Abhradeep Saha: ʻಕೆಜಿಎಫ್ʼ ಸಿನಿಮಾವನ್ನು ಕಿರುಚಾಡುತ್ತಲೇ ಹಾಡಿ ಹೊಗಳಿದ್ದ ಯೂಟ್ಯೂಬರ್ ನಿಧನ - Vistara News

ಸಿನಿಮಾ

Abhradeep Saha: ʻಕೆಜಿಎಫ್ʼ ಸಿನಿಮಾವನ್ನು ಕಿರುಚಾಡುತ್ತಲೇ ಹಾಡಿ ಹೊಗಳಿದ್ದ ಯೂಟ್ಯೂಬರ್ ನಿಧನ

Abhradeep Saha: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಭ್ರದೀಪ್ ಸಾಹಾ, ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 16ರ ಮಧ್ಯರಾತ್ರಿ ಬೆಂಗಳೂರಿನ(Bengaluru) ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳು, ಅಭ್ರದೀಪ್ ಸಹಾ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಭ್ರದೀಪ್ ಸಹಾ ಅವರಿಗೆ ಶಸ್ತ್ತ ಚಿಕಿತ್ಸೆ ಮಾಡಲಾಗಿತ್ತು. 2018ರಲ್ಲಿ ತೆರೆಕಂಡಿದ್ದ ಯಶ್​ ಅಭಿನಯದ ಕೆಜಿಎಫ್ 1 ಹಾಗೂ 2022ರಲ್ಲಿ ತೆರೆಕಂಡ ಕೆಜಿಎಫ್ ಚಾಪ್ಟರ್ 2 ಸಿನಿಮಾಗಳ ಬಗ್ಗೆ ಹಾಡಿ ಹೊಗಳಿದ್ದರು. ಈ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದರು.

VISTARANEWS.COM


on

Abhradeep Saha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ಆ್ಯಂಗ್ರಿ ರಾಂಟ್‌ಮ್ಯಾನ್’ (Angry Rantman) ಎಂದು ಜನಪ್ರಿಯವಾಗಿರುವ ಯೂಟ್ಯೂಬರ್ ಅಭ್ರದೀಪ್ ಸಹಾ (Abhradeep Saha) ಅಲಿಯಾಸ್ `ಆ್ಯಂಗ್ರಿ ರಾಂಟ್‌ಮ್ಯಾನ್’ ನಿಧನರಾಗಿದ್ದಾರೆ. ಅಭ್ರದೀಪ್ ಸಹಾ ಅವರಿಗೆ 27 ವರ್ಷ ವಯಸ್ಸಾಗಿತ್ತು. ಕೋಲ್ಕತ್ತಾ ಮೂಲದ ಯೂಟ್ಯೂಬರ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು ಎಂದು ವರದಿಯಾಗಿದೆ. 2018ರಲ್ಲಿ ತೆರೆಕಂಡಿದ್ದ ಯಶ್​ ಅಭಿನಯದ ಕೆಜಿಎಫ್ 1 ಹಾಗೂ 2022ರಲ್ಲಿ ತೆರೆಕಂಡ ಕೆಜಿಎಫ್ ಚಾಪ್ಟರ್ 2 ಸಿನಿಮಾಗಳ ಬಗ್ಗೆ ಹಾಡಿ ಹೊಗಳಿದ್ದರು. ಈ ಮೂಲಕ ಕನ್ನಡಿಗರ ಮನಸ್ಸು ಗೆದ್ದಿದ್ದರು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಭ್ರದೀಪ್ ಸಾಹಾ, ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 16ರ ಮಧ್ಯರಾತ್ರಿ ಬೆಂಗಳೂರಿನ(Bengaluru) ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳು, ಅಭ್ರದೀಪ್ ಸಹಾ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಭ್ರದೀಪ್ ಸಹಾ ಅವರಿಗೆ ಶಸ್ತ್ತ ಚಿಕಿತ್ಸೆ ಮಾಡಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದರಿಂದ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಮಗನ ಆರೋಗ್ಯದ ಬಗ್ಗೆ ಏ. 15ರಂದು ತಂದೆ ಟ್ವೀಟ್ ಮಾಡಿ, ಅಭ್ರದೀಪ್‌ ಅಭಿಮಾನಿಗಳು ಅವರ ಚೇತರಿಕೆಗಾಗಿ ಪ್ರಾರ್ಥನೆ ಮಾಡಬೇಕಷ್ಟೇ ಎಂದು ಬರೆದುಕೊಂಡಿದ್ದರು. ಅದರೆ, ತಂದೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಮರುದಿನವೇ ಸಾಹಾ ನಿಧನರಾಗಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ.

ಇದನ್ನೂ ಓದಿ: Self Harming: 7ನೇ ಮಹಡಿಯಿಂದ ಜಿಗಿದು ಯೂಟ್ಯೂಬರ್‌ ಜೋಡಿ ಆತ್ಮಹತ್ಯೆ

ಅಭ್ರದೀಪ್ ಸಹಾ ಯೂಟ್ಯೂಬ್ ಚಾನೆಲ್‌ನಲ್ಲಿ ಕ್ರೀಡೆ ಮತ್ತು ಚಲನಚಿತ್ರಗಳ ಕುರಿತು ಹೆಚ್ಚಾಗಿ ಹೇಳುತ್ತಿದ್ದರು. ಇಂಡಿಯನ್ ಸೂಪರ್ ಲೀಗ್ (ISL)ನ ಹಲವಾರು ಫುಟ್‌ಬಾಲ್ ಕ್ಲಬ್‌ಗಳು ಸಹಾ ಅವರ ನಿಧನಕ್ಕೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಸಂತಾಪ ಸೂಚಿಸಿವೆ. ಅಭ್ರದೀಪ್ ಸಹಾ ಅವರು ಯೂಟ್ಯೂಬ್‌ನಲ್ಲಿ 4.8 ಲಕ್ಷ ಫಾಲೋವರ್ಸ್ ಹೊಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Rupali Ganguly: ರೂಪಾಲಿ ಗಂಗೂಲಿ (Rupali Ganguly) ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. 1990ರ ಸಮಯದಲ್ಲಿ ನಟಿ ರೂಪಾಲಿ ಗಂಗೂಲಿಯವರು ಧಾರಾವಾಹಿ ಕ್ಷೇತ್ರದಲ್ಲಿ ಬಹಳಷ್ಟು ಹೆಸರು ಮಾಡಿದ್ದರು. ಹಲವಾರು ವಿಭಿನ್ನವಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡ ಇವರು ತಮ್ಮ ನಟನೆಯ ಮೂಲಕ ಮನೆ ಮಾತಾಗಿದ್ದರು. ರೂಪಾಲಿ ಗಂಗೂಲಿ ರಾಜಕೀಯ ವೃತ್ತಿಜೀವನವನ್ನು ಘೋಷಿಸಿದ್ದರೂ, 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ ಎಂದು ಅವರು ಇನ್ನೂ ಖಚಿತಪಡಿಸಿಲ್ಲ.

VISTARANEWS.COM


on

Rupali Ganguly Of Anupamaa Fame Joins BJP
Koo

ಬೆಂಗಳೂರು: ದೂರದರ್ಶನ ನಟಿ ರೂಪಾಲಿ ಗಂಗೂಲಿ (Rupali Ganguly) ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಮೇ 1ರಂದು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. 1990ರ ಸಮಯದಲ್ಲಿ ನಟಿ ರೂಪಾಲಿ ಗಂಗೂಲಿಯವರು ಧಾರಾವಾಹಿ ಕ್ಷೇತ್ರದಲ್ಲಿ ಬಹಳಷ್ಟು ಹೆಸರು ಮಾಡಿದ್ದರು. ಹಲವಾರು ವಿಭಿನ್ನವಾದ ಧಾರಾವಾಹಿಗಳಲ್ಲಿ ಕಾಣಿಸಿಕೊಂಡ ಇವರು ತಮ್ಮ ನಟನೆಯ ಮೂಲಕ ಮನೆ ಮಾತಾಗಿದ್ದರು.

ಬಿಜೆಪಿ ಸೇರ್ಪಡೆ ಬಳಿಕ ನಟಿ ಮಾಧ್ಯಮದವರೊಂದಿಗೆ ಮಾತನಾಡಿ “ನಾನು ಬಿಜೆಪಿಗೆ ಸೇರ್ಪಡೆಯಾಗಿರುವುದು ತುಂಬಾ ಗೌರವ ಎಂದೆನಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದಾರೆ. ನಾನು ಪ್ರಧಾನಿ ಮೋದಿಯವರ ದೊಡ್ಡ ಅಭಿಮಾನಿ. ಬಿಜೆಪಿ ಉತ್ತಮ ಕೆಲಸ ಮಾಡುತ್ತಿದೆ. ಹಾಗಾಗಿ ನಾನು ಬಿಜೆಪಿ ಸೇರಲು ಬಯಸುತ್ತೇನೆ. ನಾನು ಪಕ್ಷಕ್ಕೆ ತುಂಬಾ ಕೃತಜ್ಞನಾಗಿದ್ದೇನೆʼʼ ಎಂದು ಹೇಳಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಮುಖಂಡ ವಿನೋದ್ ತಾವ್ಡೆ ಮತ್ತು ಅನಿಲ್ ಬಲುನಿ ಕೂಡ ಇದ್ದರು. ನಟಿ ರೂಪಾಲಿ ಗಂಗೂಲಿ ಅವರು ‘ಸುಕನ್ಯಾ’ ಧಾರಾವಾಹಿ ಮೂಲಕ ಕಿರುತೆರೆ ಕ್ಷೇತ್ರಕ್ಕೆ ಕಾಲಿಟ್ಟರು. ನಂತರ ‘ಸಾರಾಭಾಯಿ ವರ್ಸಸ್ ಸಾರಾಭಾಯಿ’ ಧಾರಾವಾಹಿಯಿಂದ ಬಹಳಷ್ಟು ಮನೆ ಮಾತಾಗಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೇಲೆ ಒಂದು ದೊಡ್ಡ ಬ್ರೇಕ್ ತೆಗೆದುಕೊಂಡಿರುವ ನಟಿ ರೂಪಾಲಿ ಗಂಗೂಲಿ ‘ಅನುಪಮಾ’ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟರು. ʻಅನುಪಮಾʼ ಧಾರಾವಾಹಿ ಕೂಡ ಪ್ರೇಕ್ಷಕರ ಮೆಚ್ಚಿನ ಧಾರಾವಾಹಿಯಾಗಿ ಹೊರಹೊಮ್ಮಿತು.

ಇದನ್ನೂ ಓದಿ: Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

ರೂಪಾಲಿ ಗಂಗೂಲಿ ರಾಜಕೀಯ ವೃತ್ತಿಜೀವನವನ್ನು ಘೋಷಿಸಿದ್ದರೂ, 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ ಎಂದು ಅವರು ಇನ್ನೂ ಖಚಿತಪಡಿಸಿಲ್ಲ.

ತಿಂಗಳ ಮುಂಚೆ ಮೋದಿಯವರನ್ನು ಭೇಟಿಯಾಗಿದ್ದ ನಟಿ!

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಗ್ಗೆ ನಟಿ ಮಾರ್ಚ್‌ನಲ್ಲಿ ಇನ್‌ಸ್ಟಾ ಮೂಲಕ ಹೇಳಿಕೊಂಡಿದ್ದರು. ʻʻ ನನ್ನ ಕನಸು ನನಸಾಯಿತು…ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಅವರನ್ನು ಭೇಟಿ ಮಾಡುವ ದಿನ. ಇದು ನಿಜಕ್ಕೂ ಅಭಿಮಾನಿ ಹುಡುಗಿಯ ಕ್ಷಣ! 14 ವರ್ಷಗಳ ಕಾಲ ನಾನು ಅಂತಹ ಒಂದು ದೊಡ್ಡ ವೇದಿಕೆ ಹಂಚಿಕೊಳ್ಳಬೇಕು ಎಂದು ಕಾಯುತ್ತಿದ್ದೆʼʼಎಂದು ಸಂತಸ ವ್ಯಕ್ತಪಡಿಸಿದ್ದರು.

ಹೆಚ್ಚು ಕಮ್ಮಿ ಆರರಿಂದ ಏಳು ವರ್ಷಗಳ ಕಾಲ ಯಾವುದೇ ನಟನೆಯಲ್ಲಿ ಕಾಣಿಸಿಕೊಳ್ಳದ ನಟಿ ರೂಪಾಲಿ ಗಂಗೂಲಿ ʻಅನುಪಮಾʼ ಮೂಲಕ ಮತ್ತೆ ಕಿರುತೆರೆಗೆ ಬಂದಿದ್ದರು. ʻʻದಶಕಗಳ ಹಿಂದೆ ನಮ್ಮ ಮನೆಯಲ್ಲಿ ಆರ್ಥಿಕ ಸಂಕಷ್ಟವಿತ್ತು. ನನ್ನ ತಂದೆ ಆರೋಗ್ಯ ಸರಿ ಇರಲಿಲ್ಲ. ಯಾವುದೇ ವ್ಯವಸ್ಥೆ ಇಲ್ಲದ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ಸೇರಿಸಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ ನಾನು ಧಾರಾವಾಹಿ ಕ್ಷೇತ್ರಕ್ಕೆ ಕಾಲಿಟ್ಟೆ. ಆಗ ಬರುತ್ತಿದ್ದ ಹಣ ನನಗೆ ಬಹಳ ಮುಖ್ಯವಾಗಿತ್ತು ಎಂದು ರೂಪಾಲಿ ಈ ಹಿಂದೆ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

Continue Reading

ಒಟಿಟಿ

Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

Movie Release: ಹಾಸ್ಯದಿಂದ ಥ್ರಿಲ್ಲರ್‌ಗಳವರೆಗೆ, ರೋಮ್ಯಾಂಟಿಕ್‌ನಿಂದ ಅಪರಾಧ ಸರಣಿಗಳವರೆಗೆ ಪ್ರತಿಯೊಬ್ಬರಿಗೂ ಇಷ್ಟವಾಗುವ ಚಿತ್ರಗಳು, ಸರಣಿಗಳು ಒಟಿಟಿಗೆ ಕಾಲಿಟ್ಟಿದ್ದು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Movie Release
Koo

ಈ ಬಾರಿ ವಿಭಿನ್ನ ಪ್ರಕಾರದ ಚಲನಚಿತ್ರಗಳು (Movie Release) ಒಟಿಟಿಯಲ್ಲಿ (OTT) ಬಿಡುಗಡೆಗೆ ಸಿದ್ಧವಾಗಿದೆ. ಹಾಸ್ಯದಿಂದ (Comedy) ಆಕ್ಷನ್ (Action), ಥ್ರಿಲ್ಲರ್‌ಗಳವರೆಗೆ ( Thriller), ರೋಮ್ಯಾಂಟಿಕ್‌ನಿಂದ ಅಪರಾಧ ಸರಣಿಗಳವರೆಗೆ ಹೀಗೆ ಪ್ರತಿಯೊಬ್ಬರಿಗೂ ಇಷ್ಟವಾಗುವ ಚಿತ್ರಗಳನ್ನು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಹೆಚ್ಚು ಇಷ್ಟಪಡುವ ಕೆಲವು ಹೊಸ ಚಲನಚಿತ್ರಗಳು ಮತ್ತು ಸರಣಿಗಳು ಈ ವಾರ ವಿವಿಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಲಿದೆ.

ಫಿಯಾಸ್ಕೋ

ಇಗೊರ್ ಗೋಟ್ಸ್‌ಮನ್ ಬರೆದು ನಿರ್ದೇಶಿಸಿರುವ ಫ್ರೆಂಚ್ ಹಾಸ್ಯ ಸರಣಿ ಫಿಯಾಸ್ಕೋ. ಇದರಲ್ಲಿ ನೈನಿ, ಫ್ರಾಂಕೋಯಿಸ್ ಸಿವಿಲ್, ಗೋಟ್ಸ್‌ಮನ್, ಜೆರಾಲ್ಡಿನ್ ನಕಾಚೆ, ಲೂಯಿಸ್ ಕೋಲ್ಡೆಫಿ, ಲೆಸ್ಲಿ ಮೆಡಿನಾ, ಪಾಸ್ಕಲ್ ಡೆಮೊಲನ್, ಜೂಲಿಯೆಟ್ ಗ್ಯಾಸ್ಕೆಟ್, ಡಿಜಿಮೊ, ಮೇರಿ-ಕ್ರಿಸ್ಟಿನ್ ಬರಾಲ್ಟ್ ಮತ್ತು ವಿನ್ಸೆಂಟ್ ಕ್ಯಾಸೆಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ.


2024ರ ಏಪ್ರಿಲ್ 8ರಂದು ಕ್ಯಾನೆಸರೀಸ್ ಫೆಸ್ಟಿವಲ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿರುವ ಫಿಯಾಸ್ಕೋ ಸರಣಿಯು ಅಜ್ಜಿಗೆ ಗೌರವ ಸಲ್ಲಿಸಲು ರಾಫೆಲ್ ವಾಲಾಂಡೆ ಅವರ ನಿರ್ದೇಶಿಸುವ ಚೊಚ್ಚಲ ಸಿನಿಮಾದ ಸುತ್ತ ಸುತ್ತುತ್ತದೆ. ತಂಡದ ಸದಸ್ಯರು ಚಲನಚಿತ್ರವನ್ನು ಹಾಳುಮಾಡಲು ಪ್ರಯತ್ನಿಸಿದಾಗ ಅದು ದುಃಸ್ವಪ್ನವಾಗುತ್ತದೆ. ನೆಟ್‌ಫ್ಲಿಕ್ಸ್ ಈ ಸರಣಿಯು ಏಪ್ರಿಲ್ 30ರಿಂದ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ: Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!


ಅಕಾಪುಲ್ಕೊ ಸೀಸನ್ 3

ಅಮೆರಿಕನ್ ಸ್ಪ್ಯಾನಿಷ್ ಮತ್ತು ಇಂಗ್ಲಿಷ್ ಭಾಷೆಯ ಹಾಸ್ಯ ಸರಣಿ ಅಕಾಪುಲ್ಕೊದ ಮೂರನೇ ಸರಣಿ ಒಟಿಟಿ ಪ್ಲಾಟ್‌ಫಾರ್ಮ್ ಮೇಲೆ ಬರಲು ಸಜ್ಜಾಗಿದೆ. ಇದನ್ನು ಆಸ್ಟಿನ್ ವಿನ್ಸ್‌ಬರ್ಗ್, ಎಡ್ವರ್ಡೊ ಸಿಸ್ನೆರೋಸ್ ಮತ್ತು ಜೇಸನ್ ಶುಮನ್ ರಚಿಸಿದ್ದಾರೆ. ಈ ಸರಣಿಯು ಹೌ ಟು ಬಿ ಎ ಲ್ಯಾಟಿನ್ ಲವರ್ (2017) ನಿಂದ ಸ್ಫೂರ್ತಿ ಪಡೆದಿದೆ. ಇದರ ಮೊದಲ ಸೀಸನ್ 2021ರ ಅಕ್ಟೋಬರ್ 8ರಂದು ಬಿಡುಗಡೆಯಾಗಿತ್ತು. ಅನಂತರ ಎರಡನೇ ಸೀಸನ್ 2022ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಯಿತು. ಈಗ ಮೂರನೇ ಸೀಸನ್ ಬಿಡುಗಡೆಗೆ ಸಿದ್ಧವಾಗಿದೆ. Apple TV+ ನಲ್ಲಿ ಈ ಸರಣಿ ಮೇ 1ರಿಂದ ಪ್ರದರ್ಶನ ಕಾಣಲಿದೆ.


T・P ಬಾನ್

T・P BON ಎಂಬುದು ಬಾನ್ ಮೇಲೆ ಕೇಂದ್ರೀಕರಿಸುವ ನಾಮಸೂಚಕ ಮಂಗಾದ ಅನಿಮೆ ರೂಪಾಂತರ. ಬಾನ್ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು, ಟೈಮ್ ಪ್ಯಾಟ್ರೋಲ್ ಎಂದು ಕರೆಯಲ್ಪಡುವ ಟೈಮ್-ಟ್ರಾವೆಲಿಂಗ್ ಸ್ಕ್ವಾಡ್‌ನ ಸದಸ್ಯರಾಗಿದ್ದಾರೆ. ಪ್ರಪಂಚದಾದ್ಯಂತದ ವಿವಿಧ ಸಮಯ ಮತ್ತು ಸ್ಥಳಗಳ ಮೂಲಕ ಜನರನ್ನು ಪ್ರಮುಖ ಐತಿಹಾಸಿಕ ಕ್ಷಣಗಳಿಂದ ರಕ್ಷಿಸುವ ಮೂಲಕ ಇದು ನೋಡಲು ಆಹ್ಲಾದಕರವಾದ ಆದರೆ ಪ್ರಮುಖವಾದ ಮಿಷನ್ ಅನ್ನು ನಿರೂಪಿಸುತ್ತದೆ. ಬಾನ್ ಮತ್ತು ಅವನ ಸಂಗಡಿಗರು ಸಮಯ ಪ್ರಯಾಣದ ಜಟಿಲತೆಗಳನ್ನು ಪರಿಶೀಲಿಸಿದಾಗ ಅವರು ತಮ್ಮ ನಿರ್ಣಯವನ್ನು ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಾರೆ ಮತ್ತು ಇತಿಹಾಸದ ಬಗ್ಗೆ ಅವರ ಒಳನೋಟವನ್ನು ಆಳವಾಗಿಸುತ್ತಾರೆ. ನೆಟ್‌ಫ್ಲಿಕ್ಸ್ ನಲ್ಲಿ ಈ ಸರಣಿ ಮೇ 2ರಿಂದ ತೆರೆ ಕಾಣಲಿದೆ.


ದಿ ಐಡಿಯಾ ಆಫ್ ಯು

2024ರ ಅಮೇರಿಕನ್ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರ ದಿ ಐಡಿಯಾ ಆಫ್ ಯು. ಇದನ್ನು ಮೈಕೆಲ್ ಶೋಲ್ಟರ್ ನಿರ್ದೇಶಿಸಿದ್ದಾರೆ. ಈ ಚಲನಚಿತ್ರವನ್ನು ಜೆನ್ನಿಫರ್ ವೆಸ್ಟ್‌ಫೆಲ್ಡ್ ಜೊತೆ ಸಹ-ಬರೆದಿದ್ದಾರೆ ಮತ್ತು ಚಲನಚಿತ್ರವು ರಾಬಿನ್ನೆ ಲೀ ಅವರ ಅದೇ ಹೆಸರನ್ನು ಆಧರಿಸಿದೆ. ಇದು ಅನ್ನಿ ಹ್ಯಾಥ್‌ವೇ ಮತ್ತು ನಿಕೋಲಸ್ ಗ್ಯಾಲಿಟ್‌ಜಿನ್ ಒಬ್ಬ ತಾಯಿ ಮತ್ತು ಜನಪ್ರಿಯ ಬಾಯ್ ಬ್ಯಾಂಡ್‌ನ ಪ್ರಮುಖ ಗಾಯಕ ಮತ್ತು ಪ್ರಮುಖ ಗಾಯಕ ನಡುವಿನ ಪ್ರೇಮಕಥೆಯನ್ನು ನಿರೂಪಿಸುತ್ತದೆ. ಪ್ರಧಾನ ವಿಡಿಯೋ ನಲ್ಲಿ ಮಾರ್ಚ್ 16ರಿಂದ ಚಿತ್ರ ತೆರೆ ಕಾಣುತ್ತಿದೆ.


ಶೈತಾನ್

ಶೈತಾನ್ 2024ರ ಭಾರತೀಯ ಹಿಂದಿ ಭಾಷೆಯ ಅಲೌಕಿಕ ಹಾರರ್ ಥ್ರಿಲ್ಲರ್ ಚಲನಚಿತ್ರವಾಗಿದೆ. ಚಿತ್ರವನ್ನು ವಿಕಾಸ್ ಬಹ್ಲ್ ನಿರ್ದೇಶಿಸಿದ್ದಾರೆ ದೇವಗನ್ ಫಿಲ್ಮ್ಸ್, ಪನೋರಮಾ ಸ್ಟುಡಿಯೋಸ್ ಮತ್ತು ಜಿಯೋ ಸ್ಟುಡಿಯೋಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್, ಆರ್. ಮಾಧವನ್, ಜ್ಯೋತಿಕಾ, ಅಂಗದ್ ರಾಜ್ ಮತ್ತು ಜಾಂಕಿ ಬೋಡಿವಾಲಾ ನಟಿಸಿದ್ದಾರೆ. ತಮ್ಮ ಹಿರಿಯ ಮಗಳು ಮಾಟಮಂತ್ರದ ಮಾಟಕ್ಕೆ ಸಿಲುಕಿದಾಗ ಅವರ ಜೀವನವು ಅಸ್ತವ್ಯಸ್ತವಾಗಿರುವ ಕುಟುಂಬದ ಸುತ್ತ ಚಲನಚಿತ್ರವು ಸುತ್ತುತ್ತದೆ. ನೆಟ್‌ಫ್ಲಿಕ್ಸ್ ನಲ್ಲಿ ಈ ಚಿತ್ರ ಮೇ 3ರಿಂದ ತೆರೆ ಕಾಣಲಿದೆ.


ಟಿಲ್ಲು 2

ಟಿಲ್ಲು ಸ್ಕ್ವೇರ್ ಭಾರತೀಯ ತೆಲುಗು ಭಾಷೆಯ ರೋಮ್ಯಾಂಟಿಕ್ ಕ್ರೈಮ್ ಹಾಸ್ಯ ಚಲನಚಿತ್ರವಾಗಿದ್ದು, ಇದನ್ನು ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಸೂರ್ಯದೇವರ ನಾಗ ವಂಶಿ ನಿರ್ಮಿಸಿದ್ದಾರೆ. 2022 ರ ಡಿ.ಜೆ. ಟಿಲ್ಲು ಚಿತ್ರದ ಮುಂದುವರಿದ ಭಾಗವಾಗಿದ್ದು, ಸಿದ್ದು ಜೊನ್ನಲಗಡ್ಡ ಅವರು ಹಿಂದಿನ ಚಿತ್ರದಲ್ಲಿ ತಮ್ಮ ಪಾತ್ರವನ್ನು ಪುನರಾವರ್ತಿಸಿದರೆ, ಅನುಪಮಾ ಪರಮೇಶ್ವರನ್ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಚ್ 26ರಿಂದ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ.


ಭೀಮಾ

ಆಕ್ಸನ್ ಚಿತ್ರವಾಗಿರುವ ಭೀಮಾದಲ್ಲಿ ಗೋಪಿಚಂದ್ ಡಬಲ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾ, ಭವಾನಿ ಶಂಕರ್, ಮಾಳವಿಕಾ ಶರ್ಮ ಸೇರಿದಂತೆ ಹಲವು ಪ್ರಮುಖರು ಚಿತ್ರದಲ್ಲಿ ಕಂಡಿಸಿಕೊಂಡಿದ್ದಾರೆ. ಎ. ಹರ್ಷ ನಿರ್ದೇಶನದ ಈ ಚಿತ್ರವನ್ನು ಕೆ.ಕೆ. ರಾಧಾಮೋಹನ್ ನಿರ್ಮಿಸಿದ್ದಾರೆ. 28 ಕೋಟಿ ಬಜೆಟ್‌ನ ಈ ಚಿತ್ರ ಹಾಟ್ ಸ್ಟಾರ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿದೆ.


ಕುಂಗ್ ಫು ಪಂಡಾ 4

ಅಮೆರಿಕನ್ ಅನಿಮೇಷನ್ ಚಿತ್ರ ಕುಂಗ್ ಫು ಪಂಡಾ 4 ಅನ್ನು ಡ್ರೀಮ್ ವರ್ಕ್ ಅನಿಮೇಷನ್ ನಿರ್ದೇಶಿಸಿದೆ. ಜೇಮ್ಸ್ ಹಾಂಗ್, ಬ್ರಯಾನ್ ಕ್ರೇನ್ಸ್ಟೋನ್, ಡುಸ್ಟಿನ್ ಹಾಫ್ಮ್ಯಾನ್, ಜೇಮ್ಸ್ ಹೊಂಗ್ ಸೇರಿದಂತೆ ಹಲವು ಪಾತ್ರಗಳು ಹಿಂದಿನ ಸರಣಿಯಂತೆ ಈ ಬಾರಿಯ ಸರಣಿಯಲ್ಲೂ ಕಾಣಿಸಿಕೊಳ್ಳಲಿದೆ. ಇದು ಬುಕ್ ಮೈ ಶೋ ನಲ್ಲಿ ಮಾರ್ಚ್ 26 ರಿಂದ ತೆರೆ ಕಾಣಲಿದೆ.


ದಿ ಫಿಲಂ ಸ್ಟಾರ್

ಅಮೆಜಾನ್ ಪ್ರೈಮ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿರುವ ವಿಜಯ್ ದೇವರಕೊಂಡ ಅಭಿನಯದ ಕೌಟುಂಬಿಕ ಪ್ರಧಾನ ಚಿತ್ರ ದಿ ಫಿಲಂ ಸ್ಟಾರ್. ಉತ್ತಮ ಜೀವನ ನಿರ್ವಹಣೆಗಾಗಿ ಮಾಡುವ ಸಾಹಸ ಚಿತ್ರದ ಮುಖ್ಯ ಕಥೆಯಾಗಿದೆ.


ಡೆಡ್ ಬಾಡಿ ಡಿಟೆಕ್ಟಿವ್

ನೆಟ್ ಫ್ಲಿಕ್ಸ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿರುವ ಈ ಸರಣಿ ಸ್ಟೀವ್ ಯೊಕೆಯ್ ನಿರ್ದೇಶಿಸಿದ್ದಾರೆ. ಕ್ರೈಮ್ ನ ಕಾರಣಗಳನ್ನು ಹುಡುಕಿ ಕುತೂಹಲ ವಿಚಾರಗಳನ್ನು ವಿಶೇಷ ರೀತಿಯಲ್ಲಿ ತೆರೆದಿಡುವ ಸರಣಿ ಇದಾಗಿದೆ.

Continue Reading

ಸ್ಯಾಂಡಲ್ ವುಡ್

Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

Manvita Kamath: ಅರುಣ್‌ ಕೂಡ ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾ ಮಾಡಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿದೆ.

VISTARANEWS.COM


on

Manvita Kamath marriage with arun Pics are here
Koo

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂದು (ಮೇ 1) ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗಿದೆ.

ಇದನ್ನೂ ಓದಿ: Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿದೆ.

ಸ್ನೇಹಿತರು, ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದೆ ಜೋಡಿ.

ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ ಅರುಣ್‌. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.

ʼಕೆಂಡಸಂಪಿಗೆ‘ (kendasampige Cinema Kannada) ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸೆಸ್‌ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Manvita Kamath). ಆರ್ ಜೆಯಾಗಿದ್ದ ಮಾನ್ವಿತಾ ಅವರು ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಶಿವಣ್ಣನ ʻಟಗರುʼ ಸಿನಿಮಾದಲ್ಲಿ ಬಣ್ಣ ಹಚ್ಚಿ ʻಟಗರು ಪುಟ್ಟಿʼಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದರು.

Continue Reading

ರಾಜಕೀಯ

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Prajwal Revanna: ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ವಿವಾದ ಭುಗಿಲೇಳುತ್ತಿದ್ದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಎಕ್ಸ್ ಖಾತೆಯ ಮೂಲಕ ಕಿಡಿ ಕಾರಿದ್ದಾರೆ. ಅಪರಾಧಿ ಮುಸ್ಲಿಂ, ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರು ಆಗಿದ್ದರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಕಾಳಜಿ ವಹಿಸುತ್ತಾರೆಂದು ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ (Poonam Kaur) ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು.

VISTARANEWS.COM


on

prajwal revanna actress swara bhasker angry government silence on prajwal revanna
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ (Poonam Kaur) ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಈ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ವಿವಾದ ಭುಗಿಲೇಳುತ್ತಿದ್ದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಎಕ್ಸ್ ಖಾತೆಯ ಮೂಲಕ ಕಿಡಿ ಕಾರಿದ್ದಾರೆ. ಅಪರಾಧಿ ಮುಸ್ಲಿಂ, ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರು ಆಗಿದ್ದರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಕೆಲವರು ಕಾಳಜಿ ವಹಿಸುತ್ತಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ʻʻಲೈಂಗಿಕ ದೌರ್ಜನ್ಯದ ಅಪರಾಧಗಳ ಬಗ್ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮೌನಕ್ಕೆ ನಾವೇಕೆ ಶಾಕ್‌ ಆಗಿದ್ದೇವೆ? ಇವೆಲ್ಲ ಗೊತ್ತಿದ್ದೂ ಮೋದಿ ಅವರು ಪ್ರಚಾರ ಮಾಡಿದ್ದಕ್ಕೆ ನಾವೇಕೆ ಶಾಕ್‌ ಆಗಿದ್ದೇವೆ? ಕಥುವಾ, ಉನ್ನಾವೋ, ಹತ್ರಾಸ್, ಕುಲದೀಪ್ ಸೆಂಗರ್, ಬ್ರಿಜ್ಭೂಷಣ್ ಶರಣ್ ಮತ್ತು ಇತರರ ಉದಾಹರಣೆ ನಮ್ಮ ಮುಂದೆ ಇದೆ! ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ/ಕಾಂಗ್ರೆಸ್‌ನವರಾಗಿದ್ದರೆ ಮಾತ್ರ ಅವರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆʼʼಎಂದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಇದಕ್ಕೂ ಮುಂಚೆ ನಟಿ ಪೂನಂ ಕೌರ್ (Poonam Kaur) ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು. ʼಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ. 2,900ಕ್ಕೂ ಹೆಚ್ಚು ವಿಡಿಯೊಗಳನ್ನು ಮಾಡಿದ್ದಾರೆ ಎಂದರೆ ಅವರೆಷ್ಟು ವಿಕೃತ ಮನೋಭಾವ ಹೊಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಪ್ರಾಣಿಗಳು ಕೂಡ ರೀತಿ ಮಾಡೋದಿಲ್ಲʼʼ ಎಂದು ಹೇಳಿದ್ದಾರೆ. ʼʼಈ ರೀತಿಯ ಕೃತ್ಯ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಬಿಡಬೇಡಿʼʼ ಎಂದು ಅವರು ವಿಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ʼʼಪ್ರಜ್ವಲ್‌ ಬಳಿ ದುಡ್ಡು ಹಾಗೂ ಅಧಿಕಾರ ಇದೆ. ಹೀಗಾಗಿ ಅವರ ವಿರುದ್ಧ ಧ್ವನಿ ಎತ್ತಿದರೂ, ದೂರು ಕೊಟ್ಟರೂ ಶಿಕ್ಷೆಯಾಗುತ್ತದೆ ಎನ್ನುವ ಬಗ್ಗೆ ಗ್ಯಾರಂಟಿ ಇಲ್ಲʼʼ ಎಂದು ಪೂನಂ ಕೌರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ʼʼಹೀಗಾಗಿ ನಾನು ಕೈ ಮುಗಿದು ಬೇಡಿಕೊಳ್ತಿನಿ. ಪ್ರಜ್ಚಲ್‌ಗೆ ಯಾರು ವೋಟ್ ಹಾಕಬೇಡಿ. ಅಂತಹವರು ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರೋದಿಲ್ಲʼʼ ಎಂದು ಹೇಳಿದ್ದರು.

ಇದನ್ನೂ ಓದಿ: Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’

ʼʼಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ಪ್ರತಿ ಮನೆಯ ಹೆಣ್ಣು ಮಗಳು ಎಚ್ಚರವಾದಾಗ ಮಾತ್ರ ದೇಶದ ಹೆಣ್ಣು ಮಕ್ಕಳು ಬಚವಾಗಲು ಸಾಧ್ಯ. ನಮ್ಮ ದೇಶ ರಾವಣ ರಾಜ್ಯದ ಕಡೆ ಹೋಗುತ್ತಿದೆಯಾ ಅಥವಾ ರಾಮರಾಜ್ಯದ ಕಡೆ ಹೋಗುತ್ತಿದೆಯಾ ?ʼ ಎಂದೂ ಅವರು ಪ್ರಶ್ನಿಸಿದ್ದರು.

ಸ್ವರಾ ಭಾಸ್ಕರ್ ಜೊತೆಗೆ ಕನ್ನಡದ ನಟ ಆದಿನಗಳು ಚೇತನ್, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಆಕ್ರೋಶ ಹೊರಹಾಕಿದ್ದಾರೆ.

Continue Reading
Advertisement
Hassan Pen Drive Case
ದೇಶ5 mins ago

Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

australia t20 world cup
ಕ್ರೀಡೆ10 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

E-Pass Mandatory
ಪ್ರವಾಸ49 mins ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Davanagere lok sabha constituency bjp candidate gayatri siddeshwar election campaign in mayakonda
ದಾವಣಗೆರೆ53 mins ago

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Hassan Pen Drive case Prajwal and Revanna arrested if they fail to appear before SIT
ಕ್ರೈಂ1 hour ago

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Medical Negligence
ಕೊಪ್ಪಳ1 hour ago

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Maria alam Khan
ರಾಜಕೀಯ1 hour ago

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

GST Collection
ದೇಶ1 hour ago

GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

Covishield vaccine india
ಪ್ರಮುಖ ಸುದ್ದಿ1 hour ago

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Rupali Ganguly Of Anupamaa Fame Joins BJP
ಕಿರುತೆರೆ1 hour ago

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌