Site icon Vistara News

Abhishek Ambareesh | ಯಂಗ್‌ ರೆಬೆಲ್‌ ಸ್ಟಾರ್‌ ಅಭಿಷೇಕ್ ಅಂಬರೀಶ್‌ಗೆ ನಾಯಕಿ ಆಗಲಿದ್ದಾರಂತೆ ಸಪ್ತಮಿ ಗೌಡ!

Abhishek Ambareesh

ಬೆಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ಅವರಿಗೆ ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಈ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇದೀಗ ಯಂಗ್‌ ರೆಬೆಲ್‌ ಸ್ಟಾರ್‌ ಅಭಿಷೇಕ್ ಅಂಬರೀಶ್‌ (Abhishek Ambareesh) ಜತೆ ಬಣ್ಣ ಹಚ್ಚುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪೈಲ್ವಾನ್‌, ಗಜಕೇಸರಿ, ಹೆಬ್ಬುಲಿ ಸೇರಿ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ಕೃಷ್ಣ ಈಗ ಯಂಗ್‌ ರೆಬೆಲ್‌ ಸ್ಟಾರ್‌ ಅಭಿಷೇಕ್ ಅಂಬರೀಶ್‌ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ. ʻಕಾಳಿʼ ಎಂಬ ಶೀರ್ಷಿಕೆ ಕೂಡ ಇಟ್ಟಿದ್ದು, ಈ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿಯಾಗಲಿದ್ದಾರೆ ಎಂದು ಸುದ್ದಿ ಹರಿದಾಡಿದೆ. ಈಗಾಗಲೇ ನಿರ್ದೇಶಕ ಕೃಷ್ಣ ಅವರು ಕಥೆ ಮತ್ತು ಪಾತ್ರದ ಬಗ್ಗೆ ಸಪ್ತಮಿ ಅವರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ನಟಿ ಸಪ್ತಮಿ ಗೌಡ ಆಗಲಿ, ನಿರ್ದೇಶಕ ಕೃಷ್ಣ ಆಗಲಿ ಅಧಿಕೃತವಾಗಿ ಹೇಳಿಕೊಂಡಿಲ್ಲ.

ಇದನ್ನೂ ಓದಿ | Young Rebel Star ಅಭಿಷೇಕ್‌ ಅಂಬರೀಶ್‌ ‘ಕಾಳಿ’ ಫಸ್ಟ್‌ ಲುಕ್‌ ರಿವೀಲ್‌

ಕಾಳಿ ಸಿನಿಮಾ ವಿಶೇಷತೆ ಏನು?
ಕಾವೇರಿ ನದಿಯ ಹೋರಾಟದ ಹಿನ್ನೆಲೆಯನ್ನು ಇಟ್ಟುಕೊಂಡು ಕಥೆ ಬರೆದಿದ್ದಾರೆ. ಈ ಹೋರಾಟದ ದಿನಗಳಲ್ಲಿ ನಡೆದ ನೈಜ ಘಟನೆಯನ್ನೇ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯಕ್ಕೆ ಸೂರಿ ಅವರ ನಿರ್ದೇಶನದ ʼಬ್ಯಾಡ್‌ ಮ್ಯಾನರ್ಸ್‌ʼ ಚಿತ್ರಿದಲ್ಲಿ ಅಭಿಷೇಕ್‌ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ | Kantara Movie | ಮೂಗುತಿ ಸುಂದರಿಗೆ ಮೀನು ಕಟ್‌ ಮಾಡೋದು ತುಂಬಾ ಸುಲಭ; ಸಪ್ತಮಿಯ ಮೀನಿನ ನಡೆ!

Exit mobile version