wants to be a dad but Indian law doesnt allow says Salman Khan Salman Khan: ತಂದೆಯಾಗುವ ಆಸೆ ಇತ್ತು, ಆದ್ರೆ ಕಠಿಣ ಕಾನೂನುಗಳಿಂದಾಗಿ ಸಾಧ್ಯವಾಗಲಿಲ್ಲ: ಸಲ್ಮಾನ್ ಖಾನ್ - Vistara News

South Cinema

Salman Khan: ತಂದೆಯಾಗುವ ಆಸೆ ಇತ್ತು, ಆದ್ರೆ ಕಠಿಣ ಕಾನೂನುಗಳಿಂದಾಗಿ ಸಾಧ್ಯವಾಗಲಿಲ್ಲ: ಸಲ್ಮಾನ್ ಖಾನ್

ಸಲ್ಮಾನ್ ಖಾನ್‌ ಅವರಿಗೆ ಮಕ್ಕಳ ಮೇಲಿರುವ ಪ್ರೀತಿ ಗೊತ್ತೇ ಇದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಸಲ್ಮಾನ್ ಖಾನ್‌ ತನ್ನ ಸೊಸೆಯಂದಿರು ಮತ್ತು ಸೋದರಳಿಯರೊಂದಿಗೆ ಸಮಯ ಕಳೆಯುವುದನ್ನು ಹೆಚ್ಚಾಗಿ ಕಾಣಬಹುದು. ಭಾರತದ ಕಾನೂನುಗಳಿಂದಾಗಿ ತಂದೆಯಾಗಲು ಸಾಧ್ಯವಾಗಿಲ್ಲ ಅಂದಿದ್ಯಾಕೆ?

VISTARANEWS.COM


on

wants to be a dad but Indian law doesnt allow says Salman Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಸಲ್ಮಾನ್ ಖಾನ್ (Salman Khan) ತಂದೆಯಾಗಬೇಕೆಂದು ಯೋಜನೆ ಹಾಕಿಕೊಂಡಿರುವ ಬಗ್ಗೆ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ʻʻತಾನು ಮಗುವನ್ನು ಹೊಂದುವ ಬಗ್ಗೆ ಯೋಚಿಸಿದ್ದೆ ಆದರೆ ಭಾರತದ ಕಠಿಣ ಕಾನೂನುಗಳಿಂದಾಗಿ ಅದು ಸಾಧ್ಯವಾಗಲಿಲ್ಲʼ ಎಂದು ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಮದುವೆಯ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಸಲ್ಮಾನ್ ಖಾನ್‌ ಅವರಿಗೆ ಮಕ್ಕಳ ಮೇಲಿರುವ ಪ್ರೀತಿ ಗೊತ್ತೇ ಇದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಸಲ್ಮಾನ್ ಖಾನ್‌ ತನ್ನ ಸೊಸೆಯಂದಿರು ಮತ್ತು ಸೋದರಳಿಯರೊಂದಿಗೆ ಸಮಯ ಕಳೆಯುವುದನ್ನು ಹೆಚ್ಚಾಗಿ ಕಾಣಬಹುದು. ಸಲ್ಮಾನ್ ಖಾನ್ ಸಹೋದರಿ ಅರ್ಪಿತಾ ಖಾನ್‌ಗೆ ಇಬ್ಬರು ಮಕ್ಕಳಿದ್ದಾರೆ. ಆಯತ್ ಶರ್ಮಾ ಮತ್ತು ಅಹಿಲ್ ಶರ್ಮಾ. ಸಲ್ಮಾನ್‌ನ ಇನ್ನೊಬ್ಬ ಸಹೋದರಿ ಅಲ್ವಿರಾ ಖಾನ್‌ಗೆ ಇಬ್ಬರು ಮಕ್ಕಳಿದ್ದಾರೆ. ಅಲಿಜೆ ಅಗ್ನಿಹೋತ್ರಿ ಮತ್ತು ಅಯಾನ್ ಅಗ್ನಿಹೋತ್ರಿ. ಸಹೋದರರಾದ ಸೊಹೈಲ್ ಮತ್ತು ಅರ್ಬಾಜ್ ಅವರಿಗೂ ಮಕ್ಕಳಿದ್ದಾರೆ.

ಆಪ್ ಕಿ ಅದಾಲತ್ ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಸಲ್ಮಾನ್ ಖಾನ್‌ ತಾವು ಮಗುವನ್ನು ಪಡೆಯುವ ಬಗ್ಗೆ ಯೋಚಿಸಿದ್ದೆ. ʻʻಮಕ್ಕಳು ಪಡೆಯಬೇಕು ಎಂಬುದು ನನ್ನಸೆಯಾಗಿತ್ತು. ಆದರೆ ಭಾರತದ ಕಾನೂನಿನ ಪ್ರಕಾರ ಅದು ಸಾಧ್ಯವಿಲ್ಲ. ಈಗ ಆ ಕಾನೂನು ಬದಲಾಗಿರಬಹುದು. ನನಗೆ ಮಕ್ಕಳೆಂದರೆ ತುಂಬ ಇಷ್ಟ ಎಂದರು. ಚಿತ್ರನಿರ್ಮಾಪಕ ಕರಣ್ ಜೋಹರ್ ಇಬ್ಬರು ಮಕ್ಕಳ ತಂದೆಯಾಗಿರುವ ಬಗ್ಗೆಯೂ ಸಲ್ಮಾನ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್‌ಗೆ ಶೇಕ್‌ಹ್ಯಾಂಡ್‌ ಮಾಡಲು ಬಂದ ಅಭಿಮಾನಿಯನ್ನು ತಳ್ಳಿದ ಬಾಡಿಗಾರ್ಡ್

ಈಗಾಲೇ ಸಲ್ಮಾನ್‌ ಖಾನ್‌ ಅವರ ಕಿಸಿ ಕಾ ಭಾಯ್‌ ಕಿಸಿ ಕಾ ಜಾನ್‌ ಸಿನಿಮಾ ತೆರೆ ಕಂಡಿದೆ. ಸಲ್ಮಾನ್ ಮುಂದೆ ಟೈಗರ್ 3 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಕತ್ರಿನಾ ಕೈಫ್ ತೆರೆ ಹಂಚಿಕೊಳ್ಳಲಿದ್ದು, 2023ರ ದೀಪಾವಳಿ ಸಂದರ್ಭದಲ್ಲಿ ಚಿತ್ರ ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Geeta Shivarajkumar: ರಾಜ್‌ಕುಮಾರ್‌ಗೆ ರಾಜಕೀಯ ಇಷ್ಟವಿರಲಿಲ್ಲ, ಆದರೆ…; ಪತ್ನಿಯ ಸ್ಪರ್ಧೆಗೆ ಶಿವಣ್ಣ ವಿವರಣೆ

Geeta Shivarajkumar: ಡಾ. ರಾಜ್ ಕುಮಾರ್ ಅವರ ಮಾತಿನಂತೆ ಚಿತ್ರರಂಗ ಅಂದರೆ ಒಂದು ಕುಟುಂಬ. ನನ್ನ ಪತ್ನಿ ಗೆಲುವಿಗಾಗಿ ನಿಮ್ಮ ಸಹಕಾರ ನನಗೆ ಖುಷಿ ಕೊಟ್ಟಿದೆ. ರಾಜಕೀಯದಲ್ಲಿ ಅನುಭವ ಇದ್ದರೆ ಸಾಲದು. ನಂಬಿಕೆ, ಆತ್ಮ ವಿಶ್ವಾಸ ಕೂಡ ಬೇಕು ಎಂದು ಶಿವರಾಜ್‌ ಕುಮಾರ್‌ ಹೇಳಿದರು.

VISTARANEWS.COM


on

Geeta Shivarajkumar press meet for election
Koo

ಬೆಂಗಳೂರು: ನಟ ಶಿವ ರಾಜ್​ಕುಮಾರ್ ಅವರ ಪತ್ನಿ ಗೀತಾ ಶಿವ ರಾಜ್​ಕುಮಾರ್ (Geeta Shivarajkumar) ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ನಿರ್ಮಾಪಕರ ಸಂಘ ಗೀತಾ ಅವರಿಗೆ ಬೆಂಬಲ ನೀಡಿದೆ. ಸೋಮವಾರ ಮಧ್ಯಾಹ್ನ ನಟ ಶಿವರಾಜ್​ಕುಮಾರ್​ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆದಿದೆ. ಸುದ್ದಿಗೋಷ್ಠಿಯಲ್ಲಿ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧುಬಂಗಾರಪ್ಪ, ಚಿನ್ನೆಗೌಡ್ರು, ಉಮೇಶ್ ಬಣಕರ್, ಸಾ ರಾ ಗೋವಿಂದ್, ಎನ್ ಎಂ ಸುರೇಶ್ ಭಾಗಿಯಾಗಿದ್ದರು. ಈ ವೇಳೆ ಶಿವರಾಜ್‌ಕುಮಾರ್‌ ಅವರು ʻಗೀತಾ ಗೆದ್ದೇ ಗೆಲ್ತಾಳೆ. ನಾನು ಅವರ ಪರ ಯಾವಾಗಲೂ ಇದ್ದೆ ಇರ್ತೇನೆʼʼ ಎಂದು ಹೇಳಿದರು.

ಶಿವರಾಜ್‌ಕುಮಾರ್‌ ಮಾತನಾಡಿ ʻʻಡಾ. ರಾಜ್ ಕುಮಾರ್ ಅವರ ಮಾತಿನಂತೆ ಚಿತ್ರರಂಗ ಅಂದರೆ ಒಂದು ಕುಟುಂಬ. ನನ್ನ ಪತ್ನಿ ಗೆಲುವಿಗಾಗಿ ನಿಮ್ಮ ಸಹಕಾರ ನನಗೆ ಖುಷಿ ಕೊಟ್ಟಿದೆ. ರಾಜಕೀಯದಲ್ಲಿ ಅನುಭವ ಇದ್ದರೆ ಸಾಲದು. ನಂಬಿಕೆ, ಆತ್ಮ ವಿಶ್ವಾಸ ಕೂಡ ಬೇಕು. ಡಾ. ರಾಜ್ ಕುಮಾರ್ ಅವರಿಗೆ ರಾಜಕೀಯ ಇಷ್ಟ ಇರಲಿಲ್ಲ. ಆದರೆ ರಾಜಕೀಯ ಮಾಡುವವರಿಗೆ ಯಾವತ್ತೂ ಬೇಡ ಅನ್ನಲಿಲ್ಲ. ಹಾಗಾಗಿಯೇ ನಾನು ಬಂಗಾರಪ್ಪ ಅವರ ಮಗಳನ್ನು ಮದುವೆಯಾದೆ. ನಮ್ಮಲ್ಲಿ ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ರಾಜಕೀಯಕ್ಕೆ ಬರಬೇಕು. ಗೀತ ಗೆದ್ದೇ ಗೆಲ್ತಾಳೆ. ನಾನು ಅವರ ಪರ ಯಾವಾಗಲೂ ಇದ್ದೇ ಇರ್ತೇನೆʼʼ ಎಂದರು.

ಇದನ್ನೂ ಓದಿ: Karnataka Election 2023: ನಾಳೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಗೀತಾ ಶಿವರಾಜಕುಮಾರ್

ಗೀತಾ ಮಾತನಾಡಿ ʻʻನನ್ನ ಪರವಾಗಿ ನಿಂತ ನಿರ್ಮಾಪಕರಿಗೆ ಧನ್ಯವಾದ. ನಾನು ರಾಜಕೀಯದಲ್ಲಿ ಮೊದಲು ಸೋತೆ. ರಾಜಕೀಯದಲ್ಲಿ ಸೋಲು ಗೆಲುವಿಗೆ ನಾನು ಹೆದರುವುದಿಲ್ಲ. ಬಾರಿ ನಾನು ಚುನಾವಣೆಯಲ್ಲಿ ಗೆದ್ದೇ ಗೆಲ್ತೇನೆʼʼ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ ʻʻನನಗೆ ಚಿತ್ರರಂಗದ ಮೇಲೆ ಬಹಳ ಗೌರವವಿದೆ. ಇಂದು ನಿರ್ಮಾಪಕರು ನಮ್ಮ ಅಕ್ಕನ ಪರವಾಗಿ ನಿಂತಿದ್ದಾರೆ. 2014ರಲ್ಲಿ ಬೇರೆ ಪಕ್ಷದಲ್ಲಿ ಇದ್ದೇವು. ಆಗ ಸೋಲಾಯ್ತು. ಚುನಾವಣೆಯಲ್ಲಿ ನಾನು ಈವರೆಗೆ ನಾನು 6 ಬಾರಿ ಸೋತಿದ್ದೇನೆ. ಮಧು ಬಂಗಾರಪ್ಪ ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆ, ರಾಜಕೀಯದಲ್ಲಿ ಅಲ್ಲ. ಆದೇ ರೀತಿ ಈ ಬಾರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆದ್ದೇ ಗೆಲ್ಲಿಸುತ್ತೇನೆ. ಶಿವಣ್ಣ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ. ಶಿವಮೊಗ್ಗದಲ್ಲಿ ಬಂಗಾರಪ್ಪ ಅವರ ಬಳಿಕ ಗೀತಾ ಶಿವರಾಜ್ ಕುಮಾರ್ ನಾಯಕಿಯಾಗಿ ಬರಬೇಕು. ಗೀತಾ ಅವರು ಗೆದ್ದ ನಂತರ ಶಿವಮೊಗ್ಗಕ್ಕೆ ಮಾತ್ರ ಅಲ್ಲ, ಚಿತ್ರರಂಗಕ್ಕೆ ಸಾಕಷ್ಟು ಅನುಕೂಲ ಮಾಡೇ ಮಾಡ್ತಾರೆʼʼ ಎಂದರು.

Continue Reading

ಮಾಲಿವುಡ್

Arundhathi Nair: ತಮಿಳು-ಮಲಯಾಳಂನ ಜನಪ್ರಿಯ ನಟಿಗೆ ಅಪಘಾತ: ಸ್ಥಿತಿ ಗಂಭೀರ

Arundhathi Nair: ಅರುಂಧತಿ ನಾಯರ್ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು, ತಿರುವನಂತಪುರಂನ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

VISTARANEWS.COM


on

Arundhathi Nair
Koo

ಬೆಂಗಳೂರು: ತಮಿಳು ಹಾಗೂ ಮಲಯಾಳಂನ ಜನಪ್ರಿಯ ನಟಿ ಅರುಂಧತಿ ನಾಯರ್ (Arundhathi Nair) ಬೈಕ್ ಅಪಘಾತಕ್ಕೀಡಾಗಿರುವ ಬಗ್ಗೆ ವರದಿಯಾಗಿತ್ತು. ಮಾರ್ಚ್ 14ರಂದು ನಟಿ ಅಪಘಾತಕ್ಕೀಡಾಗಿದ್ದರು. ಸಹೋದರಿ ಆರತಿ ಈಗ ಸೋಮವಾರ (ಮಾರ್ಚ್ 18) ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ʻʻಈ ಘಟನೆಯಲ್ಲಿ ನಟಿ ಅರುಂಧತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೇರಳದ ತಿರುವನಂತಪುರಂನಲ್ಲಿರುವ ಆಸ್ಪತ್ರೆಗೆ (Arundhathi Nair met with a bike accident) ದಾಖಲಾಗಿದ್ದು, ಅರುಂಧತಿ ಸ್ಥಿತಿ ಗಂಭೀರವಾಗಿದೆ. ಸದ್ಯ ಅರುಂಧತಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆʼʼಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ನಲ್ಲಿ “ತಮಿಳುನಾಡಿನ ಪತ್ರಿಕೆಗಳು ಮತ್ತು ದೂರದರ್ಶನ ಚಾನೆಲ್‌ಗಳಲ್ಲಿ ವರದಿಯಾದ ಸುದ್ದಿಗಳನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ನಾವು ಭಾವಿಸಿದ್ದೇವೆ. ಮೂರು ದಿನಗಳ ಹಿಂದೆ ನನ್ನ ಸಹೋದರಿ ಅರುಂಧತಿ ನಾಯರ್ ಅಪಘಾತಕ್ಕೀಡಾಗಿರುವುದು ನಿಜ. ತೀವ್ರವಾಗಿ ಗಾಯಗೊಂಡಿದ್ದು, ತಿರುವನಂತಪುರಂನ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಅವಳ ಚೇತರಿಕೆಗೆ ನಿಮ್ಮ ಬೆಂಬಲ ಬೇಕು.”ಎಂದು ಬರೆದುಕೊಂಡಿದ್ದಾರೆ.

ಇನ್ನೊಂದೆಡೆ ನಟಿಯ ಸ್ನೇಹಿತೆ ಗೋಪಿಕಾ ಅನಿಲ್ ಅವರು ಪೋಸ್ಟ್‌ನಲ್ಲಿ ʻʻನಾವು ನಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದೇವೆ. ಆದರೆ ಇದೀಗ ಆಕೆಯ ಚಿಕಿತ್ಸೆಗೆ ಇದು ಸಾಕಾಗುವುದಿಲ್ಲ. ಆಕೆಯ ಕುಟುಂಬಕ್ಕೆ ತುಂಬ ಸಹಕಾರಿಯಾಗಲು ನೀವೂ ಸಹಾಯ ಮಾಡಿದರೆ, ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ’ ಎಂದು ಇನ್‌ಸ್ಟಾ ಪೋಸ್ಟ್‌ನಲ್ಲಿ ಬ್ಯಾಂಕ್ ಮತ್ತು ಫೋನ್ ಸಂಖ್ಯೆ ವಿವರಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ರಾಜ್‌ಕುಮಾರ್ ಪೆರಿಯಸಾಮಿ ಹೊಸ ಸಿನಿಮಾಗೆ ಈ ಸೂಪರ್‌ಸ್ಟಾರ್‌ ನಾಯಕ?

ಕೋವಲಂ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿದ್ದು, ಅರುಂಧತಿ ಅವರ ತಲೆಗೆ ಗಾಯವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ನಟಿ ಸಹೋದರನೊಂದಿಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಯಾರು ಈ ನಟಿ?

ಅರುಂಧತಿ 2014ರಲ್ಲಿ ತಮಿಳು ಚಿತ್ರ ʻಪೊಂಗಿ ಎಜು ಮನೋಹರʼ ( Pongi Ezhu Manohara) ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. 2018ರಲ್ಲಿ ಮಲಯಾಳಂಗೆ ʻಒಟ್ಟಕೋರು ಕಾಮುಕನ್ʼ (Ottakoru Kaamukan) ಚಿತ್ರದ ಮೂಲಕ ಪದಾರ್ಪಣೆ ಮಾಡಿದರು. ಕೊನೆಯದಾಗಿ 2023ರ ಚಲನಚಿತ್ರ ಆಯಿರಂ ಪೊರ್ಕಾಸುಕಲ್’ ನಲ್ಲಿ ( Aayiram Porkaasukal) ಕಾಣಿಸಿಕೊಂಡರು. 2021 ರಲ್ಲಿ ಮಲಯಾಳಂ ವೆಬ್-ಸರಣಿ ಪದ್ಮಿನಿ ಮತ್ತು ತಮಿಳು ಶೋ `ಡೋಂಟ್ ಥಿಂಕ್‌’ನಲ್ಲಿ ನಟಿಸಿದ್ದರು.

Continue Reading

ಕಾಲಿವುಡ್

WPL 2024: ಬೀದಿಗಿಳಿದು ಆರ್​ಸಿಬಿ ಅಭಿಮಾನಿಗಳ ಸಂಭ್ರಮ: ʻಭಾರತ ಪುರುಷ ಪ್ರಧಾನʼ ಎಂದ ತಮಿಳು ನಟ!

WPL 202: ಆರ್ ಸಿ ಬಿ ಮಹಿಳೆಯರ ತಂಡವು ಗೆಲುವು ಸಾಧಿಸುತ್ತಲೇ ಬೆಂಗಳೂರಿನ ರಸ್ತೆಗಳಲ್ಲಿ ಪುರುಷರು ಸಂಭ್ರಮಿಸಿರುವ ವೀಡಿಯೊವನ್ನು ನಟ ಸಿದ್ಧಾರ್ಥ್ ಹಂಚಿಕೊಂಡಿದ್ದರು. ಹಲವು ವರ್ಷಗಳಿಂದ ಪುರುಷರ ತಂಡಕ್ಕೆ ಸಾಧ್ಯವಾಗದ ಸಾಧನೆಯನ್ನು ಮಹಿಳಾ ತಂಡ ಸಾಧಿಸಿದೆ ಎಂದು ಹಲವರು ಹರ್ಷ ವ್ಯಕ್ತಪಡಿಸಿದ್ದರು.

VISTARANEWS.COM


on

Siddharth
Koo

ಬೆಂಗಳೂರು: ಮಹಿಳೆಯರ ಪ್ರೀಮಿಯರ್‌ ಲೀಗ್‌ನಲ್ಲಿ (WPL 2024) ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡವು ಗೆಲುವು ಸಾಧಿಸಿದ್ದು, 16 ವರ್ಷಗಳ ಕಪ್‌ ಬರವನ್ನು ನೀಗಿಸಿದೆ. ಇದರಿಂದಾಗಿ ಆರ್‌ಸಿಬಿ ಆಟಗಾರ್ತಿಯರು, ಅಭಿಮಾನಿಗಳ ಸಂತಸ ಮುಗಿಲುಮುಟ್ಟಿದೆ. ಸ್ಮೃತಿ ಮಂಧಾನ (Smriti Mandhana) ಪಡೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಕಾಲಿವುಡ್‌ ನಟ  ಸಿದ್ಧಾರ್ಥ್ ಭಾನುವಾರ ಸಂಜೆ (ಮಾ.17) ತಮ್ಮ ಎಕ್ಸ್ ಖಾತೆಯಲ್ಲಿ ʻʻಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರ್ತಿಯರು ಗೆದ್ದ ಕೂಡಲೇ ಪುರುಷರು ಸ್ಟ್ರೀಟ್‌ನಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಆದರೆ ಒಬ್ಬ ಹೆಣ್ಣು ಮಗಳು ಅಲ್ಲಿ ಕಾಣ ಸಿಗಲಿಲ್ಲ. ಇದರಲ್ಲೆ ಗೊತ್ತಾಗುತ್ತದೆ. ಭಾರತ ಪುರುಷ ಪ್ರಧಾನ ಎಂಬುದುʼʼ ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಇನ್ನು ಆರ್‌ಸಿಬಿ ಮಹಿಳೆಯರ ತಂಡವು ಗೆಲುವು ಸಾಧಿಸುತ್ತಲೇ ಬೆಂಗಳೂರಿನ ಸ್ಟ್ರೀಟ್‌ಗಳಲ್ಲಿ ಪುರುಷರು ಸಂಭ್ರಮಿಸಿರುವ ವೀಡಿಯೊವನ್ನು ಸಿದ್ಧಾರ್ಥ್ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಿಂದ ಪುರುಷರ ತಂಡಕ್ಕೆ ಸಾಧ್ಯವಾಗದ ಸಾಧನೆಯನ್ನು ಮಹಿಳಾ ತಂಡ ಸಾಧಿಸಿದೆ ಎಂದು ಹಲವರು ಹರ್ಷ ವ್ಯಕ್ತಪಡಿಸಿದರು. ಆದರೆ ಸಂಭ್ರಮಾಚರಣೆಯಲ್ಲಿ ಮಹಿಳೆಯರೇ ಇಲ್ಲ ಎಂದು ಈ ರೀತಿ ಟ್ವೀಟ್‌ ಮಾಡಿದ್ದಾರೆ.

ನಟ ಸಿದ್ಧಾರ್ಥ್ ಟ್ವೀಟ್‌ನಲ್ಲಿ ʻʻಮಹಿಳೆಯರ ತಂಡ ಕಪ್‌ ಗೆದ್ದಿದೆ. ಆದರೆ ಆಚರಿಸಲು ಒಬ್ಬ ಮಹಿಳೆ ಕೂಡ ಸ್ಟ್ರೀಟ್‌ಗೆ ಇಳಿಯಲಿಲ್ಲ. ಇದರಲ್ಲೆ ಗೊತ್ತಾಗುತ್ತದೆ. ಭಾರತ ಪುರುಷ ಪ್ರಧಾನ ಎಂಬುದು. ಅಷ್ಟೇ ಅಲ್ಲ ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಮಹಿಳೆಗೆ ಸ್ವತಂತ್ರವಾಗಿ ಇರಲು ಸಾಧ್ಯವಾಗುತ್ತಿಲ್ಲ ʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ರಾಜ್‌ಕುಮಾರ್ ಪೆರಿಯಸಾಮಿ ಹೊಸ ಸಿನಿಮಾಗೆ ಈ ಸೂಪರ್‌ಸ್ಟಾರ್‌ ನಾಯಕ?

ನಟ ಸಿದ್ಧಾರ್ಥ್ ಟ್ವೀಟ್‌

ಸಿದ್ಧಾರ್ಥ್ ಕೊನೆಯದಾಗಿ 2023ರಲ್ಲಿ ʻಚಿತ್ತಾʼದಲ್ಲಿ ಕಾಣಿಸಿಕೊಂಡಿದ್ದರು. ಕಮಲ್ ಹಾಸನ್, ಕಾಜಲ್ ಅಗರ್ವಾಲ್ ಮತ್ತು ರಾಕುಲ್ ಪ್ರೀತ್ ಸಿಂಗ್ ನಟಿಸಿರುವ ಶಂಕರ್ ಅವರ ಇಂಡಿಯನ್ 2 ನಲ್ಲಿ ಸಿದ್ಧಾರ್ಥ್ ಶೀಘ್ರದಲ್ಲೇ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ.

ಅಭಿಮಾನಿಗಳಿಗೆ ಫುಲ್ ಖುಷಿ

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಅಭಿಮಾನಿಗಳ ಪಾಲಿಗೆ ಭಾನುವಾರ ಅತ್ಯಂತ ಸಂತೋಷದಾಯಕ ದಿನ. 17 ವರ್ಷಗಳ ನಿಯತ್ತಿಗೆ ಸಿಕ್ಕ ಗೌರವ. 2008ರಲ್ಲಿ ಪುರುಷರ ಟೂರ್ನಿ (ಐಪಿಎಲ್​) ಮೂಲಕ ಆರಂಭಗೊಂಡ ಫ್ರಾಂಚೈಸಿ ಮೊಟ್ಟ ಮೊದಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಈ ಫ್ರಾಂಚೈಸಿ ಪಾಲಿಗೆ ಐತಿಹಾಸಿಕ ದಿನವಾಗಿದೆ. ಮಹಿಳೆಯರ ಪ್ರೀಮಿಯರ್ ಲೀಗ್​ನ (WPL 2024) ಎರಡನೇ ಆವೃತ್ತಿಯಲ್ಲಿ ಸ್ಮೃತಿ ಮಂಧಾನಾ ನೇತೃತ್ವದ ತಂಡ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಆರ್​ಸಿಬಿ ಅಭಿಮಾನಿಗಳಿಗೆ ಸಮಾಧಾನ ಹೇಳಿದೆ. ಅದಕ್ಕೆ ಪೂರಕವಾಗಿ ವಿಶ್ವದ ಮೂಲೆಮೂಲೆಗಳಲ್ಲಿರುವ ಆರ್​ಸಿಬಿ ಅಭಿಮಾನಿಗಳು ಬೀದಿಗಿಳಿದು ಸಂಭ್ರಮಾಚರಣೆ ಮಾಡಿದ್ದಾರೆ.

Continue Reading

ಟಾಲಿವುಡ್

RCB Unbox: ರಶ್ಮಿಕಾ ಮಂದಣ್ಣ ಮಿರರ್ ಮೇಲೆ ಏನ್ ಮಾಡ್ತಿದ್ದಾರೆ ಅರ್ಥ ಆಯ್ತಾ?

RCB Unbox: ಆರ್​ಸಿಬಿ ತನ್ನ ಅಭಿಯಾನ ಆರಂಭಿಸುವ ಮುನ್ನ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಈ ಸಲವೂ ವಿಶೇಷ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದು, ಈಗಾಗಲೇ ಎಲ್ಲರಿಗೂ ತಿಳಿದಿದೆ. ಕಳೆದೆರಡು ವರ್ಷಗಳಿಂದ ಆರ್​ಸಿಬಿ ಅನ್​ಬಾಕ್ಸ್​(RCB’s Unbox Event) ಹೆಸರಿನಲ್ಲಿ ನಡೆಯುತ್ತ ಬಂದಿದೆ. ಈ ಕಾರ್ಯಕ್ರಮದಲ್ಲಿ ತಂಡದ ಹೊಸ ಜೆರ್ಸಿ ಅನಾವರಣ ಸೇರಿ ಹಲವು ಅಚ್ಚರಿಯನ್ನು ಘೋಷಣೆ ಮಾಡುವುದು ಈ ಕಾರ್ಯಕ್ರಮದ ವಿಶೇಷತೆ.

VISTARANEWS.COM


on

RCB Unbox Rashmika Mandanna in Promo
Koo

ಬೆಂಗಳೂರು: ಆರ್‌ಸಿಬಿ ಅನ್‌ಬಾಕ್ಸ್ (RCB Unbox) ಇವೆಂಟ್ ಪ್ರೋಮೊದಲ್ಲಿ ಈಗಾಗಲೇ ಶಿರಾಜ್‌ಕುಮಾರ್‌, ಸುದೀಪ್‌, ರಿಷಬ್‌, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಕಾಣಿಸಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಅರ್ಥ ಆಯ್ತಾ? ಎಂದು ಆರ್‌ಸಿಬಿ ಚಮಕ್ ಕೊಡುತ್ತಲೇ ಬರುತ್ತಿದೆ. ಇದೀಗ ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಅವರ ಸರದಿ. Royal Challengers Bangalore ಎನ್ನುವ ಹೆಸರಿನಲ್ಲಿ ಬೆಂಗಳೂರು ಪದದ ಇಂಗ್ಲೀಷ್ ಅಕ್ಷರಗಳನ್ನು, ಉಚ್ಚಾರಣೆ ಬದಲಿಸಿದೆ, Bengaluru ಎಂದು ಮಾಡಲಾಗುತ್ತಿದೆ. ನಾಳೆ (ಮಾರ್ಚ್‌ 19) ನಡೆಯುವ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಇದು ಅಧಿಕೃತವಾಗುತ್ತಿದೆ.

ಆರ್​ಸಿಬಿ ತನ್ನ ಅಭಿಯಾನ ಆರಂಭಿಸುವ ಮುನ್ನ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಈ ಸಲವೂ ವಿಶೇಷ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಕಳೆದೆರಡು ವರ್ಷಗಳಿಂದ ಆರ್​ಸಿಬಿ ಅನ್​ಬಾಕ್ಸ್​(RCB’s Unbox Event) ಹೆಸರಿನಲ್ಲಿ ನಡೆಯುತ್ತ ಬಂದಿದೆ. ಅಭಿಮಾನಿಗಳಿಗಾಗಿ ನಡೆಸುವ ಈ ಕಾರ್ಯಕ್ರಮದಲ್ಲಿ ತಂಡದ ಹೊಸ ಜೆರ್ಸಿ ಅನಾವರಣ ಸೇರಿ ಹಲವು ಅಚ್ಚರಿಯನ್ನು ಘೋಷಣೆ ಮಾಡುವುದು ಈ ಕಾರ್ಯಕ್ರಮದ ವಿಶೇಷತೆ.

ಇದನ್ನೂ ಓದಿ: RCB Unbox: ಕಿಚ್ಚ ಸುದೀಪ್ ಯಾಕೆ ಆ ಇಡ್ಲಿ ಬೇಡ ಅಂದ್ರು ಅರ್ಥ ಆಯ್ತಾ?

ಈ ಬಾರಿ ಮಾರ್ಚ್ 22ರಿಂದ ಮೇ 26ರವರೆಗೆ ಐಪಿಎಲ್ ಟೂರ್ನಿ ನಡೆಯಲಿದೆ. ಮಾರ್ಚ್ 19ಕ್ಕೆ ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್‌ಗೆ ವೇದಿಕೆ ಸಜ್ಜಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್‌ಬಾಕ್ಸ್ ಇವೆಂಟ್ ಕುರಿತ ಪ್ರೋಮೊದಲ್ಲಿ  ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಅವರ ಕ್ಯಾರವ್ಯಾನ್‌ನ ಕನ್ನಡಿಯಲ್ಲಿ Royal Challengers Bangalore ಎಂದು ಬರೆದಿತ್ತು. ಕ್ಯಾರವ್ಯಾನ್‌ ಒಳ ಬಂದ ಅವರು ಅದನ್ನು ನೋಡಿ Bangalore ಎನ್ನುವುದನ್ನು ಅಳಿಸಿ ಅರ್ಥ ಆಯ್ತಾ? ಎಂದು ಕೇಳಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ತಮ್ಮ ಪ್ಯಾಕ್ಡ್ ಶೆಡ್ಯೂಲ್‌ನಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ಧುನುಷ್‌ ಅವರ ಜತೆ DNS (D51) ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಇದೇ ಮೊದಲ ಬಾರಿಗೆ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಜತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ವರದಿಯ ಪ್ರಕಾರ ಇದೊಂದು ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಅದರಿಂದ ಹೊರಗೆ ಹೇಗೆ ಬರುತ್ತಾನೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

Continue Reading
Advertisement
Benefits of Kasoori Methi
ಆರೋಗ್ಯ7 mins ago

Benefits of Kasoori Methi: ಕಸೂರಿ ಮೇಥಿ ರುಚಿ ಹೆಚ್ಚಿಸಲು ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಸೂಕ್ತ

varanasi nandi
ಅಂಕಣ27 mins ago

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

Raja Marga human robots
ಸ್ಫೂರ್ತಿ ಕತೆ42 mins ago

Raja Marga Column : ಭಾವನೆಗಳೇ ಇಲ್ಲದ ರೋಬೋಟ್‌ನಂಥ ಮನುಷ್ಯರ ಜತೆ ಬದುಕೋದಾದರೂ ಹೇಗೆ?

Supreme Court
ದೇಶ49 mins ago

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

Fruits and Vegetables Spilling from Paper Bag
ಆರೋಗ್ಯ1 hour ago

Health Tips: ಈ ಹಣ್ಣು ಮತ್ತು ತರಕಾರಿಗಳನ್ನು ಎಂದಿಗೂ ಜೊತೆಯಾಗಿ ಇಡಲೇಬಾರದು!

Rain alert issued for Ramanagara and Kalaburagi Rising temperature in coastal areas
ಮಳೆ2 hours ago

Karnataka Weather : ರಾಜ್ಯದಲ್ಲಿಂದು ಬಿಸಿಲು, ಮಳೆ, ಗಾಳಿ ಒಟ್ಟೊಟ್ಟಿಗೆ ದಾಳಿ

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Ukrainian minister
ದೇಶ7 hours ago

Ukrainian Minister: ಶೀಘ್ರ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ಭಾರತಕ್ಕೆ ಭೇಟಿ; ಉದ್ದೇಶವೇನು?

Techie couple assaulted over parking issue in Bengaluru
ಕರ್ನಾಟಕ8 hours ago

Assault Case: ಬೆಂಗಳೂರಲ್ಲಿ ಪಾರ್ಕಿಂಗ್‌ ವಿಚಾರಕ್ಕೆ ಟೆಕ್ಕಿ ದಂಪತಿ ಮೇಲೆ ಹಲ್ಲೆ

Banaglore incident
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಬೆಂಗಳೂರು ರೌಡಿಗಳ ಸಾಮ್ರಾಜ್ಯ ಆಗದಿರಲಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು14 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ4 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌