ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು? - Vistara News

ಅಂಕಣ

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ ಇಲ್ಲಿದೆ. ವಾನರೇಂದ್ರನ ಮಂತ್ರಿ ಕೋಸಲೇಂದ್ರನ ದಾಸನಾದ ಪ್ರಸಂಗವಿದು.

VISTARANEWS.COM


on

dhavala dharini column Hanuman's setubandha to meet Sugriva in ramayana by narayana yaji
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧದ ಅಪರೂಪದ ಸನ್ನಿವೇಶ

dhavala dharini by Narayana yaji

ಧವಳ ಧಾರಿಣಿ ಅಂಕಣ: ಭವತಾ ಸಖ್ಯಕಾಮೌ ತೌ ಭ್ರಾತರೌ ರಾಮಲಕ್ಷ್ಮಣೌ.
ಪ್ರತಿಗೃಹ್ಯಾರ್ಚಯಸ್ವೈತೌ ಪೂಜನೀಯತಮಾವುಭೌ৷৷ ಕಿ.5.7৷৷

ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು

ರಾಮಾಯಣದ ಕಿಷ್ಕಿಂಧಾಕಾಂಡದಿಂದ ತೊಡಗಿ ಯುದ್ಧ ಕಾಂಡದಕೊನೆಯ ತನಕ ಸುಗ್ರೀವ ಪ್ರಮುಖವಾದ ಪಾತ್ರವನ್ನು ವಹಿಸುತ್ತಾನೆ. ಅನೇಕ ಸಲ ಆತನ ವ್ಯಕ್ತಿತ್ವ ಮರ್ಕಟ ಸ್ವಭಾವಕ್ಕೆ ಅನುಗುಣವಾಗಿದೆ. ವಾಲಿಯನ್ನು ಸಂಹರಿಸಿದ ನಂತರದಲ್ಲಿ ಸೀತಾನ್ವೇಷಣೆಗೆ ಪ್ರಾರಂಭಿಸಿದನೋ, ಅಲ್ಲಿಂದ ಆತ ತುಂಬಾ ಪ್ರೌಢತ್ವದಿಂದಲೇ ವ್ಯವಹರಿಸುತ್ತಾನೆ. ಸುಗ್ರೀವನ ಜೊತೆ ರಾಮನ ಸಖ್ಯದಲ್ಲಿ ಆತನ ವ್ಯವಹಾರ ಮೇಲ್ನೋಟಕ್ಕೆ ಚಂಚಲತೆಯಿಂದ ಕೂಡಿತ್ತು ಎಂದು ತೋರಿದರೂ ವಾಸ್ತವವಾಗಿ ಆತ ಸೂಕ್ಷ್ಮವಾಗಿ ಎದುರಾದವರನ್ನು ಅಭ್ಯಸಿಸುತ್ತಿದ್ದ. ವಾಲಿ ಆತನನ್ನು ರಾಜ್ಯದಿಂದ ಹೊರಗಟ್ಟಿ ಆತನನ್ನು ಕೊಲ್ಲಬೇಕೆಂದು ಇಡೀ ಪ್ರಪಂಚವನ್ನೆಲ್ಲಾ ಓಡಾಡಿಸಿದ ವಿಷಯವನ್ನು ಸವಿಸ್ತಾರವಾಗಿ ಹಿಂದಿನ ಸಂಚಿಕೆಯಲ್ಲಿ ಗಮನಿಸಿದ್ದೇವೆ. ಮತಂಗ ಋಷಿಯ ಶಾಪದ ಕಾರಣಕ್ಕೆ ವಾಲಿಗೆ ಮತಂಗಾಶ್ರಮವಿರುವ ಋಷ್ಯಮೂಕ ಪರ್ವತವನ್ನು ತನ್ನ ಅಡಗುದಾಣವನ್ನಾಗಿಸಿಕೊಂಡ. ಋಷ್ಯಮೂಕ ಪರ್ವತಕ್ಕೆ ಆ ಹೆಸರು ಬಂದಿರುವುದಕ್ಕೆ ಕಾರಣ ಅದು ತಪಸ್ವಿಗಳ ಜ್ಞಾನಾರ್ಜನಗೆ ಹೇಳಿ ಮಾಡಿಸಿದ ಸ್ಥಳವಾಗಿತ್ತು ಎನ್ನುವ ಕಾರಣಕ್ಕಾಗಿ. ಋಷೀಣಾಂ ತತ್ರ ಪ್ರಾಪ್ವಾನಾಂ ಅಮೂಕಃ- ಅಲ್ಲಿಗೆ ಹೋದ ಋಷಿಗಳ ಅಜ್ಞಾನವು ಹೋಗಿಬಿಡುತ್ತಿತ್ತು ಹಾಗಾಗಿ ಆ ಪರ್ವತಕ್ಕೆ ಋಷ್ಯಮೂಕವೆನ್ನುವ ಹೆಸರು ಬಂತು. ಮೌನಿಗಳಾದ ಋಷಿಗಳ ಪರ್ವತ ಎನ್ನುವ ಇನ್ನೊಂದು ಅರ್ತವೂ ಋಷ್ಯಮೂಕಕ್ಕೆ ಇದೆ. ಅಲ್ಲಿ ಮತಂಗ ಮುನಿಗಳು ಮೌನವಾಗಿಯೇ ತಪಸ್ಸಿಗೆ ಕುಳಿತಿರುತ್ತಿದ್ದರು.

ದುಂದುಭಿಯಂತಹ ರಾಕ್ಷಸನನ್ನು ಕೊಂದು ವಾಲಿ ಲೋಕಕ್ಕೆ ಉಪಕಾರವನ್ನು ಮಾಡಿದರೂ ಆತನಿಗೆ ಶಾಪ ಏತಕ್ಕೆ ಬಂತು ಎಂದು ಅನುಕಂಪ ಬರುವುದು ಸಹಜ. ವಾಲಿ ಮತ್ತು ದುಂದುಭಿಯ ಜಗಳದ ಹಿನ್ನೆಲೆಯನ್ನು ಗಮನಿಸಬೇಕು. ದುಂದುಭಿ ಕೋಣನ ಆಕಾರವನ್ನು ಹೊಂದಿದ್ದ ರಾಕ್ಷಸ. ಆತನಿಗೆ ಸಾವಿರ ಆನೆಯ ಬಲವಿತ್ತು. ತನ್ನ ಪರಾಕ್ರಮವನ್ನು ತೋರುವ ಹುಚ್ಚು. ಆ ಕಾರಣಕ್ಕಾಗಿ ಆತ “ಮಹ್ಯಂ ಯುದ್ಧ ಪ್ರಯಚ್ಛ- ನನಗೆ ಯುದ್ಧದ ಆತಿಥ್ಯವನ್ನು ನೀಡಿ” ಎಂದು ಎಲ್ಲಾ ಬಲಶಾಲಿಗಳ ಹತ್ತಿರ ಹೋಗಿ ಕೇಳಿದ್ದ. ಮೊದಲು ಆತ ಹೋಗಿದ್ದು ಸಮುದ್ರ ರಾಜನಲ್ಲಿಗೆ.

ಮುದ್ರದೊಡಯನಿಗೆ ಆತನೊಡನೆ ಯುದ್ಧ ಮಾಡುವ ಸಾಮರ್ಥ್ಯವಿಲ್ಲವೆಂದು ಅರ್ಥವಲ್ಲ; ಇದು ವೃಥಾ ಜಗಳ, ಅದರಿಂದ ತನ್ನೊಡಲಲ್ಲಿದ್ದ ಜಲಚರಗಳಿಗೆ ತೊಂದರೆಯಾಗುತ್ತದೆ ಎಂದು ಆತ ಪರ್ವತಗಳ ರಾಜನಾದ ಹಿಮವಂತನನ್ನು ತೋರಿಸಿದ. ಆತ ದುಂದುಭಿಯ ಆಹ್ವಾನವನ್ನು ನಿರಾಕರಿಸುವ ಕಾರಣ ತನ್ನಲ್ಲಿ ಸತ್ವಗುಣಶೀಲರಾದ ತಪಸ್ವಿಗಳು ತಪಸ್ಸನ್ನು ಮಾಡುತ್ತಿದ್ದಾರೆ. ಅವರ ತಪಸ್ಸಿಗೆ ಭಂಗಬಾರದೆನ್ನುವಕಾರಣಕ್ಕಾಗಿ ಜಗಳಕ್ಕೆ ಬರಲು ಒಪ್ಪುವುದಿಲ್ಲ. ಜಗಳವೆನ್ನುವುದು ಇನ್ನೊಬ್ಬರ ಶಾಂತತೆಗೆ ಭಂಗತರುವಂತಹುದಾಗಬಾರದು ಎನ್ನುವ ವಿವೇಕ ಇರಬೇಕು. ಸಮುದ್ರರಾಜನಾಗಲಿ, ಹಿಮವಂತನಾಗಲೀ ದುಂದುಭಿಯ ಯುದ್ಧಾಹ್ವಾನವನ್ನು ತಿರಸ್ಕರಿಸಿದರು ಎಂದ ಕಾರಣಕ್ಕೆ ಅವರು ಸಣ್ಣವರೇನೂ ಆಗಲಿಲ್ಲ. ವಾಲಿ ಜಗಳಕ್ಕೆ ಒಪ್ಪಿದ್ದೂ ಅಲ್ಲದೇ ಯುದ್ಧಮಾಡಿ ಆ ರಾಕ್ಷಸನನ್ನು ಕೊಂದಮೇಲೆ ಆತನ ದೇಹವನ್ನು ಒಂದು ಯೋಜನದಷ್ಟು ದೂರ ಎಸೆದನು. ಆಗ ಸಿಡಿದ ರಕ್ತದ ಹನಿಗಳೂ ಮತಂಗ ಆಶ್ರಮದಲ್ಲಿ ಬಿದ್ದು ಆಶ್ರಮ ಮಲಿನವಾಯಿತು. ಸತ್ತಮೇಲೆ ವೈರವಿರಕೂಡದು ಎನ್ನುತ್ತದೆ ಧರ್ಮಶಾಸ್ತ್ರ. ವಾಲಿ ಸತ್ತಮೇಲೆಯಾಗಲೀ, ರಾವಣ ಸತ್ತಮೇಲೆಯಾಗಲಿ ಅವರ ಕಳೇಬರಕ್ಕೆ ರಾಮ ಗೌರವಯುತವಾಗಿ ಅಂತ್ಯಸಂಸ್ಕಾರವನ್ನು ಮಾಡಿಸುತ್ತಾನೆ. ವಿಭೀಷಣ ರಾವಣನ ಸಂಸ್ಕಾರಕ್ಕೆ ಒಪ್ಪದಿದ್ದರೆ ತಾನೇ ರಾವಣನ ಅಂತ್ಯಸಂಸ್ಕಾರವನ್ನು ಮಾಡುತ್ತೇನೆ ಎನ್ನುತ್ತಾನೆ. ಮತಂಗರು ಶಾಪವನ್ನು ಕೊಡುವಾಗ ಹೇಳುವ ಮಾತು

ಯೇನಾಹಂ ಸಹಸಾ ಸ್ಪೃಷ್ಟಶ್ಶೋಣಿತೇನ ದುರಾತ್ಮನಾ.

ಕೋಯಂ ದುರಾತ್ಮಾ ದುರ್ಭುದ್ಘಿರಕೃತಾತ್ಮಾ ಚ ಬಾಲಿಶಃ II ಕಿ.11.50৷৷

ನನ್ನನ್ನು ಅಪವಿತ್ರವಾದ ರಕ್ತದ ಮೂಲಕ ಮುಟ್ಟಿದ ದುರಾತ್ಮನು ಯಾವನು. ಮೂಢನಾದ, ದುರಾತ್ಮನಾದ, ದುರ್ಬುದ್ಧಿಯುಳ್ಳ, ಜಿತೇಂದ್ರಿಯನಲ್ಲದ (ಅಕೃತಾತ್ಮಾ) ಆ ಮೂರ್ಖನು ಯಾರಾಗಿಬಹುದು”

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡದಲ್ಲಿನ ರಾಜನೀತಿಯ ವಿಲಕ್ಷಣ ಘಟನೆ

ಇಲ್ಲಿ ಜಿತೇಂದ್ರಿಯ ಎನ್ನುವ ಶಬ್ಧವನ್ನು ಬಳಸಿದ್ದಾರೆ. ಮೈತೀಟೆಯನ್ನು ತೀರಿಸಿಕೊಳ್ಳುವುದಕ್ಕೆ ಯುದ್ಧವಲ್ಲ. ಲೋಕ ಹಿತಕ್ಕಾಗಿ ಯುದ್ಧ ಅಪರಾಧವಲ್ಲ. ಇಲ್ಲಿ ವಾಲಿ ಕೇವಲ ರಕ್ತದಿಂದ ಆಶ್ರಮವನ್ನು ಮಲಿನಮಾಡಿದ್ದಲ್ಲ. ಪರ್ವತಮಯವಾದ ದುಂದುಭಿಯ ದೇಹವನ್ನು ಬಿಸುಟು ಆಶ್ರಮದ ವೃಕ್ಷಗಳೆಲ್ಲವನ್ನೂ ಧ್ವಂಸಮಾಡಿದ್ದಾನೆ. ಅವರಿಗೆ ಈ ಕೃತ್ಯವನ್ನು ನಡೆಸಿದವ ವಾಲಿ ಎನ್ನುವುದು ತಿಳಿಯಿತು. “ಯಾವಾತ ಈ ಕೃತ್ಯವನ್ನು ಎಸಗಿದವೋ ಆತನೇನಾದರೂ ಇನ್ನುಮುಂದೆ ಈ ಆಶ್ರಮದ ಪ್ರದೇಶಕ್ಕೆ ಬಂದರೆ ಇಲ್ಲಿಯೇ ಮರಣ ಹೊಂದುವನು. ಪುತ್ರನಂತೆ ಅಕ್ಕರೆಯಿಂದ ಬೆಳೆಸಿದ ಅವರ ಆಶ್ರಮದ ಗಡ್ಡೆಗೆಣಸುಗಳ ವಿನಾಶಾರ್ಥವಾಗಿ ಆತನ ಮಂತ್ರಿಗಳೇನಾದರೂ ಆತನ ಆಶ್ರಮದ ಪರಿಸರದಲ್ಲಿದ್ದರೆ ಅವರು ಒಂದು ದಿನಗಳೊಳಗಾಗಿ ಆ ಪ್ರದೇಶದಿಂದ ಹೊರಟುಬಿಡಬೇಕು. ಹೋಗದೇ ಉಳಿದರೆ ಅಂತವರು ಹಲವಾರು ಸಾವಿರ ವರುಷಗಳ ಕಾಲ ಕಲ್ಲಾಗಿಬಿಡುವರು” ಎನ್ನುವ ಶಾಪ ಕೊಟ್ಟರು. ವಿಷಯ ಅರಿತ ವಾಲಿ ಓಡೋಡಿ ಬಂದು ಮತಂಗ ಮುನಿಗಳಿಗೆ ತನ್ನನ್ನು ಕ್ಷಮಿಸಿ ಎಂದರೂ ಅವರು ಕ್ಷಮಿಸದೇ ಆಶ್ರಮವನ್ನೇ ಬಿಟ್ಟು ಹೊರಟುಹೋದರು. ಆ ನಂತರದಲ್ಲಿ ವಾಲಿಯಾಗಲೀ ಆತನ ಕಡೆಯವರಾಗಲೀ, ಶಾಪದ ಭಯದಿಂದ ಮತಂಗಾಶ್ರಮದ ಪರಿಸರಕ್ಕೆ ಬರುತ್ತಿರಲಿಲ್ಲ. ವಾಲಿ ಸುಗ್ರೀವ ಎಲ್ಲಿಯೇ ಅಡಗಿದ್ದರೂ ಆತನನ್ನು ಹುಡುಕಿ ಕೊಲ್ಲಲು ಬರುತ್ತಿದ್ದ ಎಂದು ಅನಿಸುತ್ತದೆ. ತನ್ನ ಜೀವ ಉಳಿಸಿಕೊಳ್ಳಲು ಸುಗ್ರೀವ ಪ್ರಪಂಚದ ಎಲ್ಲಾ ಕಡೆ ನಿರಂತರವಾಗಿ ಎಲ್ಲಿಯೂ ನಿಲ್ಲದೇ ಹಾರುತ್ತಿದ್ದ. ಶಾಪದ ಘಟನೆ ಹನುಮಂತನಿಗೆ ಅದುಹೇಗೋ ತಿಳಿಯಿತು. ಆತ ಈ ವಿಷಯವನ್ನು ಸುಗ್ರೀವನಿಗೆ ಹೇಳಿದ. ಮತಂಗಮುನಿಗಳ ಶಾಪದ ಕಾರಣದಿಂದ ಋಷ್ಯಮೂಕ ಪರ್ವತ ಸುಗ್ರೀವನಿಗೆ ಸುರಕ್ಷಿತ ತಾಣವಾಗಿ ಉಳಿಯಿತು. ಸುಗ್ರೀವ ತನ್ನ ಹತ್ತಿರವೇ ಬಂದು ಉಳಿದದ್ದು ನೋಡಿದ ವಾಲಿಗೆ ಮೈ ಪರಚಿಕೊಳ್ಳುವಂತಾಗಿದ್ದಂತೂ ಸತ್ಯ.

ಲಕ್ಷ್ಮಣನಿಂದ ಸಮಾಧಾನಿಸಲ್ಪಟ್ಟ ರಾಮ ಋಷ್ಯಮೂಕ ಪರಿಸರದಲ್ಲಿ ತಿರುಗಾಡುತ್ತಿರುವುದನ್ನು ದೂರದಲ್ಲಿಯೇ ನೋಡಿದ ಸುಗ್ರೀವನಿಗೆ ನಡುಕ ಉಂಟಾಯಿತು. ಅವರ ತೇಜಸ್ಸು ಆತನನ್ನು ಭಯಪಡಿಸಿತು. ವಾಲಿಯೇನಾದರೂ ತನ್ನನ್ನು ಕೊಲ್ಲಲು ಬೇರೆಯವರನ್ನು ಕಳುಹಿಸಿರಬಹುದೆನ್ನುವ ಸಂಶಯದಿಂದ ಆತನ ಚಲನವಲನಗಳೇ ನಿಂತು ಹೋಯಿತು. ಆತ ಹೆದರಿಕೆಯಿಂದ ಏನು ಮಾಡುವುದು ಎಂದು ತಿಳಿಯದೇ ಒಂದು ಪರ್ವತದಿಂದ ಇನ್ನೊಂದು ಪರ್ವತಕ್ಕೆ ಹಾರತೊಡಗಿದ. ಆಗ ಹನುಮಂತ ಸುಗ್ರೀವನಿಗೆ ಸಮಾಧಾನವನ್ನು ಹೇಳಿ “ನೀನು ರಾಜನಾದವನು, ಹೀಗೆ ಹೆದರಕೂಡದು. ಚನ್ನಾಗಿ ಆಲೋಚಿಸಿ ಅವರ ಹಾವ ಭಾವವನ್ನು ತಿಳಿದು ಶತ್ರುವೋ ಅಲ್ಲವೋ ಎನ್ನುವುದನ್ನು ತಿಳಿಯಬೇಕೆನ್ನುತ್ತಾನೆ. ಸುಗ್ರೀವ ಹನುಮಂತನಿಗೆ ಬಂದವರು ಯಾರು ಎಂದು ತಿಳಿದುಕೊಂಡು ಬರಲು ಕಳಿಸುತ್ತಾನೆ.

ನಮ್ಮ ರಾಜ್ಯದ ಆನೆಗೊಂದಿಯಲ್ಲಿ ಹನುಮಂತ ಮೊದಲು ರಾಮ ಲಕ್ಷ್ಮಣರನ್ನು ಭೆಟ್ಟಿಮಾಡಿರುವುದು. ಇಲ್ಲಿಯತನಕ ಸುಗ್ರೀವನ ಸಚಿವನಾಗಿದ್ದ ಹನುಮಂತ ಇಲ್ಲಿಂದ ಮುಂದೆ “ದಾಸೋಹಂ ಕೋಸಲೇಂದ್ರಸ್ಯ ರಾಮಸ್ಯಾಕ್ಲಿಷ್ಟಕರ್ಮಣಃ” ಎಂದು ಪ್ರಸಿದ್ದನಾಗುವುದಕ್ಕೆ ಪೀಠಿಕೆ ಇದು. ಕಪಿಯ ರೂಪದಲ್ಲಿದ್ದರೆ ಯಾರಿಗೂ ನಂಬಿಕೆ ಹುಟ್ಟಲು ಸಾಧ್ಯವಿಲ್ಲವೆಂದು ಹನುಮಂತ ಬಿಕ್ಷುವಿನ ರೂಪದಲ್ಲಿ ರಾಮನ ಪರಿಚಯವನ್ನು ಕೇಳುತ್ತಾನೆ. ಕಿಷ್ಕಿಂಧಾ ಕಾಂಡದ 3 ನೆಯ ಸರ್ಗದಲ್ಲಿ ಹನುಮಂತ ರಾಮನ್ನು ಮಾತಾಡಿಸುವಾಗ ಉಪಯೋಗಿಸುವ ಭಾಷೆ, ದೇಹದ ಭಂಗಿ, ವಿನೀತ ಭಾವ, ತನ್ನ ಒಡೆಯನ ಕುರಿತು ಗೌರವ ಇವೆಲ್ಲವೂ ಸಮ್ಮಿಳಿತವಾಗಿದ್ದವು. ದೀರ್ಘವಾಗಿ ಮಾತಾಡಿದ್ದರಲ್ಲಿ ಒಂದೇ ಒಂದು ಅಪಶಬ್ಧವೂ ಇಲ್ಲವಾಗಿತ್ತು. ದೇಹದ ಯಾವ ಅವಯವಗಳಲ್ಲಿಯೂ ಯಾವುದೇ ದೋಷವಿರಲಿಲ್ಲ. ವಿಷಯನಿರೂಪಣೆಯಲ್ಲಿ ವಿಸ್ತಾರವಿರಲಿಲ್ಲ. ಸಮಯಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಮಾತಾಡಿದ್ದನು. ಸಂಶಯಕ್ಕೆಡೆಮಾಡುವಂತಹ ಯಾವ ಮಾತನ್ನೂ ಆತ ಆಡಲಿಲ್ಲ. ಮದ್ಯಸ್ವರದಲ್ಲಿ ವ್ಯಾಕರಣದಿಂದ ಸಂಸ್ಕೃತವಾದ ಶಬ್ದಗಳನ್ನು ಬಳಸಿ ಯಾವ ಯಾವ ವಾಕ್ಯಗಳನ್ನು ಎಲ್ಲೆಲ್ಲಿ ಆಡಬೇಕೋ ಅದನ್ನು ಮಾತ್ರವೇ ಆಡಿದ್ದ. ಎಲ್ಲಕ್ಕಿಂತ ಹೆಚ್ಚಾಗಿ ಕೇಳುವವರ ಮನಸ್ಸಿಗೆ ಹರ್ಷವನ್ನುಂಟುಮಾಡುವ ಶುಭಕರವಾದ ಮಾತುಗಳನ್ನೇ ಆಡಿದ್ದ. ಇಲ್ಲಿ ಒಂದು ಸಂಶಯ ಬರುತ್ತದೆ. ಅಷ್ಟೊಂದು ಸುಂದರವಾಗಿ ಮಾತನಾಡಿದ್ದ ಹನುಮಂತ ತನ್ನ ವೇಷವನ್ನು ಮರೆಮಾಚಿ ಬಿಕ್ಶುವಿನ ವೇಷವನ್ನು ಧರಿಸಿರುವುದು ವಂಚನೆಯಲ್ಲವೇ. ಅದಕ್ಕೆ ವಾಲ್ಮೀಕಿ ಪ್ರಾರಂಬದಲ್ಲಿಯೇ ಹೇಳಿದ್ದಾನೆ. ನೇರವಾಗಿ ಆತ ಕಪಿಯ ರೂಪದಲ್ಲಿಯೇ ಹೋದರೆ ಆತ ಆಡುವ ಮಾತಿನ ಶೈಲಿಗೂ ಆತನ ಬಹಿರಂಗ ರೂಪಕ್ಕೂ ಅಂತರ ಕಂಡು ಇದು ಯಾವುದೋ ಮಾಯೆ ಎನ್ನುವ ಭಾವಕ್ಕೆ ರಾಮ ಲಕ್ಷ್ಮಣರು ಬರುವ ಸಾಧ್ಯತೆಯಿದೆ. ಬಿಕ್ಷುವಿನ ವೇಷವಾದರೆ ಆಡುವ ಮಾತಿಗೆ ಸಾಮ್ಯತೆ ಬರುತ್ತದೆ. ಅದೂ ಅಲ್ಲದೇ ರಾಮ ಲಕ್ಷ್ಮಣರೂ ಸಹ ತಾಪಸಿಗಳಂತೆ ಇದ್ದರು. ಆದರೆ ಅವರ ಕೈಯಲ್ಲಿ ಬಿಲ್ಲು ಬಾಣಗಳಿದ್ದವು. ಬತ್ತಳಿಕೆ ಬಿಗಿದ್ದರು. ಹೀಗಿರುವಾಗ ಅವರನ್ನು ಮೊದಲು ನೋಡಲು ಸರ್ವಮಾನ್ಯವಾದ ಬಿಕ್ಷುವಿನ ರೂಪ ಧರಿಸಿದರೆ ಅವರು ತನ್ನ ಕಡೆಗೆ ಗಮನವನ್ನು ಹರಿಸುತ್ತಾರೆ ಎನ್ನುವುದಾಗಿದೆ. ರಾಮ ಲಕ್ಷ್ಮಣರನ್ನು ಹತ್ತಿರದಿಂದ ಕಂಡಾಗ ಅವರಲ್ಲಿ ದಿವ್ಯ ಪ್ರಭೆ ದೇದೀಪ್ಯಮಾನವಾಗಿ ಬೆಳಗುತ್ತಿತ್ತು. ಆ ಪ್ರಭೆಯ ಎದುರು ಹನುಮಂತನಿಗೆ ತಾನು ವೇಷವನ್ನು ಮರೆಮಾಚಿರುವ ವಿಷಯವನ್ನು ಮುಚ್ಚಿಟ್ಟುಕೊಳ್ಳಲಾವದಾಗಲಿಲ್ಲ. ಆತ ತಾನು ಬಿಕ್ಷುವಿನ ವೇಷವನ್ನು ಧರಿಸಿ ಬಂದವ. ಕಾಮರೂಪಿಯಾದ ತಾನು ಇಚ್ಛೆಬಂದ ಕಡೆ ಹೋಗಬಲ್ಲೆ, ಇಚ್ಛೆಬಂದ ರೂಪವನ್ನು ಧರಿಸಬಲ್ಲೆ ಎಂದು ಪ್ರಾರಂಭದಲ್ಲಿಯೇ ಹೇಳಿಬಿಡುತ್ತಾನೆ. ಸುಗ್ರೀವನ ಸಚಿವ ತಾನು, ಆತನಿಗೆ ಪ್ರಿಯವನ್ನುಂಟುಮಾಡಬೇಕೆಂಬ ಆಶಯದಿಂದ ಈ ವೇಷದಲ್ಲಿ ಬಂದಿರುವೆ ಎನ್ನುತ್ತಾನೆ. ಆತನ ಮಾತಿನಲ್ಲಿ ಎಲ್ಲಿಯೂ ಕಪಟತೆ ತಿಲಮಾತ್ರವೂ ಇರಲಿಲ್ಲ. ಧ್ವನಿ ಹೃದಯ ಕಂಠ ಮತ್ತು ಮುಖಗಳ ಮೂಲಕವಾಗಿ ಹೊರಬರುತ್ತಿತ್ತು. ತನ್ನೊಡೆಯನ ಕ್ಷೇಮಕ್ಕಾಗಿ ವೇಷಧರಿಸುವುದು ಅಗತ್ಯವಿತ್ತು. ಆದರೆ ಅವರನ್ನು ನೋಡಿದಾಗ ಅದರ ಅವಶ್ಯಕತೆ ಉಳಿದಿಲ್ಲ ಎನ್ನುವುದು ಆತನ ಮಾತಿನ ಸಾರಾಂಶವಾಗಿತ್ತು. ರಾಮನಿಗೆ ಆತನ ಸರಳ ಮತ್ತು ಸುಂದರವಾದ ಭಾಷೆಯನ್ನು ಕೇಳಿ ಆನಂದವಾಯಿತು. ಅದಕ್ಕಿಂತಲೂ ಆತ ಸುಗ್ರೀವನ ಸಚಿವನೆನ್ನುವುದನ್ನು ಕೇಳಿ ಇಮ್ಮಡಿ ಆನಂದವಾಯಿತು. ಯಾರನ್ನು ತಾವು ಹುಡುಕಲು ಬಂದ್ದೇವೆಯೋ ಆತನ ಸಚಿವನೇ ತನ್ನನ್ನು ಎದುರುಗೊಳ್ಳಲು ಬಂದಿದ್ದಾನೆ. ಇದರಿಂದ ಅಯೋಧ್ಯೆಯ ಚಕ್ರವರ್ತಿ ಮನೆತನದವರು ಅಪರಿಚಿತರಂತೆ ಬೇರೊಬ್ಬರ ಭೇಟಿಗೆ ಹೋಗಿರುವುದಲ್ಲ, ರಾಜಪರಂಪರೆಯ ನಡಾವಳಿಯಂತೆ (Protocol) ಸಚಿವನೋರ್ವ ಎದುರುಗೊಳ್ಳಲು ಬಂದಿದ್ದಾನೆ. ರಾಜರುಗಳನ್ನು ಎದುರುಗೊಳ್ಳಲು ಯಾರು ಯಾರು ಹೋಗಬೇಕೆನ್ನುವ ನಡಾವಳಿಕೆಗಳು ಪ್ರಾಚೀನ ಕಾಲದಲ್ಲಿಯೂ ಇತ್ತು. ರಾಮನಿಗೆ ಆತನ ವ್ಯಕ್ತಿತ್ವ ಮೊದಲ ಭೇಟಿಯಲ್ಲಿಯೇ ಇಷ್ಟವಾಯಿತು. ಲಕ್ಷ್ಮಣನಿಗೆ ಆತ ಹೇಳುವ ಮಾತು

ನಾನೃಗ್ವೇದವಿನೀತಸ್ಯ ನಾಯಜುರ್ವೇದಧಾರಿಣಃ.
ನಾಸಾಮವೇದವಿದುಷಶ್ಶಕ್ಯಮೇವಂ ವಿಭಾಷಿತುಮ್ ৷৷ಕಿ.3.27৷৷

ಋಗ್ವೇದ, ಯಜುರ್ವೇದ ಮತ್ತು ಸಾಮವೇದಗಳನ್ನು ಅಧ್ಯಯನಮಾಡಿ ಶಿಕ್ಷಣ ಪಡೆಯದವನಿಗೆ ಹೀಗೆ ಮಾತಾಡಲು ಸಾಧ್ಯವಿಲ್ಲ. ಎನ್ನುತ್ತಾನೆ. ಇಲ್ಲಿ ಪ್ರತಿಯೊಂದು ವೇದದ ವಿಶೇಷವನ್ನುಹೇಳುವಾಗ “ವಿನೀತ”, “ಧಾರಿ” ಮತ್ತು “ವಿತ್” ಶಬ್ಧಗಳನ್ನು ವಿಶೇಷಣಗಳನ್ನಾಗಿ ಬಳಸಿದ್ದಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಕಿಷ್ಕಿಂಧಾ ಕಾಂಡ ಭಾಗ 2: ದೀಪದ ಬುಡದಲ್ಲಿ ಕತ್ತಲೆ

ಸಂಭಾಷಣೆಯಲ್ಲಿ ಸಂವಹನ ಕ್ರಿಯೆ ತುಂಬಾ ಮುಖ್ಯ. ಇದೊಂದು ಮಾತಿನಲ್ಲಿ ಹನುಮಂತನ ವಾಕ್ ಪಟುತ್ವವನ್ನು ರಾಮ ಶ್ಲಾಘಿಸುತ್ತಾನೆ. ಋಗ್ವೇದದ ಪ್ರತಿವರ್ಣವೂ ಸ್ವರಪೂರ್ಣವಾಗಿರುತ್ತದೆ. ಅದನ್ನು ಉಚ್ಛರಿಸಬೇಕಾದರೆ ಸಾವಧಾನವಾಗಿ, ವಿನಿಯೋಗಿಸಬೇಕಾದ ಛಂದಸ್ಸು, ವ್ಯಾಕರಣ ಶುದ್ಧತೆ ಮತ್ತು ಗಂಭೀರ ಸ್ವರಬೇಕಾಗುತ್ತದೆ. ಅದನ್ನು ಸರಿಯಾಗಿ ಅಧ್ಯಯನ ಮಾಡಿದವನಿಂದಲೇ ಹೀಗೆ ಮಾತಾಡಲು ಸಾಧ್ಯ. ಹಾಗಾಗಿ ವಿನೀತ ಎನ್ನುವ ಶಬ್ದವನ್ನು ಬಳಸಿದ್ದಾನೆ. ವಿನೀತ ಎಂದರೆ ಆಚಾರ್ಯಮುಖೇನ ಶಾಸ್ತ್ರಬದ್ಧವಾಗಿ ಕಲಿತವ ಎಂದು ಅರ್ಥ. ಯಜುರ್ವೇದದಲ್ಲಿ ಪ್ರತಿಯೊಂದು ಅನುವಾಕನ್ನೂ ಇತರ ಅನುವಾಕಗಳೊಡನೆ ಸಂಕರ ಆಗದ ರೀತಿಯಲ್ಲಿ ಉಚ್ಛರಿಸಬೇಕು. ಅದಕೆ ಅಸಾಧಾರಣ ಧಾರಣಶಕ್ತಿಯ ಅವಶ್ಯಕತೆ ಇದೆ. ಸಾಮವೇದವು ಊಹರಹಸ್ಯಗಳಿಂದ ಗಾನರೂಪವಾಗಿದೆ. ಹನುಮಂತ ಆಡುವ ಮಾತಿನಲ್ಲಿ ಪದ್ಯದ ಗೇಯತೆಯೂ ಇತ್ತು. ಕಿವಿಗೆ ಇಂಪಾಗಿ ಆದರೆ ಅರ್ಥಗರ್ಭಿತವಾಗಿ ಇತ್ತು ಎನ್ನುವುದನ್ನು ಮೂರು ಶಬ್ದಗಳಾದ ವಿನೀತ, ಧಾರಿ ಮತ್ತು ವಿತ್ ಶಬ್ದಗಳ ಮೂಲಕ ರಾಮ ತಿಳಿಸುತ್ತಾನೆ. ರಾಮನೂ ಮೂರೂ ವೇದಗಳಲ್ಲಿ ಪಾರಂಗತನಾಗಿರುವುದರಿಂದಲೇ ಹನುಮಂತನ ಮಾತನ್ನು ಗ್ರಹಿಸಲು ಸಾಧ್ಯವಾಯಿತು ಎಂದೂ ಇಲ್ಲಿ ಅರ್ಥೈಸಬಹುದಾಗಿದೆ. ಮಂತ್ರಿ ಎದುರಾದಾಗ ರಾಜನಾದವ ಮಾತನ್ನಾಡುವುದಲ್ಲ. ಆತನ ಪರವಾಗಿ ಮಂತ್ರಿಯೋ ಅಥವಾ ಸಮರ್ಥ ದೂತನೋ ಮಾತನ್ನಾಡಬೇಕು. ಹಾಗಾಗಿ ಇಲ್ಲಿ ಹನುಮಂತನೊಡನೆ ಮುಂದಿನ ವಿಷಯವನ್ನು ಲಕ್ಷ್ಮಣ ಮಾತಾಡಲಿ ಎಂದು ರಾಮ ಇಂಗಿತವನ್ನು ವ್ಯಕ್ತಪಡಿಸುತ್ತಾನೆ. ಹಾಗಾಗಿ ಮುಂದೆ ಲಕ್ಷ್ಮಣ ಹನುಮಂತನಲ್ಲಿ ತಮ್ಮ ಅರಣ್ಯವಾಸದ ವಿಷಯವನ್ನು, ಸೀತಾಪಹರಣದ ವಿಷಯವನ್ನೂ ಸಹ ಸಮಗ್ರವಾಗಿ ತಿಳಿಸಿ ತಮ್ಮ ಭೇಟಿಯ ಉದ್ಧೇಶ ಸೀತೆ ಎಲ್ಲಿರುತ್ತಾಳೆಂದು ಕಂಡುಹಿಡಿಯಲು ಕಬಂಧನ ಸೂಚನೆಯ ಮೇರೆಗೆ ಸುಗ್ರೀವನೊಡನೆ ಆಶ್ರಯಕೋರಲು ಬಂದಿದ್ದೇವೆ ಎನುತ್ತಾ ಮೊದಲು ಹೇಳಿದ ಸುಗ್ರೀವಂ ಶರಣಂ ಗತಃ ಎನ್ನುವ ಆರು ಬಗೆಯ ಉಲ್ಲೇಖವನ್ನು ಮಾಡುತ್ತಾನೆ.

ಹನುಮಂತನು ಸೂರ್ಯನ ಹತ್ತಿರ ಸೂತ್ರ, ವೃತ್ತಿ, ವಾರ್ತಿಕ, ಮಹಾಭಾಷ್ಯ, ಶಾಸ್ತ್ರ, ಛಂದಃಶಾಸ್ತ್ರಗಳನ್ನೂ, ನವವ್ಯಾಕರಣಗಳನ್ನೂ ಕಲಿತವ. ಅಗಸ್ತ್ಯರು ಹನುಮಂತನ ಕುರಿತು ಆತ ಶಾಸ್ತ್ರವಿಷಯದಲ್ಲಿ ಬ್ರಹಸ್ಪತಿಯೊಡನೆ ಹೋಲಿಸಬಹುದು ಎನ್ನುತ್ತಾರೆ. ಆತನಿಗೆ ಲಕ್ಷ್ಮಣ ಸುಗ್ರೀವನೊಡನೆ ಶರಣಾಗತಿಗಾಗಿ ಬಂದಿದ್ದಾರೆ ಎಂದು ಹೇಳಿರುವುದು ಮನಸ್ಸಿಗೆ ಸರಿಕಾಣಲಿಲ್ಲ. ಅತನಿಗೆ ಸೂರ್ಯವಂಶದ ವಿಷಗಳೆಲ್ಲವೂ ತಿಳಿದಿದೆ. ಅವರ ಶ್ರೇಷ್ಠತೆಯ ಮತ್ತು ಮಹಾತ್ಮತೆಯ ಕುರಿತು ಗೌರವವಿದೆ. ಆದರೆ ಈ ವಾಕ್ ದೋಷವನ್ನು ಟೀಕಿಸಲೂ ಹೋಗುವುದಿಲ್ಲ. ರಾಮಲಕ್ಷ್ಮಣರನ್ನು ತನ್ನ ಭುಜದಮೇಲೆ ಹೊತ್ತು ಅವರನ್ನು ಋಷ್ಯಮೂಕ ಪರ್ವತಕ್ಕೆ ಕರೆತರುತ್ತಾನೆ. ಸುಗ್ರೀವ ಆಗ ಆಗಂತುಕರ ವಿಷಯದಲ್ಲಿ ಭಯಪಟ್ಟು ಅಲ್ಲೇ ಪಕದಲ್ಲಿದ್ದ ಮಲಯ ಪರ್ವತದಲ್ಲಿ ಇದ್ದ. ಆತನಲ್ಲಿ ರಾಮ ಲಕ್ಷ್ಮಣರ ಮತ್ತು ದಶರಥನ ಸಹಿತವಾಗಿ ಸೂರ್ಯವಂಶದ ದೊರೆಗಳ ಮಹಿಮೆಯನ್ನು ಹೇಳುತ್ತಾನೆ. ಅಂತಹ ಮಹಿಮಾನ್ವಿತರು ಸೀತಾನ್ವೇಷಣೆಯ ಸಲುವಾಗಿ ನಿನ್ನ ಸಹಾಯವನ್ನು ಬಯಸಿ ಬಂದಿದ್ದಾರೆ ಎನ್ನುತ್ತಾನೆ. ಇಲ್ಲಿ ಹನುಮಂತನ ಜಾಣ್ಮೆಯನ್ನು ಗಮನಿಸಬೇಕು. “ಸುಗ್ರೀವನಲ್ಲಿ ಶರಣಾಗತಿಯನ್ನು ಹೊಂದಲು ಬಂದಿದ್ದಾರೆ ಎನ್ನುವ ಮಾತಿನ ದೋಷವನ್ನು ಹನುಮಂತ ಪ್ರಾರಂಭದಲ್ಲಿ ಹೇಳಿದ ಶ್ಲೋಕದಂತೆ “ಸಹೋದರರಾದ ರಾಮಲಕ್ಷ್ಮಣರು ನಿನ್ನೊಡನೆ ಗೆಳೆತನವನ್ನು ಬೆಳೆಸುವ ಆಶಯವನ್ನು ಹೊಂದಿದ್ದಾರೆ. ಪೂಜನೀಯರಾದ ಇವರಿಬ್ಬರನ್ನೂ ನೀನು ಯಥೋಚಿತವಾಗಿ ಪ್ರತಿಗ್ರಹಿಸಿ ಪೂಜಿಸಬೇಕು” ಎಂದು ಬದಲಾಯಿಸಿ ಹೇಳುತ್ತಾನೆ.

“ನವವ್ಯಾಕರಣವೇತ್ತಾ -ಒಂಬತ್ತು ವ್ಯಾಕರಣ ಸಿದ್ಧಾಂತವನ್ನು ತಿಳಿದವ ಹನುಮಂತ ಎಂದು ಅಗಸ್ತ್ಯರು ಈತನನ್ನು ಹೊಗಳಿದ್ದು ಆತನ ಜಾಣ್ಮೆ ಮತ್ತು ಶಾಸ್ತ್ರಕೌಶಲ್ಯದ ಪರಿಣಿತಿಗಾಗಿ. ರಾಮನ ಅನುಗ್ರಹದಿಂದ ಹನುಮಂತ ಬ್ರಹ್ಮನೇ ಆಗುವನು- “ಬ್ರಹ್ಮಾ ಭವಿಷ್ಯತ್ಯಪಿ ತೇ ಪ್ರಸಾದಾತ್” ಎನ್ನುವ ಮಾತನ್ನೂ ಆಡುತ್ತಾರೆ. ಸುಂದರನೆನ್ನುವುದು ಆತನ ಇನ್ನೊಂದು ಹೆಸರು. ಅದು ಬಾಹ್ಯರೂಪದಿಂದ ಅಲ್ಲ, ಆತನ ವಿದ್ಯೆ ಮತ್ತು ವಿನಯಗಳ ಶೋಭೆಯಿಂದಾಗಿ. ಸುಗ್ರೀವನ ಸಚಿವ ರಾಮನೆಡೆಗೆ ಆಕರ್ಷಿತನಾಗುವುದು ಆತನ ಮೊದಲ ನೋಟದಲ್ಲಿಯೇ. ರಾಮನನ್ನು ನೋಡಿದ ತಕ್ಷಣ ಆತನ ಶಾಪ ವಿಮೋಚನೆಯಾಯಿತು ಎನ್ನುವ ಕಥೆ ಮೂಲ ರಾಮಾಯಣದಲ್ಲಿಲ್ಲ.

ಸುಗ್ರೀವನ ಚಂಚಲತೆಯ ವಿಷಯಗಳನ್ನು ಮುಂದಿನ ಸಂಚಿಕೆಯಲ್ಲಿ ಗಮನಿಸೋಣ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ರಾಜಮಾರ್ಗ ಅಂಕಣ: ಅನಾಥಾಶ್ರಮದ ಹುಡುಗಿಯು ಅಮೇರಿಕನ್ ಕಂಪೆನಿಯ ಸಿಇಒ ಆದ ಕಥೆ

ರಾಜಮಾರ್ಗ ಅಂಕಣ: ವಿಶೇಷ ಎಂದರೆ ಜ್ಯೋತಿ ರೆಡ್ಡಿ ಅವರು ಇಂದಿಗೂ ತನ್ನ ಬಾಲ್ಯದ ಕಷ್ಟಗಳನ್ನು ಮರೆತಿಲ್ಲ. ವರ್ಷಕ್ಕೊಮ್ಮೆ ಆದರೂ ಭಾರತಕ್ಕೆ ಬಂದೇ ಬರುತ್ತಾರೆ. ಅನಾಥಾಶ್ರಮಗಳಿಗೆ ಭೇಟಿ ನೀಡಿ ನೆರವು ನೀಡುತ್ತಾರೆ. ಹಲವು ಸರಕಾರಿ ಶಾಲೆಗಳ ನೂರಾರು ಬಡ ಮಕ್ಕಳ ಶಿಕ್ಷಣದ ವೆಚ್ಚವನ್ನು ಭರಿಸುತ್ತಾರೆ.

VISTARANEWS.COM


on

ರಾಜಮಾರ್ಗ ಅಂಕಣ Jyothi Reddy
Koo

ವಾರಂಗಲ್ ನಗರದ ಕಲ್ಲು ಒಡೆಯುವ ಹುಡುಗಿ ಜ್ಯೋತಿ ರೆಡ್ಡಿ ಬಿಲಿಯನ್ ಡಾಲರ್ ಕಂಪೆನಿ ಕಟ್ಟಿದ್ದು ಹೇಗೆ?

Rajendra-Bhat-Raja-Marga-Main-logo

:: ರಾಜೇಂದ್ರ ಭಟ್ ಕೆ.

ರಾಜಮಾರ್ಗ ಅಂಕಣ: ‘ಯಾವಾಗ ನಿನ್ನ ಆಕಾಂಕ್ಷೆಗಳು ಪ್ರಬಲವಾಗಿ ಇರುತ್ತವೆಯೋ, ಆಗ ನಿನ್ನೊಳಗೆ ಅತಿಮಾನುಷ ಶಕ್ತಿಗಳು ಪ್ರವಹಿಸುತ್ತವೆ.ʼ
(ನೆಪೋಲಿಯನ್ ಹಿಲ್)

ಈ ಮಾತಿಗೆ ನಿದರ್ಶನ ಆಗುವ ಸಾಧನೆ ಮಾಡಿ ತನ್ನ ಬದುಕನ್ನು ತಾನೇ ರೂಪಿಸಿಕೊಂಡಿರುವ ಒಬ್ಬ ಅನಾಥ ಹುಡುಗಿಯ ಕಥೆಯು ಇಂದು ನಿಮ್ಮ ಮುಂದೆ.

ಆಕೆಯ ಹೆಸರು ಜ್ಯೋತಿ ರೆಡ್ಡಿ (Jyothi Reddy). ಆಕೆ ತೆಲಂಗಾಣ ರಾಜ್ಯದ ವಾರಂಗಲನ ಅತ್ಯಂತ ಬಡ ಕುಟುಂಬದ ಹುಡುಗಿ ಆಗಿದ್ದಳು. ಆಕೆಯ ಹೆತ್ತವರಿಗೆ ಮೂರು ಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಬಡತನ ಮತ್ತು ಹಸಿವು ಹೆಚ್ಚಾದ ಕಾರಣ ಅವಳ ಹೆತ್ತವರು ಇಬ್ಬರು ಹೆಣ್ಣು ಮಕ್ಕಳನ್ನು ಅನಾಥಾಶ್ರಮಕ್ಕೆ ಸೇರಿಸಿದರು. ಮತ್ತೆ ಅವರನ್ನು ನೋಡಲಿಕ್ಕೂ ಬರಲಿಲ್ಲ! ಅದರಲ್ಲಿ ಒಬ್ಬರು ಜ್ಯೋತಿ! ಆಕೆ ತನ್ನ ಬಾಲ್ಯದ ಐದು ವರ್ಷಗಳನ್ನು ಅನಾಥಾಶ್ರಮದಲ್ಲಿ ಕಳೆಯಬೇಕಾಯಿತು.

ಅಸಹಾಯಕ ಬದುಕು, ನೂರಾರು ಸವಾಲು!

ಹಿರಿಯ ಮಗಳಾದ ಜ್ಯೋತಿ ಅನಾಥ ಮಕ್ಕಳ ಸರಕಾರಿ ಶಾಲೆಗೆ ಹೋಗಿ 12ನೆಯ ತರಗತಿ ಪಾಸಾದಳು. ಅದರ ಬೆನ್ನಿಗೆ ಅವರ ಕಸಿನ್ ಜೊತೆಗೆ ಮದುವೆ ಕೂಡ ನಡೆದು ಹೋಯಿತು. ಆಗ ಅವರಿಗೆ 16 ವರ್ಷ! ಹದಿನೆಂಟು ತುಂಬುವ ಹೊತ್ತಿಗೆ ಮಡಿಲಲ್ಲಿ ಎರಡು ಹೆಣ್ಣು ಮಕ್ಕಳು ಮಲಗಿದ್ದವು! ಗಂಡನಿಗೆ ಎಲ್ಲಿಯೂ ಪರ್ಮನೆಂಟ್ ಕೆಲಸ ಇರಲಿಲ್ಲ. ಆಗ ಮಕ್ಕಳ ಜವಾಬ್ದಾರಿ ಕೂಡ ಜ್ಯೋತಿ ಅವರೇ ಹೊತ್ತರು.

ಕಠಿಣ ದುಡಿಮೆಯ ಜೊತೆಗೆ ಒಂದಷ್ಟು ಕನಸು!

ಬತ್ತದ ಗದ್ದೆಯಲ್ಲಿ ನೇಜಿಯನ್ನು ನೆಡುವ ಕೆಲಸ, ಕಲ್ಲನ್ನು ಒಡೆಯುವ ಕೆಲಸವನ್ನು ಕೂಡ ಅವರು ಮಾಡಿದರು. ತನ್ನ ಬದುಕು ಸ್ವಾವಲಂಬಿ ಆಗಬೇಕು ಎನ್ನುವ ತುಡಿತ ಅವರನ್ನು ಅಂತಹ ಕೆಲಸಕ್ಕೆ ದೂಡಿತು.

ಆಗ ಅವರ ನೆರವಿಗೆ ಬಂದದ್ದು ‘ನೆಹರೂ ಯುವ ಕೇಂದ್ರ’ ಎನ್ನುವ ಸರಕಾರದ ಅಧೀನ ಸಂಸ್ಥೆ. ಅದರಲ್ಲಿ ಜ್ಯೋತಿ ರೆಡ್ಡಿ ಅವರು ಸ್ವಯಂಸೇವಕಿಯಾಗಿ ಮಕ್ಕಳಿಗೆ ಪಾಠ ಮಾಡುವ ಕೆಲಸ ಮಾಡಿದರು. ಅದರ ಜೊತೆಗೆ ಅಂಬೇಡ್ಕರ್ ಬಯಲು ವಿವಿಯ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಎರಡನ್ನೂ ಅವರು ಮುಗಿಸಿದರು. ಹಾಗೆಯೇ ಅವರ ಕಂಪ್ಯೂಟರ್ ಅಪ್ಲಿಕೇಶನ್ ಡಿಪ್ಲೊಮಾ ಕೂಡ ಪೂರ್ತಿ ಆಯಿತು.

ಟೀಚರ್ ಆಗಿ ಉದ್ಯೋಗ ಆರಂಭ ಮಾಡಿದರು

ಆಗ ಅವರಿಗೆ ಸರಕಾರಿ ಶಾಲೆಯ ಟೀಚರ್ ಉದ್ಯೋಗವು ದೊರೆಯಿತು. ತಿಂಗಳಿಗೆ 6,000 ರೂಪಾಯಿ ಸಂಬಳ ಕೈ ಸೇರುತ್ತಿತ್ತು. ಪುಟ್ಟ ಬಾಡಿಗೆ ಮನೆ. ಅವರ ಕುಟುಂಬಕ್ಕೆ ಆ ಸಂಬಳವು ಯಾವುದಕ್ಕೂ ಸಾಲುತ್ತಿರಲಿಲ್ಲ. ಶಾಲೆಗೆ ಎರಡು ಘಂಟೆ ನಡೆದು ಹೋಗುವ ಕಷ್ಟ ಬೇರೆ. ಆಗ ದಾರಿಯಲ್ಲಿ ಸೀರೆಗಳನ್ನು ಮಾರುತ್ತ ಒಂದಿಷ್ಟು ಹಣ ಗಳಿಸಿದರು. ಮನೆಯಲ್ಲಿ ಒಂದು ಹೊಲಿಗೆ ಯಂತ್ರ ಇಟ್ಟುಕೊಂಡು ಸ್ವಲ್ಪ ಸಂಪಾದನೆ ಮಾಡಿದರು.

ಅಮೆರಿಕಾದಲ್ಲಿ ಉದ್ಯೋಗದ ಆಫರ್ ಬಂತು!

2000ರ ಹೊತ್ತಿಗೆ ಅವರ ಜೀವನದಲ್ಲಿ ಒಂದು ಮಹತ್ವದ ತಿರುವು ಬಂದೇ ಬಿಟ್ಟಿತು. ಅವರ ಸೋದರ ಮಾವ ಒಬ್ಬರು ಅಮೆರಿಕಾದಿಂದ ಊರಿಗೆ ಬಂದವರು ಜ್ಯೋತಿ ಅವರನ್ನು ಭೇಟಿ ಮಾಡಿದರು. ಅಮೆರಿಕಾದಲ್ಲಿ ಉದ್ಯೋಗದ ಭರವಸೆ ನೀಡಿದರು. ಆಗ ಅವರ ಮನಸ್ಸಿನಲ್ಲಿ ಗೊಂದಲವು ಆರಂಭ ಆಯಿತು.

ಒಂದು ಕಡೆ ತನ್ನ ಸಂಸಾರದ ಜವಾಬ್ದಾರಿ. ಇನ್ನೊಂದು ಕಡೆ ಸರಕಾರಿ ನೌಕರಿ. ಮತ್ತೊಂದು ಕಡೆ ಅವರದ್ದೇ ಆದ ಬಹಳ ದೊಡ್ಡ ಕನಸು! ಇವುಗಳಲ್ಲಿ ಯಾವುದನ್ನು ಆರಿಸುವುದು? ಕೊನೆಗೆ ಅವರು ಗಟ್ಟಿ ನಿರ್ಧಾರ ಮಾಡಿ ಮೂರನೆಯದನ್ನು ಆರಿಸಿದರು. ಅದರಲ್ಲಿ ತೀವ್ರವಾದ ರಿಸ್ಕ್ ಇತ್ತು. ಆದರೆ ರಿಸ್ಕ್ ಇಲ್ಲದೆ ಕನಸು ಪೂರ್ತಿ ಆಗುವುದು ಹೇಗೆ?

ವಾರಂಗಲ್ ಟು ಅಮೆರಿಕಾ ಹಾರಿದರು!

ಪ್ರೀತಿಸುವ ತನ್ನ ಎರಡು ಹೆಣ್ಣು ಮಕ್ಕಳನ್ನು ಒಂದು ಮಿಷನರಿ ಹಾಸ್ಟೆಲಿನಲ್ಲಿ ಬಿಟ್ಟರು. ವೀಸಾ ಮಾಡಿಸಲು ತುಂಬಾ ಕಷ್ಟಪಟ್ಟರು. ಕೊನೆಗೆ ಧೈರ್ಯ ಜೋಡಿಸಿಕೊಂಡು ವಾರಂಗಲ್ ಟು ಅಮೆರಿಕ ವಿಮಾನದಲ್ಲಿ ಹಾರಿದರು! ಈಗ ಅವರಿಗೆ ನಿಜವಾದ ಸಮಸ್ಯೆಗಳು ಆರಂಭವಾದವು. ಕೆಲಸ ಕೊಡಿಸುವ ಭರವಸೆ ಕೊಟ್ಟಿದ್ದ ಸೋದರ ಮಾವ ಅಲ್ಲಿ ಕೈ ಎತ್ತಿದರು. ಮಹಾನಗರದಲ್ಲಿ ಕಣ್ಣಿಗೆ ಬಟ್ಟೆಯನ್ನು ಕಟ್ಟಿ ಬಿಟ್ಟ ಅನುಭವ ಅವರಿಗೆ ಆಯಿತು. ತಂದಿದ್ದ ಸ್ವಲ್ಪ ದುಡ್ಡು ಪೂರ್ತಿ ಖಾಲಿ ಆಗಿತ್ತು.

ಮಾಯಾ ನಗರಿಯಲ್ಲಿ ಒಂಟಿ ಹೆಣ್ಣಿನ ಹೋರಾಟ!

ಅವರು ಯಾವತ್ತೂ ಅಮೆರಿಕಾ ನೋಡಿದವರೇ ಅಲ್ಲ! ಅಲ್ಲಿ ಅವರಿಗೆ ಸಂಬಂಧಿಕರು ಅಥವಾ ಪರಿಚಯದವರು ಅಂತ ಯಾರೂ ಇರಲಿಲ್ಲ. ಆದರೆ ಗುಂಡಿಗೆಯಲ್ಲಿ ಧೈರ್ಯ ಇತ್ತು. ತಮ್ಮ ಪದವಿ, ಸ್ಟೇಟಸ್ ಎಲ್ಲವನ್ನೂ ಗಾಳಿಗೆ ತೂರಿ ಗ್ಯಾಸ್ ಸ್ಟೇಶನ್, ಬೇಬಿ ಸಿಟ್ಟಿಂಗ್, ವಿಡಿಯೋ ಗೇಮ್ಸ್ ಶಾಪ್… ಹೀಗೆ ಹಲವು ಕಡೆ ದುಡಿದರು. ಆ ಸಂದರ್ಭ ಸೂಕ್ಷ್ಮವಾಗಿ ಅಮೆರಿಕಾದ ಜನ ಜೀವನವನ್ನು, ಉದ್ಯೋಗದ ಅವಕಾಶಗಳನ್ನು ಅಭ್ಯಾಸ ಮಾಡಿದರು. ಅವರು ಒಂದೂವರೆ ವರ್ಷದಲ್ಲಿ 40,000 ಅಮೇರಿಕನ್ ಡಾಲರ್ ಸಂಪಾದನೆ ಮಾಡಿದ್ದರು!

ಆರಂಭ ಆಗಿಯೇ ಬಿಟ್ಟಿತು ಕನಸಿನ ಕಂಪೆನಿ!

ಅದನ್ನು ಬಂಡವಾಳ ಮಾಡಿಕೊಂಡು ಅಮೆರಿಕಾದ ಫೀನಿಕ್ಸ್ ಎಂಬಲ್ಲಿ ಒಂದು ಸಣ್ಣದಾದ ಕಚೇರಿಯನ್ನು ತೆರೆದು ‘KEY SOFTWARE SOLUTIONS’ ಎಂಬ ಕನ್ಸಲ್ಟೆನ್ಸಿ ಕಂಪೆನಿ ತೆರೆದರು( 2001). ಅವರು ಕಲಿತಿದ್ದ ಕಂಪ್ಯೂಟರ್ ತರಬೇತಿಯು ಅವರಿಗೆ ಈಗ ಸಹಾಯಕ್ಕೆ ಬಂದಿತು.

ಅಮೆರಿಕಾದಲ್ಲಿ ಹೊರಗಿಂದ ಬರುವವರಿಗೆ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ಮತ್ತು ವೀಸಾ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡುವ ಸಂಸ್ಥೆಯಾಗಿ ತಮ್ಮ ಸಂಸ್ಥೆಯನ್ನು ಬೆಳೆಸಿದರು. ಒಬ್ಬರೇ ಸ್ವಾವಲಂಬಿಯಾದ ಹೆಣ್ಣು ಮಗಳು ಅಮೆರಿಕಾದಲ್ಲಿ ಮಾಡಿದ ಭಾರೀ ಹೋರಾಟವು ಕೊನೆಗೂ ಫಲ ನೀಡಿತು. ಒಂದರ ಹಿಂದೆ ಒಂದು ಅವರ ಕಂಪೆನಿಯ ಫ್ರಾಂಚೈಸಿಗಳು ಆರಂಭ ಆದವು. ಅವರ ಕಠಿಣ ಪರಿಶ್ರಮ, ಬದ್ಧತೆ ಮತ್ತು ಬಲವಾದ ನಂಬಿಕೆ ಇವುಗಳು ಅವರನ್ನು ಬಹಳ ಎತ್ತರಕ್ಕೆ ಬೆಳೆಸಿದವು.

ಇಂದವರ ಕಂಪೆನಿ ಬಿಲಿಯನ್ ಡಾಲರ್ ಆದಾಯ ಹೊಂದಿದೆ!

ಈಗ ಅವರ ಬಿಲಿಯನ್ ಡಾಲರ್ ಕಂಪೆನಿಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ತನ್ನ ಇಬ್ಬರು ಮಕ್ಕಳನ್ನು ಕೂಡ ಅವರು ಅಮೆರಿಕಕ್ಕೆ ಕರೆಸಿ ಸಾಫ್ಟವೇರ್ ಇಂಜಿನಿಯರಿಂಗ್ ಓದಿಸಿ ಮದುವೆ ಮಾಡಿದ್ದಾರೆ. ಅವರಿಗೆ NRI OF THE YEAR ಪ್ರಶಸ್ತಿ ದೊರೆತಿದೆ!

ಕೆರೆಯ ನೀರನು ಕೆರೆಗೆ ಚೆಲ್ಲಿ…

ವಿಶೇಷ ಎಂದರೆ ಜ್ಯೋತಿ ರೆಡ್ಡಿ ಅವರು ಇಂದಿಗೂ ತನ್ನ ಬಾಲ್ಯದ ಕಷ್ಟಗಳನ್ನು ಮರೆತಿಲ್ಲ. ವರ್ಷಕ್ಕೊಮ್ಮೆ ಆದರೂ ಭಾರತಕ್ಕೆ ಬಂದೇ ಬರುತ್ತಾರೆ. ಅನಾಥಾಶ್ರಮಗಳಿಗೆ ಭೇಟಿ ನೀಡಿ ನೆರವು ನೀಡುತ್ತಾರೆ. ಹಲವು ಸರಕಾರಿ ಶಾಲೆಗಳ ನೂರಾರು ಬಡ ಮಕ್ಕಳ ಶಿಕ್ಷಣದ ವೆಚ್ಚವನ್ನು ಭರಿಸುತ್ತಾರೆ. ಎಸೆಸೆಲ್ಸಿಯ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಬಡಮಕ್ಕಳಿಗೆ ತಲಾ ಐದು ಸಾವಿರ ರೂಪಾಯಿ ಬಹುಮಾನ ಕೊಟ್ಟು ಬೆನ್ನು ತಟ್ಟುತ್ತಾರೆ.

“ಬಾಲ್ಯದ ಬಡತನ ನನ್ನ ಮನಸ್ಸು ಮತ್ತು ಹೃದಯವನ್ನು ನೋಯಿಸಿತ್ತು. ಆದರೆ ಭಾರತದ ಪ್ರತಿ ಅನಾಥ ಮಗು ನನ್ನಂತೆ ಬೆಳೆಯಬೇಕು ಎಂದು ಆಸೆ ಪಡುತ್ತೇನೆ” ಎಂದು ಆಕೆಯು ಹೇಳುವಾಗ ಅವರ ಕಣ್ಣಲ್ಲಿ ಗೆದ್ದ ಖುಷಿ ಇತ್ತು!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ ಕಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ ಕಥೆ

ರಾಜಮಾರ್ಗ ಅಂಕಣ: ಅನಾಥಾಶ್ರಮದಲ್ಲಿ ಇದ್ದ ಹುಡುಗ, ಪೇಪರ್‌ ಹಂಚುತ್ತಿದ್ದ ಬಾಲಕ, ಕಠಿಣ ಪರಿಶ್ರಮದಿಂದ ಬೆಳೆದು ಜಿಲ್ಲಾಧಿಕಾರಿ ಆದ ಕಥೆ ಎಂಥವರಿಗೂ ಸ್ಫೂರ್ತಿ.

VISTARANEWS.COM


on

ರಾಜಮಾರ್ಗ ಅಂಕಣ abudal nasar ias
Koo

ಕೇರಳದ ಅಬ್ದುಲ್ ನಾಸರ್ ಬದುಕಿನ ಯಶೋಗಾಥೆ ಅದ್ಭುತ!

Rajendra-Bhat-Raja-Marga-Main-logo

:: ರಾಜೇಂದ್ರ ಭಟ್ ಕೆ.

ರಾಜಮಾರ್ಗ ಅಂಕಣ: ಆತ ತನ್ನ ಐದನೇ ವರ್ಷಕ್ಕೆ ಸರಿಯಾಗಿ ತನ್ನ ಅಪ್ಪನನ್ನು ಕಳೆದುಕೊಂಡಿದ್ದರು. ಅವರಿಗೆ ಐದು ಜನ ಸೋದರ, ಸೋದರಿಯರು. ಅವರನ್ನೆಲ್ಲ ಸಾಕಲು ಅವರ ಅಮ್ಮ ಯಾರ್ಯಾರದೋ ಮನೆಯಲ್ಲಿ ಪಾತ್ರೆ ಪಗಡಿಗಳನ್ನು ತೊಳೆಯಬೇಕಾಯಿತು. ಹಸಿವು ಮತ್ತು ಅಪಮಾನ ಬದುಕಿನ ಪಾಠ ಕಲಿಸಿತು.

13 ವರ್ಷ ಅನಾಥಾಶ್ರಮದಲ್ಲಿ ಕಳೆದವರು ನಾಸರ್

ಅಮ್ಮನಿಗೆ ಅವರನ್ನು ಸಾಕುವುದು ಕಷ್ಟ ಆದಾಗ ಮಗನನ್ನು ಒಂದು ಅನಾಥಾಶ್ರಮದಲ್ಲಿ ತಂದು ಬಿಟ್ಟರು. ಅಲ್ಲಿನ ಅರೆಹೊಟ್ಟೆಯ ಊಟ, ಅನಾರೋಗ್ಯಕರ ವಾತಾವರಣ ಮತ್ತು ಬೆವರು ಹರಿಸುವ ದುಡಿಮೆ ಅವರ ಸಂಗಾತಿಗಳು ಆದದ್ದು ಆಗ. ಅಲ್ಲಿನ ಹಿಂಸೆಯು ಅತಿಯಾದಾಗ ಅನಾಥಾಶ್ರಮ ಬಿಟ್ಟು ಓಡಿ ಹೋಗುವ ನೆನಪು ಅವರಿಗೆ ಆದದ್ದು ಉಂಟು. ರಾಗಿಂಗ್ ಕೂಡ ಜೋರಾಗಿತ್ತು. ಓಡಿ ಹೋಗೋಣ ಎಂದು ಅನ್ನಿಸಿದಾಗಲೆಲ್ಲ ಅಮ್ಮನ ಅಸಹಾಯಕತೆಯು ಕಣ್ಣ ಮುಂದೆ ಬಂದು ಕಣ್ಣೀರು ಗಲ್ಲವನ್ನು ತೋಯಿಸುತ್ತಿತ್ತು. ಆಗ ತನ್ನ ಶಿಕ್ಷಣದ ಖರ್ಚು ತಾನೇ ಭರಿಸಲು ಅವರು ನಿರ್ಧಾರ ಮಾಡುತ್ತಾರೆ.

ಹೊಟ್ಟೆಪಾಡಿಗಾಗಿ ಹಲವೆಡೆಗಳಲ್ಲಿ ದುಡಿಮೆ

ಬಿಡುವಿನ ಅವಧಿಯಲ್ಲಿ ಪೇಪರ್ ಹಂಚುವ, ಬಸ್ಸುಗಳಲ್ಲಿ ಕ್ಲೀನರ್ ಆಗಿ ದುಡಿಯುವ, ಹೋಟೆಲುಗಳಲ್ಲಿ ಸಪ್ಲಾಯರ್ ಆಗಿ ದುಡಿಯುವ ಅವಕಾಶ ಅವರಿಗೆ ಒದಗಿತು. ತಲಸ್ಸೇರಿಯ ಪದವಿ ಕಾಲೇಜಿನಲ್ಲಿ ಓದುವಾಗ ತನಗಿಂತ ಕಿರಿಯ ವಿದ್ಯಾರ್ಥಿಗಳಿಗೆ ಟ್ಯೂಶನ್ ಕೊಡುವುದು, ಫೋನ್ ಆಪರೇಟರ್ ಮೊದಲಾದ ಉದ್ಯೋಗವನ್ನು ಮಾಡಿದರು.

ಕಲಿಕೆಯಲ್ಲಿ ಸಾಧಾರಣ ವಿದ್ಯಾರ್ಥಿ

ಅಬ್ದುಲ್ ನಾಸರ್ ಹೇಳುವ ಪ್ರಕಾರ ಅವರೊಬ್ಬ ಸಾಮಾನ್ಯರಲ್ಲಿ ಸಾಮಾನ್ಯ ಬುದ್ಧಿಮತ್ತೆಯ ವಿದ್ಯಾರ್ಥಿ. ಹೈಸ್ಕೂಲ್, ಪಿಯುಸಿ, ಪದವಿ ಎಲ್ಲ ಕಡೆಯೂ ಅವರಿಗೆ ದೊರೆತದ್ದು ಕೇವಲ ದ್ವಿತೀಯ ದರ್ಜೆ ಮಾತ್ರ. ಆದರೆ MSW ಮಾಡುವಾಗ ಅವರ ಅದ್ಭುತವಾದ ಪ್ರತಿಭೆ ಹೊರಬಂದಿತು. ಅದರಲ್ಲಿ ಅವರಿಗೆ ಅತ್ಯುನ್ನತ ಶ್ರೇಣಿ ಫಲಿತಾಂಶ ಬಂದಿತು. 1994ರಲ್ಲಿ ಕೇರಳ ಸರಕಾರದ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಿ ಆಗಿ ಕೆಲಸಕ್ಕೆ ಸೇರಿದರು.

ಓದುವ ಹಸಿವು ಕಡಿಮೆ ಆಗಲೇ ಇಲ್ಲ

ಸರಕಾರಿ ಉದ್ಯೋಗಕ್ಕೆ ಸೇರಿದ ಕೂಡಲೇ ಅವರು ತನ್ನ ಅಮ್ಮನನ್ನು ಮನೆಕೆಲಸವನ್ನು ಬಿಡಿಸಿ ತನ್ನ ಕ್ವಾರ್ಟರ್ಸಗೆ ಕರೆದುಕೊಂಡು ಬಂದರು. ಅಲ್ಲಿ ಅವರಿಗೆ ನೆಮ್ಮದಿಯ ಬದುಕು ದೊರೆಯಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡಿಕೊಟ್ಟರು.

ವರ್ಷಕ್ಕೆ ಎರಡೆರಡು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಾ ಸಾಗಿದರು

ಈ ಕಡೆ ಅವರ ಓದುವ ಅಭ್ಯಾಸವು ತೀವ್ರವಾಗಿ ಹೆಚ್ಚಾಯಿತು. ರಸ್ತೆ ಬದಿಯಲ್ಲಿ ಅರ್ಧ ಬೆಲೆಗೆ ಮಾರಾಟ ಆಗುತ್ತಿದ್ದ ಪುಸ್ತಕಗಳನ್ನು ಆಯ್ದು ತಂದು ಓದಿದರು. ನಂತರ ಅವುಗಳನ್ನು ಅದೇ ರೇಟಿಗೆ ತನ್ನ ಗೆಳೆಯರಿಗೆ ಮಾರಿದರು. ವರ್ಷಕ್ಕೆ ಎರಡೆರಡು ಪರೀಕ್ಷೆಗಳನ್ನು ಬರೆದು ಭಡ್ತಿ ಪಡೆಯುತ್ತಾ ಮುಂದೆ ಹೋದರು. ಸಮರ್ಪಣಾ ಭಾವದಿಂದ ದುಡಿದು ಸರಕಾರದ ಮನ್ನಣೆ ಪಡೆದರು. 2015ರಲ್ಲಿ ಅವರು ಸ್ವಂತ ಸಾಮರ್ಥ್ಯದ ಮೇಲೆ ಡೆಪ್ಯೂಟಿ ಕಲೆಕ್ಟರ್ ಹುದ್ದೆಗೆ ಏರಿದರು. 2019ರಲ್ಲಿ ಕೊಲ್ಲಂ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ಕೂಡ ಆಯ್ಕೆ ಆದರು. ಭ್ರಷ್ಟಾಚಾರ ಇಲ್ಲದ ಶುದ್ಧಾಂಗ ಅಧಿಕಾರವನ್ನು ಉಪಯೋಗ ಮಾಡಿ ಗೆದ್ದರು.

ತನ್ನ ಹುದ್ದೆಯನ್ನು ಪ್ರಭಾವಯುತವಾಗಿ ಬಳಕೆ ಮಾಡಿಕೊಂಡು ಜನರ ಸೇವೆ ಮಾಡಿದರು. ತನ್ನನ್ನು ಜನಸೇವೆಗೆ ಮುಡಿಪಾಗಿಟ್ಟರು. ಅಬ್ದುಲ್ ನಾಸರ್ ಅವರ ಹೋರಾಟದ ಬದುಕು ಯಾರಿಗಾದರೂ ಸ್ಫೂರ್ತಿದಾಯಕ ಆಗಬಹುದು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೆನಪಾದಳು ಅರುಣಾ ಶಾನುಭಾಗ್!‌

Continue Reading

ಅಂಕಣ

ರಾಜಮಾರ್ಗ ಅಂಕಣ: ನೆನಪಾದಳು ಅರುಣಾ ಶಾನುಭಾಗ್!‌

ರಾಜಮಾರ್ಗ ಅಂಂಕಣ: ಕೋಲ್ಕತಾದಲ್ಲಿ ನಡೆದ ವೈದ್ಯೆಯ ಬರ್ಬರ ಅತ್ಯಾಚಾರ ಹಾಗೂ ಕೊಲೆಯ ಘಟನೆ ಸುದ್ದಿಯಾಗುತ್ತಿರುವಂತೆಯೇ ನನಪಾಗುತ್ತಿರುವವಳು ಅಂಥದೇ ಒಂದು ಕೃತ್ಯಕ್ಕೆ ಬಲಿಯಾಗಿ ಜೀವಂತ ಶವವಾಗಿ ನರಳಿದ ಅರುಣಾ ಶಾನುಭಾಗ್.

VISTARANEWS.COM


on

ರಾಜಮಾರ್ಗ ಅಂಕಣ aruna shanubhag
Koo

41 ವರ್ಷ ಆಸ್ಪತ್ರೆಯಲ್ಲಿ ಜೀವಚ್ಛವವಾಗಿ ನರಳಿದ ಅತ್ಯಾಚಾರ ಸಂತ್ರಸ್ತೆಯ ಕಥೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಕೋಲ್ಕತ್ತಾದಲ್ಲಿ (Kolkata horror) ಮೊನ್ನೆ ಓರ್ವ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯ (Physical abuse) ಪ್ರಕರಣದ ಸುದ್ದಿಯು ಸ್ಫೋಟವಾಗಿ ಇಡೀ ಭಾರತ ನ್ಯಾಯಕ್ಕಾಗಿ ಹೋರಾಡಿ ಬೀದಿಗೆ ಇಳಿದ ಘಟನೆ ನಡೆಯಿತು. ಅದೇ ರೀತಿಯಾಗಿ, ಅದಕ್ಕಿಂತ ಬರ್ಬರವಾದ ಒಂದು ಅತ್ಯಾಚಾರದ ಘಟನೆಯು 50 ವರ್ಷಗಳ ಹಿಂದೆ ಮುಂಬಯಿಯಲ್ಲಿ (Aruna Shanbhag) ನಡೆದಿತ್ತು. ಅದಕ್ಕೆ ಬಲಿಯಾದವರು ಬಹಳ ದೊಡ್ಡ ಕನಸು ಹೊತ್ತಿದ್ದ ಓರ್ವ ಸ್ಟಾಫ್ ನರ್ಸ್.

ಆಕೆ ಅರುಣಾ ಶಾನುಭೋಗ

ಹುಟ್ಟಿದ ಊರು ಉತ್ತರ ಕನ್ನಡದ ಹಲ್ಡೀಪುರ (1948). ಸ್ವಾಭಿಮಾನದ ಸಾರಸ್ವತ ಕುಟುಂಬ ಆಕೆಯದ್ದು. ಮಾತೃಭಾಷೆ ಕೊಂಕಣಿ. ನರ್ಸ್ ಆಗಿ ಸೇವೆ ಸಲ್ಲಿಸಬೇಕು ಎಂದು ಕನಸು ಹೊತ್ತು ನರ್ಸಿಂಗ್ ಕೋರ್ಸ್ ಮಾಡಿದಾಕೆ ಅರುಣಾ. ಮುಂದೆ ಆಕೆ ಕೆಲಸಕ್ಕೆ ಸೇರಿದ್ದು ಮುಂಬಯಿಯ ಪರೆಲ್ ಎಂಬಲ್ಲಿ ಇದ್ದ ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ. ಕೆಲವೇ ದಿನಗಳಲ್ಲಿ ಆಕೆಯ ಪರಿಚಯ ಆಸ್ಪತ್ರೆಯ ಎಲ್ಲರಿಗೂ ಆಗಿತ್ತು ಅಂದರೆ ಅದಕ್ಕೆ ಕಾರಣ ಆಕೆಯ ಸೇವಾ ಮನೋಭಾವ, ಸೌಂದರ್ಯ ಮತ್ತು ಚುರುಕುತನ. ಆಕೆಯ ಗೆಜ್ಜೆಯ ಘಲ್ ಎಂಬ ಶಬ್ದ ಕೇಳಿದರೆ ರೋಗಿಗಳ ಮುಖದಲ್ಲಿ ನಗು ಚಿಮ್ಮುತ್ತಿತ್ತು. ಅಂತಹ ಅರುಣಾ ಬದುಕಿನಲ್ಲಿಯೂ ಒಂದು ಕರಾಳ ದಿನ ಬಂದೇ ಬಿಟ್ಟಿತು.

27 ನವೆಂಬರ್, 1973ರ ರಾತ್ರಿ!

ಎಂದಿನಂತೆಯೇ ತನ್ನ ಡ್ಯೂಟಿ ಮುಗಿಸಿ ಆಸ್ಪತ್ರೆಯ ನೆಲ ಅಂತಸ್ತಿನ ತನ್ನ ಖಾಸಗಿ ಕೊಠಡಿಯಲ್ಲಿ ಡ್ರೆಸ್ ಬದಲಾವಣೆ ಮಾಡುತ್ತಿದ್ದ ಅರುಣಾ ಮೇಲೆ ಮಸುಕು ಕತ್ತಲೆಯಲ್ಲಿ ತೋಳದಂತೆ ಎರಗಿದ್ದ ಅದೇ ಆಸ್ಪತ್ರೆಯ ಓರ್ವ ಸ್ವೀಪರ್ ಸೋಹನ್ ಲಾಲ್! ಆಕೆ ಪ್ರತಿಭಟನೆ ಮಾಡಿದಾಗ ಆಕೆಯ ಧ್ವನಿ ಅಡಗಿಸಲು ನಾಯಿಯ ಗಟ್ಟಿಯಾದ ಸಂಕಲೆಯನ್ನು ಕುತ್ತಿಗೆಗೆ ಬಿಗಿದು ಕ್ರೂರವಾಗಿ ಅತ್ಯಾಚಾರ ಮಾಡಿಬಿಟ್ಟಿದ್ದ. ಆಗ ಆಕೆಯ ವಯಸ್ಸು ಕೇವಲ 25.
ದುರಂತ ಏನಾಯ್ತು ಎಂದರೆ ಆ ಬಲವಾದ ಕಬ್ಬಿಣದ ಸಂಕಲೆ ಕುತ್ತಿಗೆಗೆ ಬಿಗಿದ ಕಾರಣ ಮೆದುಳಿಗೆ ರಕ್ತ ಸಂಚಾರ ನಿಂತು ಹೋಯಿತು. ಬೆಳಿಗ್ಗಿನತನಕ ಆಕೆ ನರಳಲೂ ತ್ರಾಣ ಇಲ್ಲದೆ ಅರೆಪ್ರಜ್ಞಾವಸ್ಥೆಯಲ್ಲಿ ಅಲ್ಲಿಯೇ ಬಿದ್ದುಕೊಂಡಿದ್ದಳು! ಮರುದಿನ ಬೆಳಿಗ್ಗೆ ಕಸಗುಡಿಸಲು ಬಂದ ಓರ್ವ ಮಹಿಳೆ ಬೊಬ್ಬೆ ಹೊಡೆದು ಜನ ಸೇರಿಸಿ ಆಕೆಯನ್ನು ತುರ್ತುಚಿಕಿತ್ಸಾ ವಿಭಾಗಕ್ಕೆ ಸೇರಿಸಿದರು. ಆಗ ಆಕೆಯ ದೇಹದಲ್ಲಿ ಉಸಿರು ಇತ್ತು ಆದರೆ ಯಾವುದೇ ಸಂವೇದನೆ, ಭಾವನೆ ಇರಲಿಲ್ಲ. ಕಣ್ಣು ತೆರೆದು ಮರದ ಕೊರಡಿನ ಹಾಗೆ ಮಲಗಿದ್ದಳು.

ಪರ್ಸಿಸ್ಟೆಂಟ್ ವೇಜಿಟೆಟಿವ್ ಸ್ಟೇಟ್!

ಮೆದುಳಿನ ಒಂದು ಭಾಗಕ್ಕೆ ತೀವ್ರವಾದ ಆಘಾತವಾದಾಗ ಉಂಟಾಗುವ ಆರೋಗ್ಯ ಸಮಸ್ಯೆ ಇದು. ಅರ್ಧ ಜೀವ, ಅರ್ಧ ಶವ ಅನ್ನುವ ದೈನೇಸಿ ಸ್ಥಿತಿ. ನಿಧಾನ ಉಸಿರಾಟ, ನಾಡಿ ಮಿಡಿತ, ಹೃದಯ ಬಡಿತ ಬಿಟ್ಟರೆ ಬೇರೆ ಯಾವ ಬದುಕಿನ ಲಕ್ಷಣಗಳೂ ಇಲ್ಲ. ಶೂನ್ಯದ ಕಡೆಗೆ ನೆಟ್ಟ ದೃಷ್ಟಿ ನೋಟ, ಭಾವನೆಗಳೇ ಇಲ್ಲದ ಮುಖ, ಸಂವೇದನೆಗಳೇ ಇಲ್ಲದ ದೇಹ, ದೇಹದ ಯಾವ ಭಾಗದಲ್ಲಿಯೂ ಚಲನೆ ಇಲ್ಲದ ಸ್ಥಿತಿ ಆಕೆಯದ್ದು. ಆಕೆ ಅದೇ ಸ್ಥಿತಿಯಲ್ಲಿ, ಅದೇ ಆಸ್ಪತ್ರೆಯ, ಅದೇ ಹಾಸಿಗೆಯಲ್ಲಿ 41 ವರ್ಷಗಳನ್ನು ಹಾಗೆಯೇ ಕಳೆದರು ಅಂದರೆ ಅದು ಎಷ್ಟೊಂದು ಹೃದಯವಿದ್ರಾವಕ ಎಂದು ಊಹೆ ಮಾಡಿಕೊಳ್ಳಿ.

ರಾಜಮಾರ್ಗ ಅಂಕಣ aruna shanubhag
ರಾಜಮಾರ್ಗ ಅಂಕಣ aruna shanubhag

ಆಸ್ಪತ್ರೆಯ ನರ್ಸುಗಳು ಆಕೆಯ ಸೇವೆಗೆ ನಿಂತರು!

ಆಕೆಯ ಊರಿನ ಅಥವಾ ಸಂಬಂಧಿಕರ ಸಂಪರ್ಕವೇ ಇಲ್ಲದ ಸಂದರ್ಭ ಅದೇ ಎಡ್ವರ್ಡ್ ಆಸ್ಪತ್ರೆಯ ನರ್ಸುಗಳು ಆಕೆಯನ್ನು ಪುಟ್ಟ ಮಗುವಿನ ಹಾಗೆ ನೋಡಿಕೊಂಡರು. ಹಲವಾರು ಜನ ಸೇರಿ ಚಿಕಿತ್ಸೆಯ ವೆಚ್ಚವನ್ನು ಭರಿಸಿದರು. ಪ್ರತೀ ದಿನವೂ ಆಕೆಯನ್ನು ಖುಷಿಯಾಗಿಡುವ ಎಲ್ಲ ಪ್ರಯತ್ನವನ್ನೂ ಮಾಡಿದರು. ವರ್ಷವೂ ಆಕೆಯ ಹುಟ್ಟುಹಬ್ಬ ಆಚರಣೆ ಮಾಡಿದರು. ಅದೇ ಹೊತ್ತಿನಲ್ಲಿ ದೇಶದಾದ್ಯಂತ ದಯಾಮರಣದ ಬಗ್ಗೆ ಚರ್ಚೆ ಆಗಿ ಅದನ್ನು ಸುಪ್ರೀಂ ಕೋರ್ಟ್ ಕೈಗೆ ಎತ್ತಿಕೊಂಡರೂ ಆ ನರ್ಸುಗಳು ಆಕೆಯನ್ನು ಜೀವಂತವಾಗಿ ಇಡುವ ಎಲ್ಲಾ ಪ್ರಯತ್ನವನ್ನೂ ಮಾಡಿದರು ಅನ್ನೋದು ಮಾನವೀಯತೆಯ ವಿಶ್ವರೂಪ ಎಂದು ನನ್ನ ಭಾವನೆ.

ಕೊಲೆಗಡುಕನಿಗೆ ಶಿಕ್ಷೆ ಆಯಿತಾ?

ಅದು ಸೋಷಿಯಲ್ ಮೀಡಿಯಾ ಕಾಲ ಅಲ್ಲ. ಕ್ಯಾಂಡಲ್ ಮಾರ್ಚ್, ಪ್ರತಿಭಟನೆ ಯಾವುದೂ ದೊಡ್ಡ ಮಟ್ಟದಲ್ಲಿ ನಡೆಯಲಿಲ್ಲ. ಆದರೂ ಅತ್ಯಾಚಾರಿ ಸೋಹನ್ ಲಾಲ್ ಬಂಧನ ಆಯಿತು. ಕೋರ್ಟಿನಲ್ಲಿ ವಾದ, ಪ್ರತಿವಾದ ಜೋರಾಗಿಯೇ ನಡೆದವು. ಆದರೆ ಸಾಕ್ಷಿಗಳ ಕೊರತೆ ಒಂದೆಡೆ ಆದರೆ ಎಡ್ವರ್ಡ್ ಆಸ್ಪತ್ರೆಯ ಅಸಹಕಾರ (ಅವರು ತಮ್ಮ ಆಸ್ಪತ್ರೆಯ ರೆಪ್ಯೂಟೇಶನ್ ಬಗ್ಗೆ ಹೆದರಿರಬೇಕು)ಗಳಿಂದ ಅತ್ಯಾಚಾರ ಕೇಸ್ ಬಿಗು ಆಗಲೇ ಇಲ್ಲ. ಅವನು ನಮ್ಮ ಸಿಬ್ಬಂದಿಯೇ ಅಲ್ಲ ಎಂದಿತು ಆಸ್ಪತ್ರೆ! ಪರಿಣಾಮವಾಗಿ ಅವನಿಗೆ ಏಳು ವರ್ಷಗಳ ಲಘುವಾದ ಶಿಕ್ಷೆ ಆಯಿತು. ಆತನು ಆ ಶಿಕ್ಷೆಯನ್ನು ಮುಗಿಸಿ ರಾಜಾರೋಷವಾಗಿ ಹೊರಗೆ ಬಂದು ಉತ್ತರಪ್ರದೇಶದ ಒಂದು ಹಳ್ಳಿಗೆ ಹೋಗಿ, ಅಲ್ಲಿ ಮದುವೆಯಾಗಿ ನೆಮ್ಮದಿಯಿಂದ ಬದುಕಿದನು ಎಂದು ಮುಂದೆ ಮಾಧ್ಯಮಗಳು ವರದಿ ಮಾಡಿದವು. ಪಿಂಕಿ ವಿರಾನಿ ಎಂಬ ಪತ್ರಕರ್ತೆಯು ಅರುಣಾಗೆ ನ್ಯಾಯ ಕೊಡಿಸಲು ಎಷ್ಟೋ ಪ್ರಯತ್ನಗಳನ್ನು ಮಾಡಿದರೂ ಸಫಲವಾಗಲಿಲ್ಲ ಅನ್ನೋದು ದುರಂತ!

ಅರುಣಾ ಏನಾದಳು?

42 ವರ್ಷಗಳ ಜೀವನ್ಮರಣದ ಹೋರಾಟದಲ್ಲಿ ನಲುಗಿದ ಅರುಣಾ 2015ರಲ್ಲಿ ನ್ಯುಮೋನಿಯಾ ಕಾಯಿಲೆಯಿಂದ ನಿಧನ ಹೊಂದಿದಳು. ಆಗ ಆಕೆಗೆ 66 ವರ್ಷ. ಅದೇ ನರ್ಸುಗಳು ಆಕೆಯ ಅಂತ್ಯಕ್ರಿಯೆ ಪೂರ್ತಿ ಮಾಡಿದರು. ಮುಂದೆ ಅದೇ ಪಿಂಕಿ ವಿರಾನಿ ಆಕೆಯ ಬದುಕಿನ ಬಗ್ಗೆ ‘ದ ಸ್ಟೋರಿ ಆಫ್ ಅರುಣಾ ‘ ಪುಸ್ತಕವನ್ನು ಬರೆದರು. ಅದು ಭಾರೀ ಜನಪ್ರಿಯ ಆಯಿತು. ‘ಕಥಾ ಅರುಣಾಚೀ ‘ ಎಂಬ ಮರಾಠಿ ನಾಟಕವೂ ವೇದಿಕೆಗೆ ಬಂದು ಕಣ್ಣೀರು ತರಿಸಿತು. ಗುಜರಾತಿ ಭಾಷೆಯಲ್ಲಿ ‘ಜಡ ಚೇತನ ‘ಎಂಬ ಕಾದಂಬರಿ ಬಂದು ಪ್ರಶಸ್ತಿಯನ್ನು ಪಡೆಯಿತು. ಮಲಯಾಳಿ ಭಾಷೆಯಲ್ಲಿ ‘ಮರಂ ಪೇಯ್ಯಂಬೋಲ್’ ಎಂಬ ಸಿನಿಮಾ ಆಕೆಯ ಬದುಕನ್ನು ಆಧರಿಸಿ ಬಂದು ಬೆಳ್ಳಿತೆರೆಯನ್ನು ಏರಿತು.

ಅರುಣಾ ಅಮರತ್ವ ಪಡೆದಳು, ತನ್ನ ಸಾವಿಗೆ ನ್ಯಾಯ ಸಿಗಲಿಲ್ಲ ಎಂಬ ಕೊರಗು ಉಳಿಸಿಕೊಂಡು…

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆತನ ಬದುಕು ಆತನ ಸಿನೆಮಾ ಕಥೆಗಳಿಗಿಂತ ರೋಚಕ!

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಆತನ ಬದುಕು ಆತನ ಸಿನೆಮಾ ಕಥೆಗಳಿಗಿಂತ ರೋಚಕ!

ರಾಜಮಾರ್ಗ ಅಂಕಣ: ಕಳೆದ 30 ವರ್ಷಗಳಿಂದ ತಮಿಳು, ತೆಲುಗು, ಮಲಯಾಳಂ ಭಾಷೆಗಳ ನೂರಾರು ಸಿನೆಮಾಗಳಲ್ಲಿ ಅಭಿನಯಿಸಿರುವ ಆತನಿಗೆ ಈಗ 58 ವರ್ಷ ತುಂಬಿದೆ! ಆತನ ಯಶಸ್ಸಿನ ಗ್ರಾಫ್ ಇಂದಿಗೂ ಏರುಗತಿಯಲ್ಲಿ ಇದೆ. ಆತನಷ್ಟು ವೈವಿಧ್ಯಮಯ ಪಾತ್ರಗಳನ್ನು ಭಾರತದ ಬೇರೆ ಯಾವ ನಟನೂ ಮಾಡಿಲ್ಲ ಎನ್ನುವುದು ವಿಕ್ರಮ್ ಹೆಚ್ಚುಗಾರಿಕೆ!

VISTARANEWS.COM


on

vikram ರಾಜಮಾರ್ಗ ಅಂಕಣ
Koo

ತಮಿಳು ಸೂಪರ್ ಸ್ಟಾರ್ ಚೀಯಾನ್ ವಿಕ್ರಮ್ ಬದುಕೇ ಒಂದು ಹೋರಾಟ!

Rajendra-Bhat-Raja-Marga-Main-logo

:: ರಾಜೇಂದ್ರ ಭಟ್ ಕೆ.

ರಾಜಮಾರ್ಗ ಅಂಕಣ: ಈ ತಮಿಳು ಸಿನೆಮಾ ನಟನ (Tamil Cinema Actor) ಬದುಕೇ ಒಂದು ಅದ್ಭುತವಾದ ಹೋರಾಟ. ತನ್ನ ಪ್ರತಿಭೆಯ ಮೇಲೆ ನಂಬಿಕೆ ಇಟ್ಟುಕೊಂಡು ಸತತವಾದ ಸೋಲು, ಹತಾಶೆ, ನೋವು, ಸವಾಲುಗಳು ಎಲ್ಲವನ್ನೂ ಗೆದ್ದುಬಂದಿರುವ ಚಿಯಾನ್ ವಿಕ್ರಮ್ (chiyaan vikram) ಅವರ ಬದುಕಿನಿಂದ ನಾವು ಕಲಿಯುವುದು ಬೆಟ್ಟದಷ್ಟು ಇದೆ!

ಆತನಿಗೆ ಹೆತ್ತವರು ಇಟ್ಟ ಉದ್ದವಾದ ಹೆಸರು ಜಾನ್ ಕೆನ್ನೆಡಿ ವಿನೋದ್ ರಾಜ್ ಎಂದು! ಆತನ ತಂದೆ ವಿಕ್ಟರ್ ಕೂಡ ಸಿನೆಮಾ ನಟ ಆಗುವ ಹುಚ್ಚನ್ನು ತಲೆಗೇರಿಸಿಕೊಂಡು ಮನೆ ಬಿಟ್ಟು ಓಡಿ ಹೋದವರು. ಅದರಿಂದಾಗಿ ಈ ಮಗನಿಗೂ ಚಿಕ್ಕಂದಿನಿಂದ ಹೀರೋ ಆಗುವ ಕನಸು! ‘ಓದಿನ ಕಡೆ ಹೆಚ್ಚು ಗಮನ ಕೊಡು’ ಎಂದು ಅಪ್ಪ ಎಷ್ಟೇ ಬೈದರೂ ಸಿನೆಮಾದ ಹುಚ್ಚು ಬಿಡಲಿಲ್ಲ.

ಸೇಲಂ ಕಾಲೇಜಿನಲ್ಲಿ ಓದುವಾಗ ಅಸಂಗತ ನಾಟಕಗಳನ್ನು ಮಾಡಿ ಹುಡುಗ ಹಲವಾರು ಬಹುಮಾನ ಗೆದ್ದಿದ್ದ ವಿಕ್ರಂ. ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ, MBA ಮುಗಿಸಿದರೂ ಕೂಡ ಅವನ ಮನಸ್ಸು ಬೆಳ್ಳಿ ಪರದೆಯ ಕಡೆಗೆ ಇತ್ತು. ಆದರೆ ಅವನ ದುರದೃಷ್ಟವು ಅವನಿಗಿಂತ ಮುಂದೆ ಇತ್ತು!

ಬದುಕಿನ ಗತಿಯನ್ನೇ ಬದಲಿಸಿದ ಬೈಕ್ ಅಪಘಾತ!

ಒಮ್ಮೆ ನಾಟಕವನ್ನು ಮುಗಿಸಿ ರಾತ್ರಿ ಬೈಕಲ್ಲಿ ಮನೆಗೆ ಬರುತ್ತಿದ್ದಾಗ ಭೀಕರವಾದ ಅಪಘಾತ. ಲಾರಿ ಬಂದು ಡಿಕ್ಕಿ ಹೊಡೆದು ಅವನ ಬೈಕನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿತ್ತು! ದೇಹದಲ್ಲಿ ನೂರಾರು ಗಾಯಗಳು. ಬಲಗಾಲು ಪೂರ್ತಿ ಹುಡಿ ಹುಡಿ ಆಗಿತ್ತು! ವೈದ್ಯರು ಕಾಲು ಕತ್ತರಿಸಲೇ ಬೇಕು, ಇಲ್ಲವಾದರೆ ಜೀವಕ್ಕೆ ಅಪಾಯ ಅಂದರು!

ಆದರೆ ಅರೆಪ್ರಜ್ಞೆಯ ಕೋಮಾ ಅವಸ್ಥೆಯಲ್ಲಿ ಕೂಡ ಆತ ಚೀರಿ ಹೇಳಿದ್ದ ‘ನನಗೆ ಹೀರೋ ಆಗಲೇ ಬೇಕು. ಎಷ್ಟು ನೋವು ಬೇಕಾದರೂ ಸಹಿಸಿಕೊಳ್ಳಲು ನಾನು ರೆಡಿ. ಆದರೆ ಕಾಲು ಕತ್ತರಿಸುವುದು ಬೇಡ!’

ಅವನ ಕೆಟ್ಟ ಹಟದ ಮುಂದೆ ವೈದ್ಯಕೀಯ ವಿಜ್ಞಾನವೇ ಸೋತಿತು!

ಆತನ ದೇಹದಾದ್ಯಂತ 23 ಸಂಕೀರ್ಣ ಶಸ್ತ್ರಚಿಕಿತ್ಸೆಗಳು ನಡೆದವು. ಅಸಾಧ್ಯವಾದ ನೋವು ಸಹಿಸಿಕೊಂಡು ಆತ ಮೂರು ವರ್ಷ ಆಸ್ಪತ್ರೆಯ ಹಾಸಿಗೆಯಲ್ಲಿ ಶವದ ಹಾಗೆ ಬಿದ್ದುಕೊಂಡಿದ್ದ!

ನಂತರ ಒಂದು ವರ್ಷ ಕ್ಲಚಸ್ ಹಿಡಿದುಕೊಂಡು ನಡೆಯಲು ಅಭ್ಯಾಸ ಮಾಡಿದ್ದ! ನಂತರ ಗೋಡೆ ಹಿಡಿದು ನಡೆಯುವ ಅಭ್ಯಾಸ. ಸ್ವಂತ ಕಾಲಿನ ಮೇಲೆ ನಿಂತು ನಡೆಯಲು ಆತನಿಗೆ ನಾಲ್ಕು ವರ್ಷಗಳೇ ಬೇಕಾದವು! ಹೀಗೆ ನಾಲ್ಕು ವರ್ಷಗಳ ಕಾಲ ಜಿದ್ದಿಗೆ ಬಿದ್ದು ಕಾಲು ಉಳಿಸಿಕೊಂಡು ಆತ ಮತ್ತೆ ಸಿನೆಮಾದ ಕಡೆಗೆ ಮುಖ ಮಾಡಿದ್ದ. ಆತನ ಸಂಕಲ್ಪ ಶಕ್ತಿಯ ಮುಂದೆ ದುರದೃಷ್ಟವು ಕೂಡ ಸೋತಿತ್ತು!

ಅಪ್ನಾ ಟೈಮ್ ಆಯೆಗಾ…

ಮುಂದೆ ಬರೋಬ್ಬರಿ ಹತ್ತು ವರ್ಷಗಳ ಕಾಲ ಆತ ಸೂಕ್ತ ಪಾತ್ರಕ್ಕಾಗಿ ಕಾದು ಕೂತ. ಸಣ್ಣ ಪುಟ್ಟ ಪಾತ್ರಗಳು, ಪೋಷಕ ಪಾತ್ರಗಳು, ಧಾರಾವಾಹಿಗಳು ಎಲ್ಲವನ್ನೂ ಮಾಡಿದ. ಜಾಹೀರಾತುಗಳನ್ನು ಕೂಡ ಮಾಡಬೇಕಾಯಿತು. ತುಂಬಾ ನಿರೀಕ್ಷೆ ಇರಿಸಿದ್ದ ಎನ್ ಕಾದಲ್ ಕಣ್ಮಣಿ ಮತ್ತು ಮೀರಾ ಎಂಬ ಎರಡು ಸಿನೆಮಾಗಳು ಸೋತು ಹೋದವು. ಖಾಲಿ ಕಿಸೆ ಮತ್ತು ಹಸಿವಿನ ತೀವ್ರತೆಗಳು ಆತನಿಂದ ಡಬ್ಬಿಂಗ್ ಕೆಲಸವನ್ನು ಮಾಡಿಸಿತು! ಆದರೂ ಬೇಸರ ಮಾಡಿಕೊಳ್ಳದೆ ತಾಳ್ಮೆಯಿಂದ ಕಾದು ಕೂತ! ಮಾಡೆಲಿಂಗ್ ಕೂಡ ಮಾಡಿದ.

1999ರ ಹೊತ್ತಿಗೆ ತಮಿಳಲ್ಲಿ ‘ಸೇತು’ ಎಂಬ ಕಡಿಮೆ ಬಜೆಟಿನ ಸಿನೆಮಾ ಆರಂಭವಾಯಿತು. ವಿಕ್ರಮ್ ಆ ಸಿನೆಮಾದಲ್ಲಿ ಭಾರೀ ಸವಾಲಿನ ಪಾತ್ರವನ್ನು ಮಾಡಬೇಕಾಗಿತ್ತು. ಶೂಟಿಂಗ್ ಎರಡು ವರ್ಷಗಳಷ್ಟು ದೀರ್ಘ ಕಾಲ ನಡೆಯಿತು. ವಿಕ್ರಮ್ ತನ್ನ ಪಾತ್ರಕ್ಕಾಗಿ ತಲೆಯನ್ನು ನುಣ್ಣನೆ ಬೋಳಿಸಿಕೊಂಡ. ಉದ್ದುದ್ದ ಉಗುರುಗಳನ್ನು ಬಿಟ್ಟ. ಕೇವಲ ಬೀಟ್ರೂಟ್ ರಸ, ಒಂದು ಚಪಾತಿ, ಮೊಟ್ಟೆಯ ಬಿಳಿ ತಿರುಳು ತಿಂದು ದೇಹದ ತೂಕವನ್ನು ಹದಿನಾರು ಕೆಜಿಯಷ್ಟು ಇಳಿಸಿಕೊಂಡ! ಎರಡು ವರ್ಷ ಬೇರೆ ಯಾವ ಸಿನೆಮಾ ಕೂಡ ಒಪ್ಪಿಕೊಳ್ಳದೆ ಆ ಪಾತ್ರದಲ್ಲಿ ಮುಳುಗಿಬಿಟ್ಟ! ಸೇತು ಸಿನೆಮಾ ಸೂಪರ್ ಹಿಟ್ ಆಯ್ತು! ಅಲ್ಲಿಂದ ಮುಂದೆ ವಿಕ್ರಮ್ ಸೂಪರ್ ಸ್ಟಾರ್ ಆದ! ಜನ ಅವನನ್ನು ಚಿಯಾನ್ (ಸೇತು ಸಿನೆಮಾದಲ್ಲಿ ವಿಕ್ರಂ ಮಾಡಿದ ಪಾತ್ರದ ಅಡ್ಡ ಹೆಸರದು) ವಿಕ್ರಮ್ ಎಂದೇ ಪ್ರೀತಿಯಿಂದ ಕರೆಯತೊಡಗಿದರು. ಮುಂದೆ ಸೇತು ಸಿನೆಮಾವು ಭಾರತದ ಹಲವು ಭಾಷೆಗೆ ರೀಮೇಕ್ ಆಯಿತು. (ಕನ್ನಡದಲ್ಲಿ ಸುದೀಪ್ ಅಭಿನಯದ ಹುಚ್ಚ ಸಿನೆಮಾ).

ವಿಕ್ರಂ ಮಾಡಿದ ಪಾತ್ರಗಳು ಒಂದರ ಹಾಗೆ ಇನ್ನೊಂದಿಲ್ಲ.

ಮುಂದೆ ಸಾಲಾಗಿ ಕಠಿಣ ಸವಾಲಿನ ಪಾತ್ರಗಳು! ಹುಚ್ಚ, ತಲೆ ಹಿಡುಕ, ರೌಡಿ, ಡಾನ್, ಬುದ್ದಿಮಾಂದ್ಯ, ಕುಡುಕ, ಪೋಲಿಸ್, ಪಿಂಪ್, ವಕೀಲ, ಸೀರಿಯಲ್ ಕಿಲ್ಲರ್, ವೃದ್ಧ, ಪತ್ತೇದಾರ, ಆದಿವಾಸಿ, ಕಾಲೇಜ್ ಲವರ್, ಮಾಡೆಲ್ ಮೊದಲಾದ ಸಂಕೀರ್ಣವಾದ ಪಾತ್ರಗಳನ್ನು ಗೆಲ್ಲಿಸಿದ ಚಿಯಾನ್!

ಕಳೆದ 30 ವರ್ಷಗಳಿಂದ ತಮಿಳು, ತೆಲುಗು, ಮಲಯಾಳಂ ಭಾಷೆಗಳ ನೂರಾರು ಸಿನೆಮಾಗಳಲ್ಲಿ ಅಭಿನಯಿಸಿರುವ ಆತನಿಗೆ ಈಗ 58 ವರ್ಷ ತುಂಬಿದೆ! ಆತನ ಯಶಸ್ಸಿನ ಗ್ರಾಫ್ ಇಂದಿಗೂ ಏರುಗತಿಯಲ್ಲಿ ಇದೆ. ಆತನಷ್ಟು ವೈವಿಧ್ಯಮಯ ಪಾತ್ರಗಳನ್ನು ಭಾರತದ ಬೇರೆ ಯಾವ ನಟನೂ ಮಾಡಿಲ್ಲ ಎನ್ನುವುದು ವಿಕ್ರಮ್ ಹೆಚ್ಚುಗಾರಿಕೆ!

ಆತನ ಸಿನೆಮಾಗಳನ್ನು ಬೇರೆ ಭಾಷೆಗೆ ರಿಮೇಕ್ ಮಾಡುವ ಸಾಹಸವನ್ನು ಯಾರೂ ಮಾಡುವುದಿಲ್ಲ. ಮಾಡಿದರೂ ಸಕ್ಸೆಸ್ ಆದ ಉದಾಹರಣೆ ಕಡಿಮೆ. ಯಾಕೆಂದರೆ ವಿಕ್ರಮ್ ಪ್ರತೀ ಒಂದು ಪಾತ್ರಕ್ಕೂ ಬೇರೆ ಬೇರೆ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಾನೆ. ಅವನ ಬಾಡಿ ಲಾಂಗ್ವೇಜ್, ಡೈಲಾಗ್ ಡೆಲಿವರಿ, ನಡಿಗೆ, ನಗು, ಹಾವಭಾವ ಬೇರೆ ಬೇರೆ ಪಾತ್ರಕ್ಕೆ ಬೇರೆ ಬೇರೆ ರೀತಿ ಆಗಿರುತ್ತದೆ. ವಿಕ್ರಮ್ ಅಭಿನಯವನ್ನು ಯಾರಿಂದಲೂ ಕಾಪಿ ಮಾಡಲು ಸಾಧ್ಯವೇ ಇಲ್ಲ!

ಆತನ ಪಿತಾಮಗನ್, ಐ, ದಿಲ್, ಜೆಮಿನಿ, ಅರುಲ್, ಸಾಮಿ, ಆನಿಯನ್, ರಾವಣ್, ಕಿಂಗ್, ಧೂಳ್, ಕಾಸಿ, ಕಾಂತಾ, ಪೊನ್ನಿಯನ್ ಸೆಲ್ವಂ, ಕೋಬ್ರಾ, ತಿರುಮಗಲ್……..ಮೊದಲಾದ ಸಿನೆಮಾಗಳನ್ನು ನೋಡಿದರೆ ವಿಕ್ರಮ್ ಎಷ್ಟು ಅದ್ಭುತ ನಟ ಎಂಬ ಅರಿವಾಗುತ್ತದೆ. ಆತನಿಗೆ ಏಳು ಬಾರಿ ಫಿಲ್ಮ್ ಫೇರ್ ಪ್ರಶಸ್ತಿಗಳು, ಮೂರು ಬಾರಿ ರಾಜ್ಯಪ್ರಶಸ್ತಿ, ಪಿತಾಮಗನ್ ಸಿನೆಮಾಕ್ಕೆ ರಾಷ್ಟ್ರ ಪ್ರಶಸ್ತಿ, ತಮಿಳುನಾಡಿನಲ್ಲಿ ಮಹಾನ್ ಕಲಾವಿದರಿಗೆ ಮಾತ್ರ ನೀಡುವ ಕಲೈಮಾಮಣಿ ಪ್ರಶಸ್ತಿ, ಎಲ್ಲವೂ ಈಗಾಗಲೇ ದೊರೆತಿವೆ!

ತಾನೇ ಸ್ಥಾಪನೆ ಮಾಡಿರುವ ವಿಕ್ರಮ್ ಫೌಂಡೇಶನಿನ ಮೂಲಕ ಆತ ನಡೆಸುವ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗಳು, ಉಚಿತ ಹೃದಯದ ಸರ್ಜರಿಗಳು, ಹಲವು ವಿಶೇಷ ಮಕ್ಕಳ ಶಾಲೆ, ನೇತ್ರದಾನ ಸಂಕಲ್ಪ ಶಿಬಿರಗಳು…….ಇವುಗಳ ಬಗ್ಗೆ ಬರೆಯುತ್ತ ಹೋದಂತೆ ವಿಕ್ರಮ್ ನನಗೆ ವಿಶ್ವಮಾನವರಾಗಿ ಕಾಣುತ್ತಾರೆ.

ವಿಕ್ರಮ್ ಬಹುಮುಖಿ ಪ್ರತಿಭೆಯ ‘ತಂಗಲಾನ್ ‘ ಬಂದಿದೆ.

ವಿಕ್ರಮ್ ಅಭಿನಯಿಸಿದ ತಂಗಲಾನ್ ಸಿನೆಮಾ ಈ ವಾರ ಜಗತ್ತಿನಾದ್ಯಂತ ಬಿಡುಗಡೆ ಆಗಿದ್ದು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆಯುತ್ತಿದೆ. ಆದರೆ ವಿಕ್ರಮ್ ಅಭಿನಯವು ಮತ್ತೆ ಅದ್ಭುತವಾಗಿ ಮೂಡಿಬಂದಿದೆ. ಆ ಸಿನೆಮಾವನ್ನು ಒಮ್ಮೆ ನೋಡಿ ವಿಕ್ರಮ್ ಪ್ರತಿಭೆಗೆ ಜೈ ಎಂದು ಹೇಳೋಣ ಅಲ್ಲವೇ?

ಆತನ ಬದುಕಿನ ಕಥೆಯು ಆತನ ಸಿನೆಮಾಗಳ ಕಥೆಗಿಂತ ಹೆಚ್ಚು ರೋಚಕವಾಗಿದೆ ಎಂದು ನನಗೆ ಅನಿಸುತ್ತದೆ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಹೇಗಿದ್ದವನು ಹೇಗಾಗಿ ಹೋದ ಕ್ರಿಕೆಟರ್ ವಿನೋದ್ ಕಾಂಬ್ಳಿ?

Continue Reading
Advertisement
Hair Combing
ಆರೋಗ್ಯ3 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ3 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ4 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು13 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು14 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್15 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ15 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು15 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ15 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌