ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು - Vistara News

ಅಂಕಣ

ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ಧವಳ ಧಾರಿಣಿ ಅಂಕಣ: ರಾಮಾಯಣವನ್ನು ರಚಿಸಿದ ಮುನಿಗೆ ತನ್ನ ಕಾವ್ಯದ ಮೇಲೆ ಮೋಹವುಂಟಾಯಿತು. ಮತ್ತೆ ಮತ್ತೆ ಕಾವ್ಯಾನುಸಂಧಾನವನ್ನು ಮಾಡತೊಡಗಿದ. ಕವಿಗೆ ಪ್ರತಿಯೊಂದು ಕೃತಿಯೂ ಮಕ್ಕಳಂತೆ. ಕೃತಿ ಆತನನ್ನು ಮೋಹಪರವಶತೆಗೆ ಈಡುಮಾಡುತ್ತದೆ.

VISTARANEWS.COM


on

valmiki dhavala dharini column
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮಾಯಣದ ಪೂರ್ವರಂಗ ಮತ್ತು ಅಂತರಂಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಕೃತ್ವಾಪಿ ತನ್ಮಹಾಪ್ರಾಜ್ಞಸ್ಸಭವಿಷ್ಯಂ ಸಹೋತ್ತರಮ್
ಚಿನ್ತಯಾಮಾಸ ಕೋನ್ವೇತತ್ಪ್ರಯುಞ್ಜೀಯಾದಿತಿ ಪ್ರಭುಃ ৷৷ಬಾ.4.3৷৷

ಮಹಾ ಪ್ರಾಜ್ಞರು ಮತ್ತು ತ್ರಿಕಾಲವನ್ನು ಬಲ್ಲವರಾದ ವಾಲ್ಮೀಕಿ ಮಹರ್ಷಿಗಳು ಶ್ರೀರಾಮನ ಪಟ್ಟಾಭಿಷೇಕದ ನಂತರ ಭವಿಷ್ಯವನ್ನು ಹೇಳುವ ಉತ್ತರಕಾಂಡ ಸಹಿತವಾದ ರಾಮಾಯಣವನ್ನು ರಚಿಸಿದ ನಂತರ ನನ್ನಿಂದ ಇದರ (ರಾಮಾಯಣದ) ಉಪದೇಶವನ್ನು ಪಡೆದು ಸರಿಯಾಗಿ ಪ್ರಯೋಗಿಸಬಲ್ಲ ಸಮರ್ಥರು ಯಾರಿದ್ದಾರೆ ಎನ್ನುವ ಚಿಂತೆಗೊಳಗಾದರು (ಭಾವಾರ್ಥ).

ಕವಿಗೆ ಕಾವ್ಯವನ್ನು ರಚಿಸುವಾಗ ಹೇಗೆ ಮತ್ತು ಯಾಕೆ ಎನ್ನುವ ಚಿಂತೆ ಉಂಟಾಗುವುದು ಸಹಜದ ಕ್ರಿಯೆ. ಮನಸ್ಸಿನಲ್ಲಿ ಯಾವುದೋ ಅಮೂರ್ತವಾದ ಭಾವವನ್ನು ಇರಿಸಿಕೊಂಡು ಅದನ್ನು ಮೂರ್ತರೂಪಕ್ಕೆ ತರುವಾಗ ಕವಿ ಪ್ರಸವವೇದನೆಯನ್ನು ಅನುಭವಿಸುತ್ತಾನೆ. ಇಲ್ಲಿ ಕಾವ್ಯ ರೂಪುಗೊಳ್ಳುವಿಕೆಯೆನ್ನುವುದನ್ನು ಕೀಟವೊಂದು ಪತಂಗವಾಗಿ ಪರಿವರ್ತಿತವಾಗುವುದಕ್ಕೆ ಹೋಲಿಸಬಹುದು. ಕಾವ್ಯದ ವಸ್ತು ಮನಸ್ಸಿನಲ್ಲಿ ರೂಪುಗೊಳ್ಳುತ್ತಲೇ ಅದು ಹೊರ ಬರುವುದಕ್ಕೆ ಧ್ಯಾನಸ್ಥ ಸ್ಥಿತಿ ಬೇಕಾಗುತ್ತದೆ. ಮನಸ್ಸಿನಲ್ಲಿ ಮಥನ ನಡೆಯುತ್ತಾ ನಂತರದಲ್ಲಿ ಅದು ತನ್ನ ಸುತ್ತಲೂ ಕಟ್ಟಿದ ಗೂಡನ್ನು ತಾನೇ ಒಡೆದುಕೊಂಡು ಮನೋಹರವಾದ ಪಾತರಗಿತ್ತಿಯಾಗಿ ಹಾರತೊಡಗುತ್ತದೆ. ಮೊದಲು ಕವಿ ರಸಭಾವದಲ್ಲಿ ಲೀನವಾಗುತ್ತಾನೆ. ತುರೀಯಾವಸ್ಥೆಗೆ ತಲುಪುವಾಗ ಭಾವದ ಆವರಣದೊಳಗೆ ಸಿಕ್ಕಿಬೀಳುತ್ತಾನೆ. ಹುತ್ತಗಟ್ಟುವ ಕ್ರಿಯೆ ಎಂದರೆ ಇದೆ. ರತ್ನಾಕರನೆನ್ನುವ ಬೇಡ ಹೆಂಡತಿ ಮಕ್ಕಳನ್ನು ಸುಖವಾಗಿರಿಸಲು ಹಿಂಸಾವೃತ್ತಿಯನ್ನೇ ಮೈಗೂಡಿಸಿಕೊಂಡು ಬದುಕಿದವ. ಲೌಕಿಕದ ಸುಖವನ್ನು ಹಂಚಿಕೊಳ್ಳಲು ಬಯಸುವ ಅವರ ಕುಟುಂಬದವರು ಅದರಿಂದ ಉಂಟಾಗಬಹುದಾದಂತಹ ಪಾಪಕ್ಕೆ ಹೊಣೆಗಾರರಾಗಲು ಸಿದ್ಧರಿಲ್ಲದಾಗ ಆಘಾತಗೊಂಡ.

ಬದುಕೆನ್ನುವುದು ಆದರ್ಶವನ್ನು ಹುಡುಕುವುದಕ್ಕಾಗಿಯಲ್ಲ; ಆದರ್ಶವೇ ಬದುಕಾಗಬೇಕೆಂದು ಆಗ ಅನಿಸಿತು. ಅಂಗುಲಿಮಾಲ ಬುದ್ಧನಿಂದ ಪ್ರಭಾವಿತನಾಗಿರುವುದು ಇಂತಹುದೇ ಸಂದರ್ಭದಲ್ಲಿ. “ನಾನೃಷಿಃ ಕುರುತೇ ಕಾವ್ಯಂ” ಕವಿ ಜ್ಞಾನಿಯಷ್ಟೇ ಅಲ್ಲ, ಋಷಿಯೂ ಆಗಿರಬೇಕು. ಈ ಬದಲಾವಣೆಯ ಪರ್ವದಲ್ಲಿ, ತನಗಾಗಿ ಅಲ್ಲ ಲೋಕಕ್ಕಾಗಿ ಬದುಕಿದವ ಜಗತ್ತಿನಲ್ಲಿ ಇರಬಹುದೇ ಎನ್ನುವ ಸಂಶಯದ ಹುತ್ತ ಕಾಡಿದಾಗ ಹುಡುಕಾಟ ಪ್ರಾರಂಭವಾಯಿತು. ಆಗ ದರ್ಶನವಾಗಿರುವುದು ವೇದೋಪನಿಷತ್ತುಗಳಲ್ಲಿ ಅವಿತಿರುವ ಅಮೂರ್ತ ಜ್ಞಾನಭಂಡಾರ. ದರ್ಶನ ಆದರ್ಶವಾಗಬೇಕಾದರೆ ಅದಕ್ಕೊಂದು ಮೂರ್ತರೂಪ ಬೇಕು. ಅದೆಲ್ಲಿ ಎಂದು ಮತ್ತೆ ಮತ್ತೆ ಹಂಬಲಿಸುತ್ತಾ ಎಚ್ಚರವಾಗಿಯೂ ಎಚ್ಚರಗೊಳ್ಳದ ಸ್ಥಿತಿಯಲ್ಲಿ ಇದ್ದ. ಅಕ್ಷರವೆನ್ನುವುದು ಅವಿನಾಶಿ. ಅದು ಒಂದೂ ಅಲ್ಲದ ಬಹುತ್ವವೂ ಅಲ್ಲದ ವ್ಯಾಪಕತ್ವ. ಅದಕ್ಕೆ ಮತ್ತೊಂದು ಅಕ್ಷರ ಸೇರಿದಾಗ ಅದಕ್ಕೊಂದು ಮೂರ್ತರೂಪ ಬರುತ್ತದೆ. ಅದುವೇ ರಾಮ ಎನ್ನುವುದನ್ನು ಸಪ್ತರ್ಷಿಗಳೇ ಹೇಳಿದಾಗ ಮನಸ್ಸಿನೊಳಗೆ ಪಡಿಮೂಡಿತು ಆ ಆಕೃತಿ.

ಕವಿಸೃಷ್ಟಿಯನ್ನು “ನಿಯತಿಕೃತ ನಿಯಮರಹಿತ”ವೆಂದು ಹೇಳುತ್ತಾರೆ. ಲೋಕಾತೀತವಾದ ವಿಷಯಗಳನ್ನು ಅನುಭವಿಸುವಿಕೆಗೆ ದರ್ಶನವೆಂದು ಕರೆಯುತ್ತಾರೆ. ಅದು ಅಲೌಕಿಕ ಆನಂದವನ್ನು ನೀಡುತ್ತದೆ. ರತ್ನಾಕರ, ಪ್ರಾಚೇತಸ, ಋಕ್ಷ ಹೀಗೆ ಹಲವು ಹೆಸರುಳ್ಳ, ಆದರೆ ಹಿಂಸಾರತಿಯಲ್ಲಿ ಮನವಿಟ್ಟವನಿಗೆ ಸ್ವಾರ್ಥವನ್ನು ಬಿಟ್ಟು ಕೇವಲ ಕರ್ತವ್ಯವನ್ನೇ ತನ್ನ ಆಹ್ನಿಕವೆಂದುಕೊಂಡ ವ್ಯಕ್ತಿ ಇರಲು ಸಾಧ್ಯವೇ ಎನ್ನುವ ಸಂಶಯ ಬರುತ್ತಿತ್ತು. ಅನುಭವ ಪಕ್ವವಾಗಬೇಕಾದರೆ ಅದಕ್ಕೆ ನಿದರ್ಶನ ಬೇಕು. ನಾಟ್ಯದ ಭಾಷೆಯಲ್ಲಿ ಇದನ್ನು ಅಮೂರ್ತದಿಂದ ಮೂರ್ತಕ್ಕೆ ಮತ್ತು ಮೂರ್ತದಿಂದ ಅಮೂರ್ತಕ್ಕೆ ಎನ್ನುವ ಅವಸ್ಥೆಗಳಿಗೆ ತಲುಪುವ ಕ್ರಿಯೆ ಎನ್ನುತ್ತಾರೆ. ಸರಳವಾದ ರಂಗದ ಮೇಲೆ ತಾನು ಅನುಭವಿಸಿದ ವಿಷಯಗಳನ್ನು ನಟ ಕಣ್ಣಿಗೆ ಕಟ್ಟುವಂತೆ ಅಭಿನಯಿಸುತ್ತಾನೆ. ರಥ, ದೇವೇಂದ್ರನ ಸಭೆ, ಅರಣ್ಯ ಇವೆಲ್ಲವುಗಳ ಅಭಿನಯ ನಟನ ಸಾಮರ್ಥ್ಯದ ಮೇಲೆ ಪ್ರೇಕ್ಷಕನಿಗೆ ದರ್ಶನವಾಗಿ ಆತ ಪ್ರತ್ಯಕ್ಷವಾಗಿ ಅದನ್ನು ಅನುಭವಿಸಿ ತನ್ನನ್ನು ಸಂಪೂರ್ಣವಾಗಿ ಮರೆಯುತ್ತಾನೆ. ರಸದಲ್ಲಿ ಲೀನವಾಗುತ್ತಾನೆ. ಅಲ್ಲಿಗೆ ಪ್ರೇಕ್ಷಕನಿಗೆ ಮೂರ್ತಸ್ವರೂಪದಲ್ಲಿ ಕಾಣಿಸಿಕೊಂಡು ಆತನನ್ನು ತನ್ನೊಟ್ಟಿಗೆ ಅಮೂರ್ತಲೋಕಕ್ಕೆ ಒಯ್ಯುತ್ತದೆ. (ಯಕ್ಷಗಾನ ಇದಕ್ಕೆ ಸ್ಪಷ್ಟ ಉದಾಹರಣೆ). ಈ ಅನುಭವದ ಸಾಕ್ಷಾತ್ಕಾರಕ್ಕಾಗಿ ಋಷಿ ವಾಲ್ಮೀಕಿ ಹಂಬಲಿಸುತ್ತಿದ್ದ.

ರಾಮಾಯಣದ ಸಂದರ್ಭದಲ್ಲಿ ವಾಲ್ಮೀಕಿ ಮಹರ್ಷಿಗೆ ಮೂರುಸಲ ಚಿಂತೆಯುಂಟಾಗಿತ್ತು. ಬದುಕಬೇಕಾದರೆ ಹಿಂಸೆಯೇ ಮಾರ್ಗವೆಂದು ಅದೇ ಹಾದಿ ಹಿಡಿದು ಇದೀಗ ಆದರ್ಶದ ಬೆನ್ನು ಹತ್ತಿದವನಿಗೆ, ಎಲ್ಲಾ ಕಡೆಯೂ ಇದ್ದು ಎಲ್ಲದರಿಂದಲೂ ಅಂತರವನ್ನು ಕಾಯ್ದುಕೊಂಡಂತಹ ವ್ಯಕ್ತಿ ಈ ಲೋಕದಲ್ಲಿ ಇರಲು ಸಾಧ್ಯವೇ ಎನ್ನುವ ಸಂಶಯ ಬಿಟ್ಟೂ ಬಿಡದೇ ಕಾಡುತ್ತಿತ್ತು. ಒಂದು ವೇಳೆ ಇಲ್ಲದೇ ಹೋದರೆ…??? ಎನ್ನುವ ಚಿಂತೆಗೂ ಇದೇ ಕಾರಣವಾಗಿತ್ತು. ಮುನಿಪುಂಗವ ಆ ಕುರಿತೇ ತಪಸ್ಸು ಮಾಡುತ್ತಿದ್ದ; ಈ ವಿಷಯದ ಕುರಿತು ಸ್ಪಷ್ಟ ನಿದರ್ಶನವನ್ನು ಬಯಸುತ್ತಿದ್ದ. ಸಪ್ತರ್ಷಿಗಳೇನೋ ಮಹಾಮಹಿಮನ ವಿಷಯಗಳ ಕುರಿತು ರಾಮ ಎನ್ನುವ ಹೆಸರನ್ನು ಹೇಳಿದ್ದಾರೆ. ಲೋಕದಲ್ಲಿ ಸಂಭಾವಿತನಾಗಿ ಬದುಕುವದೆನ್ನುವದು ಒಂದು ಆದರ್ಶ ಸ್ಥಿತಿ (Utopian State). ಆದರ್ಶವೆನ್ನುವುದು ವಾಸ್ತವವೂ ಆಗಬಹುದೇ ಎನ್ನುವ ಚಿಂತೆ ನಿರಂತರವಾಗಿ ಕಾಡುತ್ತಿರುವಾಗಲೇ, ಇದಕ್ಕೆ ಉತ್ತರಿಸಬಲ್ಲವರು ಅಧ್ಯಯನ ಅಧ್ಯಾಪನಗಳಲ್ಲಿ ನಿರತರಾದ ತಪಸ್ವಿಗಳಾಗಿರಬೇಕು; ಏಕಾಗ್ರತೆಯನ್ನು ವಾಲ್ಮೀಕಿಗಿಂತಲೂ ಚನ್ನಾಗಿ ಸಾಧಿಸಿದವರಾಗಿರಬೇಕು. ಮಾತು ಬಲ್ಲವರಲ್ಲಿ ಶ್ರೇಷ್ಠರಾಗಿರಬೇಕು. ಅಂಥವರು ಯಾರಿದ್ದಾರೆ ಎನ್ನುವ ಪ್ರಶ್ನೆ ನಿರಂತರವಾಗಿ ವಾಲ್ಮೀಕಿಯನ್ನು ಕಾಡುತ್ತಿತ್ತು.

ಹೀಗಿರುತ್ತಿರುವಾಗ ಅವರಲ್ಲಿಗೆ ನಾರದ ಬರುತ್ತಾನೆ. ಮಹರ್ಷಿಯ ಪ್ರಶ್ನೆಗೆ ಉತ್ತರಿಸಲು ಇವರಿಗಿಂತಲೂ ಬೇರೆ ಯಾರು ಸಮರ್ಥರಿಲ್ಲ ಎಂದುಕೊಳ್ಳುತ್ತಾನೆ. (ತಪಸ್ಸ್ವಾಧ್ಯಾಯನಿರತಂ ತಪಸ್ವೀ ವಾಗ್ವಿದಾಂ ವರಮ್). ನೇರವಾಗಿ ಅವರಲ್ಲಿಯೇ ತನ್ನನ್ನು ಕಾಡುತ್ತಿರುವ ಚಿಂತೆಯನ್ನು ಹೇಳುತ್ತಾ “ಲೋಕದಲ್ಲಿ ಯಾವ ದೋಷವೂ ಇಲ್ಲದ ವ್ಯಕ್ತಿ ಎಂದರೆ ಆತನಲ್ಲಿ ಈ ಕೆಳಗಿನ ಹದಿನಾರು ಗುಣಗಳಿರಬೇಕು. (ಅವು ಕಲ್ಯಾಣವಂತ, ವೀರ್ಯವಂತ, ದರ್ಮಜ್ಞ, ಕೃತಜ್ಞ, ಸತ್ಯಭಾಷಿ, ದೃಢವ್ರತನಿಷ್ಠ, ಕುಲಾಚಾರಗಳನ್ನು ತಪ್ಪದೇ ನಡೆಸುಕೊಂಡು ಬರುವಾತ, ಭೂತದಯೆ, ಚತುರ್ದಶವಿದ್ಯೆಗಳಲ್ಲಿಯೂ ಪಾರಂಗತ, ಸರ್ವಕಾರ್ಯ ದುರಂಧರ, ಮೋಹಕರೂಪಿನವ, ಧೈರ್ಯವಂತ, ಕೋಪವನ್ನು ಗೆದ್ದವ, ಎಣೆಯಿಲ್ಲದ ಕಾಂತಿಯುಳ್ಳವ, ಅನಸೂಯ, ದೇವತೆಗಳಿಗೂ ಅಂಜದ ಪರಾಕ್ರಮಿ) ಇಂಥಹ ಮಾನವನು “ಕೋನ್ವಸ್ಮಿನ್ ಸಾಂಪ್ರತಂ ಲೋಕೇ- ಈ ಕಾಲದಲ್ಲಿ” ಇದ್ದಾನೆಯೇ; ಇದ್ದರೆ ಆತನ ಕುರಿತು ವಿವರಿಸಿ ಎಂದು ಕೇಳಿಕೊಳ್ಳುತ್ತಾರೆ. ಆಗ ನಾರದರು ಇಕ್ಷಾಕುವಂಶದಲ್ಲಿ ಜನಿಸಿದ ರಾಮ ರಾಮ ಎಂದು ಜನಗಳು ಕರೆಯುವ ನರಪುಂಗವನಿದ್ದಾನೆ ಎಂದು ಆತನ ಕುರಿತು ವಿವರಿಸುತ್ತಾರೆ.

ರಾಮಾಯಣದ ಕಥೆಯನ್ನು ಕೇಳಿದ ವಾಲ್ಮೀಕಿಗೆ ಮನಸ್ಸು ಪ್ರಪುಲ್ಲವಾಗಿದೆ. ಹಗುರವಾಗಿದೆ. ಪ್ರಪಂಚದಲ್ಲಿ ಎಲ್ಲವೂ ಸುಂದರವಾಗಿ ಕಾಣಿಸುತ್ತಿದೆ. ಹೀಗೆ ತಮಸಾ ನದಿಯಲ್ಲಿ ಸ್ನಾನ ಮಾಡಿ ಬರುವಾಗ ಬೇಡನೊಬ್ಬ ಮಿಥುನ ಸ್ಥಿತಿಯಲ್ಲಿದ್ದ ಜೋಡಿ ಕ್ರೌಂಚಪಕ್ಷಿಗೆ ಬಾಣ ಬಿಟ್ಟು ಗಂಡು ಹಕ್ಕಿಯನ್ನು ಕೊಂದುಬಿಟ್ಟ. ಹೆಣ್ಣು ಹಕ್ಕಿ ಅದನ್ನು ನೋಡಿ ಗೋಳಾಡತೊಡಗಿತು. ಅದರ ಸ್ಥಿತಿಯನ್ನು ನೋಡಿದ ಮುನಿಯ ಮನಸ್ಸಿನಲ್ಲಿ ಕರುಣಾರಸವು ಉಕ್ಕೇರಿತು. ಬೇಡನೆಡೆಗೆ ನೋಡಿ ಹೇಳಿದ ಮಾತು-

sage and poet valmiki
king dasharatha

ಮಾ ನಿಷಾದ ಪ್ರತಿಷ್ಠಾಂ ತ್ವಮಗಮಶ್ಶಾಶ್ವತೀಸ್ಸಮಾಃ
ಯತ್ಕ್ರೌಞ್ಚಮಿಥುನಾದೇಕಮವಧೀ: ಕಾಮಮೋಹಿತಮ್ ৷৷ಬಾ. 15৷৷

“ಎಲೈ ನಿಷಾದನೇ! ಮಿಥುನದಲ್ಲಿ ನಿರತವಾಗಿದ್ದ ಕ್ರೌಂಚ ಪಕ್ಷಿಗಳಲ್ಲಿ ಒಂದನ್ನು ಹೊಡೆದು ಕೊಂದಿರುವುದರಿಂದ ನೀನು ಬಹಳ ಕಾಲದವರೆಗೆ ಸ್ಥಿರವಾಗಿ ಬದುಕಲಾರೆ”

ಒಂದು ಕಾಲದಲ್ಲಿ ಆ ಬೇಡನಂತೆ ತಾನೂ ಹಿಂಸಾವೃತ್ತಿಯನ್ನು ಅನುಸರಿಸುತ್ತಿದ್ದ ವಾಲ್ಮೀಕಿ ಈಗ ಅದನ್ನು ತ್ಯಜಿಸಿದ್ದಾರೆ. ಬೇಡನಿಗೆ ಶಾಪವನ್ನು ಕೊಡುವಾಗಲೂ ಸಾಯಿ ಎಂದು ಹೇಳುವದಕ್ಕಿಂತ “ಬಹಳ ಕಾಲ ಸ್ಥಿರವಾಗಿ ಬದುಕಲಾರೆ” ಎನ್ನುವ ಮಾತನ್ನು ಆಡುತ್ತಾನೆ. “ಸಾಯಿ ಎನ್ನುವುದಕ್ಕಿಂತ ಬದುಕಲಾರೆ” ಎನ್ನುವ ಮಾತುಗಳು ಬಹು ಅರ್ಥಪೂರ್ಣ! ರಾಮಾಯಣವನ್ನು ಕೇಳಿದ ಪ್ರಭಾವದಿಂದ ಹಿಂಸೆಯ ಲವಲೇಶವೂ ಮನಸ್ಸಿನಲ್ಲಿ ಇಲ್ಲ. ಮರುಕ್ಷಣದಲ್ಲಿಯೇ ಬೇಡನ ವೃತ್ತಿಯೇ ಬೇಟೆಯಾಡುವುದು, ತನ್ನ ಶಾಪ ಅಗತ್ಯವಿತ್ತೇ ಎನ್ನುವ ಇನ್ನೊಂದು ಚಿಂತೆ ಅವರನ್ನು ಕಾಡಿತು. ಹೆಣ್ಣು ಕ್ರೌಂಚದ ಶೋಕ ವಾಲ್ಮೀಕಿಯ ಮನವನ್ನು ಕಲಕಿತ್ತು. ಅದಕ್ಕೆ ಪ್ರತಿಯಾಗಿ “ಬಹಳ ಕಾಲ ಬದುಕಲಾರೆ” ಎನ್ನುವುದು ಉತ್ತರವಾಗಲಾರದು. ತನ್ನ ಶಾಪ ನಿಜವಾದರೆ ಬೇಡನ ಹೆಂಡತಿಗೆ ದುಃಖವಾಗದೇ ಇದ್ದೀತೆ ಎನ್ನುವ ಮನೋಭಾವವೂ ಇದ್ದಿರಬಹುದಾಗಿದೆ. ಹಿಂಸೆಗೆ ಇನ್ನೊಂದು ಹಿಂಸೆ ಉತ್ತರವಾಗಲಾರದು. ಹಾಗಾಗಿ ಚಿಂತೆಗೆ ಪರಿಹಾರವೆಂದರೆ ಶೋಕ ಶ್ಲೋಕವಾಗುವುದು. ಶೋಕವೆಂದರೆ ದುಃಖ; ಶೋಕಕ್ಕೆ ಕಾರಣ ವಿಯೋಗ. ರಾಮಾಯಣವೂ ವಿಯೋಗದ ಕಥೆಯೇ. ಇಲ್ಲಿ ತಂದೆಗೆ ಮಕ್ಕಳ ವಿಯೋಗ, ಅಣ್ಣನಿಗೆ ತಮ್ಮನ ವಿಯೋಗ, ಗಂಡನಿಗೆ ಹೆಂಡತಿಯ ವಿಯೋಗ. ಕ್ರೌಂಚವೆಂದರೆ ಕುಟಿಲ ಸ್ವರೂಪರಾದ ರಾಕ್ಷಸರು ಎನ್ನುವ ಅರ್ಥವೂ ಇದೆ. ಸೀತೆಯನ್ನು ರಾಮನಿಂದ ಅಗಲಿಸಿದ ಕಾರಣಕ್ಕೆ ಮಂಡೋದರಿಗೂ ಇಲ್ಲಿ ರಾವಣನ ವಿಯೋಗವನ್ನು ಅನುಭವಿಸಬೇಕಾಯಿತು ಎನ್ನುವದೂ ಆಗುತ್ತದೆ. ಕಾಮದಿಂದ ಸುಗ್ರೀವನ ಹೆಂಡತಿಯನ್ನು ಅಪಹರಿಸಿದ ವಾಲಿಯನ್ನು ರಾಮ ಕೊಂದು ಸುಗ್ರೀವನಿಗೆ ಆತನ ಪತ್ನಿ ಪುನಃ ಸಿಗುವಂತೆ ಮಾಡಿದ್ದಾನೆ.

ಕರುಣರಸದ ಸ್ಥಾಯಿಭಾವವೇ ಶೋಕ. ಈ ಸ್ಥಾಯಿಭಾವವನ್ನು ಶ್ಲೋಕವಾಗಿಸುವುದು ಎಂದರೆ ಸ್ತೋತ್ರರೂಪವಾದ ಪದ್ಯವನ್ನಾಗಿಸುವುದು. ಸ್ತೋತ್ರವೆಂದರೆ ಸದ್ಗುಣಗಳನ್ನು (ದೇವರನ್ನು) ಹೊಗಳುವುದು. ನಿಷಾದ ಎಂದರೆ ಪೀಡಿಸುವವ ಎನ್ನುವ ಅರ್ಥವೂ ಆಗುತ್ತದೆ. ಅಲ್ಪೀಭೂತವಾದ ಮಿಥುನದಿಂದ ಎಂದರೆ ರಾಜ್ಯಭ್ರಂಶವನವಾಸಾದಿ ಕ್ಲೇಷಗಳಿಂದ ಕೃಶರಾದ ಸೀತಾರಾಮರೆನ್ನುವವರಲ್ಲಿ ಒಬ್ಬಳಾದ ಸೀತೆಯನ್ನು ಅವಧೀಃ- ಅಗಲಿಸಿದ ಕಾರಣದಿಂದಾಗಿ ಬ್ರಹ್ಮವರದಿಂದ ಲಭಿಸಿದ ರಾಜ್ಯವನ್ನು ರಾವಣ ಇನ್ನು ಬಹಳಕಾಲದ ವರೆಗೆ ಅನುಭವಿಸಲಾರೆ. ತ್ರಿಲೋಕಕಂಟಕನಾದ ರಾವಣನನ್ನು ಶಪಿಸಿರುವುದರಿಂದ ಸಕಲ ಲೋಕಕ್ಕೂ ಸನ್ಮಂಗಳವುಂಟಾಯಿತು ಎನ್ನುವುದಾಗಿಯೂ ಅರ್ಥವನ್ನು ಮಾಡಬಹುದು. ಶೋಕರೂಪವಾಗಿ ಹೊರಬಂದ ಮಾತು ಅನುಷ್ಟುಪ್ ಛಂದಸ್ಸಿನಲ್ಲಿತ್ತು. ಅದೇ ಶ್ಲೋಕವಾಗಿ ಮಂಗಳಕರ ನಾಂದೀ ಪದ್ಯವಾಯಿತು ಎನ್ನುವ ಸಮಾಧಾನವೂ ಇದೀಗ ಮುನಿಯಲ್ಲಿ ಮೂಡಿತು. ತನ್ನ ಶಿಷ್ಯ ಭಾರದ್ವಾಜನಿಗೆ “ತನ್ನ ಮಾತು ಕೇವಲ ಪದಜಾಲವಾಗದಿರಲಿ. ಪ್ರಾಸಬದ್ಧವಾಗಿ ಬಂದಿರುವ ಇದು ತಂತಿಯ ವಾದ್ಯದೊಡನೆ ಹಾಡುವ ಲಯಬದ್ಧಶ್ಲೋಕವಾಗಿ ಪರಿಣಮಿಸಲಿ” ಎನ್ನುತ್ತಾನೆ. ಅದನ್ನು ಭಾರದ್ವಾಜ ಕಂಠಪಾಠ ಮಾಡುತ್ತಾನೆ.

king dasharatha
king dasharatha

ಇತ್ತ ಆಶ್ರಮಕ್ಕೆ ಬಂದರೆ, ಕವಿಯನ್ನು ನೋಡಲು ಬ್ರಹ್ಮನೇ ಬಂದಿರುತ್ತಾನೆ. ರಾಮಾಯಣದ ಕಾವ್ಯವನ್ನು ರಚಿಸು ಎಂದು ವರ ನೀಡುತ್ತಾನೆ. ವರದ ಫಲದಿಂದ ರಾಮಾಯಣದಲ್ಲಿ ನಡೆದ ವೃತ್ತಾಂತಗಳು, ಎಲ್ಲಾ ಪಾತ್ರಗಳ ರಹಸ್ಯಗಳು ವಾಲ್ಮೀಕಿಗೆ ಅಂಗೈಯಲ್ಲಿನ ನೆಲ್ಲಿಕಾಯಿಯಂತೆ ತೋರುತ್ತದೆ. ಎಲ್ಲಿ ಹೃದಯದ ಕಣ್ಣು ತೆರೆಯುತ್ತದೆಯೋ ಅಲ್ಲಿ ಕಾವ್ಯದ ರಸಸೃಷ್ಟಿಯಾಗುತ್ತದೆ. ಲೋಕದಲ್ಲಿ ಸಾಮಾನ್ಯವಾಗಿ ಕಂಡ ಸಂಗತಿಗಳು ಕವಿಗೆ ವಿಶೇಷ ರೂಪವಾಗಿ ಗೋಚರವಾಗುವುದು. ತೀ. ನಂ. ಶ್ರೀಕಂಠಯ್ಯನವರು ಕಾವ್ಯ ಹುಟ್ಟುವ ಹೊತ್ತನ್ನು “ತನ್ನೊಳಗೆ ತುಂಬಿರುವ ರಸಕ್ಕೆ ಅನುಗುಣವಾದ ಶಬ್ದಾರ್ಥಗಳನ್ನು ಕುರಿತು ಚಿಂತನೆಯಲ್ಲಿ ಕವಿಯ ಚೇತಸ್ಸು ನಿಶ್ಚಲವಾಗಿರುವಾಗ, ವಸ್ತುವಿನ ನಿಜಸ್ವರೂಪವನ್ನು ಮುಟ್ಟಿದ ಪ್ರಜ್ಞೆ ಅವನಲ್ಲಿ ಥಟ್ಟನೆ ಹೊಮ್ಮುತ್ತದೆ. ಇದೇ ಕವಿಯ ಪ್ರತಿಭೆ, ಪರಮೇಶ್ವರನ ಮೂರನೆಯ ಕಣ್ಣೆಂದೇ ಕೀರ್ತಿಸುತ್ತಾರೆ. ಇದರ ಮೂಲಕ ತ್ರಿಕಾಲದಲ್ಲಿ ನಡೆಯುವ ಸಂಗತಿಗಳನ್ನು ಸಾಕ್ಷಾತ್ತಾಗಿ ಕಾಣಬಲ್ಲನು(ಭಾ. ಕಾ. ಮೀ-10)” ಎಂದು ವಿವರಿಸುತ್ತಾರೆ. ವಾಲ್ಮೀಕಿ ಕುಳಿತಲ್ಲಿಯೇ ರಾಮಾಯಣದ ಎಲ್ಲಾ ವಿವರಗಳನ್ನು ಕಾಣುವದು ಈ ವಿಶೇಷದೃಷ್ಟಿಯಿಂದಲೇ. ಅದನ್ನೇ ಬ್ರಹ್ಮ ಆತನಿಗೆ ಕೊಟ್ಟ ವರ ಎಂದು ಅಲಂಕಾರಿಕವಾಗಿ ಹೇಳಲಾಗಿದೆ. ಸಕಲ ಚರಾಚರಗಳ ಸೃಷ್ಟಿಗೆ ಕಾರಣ ಬ್ರಹ್ಮ; ಆತನೇ ತನಗಿರುವ ಅಪೂರ್ವ ಕಾವ್ಯಸೃಷ್ಟಿಯನ್ನು ವಾಲ್ಮೀಕಿಗೆ ಅನುಗ್ರಹಿಸಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕದ ಕನಸಿನ ವಿಹಾರ

ರಾಮಾಯಣವನ್ನು ರಚಿಸಿದ ಮುನಿಗೆ ತನ್ನ ಕಾವ್ಯದ ಮೇಲೆ ಮೋಹವುಂಟಾಯಿತು. ಮತ್ತೆ ಮತ್ತೆ ಕಾವ್ಯಾನುಸಂಧಾನವನ್ನು ಮಾಡತೊಡಗಿದ. ಕವಿಗೆ ಪ್ರತಿಯೊಂದು ಕೃತಿಯೂ ಮಕ್ಕಳಂತೆ. ಕೃತಿ ಆತನನ್ನು ಮೋಹಪರವಶತೆಗೆ ಈಡುಮಾಡುತ್ತದೆ. ವಾಲ್ಮೀಕಿಗೆ ತನ್ನ ಕಾವ್ಯ ಅದ್ವಿತೀಯವಾದುದೆನ್ನುವ ವಿಶ್ವಾಸ ಬಂದಿದೆ. ಈ ಮೊದಲು ಹದಿನಾರು ಗುಣಗಳುಳ್ಳ ಮನುಷ್ಯ ಇದ್ದಿರಬಹುದೇ ಎನ್ನುವ ಚಿಂತೆ ಅವರನ್ನು ಕಾಡಿತ್ತು. ನಂತರ ಹೆಣ್ಣು ಕ್ರೌಂಚದ ವಿರಹದ ಅಳುವನ್ನು ನೋಡಿ “ಹೆಚ್ಚು ಕಾಲ ಬದುಕಲಾರೆ” ಎನ್ನುವ ಶಾಪವನ್ನು ಕೊಟ್ಟ ಕಾರಣ ಚಿಂತೆ ಕಾಡಿತ್ತು. “ಸೃಷ್ಟಿ ಎನ್ನುವ ಶಬ್ಧದಲ್ಲಿ ಸಾವು ಎನ್ನುವುದು ಇರುವುದಿಲ್ಲ. ಸಾವಿನಲ್ಲಿ ಸೃಷ್ಟಿ ಇರುವುದಿಲ್ಲ, ಇವೆರಡೂ ಯಾವತ್ತಿಗೂ ಒಟ್ಟಿಗೆ ಇರಲಾರದು” ಬ್ರಹ್ಮನಿಗೆ ಸೃಷ್ಟಿಸುವುದು ತಿಳಿದಿದೆಯೇ ಹೊರತೂ ನಾಶದ ಅರಿವಿಲ್ಲ. ವಾಲ್ಮೀಕಿಗೆ ಈ ಕಾರಣಕ್ಕಾಗಿ ಬದುಕಲಾರೆ ಎನ್ನುವ ಮಾತು ಕವಿಸೃಷ್ಟಿಗೆ ವಿರುದ್ಧವಾಗಿ ತೋರಿದೆ. ಹಾಗಾಗಿ ಎರಡನೇ ಸಾರಿ ಚಿಂತೆಗೊಳಗಾದ. ಅದಕ್ಕೆ ಬ್ರಹ್ಮನೇ ಬಂದು ಸಮಾಧಾನ ಹೇಳಿ ನಂತರದಲ್ಲಿ ಮಹಾಕಾವ್ಯವನ್ನು ರಚಿಸಿದ ಬಳಿಕ “ಚಿನ್ತಯಾಮಾಸ ಕೋನ್ವೇತತ್ಪ್ರಯುಞ್ಜೀಯಾದಿತಿ ಪ್ರಭುಃ” ಇಂತಹ ಕಾವ್ಯವನ್ನು ಉಪದೇಶ ಪಡೆಯಬಲ್ಲ ಸಮರ್ಥರು ಯಾರಿದ್ದಾರೆ ಎನ್ನುವ ಚಿಂತೆ ಮೂರನೇ ಬಾರಿಗೆ ಉದ್ಭವಿಸಿತು. ಹೀಗೆ ಚಿಂತಿಸುತ್ತಾ ಕಣ್ಮುಚ್ಚಿ ಕುಳಿತಿರುವ ಹೊತ್ತಿನಲ್ಲಿ ಅವರ ಕಾಲನ್ನು ಯಾರೋ ಹಿಡಿದುಕೊಂಡಿದ್ದು ಗಮನಕ್ಕೆ ಬಂತು. ಯಾರೆಂದು ಕಣ್ಣುತೆರೆದು ನೋಡಿದರೆ ಬಾಲಕರಾದ ಲವ-ಕುಶರು.

ಇಲ್ಲಿ ಎರಡು ಸಂಗತಿಗಳನ್ನು ವಾಲ್ಮೀಕಿ ಹೇಳುವುದು ಬಲು ಮುಖ್ಯ. ಮೊದಲನೆಯದು ಅವರು ಮುನಿವೇಷಧಾರಿಗಳಾಗಿದ್ದರು, ಅವರು ಆಶ್ರಮವಾಸಿಗಳಾಗಿರಲಿಲ್ಲವೆಂದು ಮುನಿವೇಷಧಾರಿಗಳಾಗಿದ್ದರು ಎನ್ನುವುದರ ಮೂಲಕ ಸೂಚಿಸುತ್ತಾರೆ, ಎರಡನೆಯದು ಆ ಬಾಲಕರಿಗೆ ಹಾಡುವುದಕ್ಕೆ ಯೋಗ್ಯವಾದ ಶಾರಿರ ಸಂಪತ್ತು – “ಭ್ರಾತರೌ ಸ್ವರಸಮ್ಪನ್ನೌ ದದರ್ಶಾಶ್ರಮವಾಸಿನೌ” ಇತ್ತು ಎನ್ನುವುದು. ರಾಮಾಯಣವನ್ನು ವಾಲ್ಮೀಕಿ ರಚಿಸುವಾಗಲೇ ತನ್ನ ಕಾವ್ಯ ಹಾಡುವುದಕ್ಕೆ ಯೋಗ್ಯವಾಗಿ ಇರಬೇಕೆನ್ನುವುದನ್ನು ಬಯಸಿದ್ದರು. ರಾಮಾಯಣದಲ್ಲಿ ಅಧ್ಯಯನ ಮಾಧುರ್ಯವೂ ಇದೆ, ಗಾನ ಮಾಧುರ್ಯವೂ ಇದೆ. ನವರಸಭರಿತವಾಗಿದೆ ಎನ್ನುವುದು ಬಲು ಮುಖ್ಯ. ಕವಿಯ ಮನಸ್ಸನ್ನು ಅರಿತು ಹಾಡುವ ಯೋಗ್ಯರಾದ ಗಾಯಕರು ಸಿಕ್ಕಿದರೆಂದು ಮುನಿಗೆ ಸಂತೋಷವಾಯಿತು. ಶಿಷ್ಯರೂ ಅಷ್ಟೇ, ರಾಮಾಯಣವನ್ನು ಆಮೂಲಾಗ್ರವಾಗಿ ಕಲಿತು ಕವಿ ವಾಲ್ಮೀಕಿಯ ಮನಸ್ಸು ತೃಪ್ತಿಯಾಗುವಂತೆ ಮಹರ್ಷಿಗಳ ಸಭೆಯಲ್ಲಿ ಹಾಡಿ ತೋರಿಸಿದರು.

ಇಲ್ಲಿಗೆ ಮುನಿಯನ್ನು ಕಾಡಿದ ಮೂರನೆಯ ಚಿಂತೆ ಯೋಗ್ಯರಾದ ಗಾಯಕರು ಸಿಕ್ಕಿದರು ಎನ್ನುವ ಸಂತೋಷದಲ್ಲಿ ಪರಿವರ್ತಿತವಾಯಿತು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು.

VISTARANEWS.COM


on

Michel Phelps ರಾಜಮಾರ್ಗ ಅಂಕಣ
Koo

ಜಗತ್ತಿನ ಮಹೋನ್ನತ ಸ್ವಿಮ್ಮರ್ ನೀರಿಗೆ ಇಳಿದರೆ ದಾಖಲೆ ಮತ್ತು ದಾಖಲೆಗಳೇ ನಿರ್ಮಾಣ ಆಗುತ್ತಿದ್ದವು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಒಲಿಂಪಿಕ್ಸ್ (Olympics) ವೇದಿಕೆಗಳಲ್ಲಿ ಒಂದೋ ಅಥವಾ ಎರಡೋ ಪದಕಗಳನ್ನು (medals) ಗೆಲ್ಲುವ ಕನಸು ಕಂಡವರು, ಅದನ್ನು ಸಾಧನೆ ಮಾಡಿದವರು ಲೆಜೆಂಡ್ ಅಂತ ಅನ್ನಿಸಿಕೊಳ್ಳುತ್ತಾರೆ. ಆದರೆ ಈ ಅಮೇರಿಕನ್ ಈಜುಗಾರ (Swimmer) ಒಟ್ಟು ನಾಲ್ಕು ಒಲಿಂಪಿಕ್ ಕೂಟಗಳಲ್ಲಿ ಭಾಗವಹಿಸಿ ಗೆದ್ದದ್ದು ಬರೋಬ್ಬರಿ 28 ಒಲಿಂಪಿಕ್ ಪದಕಗಳನ್ನು ಅಂದರೆ ನಂಬಲು ಸಾಧ್ಯವೇ ಇಲ್ಲ! ಅದರಲ್ಲಿ ಕೂಡ 23 ಹೊಳೆಯುವ ಚಿನ್ನದ ಪದಕಗಳು! ಆತನು ನೀರಿಗೆ ಇಳಿದರೆ ಸಾಕು ದಾಖಲೆಗಳು ಮತ್ತು ದಾಖಲೆಗಳು ಮಾತ್ರ ನಿರ್ಮಾಣ ಆಗುತ್ತಿದ್ದವು.

ಆತನು ಅಮೇರಿಕಾದ ಮಹೋನ್ನತ ಈಜುಗಾರ ಮೈಕೆಲ್ ಫೆಲ್ಪ್ಸ್ (Michel Phelps).

ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. ಸತತವಾಗಿ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಆತ ಭಾಗವಹಿಸಿದ್ದು ಮಾತ್ರವಲ್ಲ ಪ್ರತೀ ಬಾರಿ ನೀರಿಗೆ ಇಳಿದಾಗ ಒಂದಲ್ಲ ಒಂದು ದಾಖಲೆ, ಒಂದಲ್ಲ ಒಂದು ಪದಕ ಗೆಲ್ಲದೆ ಆತ ಮೇಲೆ ಬಂದ ಉದಾಹರಣೆಯೇ ಇಲ್ಲ!

ಬಾಲ್ಟಿಮೋರ್‌ನ ಬುಲ್ಲೆಟ್!

1985ನೇ ಜೂನ್ 30ರಂದು ಅಮೇರಿಕಾದ ಬಾಲ್ಟಿಮೋರ್ ಎಂಬ ಪ್ರಾಂತ್ಯದಲ್ಲಿ ಹುಟ್ಟಿದ ಆತ ತನ್ನ ಒಂಬತ್ತನೇ ವಯಸ್ಸಿಗೆ ಅಪ್ಪ ಮತ್ತು ಅಮ್ಮನ ಪ್ರೀತಿಯಿಂದ ವಂಚಿತವಾದನು. ಅದಕ್ಕೆ ಕಾರಣ ಅವರ ವಿಚ್ಛೇದನ. ಅದರಿಂದಾಗಿ ಆತನಿಗೆ ಮಾನಸಿಕ ನೆಮ್ಮದಿ ಹೊರಟುಹೋಯಿತು. ಆತನಿಗೆ Attention Deficit Hyper active Disorder (ADHD) ಎಂಬ ಮಾನಸಿಕ ಸಮಸ್ಯೆಯು ಬಾಲ್ಯದಿಂದಲೂ ತೊಂದರೆ ಕೊಡುತ್ತಿತ್ತು. ರಾತ್ರಿ ನಿದ್ದೆ ಬಾರದೆ ಆತ ಒದ್ದಾಡುತ್ತಿದ್ದನು. ಈ ಸಮಸ್ಯೆಗಳಿಂದ ಹೊರಬರಲು ಆತ ಆರಿಸಿಕೊಂಡ ಮಾಧ್ಯಮ ಎಂದರೆ ಅದು ಸ್ವಿಮ್ಮಿಂಗ್ ಪೂಲ್! ತನ್ನ ಏಳನೇ ವಯಸ್ಸಿಗೆ ನೀರಿಗೆ ಇಳಿದ ಆತನಿಗೆ ಬಾಬ್ ಬೌಮಾನ್ ಎಂಬ ಕೋಚ್ ಸಿಕ್ಕಿದ ನಂತರ ಆತನ ಬದುಕಿನ ಗತಿಯೇ ಬದಲಾಯಿತು. ಆತ ದಿನದ ಹೆಚ್ಚು ಹೊತ್ತನ್ನು ನೀರಿನಲ್ಲಿಯೇ ಕಳೆಯಲು ತೊಡಗಿದನು.

ಆತನ ಕಣ್ಣ ಮುಂದೆ ಇಬ್ಬರು ಸ್ವಿಮ್ಮಿಂಗ್ ಲೆಜೆಂಡ್ಸ್ ಇದ್ದರು. ಒಬ್ಬರು ಒಂದೇ ಒಲಿಂಪಿಕ್ ಕೂಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದ ಮಾರ್ಕ್ ಸ್ಪಿಟ್ಜ್ (1972). ಇನ್ನೊಬ್ಬರು ಆಸ್ಟ್ರೇಲಿಯಾದ ಸ್ವಿಮಿಂಗ್ ದೈತ್ಯ ಇಯಾನ್ ತೋರ್ಪ್. ಅವರಿಂದ ಸ್ಫೂರ್ತಿ ಪಡೆದ ಆತ ಮುಂದೆ ಮಾಡಿದ್ದು ಎಲ್ಲವೂ ವಿಶ್ವ ದಾಖಲೆಯ ಸಾಧನೆಗಳೇ ಆಗಿವೆ. ಜನರು ಆತನನ್ನು ಬಾಲ್ಟಿಮೋರದ ಬುಲೆಟ್ ಎಂದು ಪ್ರೀತಿಯಿಂದ ಕರೆದರು.

ಸತತ ನಾಲ್ಕು ಒಲಿಂಪಿಕ್ಸ್ – 28 ಪದಕಗಳು – ಅದರಲ್ಲಿ 23 ಚಿನ್ನದ ಪದಕಗಳು!

2004ರ ಅಥೆನ್ಸ್ ಒಲಿಂಪಿಕ್ಸ್ – ಒಟ್ಟು ಎಂಟು ಪದಕಗಳು.
2008 ಬೀಜಿಂಗ್ ಒಲಿಂಪಿಕ್ಸ್ – ಒಟ್ಟು ಎಂಟು ಚಿನ್ನದ ಪದಕಗಳು.
2012 ಲಂಡನ್ ಒಲಿಂಪಿಕ್ಸ್ – ನಾಲ್ಕು ಚಿನ್ನ ಮತ್ತು ಎರಡು ಬೆಳ್ಳಿಯ ಪದಕಗಳು.
2016 ರಿಯೋ ಒಲಿಂಪಿಕ್ಸ್ – ಐದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ.

ಅಂದರೆ ಸತತ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಒಟ್ಟು 28 ಪದಕಗಳನ್ನು ಬೇರೆ ಯಾರೂ ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ! ಬಟರ್ ಫ್ಲೈ, ಮೆಡ್ಲಿ, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್ಸ್…ಹೀಗೆ ಪ್ರತೀಯೊಂದು ವಿಭಾಗಳಲ್ಲಿಯೂ ಮೈಕೆಲ್ ಒಂದರ ಮೇಲೊಂದು ಪದಕಗಳನ್ನು ಗೆಲ್ಲುತ್ತಾ ಹೋಗಿದ್ದಾನೆ! ಆ 16 ವರ್ಷಗಳ ಅವಧಿಯಲ್ಲಿ ಆತನಿಗೆ ಸ್ಪರ್ಧಿಗಳೇ ಇರಲಿಲ್ಲ ಎನ್ನಬಹುದು!

ಮೈಕೆಲ್ ಎಂಬ ಚಿನ್ನದ ಮೀನಿನ ಜಾಗತಿಕ ದಾಖಲೆಗಳು

೧) ಆತನು ತನ್ನ ಜೀವಮಾನದಲ್ಲಿ ಗೆದ್ದ ಒಟ್ಟು ಅಂತಾರಾಷ್ಟ್ರೀಯ ಪದಕಗಳ ಸಂಖ್ಯೆ ಬೆರಗು ಹುಟ್ಟಿಸುತ್ತದೆ. ಒಟ್ಟು 82 ಪದಕಗಳು. ಅದರಲ್ಲಿ 65 ಚಿನ್ನ, 14 ಬೆಳ್ಳಿ ಮತ್ತು 3 ಕಂಚು!
೨) ಒಟ್ಟು 20 ಗಿನ್ನೆಸ್ ದಾಖಲೆಗಳು ಆತನ ಹೆಸರಿನಲ್ಲಿ ಇವೆ!
೩) ಒಟ್ಟು 39 ವಿಶ್ವದಾಖಲೆಗಳು ಆತನ ಹೆಸರಿನಲ್ಲಿ ಇವೆ. ಅದರಲ್ಲಿ 29 ವೈಯಕ್ತಿಕ ಮತ್ತು 10 ರಿಲೇ ಸ್ಪರ್ಧೆಗಳದ್ದು!
೪) 2004ರಿಂದ 2018ರವರೆಗೆ ನಡೆದ ವಿಶ್ವ ಈಜು ಚಾಂಪಿಯನಶಿಪ್ ಸ್ಪರ್ಧೆಗಳಲ್ಲಿ ಆತ ಪದಕಗಳ ಗೊಂಚಲು ಗೆಲ್ಲದೆ ಹಿಂದೆ ಬಂದ ನಿದರ್ಶನವೇ ಇಲ್ಲ!
೫) ಒಟ್ಟು ಎಂಟು ಬಾರಿ ಅವನಿಗೆ ‘ವರ್ಲ್ಡ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೬) ಒಟ್ಟು 11 ಬಾರಿ ‘ಅಮೇರಿಕನ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೭) ಒಂದೇ ಒಲಿಂಪಿಕ್ ಕೂಟದಲ್ಲಿ ಆತ ಎಂಟು ಚಿನ್ನದ ಪದಕಗಳನ್ನು (2008 ಬೀಜಿಂಗ್) ಗೆದ್ದ ದಾಖಲೆಯನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲವೇ ಇಲ್ಲ!
೮) ಆತನಿಗೆ ಜಾಗತಿಕ ಒಲಿಂಪಿಕ್ ಸಮಿತಿಯು ಜಗತ್ತಿನ ಅತ್ಯುತ್ತಮ ಸ್ವಿಮ್ಮರ್ ಪ್ರಶಸ್ತಿ ನೀಡಿ ಗೌರವಿಸಿದೆ!
೯) 100 ಮೀಟರ್ ಬಟರ್ ಫ್ಲೈ, 200 ಮೀಟರ್ ಬಟರ್ ಫ್ಲೈ, 200 ಮೀಟರ್ ಇಂಡಿವಿಜುವಲ್ ಮೆಡ್ಲಿ, 400 ಮೀಟರ್ ಇಂಡಿವಿಜುವಲ್ ಮೆಡ್ಲಿ ಈ ವಿಭಾಗದಲ್ಲಿ ಆತ ಮಾಡಿದ ಜಾಗತಿಕ ದಾಖಲೆಗಳನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲ ಎಂದು ಭಾವಿಸಲಾಗುತ್ತಿದೆ!

ಈ ಎಲ್ಲಾ ಸಾಧನೆಗಳಿಗೆ ಕಾರಣ ಆತನ ಈಜುವ ಪ್ಯಾಶನ್!

ಆತನ ಆತ್ಮಚರಿತ್ರೆಯ ಪುಸ್ತಕವನ್ನು ಒಮ್ಮೆ ತಿರುವಿ ಹಾಕಿದಾಗ ಆತನ ಸ್ವಿಮ್ಮಿಂಗ್ ಪ್ಯಾಶನ್ ಬಗ್ಗೆ ಹಲವು ಉದಾಹರಣೆಗಳು ದೊರೆಯುತ್ತವೆ.

ಒಮ್ಮೆ ಏನಾಯಿತೆಂದರೆ 2001 ಸೆಪ್ಟೆಂಬರ್ 11ರಂದು ಅಮೆರಿಕದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ಧಾಳಿ ನಡೆದು ಇಡೀ ಟವರ್ ಕುಸಿದು ಹೋದದ್ದು, ಇಡೀ ಅಮೇರಿಕಾ ನಲುಗಿ ಹೋದದ್ದು ನಮಗೆಲ್ಲ ಗೊತ್ತಿದೆ. ಸರಿಯಾಗಿ ಅದೇ ಹೊತ್ತಿಗೆ ಮೈಕೆಲ್ ಸ್ವಿಮ್ಮಿಂಗ್ ಪೂಲನಲ್ಲಿ ಈಜುತ್ತಾ ತನ್ನ ಕೋಚಗೆ ಕಾಲ್ ಮಾಡಿ ಕೇಳಿದ್ದನಂತೆ- ಸರ್, ಎಲ್ಲಿದ್ದೀರಿ? ನಾನು ಪೂಲಲ್ಲಿ ಪ್ರಾಕ್ಟೀಸ್ ಮಾಡ್ತಾ ಇದ್ದೇನೆ!

ಮೈಕೆಲ್ ಫೆಲ್ಫ್ಸ್ ಇಷ್ಟೊಂದು ವಿಶ್ವ ದಾಖಲೆಗಳನ್ನು ಕ್ರಿಯೇಟ್ ಮಾಡಿದ್ದು ಸುಮ್ಮನೆ ಅಲ್ಲ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

ರಾಜಮಾರ್ಗ ಅಂಕಣ: ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

VISTARANEWS.COM


on

ರಾಜಮಾರ್ಗ ಅಂಕಣ Kargil Vijay Diwas 2024
Koo

ಇಂದು ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತವು ಗೆದ್ದ ಅತ್ಯಂತ ಕಠಿಣ ಯುದ್ಧ (Kargil Vijay Diwas) ಅದು! 1999ರಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿ.ಪಿ ಮಲಿಕ್ ಬರೆದಿರುವ ‘KARGIL – FROM SURPRISE TO VICTORY’ ಓದುತ್ತಾ ಹೋದಂತೆ ನಾನು ಹಲವಾರು ಬಾರಿ ಬೆಚ್ಚಿಬಿದ್ದಿದ್ದೇನೆ! ಯಾಕೆಂದರೆ ಅದು ಭಾರತವು ಎದುರಿಸಿದ ಅತ್ಯಂತ ಕಠಿಣವಾದ ಯುದ್ಧ (India0 Pakistan War) ಮತ್ತು ದೀರ್ಘಕಾಲದ ಯುದ್ಧ. ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

ಯುದ್ಧದ ಹಿನ್ನೆಲೆ – ಮುಷರಫ್ ಕುತಂತ್ರ

ಆಗಷ್ಟೇ ಭಾರತವು ಅಣುಪರೀಕ್ಷೆ ಮಾಡಿ ಜಗತ್ತಿನ ಕಣ್ಣು ಕೋರೈಸುವ ಸಾಧನೆಯನ್ನು ಮಾಡಿತ್ತು. ಪಾಕ್ ಕೂಡ ಅಮೇರಿಕಾದ ನೆರವು ಪಡೆದು ತನ್ನ ಬಳಿ ಅಣುಬಾಂಬು ಇದೆ ಎಂದು ಹೇಳಿಕೊಂಡಿತ್ತು. ಆಗ ಭಾರತದ ಪ್ರಧಾನಿ ಆಗಿದ್ದ ವಾಜಪೇಯಿ (Atal Bihari Vajpayee) ಅವರು ತುಂಬಾ ಮೃದು ನಿಲುವಿನ ನಾಯಕ ಎಂದು ಪಾಕ್ ನಂಬಿ ಕುಳಿತಿತ್ತು. ಪಾಕಿಸ್ಥಾನಕ್ಕೆ ಜಗತ್ತಿನ ಅತೀ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ (Siachin) ವಶಪಡಿಸಿಕೊಳ್ಳಬೇಕು ಎಂಬ ದುರಾಸೆ. ಅಲ್ಲಿಂದ ಮುಂದೆ ಕಾರ್ಗಿಲ್ ಮತ್ತು ಮುಂದೆ ಇಡೀ ಕಾಶ್ಮೀರವನ್ನು ಕಬಳಿಸಬೇಕು ಎನ್ನುವ ಮಾಸ್ಟರ್ ಪ್ಲಾನ್! ಆಗ ಪಾಕಿಸ್ತಾನದ ಸೇನಾ ನಾಯಕ ಪರ್ವೇಜ್ ಮುಷರಫ್ (Parvez Musharraf) ಹೊಂಚು ಹಾಕಿ ಕುಳಿತ ಕಾಲ ಅದು.

ಅದಕ್ಕೆ ಪೂರಕವಾಗಿ 1998ರ ಜೂನ್ ತಿಂಗಳಿಂದಲೇ ಪಾಕಿಸ್ಥಾನದ 5000ರಷ್ಟು ಸೈನಿಕರು ಲೈನ್ ಆಫ್ ಕಂಟ್ರೋಲ್ ದಾಟಿ ಭಾರತದ 4-10 ಕಿ.ಮೀ. ಒಳಗೆ ಬಂದು ಎತ್ತರದ ಪ್ರದೇಶದಲ್ಲಿ ಜಮಾವಣೆ ಆಗತೊಡಗಿದ್ದರು! ಅವರ ಬಳಿಗೆ ಆಧುನಿಕ ಶಸ್ತ್ರಾಸ್ತ್ರಗಳು ಬಂದು ತಲುಪಿದ್ದವು. ಆದರೆ 1999ರ ಮೇ 18ರವರೆಗೆ ಭಾರತ ಸರಕಾರಕ್ಕೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಭಾರತೀಯ ಸೇನಾ ಗೂಢಚಾರ ಸಂಸ್ಥೆಯವರು ಇನ್ನೂ ಸ್ವಲ್ಪ ದಿನ ಮೈಮರೆತಿದ್ದರೆ…! ಆ ಕುರಿಗಾಹಿ ಹುಡುಗರು ಆ ನುಸುಳುಕೋರ ಸೈನಿಕರ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಕೊಡದೇ ಹೋಗಿದ್ದರೆ…! ನಾನು ಬೆಚ್ಚಿ ಬಿದ್ದದ್ದು ಆಗ.

ಭಾರತದ ಸೈನಿಕರ ಬಳಿ ಯುದ್ಧದ ಸಿದ್ಧತೆಗೆ ಸಮಯ ಇರಲಿಲ್ಲ

ಗಡಿಯ ಒಳಗೆ ಅಷ್ಟು ದೊಡ್ಡ ಸಂಖ್ಯೆಯ ಸೈನಿಕರು ನುಸುಳಿಬಂದ ವಿಷಯ ಭಾರತಕ್ಕೆ ಗೊತ್ತಾಯಿತು ಅಂದಾಗ ಮುಷರಫ್ ಅಲರ್ಟ್ ಆದರು. ಅವರು ನಮ್ಮ ಸೈನಿಕರೇ ಅಲ್ಲ, ಯಾವುದೋ ಭಯೋತ್ಪಾದಕ ಸಂಘಟನೆಯವರು ಎಂದು ಬಿಟ್ಟರು ಮುಷರಫ್! ಆದರೆ ಈಗ ಭಾರತದ ಪ್ರಧಾನಿ ವಾಜಪೇಯಿ, ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸೇನಾ ಮುಖ್ಯಸ್ಥರನ್ನು ಕರೆಸಿ ಯುದ್ಧ ಘೋಷಣೆ ಮಾಡಿಬಿಟ್ಟರು. ಆದರೆ ಭಾರತೀಯ ಸೈನ್ಯಕ್ಕೆ ಆ ಯುದ್ಧಕ್ಕೆ ಸಿದ್ಧತೆ ಮಾಡಲು ದೊರೆತದ್ದು 24 ಘಂಟೆ ಮಾತ್ರ! ಆದರೂ 1999ರ ಮೇ 3ರಂದು ಭಾರತ ಯುದ್ಧ ಘೋಷಣೆ ಮಾಡಿ ಆಗಿತ್ತು!

ಆರಂಭದಲ್ಲಿ ಭಾರತಕ್ಕೆ ಹಿನ್ನಡೆ ಆದದ್ದು ನಿಜ. ಆದರೆ ಮೇ 30 ಆಗುವಾಗ ಭಾರತದ 30,000 ಸೈನಿಕರು ಟೈಗರ್ ಹಿಲ್ ಬಳಿ ಬಂದು ಜಮಾವಣೆ ಮಾಡಿ ಆಗಿತ್ತು. ಭಾರತದ ಭೂಸೈನ್ಯ ಮತ್ತು ವಾಯು ಸೈನ್ಯಗಳು ವೀರಾವೇಶದಿಂದ ಹೋರಾಟಕ್ಕೆ ಇಳಿದಿದ್ದವು. ಎರಡೂ ಕಡೆಯ ಸೈನಿಕರು, ಬಾಂಬುಗಳು, ಮದ್ದುಗುಂಡುಗಳು, ಶೆಲ್‌ಗಳು ಸಿಡಿಯುತ್ತ ಕಾರ್ಗಿಲ್ ಯುದ್ಧಭೂಮಿಯು ರಕ್ತದಲ್ಲಿ ಒದ್ದೆಯಾಗುತ್ತಾ ಹೋಯಿತು. ಟೈಗರ್ ಹಿಲ್ ಏರಿ 10 ಪಾಕ್ ಸೈನಿಕರ ಹತ್ಯೆಯನ್ನು ನಮ್ಮ ಸೈನಿಕರು ಮಾಡಿದಾಗ ಭಾರತವು ಯುದ್ಧದಲ್ಲಿ ಸಣ್ಣ ಮೇಲುಗೈ ಸಾಧಿಸಿತು.

ಅಲ್ಲಿಂದ ಮುಂದೆ ಭಾರತದ ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸ್ವತಃ ಯುದ್ಧಭೂಮಿಗೆ ಬಂದು ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಿದ್ದು, ಪ್ರಧಾನಿ ವಾಜಪೇಯಿ ವಾರ್ ರೂಮಿನಲ್ಲಿ ಕುಳಿತು ಸೈನ್ಯಕ್ಕೆ ನಿರ್ದೇಶನವನ್ನು ಕೊಟ್ಟದ್ದು ಭಾರತವನ್ನು ಗೆಲ್ಲಿಸುತ್ತಾ ಹೋದವು. 75 ದಿನಗಳ ಘನಘೋರ ಯುದ್ಧದ ನಂತರ ಭಾರತ ಜುಲೈ 26ರಂದು ದ್ರಾಸ್ ಪರ್ವತದ ತಪ್ಪಲಲ್ಲಿ ಇದ್ದ ಕೊನೆಯ ಪಾಕ್ ಸೈನಿಕನನ್ನೂ ಹೊಸಕಿ ಹಾಕಿದಾಗ ಭಾರತ ವಿಜಯೋತ್ಸವ ಆಚರಣೆ ಮಾಡಿತು. ಕಾರ್ಗಿಲ್ ಮೈದಾನದಲ್ಲಿ ಸೈನಿಕರ ನಡುವೆ ತ್ರಿವರ್ಣಧ್ವಜ ಹಾರಿಸಿದ ಕ್ಷಣವೇ ಕಾರ್ಗಿಲ್ ವಿಜಯ ದಿನ.

Kargil Vijay Diwas 2024
Kargil Vijay Diwas 2024

ಹುತಾತ್ಮರಾದವರು ಭಾರತದ 527 ಸೈನಿಕರು!

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೈನಿಕರ ಬಲಿದಾನ ಭಾರತಕ್ಕೆ ಒಂದು ದೊಡ್ಡ ವಿಜಯವನ್ನು ತಂದುಕೊಟ್ಟಿತ್ತು. ಅದರಲ್ಲಿ ಕರ್ನಾಟಕದ 21 ಸೈನಿಕರೂ ಇದ್ದರು. ಸಾವಿರಾರು ಯೋಧರು ತೀವ್ರವಾಗಿ ಗಾಯಗೊಂಡರು. ಪಾಕಿಸ್ತಾನವೂ ದೊಡ್ಡ ಸಂಖ್ಯೆಯ ಸೈನಿಕರನ್ನು ಕಳೆದುಕೊಂಡಿತ್ತು.

ನಮ್ಮ ಸೈನಿಕರಾದ ಸಿಯಾಚಿನ್ ಹೀರೋ ನಾಯಬ್ ಸುಬೇದಾರ್ ಬಾಣಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮೇಜರ್ ಪದ್ಮಪಾಣಿ ಆಚಾರ್ಯ, ಗ್ರೆನೆಡಿಯರ್ ಯೋಗೇಂದರ್ ಸಿಂಘ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ಅನುಜ್ ನಯ್ಯರ್, ಲೆಫ್ಟಿನೆಂಟ್ ಬಲವಾನ್ ಸಿಂಘ್, ರೈಫಲ್ ಮ್ಯಾನ್ ಸಂಜಯ ಕುಮಾರ್, ಕ್ಯಾಪ್ಟನ್ ವಿಜಯವಂತ್ ಥಾಪರ್, ಮೇಜರ್ ಸೋನಂ ವಾಂಗಚುಕ್, ಲೆಫ್ಟಿನೆಂಟ್ ಕರ್ನಲ್ ವೈ.ಕೆ. ಜೋಷಿ ಇವರೆಲ್ಲರೂ ನಿಜವಾದ ಕಾರ್ಗಿಲ್ ಹೀರೋಗಳು. ಅದರಲ್ಲಿ ಹೆಚ್ಚಿನವರು ಹುತಾತ್ಮರಾದವರು. ಅವರಿಗೆಲ್ಲ ವಿವಿಧ ಸೇನಾ ಶೌರ್ಯ ಪ್ರಶಸ್ತಿಗಳನ್ನು ನೀಡಿ ಭಾರತ ಸರಕಾರವು ಗೌರವಿಸಿತು.

ಕಾರ್ಗಿಲ್ ಯುದ್ಧದ ಫಲಶ್ರುತಿ ಏನೆಂದರೆ ಮುಂದೆ ಭಾರತವು ಎಂದಿಗೂ ಪಾಕಿಸ್ತಾನವನ್ನು ನಂಬಲಿಲ್ಲ ಮತ್ತು ಪಾಕಿಸ್ತಾನ ಯಾವತ್ತೂ ಭಾರತದ ಮೇಲೆ ಮತ್ತೆ ದಂಡೆತ್ತಿ ಬರುವ ಸಾಹಸವನ್ನು ಮಾಡಲಿಲ್ಲ!

ಜೈ ಹಿಂದ್.

ಇದನ್ನೂ ಓದಿ: ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

Continue Reading

ಅಂಕಣ

ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

ರಾಜಮಾರ್ಗ ಅಂಕಣ: ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಈ ವರ್ಷ ಅವರ ಜನ್ಮ ಶತಮಾನೋತ್ಸವ.

VISTARANEWS.COM


on

ರಾಜಮಾರ್ಗ ಅಂಕಣ
Koo

ಈ ವರ್ಷ (2024) ಲೇಖಕ ನಿರಂಜನರ ಜನ್ಮ ಶತಮಾನೋತ್ಸವ

Rajendra-Bhat-Raja-Marga-Main-logo

ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ (Niranjana) ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಅವರು 71 ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು. ಕನ್ನಡದ ಮೊದಲ ಮತ್ತು ಜನಪ್ರಿಯ ಅಂಕಣ ಲೇಖಕರು ಅಂದರೆ ಅದು ನಿರಂಜನ! (ರಾಜಮಾರ್ಗ ಅಂಕಣ)

ಬಾಲ್ಯದಿಂದಲೂ ಬರವಣಿಗೆ

1924 ಜೂನ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಳಕುಂದ ಎಂಬ ಗ್ರಾಮದಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿ ಪತ್ರಿಕೆಗಳಿಗೆ ಬರೆಯಲು ತೊಡಗಿದರು. ಮೊದಲು ಕಂಠೀರವ ಪತ್ರಿಕೆ ಅವರಿಗೆ ಬರೆಯಲು ಅವಕಾಶ ಕೊಟ್ಟಿತು. ಮುಂದೆ ಕನ್ನಡದ ಎಲ್ಲ ಪ್ರಸಿದ್ಧ ಪತ್ರಿಕೆಗಳಿಗೆ ಅವರು ಅಂಕಣಗಳನ್ನು ಬರೆಯುತ್ತಾ ಹೋದರು. ರಾಷ್ಟ್ರಬಂಧು ಎಂಬ ಪತ್ರಿಕೆಯ ಪ್ರಮುಖ ಲೇಖಕರಾಗಿ ಅವರು ಸಾವಿರಾರು ಅಂಕಣಗಳನ್ನು ಬರೆದರು. ಅವರ ಅಂಕಣ ಲೇಖನಗಳು ಎಂಟು ಕೃತಿಗಳಾಗಿ ಹೊರಬಂದು ಅವರಿಗೆ ಅಪಾರ ಜನಪ್ರಿಯತೆ ಕೊಟ್ಟವು. ಅವರು ಕನ್ನಡದ ಮೊದಲ ಅಂಕಣಕಾರ ಎಂಬ ದಾಖಲೆಯೂ ನಿರ್ಮಾಣವಾಯಿತು.

ಪ್ರಭಾವಶಾಲಿ ಸಣ್ಣ ಕಥೆಗಳು

ಸಣ್ಣ ಕಥೆಗಳು ಅವರಿಗೆ ಇಷ್ಟವಾದ ಇನ್ನೊಂದು ಪ್ರಕಾರ. ಅವರ 156 ಸಣ್ಣ ಕಥೆಗಳ ಸಂಗ್ರಹವಾದ ‘ಧ್ವನಿ’ ಕನ್ನಡದ ಶ್ರೇಷ್ಠ ಕೃತಿ ಆಗಿದೆ. ಕಾರಂತರ ಸಂಪರ್ಕ, ಲೆನಿನ್ ಬಗ್ಗೆ ಓದು ಅವರನ್ನು ಬೆಳೆಸುತ್ತಾ ಹೋದವು.

ಬಾಪೂಜಿ ಬಾಪು ಅವರ ಅತ್ಯಂತ ಶ್ರೇಷ್ಟವಾದ ಸಣ್ಣ ಕಥೆ. ಗಾಂಧೀಜಿ ಬದುಕಿದ್ದಾಗಲೇ ಅವರು ಸತ್ತಂತೆ ಕಲ್ಪಿಸಿಕೊಂಡು ಬರೆದ ಕಥೆ ಇದು! ರಕ್ತ ಸರೋವರ ಕಾಶ್ಮೀರದ ದಾಲ್ ಸರೋವರದ ಹಿನ್ನೆಲೆಯಲ್ಲಿ ಅರಳಿದ ಅದ್ಭುತವಾದ ಕಥೆ.
ತಿರುಕಣ್ಣನ ಮತದಾನ ರಾಜಕೀಯ ವಿಡಂಬನೆಯ ಕಥೆ. ಅವರ ಸಣ್ಣ ಕಥೆಗಳು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ, ಬೇರೆ ಬೇರೆ ಸಂಸ್ಕೃತಿಯಲ್ಲಿ ಅರಳಿದ ಕಥೆಗಳು. ಕನ್ನಡದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ನಂತರ ಇಷ್ಟೊಂದು ವೈವಿಧ್ಯಮಯವಾದ ಸಣ್ಣ ಕಥೆಗಳನ್ನು ಬರೆದವರು ನಿರಂಜನ ಮಾತ್ರ ಅಂದರೆ ಅದು ಅತಿಶಯೋಕ್ತಿ ಅಲ್ಲ!

ಕಾದಂಬರಿಕಾರರಾಗಿ ನಿರಂಜನರು

ಅವರು ಬರೆದದ್ದು ಒಟ್ಟು 21 ಕಾದಂಬರಿಗಳು. ವರ್ಗ ಸಂಘರ್ಷ ಮತ್ತು ಸಾಮಾಜಿಕ ಸಮಾನತೆ ಅವರ ಹೆಚ್ಚಿನ ಕಾದಂಬರಿಗಳ ಹೂರಣ. 700 ಪುಟಗಳ ಬೃಹತ್ ಕಾದಂಬರಿ ಮೃತ್ಯುಂಜಯ ಅದೊಂದು ಮಾಸ್ಟರಪೀಸ್ ಕಲಾಕೃತಿ. ವಿಮೋಚನೆ, ಬನಶಂಕರಿ, ಅಭಯ, ಚಿರಸ್ಮರಣೆ, ರಂಗಮ್ಮನ ವಟಾರ ಮೊದಲಾದ ಕಾದಂಬರಿಗಳು ಒಮ್ಮೆ ಓದಿದರೆ ಮರೆತುಹೋಗೋದಿಲ್ಲ. ಸುಳ್ಯ ಮತ್ತು ಮಡಿಕೇರಿ ಪ್ರದೇಶದಲ್ಲಿ ಕಲ್ಯಾಣಸ್ವಾಮಿ ಎಂಬಾತ ನಡೆಸಿದ ರಕ್ತಕ್ರಾಂತಿಯ ಹಸಿಹಸಿ ಕಥೆಯನ್ನು ಹೊಂದಿರುವ ಒಂದು ಶ್ರೇಷ್ಟವಾದ ಕಾದಂಬರಿ ಅವರು ಬರೆದಿದ್ದಾರೆ. ನಿರಂಜನರು ಬರೆದ ನಾಟಕಗಳೂ ಜನಪ್ರಿಯವಾಗಿವೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

ನಿರಂಜನ ಅವರ ಸಂಪಾದನಾ ಗ್ರಂಥಗಳು

ಇಂದು ಕನ್ನಡ ನಾಡು ನಿರಂಜನರನ್ನು ನೆನಪಿಟ್ಟುಕೊಳ್ಳಲೇ ಬೇಕಾದ ಮುಖ್ಯ ಕಾರಣ ಎಂದರೆ ಅವರ ಸಂಪಾದನೆಯ ಗ್ರಂಥಗಳು. 25 ಸಂಪುಟಗಳ ವಿಶ್ವ ಕಥಾಕೋಶ, ಜ್ಞಾನಗಂಗೋತ್ರಿ ಹೆಸರಿನ ಎಳೆಯರ ಏಳು ಸಂಪುಟಗಳ ವಿಶ್ವ
ಜ್ಞಾನಕೋಶ, ಪುರೋಗಾಮಿ ಪ್ರಕಾಶನದ ಎಂಟು ಪುಸ್ತಕಗಳು, ಜನತಾ ಸಾಹಿತ್ಯಮಾಲೆಯ 25 ಪುಸ್ತಕಗಳು….ಹೀಗೆ ಲೆಕ್ಕ ಮಾಡುತ್ತಾ ಹೋದರೆ ಸಾವಿರಾರು ಪುಟಗಳ ಅದ್ಭುತ ಜ್ಞಾನಕೋಶಗಳು ಅರಳಿದ್ದು ನಿರಂಜನರ ಸಂಪಾದಕತ್ವದಲ್ಲಿ! ಅವರ ಇಡೀ ಜೀವನವನ್ನು ನಿರಂಜನರು ಅಧ್ಯಯನ ಮತ್ತು ಬರವಣಿಗೆಯಲ್ಲಿಯೇ ಕಳೆದರು.

ಇಡೀ ಕುಟುಂಬವು ಸಾಹಿತ್ಯಕ್ಕೆ ಮೀಸಲು

ನಿರಂಜನರ ಪತ್ನಿ ಅನುಪಮಾ ನಿರಂಜನ ಕನ್ನಡದ ಸ್ಟಾರ್ ಕಾದಂಬರಿಕಾರರು. ಹೆಣ್ಣು ಮಕ್ಕಳಾದ ತೇಜಸ್ವಿನಿ ಮತ್ತು ಸೀಮಂತಿನಿ ಇಬ್ಬರೂ ಕನ್ನಡದ ಪ್ರಭಾವೀ ಲೇಖಕರಾಗಿ ಗುರುತಿಸಿಕೊಂಡವರು. ಹಾಗೆ ನಿರಂಜನರ ಇಡೀ ಕುಟುಂಬವು ಕನ್ನಡದ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿತು.

ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ದೊರೆತವು. 1995ರಲ್ಲಿ ಅವರು ನಮ್ಮನ್ನು ಅಗಲಿದರು. ಕನ್ನಡ ಸಾಹಿತ್ಯಲೋಕವನ್ನು ಚಂದವಾಗಿ ಬೆಳೆಸಿದ ನಿರಂಜನರ ಜನ್ಮ ಶತಮಾನೋತ್ಸವದ ಈ ವರ್ಷ ಕನ್ನಡ ಸಾರಸ್ವತ ಲೋಕ ಒಂದು ಸ್ಮರಣೀಯ ಕಾರ್ಯಕ್ರಮವನ್ನು ಅವರ ನೆನಪಿನಲ್ಲಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಆಗ್ರಹ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

Continue Reading

ಅಂಕಣ

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Guru Purnima 2024: ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು, ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು, ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಹೀಗೆ ಗುರು-ಶಿಷ್ಯರಿಗೆ ಪರಂಪರೆಗಳ ಐತಿಹ್ಯವಿದೆ.

VISTARANEWS.COM


on

Guru Purnima 2024
Koo

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)

ಆಷಾಢ ಮಾಸ ಶುಕ್ಲ ಪಕ್ಷದಲ್ಲಿ ಬರುವ “ಕಡ್ಲಿಗರ ಹುಣ್ಣಿಮೆ”ಯನ್ನು ನಾವು ಆಚರಿಸ್ಪಡುವ, ಶ್ರೇಷ್ಠವಾದ ಪರ್ವವೆಂದರೆ ಅದು “ಗುರು ಪೂರ್ಣಿಮೆ”.
ಈ ದಿನ ನಾವು ನಂಬಿದ ನಮ್ಮಲ್ಲಿಯ ಅಂಧಕಾರವನ್ನು ತೊಲಗಿಸಿ ಜ್ಞಾನ ಸಾಕ್ಷಾತ್ಕಾರ ಮಾಡಿಸಿದ ನಮ್ಮ ಗುರುಗಳಿಗೆ ವಂದನೆ (Guru Purnima 2024) ಸಲ್ಲಿಸುವ ದಿನ. ಆ ಗುರುವನ್ನು ನೆನೆದು ಅವರ ಮಹತ್ವವನ್ನು ಸಾರುವ ದಿನ. ಗುರುಗಳು ನಮಗೆ ನಮ್ಮ ಜೀವನಕ್ಕೆ ಸರಿಯಾದ ಮಾರ್ಗ ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ ದಿಕ್ಸೂಚಿ,ದಾರಿದೀಪ. ಪರಮಾತ್ಮನ, ಪರಮಾರ್ಥದ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮಜ್ಯೋತಿಯನ್ನು ಜ್ಞಾನವೆಂಬ ತೈಲ ಹಾಕಿ ಬೆಳುಗುವಂತೆ ಮಾಡಿ ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಜತೆಗೆ ಲೌಕಿಕ ಪ್ರಪಂಚದ ಹಾದಿಯಲ್ಲಿ ನಮ್ಮನ್ನು ನಡೆಸಿ, ನಮ್ಮ ಗುರಿ ಮುಟ್ಟವ ತನಕ ಸಹಾಯ ಮಾಡುವವನೇ “ ಶ್ರೇಷ್ಠಗುರು”.

ಅಲೆದು ಅಲೆದು ಹುಡಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವುಗಳೆಲ್ಲರೂ ಆ ಗುರುವಿನ ಮುಖಾಂತರವೇ ಪರಮಾತ್ಮನ ಅರಿವು, ಪ್ರಪಂಚದ ಅರಿವು, ಅರಿಯಬೇಕಾಗಿರುವುದರಿಂದ, ನಾವು ಪ್ರತಿ ಆಷಾಢ ಮಾಸದ ಈ ಪೌರ್ಣಿಮೆಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ನಮ್ಮ ಅಂತರಂಗದಲ್ಲೇ ಪ್ರತಿಷ್ಠಾಪಿಸಿ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲ ಎಂದು ಅಂತಹ ಗುರುವಿಗೆ ಶರಣಾದಾಗ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಫಲಪ್ರದವಾಗುತ್ತದೆ.

ಉಪನಿಷತ್ತಿನಲ್ಲಿ ಗುರು

ಉಪನಿಷತ್ತಿನಲ್ಲಿ ಗುರು ಎಂಬುದನ್ನು ಈ ರೀತಿಯಾಗಿ ವಿವರಿಸಿದ್ದಾರೆ. “ಗು” ಎಂದರೆ ಅಂಧಕಾರವೆಂದು “ರು” ಎಂದರೆ ದೂರೀಕರಿಸುವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಯ ಕಡೆಗೆ ನಡೆಸುವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ನಿಜವಾದ ಗುರು ಎಂದು ಅರ್ಥೈಸಬಹುದೇನೋ ಎಂಬ ಅಭಿಪ್ರಾಯ.

ಆದಿಗುರು ಶ್ರೀ ಶಂಕರಭಗವತ್ಪಾದಚಾರ್ಯರು ಗುರು ಮಹಿಮೆ ಕುರಿತು ಹೀಗೆ ಸ್ತೋತ್ರವನ್ನು ಹೇಳಿದ್ದಾರೆ:

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ |
ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ತ್ರೀಮೂರ್ತಿ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು ಎಂಬ ಅರ್ಥವಾಗುತ್ತದೆ. ಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಲ್ಪಟಿದೆ :

ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ।
ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ॥
ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ।
ಚಕ್ಷುರುನ್ಮೀಲಿತಂ ಯೇನ
ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳ್ಗಿಗೆ ಬೇಕಾದ ಸೋಪಾನವನ್ನು ಹತ್ತಿಸುವ ಹಾಗೂ ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.
ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ ಬಂದಿದ್ದಾರೆ..

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ।
ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಯಾವುದೂ ಇಲ್ಲ. ಜ್ಞಾನವೆಂಬ ದಾರಿದೀಪವಾಗಿರುವ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ. ಶಾಶ್ವತವಾದ ಆನಂದವನ್ನು ಪಡೆಯುವುದು ಆ ಸದ್ಗುರುವಿನಿಂದಲೆ ಮಾತ್ರವೇ ಸಾಧ್ಯ ಎಂದು ಶ್ರೀ ಶಂಕರಾಚಾರ್ಯರು ತಮ್ಮ “ಗುರ್ವಷ್ಟಕಮ್” ಎಂಬ ಸ್ತೂತ್ರದಲ್ಲಿ ಹೀಗೆ ಹೇಳಿದ್ದಾರೆ :
ಶರೀರಂ ಸುರೂಪಂ ತಥಾ ವಾ ಕಲತ್ರಂ ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ।

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್।।

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ, ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ ಎಂದು.ಏನೆಲ್ಲ ಸಾಧಿಸಿದ್ದರೂ, ತ್ಯಜಿಸಿದ್ದರೂ,ಗುರುವಿನ ಕರುಣೆಯಿಲ್ಲದೆ ಎಲ್ಲವೂ ವ್ಯರ್ಥ ಎಂದು ತಿಳಿಯುತ್ತದೆ.ಗುರುವಿನ ಪಾದಗಳಲ್ಲಿ ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾದ್ಯ ಎನ್ನುತ್ತಾ ಗುರುವಿನ ಮಹತ್ವನ್ನು ವಿವರಿಸುತ್ತಾರೆ ಆಚಾರ್ಯರು.

ನಮ್ಮ ಈ ಸನಾತನ ಪರಂಪರೆಯಲ್ಲಿ ಈಗಿರುವ “ಗುರುವಿನ ಗುರುವಿಗೆ ಪರಮಗುರು”ಎಂದೂ, “ಪರಮ ಗುರುವಿನ ಗುರುವನ್ನು ಪರಾಪರ ಗುರು”ಎಂದೂ,”ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು”ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ಯಂದು ಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ. ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರ ವಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನ ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜತೆಗೇ “ಗುರು ಪೂರ್ಣಿಮೆ”ಯಂದು ಪೂಜಿಸುತ್ತೇವೆ. ಲೋಕಗುರು, ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು. ಜತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು. ಆದ್ದರಿಂದಲೇ ಅವರನ್ನು ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ. “ಗುರು” ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ “ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬ ಚೈತನ್ಯದಾಯಕವಾಗಿರುತ್ತದೆ.

ಗುರುವಿಗೆ ಯಾವಾಗಲೂ ಶಿಷ್ಯನ ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ. ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ ಸಿದ್ಧ ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ. ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ,ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು,ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಇವರೆಲ್ಲ ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಗುರುವಿನ ಬಗೆಗೆ ವರ್ಣಿಸುತ್ತಾ ಹೊರಟರೆ ಅದು ಸಾಗರದಷ್ಟು ಆಳ, ಅಗಲ. ಆಗಸದಷ್ಟು ವಿಶಾಲ, ವಿಸ್ತಾರ. ಗುರು ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಅದ್ಬುತ ಶಕ್ತಿ ಎಂದು ಅರ್ಥೈಸಿ ತಿಳಿದುಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ….

ಇದನ್ನೂ ಓದಿ: Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Continue Reading
Advertisement
puneeth kerehalli dog meat
ಕ್ರೈಂ2 mins ago

Dog Meat: ನಾಯಿ ಮಾಂಸದ ಗಲಾಟೆ, ಪುನೀತ್‌ ಕೆರೆಹಳ್ಳಿ ಪೊಲೀಸ್‌ ಠಾಣೆಯಲ್ಲೇ ತೀವ್ರ ಅಸ್ವಸ್ಥ

Family Drama Film Review
ಸಿನಿಮಾ15 mins ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ39 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ53 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ1 hour ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌