ಸಿನಿಮಾ
Vikram Trailer: ಯಶ್ ಕೈಲಿದ್ದ ʼದೊಡ್ಡಮ್ಮʼ ಇದೀಗ ಕಮಲ್ ಹಾಸನ್ ಕೈಯಲ್ಲಿ!
“ವಿಕ್ರಮ್ʼ ಚಿತ್ರದ ಟ್ರೈಲರ್ ಬೆಚ್ಚಿ ಬೀಳಿಸುವಂತಿದೆ. ಕಮಲ್ ಹಾಸನ್ ನಟನೆಯ ಈ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಹಿನ್ನೆಲೆ ಸಂಗೀತವೂ ಅದ್ಭುತವಾಗಿದೆ. ಈ ಚಿತ್ರ ಕೂಡ ಧೂಳೆಬ್ಬಿಸಲಿದೆಯೇ ಎಂಬ ಕುತೂಹಲ ಮೂಡಿದೆ.
ಬೆಂಗಳೂರು: ಕಮಲ್ ಹಾಸನ್ ಅಭಿನಯದ “ವಿಕ್ರಮ್ʼ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ರಿಲೀಸ್ ಆಗಿದ್ದೇ ತಡ ಲಕ್ಷಾಂತರ ಅಭಿಮಾನಿಗಳು ಇದನ್ನು ನೋಡಿ ಖುಷಿಪಟ್ಟಿದ್ದಾರೆ. ಸ್ವಲ್ಪ ದಿನ ಸಿನಿಮಾದಿಂದ ದೂರ ಇದ್ದ ಕಮಲ್ ಹಾಸನ್ ಇದೀಗ ಮತ್ತೆ ಎಂಟ್ರಿ ನೀಡಿದ್ದಾರೆ. ಸಾಹಸಗಳು ಟ್ರೈಲರ್ನಲ್ಲಿ ಬೆಚ್ಚಿ ಬೀಳಿಸುವಂತಿದೆ. ಬ್ಯಾಕ್ ರೌಂಡ್ ಮ್ಯೂಸಿಕ್ ಮೈ ರೋಮಾಂಚನಗೊಳಿಸುವಂತಿದೆ.
ಇದನ್ನೂ ಓದಿ |ತಮಿಳುನಾಡಿನ ಇಡ್ಲಿ ಅಮ್ಮನಿಗೆ ಹೊಸ ಮನೆ ನೀಡಿದ ಆನಂದ್ ಮಹೀಂದ್ರಾ
ಕಮಲ್ ಹಾಸನ್ ಜೊತೆ ವಿಜಯ್ ಸೇತುಪತಿ, ಫಹಾದ್ ಫಾಸಿಲ್ ಅವರಂತಹ ಮೇರು ಕಲಾವಿದರ ದಂಡಿರುವುದನ್ನು ನೋಡಿ ವಾವ್ ಅನ್ನುತ್ತಿದ್ದಾರೆ ಪ್ರೇಕ್ಷಕರು.
ಯಶ್ ಅವರ ಕೆಜಿಎಫ್-2 ಸಿನಿಮಾದಲ್ಲಿ “ದೊಡ್ಡಮ್ಮʼ ಬಹಳ ಫೇಮಸ್ ಆಗಿತ್ತು. ದೊಡ್ಡಮ್ಮ ಮೂಲಕ ಒಂದರ ಮೇಲೊಂದು ಗುಂಡು ಹಾರಿಸಿ, ಬ್ಯಾರೆಲ್ ಕೆಂಪಾಗಿ ಅದರಲ್ಲೆ ಸಿಗರೇಟ್ ಸೇದುವ ದೃಶ್ಯಕ್ಕೆ ಫ್ಯಾನ್ಗಳು ಫಿದಾ ಆಗಿದ್ದರು. ಇದೀಗ ಅದೇ ರೀತಿಯ “ದೊಡ್ಡಮ್ಮʼನನ್ನು ಹಿಡಿದುಕೊಂಡು ಕಮಲ್ ಹಾಸನ್ ಪೋಸ್ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ವಿಕ್ರಮ್ ತಂಡ ಕೆಜಿಎಫ್ 2ನಿಂದ ಪ್ರಭಾವಿತವಾಯಿತೇ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕಮಲ್ ಹಾಸನ್ ಮತ್ತು ಆರ್ ಮಹೇಂದ್ರನ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಗಂಗಾಧರನ್ ಛಾಯಾಗ್ರಹಣ ಮಾಡಿದ್ದಾರೆ. ಜೂನ್ 3ರಂದು ಸಿನಿಮಾ ರಿಲೀಸ್ ಆಗಲಿದ್ದು, ಇದೂ ಕೂಡ ಹೊಸ ದಾಖಲೆ ಬರೆಯುವ ಸಾದ್ಯತೆ ಇದೆ.
ಇದನ್ನೂ ಓದಿ |Trivikrama: ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ಸಿನಿಮಾ ಡೇಟ್ ಅನೌನ್ಸ್!
ದೇಶ
72 Hoorain: ಕಾಶ್ಮೀರ ಫೈಲ್ಸ್, ಕೇರಳ ಸ್ಟೋರಿ ಬಳಿಕ ಮತ್ತೊಂದು ವಿವಾದಾತ್ಮಕ ಸಿನಿಮಾ ’72 ಹೂರೇ’ ತೆರೆಗೆ ಬರಲು ಸಿದ್ಧ
72 Hoorain: ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ನಿರ್ದೇಶನದ 72 ಹೂರೇ ಚಿತ್ರದ ಟೀಸರ್ ಲಾಂಚ್ ಮಾಡಲಾಗಿದ್ದು, ಪರ ವಿರೋಧ ಚರ್ಚೆಗಳು ಶುರುವಾಗಿವೆ.
ನವದೆಹಲಿ: ದಿ ಕೇರಳ ಸ್ಟೋರಿ (The Kerala Story), ಕಾಶ್ಮೀರ್ ಫೈಲ್ (The Kashmir Files), ದಿ ಡೈರಿ ಆಫ್ ವೆಸ್ಟ್ ಬೆಂಗಾಲ್ ಸಿನಿಮಾ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇಸ್ಲಾಮಿಕ್ ತೀವ್ರವಾದದ ಕತೆಯನ್ನು ಹೊಂದಿರುವ 72 ಹೂರೇ(72 Hoorain) ಚಿತ್ರದ ಟೀಸರ್ ಲಾಂಚ್ ಆಗಿದ್ದು, ತೀವ್ರ ವಿರೋಧ ಕೂಡ ವ್ಯಕ್ತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಆಗುತ್ತಿದ್ದಂತೆ ನೆಟ್ಟಿಗರು, ಮುಸ್ಲಿಮ್ ಮತ್ತು ಇಸ್ಲಾಮ್ಗೆ ಅವಮಾನ ಮಾಡುವ ಪ್ರಾಪಗ್ಯಾಂಡ ಚಿತ್ರ ಎಂದು ಟೀಕಿಸಿದ್ದಾರೆ.
ಇತ್ತೀಚೆಗಷ್ಟೇ 72 ಹೂರೇ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲಾಗಿತ್ತು. ಆಗಲೂ ಟ್ವಿಟರ್ನಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದ್ದವು. ಭಾರತದ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನಗಳ ನಡೆಯುತ್ತಿವೆ ಎಂದು ಟೀಕೆ ವ್ಯಕ್ತವಾಗಿತ್ತು.
ಚಿತ್ರದ ಟೀಸರ್ನಲ್ಲಿ ಒಸಾಮಾ ಬಿನ್ ಲಾಡೆನ್, ಅಜ್ಮಲ್ ಕಸಬ್ ಸೇರಿದಂತೆ ಇತರ ಚಿತ್ರಗಳನ್ನು ಮತ್ತು ಯಾಕೂಬ್ ಮೆಮನ್ನ ಮಿಶ್ರಿತ ಫೋಟೋವನ್ನು ತೋರಿಸಲಾಗಿದೆ. ಮೇಲ್ನೋಟಕ್ಕೆ ಟೀಸರ್ನಲ್ಲಿ ಕಾಣುವ ಅಂಶಗಳು ಖಂಡಿತವಾಗಿಯೂ, ಈ ಸಿನಿಮಾ ಕೂಡ ಮುಸ್ಲಿಮರು ಸುತ್ತ ಸುತ್ತದೆ ಎಂಬುದು ವೇದ್ಯವಾಗುತ್ತದೆ. ಉಗ್ರರಾದ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಅವರನ್ನು ಹೋಲುವರವನ್ನು ಹೈಲೆಟ್ ಮಾಡಲಾಗಿರುವುದನ್ನು ಕಾಣಬಹುದಾಗಿದೆ.
ಇದನ್ನೂ ಓದಿ: The Kerala Story : ದಿ ಕೇರಳ ಸ್ಟೋರಿ ಸಿನಿಮಾದ ಬಗ್ಗೆ ಕೆಂಡ ಕಾರಿದ ಹಿರಿಯ ನಟ ನಾಸಿರುದ್ದೀನ್ ಶಾ
72 ಹೂರೇ ಚಿತ್ರದ ಟ್ರೈಲರ್ ಅನ್ನು ಸಹ ನಿರ್ದೇಶಕರಾಗಿರುವ ಅಶೋಕ್ ಪಂಡಿತ್ ಅವರು ಟ್ವಿಟರ್ನಲ್ಲಿ ಷೇರ್ ಮಾಡಿದ್ದಾರೆ. ಇವರು ಕಾಶ್ಮೀರ ಪಂಡತ್ ಕೂಡ ಹೌದು. ನಮ್ಮ ಚಿತ್ರ 72 Hoorain ಸಿನಿಮಾದ ಮೊದಲ ನೋಟವನ್ನು ನಿಮಗೆ ಪ್ರಸ್ತುತಪಡಿಸುವ ಭರವಸೆಯಂತೆ. ನೀವು ಅದನ್ನು ಇಷ್ಟಪಡುತ್ತೀರಿ ಎಂದು ನನಗೆ ಖಾತ್ರಿಯಿದೆ. ಭಯೋತ್ಪಾದಕರ ಮಾರ್ಗದರ್ಶಕರು ಭರವಸೆ ನೀಡಿದಂತೆ 72 ಕನ್ಯೆಯರನ್ನು ಭೇಟಿಯಾಗುವ ಬದಲು ನೀವು ಕ್ರೂರವಾಗಿ ಸಾಯುತ್ತಿದ್ದರೆ? ನನ್ನ ಮುಂಬರುವ ಚಿತ್ರ 72 ಹೂರೇ ನ ಮೊದಲ ನೋಟವನ್ನು ಪ್ರಸ್ತುತಪಡಿಸುತ್ತಿದ್ದೇನೆ. ಚಿತ್ರವು 7 ಜುಲೈ 2023 ರಂದು ಬಿಡುಗಡೆಯಾಗಲಿದೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
72 ಹೂರೇ ಚಿತ್ರದ ಟೀಸರ್
South Cinema
Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
ಬೆಂಗಳೂರು; ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
South Cinema
Actor Yash: ಅಭಿಷೇಕ್ ದಂಪತಿಗೆ ವಿಶ್ ಮಾಡಿದ ಯಶ್ -ರಾಧಿಕಾ; ಸೈಲಿಶ್ ಆಗಿ ಕಂಡ ರಾಕಿ ಭಾಯ್!
Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
South Cinema
Abhishek Ambareesh Wedding: ಅಭಿಷೇಕ್ ಅಂಬರೀಶ್- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್!
Abhishek Ambareesh Wedding: ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
-
ಕರ್ನಾಟಕ20 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ15 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ11 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ16 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ಕರ್ನಾಟಕ8 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
-
ದೇಶ19 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ11 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ