Vikrant Rona | ರೋಣನ ಆರ್ಭಟಕ್ಕೆ ದಿನಗಣನೆ ಶುರು; ವಿದೇಶಗಳಲ್ಲೂ 1200 ಸ್ಕ್ರೀನ್‌ಗಳಲ್ಲಿ ಪ್ರದರ್ಶನ - Vistara News

ಸಿನಿಮಾ

Vikrant Rona | ರೋಣನ ಆರ್ಭಟಕ್ಕೆ ದಿನಗಣನೆ ಶುರು; ವಿದೇಶಗಳಲ್ಲೂ 1200 ಸ್ಕ್ರೀನ್‌ಗಳಲ್ಲಿ ಪ್ರದರ್ಶನ

ಕಿಚ್ಚ ನಟನೆಯ ವಿಕ್ರಾಂತ್‌ ರೋಣ (Vikrant Rona ) 30 ದೇಶಗಳ ಸುಮಾರು 1200 ಪರದೆಗಳಲ್ಲಿಯೂ ತೆರೆ ಕಾಣಲಿದೆ. ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರ ತಂಡ ತೀರ್ಮಾನಿಸಿದೆ.

VISTARANEWS.COM


on

Vikrant Rona
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಟ ಕಿಚ್ಚ ಸುದೀಪ್‌ ಅಭಿನಯದ ಚಿತ್ರ ʼವಿಕ್ರಾಂತ್‌ ರೋಣʼ (Vikrant Rona) ಪ್ರಚಾರ ಭರದಿಂದ ಸಾಗಿದೆ. ರಾಜ್ಯದ ಚಿತ್ರಮಂದಿರಗಳಂತೂ ಕಿಚ್ಚನ ಕಟೌಟ್ ಗಳಿಂದ ರಾರಾಜಿಸಲು ಸಿದ್ಧತೆ ನಡೆಸಿವೆ. ಇದರ ನಡುವೆ ವಿದೇಶಗಳಲ್ಲಿರುವ ಕನ್ನಡಿಗರಿಗೆ ಸಿಹಿ ಸುದ್ದಿಯನ್ನು ಸಿನಿಮಾ ತಂಡ ನೀಡಿದೆ.

ʻವಿಕ್ರಾಂತ್ ರೋಣʼ ಸಿನಿಮಾ ೩೦ಕ್ಕೂ ಹೆಚ್ಚು ದೇಶಗಳ 1200ಕ್ಕೂ ಅಧಿಕ ಪರದೆಗಳಲ್ಲಿ ತೆರೆಕಾಣಲಿದೆ. ಈ ಕುರಿತು ವಿತರಕರಾದ ಒನ್‌ ಟ್ವೆಂಟಿ 8 ಮೀಡಿಯಾ ಮತ್ತು ಕಾಸ್ಮೋಸ್ ಎಂಟರ್‌ಟೈನ್‌ಮೆಂಟ್‌ನ ಆಪರೇಷನ್ ಮುಖಸ್ಥ ಯೋಗೀಶ್ ದ್ವಾರಕೀಶ್ ಬುಂಗಾಲೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಯುಕೆ, ಯುಎಸ್, ಕೆನಡಾ, ಐರೋಪ್ಯ ರಾಷ್ಟ್ರಗಳು, ಆಸ್ಟ್ರೇಲಿಯಾ, ಮಲೇಷ್ಯಾ, ಸಿಂಗಾಪುರ್, ನೇಪಾಳದಲ್ಲಿ ಥಿಯೇಟರ್ ಬಿಡುಗಡೆಯಾಗುವುದು ಖಚಿತಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ | Cinedubs Mobile App | ವಿಕ್ರಾಂತ್‌ ರೋಣ ಸಿನಿಮಾ ಮೂಲಕ ಬರುತ್ತಿದೆ ಸಿನಿಡಬ್ಸ್‌ ಆ್ಯಪ್‌; ಏನಿದರ ವಿಶೇಷತೆ?

ಈ ಸಿನಿಮಾ ಕನ್ನಡ, ಹಿಂದಿ, ಇಂಗ್ಲಿಷ್, ಮಲಯಾಳಂ ಮತ್ತು ತಮಿಳಿನಲ್ಲಿ ಅಷ್ಟೇ ಅಲ್ಲದೆ ಅರೇಬಿಕ್, ಜರ್ಮನ್, ರಷ್ಯನ್ ಮತ್ತು ಮ್ಯಾಂಡರಿನ್ ಭಾಷೆಗಳಲ್ಲಿಯೂ ಬಿಡುಗಡೆಯಾಗುತ್ತಿದೆ.

ರೋಣನ ರುದ್ರನರ್ತನಕ್ಕೆ ರೆಡಿಯಾಗ್ತಿವೆ ಥಿಯೇಟರ್ ಅಂಗಳ

ಜುಲೈ 28ಕ್ಕೆ ವಿಕ್ರಾಂತ್‌ ರೋಣ ಬಿಡುಗಡೆಗೊಳ್ಳಲಿದ್ದು, ವೀರೇಶ್ ಥಿಯೇಟರ್ ಮತ್ತು ಊರ್ವಶಿ ಥಿಯೇಟರ್ ಕಿಚ್ಚನ ಕಟೌಟ್‌ನಿಂದ ರಾರಾಜಿಸಲಿವೆ. ಆನಂದ್ ಆರ್ಟ್ಸ್ ಹಾಗು ಕೃಷ್ಣ ಅವರು ನೂರಾರು ಕಟೌಟ್ಸ್‌ ತಯಾರಿಸುತ್ತಿದ್ದಾರೆ. ಕಳಸ ಹೊತ್ತ ಮಹಿಳೆಯರು… .ಡೊಳ್ಳು ಕುಣಿತ…ಕೇರಳದ ಚಂಡೆ ವಾಧ್ಯ ಸೇರಿದಂತ ಹಲವುನೃತ್ಯ ಕಲೆಗಳ ಪ್ರದರ್ಶನದ ಮೂಲಕ ಈ ಚಿತ್ರವನ್ನು ಬರಮಾಡಿಕೊಳ್ಳಲಾಗುತ್ತದೆ.

ಮೆಟಾವರ್ಸ್‌ ಅಥವಾ ಬಹು ಆಯಾಮದ ಡಿಜಿಟಲ್‌ ಜಗತ್ತನ್ನು ‘ಕಿಚ್ಚ ವರ್ಸ್’ ಮೂಲಕ ವಿಕ್ರಾಂತ್ ರೋಣ ಸಿನಿಮಾ ಪ್ರವೇಶಿಸಲಿದೆ. ಈ ಮೂಲಕ ಸಿನಿಮಾ ಎನ್‌ಎಫ್‌ಟಿ (NFT) ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎಂಬ ಮಾಹಿತಿ ಯನ್ನು ಈಗಾಗಲೇ ಚಿತ್ರ ತಂಡ ಹಂಚಿಕೊಂಡಿದೆ.

ಕಿಚ್ಚ ಸುದೀಪ್ ನಟಿಸಿರುವ ಈ ಪ್ಯಾನ್ ವರ್ಲ್ಡ್ ಸಿನಿಮಾವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದು, ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು ಹಾಗು ಇಂಗ್ಲೀಷ್ ಭಾಷೆಗೆ ಕಿಚ್ಚ ಸುದೀಪ್ ಅವರೇ ವಾಯ್ಸ್ ಡಬ್ ಮಾಡಿರುವುದು ಇನ್ನೂ ವಿಶೇಷ. ವಿಕ್ರಾಂತ್ ರೋಣ 14 ಭಾಷೆಗಳಲ್ಲಿ 3ಡಿ ರೂಪದಲ್ಲಿ ಬಿಡುಗಡೆಯಾಗಲಿದೆ. ಜುಲೈ 28ರಂದು ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

ಇದನ್ನೂ ಓದಿ | Vikrant Rona | ಕಿಚ್ಚ ವರ್ಸ್‌ ಲಾಂಚ್‌; ಡಿಜಿಟಲ್‌ ಜಗತ್ತಿನಲ್ಲಿ ಕಿಚ್ಚ ಸುದೀಪ್‌ ಹವಾ ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಲಿವುಡ್

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

OM Puri: ಸ್ಟಾರ್ ಆಗುವುದು ಸುಲಭವಲ್ಲ. ಇಂದಿನ ಎಷ್ಟೋ ಸ್ಟಾರ್ ಗಳು ಒಂದು ಕಾಲದಲ್ಲಿ ತುಂಬಾ ಕಷ್ಟ ಪಟ್ಟಿದ್ದರು. ಸಣ್ಣಪುಟ್ಟ ಕೆಲಸಗಳನ್ನು ಮಾಡಿದ್ದರು. ಇವರಲ್ಲಿ ಓಂ ಪುರಿ ಕೂಡ ಒಬ್ಬರು. ಸ್ಟಾರ್ ಆಗುವ ಮೊದಲು ಅವರ ಬದುಕಿನ ಕಡುಕಷ್ಟದ ದಿನಗಳ ಹಿನ್ನೋಟ ಇಲ್ಲಿದೆ.

VISTARANEWS.COM


on

By

OM Puri
Koo

ಎಷ್ಟೇ ದೊಡ್ಡ ಮನೆತನದಿಂದ ಬಂದಿರಲಿ ಚಿತ್ರರಂಗದಲ್ಲಿ (film industry) ತನ್ನ ಸ್ವಂತ ಪರಿಶ್ರಮವಿಲ್ಲದೆ ಸ್ಟಾರ್ (star) ಆಗಲು ಸಾಧ್ಯವೇ ಇಲ್ಲ. ಇವತ್ತಿನ ಹಲವಾರು ಸೂಪರ್ ಸ್ಟಾರ್ ಗಳು (super star) ಒಂದು ಕಾಲದಲ್ಲಿ ಬೀದಿ ಬದಿಯಲ್ಲಿ ಮಲಗಿದ್ದರು, ಸಣ್ಣಪುಟ್ಟ ಕೆಲಸಗಳನ್ನು ಮಾಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು.

ಬಾಲಿವುಡ್ ನ (bollywood) ಶಾರುಖ್ ಖಾನ್ (Shah Rukh Khan) , ಅಮಿತಾಬ್ ಬಚ್ಚನ್ (Amitabh Bachchan) ಕೂಡ ಒಂದು ಕಾಲದಲ್ಲಿ ಸಾಕಷ್ಟು ಕಷ್ಟಗಳನ್ನು ಸಹಿಸಿಯೇ ಮೇಲಕ್ಕೆ ಏರಿದವರು. ಹೀಗೆಯೇ ಕಷ್ಟಪಟ್ಟು ಮನೆ ಮಾತಾಗಿರುವವರಲ್ಲಿ ಬಾಲಿವುಡ್ ನಲ್ಲಿ ವಿವಿಧ ಪಾತ್ರಗಳಿಂದ ಪ್ರಸಿದ್ದಿ ಪಡೆದ ನಟ ಓಂ ಪುರಿ (OM Puri) ಕೂಡ ಒಬ್ಬರು.

ಜನನ ದಾಖಲೆಯೇ ಇಲ್ಲ

ಹರಿಯಾಣದ ಅಂಬಾಲದಲ್ಲಿ ಜನಿಸಿದ್ದ ಓಂ ಪುರಿ ಅವರ ತಂದೆ ಟೆಕ್ ಚಂದ್ ಪುರಿ ಭಾರತೀಯ ಸೇನೆಯಲ್ಲಿದ್ದರು ಮತ್ತು ರೈಲ್ವೇಯಲ್ಲಿಯೂ ಕೆಲಸ ಮಾಡಿದ್ದರು. ಆದರೂ ಓಂ ಪುರಿ ಅವರು ಯಾವುದೇ ಜನನ ಪ್ರಮಾಣಪತ್ರವನ್ನು ಹೊಂದಿಲ್ಲ. ಹೀಗಾಗಿ ಅವರ ಜನ್ಮ ದಿನಾಂಕದ ಬಗ್ಗೆ ಅವರ ಕುಟುಂಬಕ್ಕೆ ಖಚಿತವಾಗಿ ತಿಳಿದಿಲ್ಲ.

ದಸರಾ ಆರಂಭವಾದ ಎರಡು ದಿನಗಳ ಅನಂತರ ತಾನು ಜನಿಸಿರುವುದಾಗಿ ತಾಯಿ ಹೇಳುತ್ತಿದ್ದರು ಎನ್ನುತ್ತಾರೆ ಓಂ ಪುರಿ.

ಇದನ್ನೂ ಓದಿ: Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

ಸ್ವಂತ ಪರಿಶ್ರಮದಿಂದ ಖ್ಯಾತಿ

ಓಂಪುರಿ ಅವರ ಬಾಲ್ಯವು ತುಂಬಾ ಸುಲಭವಾಗಿರಲಿಲ್ಲ. ಇಂದು ನಾವು ಅವರ ಕುಟುಂಬದ ಬಗ್ಗೆ ಮಾತನಾಡುತ್ತೇವೆ. ಆದರೆ ಅವರು ಹಿಂದುಳಿದ ಹಿನ್ನೆಲೆಯಿಂದ ಬಂದು ದೊಡ್ಡ ಹೆಸರನ್ನು ತಮ್ಮ ಸ್ವಂತ ಪರಿಶ್ರಮದಿಂದಲೇ ಗಳಿಸಿದರು.
ಎಂಟು ಮಂದಿಯಲ್ಲಿ ಇಬ್ಬರು ಮಾತ್ರ ಬದುಕಿ ಉಳಿದರು.

ಓಂ ಪುರಿ ಅವರ ಎಂಟು ಸಹೋದರರು ಮತ್ತು ಸಹೋದರಿಯರಲ್ಲಿ ಕಿರಿಯರಾಗಿದ್ದರು. ದುರದೃಷ್ಟವಶಾತ್ ಅವರ ಎಲ್ಲಾ ಸಹೋದರರು ಮತ್ತು ಸಹೋದರಿಯರು ಬಾಲ್ಯದಲ್ಲೇ ಸರಿಯಾದ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ನಿಧನರಾದರು. ಅವರ ಹಿರಿಯ ಸಹೋದರ ವೇದ್ ಮತ್ತು ಪುರಿ ಮಾತ್ರ ಬದುಕುಳಿದರು.


ಕಷ್ಟದ ಜೀವನ

ತಂದೆ ರೈಲ್ವೇ ಉದ್ಯೋಗಿಯಾಗಿದ್ದಾಗ ಸಿಮೆಂಟ್ ಕಳ್ಳತನದ ಆರೋಪದಿಂದ ಜೈಲು ಸೇರಿದ್ದರು. ಇದರ ಬಳಿಕ ಅವರ ಕುಟುಂಬವು ನಿರಾಶ್ರಿತವಾಯಿತು. ಈ ಸಮಯದಲ್ಲಿ ಓಂ ಪುರಿ ಅವರ ಸಹೋದರ ವೇದ್ ಪ್ರಕಾಶ್ ಪುರಿ ರೈಲು ನಿಲ್ದಾಣಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಓಂ ಪುರಿ ಅವರು ಸ್ಥಳೀಯ ಚಹಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕಷ್ಟದ ದಿನಗಳಲ್ಲಿ ತಮ್ಮ ಕುಟುಂಬವನ್ನು ಬೆಂಬಲಿಸಲು ಇವರು ರೈಲು ಹಳಿಗಳಿಂದ ಕಲ್ಲಿದ್ದಲು ಸಂಗ್ರಹಿಸುತ್ತಿದ್ದರು.

ಕಷ್ಟವಿದ್ದರೂ ಓದು ಮುಂದುವರಿಸಿದರು

ಎಷ್ಟೇ ಕಷ್ಟವಿದ್ದರೂ ಪುರಿ ಅವರ ಅಧ್ಯಯನವನ್ನು ಬಿಡಲಿಲ್ಲ. ದೆಹಲಿಯ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾಗೆ ಸೇರಿ, ಅಲ್ಲಿ ಅವರು ನಾಸಿರುದ್ದೀನ್ ಷಾ ಅವರನ್ನು ಭೇಟಿಯಾದರು. ಷಾ ಅವರು ಪುರಿ ಅವರನ್ನು ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಕರೆ ತಂದರು.

ಷಾ ಅವರೊಂದಿಗೆ ಕೆಲಸ

ಓಂ ಪುರಿ ಮತ್ತು ನಾಸಿರುದ್ದೀನ್ ಷಾ ಅವರೊಂದಿಗೆ ಒಟ್ಟಿಗೆ 26 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರ ಮೊದಲ ಚಿತ್ರ 1977ರಲ್ಲಿ ಭೂಮಿಕಾ ಮತ್ತು ಅವರ ಕೊನೆಯ ಚಿತ್ರ 2009 ರಲ್ಲಿ ಬೋಲೋ ರಾಮ್.


ಹೃದಯಾಘಾತದಿಂದ ನಿಧನ

ಓಂ ಪುರಿ ಅವರು ಮುಂಬಯಿ ನ ಅಂಧೇರಿಯಲ್ಲಿರುವ ಅವರ ನಿವಾಸದಲ್ಲಿ ಹೃದಯಾಘಾತದಿಂದ 2017ರ ಜನವರಿ 6 ರಂದು ನಿಧನರಾದರು. ಚಾಚಿ 420 (1997), ಹೇರಾ ಫೆರಿ (2000), ಚೋರ್ ಮಚಾಯೆ ಶೋರ್ (2002), ದೀವಾನೆ ಹ್ಯೂ ಪಾಗಲ್, ಚುಪ್ ಚುಪ್ ಕೆ, ಕಿಸ್ಮೆತ್ ಕನೆಕ್ಷನ್ ಮತ್ತು ಮಲಾಮಾಲ್ ವೀಕ್ಲಿ (2006) ಮತ್ತು ಓಹ್ ಮೈ ಗಾಡ್, ಧೋಲ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದರು.

ಭಾರತೀಯ, ಬ್ರಿಟಿಷ್ ಮತ್ತು ಅಮೆರಿಕನ್ ಚಲನಚಿತ್ರಗಳಲ್ಲಿ ನಟಿಸಿರುವ ಅವರಿಗೆ ನ್ಯಾಷನಲ್ ಫಿಲಂ ಅವಾರ್ಡ್, ಅತ್ಯತ್ತಮ ನಟ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿದೆ.

Continue Reading

ಕಾಲಿವುಡ್

Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

Actor Rajinikanth: ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Rajinikanth Thailaiver 171 lokesh kanakaraj entry
Koo

ಬೆಂಗಳೂರು: ʻಜೈಲರ್’ ಬಳಿಕ ರಜನಿಕಾಂತ್ (Actor Rajinikanth) ‘ಲಾಲ್ ಸಲಾಂ’ (Lal Salaam) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆ ನಂತರ ಜ್ಞಾನವೇಲ್ ನಿರ್ದೇಶನದ ಚಿತ್ರಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟಿದ್ದಾರೆ. ಈ ಎರಡೂ ಸಿನಿಮಾಗಳು ಮುಗಿದ ಬಳಿಕ ಕಾಲಿವುಡ್ ಸೆನ್ಸೇಷನಲ್ ಡೈರೆಕ್ಟರ್ ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ತಲೈವಾ ನಟಿಸುವುದು ಫಿಕ್ಸ್‌ ಆಗಿದೆ. ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಈ ಸುದ್ದಿ ನಿಜ ಅಂತಾದರೆ ರಜನಿಕಾಂತ್‌ ಹಾಗೂ ನಾರ್ಜುನ ಅವರು 32 ವರ್ಷಗಳ ಬಳಿಕ ತೆರೆ ಮೇಲೆ ನೋಡಬಹುದು. ನಾಗಾರ್ಜುನಗೆ ಮಲ್ಟಿಸ್ಟಾರರ್ ಸಿನಿಮಾ ಹೊಸದೇನು ಅಲ್ಲ. ಇತ್ತೀಚೆಗೆ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ಜತೆ ಕಾಣಿಸಿಕೊಂಡಿದ್ದರು. ಈಗ ಧನುಷ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಊಪಿರಿ’ ಸಿನಿಮಾದಲ್ಲೂ ಕಾರ್ತಿ ಜೊತೆ ನಾಗಾರ್ಜುನ ಜತೆ ನಟಿಸಿದ್ದರು. ಹೀಗಾಗಿ ರಜನಿಕಾಂತ್ ಜತೆ ನಟಿಸಬಹುದು ಎಂದು ಹೇಳಲಾಗುತ್ತಿದೆ.

ಟಿ.ಜೆ.ಜ್ಞಾನವೇಲ್ ನಿರ್ದೇಶನದ ಈ ಸಿನಿಮಾದಲ್ಲಿ ಮಲಯಾಳಂ ನಟ ಫಹಾದ್‌ ಫಾಸಿಲ್‌ ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಇಬ್ಬರು ಜತೆಯಾಗಿ ನಟಿಸುತ್ತಿರುವ ಫೋಟೊ ಇಂಟರ್‌ನೆಟ್‌ನಲ್ಲಿ ಹರಿದಾಡಿ ವೈರಲ್‌ ಆಗಿತ್ತು. ವಿಶೇಷ ಎಂದರೆ ಈ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ರಾಣಾ ದಗ್ಗುಬಾಟಿ, ಮಲಯಾಳಂ ನಟಿ ಮಂಜು ವಾಯಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅನಿರುದ್ಧ್‌ ರವಿಚಂದರ್‌ ಸಂಗೀತ ಸಂಯೋಜಿಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಬಾಲಿವುಡ್‌ ಖ್ಯಾತ ನಿರ್ಮಾಪಕರೊಂದಿಗೆ ಕೈ ಜೋಡಿಸಿದ ರಜನಿಕಾಂತ್‌; ತಲೈವಾ ಹೊಸ ಚಿತ್ರ ಯಾವಾಗ?

ಕಥೆ ಏನು?

‘ವೆಟ್ಟೈಯನ್’ ಚಿತ್ರದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ತಿರುವನಂತಪುರಂ, ತಿರುನೆಲ್ವೇಲಿ ಮತ್ತು ಮುಂಬೈ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣ ನಡೆದಿದೆ. ತಮಿಳು ಜತೆಗೆ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಟೀಸರ್‌ ಬಿಡುಗಡೆ

ಇತ್ತೀಚೆಗೆ ‘ವೆಟ್ಟೈಯನ್’ ಚಿತ್ರದ ಟೀಸರ್‌ ಬಿಡುಗಡೆಯಾಗಿತ್ತು. ಲಾಠಿ ಹಿಡಿದು ರಜನಿಕಾಂತ್‌ ಆಗಮಿಸುವ ದೃಶ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಜತೆಗೆ ರಜನಿಕಾಂತ್ ತಮ್ಮದೇ ಶೈಲಿಯಲ್ಲಿ ಕನ್ನಡಕ ಹಾಕಿಕೊಳ್ಳುತ್ತ ಡೈಲಾಗ್‌ ಹೇಳುವ ದೃಶ್ಯ, ಕೈ ಹಿಂಬದಿಯಲ್ಲಿಟ್ಟುಕೊಂಡು ಚಿಟಿಕೆ ಹೊಡೆಯುವ ಸೀನ್‌ ಗಮನ ಸೆಳೆದಿತ್ತು. ‌ʼವೆಟ್ಟೈಯನ್‌ʼ ಎಂದರೆ ಕನ್ನಡದಲ್ಲಿ ಬೇಟೆಗಾರ ಎಂದರ್ಥ. ಈ ಸಿನಿಮಾದಲ್ಲಿ ರಜನಿಕಾಂತ್‌ ಅಪರಾಧಿಗಳ ಬೇಟೆಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆಗಲೇ ಪ್ರೇಕ್ಷಕರು ಊಹಿಸಿದ್ದರು.

Continue Reading

ಬಾಲಿವುಡ್

Riteish Deshmukh: ರಾಮಮಂದಿರಕ್ಕೆ ಭೇಟಿ ಕೊಟ್ಟ ರಿತೇಶ್ ದೇಶಮುಖ್ ದಂಪತಿ!

Riteish Deshmukh: ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Riteish Deshmukh-Genelia visit Ayodhya Ram Mandir
Koo

ಬೆಂಗಳೂರು: ನಟ ರಿತೇಶ್ ದೇಶಮುಖ್ (Riteish Deshmukh) ಏಪ್ರಿಲ್ 20ರಂದು ಪತ್ನಿ ಜೆನಿಲಿಯಾ ದೇಶಮುಖ್ (Genelia Deshmukh) ಮತ್ತು ಮಕ್ಕಳೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು. ದಂಪತಿ ರಾಮಮಂದಿರಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ರಿತೇಶ್ ಮತ್ತು ಜೆನಿಲಿಯಾ (Ayodhya Ram Mandir) ಫೋಟೊ ಶೇರ್‌ ಮಾಡಿಕೊಂಡು ʻʻರಾಮಲಲ್ಲಾ ದರ್ಶನ ಪಡೆದದ್ದಾಯ್ತುʼʼಎಂದು ಬರೆದುಕೊಂಡಿದ್ದಾರೆ.

ಫೋಟೊದಲ್ಲಿ ದಂಪತಿ ರಾಮನನ್ನು ಪ್ರಾರ್ಥಿಸುತ್ತಿರುವುದು ಕಂಡು ಬಂದಿದೆ. ಇದಕ್ಕೂ ಮುಂಚೆ  ಪ್ರಿಯಾಂಕಾ ಚೋಪ್ರಾ (Priyanka Chopra), ಅವರ ಪತಿ-ಗಾಯಕ ನಿಕ್ ಜೋನಾಸ್ ಮತ್ತು ಅವರ ಪುತ್ರಿ ಮಾಲತಿ ಮೇರಿ ಚೋಪ್ರಾ ಜೋನಾಸ್ ಜತೆ ಬುಧವಾರ (ಮಾ.20) ಅಯೋಧ್ಯೆಯ ರಾಮಮಂದಿರಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದರು.

ಜನವರಿ 2024ರಲ್ಲಿ, ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕಾಗಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅಯೋಧ್ಯೆಯಲ್ಲಿದ್ದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಆಲಿಯಾ ಭಟ್ ಆಕಾಶ್ ಅಂಬಾನಿ, ಪತ್ನಿ ಶ್ಲೋಕಾ ಅಂಬಾನಿ ಕಾಣಿಸಿಕೊಂಡಿದ್ದರು. ಕಂಗನಾ ರಣಾವತ್ ಮತ್ತು ಅಮಿತಾಭ್‌ ಬಚ್ಚನ್ ಕೂಡ ಹಾಜರಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ರಜನಿಕಾಂತ್, ಚಿರಂಜೀವಿ, ರಾಮ್ ಚರಣ್ ಕೂಡ ಅಯೋಧ್ಯೆ ರಾಮಮಂದಿರದಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: Priyanka Chopra : ರಾಮಮಂದಿರದಲ್ಲಿ ಪ್ರಿಯಾಂಕಾ ಮಗಳು ಕ್ಯೂಟ್‌ ಆಗಿ ‘ಅಯೋಧ್ಯಾ’ ಎಂದು ಹೇಳಿದ್ದು ಹೀಗೆ!

ರಿತೇಶ್ ದೇಶಮುಖ್ ಪೋಸ್ಟ್‌

ಸಿನಿಮಾ ವಿಚಾರಕ್ಕೆ ಬಂದರೆ, ರಿತೇಶ್ ಅವರು ‘ಮಸ್ತಿ 4’ ಗಾಗಿ ಏಳು ವರ್ಷಗಳ ನಂತರ ವಿವೇಕ್ ಒಬೆರಾಯ್ ಮತ್ತು ಅಫ್ತಾಬ್ ಶಿವದಾಸನಿ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಇಂದ್ರ ಕುಮಾರ್, ಎ. ಜುಂಜುನ್ವಾಲಾ, ಅಶೋಕ್ ಠಾಕೇರಿಯಾ ಮತ್ತು ಎಸ್.ಕೆ. ಅಹ್ಲುವಾಲಿಯಾ ಬಂಡವಾಳ ಹೂಡಿದ್ದಾರೆ.

Continue Reading

ಬಾಲಿವುಡ್

Ranveer Singh: ಕಾಂಗ್ರೆಸ್‌ ಪರ ರಣವೀರ್‌ ಸಿಂಗ್‌ ಪ್ರಚಾರ? ಕೇಸ್‌ ದಾಖಲು

Ranveer Singh: ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

VISTARANEWS.COM


on

Ranveer Singh Files Police Case Deepfake Video Goes
Koo

ಬೆಂಗಳೂರು: : ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಈಗ ರಣವೀರ್​ ಸಿಂಗ್ (Ranveer Singh)​ ಅವರು ವಿಡಿಯೊವನ್ನು ತಿರುಚಲಾಗಿದೆ. ಅದರಲ್ಲಿ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ರೀತಿಯಲ್ಲಿ ಬಿಂಬಿಸಲಾಗಿದೆ. ಹೀಗಾಗಿ ರಣವೀರ್‌ ಸಿಂಗ್‌ ಅವರು ಡೀಪ್‌ಫೇಕ್ ವಿಡಿಯೊ ಮಾಡಿದವರ ವಿರುದ್ಧ ದೂರು ದಾಖಲಿಸಿದ್ದಾರೆ.

ಡೀಪ್‌ಫೇಕ್‌ ವಿಡಿಯೊದಲ್ಲಿ, ರಣವೀರ್ ಸಿಂಗ್ ನಿರುದ್ಯೋಗ ಮತ್ತು ಹಣದುಬ್ಬರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವಂತಿದೆ. ಮಾತ್ರವಲ್ಲ ಕಾಂಗ್ರೆಸ್‌ಗೆ ಮತ ಹಾಕುವಂತೆ ಜನರನ್ನು ಒತ್ತಾಯಿಸುವ ಸಂದೇಶದೊಂದಿಗೆ ವಿಡಿಯೊ ಮುಕ್ತಾಯಗೊಳ್ಳುತ್ತದೆ. ಕೆಲವೇ ದಿನಗಳ ಹಿಂದೆ ರಣವೀರ್​ ಸಿಂಗ್​ ಅವರು ಕಾಶಿಗೆ ತೆರಳಿದ್ದರು. ಆಗ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಒಂದಷ್ಟು ಅಂಶಗಳನ್ನು ಹಂಚಿಕೊಂಡಿದ್ದರು. ಆ ವಿಡಿಯೊಗೆ ಎಐ ವಾಯ್ಸ್​ ಮೂಲಕ ಬೇರೆಯದೇ ಧ್ವನಿಯನ್ನು ನೀಡಲಾಗಿದೆ.

ಇದು ರಣವೀರ್​ ಸಿಂಗ್​ ಅವರ ಗಮನಕ್ಕೆ ಬಂದಿದೆ. ಕೂಡಲೇ ಅವರು ಸೋಶಿಯಲ್​ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ‘ಡೀಪ್​ಫೇಕ್​ ವಿಡಿಯೋ ಬಗ್ಗೆ ಎಚ್ಚರದಿಂದಿರಿ ಗೆಳೆಯರೇ..’ ಎಂದು ಅವರು ಪೋಸ್ಟ್​ ಮಾಡಿದ್ದಾರೆ. ಇದೀಗ ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ರಣವೀರ್ ಸಿಂಗ್ ತಂಡ ಹೇಳಿದೆ. “ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ರಣವೀರ್ ಸಿಂಗ್ ಅವರ ಎಐ-ರಚಿಸಿದ ಡೀಪ್‌ಫೇಕ್ ವೀಡಿಯೊವನ್ನು ಪ್ರಚಾರ ಮಾಡುತ್ತಿದ್ದ ಹ್ಯಾಂಡಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: Ranveer Singh: ಅಂಬಾನಿ ಭಾವಿ ಸೊಸೆಯ ಮಾತಿಗೆ ನಾಚಿ ನೀರಾದ ದೀಪಿಕಾ ಪತಿ!

ಬಾಲಿವುಡ್ ಸೂಪರ್‌ಸ್ಟಾರ್ ಆಮೀರ್ ಖಾನ್ (Aamir Khan) ಅವರು ರಾಜಕೀಯ ಪಕ್ಷವನ್ನು ಬೆಂಬಲಿಸುವ ರೀತಿಯಲ್ಲಿ ವಿಡಿಯೊವೊಂದು ಕೆಲವು (Aamir Khan promoting a political party viral) ದಿನಗಳಿಂದ ವೈರಲ್‌ ಆಗಿತ್ತು. ಇತ್ತೀಚೆಗೆ ನಟನ ವಕ್ತಾರರು ಈ ವಿಡಿಯೊ ವಿರುದ್ಧ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸುವ ಮೂಲಕ ಕ್ರಮ ಕೈಗೊಂಡಿದ್ದರು. ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

Continue Reading
Advertisement
Drought In Karnataka
ಬೆಳಗಾವಿ12 mins ago

Drought In Karnataka : ಭೀಕರ ಬರ; ಆಹಾರ ಸಿಗದೆ ಪ್ಲಾಸ್ಟಿಕ್, ನಟ್ಟು ಬೋಲ್ಟು ತಿನ್ನುತ್ತಿರುವ ಹಸುಗಳು!

Vastu Tips
ಲೈಫ್‌ಸ್ಟೈಲ್17 mins ago

Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

Karun Nair
ಕ್ರೀಡೆ22 mins ago

Karun Nair: ತ್ರಿಶತಕ ಬಾರಿಸಿದರೂ ಭಾರತ ತಂಡದಲ್ಲಿ ಕಡೆಗಣನೆ; ಕೌಂಟಿಯಲ್ಲಿ ದ್ವಿಶತಕ ಬಾರಿಸಿದ ಕರುಣ್ ನಾಯರ್

OM Puri
ಬಾಲಿವುಡ್43 mins ago

OM Puri: ಹೊಟ್ಟೆಪಾಡಿಗಾಗಿ ಚಹಾ ಅಂಗಡಿಯಲ್ಲಿ ಲೋಟ ತೊಳೆಯುತ್ತಿದ್ದರು ಈ ಹೆಸರಾಂತ ನಟ!

malasia helicopter crash viral video
ವೈರಲ್ ನ್ಯೂಸ್50 mins ago

Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

CSK vs LSG
ಕ್ರೀಡೆ1 hour ago

CSK vs LSG: ಇಂದಿನ ಲಕ್ನೋ-ಚೆನ್ನೈ ಪಂದ್ಯಕ್ಕೆ ಮಳೆ ಭೀತಿ

Bengaluru Karaga
ಬೆಂಗಳೂರು2 hours ago

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

Rohit Sharma
ಕ್ರೀಡೆ2 hours ago

Rohit Sharma: ರೋಹಿತ್​ ಕೆನ್ನೆಗೆ ಕಿಸ್​ ಕೊಡಲು ಬಂದ ರಾಜಸ್ಥಾನ್​ ಕೋಚ್​; ವಿಡಿಯೊ ವೈರಲ್

Amit Shah
ಕರ್ನಾಟಕ3 hours ago

Amit Shah: ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ; ಒಂದೇ ಕ್ಷೇತ್ರದಲ್ಲಿ ಕ್ಯಾಂಪೇನ್!‌

bolero hit 3 death road accident raichur
ರಾಯಚೂರು3 hours ago

Road Accident: ನೀರು ತರುತ್ತಿದ್ದ ಹನುಮ ಮಾಲಾಧಾರಿಗಳಿಗೆ ಬೊಲೆರೋ ಡಿಕ್ಕಿ, 3 ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು18 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ19 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು22 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು24 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌