಾಡಬೇಕು ಎನ್ನುವ ಕ್ಲ್ಯಾರಿಟಿ ನನಗಿಲ್ಲ. ಅದಕ್ಕೆ ಅವರನ್ನು ಭೇಟಿ ಮಾಡುವವರೆಗೆ ಮಾತನಾಡಬಾರದು ಅಂದುಕೊಂಡಿದ್ದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ, ಎಲ್ಲರಿಗೂ ನ್ಯಾಯ ಸಿಗಲಿ ಎಂದರು.

Continue Reading

ಕರ್ನಾಟಕ

Actor Darshan: ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

Actor Darshan: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್‌ ಆಪ್ತ ವಿನೋದ್‌ ಪ್ರಭಾಕರ್‌ ಕೂಡ ಸ್ನೇಹಿತರ ಜತೆ ಆಗಮಿಸಿ ಭೇಟಿ ಮಾಡಿದರು.

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದರು.

ಇನ್ನು ಜೈಲಿನಲ್ಲಿದ್ದರೂ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾಗಿದೆ. ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಬಂದರೆ ನೂರೊಂದು ಕಂಡಿಷನ್ಸ್‌ ವಿಧಿಸುವ ಪೊಲೀಸರು, ಸೆಲೆಬ್ರಿಟಿ, ರಾಜಕಾರಣಿಗಳು, ಬಲಾಢ್ಯರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ದರ್ಶನ್ ಮೌನವಾಗಿದ್ರು, ಏನೂ ಮಾತನಾಡಲಿಲ್ಲ: ವಿನೋದ್ ಪ್ರಭಾಕರ್

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ದರ್ಶನ್ ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬದಂದು ಭೇಟಿ ಮಾಡಿದ್ದೆ. ಮಾಧ್ಯಮಗಳಲ್ಲಿ ಬರುವುದನ್ನು ನೋಡಿ ವಿಚಾರ ತಿಳಿದುಕೊಂಡೆ, ಪೊಲೀಸ್ ಸ್ಟೇಷನ್ ಹತ್ತಿರ ಹೋಗಿ ಭೇಟಿಯಾಗಲು ಪ್ರಯತ್ನಪಟ್ಟೆ, ಆದರೆ ಸಾಧ್ಯವಾಗಿರಲಿಲ್ಲ. ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಭೇಟಿ ಮಾಡಿದ್ದೇನೆ. ದರ್ಶನ್ ಅವರು ಮೌನವಾಗಿದ್ದರು, ಏನ್ ಟೈಗರ್ ಅಂತ ಹೇಳಿದರು ಅಷ್ಟೇ… ಅವರಿಗೆ ಶೆಕ್ ಹ್ಯಾಂಡ್ ಮಾಡಿ ಬಂದೆ ಎಂದು ತಿಳಿಸಿದರು.

ಪ್ರಕರಣದ ಬಗ್ಗೆ ಎಲ್ಲೂ ಪ್ರತಿಕ್ರಿಯಿಸಿಲ್ಲ ಎಂಬ ಬಗ್ಗೆ ಸ್ಪಂದಿಸಿ, ಎಲ್ಲಾ ಕಡೆ ವಿನೋದ್ ಪ್ರಭಾಕರ್ ಪೋಸ್ಟ್ ಮಾಡಿಲ್ಲ, ಮಾತನಾಡಿಲ್ಲ ಎನ್ನುತ್ತಿದ್ದರು. ಪೋಸ್ಟ್ ಹಾಕಿ ಈ ಪ್ರಾಬ್ಲಮ್ ಸರಿಹೋಗುತ್ತೆ ಎಂದರೆ ನಾನೇ ಸಾವಿರ ಪೋಸ್ಟ್ ಹಾಕುತ್ತಿದ್ದೆ. ಈ ಪ್ರಕರಣ ಬಹಳ ಗಂಭೀರವಾಗಿದೆ. ಪೊಲೀಸ್ ತನಿಖೆಯಲ್ಲಿ ಕೇಸ್ ಇದೆ. ಏನು ಮಾತನಾಡಬೇಕು ಎನ್ನುವ ಕ್ಲ್ಯಾರಿಟಿ ನನಗಿಲ್ಲ. ಅದಕ್ಕೆ ಅವರನ್ನು ಭೇಟಿ ಮಾಡುವವರೆಗೆ ಮಾತನಾಡಬಾರದು ಅಂದುಕೊಂಡಿದ್ದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ, ಎಲ್ಲರಿಗೂ ನ್ಯಾಯ ಸಿಗಲಿ ಎಂದರು.

ನ್ಯೂಸ್‌ನಲ್ಲಿ ನೋಡಿದ ಮೇಲೆ ನನಗೆ ಈ ಪ್ರಕರಣದ ಬಗ್ಗೆ ಗೊತ್ತಾಯ್ತು. ಆವತ್ತು ನನಗೆ ನ್ಯೂಸ್ ನೋಡಿ ಶಾಕ್ ಆಯ್ತು, ರೇಣುಕಾಸ್ವಾಮಿ ಫ್ಯಾಮಿಲಿ ಒಂದು ಕಡೆ ಕಣ್ಣೀರಿನಲ್ಲಿ ಕೈತೊಳೆಯುತ್ತಿದೆ. ಇತ್ತ ದರ್ಶನ್ ಕುಟುಂಬದ ಜೊತೆಗೆ ಅಭಿಮಾನಿಗಳು ಕೂಡ ನೋವಿನಲ್ಲಿದ್ದಾರೆ. ಯಾರಿಗೆ ಸಾಂತ್ವನ ಹೇಳಬೇಕು ಅಂತ ತಿಳಿಯಲಿಲ್ಲ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಾಗಿ ಮಾತನಾಡಲು ಆಗುತ್ತಿಲ್ಲ. ದರ್ಶನ್ ಭೇಟಿಗೆ ಹೋದಾಗ ಸಾಕಷ್ಟು ಮಂಕಾಗಿದ್ದರು. ಅವರ ಮುಖ ನೋಡಿಕೊಂಡು ಬರಲು ಹೋಗಿದ್ದೆ. ಒಂದು ಕ್ಷಣ ಅವರ ಮುಖ ನೋಡಿ ಶೇಕ್ ಹ್ಯಾಂಡ್ ಮಾಡಿ ಬಂದೆ. ಎಲ್ಲರಿಗೂ ಭಗವಂತ ಒಳ್ಳೆಯದನ್ನ ಮಾಡಲಿ. ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎನ್ನುವುದು ಕಾನೂನಿನಲ್ಲಿದೆ, ನನ್ನ ಪ್ರಕಾರ ಎಲ್ಲರಿಗೂ ಒಳ್ಳೆಯದು ಆಗುತ್ತದೆ ಎಂದು ಹೇಳಿದರು.

ದರ್ಶನ್‌ ಭೇಟಿಗೆ ಬಂದ ಮಂಗಳಮುಖಿ

ಆರೋಪಿ ನಾಗರಾಜ್ ಭೇಟಿ ಮಾಡಲು ಮಂಗಳಮುಖಿ ನಕ್ಷತ್ರಾ ಎಂಬುವವರು ಆಗಮಿಸಿದ್ದರು. ನಾಗರಾಜ್ ಭೇಟಿ ಮಾಡಿದ ಬಳಿಕ ಮಾತನಾಡಿದ ನಮ್ಮನೆ ಸುಮ್ಮನೆ ಆಶ್ರಮದ ಟ್ರಸ್ಟಿ ನಕ್ಷತ್ರಾ, ದರ್ಶನ್ ಭೇಟಿಯಾಗೋಕೆ ಆಗಲಿಲ್ಲ. ದರ್ಶನ್ ಸ್ನೇಹಿತ ನಾಗರಾಜ್ ಭೇಟಿಯಾದೆ. ನಮ್ಮ ಟ್ರಸ್ಟ್‌ಗೆ ಸಾಕಷ್ಟು ಸಹಾಯ ಮಾಡಿದ್ದರು. ಮಾನವೀಯತೆ ದೃಷ್ಟಿಯಿಂದ ಭೇಟಿ ಆಗಲು ಬಂದಿದ್ದೆ. ಕೇವಲ ಎರಡು ನಿಮಿಷ ಅಷ್ಟೇ ಮಾತನಾಡಲು ಬಿಟ್ಟಿದ್ದರು. ಜಾಸ್ತಿ ಏನೂ ಮಾತಾಡೋಕೆ ಆಗಲಿಲ್ಲ. ನಮ್ಮದೊಂದು ಬಿಲ್ಡಿಂಗ್ ವಿಚಾರವಿತ್ತು, ಅದಷ್ಟೇ ಮಾತಾಡಿದೆವು. ಅವರು ಆರಾಮಾಗಿಯೇ ಮಾತನಾಡಿದರು ಎಂದು ಹೇಳಿದರು.

ಆಶ್ರಮದ ಕಟ್ಟಡ ನಿರ್ಮಾಣಕ್ಕೆ ನಟ ದರ್ಶನ್ ಆರ್ಥಿಕ ನೆರವು ನೀಡಿದ್ದಾರೆ. ಅವರು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ನಮಗೆ ಅನ್ನ ನೀಡಿದ್ದಾರೆ, ಹಾಗಾಗಿ ಭೇಟಿಗೆ ಬಂದಿದ್ದೆ. ಅವಕಾಶ ಸಿಕ್ಕರೆ ನಟ ದರ್ಶನ್‌ರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

Continue Reading

ಸ್ಯಾಂಡಲ್ ವುಡ್

Actor Darshan: ʻಸೌಂದರ್ಯ ಜಗದೀಶ್ʼ ಆತ್ಮಹತ್ಯೆಗೆ ಬಿಗ್​ ಟ್ವಿಸ್ಟ್; ದರ್ಶನ್‌, ಪವಿತ್ರಾ ವ್ಯವಹಾರವೇ ಸಾವಿಗೆ ಕಾರಣ?

Actor Darshan: ಸೌಂದರ್ಯ ಜಗದೀಶ್ ಸಾವಿನ ಕುರಿತಂತೆ ಹೊಸ ಸುದ್ದಿಯೊಂದು ಬೆಳಕಿಗೆ ಬಂದಿದೆ. ಜಗದೀಶ್‌ ಅಕೌಂಟ್‌ನಿಂದ ಕೋಟಿ ಗಟ್ಟಲೆ ಹಣ ಪವಿತ್ರಾ ಗೌಡ ಅಕೌಂಟ್‌ಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಜಗದೀಶ್ ಸೂಸೈಡ್‌ಗೂ ಈ ಹಣದ ವಿಚಾರವಾಗಿಯೂ ಸಂಬಂಧ ಇದೆಯಾ ಎನ್ನುವ ಅನುಮಾನ ಶುರುವಾಗಿದೆ.

VISTARANEWS.COM


on

Actor Darshan pavithra Gowda in Soundarya Jagadish case Big twist
Koo

ಬೆಂಗಳೂರು: ಕನ್ನಡ ಸಿನಿಮಾ (Actor Darshan) ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ತಮ್ಮ ನಿವಾಸದಲ್ಲಿ ಕಳೆದ ಏ.14ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ವೈರಲ್‌ ಆದ ಬಳಿಕ ಅವರ ಬಗ್ಗೆ ಹಲವಾರು ಅನುಮಾನಗಳು ವ್ಯಕ್ತವಾದವು. ಕೆಲವರು ಸೌಂದರ್ಯ ಜಗದೀಶ್ ಅವರಿಗೆ ಹೃದಯಾಘಾತವಾಗಿ ನಿಧನರಾದರು ಎಂದು ಹೇಳಿಕೊಂಡರು. ಇದೀಗ ಈ ಸಾವಿನ ಕುರಿತಂತೆ ಹೊಸ ಸುದ್ದಿಯೊಂದು ಬೆಳಕಿಗೆ ಬಂದಿದೆ. ಜಗದೀಶ್‌ ಅಕೌಂಟ್‌ನಿಂದ ಕೋಟಿಗಟ್ಟಲೆ ಹಣ ಪವಿತ್ರಾ ಗೌಡ ಅಕೌಂಟ್‌ಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಜಗದೀಶ್ ಸೂಸೈಡ್‌ಗೂ ಈ ಹಣದ ವರ್ಗಾವಣೆಗೂ ಸಂಬಂಧ ಇದೆಯಾ ಎನ್ನುವ ಅನುಮಾನ ಶುರುವಾಗಿದೆ. ಜಗದೀಶ್‌ ಯಾವ ವಿಚಾರಕ್ಕಾಗಿ ಪವಿತ್ರಾಗೆ ಹಣ ಕೊಟ್ಟಿದ್ದರು? ಸಾಲ ಅಂತ ಕೊಟ್ಟಿದ್ರಾ ಎಂಬುದರ ಸತ್ಯ, ತನಿಖೆಯ ನಂತರ ಬಯಲಾಗಬೇಕಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಈ ಹಿಂದೆ ಜಗದೀಶ್‌ ಬ್ಯುಸಿನೆಸ್ ಪಾರ್ಟನರ್ಸ್ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಸೌಂದರ್ಯ ಜಗದೀಶ್‌ ಮೃತಪಟ್ಟ ಒಂದು ತಿಂಗಳ ನಂತರ ಅವರ ರೂಮಿನಲ್ಲಿ ಡೆತ್‌ನೋಟ್‌ ಪತ್ತೆಯಾಗಿತ್ತು. ಸೌಂದರ್ಯ ಜಗದೀಶ್‌ ಬರೆದ ಡೆತ್‌ನೋಟ್‌ನಲ್ಲಿ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ನ ಸಹ ಪಾಲುದಾರರಿಂದ ಸುಮಾರು 60 ಕೋಟಿ ರೂ. ನಷ್ಟವಾಗಿದ್ದು, ಮೋಸ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿತ್ತು. ಇದೀಗ ಸೌಂದರ್ಯ ಜಗದೀಶ್​, ದರ್ಶನ್​, ಪವಿತ್ರಾ ಗೌಡ ನಡುವೆ ಇದೇ ಹಣದ ವ್ಯವಹಾರ ನಡೆದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಳಿಕ ಪಾಲುದಾರರ ಮೇಲೆ ಜಗದೀಶ್ ಪತ್ನಿ ರೇಖಾ ಆರೋಪ ಮಾಡಿದ್ದರು. ಪಾಲುದಾರರಿಂದ 60 ಕೋಟಿ ರೂ. ನಷ್ಟವಾಗಿತ್ತು ಎಂದು ಹೇಳಿಕೆ ನೀಡಿದ್ದರು. ರೇಖಾ ಜಗದೀಶ್​ ದೂರಿನ ಬೆನ್ನಲ್ಲೇ ಪಾಲುದಾರರು ಅಲರ್ಟ್ ಕೂಡ ಆಗಿದ್ದರು. ವ್ಯವಹಾರದ ದಾಖಲೆಯನ್ನು ಪಾಲುದಾರ ಸುರೇಶ್​ ಪೊಲೀಸರಿಗೆ ನೀಡಿದ್ದಾರೆ.

ಪವಿತ್ರಾ ಗೌಡ ಖರೀದಿಸಿದ ಮನೆಗೆ ದುಡ್ಡು ಕೊಟ್ಟಿದ್ರಾ ಸೌಂದರ್ಯ ಜಗದೀಶ್?

ಪವಿತ್ರಾ ಗೌಡ ಮನೆ ಖರೀದಿಗಾಗಿ ಸೌಂದರ್ಯ ಜಗದೀಶ್ 2 ಕೋಟಿ ರೂ. ಕೊಟ್ಟಿದ್ದರು ಎನ್ನಲಾಗಿದೆ. ಸೌಂದರ್ಯ ಜಗದೀಶ್ ಹಣ ಕೊಟ್ಟ ಮಾರನೇ ದಿನವೇ ಪವಿತ್ರಾ ಗೌಡ ಮನೆ ಖರೀದಿಸಿದ್ದರು. ಈ ದಾಖಲೆ ಇದೀಗ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ಈ ಎಲ್ಲ ಹಣದ ವ್ಯವಹಾರದ ದಾಖಲೆ ಪಾಲುದಾರ ಸುರೇಶ್​ ಪೊಲೀಸರಿಗೆ ನೀಡಿದ್ದಾರೆ. 2017 ನವೆಂಬರ್​ 13ರಂದು ಪವಿತ್ರಾಗೌಡಗೆ 1 ಕೋಟಿ ರೂ. ವರ್ಗಾವಣೆ ಮಾಡಿದ್ದರು ಜಗದೀಶ್‌. ಹಾಗೇ 2018, ಜನವರಿ 23ರಂದು ಪವಿತ್ರಾಗೌಡಗೆ ಮತ್ತೆ 1 ಕೋಟಿ ರೂ. ವರ್ಗಾವಣೆ ಮಾಡಿದ್ದರು. 2018, ಜನವರಿ 24 ರಂದು ಪವಿತ್ರಾಗೌಡ ಮನೆ ಖರೀದಿಸಿದ್ದರು.

ಕೆಂಚನಹಳ್ಳಿಯಲ್ಲಿ 1. 75 ಲಕ್ಷ ರೂ. ಮೌಲ್ಯದ ಮನೆ ಖರೀದಿಸಿದ್ದ ಪವಿತ್ರಾ ಗೌಡ

RR ನಗರ ಬಳಿಯ ಕೆಂಚನಹಳ್ಳಿಯಲ್ಲಿ 1. 75 ಲಕ್ಷ ಮೌಲ್ಯದ ಮನೆಯನ್ನು ಪವಿತ್ರಾ ಗೌಡ ಖರೀದಿಸಿದ್ದರು. ಪವಿತ್ರಾಗೌಡ ಮನೆ ಖರೀದಿ ಪತ್ರದಲ್ಲಿ ಸಾಕ್ಷಿಯಾಗಿ ಸೌಂದರ್ಯ ಜಗದೀಶ್​ ಸಹಿ ಕೂಡ ಇತ್ತು. ಈ ಹಣದ ವ್ಯವಹಾರವನ್ನು ಸೌಂದರ್ಯ ಜಗದೀಶ್​ ಪಾಲುದಾರರಿಂದ ಮುಚ್ಚಿಟ್ಟಿದ್ದರು. ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಳಿಕ ಪಾಲುದಾರರ ವಿರುದ್ಧವೇ ಪತ್ನಿ ದೂರು ನೀಡಿದ ಹಿನ್ನೆಲೆಯಲ್ಲಿ ವಹಾರದ ದಾಖಲೆಯನ್ನು ಪಾಲುದಾರರು ಕಲೆ ಹಾಕಿದರು. ಪಾಲುದಾರರಿಗೆ ಸಿಕ್ಕ ದಾಖಲೆಯಲ್ಲಿ ದರ್ಶನ್​- ಪವಿತ್ರಾ, ಜಗದೀಶ್ ವ್ಯವಹಾರ ಪತ್ತೆಯಾಗಿದೆ. ದರ್ಶನ್​ ಕಾರಣಕ್ಕೆ ಪವಿತ್ರಾಗೆ 2 ಕೋಟಿ ರೂ.ಯನ್ನು ಸೌಂದರ್ಯ ಜಗದೀಶ್ ಕೊಟ್ಟರಾ ಎಂಬ ಪ್ರಶ್ನೆ ಈಗ ಎದುರಾಗಿದೆ. ಪವಿತ್ರಾಗೌಡಗೆ ಸೌಂದರ್ಯ ಜಗದೀಶ್​ ಹಣ ಕೊಟ್ಟ ದಾಖಲೆ ಮಾತ್ರ ಲಭ್ಯವಾಗಿದೆ. ಈವರೆಗೂ ಸೌಂದರ್ಯ ಜಗದೀಶ್​ಗೆ ಪವಿತ್ರಾಗೌಡ ಹಣ ವಾಪಸ್​ ನೀಡಿಲ್ಲ. ಹೀಗಾಗಿ ದರ್ಶನ್ ಒತ್ತಡಕ್ಕೆ ಮಣಿದು, ಜಗದೀಶ್‌ ಅವರು ಪವಿತ್ರಾ ಗೌಡಗೆ ಹಣ ನೀಡಿ ಸಂಕಷ್ಟಕ್ಕೆ ಸಿಲುಕಿದರು ಎನ್ನಲಾಗುತ್ತಿದೆ.

ಇದನ್ನೂ ಓದಿ: Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಇದೀಗ ಪೊಲೀಸರು ದರ್ಶನ್ ಅವರು ಸೌಂದರ್ಯ ಜಗದೀಶ್‌ಗೆ​ ಒತ್ತಡ ಹಾಕಿರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಜಗದೀಶ್ ಸೂಸೈಡ್‌ಗೂ ಇದ್ದಕ್ಕೂ ಲಿಂಕ್‌ ಇರಬಹುದಾ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಜಗದೀಶ್‌ ಯಾವ ವಿಚಾರಕ್ಕಾಗಿ ಪವಿತ್ರಾಗೆ ಹಣ ಕೊಟ್ಟಿದ್ರು?ಸಾಲ ಅಂತ ಕೊಟ್ಟಿದ್ರಾ? ಎಂಬುದರ ಸತ್ಯ ತನಿಖೆಯ ನಂತರ ಬಯಲಾಗಬೇಕಿದೆ .

ಈ ಹಿಂದೆ ಜಗದೀಶ್‌ ಪತ್ನಿ ಆರೋಪಿಸಿದ್ದೇನು?

ಪತಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಒಂದು ವಾರದ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ನಿರಂತರವಾಗಿ ಫೋನ್‌ ಮಾಡಿದ್ದರು. ಇವರ ಕರೆ ಬಂದಾಗ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದು, ಇದರಿಂದ ಮನನೊಂದು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್‌ ಪತ್ನಿ ಶಶಿರೇಖಾ ಆರೋಪಿಸಿದ್ದರು.

ಬ್ಯುಸಿನೆಸ್‌ ಪಾರ್ಟ್ನಸ್‌ಗಳಿಂದ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಪತಿ ಸೌಂದರ್ಯ ಜಗದೀಶ್‌ ಸಾವಿಗೆ ಸುರೇಶ್‌, ಹೊಂಬಣ್ಣ ಹಾಗೂ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯ ಮ್ಯಾನೇಜರ್‌ ಸುದೀಂದ್ರ ಕಾರಣ ಎಂದು ಪತ್ನಿ ಶಶಿರೇಖಾ ದೂರು ನೀಡಿದ್ದಾರೆ. ಸದ್ಯ ಈ ಡೆತ್‌ನೋಟ್ ಆಧರಿಸಿ ಪತ್ನಿ ಶಶಿರೇಖಾ ಮಹಾಲಕ್ಷ್ಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಾಗಿತ್ತು.

Continue Reading
Advertisement
Hardeep Singh Nijjar
ದೇಶ5 mins ago

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Sleep After Lunch
ಲೈಫ್‌ಸ್ಟೈಲ್10 mins ago

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

R Ashok demands that the Congress apologize for imposing emergency
ಕರ್ನಾಟಕ16 mins ago

R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

Viral Video
Latest23 mins ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ29 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ30 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್40 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್54 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ1 hour ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ1 hour ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌