ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ - Vistara News

ಅಂಕಣ

ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

ಧವಳ ಧಾರಿಣಿ ಅಂಕಣ: ಮಂಥರೆಯ ಪಾತ್ರ ರಾಮಾಯಣದಲ್ಲಿ ಚಿಕ್ಕ ಮತ್ತು ಮಹತ್ವದ ಪಾತ್ರ. ಇನ್ನೇನು ತನ್ನ ಮನಸ್ಸಿನಂತೆ ನಡೆಯುತ್ತದೆ ಎನ್ನುವ ಕನಸಿನ ವಿಹಾರದಲ್ಲಿರುವ ದಶರಥನ ಸೌಧವನ್ನು ನುಚ್ಚುನೂರು ಮಾಡಿದವಳು ಅವಳು. ಆಕಾರದಲ್ಲಿ ಈಕೆ ಕುಬ್ಜೆ, ಕುರೂಪಿ ಇರಬಹುದು; ಸಿಕ್ಕ ಸಣ್ಣ ಅವಕಾಶದಲ್ಲಿ ರಾಮಾಯಣದಲ್ಲಿ ಬರುವ ಎಲ್ಲ ಪಾತ್ರಗಳಿಗೂ ಮಹತ್ತರ ತಿರುವನ್ನು ಕೊಟ್ಟವಳು ಈಕೆ.

VISTARANEWS.COM


on

manthare ramayana dhavala dharini
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೋಹಪಾಶದ ಅಧಿಕಾರ ಯಾವತ್ತಿಗೂ ಸ್ಥಿರವಲ್ಲ

dhavala dharini by Narayana yaji

ಧವಳ ಧಾರಿಣಿ ಅಂಕಣ: ನ ಹಿ ರಾಜ್ಞಃ ಸುತಾಃ ಸರ್ವೇ ರಾಜ್ಯೇ ತಿಷ್ಠನ್ತಿ ಭಾಮಿನಿ
ಸ್ಥಾಪ್ಯಮಾನೇತು ಸರ್ವೇಷು ಸುಮಹಾನನಯೋ ಭವೇತ್ ৷৷ರಾ. ಅ.8.23৷৷

ಪ್ರಿಯ ಹೆಣ್ಣೇ, ರಾಜನ ಮಕ್ಕಳೆಲ್ಲರಿಗೂ ರಾಜ್ಯದಲ್ಲಿ ಬಾಧ್ಯತೆಯಿರುವುದಿಲ್ಲ. ಹಾಗೇ ಹುಟ್ಟಿದ ಮಕ್ಕಳೆಲ್ಲರಿಗೂ ಪಟ್ಟವನ್ನು ಗಟ್ಟಿದಲ್ಲಿ ಅದು ಸಂಪ್ರದಾಯಕ್ಕೂ ರಾಜನೀತಿಗೂ ವಿರುದ್ಧವಾಗುತ್ತದೆ. ಈರ್ಷ್ಯಾಸೂಯೆಗಳುಂಟಾಗಿ ದೊಡ್ಡ ಅನರ್ಥಕ್ಕೆ ಕಾರಣವಾಗುತ್ತದೆ.

ಮಂಥರೆಯ ಈ ಮಾತು ರಾಜತ್ವವೆನ್ನುವುದು ಪಿತ್ರಾರ್ಜಿತವಾದ ಸಂಪತ್ತಲ್ಲ. ಅದನ್ನು ಮಕ್ಕಳಿಗೆಲ್ಲ ಸಮನಾಗಿ ಹಂಚುವ ವ್ಯವಹಾರವೂ ಅಲ್ಲ, ಅದು ಅರ್ಹರಿಗೆ ಮಾತ್ರ ಸಲ್ಲಬೇಕಾಗುತ್ತದೆ ಎನ್ನುವ ವೇದವಾಣಿಯನ್ನು ದೃಢೀಕರಿಸುತ್ತದೆ. ಮಂಥರೆಯ ಪಾತ್ರ ರಾಮಾಯಣದಲ್ಲಿ ಚಿಕ್ಕ ಮತ್ತು ಮಹತ್ವದ ಪಾತ್ರ. ಇನ್ನೇನು ತನ್ನ ಮನಸ್ಸಿನಂತೆ ನಡೆಯುತ್ತದೆ ಎನ್ನುವ ಕನಸಿನ ವಿಹಾರದಲ್ಲಿರುವ ದಶರಥನ ಸೌಧವನ್ನು ನುಚ್ಚುನೂರು ಮಾಡಿದವಳು ಅವಳು. ಆಕಾರದಲ್ಲಿ ಈಕೆ ಕುಬ್ಜೆ, ಕುರೂಪಿ ಇರಬಹುದು; ಸಿಕ್ಕ ಸಣ್ಣ ಅವಕಾಶದಲ್ಲಿ ರಾಮಾಯಣದಲ್ಲಿ ಬರುವ ಎಲ್ಲ ಪಾತ್ರಗಳಿಗೂ ಮಹತ್ತರ ತಿರುವನ್ನು ಕೊಟ್ಟವಳು ಈಕೆ.

ವಾಲ್ಮೀಕಿಯ ಕಾವ್ಯದಲ್ಲಿ ಈಕೆಯ ಪೂರ್ವಾಪರಗಳ ಕುರಿತು ವಿವರಗಳೇನೂ ಸಿಗುವುದಿಲ್ಲ. ಈಕೆಯ ಪ್ರವೇಶದ ಹೊತ್ತಿಗೆ ಈಕೆಯ ಹೆಸರನ್ನು ವಾಲ್ಮೀಕಿ ಹೇಳುವುದಿಲ್ಲ. “ಜ್ಞಾತಿದಾಸಿ ಯತೋ ಜಾತಾ ಕೈಕೇಯ್ಯಾಸ್ತು ಸಹೋಷಿತಾ” (ಎಲ್ಲಿಯೋ ಹುಟ್ಟಿ ಎಲ್ಲಿಯೋ ಬೆಳೆದು ಕೈಕೇಯಿಯ ಜನನ ಕಾಲದಿಂದಲೇ ಅವಳೊಡನೆ ಇರುವ ಕುಟುಂಬದ ಆಳು) ಎಂದು ಅವಳ ಕುರಿತು ಹೇಳುತ್ತಾನೆ. ಯಾವ ಪಾತ್ರವನ್ನೂ ವಾಲ್ಮೀಕಿ ಕೀಳಾಗಿ ನೋಡುವುದಿಲ್ಲ. ಆದರೆ ಮಂಥರೆಯ ಪಾತ್ರವನ್ನು ಆತ ಅಷ್ಟು ಇಷ್ಟಪಟ್ಟಿಲ್ಲ, ಅದಕ್ಕೆ ಕಾವ್ಯದ ಕ್ರಮದಂತೆ ಪಾತ್ರದ ಪ್ರವೇಶದಲ್ಲಿ ಆತ ಜ್ಞಾತಿದಾಸಿ ಯತೋ ಜಾತಾ, ಎಂದು ಹೇಳಿರುವುದು. ಅಯೋಧ್ಯೆಯ ಜನಪದವನ್ನು ವಿವರಿಸುವಾಗ ಅಲ್ಲಿನ ಜನರ ಸದ್ಗುಣಗಳ ಕುರಿತು ವಿವರವಾಗಿ ಹೇಳಿದ್ದಾನೆ. ಅಲ್ಲಿನ ನಾರಿಯರನ್ನು ವರನಾರಿಯರು ಎಂದು ವರ್ಣಿಸಿದ್ದಾನೆ. ಅಂತಹ ಕೋಸಲಸೀಮೆಯಲ್ಲಿ ಮಂಥರೆಯಂತವಳು ಇರಲು ಸಾಧ್ಯವಿಲ್ಲವೆನ್ನುವುದನ್ನು ತಿಳಿಸುವುದು ಕವಿಯ ಉದ್ದೇಶ. ರಾಮನ ಪಟ್ಟಾಭಿಷೇಕವನ್ನು ಎಲ್ಲರೂ ಸಂಭ್ರಮಿಸುವಾಗ, ಲೋಕಪ್ರಿಯವಾದ ಪಟ್ಟಾಭಿಷೇಕವನ್ನು ಹಾಳು ಮಾಡುವವರು ಪುಣ್ಯಸ್ಥಳವಾದ ಅಯೋಧ್ಯೆಯಲ್ಲಿ ಹುಟ್ಟಿರಲು ಸಾಧ್ಯವೇ ಇಲ್ಲವೆನ್ನುವ ಅರ್ಥವನ್ನೂ ಮಾಡಬಹುದು.

ಎರಡನೆಯ ಶ್ಲೋಕದಲ್ಲಿ ಆಕೆಯ ಹೆಸರು ಮಂಥರೆ ಎಂದು ಹೇಳಿರುವುದು ಕಾವ್ಯದ ಮುಂದುವರಿಕೆಗೆ ಸಹಾಯವಾಗಲಿ ಎಂದು. ಈ ನಡೆ ಬಹುಶಃ ನಂತರ ರಾಮಾಯಣವನ್ನು ಬರೆದ ಕವಿಗಳಿಗೆ ಅಷ್ಟು ಇಷ್ಟವಾಗಿಲ್ಲ. ಪದ್ಮಪುರಾಣ ಈಕೆಯನ್ನು “ಮಂಥರಾನಾಮ ಕಾರ್ಯಾರ್ಥಮಪ್ಸರಾ ಪ್ರೇಷಿತಾ ಸುರೈಃ – ದೇವತೆಗಳು ರಾವಣವಧೆಯ ಕಾರ್ಯವನ್ನು ಸುಗಮಗೊಳಿಸುವ ಕಾರಣಕ್ಕೆ ಅಪ್ಸರೆಯೊಬ್ಬಳನ್ನು ಭೂಲೋಕಕ್ಕೆ ಕಳುಹಿಸಿದರು ಎಂದು ವಿವರಿಸಿದೆ. ಆನಂದ ರಾಮಾಯಣವೂ ಆಕೆಯನ್ನು ಶಾಪಗ್ರಸ್ತ ಅಪ್ಸರೆ ಎನ್ನುತ್ತದೆ. ಕೆಲವು ಕಥೆಗಳಲ್ಲಿ ಆಕೆ ಅಶ್ವಪತಿಗೆ ಅರಣ್ಯದಲ್ಲಿ ಸಿಕ್ಕ ಅನಾಥ ಮಗು ಎಂದು ತಿಳಿಸುತ್ತದೆ. ಆಕೆಯ ಶರೀರವನ್ನು ಅದಾಗಲೇ ಇರುವೆಗಳು ಮುತ್ತಿದ್ದವು, ಆ ಕಾರಣದಿಂದ ಆಕೆ ಕುಬ್ಜೆಯಾಗಿ ಉಳಿದಳು. ಕುವೆಂಪು “ರಾಮಾಯಣ ದರ್ಶನಂ”ದಲ್ಲಿ ಮಂಥರೆಯ ಕುರಿತು ಅಶ್ವಪತಿ ಮಹಾರಾಜ “ತಂದನೂರಿಗವಳಂ ದಾರಿಯಲಿ ನಡೆವ ಮಾರಿಯಂ ಮನೆಗೆ ತರುವಂತೆ” ಎಂದು ವರ್ಣಿಸುತ್ತಾರೆ.

ತಾಯಿಯಿಲ್ಲದ ಕೈಕೇಯಿಯನ್ನು ಆಕೆ ತನ್ನ ಮಗಳಂತೆ ನೋಡಿಕೊಳ್ಳುತ್ತಿದ್ದಳು. ಕೈಕೆಯೂ ಬಾಲ್ಯದಲ್ಲಿ ತಾಯಿಯಿಲ್ಲದೇ ಬೆಳೆದವಳು. ಆಕೆಗೆ ತಾಯಿಯ ಪ್ರೇಮವನ್ನು ಕೊಟ್ಟವಳು ಮಂಥರೆ. ಲೋಕವೆಲ್ಲವೂ ಆಕೆಯನ್ನು ಅನಿಷ್ಠೆ, ಗೂಬೆ, ಕುಬ್ಜೆ ಎಂದು ತಿರಸ್ಕರಿಸುತ್ತಿದ್ದರೆ ಆಕೆಯನ್ನು ಅಷ್ಟೇ ಪ್ರೀತಿಯಿಂದ ನೋಡಿಕೊಂಡಳು ಕೈಕೆ. ಈ ಆಶ್ರಯವೆನ್ನುವುದು ಅವಳ ಬದುಕಿಗೆ “ಮಳೆಹೊಯ್ದ ತೆರನಾಯ್ತು ಮಂಥರೆಯ ಮರುಧರೆಗೆ, ಚೈತ್ರನಾಗಮವಾಯ್ತು ಮಂಥರೆಯ ಶಿಶಿರಕ್ಕೆ” (ರಾ.ದ. ಕುವೆಂಪು) ದಶರಥನೊಡನೆ ಕೈಕೇಯಿಯ ವಿವಾಹವಾದ ಮೇಲೆ ಅವಳ ಸಂಗಡವೇ ಅಯೋಧ್ಯೆಗೆ ಬಂದವಳು. ಕೈಕೇಯಿಯ ಅಂತರಂಗದ ಗುಟ್ಟುಗಳು ಈಕೆಗೆ ಗೊತ್ತಿತ್ತು. ಬಾಲ್ಯದಿಂದಲೂ ಮಂಥರೆ ಆಕೆಯ ಲಾಲನೆ ಪಾಲನೆ ಮಾಡಿರುವುದರಿಂದ ತಾಯಿಯಿಲ್ಲದವಳಿಗೆ ಈಕೆಯ ಮೇಲೆ ವಿಶೇಷ ಮಮತೆ ಮೂಡಿತ್ತು ಎನಿಸುತ್ತದೆ. ವೃದ್ಧಪತಿಯನ್ನು ಸದಾ ತನ್ನ ವಶದಲ್ಲಿ ಇರಿಸಿಕೊಳ್ಳಲು ಕೈಕೇಯಿಗೆ ಸಲಹೆ ನೀಡಿದವಳೇ ಮಂಥರೆ. ಕೌಸಲ್ಯೆಯನ್ನು ಕಂಡರೆ ಆಕೆಗೆ ಆಗುತ್ತಲೇ ಇರಲಿಲ್ಲ.

ವಾಲ್ಮೀಕಿ ರಾಮಾಯಣದ ನಂತರ ನನ್ನನ್ನು ಬಹುವಾಗಿ ಕಾಡಿದುದು ಕುವೆಂಪು ಅವರ “ರಾಮಾಯಣ ದರ್ಶನಂ”. ಇಲ್ಲಿ ಪಾತ್ರಗಳು ರಸದಲ್ಲಿ ಮುಳುಗೇಳುತ್ತವೆ. “ಮಮತೆಯ ಸುಳಿ ಮಂಥರೆ” ಎನ್ನುತ್ತಾ ಕೈಕೆಯ ಕುರಿತು, ವಿಶೇಷವಾಗಿ ಭರತನ ಮೇಲಿರುವ ಆಕೆಯ ಪ್ರೇಮವನ್ನು ಓದಿದ ಮೇಲೆ ಆಕೆಯನ್ನು ಬೈಯ್ಯುವ ಮನಸ್ಸು ಯಾರಿಗೂ ಬರಲಾರದು. ರಾಮಾಯಣದ ನಡೆಯೆಲ್ಲವೂ ವಿಧಿಯ ಹಸ್ತದ ಸೂತ್ರಗಳು, ಮಂಥರೆ ಈ ರಾಮಾಯಣವೆನ್ನುವ ಮೊಸರನ್ನು ಕಡೆದು ನವನೀತವನ್ನು ಕೊಡುವ ಕಡೆಗೋಲು ಎನ್ನುವ ಭಾವವನ್ನು ಕುವೆಂಪುವಿನಂತೆ ವರ್ಣಿಸಲು ಮತ್ಯಾರಿಗೂ ಸಾಧ್ಯವಾಗಲಿಕ್ಕಿಲ್ಲ. ಬೆಣ್ಣೆ ಕಡೆದುಕೊಟ್ಟ ಕಡೆಗೋಲನ್ನು ತೊಳೆದು ಒಣಗಿಸುವ ಹಾಗೇ ಮಂಥರೆಯ ಬದುಕಾಯಿತು. ಹೀಗೆ ನಿಟ್ಟಿಸಿರು ಬಿಡುವಾಗ ಕುವೆಂಪು ರಾಮಯಾಣದ ವಿಶೇಷವನ್ನು ಬಣ್ಣಿಸುವುದು ಹೀಗೆ.

ನೆಯ್ದಾಳುತಿದೆ ಜಗವನೊಂದತಿ ವಿರಾಣ್ ಮನಂ,
ಸೂಕ್ಷ್ಮಾತ್ಮಿಸೂಕ್ಷ್ಮತಂತ್ರದಿ ಬಿಗಿದು ಕಟ್ಟಿಯುಂ
ಜೀವಿಗಳಿಚ್ಛೆಯಾ ಸ್ವಾತಂತ್ರ್ಯಭಾವಮಂ
ನೀಡಿ. ಮಂಥರೆ ಸೀತೆ ರಾಮ ರಾವಣರೆಲ್ಲರುಂ
ಸೂತ್ರಗೊಂಬೆಗಳಲ್ತೆ ಆ ವಿಧಿಯ ಹಸ್ತದಲಿ?
ಮಥಿಸಿದುದು ದಶಸಿರನ ವಿಧಿ ಮಂಥರೆಯ ಮನದಿ

king dasharatha

ರಾಮಾಯಣದ ಅಂತಿಮ ಗುರಿಯಾಗಿರುವ ರಾವಣ ವಧೆಯೆನ್ನುವ ಹಾರುಗೋಲಿಗೆ ಚಿಮ್ಮುಹಲಗೆಯಾಗುವವಳು ಮಂಥರೆ ಎನ್ನುವದನ್ನು ಮಾರ್ಮಿಕವಾಗಿ ವರ್ಣಿಸಲಾಗಿದೆ. ದಶರಥನ ಕನಸಿನ ವಿಹಾರವನ್ನು ಭಂಗಗೊಳಿಸಿದವಳು ಇವಳು.

ಅಶ್ವಪತಿ ಮಹಾರಾಜ ಮತ್ತು ಜನಕ ಮಹಾರಾಜನಿಗೆ ಹೇಳಿ ಕಳುಹಿಸುವಷ್ಟು ಸಮಯವಿಲ್ಲದಿದ್ದರೂ ಬೇರೆ ಎಲ್ಲರಿಗೂ ಹೇಳಿಕೆ ಕಳುಹಿಸಿ ಅವರು ಬಂದು ಬಿಡಾರವನ್ನು ಹೂಡಿಯಾಗಿತ್ತು! ಸುಮಾರು ಒಂbತ್ತರಿಂದ ಹನ್ನೆರಡು ವರ್ಷಗಳ ಕಾಲ ಅಯೋಧ್ಯೆಯ ರಕ್ಷಣೆಯನ್ನು ಹೊತ್ತ ರಾಮ ಸಹಜವಾಗಿಯೇ ಜನಮಾನಸದಲ್ಲಿ ತನ್ನ ಪ್ರಭಾವವನ್ನು ಬೀರಿದ್ದ. ಅಯೋಧ್ಯೆಯಲ್ಲಿ ಮಾರನೆಯ ದಿನವೇ ಶ್ರೀರಾಮನಿಗೆ ಪಟ್ಟಾಭಿಷೇಕವೆನ್ನುವ ವಿಷಯವನ್ನು ಕೇಳಿದೊಡನೆ ಪ್ರಜೆಗಳ ಸಂಭ್ರಮ ಮೇರೆ ಮೀರಿತ್ತು. ಪರ್ವಕಾಲದಲ್ಲಿ ಉಕ್ಕಿಬರುವ ಸಮುದ್ರರಾಜನ ನಿನಾದದಂತೆ ಮೂಲೆ ಮೂಲೆಗಳಿಂದ ತಂಡ ತಂಡವಾಗಿ ಪ್ರಜಾಸಮೂಹ ಅಯೋಧ್ಯೆಯತ್ತ ಆಗಮಿಸುತ್ತಿದ್ದವರ ಸಂಭ್ರಮ ನಗರಿಯ ತುಂಬೆಲ್ಲ ಕೇಳಿಬರುತ್ತಿತ್ತು. ಯಕ್ಷಗಾನದ ಪಾರ್ತಿಸುಬ್ಬ ರಾಮಾಭಿಷೇಕದ ಕಾಲದ ಅಯೋಧ್ಯೆಯ ಸಂಭ್ರಮವನ್ನು ವಾರ್ದಿಕ ಷಟ್ಪದಿಯಲ್ಲಿ ವರ್ಣಿಸುವುದು ಹೀಗೆ:

ಕುಶನೆ ಕೇಳಿಂತಯೋಧ್ಯಾಪುರದ ಸಂಭ್ರಮವ
ವಶವಲ್ಲ ಹೇಳಿ ತುದಿಗಾಣಿಸುವಡರಿದೆಮೆಗೆ
ಪಸರಿಸಿತು ಮಂದಿ ಕುದುರೆಗಳ ಸಂದಣಿಯಿಂದ ನಾನಾರವಂಗಳಿಂದ I
ವಸುಧೆ ಹಿಗ್ಗಿದಳು ಕೆಂಧೂಳೆದ್ದು ನಭಗಳಂ
ಮುಸುಕಿ ದಿಗ್ಗಜ ಬೆದರೆ ಕೂರ್ಮನೆದೆಗೆಟ್ಟ ಫಣಿ
ಕುಸಿದ ಸುರರಾಕಾಶದಲ್ಲಿ ಜಯಜಯವೆಂದು ದೇವದುಂದುಭಿ ಮೊಳಗಿತು II

ಪಾರ್ತಿಸುಬ್ಬನ ರಾಮಾಯಣವಾಗಲಿ ಇನ್ನಿತರ ಕವಿಗಳ ಯಕ್ಷಗಾನ ಪ್ರಸಂಗಗಳು ಯಕ್ಷಗಾನ ವಲಯದಿಂದ ಆಚೆಗೆ ವಿದ್ವಾಂಸರ ದೃಷ್ಟಿಗೆ ಬೀಳದೇ ಇರುವದು ಕನ್ನಡ ಸಾಹಿತ್ಯಲೋಕಕ್ಕೆ ದೊಡ್ಡ ನಷ್ಟವಾಗಿದೆ.

ಹೀಗೆ ಅಯೋಧ್ಯೆಗೆ ಅಯೋಧ್ಯೆಯೇ ಸಂಭ್ರಮಿಸುತ್ತಿರುವಾಗ ಆಕಸ್ಮಿಕವಾಗಿ ಉಪ್ಪರಿಗೆಯನ್ನು ಹತ್ತಿದ ದಾಸಿಯೋರ್ವಳು ಇದೇನು ಸಂಭ್ರಮ ಎಂದು ಚಕಿತಳಾಗಿ ಇನ್ನೊಬ್ಬ ದಾಸಿಯ ಹತ್ತಿರ ಕೇಳಿದಳು ಎಂದು ವಾಲ್ಮೀಕಿ ಇವಳ ಪಾತ್ರದ ಪ್ರವೇಶ ಮಾಡಿಸುತ್ತಾನೆ. ರಾಮಪಟ್ಟಾಭಿಷೇಕದ ವಿಷಯ ಯಾವಾಗ ಕಿವಿಗೆ ಬಿತ್ತೋ ತಕ್ಷಣ ಮಂಥರೆಗೆ ಆಗಬಾರದ್ದು ಆಗಿಹೋಯಿತೆನ್ನುವ ಸಂಕಟವುಂಟಾಯಿತು. ಉರುಳುತ್ತಲೇ ಕೈಲಾಸಶಿಖರಾಕಾರದ ಪ್ರಾಸಾದದಿಂದ ಕೆಳಗಿಳಿದು ಬಂದು ಕೈಕೇಯಿಯ ಅರಮನೆಗೆ ಹೋದವಳೇ, ಅವಳನ್ನು ಕರ್ಕಶ ಧ್ವನಿಯಿಂದ ಕೂಗಿ “ಮೂರ್ಖಳೆ, ಎದ್ದೇಳು, ಇನ್ನೂ ಮಲಗಿರುವೆ ಯಾಕೆ” ಎನ್ನುತ್ತಾ ಆಕೆಯನ್ನು ಬೈಯುತ್ತಾ ಎಬ್ಬಿಸುತ್ತಾಳೆ. ಆಗ ತಾನೇ ರಾತ್ರಿ ಮುಸುಕಿದ ಸಮಯ, ಕೈಕೆ ನಿದ್ರೆ ಮಾಡುತ್ತಿದ್ದಳು. ಆಕೆಯನ್ನು ಎಬ್ಬಿಸುವಾಗ “ಭಯವು ನಿನ್ನನ್ನು ಸುತ್ತುವರಿದು ನಿಂತಿದೆ” ಎನ್ನುವ ಕಾವ್ಯಮಯ ಭಾಷೆ ಈ ಭಾಗದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿದೆ. ಒಂದರ್ಥದಲ್ಲಿ ತನ್ನ ಸೌಂದರ್ಯದ ಕುರಿತು ಹೆಮ್ಮೆ ಪಡುತ್ತಾ ತಾನು ರಾಜನ ಮುದ್ದಿನ ಮಡದಿ ಎನ್ನುವ ಆತ್ಮವಿಶ್ವಾಸದಲ್ಲಿ ಕೈಕೆ ಬೇರೇನನ್ನೂ ಯೋಚಿಸಿಲ್ಲ ಎನ್ನುವದು ಸ್ಪಷ್ಟ.

ಅಶ್ವಪತಿ ಮಹಾರಾಜ ವೃದ್ಧನಾದ ದಶರಥನಿಗೆ ಕೈಕೆಯನ್ನು ಕೊಡುವಾಗ ಅವಳ ಮನೋಭಾವನೆಯನ್ನು ಕೇಳಲೇ ಇಲ್ಲ. ಹಾಗಂತ ಇವಳು ಆ ಕುರಿತು ಬೇಸರವನ್ನೇನೂ ಮಾಡಲೂ ಇಲ್ಲ. ಚಕ್ರವರ್ತಿಯ ಕೈಹಿಡಿದ ಆಕೆಗೆ ಏನೂ ತಿಳಿಯದ ಮುಗ್ಧಳೇನೂ ಆಗಿರಲಿಲ್ಲವೆನ್ನುವದಕ್ಕೆ ಅವಳು ಧಶರಥನ ಸಂಗಡ ಶಂಬರನೊಡನೆ ನಡೆದ ಯುದ್ಧದಲ್ಲಿ ಭಾಗವಹಿಸಿದ ಘಟನೆಯನ್ನು ನೆನಪಿಸಬಹುದು. ಅವಳನ್ನು ಭರತ “ಆತ್ಮ ಕಾಮಾ ಸದಾ ಚಂಡಿ” ಎನ್ನುವ ಮೂಲಕವಾಗಿ ತನ್ನ ಸೌಂದರ್ಯದ ಕುರಿತು ಹೆಮ್ಮೆ ಮತ್ತು ಹಟಸ್ವಭಾವದವಳು ಎನ್ನುವುದಾಗಿ ವರ್ಣಿಸುತ್ತಾನೆ. ಅಶ್ವಪತಿ ಮತ್ತು ದಶರಥನ ನಡುವೆ ರಾಜ್ಯದ ಉತ್ತರಾಧಿಕಾರಿಯಾಗಿ ಕೈಕೇಯಿಯ ಸಂತಾನಕ್ಕೆ ನೀಡುವ ವಿಷಯ ದಶರಥ, ಸುಮಂತ್ರ ಮತ್ತು ಅಶ್ವಪತಿಗೆ ಬಿಟ್ಟರೆ ಮತ್ತೆ ಯಾರಿಗೂ ತಿಳಿದಿಲ್ಲ. ಅರಸನಿಗೆ ತಾನು ಬೇಕಾದವಳು ಎನ್ನುವ ಜಂಬ ಸಹಜವಾಗಿ ಕೈಕೇಯಿಯಲ್ಲಿದ್ದ ಕಾರಣ ಆಕೆ ಇನ್ನಿತರ ರಾಣಿಯರ ಮತ್ತು ಅರಮನೆಯಲ್ಲಿ ಅಧಿಕಾರವನ್ನು ಚಲಾಯಿಸುತ್ತಿದ್ದಳು. ಆಕೆಯ ಗಿಣಿಗಳು ಕೌಸಲ್ಯೆಯ ದಾಸಿಯರೇನಾದರು ಬಂದರೆ ಅವರನ್ನು ಕಚ್ಚು ಎಂದು ಹೇಳುತ್ತಿದ್ದವಂತೆ. ಬಹುಶಃ ಇದು ಕೈಕೇಯಿ ಹೇಳಿಕೊಟ್ಟ ಪಾಠವಾಗಿರಲಿಕ್ಕಿಲ್ಲ. ಮಂಥರೆ ಕಲಿಸಿದ್ದಾಗಿರಬಹುದು. ಅಶ್ವಮೇಧ, ಪುತ್ರಕಾಮೇಷ್ಠಿ ಯಾಗಗಳಲ್ಲಿ ಪ್ರಧಾನಳಾಗಿ ಕೌಸಲ್ಯೆ ಕುಳಿತಾಗಲೂ ಕೈಕೆ ಅದಕ್ಕೆ ಪ್ರತಿರೋಧವನ್ನು ಹೇಳಲಿಲ್ಲವೆನ್ನುವುದು ಸ್ವಭಾವತಃ ಆಕೆಯಲ್ಲಿ ಸಂಶಯ ಸ್ವಭಾವವಿರಲಿಲ್ಲ ಎನ್ನುವುದನ್ನು ತಿಳಿಸುತ್ತದೆ.

king dasharatha

ಭರತನಿಗಿಂತಲೂ ರಾಮನನ್ನು ಹೆಚ್ಚಿಗೆ ಹಚ್ಚಿಕೊಂಡ ಕೈಕೇಯಿಗೆ ಮಂಥರೆ “ಅನಿಷ್ಟಳೇ, ರಾಜ ನಿನ್ನನ್ನು ನಿಜವಾಗಿಯೂ ಇಷ್ಟಪಡುತ್ತಿಲ್ಲ” ಮುಂತಾದ ಸಾವಿರ ಬಗೆಯಲ್ಲಿ ಚಾಡಿ ಹೇಳಿದರೂ ಆಕೆ ರಾಮನ ಪಟ್ಟಾಭಿಷೇಕದ ವಿಷಯವನ್ನು ಕೇಳಿ ಸಂತೋಷವನ್ನೇ ವ್ಯಕ್ತಪಡಿಸುತ್ತಾಳೆ. ಭರತ ಇಲ್ಲದಿದ್ದಾಗ ರಾಮನಿಗೆ ಪಟ್ಟಕಟ್ಟುವುದು ಒಂದು ಸಂಚು, ಮುಂದೆ ರಾಮ ಭರತನನ್ನು ಕೊಲ್ಲಿಸಬಹುದು ಎಂದಾಗಲೂ ಆಕೆಯ ಮನಸ್ಸನ್ನು ತಿರುಗಿಸಲಾಗಿಲ್ಲ. ರಾಜ್ಯ ಭರತನ ಸಂತತಿಗೂ ಸಿಗದ ಕಾರಣವನ್ನು ಇಲ್ಲಿ ಪ್ರಾರಂಭದಲ್ಲಿಯೇ ನೀಡಲಾಗಿದೆ. ಅದನ್ನು ಎತ್ತಿ ಹಿಡಿಯುತ್ತಾ ದಶರಥ ಭರತನಿಲ್ಲದ ವೇಳೆಯಲ್ಲಿ ರಾಮನಿಗೆ ಪಟ್ಟಾಭಿಷೇಕಕ್ಕೆ ಏರ್ಪಾಡು ಮಾಡಿರುವುದು ಒಂದು ಸಂಚು ಎನ್ನುವುದನ್ನು ಸಂದರ್ಭಕ್ಕನುಗುಣವಾಗಿ ಕಥೆಯನ್ನು ಕಟ್ಟಿ ಹೇಳಿದವಳೇ ಕೊನೆಯ ಅಸ್ತ್ರವಾಗಿ “ನೀನು ಕೌಸಲ್ಯೆಯ ದಾಸಿಯಾಗುವೆ, ಭರತನ ಪ್ರಾಣ ಈ ಎಲ್ಲಾ ಕಾರಣಗಳಿಂದ ಅಪಾಯದಲ್ಲಿದೆ” ಎನ್ನುವ ಮಾತುಗಳು ಆಕೆಯನ್ನು ತಿರುಗಿಸುತ್ತವೆ.

ಪ್ರಪಂಚದ ಎಲ್ಲಾ ಹೆಣ್ಣುಜೀವಿಗಳು ತನಗೆ ಬರುವ ಎಂತಹ ಕಷ್ಟಗಳನ್ನಾದರೂ ಸಹಿಸಿಕೊಳ್ಳುತ್ತವೆ. ಆದರೆ ತನ್ನ ಮಕ್ಕಳಿಗೆ ಅಪಾಯ ಬಂತೆಂದರೆ ಆಕೆ ಸಮಗ್ರ ಜಗತ್ತನ್ನೇ ಎದುರಿಸಲೂ ಹಿಂದೆಮುಂದೆ ನೋಡುವದಿಲ್ಲ. ಮಂಥರೆ ದುರ್ಬೋಧಿಸಿದಂತೆಲ್ಲ ಕೈಕೆ ಬದಲಾಗುವದು ಕ್ರಿಯೆಗೆ ಒಂದು ಸಹಜ ಪ್ರತಿಕ್ರಿಯೆಯಷ್ಟೆ. ಈಗ ಮಂಥರೆಯೇ ಅವಳಿಗೆ ವರಗಳ ಕುರಿತು ಜ್ಞಾಪಿಸಿ ಕೋಪಾಗಾರಕ್ಕೆ ಹೋಗಲು ಸಲಹೆ ನೀಡುವದು. ಇಲ್ಲಿಂದ ಮುಂದೆ ಕೈಕೆ ರಣಚಂಡಿಯಾಗಿ ಬದಲಾಗುವದನ್ನು ನೋಡಬಹುದು. ಈ ರೀತಿಯ ಸ್ವಭಾವವನ್ನು ಗ್ರೀಕ್ ನಾಟಕಗಳಲ್ಲಿ ಬರುವ Character of Hamartia (ದುರಂತದೋಷ) ಅಂದರೆ ಸೌಮ್ಯವಾಗಿರುವ ಪಾತ್ರ ತಕ್ಷಣ ಋಣಾತ್ಮಕವಾಗಿ ಬದಲಾಗಿ ಸಂಪೂರ್ಣ ದುರಂತಕ್ಕೆ ಕಾರಣವಾಗುವುದು. ಮಂಥರೆಯ ದುರ್ಬೀಜ ಚನ್ನಾಗಿಯೇ ಕೆಲಸ ಮಾಡಿತು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕದ ಕನಸಿನ ವಿಹಾರ

ರಾಮಾಯಣದಲ್ಲಿ ಮಂಥರೆಯ ಪಾತ್ರವನ್ನು ಓರ್ವ ವಿಷಬೀಜವೆಂದು ಸುಲಭಕ್ಕೆ ಹೇಳಿಬಿಡಬಹುದು. ಅಥವಾ ಇವಕ್ಕೆಲ್ಲ ಕಾರಣ ಆಕೆ ಶಾಪಗ್ರಸ್ತಳಾಗಿರುವುದು ಎನ್ನುವ ಸಮಾಧಾನವನ್ನು ಪಟ್ಟುಕೊಳ್ಳಬಹುದು. ಆದರೆ ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಪ್ರಪಂಚವೇ ಆಕೆಯನ್ನು ಕುಬ್ಜೆ, ಅನಿಷ್ಟೆ ಎಂದು ಹೀಗೆಳೆವಾಗ ಮರುಭೂಮಿಯಲ್ಲಿ ಸಿಕ್ಕ ನೀರಿನಂತೆ ಕೈಕೇಯಿಯ ಲಾಲನೆ ಪಾಲನೆಯಲ್ಲಿ ಆಕೆ ತನ್ನ ನೋವನ್ನು ಮರೆತವಳು. ಅಶ್ವಪತಿ ಕೈಕೇಯಿಯ ತಾಯಿಯನ್ನು ಕೈಕೆ ಕೈಗೂಸಾಗಿರುವಾಗಲೇ ಕಾಡಿಗೆ ಅಟ್ಟಿದ್ದ. ಅದಕ್ಕೆ ಕಾರಣ ಅರಸನಿಗೆ ಪ್ರಾಣಿ ಪಕ್ಷಿಗಳ ಭಾಷೆ ಅರ್ಥವಾಗುತ್ತಿತ್ತು. ಅದನ್ನು ತನಗೆ ಹೇಳಲೇ ಬೇಕೆನ್ನುವ ಹಟಹಿಡಿದ ಕಾರಣಕ್ಕೆ ಆಕೆಯನ್ನು ಹಸಿ ಬಾಣಂತಿಯಾಗಿರುವಾಗಲೇ ಕಾಡಿನಲ್ಲಿ ಬಿಟ್ಟಿದ್ದ. ತಾಯಿಯಿಲ್ಲದ ತಬ್ಬಲಿಗೆ ತಾಯಿಯಾದವಳು ಮಂಥರೆ. ಅವಳ ಪಾಲಿಗೆ ಕೈಕೆಗೆ ಏನಾದರೂ ಆಯಿತೆಂದರೆ ಸಹಿಸಲಾರದ ಸಂಗತಿ. ತನ್ನ ಮಕ್ಕಳಿಗಿಂತಲೂ ಮೊಮ್ಮಕ್ಕಳ ಮೇಲೆ ಅಜ್ಜಿಯಂದಿರಿಗೆ ಮಮತೆ ಹೆಚ್ಚಿರುತ್ತದೆ. ಈ ಕಾರಣದಿಂದ ಭರತನ ಏಳಿಗೆಯನ್ನು ಬಯಸಿದರೆ ಅದು ಸಹಜವೂ ಹೌದು. ರಾಮನ ಮೇಲಿನ ಹುಚ್ಚು ಮಮತೆಯ ಕಾರಣಕ್ಕೆ ಆತನಿಗೆ ಶತಾಯು ಗತಾಯು ಪಟ್ಟಗಟ್ಟಬೇಕೆನ್ನುವುದು ದಶರಥನ ಇಚ್ಚೆಯಾದರೆ, ಕೈಕೆಯಿಯ ಸಂತಾನವೇ ಪಟ್ಟವೇರಬೇಕೆನ್ನುವ ಮೋಹ ಮಂಥರೆಯಲ್ಲಿದೆ. ಹೀಗೆ ಲೋಕದ ಒಳಿತಿಗಲ್ಲ, ತಮಗೆ ಬೇಕಾದವರು ಪಟ್ಟವೇರಲಿ ಎನ್ನುವ ಸ್ವಾರ್ಥ ಇಲ್ಲಿ ಕೆಲಸ ಮಾಡಿದೆ.

ರಾಜತ್ವವೆನ್ನುವುದು ವಿಷ್ಣುವಿನ ಪ್ರತಿನಿಧಿಯಾಗಿ ಇರುವ ಸ್ಥಾನ. ರಾಮನಂತಹ ಪರಿಪೂರ್ಣ ವ್ಯಕ್ತಿ ಇಂಥಹ ಮನಸ್ಥಿತಿಯಲ್ಲಿ ಪಟ್ಟವನ್ನೇರಿದರೆ ಅದು ಒಂದು ದೋಷವೇ. ಕಾವ್ಯದ ಪ್ರಾರಂಭದಲ್ಲಿ ನಾರದರ ಹತ್ತಿರ ವಾಲ್ಮೀಕಿ ಕೇಳಿಕೊಂಡಂತೆ ಹದಿನಾರು ಗುಣ ಸಂಪನ್ನನಾದ ರಾಮ ದಶರಥನ ಇಚ್ಛೆಯಂತೆ ಪಟ್ಟಕ್ಕೆ ಏರಿದ್ದರೆ ಅದೊಂದು ದೋಷವಾಗಿಬಿಡುತ್ತಿತ್ತು. ಅಧಿಕಾರವೆನ್ನುವುದು ಭೋಗವಲ್ಲ, ಹೊಣೆಗಾರಿಕೆಯಾಗಿ ನೋಡಬೇಕು. ಮಾನುಶಃ ಲೀಲೆಯಲ್ಲಿ ಗುಣವಂತನಾದ ವ್ಯಕ್ತಿಯ ಕುರಿತು ರಾಮಾಯಣವನ್ನು ರಚಿಸಲಾಗಿದೆ. ಗುಲಗಂಜಿಯಷ್ಟು ದೋಷವಿದ್ದರೂ ಕವಿ ವಾಲ್ಮೀಕಿ ತನ್ನ ಮನಸ್ಸಿನಲ್ಲಿ ಪಡಿಮೂಡಿದಾಕೃತಿಗೆ ತಾನೇ ಮುಗ್ಧನಾಗಲಾರ.

ವೇದೋಪನಿಷದಗಳ ಭೂತಗನ್ನಡಿಯೊಳಗೆ
ಪಡಿಮೂಡಿದಾಕೃತಿಗೆ ತಾನೆ ಮುಗ್ಧ
ಮತ್ಸ್ಯ ಕೂರ್ಮ ವರಾಹ ಮೆಟ್ಟಿಲುಗಳೇರುತ್ತ
ಹುತ್ತಗಟ್ಟಿದ್ದ ಕೈ ಕಡೆದ ನೋಟ;

ಅಡಿಗರು ಕಡೆದ ಪಾತ್ರದ ನೆನಪನ್ನು ಇಲ್ಲಿ ಮಾಡಿಕೊಳ್ಳಬೇಕು.

ಅಂತರಂಗದ ಅರಸಿ ಕೋಪಾಗಾರವನ್ನು ಸೇರಿದರೆ ದಶರಥ ಮಹಾರಾಜ ತನ್ನ ಕಾರ್ಯ ಈಡೇರಿತೆಂದು ಸಂತೋಷದ ಅತಿರೇಕಕ್ಕೆ ಹೋಗಿದ್ದ. ಮದವೇರಿದ ಆತ ಅದನ್ನು ಇಳಿಸಿಕೊಳ್ಳುವ ಬಯಕೆಯ ಸಲುವಾಗಿ ಹೊರಟಿದ್ದ.

ವಿವರ ಮುಂದಿನ ಸಂಚಿಕೆಯಲ್ಲಿ…..

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕ ಸಂಕಲ್ಪದ ಹಿಂದಿನ ಗೂಢಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading
Advertisement
Sadhguru Jaggi Vasudev
ಬೆಂಗಳೂರು2 mins ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ7 mins ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ24 mins ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ33 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ42 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ49 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ1 hour ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ1 hour ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ1 hour ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ2 hours ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202412 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌