Yuva Movie: ʼಯುವʼ ಸಿನಿಮಾ ಆಗಲು ಪುನೀತ್‌ ರಾಜ್‌ಕುಮಾರ್‌ ಕಾರಣ; ಯುವ ರಾಜ್‌ಕುಮಾರ್‌ ಭಾವುಕ ನುಡಿ - Vistara News

ಸಿನಿಮಾ

Yuva Movie: ʼಯುವʼ ಸಿನಿಮಾ ಆಗಲು ಪುನೀತ್‌ ರಾಜ್‌ಕುಮಾರ್‌ ಕಾರಣ; ಯುವ ರಾಜ್‌ಕುಮಾರ್‌ ಭಾವುಕ ನುಡಿ

Yuva Movie: ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬದ ಯುವ ರಾಜ್‌ಕುಮಾರ್ ಸ್ಯಾಂಡಲ್‌ವುಡ್‌ಗೆ ʼಯುವʼ ಚಿತ್ರದ ಮೂಲಕ ಕಾಲಿಡುತ್ತಿದ್ದಾರೆ. ಮಾರ್ಚ್‌ 29ರಂದು ಈ ಸಿನಿಮಾ ತೆರೆ ಕಾಣಲಿದ್ದು, ಮಾರ್ಚ್ 23ರಂದು ಪ್ರೀ ರಿಲೀಸ್ ಇವೆಂಟ್ ನಡೆಯಿತು.

VISTARANEWS.COM


on

yuva movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಿಸುತ್ತಿರುವ, ಯುವ ರಾಜ್‌ಕುಮಾರ್ ಅಭಿನಯದ ಚಿತ್ರ ʼಯುವʼ (Yuva Movie). ಮಾರ್ಚ್‌ 29ರಂದು ಈ ಸಿನಿಮಾ ತೆರೆ ಕಾಣಲಿದೆ. ಆ ಮೂಲಕ ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಇನ್ನೊಂದು ಕುಡಿ ಚಿತ್ರರಂಗದಲ್ಲಿ ಮಿಂಚಲು ಸಜ್ಜಾಗಿದೆ. ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್​ರಾಮ್ (Santhosh Ananddram) ಆ್ಯಕ್ಷನ್‌ ಕಟ್‌ ಹೇಳುತ್ತಿರುವ ʼಯುವʼ ಚಿತ್ರದ ಟ್ರೇಲರ್‌ ಇತ್ತೀಚೆಗೆ ರಿಲೀಸ್‌ ಆಗಿ ಗಮನ ಸೆಳೆದಿತ್ತು. ಇದೀಗ ಶನಿವಾರ (ಮಾರ್ಚ್ 23) ಹೊಸಪೇಟೆಯಲ್ಲಿ ಅದ್ಧೂರಿಯಾಗಿ ‘ಯುವ’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಡೆಯಿತು.

ಯುವ ರಾಜ್‌ಕುಮಾರ್ ಹೇಳಿದ್ದೇನು?

ಕಾರ್ಯಕ್ರಮದಲ್ಲಿ ಮಾತನಾಡಿದ ಯುವ ರಾಜ್‌ಕುಮಾರ್‌, “ಚಿಕ್ಕಪ್ಪ (ಪುನೀತ್‌ ರಾಜ್‌ಕುಮಾರ್‌) ನನ್ನನ್ನು ಇಲ್ಲಿವರೆಗೆ ತಂದು ನಿಮ್ಮ ಮಡಿಲಿಗೆ ಹಾಕಿದ್ದಾರೆ. ಮುಂದೆ ನನ್ನನ್ನು ನೀವೇ ನೋಡಿಕೊಳ್ಳಬೇಕು. ನೀವು ಹೇಗೆ ಮುನ್ನಡೆಸುತ್ತಿರೋ ಹಾಗೇ ನಾನು ಸಾಗುತ್ತೇನೆ. ಡಾ. ರಾಜ್‌ ಕುಟುಂಬದಲ್ಲಿ ಹುಟ್ಟಿದ ಮಾತ್ರಕ್ಕೆ ಅವಕಾಶಗಳು ಸುಲಭವಾಗಿ ಸಿಗುತ್ತವೆ ಎಂಬುದು ಸುಳ್ಳು. ನಾನು ನಟನಾಗುತ್ತೇನೆ ಎಂದು ಚಿಕ್ಕವನಿದ್ದಾಗಲೇ ಮನೆಯವರು ನಿರ್ಧರಿಸಿಬಿಟ್ಟಿದ್ದರು. ಆದರೆ ನಾನು ಇಷ್ಟು ದಿವಸ ಅವಕಾಶಕ್ಕಾಗಿ ಕಾದಿದ್ದೆ. ಕೊನೆಗೆ ಸಮರ್ಥವಾಗಿ ನಿಮಗೆ ಇಷ್ಟವಾಗುವ ರೀತಿಯಲ್ಲೂ ಸಿದ್ಧವಾಗಿ ಸಿನಿಮಾ ಮಾಡಿದ್ದೇನೆ. ಈ ಸಿನಿಮಾ ಆಗಿದ್ದಕ್ಕೆ ನಮ್ಮ ಚಿಕ್ಕಪ್ಪ ಮತ್ತು ಚಿಕ್ಕಮ್ಮ (ಅಶ್ವಿನಿ ಪುನೀತ್ ರಾಜ್‌ಕುಮಾರ್) ಅವರೇ ಕಾರಣʼʼ ಎಂದು ಭಾವುಕರಾಗಿ ನುಡಿದರು. ಈ ವೇಳೆ ಅವರು ವೇದಿಕೆಯಲ್ಲಿ ʼನಿನ್ನ ಕಂಗಳ ಬಿಸಿಯ ಹನಿಗಳುʼ ಹಾಡನ್ನು ಹಾಡಿದರು.

ಭಾವುಕರಾದ ರಾಘವೇಂದ್ರ ರಾಜ್‌ಕುಮಾರ್

ಯುವ ರಾಜ್‌ಕುಮಾರ್‌ ಅವರ ತಂದೆ ರಾಘವೇಂದ್ರ ರಾಜ್‌ಕುಮಾರ್‌ ಮಾತನಾಡಿ, ʼʼನನ್ನ ಮಗನ ವಿಚಾರದಲ್ಲಿ ಒಬ್ಬ ತಂದೆ ಮಾಡುವ ಕೆಲಸವನ್ನು ಅಪ್ಪು (ಪುನಿತ್‌ ರಾಜ್‌ಕುಮಾರ್‌) ಮಾಡಿ ಹೋಗಿದ್ದಾನೆ. ಹಾಗಾಗಿ ಯುವ ಅಪ್ಪು ಅವರ ಮಗನಾಗಿ ಪರಿಚಯವಾಗುತ್ತಿದ್ದಾನೆ. ಅವನು ನನ್ನ ಮಗನಲ್ಲ. ಅಪ್ಪು ಮಗ. ಅವನ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಪ್ಪುವಿನಂತೆ ನನ್ನ ಮಗನೂ ತಗ್ಗಿ ಬಗ್ಗಿ ನಡೆಯುವ ಗುಣವನ್ನು ಬೆಳೆಸಿಕೊಂಡು, ಅಭಿಮಾನಿಗಳನ್ನು ದೇವರಾಗಿ ಕಾಣಬೇಕು” ಎಂದು ಹೇಳಿದರು.

ʼʼಈ ಹಿಂದೆ ಪುನೀತ್‌ ಅವರ ‘ಯುವರತ್ನ’ ಸಿನಿಮಾದ ಪ್ರಚಾರಕ್ಕಾಗಿ ಹೊಸಪೇಟೆಗೆ ಬಂದಿದ್ದೆವು. ‘ಯುವರತ್ನ’ದಿಂದ ‘ಯುವ’ವರೆಗೆ ನನ್ನದು ಬಹಳ ಸವಾಲಿನ ಪಯಣ. ಈ ನಡುವೆ ನಾನು ಸಾಕಷ್ಟು ಕಳೆದುಕೊಂಡಿದ್ದೇನೆ. ನನ್ನ ಅಣ್ಣ ಪುನೀತ್ ರಾಜ್​ಕುಮಾರ್ ಅವರನ್ನು ನಾನು ಕಳೆದುಕೊಂಡೆ. ನನ್ನನ್ನು ಒಬ್ಬಂಟಿಯಾಗಿ ಬಿಡದೆ, ನನ್ನನ್ನು ಮತ್ತೆ ಕೆಲಸ ಮಾಡುವಂತೆ ಪ್ರೇರೇಪಿಸಿದ್ದು ಅಪ್ಪು ಅವರ ಅಭಿಮಾನಿಗಳುʼʼ ಎಂದು ಸಂತೋಷ್ ಆನಂದ್​ರಾಮ್ ತಿಳಿಸಿದರು. ಗಾಯಕ ವಿಜಯ್‌ ಪ್ರಕಾಶ್‌ ಅವರು ‘ರಾಜಕುಮಾರ’ ಸಿನಿಮಾದ ‘ಬೊಂಬೆ ಹೇಳುತೈತೆ…’ ಹಾಡು ಹಾಡುತ್ತಿದ್ದ ವೇಳೆ ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರು ಭಾವುಕರಾದರು.

ಇದನ್ನೂ ಓದಿ: Yuva Movie: ಡ್ಯಾನ್ಸ್ ಮೂವ್ಸ್‌ನಲ್ಲಿ ಕಿಚ್ಚು ಹಚ್ಚಿದ ದೊಡ್ಮನೆ ಕುಡಿಗಳು: ಯಾರು ಬೆಸ್ಟ್?

ನಟ ವಿನಯ್‌ ರಾಜಕುಮಾರ್, ನಿರ್ಮಾಪಕ ವಿಜಯ್‌ ಕಿರಗಂದೂರು, ಕಲಾವಿದರಾ ಅಚ್ಯುತ್‌ ಕುಮಾರ್‌, ಸುಧಾರಾಣಿ, ಹಿತಾ ಚಂದ್ರಶೇಖರ್, ನಿಶ್ವಿಕಾ ನಾಯ್ಡು, ಗಿರಿರಾಜ್ ನವೀನ್ ಸಜ್ಜು ಮುಂತಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಯುವ ಚಿತ್ರದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar: ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಇದಾದ ಬಳಿಕ ಶ್ರೀದೇವಿ ಭೈರಪ್ಪ ಅವರು ಪ್ರತಿಕ್ರಿಯಿಸಿದ್ದು, ನನಗೆ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂದಿದ್ದಾರೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಅವರ ವಕೀಲರು ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅವರು ಹೇಗೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ. ಇದಕ್ಕೆ ಈಗ ಶ್ರೀದೇವಿ ಭೈರಪ್ಪ ಅವರು ಪ್ರತ್ಯುತ್ತರ ನೀಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು/ವಾಷಿಂಗ್ಟನ್:‌ ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ವಿಚ್ಛೇದನ ಪ್ರಕರಣವು ವಿವಿಧ ಆಯಾಮಗಳನ್ನು ಪಡೆಯುತ್ತಿದೆ. ಇದೊಂದು ವಿಚ್ಛೇದನ ಪ್ರಕರಣವಾಗದೆ ಯುವ ರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗುತ್ತಿದೆ. “ಶ್ರೀದೇವಿ ಭೈರಪ್ಪ ಅವರು ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಅವರ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದು, ಇದಕ್ಕೆ ಶ್ರೀದೇವಿ ಭೈರಪ್ಪ ಪ್ರತಿಕ್ರಿಯಿಸಿದ್ದಾರೆ. “ಸತ್ಯ ಹಾಗೂ ನ್ಯಾಯಕ್ಕೆ ಗೆಲುವಿದೆ ಎಂಬುದಾಗಿ ನಾನು ನಂಬಿದ್ದೇನೆ” ಎಂಬುದಾಗಿ ಇನ್‌ಸ್ಟಾಗ್ರಾಂನಲ್ಲಿ ಶ್ರೀದೇವಿ ಭೈರಪ್ಪ ಪೋಸ್ಟ್‌ ಮಾಡಿದ್ದಾರೆ.

“ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳುಮಟ್ಟದ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ. ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳುಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಹಾಗೂ ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತೇವೆ ಎಂದು ನಾನು ನಂಬಿದ್ದೇನೆ” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Continue Reading

ಪ್ರಮುಖ ಸುದ್ದಿ

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Yuva Rajkumar: ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಇದಾದ ಬಳಿಕ ಶ್ರೀದೇವಿ ಭೈರಪ್ಪ ಅವರು ಪ್ರತಿಕ್ರಿಯಿಸಿದ್ದು, ನನಗೆ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂದಿದ್ದಾರೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಅವರ ವಕೀಲರು ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅವರು ಹೇಗೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವ ಪ್ರಕರಣಕ್ಕೆ ಹಲವು ಟ್ವಿಸ್ಟ್‌ಗಳು ಸಿಗುತ್ತಿವೆ. ಡಿವೋರ್ಸ್‌ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಪ್ರತಿಕ್ರಿಯಿಸಿದ ಬೆನ್ನಲ್ಲೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ದೈಹಿಕವಾಗಿ ಫಿಟ್‌ ಇಲ್ಲ ಎಂಬುದಾಗಿ ಶ್ರೀದೇವಿ ಪ್ರಸಾದ್‌ ಅವರು ನಟನಿಗೆ ಕಿರುಕುಳ ನೀಡಿದ್ದಾರೆ” ಎಂಬುದಾಗಿ ಅವರು ಆರೋಪಿಸಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

“ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

“ಯುವ ಪತ್ನಿಯು ಇಡೀ ಕುಟುಂಬದ ವ್ಯವಹಾರ ಹಾಗೂ ಎಲ್ಲದರ ಮೇಲೂ ಕಂಟ್ರೋಲ್ ಮಾಡಲು ಪ್ರಯತ್ನಿಸಿದ್ದಳು. ಯುವ ಫ್ಯಾಮಿಲಿಯಿಂದ ಬಹಳ ಹಣ ಖರ್ಚು ಮಾಡಿಸಿಕೊಂಡಿದ್ದಾರೆ. ಐಎಎಸ್ ಕಲಿಯಲು ದೆಹಲಿಗೆ ಹೋಗಿದ್ದರು. ಅವಳ ಬಾಯ್ ಫ್ರೆಂಡ್ ರಾಧಯ್ಯ ಎಂಬವರ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ರಾತ್ರಿ ಅವನ ಮನೆಯಲ್ಲಿ ಉಳದುಕೊಳ್ತಿದ್ದರು. ಇಂಥ ಹಲವು ಕಾರಣಗಳನ್ನು ಅರ್ಜಿಯಲ್ಲಿ ನಮೂದಿಸಿ ಫೈಲ್ ಮಾಡಿದ್ದೇವೆ. ಆದರೆ ಯುವ ಪತ್ನಿಯು ಯುವನಿಗೆ ಬೇರೆ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರ ಜತೆ ಯುವನಿಗೆ ಸಂಬಂಧ ಇತ್ತು ಎಂದು ಅವರು ರಿಪ್ಲೈ ಮಾಡಿದ್ದಾರೆ” ಎಂದು ತಿಳಿಸಿದರು.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಪ್ರತಿಕ್ರಿಯೆ

ಯುವ ರಾಜ್‌ಕುಮಾರ್‌ ಅವರ ವಕೀಲರು ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಅವರು ಅಮೆರಿಕದಿಂದಲೇ ವಕೀಲರ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ಯುವ ರಾಜ್‌ಕುಮಾರ್‌ ಅವರು ನನಗೆ ಕಿರುಕುಳ ನೀಡುತ್ತಿದ್ದರು. ನೀವು ನೀಡಿದ ನೋಟಿಸ್‌ನಲ್ಲಿ ಉಲ್ಲೇಖಿಸಿದ ಅಂಶಗಳು ಸತ್ಯಕ್ಕೆ ದೂರವಾಗಿವೆ. ನನಗೆ ನಿಮ್ಮ ಕುಟುಂಬವನ್ನು ಒಡೆಯಬೇಕು ಎಂದಿದ್ದರೆ ಅಮೆರಿಕಕ್ಕೆ ಬರುತ್ತಿರಲಿಲ್ಲ. ಅಷ್ಟಕ್ಕೂ, ಯುವ ರಾಜ್‌ಕುಮಾರ್‌ ಅವರು ನಟಿ ಸಪ್ತಮಿ ಗೌಡ ಅವರೊಂದಿಗೆ ಸಂಬಂಧ ಹೊಂದಿದ್ದಾರೆ. ನಿಮ್ಮ ಆರೋಪಗಳಿಗೆ ಕಾನೂನಾತ್ಮಕವಾಗಿಯೇ ಉತ್ತರ ಕೊಡುತ್ತೇನೆ” ಎಂಬುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Continue Reading

ಕರ್ನಾಟಕ

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Kalki 2898 AD: ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ 2 ನಿಮಿಷ ಮತ್ತು 51 ಸೆಕೆಂಡ್‌ಗಳ ಟ್ರೈಲರ್ ಬಿಡುಗಡೆ ಆಗಿದೆ. ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

Kalki 2898 AD Trailer Released on Vyjayanthi Movies YouTube Channel
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಚಿತ್ರದಲ್ಲಿ ಪ್ರಭಾಸ್‌ ಭೈರವನಾಗಿ, ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌ ಮತ್ತು ಅಮಿತಾಭ್‌ ಬಚ್ಚನ್‌ ಕೂಡ ಅದ್ಭುತವಾದ ಆಕ್ಷನ್‌ ಅನ್ನು ಮಾಡಿರುವುದು ಟ್ರೇಲರ್‌ನಿಂದ ತಿಳಿಯುತ್ತದೆ. ಅತಿಥಿ ಪಾತ್ರ ಮತ್ತು ಖಳನಾಯಕನ ಪಾತ್ರವನ್ನು ನಿರ್ವಹಿಸಿರುವ ಕಮಲ್‌ ಹಾಸನ್‌ ಟ್ರೇಲರ್‌ನ ಕೊನೆಯಲ್ಲಿ ಭಯ ಪಡಬೇಡಿ ಇನ್ನೊಂದು ಲೋಕ ಬರುತ್ತಿದೆ ಎಂಬ ಡೈಲಾಗ್‌ ಹೇಳುವ ಮೂಲಕ ಗುರುತಿಸಲಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಪೋಸ್ಟರ್‌ಗಳಿಂದಲೇ ಸಿನಿಮಾ ಸಂಚಲನ ಮೂಡಿಸಿದ್ದು, ಟ್ರೇಲರ್‌ ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

Continue Reading

ಕರ್ನಾಟಕ

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿದ್ದು, ಹಲವು ಆರೋಪ ಮಾಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ಕುಟುಂಬದ ಕುಡಿ, ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ‌ ಅವರಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವುದು ಭಾರಿ ಸುದ್ದಿಯಾಗಿದೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದು, ಶ್ರೀದೇವಿ ಭೈರಪ್ಪ (Sridevi Byrappa) ಅವರ ಬಗ್ಗೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. “ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬುವರ ಜತೆ ಅಕ್ರಮ ಸಂಬಂಧ ಇದೆ” ಎಂಬುದಾಗಿ ಅವರು ಆರೋಪಿಸಿದ್ದಾರೆ.

“ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

ಯುವ ಕುಟುಂಬವನ್ನು ಕಂಟ್ರೋಲ್‌ ಮಾಡಲು ಯತ್ನ

“ಯುವ ಪತ್ನಿಯು ಇಡೀ ಕುಟುಂಬದ ವ್ಯವಹಾರ ಹಾಗೂ ಎಲ್ಲದರ ಮೇಲೂ ಕಂಟ್ರೋಲ್ ಮಾಡಲು ಪ್ರಯತ್ನಿಸಿದ್ದಳು. ಯುವ ಫ್ಯಾಮಿಲಿಯಿಂದ ಬಹಳ ಹಣ ಖರ್ಚು ಮಾಡಿಸಿಕೊಂಡಿದ್ದಾರೆ. ಐಎಎಸ್ ಕಲಿಯಲು ದೆಹಲಿಗೆ ಹೋಗಿದ್ದರು. ಅವಳ ಬಾಯ್ ಫ್ರೆಂಡ್ ರಾಧಯ್ಯ ಎಂಬವರ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ರಾತ್ರಿ ಅವನ ಮನೆಯಲ್ಲಿ ಉಳದುಕೊಳ್ತಿದ್ದರು. ಇಂಥ ಹಲವು ಕಾರಣಗಳನ್ನು ಅರ್ಜಿಯಲ್ಲಿ ನಮೂದಿಸಿ ಫೈಲ್ ಮಾಡಿದ್ದೇವೆ. ಆದರೆ ಯುವ ಪತ್ನಿಯು ಯುವನಿಗೆ ಬೇರೆ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರ ಜತೆ ಯುವನಿಗೆ ಸಂಬಂಧ ಇತ್ತು ಎಂದು ಅವರು ರಿಪ್ಲೈ ಮಾಡಿದ್ದಾರೆ” ಎಂದು ತಿಳಿಸಿದರು.

3 ಕೋಟಿ ರೂ. ಅಕ್ರಮ ವರ್ಗಾವಣೆ

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ವಿಚ್ಛೇದನ ಅರ್ಜಿ ಸಿಕ್ಕಾಗ ಉತ್ತರಿಸುವೆ; ಯುವ ನೋಟಿಸ್‌ಗೆ ಪತ್ನಿ ಶ್ರೀದೇವಿ ಫಸ್ಟ್‌ ರಿಯಾಕ್ಷನ್!

Continue Reading
Advertisement
Yuva Rajkumar
ಕರ್ನಾಟಕ5 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ6 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ6 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು6 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ7 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Mohan Bhagwat
ದೇಶ7 hours ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ8 hours ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ8 hours ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ9 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ9 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌