Rakshit Shetty: ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ Vistara News

ಪ್ರಮುಖ ಸುದ್ದಿ

Rakshit Shetty: ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ

Rakshit Shetty: ಕಿರಿಕ್ ಪಾರ್ಟಿ ಚಿತ್ರ ಬಿಡುಗಡೆ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.

VISTARANEWS.COM


on

Rakshit Shetty and Rashmika Madanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಬೇರೆ ಬೇರೆಯಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಈ ಇಬ್ಬರು ಪರಸ್ಪರ ಸಂಪರ್ಕದಲ್ಲಿದ್ದಾರೆ! ಹೌದು, ಈ ವಿಷಯವನ್ನು ಸ್ವತಃ ನಟ ರಕ್ಷಿತ್ ಶೆಟ್ಟಿ ಅವರು ಬಹಿರಂಗಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradache Ello) ಚಿತ್ರದ ಪ್ರಚಾರಕ್ಕೆ ಸಂಬಂಧಿಸಿದಂತೆ ಯುಟ್ಯೂಬ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಮಾಹಿತಿಯನ್ನು ನೀಡಿದ್ದಾರೆ.

ಕಿರಿಕ್ ಪಾರ್ಟಿ ಚಿತ್ರದಯ ಯಶಸ್ಸಿನ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು 2017ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ರಶ್ಮಿಕಾ ಮಂದಣ್ಣ ಅವರು ಈ ನಿಶ್ಚಿತಾರ್ಥ ಮುರಿದು, ಮದುವೆಗೆ ನಿರಾಕರಿಸಿದರು. ಆ ಬಳಿಕ, ರಶ್ಮಿಕಾ ಮಂದಣ್ಣ ಅವರು ಈ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ರಕ್ಷಿತಾ ಶೆಟ್ಟಿ ಮಾತ್ರ ಈಗಲೂ ರಶ್ಮಿಕಾ ಮಂದಣ್ಣ ಜತೆಗೆ ಸಂಪರ್ಕದಲ್ಲಿರುವುದಾಗಿ ಹೇಳುವ ಮೂಲಕ ಶಾಕ್ ನೀಡಿದ್ದಾರೆ. ಅಲ್ಲದೇ, ಚಿತ್ರಗಳಲ್ಲಿ ರಶ್ಮಿಕಾ ಮಂದಣ್ಣ ತೋರುತ್ತಿರುವ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟ ರಕ್ಷಿತ್ ಶೆಟ್ಟಿ ಹೇಳಿದ್ದೇನು?

ಇತ್ತೀಚೆಗೆ ಯುಟ್ಯೂಬ್‍‌ಗೆ ನೀಡಿದ ಸಂದರ್ಶನದಲ್ಲಿ ರಕ್ಷಿತ್ ಶೆಟ್ಟಿಗೆ, ಈಗಲೂ ರಶ್ಮಿಕಾ ಮಂದಣ್ಣ ಜತೆಗೆ ಸಂಪರ್ಕದಲ್ಲಿದ್ದೀರಾ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ರಕ್ಷಿತ್ ಶೆಟ್ಟಿ ಅವರು, ಹೌದು. ಈಗಲೂ ನಾನು ಮತ್ತು ರಶ್ಮಿಕಾ ಇಬ್ಬರು ಪರಸ್ಪರ ಸಂಪರ್ಕದಲ್ಲಿದ್ದೇವೆ. ಸಿನಿಮಾ ಜಗತ್ತನಲ್ಲಿ ಆಕೆ ದೊಡ್ಡ ಕನಸು ಕಂಡಿದ್ದಾಳೆ. ಅದರಂತೆ ಆಕೆ ಆ ಕನಸಿನತ್ತ ಸಾಗುತ್ತಿದ್ದಾಳೆ. ತಾನು ಏನು ಮಾಡಬೇಕು ಅಂದುಕೊಂಡಿದ್ದಾಳೋ ಅದನ್ನು ಸಾಧಿಸುವ ಶಕ್ತಿ ಅವಳಲ್ಲಿದೆ. ಆಕೆಯ ಸಾಧನೆಗಾಗಿ ನಾವೆಲ್ಲ ಆಕೆಯನ್ನು ಬೆಂಬಲಿಸಬೇಕು ಎಂದು ಹೇಳಿದರು.

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ರಶ್ಮಿಕಾ ಮಂದಣ್ಣ ಅವರು ಪದಾರ್ಪಣೆ ಮಾಡಿದರು. ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕಿರಿಕ್ ಪಾರ್ಟಿ ಚಿತ್ರದ ನಿರ್ದೇಶಕರು. ಕಿರಿಕ್ ಪಾರ್ಟಿ ಚಿತ್ರದ ಚಿತ್ರೀಕರಣದ ವೇಳೆಯೇ ರಶ್ಮಿಕಾ-ರಕ್ಷಿತ್ ಒಬ್ಬರಿಗೊಬ್ಬರು ಪ್ರೀತಿಸಲಾರಂಭಿಸಿದರು ಎನ್ನುವ ವರದಿಗಳಿವೆ. ಕಿರಿಕ್ ಪಾರ್ಟಿ ಚಿತ್ರದ ಬಿಡುಗಡೆ ಬಳಿಕ ರಶ್ಮಿಕಾ ಮತ್ತು ರಕ್ಷಿತ್ ಎಂಗೆಜ್ಮೆಂಟ್ ಮಾಡಿಕೊಂಡರು. ಆದರೆ, ಕೆಲವು ತಿಂಗಳ ಬಳಿಕ ಇಬ್ಬರು ನಿಶ್ಚಿತಾರ್ಥ ಮುರಿದುಕೊಂಡರು. ಆದರೆ, ಯಾವುದೇ ಕಾರಣವನ್ನು ಅವರು ಬಹಿರಂಗ ಮಾಡಿರಲಿಲ್ಲ.

ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್‌ ಸೀರೆಯುಟ್ಟು ಫಸ್ಟ್‌ ಲುಕ್‌ನಲ್ಲೇ ನಾಚಿ ನೀರಾದ ರಶ್ಮಿಕಾ!

ರಣಬೀರ್‌ ಕಪೂರ್‌ (Ranbir Kapoor)) ಅಭಿನಯದ ʻಅನಿಮಲ್ʼ ಸಿನಿಮಾ (Animal first look poster) ದಿನಕ್ಕೊಂದು ಹೊಸ ಅಪ್‌ಡೇಟ್‌ಗಳನ್ನು ಹಂಚಿಕೊಳ್ಳುತ್ತಲೇ ಇದೆ. ಇದೀಗ ʻಅನಿಮಲ್ʼ ಸಿನಿಮಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಫಸ್ಟ್‌ ಲುಕ್‌ ಪೋಸ್ಟರ್‌ ಬಿಡುಗಡೆ ಮಾಡಿದೆ. ಈ ಪೋಸ್ಟರ್‌ ಕಂಡು ರಶ್ಮಿಕಾ ಅವರ ಫ್ಯಾನ್ಸ್‌ ಸಂತಸ ಹೊರಹಾಕುತ್ತಿದ್ದಾರೆ. ಅನಿಮಲ್‌ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ʻಗೀತಾಂಜಲಿʼ (Geethanjali animal Cinema) ಪಾತ್ರವನ್ನು ನಿಭಾಯಿಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: Rashmika Mandanna: ಮೊದಲ ಬಾರಿಗೆ ರಕ್ಷಿತ್ ಶೆಟ್ಟಿಯವರ ʻಕಿರಿಕ್‌ ಪಾರ್ಟಿʼ ಕುರಿತು ಬಾಯ್ಬಿಟ್ಟ ರಶ್ಮಿಕಾ ಮಂದಣ್ಣ

ಈಗಾಗಲೇ ಅನಿಮಲ್‌ ಚಿತ್ರತಂಡ ಹಲವು ಪಾತ್ರಗಳನ್ನು ಪರಿಚಯಿಸಿದೆ. ಕಬೀರ್ ಸಿಂಗ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಈ ಸಿನಿಮಾ ನಿರ್ದೇಶಿಸಿದ್ದಾರೆ. ರಶ್ಮಿಕಾ ಪೋಸ್ಟರ್‌ನಲ್ಲಿ, ಕೆಂಪು ಮತ್ತು ಬಿಳಿ ಬಣ್ಣದ ಬಾರ್ಡರ್‌ ಸೀರೆಯೊಂದಿಗೆ ಗೃಹಿಣಿಯ ಲುಕ್‌ನಲ್ಲಿ ಸಿಂಪಲ್‌ ಆಗಿ ಕಂಡಿದ್ದಾರೆ. ರಶ್ಮಿಕಾ ಅಭಿನಿಯೊಬ್ಬರು ʻ ಗೀತಾಂಜಲಿಯ ಲುಕ್‌ ಬಹಳ ವಿಭಿನ್ನವೆಂದು ತೋರುತ್ತದೆʼʼಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು. ‘ಇಡೀ ಚಿತ್ರರಂಗದಲ್ಲಿ ನಿಮಗಿಂತ ಮಿಗಿಲಾದವರು ಯಾರೂ ಇಲ್ಲ, ನೀವೇ ಅತ್ಯಂತ ಸುಂದರಿʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

ʼದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯೊಂದಿಗೆ, 2001ರ ಸಂಸತ್ತಿನ ದಾಳಿಯ ರೂವಾರಿ (Parliament Attack) ಭಯೋತ್ಪಾದಕ ಅಫ್ಜಲ್ ಗುರುವಿನ (Afjal Guru) ಪೋಸ್ಟರ್ ಅನ್ನು ಒಳಗೊಂಡಿರುವ ವಿಡಿಯೊವನ್ನು ಪನ್ನುನ್ (Khalistan Terrorist Gurpatwant Singh Pannun) ಹರಿಬಿಟ್ಟಿದ್ದಾನೆ.

VISTARANEWS.COM


on

Khalistani Terrorist Pannun
Koo

ಹೊಸದಿಲ್ಲಿ: ಡಿಸೆಂಬರ್ 13ರಂದು ಭಾರತ ಹೊಸ ಸಂಸತ್‌ ಕಟ್ಟಡದ ಮೇಲೆ ಉಗ್ರ ದಾಳಿ (Parliament Attack) ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ (Khalistan Terrorist) ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ಹಾಕುವ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾನೆ. ತನ್ನನ್ನು ಕೊಲ್ಲಲು ʼಭಾರತ ನಡೆಸಿರುವ ಸಂಚಿಗೆ ಪ್ರತಿಯಾಗಿʼ ತಾನು ದಾಳಿ ನಡೆಸುವುದಾಗಿ ಈ ಬೆದರಿಕೆ ಹಾಕಿದ್ದಾನೆ. ಇದೇ ಡಿಸೆಂಬರ್ 13ಕ್ಕೆ ಭಾರತದ ಸಂಸತ್ ಭವನದ ಮೇಲೆ ಭಯೋತ್ಪಾದಕ ನಡೆದು 22 ವರ್ಷಗಳಾಗುತ್ತವೆ.

ʼದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯೊಂದಿಗೆ, 2001ರ ಸಂಸತ್ತಿನ ದಾಳಿಯ ರೂವಾರಿ ಭಯೋತ್ಪಾದಕ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವಿಡಿಯೊವನ್ನು ಪನ್ನುನ್ ಹರಿಬಿಟ್ಟಿದ್ದಾನೆ. ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವ ಮೂಲಕ ʼಭಾರತೀಯ ಏಜೆನ್ಸಿಗಳ ವಿಫಲ ಕೊಲೆ ಸಂಚಿಗೆʼ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾನೆ.

“ಡಿಸೆಂಬರ್ 13ರಂದು ನನ್ನ ಪ್ರತಿಕ್ರಿಯೆ ತೋರಿಸಲಿದ್ದೇನೆ. ಕಾಶ್ಮೀರಿಗಳ ಕಾನೂನುಬಾಹಿರ ಹತ್ಯೆಗಳ ವಿರುದ್ಧ 2001ರಲ್ಲಿ ಅಫ್ಜಲ್ ಗುರು ನಡೆಸಿದ ದಾಳಿಗೆ ಪೂರಕವಾಗಿ ನಾನು ನೀಡಲಿರುವ ಪ್ರತಿಕ್ರಿಯೆಯು ಭಾರತದ ಸಂಸತ್ತಿನ ಅಡಿಪಾಯವನ್ನು ಅಲುಗಾಡಿಸಲಿದೆ. ದೆಹಲಿ ಬನೇಗಾ ಖಲಿಸ್ತಾನ್” ಎಂದು ಪನ್ನುನ್ ಹೇಳಿದ್ದಾನೆ.

ಉನ್ನತ ಗುಪ್ತಚರ ಮೂಲಗಳ ಪ್ರಕಾರ, ಪನ್ನುನ್ ಬೆದರಿಕೆ ಹಾಕುತ್ತಿರುವುದು ಮಾತ್ರವಲ್ಲದೆ, ಭಾರತದ ಮೇಲಿನ ದಾಳಿಗಾಗಿ ವ್ಯಕ್ತಿಗಳನ್ನು ನೇಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾನೆ. ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಪನ್ನುನ್ ಬೆದರಿಕೆ ಬಂದಿದೆ. ಅಧಿವೇಶನವು ಡಿಸೆಂಬರ್ 22ರವರೆಗೆ ನಡೆಯಲಿದೆ. ಪನ್ನುನ್‌ನ ವೀಡಿಯೊ ಕಾಣಿಸಿಕೊಂಡ ನಂತರ ಭದ್ರತಾ ಏಜೆನ್ಸಿಗಳ ಮೂಲಕ ಹೆಚ್ಚಿನ ಎಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ.

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಗೆ ಭಾರತೀಯ ಮೂಲದ ನಿಖಿಲ್ ಗುಪ್ತಾ ಎಂಬಾತ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಮೆರಿಕದ ಬೇಹುಗಾರಿಕೆ ಇಲಾಖೆ ಕೋರಿಕೆಯ ಮೇರೆಗೆ ಆತನನ್ನು ಜೆಕ್ ರಿಪಬ್ಲಿಕ್ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಗುಪ್ತಾ ಭಾರತದಿಂದ ಅಮೆರಿಕಕ್ಕೆ ಪ್ರಯಾಣಿಸುತ್ತಿದ್ದಾಗ ಬಂಧಿಸಲಾಯಿತು.

“ನ್ಯೂಯಾರ್ಕ್‌ನಲ್ಲಿ ಭಾರತೀಯ ಮೂಲದ ಯುಎಸ್ ಪ್ರಜೆಯನ್ನು ಹತ್ಯೆ ಮಾಡಲು ವಿಫಲವಾದ ಸಂಚಿನಲ್ಲಿ ಭಾಗವಹಿಸಿದ್ದಾಗಿ” ಆತನ ಮೇಲೆ ಯುಎಸ್ ಡಿಪಾರ್ಟ್ಮೆಂಟ್ ಆಫ್ ಜಸ್ಟೀಸ್ ಆರೋಪ ಮಾಡಿದೆ. ಆದರೆ ಭಾರತದ ನಾಯಕರ ಮೇಲೆ ಉಗ್ರ ದಾಳಿ ಬೆದರಿಕೆ ಹಾಕುತ್ತಿರುವ ಆತನ ಮೇಲೆ ಯಾವುದೇ ಕಾನೂನು ಕ್ರಮ ತೆಗೆದುಕೊಂಡಿಲ್ಲ.

ಇದನ್ನೂ ಓದಿ: ಪನ್ನುನ್‌ ಹತ್ಯೆಗೆ ಸ್ಕೆಚ್‌; ಅಮೆರಿಕ ಆರೋಪಕ್ಕೆ ಭಾರತ ಪ್ರತಿಕ್ರಿಯೆ, ಉನ್ನತ ಸಮಿತಿ ರಚನೆ

Continue Reading

ಉದ್ಯೋಗ

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job: ಸರ್ಕಾರಿ ಇಲಾಖೆಯಲ್ಲಿ 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

VISTARANEWS.COM


on

Government Job Vistara Exclusive and CM Siddaramaiah
Koo

ಬೆಳಗಾವಿ: ರಾಜ್ಯದಲ್ಲಿ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು (Government Job) ಖಾಲಿ ಇರುವ ಬಗ್ಗೆ ವಿಸ್ತಾರ ನ್ಯೂಸ್‌ ಬಿತ್ತರಿಸಿದ ಎಕ್ಸ್‌ಕ್ಲೂಸಿವ್‌ ವರದಿಯು ಬೆಳಗಾವಿ ಚಳಿಗಾಳದ ಅಧಿವೇಶನದಲ್ಲಿ (Belagavi Winter Session) ಚರ್ಚೆಗೆ ಬಂದಿದ್ದು, ಆಡಳಿತ ಮತ್ತು ವಿಪಕ್ಷಗಳ ವಾಗ್ವಾದಕ್ಕೆ ಕಾರಣವಾಗಿದೆ. ಪರಿಷತ್‌ ಕಲಾಪದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸದಸ್ಯೆ ತೇಜಸ್ವಿನಿ ರಮೇಶ್‌, ಸರ್ಕಾರಿ ಇಲಾಖೆಯಲ್ಲಿ (Government Department) 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

ಖಾಲಿ ಹುದ್ದೆ ಬಗ್ಗೆ ಸರ್ಕಾರ ಕೊಟ್ಟ ಉತ್ತರ ಅಸಮರ್ಪಕವಾಗಿದೆ ಎಂದು ತೇಜಸ್ವಿನಿ ರಮೇಶ್‌ ಹೇಳಿಕೆ ನೀಡುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಸಲೀಂ ಅಹಮದ್‌, ಸರ್ಕಾರ ಈಗಾಗಲೇ ಉತ್ತರ ಕೊಟ್ಟಿದೆ ಎಂದು ಹೇಳಿದರು. ಆಗ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಮಾತನಾಡಿ, ಈ ಹಿಂದೆ ನಿಮ್ಮ ಸರ್ಕಾರದ ಇತ್ತಲ್ಲವೇ? ಆಗ ಏನು ಕತ್ತೆ ಕಾಯ್ತಾ ಇದ್ರಾ? ಕೇಂದ್ರ ಸರ್ಕಾರದಲ್ಲಿ ಒಂದು ಕೋಟಿ ಹುದ್ದೆ ಖಾಲಿ ಇದೆ ಎಂದು ಹೇಳಿದರು. ಇದು ಬಿಜೆಪಿ ಸದಸ್ಯರನ್ನು ಮತ್ತಷ್ಟು ಕೆರಳಿಸಿತು.

ಸಿಎಂ ಕಲಾಪಕ್ಕೆ ಬಂದು ಉತ್ತರಿಸಲಿ

ಈ ಹೇಳಿಕೆಯಿಂದ ಆಕ್ರೋಶಗೊಂಡ ಪ್ರತಿಪಕ್ಷ ಬಿಜೆಪಿ ಸದಸ್ಯರು, ಕತ್ತೆ ಅನ್ನೋ ಪದವನ್ನು ಕಡಿತದಿಂದ ತೆಗೆಯಲು ಒತ್ತಾಯ ಮಾಡಿದರು. ಬಳಿಕ ಮಾತನಾಡಿದ ತೇಜಸ್ವಿನಿ ರಮೇಶ್‌, ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ನಮಗೆ ಆರೋಪಿಸುತ್ತಾರೆ. ಆದರೆ, ನಾವು ಬ್ಲಾಕ್‌ಮೇಲ್ ಮಾಡುತ್ತಿಲ್ಲ. ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಖಾಲಿ ಹುದ್ದೆ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ ಪ್ರಸಾರ ಆಗುತ್ತಾ ಇದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ ಅಂತ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸಿಎಂ ಉತ್ತರಕ್ಕಾಗಿ ಪಟ್ಟು

ಆಗ ಮಾತನಾಡಿದ ಯು.ಬಿ. ವೆಂಕಟೇಶ್, ಈಗಾಗಲೇ ಮುಖ್ಯಮಂತ್ರಿಗಳಿಂದಲೇ ಉತ್ತರ ಕೊಡಿಸಿಯಾಗಿದೆ. ಇವರು ಕಳೆದ ಐದು ವರ್ಷದಿಂದ ಏನ್ ಕತ್ತೆ ಕಾಯುತ್ತಿದ್ದರಾ? ಯಾಕೆ ಏಳನೇ ವೇತನ ಆಯೋಗ ಜಾರಿ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದರು. ಇದರಿಂದ ಅಸಮಾಧಾನಗೊಂಡ ತೇಜಸ್ವಿನಿ ರಮೇಶ್, ಕತ್ತೆ ಕಾಯುವ ಕೆಲಸ ಸದನದಲ್ಲಿ ಮಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಬಂದು ಉತ್ತರ ಕೊಡಬೇಕು. ಅಲ್ಲಿಯವರೆಗೂ ಧರಣಿ ವಾಪಸ್ ಪಡೆಯಲ್ಲ ಎಂದು ಪಟ್ಟುಹಿಡಿದು ಕುಳಿತರು.

ಕತ್ತೆಯ ಗುಣವನ್ನು ಬೆಳೆಸಿಕೊಳ್ಳಬೇಕು

ಆಗ ಬೋಜೇಗೌಡ ಮಾತನಾಡಿ, ಕತ್ತೆಗಿರುವ ಗೌರವವನ್ನು ಸಹ ಕಾಂಗ್ರೆಸ್‌ನವರು ಹಾಳು ಮಾಡಿದ್ದಾರೆ. ಕತ್ತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಆಗ ಸಚಿವ ಕೃಷ್ಣ ಬೈರೆಗೌಡ ಮಾತನಾಡಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡಿ. ಸಿಎಂ ಬೆಂಗಳೂರಿನ ಕಾರ್ಯಕ್ರಮದಲ್ಲಿದ್ದಾರೆ. ಅವರು ಬಂದ ಕೂಡಲೇ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಸಿಎಂರಿಂದ ಉತ್ತರ ಕೊಡಿಸುವ ಭರವಸೆ

ಇಷ್ಟಾದರೂ ಗದ್ದಲ ನಿಲ್ಲದೇ ಇದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ, ಸದನದ ಕಲಾಪವನ್ನು ನಡೆಸಲು ಬಿಡಿ. ಇದೇ ರೀತಿಯಾದರೆ ಸದನವನ್ನು ಮುಂದೂಡುತ್ತೇನೆ. ಏನ್ ಹುಡುಗಾಟಿಕೆ ಮಾಡಿಕೊಂಡಿದ್ದೀರಿ? ಎಂದು ಗರಂ ಆದರು. ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತರ ಕೊಡಿಸುವ ಭರವಸೆ ಸಿಕ್ಕ ಮೇಲೆ ಪ್ರತಿಪಕ್ಷಗಳು ಧರಣಿಯನ್ನು ವಾಪಸ್‌ ಪಡೆದವು.

‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

VISTARA-EXCLUSIVE

ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

Continue Reading

ದೇಶ

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತಿದೆ. ಮೂರೂ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವ ಚರ್ಚೆ ನಡೆಸುತ್ತಿದೆ.

VISTARANEWS.COM


on

narendra modi amit shah jp nadda
Koo

ಹೊಸದಿಲ್ಲಿ: ಇತ್ತೀಚೆಗೆ ತಾನು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೂರು ರಾಜ್ಯಗಳಲ್ಲಿ (Assembly Election 2023) ಮುಖ್ಯಮಂತ್ರಿಗಳನ್ನು (Chief minister) ಆಯ್ಕೆ ಮಾಡಲು ಬಿಜೆಪಿ ನಾಯಕತ್ವವು (BJP High command) ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದೆ. ಮೂರೂ ರಾಜ್ಯಗಳಲ್ಲೂ ಹೊಸ ಮುಖಗಳನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯು ಅಮೋಘ ಚುನಾವಣಾ ಗೆಲುವು ದಾಖಲಿಸಿರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗುತ್ತಿದೆ. ಮೂರೂ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವ ಚರ್ಚೆ ನಡೆಸುತ್ತಿದೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಿವಾಸದಲ್ಲಿ ನಾಲ್ಕೂವರೆ ಗಂಟೆಗಳ ಕಾಲ ಸಭೆ ನಡೆಸಲಾಗಿದ್ದು, ಈ ವೇಳೆ ಮೂರು ರಾಜ್ಯಗಳ ಮುಂಚೂಣಿಯಲ್ಲಿರುವವರನ್ನು ಪರಿಗಣಿಸಲಾಗಿದೆ. ಸಭೆಯಲ್ಲಿ ಪ್ರಧಾನಿ, ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ (JP Nadda) ಉಪಸ್ಥಿತರಿದ್ದರು. ಈ ಮ್ಯಾರಥಾನ್ ಸಭೆಯಲ್ಲಿ ಈ ರಾಜ್ಯಗಳ ಬಿಜೆಪಿಯ ಉಸ್ತುವಾರಿಗಳೊಂದಿಗೆ ರಾಜ್ಯ ನಾಯಕರ ಪ್ರತಿಕ್ರಿಯೆಯನ್ನು ಸಂಗ್ರಹಿಸಲು ಸಭೆ ನಡೆಸಲು ನಿರ್ಧರಿಸಲಾಗಿದೆ.

ಬಿಜೆಪಿಯ ಕೇಂದ್ರ ನಾಯಕತ್ವವು ಮೂರು ರಾಜ್ಯಗಳಿಗೆ ವೀಕ್ಷಕರನ್ನು ಶೀಘ್ರದಲ್ಲೇ ನೇಮಿಸುವ ಸಾಧ್ಯತೆಯಿದೆ. ಮೂರು ರಾಜ್ಯಗಳಲ್ಲಿ ಹೊಸದಾಗಿ ಚುನಾಯಿತ ಶಾಸಕರು ವಿಧಾನಸಭೆಯಲ್ಲಿ ತಮ್ಮ ನಾಯಕರನ್ನು ಆಯ್ಕೆ ಮಾಡಲು ನಡೆಸುವ ಸಭೆಗಳನ್ನು ಈ ವೀಕ್ಷಕರು ಮೇಲ್ವಿಚಾರಣೆ ಮಾಡುತ್ತಾರೆ.

ಮಧ್ಯಪ್ರದೇಶದಲ್ಲಿ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ, ನರೇಂದ್ರ ಸಿಂಗ್ ತೋಮರ್ ಮತ್ತು ಹಿರಿಯ ರಾಜ್ಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರೊಂದಿಗೆ ಉನ್ನತ ಹುದ್ದೆಗೆ ಆಕಾಂಕ್ಷಿಯಾಗಿದ್ದಾರೆ.

ರಾಜಸ್ಥಾನದ ಉನ್ನತ ಹುದ್ದೆಗೂ ಹಲವಾರು ಹೆಸರುಗಳು ಸುತ್ತು ಹಾಕುತ್ತಿವೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಶಾಸಕರಾಗಿ ಆಯ್ಕೆಯಾಗಿದ್ದರೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಅರ್ಜುನ್ ರಾಮ್ ಮೇಘವಾಲ್, ಪಕ್ಷದ ರಾಜ್ಯಾಧ್ಯಕ್ಷ ಸಿಪಿ ಜೋಶಿ, ಪ್ರಮುಖ ನಾಯಕರಾದ ದಿಯಾ ಕುಮಾರಿ ಮತ್ತು ಮಹಂತ ಬಾಲಕನಾಥ್ ಅವರನ್ನು ಸಂಭಾವ್ಯ ಎಂದು ಪರಿಗಣಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಸ್ಪರ್ಧಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೊ, ವಿರೋಧ ಪಕ್ಷದ ನಾಯಕ ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಓ.ಪಿ ಚೌಧರಿ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಬಿಜೆಪಿ ನಾಯಕತ್ವ ಅಚ್ಚರಿದಾಯಕ ಆಯ್ಕೆಗಳಿಗೆ ಹೆಸರಾಗಿದೆ. ಹೀಗಾಗಿ ಈ ಪಟ್ಟಿಗಳಲ್ಲಿ ಇಲ್ಲದ ವ್ಯಕ್ತಿಗಳನ್ನು ಆಯ್ಕೆ ಮಾಡಿ ಶಾಕ್‌ ನೀಡಲೂ ಸಾಧ್ಯತೆಗಳಿವೆ.

ಇದನ್ನೂ ಓದಿ: Assembly election 2023: ಐದು ರಾಜ್ಯಗಳ ಎಲೆಕ್ಷನ್‌ನಲ್ಲಿ ಶೇ.18ರಷ್ಟು ಅಭ್ಯರ್ಥಿಗಳು ಕ್ರಿಮಿನಲ್!

Continue Reading

ಉದ್ಯೋಗ

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

Government Job : ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

VISTARANEWS.COM


on

Government Job Vistara Exclusive
Koo
VISTARA-EXCLUSIVE

ಬೆಂಗಳೂರು: ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

Continue Reading
Advertisement
Khalistani Terrorist Pannun
ದೇಶ1 min ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema16 mins ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ20 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ38 mins ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ51 mins ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್51 mins ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

murder case in Bengaluru
ಕರ್ನಾಟಕ1 hour ago

Murder Case : ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ವ್ಯಕ್ತಿ!

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

danish
ಕ್ರಿಕೆಟ್1 hour ago

Danish Kaneria: ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ; ಕಾರಣವೇನು?

Snehith Gowda Became Villain In Bigg Boss Kannada in rakshasa task
ಬಿಗ್ ಬಾಸ್2 hours ago

BBK SEASON 10: ನ್ಯಾಯವಾಗಿ ಆಡೋಕ್‌ ಬಂದಿಲ್ಲ ಅಂದ್ರೆ ಹೋಗ್ತಿರ್ಬೇಕು; ಸ್ನೇಹಿತ್‌ ವಿರುದ್ಧ ರಕ್ಕಸರು ಉರಿ ಉರಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Government Job Vistara Exclusive and CM Siddaramaiah
ಉದ್ಯೋಗ20 mins ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 hour ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ8 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ17 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ17 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

ಟ್ರೆಂಡಿಂಗ್‌