Vinay Rajkumar | ಸಿಂಪಲ್ ಸುನಿ ಚಿತ್ರಕ್ಕೆ ದೊಡ್ಮನೆ ಹುಡುಗ ವಿನಯ್ ರಾಜ್‌ಕುಮಾರ್‌ ನಾಯಕ! - Vistara News

ಸಿನಿಮಾ

Vinay Rajkumar | ಸಿಂಪಲ್ ಸುನಿ ಚಿತ್ರಕ್ಕೆ ದೊಡ್ಮನೆ ಹುಡುಗ ವಿನಯ್ ರಾಜ್‌ಕುಮಾರ್‌ ನಾಯಕ!

ನಿರ್ದೇಶಕ ಸಿಂಪಲ್ ಸುನಿ ಚಿತ್ರಕ್ಕೆ ದೊಡ್ಮನೆ ಹುಡುಗ ವಿನಯ್ ರಾಜ್‌ಕುಮಾರ್‌ (Vinay Rajkumar ) ನಾಯಕರಾಗಿ ನಟಿಸುತ್ತಿದ್ದಾರೆ.

VISTARANEWS.COM


on

Vinay Rajkumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದರೆ ಈ ಚಿತ್ರದಲ್ಲಿ ದೊಡ್ಮನೆ ಹುಡುಗ ವಿನಯ್ ರಾಜ್‌ಕುಮಾರ್‌ (Vinay Rajkumar ) ನಾಯಕರಾಗಿ ನಟಿಸುತ್ತಿದ್ದಾರೆ.

ಸಿಂಪಲ್ ಸುನಿ ತಮ್ಮ ಮುಂದಿನ ಚಿತ್ರ ರೊಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದೆ ಎಂದು ಹೇಳಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ | Vinay Rajkumar | ವಿಭಿನ್ನ ಲುಕ್‌ನೊಂದಿಗೆ ಕಾಣಿಸಿಕೊಂಡ ವಿನಯ್ ರಾಜ್ ಕುಮಾರ್

ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡುವುದಕ್ಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.

ಈ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಹಣವಿರಲಿದೆ.

ಇದನ್ನೂ ಓದಿ | Amrit Mahotsav | ಡಾ.ರಾಜ್ ಕುಟುಂಬಕ್ಕೆ ರಾಷ್ಟ್ರಧ್ವಜ ನೀಡಿದ ಸಚಿವ ಅಶ್ವತ್ಥನಾರಾಯಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Vijay Deverakonda: ಮೃಣಾಲ್ – ವಿಜಯ್ ದೇವರಕೊಂಡ ಅಭಿನಯದ ʻಫ್ಯಾಮಿಲಿ ಸ್ಟಾರ್ʼ ಒಟಿಟಿ ರಿಲೀಸ್‌ ಡೇಟ್‌ ಫಿಕ್ಸ್‌!

Vijay Deverakonda: ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

VISTARANEWS.COM


on

Vijay Deverakonda Mrunal Thakur The Family Star to release on OTT
Koo

ಬೆಂಗಳೂರು: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಲಿದೆ. ತೆಲುಗು ಆವೃತ್ತಿಯ ಈ ಸಿನಿಮಾ ತಮಿಳು, ಮಲಯಾಳಂ ಮತ್ತು ಕನ್ನಡ ಡಬ್ಬಿಂಗ್ ಆವೃತ್ತಿಗಳೊಂದಿಗೆ ಲಭ್ಯವಿರಲಿದೆ.

ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಒಬ್ಬರು ʻʻಸಿನಿಮಾ ಫಸ್ಟ್‌ ಹಾಪ್‌ ಹಾಗೂ ಕಾಮಿಡಿ ಚೆನ್ನಾಗಿದೆʼʼಎಂದು ಬರೆದುಕೊಂಡಿದ್ದರು. ʻವಿಜಯ್ ಮತ್ತು ಮೃಣಾಲ್ ಅಭಿನಯ ಸೂಪರ್‌ʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದರು. ʻʻನನ್ನ ರೇಟಿಂಗ್ – 3.5/5. ಕೌಟುಂಬಿಕ ಮನರಂಜನೆ ಸಿನಿಮಾ ಇದುʼʼಮತ್ತೊಬ್ಬರು ಬರೆದುಕೊಂಡಿದ್ದರು.

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಇದನ್ನೂ ಓದಿ: Vijay Deverakonda: ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ ವಿಜಯ್ ದೇವರಕೊಂಡ!

ʻಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

ʻಫ್ಯಾಮಿಲಿ ಸ್ಟಾರ್ʼ ಚಿತ್ರಕ್ಕೆ ಗೋಪಿಸುಂದರ್ ಸಂಗೀತ ನೀಡಿದ್ದು, ಇದುವರೆಗೆ ಬಿಡುಗಡೆಯಾಗಿರುವ ಮೂರು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

Continue Reading

ಸ್ಯಾಂಡಲ್ ವುಡ್

Dhanya Ramkumar: ಕಿಶನ್ ಬಿಳಗಲಿ ಜತೆ ಡಾ. ರಾಜ್​ಕುಮಾರ್ ಮೊಮ್ಮಗಳ ಡ್ಯೂಯೆಟ್‌!

Dhanya Ramkumar: ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು.ಇದೀಗ ಧನ್ಯಾ ರಾಮ್‌ಕುಮಾರ್ ತಾತನಿಗೆ ವಿಭಿನ್ನವಾಗಿ ವಿಶ್‌ ಮಾಡಿ ಟ್ರಿಬ್ಯೂಟ್ ನೀಡಿದ್ದಾರೆ.

VISTARANEWS.COM


on

Dhanya Ramkumar reels with Kishen Bilagali
Koo

ಬೆಂಗಳೂರು: ಡಾ. ರಾಜ್​ಕುಮಾರ್ ಅವರ ಜನ್ಮದಿನ (Rajkumar Birth Anniversary) ಹಿನ್ನೆಲೆಯಲ್ಲಿ ಅದೆಷ್ಟೋ ಅಭಿಮಾನಿಗಳು ಅಣ್ಣಾವ್ರ ಸಿನಿಮಾ ಹಾಡಿಗೆ ರೀಲ್ಸ್‌ ಮಾಡಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಧನ್ಯಾ ರಾಮ್‌ಕುಮಾರ್ ತಾತನಿಗೆ ವಿಭಿನ್ನವಾಗಿ ವಿಶ್‌ ಮಾಡಿ ಟ್ರಿಬ್ಯೂಟ್ ನೀಡಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ಕಿಶನ್ ಬಿಳಗಲಿ (Kishen Bilagali) ಜತೆ ‘ರಾಜ ನನ್ನ ರಾಜ’ ಚಿತ್ರದ ಸೂಪರ್ ಹಿಟ್ ಗೀತೆಗೆ ಹೆಜ್ಜೆ ಹಾಕಿದ್ದಾರೆ.

ಇತ್ತೀಚಿಗೆ ನಟಿಯರ ಜತೆ ಕಿಶನ್ ಬಿಳಗಲಿ ಡ್ಯಾನ್ಸ್ ವಿಡಿಯೋಗಳು ಬಹಳ ಸದ್ದು ಮಾಡುತ್ತಿವೆ. ಆ ಲಿಸ್ಟ್‌ಗೆ ಇದು ಸೇರಿಕೊಂಡಿದೆ. ಚಿಕ್ಕಮಗಳೂರಿನ ಕಿಶನ್ ‘ಡ್ಯಾನ್ಸ್ ದಿವಾನೆ’ ಹಿಂದಿ ರಿಯಾಲಿಟಿ ಶೋ ವಿನ್ನರ್ ಸಹ ಆಗಿದ್ದರು. ಇದೀಗ ನಟಿ ಧನ್ಯಾ ರಾಮ್‌ಕುಮಾರ್ ಜತೆ ‘ರಾಜ ನನ್ನ ರಾಜ’ ಚಿತ್ರದ ಸೂಪರ್ ಹಿಟ್ ಗೀತೆ ʻನಿನದೇ ನೆನಪು ದಿನವೂ ಮನದಲ್ಲಿʼ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ರೆಟ್ರೋ ಲುಕ್‌ನಲ್ಲಿ ಇಬ್ಬರೂ ಮಿಂಚಿದ್ದಾರೆ. ಧನ್ಯಾ ಸೀರೆಯಲ್ಲಿ ಕಂಗೊಳಿಸಿದರೆ ಕಿಶನ್ ಬೆಲ್‌ಬಾಟಂ ಪ್ಯಾಂಟ್, ಪೋಲ್ಕಾ ಡಾಟ್ ಶರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್‌ಕುಮಾರ್ ಹಾಗೂ ಆರತಿ ನಟನೆಯ ‘ರಾಜ ನನ್ನ ರಾಜ’ ಸಿನಿಮಾ 1976ರಲ್ಲಿ ತೆರೆಕಂಡಿತ್ತು.

ಇದನ್ನೂ ಓದಿ: Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು.

ʻನಿನ್ನ ಸನಿಹಕೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು ಧನ್ಯಾ. ನಿನ್ನ ಸನಿಹಕೆ ಬಳಿಕ ಧನ್ಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಹೈಡ್ & ಸೀಕ್’ ಸಿನಿಮಾಗೆ ಅನೂಪ್ ರೇವಣ್ಣ ಜತೆಗೆ ಧನ್ಯಾ ರಾಮ್‌ಕುಮಾರ್ ನಟಿಸಿದ್ದಾರೆ. ಸಿನಿಮಾ ಆಸಕ್ತಿ ಬಗ್ಗೆ ನಟಿ ಮಾಧ್ಯಮವೊಂದರಲ್ಲಿ ಮಾತನಾಡಿ ʻʻನಮ್ಮ ಕುಟುಂಬದಲ್ಲಿ ನಟಿಯಾಗುತ್ತಿರುವ ಮೊದಲ ಹುಡುಗಿ ನಾನು. ಈ ಹಿಂದೆ ಪಿಆರ್‌ ಆಗಿ ಕೆಲಸ ಮಾಡಿದೆ. ಆಗ ಇದು ನನ್ನ ಫೀಲ್ಡ್‌ ಅಲ್ಲ ಎನ್ನಿಸಿತು. ನಾನು ನಟಿಯಾಗ್ತೀನಿ ಅಂದಾಗ ನನ್ನ ಅಪ್ಪ, ಅಮ್ಮ ಇದರ ಬಗ್ಗೆ ಆಸಕ್ತಿ ತೋರಲಿಲ್ಲ. ಈಗ ಅವರಿಗೂ ಇಷ್ಟವಾಗಿದೆ. ನನಗೆ ನನ್ನ ಆಯ್ಕೆ ತಡವಾಯ್ತು ಎನ್ನಿಸುತ್ತಿಲ್ಲ. ಈ ಚಿತ್ರದ ಕಥೆ, ಪಾತ್ರ ನನಗೆ ಇಷ್ಟವಾದ ಕಾರಣ ಒಪ್ಪಿದೆ’ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

Rajkumar Birth Anniversary: ತರ್ಲೆ ನನ್ಮಗ’ ಸಿನಿಮಾ ಮೂಲಕ ಜಗ್ಗೇಶ್‌ ಖ್ಯಾತಿ ಗಳಿಸಿದ್ದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು ಎಂದು ಹೇಳಿಕೊಂಡರು.ಈಗಾಗಲೇ ದೊಡ್ಮನೆ ಕುಟುಂಬ ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.ಬೆಂಗಳೂರಿನ ಪ್ರತಿ ಗಲ್ಲಿ ಗಲ್ಲಿಗಳಲ್ಲಿರುವ ಡಾ. ರಾಜ್‌ ಪ್ರತಿಮೆಗಳಿಗೂ ಇಂದು ವಿಶೇಷ ಅಲಂಕಾರ ಆಗುತ್ತಿದೆ. ಜತೆಗೆ ಅನ್ನ ಸಂತರ್ಪಣೆಯಂಥ ಕಾರ್ಯಕ್ರಮಗಳು ನಡೆಯಲಿವೆ.

VISTARANEWS.COM


on

Rajkumar Birth Anniversary ​​Jaggesh said that Rajkumar blessed him when he was admitted due to suicide attempt
Koo

ಬೆಂಗಳೂರು: ಡಾ. ರಾಜ್​ಕುಮಾರ್ ಅವರ ಜನ್ಮದಿನ (Rajkumar Birth Anniversary) ಹಿನ್ನೆಲೆಯಲ್ಲಿ ನವರಸ ನಾಯಕ ಜಗ್ಗೇಶ್ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ಡಾ. ರಾಜ್​ಕುಮಾರ್ (Dr Rajkumar) ಹಾಗೂ ಜಗ್ಗೇಶ್ ಕುಟುಂಬದ ನಡುವೆ ಒಳ್ಳೆಯ ಬಾಂಧವ್ಯ ಇದೆ. ಅದೇ ರೀತಿ ಪುನೀತ್‌ ಜತೆಗೂ ಇದೆ. ಈ ಸಂದರ್ಭದಲ್ಲಿ ಜಗ್ಗೇಶ್‌ ಅವರು ಹಳೆಯ ಘಟನೆಯೊಂದನ್ನು ನೆನಪಿಸಿಕೊಂಡರು.

‘ತರ್ಲೆ ನನ್ಮಗ’ ಸಿನಿಮಾ ಮೂಲಕ ಜಗ್ಗೇಶ್‌ ಖ್ಯಾತಿ ಗಳಿಸಿದ್ದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು ಎಂದು ಹೇಳಿಕೊಂಡರು.

ಜಗ್ಗೇಶ್‌ ಮಾತನಾಡಿ ʻʻನಮ್ಮ ತಂದೆ ಹಾಗೂ ರಾಜ್ ಕುಮಾರ್ ಅವರ ಮೂಗು ಸೇಮ್ ಇದೆ. ನನಗೆ ರಾಜಣ್ಣ ಅಂದ್ರೆ ಪಂಚ ಪ್ರಾಣ. ನಾನು ಅವರಲ್ಲಿ ಕಂಡಿದ್ದು ಏನಂದ್ರೆ ತಂದೆಯ ವಾತ್ಸಲ್ಯ. ನಾನು ಹೊಸದಾಗಿ ಮನೆ ಕಟ್ಟಿದೀನಿ ಬರ್ಬೇಕು ಅಂದಾಗ, ಸುಮಾರು 11 ಗಂಟೆಗೆ ಬಂದು ಆಶೀರ್ವದಿಸಿದ್ರು. ಮಧ್ಯಾಹ್ನ 3 ಗಂಟೆವರೆಗೂ ಕೂತು ಮಾತನಾಡಿದ್ರು. ಅನೇಕ ನೆನಪುಗಳು, ಒಡನಾಟ ಇವೆʼ ಎಂದರು.

ಇದನ್ನೂ ಓದಿ: Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

ʻʻ94ನೇ ಇಸವಿಯಲ್ಲಿ ನನ್ನ ಸಿನಿಮಾಗಳು ಫ್ಲಾಪ್ ಆದ ಸಮಯದಲ್ಲಿ ನಾನು ಆತ್ಮಹತ್ಯೆ ಪ್ರಯತ್ನ ಮಾಡಿದ್ದೆ. ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ರು. ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೇದು ಆಗ್ಲಿ ಎಂದು ಆಶೀರ್ವಾದ ಮಾಡಿದ್ದರು. ಯಾವುದೇ ಕಾರಣಕ್ಕೂ ಅತಿಯಾದ ಆಸೆ ಬೇಡ. ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗ್ಬಾರ್ದು ಎಂದು ನನಗೆ ದೊಡ್ಡ ಮಾನಸಿಕ ಧೈರ್ಯ ಕೊಟ್ಟಿದ್ದು ರಾಜ್ ಕುಮಾರ್. ಅಣ್ಣಾವ್ರ ಆಶೀರ್ವಾದದಿಂದ ನನ್ನ ಸಿನಿಮಾಗಳು ಹಿಟ್ ಆದವು. ರಾಜ್ ಕುಮಾರ್ ಅವರ ಕಡೆಯ ಜರ್ನಿಯಲ್ಲಿ ನಾನಿದ್ದೆ. ಅವರ ಮೃತದೇಹದ ಜತೆಗೆ ನಾನು ಇಡೀ ದಿನ ಇದ್ದೆʼʼ ಎಂದರು.

ಇದನ್ನೂ ಓದಿ: PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

ಈಗಾಗಲೇ ದೊಡ್ಮನೆ ಕುಟುಂಬ ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಬದುಕಿದ್ದಾಗ ನೇತ್ರದಾನದ ಮೂಲಕ ಜಾಗೃತಿ ಮೂಡಿಸಿದ್ದ ರಾಜ್‌ಕುಮಾರ್‌, ತಮ್ಮ ನಿಧನದ ಬಳಿಕ ಕಣ್ಣುಗಳನ್ನು ದಾನ ಮಾಡಿದ್ದರು. ಈಗ ಪ್ರತಿ ವರ್ಷದಂತೆ, ಸಮಾಧಿ ಬಳಿ ನೇತ್ರದಾನ ನೋಂದಣಿ, ರಕ್ತದಾನ, ಅನ್ನದಾನದ ಕಾರ್ಯಗಳು ನಡೆಯಲಿವೆ. ಪುಣ್ಯಭೂಮಿಗೆ ಬರುವ ಅಭಿಮಾನಿಗಳಿಗೆ ಅಭಿಮಾನಿಗಳಿಂದಲೇ ಅನ್ನದಾನ ನೆರವೇರಲಿದೆ. ಅಷ್ಟೇ ಅಲ್ಲ ಬೆಂಗಳೂರಿನ ಪ್ರತಿ ಗಲ್ಲಿ ಗಲ್ಲಿಗಳಲ್ಲಿರುವ ಡಾ. ರಾಜ್‌ ಪ್ರತಿಮೆಗಳಿಗೂ ಇಂದು ವಿಶೇಷ ಅಲಂಕಾರ ಆಗುತ್ತಿದೆ. ಜತೆಗೆ ಅನ್ನ ಸಂತರ್ಪಣೆಯಂಥ ಕಾರ್ಯಕ್ರಮಗಳು ನಡೆಯಲಿವೆ.

Continue Reading

ಸಿನಿಮಾ

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Harshika Poonacha: ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

VISTARANEWS.COM


on

Harshika Poonacha bhuvan ponnanna met pralhad joshi
Koo

ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಏ.24) ಹುಬ್ಬಳ್ಳಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದೊರಕಿಸಿ ಕೊಡುವಂತೆ ಸಚಿವರೆದುರು ಮೊರೆ ಇಟ್ಟರು. ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.

ʻʻನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ಗಲಾಟೆ ಮಾಡಿದವರ ಮುಖಚರ್ಯೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆʼʼ ಎಂದು ಸಚಿವರೆದುರು ಹೇಳಿದರು.

ʻʻನಮಗೆ ಆದಂತೆ ಬೇರೆ ಯಾರಿಗೂ ಈ ಘಟನೆ ಸಂಭವಿಸಿಬಾರದು. ಹೀಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆʼʼ ಎಂದು ಹರ್ಷಿಕಾ ಪೂಣಚ್ಚ ಮಾಧ್ಯಮಗಳಿಗೆ ತಿಳಿಸಿದರು.

ಇದನ್ನೂ ಓದಿ: Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

ಏನಿದು ಘಟನೆ?

ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಪತಿ ನಟ ಭುವನ್ ಮೇಲೆ ಹಲ್ಲೆ ನಡೆದಿತ್ತು. ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದು ಚಿನ್ನದ ಸರ ಕದಿಯಲು ಆರೋಪಿಗಳು ಯತ್ನಿಸಿದ್ದರು. ಫ್ರೆಜರ್ ಟೌನ್ ಪುಲಕೇಶಿ ನಗರದಲ್ಲಿ ಘಟನೆ ನಡೆದಿತ್ತು. ಚಿನ್ನದ ಸರ ಕದಿಯಲು ಯತ್ನಿಸಿದ್ದಲ್ಲದೇ ಕನ್ನಡದಲ್ಲಿ ಮಾತನಾಡಬೇಡಿ ಎಂದು ಆರೋಪಿಗಳು ದರ್ಪ ತೋರಿದ್ದರು ಹರ್ಷಿಕಾ ಪೂಣಚ್ಚ ಹಲ್ಲೆ ನಡೆದ ವಿಡಿಯೊವನ್ನು ಚಿತ್ರೀಕರಿಸಿ, ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಕುರಿತು ಹರ್ಷಿಕ ಪೂಣಚ್ಚ ಅವರು ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಈ ಘಟನೆ ವಿರುದ್ಧ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಈ ಸುದ್ದಿ ವೈರಲ್‌ ಆಗಿತ್ತು. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲೂ ಘಟನೆಯ ಕುರಿತು ವರದಿಯಾಗಿತ್ತು.

Continue Reading
Advertisement
DCM D K Shivakumar visit adichunchanagiri mutt
ಕರ್ನಾಟಕ6 mins ago

Lok Sabha Election 2024: ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ: ಡಿ.ಕೆ. ಶಿವಕುಮಾರ್

Road Accident
ಕರ್ನಾಟಕ33 mins ago

Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

Madrid Open 2024
ಕ್ರೀಡೆ43 mins ago

Madrid Open 2024: ಫಿಟ್​ನೆಸ್​ ಸಲುವಾಗಿ ಮ್ಯಾಡ್ರಿಡ್ ಓಪನ್‌ನಿಂದ ಹಿಂದೆ ಸರಿದ ಹಾಲೆಪ್‌

Kotak Bank
ದೇಶ54 mins ago

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Lok sabha Election
ಪ್ರಮುಖ ಸುದ್ದಿ1 hour ago

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Narsingh Yadav
ಕ್ರೀಡೆ1 hour ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ2 hours ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Neha Murder Case
ಕರ್ನಾಟಕ2 hours ago

Neha Murder Case: ಹುಬ್ಬಳ್ಳಿಯಲ್ಲಿ ಸಿಐಡಿ ಸ್ಥಳ ಮಹಜರು; ಫಯಾಜ್‌ನ ಗಲ್ಲಿಗೇರಿಸಲು ಎಬಿವಿಪಿ ಕಾರ್ಯಕರ್ತರ ಆಗ್ರಹ

IPL 2024
ಕ್ರೀಡೆ2 hours ago

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

Pratap Dudhat
ದೇಶ2 hours ago

ರಾಹುಲ್‌ ಗಾಂಧಿ ಗಂಡಸ್ತನ ತಿಳಿಯಲು ಅವರ ಜತೆ ನಿಮ್ಮ ತಾಯಿಯನ್ನು ಮಲಗಿಸಿ ಎಂದ ಕಾಂಗ್ರೆಸ್‌ ನಾಯಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌