ವಿದೇಶಿ ಪ್ರೇಕ್ಷಕರೇಕೆ RRR Cinema ಇಷ್ಟಪಡುತ್ತಿದ್ದಾರೆ? ನಿರ್ದೇಶಕ ರಾಜಮೌಳಿ ಹೇಳೋದೇನು? - Vistara News

ಟಾಲಿವುಡ್

ವಿದೇಶಿ ಪ್ರೇಕ್ಷಕರೇಕೆ RRR Cinema ಇಷ್ಟಪಡುತ್ತಿದ್ದಾರೆ? ನಿರ್ದೇಶಕ ರಾಜಮೌಳಿ ಹೇಳೋದೇನು?

ನೆಟ್‌ಫ್ಲಿಕ್ಸ್‌ನಲ್ಲಿ ಆರ್‌ಆರ್‌ಆರ್ ಬಿಡುಗಡೆಯಾಗುತ್ತಿದ್ದಂತೆ ಪಶ್ಚಿಮ ರಾಷ್ಟ್ರಗಳಿಂದ ಆರ್‌ಆರ್‌ಆರ್ ಸಿನಿಮಾಗೆ (RRR Cinema) ಅತ್ಯುತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಇದಕ್ಕೇನು ಕಾರಣ?

VISTARANEWS.COM


on

RRR Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದಲ್ಲಿ ಬಿಡುಗಡೆಯಾಗಿ ಭಾರೀ ಜನಪ್ರಿಯತೆಯನ್ನು ಗಳಿಸಿಕೊಂಡಿರುವ ಆರ್‌ಆರ್‌ಆರ್ (RRR Cinema) ಚಿತ್ರವು ಈಗ ಪಶ್ಚಿಮ ರಾಷ್ಟ್ರಗಳಲ್ಲಿ ಅದೇ ಹವಾ ಸೃಷ್ಟಿಸುತ್ತಿದೆ. ಈ ಚಿತ್ರಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಿದೆ. ವಿಶೇಷವಾಗಿ ಡಿಜಿಟಲ್ ವೇದಿಕೆಗಳಲ್ಲಿ ಬಿಡುಗಡೆಯಾದ ಬಳಿಕವಂತೂ ಆರ್ ಆರ್ ಆರ್ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಹಾಲಿವುಡ್ ಸೇರಿದಂತೆ ಹಲವು ಚಿತ್ರರಂಗದ ಪ್ರಮುಖರು ಎಸ್ ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರವನ್ನು ಮುಕ್ತ ಕಂಠದಿಂದ ಪ್ರಶಂಸಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರು, ನನಗೂ ಕೂಡ ಇದು ಆಶ್ಚರ್ಯವನ್ನುಂಟು ಮಾಡಿದೆ. ಜಗತ್ತಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿದ್ದಾರೆ. ಹಾಗಾಗಿ, ಎಲ್ಲೆಲ್ಲಿ ಭಾರತೀಯರಿದ್ದಾರೆ ಅಲ್ಲೆಲ್ಲ ಸಿನಿಮಾ ಚೆನ್ನಾಗಿ ಹೋಗಬಹುದು ಎಂದುಕೊಂಡಿದ್ದೆ. ಆದರೆ, ಪಶ್ಚಿಮದ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ಬರಲಾರಂಭಿಸಿದೆ. ನಿಜವಾಗಿಯೂ ನಾನು ಇದನ್ನು ನಿರೀಕ್ಷಿಸರಲಿಲ್ಲ ಎಂದು ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

ಆರ್ ಆರ್ ಆರ್ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಬಳಿಕ ಹಾಲಿವುಡ್‌ ಪ್ರಮುಖರಾದ ಜೇಮ್ಸ್ ಗನ್, ಡ್ಯಾನಿ ಡಿವೆಟೋ ಸೇರಿದಂತೆ ಜಗತ್ತಿನಾದ್ಯಂತ ಸಾಮಾನ್ಯ ಪ್ರೇಕ್ಷಕರು ಭಾರೀ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅಮೆರಿಕ ಮತ್ತು ಕೆನಡಾದಲ್ಲಿ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು. ಎಲ್ಲ ಟಿಕೆಟ್‌ಗಳು ಮಾರಾಟವಾಗಿವೆ. ಮತ್ತೊಂದೆಡೆ, ಆಸ್ಕರ್ ಬೆಸ್ಟ್ ಪಿಕ್ಚರ್ ಕೆಟಗರಿಯಲ್ಲಿ ಆರ್ ಆರ್ ಆರ್ ಚಿತ್ರಕ್ಕಾಗಿ ಕ್ಯಾಂಪೇನ್ ಕೂಡ ನಡೆಯುತ್ತಿದೆ.

ಸಿನಿಮಾದ ಜನಪ್ರಿಯತೆಯಲ್ಲಿ ಕೋವಿಡ್ ಸಾಂಕ್ರಾಮಿಕದ ಪಾತ್ರ ಇರಬಹುದು ಎಂದು ಅನಿಸಿಕೆ ಹಂಚಿಕೊಂಡಿರುವ ರಾಜಮೌಳಿ ಅವರು, ಎಲ್ಲವೂ ಸ್ಥಗಿತಗೊಂಡಾಗ. ಆಗ ಇಡೀ ಜಗತ್ತು ಬೇರೆ ಬೇರೆ ಭಾಷೆಗಳಲ್ಲಿನ ಭಿನ್ನ ಸಂಸ್ಕೃತಿಗಳನ್ನು ಶೋಧಿಸಲಾರಂಭಿಸಿದೆ. ಆರ್‌ಆರ್‌ಆರ್ ಸಿನಿಮಾದಲ್ಲಿನ ಆ್ಯಕ್ಷನ್ ದೃಶ್ಯಗಳು, ಅದರ ನಿಷ್ಪಕ್ಷಪಾತ ಹೀರೋಯಿಂಸ್ ಪ್ರೇಕ್ಷಕರಿಗೆ ಇಷ್ಟವಾಗಿರಬಹುದು. ಇದೇ ಪಶ್ಚಿಮ ರಾಷ್ಟ್ರಗಳಲ್ಲಿ ಸಿನಿಮಾದ ಯಶಸ್ಸಿಗೆ ಕಾರಣವಾಗಿರಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Chhello Show | ಆಸ್ಕರ್‌ ಸ್ಪರ್ಧೆಗೆ ಭಾರತದ ಯಾವ ಚಿತ್ರ ಆಯ್ಕೆ? ಆರ್‌ಆರ್‌ಆರ್, ಕಾಶ್ಮೀರ್ ಫೈಲ್ಸ್ ಅಲ್ಲವೇ ಅಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Samantha Ruth Prabhu: ಮದುವೆ ಗೌನ್‌ ಕತ್ತರಿಸಿ ಹೊಸ ಉಡುಪು ತಯಾರಿಸಿದ ಸಮಂತಾ!

Samantha Ruth Prabhu: ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

VISTARANEWS.COM


on

Samantha Ruth Prabhu repurposes her wedding gown
Koo

ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ ಅವರು ಶೋಭಿತಾ ಧೂಳಿಪಾಲ ಜತೆ ವೆಕೇಶನ್‌ ಮೂಡ್‌ನಲ್ಲಿರುವ ಫೋಟೊ ವೈರಲ್‌ ಆಗಿತ್ತು. ಇದೀಗ ಸಮಂತಾ ಅವರು ತಮ್ಮ ಮದುವೆಯ ಗೌನ್‌ ಹರಿದು ಕಪ್ಪು ಕಾಕ್ಟೈಲ್ ಗೌನ್ ಆಗಿ ( black strapless outfit) ಪರಿವರ್ತಿಸಿ ಧರಿಸಿದ್ದಾರೆ. ಮಾತ್ರವಲ್ಲ ಹೊಸ ಫೋಟೊ ( black cocktail gown ) ಹಂಚಿಕೊಂಡು ‘ಪ್ರೀತಿಯ ಗೌನ್’ ಎಂದು ಕ್ಯಾಪ್ಷನ್‌ ಕೂಡ ಕೊಟ್ಟಿದ್ದಾರೆ. ಈ ಹೊಸ ಗೌನ್‌ವನ್ನು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ.

ಸಮಂತಾ ರುತ್ ಪ್ರಭು ಅವರು ತಮ್ಮ ಮದುವೆಯ ಗೌನ್‌ಗೆ ಹೊಸ ಟಚ್‌ ಕೊಟ್ಟು ಧರಿಸಿದ್ದಾರೆ. ತನ್ನ ಬಿಳಿ ಲೇಸಿ ಮದುವೆಯ ಗೌನ್ ಕತ್ತರಿಸಿ ಹೊಸ ಟಚ್‌ ಕೊಟ್ಟು ಪ್ರಶಸ್ತಿ ಸಮಾರಂಭಕ್ಕಾಗಿ ಧರಿಸಿದ್ದಾರೆ. ಈ ಹೊಸ ಉಡುಪನ್ನು ಧರಿಸಿ ಪೋಸ್‌ ಕೊಟ್ಟಿದ್ದಾರೆ ಸಮಂತಾ. ಇನ್‌ಸ್ಟಾದಲ್ಲಿ ಫೋಟೊಗಳನ್ನು ಹಂಚಿಕೊಂಡು ʻನನ್ನ ಪ್ರೀತಿಯ ಗೌನ್’ ಎಂದು ಸಮಂತಾ ಉಲ್ಲೇಖಿಸಿದ್ದಾರೆ.

ನಾಗ ಚೈತನ್ಯ ಅವರೊಂದಿಗೆ ಕ್ರಿಶ್ಚಿಯನ್ ಸಂಪ್ರದಾಯದಲ್ಲಿ (Christian wedding ceremony) ಮದುವೆಯಾಗುವಾಗ ಸಮಂತಾ ಈ ಬಿಳಿ ಗೌನ್ ಧರಿಸಿದ್ದರು. 2017 ರಲ್ಲಿ ಗೋವಾದಲ್ಲಿ ಕ್ರಿಶ್ಚಿಯನ್ ಮತ್ತು ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾಗಿದ್ದರು. ನಾಲ್ಕು ವರ್ಷಗಳ ನಂತರ, ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್‌ ಪಡೆದುಕೊಂಡರು. ಇದೀಗ ಅದೇ ಬಿಳಿ ಗೌನ್‌ ಅನ್ನು ಹೊಸ ರೂಪದಲ್ಲಿ ಮರು ಬಳಕೆ ಮಾಡಿದ್ದಾರೆ.

ಇದನ್ನೂ ಓದಿ: Samantha Ruth Prabhu: ಫಾಲೋವರ್ಸ್‌ಗಳನ್ನು ದಾರಿ ತಪ್ಪಿಸಿದ್ರಾ ಸಮಂತಾ? ವೈದ್ಯರಿಂದ ಸಖತ್‌ ಕ್ಲಾಸ್‌!

ಫೋಟೊ ಹಂಚಿಕೊಂಡ ಸಮಂತಾ ʻʻನಾನು ಇಂದು ಧರಿಸಿರುವ ಉಡುಗೆ ನನ್ನ ಪ್ರೀತಿಯ ಗೌನ್ ಆಗಿದೆ. ನನ್ನ ಹಳೆಯ ಬಟ್ಟೆಗಳನ್ನು ಮರುಬಳಕೆ ಮಾಡುವುದು ಮೊದಲಿಂದಲೂ ನನಗಿರುವ ಅಭ್ಯಾಸʼʼಎಂದು ಬರೆದುಕೊಂಡಿದ್ದಾರೆ. ಸಮಂತಾ ಅವರ ಆಪ್ತ ಸ್ನೇಹಿತರಾದ ಡಿಸೈನರ್ ಕ್ರೇಶಾ ಬಜಾಜ್ ಅವರು ಈ ಗೌನ್‌ವನ್ನು ಸ್ಟ್ರಾಪ್‌ಲೆಸ್ ಡ್ರೆಸ್ ಆಗಿ ಪರಿವರ್ತಿಸಿದವರು. ಸಮಂತಾ ಅವರ ಮದುವೆಯ ಗೌನ್‌ ಕೂಡ ಇವರೇ ವಿನ್ಯಾಸಗೊಳಿಸಿದ್ದರು.

ಸಿನಿಮಾ ವಿಚಾರಕ್ಕೆ ಬಂದರೆ, ಸಮಂತಾ ರುತ್ ಪ್ರಭು ‘ಸಿಟಾಡೆಲ್: ಹನಿ ಬನ್ನಿ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ರಾಜ್ ಮತ್ತು ಡಿಕೆ ನಿರ್ದೇಶನದ ಈ ಸಿರೀಸ್‌ನಲ್ಲಿ ವರುಣ್ ಧವನ್ ಕೂಡ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಇದೀಗ ನಟನೆಗೆ ವಿರಾಮ ನೀಡಿ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ.

Continue Reading

South Cinema

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Tamannaah Bhatia: ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು. ಇದೀಗ ನಟಿ ತಮನ್ನಾಗೆ ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ.

VISTARANEWS.COM


on

Tamannaah Bhatia Summoned in Illegal IPL Streaming Case
Koo

ಮುಂಬೈ: ಫೇರ್‌ಪ್ಲೇ ಆ್ಯಪ್‌ನಲ್ಲಿ ಅಕ್ರಮ ಐಪಿಎಲ್ ಪಂದ್ಯಗಳ ಸ್ಟ್ರೀಮಿಂಗ್ (Illegal IPL Streaming Case) ಪ್ರಕರಣದಲ್ಲಿ ಟಾಲಿವುಡ್‌ ನಟಿ ತಮನ್ನಾ ಭಾಟಿಯಾ (Tamannaah Bhatia) ಹೆಸರು ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ಮಹಾರಾಷ್ಟ್ರ ಸೈಬರ್ ಸೆಲ್ (Maharashtra Cyber Cell ) ವಿಚಾರಣೆಗೆ ಕರೆಸಿದೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಆದೇಶ ನೀಡಲಾಗಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್ ಹೆಸರು ಕೂಡ ಈ ಮುಂಚೆ ಕೇಳಿಬಂದಿತ್ತು.

ಫೇರ್‌ಪ್ಲೇ ಆ್ಯಪ್‌ನಲ್ಲಿ (Fairplay App) ಐಪಿಎಲ್ 2023ರ ಅಕ್ರಮ ಸ್ಟ್ರೀಮಿಂಗ್‌ಗೆ ಸಂಬಂಧಿಸಿದಂತೆ ವಯಾಕಾಮ್‌ಗೆ ಕೋಟ್ಯಂತರ ರೂ. ನಷ್ಟ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸೈಬರ್ ಸೆಲ್‌ ನಟಿ ತಮನ್ನಾ ಭಾಟಿಯಾ ಅವರನ್ನು ವಿಚಾರಣೆಗೆ ಕರೆದಿದೆ. ಏಪ್ರಿಲ್ 29ರಂದು ಮಹಾರಾಷ್ಟ್ರ ಸೈಬರ್‌ಗೆ ಹಾಜರಾಗುವಂತೆ ನಟಿಗೆ ತಿಳಿಸಲಾಗಿದೆ ಎಂದು ಎಎನ್‌ಐ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಏಪ್ರಿಲ್ 23ರಂದು ನಟ ಸಂಜಯ್ ದತ್ ಅವರಿಗೂ ಈ ಸಂಬಂಧ ಸಮನ್ಸ್ ನೀಡಲಾಗಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ತಾವು ಭಾರತದಲ್ಲಿ ಇಲ್ಲ ಎಂದು ವಿಚಾರಣೆಗೆ ಹಾಜಾರಾಗಲು ಹೊಸ ಡೇಟ್‌ ನೀಡಲು ಕೋರಿದ್ದರು.

ಇದನ್ನೂ ಓದಿ: Tamannaah Bhatia : ಪಾಕ್​ ಕ್ರಿಕೆಟಿಗ ರಜಾಕ್ ಜತೆ ಚಿನ್ನದ ಮಳಿಗೆಗೆ ಹೋದ ಕಹಿ ಘಟನೆ ನೆನೆದ ತಮನ್ನಾ

ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಬೆಟ್ಟಿಂಗ್‌ ಅಪ್ಲಿಕೇಶನ್‌ ಆಗಿದೆ. ವಯಾಕಾಮ್‌ 18 ಐಪಿಎಲ್‌ ಅಧಿಕೃತ ಪ್ರಸಾರ ಹಕ್ಕುಗಳನ್ನು ಹೊಂದಿದೆ. ಬೆಟ್ಟಿಂಗ್ ಅಪ್ಲಿಕೇಶನ್ ಫೇರ್ ಪ್ಲೇ ಪ್ಲಾಟ್‌ಫಾರ್ಮ್ ಅಕ್ರಮವಾಗಿ ಪಂದ್ಯಗಳನ್ನು ಸ್ಟ್ರೀಮ್ ಮಾಡುತ್ತಿದೆ ಎಂದು ವಯಾಕಾಮ್‌ ಎಫ್‌ಐಆರ್‌ ದಾಖಲಿಸಿತ್ತು . ವಯಾಕಾಮ್‌ 18ಗೆ 100 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಾಗಿದೆ. ಎಫ್‌ಐಆರ್ ದಾಖಲಿಸಿದ ಬಳಿಕ ಬಾದ್‌ಶಾ, ಸಂಜಯ್ ದತ್, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ತಮನ್ನಾ ಸೇರಿದಂತೆ ಹಲವಾರು ತಾರೆಯರನ್ನು ವಿಚಾರಣೆಗೆ ಕರೆಯಲಾಯಿದೆ ಎಂದು ವರದಿಯಾಗಿದೆ. ಡಿಸೆಂಬರ್ 2023 ರಲ್ಲಿ, ಬೆಟ್ಟಿಂಗ್ ಅಪ್ಲಿಕೇಶನ್‌ನ ಉದ್ಯೋಗಿಯನ್ನು ಬಂಧಿಸಲಾಯಿತ್ತು.

Continue Reading

ಟಾಲಿವುಡ್

Kiara Advani: ಪ್ರಭಾಸ್ ನಟನೆಯ ʻಸಲಾರ್ 2ʼ ಸಿನಿಮಾದಲ್ಲಿ ಕಿಯಾರಾ ಆಡ್ವಾಣಿ?

Kiara Advani: ಪ್ರಶಾಂತ್ ನೀಲ್ ನಿರ್ದೇಶನದ, ʻಸಲಾರ್ ಭಾಗ 1ʼ (Salaar Part 1: Ceasefire ) ಡಿಸೆಂಬರ್ 2023ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಪ್ರಭಾಸ್ ಜತೆಗೆ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಕೂಡ ನಟಿಸಿದ್ದರು. ಈ ಚಿತ್ರ ವಿಶ್ವಾದ್ಯಂತ 500 ಕೋಟಿ ರೂ. ಗಳಿಕೆ ಕಂಡಿತ್ತು. ಇದೀಗ ಕಿಯಾರ ಸಲಾರ್‌ 2ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಚಿತ್ರದಲ್ಲಿ ಪ್ರಭಾಸ್ ಜತೆ ವಿಶೇಷ ಹಾಡಿನಲ್ಲಿ ಕಿಯಾರಾ ಆಡ್ವಾಣಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ನಟಿಯಾಗಲಿ, ಚಿತ್ರತಂಡವಾಗಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

VISTARANEWS.COM


on

Kiara Advani Joins Salaar 2
Koo

ಬೆಂಗಳೂರು: ಕಿಯಾರಾ ಆಡ್ವಾಣಿ (Kiara Advani) ಸೌತ್‌ ಸಿನಿಮಾಗಳಿಗೆ ಭರ್ಜರಿ ಎಂಟ್ರಿ ಕೊಡುತ್ತಿದ್ದಾರೆ. ಈಗಾಗಲೇ ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಎಸ್‌. ಶಂಕರ್‌ ಅವರ ‘ಗೇಮ್‌ ಚೇಂಜರ್‌’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇದೀಗ ನಟಿ ಶೀಘ್ರದಲ್ಲೇ ಪ್ರಭಾಸ್ ನಟನೆಯ ʻಸಲಾರ್ 2ʼ ( Prabhas’ Salaar 2) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಪ್ರಮುಖ ಪಾತ್ರದಲ್ಲಿ ನಟಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಚಿತ್ರದಲ್ಲಿ ಪ್ರಭಾಸ್ ಜತೆ ವಿಶೇಷ ಹಾಡಿನಲ್ಲಿ ಕಿಯಾರಾ ಆಡ್ವಾಣಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ನಟಿಯಾಗಲಿ, ಚಿತ್ರತಂಡವಾಗಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಪ್ರಶಾಂತ್ ನೀಲ್ ನಿರ್ದೇಶನದ, ʻಸಲಾರ್ ಭಾಗ 1ʼ (Salaar Part 1: Ceasefire ) ಡಿಸೆಂಬರ್ 2023ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಪ್ರಭಾಸ್ ಜತೆಗೆ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್ ಮತ್ತು ಜಗಪತಿ ಬಾಬು ಕೂಡ ನಟಿಸಿದ್ದರು. ಈ ಚಿತ್ರ ವಿಶ್ವಾದ್ಯಂತ 500 ಕೋಟಿ ರೂ. ಗಳಿಕೆ ಕಂಡಿತ್ತು. ಇದೀಗ ಕಿಯಾರ ಸಲಾರ್‌ 2ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Kiara Advani: ‘ಡಾನ್‌ 3’ ಚಿತ್ರಕ್ಕಾಗಿ ದುಬಾರಿ ಸಂಭಾವನೆ ಪಡೆದ ಕಿಯಾರಾ ಅಡ್ವಾಣಿ

 ‘ಡಾನ್‌ 3’ ಚಿತ್ರದಲ್ಲಿಯೂ ಕಿಯಾರ ನಾಯಕಿ!

ಬಾಲಿವುಡ್‌ನ ಜನಪ್ರಿಯ ನಾಯಕಿ ಕಿಯಾರಾ ಆಡ್ವಾಣಿ ಸದ್ಯ ಬೇಡಿಯಲ್ಲಿರುವ ನಟಿಯರ ಪೈಕಿ ಪ್ರಮುಖವಾಗಿ ಕೇಳಿ ಬರುತ್ತಿರುವ ಹೆಸರು. ಹಿಂದಿಯ ಜತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿಯೂ ಗುರುತಿಸಿಕೊಂಡಿರುವ ಅವರ ಕೈಯಲ್ಲಿ ಈಗ ಹಲವು ಪ್ರಾಜೆಕ್ಟ್‌ಗಳಿವೆ. ಈ ಮಧ್ಯೆ ಅವರು ಬಾಲಿವುಡ್‌ನ ಬಹು ನಿರೀಕ್ಷಿತ ʼಡಾನ್‌ 3ʼ (Don 3) ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಣವೀರ್‌ ಸಿಂಗ್‌ (Ranveer Singh) ಜತೆ ಮೊದಲ ಬಾರಿ ತೆರೆ ಹಂಚಿಕೊಳ್ಳಲಿರುವ ಅವರು ಈ ಚಿತ್ರಕ್ಕಾಗಿ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುಗುತ್ತಿದೆ.

ವರದಿಯೊಂದರ ಪ್ರಕಾರ ಪ್ರರ್ಹಾನ್‌ ಅಖ್ತರ್‌ ನಿರ್ದೇಶನದ ಈ ಚಿತ್ರಕ್ಕೆ ಕಿಯಾರಾ ಬರೋಬ್ಬರಿ 13 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರಂತೆ. ಅಂದರೆ ಇದು ಅವರು ʼವಾರ್‌ 2ʼ ಚಿತ್ರಕ್ಕೆ ಪಡೆದ ಸಂಭಾವನೆಗಿಂತ ಹಲವು ಪಟ್ಟು ಅಧಿಕ ಎನ್ನಲಾಗುತ್ತಿದೆ.

ʼʼಡಾನ್‌ 3ʼ ಸಿನಿಮಾಕ್ಕಾಗಿ ಕಿಯಾರಾ ಅಡ್ವಾಣಿ 13 ಕೋಟಿ ರೂ. ಸಂಭಾವನೆಯ ಬೇಡಿಕೆ ಇಟ್ಟಿದ್ದಾರೆ. ಈ ಚಿತ್ರದಲ್ಲಿ ಅವರು ಹಲವು ಅಪಾಯಕಾರಿ ಆ್ಯಕ್ಷನ್‌ ದೃಶ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಇದಕ್ಕಾಗಿ ದುಬಾರಿ ಸಂಭಾವನೆಯ ಬೇಡಿಕೆ ಸಲ್ಲಿಸಿದ್ದಾರೆ. ಇದು ʼವಾರ್‌ 2ʼ ಚಿತ್ರದಲ್ಲಿ ಪಡೆದ ಸಂಭಾವನೆಗಿಂತ ಎರಡು ಪಟ್ಟು ಅಧಿಕʼʼ ಎಂದು ವರದಿಯೊಂದು ತಿಳಿಸಿದೆ. ಇನ್ನೂ ಈ ಸುದ್ದಿ ಅಧಿಕೃತವಾಗಿ ದೃಢವಾಗಿಲ್ಲ.

ಇದನ್ನೂ ಓದಿ: Comedy Khiladigalu Premier League: ಹೇಗಿರಲಿದೆ ಹೊಸ ಶೋ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ʼ?

2025ರಲ್ಲಿ ತೆರೆ ಕಾಣಲಿರುವ ಈ ಚಿತ್ರ ಆಗಸ್ಟ್‌ನಲ್ಲಿ ಸೆಟ್ಟೇರಲಿದೆ. ಈಗಾಗಲೇ ‘ಡಾನ್‌’ ಸರಣಿಯ ಎರಡೂ ಚಿತ್ರಗಳು ಯಶಸ್ವಿಯಾಗಿರುವುದರಿಂದ ಈ ಮೂರನೇ ಭಾಗ ಕುತೂಹಲ ಮೂಡಿಸಿದೆ. ಅಲ್ಲದೆ ಇದೇ ಮೊದಲ ಬಾರಿಗೆ ರಣವೀರ್‌ ಸಿಂಗ್‌ ಮತ್ತು ಕಿಯಾರಾ ಆಡ್ವಾಣಿ ತೆರೆ ಹಂಚಿಕೊಳ್ಳುತ್ತಿರುವುದು ಕೂಡ ನಿರೀಕ್ಷೆ ಹೆಚ್ಚಿಸಿದೆ.

ಸದ್ಯ ಕಿಯಾರಾ ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಎಸ್‌.ಶಂಕರ್‌ ಅವರ ‘ಗೇಮ್‌ ಚೇಂಜರ್‌’ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಮ್‌ ಚರಣ್‌ ನಾಯಕನಾಗಿರುವ ಈ ಸಿನಿಮಾದಲ್ಲಿ ಅಂಜಲಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಈ ಬಹು ನಿರೀಕ್ಷಿತ ಚಿತ್ರ ಬಿಡುಗಡೆಯಾಗಲಿದೆ. ‘ವಾರ್‌ 2’ ಸಿನಿಮಾದಲ್ಲಿ ನಾಯಕರಾಗಿ ಹೃತಿಕ್‌ ರೋಷನ್‌ ಮತ್ತು ಜೂನಿಯರ್‌ ಎನ್‌ಟಿಆರ್‌ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಕೂಡ ಅಭಿಮಾನಿಳ ಗಮನ ಸೆಳೆದಿದೆ. ಕಿಯಾರಾ ಆಡ್ವಾಣಿ ಕಳೆದ ವರ್ಷ ಫೆಬ್ರವರಿ 7ರಂದು ಬಾಲಿವುಡ್‌ ಸಿದ್ಧಾರ್ಥ್‌ ಮಲ್ಹೋತ್ರಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

Continue Reading

ಟಾಲಿವುಡ್

Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

Pushpa The Rule: ಪುಷ್ಪ 2 ಸಿನಿಮಾ (Pushpa 2) ತೆಲುಗು ಚಿತ್ರರಂಗದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಅಲ್ಲು ಅರ್ಜುನ್ (Allu Arjun) ಹುಟ್ಟುಹಬ್ಬದಂದು ಟೀಸರ್ ಬಿಡುಗಡೆಯಾದಾಗಿನಿಂದ, ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಟಿ-ಸೀರೀಸ್ (T series) ಎಲ್ಲಾ ಭಾಷೆಗಳ ಆಡಿಯೊ ಹಕ್ಕನ್ನು ಪಡೆದಿರುವುದು ಗೊತ್ತಿರುವ ವಿಚಾರ. ಭೂಷಣ್ ಕುಮಾರ್ ಸಂಸ್ಥೆಯು ಎಲ್ಲಾ ಭಾಷೆಗಳ ಸಂಗೀತ ಹಕ್ಕುಗಳಿಗಾಗಿ ಸುಮಾರು 60 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯಾಗಿದೆ.

VISTARANEWS.COM


on

Pushpa The Rule first single on May 1
Koo

ಬೆಂಗಳೂರು: ಅಲ್ಲು ಅರ್ಜುನ್‌ (Allu Arjun) ಅಭಿನಯದ ಬಹುನಿರೀಕ್ಷಿತ ‘ಪುಷ್ಪ: ದಿ ರೂಲ್’ (Pushpa The Rule) ಸಿನಿಮಾದ ಮೊದಲ ಸಿಂಗಲ್ ಅಂದರೆ ಮೊದಲ ಹಾಡು ‘ಪುಷ್ಪ ಪುಷ್ಪ’ (‘Pushpa Pushpa’) ಮೇ 1ರಂದು ಬಿಡುಗಡೆಯಾಗಲಿದೆ. ಈ ಬಗ್ಗೆ ಅಲ್ಲು ಅರ್ಜುನ್‌ (Pushpa The Rule) ಸೋಷಿಯಲ್‌ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಏಪ್ರಿಲ್ 24 ರಂದು, ಅಲ್ಲು ಅರ್ಜುನ್ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಜತೆಗೆ ‘ಪುಷ್ಪ ಪುಷ್ಪ’ ಟ್ರ್ಯಾಕ್‌ನ ಟೀಸರ್‌ ಶೇರ್‌ ಮಾಡಿಕೊಂಡಿದ್ದಾರೆ. ಮೇ 1ರಂದು ಬೆಳಗ್ಗೆ 11.7ಕ್ಕೆ ‘ಪುಷ್ಪ ಪುಷ್ಪ’ ಸಾಂಗ್‌ ಬಿಡುಗಡೆಯಾಗಲಿದೆ. ಈ ಹಾಡನ್ನು ದೇವಿ ಶ್ರೀ ಪ್ರಸಾದ್ ರಚಿಸಿದ್ದಾರೆ.

‘ಪುಷ್ಪ 2’ ಸಿನಿಮಾದ ಆಡಿಯೋ ಬಿಡುಗಡೆಗೆ ಸಿದ್ಧತೆ ನಡೆದಿದೆ. ಒಂದೊಂದೇ ಹಾಡುಗಳನ್ನು ರಿಲೀಸ್​ ಮಾಡಲು ಸಕಲ ತಯಾರಿ ಆಗಿದೆ. ಈಗ ಮೊದಲ ಹಾಡಿನ ಲಿರಿಕಲ್ ವಿಡಿಯೊ ಮೇ 1ಕ್ಕೆ ಅನಾವರಣ ಆಗಲಿದೆ.

ಪುಷ್ಪ 2 ಸಿನಿಮಾ (Pushpa 2) ತೆಲುಗು ಚಿತ್ರರಂಗದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಅಲ್ಲು ಅರ್ಜುನ್ (Allu Arjun) ಹುಟ್ಟುಹಬ್ಬದಂದು ಟೀಸರ್ ಬಿಡುಗಡೆಯಾದಾಗಿನಿಂದ, ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಟಿ-ಸೀರೀಸ್ (T series) ಎಲ್ಲಾ ಭಾಷೆಗಳ ಆಡಿಯೊ ಹಕ್ಕನ್ನು ಪಡೆದಿರುವುದು ಗೊತ್ತಿರುವ ವಿಚಾರ. ಭೂಷಣ್ ಕುಮಾರ್ ಸಂಸ್ಥೆಯು ಎಲ್ಲಾ ಭಾಷೆಗಳ ಸಂಗೀತ ಹಕ್ಕುಗಳಿಗಾಗಿ ಸುಮಾರು 60 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ವರದಿಯಾಗಿದೆ. ಈಗ ಚಿತ್ರದ ಆಡಿಯೊ ಹಕ್ಕುಗಳು ಬರೋಬ್ಬರಿ 60 ಕೋಟಿ ರೂ . ಮಾರಟವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Rashmika Mandanna: ಪುಷ್ಪ 2ನಲ್ಲಿ ಶ್ರೀವಲ್ಲಿ 2.0 ಲೆವೆಲ್‌ಗೆ ಇದ್ದಾಳಂತೆ! ರಶ್ಮಿಕಾ ಹೇಳಿದ್ದೇನು?

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

ಪುಷ್ಪʼ ಚಿತ್ರದ ಮೊದಲ ಭಾಗದಲ್ಲಿ ಅಲ್ಲು ಅರ್ಜುನ್‌ ಜತೆಗೆ ರಶ್ಮಿಕಾ ಮಂದಣ್ಣ ಕೂಡ ಅಭಿಮಾನಿಗಳ ಗಮನ ಸೆಳೆದಿದ್ದರು. ನಾಯಕ ಪುಷ್ಪ ರಾಜ್‌ನ ಮನದನ್ನೆ ಶ್ರೀವಲ್ಲಿಯಾಗಿ ಮೋಡಿ ಮಾಡಿದ್ದರು. ಇತ್ತೀಚೆಗೆ ‘ಪುಷ್ಪ 2’ ಸೆಟ್‌ನಲ್ಲಿ ಹಣೆಯ ಮೇಲೆ ಸಿಂಧೂರವಿಟ್ಟು ಕೆಂಪು ಸೀರೆಯನ್ನು ಧರಿಸಿ ರಶ್ಮಿಕಾ ನಟಿಸುತ್ತಿರುವ ಫೋಟೊ ಮತ್ತು ವಿಡಿಯೊ ಲೀಕ್‌ ಆಗಿತ್ತು. ಸದ್ಯ ಅವರ ಪಾತ್ರದ ಬಗ್ಗೆಯೂ ನಿರೀಕ್ಷೆ ಬೆಟ್ಟದಷ್ಟಾಗಿದೆ. ಇನ್ನು ‘ಪುಷ್ಪ 2’ ಸಿನಿಮಾದಲ್ಲಿ ಫಹಾದ್‌ ಫಾಸಿಲ್‌, ಪ್ರಕಾಶ್‌ ರೈ, ರಾವ್‌ ರಮೇಶ್‌, ಡಾಲಿ ಧನಂಜಯ್‌, ಜಗಪತಿ ಬಾಬು, ಅನಸೂಯಾ ಭಾರದ್ವಾಜ್‌ ಮತ್ತಿತರರು ಅಭಿನಯಿಸುತ್ತಿದ್ದಾರೆ.

Continue Reading
Advertisement
Hassan News
ಕರ್ನಾಟಕ2 mins ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ22 mins ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕರ್ನಾಟಕ39 mins ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ1 hour ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ2 hours ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ2 hours ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ2 hours ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ3 hours ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 20243 hours ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ3 hours ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ11 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202411 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202412 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ18 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌