Weekned With Ramesh Weekned With Ramesh: ರಮ್ಯಾ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ನಟಿ - Vistara News

ಕಿರುತೆರೆ

Weekned With Ramesh: ರಮ್ಯಾ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾ ಒಪ್ಪಿಕೊಂಡಿದ್ಯಾಕೆ? ಅಸಲಿ ಕಾರಣ ಬಿಚ್ಚಿಟ್ಟ ನಟಿ

ಸ್ಯಾಂಡಲ್‌ವುಡ್‌ ಕ್ವೀನ್‌ (Weekned With Ramesh) ಎಂತಲೇ ಖ್ಯಾತಿ ಪಡೆದಿರುವ ರಮ್ಯಾ ಅವರು ಸಾಧಕರ ಸೀಟ್‌ನಲ್ಲಿ ಕುಳಿತುಕೊಳ್ಳಬೆಕೆಂಬುದು ಅವರ ಅಭಿಮಾನಿಗಳ ಮಹಾದಾಸೆಯಾಗಿತ್ತು. ರಮ್ಯಾ ತಾವು ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು, ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಭಿ ಸಿನಿಮಾಗೆ ತಾವು ಎಂಟ್ರಿ ಕೊಟ್ಟ ಸನ್ನೀವೇಶವನ್ನೂ ಬಹಿರಂಗಪಡಿಸಿದ್ದಾರೆ.

VISTARANEWS.COM


on

Weekned With Ramesh Ramya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ವೀಕೆಂಡ್‌ ವಿತ್‌ ರಮೇಶ್‌’ (Weekned With Ramesh) ಸೀಸನ್‌ 5ರಲ್ಲಿ ರಮ್ಯಾ ಮೊದಲನೇ ಅತಿಥಿಯಾಗಿ ಭಾಗಿಯಾಗಿದ್ದಾರೆ. ಸ್ಯಾಂಡಲ್‌ವುಡ್‌ ಕ್ವೀನ್‌ ಎಂತಲೇ ಖ್ಯಾತಿ ಪಡೆದಿರುವ ರಮ್ಯಾ ಅವರು ಸಾಧಕರ ಸೀಟ್‌ನಲ್ಲಿ ಕುಳಿತುಕೊಳ್ಳಬೆಕೆಂಬುದು ಅವರ ಅಭಿಮಾನಿಗಳ ಮಹಾದಾಸೆಯಾಗಿತ್ತು. ರಮ್ಯಾ ತಾವು ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದು, ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಭಿ ಸಿನಿಮಾಗೆ ತಾವು ಎಂಟ್ರಿ ಕೊಟ್ಟ ಸನ್ನೀವೇಶವನ್ನೂ ಬಹಿರಂಗಪಡಿಸಿದ್ದಾರೆ.

ರಮ್ಯಾ ಸಿನಿಮಾರಂಗಕ್ಕೆ ಬಂದು 20 ವರ್ಷಗಳಾಗಿವೆ. ಅವರ ಯಶಸ್ವಿ ಚಿತ್ರ ʻಎಕ್ಸ್‌ಕ್ಯೂಸ್‌ ಮಿʼ ಸಿನಿಮಾವನ್ನು ಮೊದಲು ರಮ್ಯಾ ರಿಜೆಕ್ಟ್ ಮಾಡಿದ್ದರಂತೆ. ಈ ಬಗ್ಗೆ ಕಾರಣವನ್ನೂ ಹೇಳಿಕೊಂಡಿದ್ದಾರೆ. ದಿವ್ಯಾ ಸ್ಪಂದನ ರಮ್ಯಾ ಮೊದಲು ಆಡಿಷನ್ ಕೊಟ್ಟಿದ್ದು, ಪುನೀತ್ ನಟನೆಯ ʻಅಪ್ಪು’ ಚಿತ್ರಕ್ಕೆ ಆದರೆ ಈ ಸಿನಿಮಾಗೆ ರಮ್ಯಾ ರಿಜೆಕ್ಟ್ ಆಗಿದ್ದರು. ಬಳಿಕ ಮತ್ತೆ ʻವಜ್ರೇಶ್ವರಿ ಕಂಬೈನ್ಸ್’ ರಮ್ಯಾ ಅವರನ್ನು ಸಂಪರ್ಕ ಮಾಡಿ ʻಅಭಿʼ ಚಿತ್ರಕ್ಕೆ ಆಫರ್ ನೀಡಿದರು. ಆಡಿಷನ್ ಮಾಡದೆ ಅಭಿ ಚಿತ್ರಕ್ಕೆ ರಮ್ಯಾ ಸೆಲೆಕ್ಟ್ ಆಗಿದ್ದರು. ಈ ಮೂಲಕ ರಮ್ಯಾ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟರು. ಈ ಚಿತ್ರದ ರಿಲೀಸ್‌ಗೂ ಮೊದಲೇ ರಮ್ಯಾಗೆ ʻಎಕ್ಸ್‌ಕ್ಯೂಸ್‌ ಮಿ’ ಸಿನಿಮಾಗೆ ಆಫರ್ ಬಂದಿತ್ತು. ನಿರ್ದೇಶಕ ಪ್ರೇಮ್ ನಿರ್ದೇಶನದಲ್ಲಿ ರಮ್ಯಾ ನಾಯಕಿಯಾಗಿ ಮಿಂಚಿದರು. ಆದರೆ ಈ ಸಿನಿಮಾದಲ್ಲಿ ನಟಿಸಲು ಇಷ್ಟವಿರಲಿಲ್ಲ ಎಂದು ರಮ್ಯಾ ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ: Weekend With Ramesh: ನನಗೆ ವೈಯಕ್ತಿಕವಾಗಿ ರಮ್ಯಾ ಇಷ್ಟ: ಪತ್ರ ಬರೆದು ಕಾರಣ ಹೇಳಿದ ಪೂಜಾ ಗಾಂಧಿ

ನಿರ್ದೇಶಕ ಪ್ರೇಮ್ ಅವರು ಈ ಸಿನಿಮಾದ ಆಫರ್ ಮಾಡಿದಾಗ ರಮ್ಯಾ ಅವರಿಗೆ ಸ್ವತಃ ಇಷ್ಟವಿರಲಿಲ್ಲವಂತೆ. ಆದರೆ ರಮ್ಯಾ ಅವರ ಅಮ್ಮ ನಮ್ಮ ಮಂಡ್ಯ ಗೌಡ್ರು ಅಂದ ಕಾರಣಕ್ಕೆ ಒಪ್ಪಿಕೊ ಎಂದು ಹೇಳಿದಕ್ಕೆ ಒಪ್ಪಿಕೊಂಡಿರುವ ಬಗ್ಗೆ ರಿವೀಲ್‌ ಮಾಡಿದ್ದಾರೆ.

ಪ್ರೇಮ್‌ ಅವರು ಸಿನಿಮಾ ಕ್ಲೈಮ್ಯಾಕ್ಸ್‌ ಅನ್ನು ಸೆಟ್‌ನಲ್ಲಿಯೇ ಕುಳಿತು ಬರೆದರು. ಕೊನೆಗೆ ಸಿನಿಮಾ ರಿಲೀಸ್‌ ಆಗಿ ಹಿಟ್‌ ಕಂಡಿತು. ಎಂದು ನೆನಪುಗಳನ್ನು ಹಂಚಿಕೊಂಡರು. ಎಕ್ಸ್​ಕ್ಯೂಸ್​ ಮೀ ಸಿನಿಮಾದ ನಿರ್ಮಾಪಕರು, ಆ ಸಿನಿಮಾದ ಇಬ್ಬರು ನಾಯಕರಾದ ಸುನಿಲ್ ರಾವ್ ಹಾಗೂ ಅಜಯ್ ಅವರುಗಳು ರಮ್ಯಾ ಕುರಿತಾಗಿ ಮಾತನಾಡಿದರು. ಇನ್ನು ಎರಡನೇ ಅತಿಥಿ ಪ್ರಭುದೇವ ಎಪಿಸೋಡ್‌ಗೆ ಕಾಯುತ್ತಿದ್ದಾರೆ. ರಮ್ಯಾ ಇನ್ನಷ್ಟು ತಮ್ಮ ಮನದ ಮಾತುಗಳನ್ನು ಹಂಚಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Kannada Serials TRP: ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ.

VISTARANEWS.COM


on

Kannada Serials TRP Lakshmi Nivasa In Top Amruthadhaare in Top 5
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ಈ ವಾರ ಈ ವಾರ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿತ್ತು. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ಧೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಇದನ್ನೂ ಓದಿ: Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ. ಇತ್ತೀಚೆಗೆ ಆರಂಭ ಆಗಿರುವ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ‘ಅಮೃತಧಾರೆ’ ಧಾರಾವಾಹಿ ಇದೆ. ಎರಡೂ ಧಾರಾವಾಹಿಗಳಿಗೆ ಈ ಬಾರಿ ಐದನೇ ಸ್ಥಾನ ಸಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಕಿರುತೆರೆ

Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

Salaar Movie: ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಫಿಲ್ಮ್ಸ್‌ ಈ ಸಿನಿಮಾವನ್ನು ನಿರ್ಮಿಸಿದೆ. ಇನ್ನು ಈ ಸಿನಿಮಾದ ಹಾಡುಗಳು ಅದ್ಭುತ ರೀತಿಯಲ್ಲಿ ಮೂಡಿ ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‌ನಲ್ಲಿ ಇತ್ತು. ಇದೀಗ 2023ರ ಬ್ಲಾಕ್ ಬಸ್ಟರ್ ಹಿಟ್ “ಸಲಾರ್” ಸಿನಿಮಾ (Salaar Movie) ಪ್ರಸಾರವಾಗಲಿದೆ.

VISTARANEWS.COM


on

Salaar Movie In star suvarna
Koo

ಬೆಂಗಳೂರು: ಕನ್ನಡಿಗರಿಗೆ `ಸ್ಟಾರ್ ಸುವರ್ಣ’ ವಾಹಿನಿಯು ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು ನೀಡುತ್ತ ಬಂದಿದೆ. ವಿಶ್ವ-ವಿಖ್ಯಾತಿ ಪಡೆದ ʻಕಾಂತಾರʼ, ʻಹೊಯ್ಸಳʼ, ʻಜೇಮ್ಸ್ʼ ನಂತಹ ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ಪ್ರಸಾರ ಮಾಡಿ ಪ್ರೇಕ್ಷಕರ ಮನಗೆದ್ದ ಸುವರ್ಣ ವಾಹಿನಿ (Star Suvarna) ಇದೀಗ 2023ರ ಬ್ಲಾಕ್ ಬಸ್ಟರ್ ಹಿಟ್ “ಸಲಾರ್” ಸಿನಿಮಾ (Salaar Movie) ಪ್ರಸಾರವಾಗಲಿದೆ. ಜತೆಗೆ ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶವನ್ನು ಸುವರ್ಣ ವಾಹಿನಿಯು ನೀಡುತ್ತಿದೆ.

ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂ. ಕಮಾಯಿ ಮಾಡಿತ್ತು. ಇದೀಗ ಈ ಸಿನಿಮಾವು ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಗುತ್ತಿದೆ. ಈ ಸಿನಿಮಾದಲ್ಲಿ ವೀಕ್ಷಕರಿಗೆ ಪ್ರಭಾಸ್ ಅವರ ಲುಕ್ ಜತೆಗೆ ಸಿನಿಮಾದಲ್ಲಿ ಬಳಸಲಾಗಿದ್ದ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಇದೀಗ ಆ ಬೈಕ್ ಗೆಲ್ಲೋ ಅವಕಾಶವನ್ನು ನೋಡುಗರಿಗೆ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಯು ನೀಡುತ್ತಿದೆ. ‘ಸಲಾರ್’ ಸಿನಿಮಾ ನೋಡಿ, ಅಲ್ಲಿ ಕೇಳೊ ಪ್ರಶ್ನೆಗಳಿಗೆ ಆದಷ್ಟು ಬೇಗ ಸರಿಯಾದ ಉತ್ತರ ಕೊಟ್ರೆ, ಅದೃಷ್ಟಶಾಲಿ ವಿಜೇತರಿಗೆ ‘ಸಲಾರ್’ ನಲ್ಲಿ ಪ್ರಭಾಸ್ ಬಳಸಿರುವ ಬೈಕ್ ಬಹುಮಾನವಾಗಿ ಸಿಗಲಿದೆ.

ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಫಿಲ್ಮ್ಸ್‌ ಈ ಸಿನಿಮಾವನ್ನು ನಿರ್ಮಿಸಿದೆ. ಇನ್ನು ಈ ಸಿನಿಮಾದ ಹಾಡುಗಳು ಅದ್ಭುತ ರೀತಿಯಲ್ಲಿ ಮೂಡಿ ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‌ನಲ್ಲಿ ಇತ್ತು.

ಇದನ್ನೂ ಓದಿ: Kiara Advani: ಪ್ರಭಾಸ್ ನಟನೆಯ ʻಸಲಾರ್ 2ʼ ಸಿನಿಮಾದಲ್ಲಿ ಕಿಯಾರಾ ಆಡ್ವಾಣಿ?

ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ “ಸಲಾರ್” ಇದೇ ಭಾನುವಾರ ರಾತ್ರಿ 7 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading

ಕಿರುತೆರೆ

Comedy Khiladigalu Premier League: ಹೇಗಿರಲಿದೆ ಹೊಸ ಶೋ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼ?

Comedy Khiladigalu Premier League:  ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇರಲಿದ್ದಾರೆ. ನಿರೂಪಕರಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿ ನಿಭಾಯಿಸಲಿದ್ದಾರೆ. ಈ ಕಾರ್ಯಕ್ರಮದ ಮೂಲಕ ಹೆಸರು ಪಡೆದವರು ಅದೆಷ್ಟೋ ಸ್ಟಾರ್‌ ನಟರ ಜತೆ, ಬೆಳ್ಳಿ ಪರದೆಯಲ್ಲಿ ಕಲಾವಿದರಾಗಿ ಮಿಂಚುತ್ತಿದ್ದಾರೆ. ಮೆಗಾ ಆಡಿಷನ್‌ನಲ್ಲಿ ಈ ಬಾರಿಯೂ ವಿವಿಧ ಭಾಗದ ಬೇರೆ ಬೇರೆ ಕಲಾವಿದರು ಆಯ್ಕೆಯಾಗಿದ್ದಾರೆ. ತಮ್ಮ ವಿಶೇಷ ಪ್ರತಿಭೆಗಳಿಂದ ನೋಡುಗರನ್ನು ರಂಜಿಸಲಿದ್ದಾರೆ.‌

VISTARANEWS.COM


on

Comedy Khiladigalu Premier League From 27th April On Zee Kannada
Koo

ಬೆಂಗಳೂರು: ʻಜೀ ಕನ್ನಡʼ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಅಂದರೆ ಅದುವೇ ʻಕಾಮಿಡಿ ಕಿಲಾಡಿಗಳುʼ ಶೋ. (Comedy Khiladigalu Premier League) “ಸೈಡ್‌ಗಿಡ್ರಿ ನಿಮ್‌ ಟೆನ್ಷನ್‌ಗಳು, ಮತ್ತೆ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಎಂಬ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸುವ ಕೀರ್ತಿ ಈ ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಇದೀಗ ಸೀಸನ್‌ 5 ಪ್ರೇಕ್ಷಕರ ಮುಂದೆ ಬರುತ್ತಿದೆ. ಈಗ ಜೀ ವಾಹಿನಿ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ʼಮೂಲಕ ಮನರಂಜಿಸಲು ಸಿದ್ಧವಾಗಿದೆ.

ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇರಲಿದ್ದಾರೆ. ನಿರೂಪಕರಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿ ನಿಭಾಯಿಸಲಿದ್ದಾರೆ.

ಮೂಲಗಳ ಪ್ರಕಾರ ಈ ಬಾರಿಯ ಶೋನಲ್ಲಿ ಟಿ-20 ರೀತಿಯಲ್ಲಿ ಹೇಗೆ ತಂಡಗಳು, ಮಾಲೀಕರು , ಕ್ಯಾಪ್ಟನ್‌ಗಳು ಇರುತ್ತಾರೋ ಅದೇ ರೀತಿ ಇಲ್ಲಿಯೂ ಇರಲಿದೆ. ಕರ್ನಾಟಕದ 31 ಜಿಲ್ಲೆಗಳಿಂದ ಆಯ್ಕೆ ಮಾಡಿ ತಂದ ಕಲಾವಿದರನ್ನು ಮೆಗಾ ಆಕ್ಷನ್‌ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. 5 ತಂಡಗಳು 1 ಟ್ರೋಫಿಗಾಗಿ ಗುದ್ದಾಟ ನಡೆಸಲಿದೆ. ಈ ಶೋನಲ್ಲಿ ಒಳ್ಳೆಯ ಪ್ರದರ್ಶನ ನೀಡಿದ ಕಲಾವಿದರಿಗೆ ಅವರ ಪ್ರದರ್ಶನ ಆಧಾರದ ಮೇಲೆ ಪ್ರತಿ ವಾರ 1 ಲಕ್ಷ ರೂ. ಬಹುಮಾನ ಗೆಲ್ಲುವ ಅವಕಾಶ ಇರಲಿದೆ. ಈ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ʼಗೆ ಐವರು ನಿರೂಪಕರು ಹೊಸ ಜವಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಹೊಸ ನಿರೂಪಕರನ್ನು ಈ ಶೋ ಮೂಲಕ ಕರೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಆ ನಿರೂಪಕರು ಯಾರು ಎಂಬ ಪ್ರಶ್ನೆಗೆ ಉತ್ತರ ಇದೇ ಶನಿವಾರ ಹಾಗೂ ಭಾನುವಾರು ರಾತ್ರಿ 9ಗಂಟೆಗೆ ಗೊತ್ತಾಗಲಿದೆ.

ಇದನ್ನೂ ಓದಿ: Comedy khiladi Nayana: ಮುದ್ದು ಕೃಷ್ಣನನ್ನು ಹಿಡಿದು ಫೋಟೊಶೂಟ್‌ ಮಾಡಿಸಿದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಯನಾ!

ಸೀಸನ್ 4 ಈಗಾಗಲೇ ಮುಕ್ತಾಯಗೊಂಡಿದೆ. ಸೀಸನ್‌ 4ರ ವಿಜೇತರಾಗಿ ಹರೀಶ್ ಹಿರಿಯೂರು, ಮೊದಲನೇ ರನ್ನರ್ ಅಪ್ ಆಗಿ ಮಂಡ್ಯದ ಗಿಲ್ಲಿ ನಟ ಮತ್ತು ಎರಡನೇ ರನ್ನರ್ ಅಪ್‌ ಆಗಿ ಶುಭಾ ಸ್ಥಾನ ಪಡೆದಿದ್ದರು. ಒಟ್ಟು 12 ಜನ ಟಾಪ್​ ಫೈನಲಿಸ್ಟ್‌ಗಳ ನಡುವೆ ಈ ಮೂವರು ವಿಶೇಷ ಸ್ಥಾನ ಪಡೆದಿದ್ದರು.

ಈ ಕಾರ್ಯಕ್ರಮದ ಮೂಲಕ ಹೆಸರು ಪಡೆದವರು ಅದೆಷ್ಟೋ ಸ್ಟಾರ್‌ ನಟರ ಜತೆ, ಬೆಳ್ಳಿ ಪರದೆಯಲ್ಲಿ ಕಲಾವಿದರಾಗಿ ಮಿಂಚುತ್ತಿದ್ದಾರೆ. ಮೆಗಾ ಆಡಿಷನ್‌ನಲ್ಲಿ ಈ ಬಾರಿಯೂ ವಿವಿಧ ಭಾಗದ ಬೇರೆ ಬೇರೆ ಕಲಾವಿದರು ಆಯ್ಕೆಯಾಗಿದ್ದಾರೆ. ತಮ್ಮ ವಿಶೇಷ ಪ್ರತಿಭೆಗಳಿಂದ ನೋಡುಗರನ್ನು ರಂಜಿಸಲಿದ್ದಾರೆ.‌ ಈ ಕಾರ್ಯಕ್ರಮದ (Comedy Khiladigalu) ಎಲ್ಲ ಸೀಸನ್‌ಗಳಲ್ಲಿಯೂ ಅದ್ಭುತವಾಗಿ ನಿರೂಪಣೆ ಮಾಡಿರುವ ಮಾಸ್ಟರ್‌ ಆನಂದ್‌ ಈ ಬಾರಿಗೂ ನಿರೂಪಣೆ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎನ್ನಲಾಗಿದೆ.

Continue Reading

ಕಿರುತೆರೆ

Rupanjana Mitra: ತನಗಿಂತ 6 ವರ್ಷ ಚಿಕ್ಕವನ ಜತೆ ಮಗನ ಸಮ್ಮುಖದಲ್ಲಿ ಎರಡನೇ ಮದುವೆಯಾದ ನಟಿ!

Rupanjana Mitra: ಕಳೆದ ವರ್ಷ ಡಾರ್ಜಿಲಿಂಗ್‌ನಲ್ಲಿ ರೂಪಂಜನಾ ಮತ್ತು ರತುಲ್ ಡಾರ್ಜಿಲಿಂಗ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಫೋಟೊಗಳಿಗೆ ಪೋಸ್ ನೀಡಿ ಸಾಮಾಜಿಕ ಜಾಲತಾಣದಲ್ಲಿ ಸಂತಸದ ಕ್ಷಣಗಳನ್ನು ಹಂಚಿಕೊಂಡಿತ್ತು. ರೂಪಾಂಜನಾ ಅವರ ಸಹನಟರು, ಸ್ನೇಹಿತರು, ಹಿತೈಷಿಗಳು ಅಭಿನಂದಿಸಿದ್ದರು.

VISTARANEWS.COM


on

Rupanjana Mitra
Koo

ಬೆಂಗಳೂರು: 43 ವರ್ಷದ ಕಿರುತೆರೆ ನಟಿ ರೂಪಂಜನಾ ಮಿತ್ರಾ (Rupanjana Mitra) ಅವರು ಏಪ್ರಿಲ್ 19ರಂದು ತಮಗಿಂತ 6 ವರ್ಷ ಚಿಕ್ಕವರಾದ ರತುಲ್‌ ಮುಖರ್ಜಿ ಅವರನ್ನು ವಿವಾಹವಾಗಿದ್ದಾರೆ. ಬಂಗಾಳಿ ಸಂಪ್ರದಾಯದಲ್ಲಿ ನಟಿ ವಿವಾಹವಾದರು. ವಿಶೇಷ ಅಂದರೆ ನಟಿ ಮಗನ ಎದುರೇ ನಟಿ ಎರಡನೇ ವಿವಾಹವಾಗಿದ್ದಾರೆ. ನಟಿ ಕೆಂಪು ಬಣ್ಣದ ಬನಾರಸ್‌ ಸೀರೆಯಲ್ಲಿ ಕಂಗೊಳಿಸಿದರೆ, ರತುಲ್‌ ಅವರು ಧೋತಿಯಲ್ಲಿ ಕಂಡು ಬಂದರು.

ರೂಪಾಂಜನಾ ಅವರ ಮಗ ರಿಯಾನ್ ಕೆಂಪು ಪಂಜಾಬಿಯನ್ನು ಧರಿಸಿದ್ದ. ರೂಪಂಜನಾ ಮಿತ್ರಾ ಹಾಗೂ ರತುಲ್‌ ಮುಖರ್ಜಿ ಮದುವೆಗೂ ಮುಂಚೆ ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು. ರತುಲ್‌ ಅವರು ರೂಪಂಜನಾ ಮಿತ್ರಾಗಿಂತ ಆರು ವರ್ಷ ಚಿಕ್ಕವರು.

ಕಳೆದ ವರ್ಷ ಡಾರ್ಜಿಲಿಂಗ್‌ನಲ್ಲಿ ರೂಪಂಜನಾ ಮತ್ತು ರತುಲ್ ಡಾರ್ಜಿಲಿಂಗ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಫೋಟೊಗಳಿಗೆ ಪೋಸ್ ನೀಡಿ ಸಾಮಾಜಿಕ ಜಾಲತಾಣದಲ್ಲಿ ಸಂತಸದ ಕ್ಷಣಗಳನ್ನು ಹಂಚಿಕೊಂಡಿತ್ತು. ರೂಪಾಂಜನಾ ಅವರ ಸಹನಟರು, ಸ್ನೇಹಿತರು, ಹಿತೈಷಿಗಳು ಅಭಿನಂದಿಸಿದ್ದರು.

ಇದನ್ನೂ ಓದಿ: Ramana Avatara: ಬಿಡುಗಡೆ ದಿನಾಂಕ ಘೋಷಣೆ ಮಾಡಿದ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾ

ಇದನ್ನೂ ಓದಿ: Physical Abuse : ಬೆಂಗಳೂರಲ್ಲೊಂದು ಪೈಶಾಚಿಕ ಕೃತ್ಯ; 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರೂಪಾಂಜನಾ ಅವರು 2007ರಲ್ಲಿ ರಜಾಲ್‌ ಹಕಿಯನ್ನು ವಿವಾಹವಾಗಿದ್ದರು. ರಿಯಾನ್‌ ಎಂಬ ಮಗ ಜನಿಸಿದ. 2018ರಲ್ಲಿ ಜೋಡಿ ವಿಚ್ಛೇದನ ಪಡೆದಿತ್ತು. ಅಂದಿನಿಂದ ಮಗ ತಾಯಿಯ ಜತಗೆ ಇದ್ದಾನೆ. ಪತಿಯಿಂದ ವಿಚ್ಛೇದನ ಪಡೆದ ನಂತರ ರೂಪಾಂಜನಾ ಅವರು ರತುಲ್‌ ಅವರನ್ನು ಪ್ರೀತಿಸುತ್ತಿದ್ದರು.

ಇದೀಗ ಜೋಡಿ ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ. ವೈರಲ್‌ ಆಗುತ್ತಿರುವ ನವಜೋಡಿಗೆ ಹಲವರು ಶುಭ ಹಾರೈಸುತ್ತಿದ್ದಾರೆ. ರೂಪಂಜನಾ ಬಂಗಾಳಿ ದೂರದರ್ಶನದಲ್ಲಿ ಪ್ರಸಿದ್ಧ ನಟಿ. ಬೆಂಗಾಲಿ ಟಿವಿ ಶೋ ‘ಏಕ್ ಆಕಾಶೇರ್ ನಿಚೆ’ ಧಾರಾವಾಹಿ ಮೂಲಕ ಖ್ಯಾತಿ ಪಡೆದಿದ್ದರು. ಹಲವಾರು ಸಿನಿಮಾಗಳು ಮತ್ತು ಮತ್ತು ವೆಬ್ ಸಿರೀಸ್‌ನಲ್ಲಿ ನಟಿ ಕಾಣಿಸಿಕೊಂಡಿದ್ದರು.

Continue Reading
Advertisement
Lok Sabha Election 2024 Kannada Celeb vote Pictures
ಸ್ಯಾಂಡಲ್ ವುಡ್10 mins ago

Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
Lok Sabha Election 202414 mins ago

Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok sabha election 2024
Lok Sabha Election 202425 mins ago

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Narendra Modi
ಕರ್ನಾಟಕ43 mins ago

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Chocolate industry
ಪರಿಸರ45 mins ago

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

ವೈರಲ್ ನ್ಯೂಸ್47 mins ago

Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

Lok Sabha Election 2024 Woman casts her vote with the help of oxygen elderly woman dies after casting her vote
Lok Sabha Election 20241 hour ago

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Whatsapp
ದೇಶ1 hour ago

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Lok sabha election 2024
Lok Sabha Election 20241 hour ago

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 hour ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 hour ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20243 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ9 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ21 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ22 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌