ಧವಳ ಧಾರಿಣಿ ಅಂಕಣ: ಸೃಷ್ಟಿಯ ಹಿಂದಿರುವ ಪೂರ್ಣತೆಯೇ ಅರ್ಧನಾರೀಶ್ವರತ್ವ - Vistara News

ಅಂಕಣ

ಧವಳ ಧಾರಿಣಿ ಅಂಕಣ: ಸೃಷ್ಟಿಯ ಹಿಂದಿರುವ ಪೂರ್ಣತೆಯೇ ಅರ್ಧನಾರೀಶ್ವರತ್ವ

ಶಬ್ದ ಮತ್ತು ಅರ್ಥಗಳು ಜಗತ್ತಿನ ತಂದೆತಾಯಿಗಳಾದ ಪಾರ್ವತೀ ಪರಮೇಶ್ವರರಂತೆ ಇರಬೇಕು ಎನ್ನುವ ಉಪಮೆಯ ಮೂಲಕ ಕಾಳಿದಾಸ ಶಬ್ದಾರ್ಥಕ್ಕೆ ಹೊಸ ಉಪಮೆಯನ್ನು ನೀಡುತ್ತಾನೆ. ಶಿವರಾತ್ರಿಯ ಹಿನ್ನೆಲೆಯಲ್ಲಿ, ಜಗತ್ತಿಗೆ ತಂದೆತಾಯಿಗಳಂತಿರುವ ಪಾರ್ವತೀ ಪರಮೇಶ್ವರರನ್ನೇ ಈ ಶ್ಲೋಕದ ಮೂಲಕ ನಮಿಸೋಣ.

VISTARANEWS.COM


on

shivaratri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

Shivaratri: ಲೋಕದ ಒಳಿತಿಗಾಗಿ ವಿಷವುಂಡು ಅಮೃತ ಹಂಚಿದ ಅಷ್ಟಮೂರ್ತಿ: ಮಹಾದೇವ

dhavala dharini

ವಾಗರ್ಥಾವಿವ ಸಂಪೃಕ್ತೌ ವಾಗರ್ಥಃ ಪ್ರತಿಪತ್ತಯೇ
ಜಗತಃ ಪಿತರೌ ವಂದೇ ಪಾರ್ವತೀಪರಮೇಶ್ವರೌ

(ಶಬ್ದ-ಅರ್ಥಗಳಂತೆ ನಿತ್ಯ ಸಂಬಂಧವುಳ್ಳ, ಜಗತ್ತಿಗೆ ತಂದೆತಾಯಿಗಳಾಗಿರುವ, ಪಾರ್ವತೀ ಮತ್ತು ಪರಮೇಶ್ವರರನ್ನು ಶಬ್ದ ಮತ್ತು ಅರ್ಥಗಳ ಜ್ಞಾನಕ್ಕಾಗಿ ನಮಿಸುವೆನು.)

ಕಾಳಿದಾಸನ ರಘುವಂಶದ ಮಂಗಳಾಚರಣೆಯ ಶ್ಲೋಕ ಇದು. ಶಬ್ದ ಮತ್ತು ಅರ್ಥಗಳು ಜಗತ್ತಿನ ತಂದೆತಾಯಿಗಳಾದ ಪಾರ್ವತೀ ಪರಮೇಶ್ವರರಂತೆ ಇರಬೇಕು ಎನ್ನುವ ಉಪಮೆಯ ಮೂಲಕ ಕಾಳಿದಾಸ ಶಬ್ದಾರ್ಥಕ್ಕೆ ಹೊಸ ಉಪಮೆಯನ್ನು ನೀಡುತ್ತಾನೆ. ಶಿವೆಯನ್ನು ಬಿಟ್ಟು ಶಿವನಿಲ್ಲ, ಅದೇ ರೀತಿ ತಾನು ಬರೆಯುವ ನಾಟಕದ ಪ್ರತೀ ಪದಕ್ಕೂ ಅರ್ಥಗಳಿಗೂ ತನ್ನ ಮನಸ್ಸಿನಲ್ಲಿ ಏನು ಹೇಳಬೇಕೆಂದು ಬಯಸಿದ್ದೆನೋ ಅದು ಯಥಾವತ್ತಾಗಿ ಓದುಗನ ಮನಸಿಗೂ ತಲುಪಲಿ ಎನ್ನುವುದು ಕವಿಯ ಉದ್ದೇಶ.

ಇಲ್ಲಿ ವಿಮರ್ಶಕರು ಕಾಳಿದಾಸ ಈ ಕಾವ್ಯದ ಮೂಲಕ ಕೇವಲ ಶಿವನನ್ನಷ್ಟೇ ಅಲ್ಲದೇ ಚಮತ್ಕಾರಿಕ ಶ್ಲೋಕದ ಮೂಲಕ ವಿಷ್ಣುವನ್ನೂ ಸ್ತುತಿಸುತ್ತಾನೆ ಎಂದು ಅಭಿಪ್ರಾಯಪಡುತ್ತಾರೆ. ಇಲ್ಲಿ ಬರುವ “ಪಿತರೌ” ಎನ್ನುವುದನ್ನು ಏಕ ಶೇಷವೃತ್ತಿ ಸಮಾಸ ಮಾಡಿದರೆ ತಂದೆ ತಾಯಿ ಇಬ್ಬರೂ ಎಂದಾಗುತ್ತದೆ. ಸಾಮಾನ್ಯವಾಗಿ ನಾವು ಅರ್ಥ ಮಾಡಿಕೊಳ್ಳುವುದರ ವಿಧಾನ ಹೀಗೇ ಇರುತ್ತದೆ. ಆದರೆ ಸಂಸ್ಕೃತದ ವಿಮರ್ಶಕರು ಇರುವುದಕ್ಕಿಂತ ಇಲ್ಲದ್ದನ್ನು ಹುಡುಕಿ ತೆಗೆಯುವದರಲ್ಲಿ ನಿಪುಣರು. ಅದರಲ್ಲಿಯೂ ಆ ಕಾಲದಲ್ಲಿ ಶೈವ ಮತ್ತು ವೈಷ್ಣವ ಎನ್ನುವ ಬದ್ಧವೈರಿಗಳ ಕೈಗೆ ಈ ಶ್ಲೋಕ ಸಿಕ್ಕಿರಬೇಕು. ಇಲ್ಲಿ ಇದನ್ನು “ಪಿತೃ” ಎನುವ ಶಬ್ದವನ್ನಷ್ಟೇ ತೆಗೆದುಕೊಂಡರೆ ಅದಕ್ಕೆ ಔ ಸೇರಿದಾಗ ಪಿತರೌ-ಇಬ್ಬರು ಎನ್ನುವ ದ್ವಿವಚನ ಬರುತ್ತದೆ. ಹಾಗಾಗಿ ಇಬ್ಬರು ತಂದೆಯರು ಎನ್ನುವುದು ಹೇಗಾಗುತ್ತದೆ ಎಂದೋರ್ವ ಕಾಲೆಳೆದ. ಅದಕ್ಕೆ ಮತ್ತೊಬ್ಬ- ಆತನೂ ವ್ಯಾಕರಣ ನಿಪುಣನೇ- ತಾನು ಇದಕ್ಕೆ ಪರಿಹಾರ ತೋರುತ್ತೇನೆ ಎಂದು “ಪಾರ್ವತೀಪ ರಮೇಶ್ವರೌ” ಎಂದು ವಿಭಜಿಸಿ “ಈಗ ಸರಿಯಾಯಿತೇ” ಎಂದು ಕೇಳಿದ. ಪಾರ್ವತೀಪ ಎಂದರೆ ಪಾರ್ವತಿಯ ಪತಿ ಎಂದಾಗುತ್ತದೆ. ಹಾಗೆಯೇ ರಮೇಶ್ವರ ಎಂದರೆ ರಮೆಯ ಪತಿ ಅಂದರೆ ವಿಷ್ಣುವಿನ ಪತಿ ಎಂದೂ ಆಗುತ್ತದೆ.

ಬಹುಶಃ ಆ ಕಾಲದಲ್ಲಿ ಶೈವ ಮತ್ತು ವಿಷ್ಣು ಭಕ್ತರ ನಡುವಿನ ಕೋಳಿ ಜಗಳದಲ್ಲಿ ಈ ಶ್ಲೋಕ ತಮ್ಮದು ತಮ್ಮದು ಎಂದು ಎರಡೂ ಕಡೆಯ ಭಕ್ತರೂ ಸಮಾಧಾನ ಮಾಡಿಕೊಂಡಿರಬೇಕು. ಸಂಸ್ಕೃತದ ವಿಶೇಷವೇನೆಂದರೆ ಇಲ್ಲಿ ಶಬ್ದವನ್ನು ವಿಭಜಿಸಿ ನಮಗೆ ಬೇಕಾದಂತೆ ಅರ್ಥ ಮಾಡಿಕೊಳ್ಳುವ ಸೌಲಭ್ಯಗಳಿವೆ. ಹೀಗೆ ಮಾಡಿದರೆ “ಶಬ್ದ-ಅರ್ಥಗಳಂತೆ ನಿತ್ಯ ಸಂಬಂಧವುಳ್ಳ, ಜಗತ್ತಿಗೆ ತಂದೆಗಳಾಗಿರುವ, ಪಾರ್ವತಿಯ ಪತಿ ಪರಮೇಶ್ವರ ಮತ್ತು ರಮಾಪತಿ ವಿಷ್ಣು ಈ ಈರ್ವರನ್ನು ಶಬ್ದ-ಅರ್ಥಗಳ ಜ್ಞಾನಕ್ಕಾಗಿ ನಮಿಸುವೆನು” ಎಂದಾಗುತ್ತದೆ. ಒಟ್ಟಾರೆಯಾಗಿ ಈ ಇಬ್ಬರು ಭಕ್ತರ ಜಗಳದಲ್ಲಿ ಬಡಪಾಯಿ ಪಾರ್ವತಿಯನ್ನು ಅಲಕ್ಷ್ಯ ಮಾಡಿ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ ಎಂದು ಹೊಸ ಟೀಕೆಯನ್ನು ಪ್ರಾರಂಭಿಸಬಹುದೇನೋ.

ಅದೇನೇ ಇರಲಿ ಜಗತ್ತಿಗೆ ತಂದೆತಾಯಿಗಳಂತಿರುವ ಪಾರ್ವತೀ ಪರಮೇಶ್ವರರನ್ನೇ ಈ ಶ್ಲೋಕದ ಮೂಲಕ ನಮಿಸೋಣ. ಕಾಳಿದಾಸನ ಉದ್ದೇಶ ಇದಕ್ಕಿಂತ ಬೇರೆಯಾಗಿ ಇರಲಿಕ್ಕಿಲ್ಲ. ಏಕೆಂದರೆ ಈ ಇಬ್ಬರೂ ಒಂದಾಗಿರುವುದರಿಂದ ಲೋಕಕಂಟಕನಾದ ತಾರಕಾಸುರನ ವಧೆಯಾಯಿತು. ಶಿವನ ತಪಸ್ಸು ಭಂಗವಾಗಿ ಮತ್ತೆ ಗೃಹಸ್ಥನಾದ. ಮನ್ಮಥ ಅನಂಗನಾಗಿ ಮನಸ್ಸಿನಲ್ಲಿ ನೆಲೆಯೂರಿದ. ಆತನನ್ನು ಹೊಂದಲು ರತಿ ಮುಂದೆ ಕೃಷ್ಣಾವತಾರದವರೆಗೆ ಕಾಯುವಂತಾಯಿತು. ಪಾರ್ವತೀ-ಪರಮೇಶ್ವರರು ದಾಂಪತ್ಯದ ಆದರ್ಶ, ಒಬ್ಬರನ್ನು ಬಿಟ್ಟು ಒಬ್ಬರಿಲ್ಲ. ಅವರು ಹೇಗಿದ್ದಾರೆಯೆಂದರೆ ಶಿವನನ್ನು ಅರ್ಧನಾರೀಶ್ವರ ಎನ್ನುತ್ತಾರೆ. ಶಿವಪುರಾಣದಲ್ಲಿ ಇದಕ್ಕೆ ಒಂದು ಕಥೆಯಿದೆ.

Maha Shivaratri 2023

ಬ್ರಹ್ಮ ಸೃಷ್ಟಿಕಾರ್ಯಕ್ಕೆಂದು ನಿಯುಕ್ತನಾದವ. ಆತ ಪ್ರಪಂಚವನ್ನೆಲ್ಲವನ್ನೂ ಸೃಷ್ಟಿಮಾಡಿದ. ಆದರೆ ಆತ ಮಾಡಿದ ಸೃಷ್ಟಿ ಮುಂದೆ ಮತ್ತೆ ಪುನಃ ಸೃಷ್ಟಿ ಮಾಡಲಿಲ್ಲ. ಬ್ರಹ್ಮ ಸೃಷ್ಟಿಯೆನ್ನುವುದು ಅಲ್ಲಿಯೇ ನಿಂತು ಹೋಗುತ್ತಿತ್ತು. ಬ್ರಹ್ಮನಿಗೆ ಸೃಷ್ಟಿಕಾರ್ಯ ನಿಯತಕರ್ಮವಾಗಿತ್ತು. ಅದರಿಂದ ಆನಂದ ಇತ್ತೋ ಇಲ್ಲವೋ ತಿಳಿದಿಲ್ಲ. ಏಕೆಂದರೆ ಬ್ರಹ್ಮವೆನ್ನುವುದೇ ರಸರಹಿತ. ಆನಂದವುಕ್ಕುವುದು ರಸವಿದ್ದಾಗ ಮಾತ್ರ. ಹಾಗಾಗಿ ಸೃಷ್ಟಿ ಎನ್ನುವುದು ನಿರಂತರವಾಗಿ ಆಗಬೇಕು, ಹಾಗೇ ನಿರಂತರವಾಗಿ ಆಗಬೇಕಾದರೆ ಆ ಕ್ರಿಯೆಯಲ್ಲಿ ಆನಂದವಿರಬೇಕು. ಆನಂದವೆನ್ನುವುದು ಒಬ್ಬರೇ ಇದ್ದಾಗ ಆವಿರ್ಭವಿಸುವುದಿಲ್ಲ. ಅದಕ್ಕೆ ಇಬ್ಬರು ಬೇಕು. ಇಬ್ಬರಲ್ಲಿಯೂ ಆನಂದ ಉಕ್ಕಬೇಕಾದರೆ ಇಬ್ಬರಲ್ಲಿಯೂ ಇಲ್ಲದೇ ಇರುವುದನ್ನು ಪರಸ್ಪರ ಹಂಚಿಕೊಳ್ಳಬೇಕು. ಇದು ಪಡೆವ ಮತ್ತು ಕೊಡುವ ಆನಂದ. ತನ್ನ ಸೃಷ್ಟಿಯೆಲ್ಲವೂ ತನ್ನಂತೆ. ಅವುಗಳೂ ಒಂದೊಂದೇ ಇರುವುಂತವುಗಳು. ಒಬ್ಬರಿಗೂ ಮತ್ತೊಬ್ಬರಿಗೂ ಪರಸ್ಪರ ಸಂಬಂಧವಿಲ್ಲ. ಬಹುವಾಗಿದ್ದರೂ ಏಕಾಂತದದಿಂದಲೇ ಇರುತ್ತವೆ. ಹಾಗಾಗಿ ಸೃಷ್ಟಿ ಬೆಳೆಯದೇ ಕೊಳೆಯುತ್ತಿವೆ.

ಬ್ರಹ್ಮ ತಲೆ ಕೆರೆದುಕೊಂಡ. ಏಕೆಂದರೆ ಇರುವಾತ ತಾನು ಒಬ್ಬನೇ. ದುಡಿಮೆಗಾರನೂ ತಾನೊಬ್ಬನೆ. ದುಡಿಮೆಯಲ್ಲಿ ಬರೀ ನೀರಸ. ಸೃಷ್ಟಿಯೆನ್ನುವುದು ನಿರಂತರವಾಗಿ ಆನಂದದಿಂದ ಆಗಬೇಕು. ಆದಿಯಲ್ಲಿ ಒಂಟಿಯಾಗಿ ಜನಿಸಿದ ಬ್ರಹ್ಮ ತಾನೇನು ಮಾಡುವುದು ಎಂದು ತಿಳಿಯದೇ ಕುಳಿತಾಗ “ತಪಃ ತಪಃ” ಎಂದು ಹೇಳಿರುವುದು ಅಶರೀರವಾಣಿ. ಈಗ ಆತ ಅಶರೀರವಾಣಿಗಾಗಿ ಕಾದ. ಸರಿಯಾದ ಲಯದೊಂದಿಗೆ ಚಿಂತಿಸಿ ತಪವನ್ನಾಚರಿಸಿದ. ಆಗ ಆತನಿಗೆ ನಭದಿಂದ ನುಡಿಯೊಂದು “ನಭೋವಾಣಿ ತದಾಭೂದ್ವೈ ಸೃಷ್ಟಿಂ ಮಿಥುನಜಾಂ ಕುರು I” “ಇನ್ನುಮೇಲೆ ನೀನು ಮಿಥುನವನ್ನು (ಸ್ತ್ರೀ-ಪುರುಷ ರೂಪವಾದ) ಸೃಷ್ಟಿ ಮಾಡು” ಎಂದು ಆದೇಶಿಸಿತು. ಅದರಂತೆ ಬ್ರಹ್ಮನು ಸ್ತ್ರೀ ಪುರುಷರನ್ನು ಸೃಷ್ಟಿ ಮಾಡಬೇಕೆಂದು ಸಂಕಲ್ಪಿಸಿದ.

ಬ್ರಹ್ಮನಿಗೆ ಏಕಾಏಕಿ ಮನಸ್ಸಿಗೆ ಅನಿಸಿರುವುದನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ. ಇಲ್ಲದ್ದನ್ನು ಸೃಷ್ಟಿಸಲು ಸಾಧ್ಯವಿಲ್ಲ; ಇರುವುದನ್ನು ನಾಶಮಾಡಲು ಸಾಧ್ಯವಿಲ್ಲ ಎನ್ನುವ ತತ್ತ್ವ ಅವನಿಗೂ ಅನ್ವಯಿಸುತ್ತದೆ. ನಾಸಾದೀಯ ಈ ಕಲ್ಪದಲ್ಲಿನ ಪಾಪ ಪುಣ್ಯಗಳು ಮುಂದಿನ ಕಲ್ಪದಲ್ಲಿ ಬೀಜರೂಪವಾಗಿ ಸೃಷ್ಟಿಕಾರ್ಯಕ್ಕೆ ನೆರವಾಗುತ್ತವೆ ಎಂದು ವಿವರಿಸುತ್ತದೆ. ಬ್ರಹ್ಮನಿಗೆ ಪುರುಷ ಗೊತ್ತು. ಆದರೆ ಸ್ತ್ರೀತ್ವದ ಕುರಿತು ಅರಿವಿರಲಿಲ್ಲ. ಏಕೆಂದರೆ ಅವನಿಗೆ ಸ್ತ್ರೀಸ್ವರೂಪವನ್ನು ಅದುತನಕ ಶಿವ ಪ್ರಕಟಿಸಿರಲಿಲ್ಲ. ಬ್ರಹ್ಮನಿಗೆ ಶಿವನ ಅನುಗ್ರಹವಿಲ್ಲದೇ ಮೈಥುನೀಭಾವಕ್ರಮದಿಂದ (ಸ್ತ್ರೀಪುರುಷರುಗಳ ರೂಪವಾಗಿ) ಸೃಷ್ಟಿಸಲು ಸಾಧ್ಯವಿಲ್ಲವೆಂದು ಅನಿಸಿತು.

ಯಥಾಪ್ರಕಾರ ಬ್ರಹ್ಮ ಮತ್ತೆ ಪರಾಶರಶಕ್ತಿಯೆನಿಸಿದ ಸರ್ವಮಂಗಳೆಯೊಡಗೂಡಿದ ಪರಶಿವನನ್ನು ಪ್ರೀತಿಯಿಂದ ಹೃದಯದಲ್ಲಿ ಧ್ಯಾನಿಸುತ್ತಾ ತಪಸ್ಸನ್ನಾಚರಿಸಿದ. ಭಕ್ತರು ಏನನ್ನು ಕೇಳುತ್ತಾರೆಯೋ ಅದನ್ನು ಅದೇ ರೀತಿ ನೀಡುವುದು ದೇವರುಗಳ ಕ್ರಮ. ಹಾಗಾಗಿ ಶಿವ ಅರ್ಧದೇಹವು ಸ್ತ್ರೀಯಾಗಿಯೂ ಉಳಿದರ್ಧ ದೇಹವು ಪುರುಷನಾಗಿಯೂ ಇರುವ ಆಕೃತಿಯನ್ನು ತಾಳಿ ಬ್ರಹ್ಮನ ಮುಂದೆ ಪ್ರತ್ಯಕ್ಷನಾದ. ಬ್ರಹ್ಮ ತನ್ನ ಸೃಷ್ಟಿಕಾರ್ಯದ ಮಿತಿಯನ್ನು ಹೇಳುತ್ತಾ “ಕೇವಲ ತಾನೋರ್ವನೇ ಸೃಷ್ಟಿ ಮಾಡುವುದಷ್ಟೇ ಆಗಿದೆ. ತನ್ನಿಂದ ಆದ ಸೃಷ್ಟಿ ಮುಂದೆ ಬೆಳೆಯದೇ ಇದ್ದರೆ ಪ್ರಜೋತ್ಪತ್ತಿ ಹೇಗಾಗುವುದು; ಸ್ತ್ರೀ ಪುರುಷರಿಲ್ಲದೇ ಇದ್ದರೆ ಮೈಥುನ ಕ್ರಿಯೆ ನಡೆಯುವುದು ಹೇಗೆ” ಎಂದು ತನ್ನ ಸಮಸ್ಯೆಯನ್ನು ಮಹಾದೇವನ ಎದುರಿಗಿಟ್ಟ.

shivaratri

ಶಂಭು ಎಷ್ಟೆಂದರೂ ಬಲುಬೇಗ ಭಕ್ತರಿಗೆ ಒಲಿಯುವವ. ಅತ ಪ್ರಜಾಭಿವೃದ್ಧಿಗೋಸ್ಕರವೇ ತಪಸ್ಸನ್ನಾಚರಿಸಿದ ಬ್ರಹ್ಮನ ಇಚ್ಛೆಯನ್ನು ಪೂರ್ಣಗೊಳಿಸುವುದಕ್ಕೋಸ್ಕರ ತನ್ನ ದೇಹಾರ್ಧದಿಂದ ಶಿವೆಯನ್ನು ಬೇರೆಯಾಗಿ ಮಾಡಿದ. ಶಿವನ ದೇಹದಿಂದ ಈಚೆಗೆ ಬಂದ ಆ ಜಗನ್ಮಾತೆಯನ್ನು ಕಂಡು ಬ್ರಹ್ಮನು “ಓ ತಾಯೇ ನಿನ್ನ ದೇವದೇವನಾದ ಪತಿಯಿಂದ ಮೊದಲು ನಾನು ಸೃಷ್ಟಿಸಲ್ಪಟ್ಟೆನು. ಸೃಷ್ಟಿಕಾರ್ಯಕ್ಕಾಗಿಯೇ ಆ ದೇವ ನನ್ನನ್ನು ನಿಯಮಿಸಿದ್ದನು. ಮಂಗಲಕರಳೇ, ಈ ದೇವತೆಗಳನ್ನೆಲ್ಲಾ ನಾನು ಮನಸ್ಸಿನಿಂದಲೇ ನಿರ್ಮಿಸಿದೆನು. ಮತ್ತೆ ಮತ್ತೆ ಸೃಷ್ಟಿಸುತ್ತಿದ್ದರೂ ನನ್ನ ಸೃಷ್ಟಿ ಮಾತ್ರ ವೃದ್ಧಿಯನ್ನು ಪಡೆಯುವುದೇ ಇಲ್ಲ. ಹಾಗಾಗಿ ಪರಶಿವನ ನಭೋವಾಣಿಯಂತೆ ಇನ್ನು ಮುಂದೆ ಸ್ತ್ರೀಪುರುಷ ಸಂಯೋಗಜನ್ಯದಿಂದ ಸೃಷ್ಟಿಯನ್ನು ಮಾಡುವ ನನ್ನ ಸಂಕಲ್ಪ ಪೂರೈಸಿ ಕೊಡು. ನನ್ನ ಪ್ರಜೆಗಳೆಲ್ಲರೂ ಆನಂದದಿಂದ ಸಂತಾನ ಪಡೆಯುವಂತಾಗಲಿ. ಪುರುಷರಿಗೆ ಸಹಕಾರಿಯಾಗಲು ನಾರಿಕುಲವನ್ನು ಸೃಷ್ಟಿಸಲು ನನ್ನಿಂದ ಸಾಧ್ಯವಿಲ್ಲ. ಯಾವೆಲ್ಲಾ ಶಕ್ತಿಗಳೂ ನಿನ್ನಂದಲೇ ಉದ್ಭವಗೊಂಡವೋ ಅದೇ ರೀತಿ ಶಕ್ತಿಗಳಿಗೂ ಶಕ್ತಿಯಾದ ನೀನು ಸ್ತ್ರೀ ವರ್ಗವನ್ನು ಸೃಷ್ಟಿಸಲು ನನಗೆ ವರ ನೀಡು” ಎಂದು ಪ್ರಾರ್ಥಿಸಿದನು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಧರ್ಮಪ್ರಜ್ಞೆ ಸದಾ ಜಾಗೃತವಾಗಿರುವ ಶೃಂಗಾರದ ಪ್ರತಿಮೆ

ಬ್ರಹ್ಮನಿಗೆ ಸಕಲ ಚರಾಚರ ಜಗತ್ತಿಗೆ ಕಾರಣ ಪುರುಷ ಶಿವನೆಂದು ತಿಳಿದಿದೆ. ತನ್ನಿಂದಲೇ ಸಂತಾನ ಆಗಲಿ ಎಂದು ಪ್ರಾರ್ಥಿಸುವುದಿಲ್ಲ. ಅದು ಶಿವ ಶಿವೆಯರ ದಾಂಪತ್ಯದಿಂದ ಆಗಬೇಕಾಗಿದೆ. ಹಾಗಾಗಿ ಎರಡನೆಯ ವರದಲ್ಲಿ ಆತ ಸಕಲ ಪ್ರಪಂಚವೆಲ್ಲದರ ಅಭಿವೃದ್ದಿಗೋಸ್ಕರ ಜಗನ್ಮಾತೆ ಶಿವನೊಂದಿಗೆ ಕಲೆಯಬೇಕು. ಅದಕ್ಕಾಗಿ ತನ್ನ ಮಗನಾದ ದಕ್ಷ ಪ್ರಜಾಪತಿಯ ಮಗಳಾಗಿ ಅವತರಿಸುವಂತೆ ಕೇಳಿಕೊಳ್ಳುತ್ತಾನೆ. ಆಗ ಜಗನ್ಮಾತೆ ಅವನಿಗೆ ಸ್ತ್ರೀವರ್ಗವನ್ನು ಸೃಷ್ಟಿಸಲು ಬೇಕಾದ ಶಕ್ತಿಯನ್ನು ಅನುಗ್ರಹಿಸಿದಳು. ತನ್ನಂತೆಯೇ ಇರುವ ಕಾಂತಿಮತಿಯಾದ ಶಕ್ತಿಯೊಬ್ಬಳನ್ನು ತನ್ನ ಹುಬ್ಬುಗಳ ನಡುವೆಯಿಂದ ಸೃಷ್ಟಿಸಿದಳು. ಅವಳನ್ನು ನೋಡಿದ ಮಹೇಶ್ವರನು ಆಕೆಗೆ “ಪರಮೇಷ್ಟಿಯಾದ ಬ್ರಹ್ಮನು ನಿನ್ನನ್ನು ಆರಾಧಿಸುತ್ತಿದ್ದಾನೆ. ಆತನಲ್ಲಿ ಪ್ರಸನ್ನಳಾಗು. ಸಂತೋಷದಿಂದ ಆತನ ಅಭಿಲಾಷೆಯನ್ನು ಈಡೇರಿಸು” ಎನ್ನುತ್ತಾನೆ. ಹೀಗೆ ಶಿವನಿಂದ ಆಜ್ಞಾಪಿತಳಾದ ಆ ನವೀನ ಶಕ್ತಿಯು ದಕ್ಷ ಪ್ರಜಾಪತಿಗೆ ಮಗಳಾಗಿ ಜನಿಸಿದಳು. ಹೀಗೆ ತನ್ನ ಶಕ್ತಿಯನ್ನು ಬ್ರಹ್ಮನಿಗೆ ಅನುಗ್ರಹಿಸಿದ ಶಿವೆ ಶಿವನ ದೇಹದಲ್ಲಿ ಐಕ್ಯಳಾದಳು. ಮುಂದೆ ದಕ್ಷ ಪ್ರಜಾಪತಿಯ ಮಗಳಾದ ದಾಕ್ಷಾಯಿಣಿ ಎನ್ನುವ ಹೆಸರನ್ನು ಪಡೆದ ಭವೆ ಈಶ್ವರನನ್ನೇ ಲಗ್ನವಾದಳು. ಹೀಗೆ ಅಂದಿನಿಂದ ಮೊದಲ್ಗೊಂಡು ಸ್ತ್ರೀಪುರುಷರ ಸಮಾಗಮವೇ ಸೃಷ್ಟಿಗೆ ನಿಮಿತ್ತವಾಯಿತು. ಶಿವನ ಅರ್ಧ ನಾರೀಶ್ವರ ಅವತಾರಕ್ಕೆ ಇರುವ ಹಿನ್ನೆಲೆಗೆ ಇದೇ ಕಾರಣ.

ಶಿವನ ರೂಪವೇ ಮನೋಹರ. ನೀಲಕಂಠನಾದ ಆತ ಚಂದ್ರಕಲೆಯುಳ್ಳವನು. ಸರ್ಪವನ್ನು ಜನಿವಾರವಾಗಿ ಧರಿಸಿದವನು. ತಾನು ಹುಲಿಯ ಚರ್ಮವನ್ನು ಉಟ್ಟುಕೊಂಡರೂ ಜಗತ್ತಿಗೆ ಆದರಣೀಯನು. ಜೀವಿಗಳ ಎಲ್ಲ ರೀತಿಯ ಭಯಗಳನ್ನು ಮುಕ್ತಗೊಳಿಸುವವನು. ಅವನು ಶರ್ವ, ಭವ, ರುದ್ರ, ಉಗ್ರ, ಭೀಮ, ಪಶುಪತಿ, ಈಶಾನ್, ಮಹಾದೇವ ಎನ್ನುವ ಅಷ್ಟಮೂರ್ತಿ ಸ್ವರೂಪನಾಗಿ ಈ ಜಗತ್ತಿನಲ್ಲಿ ನೆಲೆಸಿದ್ದಾನೆ. ಭೂಮಿ, ಜಲ, ಅಗ್ನಿ, ಮರುತ್ತು, ಆಕಾಶ, ಆತ್ಮ, ಸೂರ್ಯ, ಚಂದ್ರರುಗಳಿಗೆ ತನ್ನ ಎಂಟು ರೂಪಗಳಿಂದ ಅಧಿಷ್ಠಾನ (ಆಶ್ರಯ)ನೆನಿಸಿದ್ದಾನೆ. ಚರಾಚರಾತ್ಮಕ ಪ್ರಪಂಚವನ್ನು ವಿಶ್ವರಂಭರಾತ್ಮಕವಾದ ಶರ್ವ ಸ್ವರೂಪವು ಧರಿಸಿವೆ. ಜಗತ್ತಿನ ಜೀವನಕ್ಕೆ ಆಧಾರಭೂತವಾದ ನೀರು ಪರಮಾತ್ಮನಾದ ಶಿವನ ಭವವೆನ್ನುವ ಮೂರ್ತಿ. ಇನ್ನೊಬ್ಬರ ಪ್ರೇರಣೆಯಿಲ್ಲದೇ ತಾನಾಗಿಯೇ ಚಲಿಸುವ, ಎಲ್ಲರ ಹೊರಗೂ ಒಳಗೂ ಇದ್ದು ಎಲ್ಲರನ್ನು ಧರಿಸಿರುವುದೋ ಅದು ಶಿವನ ಮರುತ್ತು (ವಾಯು)ವೆನ್ನುವ ಮೂರ್ತಿ. ಸಮಗ್ರ ಜಗತ್ತನ್ನು ಆವರಿಸಿಕೊಂಡಿರುವ ಆಕಾಶವೂ ಆತನೇ. ದುಷ್ಟರಾದವರನ್ನು ಹುಟ್ಟಡಗಿಸುವ ಭೀಮ ಆತನ ಇನ್ನೊಂದು ಸ್ವರೂಪವು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಶೃಂಗಾರದ ಪ್ರತಿರೂಪ ಮತ್ತು ಧರ್ಮಪ್ರಜ್ಞೆಯ ದಿಟ್ಟ ನಾರಿ ಶಕುಂತಲೆ

ಎಲ್ಲ ಆತ್ಮಗಳಿಗೂ ಅಧಿಷ್ಠಾನವೆನಿಸಿರುವ, ಎಲ್ಲ ದೇಹಗಳಲ್ಲಿಯೂ ಕ್ಷೇತ್ರಜ್ಞನಾಗಿರುವ ಆತ ಪಶುಪ್ರಾಯರಾದ ಜೀವರ ಸಂಸಾರ ಪಾಶವನ್ನು ಕತ್ತರಿಸಿ ಹಾಕುವವನಾಗಿರುವುದರಿಂದ ಆತ ಪಶುಪತಿಯೂ ಹೌದು. ಸೂರ್ಯನಲ್ಲಿರುವ ತೇಜಸ್ಸಿಗೆ ಕಾರಣ ಈತನಲ್ಲಿರುವ ಈಶಾನವೆನ್ನುವ ಮೂರ್ತಿ. ಅಮೃತಮಯವಾದ ಕಿರಣಗಳಿಂದ ಮನಸ್ಸನ್ನು ಮುದಗೊಳಿಸುವ ಪ್ರಭೆಯ ಚಂದ್ರ ಈತನ ಮಹಾದೇವನೆನ್ನುವ ಮೂರ್ತಿಯಾದರೆ ಸಕಲ ದೇಹಗಳಲ್ಲಿಯೂ ವ್ಯಕ್ತನಾಗಿರುವುದು ಈತನ ಪರಾತ್ಪರ ತತ್ತ್ವ. ಶಿವನ ಎಂಟನೆಯ ಸ್ವರೂಪವು. ಹೀಗೆ ಶಿವನ ಈ ಸ್ವರೂಪವು ಪ್ರಪಂಚಕ್ಕೆ ಮಂಗಲವಾಗಿರುವುದು. ಕೆಲವೊಂದು ನಂಬಿಕೆಗಳ ಪ್ರಕಾರ ಈ ದಿನ ಶಿವ ಸಮುದ್ರ ಮಥನದ ಕಾಲಕ್ಕೆ ಉದ್ಭವಿಸಿದ ವಿಷವನ್ನು ಹೀರಿ ಲೋಕವನ್ನು ಉಳಿಸಿದ ಕಾರಣದಿಂದ ಮಹಾಶಿವರಾತ್ರಿಯನ್ನು ಆ ನೆನಪಿಗೆ ಆಚರಿಸುತ್ತಾರೆ ಎಂದಿದೆ. ಆದರೆ ಈ ಕುರಿತು ಬೇರೆ ಬೇರೆ ಪುರಾಣಗಳಲ್ಲಿ ಬೇರೆ ಬೇರೆಯಾದ ಕಥೆಗಳಿವೆ. ಆತನ ಅರ್ಧನಾರೀಶ್ವರತ್ವ ಮಾತ್ರ ಗಂಡುಹೆಣ್ಣು ಸೇರಿ ಆಗುವ ಪೂರ್ಣಾತೆಯನ್ನು ವಿವರಿಸುತ್ತದೆ. ಅಂತೆಯೇ ಆತನನ್ನು ವೇದಗಳು ವರ್ಣಿಸುವುದು ಹೀಗೆ:

ವೃಷಸ್ಕಂಧಸಮಾರೂಢಂ ಉಮಾದೇಹಾರ್ಧ ಧಾರಿಣಮ್ I
ಅಮೃತೇನಾಪ್ಲುತಂ ಶಾಂತಂ ದಿವ್ಯಭೋಗ ಸಮನ್ವಿತಮ್ II

ಪರಮ ದೇವತೆಯಾದ ಉಮಾಳೊಂದಿಗೆ ಅರ್ಧ ಶರೀರವನ್ನು ಹಂಚಿಕೊಂಡಿದ್ದಾನೆ. ತನ್ನ ಭುಜಗಳ ಬಲಿಷ್ಠತೆಯನ್ನು ಸೂಚಿಸುವಂತೆ ಆಸೀನನಾಗಿದ್ದಾನೆ. ಅಮರತ್ವ ಮತ್ತು ಶಾಂತಿಯು ಮೈದಾಳಿದಂತಿದ್ದಾನೆ. ದಿವ್ಯಭೋಗದಿಂದ ಅನುಗ್ರಹೀತನಾಗಿದ್ದಾನೆ.

ಇಷ್ಟೆಲ್ಲಾ ಮಹಿಮಾನ್ವಿತನಾದ ಶಿವ ಒಲಿಯುವುದು ಜನಸಾಮಾನ್ಯರಿಗೆ. ರುದ್ರ ಎನ್ನುವ ಹೆಸರುಳ್ಳವನಾದರೂ ಆತ ಬೆದರಿಕೆಯನ್ನು ಹಾಕುವುವನಲ್ಲ. ಎಲ್ಲರ ರೋದನವನ್ನು ನೀಗಿಸುವವ. ಆತ ಶೀಘ್ರಗತಿಯಲ್ಲಿ ಆಕಾಶ ಮಾರ್ಗದಲ್ಲಿ ಸಾಗುತ್ತಾ ಇರುವಾಗ ಕಾಣಿಸಿಕೊಳ್ಳುವುದು ಸಾಮಾನ್ಯರಲ್ಲಿ ಸಾಮಾನ್ಯರಾದ ಗೋಪಾಲಕರಿಗೆ ಮತ್ತು ನೀರು ತರುವ ನೀರೆಯರಿಗೆ ಎನ್ನುವುದನ್ನು “ಅಸೌ ಯೋsವಸರ್ಪತಿ ನೀಲಗ್ರೀವೋ ವಿಲೋಹಿತಃ I ಉತೈನಂ ಗೋಪಾ ಅದೃಶನ್ನದೃಸನ್ನುದಹಾರ್ಯಃ I” ಎಂದು ರುದ್ರಾಧ್ಯಾಯದಲ್ಲಿ ವರ್ಣಿಸಲಾಗಿದೆ. ಮಂಗಲಕರನಾದ ಉಮಾಪತಿ ನಮ್ಮನ್ನೂ ಹರಸಲಿ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ | ರಾಮಕೃಷ್ಣ ಪರಮಹಂಸರ ತಪಸ್ಸಿನ ಸಾಫಲ್ಯದ ಫಲ ಸ್ವಾಮಿ ವಿವೇಕಾನಂದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading

ಅಂಕಣ

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

ರಾಜಮಾರ್ಗ ಅಂಕಣ: ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತು ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ. ಆ ಹುಡುಗನ ಹೆಸರು ಡಿ.ಗುಕೇಶ್.

VISTARANEWS.COM


on

gukesh dommaraju rajamarga column
Koo

17ರ ಹರೆಯದ ಈ ಹುಡುಗನ ಸಾಧನೆಗೆ ವಿಶ್ವವೇ ತಲೆದೂಗುತ್ತಿದೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಚೆನ್ನೈ ಮೂಲದ ಗುಕೇಶ್ (Gukesh Dommaraju) ವಿಶ್ವ ಚಾಂಪಿಯನ್ (World Champion) ಆಗಲು ಇನ್ನೊಂದೇ ಮೆಟ್ಟಿಲು ಬಾಕಿ ಇದೆ! ಈತನ ವಯಸ್ಸು ಇನ್ನೂ 17 ವರ್ಷ. ಮೌನದ ಮೂಲಕ ಜಗತ್ತನ್ನು ಗೆಲ್ಲಲು ಹೊರಟ ಆತನ ತೀಕ್ಷ್ಣ ಕಣ್ಣುಗಳು ಈಗಲೇ ವಿಶ್ವ ವಿಜಯಿಯಾಗುವ ಕನಸಿನಿಂದ ತುಂಬಿವೆ. ಹಿಂದೊಮ್ಮೆ ವಿಶ್ವ ಚಾಂಪಿಯನ್ ಚೆಸ್ ಆಟಗಾರ (Chess) ಮ್ಯಾಗ್ನಸ್ ಕಾರ್ಲಸನ್ (Magnus Carlson) ಅವರನ್ನು ಇದೇ ಹುಡುಗ ಸೋಲಿಸಿದಾಗ ಇಡೀ ಜಗತ್ತು ನಿಬ್ಬೆರಗಾಗಿ ಆತನನ್ನು ಗಮನಿಸಿತ್ತು.

ಈಗ ಕ್ಯಾಂಡಿಡೇಟ್ಸ್ ಟೂರ್ನಿ ಗೆದ್ದು ನಿಂತಾಗ ಆತ ಇಡೀ ಜಗತ್ತಿನ ಕಣ್ಮಣಿಯಾಗಿ ಮೂಡಿ ಬಂದಿದ್ದಾನೆ. ವಿಶ್ವನಾಥನ್ ಆನಂದ್ ನಂತರ ಆ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯನಾಗಿ ಆತ ಇತಿಹಾಸಕ್ಕೆ ಸೇರಿ ಹೋಗಿದ್ದಾನೆ.

ಆ ಹುಡುಗನ ಹೆಸರು ಡಿ.ಗುಕೇಶ್

ಆತ ಚೆನ್ನೈಯ ಪ್ರತಿಭೆ. ವಿಶ್ವನಾಥನ್ ಆನಂದ್ ಐದು ಬಾರಿ ವಿಶ್ವ ಚಾಂಪಿಯನ್ ಆದ ನಂತರ ನಿವೃತ್ತಿ ಪಡೆದು ಚೆನ್ನೈಯಲ್ಲಿ ವಿಶ್ವನಾಥನ್ ಆನಂದ ಚೆಸ್ ಆಕಾಡೆಮಿ (WACA)ಯನ್ನು ಸ್ಥಾಪನೆ ಮಾಡಿದ್ದರು. ಅದರಿಂದ ಸ್ಫೂರ್ತಿ ಪಡೆದು ಚೆನ್ನೈಯಲ್ಲಿ ಈಗ 60ಕ್ಕಿಂತ ಅಧಿಕ ಚೆಸ್ ಅಕಾಡೆಮಿಗಳು ಇವೆ. ಅದರ ಪರಿಣಾಮವಾಗಿ ಇದೀಗ ಚೆನ್ನೈ ನಗರವು ಭಾರತದ ಚೆಸ್ ರಾಜಧಾನಿ ಆಗಿ ಬೆಳೆದಿದೆ. ಅತೀ ಸಣ್ಣ ವಯಸ್ಸಿನಲ್ಲಿ ಗ್ರಾನ್ ಮಾಸ್ಟರ್ ಆದ ಆರ್ ಪ್ರಜ್ಞಾನಂದ, ಆರ್ ವೈಶಾಲಿ, ಸುಬ್ಬರಾಮನ್ ವಿಜಯಲಕ್ಷ್ಮಿ ಇವರೆಲ್ಲರೂ ಚೆನ್ನೈಯವರು. ಈ ಪಟ್ಟಿಗೆ ಈಗ ಹೊಳೆಯುವ ಪ್ರತಿಭೆ ಸೇರ್ಪಡೆ ಆಗಿದೆ. ಆತ ಡಿ ಗುಕೇಶ್. ಭಾರತದ ಒಟ್ಟು ಚೆಸ್ ಗ್ರಾನ್ ಮಾಸ್ಟರಗಳಲ್ಲಿ 35% ಆಟಗಾರರು ಚೆನ್ನೈಗೆ ಸೇರಿದವರು ಅನ್ನುವಾಗ ಆ ನಗರದ ಬಗ್ಗೆ ಹೆಮ್ಮೆ ಮೂಡುತ್ತದೆ.

ಬಾಲ್ಯದಿಂದಲೇ ಚೆಸ್ ಆಟಕ್ಕೆ ಸಮರ್ಪಣೆ ಆಗಿ ಬೆಳೆದ ಹುಡುಗ ಆತ .ಅದಕ್ಕಾಗಿ ತನ್ನ ಬಾಲ್ಯದ ಆಟ, ಶಾಲೆ, ತುಂಟಾಟ ಎಲ್ಲವನ್ನೂ ಬದಿಗೆ ಇಟ್ಟು ಹೋರಾಟಕ್ಕೆ ಇಳಿದವನು.

ಮಗನಿಗಾಗಿ ಅಪ್ಪ, ಅಮ್ಮ ಮಾಡಿದ ತ್ಯಾಗ

ಅವನ ತಂದೆ ಡಾ.ರಜಿನಿಕಾಂತ್ ನಗರದ ಪ್ರಸಿದ್ಧ ENT ಸರ್ಜನ್. ತಾಯಿ ಡಾ. ಪದ್ಮಕುಮಾರಿ ಕೂಡ ಮೈಕ್ರೋಬಯೊಲಜಿ ತಜ್ಞರು. ಇಬ್ಬರೂ ತಮ್ಮ ಮಗನಿಗಾಗಿ ತಮ್ಮ ಪ್ರಾಕ್ಟೀಸ್ ಮರೆತು ಜಗತ್ತಿನಾದ್ಯಂತ ಓಡಾಡಿದ್ದಾರೆ. ತರಬೇತಿಗಾಗಿ ತುಂಬಾ ದುಡ್ಡು ಖರ್ಚು ಮಾಡಿದ್ದಾರೆ. ತುಂಬಾ ಸಮಯ ಕೊಟ್ಟಿದ್ದಾರೆ. ಮಗನ ಚೆಸ್ ಭವಿಷ್ಯಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದರಾಗಿ ನಿಂತಿದ್ದಾರೆ.

ಹುಡುಗನೂ ನಾಲ್ಕನೇ ತರಗತಿಯಿಂದ ಶಾಲೆಗೇ ಹೋಗದೇ ಚೆಸ್ ಆಟದಲ್ಲಿ ಮೈ ಮರೆತಿದ್ದಾನೆ. ಶಾಲಾ ಶಿಕ್ಷಣಕ್ಕೆ ಸಮಯ ದೊರೆಯದ ಬಗ್ಗೆ ಹೆತ್ತವರಿಗೆ ಬೇಸರ ಇದೆ. ಆದರೆ ಆತನು 12ನೆಯ ವಯಸ್ಸಿಗೇ ಚೆಸ್ ಗ್ರಾನ್ ಮಾಸ್ಟರ್ ಹುದ್ದೆಗೆ ಏರಿದಾಗ ಅವರು ಆನಂದ ಭಾಷ್ಪ ಸುರಿಸಿದ್ದಾರೆ. ಮುಂದೆ ಚೆಸ್ ವಿಶ್ವ ಚಾಂಪಿಯನ್ ಮ್ಯಾಗ್ನೆಸ್ ಕಾರ್ಲಸನ್ ಅವರನ್ನು ಆತನು ಸೋಲಿಸಿದಾಗ ತುಂಬಾ ಖುಷಿ ಪಟ್ಟಿದ್ದಾರೆ. ಮ್ಯಾಗ್ನೆಸನನ್ನು ಸೋಲಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಗುಕೇಶ್ ಅನ್ನುವುದು ಸದ್ಯಕ್ಕೆ ಅಳಿಸಲಾಗದ ದಾಖಲೆ!

ಸಾಂಪ್ರದಾಯಕ ಚೆಸ್ ಕಲಿಕೆ, ಅಹಂಕಾರದಿಂದ ದೂರ!

ಸಾಮಾನ್ಯವಾಗಿ ಇತ್ತೀಚಿನ ಚೆಸ್ ಕಲಿಯುವ ಮಕ್ಕಳು ಕಂಪ್ಯೂಟರ್ ಜೊತೆ ಕೂತು ಚೆಸ್ ಆಡುತ್ತಾರೆ. ಆದರೆ ಗುಕೇಶ್ ಚೆಸ್ ಕಲಿತದ್ದು ಸಾಂಪ್ರದಾಯಿಕ ವಿಧಾನದಲ್ಲಿ. ಗುರುಗಳು ಹೇಳಿದ್ದನ್ನು ನೂರಕ್ಕೆ ನೂರರಷ್ಟು ಪಾಲಿಸುವ ಅವನ ಶ್ರದ್ಧೆ, ಏಕಾಗ್ರತೆ, ಬದ್ಧತೆ ಅವನನ್ನು ಪ್ರತೀ ಹೆಜ್ಜೆಯಲ್ಲಿಯೂ ಗೆಲ್ಲಿಸುತ್ತಿವೆ. ಯಾರಾದರೂ ಸನ್ಮಾನಕ್ಕೆ, ಸಂವಾದಕ್ಕೆ ಕರೆದರೆ ಆತನು ನಯವಾಗಿ ನೋ ಅನ್ನುವುದನ್ನು ಕಲಿತಿದ್ದಾನೆ. ಪ್ರಚಾರದಿಂದ ಆತ ಗಾವುದ ದೂರ ಓಡುತ್ತಾನೆ. ತಾನಾಯಿತು, ತನ್ನ ಅಭ್ಯಾಸವಾಯಿತು ಎಂದು ಚೆಸ್ ಆಟದಲ್ಲಿ ಮುಳುಗಿ ಬಿಡುವ ನಾಚಿಕೆಯ ಹುಡುಗ ಗುಕೇಶ್.

ಪ್ರಶಸ್ತಿ ಗೆದ್ದಾಗ ನಿನಗೆ ಹೇಗನ್ನಿಸಿತು ಹುಡುಗ? ಎಂದು ಕೇಳಿದಾಗ “ನನ್ನ ಗೆಲುವಿಗಿಂತ ದೇಶವನ್ನು ರೆಪ್ರೆಸೆಂಟ್ ಮಾಡುವ ಅವಕಾಶ ದೊರೆತದ್ದು ನನಗೆ ಹೆಚ್ಚು ಖುಷಿ ಕೊಟ್ಟಿದೆ” ಅನ್ನುತ್ತಾನೆ.

ನಿನ್ನ ಭವಿಷ್ಯದ ಗುರಿ ಏನು ಎಂದು ಯಾರೋ ಕೇಳಿದಾಗ “ನನಗೆ ವಿಶಿ ಸರ್ (ವಿಶ್ವನಾಥನ್ ಆನಂದ್) ಅವರು ಏನು ಹೇಳುತ್ತಾರೆಯೋ ಆ ಪ್ರಕಾರ ಮಾಡುತ್ತೇನೆ. ನನಗೆ ಏನು ಬೇಕು ಎಂದು ಅವರಿಗೆ ಚೆನ್ನಾಗಿ ಗೊತ್ತಿದೆ” ಅನ್ನುತ್ತಾನೆ.

ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ತನಗೆ ಈಗ ಒಳ್ಳೆಯ ಶಿಷ್ಯ ದೊರೆತ ಖುಷಿಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

Continue Reading
Advertisement
Narendra Modi
ದೇಶ12 mins ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

khalistan movement
ಪ್ರಮುಖ ಸುದ್ದಿ19 mins ago

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

Minister Dinesh Gundurao latest statement
ಕರ್ನಾಟಕ51 mins ago

Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Namma metro
ಕ್ರೀಡೆ1 hour ago

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

Job Alert
ಉದ್ಯೋಗ1 hour ago

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Viral Video
ವೈರಲ್ ನ್ಯೂಸ್2 hours ago

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

world record
ಕ್ರೀಡೆ2 hours ago

World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

driver lost control and the jeep hit a tree driver died on the spot
ಕ್ರೈಂ2 hours ago

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

2nd PUC Exam 2 KSRTC BMTC bus travel free for students in exam timing
Lok Sabha Election 20243 hours ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುತ್ತೀರಾ? ಹಾಗಿದ್ರೆ ನಿಮ್ಗೆ ಬಸ್‌ ಪ್ರಯಾಣ ಫ್ರೀ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ7 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ7 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ10 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202412 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌