ಧವಳ ಧಾರಿಣಿ ಅಂಕಣ: ಶೃಂಗಾರದ ಪ್ರತಿರೂಪ ಮತ್ತು ಧರ್ಮಪ್ರಜ್ಞೆಯ ದಿಟ್ಟ ನಾರಿ ಶಕುಂತಲೆ - Vistara News

ಅಂಕಣ

ಧವಳ ಧಾರಿಣಿ ಅಂಕಣ: ಶೃಂಗಾರದ ಪ್ರತಿರೂಪ ಮತ್ತು ಧರ್ಮಪ್ರಜ್ಞೆಯ ದಿಟ್ಟ ನಾರಿ ಶಕುಂತಲೆ

ಕಾಳಿದಾಸನ ನಾಟಕದ ಶಕುಂತಲಾ ಕಾಡ ಬೆಳದಿಂಗಳಿನಂತಹ ಹೆಣ್ಣು. ಮುಗ್ಧತೆಯೇ ತುಂಬಿದ ಸೌಂದರ್ಯದ ಖನಿಯಾದ ಈಕೆ ಮಹಾಭಾರತದಲ್ಲಿ ಬರುವ ಶಕುಂತಲೆಗಿಂತ ಭಿನ್ನ. ಅದು ಹೇಗೆ?

VISTARANEWS.COM


on

shakuntala play
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾಗ 1: ಕವಿ ಕಡೆದ ಪಾತ್ರದ ನಿಜಸ್ವರೂಪದ ಅನಾವರಣ

dhavala dharini
dhavala dharini

ಭಾರತೀಯ ನಾಟಕಗಳ ನಾಯಿಕೆಯರ ಕುರಿತು ವಿವರಿಸುವಾಗ ಅತೀ ಹೆಚ್ಚು ಮನಸ್ಸನ್ನು ಸೆಳೆಯುವುದು ಕಾಳಿದಾಸನಿಂದ ಪುನಃಸೃಷ್ಟಿಸಲ್ಪಟ್ಟಂತಹ ಶಕುಂತಲಾ ಎನ್ನುವುದು ನಿರ್ವಿವಾದ. ಇಲ್ಲಿ ಶಕುಂತಲೆ ಮುಗ್ಧತೆಯೇ ತುಂಬಿದ ಸ್ನಿಗ್ಧ ಸೌಂದರ್ಯದ ಖನಿ. ಆಕೆ ಅಡವಿಯಲ್ಲಿ ಕಣ್ವಾಶ್ರಮದಲ್ಲಿ ಬೆಳೆದವಳು. ಆಶ್ರಮದ ಪರಿಸರದಲ್ಲಿನ ಮಲ್ಲಿಗೆಯೊಂದಕ್ಕೆ ಅವಳು ‘ವನಜ್ಯೋತ್ಸ್ನಾ’ ಅಂದರೆ ಕಾಡ ಬೆಳದಿಂಗಳು ಎಂದು ಕರೆಯುತ್ತಾಳೆ. ನಿಜವಾಗಿ ಕಾಳಿದಾಸ ಈ ಉಪಮೆಯ ಮೂಲಕ ಶಕುಂತಲೆಯೇ ಕಾಡಬೆಳದಿಂಗಳು ಎನ್ನುವುದನ್ನು ಸೂಚಿಸಿದ್ದಾನೆ. ಸೌಂದರ್ಯದ ಮೂರ್ತಸ್ವರೂಪಳಾಗಿ, ಸ್ತ್ರೀತ್ವದ ಆಕರ್ಷಣೆಯ ಕೇಂದ್ರವಾಗಿ, ಪ್ರೌಢ ಹೆಣ್ಣಾಗಿ ಬೆಳೆಯುವ ಪರಿ ಅನನ್ಯ.

ಆದರೆ ಇಡೀ ನಾಟಕದ ಮೊದಲ ಮೂರು ಅಂಕಗಳಲ್ಲಿ ಅಭಿವ್ಯಕ್ತವಾಗುವ ಸಂಭೋಗ ಶೃಂಗಾರರಸ ಶಕುಂತಲೆಯ ಗುಣಗಳನ್ನು ಅದರಿಂದಾಚೆಗೆ ನಮ್ಮನ್ನು ನೋಡಲು ಬಿಡುವುದೇ ಇಲ್ಲ. ಕಾಳಿದಾಸನ ಕಾವ್ಯವೇ ಇರಲಿ ನಾಟಕವೇ ಇರಲಿ ಪ್ರೇಮವೇ ಆತನ ಪ್ರಥಮ ಆಯ್ಕೆ. ಕುಮಾರ ಸಂಭವ ಸಂಪೂರ್ಣವಾಗಿ ಶಿವಪುರಾಣದ ವಸ್ತುವನ್ನಾಶ್ರಯಿಸಿದರೂ ಅಲ್ಲಿರುವ ಭಕ್ತಿರಸವೂ ಸಹ ನವಿರಾದ ಶೃಂಗಾರದ ಮಲ್ಲಿಗೆಯ ಬಳ್ಳಿಯಲ್ಲಿ ಕಾಳಿದಾಸನಿಂದ ಪೋಣಿತವಾಗಿದೆ. ರಘುವಂಶದಲ್ಲಿಯ ಅಜವಿಲಾಪವೇ ಇರಲಿ, ಮೇಘದೂತದ ಯಕ್ಷನ ವಿರಹವಾಗಲಿ, ವಿಕ್ರಮೋರ್ವಶೀಯ ಪುರೂರವ ಮತ್ತು ಊರ್ವಶಿಯ ಪ್ರಣಯದಲ್ಲಿಯಾಗಲೀ, ಮಾಲವಿಕಾಗ್ನಿಮಿತ್ರದಲ್ಲಿನ ಪ್ರಣಯದ ಕುರಿತಾದ ಉತ್ಕಂಠತೆಯ ಹಂಬಲವಾಗಲೀ ಸಹೃದಯರನ್ನು ಶೃಂಗಾರದ ರಸದಲ್ಲಿ ಮುಳುಗಿಸಿಬಿಡುತ್ತದೆ. ಆತನ ಕಾವ್ಯದಲ್ಲಿ ಪ್ರೇಮವೆನ್ನುವುದು ಐಹಿಕವಾಂಛೆಗಳಂತೆ ಕಾಣುವುದು ಮಾಲವಿಕಾಗ್ನಿಮಿತ್ರದಲ್ಲಿಯಾದರೂ ವಿಕ್ರಮೋರ್ವಶೀಯದಲ್ಲಿ ಪ್ರೇಮವೆನ್ನುವುದು ತನ್ನ ದೈಹಿಕಕ್ಕಿಂತ ದೈವನಿಯಾಮಕವಾಗಿರುವುದು ಎನ್ನುವುದನ್ನು ಸೂಚಿಸುತ್ತದೆ.

ಆದರೆ ಶಾಕುಂತಲಾದ ಪ್ರೇಮ ಮಾತ್ರ ಈ ಎಲ್ಲ ಮಿತಿಯನ್ನು ಮೀರಿ ನಿಂತಿದೆ. ಇಲ್ಲಿಯದು ಐಹಿಕ ಆಕರ್ಷಣೆಯಂತೆ ಮೊದಲು ತೋರಿಸಿದರೂ ಅದರೊಳಗೆ ಲೋಕದ ಹಿತವಡಗಿದೆ ಎನುವುದನ್ನು ಕಣ್ವ ಮಹರ್ಷಿಯ “ಮಗಳೇ, ಯಜ್ಞಕರ್ತನ ಕಣ್ಣು ಹೊಗೆಯಿಂದ ಮಂಜಾಗಿಬಿಟ್ಟಿದ್ದರೂ ಆಹುತಿ ಮಾತ್ರ ಸರಿಯಾಗಿ ಯಜ್ಞಕುಂಡದಲ್ಲಿ ಬಿದ್ದಂತಾಯಿತು” ಎನ್ನುವ ಮಾತಿನಿಂದ ಇವೆಲ್ಲವೂ ಲೋಕದ ಹಿತದಲ್ಲಿಯೇ ಅಡಗಿದೆ ಎನ್ನುವುದನ್ನು ವಿಶದಪಡಿಸುವುದು ಕಾಳಿದಾಸನ ಉದ್ದೇಶವಾಗಿದೆ. ಆತನ ಇನ್ನೆರಡು ನಾಟಕಗಳ ನಾಯಕಿಯರಾದ ಊರ್ವಶಿ ಮತ್ತು ಮಾಲವಿಕೆ ಇಬ್ಬರಿಗೂ ಉನ್ನತ ಕುಲದ ಹಿನ್ನೆಲೆಯಿದೆ. ಆದರೆ ಶಕುಂತಲಾ ಹಾಗಲ್ಲ; ಆಕೆ ನಿಸರ್ಗದ ಶಿಶು. ಅಪ್ಸರೆ ಮೇನಕೆ ಮತ್ತು ಮಹಾತಪಸ್ವಿ ವಿಶ್ವಾಮಿತ್ರರ ಮಗಳಾದರೂ ಆಕೆಯನ್ನು ಸಾಕುವುದು ಶಕುಂತ ಪಕ್ಷಿಗಳು. ಹಾಗಾಗಿ ಆಕೆಗೆ ಆಶ್ರಮದಲ್ಲಿನ ಹೆಣ್ಣು ಜಿಂಕೆ, ಮಾಮರಕ್ಕೆ ಹಬ್ಬಿದ ಮಲ್ಲಿಗೆಯ ಬಳ್ಳಿ ಹಾರಾಡುವ ದುಂಬಿ ಎಲ್ಲದರಲ್ಲಿಯೂ ಜೀವ ಕಾರುಣ್ಯವನ್ನು ಕಾಣುತ್ತಾಳೆ. ದೇಹಕ್ಕೆ ಉಷ್ಣತೆ ಏರಿದರೆ ಆಕೆಗೆ ತಂಪನ್ನೀಯುವುದು ಕಮಲದ ಎಲೆಗಳ ಹಾಸಿಗೆ. ದುಷ್ಯಂತ ತನ್ನ ಪ್ರೇಮವನ್ನು ನಿವೇದಿಸಿ ಪ್ರಕೃತಿಯ ಮಡಿಲಲ್ಲಿ ಆಕೆಯನ್ನು ಕೂಡಿದಾಗ ಆ ಮಿಲನ ಪ್ರಕೃತಿ ಸಹಜವಾದ ಗುಣವಾಗಿಬಿಡುತ್ತದೆ. ಶಕುಂತಲಾ ಮೊದಲು ಅಷ್ಟನಾಯಿಕೆಯರಲ್ಲಿ ಪ್ರಸಿದ್ಧವಾದ ವಾಸಕಸಜ್ಜ ಅಂದರೆ ಇನಿಯನನ್ನು ಕೂಡಲು ಬಯಸುವ ನಂತರ ವಿರಹೋತ್ಕಂಟಿತೆಯಾಗಿ ಕಾಣಿಸುತ್ತಾಳೆ.

ಕಾಳಿದಾಸನ ಶಕುಂತಲೆ ಆತನೇ ಕಡೆದ ಸಮ್ಮೋಹನವನ್ನು ಮೀರಿದ ಒಂದು ವಿಶಿಷ್ಟ ಪಾತ್ರ. ಇದಕ್ಕೆ ಹೋಲಿಕೆ ಮತ್ತೆ ಯಾವ ಪಾತ್ರವನ್ನೂ ಭಾರತೀಯ ಕಾವ್ಯಗಳಲ್ಲಿ ಕಾಣಸಿಗದು. ಆಕೆಯನ್ನು ರೂಪಿಸುವಲ್ಲಿ ಬದುಕಿನ ಗತಿಯನ್ನು ನಿರ್ಧರಿಸುವಲ್ಲಿ ಪ್ರಕೃತಿ ಮತ್ತು ವಿಧಿ ಮುಖ್ಯವಾದ ಪಾತ್ರವನ್ನು ವಹಿಸುತ್ತಾರೆ. ಕಾಳಿದಾಸ ಇಲ್ಲಿ ರಮ್ಯಭಾಷೆಯನ್ನು ಉಪಯೋಗಿಸಿದ್ದಾನೆ. ಕವಿಸಮಯ, ಉಪಮೆಗಳನ್ನು ನಿರೂಪಿಸಿರುವ ರೀತಿ ಸದಾಕಾಲಕ್ಕೂ ಸಲ್ಲುವಂತವುಗಳು. ಇಂತಹ ಗುಣಗಳುಳ್ಳ ಸಾಹಿತ್ಯವನ್ನು ಸದಾತನವೆಂದು ಸಂಸ್ಕೃತ ವಾಙ್ಮಯಗಳು ಕರೆದಿವೆ.

ಕಾಳಿದಾಸ ಈ ನಾಟಕಕ್ಕೆ ಆಯ್ದುಕೊಂಡಿರುವ ವಸ್ತುವಿನ ಮೂಲವಿರುವುದು ಮಹಾಭಾರತದಲ್ಲಿ. ಅಲ್ಲಿಯೂ ಶಕುಂತಲೋಪಾಖ್ಯಾನವಿದೆ. ವ್ಯಾಸರ ಮಹಾಭಾರತದ ಆದಿಪರ್ವದ ಸಂಭವ ಪರ್ವದಲ್ಲಿ ಬರುವ ಘಟನೆಯನ್ನು ಆಧರಿಸಿ ಬರೆದ ಈ ನಾಟಕ ಕಾಳಿದಾಸನನ್ನು ಪ್ರಪಂಚದ ಅತ್ಯಂತ ಶ್ರೇಷ್ಠ ನಾಟಕಕಾರರ ಸಾಲಿನಲ್ಲಿ ಸೇರಿಸಿದೆ. ಖ್ಯಾತ ಪಾಶ್ಚಿಮಾತ್ಯ ವಿದ್ವಾಂಸ ಕಾಳಿದಾಸನನ್ನು ಪಶ್ಚಿಮಕ್ಕೆ ಪರಿಚಯಿಸಿದ Mr. Arthur Berriedale Keith “Kalidasa represents he is the master of the Vaidarbha style… His skill in the Cakuntala (Shakuntala) never leads him into the defects of taste which betrayed his successors into exhibiting their skill in the wrong place. (Ref. The Sanskrit Drama, in its origin, Development theory and Practice- Kalidasa’s Dramatic Art) (ಸಂಸ್ಕೃತ ಕಾವ್ಯಗಳ ಧೀಮಂತ ಪಾತ್ರಚಿತ್ರಣಗಳನ್ನು ಕಟ್ಟುವುದರಲ್ಲಿ ಕಾಳಿದಾಸ ಎಲ್ಲರಿಗಿಂತಲೂ ಎತ್ತರದ ಸ್ತರದಲ್ಲಿದ್ದಾನೆ. ವೈದರ್ಭಿ ಶೈಲಿಯ ಕಾವ್ಯರಚನೆಯಲ್ಲಂತೂ ಆತನೇ ದೊರೆ… ಅವನ ನಂತರದ ಕವಿಗಳು ರಚಿಸಿದ ಕೀಳು ಅಭಿರುಚಿಯ ಕೌಶಲಗಳನ್ನು ಪ್ರದರ್ಶಿಸಬಾರದ ಸಂದರ್ಭಗಳಲ್ಲಿ ಪ್ರದರ್ಶಿಸಿದಂತೆ ʼಶಾಕುಂತಲಾʼದಲ್ಲಿ ಅವನೆಂದೂ ದೋಷಪೂರಿತ ಅಭಿರುಚಿಯನ್ನು ತೋರ್ಪಡಿಸಿಲ್ಲ) ಎಂದು ಹೊಗಳಿದ್ದಾನೆ.

ಆದರೆ ಈ ನಾಟಕದಲ್ಲಿ ಬರುವ ಶಕುಂತಲೆಯನ್ನು ಮೂಲ ವ್ಯಾಸರ ಶಕುಂತಲೆಯ ಜೊತೆ ಹೋಲಿಕೆ ಮಾಡುವಾಗ ಒಂದೇ ಕಥಾವಸ್ತು ವಿಭಿನ್ನ ಧ್ರುವಗಳಲ್ಲಿ ನಿಂತಿರುವುದನ್ನು ಗಮನಿಸಬಹುದಾಗಿದೆ, ವ್ಯಾಸರು ಮಹಾಭಾರತವನ್ನು ಬರೆಯುವಾಗ ನಿರ್ಭಾವುಕರಾಗಿದ್ದಾರೆ. ಅವರಿಗೆ ಕಾವ್ಯದ ನಾಯಕನ ಕುರಿತು ಯಾವ ಕಕ್ಕುಲತೆಯಿಲ್ಲ. ಅವರಿಗೆ ಕಾವ್ಯಕ್ಕಿಂತ ಒಂದು ಇತಿಹಾಸವನ್ನು ರಚಿಸಬೇಕು ಎನ್ನುವತ್ತ ಆಸಕ್ತಿ ಇದೆ. ವ್ಯಾಸರ ಕಾವ್ಯದಲ್ಲಿ ಬರುವ ಎಲ್ಲಾ ಪಾತ್ರಗಳು ಮನುಷ್ಯಸಹಜವಾದ ದೌರ್ಬಲ್ಯಕ್ಕೆ ಸಿಲಿಕಿದಂತವುಗಳು. ಭೀಷ್ಮ ಸಮರ್ಥನಾದರೂ ಆತ ಅಪರವಯಸ್ಸಿನ ತಂದೆಗೆ ಮದುವೆ ಮಾಡಿಸಲು ತನ್ನ ಹಕ್ಕಾಗಿರುವ ಸಿಂಹಾಸನವನ್ನು ತ್ಯಜಿಸಿದ ಕುರಿತು ನಾವು ಚರ್ಚೆ ನಡೆಸಬಹುದು. ಧರ್ಮರಾಯ, ಭೀಮಾರ್ಜುನರು, ಧುರ್ಯೋಧನ, ಕರ್ಣ, ದ್ರೋಣ ಹೀಗೆ ಎಲ್ಲರಲ್ಲಿಯೂ ಎರಡು ಮುಖಗಳನ್ನು ಕಾಣಬಹುದಾಗಿದೆ. ಕೃಷ್ಣ ಮತ್ತು ವಿದುರನನ್ನು ಬಿಟ್ಟರೆ ವ್ಯಾಸರ ಮೆಚ್ಚುಗೆಗೆ ಪಾತ್ರವಾದ ವ್ಯಕ್ತಿಗಳು ಯಾರೂ ಅಲ್ಲಿಲ್ಲ. ಹಾಗಾಗಿ ಮಹಾಭಾರತವನ್ನು ಆಧರಿಸಿ ಕಡೆಯುವ ಸಾಹಿತ್ಯದ ಕ್ಯಾನ್ವಾಸ್ ತುಂಬಾ ದೊಡ್ಡದು.

ಈ ನಿಟ್ಟಿನಲ್ಲಿ ಮಹಾಭಾರತದ ಶಕುಂತಲೆ ಕಾಳಿದಾಸನ ಶಕುಂತಲೆಯಂತೆ ಕರುಣರಸ ತುಂಬಿದ ಕೋಮಲೆ ಮಾತ್ರವಲ್ಲ. ಆಕೆ ತೆಗೆದುಕೊಳ್ಳುವ ನಿಲುವುಗಳು ಮತ್ತು ದಿಟ್ಟ ನಿರ್ಧಾರ ದುಷ್ಯಂತನಂತಹ ಮಹಾರಾಜನನ್ನು ಕಂಗೆಡಿಸಿ ಆತ ಶಕುಂತಲೆಯನ್ನು ಸ್ವೀಕರಿಸಲೇಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸುತ್ತದೆ. ನಾಟಕದಂತೆ ಇಲ್ಲಿಯೂ ದುಷ್ಯಂತ ನಾಯಕ ಪಾತ್ರಕ್ಕೆ ಯೋಗ್ಯವಾದ ಗುಣಗಳನ್ನು ಹೊಂದಿದವನಾಗಿದ್ದಾನೆ. ನಾಟ್ಯಶಾಸ್ತ್ರದ ಪ್ರಕಾರ ನಾಯಕನಾದವನು ಉದಾತ್ತ ಚರಿತನಾಗಿರುತ್ತಾನೆ. ದುಷ್ಯಂತನ ಕುರಿತು ಮಹಾಭಾರತದಲ್ಲಿ ಆತ ಆನಂದಪೂರ್ಣವಾಗಿದ್ದನು ಎಂದು ವರ್ಣಿಸಲಾಗಿದೆ. ಮನುಷ್ಯನಿಗಿರುವ ಪೂರ್ಣಾನಂದವನ್ನು ಉಪನಿಷತ್ತಿನಲ್ಲಿ ಹೀಗೆ ವರ್ಣಿಸಲಾಗಿದೆ. ಯುವಕನಾಗಿರಬೇಕು, ಸಾಧುವಾಗಿರಬೇಕು, ವಿದ್ಯಾವಂತ, ಅಶಿಷ್ಟನಾಗಿಯೂ ನಿರೋಗಿಯಾಗಿಯೂ ದೃಢಕಾಯನಾಗಿಯೂ ಬಲಿಷ್ಠನಾಗಿಯೂ ಇರಬೇಕು. ದುಷ್ಯಂತ ಈ ಎಲ್ಲ ಗುಣಗಳನ್ನು ಹೊಂದಿರುವ ಕಾರಣ ಕಾಳಿದಾಸ ಆತನನ್ನು ಧೀರಲಲಿತ ನಾಯಕನನ್ನಾಗಿಸಿದ್ದಾನೆ. ಆತ ಕಣ್ವಾಶ್ರಮಕ್ಕೆ ಬರುವಾಗ ಅಲ್ಲಿನ ಪರಿಸರ ರಾಜನ ಮೇಲೆ ಪ್ರಭಾವ ಬೀರಿತು. ಅಲ್ಲಿರುವ ಹುಲಿ ಜಿಂಕೆಗಳೆಲ್ಲವೂ ಸಾಧುಸ್ವಭಾವದಿಂದ ಮಿತ್ರರಾಗಿ ವ್ಯವಹರಿಸುತ್ತಿದ್ದವು. ಇದನ್ನೆಲ್ಲವನ್ನೂ ನೋಡಿದ ರಾಜ ಅಮಾತ್ಯ ಪುರೋಹಿತರನ್ನೆಲ್ಲ ಹೊರಗಿಟ್ಟು ತಾನೊಬ್ಬನೇ ಆಶ್ರಮವನ್ನು ಪ್ರವೇಶಿಸಿದನು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ | ಆತ್ಮವಿಶ್ವಾಸದ ಕೊರತೆ ಅಧೈರ್ಯದ ಮೂಲ ಎಂಬ ವಿಷಾದ ಯೋಗ

ಕಣ್ವ ಮಹರ್ಷಿಗಳು ಆ ಸಮಯದಲ್ಲಿ ಆಶ್ರಮದಲ್ಲಿ ಇದ್ದಿರಲಿಲ್ಲ. ಅಲ್ಲಿರುವ ಅವರ ಶಿಷ್ಯರೆಲ್ಲರೂ ತಮ್ಮ ತಮ್ಮ ತಪೋನುಷ್ಠಾನಗಳಲ್ಲಿ ನಿರತರಾಗಿದ್ದರು. ಆಶ್ರಮಕ್ಕೆ ಬಂದ ಅತಿಥಿಯನ್ನು ಸತ್ಕರಿಸುವ ಸಲುವಾಗಿ ಸುಂದರಿಯಾದ ಶಕುಂತಲೆ ಹೊರಬಂದು ರಾಜನನ್ನು ಸತ್ಕರಿಸುತ್ತಾಳೆ. ರಾಜನಿಗೆ ಆಕೆಯನ್ನು ಕಂಡ ತಕ್ಷಣವೇ ಮೋಹವುಂಟಾಗಿಬಿಡುತ್ತದೆ. ಕಾಳಿದಾಸ ದುಷ್ಯಂತನ ಈ ದೋಷವನ್ನು ಮರೆಮಾಚಿದ್ದಾನೆ. ಶಕುಂತಲೆಯನ್ನು ರಾಜ ನೋಡುವುದು ಆಶ್ರಮದ ಹೊರವಲಯದ ಮರಗಿಡಗಳ ಮರೆಯಲ್ಲಿ. ಆಕೆಯ ಎದೆಗೆ ಕಟ್ಟಿದ ವಸ್ತ್ರದ ಕಟ್ಟು ಬಿಗಿಯಾಗಿದೆ. ಅದಕ್ಕೆ ಆಕೆಯ ಸಖಿ ಪ್ರಿಯಂವದೆ “ನನ್ನನ್ನೇಕೆ ದೂರುತ್ತೀಯಾ; ಸ್ತನಗಳನ್ನು ವಿಸ್ತಾರವಾಗಿ ಬೆಳೆಸಿದ ನಿನ್ನ ಯೌವನವನ್ನು ದೂರು” ಎನ್ನುವ ಮಾತುಗಳು ರಾಜ ಅವಳ ಕುರಿತು ಮೋಹಗೊಳ್ಳುವಂತೆ ಮಾಡಿದೆ. ಮೊದಲ ಅಂಕದಲ್ಲಿ ಅವರಿಬ್ಬರ ನಡುವಿನ ಪ್ರೇಮಕ್ಕೆ ಕಾರಣವಾಗುವ ದುಂಬಿ, ಸಖಿಯರು ಇಲ್ಲಿಲ್ಲ. ಚೇತೋಹಾರಿಯಾಗಿ ಓದುಗರನ್ನು ಬಡಿದೆಬ್ಬಿಸುವ ಲಲಿತತೆಯಿದೆ. ಶಕುಂತಲೆ ತಾನು ಕಣ್ವಋಷಿಯ ಮಗಳು ಎಂದಾಗ ರಾಜನಿಗೆ ಅನುಮಾನ; ಆಕೆ ತನ್ನ ಮತ್ತು ತನ್ನ ತಂದೆ ವಿಶ್ವಾಮಿತ್ರ ಮತ್ತು ತಾಯಿ ಮೇನಕೆಯ ವೃತ್ತಾಂತವನ್ನೆಲ್ಲ ಹೇಳುತ್ತಾಳೆ. ರಾಜನಿಗೆ ಆಕೆ ಕ್ಷತ್ರಿಯ ಕನ್ಯೆ ಎನ್ನುವುದು ತಿಳಿದು ಆಕೆಯನ್ನು ಮದುವೆಯಾಗಬೇಕೆಂದು ಕೇಳಿಕೊಳ್ಳುತ್ತಾನೆ. ಶಕುಂತಲೆ ಸುಮ್ಮನೆ ಒಪ್ಪಿಕೊಳ್ಳುವುದಿಲ್ಲ. ತನ್ನ ತಂದೆ ಕಣ್ವ ಮಹರ್ಷಿ ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಬರುತ್ತಾರೆ, ಅವರ ಸಮ್ಮತಿ ಪಡೆದು ವಿವಾಹವಾಗು ಎನ್ನುತ್ತಾಳೆ. ಇಲ್ಲಿ ರಾಜನಿಗೆ ಅವಳನ್ನು ಕೂಡಲೇ ಹೊಂದಬೇಕೆನ್ನುವ ಚಪಲ. ಅದಕ್ಕೆ ಆತ ತನ್ನಮಾತಿನ ಜಾಲವನ್ನು ಹೆಣೆಯುತ್ತಾನೆ.

ಆತ್ಮನೋ ಬನ್ಧು ರಾತ್ಮೈವ ಗತಿರಾತ್ಮೈವ ಚಾತ್ಮನಃ |
ಆತ್ಮನೋ ಮಿತ್ರಮಾತ್ಮೈವ ತಥಾತ್ಮಾ ಚಾತ್ಮನಃ ಪಿತಾ |
ಆತ್ಮನೈವಾತ್ಮನೋ ದಾನಂ ಕರ್ತುಮರ್ಹಸಿ ಧರ್ಮತಃ |

(ಬೇರೊಬ್ಬರನ್ನು ಅವಲಂಬಿಸದೇ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳಬೇಕು. ನಮ್ಮ ಬಂಧುಗಳು ನಾವೇ. ನಮ್ಮ ಆತ್ಮವೇ ನಮಗೆ ಗತಿ. ನಮ್ಮ ಆತ್ಮವೇ ಮಿತ್ರ. ತಂದೆಯೂ ಸಹ ನಮ್ಮ ಆತ್ಮನೇ ಆಗಿದ್ದಾನೆ. ಆದುದರಿಂದ ಶಕುಂತಲೆ! ಬೇರೆಯವರಿಂದ ದಾನ ಮಾಡಿಸಿಕೊಳ್ಳದೇ ನಿನ್ನನ್ನು ನೀನೇ ಸ್ವತಃ ಧರ್ಮದ ಮೂಲಕವಾಗಿ ಅರ್ಪಿಸಿಕೊಳ್ಳುವುದೇ ಯೋಗ್ಯವಾಗಿದೆ.)

ಇದನ್ನೂ ಓದಿ: ಧವಳ ಧಾರಿಣಿ ಅಂಕಣ | ಜಗದ್ವಂದ್ಯನನ್ನು ಹೆತ್ತೂ ತಬ್ಬಲಿಯಾದ ಮಹಾತಾಯಿ

ಇದೊಂದು ಮಹತ್ವದ ಪದ್ಯವಾಗಿದೆ. ಗೀತೆಯ ಆರನೆಯ ಅಧ್ಯಾಯದಲ್ಲಿ ಕೃಷ್ಣ “ಉದ್ಧೇರೇತ್ಮಾನಂ ನಾತ್ಮಾನಮವಸಾದಯೇ…” ಎಂದಿದ್ದಾನೆ. ʼʼತನ್ನ ಔನ್ನತ್ಯ, ಅಧಃಪತನಕ್ಕೆಲ್ಲ ತಾನೇ ಕಾರಣ. ಇಂದ್ರಿಯಗಳ ಸುಖಕ್ಕೆ ವಶನಾಗದೇ ಅದನ್ನು ಜಯಿಸಬೇಕು. ಇಂದ್ರಿಯಗಳನ್ನು ಜಯಿಸದವನಿಗೆ ಆತ್ಮವು ಬಾಹ್ಯಶತ್ರುವಿನಂತೆ ಶತ್ರುವಾಗಿರುವುದು” ಎನ್ನುವುದು ಗೀತೆಯ ಶ್ಲೋಕದ ತಾತ್ಪರ್ಯ. ಈ ಶ್ಲೋಕ ಆಧ್ಯಾತ್ಮದ ತುತ್ತತುದಿಗಿದ್ದರೆ ಅಂತಹುದೇ ಬೇರೊಂದು ಅರ್ಥ ಬರುವ ಶ್ಲೋಕದ ಮೂಲಕ ದುಷ್ಯಂತ ಇಲ್ಲಿ ಮಾತಿನ ಜಾಣನಡೆಯನ್ನು ಹಣೆದಿದ್ದಾನೆ. ತಮ್ಮಿಬ್ಬರ ಮೂಲ ಕ್ಷತ್ರಿಯತ್ವ; ಕ್ಷತ್ರಿಯರಿಗೆ ಗಂಧರ್ವ ವಿವಾಹ ಯೋಗ್ಯವೆನ್ನುವುದನ್ನು ಮತ್ತೆ ಮತ್ತೆ ಮನಗಾಣಿಸುತ್ತಾನೆ, ಇಲ್ಲಿ ಕಣ್ಣಿಗೆ ಕಾಣುವ ದೇಹವೇ ಆತ್ಮವೆನ್ನುವ ಭ್ರಮೆಗೆ ಶಕುಂತಲ ಸಿಕ್ಕುಬಿದ್ದಿದ್ದಾಳೆ. ಮಾತು ಹೇಗೆ ಮನವನ್ನು ಕೆಡಿಸಬಹುದೆನ್ನುವದಕ್ಕೆ ಇದೊಂದು ಉದಾಹರಣೆ.

ಶಕುಂತಲೆ ಇಲ್ಲಿ ಕಾಳಿದಾಸನ ನಾಟಕದ ನಾಯಿಕೆಯಂತೆ ಮುಗ್ಧಳಲ್ಲ. ಅವಳಿಗೆ ತನ್ನ ಭವಿಷ್ಯದ ಕುರಿತು ಸ್ಪಷ್ಟವಾದ ನಿಲುವಿದೆ. “ಸರಿ, ನೀನು ಹೇಳಿದಂತೆ ನನ್ನ ಆತ್ಮವೇ ನನಗೆ ಪ್ರಭು ಎನ್ನುವುದಾದರೆ ನನ್ನ ಆತ್ಮವನ್ನು ಪ್ರದಾನ ಮಾಡುವೆನು. ಆದರೆ ಒಂದು ನಿಬಂಧನೆಯ ಮೇಲೆ” ಎನ್ನುತ್ತಾ ಮುಂದೆ ತಮ್ಮಿಬ್ಬರಿಗೆ ಹುಟ್ಟುವ ಮಗನನ್ನೇ ಮುಂದಿನ ಚಕ್ರಾಧಿಪತಿಯಾಗಬೇಕು ಎನ್ನುವ ಭಾಷೆ ಕೊಡು ಎನ್ನುತ್ತಾಳೆ. ದುಷ್ಯಂತ ಮುಂದುವರಿದು ನಿನ್ನನ್ನೇ ಪಟ್ಟದರಸಿಯನ್ನಾಗಿಯೂ ನಿನ್ನ ಮಗನನ್ನೇ ರಾಜನನ್ನಾಗಿಯೂ ಮಾಡುತ್ತೇನೆ ಎಂದು ಭಾಷೆ ಕೊಟ್ಟು ಅವಳೊಡನೆ ಗಾಂಧರ್ವ ವಿಧಿಯ ಮೂಲಕ ಸೇರುತ್ತಾನೆ. ಶಾಕುಂತಲಾ ನಾಟಕದಲ್ಲಿನ ಉದಾತ್ತತೆಗೂ ಇಲ್ಲಿನ ರಾಜನೀತಿಗೂ ನೆಲ-ಮುಗಿಲಿನ ಅಂತರವಿದೆ. ಇಲ್ಲಿ ಶಕುಂತಲೆಯ ವ್ಯವಹಾರ “ಕನ್ಯಾ ವರಯತೇ ರೂಪಂ– ಕನ್ಯೆ ತನ್ನ ಲಗ್ನವಾಗುವವ ರೂಪವಂತನಾಗಿರಬೇಕೆಂದು ಬಯಸುತ್ತಾಳೆ” ಎನ್ನುವ ಸುಭಾಷಿತಕ್ಕನುಗುಣವಾಗಿದೆ. ಅಭಿಜ್ಞಾನದಲ್ಲಿ ಶಕುಂತಲೆ ಸಂಪೂರ್ಣ ಮುಗ್ಧೆ; ಆಕೆಯೂ ಮಹಾರಾಜನನ್ನು ನೋಡಿದ ಕೂಡಲೇ ಮೋಹಿತಳಾಗಿದ್ದಾಳೆ. ಆಶ್ರಮದ ಹೊರವಲಯದಲ್ಲಿ ಕಂಡ ಅವನಿಂದ ದೂರ ಹೋಗುವ ಮನಸ್ಸು ಆಕೆಗಿಲ್ಲ. ಹೂವಿನ ಮಧುವನ್ನು ಹೀರಿ ಮತ್ತೆ ತನ್ನ ಕೆಲಸವಾಯಿತು ಎಂದು ಮತ್ತೊಂದು ಹೂವಿಗೆ ಹಾರುವ ದುಂಬಿಯಂತೆ ಶಕುಂತಲೆಯನ್ನು ಕಾಡುವ ದುಂಬಿ ದುಷ್ಯಂತನಾಗಿ ರೂಪಾಂತರವಾಯಿತು ಎನ್ನುವ ಕಾಳಿದಾಸನ ಕಥಾನಿರ್ಮಾಣಕ್ಕೆ ತಲೆಬಾಗಲೇಬೇಕು.

ಕಾಳಿದಾಸನ ಶಕುಂತಲಾಗಿಂತ ಮಹಾಭಾರತದ ಶಕುಂತಲಾ ದಿಟ್ಟ ನಾರಿಯಾಗಿ ನಾಯಕಿಯ ಕೋಮಲತೆಗಳಿಗಿಂತಲೂ ಮೇಲಕ್ಕೆದ್ದ ರೀತಿಯನ್ನು ಮುಂದಿನ ಸಂಚಿಕೆಯಲ್ಲಿ ನೋಡೋಣ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ | ರಾಮಕೃಷ್ಣ ಪರಮಹಂಸರ ತಪಸ್ಸಿನ ಸಾಫಲ್ಯದ ಫಲ ಸ್ವಾಮಿ ವಿವೇಕಾನಂದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
Lok sabha election 2024
Lok Sabha Election 20247 mins ago

Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

Narendra Modi
ಕರ್ನಾಟಕ24 mins ago

Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

Chocolate industry
ಪರಿಸರ26 mins ago

Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

ವೈರಲ್ ನ್ಯೂಸ್28 mins ago

Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

Lok Sabha Election 2024 Woman casts her vote with the help of oxygen elderly woman dies after casting her vote
Lok Sabha Election 202443 mins ago

Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

Whatsapp
ದೇಶ60 mins ago

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Lok sabha election 2024
Lok Sabha Election 202460 mins ago

Lok Sabha Election 2024: ಆಪರೇಷನ್‌ಗೂ ಮುನ್ನ ಆಂಬ್ಯುಲೆನ್ಸ್‌ನಲ್ಲಿ ಬಂದು ವೋಟ್‌ ಮಾಡಿದ ಉತ್ಸಾಹಿ ಮತದಾರ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 hour ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Shruti Haasan and boyfriend santanu hazarika break up
ಕಾಲಿವುಡ್1 hour ago

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Kiran Rao Laapataa Ladies to release on OTT
ಬಾಲಿವುಡ್1 hour ago

Kiran Rao: ಆಮೀರ್ ಖಾನ್ ಮಾಜಿ ಪತ್ನಿ ಸಿನಿಮಾ ಒಟಿಟಿಗೆ ಬಂದೇ ಬಿಡ್ತು! ಎಲ್ಲಿ ಸ್ಟ್ರೀಮಿಂಗ್?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 hour ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ8 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ21 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ21 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌