D ಕೋಡ್‌ ಅಂಕಣ: ರಾಹುಲ್‌ ಗಾಂಧಿ ವಿರುದ್ಧ ನರೇಂದ್ರ ಮೋದಿ ನಿರಂತರ ವಾಗ್ದಾಳಿ ನಡೆಸಲು ಏನು ಕಾರಣ? - Vistara News

ಅಂಕಣ

D ಕೋಡ್‌ ಅಂಕಣ: ರಾಹುಲ್‌ ಗಾಂಧಿ ವಿರುದ್ಧ ನರೇಂದ್ರ ಮೋದಿ ನಿರಂತರ ವಾಗ್ದಾಳಿ ನಡೆಸಲು ಏನು ಕಾರಣ?

ಕರ್ನಾಟಕ ವಿಧಾನಸಭೆಯಲ್ಲೂ ಯುವ ಶಾಸಕರಲ್ಲಿ ಬಹುತೇಕರು ಕುಟುಂಬ ಹಿನ್ನೆಲೆ ಇರುವವರು. ಕುಟುಂಬದ ಹಿನ್ನೆಲೆ ಇಲ್ಲದವರಿಗೆ ರಾಜಕೀಯ ಪಕ್ಷಗಳು ಟಿಕೆಟ್‌ ನೀಡುತ್ತವಾದರೂ ಗೆಲ್ಲುವ ಪ್ರಮಾಣ ಅತಿ ಕಡಿಮೆ.

VISTARANEWS.COM


on

PM Not OBC Said by Rahul Gandhi and BJP hits back to him
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಸ್ಸಾಂನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿ, ಬೆಳಗಾವಿಯಲ್ಲಿ ಫಲಾನುಭವಿಗಳ ಸಮಾವೇಶ ನಡೆಸಲಿ… ಪ್ರಧಾನಿ ನರೇಂದ್ರ ಮೋದಿಯವರ ಭಾಷಣದಲ್ಲಿ ಕುಟುಂಬ ರಾಜಕಾರಣದ ವಿರುದ್ಧ ಒಂದಷ್ಟು ಕಿಡಿ ಇದ್ದೇ ಇರುತ್ತದೆ. ಅದರಲ್ಲೂ ನೇರವಾಗಿ ಕಾಂಗ್ರೆಸ್‌ನ ಕುಟುಂಬ ರಾಜಕಾರಣವನ್ನು ಕೆಣಕುತ್ತಾರೆ. ಆಗಾಗ್ಗೆ ಜೆಡಿಎಸ್‌, ಆರ್‌ಜೆಡಿ ಮುಂತಾದ ಪಕ್ಷಗಳ ಕುಟುಂಬ ರಾಜಕಾರಣವನ್ನೂ ಟೀಕೆ ಮಾಡುತ್ತಾರೆ.

ಕುಟುಂಬ ರಾಜಕಾರಣಕ್ಕೆ ಭಾರತದಲ್ಲಿ ಮೂರ್ತ ರೂಪವೇ ಕಾಂಗ್ರೆಸ್‌ನ ನೆಹರೂ ಕುಟುಂಬ ಅಂದರೆ ಗಾಂಧಿ ಕುಟುಂಬ ಎಂದು ಈಗ ಬ್ರ್ಯಾಂಡ್‌ ಆಗಿಬಿಟ್ಟಿದೆ. ಕರ್ನಾಟಕದ ಮಟ್ಟಿಗೆ ಜೆಡಿಎಸ್‌ ಎಂದರೆ ಕುಟುಂಬ ರಾಜಕಾರಣದ ಪಕ್ಷ ಎಂದು ಬ್ರ್ಯಾಂಡ್‌ ಆಗಿದೆ. ಆದರೆ ಇವೆರಡೇ ಪಕ್ಷವಲ್ಲ, ಬಿಜೆಪಿಯಲ್ಲೂ ಕುಟುಂಬದ ಹಿನ್ನೆಲೆ ಸಾಕಷ್ಟು ಜನರಿದ್ದಾರೆ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನಿರಂತರ ಕಾಂಗ್ರೆಸ್‌ ವಿರುದ್ಧ, ಅದರಲ್ಲೂ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದೇತಕ್ಕೇ? ಈ ಬಗ್ಗೆ ಒಂದಷ್ಟು ಅಂಕಿ ಅಂಶಗಳ ಆಧಾರದಲ್ಲಿ ಚರ್ಚಿಸೋಣ. ಇದು ಬಹುದೊಡ್ಡ ವಿಚಾರ ಆದ್ಧರಿಂದ ಒಂದು ಲೇಖನದಲ್ಲಿ ಎಲ್ಲ ಮಗ್ಗುಲನ್ನೂ ಚರ್ಚಿಸಿ ತೀರ್ಮಾನ ಹೇಳಲು ಸಾಧ್ಯವಿಲ್ಲ ಎನ್ನುವುದು ಡಿಸ್‌ಕ್ಲೈಮರ್‌.

ಕುಟುಂಬದ ಯಾವುದೇ ಹಿನ್ನೆಲೆ ಇಲ್ಲದವರಿಗೆ ಭಾರತೀಯ ಸಂಸತ್ತಿನ ಪ್ರವೇಶ ಆಗುತ್ತಿದೆಯೇ? ಆದರೂ ಯಾವ ವಯಸ್ಸಿಗೆ ಆಗುತ್ತದೆ? ಇದೇ ಸಂಸತ್‌ ಪ್ರವೇಶವು, ಕುಟುಂಬದ ಹಿನ್ನೆಲೆ ಇರುವವರಿಗೆ ಎಷ್ಟನೇ ವಯಸ್ಸಿಗೆ ಆಗುತ್ತದೆ ಎನ್ನುವುದನ್ನು ನೋಡೋಣ. 2019ರಲ್ಲಿ ಅತ್ಯಂತ ಕಡಿಮೆ ವಯಸ್ಸಿನ ಸಂಸದರ ವಿವರ ಈ ಕೆಳಗಿನ ಟೇಬಲ್‌ನಲ್ಲಿದೆ. ಅವರ ಹೆಸರಿನ ಮುಂದೆ, ಕುಟುಂಬ ರಾಜಕಾರಣದ ಹಿನ್ನೆಲೆಯನ್ನು ನಮೂದಿಸಿದೆ.

17ನೇ ಲೋಕಸಭೆಯಲ್ಲಿ 41-55 ವಯೋಮಾನದಲ್ಲಿ ಆಯ್ಕೆಯಾದ 232, 56-70ರ ವಯೋಮಾನದಲ್ಲಿ ಆಯ್ಕೆಯಾದ 215 ಹಾಗೂ 70ಕ್ಕಿಂತ ಹೆಚ್ಚಿನ ವಯೋಮಾನದ 26 ಸಂಸದರಿದ್ದಾರೆ. 2019ರಲ್ಲಿ ಆಯ್ಕೆಯಾದಾಗ 35 ವರ್ಷದೊಳಗಿದ್ದವರು ಈ ಟೇಬಲ್‌ನಲ್ಲಿರುವ 34 ಸಂಸದರು. ಈ 34 ಯುವ ಸಂದರಲ್ಲಿ 18 ಸಂಸದರು ಕುಟುಂಬದ ಹಿನ್ನೆಲೆ ಹೊಂದಿದ್ದಾರೆ. ಇನ್ನು 5 ಸಂಸದರು ಚಲನಚಿತ್ರ, ಉದ್ಯಮದಂತಹ ವಿಭಿನ್ನ ಕ್ಷೇತ್ರಗಳಿಂದ ಆಗಮಿಸಿದ್ದಾರೆ. ಅಂದರೆ 34ರಲ್ಲಿ 23 ಸಂಸದರು ಒಂದೋ ಕುಟುಂಬದ ಹಿನ್ನೆಲೆ ಅಥವಾ ಇನ್ನಿತರೆ ಸಾಮಾಜಿಕ ಕ್ಷೇತ್ರಗಳಲ್ಲಿ ಪ್ರಸಿದ್ಧರಾಗಿ ರಾಜಕೀಯಕ್ಕೆ ಆಗಮಿಸಿದವರು. ರಾಜಕಾರಣದಲ್ಲೇ ಸಮಾಜ ಸೇವೆ ಆರಂಭಿಸಿ, ಪಕ್ಷದ ಕಾರ್ಯಕರ್ತನಾಗಿ ದುಡಿದರೆ ಇಷ್ಟು ಚಿಕ್ಕ ವಯಸ್ಸಿನಲ್ಲಿ ಸಂಸದರಾಗುವ ಅವಕಾಶ ದೊರಕುವ ಸಾಧ್ಯತೆ ಶೇ.30ರಷ್ಟಾಗುತ್ತದೆ.

ಇವರುಗಳು ಕಿರಿಯ ವಯಸ್ಸಿನ ಸಂಸದರಾದರೆ, ಮೊದಲ ಬಾರಿಗೆ ಸಂಸದರಾದವರ ಲೆಕ್ಕ ಬೇರೆಯೇ ಇದೆ. 2019ರ ಚುನಾವಣೆಯಲ್ಲಿ ಒಟ್ಟು 271 ಜನರು ಮೊದಲ ಬಾರಿ ಸಂಸದರಾದರು.ಎರಡನೇ ಬಾರಿಗೆ ಸಂಸದರಾದವರು 147 ಜನರು. ಉಳಿದ ಅಂಕಿ ಅಂಶ ಕೆಳಗಿನ ಟೇಬಲ್‌ನಲ್ಲಿದೆ.

ಇವರಲ್ಲಿ ಬಿಜೆಪಿಯಿಂದ ಅತಿ ಹೆಚ್ಚು 135 ಸಂಸದರಿದ್ದರೆ ಕಾಂಗ್ರೆಸ್‌ನಿಂದ 31, ಡಿಎಂಕೆ(18), ವೈಎಸ್‌ಆರ್‌ ಕಾಂಗ್ರೆಸ್‌(18) ಮುಂತಾದ ಪಕ್ಷಗಳಿವೆ. ಕರ್ನಾಟಕದಿಂದ ಮೊದಲ ಬಾರಿಗೆ 2019ರಲ್ಲಿ ಸಂಸದರಾದವರ ಸಂಖ್ಯೆ ಬರೊಬ್ಬರಿ 11. ಎ. ನಾರಾಯಣಸ್ವಾಮಿ, ಸುಮಲತಾ ಅಂಬರೀಶ್‌, ಬಿ.ಎನ್‌. ಬಚ್ಚೇಗೌಡ, ಮಂಗಳಾ ಅಂಗಡಿ, ಅಣ್ಣಾಸಾಹೇಬ್‌ ಜೊಲ್ಲೆ, ಎಸ್‌. ಮುನಿಸ್ವಾಮಿ, ರಾಜಾ ಅಮರೇಶ್ವರ ನಾಯಕ, ಉಮೇಶ್‌ ಜಾಧವ್‌, ಪ್ರಜ್ವಲ್‌ ರೇವಣ್ಣ, ತೇಜಸ್ವಿ ಸೂರ್ಯ ಹಾಗೂ ವೈ. ದೇವೇಂದ್ರಪ್ಪ.

ನಾರಾಯಣಸ್ವಾಮಿ, ಬಚ್ಚೇಗೌಡ ಮೊದಲೇ ಶಾಸಕರಾಗಿದ್ದವರು, ಮುನಿಸ್ವಾಮಿ ಕಾರ್ಪೊರೇಟರ್‌ ಆಗಿದ್ದರು, ಪ್ರಜ್ವಲ್‌ ರೇವಣ್ಣ-ತೇಜಸ್ವಿ ಸೂರ್ಯ-ಅಣ್ಣಾ ಸಾಹೇಬ್‌ ಜೊಲ್ಲೆ -ಮಂಗಳಾ ಅಂಗಡಿ-ಸುಮಲತಾ ಅಂಬರೀಶ್‌ ಕುಟುಂಬದ ಹಿನ್ನೆಲೆ ಹೊಂದಿರುವವರು. ಯಾವ ಕೌಟುಂಬಿಕ ಹಿನ್ನೆಲೆ ಇಲ್ಲದ ಒಬ್ಬ ಯುವಕನೂ 2019ರಲ್ಲಿ ಸಂಸದನಾಗಿಲ್ಲ. ಯುವಕರಿದ್ದಾಗಲೇ ಸಂಸದರಾಗಬೇಕೆಂದರೆ ಮೊದಲನೆಯದಾಗಿ ಕುಟುಂಬದ ಹಿನ್ನೆಲೆ ಹೊಂದಿರಬೇಕು ಎನ್ನುವುದು ಸ್ಪಷ್ಟವಾಗುತ್ತದೆ. ಅಥವಾ ವಯಸ್ಸಾಗುವವರೆಗೆ ಕಾಯಬೇಕು.

ವಿಧಾನಸಭೆಯಲ್ಲೂ ಇದೇ ಸ್ಥಿತಿ
ಕರ್ನಾಟಕ ವಿಧಾನಸಭೆಯಲ್ಲೂ ಅತಿ ಕಡಿಮೆ ವಯಸ್ಸಿನ ಶಾಸಕರಲ್ಲಿ ಬಹುತೇಕರು ಕುಟುಂಬ ಹಿನ್ನೆಲೆ ಇರುವವರು. ಕುಟುಂಬದ ಹಿನ್ನೆಲೆ ಇಲ್ಲದೇ ಇರುವವರಿಗೆ ರಾಜಕೀಯ ಪಕ್ಷಗಳು ಸಾಕಷ್ಟು ಟಿಕೆಟ್‌ ನೀಡುತ್ತವಾದರೂ ಗೆಲ್ಲುವ ಪ್ರಮಾಣ ಅತಿ ಕಡಿಮೆ. 2018ರಲ್ಲಿ ಆಯ್ಕೆಯಾದ ಶಾಸಕರಲ್ಲಿ 38 ವರ್ಷದೊಳಗಿನ, ಅಂದರೆ 1980ರ ನಂತರ ಜನಿಸಿದ ಶಾಸಕರ ಸಂಖ್ಯೆ ಕೇವಲ 11. ಇವರಲ್ಲಿ ನಾಲ್ಕು ಶಾಸಕರು ಮಾತ್ರ ಯಾವುದೇ ರಾಜಕೀಯ ಹಿನ್ನೆಲೆ ಹೊಂದಿಲ್ಲ. ಅಂದರೆ ಶೇ.65 ಶಾಸಕರು ಕುಟುಂಬದ ಹಿನ್ನೆಲೆಯಿಂದಲೇ ಬಂದವರು. ಕುಟುಂಬದ ಹಿನ್ನೆಲೆ ಇಲ್ಲದೇ ಇರುವವರು ಮೂರ್ನಾಲ್ಕು ಬಾರಿ ಸೋತು, ತಮ್ಮ ನಾಯಕತ್ವವನ್ನು ಸಾಬೀತುಮಾಡಿ ಶಾಸಕರಾಗುವ ಹೊತ್ತಿಗೆ 45-50 ವರ್ಷ ದಾಟಿರುತ್ತದೆ.

ವಯಸ್ಸು ಕಡಿಮೆಯಾಗುತ್ತಿದೆ, ಆದರೆ ಕುಟುಂಬದ ಹೊರತಾಗಲ್ಲ

ಭಾರತೀಯ ಸಂಸತ್ತಿನ ಸರಾಸರಿ ಸಂಸದರ ವಯೋಮಿತಿಯನ್ನು ಕಡಿಮೆ ಮಾಡುವಲ್ಲಿ ಈಗಿನ ಬಿಜೆಪಿ ಸರ್ಕಾರ ತನ್ನ ಪಾಲಿನ ಪ್ರಯತ್ನ ನಡೆಸುತ್ತಿದೆ ಎಂದರೆ ತಪ್ಪಲ್ಲ. ಈಗಿನ ಲೋಕಸಭೆಯಲ್ಲಿ 25-40 ವಯೋಮಾನದ ಶೇ.12 ಸಂಸದರಿದ್ದಾರೆ. ಅದೇ 41-55 ವಯೋಮಾನದ ಶೇ.41, 56-70 ವಯೋಮಾನದ ಶೇ.42 ಹಾಗೂ 70ಕ್ಕಿಂತ ಹೆಚ್ಚಿನ ವಯಸ್ಸಿನ ಶೇ.6 ಸಂಸದರಿದ್ದಾರೆ.

2014ರಲ್ಲಿ 25-40 ವಯೋಮಾನದ ಸಂಸದರ ಸಂಖ್ಯೆ ಶೇ.8 ಇದ್ದದ್ದು ಈಗ ಶೇ.12ಕ್ಕೆ ಏರಿದೆ. ಅಂದರೆ ಶೇ.4ರಷ್ಟು ಕಡಿಮೆ ವಯೋಮಾನದ ಸಂಸದರು ಆಯ್ಕೆಯಾಗಿದ್ದಾರೆ. ಈಗ ಭಾರತದ ಸಂಸತ್ತಿನ ಸರಾಸರಿ ವಯೋಮಾನ 54 ವರ್ಷವಾಗಿದೆ. 2014ರಲ್ಲಿ ಆಯ್ಕೆಯಾದ 16ನೇ ಲೋಕಸಭೆಯ ಸರಾಸರಿ ವಯಸ್ಸು 56 ವರ್ಷವಿತ್ತು. ಅಂದರೆ ಎರಡು ವರ್ಷ ಕಡಿಮೆ ವಯಸ್ಸಿನವರು ಸಂಸದರಾಗಿದ್ದಾರೆ. ಈ ನಿಟ್ಟಿನಲ್ಲಿ ಸಂಸತ್ತು ಯುವಕರಾಗುವತ್ತ ಸಾಗುತ್ತಿದೆ. ಆದರೆ ಯುವಕರಾಗಿಸುವ ಈ ಪ್ರಯತ್ನದಲ್ಲಿ, ಕುಟುಂಬ ರಾಜಕಾರಣವನ್ನು ಮೀರಲು ಸಾಧ್ಯವಾಗುತ್ತಿಲ್ಲ.

ಇದು ಒಂದು ಅವಧಿಯ ಲೋಕಸಭೆಗೆ ಮಾತ್ರ ಸೀಮಿತವಾಗಿಲ್ಲ. 2014ರಲ್ಲಿ ಆಯ್ಕೆಯಾದ 16ನೇ ಲೋಕಸಭೆಯಲ್ಲಿ ಯುವ ಸಂಸದರಾಗಿದ್ದವರಲ್ಲಿ ಪ್ರಮುಖರೆಂದರೆ ಸ್ಮೃತಿ ಇರಾನಿ, ಪೂನಮ್‌ ಮಹಾಜನ್‌ (ಕೇಂದ್ರ ಮಂತ್ರಿಯಾಗಿದ್ದ ಪ್ರಮೋದ್‌ ಮಹಾಜನ್‌ ಪುತ್ರಿ), ವರುಣ್‌ ಗಾಂಧಿ (ಮೇನಕಾ ಗಾಂಧಿ ಪುತ್ರ), ಸುಪ್ರಿಯಾ ಸುಳೆ (ಶರದ್‌ ಪವಾರ್‌ ಪುತ್ರಿ), ನವೀನ್‌ ಜಿಂದಲ್‌ (ಉದ್ಯಮಿ ಹಾಗೂ ರಾಜಕಾರಣಿ ಒ.ಪಿ. ಜಿಂದಲ್‌ ಪುತ್ರ), ಮಿಲಿಂದ್‌ ದೇವೂರ (ಕೇಂದ್ರದ ಮಾಜಿ ಸಚಿವ ಮುರಳಿ ದೇವೂರ ಪುತ್ರ), ನಿಶಿಕಾಂತ್‌ ದುಬೆ. ಬಹುತೇಕರು ಕುಟುಂಬದ ಹಿನ್ನೆಲೆ ಹೊಂದಿರುವವರು.

ಸಾಮಾಜಿಕ ವ್ಯವಸ್ಥೆಯಲ್ಲಿಯೇ ಇದೆ
ಕುಟುಂಬ ರಾಜಕಾರಣ ಎನ್ನುವುದು ಭಾರತೀಯ ಸಂಸ್ಕೃತಿಯಲ್ಲೇ ಅಡಗಿಕೊಂಡಿದೆ. ಅದಕ್ಕೆ, ವೇದ ಪುರಾಣಗಳನ್ನು ಪ್ರಜಾಪ್ರಭುತ್ವ ವ್ಯವಸ್ಥೆಗೆ, ಆ ವ್ಯವಸ್ಥೆಯಲ್ಲಿ ನಡೆಯುವ ಅನೇಕ ಪ್ರಕ್ರಿಯೆಗಳಿಗೆ ಹೊಂದಿಸಿಕೊಳ್ಳುವ ಭಾರತೀಯರ ಮನೋಗುಣವೂ ಒಂದು ಕಾರಣ. ಇದು ಸರಿಯೋ ತಪ್ಪೋ ಎನ್ನುವ ವಿಶ್ಲೇಷಣೆ ಮಾಡುವ ಪ್ರಯತ್ನ ಇಲ್ಲಿ ಮಾಡುವುದಿಲ್ಲ. ಆದರೆ ಹಾಗೆ ಅನ್ವಯಿಸಿಕೊಳ್ಳುತ್ತಿರುವುದಂತೂ ಸತ್ಯ.

ಉದಾಹರಣೆಗೆ, ಎರಡು ದಿನದ ಹಿಂದೆ ಉತ್ತರ ಪ್ರದೇಶದಲ್ಲಿ ಕುಖ್ಯಾತ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ನನ್ನು ಪೊಲೀಸ್‌ ಭದ್ರತೆಯ ನಡುವೆಯೇ ಗುಂಡಿಟ್ಟು ಹತ್ಯೆ ಮಾಡಲಾಯಿತು. ಈ ವಿಚಾರವನ್ನು ಬಿಜೆಪಿಯ ಅನುಯಾಯಿಗಳು “ದುಷ್ಟ ಸಂಹಾರ” ಎಂದು ವರ್ಣಿಸುತ್ತಿದ್ದಾರೆ. ಅಂದರೆ ದುಷ್ಟರ ಉಪಟಳ ಯಾವಾಗ ಹೆಚ್ಚಾಗುತ್ತದೆಯೋ ಆಗ ತಾನೇ ಆವತರಿಸಿ ಸಂಹಾರ ಮಾಡುವ ದೇವರ ಲೀಲೆಯನ್ನು ಈ ಘಟನೆಗೆ ಅನ್ವಯಿಸಿಕೊಳ್ಳಲಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೇ ರಚಿಸಿ, ಒಪ್ಪಿ, ಅಳವಡಿಸಿಕೊಂಡಿರುವ ಸಂವಿಧಾನದ ಪ್ರಕಾರ ನ್ಯಾಯಾಲಯದ ಪ್ರಕ್ರಿಯೆ ಮೂಲಕ ಶಿಕ್ಷೆ ಆದರೆ ಮಾತ್ರವೇ ಶಿಕ್ಷೆ ಎನ್ನುವುದಕ್ಕೆ ಇನ್ನೂ ಮನಸ್ಸು ಬದಲಾವಣೆಯಾಗಿಲ್ಲ.

ಅದೇ ರೀತಿ, ಆಚಾರ್ಯ ಚಾಣಾಕ್ಯ ತನ್ನ ಅರ್ಥ ಶಾಸ್ತ್ರ ಗ್ರಂಥದಲ್ಲಿ ಒಬ್ಬ ದೇಶ ಆಳುವ ರಾಜನಿಗೆ ಇರಬೇಕಾದ ಅರ್ಹತೆಗಳನ್ನು ಈ ರೀತಿ ಪಟ್ಟಿ ಮಾಡಿದ್ದಾನೆ. ಈ ಎಲ್ಲ ಗುಣಗಳು ಯಾರಲ್ಲಿವೆಯೋ ಅವರಿಗೆ ನಿಮ್ಮ ಮತ ನೀಡಿ ಎಂಬ ಸಂದೇಶವೊಂದು ವಾಟ್ಸ್‌ಅಪ್‌ನಲ್ಲಿ ಇತ್ತೀಚೆಗೆ ಹರಿದಾಡುತ್ತಿದೆ. ಈಗಿನ ವ್ಯವಸ್ಥೆಯಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರದಂತಹ ಅನೇಕ ಲೋಪದೋಷಗಳೂ, ಹಿಂದಿನದೇ ಒಳ್ಳೆಯದು ಎಂಬ ಅಭಿಪ್ರಾಯಕ್ಕೆ ಒತ್ತಾಸೆ ನೀಡಿವೆ.

ವೀರ ಸಾವರ್ಕರ್‌ ಮೊಮ್ಮಗ, ನೇತಾಜಿ ಸುಭಾಷ್‌ಚಂದ್ರ ಬೋಸ್‌ ಮೊಮ್ಮಗ, ಮಹಾತ್ಮ ಗಾಂಧಿ ಮೊಮ್ಮಗ, ಡಾ. ಬಿ.ಆರ್‌. ಅಂಬೇಡ್ಕರ್‌ ಮೊಮ್ಮಗ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಮೊಮ್ಮಗ… ಹೀಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರಿಗೆ ಪ್ರಾಮುಖ್ಯತೆ ನೀಡುತ್ತೇವೆ. ಈ ಪೀಳಿಗೆಯನ್ನು ನೋಡುತ್ತಲೇ, ಹಿಂದಿನ ಪೀಳಿಗೆಯನ್ನು ಕಲ್ಪಿಸಿಕೊಳ್ಳುತ್ತೇವೆ ಹಾಗೂ ಈ ಪೀಳಿಗೆಯವರಲ್ಲಿ ಹಿಂದಿನವರ ರೂಪ, ಹಾವ ಭಾವವನ್ನು ಕಾಣುತ್ತ ಪುಳಕಿತರಾಗುತ್ತೇವೆ. ಅಂಬೇಡ್ಕರ್‌ ಮೊಮ್ಮಗ ಮಾತನಾಡುತ್ತಿದ್ದರೆ ನಮಗೆ ಸಾಕ್ಷಾತ್‌ ಅಂಬೇಡ್ಕರ್‌ ವಾಣಿಯೇ ಕೇಳುವಂತೆ ಭಾಸವಾಗುತ್ತದೆ. ಈ ವಿಚಾರ ರಾಜಕೀಯಕ್ಕಷ್ಟೆ ಸೀಮಿತವಾಗಿಲ್ಲ, ಸಾಂಸ್ಕೃತಿಕ ಲೋಕದಲ್ಲೂ ಇದೆ.

ರಾಜಕಾರಣಿಯೊಬ್ಬನ ಪುತ್ರ ಅಥವಾ ಪುತ್ರಿ ಎನ್ನುವುದು ಮೂಲ ಮಟ್ಟದಲ್ಲಿ ಒಂದು ಪ್ರಭಾವಳಿಯನ್ನು ಕಲ್ಪಿಸಿಬಿಡುತ್ತದೆ. ಆತನ ಅಪ್ಪನಲ್ಲಿ ಇರುವ ಯಾವುದೇ ಗುಣ ಈತನಲ್ಲಿ ಇಲ್ಲದಿದ್ದರೂ ನೋಡಿ ಕಣ್ತುಂಬಿಕೊಳ್ಳೋಣ ಎಂಬ ಕುತೂಹಲಕ್ಕಾದರೂ ಜನರು ಸೇರಿಕೊಳ್ಳುತ್ತಾರೆ. ಇಷ್ಟರ ನಂತರ ಆತನೇನಾದರೂ ಒಂದಷ್ಟು ನಾಯಕತ್ವ ಗುಣ ಹೊಂದಿದ್ದರಂತೂ ಆತ ರಾಜಕಾರಣದಲ್ಲಿ ಸಫಲನಾದ ಎಂದೇ ಅರ್ಥ.

ಉದಾಹರಣೆಗೆ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪುತ್ರ, ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪುತ್ರ… ಮುಂತಾದ ಹಣೆಪಟ್ಟಿಗಳು ಸಾಕಷ್ಟು ಪ್ರಾರಂಭಿಕ ಮತಗಳನ್ನು ತಂದುಕೊಟ್ಟುಬಿಡುತ್ತವೆ. ಮಾಧ್ಯಮಗಳಲ್ಲಿ ಪ್ರಾರಂಭಿಕ ಪ್ರಚಾರಕ್ಕೂ ಇದು ಅನುಕೂಲವಾಗುತ್ತದೆ. ಆದರೆ ಇದೇ ಪ್ರಾರಂಭಿಕ ಮತಗಳು, ಪ್ರಚಾರ, ಹೊಸದಾಗಿ ರಾಜಕೀಯ ಪ್ರವೇಶಿಸುವ ಸಿ.ಟಿ. ರವಿ, ಪಿ. ರಾಜೀವ್‌ ಅಂಥವರಿಗೆ ಸಿಗುವುದಿಲ್ಲ. ಆತ ತನ್ನ ಪ್ರತಿ ಹೆಜ್ಜೆಯನ್ನೂ ನಿರೂಪಿಸಬೇಕಾಗುತ್ತದೆ, ತನ್ನ ಪ್ರತಿ ನಡವಳಿಕೆಯನ್ನೂ ತಿದ್ದಿಕೊಳ್ಳಬೇಕಾಗುತ್ತದೆ. ಕಾಲಾನುಕ್ರಮದಲ್ಲಿ ಆತನನ್ನು ನಾಯಕ ಎಂದು ಸ್ವೀಕರಿಸಲಾಗುತ್ತದೆ. ಆದರೆ ಅದಕ್ಕೆ ಸಾಕಷ್ಟು ವರ್ಷ ಪರಿಶ್ರಮಪಡಬೇಕಾಗುತ್ತದೆ. ಹಾಗೆಯೇ, ಏನಾದರೂ ತಪ್ಪು ಹೆಜ್ಜೆ ಇಟ್ಟಾಗ ಕುಸಿಯುವ ಆತಂಕವೂ ಕುಟುಂಬದ ಹಿನ್ನೆಲೆ ಇಲ್ಲದವರಿಗೇ ಹೆಚ್ಚು. ಒಂದು ತಪ್ಪು ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಕುಸಿದರೆ ಮತ್ತೆ ಏಳುವುದು ಮರುಜನ್ಮ ಪಡೆದಷ್ಟೇ ಕಷ್ಟ. ಕುಟುಂಬದ ಹಿನ್ನೆಲೆ ಹೊಂದಿರುವವರಿಗೆ ತಮ್ಮ ವ್ಯಕ್ತಿತ್ವವನ್ನು ಪೂರ್ಣ ನಿರೂಪಿಸುವ ಹೊಣೆ ಇರುವುದಿಲ್ಲ.

ಕುಷನ್‌ ಎಫೆಕ್ಟ್
ಇದೇ ಪ್ರಾರಂಭಿಕ ಅನುಕೂಲ (ಕುಷನ್‌ ಎಫೆಕ್ಸ್) ಕಾಂಗ್ರೆಸ್‌ನ ರಾಹುಲ್‌ ಗಾಂಧಿ ಅವರಿಗೂ ದೊರಕಿದೆ. ಜವಾಹರಲಾಲ್‌ ನೆಹರು ಅವರಿಂದ ಇಂದಿರಾ ಗಾಂಧಿ, ನಂತರ ರಾಜೀವ್ ಗಾಂಧಿ, ಆನಂತರ ಸೋನಿಯಾ ಗಾಂಧಿ, ಇದೀಗ ರಾಹುಲ್‌ ಗಾಂಧಿವರೆಗೆ ಮುಂದುವರಿದುಕೊಂಡು ಬಂದಿದೆ. ರಾಹುಲ್‌ ಗಾಂಧಿ ತಾವು ಪ್ರಧಾನಿ ನರೇಂದ್ರ ಮೋದಿಗೆ ಯಾವ ವಿಚಾರದಲ್ಲೂ ಸರಿಸಾಟಿಯಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ.

ಹಾಗೆ ನೋಡಿದರೆ ಮೇಲ್ನೋಟಕ್ಕೆ ಹಾಗೆಯೇ ಅನ್ನಿಸುತ್ತದೆ. ಏಕೆಂದರೆ ಮೋದಿಯವರು ಸುಮಾರು ಮೂರು ದಶಕದ ಸಾರ್ವಜನಿಕ ಜೀವನದಲ್ಲಿ ನಿರಂತರ ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿದ್ದಾರೆ. ಅನೇಕ ರಾಜ್ಯಗಳ ಚುನಾವಣೆಯನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಅನೇಕ ಸಚಿವಾಲಯಗಳನ್ನು ನಿಭಾಯಿಸಿದ್ದಾರೆ. ಆದರೆ ರಾಹುಲ್‌ ಗಾಂಧಿ ಇಲ್ಲಿವರೆಗೆ ಸಂಸದರಾಗಿದ್ದು ಬಿಟ್ಟರೆ ತಮ್ಮದೇ ಯುಪಿಎ ಸರ್ಕಾರ ಎರಡು ಬಾರಿ ಅಧಿಕಾರದಲ್ಲಿದ್ದರೂ ಸಚಿವ ಸ್ಥಾನವನ್ನೂ ಪಡೆಯಲಿಲ್ಲ. ಇಷ್ಟೆಲ್ಲ ಆದರೂ ಕಾಂಗ್ರೆಸ್‌ ಪಕ್ಷದಲ್ಲಿ ರಾಹುಲ್‌ ಗಾಂಧಿಯವರಿಗೆ ಇರುವ ಗೌರವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗಿಲ್ಲ ಎನ್ನುವುದು ಮಲ್ನೋಟಕ್ಕೇ ಕಾಣುತ್ತದೆ.

ರಾಹುಲ್‌ ಗಾಂಧಿಯವರ ನೇತೃತ್ವದಲ್ಲಿ ದೇಶದ ಉದ್ದಕ್ಕೂ ಸುಮಾರು 3,500 ಕಿಲೋ ಮೀಟರ್‌ ಕ್ರಮಿಸಿದ ಭಾರತ್‌ ಜೋಡೊ ಯಾತ್ರೆ ಸಾಕಷ್ಟು ಪ್ರಚಾರ ಗಿಟ್ಟಿಸಿತು. ಇನ್ನೇನು ರಾಹುಲ್‌ ಗಾಂಧಿಯವರಳಗೆ ಹುದುಗಿ ಕುಳಿತಿರುವ ನಾಯಕತ್ವ ಹೊರಹೊಮ್ಮಿತು ಎಂಬಂತೆ ಭಾಸವಾಗುವಷ್ಟು ಆ ಪಕ್ಷದಲ್ಲಿ ಉತ್ಸಾಹ ಚಿಮ್ಮಿತ್ತು. ಆದರೆ ನಿಶ್ಚಿತ ಗುರಿಯಿಲ್ಲದೆ ರಾಹುಲ್‌ ಗಾಂಧಿಯವರು ನಡೆಸುತ್ತಿರುವ ಕಾರ್ಯಕ್ರಮಗಳು ಮತ್ತೆ ಮತ್ತೆ ಪಕ್ಷವನ್ನು ಹಿಮ್ಮೆಟ್ಟಿಸುತ್ತಿವೆ. ಇಷ್ಟೆಲ್ಲದರ ನಂತರವೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಎದುರಾಳಿಯಾಗುವ ವ್ಯಕ್ತಿ ಇಡೀ ದೇಶದಲ್ಲಿ ಯಾರಾದರೂ ಇದ್ದರೆ ಅದು ರಾಹುಲ್‌ ಗಾಂಧಿ ಮಾತ್ರ ಎಂಬ ಅಭಿಪ್ರಾಯ ಇದ್ದೇ ಇದೆ. ಹಾಗಾಗಿಯೇ ಅಸ್ಸಾಂನಿಂದ ಕರ್ನಾಟಕದವರೆಗೆ ಎಲ್ಲೇ ಹೋದರೂ ಮುಖ್ಯವಾಗಿ ಕುಟುಂಬ ರಾಜಕಾರಣವನ್ನು, ಪರೋಕ್ಷವಾಗಿ ರಾಹುಲ್‌ ಗಾಂಧಿಯನ್ನು ಮೋದಿ ಟೀಕೆ ಮಾಡುತ್ತಾರೆ.

ಬಿಜೆಪಿಯೂ ಕುಟುಂಬ ರಾಜಕಾರಣದಿಂದ ಹೊರಬರಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್‌ನ ಹೋಲಿಕೆಯಲ್ಲಿ ಮೊದಲ ಹಂತದ ನಾಯಕತ್ವದಲ್ಲಿ  ಸಾಕಷ್ಟು ಹೊಸ ಪೀಳಿಗೆಯನ್ನು ಕಾಣಬಹುದು. ಸ್ವತಃ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಅವರಿಂದ ಆರಂಭವಾಗಿ ಸಾಕಷ್ಟು ಜನರು ಮೊದಲ ಪೀಳಿಗೆಯ ರಾಜಕಾರಣಿಗಳು. ಆದರೆ ಶಾಸಕರು, ಸಂಸದರನ್ನು ಆಯ್ಕೆ ಮಾಡುವ ಸಮಯದಲ್ಲಿ ಆ ಪಕ್ಷವೂ ತೀರಾ ಹೆಚ್ಚಿನ ಸ್ವಾತಂತ್ರ್ಯ ತೆಗೆದುಕೊಳ್ಳಲು ಆಗುತ್ತಿಲ್ಲ. ಕುಟುಂಬ ರಾಜಕಾರಣದ ಬದ್ಧ ವಿರೋಧಿಯಾಗಿ ವರ್ತಿಸಲು ಹೋದರೆ ರಾಜಕೀಯದಲ್ಲಿ ಅತ್ಯಂತ ಪ್ರಮುಖವಾಗಿ ಬೇಕಾದ ಸಂಖ್ಯೆಯನ್ನೇ ಕಳೆದುಕೊಳ್ಳುವ ಅಪಾಯ ಇರುತ್ತದೆ.

ರಾಜಮಹಾರಾಜರ ಮುಂದುವರಿಕೆಯೇ ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ತಿಳಿದಿರುವವರೆಗೆ ಕುಟುಂಬ ರಾಜಕಾರಣ ಗಟ್ಟಿಯಾಗಿಯೇ ಇರುತ್ತದೆ. ಬಿಜೆಪಿಯು ʼಕುಟುಂಬ ರಾಜಕಾರಣ ವಿರೋಧಿʼ ನಿಲುವನ್ನು ಮುಂವರಿಸಬೇಕೆಂದರೆ ನಿರಂತರ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ಮಾಡುತ್ತಲೇ ಇರಬೇಕಾಗುತ್ತದೆ. ಒಂದು ಕ್ಷಣ ಮೈಮರೆತರೂ ಯಾವುದೇ ಕ್ಷಣದಲ್ಲಿ ಅದು ಬೃಹತ್‌ ರೂಪ ತಳೆಯುವ ಸಾಧ್ಯತೆಯಿದೆ. ಈ ಸತ್ಯವು ಪ್ರಧಾನಿ ನರೇಂದ್ರ ಮೋದಿಯವರಿಗೆ ಚೆನ್ನಾಗಿಯೇ ತಿಳಿದಿದೆ. ಅದಕ್ಕಾಗಿಯೇ ಈ ನಿರಂತರ ವಾಗ್ದಾಳಿ.

ಇದನ್ನೂ ಓದಿ: D ಕೋಡ್‌ ಅಂಕಣ: ರಾಜಕೀಯ ಹವಾಮಾನ ವರದಿ: ಕಾಂಗ್ರೆಸ್ ಕಡೆಗೆ ಬೀಸುವಂತಿದೆ ತಂಗಾಳಿ; ಪಕ್ಷಾಂತರಿಗಳಿಗೆ ತಿಳಿದಿದೆಯೇ ಒಳಸುಳಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
Viral Video
ವೈರಲ್ ನ್ಯೂಸ್11 seconds ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ4 mins ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Has Karnataka Congress government suggested PM Narendra Modi programme should not be success Kageri question to police
Lok Sabha Election 20248 mins ago

PM Narendra Modi: ಮೋದಿ ಕಾರ್ಯಕ್ರಮ ಯಶವಾಗದಿರಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

Congress MLA
ಪ್ರಮುಖ ಸುದ್ದಿ23 mins ago

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 202438 mins ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ50 mins ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

777 Charlie
ಸ್ಯಾಂಡಲ್ ವುಡ್52 mins ago

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

Food Poisoning
ಪ್ರಮುಖ ಸುದ್ದಿ1 hour ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್2 hours ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ2 hours ago

Girl Saved Mother: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯ ಜೀವ ಕಾಪಾಡಿತು ಪುತ್ರಿ ಶಾಲೆಯಲ್ಲಿ ಕಲಿತ ಪಾಠ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202419 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ24 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌