Yash as Ravan : ರಾವಣನಾಗಿ ತೆರೆ ಮೇಲೆ ಬರ್ತಾರಾ ಯಶ್‌? ರಾಮನಾದ ರಣಬೀರ್‌ ಜತೆ ಕದನಕ್ಕೆ ಬೀಳ್ತಾರಾ? - Vistara News

ಸಿನಿಮಾ

Yash as Ravan : ರಾವಣನಾಗಿ ತೆರೆ ಮೇಲೆ ಬರ್ತಾರಾ ಯಶ್‌? ರಾಮನಾದ ರಣಬೀರ್‌ ಜತೆ ಕದನಕ್ಕೆ ಬೀಳ್ತಾರಾ?

ಯಶ್‌ ಅವರು ಬಾಲಿವುಡ್‌ನ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ (Yash as Ravan) ನಟಿಸಲಿದ್ದಾರೆ ಎನ್ನುವ ವದಂತಿಗಳು ಕೇಳಿಬರುತ್ತಿವೆ. ಆದರೆ ಅದನ್ನು ಮೂಲಗಳು ಅಲ್ಲಗೆಳೆದಿವೆ.

VISTARANEWS.COM


on

yash to act as ravan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಶ್‌ ಕನ್ನಡ ಚಿತ್ರರಂಗವನ್ನು ಪ್ಯಾನ್‌ ಇಂಡಿಯಾ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ಯಶಸ್ವಿ ನಟ. ಕೆಜಿಎಫ್‌ 2 ಸಿನಿಮಾ ಆದನಂತರ ಅವರು ಮತ್ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವುದು ಇದುವರೆಗೂ ತಿಳಿದುಬಂದಿಲ್ಲ. ಅವರ ಮುಂದಿನ ಸಿನಿಮಾಕ್ಕಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿರುವುದಂತೂ ಸತ್ಯ. ಈ ಕುತೂಹಲದ ನಡುವೆಯೇ ಯಶ್‌ ಅವರು ಬಾಲಿವುಡ್‌ನ ರಣಬೀರ್‌ ಮತ್ತು ಆಲಿಯಾ ಭಟ್‌ ರಾಮ-ಸೀತೆಯಾಗಿ ನಟಿಸಲಿರುವ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ (Yash as Ravan) ನಟಿಸಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿವೆ.

ಹೌದು. ಯಶ್‌ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಎಂದು ಕೆಲವು ಕಡೆ ಸುದ್ದಿಗಳು ಹರಿದಾಡಿದೆ. ಈ ಬಗ್ಗೆ ಕೆಲವು ಮೂಲಗಳು ಮಾಹಿತಿ ಕೊಟ್ಟಿದ್ದು, ಕೆಲವರು ಇದು ವದಂತಿ ಎನ್ನುತ್ತಿದ್ದಾರೆ. ಸದ್ಯ ಯಶ್‌ ಅವರು ತಮ್ಮ ಅಭಿಮಾನಿಗಳ ಸದಭಿರುಚಿಗೆ ತಕ್ಕಂತಹ ಸಿನಿಮಾಗಳನ್ನು ಮಾತ್ರವೇ ಮಾಡಲು ಬಯಸುತ್ತಿದ್ದಾರೆ. ಅವರನ್ನು ಅಭಿಮಾನಿಗಳು ಹೀರೋ ಆಗಿಯೇ ನೋಡಲು ಬಯಸುತ್ತಾರೆ. ಖಳನಟನಾಗಿ ನೋಡಲುಬಯಸುವುದಿಲ್ಲ. ಹಾಗಾಗಿ ಯಶ್‌ ರಾಮಾಯಣ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿಲ್ಲ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Actor Yash: ರಾಮಾಯಣ ಆಧರಿಸಿದ ಸಿನಿಮಾದಲ್ಲಿ ರಣಬೀರ್‌, ಆಲಿಯಾ; ರಾಕಿಂಗ್‌ ಸ್ಟಾರ್‌ ಯಶ್‌ ಪಾತ್ರವೇನು?
ಇನ್ನೊಂದೆಡೆ ಯಶ್‌ “19ʼ ಸಿನಿಮಾದ ಬಗ್ಗೆಯೂ ಮಾತುಕತೆ ಜೋರಾಗಿಯೇ ನಡೆಯುತ್ತಿದೆ. ಆದರೆ ಈ ಸಿನಿಮಾದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಂದಿಲ್ಲ. ನಿರ್ದೇಶಕ ನರ್ತನ್‌ ಅವರು ಈ ಸಿನಿಮಾ ನಿರ್ದೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಸದ್ಯ ನರ್ತನ್‌ ಅವರು ಶಿವರಾಜ್‌ ಕುಮಾರ್‌ ಅವರೊಂದಿಗೆ ಸಿನಿಮಾವೊಂದರಲ್ಲಿ ಬಿಜಿ ಇದ್ದಾರೆ. “19ʼ ಸಿನಿಮಾದ ಸ್ಕ್ರಿಪ್ಟ್‌ ಕೂಡ ಅಂತಿಮ ಹಂತಕ್ಕೆ ತಲುಪಿದೆ ಎನ್ನಲಾಗುತ್ತಿತ್ತು. ಆದರೆ ಅದೇ ಕಥಾಹಂದರವಿರುವ ಮತ್ತೊಂದು ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿರುವುದರಿಂದ ಸಿನಿಮಾ ಸ್ಕ್ರಿಪ್ಟ್‌ ಅನ್ನೇ ಬದಲಿಸಲಾಗುತ್ತಿದೆ ಎಂದೂ ಸುದ್ದಿಗಳಿವೆ.‌

ಇದರ ಮಧ್ಯದಲ್ಲೇ ಯಶ್‌ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್‌ ಅವರ ಗ್ಯಾಂಗ್‌ಸ್ಟರ್‌ ಸಿನಿಮಾವೊಂದರಲ್ಲಿ ನಟಿಸಲಿದ್ದಾರೆ ಎಂದೂ ಸುದ್ದಿಗಳಿವೆ. ಈ ಬಗ್ಗೆ ಕೂಡ ಎಲ್ಲಿಯೂ ಅಧಿಕೃತ ಮಾಹಿತಿ ಸಿಕ್ಕಿಲ್ಲ. ನಟಿ ರೀಮಾ ಕಲ್ಲಿಂಗಲ್‌ ಅವರು ಮಾತ್ರವೇ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಯಶ್‌ ಅವರೊಂದಿಗೆ ಕೆಲಸ ಮಾಡಲು ಉತ್ಸುಕರಾಗಿರುವುದಾಗಿ ಹೇಳಿಕೊಂಡಿದ್ದರು.

ಕೆಜಿಎಫ್‌ 2 ಚಿತ್ರದ ದೃಶ್ಯ

ಯಶ್‌ ಅವರು ಕೊನೆಯದಾಗಿ ನಟಿಸಿದ ಕೆಜಿಎಫ್‌ 2 ಸಿನಿಮಾದ ದೊಡ್ಡ ಹಿಟ್‌ ಆಗಿತ್ತು. ಆ ಸಿನಿಮಾ ಜಾಗತಿಕವಾಗಿ 1000 ಕೋಟಿ ರೂ.ಗಳನ್ನು ಗಳಿಸಿತು. ಪ್ರಪಂಚದಾದ್ಯಂತ 10,000 ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿತ್ತು. ಸಿನಿಮಾ ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಡಬ್‌ ಆಗಿ ಹಿಟ್‌ ಆಯಿತು. ಹಲವು ದಾಖಲೆಗಳನ್ನು ಬರೆಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

Bhoomi Shetty:  ಭೂಮಿ ಆಗಾಗ ತಮ್ಮ ಡ್ರೆಸ್‌ ಹಾಗೂ ಸ್ಟೈಲ್‌ ಮೂಲಕ ಟ್ರೋಲ್‌ಗೆ ಗುರಿಯಾಗುತ್ತಲೇ ಇರುತ್ತಾರೆ. ಭೂಮಿ ಶೆಟ್ಟಿ ಈ ಹಿಂದೆ ಪಾರ್ಟಿ ವೇರ್‌ನಲ್ಲಿ ಕಂಡಿದ್ದರು. ಡ್ರೆಸ್ ನಲ್ಲಿ ಎದೆ ಸೀಳು ಎದ್ದು ಕಾಣುತ್ತಿತ್ತು. ಹೀಗಾಗಿ ಭೂಮಿ ತೊಟ್ಟಿರುವ ಡ್ರೆಸ್‌ಗೆ ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ಹೊರ ಹಾಕಿದ್ದರು. ಆದರೀಗ ನಟಿ ಆಫ್ರಿಕನ್‌ ಲುಕ್‌ನಲ್ಲಿ ಕಂಡಿದ್ದಾರೆ.

VISTARANEWS.COM


on

Bhoomi Shetty African braids Look style
Koo

`ಕಿನ್ನರಿ’ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟ ಭೂಮಿ ಶೆಟ್ಟಿಯನ್ನು (Bhoomi Shetty) ಪ್ರೇಕ್ಷಕರು ಮೆಚ್ಚಿದ್ದರು. ಕುಂದಾಪುರದ ಭೂಮಿ ಆಗಾಗ ಬೈಕ್ ರೈಡ್ ಮೂಲಕ ಹಳ್ಳಿ ಶೈಲಿಯ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

ಆಗಾಗ ಹಾಟ್‌ ಅವತಾರ ತಾಳುವ ಭೂಮಿ ಇದೀಗ ಹೊಸ ಲುಕ್‌ನೊಂದಿಗೆ ಕಂಡಿದ್ದಾರೆ. ಆಫ್ರಿಕನ್‌ ಸ್ಟೈಲ್‌ನಲ್ಲಿ ಭೂಮಿ ಸಖತ್‌ ಹಾಟ್‌ ಆಗಿ ಪೋಸ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: Bhoomi Shetty: ಎದೆ ಸೀಳು ಎದ್ದು ಕಾಣುವಂತೆ ಡ್ರೆಸ್‌ ಧರಿಸಿದ ಭೂಮಿ ಶೆಟ್ಟಿ; ನೆಟ್ಟಿಗರ ತರಾಟೆ!

ಭೂಮಿ ಇದೀಗ ದಕ್ಷಿಣ ಆಫ್ರಿಕಾ ಸ್ಪೆಷಲ್‌ ಸ್ಟೈಲ್‌ ಬ್ರೇಡ್ಸ್‌( braids) ಸ್ಟೈಲ್‌ ಮಾಡಿಸಿಕೊಂಡಿದ್ದಾರೆ. ಈ ಬ್ರೇಡ್ಸ್‌ ಸ್ಟೈಲ್‌ ಕುರಿತು ಇನ್‌ಸ್ಟಾದಲ್ಲಿ ವಿವರಣೆ ಕೂಡ ಕೊಟ್ಟಿದ್ದಾರೆ ಭೂಮಿ.

ಭೂಮಿ ಹೊಸ ಲುಕ್‌ ಪೋಸ್ಟ್‌ ಮಾಡಿ ಈ ರೀತಿ ಬರೆದುಕೊಂಡಿದ್ದಾರೆ ʻನನಗೆ, ಈ ಸ್ಟೈಲ್‌ ಸಾಂಸ್ಕೃತಿಕವಾಗಿ ಮೆಚ್ಚುಗೆಯಾಗಿರಬಹುದು. “ಬಾಕ್ಸ್ ಬ್ರೇಡ್‌ʼ ಸ್ಟೈಲ್‌ ದಕ್ಷಿಣ ಆಫ್ರಿಕಾದಲ್ಲಿ ಹುಟ್ಟಿಕೊಂಡಿದ್ದು. ಈ ರೀತಿ ಕೂದಲನ್ನು ಮಾಡಿಕೊಳ್ಳಲು ಸುಮಾರು 5-8 ಗಂಟೆಗಳವರೆಗೆ ಬೇಕಾಗುತ್ತದೆ. ಈ ಬ್ರೇಡ್‌ ಸ್ಟೈಲ್‌ ಯಾರನ್ನು ನಿಭಾಯಿಸುತ್ತಿದ್ದರೋ ಅವರನ್ನು ಶ್ರೀಮಂತ ಮಹಿಳೆ ಎಂದು ಹಲವರು ನಂಬಿದ್ದರು. ಬ್ರೇಡ್‌ಗಳು ಕಪ್ಪು ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬ್ರೇಡ್‌ಗಳು ಸಾವಿರಾರು ವರ್ಷಗಳ ಹಿಂದಿನದು ಎಂದು ಇತಿಹಾಸದಲ್ಲಿದೆ. ಈ ರೀತಿ ಸ್ಟೈಲ್‌ಗಳು ಸಾಮಾಜಿಕ ಪದ್ಧತಿಗಳನ್ನು ಎತ್ತಿಹಿಡಿಯುವುದು ಮಾತ್ರವಲ್ಲದೆ ಅವು ಆಗಿನ ಸಮಯದಲ್ಲಿ ಫ್ಯಾಶನ್ ಆಗಿದ್ದವು. ಆಫ್ರಿಕನ್ ಮಹಿಳೆಯರು ತಮ್ಮ ಕೂದಲನ್ನು ಅಲಂಕರಿಸುವ ವಿಷಯದಲ್ಲಿ ಶ್ರೀಮಂತ ಇತಿಹಾಸವನ್ನು ಹೊಂದಿದ್ದಾರೆ. ನೀವು ಕೇಶವಿನ್ಯಾಸವನ್ನು ಹೊಂದವ ಮೊದಲು ನೀವು ಆಯಾ ಶೈಲಿಯ ಇತಿಹಾಸದ ಬಗ್ಗೆ ತಿಳಿದುಕೊಂಡಿರಬೇಕುʼʼಎಂದು ಬರೆದುಕೊಂಡಿದ್ದಾರೆ.

ಕೆಲವರು ಭೂಮಿಯವರ ಸ್ಟೈಲ್‌ ಇಷ್ಟ ಪಟ್ಟರೆ, ಇನ್ನೂ ಕೆಲವರು ನಟಿಯ ಬಗ್ಗೆ ಕೆಟ್ಟದ್ದಾಗಿ ಕಮೆಂಟ್‌ ಮಾಡಿದ್ದಾರೆ. ಭೂಮಿ ಶೆಟ್ಟಿ ಅವರು ಧಾರಾವಾಹಿ ಮಾತ್ರವಲ್ಲದೇ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಕೂಡ ಭಾಗವಹಿಸಿ ಪ್ರೇಕ್ಷಕರ ಮನಸನ್ನು ಗೆದ್ದಿದ್ದರು.
Continue Reading

ಬಾಲಿವುಡ್

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Swara Bhasker : ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’.ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು.

VISTARANEWS.COM


on

Swara Bhasker reveals big difference between Kangana Ranaut and herself
Koo

ಬೆಂಗಳೂರು: ಕಂಗನಾ ರಣಾವತ್ ( Kangana Ranaut ) ಅವರಿಗೆ ಹಿಂದಿ ಚಲನಚಿತ್ರೋದ್ಯಮದ ಅನೇಕ ನಟಿ ನಟಿಯರ ಜತೆ ವೈಮನಸ್ಸು ಇದೆ. ಅವರಲ್ಲಿ ಒಬ್ಬರು ಸ್ವರಾ ಭಾಸ್ಕರ್ (Swara Bhasker). ಕಂಗನಾ ಅವರು ಸ್ವರಾ ಅವರನ್ನು ‘ಬಿ-ಗ್ರೇಡ್ ನಟಿ’ ಎಂದು ಈ ಹಿಂದೆ ಕರೆದಿದ್ದರು. ನಟಿ ಮತ್ತು ರಾಜಕಾರಣಿ ಸ್ವರಾ ಇದೀಗ ಸಂದರ್ಶನವೊಂದರಲ್ಲಿ ತಮಗೆ ಹಾಗೂ ಕಂಗನಾ ನಡುವೆ ಇರುವ ವ್ಯತ್ಯಾಸದ ಬಗ್ಗೆ ಮಾತನಾಡಿದ್ದಾರೆ.

ಸ್ವರಾ ಮತ್ತು ಕಂಗನಾ ಎರಡು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 2011 ರಲ್ಲಿ ʻತನು ವೆಡ್ಸ್ ಮನು’ ಮತ್ತು 2015 ರಲ್ಲಿ `ತನು ವೆಡ್ಸ್ ಮನು ರಿಟರ್ನ್ಸ್’. ಇತ್ತೀಚಿನ ಸಂದರ್ಶನದಲ್ಲಿ, ಸ್ವರಾ ಅವರಿಗೆ ಕಂಗನಾ ಕುರಿತು ಪ್ರಶ್ನೆ ಎದುರಾಯಿತು. ಆಗ ಸ್ವರಾ ಮಾತನಾಡಿ ʻʻಕಂಗನಾ ಹಾಗೂ ನನಗೆ ಬಹಳಷ್ಟು ವ್ಯತ್ಯಾಸವಿದೆ. ಕಂಗನಾ ಪ್ರತಿ ಬಾರಿ ಸರ್ಕಾರದ ಪರವಾಗಿ ಮಾತ್ರ ಧ್ವನಿ ಎತ್ತುತ್ತಾರೆ. ಆದರೆ ನಾನು ಹಾಗಲ್ಲ. ನಾನು ಯಾವಾಗಲೂ ಅಧಿಕಾರದಲ್ಲಿರುವವರನ್ನು ಪ್ರಶ್ನಿಸಲು ಧ್ವನಿ ಎತ್ತುತ್ತೇನೆʼʼಎಂದರು.

ಇದನ್ನೂ ಓದಿ: Parliament Flashback: ಸೋನಿಯಾ ಗಾಂಧಿ-ಸುಷ್ಮಾ ಸ್ವರಾಜ್‌ ಕದನಕ್ಕೆ ಅಖಾಡವಾಗಿದ್ದ ಬಳ್ಳಾರಿ ಲೋಕಸಭೆ ಕ್ಷೇತ್ರ

ರಾಹುಲ್ ಗಾಂಧಿ ನಾಯಕನಾಗಿ ಇಷ್ಟ

ವಿವಿಧ ರಾಜಕೀಯ ಪಕ್ಷಗಳಿಂದ ಆಫರ್‌ಗಳು ಬರುತ್ತಿರುವ ಬಗ್ಗೆ ಸ್ವರಾ ಮಾತನಾಡಿ ʻನೀವು ಮಾಧ್ಯಮಗಳನ್ನು ನೋಡುವುದಾದರೆ ಅವರ ಪ್ರಕಾರ ನನಗೆ ಹಲವಾರು ಪಕ್ಷಗಳಿಂದ ಆಫರ್‌ಗಳು ಬಂದಿವೆ. ಆದರೆ ಅವೆಲ್ಲ ಸುಳ್ಳು. ನಾನು ರಾಹುಲ್ ಗಾಂಧಿಯನ್ನು ನಾಯಕನಾಗಿ ಇಷ್ಟಪಡುತ್ತೇನೆ. ಅವರ ದೃಷ್ಟಿ, ಅವರು ಧ್ವನಿ ಎತ್ತುವ ಸಮಸ್ಯೆಗಳು ಮತ್ತು ಅವರ ಪ್ರಯತ್ನಗಳು ನಮ್ಮ ದೇಶಕ್ಕೆ ಬಹಳ ಮುಖ್ಯವೆಂದು ನಾನು ಭಾವಿಸುತ್ತೇನೆ. ನಮ್ಮ ದೇಶದ ಬಗ್ಗೆ ಪ್ರೀತಿ ಇರುವ ರಾಜಕಾರಣಿ ಯಾರೇ ಆಗಿರಲಿ ಅವರನ್ನು ನಾನು ಬೆಂಬಲಿಸುತ್ತೇನೆʼʼಎಂದರು.

ಕಂಗನಾ ಹಲವಾರು ಸಂದರ್ಭಗಳಲ್ಲಿ ಸೋಷಿಯಲ್‌ ಮೀಡಿಯಾ ಮೂಲಕ ಸ್ವರಾ ಅವರ ಜತೆ ವಾರ್‌ ಮಾಡಿದ್ದಾರೆ. ಸ್ವರಾ 2023ರಲ್ಲಿ ಸಂದರ್ಶನದ ಸಮಯದಲ್ಲಿ ಕಂಗನಾ ಅವರನ್ನು ಹೊಗಳಿದ್ದು ಇದೆ. ತನು ವೆಡ್ಸ್ ಮನು ಚಿತ್ರೀಕರಣದ ಸಮಯದಲ್ಲಿ ಕಂಗನಾ ಹಾಗೂ ಸ್ವರಾ ಉತ್ತಮ ಸ್ನೇಹಿತರಾಗಿದ್ದರು. ಚಿತ್ರೀಕರಣದ ವೇಳೆ ನನ್ನ ಕೈ ಹಿಡಿದು ನಡೆಸುತ್ತಿದ್ದಳು ಎಂದು ಕಂಗನಾ ಬಗ್ಗೆ ಸ್ವರಾ ಅದೆಷ್ಟೋ ಬಾರಿ ಹೇಳಿಕೊಂಡಿದ್ದೂ ಇದೆ. ಆದರೆ ಬರಬರುತ್ತ ಇಬ್ಬರ ನುಡುವೆ ವೈಮನಸ್ಸು ಹೆಚ್ಚಾಯ್ತು.

ಲೋಕಸಭಾ ಚುನಾವಣೆಗೆ ನಟಿ ಕಂಗನಾ ಅವರು ಗಮನಾರ್ಹ ರಾಜಕೀಯ ಇತಿಹಾಸವನ್ನು ಹೊಂದಿರುವ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸಲು ಆಯ್ಕೆ ಮಾಡಿರುವುದು ಕುತೂಹಲವನ್ನು ಹೆಚ್ಚಿಸುತ್ತಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಮಂಡಿಯಲ್ಲಿ ರಾಜಕೀಯ ರಂಗಕ್ಕೆ ಕಾಲಿಡುತ್ತಿದ್ದ ರಣಾವತ್ ಅವರಿಗೆ ಕಠಿಣ ಸವಾಲನ್ನು ಒಡ್ಡಿತ್ತು. ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಸಾಧಿಸುವ ಗುರಿ ಹೊಂದಿರುವ ಬಿಜೆಪಿ 2019ರಂತೆ ತನ್ನ ಯಶಸ್ಸನ್ನು ಪುನರಾವರ್ತಿಸುವ ಭರವಸೆಯಲ್ಲಿದೆ.

ನಟಿ ಕಂಗನಾ ರಣಾವತ್ ಅವರು ತಮ್ಮ ಮುಂಬರುವ ಚಿತ್ರ ‘ಎಮರ್ಜೆನ್ಸಿ’ ಗಾಗಿ ಸಜ್ಜಾಗುತ್ತಿದ್ದಾರೆ. ಇದು ಅವರ ನಿರ್ದೇಶನಕ ಚೊಚ್ಚಲ ಚಿತ್ರವಾಗಿದೆ. ಹಾಗೇ ನಟಿ ಇತ್ತೀಚೆಗೆ ಅಯೋಧ್ಯೆಯಲ್ಲಿ ಹೊಸದಾಗಿ ಉದ್ಘಾಟಿಸಲಾದ ರಾಮಮಂದಿರಕ್ಕೂ ಭೇಟಿ ನೀಡಿದ್ದಾರೆ.

Continue Reading

ಕಿರುತೆರೆ

Star Suvarna Kannada: ಪ್ರೀತಿಯ ಸ್ವಾದವನ್ನು ಹೊತ್ತು ಬರುತ್ತಿದೆ ಈ ಹೊಸ ಕಥೆ! ʻಜಾನಕಿ ಸಂಸಾರʼ ಯಾವಾಗ?

Star Suvarna Kannada: ʻಸ್ಟಾರ್ ಸುವರ್ಣ ವಾಹಿನಿʼ ಹೊಸ ಕಥೆ ಪ್ರೇಕ್ಷಕರಿಗೆ ಪರಿಚಯಿಸುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ’.ಅಂಜನಾ ಶ್ರೀನಿವಾಸ್ 13 ವರ್ಷಗಳ ಬಳಿಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ‘ಜಾನಕಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೊಸ ಧಾರಾವಾಹಿ “ಜಾನಕಿ ಸಂಸಾರ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

VISTARANEWS.COM


on

Star Suvarna Kannada Janaki Samsara
Koo

ಬೆಂಗಳೂರು: ಕನ್ನಡ ಕಿರುತೆರೆಯ ಕಡಲಲ್ಲಿ ʻಸ್ಟಾರ್ ಸುವರ್ಣ ವಾಹಿನಿʼಯು (Star Suvarna Kannada) ಹೊಸ ಯೋಜನೆಗಳ ಜತೆ ವಿನೂತನ ಪರಿಕಲ್ಪನೆಗಳೊಂದಿಗೆ ಮನರಂಜನೆಯ ಕ್ರಾಂತಿಯನ್ನೇ ಹುಟ್ಟು ಹಾಕಿದೆ. ಈ ಸಾಲಿಗೆ ಸೇರ್ಪಡೆಯಾಗುತ್ತಿರುವ ಹೊಸ ಧಾರಾವಾಹಿ ‘ಜಾನಕಿ ಸಂಸಾರ'(Janaki Samsara Serial).

ಇದೊಂದು ತುಂಬು ಕುಟುಂಬದ ಕಥೆ. ಈ ಮನೆಯ ಹಿರಿ ಸೊಸೆ ಜಾನಕಿ, ಇಡೀ ಸಂಸಾರದ ಹೊಣೆ ಹೊತ್ತವಳು. ಎಷ್ಟೇ ಕಷ್ಟ ಬಂದರು ಎದುರಿಸುವ ಛಲಗಾರ್ತಿ. ವಿದ್ಯಾವಂತೆಯಾಗಿರುವ ಜಾನಕಿ ತನ್ನ ಸಂಸಾರದ ಜತೆ ಉದ್ಯೋಗವನ್ನು ಸರಿ ಸಮಾನಾಗಿ ನಿಭಾಯಿಸುತ್ತಿರುತ್ತಾಳೆ. ಸದಾಕಾಲ ಮನೆ ಮಂದಿಯನ್ನು ಒಗ್ಗಟ್ಟಾಗಿಡಲು ಬಯಸುವ ಜಾನಕಿಯ ಸಂಸಾರಕ್ಕೆ ಮನೆಯೊಡೆಯುವ ವ್ಯಕ್ತಿಯ ಆಗಮನವಾದರೆ, ಮುಂದೆ ಜಾನಕಿ ತನ್ನ ಸಂಸಾರವನ್ನು ಹೇಗೆ ಕಾಪಾಡ್ತಾಳೆ? ಎಂಬುದು ಈ ಧಾರಾವಾಹಿಯ ಮುಖ್ಯ ಕಥಾ ಹಂದರ.

ʻಜಾನಕಿ ಸಂಸಾರ’ ಧಾರಾವಾಹಿಯು ಸುಂದರ ತಾರಾಗಣವನ್ನು ಹೊಂದಿದ್ದು, ಕನ್ನಡಿಗರ ಮನಸು ಕದ್ದ ಕಣ್ಮಣಿ, ‘ಕೃಷ್ಣರುಕ್ಮಿಣಿ’ ಧಾರಾವಾಹಿ ಖ್ಯಾತಿಯ ರುಕ್ಮಿಣಿ ಅಲಿಯಾಸ್ ಅಂಜನಾ ಶ್ರೀನಿವಾಸ್ ಇದ್ದಾರೆ. ಅಂಜನಾ ಶ್ರೀನಿವಾಸ್ ಅವರು 13 ವರ್ಷಗಳ ಬಳಿಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ‘ಜಾನಕಿ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜತೆಗೆ ಸೂರಜ್ ಹೊಳಲು, ಕಾವ್ಯ ಶಾಸ್ತ್ರೀ, ಬಾಲ ನಟಿ ಶ್ರೀ ದಿಶಾ, ಮರೀನ ತಾರಾ, ರವಿ ಭಟ್, ಚಂದನ್ ಸೇರಿದಂತೆ ಇನ್ನು ಅನೇಕ ಅನುಭವಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಹೊಸ ಧಾರಾವಾಹಿ “ಜಾನಕಿ ಸಂಸಾರ” ಇದೇ ಸೋಮವಾರದಿಂದ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

ಸ್ಟಾರ್ ಸುವರ್ಣವಾಹಿನಿಯಲ್ಲಿ (Star Suvarna) ಪ್ರಸಾರವಾಗುತ್ತಿದ್ದ ʻನಮ್ಮ ಲಚ್ಚಿ’ (Namma Lacchi) ಧಾರಾವಾಹಿ ಅಂತ್ಯ ಕಂಡ ಬೆನ್ನಲ್ಲೇ ಹೊಸ ಧಾರಾವಾಹಿಗಳು ಬರುತ್ತಿವೆ. 2023ರ ಫೆಬ್ರವರಿ 6ಕ್ಕೆ ಧಾರಾವಾಹಿ ಶುರು ಆಗಿತ್ತು. ಬಂಗಾಳಿ ಭಾಷೆಯ ʻಪೋಟಲ್ ಕುಮಾರ್ ಗಾನಾವಾಲʼ (Potol Kumar Gaanwala) ಧಾರಾವಾಹಿಯ ಅಧಿಕೃತ ರೀಮೆಕ್ ಈ ʻನಮ್ಮ ಲಚ್ಚಿʼ. 

ʼನಮ್ಮ ಲಚ್ಚಿ’ ಧಾರಾವಾಹಿಯಲ್ಲಿ ಮೂವರು ಮಕ್ಕಳು ಸಾಕಷ್ಟು ಗಮನ ಸೆಳೆಯುತ್ತಾರೆ. ಅದರಲ್ಲಿ ಲಚ್ಚಿ ಮುಖ್ಯ ಪಾತ್ರಧಾರಿಯಾದರೆ, ರಿಯಾ ಕೂಡ ಪ್ರಾಮುಖ್ಯತೆ ಪಡೆದಿದ್ದಾರೆ. ಇನ್ನು ಸುಗ್ಗಿ, ಲಚ್ಚಿಗೆ ತಂಗಿಯಾಗಿ ಗಮನ ಸೆಳೆದಿದ್ದಳು.

Continue Reading

ಕಾಲಿವುಡ್

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Ilaiyaraaja Issues Legal Notice: ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಇಳಯರಾಜಾ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

VISTARANEWS.COM


on

Ilaiyaraaja Issues Legal Notice to Rajinikanth Coolie
Koo

ಬೆಂಗಳೂರು: ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ ‘ಕೂಲಿ’ (Coolie Movie) ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ ಇಳಯರಾಜ ನೋಟಿಸ್ (Ilaiyaraaja Issues Legal Notice) ಕಳುಹಿಸಿದ್ದಾರೆ. ಇಳಯರಾಜ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

ವರದಿಯ ಪ್ರಕಾರ, ʻಕೂಲಿʼ ಸಿನಿಮಾ ತಂಡ 1983ರ ʻತಂಗ ಮಗನ್ʼ ಚಿತ್ರದ ʻವಾ ವಾ ಪಕ್ಕಂ ವಾʼ (‘Wa Wa Pabha Wa’)ಹಾಡನ್ನು ಅನುಮತಿ ಪಡೆಯದೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಇಳಯರಾಜ. ಈ ಸಿನಿಮಾ ಟೈಟಲ್ ಟೀಸರ್‌ ಇತ್ತೀಚೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಇಳಯರಾಜ ಟ್ಯೂನ್ ಹಾಕಿದ ಹಾಡನ್ನು ನೆಟ್ಟಿಗರೇ ಗುರುತಿಸಿದ್ದರು.

ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಿದ್ದರು. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಅಲ್ಲದೇ ‘ಕೂಲಿ’ ಟೀಸರ್ ನಿಂದ ಮ್ಯೂಸಿಕ್‌ ತೆಗೆಯದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದೀಗ ಸನ್ ಪಿಕ್ಚರ್ಸ್ ಸಂಸ್ಥೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಘಟನೆ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.

ʻತಲೈವರ್ 171ʼ ಸಿನಿಮಾ ಇದೀಗ ಕೂಲಿ ಎಂದು ಟೈಟಲ್‌ ಇಡಲಾಗಿದೆ. ಲೋಕೇಶ್ ಜತೆ ರಜನಿಕಾಂತ್ ಅಭಿನಯದ ಮೊದಲ ಚಿತ್ರ ಇದಾಗಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಿದ್ದು, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿತ್ತು. ಚಿತ್ರದಲ್ಲಿ ಶಿವಕಾರ್ತಿಕೇಯನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ ಉಳಿದ ಪಾತ್ರವರ್ಗ ಇನ್ನೂ ಘೋಷಿಸಿಲ್ಲ. ಟೈಟಲ್ ಅನೌನ್ಸ್ ಆದ ದಿನವೇ ಚಿತ್ರದ ಫುಲ್ ಟೀಮ್ ರಿವೀಲ್ ಆಗುವ ನಿರೀಕ್ಷೆ ಇದೆ. ಅನಿರುದ್ಧ್ ರವಿಚಂದರ್ ಸಂಗೀತ ಇದ್ದರೆ, ಜೋಡಿ ಅನ್ಬರಿವ್ ಸಾಹಸ ನಿರ್ದೇಶನ ಇದೆ.
ಇನ್ನು ಲೋಕೇಶ್‌ ಕನಕರಾಜ್‌ ಅವರು ಇತ್ತೀಚೆಗೆ ಶ್ರುತಿ ಹಾಸನ್ ಅವರ ʻಇನಿಮೆಲ್ʼ ಹಾಡಿನ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು. ರಜನಿಕಾಂತ್ ಜತೆಗಿನ ಚಿತ್ರದ ಹೊರತಾಗಿ, ಲೋಕೇಶ್ ಅವರು ಕಾರ್ತಿ ಜತೆಗಿನ ʻಕೈದಿ 2ʼ ಸಿನಿಮಾ ಸಹ ಹೊಂದಿದ್ದಾರೆ.

Continue Reading
Advertisement
Uber Cup 2024 Quarterfinal
ಕ್ರೀಡೆ8 mins ago

Uber Cup 2024 Quarterfinal: ಭಾರತದ ಸವಾಲು ಅಂತ್ಯ; ಜಪಾನ್​ ವಿರುದ್ಧ ಕ್ವಾ. ಫೈನಲ್​ನಲ್ಲಿ ಸೋಲು

Ambedkar statue
ಕಲಬುರಗಿ14 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಪ್ರಕರಣ ಸಿಐಡಿಗೆ ಹಸ್ತಾಂತರ! ಡಾ. ಜಿ. ಪರಮೇಶ್ವರ್‌

Prajwal Revanna Case These are the questions SIT will ask Prajwal
ಕ್ರೈಂ21 mins ago

Prajwal Revanna Case: ಪ್ರಜ್ವಲ್‌ ಅರೆಸ್ಟ್‌ ಆದಲ್ಲಿ ಎಸ್‌ಐಟಿ ಕೇಳುವ ಪ್ರಶ್ನೆಗಳಿವು! ರೇವಣ್ಣಗೂ ತಟ್ಟುವ ಬಿಸಿ

Narendra Modi
ದೇಶ34 mins ago

Narendra Modi:”ಇಲ್ಲಿ ಕಾಂಗ್ರೆಸ್‌ ಸಾಯುತ್ತಿದೆ…ಅಲ್ಲಿ ಪಾಕಿಸ್ತಾನ ಅಳುತ್ತಾ ಪ್ರಾರ್ಥಿಸುತ್ತಿದೆ”-ಮೋದಿ ಅಟ್ಯಾಕ್‌

gold rate today
ಚಿನ್ನದ ದರ37 mins ago

Gold Rate Today: ನಿನ್ನೆ ಇಳಿದ ಚಿನ್ನದ ಬೆಲೆ ಇಂದು ತೀವ್ರ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ದರಗಳು ಹೀಗಿವೆ

Self Harming
ಕಲಬುರಗಿ40 mins ago

Self Harming : ಕಲಬುರಗಿಯಲ್ಲಿ ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Bhoomi Shetty African braids Look style
ಸಿನಿಮಾ55 mins ago

Bhoomi Shetty: ಆಫ್ರಿಕನ್‌ ಲುಕ್‌ನಲ್ಲಿ ನಮ್ಮ ʻಕಿನ್ನರಿʼ ನಟಿ! ಈ ಚೇಂಜ್‌ ಹೇಗನಿಸುತ್ತೆ ನಿಮಗೆ?

prajwal revanna case lookout notice
ಕ್ರೈಂ60 mins ago

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

School Jobs Scam
Lok Sabha Election 20241 hour ago

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

elephant attack
ಬೆಂಗಳೂರು ಗ್ರಾಮಾಂತರ1 hour ago

Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌