Site icon Vistara News

Kichcha Sudeep: ಸುದೀಪ್‌-ದರ್ಶನ್‌ ಸ್ನೇಹದ ಮಧ್ಯೆ ಇದ್ದ ಸಮಸ್ಯೆ ಏನು? ಕಿಚ್ಚನ ನೇರ ಉತ್ತರ!

Sudeep-Darshan

ಬೆಂಗಳೂರು: ನಟ ಕಿಚ್ಚ ಸುದೀಪ್‌ (Kichcha Sudeep) ಅವರು ಬಿಗ್‌ ಬಾಸ್‌ ಸೀಸನ್‌ 10ನ್ನು ಮುಗಿಸಿ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದಾರೆ. ಹೀಗಿರುವಾಗ ಮುಂಜಾನೆ 7:30ಕ್ಕೆ ಸುದೀಪ್ ಟ್ವೀಟ್ ಒಂದನ್ನು ಮಾಡಿದರು. ‘ಒಂದು ಸಣ್ಣ AskKichcha ಸೆಷನ್. ನಿಮ್ಮ ಪ್ರಶ್ನೆಗಳನ್ನು ಕೇಳಿ’ ಎಂದು ಸುದೀಪ್ ಬರೆದುಕೊಂಡಿದ್ದರು. ಮತ್ತೆ ದರ್ಶನ್‌ ಕುರಿತಾದ ಚರ್ಚೆಗಳು ಆಗಿವೆ. ದರ್ಶನ್‌ ಕುರಿತಾದ ಅಭಿಮಾನಿಯ ಪ್ರಶ್ನೆಗೆ ಕೂಲ್‌ ಆಗಿಯೇ ಉತ್ತರಿಸಿದ್ದಾರೆ ಸುದೀಪ್‌.

ಅಭಿಮಾನಿಯೊಬ್ಬರು ಸುದೀಪ್‌ ಅವರಿಗೆ ಸರ್, “ನಿಮ್ಮ ಹಾಗೂ ದರ್ಶನ್ ಅವರ ನಡುವಿನ ಸಮಸ್ಯೆ ಯಾವಾಗ ಬಗೆಹರಿಸಿಕೊಳ್ಳುತ್ತೀರಾ? ಇನ್ನು ಎಷ್ಟು ಸಮಯ ತಗೋತ್ತೀರಾ?” ಎಂದು ಕೇಳಿದ್ದಾರೆ. ಇದಕ್ಕೆ ರಿಪ್ಲೇ ಮಾಡಿರುವ ಸುದೀಪ್, “ಸಮಸ್ಯೆ ಏನು ಅಂತ ಇಬ್ಬರೂ ಹುಡುಕುತ್ತಾ ಇದ್ದೀವಿ” ಎಂದು ನಗುವ ಇಮೋಜಿ ಹಾಕಿದ್ದಾರೆ. ಮತ್ತೊಬ್ಬ ಅಭಿಮಾನಿ “ದರ್ಶನ್ ಬಗ್ಗೆ ಒಂದು ಪದದಲ್ಲಿ ಹೇಳಿ” ಎಂದು ಕೇಳಿದ್ದಾರೆ. ಅದಕ್ಕೆ ಸುದೀಪ್ “ಆತನಿಗೆ ಸದಾ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ” ಎಂದು ಬರೆದಿದ್ದಾರೆ.

ಒಂದು ಕಾಲದಲ್ಲಿ ದರ್ಶನ್‌ ಹಾಗೂ ಸುದೀಪ್‌ ಒಳ್ಳೆಯ ಸ್ನೇಹಿತರಾಗಿದ್ದರು ಒಂದು ದಿನ ಇದ್ದಕ್ಕಿದಂತೆ ದರ್ಶನ್ ಟ್ವೀಟ್ ಮಾಡಿ ಇನ್ನು ಮುಂದೆ ನಾನು ಸುದೀಪ್ ಸ್ನೇಹಿತರಲ್ಲ ಎಂದು ಘೋಷಿಸಿಬಿಟ್ಟರು. ಬಳಿಕ ಇಬ್ಬರೂ ಎಂದೂ ಒಟ್ಟಿಗೆ ಕಾಣಿಸಿಕೊಳ್ಳಲಿಲ್ಲ. ಪರಸ್ಪರ ಅಂತರ ಕಾಯ್ದುಕೊಂಡೇ ಬಂದಿದ್ದರು.ಸುದೀಪ್ ಸಾಕಷ್ಟು ಬಾರಿ ದರ್ಶನ್ ಕುರಿತು ಮಾತನಾಡಿದ್ದಾರೆ. ಟ್ವಿಟ್ಟರ್‌ನಲ್ಲಿ ದರ್ಶನ್ ಕುರಿತಾದ ವಿಚಾರಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Bigg Boss 17: ಮುನಾವರ್ ಫಾರೂಖಿ ಹಿಂದಿ ಬಿಗ್‌ ಬಾಸ್ 17ನೇ ಆವೃತ್ತಿಯ ವಿನ್ನರ್

6 ವರ್ಷದ ನಂತರ ಒಟ್ಟಿಗೆ ಕಾಣಿಸಿಕೊಂಡ ಜೋಡಿ

ಇತ್ತೀಚೆಗೆ ಸುದೀಪ್ ಮತ್ತು ದರ್ಶನ್ ಒಂದೇ ವೇದಿಕೆ ಮೇಲೆ 6 ವರ್ಷದ ನಂತರ ಕಾಣಿಸಿಕೊಂಡಿದ್ದರು. ಈ ಕುರಿತು ತಮ್ಮ ಹುಟ್ಟುಹಬ್ಬದಂದು ಸುದೀಪ್‌ ರಿಯಾಕ್ಟ್ ಮಾಡಿದ್ದರು. ದರ್ಶನ್ ಕುರಿತು ಖುಷಿಯಿಂದಲೇ ಮಾತನಾಡಿದ್ದರು. ಮಾಧ್ಯಮಗಳಲ್ಲಿ ಈ ವಿಷಯ ಸುದ್ದಿ ಆದಾಗ ಖುಷಿ ತಂದಿತ್ತು. ದರ್ಶನ್ ದೊಡ್ಡ ನಟ. ನಾವು ಕಿತ್ತಾಡಿಕೊಂಡಿಲ್ಲ. ನನಗೆ ದರ್ಶನ್ ಮೇಲೆ ಕೋಪವಿಲ್ಲ. ಕಿತ್ತಾಡಿಕೊಂಡ್ರು, ಜಗಳ ಮಾಡಿಕೊಂಡ್ರು ಅನ್ನುವುದು ಕಲ್ಪನೆ ಅಷ್ಟೇ. ಗೋಡೆ ಮುರಿಬೇಕು, ಆದರೆ ಕಲ್ಪನೆ ಇರಬಾರದು. ಇಬ್ಬರೂ ಒಂದೇ ಪಾರ್ಟಿಯಲ್ಲಿ ಭೇಟಿ ಆಗಿದ್ದು ಖುಷಿ ತಂದಿದೆ. ನಂಗೂ ಕೆಲವು ಪ್ರಶ್ನೆಗಳು ಇವೆ. ದರ್ಶನ್‌ಗೂ ಇವೆ. ಇಬ್ಬರೂ ಮುಖಾಮುಖಿ ಆದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗೋದು. ನನ್ನ ಕಣ್ಣಲ್ಲಿ ಕಣ್ಣಿಟ್ಟು ಹೇಳಿದ್ರೆ ಒಪ್ತೀನಿ ಎಂದು ಸುದೀಪ್‌ ಹೇಳಿದ್ದರು. ಇದೀಗ ಮತ್ತೆ ದರ್ಶನ್‌ ಬಗ್ಗೆ ಸುದೀಪ್‌ ಮಾತನಾಡಿದ್ದಾರೆ.

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿದೆ.ಅಂದಹಾಗೇ ʻಮ್ಯಾಕ್ಸ್ʼ ಕಿಚ್ಚ ನಟನೆಯ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಈ ಚಿತ್ರದ ಮೊದಲ ಗ್ಲಿಂಪ್ಸ್ ಫ್ಯಾನ್ಸ್ಗೆ ಇಷ್ಟ ಆಗಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ʻಮ್ಯಾಕ್ಸ್ʼ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭವಾಗಿದ್ದು, ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ.ಕಾಲಿವುಡ್‌ನ ಖ್ಯಾತ ಡೈರೆಕ್ಟರ್‌ ವಿಜಯ್ ಕಾರ್ತಿಕೇಯ ನಿರ್ದೇಶದ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ನಟಿಸಿದ್ದು, ವಿಭಿನ್ನ ಕಥೆಯಲ್ಲಿ ಸುದೀಪ್ ಜೀವತುಂಬಿದ್ದಾರೆ.

ಮ್ಯಾಕ್ಸ್‌ ಚಿತ್ರದಲ್ಲಿ ದೊಡ್ಡ ತಾರಾಂಗಣವೇ ಇರಲಿದ್ದು, ಇದರಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್‌, ಕಾಮರಾಜ್, ಸುಕೃತಾ ವಾಗ್ಲೆ ಸೇರಿದಂತೆ ಹಲವರು ನಟಿಸಿದ್ದಾರೆ. ಇದು ಸಾಹಸಮಯ ಚಿತ್ರವಾಗಿದ್ದು ಮತ್ತು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪ್ಪುಲಿ ಎಸ್ ಥಾನು ಹಣ ಹಾಕಿದ್ದಾರೆ.

Exit mobile version