ಧವಳ ಧಾರಿಣಿ ಅಂಕಣ: ರೈತ ಹೋರಾಟಕ್ಕೆ ಸಂಘಟನೆಯ ರೂಪ ಕೊಟ್ಟ ಸಂನ್ಯಾಸಿ - Vistara News

ಅಂಕಣ

ಧವಳ ಧಾರಿಣಿ ಅಂಕಣ: ರೈತ ಹೋರಾಟಕ್ಕೆ ಸಂಘಟನೆಯ ರೂಪ ಕೊಟ್ಟ ಸಂನ್ಯಾಸಿ

ಸಾಧು ಬಾಬಾ ರಾಮಚಂದ್ರರ ಹೋರಾಟದ ವಿವರಗಳು ಲಕ್ನೋದ ಸಿಐಡಿ ಫೈಲಿನಲ್ಲಿ ಗುಪ್ತ ದಾಖಲೆಯಾಗಿ ಸ್ವಾತಂತ್ರ್ಯ ಬಂದ 76 ವರ್ಷಗಳಾದರೂ ಹೊರಬರದೇ ಭದ್ರವಾಗಿ ಮುಚ್ಚಿಕೊಂಡಿವೆ. ಅದನ್ನು ತೆರೆದರೆ ಮಹತ್ವದ ದಾಖಲೆಗಳು ಸಿಗಬಹುದು.

VISTARANEWS.COM


on

farmer agitation freedom fighting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ವಾತಂತ್ರ್ಯ ಚಳವಳಿಯಲ್ಲಿ ರೈತ ಹೋರಾಟದ ಬೇರುಗಳು, ಭಾಗ- 2

dhavala dharini by Narayana yaji

ಸರಿ ಸುಮಾರು ಇದೇ ಹೊತ್ತಿನಲ್ಲಿ ರೈತರೊಳಗೇ ಈ ಸಮಸ್ಯೆಗೆ ಪರಿಹಾರವನ್ನು ತಾವೇ ಪರಿಹರಿಸಬೇಕೆನ್ನುವ ಭಾವನೆ ಮೂಡುತ್ತದೆ. ಎಲ್ಲಿ ನೋವಿರುತ್ತದೆಯೋ ನಾಯಕತ್ವವೆನ್ನುವುದು ಅಲ್ಲಿಂದಲೇ ಮೂಡಿಬರುತ್ತದೆ. ಉತ್ತರ ಪ್ರದೇಶದ ಪ್ರತಾಪಘಡ ಜಿಲ್ಲೆಯ ರೂರೆ ಎನ್ನುವಲ್ಲಿ ಜಿಂಘೂರಿ ಸಿಂಗ್ ಮತ್ತು ಸಹದೇವ ಸಿಂಗ್ ಎನ್ನುವ ರಜಪೂತ ಸಮುದಾಯಕ್ಕೆ ಸೇರಿದ ರೈತರು ಕಿಸ್ಸಾನ ಸಭಾವೊಂದನ್ನು ಕಟ್ಟಿ ರೈತರ ಶೋಷಣೆಯ ವಿರುದ್ಧ ಹೋರಾಟ (farmer agitation) ಮಾಡಲು ಪ್ರಾರಂಭಿಸುತ್ತಾರೆ. ಸಿಂಘ್ ಜೋಡಿಗಳು ಸ್ಥಾಪಿಸಿದ ಕಿಸಾನ್ ಸಭಾ, ಯುಪಿ ಕಿಸಾನ್ ಸಭಾದಂತೆ ರಾಜಕೀಯ ಕಾರಣಗಳಿಗಾಗಿರಲಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವಲ್ಲಿ ಲಭ್ಯವಿರುವ ಅಭಿವೃದ್ಧಿಪರ ಮಾಧ್ಯಮ ಯಾವುದು ಎನ್ನುವುದನ್ನು ಆಲೋಚಿಸುವುದಾಗಿತ್ತು. ಅವರ ಮುಖ್ಯ ಉದ್ದೇಶ ಬ್ರಿಟಿಷರ ವಿರುದ್ಧ ಹೋರಾಡುವುದಲ್ಲ; ತಾಲೂಕುದಾರಿಂದ ಶೋಷಣೆಗೊಳಗಾಗುತ್ತಿರುವ ರೈತರ ಧ್ವನಿಯಾಗಿ ಕಾರ್ಯನಿರ್ವಹಿಸುವುದಾಗಿತ್ತು.

ಮೊದಲ ಭಾಗ ಇಲ್ಲಿದೆ ಓದಿ: ಧವಳ ಧಾರಿಣಿ ಅಂಕಣ: ಸ್ವಾತಂತ್ರ್ಯ ಚಳವಳಿಯಲ್ಲಿ ರೈತ ಹೋರಾಟದ ಬೇರುಗಳು

ಇಂಥ ಒಂದು ಸಂಘಟನೆ ಇರುವ ಕುರಿತು 1920ರ ವರೆಗೂ ಯುಪಿ ಕಿಸಾನ ಸಭಾಕ್ಕಾಗಲಿ, ಯುಪಿ ಕಿಸಾನ ಸಭಾ ಇದೆಯೆನ್ನುವ ವಿಷಯ ಪ್ರತಾಪಘರದ ರೈತರಿಗಾಗಲೀ ತಿಳಿದಿರಲಿಲ್ಲ. ಇದಕ್ಕೆ ಕಾರಣ ಜಿಂಘು ಸಿಂಗ್ ಮತ್ತು ಸಹದೇವ ಸಿಂಗ್ ಅವರಲ್ಲಿನ ನಾಯಕತ್ವದ ಕೊರತೆಯಾಗಿತ್ತು. ಈ ಇಬ್ಬರು ರೈತ ನಾಯಕರ ಕುರಿತು ಹೆಚ್ಚಿನ ವಿವರಗಳು ಸಿಗುವುದಿಲ್ಲ. ಹೀಗೆ ಅಂಧಕಾರದಲ್ಲಿರುವಾಗ ಇವರಿಗೆ ಬೆಳಕಾಗಿ ಬಂದವ ಓರ್ವ “ಸಾಧು ಬಾಬಾ ರಾಮಚಂದ್ರ” (Sadhu Baba Ramachandra) ಎನ್ನುವಾತ. ಈತನ ಹಿನ್ನೆಲೆ ತುಂಬಾ ಕುತೂಹಲಕಾರಿಯಾಗಿದೆ. 1864ರಲ್ಲಿ ಗ್ವಾಲಿಯರ್‌ನಲ್ಲಿ ಜನಿಸಿದ ಈತ ಮಹಾರಾಷ್ಟ್ರ ಬ್ರಾಹ್ಮಣ ಸಮುದಾಯಕ್ಕೆ ಸೇರಿದವ. ಈತನ ಹೆಸರು ಶ್ರೀಧರ ಬಲವಂತ ಜೋಧಪುರಕರ್. ಫಿಜಿದ್ವೀಪದಲ್ಲಿ ಕಾರ್ಮಿಕರ ಸಲುವಾಗಿ ಹೋರಾಟ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಅಯೋಧ್ಯೆಗೆ ಬಂದು ಸಂತನಾಗಿ ಬಾಬಾ ರಾಮಚಂದ್ರ ಎನ್ನುವ ಹೆಸರಿನಲ್ಲಿ ಜೀವನವನ್ನು ಸಾಗಿಸುತ್ತಿದ್ದನು.

ಬಾಬಾ ರಾಮಚಂದ್ರ ರೈತರ ಹಕ್ಕುಗಳಿಗಾಗಿ ಅವಧ ಜಿಲ್ಲೆಯಲ್ಲಿ ಹೋರಾಟ ಮಾಡುತ್ತಿರುವುದನ್ನು ಗಮನಿಸಿದ ಜಿಂಘು ಸಿಂಗ್ ಮತ್ತು ಸಹದೇವ ಸಿಂಗ್ ಆತನನ್ನು ರೂರೆಗೆ ಆಹ್ವಾನಿಸಿ ಈ ಕಿಸಾನಸಭಾದ ನೇತೃತ್ವವನ್ನು ವಹಿಸಲು ಆತನ ಹತ್ತಿರ ಕೇಳಿಕೊಳ್ಳುತ್ತಾರೆ. ಶೋಷಣೆಯ ವಿರುದ್ಧ ತಿರುಗಿಬೀಳುವ ಸ್ವಭಾವದ ಬಾಬಾ ಪ್ರತಾಪಘಡ ಜಿಲ್ಲೆಯ ರೈತರ ನೇತೃತ್ವವನ್ನು ವಹಿಸಿಕೊಳ್ಳುತ್ತಾನೆ. ಯಾವಾಗ ಬಾಬಾ ಕಿಸಾನ್ ಸಭಾದ ಕರ್ಣಧಾರತ್ವವನ್ನು ವಹಿಸಿದರೋ ರೈತ ಹೋರಾಟದ ಸ್ವರೂಪವೇ ಬದಲಾಗಿಬಿಡುತ್ತದೆ. ಬಾಬಾ ರಾಮಚಂದ್ರ ಅಹಿಂಸೆಯಲ್ಲಿ ನಂಬಿಕೆಯನ್ನಿಟ್ಟಿದ್ದ. ರೈತರಲ್ಲಿ ಒಗ್ಗಟ್ಟನ್ನು ಮೂಡಿಸಲು ಹಳ್ಳಿಹಳ್ಳಿ ತಿರುಗಿ ಜನರನ್ನು ಸಂಘಟಿಸಲು ಪ್ರಯತ್ನಿಸಿದ. ಅವಧದ ಸುತ್ತ ಇರುವ ತಾಲೂಕದಾರರು ಮತ್ತು ರೈತರ ನಡುವೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಬಯಸಿದ.

ಅದರೆ ಇದು ಪ್ರಯೋಜನಕ್ಕೆ ಬಾರಲಿಲ್ಲ. ಕೊಬ್ಬಿದ ಜಮೀನುದಾರರು ಸರಕಾರದ ಬೆಂಬಲದೊಂದಿಗೆ ಈ ಸಂಘಟನೆಯನ್ನು ನಿರ್ಲಕ್ಷಿಸಿದರು; ಕಿಸಾನ್ ಸಭಾದ ಜೊತೆ ಗುರುತಿಸಿಕೊಂಡಿದ್ದ ರೈತರನ್ನು ಒಕ್ಕಲೆಬ್ಬಿಸತೊಡಗಿದರು. ರೈತರಲ್ಲಿ ಆತ್ಮವಿಶ್ವಾಸದ ಕೊರತೆಯಿತ್ತು. ಗೆಲ್ಲಬಹುದೆನ್ನುವ ಯಾವ ಭರವಸೆಯೂ ಇದ್ದಿರಲಿಲ್ಲ. ಆಗ ಬಾಬಾ ತಮ್ಮ ಹೋರಾಟದ ಸ್ವರೂಪವನ್ನು ಬದಲಾಯಿಸಿಕೊಂಡರು. ಜನರಲ್ಲಿ ರಾಮಚರಿತ ಮಾನಸದ ಕುರಿತು ಅಪಾರಶದ್ಧೆ ಇತ್ತು. ರಾಮಚಂದ್ರನ ಭಕ್ತರಾಗಿದ್ದ ಬಾಬಾ, ರಾಮಚರಿತಮಾನಸವನ್ನೇ ರೈತರನ್ನು ಸಂಘಟಿಸಲು ಬಳಸತೊಡಗಿದರು. ಮೊಟ್ಟಮೊದಲ ಬಾರಿಗೆ ರೈತರಲ್ಲಿ ಅಸಹಕಾರ ಚಳುವಳಿಯ ಕಲ್ಪನೆಯನ್ನು ಕೊಟ್ಟಾ ಬಾಬಾ ರಾಮಚಂದ್ರ. ಕೇವಲ ನಜರಾನ ಕರವಲ್ಲದೇ ಬಿಟ್ಟಿ ಸೇವೆಗಳನ್ನು ರೈತರು ಮಾಡದಂತೆ ಅವರಲ್ಲಿ ಜಾಗ್ರತಿ ಮೂಡಿಸಿದ. ಜಮೀನುದಾರರು ರೈತರ ಒಕ್ಕಲೆಬ್ಬಿಸಿದರೆ ಇನ್ನೊಬ್ಬ ರೈತ ಅಲ್ಲಿಗೆ ಹೋಗಿ ಒಕ್ಕಲೆಬ್ಬಿಸಿದ ಹೊಲವನ್ನು ಪಡೆಯದಂತೆ ರೈತರ ಮನವೊಲಿಸಿ ಅವರ ಪ್ರಯತ್ನ ಯಶಸ್ವಿಯಾಗದಂತೆ ನೋಡಿಕೊಂಡ.

ರೈತರ ಒಗ್ಗಟ್ಟು ಯಾವ ಮಟ್ಟದಲ್ಲಿ ಆಯಿತೆಂದರೆ ಪ್ರತಾಪಘಡ ಅಯೋಧ್ಯೆ ರಾಯ ಬರೇಲಿ ಸುಲ್ತಾನಪುರ ಇಲ್ಲೆಲ್ಲಾ ಜಮೀನುದಾರರ ಶೋಷಣೆಯ ವಿರುದ್ಧ ಅಸಹಕಾರ ಚಳುವಳಿ ಜೋರಾಯಿತು. ತೋರಿಕೆಗೆ ಇದು ತಾಲೂಕಾದಾರಿಕೆಯ ವಿರುದ್ಧ ಹೋರಾಟ ಎಂದು ಕಂಡರೂ ಇದರಲ್ಲಿ ರಾಮಚರಿತ ಮಾನಸದ ರಾಮ ರಾವಣರ ಯುದ್ಧ ಎಂದು ಹೇಳುವ ಮೂಲಕ ಸ್ವಾಂತಂತ್ರ್ಯದ ಕಿಚ್ಚನ್ನು ರೈತರಲ್ಲಿ ಮೂಡಿಸಿತ್ತಿರುವದು ಆಂಗ್ಲರ ಗಮನಕ್ಕೆ ಬಂತು. 1920 ರ ಜೂನ್ ತಿಂಗಳಲ್ಲಿ ಬಾಬಾ ರೈತ ಸಂಘಟನೆ ಇಡೀ ಅವಧ ಪ್ರಾಂತಕ್ಕೆ ಹಬ್ಬಿತ್ತು. ರೈತರು ಕರನಿರಾಕರಣೆಯ ಚಳುವಳಿಯನ್ನು ಪ್ರಾರಂಭಿಸಿದ್ದಷ್ಟೇ ಅಲ್ಲ, ಸಾಮೂಹಿಕವಾಗಿ ಸರಕಾರ ಮತ್ತು ತಾಲೂಕುದಾರರ ವಿರುದ್ಧ ಶಾಂತಿಯುತ ಪ್ರತಿಭಟನೆಯನ್ನು ಮಾಡಿದರು. ಬಾಬಾನಿಗೆ ಚಳುವಳಿಯ ನೇತಾರನಾಗುವದು ಮುಖ್ಯವಾಗಿರಲಿಲ್ಲ. ರೈತರ ಕಲ್ಯಾಣವಾಗುವದು ಆತನ ಗುರಿಯಾಗಿತ್ತು. ಹಾಗಾಗಿ ಆತ ಮಹಾತ್ಮಾ ಗಾಂಧೀಜಿ ಮತ್ತು ಕಾಂಗ್ರೇಸ್ ನಾಯಕರನ್ನು ಈ ಚಳುವಳಿಗೆ ಬೆಂಬಲ ನೀಡಲು ಕೇಳಿಕೊಂಡ.

ಆದರೆ ಮೋತಿಲಾಲ್ ನೆಹರೂ ಅಧ್ಯಕ್ಷರಾಗಿರುವಾಗ 1919 ರಲ್ಲಿ ಪ್ರತಿನಿಧಿಗಳಾಗಿ ಬಂದ ಸುಮಾರು 1800 ರೈತರಿಗೆ ನಿಶ್ಶ್ಯುಲ್ಕವಾಗಿ ಪ್ರವೇಶವನ್ನು ನಿರಾಕರಿಸಲಾಯಿತು. ಅವರನ್ನು ಖುರ್ಚಿಯಿಂದ ಎಬ್ಬಿಸಿ ಹಿಂದಕ್ಕೆ ಹೋಗುವಂತೆ ಹೇಳಲಾಯಿತು. 1920ರ ನಾಗಪುರ ಅಧಿವೇಶನದಲ್ಲಿಯೂ ಹೀಗೆ ಆಯಿತು. ಇದೇ ಹೊತ್ತಿಗೆ ಸರಕಾರ ಬಾಬಾ ರಾಮಚಂದ್ರ ಮತ್ತು ಅವರ ಮೂವತ್ತೆರಡು ಸಂಗಾತಿಗಳನ್ನು ಕಳ್ಳತನ ಮತ್ತು ಮೋಸದ ಆಪಾದನೆಯನ್ನು ಹೊರಿಸಿ 1920 ಆಗಸ್ಟ್‌ ತಿಂಗಳಿನಲ್ಲಿ ಬಂಧಿಸಿ ಜೈಲಿಗಟ್ಟಿದರು. ಈಗ ಮಾತ್ರ ರೈತರ ಸಹನೆಯ ಕಟ್ಟೆಯೊಡೆಯಿತು. ಸುಮಾರು ಐದು ಸಾವಿರದಷ್ಟಿರುವ ರೈತರು ಕೋರ್ಟ್ ಆವರಣಕ್ಕೆ ನುಗ್ಗಿ ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ತಾವು ಕದಲುವುದಿಲ್ಲವೆಂದು ಮುತ್ತಿಗೆ ಹಾಕಿದರು. ಬೇರೆ ದಾರಿ ಕಾಣದೇ ಸರಕಾರ ಬಾಬಾ ರಾಮಚಂದ್ರ ಮತ್ತು ಅವರ ಸಹಚರರನ್ನು ಬಿಡುಗಡೆ ಮಾಡಬೇಕಾಯಿತು.

ಆದರೆ ಇದು ಗಾಂಧೀಜಿಯವರ (Mahatma Gandhi) ದೃಷ್ಟಿಯಲ್ಲಿ ಹಿಂಸೆಯಾಗಿ ಕಂಡಿತು. ಅವರ ದೃಷ್ಟಿಕೋನದಲ್ಲಿ ಜಮೀನುದಾರರೂ ಫರಂಗಿಗಳ ಗುಲಾಮರು. ಹಾಗಾಗಿ ಅವರ ವಿರುದ್ಧದ ಹೋರಾಟಕ್ಕೆ ಕಾಂಗ್ರೇಸ್ ಸಿದ್ಧವಿರಲಿಲ್ಲ. ಆ ವೇಳೆಗೆ ಹೆಚ್ಚಿನ ಜಮೀನುದಾರರು ಕಾಂಗ್ರೇಸಿಗೆ ಬೆಂಬಲ ಸೂಚಿಸಿದ್ದರು. ಅವರಲ್ಲಿ ಕೆಲವರು ಕಾಂಗ್ರೇಸಿನ ನಾಯಕರಾಗಿದ್ದರು. 1921 ರ ಫೆಬ್ರುವರಿ 10 ರಂದು ಫಯ್ಜಾಬಾದಿನಲ್ಲಿ ಗಾಂಧೀಜಿಯವರು ರೈತರನ್ನು ಉದ್ಧೇಶಿಸಿ ಮಾತನಾಡುತ್ತಾ, ರೈತರಿಂದಾದ ಹಿಂಸೆಯನ್ನೇ ತೀವ್ರವಾಗಿ ಖಂಡಿಸಿದರು. ರೈತರು ಕಾನೂನನ್ನು ಕೈಗೆ ತೆಗೆದುಕೊಂಡಿರುವುದು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಎಸಗಿದ ಮಹಾಪಾಪವೆನ್ನುತ್ತಾರೆ. ಅವರ ದೃಷ್ಟಿಯಲ್ಲಿ ಜಮೀನುದಾರರೂ ಸಹ ಸರಕಾರದ ಗುಲಾಮರು. ಹಾಗಾಗಿ ಎಲ್ಲಕ್ಕಿಂತ ದೊಡ್ಡ ಜಮೀನುದಾರರಾದ ಬ್ರಿಟಿಷರ ವಿರುದ್ಧ ಹೋರಾಡಬೇಕೇ ಹೊರತು ನಮ್ಮವರ (ಜಮೀನುದಾರ) ವಿರುದ್ಧ ಅಲ್ಲವೆಂದು ಬಿಡುತ್ತಾರೆ. (Collected work of Gandhiji P.336 vol XX).

1917ರಿಂದ 1922ರವರೆಗಿನ ರೈತ ಹೋರಾಟದಲ್ಲಿ ಗಳಿಸಿದ್ದು ಏನು ಎನ್ನುವುದು ಮುಖ್ಯ ಪ್ರಶ್ನೆ ಹಾಗೇ ಉಳಿಯುತ್ತದೆ. ಬಾಬಾ ರಾಮಚಂದ್ರ ಮತ್ತು ಇತರ ರೈತ ನಾಯಕರಿಗೆ ಕಾಂಗ್ರೇಸು ತಮ್ಮ ನೆರವಿಗೆ ಬರಬಹುದೆನ್ನುವ ಆಸೆ ಇತ್ತು. ಆದರೆ ಗಾಂಧೀಜಿಯವರೇ ಜಮೀನುದಾರರೂ ಸಹ ಬ್ರಿಟಿಷರ ಗುಲಾಮರು ಎಂದು ಹೇಳಿದ ಮೇಲೆ ಅವರಿಗೆ ಬೇರೆ ಯಾವ ಹಾದಿಯೂ ಇರಲಿಲ್ಲ. ಆದರೆ ಬ್ರಿಟಿಷ ಆಡಳಿತಕ್ಕೆ ಮಾತ್ರ ಪರಿಸ್ಥಿತಿಯನ್ನು ತಿಳಿಗೊಳಿಸಲು ಏನನ್ನಾದರೂ ಮಾಡಬೇಕೆನ್ನುವುದು ಮನದಟ್ಟಾಯಿತು. ಆ ಸಂದರ್ಭದಲ್ಲಿ ಬ್ರಿಟಿಷ ಆಡಳಿತದ ಪರವಾಗಿರುವ ‘ಪಯೋನೀರ್ ಪತ್ರಿಕೆ’ ಸಹ ರೈತರ ಸಮಸ್ಯೆಯನ್ನು ಪ್ರಧಾನವಾಗಿ ಎತ್ತಿಕೊಂಡು ಅದಕ್ಕೆ ಪರಿಹಾವನ್ನು ಕೊಡಬೇಕಾದುದು ಸರಕಾರದ ಕರ್ತವ್ಯ ಎಂದು ಎಚರಿಸಿತು. ಆಗ ಪ್ರಚಲಿತವಿರುವ ಭೂಮಸೂದೆ ಮತ್ತು ಗೇಣಿ ಕಾಯ್ದೆಗಳು ತುಂಬಾ ಹಳೆಯದಾಗಿರುವವು; ಅವುಗಳನ್ನು ಕಾಲಕ್ಕೆ ತಕ್ಕಂತೆ ಬದಲಾಯಿಸಬೇಕು ಎಂದು ಎಚ್ಚರಿಸಿತು. ಇದೇ ಕಾಲಕ್ಕೆ ಅದು ಯಾವುದೇ ಸುಧಾರಣೆಗಳನ್ನು ತರುವಾಗ ಭೂಮಾಲಿಕರ ಹಿತಾಸಕ್ತಿಗಳನ್ನು ಕಾಪಾಡುವುದೂ ಪ್ರಧಾನ ಉದ್ದೇಶವಾಗಿರಲಿ (Interest of the land lords predominate) ಎಂದು ಸಲಹೆಯನ್ನು ನೀಡಿತು.

ಇವೆಲ್ಲದರ ಪರಿಣಾಮವಾಗಿ ಅವಧ ಗೇಣಿ ಕಾಯ್ದೆ 1921ನ್ನು ಆಂಗ್ಲರ ಸರಕಾರ ಜಾರಿಗೆ ತಂದಿತು. ಇದರ ಪ್ರಕಾರ ರೈತನಿಗೆ ಗೇಣಿಯ ಹಕ್ಕು ಆತನ ಜೀವಿತಾವಧಿಯ ವರೆಗೆ ರಕ್ಷಿಸಲ್ಪಟ್ಟಿತು. ಆತನ ನಂತರ ಮತ್ತೂ ಐದು ವರ್ಷಗಳವರೆಗೆ ಆತನ ವಾರಸುದಾರರಿಗೆ ಗೇಣಿ ಹಕ್ಕು ಲಭ್ಯವಾಗುವಂತೆ ಮಾಡಿತು. ಒಂದು ವೇಳೆ ಆತನ ವಾರಸುದಾರರು ಈ ಸದ್ರಿ ಜಮೀನನ್ನು ದುರುಪಯೋಗ ಮಾಡಿದ್ದಲ್ಲಿ ಅಂತವರ ಜಮೀನನ್ನು ಜಮೀನುದಾರರು ತಮ್ಮ ಸುಪರ್ದಿಗೆ ತೆಗೆದುಕೊಳ್ಳುವಂತೆ ಬದಲಾವಣೆ ತಂದಿತು. ಮೇಲಿಂದ ನೋಡುವಾಗ ಈ ಕಾಯ್ದೆ ರೈತರ ಪರವಾಗಿ ಎನಿಸಿದರೂ, ಈ ಕಾಯ್ದೆ ಜಮೀನುದಾರರ ‘ನಝರಾನಾ” ಕರದ ಕುರಿತು ಮೌನ ವಹಿಸಿತು, ಅದುತನಕ ಜಮೀನುದಾರರು ಗರಿಷ್ಟ 6.25% ಗೇಣಿಯನ್ನು ವಿಧಿಸಬಹುದಿತ್ತು. ಈ ಮಿತಿಯನ್ನು ತೆಗೆದು ಹಾಕಲಾಯಿತು. ಒಂದುವೇಳೆ ಗೇಣಿ ತುಂಬಿದ ಕುರಿತು ಜಮೀನುದಾರ ಲಿಖಿತ ರೂಪದಲ್ಲಿ ಕೊಡಬೇಕೆನುವುದನ್ನು ಆತನ ವಿವೇಚನೆಗೆ ಬಿಟ್ಟಿತು. ಒಟ್ಟಾರೆ ಹೇಳಬೇಕೆಂದರೆ ರೈತರ ಪರಿಸ್ಥಿತಿ ಬೆಂಕಿಯಿಂದ ಬಾಣಲೆಗೆ ಬಿದ್ದಂತಾಯಿತು.

ನಂತರ ಅವರ ಹೋರಾಟ ಅಲ್ಲಿಗೇ ನಿಲ್ಲುವುದಿಲ್ಲ. ಅದು ಮತ್ತೊಂದು ಮಗ್ಗಲಿಗೆ ಹೊರಳುತ್ತದೆ. ಬಾಬಾ ರಾಮಚಂದ್ರನಿಂದ ಪ್ರಭಾವಿತನಾದ ಮದಾರಿ ಪಾಸೀ, ಖವಾಜಾ ಅಹಮದ್ ತಮ್ಮ ಜೊತೆ ಮತ್ತಿತರ ಸಹಚರರನ್ನು ಸೇರಿಸಿಕೊಂಡು ಹರ್ದೋಯಿ ಜಿಲ್ಲೆಯಲ್ಲಿ ಏಕಾ ಆಂದೋಲನವನ್ನು ಪ್ರಾರಂಭಿಸುತ್ತಾರೆ. ಮದಾರಿ ಪಾಸೀ ದಲಿತ ಪಾಸೀ ಸಮುದಾಯಕ್ಕೆ ಸೇರಿದವನು. ಗುಡ್ಡಗಾಡುಗಳಲ್ಲಿ ನೆಲೆಸಿರುವ ಪಾಸೀ ಸಮುದಾಯವು ಬಿಲ್ಲಿ ವಿದ್ಯೆಯಲ್ಲಿ ಪ್ರವೀಣರು. ಅವರು ಸಿಪಾಯಿ ಹೋರಾಟದ ಕಾಲಕ್ಕೆ ಬ್ರಿಟಿಷರ ವಿರುದ್ಧ ಕೂಟಯುದ್ಧವನ್ನು ಮಾಡಿ ಅನೇಕ ಸಾವುನೋವುಗಳಿಗೆ ಕಾರಣರಾಗಿದ್ದರು. ಹಾಗಾಗಿ ಬ್ರಿಟಿಷರು ಪಾಸೀ ಸಮುದಾಯವನ್ನು ಕ್ರಿಮಿನಲ್_ಗಳು ಎಂದು ಪರಿಗಣಿಸಿತ್ತು. ಮದಾರೀ ಪಾಸಿ ಹಳ್ಳಿಗಳಿಗೆ ಹೋಗುವಾಗ ಒಂದು ಕೈಯಲ್ಲಿ ಗೀತೆಯನ್ನು ಇನ್ನೊಂದು ಕೈಯಲ್ಲಿ ಕುರಾನನ್ನು ಹಿಡಿದು ರೈತರಲ್ಲಿ ಜಾಗ್ರತಿಯನ್ನುಂಟುಮಾಡುತ್ತಿದ್ದ. ತಲೆಯ ಮೇಲೆ ಗಾಂಧಿ ಟೊಪ್ಪಿ ಧರಿಸಿ ಒಂದು ಕೈಯಲ್ಲಿ ಬಿಲ್ಲು ಬಾಣವನ್ನು ಹಿಡಿದು ಗುಡ್ಡಗಾಡುಗಳಲ್ಲಿ ಅವಿತು ಜಮೀನುದಾರರ ಮೇಲೆ ಆಕ್ರಮಣ ಮಾಡುತ್ತಿದ್ದ. ಈತನ ಉಪಟಳವನ್ನು ತಡೆದುಕೊಳ್ಳುವುದು ಸರಕಾರಕ್ಕೆ ಕಷ್ಟವಾಯಿತು. ಈತನ ಏಕಾಆಂದೋಲನವು ಪಕ್ಕದ ಉನ್ನಾವ್, ಕಾನ್ಪುರ, ಲಕ್ನೋಗಳಿಗೂ ಹಬ್ಬಿತು. ಆತ ಈ ನಡುವೆ “ಹಿಂದುಸ್ತಾನ ಸೋಷಿಯಲಿಷ್ಟಿಕ್ ರಿಪಬ್ಲಿಕ್ ಸಂಘಟನೆಯೊಟ್ಟಿಗೆ ಸೇರಿ ಸಶಸ್ತ್ರಹೋರಾಟವನ್ನು ಮಾಡಲು ಪ್ರಯತ್ನಿಸುತ್ತಾನೆ. ಈತನ ವಿರುದ್ಧ ಸೈನಿಕರು ಮತ್ತು ಜಮೀನುದಾರರು ಒಂದೇ ಸಮನೆ ಮುಗಿಬೀಳುತ್ತಾರೆ. ಆಗ ಆತ ಅವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಭೂಗತನಾಗುತ್ತಾನೆ. ಮತ್ತು ಈತನ ಸಾವು ಅದೇ ಹೊತ್ತಿಗೆ ಆಗುತ್ತದೆ. ಸುಮಾರು 1931 ರ ಮಾರ್ಚ ತಿಂಗಳ 27, ಅಥವಾ 28 ರಂದು ನಿಗೂಢವಾಗಿ ಸತ್ತಿರಬಹುದೆಂದು ಊಹಿಸುತ್ತಾರೆ. ಬಾಕಿ ವಿವರ ಈತನ ಕುರಿತು ಸಿಗುವುದಿಲ್ಲ.

british colony

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ʼನೇತಿ ನೇತಿ’- ವಾಸ್ತವ ಮತ್ತು ತೋರಿಕೆಯಲ್ಲಿ ಸತ್ಯದ ಹುಡುಕಾಟ

ನಿರಾಶೆಗೊಂಡ ಬಾಬಾ ಏಕಾಂಗಿಯಾಗಿಯೇ ತನ್ನ ಹೋರಾಟವನ್ನು ಮುಂದುವರಿಸುತ್ತಾನೆ. ಸರಕಾರ 1947 ರವರೆಗೆ ಆತನನ್ನು ಒಟ್ಟೂ ಆರು ಸಲ ಬಂಧಿಸುತ್ತದೆ. ರೈತರಲ್ಲಿ ಜಾಗ್ರತಿ ಮೂಡಿಸಿದ ಬಾಬಾ ನಮ್ಮವರ ಅಸಹಕಾರದಿಂದ ಮೂಲೆಗೆ ಸೇರಿ ಅನಾಮಧೇಯನಾಗಿಯೇ 1950 ರಲ್ಲಿ ಈ ಲೋಕವನ್ನು ಬಿಟ್ಟು ಹೋಗುತ್ತಾನೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಾಬಾ ರಾಮಚಂದ್ರ ರೈತರನ್ನು ಕೇವಲ ಜಮೀನುದಾರರ ವಿರುದ್ಧ ಮಾತ್ರ ಹೋರಾಟ ನಡೆಸಿರುವುದಲ್ಲ. ಅವರಲ್ಲಿ ಸ್ವಾವಲಂಬಿ ಬದುಕನ್ನು ರೂಢಿಸಲು ಅನೇಕ ಸುಧಾರಣೆಯನ್ನು ಮಾಡುತ್ತಾನೆ. ಸಹಕಾರ ಸಂಘದ ತತ್ತ್ವ, ತಮ್ಮದೇ ಆದ ಚಿಕ್ಕ ಚಿಕ್ಕ ಗುಂಪುಗಳ ರಚನೆ ಮಾಡಿ ಒಂದೊಂದು ಗುಂಪಿಗೆ ಬೇರೆ ಬೇರೆ ಕೃಷಿ ಸಂಬಂಧಿತ ಉದ್ಯೋಗಗಳನ್ನು ಕೈಗೊಳ್ಳಲು ಪ್ರೇರೇಪಿಸುತ್ತಾನೆ. ಹಳ್ಳಿಯಲ್ಲಿನ ಒಂದು ಗುಂಪು ಹೈನುಗಾರಿಕೆ ಮಾಡಿದರೆ, ಇನ್ನೊಂದು ಗುಂಪು ಕೋಳಿ ಕುರಿಗಳನ್ನು ಸಾಕುವುದು, ಇನ್ನೊಬ್ಬರು ರೈತರಿಗೆ ಬೇಕಾದ ಬೀಜಗಳನ್ನು ಸಿದ್ದಪಡಿಸುವುದು, ಹೀಗೆ ಮುಂತಾಗಿ. ಇಂದಿನ ಕಿರು ಹಣಕಾಸಿನ ವ್ಯವಸ್ಥೆ ಮತ್ತು ಸ್ವಸಹಾಯ ಸಂಘಗಳ ಕಲ್ಪನೆ ಅಲ್ಲಿತ್ತು. ಆದರೆ ಅಲ್ಲಿ ಆರ್ಥಿಕ ಸಾಕ್ಷರತೆಗಿಂತ ಸ್ವಾವಲಂಬಿ ಬದುಕಿಗೆ ಒತ್ತು ಕೊಡಲಾಗಿತ್ತು. ಬಾಬಾನ ಹೋರಾಟದ ವಿವರಗಳು ಇನ್ನೂ ಅನೇಕವಿದೆ. ಆತನ ಕುರಿತಾದ ವಿವರಗಳು ಲಕ್ನೋದ ಸಿಐಡಿ ಫೈಲಿನಲ್ಲಿ ಗುಪ್ತ ದಾಖಲೆಯಾಗಿ ಸ್ವಾತಂತ್ರ್ಯ ಬಂದ 76 ವರ್ಷಗಳಾದರೂ ಹೊರಬರದೇ ಭದ್ರವಾಗಿ ಮುಚ್ಚಿಕೊಂಡಿವೆ. ಅದನ್ನು ತೆರೆದರೆ ಮಹತ್ವದ ದಾಖಲೆಗಳು ಸಿಗಬಹುದು.

ರೈತ ಹೋರಾಟ ಈ ಎಲ್ಲಾ ಕಾರಣಕ್ಕೆ ತನ್ನ ಕಾವನ್ನು ಕಳೆದುಕೊಂಡಿತು. ಇದೇ ಕಾಲಕ್ಕೆ ಕಾಂಗ್ರೇಸ್ಸು ತನ್ನ ಆಸ್ತಿತ್ವವನ್ನು ಹಳ್ಳಿಗಳಲ್ಲಿಯೂ ಬೆಳೆಸಿಕೊಳ್ಳುತ್ತಾ ಮುನ್ನೆಡೆಯಿತು. ಸರ್ದಾರ ಪಟೇಲರು ಬಾರ್ಡೋಲಿ ಮತ್ತು ಖೇಡ ಜಿಲ್ಲೆಯಲ್ಲಿ ರೈತರ ಪರವಾಗಿ ಹೋರಾಟ ಮಾಡಿ ಅವರ ಸಮ಼ಸ್ಯೆಗೆ ನ್ಯಾಯಯುತ ಪರಿಹಾರವನ್ನು ಕೊಡಿಸುತ್ತಾರೆ. ಗಾಂಧೀಜಿಯ ಅಸಹಕಾರಿ ಚಳುವಳಿ ಮತ್ತು ಉಪ್ಪಿನ ಸತ್ಯಾಗ್ರಹಗಳೆಲ್ಲವೂ ಕ್ರಮೇಣ ರೈತರ ಚಳುವಳಿಯನ್ನು ಹಿನ್ನೆಲೆಗೆ ದೂಡುತ್ತವೆ.

ರೈತನ ಬವಣೆ ಪರಿಹಾರವಾಗಿ ಜಮೀನುದಾರ ಹಿಡಿತದಿಂದ ತಪ್ಪಲು ಸಾಧ್ಯವಾಗಿದ್ದು ಭಾರತ ಸರಕಾರ ಜಾರಿಗೆ ತಂದ 1961 ರ ಭೂ ಸುದಾರಣೆ ಕಾನೂನಿನಿಂದ. ಅಲ್ಲಿಯ ತನಕ ರೈತರು ಪಟ್ಟ ಬವಣೆ ಮತ್ತು ಕಷ್ಟ ಊಹಿಸಲೂ ಅಸಾಧ್ಯವಾಗಿದೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಗುರುಶಿಷ್ಯ ಪರಂಪರೆ: ತತ್ತ್ವದರ್ಶನದ ಹಾದಿಯನ್ನು ತೋರಿಸುವ ಜ್ಞಾನದ ಬೆಳಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
karnataka Weather Forecast
ಮಳೆ32 mins ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್40 mins ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ1 hour ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ2 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು5 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ6 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ7 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ7 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌