Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ! - Vistara News

ಸಿನಿಮಾ

Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

Vinay Gowda: ಸುದೀಪ್ ಕುಟುಂಬದ ಜತೆ ವಿನಯ್ ಅವರು ಊಟ ಸವಿದಿದ್ದಾರೆ. ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜತೆ ಇರುವ ಫೋಟೊವನ್ನು ವಿನಯ್‌ ಹಂಚಿಕೊಂಡಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು.

VISTARANEWS.COM


on

Vinay Gowda Lunch With Kichcha Sudeep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ಪ್ರಬಲ ಸ್ಪರ್ಧಿ ವಿನಯ್‌ ಗೌಡ (Vinay Gowda). ಕಿಚ್ಚ ಸುದೀಪ್‌ (Kichcha sudeep) ಅವರಿಗೆ ವಿನಯ್‌ ಕಂಡರೆ ಬಹಳ ಅಚ್ಚುಮೆಚ್ಚು. ಈಗ ಸುದೀಪ್ ಕುಟುಂಬದ ಜತೆ ವಿನಯ್ ಅವರು ಊಟ ಸವಿದಿದ್ದಾರೆ. ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಜತೆ ಇರುವ ಫೋಟೊವನ್ನು ವಿನಯ್‌ ಹಂಚಿಕೊಂಡಿದ್ದಾರೆ.

ʻʻವಿನಮ್ರ ಕುಟುಂಬ. ಅದ್ಭುತವಾದ ಊಟ. ಡೆಸರ್ಟ್ ಅತ್ಯುತ್ತಮವಾಗಿತ್ತುʼʼ ಎಂದು ವಿನಯ್‌ ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ ಸಾನ್ವಿ ಅವರು ರಿಪ್ಲೈ ಮಾಡಿದ್ದು, ಹಾರ್ಟ್ ಎಮೋಜಿ ಹಾಕಿದ್ದಾರೆ. ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಸುಮಾರು 2 ವರ್ಷಗಳ ಕಾಲ ಪ್ರಸಾರವಾದ ʼಹರ ಹರ ಮಹಾದೇವʼ ಧಾರಾವಾಹಿಯಲ್ಲಿ ಶಿವನ ಪಾತ್ರದ ಮೂಲಕ ವಿನಯ್‌ ಗೌಡ ಗಮನ ಸೆಳೆದಿದ್ದರು. ಬಳಿಕ ʼಉಘೇ ಉಘೇ ಮಾದೇವ’, ‘ಜೈ ಹನುಮಾನ್’ ʼಯಡಿಯೂರು ಸಿದ್ಧಲಿಂಗೇಶ್ವರ’ ಧಾರಾವಾಹಿಗಳಲ್ಲಿ ಅವರು ಅಭಿನಯಿಸಿದ್ದಾರೆ. ‘‘ಬಿಗ್‌ಬಾಸ್‌ವರೆಗೂ ಒಂದು ಜರ್ನಿ ಬಿಗ್ ಬಾಸ್ ನಂತರವೇ ಇನ್ನೊಂದು ಜರ್ನಿ’’ ಅನ್ನೋದು ಅವರ ಮಾತು. ಬಾಡಿ ಬಿಲ್ಡಿಂಗ್​ ಪ್ರೀತಿಸುವ ವಿನಯ್‌, ಜಿಮ್‌ನಲ್ಲಿ ಮಾತ್ರವೇ ನನ್ನದು ‘ಮೀ ಟೈಮ್’ ಅನ್ನುತ್ತಾರೆ. ಕುಟುಂಬದೊಳಗಿನ ನೋವಿನಿಂದ ಬೇಸತ್ತು ಮನೆಬಿಟ್ಟು ಹೊರಟು ಬದುಕಿಗಾಗಿ ಹೋರಾಡಿ ಈ ಹಂತಕ್ಕೆ ಬಂದಿರುವ ವಿನಯ್‌ ಅವರಿಗೆ ಪತ್ನಿಯೇ ಸರ್ವಸ್ವ ಹದಿನಾಲ್ಕು ವರ್ಷದ ಮುದ್ದು ರಿಷಭ್‌ ಎಂದರೆ ಪಂಚಪ್ರಾಣ.

ಇದನ್ನೂ ಓದಿ: Vinaya Kulkarni : 30 ದಿನ ಧಾರವಾಡದಲ್ಲಿರಲು ಬಿಡಿ, ಕೋರ್ಟ್‌ಗೆ ವಿನಯ ಕುಲಕರ್ಣಿ ಮನವಿ, ನಾಳೆ ತೀರ್ಮಾನ ಸಾಧ್ಯತೆ

ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ವಿನಯ್‌ ಅವರು ಮೂರನೇ ರನ್ನರ್ ಅಪ್ ಆದರು. ವಿನಯ್ ಗೌಡ ಅವರು ಈ ಸೀಸನ್‌ನಲ್ಲಿ ಮೂಡಿಸಿರುವ ಹೆಜ್ಜೆಗುರುತು ಸಣ್ಣದೇನಲ್ಲ. ಅದು ಅಳಿಸಲಾಗದಂಥ ಛಾಪು. ಬಿಗ್‌ಬಾಸ್‌ ಈ ಸೀಸನ್‌ನ ಆರಂಭದಲ್ಲಿದ್ದ ಕೋಪಿಷ್ಠ ‘ವಿಲನ್’ ವಿನಯ್ ಮಾಯವಾಗಿ ಪ್ರಬುದ್ಧ, ಸ್ನೇಹಪರ, ಮೃದುಹೃದಯಿ, ಭಾವುಕ ‘ಹೀರೊ’ ವಿನಯ್‌ ಜನರ ಮನಸಲ್ಲಿ ಸ್ಥಾನ ಪಡೆದುಕೊಂಡಿದ್ದರು. . ಮೂರನೇ ರನ್ನರ್‌ ಅಪ್‌ (4ನೇ ಸ್ಥಾನ ಪಡೆದ) ಆಗಿದ ವಿನಯ್‌ ಗೌಡ ಅವರಿಗೆ 5 ಲಕ್ಷ ರೂಪಾಯಿ ಬಹುಮಾನ ಸಿಕ್ಕಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Kannada New Movie: 1980-90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ.

VISTARANEWS.COM


on

Kannada New Movie Mandela nari shrinivas
Koo

ಬೆಂಗಳೂರು: ʻಮಂಡೇಲಾʼ (Kannada New Movie) ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ. ಪ್ರತಿಭಾವಂತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ನಾರಿ ಶ್ರೀನಿವಾಸ್ ಹಲವು ಹಿಟ್‌ ಸಿನಿಮಾಗಳನ್ನು ನೀಡಿದವರು. ಶ್ರೀಧರ್ ಪೂರ್ವಜಿತ್ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದು. ಆ ಚಿತ್ರದ ಹೆಸರು ಮಂಡೇಲಾ.

ಇದೊಂದು ವಿಭಿನ್ನ ಪ್ರಯೋಗದ ಚಿತ್ರ ಎಂದೂ ಹೇಳಬಹುದು. ಸಿನಿಮಾ ಎಂದಮೇಲೆ ಹಲವಾರು ಪಾತ್ರಗಳಿರಬೇಕಲ್ಲವೆ, ಈ ಚಿತ್ರದಲ್ಲೂ ಒಂದಷ್ಟು ಪಾತ್ರಗಳಿವೆ. ಆದರೆ ಪ್ರಮುಖವಾಗಿ ಮೂರು ಪಾತ್ರಗಳ ಮೂಲಕ ನಿರ್ದೇಶಕರು ಕಥೆಯನ್ನು ಹೇಳಹೊರಟಿದ್ದಾರೆ.

1980-90ರ ದಶಕದಲ್ಲಿನ ಸೂಕ್ಷ್ಮ ಹಾಗೂ ಸುಂದರವಾದ ಭಾವನೆಗಳ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಶ್ರೀಲಕ್ಷ್ಮಿ ನರಸಿಂಹ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಈ ಚಿತ್ರದಲ್ಲಿ ನಾಯಕನಾಗಿ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ನಟಿಸುತ್ತಿದ್ದಾರೆ. ಅಲ್ಲದೆ ಚಿತ್ರದಲ್ಲಿ ಇಬ್ಬರು ನಾಯಕಿಯರು ನಟಿಸುತ್ತಿದ್ದು, ಅವರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನೂ ಓದಿ: Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

ಕನ್ನಡದಲ್ಲಿ ಈಗಾಗಲೇ ʻಬಾ ನಲ್ಲೆ ಮಧುಚಂದ್ರಕೆʼ, ʻಬೆಳದಿಂಗಳ ಬಾಲೆʼಯಂಥ ಚಿತ್ರಗಳು ಬಂದು ಹೋಗಿವೆ. ಆಗಿನಿಂದಲೂ ಹೊಸಥರದ ಕಂಟೆಂಟ್ ಇರುವ ಕಥೆಗಳನ್ನು ನಮ್ಮ ಜನ ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಅದೇರೀತಿ ನಮ್ಮ ಹೊಸ ಈ ಪ್ರಯತ್ನವನ್ನೂ ಪ್ರೇಕ್ಷಕರು ಕೈ ಹಿಡಿಯುತ್ತಾರೆ ಎಂಬ ಭರವಸೆಯನ್ನು ಚಿತ್ರದ ನಾಯಕ ನಾರಿ ಶ್ರೀನಿವಾಸ್ (ಸ್ಮೈಲ್ ಶ್ರೀನು) ಅವರು ವ್ಯಕ್ತಪಡಿಸಿದರು.

ಕನ್ನಡ, ತೆಲುಗು, ತಮಿಳು ಸೇರಿ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜುಲೈ 2 ಅಥವಾ 3ನೇ ವಾರ ಈ ಚಿತ್ರ ಸೆಟ್ಟೇರಲಿದೆ. ಮಂಡೇಲಾದ ಸ್ಕ್ರಿಪ್ಟ್ ಅಂತಿಮ ಹಂತದಲ್ಲಿದೆ.

Continue Reading

ಟಾಲಿವುಡ್

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Ram Charan: ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ.

VISTARANEWS.COM


on

Ram Charan Instagram story of daughter Klin Kaara receiving bujji
Koo

ಬೆಂಗಳೂರು: ಟಾಲಿವುಡ್ ಸೂಪರ್‌ಸ್ಟಾರ್ ರಾಮ್ ಚರಣ್ (Ram Charan) ಮತ್ತು ಪ್ರಭಾಸ್‌ (Prabhas) ನಡುವೆ ಒಳ್ಳೆಯ ಆತ್ಮೀಯತೆ ಇದೆ. ಪ್ರಭಾಸ್ ನಟನೆಯ ‘ಕಲ್ಕಿ 2898 AD’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ‘ಬುಜ್ಜಿ’ ಕಾರ್ ಮೂಲಕ ಸಿನಿಮಾ ಪ್ರಮೋಷನ್ ಆರಂಭಿಸಲಾಗಿದೆ. ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ʻಬುಜ್ಜಿʼ ವಾಹನವನ್ನು ಹೋಲುವ ಚಿಕ್ಕ ಬೇಬಿ ರಾಕರ್ ಅನ್ನು ಚಿತ್ರತಂಡ ರಾಮ್‌ಚರಣ್‌ ಮಗಳು ಕ್ಲಿಂಕಾರಳಿಗೆ ಉಡುಗೊರೆಯಾಗಿ ನೀಡಿದೆ.

ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Jackfruit seeds: ಹಲಸಿನ ಬೀಜ ಎಂದು ಕಡೆಗಣಿಸಬೇಡಿ, ಇದರ ಉಪಯೋಗ ಎಷ್ಟೊಂದು!

ಏನಿದು ಬುಜ್ಜಿ ಕಾರ್‌?

ಬರೋಬ್ಬರಿ 7 ಕೋಟಿ ವೆಚ್ಚದಲ್ಲಿ ಈ ಕಾಲ್ಪನಿಕ ವಾಹನವನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗುತ್ತಿದೆ. ಬುಜ್ಜಿ ವಾಹನವನ್ನು ಹೋಲುವ ಚಿಕ್ಕ ಬೇಬಿ ರಾಕರ್ ಅನ್ನು ಚಿತ್ರತಂಡ ಕ್ಲಿಂಕಾರಳಿಗೆ ಉಡುಗೊರೆಯಾಗಿ ನೀಡಿದೆ. ಇದನ್ನು ಫೋಟೊ ಉಪಾಸನಾ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಬುಜ್ಜಿ ರಾಕರ್ ಜತೆ ಕ್ಲಿಂಕಾರ ಆಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಉಡುಗೊರೆ ಜೊತೆಗೆ ಒಂದು ಪತ್ರವನ್ನು ಕಳುಹಿಸಲಾಗಿದೆ. ಉಪಾಸನಾ ಸಂತಸ ವ್ಯಕ್ತಪಡಿಸಿ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading

ಸ್ಯಾಂಡಲ್ ವುಡ್

Rishab Shetty: ರಿಷಬ್ ನಿರ್ಮಾಣದ ‘ಶಿವಮ್ಮ’ ಟ್ರೈಲರ್‌ ಔಟ್‌; ಜೂನ್‌ 14ಕ್ಕೆ ತೆರೆಗೆ

Rishab Shetty: ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್‌ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿತ್ತು. ಈ ಚಿತ್ರವನ್ನು ಜೈ ಶಂಕರ್‌ ಆರ್ಯರ್‌ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಈ ಹಿಂದೆ ಅಷ್ಟೇ ಈ ಸಿನಿಮಾಗೆ 27ನೇ ಬೂಸಾನ್‌ ಅಂತಾರಾಷ್ಟ್ರೀಯ ಪ್ರಶಸ್ತಿ (Busan International Film Festival) ಲಭಿಸಿತ್ತು.

VISTARANEWS.COM


on

Rishab Shetty Shivamma Yarehanchinala Official Trailer out
Koo

ಬೆಂಗಳೂರು:  ರಿಷಬ್ ಶೆಟ್ಟಿ (Rishab Shetty) ನಿರ್ಮಾಣ ಮಾಡಿ, ಪ್ರಸ್ತುತಪಡಿಸಿದ ‘ಶಿವಮ್ಮ’ ಸಿನಿಮಾ (Shivamma Movie) ವಿಶ್ವಾದ್ಯಂತ ವಿವಿಧ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ‘ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022’ರಲ್ಲಿ ನ್ಯೂ ಕರೆಂಟ್ಸ್ ಪುರಸ್ಕಾರ ಪಡೆದಿತ್ತು. ‘ಥ್ರೀ ಕಾಂಟಿನೆಂಟ್ಸ್ ಫೆಸ್ಟಿವಲ್ 2022’ದಲ್ಲಿ ಯುವ ಜ್ಯೂರಿ ಪ್ರಶಸ್ತಿ, ‘ಫಾಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ’ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಜಯಶಂಖರ್ ಆರ್ಯರ್ ನಿರ್ದೇಶನದ ‘ಶಿವಮ್ಮ’ ಸಿನಿಮಾ ಜೂನ್ 14ಕ್ಕೆ ತೆರೆಗೆ ಬರ್ತಿದೆ. ಸದ್ಯ ಟ್ರೈಲರ್ ಬಿಡುಗಡೆ ಆಗಿದೆ. ಯರೆಹಂಚಿನಾಳ ಎನ್ನುವ ಊರಿನಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ.

ಯರೆಹಂಚಿನಾಳದ ಸರ್ಕಾರಿ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದ ಶಿವಮ್ಮ ಕುಟುಂಬ ಪೋಷಣೆಗಾಗಿ ಊರೆಲ್ಲಾ ಸಾಲ ಮಾಡುತ್ತಾಳೆ. ಶಿವಮ್ಮ, ಕೊನೆಗೆ ಶಾಲಾ ಶಿಕ್ಷಕರ ಬಳಿಯೂ ಸಾಲ ಮಾಡಿ ಸಮಸ್ಯೆ ಎದುರಿಸುತ್ತಾಳೆ. ಬಳಿಕ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರ ಮಾಡಲು ಹೋಗಿ ಸಮಸ್ಯೆ ಎದುರಿಸುತ್ತಾಳೆ ಎನ್ನುವ ಕಥೆಯನ್ನು ಎಳೆ ಎಳೆಯಾಗಿ ಹೇಳಲಾಗಿದೆ.

ಅನೇಕ ಸಿನಿಮೋತ್ಸವಗಳಲ್ಲಿ ಪ್ರದರ್ಶನ

ಅನೇಕ ಸಿನಿಮೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನ ಕಂಡಿದೆ. ಚೀನಾದಲ್ಲಿ ನಡೆದ ‘ಹೈನಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಇರಾನ್​ನಲ್ಲಿ ನಡೆದ ‘ಫಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಸ್ವೀಡನ್​ನ ‘ಗೋಥೆಂಬರ್ಗ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಮ್ಯುನಿಚ್​​ನ ‘ಮುಂಚಿಯನ್ ಸಿನಿಮೋತ್ಸವ, ರಷ್ಯಾದ ‘ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ’, ಸ್ಪೇನ್​ನ ‘ಇಮ್ಯಾಜಿನ್ ಇಂಡಿಯಾ’, ಕೆನಡಾದ ‘ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ’, ಮೆಲ್ಬೋರ್ನ್​ನ ‘ಇಂಡಿಯನ್ ಪಿಲ್ಮ್ ಫೆಸ್ಟಿವಲ್’, ಸ್ವಿಟ್ಜರ್​​ಲ್ಯಾಂಡ್​ನ ‘ಬ್ಲಾಕ್​ ಮೂವಿ ಫಿಲ್ಮ್​ ಫೆಸ್ಟಿವಲ್’ ಮೊದಲಾದ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್‌ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿತ್ತು. ಈ ಚಿತ್ರವನ್ನು ಜೈ ಶಂಕರ್‌ ಆರ್ಯರ್‌ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಈ ಹಿಂದೆ ಅಷ್ಟೇ ಈ ಸಿನಿಮಾಗೆ 27ನೇ ಬೂಸಾನ್‌ ಅಂತಾರಾಷ್ಟ್ರೀಯ ಪ್ರಶಸ್ತಿ (Busan International Film Festival) ಲಭಿಸಿತ್ತು. ಏಷ್ಯಾದ ಅತಿದೊಡ್ಡ ಫಿಲ್ಮ್ಸ್ ಉತ್ಸವದಲ್ಲಿ ಒಟ್ಟು 10 ಚಲನಚಿತ್ರಗಳು ಉನ್ನತ-ಪ್ರೊಫೈಲ್ ನ್ಯೂ ಕರೆಂಟ್ಸ್ ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು.

ಸಿನಿಮಾದ ಕಥೆ ಏನು?

ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ 46 ವರ್ಷದ ಶಿವಮ್ಮ ಎನ್ನುವ ಮಹಿಳೆ ತನ್ನ ಪಾರ್ಶ್ವವಾಯು ಪೀಡಿತ ಪತಿಯನ್ನು ಸಾಕಿಕೊಂಡು, ತನ್ನ ಮಕ್ಕಳ ಭವಿಷ್ಯಕ್ಕಾಗಿ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರವನ್ನು ಭರವಸೆಯಿಂದ ಪಾಲಿಸುವ ಹೋರಾಟದ ಕಥೆಯನ್ನು ಸಿನಿಮಾ ಮಾಡಿದ್ದಾರೆ ನಿರ್ದೇಶಕರು. ಆದಷ್ಟು ನೈಜವಾಗಿಯೇ ಇಡೀ ಸಿನಿಮಾವನ್ನು ಕಟ್ಟಿರುವುದು ಮತ್ತೊಂದು ವಿಶೇಷ.

ಚೆನ್ನಮ್ಮ ಅಬ್ಬೆಗೆರೆ, ಶಿವು ಅಬ್ಬೆಗೆರೆ, ಶ್ರುತಿ ಕೊಂಡೇನಹಳ್ಳಿ, ಚೆನ್ನಪ್ಪ ಹನ್ಸಿ, ಶಿವಾನಂದ್ ಸಾದರ್ ಚಿತ್ರದ ತಾರಾಗಣದಲ್ಲಿದ್ದಾರೆ. ವಿಕಾಸ್ ಯುಆರ್ಎಸ್ ಹಾಗೂ ಸೌಮ್ಯಾನಂದ ಸಾಹಿ ಛಾಯಾಗ್ರಹಣ ‘ಶಿವಮ್ಮ’ ಚಿತ್ರಕ್ಕಿದೆ. ಜೂನ್ 14ಕ್ಕೆ ‘ಕೋಟಿ’, ‘ಶೆಫ್ ಚಿದಂಬರ’ ಹಾಗೂ ‘ಲವ್‌ಲಿ’ ಸಿನಿಮಾಗಳ ಜೊತೆಗೆ ‘ಶಿವಮ್ಮ’ ಕಥೆ ತೆರೆಮೇಲೆ ಅನಾವರಣವಾಗಲಿದೆ.

Continue Reading

ಬಾಲಿವುಡ್

Anant-Radhika Bash: ಪ್ರಿ ವೆಡ್ಡಿಂಗ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌; ಸಂಗೀತ ಪ್ರದರ್ಶನಕ್ಕೆ ಮನಸೋತ ಅತಿಥಿಗಳು!

Anant-Radhika Bash: ವರದಿಯ ಪ್ರಕಾರ ಕೊನೆಯ ದಿನ ಅತಿಥಿಗಳ ಪಟ್ಟಿಯಲ್ಲಿ ಜೆಫ್ ಬೆಜೋಸ್, ಬಿಲ್ ಗೇಟ್ಸ್ ಮತ್ತು ಇತರ ಉನ್ನತ ವ್ಯಾಪಾರ ಉದ್ಯಮಿಗಳು ಮತ್ತು ಹಾಲಿವುಡ್ ಖ್ಯಾತನಾಮರು ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಕಾರ್ಯಕ್ರಮದಲ್ಲಿ ಒಟ್ಟು 1200 ಅತಿಥಿಗಳು ಭಾಗವಹಿಸಿದ್ದರು ಎಂದು ವರದಿಯಾಗಿದೆ. ಪಾರ್ಟಿಯಲ್ಲಿ ರಾಧಿಕಾ, ಅನಂತ್, ನೀತಾ ಅಂಬಾನಿ, ಮುಖೇಶ್ ಅಂಬಾನಿ ಮತ್ತು ಕುಟುಂಬದ ವಿಶೇಷ ಫೋಟೊಗಳು ವೈರಲ್‌ ಆಗಿವೆ. ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಅಬ್ರಾಮ್ ಖಾನ್ ಅವರು ಅಂಬಾನಿ ಪಾರ್ಟಿಯಲ್ಲಿ ಎಂಜಾಯ್‌ ಮಾಡಿದ್ದರು.

VISTARANEWS.COM


on

Anant-Radhika Bash legendary singer Andrea Bocelli performs
Koo

ಬೆಂಗಳೂರು: ಇಟಲಿಯ ಪೋರ್ಟೊಫಿನೊದಲ್ಲಿ (Portofino) ರಾಧಿಕಾ ಮರ್ಚಂಟ್‌ ಮತ್ತು ಅನಂತ್ ಅಂಬಾನಿಯವರ ವಿವಾಹ ಪೂರ್ವದ ಅದ್ಧೂರಿ ಸಮಾರಂಭ ತಾರಾ ಬಳಗದಿಂದ ಕೂಡಿದ್ದವು. ಖ್ಯಾತ ಇಟಾಲಿಯನ್ ಟೆನರ್ ಆಂಡ್ರಿಯಾ ಬೊಸೆಲ್ಲಿ (Andrea Bocelli) ಸಂಗೀತ ಪ್ರದರ್ಶನ ನೀಡಿದ್ದರು. ವೇದಿಕೆಯಲ್ಲಿ `ಫಾಲಿಂಗ್ ಇನ್ ಲವ್ ವಿತ್ ಯು’ ಹಾಡನ್ನು ಹಾಡಿರುವ ವೀಡಿಯೊಗಳು ಇದೀಗ ವೈರಲ್‌ ಆಗುತ್ತಿವೆ.

ಆಂಡ್ರಿಯಾ ಬೊಸೆಲ್ಲಿ ಅವರ (Andrea Bocelli) ಕ್ಲಿಪ್ ಅನ್ನು ಹಂಚಿಕೊಂಡ ಪೂಕಿ ಬೂ ಹೀಗೆ ಬರೆದಿದ್ದಾರೆ, “ಇದಕ್ಕಿಂತ ಕನಸು ಕಾಣಲು ಸಾಧ್ಯವಿಲ್ಲ!! ಆಂಡ್ರಿಯಾ ಬೊಸೆಲ್ಲಿ ಇಟಲಿಯಲ್ಲಿ ಅನಂತ್ ಮತ್ತು ರಾಧಿಕಾ ಜೋಡಿಗಾಗಿ ಎಲ್ವಿಸ್ ಪ್ರೀಸ್ಲಿಯವರ ಸಾಂಪ್ರದಾಯಿಕ ಹಾಡು – ಫಾಲಿಂಗ್ ಇನ್ ಲವ್ ವಿಥ್ ಯು ಹಾಡಿದ್ದಾರೆʼʼ ಎಂದು ಬರೆದುಕೊಂಡಿದ್ದಾರೆ.

ವರದಿಯ ಪ್ರಕಾರ ಕೊನೆಯ ದಿನ ಅತಿಥಿಗಳ ಪಟ್ಟಿಯಲ್ಲಿ ಜೆಫ್ ಬೆಜೋಸ್, ಬಿಲ್ ಗೇಟ್ಸ್ ಮತ್ತು ಇತರ ಉನ್ನತ ವ್ಯಾಪಾರ ಉದ್ಯಮಿಗಳು ಮತ್ತು ಹಾಲಿವುಡ್ ಖ್ಯಾತನಾಮರು ಭಾಗಿಯಾಗಿದ್ದರು ಎಂದು ವರದಿಯಾಗಿದೆ. ಕಾರ್ಯಕ್ರಮದಲ್ಲಿ ಒಟ್ಟು 1200 ಅತಿಥಿಗಳು ಭಾಗವಹಿಸಿದ್ದರು. ಪಾರ್ಟಿಯಲ್ಲಿ ರಾಧಿಕಾ, ಅನಂತ್, ನೀತಾ ಅಂಬಾನಿ, ಮುಖೇಶ್ ಅಂಬಾನಿ ಮತ್ತು ಕುಟುಂಬದ ವಿಶೇಷ ಫೋಟೊಗಳು ವೈರಲ್‌ ಆಗಿವೆ. ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಅಬ್ರಾಮ್ ಖಾನ್ ಅವರು ಅಂಬಾನಿ ಪಾರ್ಟಿಯಲ್ಲಿ ಎಂಜಾಯ್‌ ಮಾಡಿದ್ದರು.

ಇದನ್ನೂ ಓದಿ: Vasishta Simha: ಟ್ರೈಲರ್‌ ಲಾಂಚ್ ವೇಳೆ ರಿಷಬ್ ಶೆಟ್ಟಿ ಕಾಲಿಗೆ ಬಿದ್ದ ವಸಿಷ್ಠ ಸಿಂಹ!

ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ.

ಜುಲೈ 12ರಿಂದ ಮೂರು ದಿನಗಳ ಕಾಲ ವಿವಾಹ ಮಹೋತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13ರಂದು ಶುಭ ಆಶೀರ್ವಾದ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಉಡುಪನ್ನು ಧರಿಸುವ ನಿರೀಕ್ಷೆಯಿದೆ..

Continue Reading
Advertisement
Hornbill bird sighting in Gangavathi
ಕರ್ನಾಟಕ5 seconds ago

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Samsung Big TV Days Sale Exciting offer on big TVs
ದೇಶ3 mins ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Davangere Lok Sabha Constituency
ದಾವಣಗೆರೆ5 mins ago

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Rahul Dravid
ಕ್ರಿಕೆಟ್7 mins ago

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Kannada New Movie Mandela nari shrinivas
ಸ್ಯಾಂಡಲ್ ವುಡ್7 mins ago

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Election Result 2024
ಪ್ರಮುಖ ಸುದ್ದಿ13 mins ago

Election Result 2024: ಇಂಡಿ ಒಕ್ಕೂಟ ಸಭೆ ಸೇರಿದ್ದ ಸ್ಥಳದಲ್ಲೇ ವಾಸ್ತುದೋಷ, ಅಂದು ಅಮವಾಸ್ಯೆ ಬೇರೆ; ಹಾಗಾಗಿ…

Fact Check
Fact Check24 mins ago

Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

Benefits Of Walk After Meal
ಆರೋಗ್ಯ28 mins ago

Benefits Of Walk After Meal: ಊಟದ ಬಳಿಕ ಲಘುವಾದ ವಾಕಿಂಗ್‌ ಮಾಡಿ, ಆರೋಗ್ಯದಲ್ಲಿನ ಬದಲಾವಣೆ ನೋಡಿ!

Dead Body Found Bodies found floating in Cauvery river
ಕ್ರೈಂ33 mins ago

Dead Body Found : ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

Ram Charan Instagram story of daughter Klin Kaara receiving bujji
ಟಾಲಿವುಡ್34 mins ago

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌