ಧವಳ ಧಾರಿಣಿ ಅಂಕಣ: ಗಂಧವತಿಗೆ ಸಿರಿಗಂಧಲೇಪನನ ಆಗಮನ - Vistara News

ಅಂಕಣ

ಧವಳ ಧಾರಿಣಿ ಅಂಕಣ: ಗಂಧವತಿಗೆ ಸಿರಿಗಂಧಲೇಪನನ ಆಗಮನ

ಧವಳ ಧಾರಿಣಿ ಅಂಕಣ : ಮಹಾವಿಷ್ಣುವು ಅಯೋಧ್ಯೆಯನ್ನು ತನ್ನ ಅವತಾರಕ್ಕಾಗಿ ಆರಿಸಿಕೊಂಡ. ಅದಕ್ಕೆ ಕಾರಣವಾದುದು ದಶರಥ ಎಂಬ ರಾಜನ ಕ್ರಿಯಾಶೀಲ ಆಡಳಿತ, ಸದ್ಗುಣಾದಿಗಳು.

VISTARANEWS.COM


on

putrakameshti yaga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮಾವತಾರ ಸಾಕಾರಗೊಂಡ ವೇದಿಕೆ: ಅಶ್ವಮೇಧ ಮತ್ತು ಪುತ್ರಕಾಮೇಷ್ಟಿ

dhavala dharini by Narayana yaji

ಹಿಂದಿನ ಸಂಚಿಕೆಯಲ್ಲಿ ದೇವತೆಗಳು ತಮ್ಮ ಅಸ್ತಿತ್ವಕ್ಕಾಗಿ ನಡೆಸಿದ ರಾಮಾವತಾರದ ಪೀಠಿಕೆಯನ್ನು ಗಮನಿಸಿದೆವು. ಅದರ ಮುಂದಿನ ಭಾಗ.

ಅಥ ಸಂವತ್ಸರೇ ಪೂರ್ಣೇ ತಸ್ಮಿನ್ಪ್ರಾಪ್ತೇ ತುರಙ್ಗಮೇ.
ಸರಯ್ವಾಶ್ಚೋತ್ತರೇ ತೀರೇ ರಾಜ್ಞೋ ಯಜ್ಞೋಭ್ಯವರ್ತತ৷৷ಬಾ.14.1৷৷

ಸಾಂಗ್ರಹಣೇಷ್ಟಿಯನ್ನು ಮಾಡಿ, ಅಶ್ವವಿಮೋಚನೆಯಾದ ನಂತರ ಒಂದು ವರ್ಷವು ಪೂರ್ಣವಾಯಿತು. ಸರಯೂ ನದಿಯ ಉತ್ತರತೀರದಲ್ಲಿ ರಾಜನು ಯಜ್ಞವನ್ನು ಆರಂಭಿಸಿದನು.

ಭೂಲೋಕದಲ್ಲಿ ಅಸ್ತಿತ್ವಕ್ಕಾಗಿ ನಡೆದ ಇನ್ನೊಂದು ಸಭೆ:-

ದೇವತೆಗಳ ಅಸ್ತಿತ್ವಕ್ಕಾಗಿ ಪುರುಷೋತ್ತಮ ಅವತರಣ ಮಾಡಬೇಕಾದ ಸುಕೃತದ ವಿಷಯವನ್ನು ಹಿಂದಿನ ಸಂಚಿಕೆಯಲ್ಲಿ ಗಮನಿಸಿದೆವು. ಈಗ ಸರಯೂ ನದಿಯ ಉತ್ತರತೀರದಲ್ಲಿ ನಡೆದ ಸಭೆಯೂ ಸಹ ದಶರಥನ ವಂಶದ ಅಸ್ತಿತ್ವವನ್ನು ಸ್ಥಾಪಿಸಲು ನಡೆದುದಾಗಿತ್ತು. ಇದು ಒಂದು ವರುಷ ತನಕ ನಡೆದ ಯಾಗವೇದಿ. ದೇವತೆಗಳ ಒಂದು ನ ಮಾನವರ ಒಂದು ವರ್ಷ. ಅಲ್ಲಿ ದೇವತೆಗಳು ಸಭೆ ಸೇರಿದ ದಿನವೇ ಇಲ್ಲಿ ದಶರಥ ತನ್ನ ವಂಶಾಭಿವೃದ್ಧಿಯ ಸಲುವಾಗಿ ಅಶ್ವಮೇಧ ಯಾಗವನ್ನು ಪ್ರಾಂಭಿಸಿದ್ದನು. ಮಕ್ಕಳಿಲ್ಲದ ದಶರಥನಿಗೆ ತನ್ನ ವಂಶದ ಅಸ್ತಿತ್ವವನ್ನು ಮುಂದುವರೆಸಿಕೊಂಡು ಹೋಗುವ ಚಿಂತೆ ಕಾಡುತ್ತಿತ್ತು. ಸೂರ್ಯವಂಶದ ದಶರಥ ಓರ್ವ ಮಹಾನ್ ದೊರೆ. ಮುಂದೇನಾಗಬಹುದೆನ್ನುವುದನ್ನು ಅರಿತು ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸುವ ದೀರ್ಘದರ್ಶಿ. ಪರಾಕ್ರಮದಲ್ಲಿ ಆತ ಹತ್ತುಸಾವಿರ ಮಹಾರಥಿಗಳೊಡನೆ ಏಕಕಾಲದಲ್ಲಿ ಯುದ್ಧಮಾಡುವಂತಹ ಅತಿರಥನಾಗಿದ್ದ. ದೇವತೆಗಳೂ ಸಹ ಈತನ ನೆರವನ್ನು ಯಾಚಿಸುತ್ತಿದ್ದರು. ದಂಡಕಾರಣ್ಯದಲ್ಲಿ ಈತ ಶಂಬರಾಸುರನನ್ನು ನಿಗ್ರಹಿಸಿದ ವಿಷಯ ಬಹು ಪ್ರಸಿದ್ಧವಾದುದು. ಯುದ್ಧಾಕಾಂಕ್ಷಿ ಎನ್ನುವುದಕ್ಕಿಂತ ಆತ ಪ್ರಜೆಗಳ ಹಿತರಕ್ಷಣೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ. ವಿಜಯನಗರದ ಲಕ್ಷ್ಮೀಧರಮಾತ್ಯನ ಶಾಸನದಲ್ಲಿ ಬರುವ ಮಾತು ಹೀಗಿದೆ.

ಕೆರೆಯಂ ಕಟ್ಟಿಸು, ಬಾವಿಯಂ ಸವೆಸು, ದೇವಾಗಾರಮಂ ಮಾಡಿಸ
ಜ್ಜರೆಯೊಳ್ ಸಿಲ್ಕಿದನಾಥರಂ ಬಿಡಿಸು, ಮಿತ್ರರ್ಗಿಂಬುಕೆಯ್ ನಂಬಿದ
ರ್ಗೆರೆವಟ್ಟಾಗಿರು, ಶಿಷ್ಟರಂ ಪೊರೆ ಎನುತ್ತಿಂತೆಲ್ಲಮಂ ಪಿಂತೆ ತಾ
ನೆರೆದಳ್ ಪಾಲೆರೆವೆಂದು ತೊಟ್ಟು ಕಿವಿಯೊಳ್ ಲಕ್ಷ್ಮೀಧರಾಮಾತ್ಯನಾ

‘ಕೆರೆಯನ್ನು ಕಟ್ಟಿಸು, ಬಾವಿಯನ್ನು ತೋಡಿಸು, ದೇವಾಲಯಗಳನ್ನು ನಿರ್ಮಿಸು, ಬಂಧನಕ್ಕೆ ಸಿಕ್ಕ ಅನಾಥರನ್ನು ಬಿಡಿಸು, ಸ್ನೇಹಿತರಿಗೆ ಸಹಾಯಕನಾಗು, ನಂಬಿದವರಿಗೆ ಆಶ್ರಯದಾತನಾಗು, ಸತ್ಪುಷರನ್ನು ರಕ್ಷಿಸು.’ ಲಕ್ಷ್ಮೀಧರಮಾತ್ಯನ ತಾಯಿ ಹಾಲನು ಕುಡಿಸುವಾಗ ಅವನಿಗೆ ಕಿವಿಯಲ್ಲಿ ಹೇಳಿದ ಮಾತುಗಳಿವು:

ಧಶರಥನ ಆಡಳಿತ ಯಥಾರ್ಥವಾಗಿ ಹೀಗೆ ಇತ್ತು. ಓರ್ವ ಯೋಧನಾಗಿ ಆತ ಎಷ್ಟು ಪರಾಕ್ರಮಿಯೋ ಅಷ್ಟೇ ಸಮಾಜಸುಧಾರಕನೂ ಆಗಿದ್ದನು. ಆತ ಸಂಯಮಿಯಾಗಿದ್ದನು. ಲೋಭಿಯಾಗಿರಲಿಲ್ಲ. ದಶರಥ ಎಂದರೆ ಹತ್ತು ಇಂದ್ರಿಯಗಳನ್ನು ತನ್ನ ತನ್ನ ನಿಯಂತ್ರಣದಲ್ಲಿ ಇರಿಸಿಕೊಂಡು ಪರಮಾತ್ಮನ ತತ್ತ್ವವನ್ನು ದೇಹದ ತತ್ತ್ವವಾಗಿರಿಸಿಕೊಂಡವ ಎನ್ನುವ ಅರ್ಥವನ್ನು ವ್ಯಾಖ್ಯಾನಕಾರರು ಮಾಡುತ್ತಾರೆ. ತನ್ನ ಪ್ರಜೆಗಳನ್ನು ಆತ ನಿತ್ಯಸಂತುಷ್ಠರಾಗಿ ಇರಿಸಿದ್ದನು. ಶಥಪಥಬ್ರಾಹ್ಮಣದಲ್ಲಿ ರಾಜನಾದವ ಸಿಂಹಾಸನವನ್ನು ಏರಬೇಕಾದಾಗ ತನ್ನ ಆಡಳಿತ ಹೇಗಿರುವುದೆನ್ನುವುದನ್ನು ಹೇಳುವುದು :-

ಮನೋ ಮೇ ತರ್ಪಯತ ವಾಚಂ ಮೇ ತರ್ಪಯತ ಪ್ರಾಣಂ ಮೇ ತರ್ಪಯತ ಚಕ್ಷುರ್ಮೇ ತರ್ಪಯತ
ಶ್ರೋತ್ರಂ ಮೇ ತರ್ಪಯತಾತ್ಮಾನಂ ಮೇ ತರ್ಪಯತ ಪ್ರಜಾಂ ಮೇ ತರ್ಪಯತ
ಪಶೂನ್ ಮೇ ತರ್ಪಯತ ಗಣಾನ್ ಮೇ ತರ್ಪಯತ ಗಣಾ ಮೇ ಮಾ ವಿತೃಷನ್ (ಯ 6.31)

ನನ್ನ ವಾಕ್ ಮನಸ್ಸು ಪ್ರಾಣ, ಕಣ್ಣು, ಕಿವಿಗಳು ಪ್ರಜೆಗಳನ್ನು ತೃಪ್ತಿಪಡಿಸುವ ಕಾರ್ಯದಲ್ಲಿ ಸಂತೋಷವನ್ನು ಪಡೆಯಲಿ. ನನ್ನ ಪ್ರಜೆಗಳು ಯಾವಾಗಲೂ ತೃಪ್ತಿಯನ್ನು ಹೊಂದಲಿ, ನನ್ನ ಗೋವು ಆನೆ ಕುದುರೆಗಳನ್ನು ಯಾವತ್ತಿಗೂ ತೃಪ್ತಿ ಪಡಿಸುವ ಸಂತೋಷವು ನನ್ನದಾಗಲಿ, ನನ್ನ ರಾಜಸೇವಕರು, ಪ್ರಜೆಗಳು, ರಾಜ್ಯಾಧಿಕಾರಿಗಳು ಯಾವತ್ತೂ ಬಾಯಾರಿಕೆ ಹಸಿವು ಮುಂತಾದ ದುಃಖಗಳಿಂದ ಪೀಡಿತರಾಗದಿರಲಿ. (ಶತಪಥ ಬ್ರಾಹ್ಮಣದಲ್ಲಿನ ವ್ಯಾಖ್ಯಾನದ ಸಾರ)

ಇದು ಅಯೋಧ್ಯೆಯನ್ನು ಆಳಿದ ಎಲ್ಲಾ ರಾಜರುಗಳ ನಡತೆಯಾಗಿತ್ತು. ದಶರಥ ಅದಕ್ಕೆ ಹೊರತಾಗಿರಲಿಲ್ಲ. ಇಷ್ಟೆಲ್ಲಾ ಇದ್ದು ಆತನಿಗಿರುವ ಒಂದೇ ಒಂದು ಕೊರಗೆಂದರೆ ತನಗೆ ಮಕ್ಕಳಾಗಿಲ್ಲವೆನ್ನುವುದು. ಪ್ರಜೋತ್ಪತ್ತಿಯೇ ಗ್ರಹಸ್ಥಜೀವನದ ನಿಜವಾದ ಉದ್ಧೇಶ. ಅದು ಐಹಿಕ ಸುಖಕ್ಕಾಗಿ ಅಲ್ಲ; ತಾನೇ ತನ್ನ ಮಡದಿಯ ಮೂಲಕ ಮತ್ತು ಜನಿಸಿ ಚಿರಂಜೀವತ್ವವನ್ನು ಪಡೆಯುವುದು. ಐಹಿಕದಲ್ಲಿ ತಮ್ಮ ಕುಲದ ಪರಂಪರೆಯನ್ನು ಕಾಪಿಟ್ಟುಕೊಂಡವ ಪಾರಮಾರ್ಥದಲ್ಲಿರುವ ತನ್ನ ಪಿತೃಗಳಿಗೆ ಸಂಪೂರ್ಣ ತೃಪ್ತಿಯನ್ನುಂಟುಮಾಡುತ್ತಾನೆ. ಮಕ್ಕಳಾಗದಿದ್ದರೆ ಪ್ರಜಾಪಾಲನಾ ಧರ್ಮದ ಮುಂದುವರಿಯುವಿಕೆಗೆ ಚ್ಯುತಿಯುಂಟಾಗುತ್ತದೆ. ಅದಕ್ಕೆ ಕಾರಣನಾದ ರಾಜನಿಗೆ ದೋಷ ಒದಗುತ್ತದೆ. ಆ ಕಾರಣಕ್ಕಾಗಿ ಸಂತಾನಕ್ಕಾಗಿ ಏನು ಮಾಡಬೇಕೆಂದು ಕೇಳಿಕೊಳ್ಳಲು, ಕುಲಪುರೋಹಿತರಾದ ವಶಿಷ್ಠ ಮತ್ತು ವಾಮದೇವರು ಆತನಿಗೆ ದೈವಾನುಗ್ರಹದಿಂದ ಮಕ್ಕಳನ್ನು ಪಡೆಯಬಹುದು. ಅದಕ್ಕೆ ಅಶ್ವಮೇಧ ಯಜ್ಞ ಸೂಕ್ತವೆನ್ನುವ ಮಾತುಗಳನ್ನು ಹೇಳಿದರು. ಅಶ್ವಮೇಧ ಯಜ್ಞವೆಂದರೆ ಯಜ್ಞಗಳಲ್ಲಿಯೇ ಅತ್ಯಂತ ಶ್ರೇಷ್ಟವಾದುದು. ಬ್ರಹ್ಮಹತ್ಯಾ ಸಹಿತವಾಗಿ ಸರ್ವ ಪಾಪಗಳನ್ನೂ (ಸರ್ವಂ ಪಾಪ್ಮಾನಂ ತರತಿ ತರತಿ ಬ್ರಹ್ಮಹತ್ಯಾಂ ಯೋsಶ್ವಮೇಧೇನ ಯಜೇತೇII) ಎನ್ನುವ ಮಾತಿದೆ. ನೇರವಾಗಿ ಅದು ಸಾಮ್ರಾಜ್ಯಕ್ಕೆ ಸಂಬಂಧಪಟ್ಟಿರುವ ಯಜ್ಞವಲ್ಲ. ಪುರುಷಬಲ ಹೆಚ್ಚಲು ವಾಜೀಕರಣದ ವಿದ್ಯೆಯೊಂದಿತ್ತು. ದಶರಥನಿಗೆ ಅದರ ಅಗತ್ಯವಿತ್ತು. ಸಂತಾನಕ್ಕಾಗಿ ನಡೆಸುವ ಯಜ್ಞವಾಗಿರುವುದರಿಂದ ಅದಕ್ಕೆ ಋಷ್ಯಶೃಂಗನೇ ಯೋಗ್ಯನೆಂದು ಆತನ ಮಂತ್ರಿ ಸುಮಂತ್ರ ಈ ಯಾಗದ ಬ್ರಹ್ಮತ್ವಕ್ಕೆ ಅವನನ್ನು ಕರೆತರಲು ಸಲಹೆ ನೀಡುತ್ತಾನೆ.

Ayodhya City Rama temple

ನೆತ್ತಿಯ ಮೇಲೆ ಜಿಂಕೆಯ ಕೋಡುಳ್ಳವ ಋಷ್ಯಶೃಂಗ. ಆತ ಇದ್ದಲ್ಲಿ ಮಳೆಯಾಗುತ್ತದೆ. ಭೂಮಿಯಲ್ಲಿ ಎಲ್ಲ ಧಾತು ಇದ್ದರೆ ಸಾಲದು ಅದಕ್ಕೆ ಚೈತನ್ಯ ತುಂಬುವ ಜೀವಜಲ ಬೇಕು. ಆಗ ಬಿದ್ದ ಬೀಜ ಫಲಬರುತ್ತದೆ. ಋಷ್ಯಶೃಂಗನಿದ್ದಲ್ಲಿ ಮಳೆ ಬರುತ್ತದೆ ಎನ್ನುವುದು ಪರ್ಯಾಯವಾಗಿ ಇಳೆಗೆ ಫಲವತಿಯಾಗುವ ಕಾಲ ಎಂತ ಅರ್ಥ. ಈ ಅಪರೂಪದ ವಿದ್ಯೆ ಋಷ್ಯಶೃಂಗನಿಗೆ ತಿಳಿದಿದೆ. ಹಾಗಾಗಿ ಅಶ್ವಮೇಧ ಯಾಗವೆಲ್ಲ ಮುಗಿದಮೇಲೆ ಬಂದ ಋತ್ವಿಜರೆಲ್ಲ ಧಶರಥನಿಗೆ ಮಕ್ಕಳಾಗಲಿ ಎಂದು ಆಶೀರ್ವದಿಸಿ ಹೋದರು. ಅದಾಗಲೇ ವೃದ್ಧಾಪ್ಯಕ್ಕೆ ಸಮೀಪಿಸಿದ ಧಶರಥನಿಗೆ ಹೊಸ ಆಸೆ ಚಿಗುರಿತು. ಋಷ್ಯಶೃಂಗನ ಹತ್ತಿರ ತನ್ನ ಕುಲವರ್ಧನೆಯಾಗುವಂತೆ ಅನುಗ್ರಹಿಸಿ ಎಂದು ಕೇಳಿದ. ಅಶ್ವಮೇಧವೆನ್ನುವುದು ದಶರಥನಲ್ಲಿ ಹಾಗೂ ಅವನ ರಾಣಿಯರಲ್ಲಿ ಹೊಸ ಉತ್ಸಾಹವನ್ನು ತುಂಬಿತ್ತು. ಕಾಲ ಪಕ್ವವಾಗಿದೆ ಎಂದು ಆಲೋಚಿಸಿದ ಋಷ್ಯಶೃಂಗ, ಪುತ್ರರಾಗಲು ಅಶ್ವಮೇಧ ಸಾಕಾಗುವುದಿಲ್ಲ, ಪುತ್ರಕಾಮೇಷ್ಟಿ ಎನ್ನುವ ಯಾಗವನ್ನು ಮಾಡಬೇಕೆಂದು ಹೇಳಿದ. ಪುತ್ರಕಾಮೇಷ್ಟಿಯಾಗ ಅಥರ್ವವೇದಕ್ಕೆ ಸಂಬಂಧಿಸಿದ್ದು ಹಾಗೂ ಇದನ್ನು ಕಲ್ಪಸೂತ್ರವಿಧಾನದಿಂದ ಮಾಡುತ್ತೇನೆ ಎಂದ.

ಅಥರ್ವವೇದವೆನ್ನುವುದು ಒಂದು ಕೀಳು ಸಂಸ್ಕಾರವಲ್ಲ. ಇದು ರಾಕ್ಷಸರ ವೇದ, ಮಾಯಾ ತಂತ್ರ, ಮಾಟ, ಇನ್ನೊಬ್ಬರ ಮನೆಯನ್ನು ಹಾಳುಮಾಡಲು ಬಳಸುವ ವೇದ ಎನ್ನುವ ನಂಬಿಕೆ ಸಾಮಾನ್ಯರಲ್ಲಿದೆ. ಅಥರ್ವವೂ ಸಹ ಅಪೌರುಷೇಯ ಮತ್ತು ನಿಖರವಾದ ವೇದವೂ ಹೌದು. ಅಥರ್ವಕ್ಕೆ ಬ್ರಹ್ಮವೇದ, ಅಂಗಿರೋವೇದ, ಛಂದೋವೇದ ಎನ್ನುವ ಹೆಸರೂ ಇದೆ. ಥರ್ವಣವೆಂದರೆ ಚರಿಸುವಂತಹದ್ದು. ಅಥರ್ವವೆಂದರೆ ಅದರ ವಿರುದ್ಧವಾದದ್ದು. ಯಾವ ಮಂತ್ರಗಳಿಂದ ಚಂಚಲತೆ ದೂರವಾಗಿ ಸ್ಥಿರತೆ, ನಿಶ್ಚಲತೆ ಲಭಿಸುವುದೋ ಅದನ್ನು ಅಥರ್ವ ಮಂತ್ರಗಳೆನ್ನುತ್ತಾರೆ. ಋಗ್ವೇದ “ಮೊಟ್ಟಮೊದಲು ಅಥರ್ವದಿಂದ ಅಗ್ನಿ ಬೆಳಗಿತು (ಯಜ್ಞೈರಥರ್ವಾ ಪ್ರಥಮಃ ಪಥಸ್ತತೆ) ಎನ್ನುತ್ತದೆ. ಯಜುರ್ವೇದವಂತೂ ಅಥರ್ವವೇದೀಯನ ಸ್ಥಾನ ಪ್ರಥಮ ಶ್ರೇಣಿಯದು ಎನ್ನುತ್ತದೆ (ಅಥರ್ವಾ ತ್ವಾ ಪ್ರಥಮೋ ನಿರಮಂಥತಾ). ಇಲ್ಲಿ ಅನಿಶ್ಚಿತತವಾದ ಧಶರಥನ ಬದುಕಿನಲ್ಲಿ ಒಂದು ಸ್ಥಿರತೆ ಬೇಕಾಗಿದೆ. ರಾಜನಾದವ ತನ್ನ ಮುಂದಿನ ಅಧಿಕಾರಿಯನ್ನೂ ಸಹ ಸಮರ್ಥರಾದವರಿಗೇ ಕೊಟ್ಟು ಹೋಗಬೇಕೆನ್ನುತ್ತದೆ. ಶೃತಿಗಳು. ತನ್ನ ಮಕ್ಕಳು ಅಪ್ರಯೋಜಕರು ಎಂದು ತಿಳಿದ ಶಶಾದ, ದಂಡಕ, ಅಸಮಂಜಸ ಇವರನ್ನೆಲ್ಲ ಅವರ ತಂದೆಯಂದಿರೆ ರಾಜ್ಯದಿಂದ ಓಡಿಸಿದ್ದರು. ಹಾಗಾಗಿ ಮಕ್ಕಳಾಗುವ ಉದ್ಧೇಶಕ್ಕಾಗಿ ಋಷ್ಯಶೃಂಗ ವಿಧಾನದಿಂದ ಪುತ್ರಕಾಮೇಷ್ಟಿಯಾಗವನ್ನು ಪ್ರಾರಂಭಿಸಿದನು.

ಅಶ್ವಮೇಧ ಮತ್ತು ಪುತ್ರಕಾಮೇಷ್ಟಿ ಈ ಎರಡೂ ಯಜ್ಞ ರಾಮಾವತಾರಕ್ಕೆ ಮುನ್ನುಡಿಯನ್ನು ಬರೆದಿದ್ದವು. ಅಶ್ವಮೇಧವೆನ್ನುವುದು ರಾಜನ ಪರಾಕ್ರಮದ ಸಂಕೇತವೆನ್ನುವುದಕ್ಕಿಂತ ಅದು ತ್ಯಾಗದ ಸಂಕೇತವೂ ಹೌದು. ಮೊದಲು ಯಜ್ಞದ ಕುದೆರೆಯನ್ನು ಗುರುತಿಸಿ ಅದನ್ನು ಸ್ವೇಚ್ಛೆಯಿಂದ ಒಂದು ವರ್ಷದ ತನಕ ಬಿಡಲಾಗುತ್ತದೆ. ಈ ಒಂದು ವರ್ಷದ ತನಕ ರಾಜ ತನ್ನ ಪತ್ನಿಯರೊಡಗೂಡಿ ವೃತಾಚರಣೆಯಲ್ಲಿ ತೊಡಗಬೇಕಾಗುತ್ತದೆ. ಕ್ಷತ್ರಿಯರಿದ್ದಲ್ಲಿ ಅಗ್ನಿ ಬರುವುದಿಲ್ಲ. ಹಾಗಾಗಿ ದೀಕ್ಷಿತನಾಗುವ ಮೊದಲು ರಾಜ ತನ್ನ ಕ್ಷತ್ರಿಯತ್ವವನ್ನು ಇಂದ್ರನಲ್ಲಿಯೂ ತೇಜಸ್ಸನ್ನು ಸೋಮನಲ್ಲಿಯೂ ನ್ಯಾಸವಾಗಿಡುತ್ತಾನೆ. ಆತನಲ್ಲಿ ಕೇವಲ ದ್ವಿಜತ್ವ ಮಾತ್ರ ಇರುತ್ತದೆ. ಯಜ್ಞ ಪೂರ್ತಿಯಾದ ನಂತರ ತನ್ನ ಕ್ಷತ್ರಿಯತ್ವವನ್ನು ಮತ್ತು ತೇಜಸ್ಸನ್ನೂ ಮರಳಿ ಆಯಾ ದೇವತೆಗಳಿಂದ ಪಡೆಯುತ್ತಾನೆ. ಹಿಂದೆ ಯಜ್ಞ ದೀಕ್ಷಿತನಾಗಿದ್ದ ದಶರಥನ ಪೂರ್ವಜ ಅನರಣ್ಯನನ್ನು ರಾವಣ ಏಕಾಏಕಿ ಯುದ್ಧಮಾಡಿ ಕೊಂದಿದ್ದ. ಅದೇ ರೀತಿ ಯಜ್ಞ ದೀಕ್ಷಾಬದ್ಧರಾಗಿರುವ ಋತ್ವಿಜರಿಗೂ ನಿಯಮಗಳುಂಟು. ಅವರ ಓಡಾಟ, ಆಹಾರ ನಿದ್ರಾ, ಆತ್ಮ ಸಂಯಮ ಇವುಗಳಿಗೆಲ್ಲಾ ಕಠಿಣವಾದ ನಿಯಮವುಂಟು. ಮುಖ್ಯವಾಗಿ ಧನದಾಸೆಗಾಗಿ ಅಂತವರು ಯಜ್ಞದಲ್ಲಿ ಋತ್ವಿಜರಾಗಕೂಡದು. ಯುಕ್ತಾ ಯುಕ್ತವಾದದ್ದನ್ನೇ ದಾನವಾಗಿ ಪಡೆಯಬೇಕು. ಯಜ್ಞವನ್ನು ಪೂರೈಸಿದ ಮೇಲೆ ರಾಜನಾದವ ತನ್ನದೆನ್ನುವುದನ್ನು ಏನನ್ನೂ ಇಟ್ಟುಕೊಳ್ಳುವ ಹಾಗಿಲ್ಲ. ಯಜ್ಞಪೂರ್ತಿಯಾದಾಗ ಕೊಡುವ ದಕ್ಷಿಣೆಯೂ ಅನ್ಯಾದೃಶ್ಯವಾದುದು. ತನ್ನ ಪತ್ನಿಯರನ್ನೂ ಸಹ ಬ್ರಹ್ಮ ಹೋತೃ, ಉದ್ಗಾತೃ, ಅಧ್ವರ್ಯುವಿಗೇ ದಾನವಾಗಿ ಕೊಡಬೇಕು. ಜೊತೆಗೆ ತನ್ನ ರಾಜ್ಯವನ್ನು ನಾಲ್ಕು ವಿಭಾಗವನ್ನಾಗಿ ಮಾಡಿ ಪೂರ್ವ ದಿಕ್ಕಿನ ರಾಜ್ಯವನ್ನು ಹೋತೃವಿಗೂ, ಪಶ್ಚಿಮ ದಿಕ್ಕಿನ ರಾಜ್ಯವನ್ನು ಅಧ್ವರ್ಯುವಿಗೂ, ದಕ್ಷಿಣ ದಿಕ್ಕಿನ ರಾಜ್ಯವನ್ನು ಬ್ರಹ್ಮನಿಗೂ, ಉತ್ತರದಿಕ್ಕಿನ ರಾಜ್ಯವನ್ನು ಉದ್ಗಾತೃವಿಗೂ ದಾನವನ್ನಾಗಿ ಕೊಡಬೇಕು.

ಇದರ ಅರ್ಥ ಗಹನವಾಗಿದೆ. ಇಲ್ಲಿ ದಾನ ಕೊಡುವವ ಮತ್ತು ಅದನ್ನು ಪರಿಗ್ರಹಿಸುವ ಇಬ್ಬರ ಸತ್ವಪರೀಕ್ಷೆಯಿದೆ. ಎಲ್ಲವೂ ಲೋಕಕಲ್ಯಾಣಕ್ಕಾಗಿ ಇರುವ ಕಾರಣ ಯಾವುದರಮೇಲೂ ತನ್ನ ಅಧಿಕಾರವಿಲ್ಲ ಎಂದು ರಾಜನ ಮನೋಭಾವ ಇರಬೇಕಾದುದು. ಒಂದು ಅರ್ಥದಲ್ಲಿ ಆತನ ತ್ಯಾಗ ಬುದ್ಧಿಯನ್ನು ಒರೆಗೆ ಹಚ್ಚುವಂತಹುದು. ಜೊತೆಗೆ ಋತ್ವಿಜರ ಸತ್ವ ಪರೀಕ್ಷೆಯ ಕಾಲವೂ ಹೌದು. ರಾಜ ಇವುಗಳನ್ನೆಲ್ಲವನ್ನೂ ಕೊಟ್ಟತಕ್ಷಣ ಅವರೆಲ್ಲರೂ “ಮಹಾರಾಜಾ, ಈ ಭೂಮಿಯನ್ನು ಆಳಲು ನೀನೊಬ್ಬನೇ ಸಮರ್ಥ. ಪರನಾರಿ ಮತ್ತು ಪರರ ವಸ್ತುಗಳ ಮೇಲೆ ತಮಗೆ ಅಧಿಕಾರವೇ ಇಲ್ಲ. ಈ ಕಾರಣ ಈ ಎಲ್ಲವನ್ನೂ ನೀನು ಪುನಃ ತೆಗೆದುಕೊಂಡು ಧರ್ಮಮಾರ್ಗದಲ್ಲಿ ಅನುಭವಿಸಬೇಕು. ಅಧ್ಯಯನ ಅಧ್ಯಾಪನಗಳಲ್ಲಿ ನಿರತರಾಗಿರುವ ತಮಗೆ ಜೀವನ ನಿರ್ವಹಣೆಗೆ ಎಷ್ಟು ಬೇಕೋ ಅಷ್ಟು ಗೋ ಮತ್ತು ಸುವರ್ಣವನ್ನು ನೀಡಿದರೆ ಸಾಕು ಎಂದು ಹೇಳಬೇಕು. ಇದನ್ನು ಪ್ರತ್ಯಾಮ್ನಾಯ ಎನ್ನುತ್ತಾರೆ. ಈ ಹಿಂದೆ ಪರಶುರಾಮ ಸಮಗ್ರ ಭೂಮಿಯನ್ನು ಗೆದ್ದು ಅದನ್ನು ಕಶ್ಯಪರಿಗೆ ದಾನವಾಗಿ ಕೊಟ್ಟಾಗ ಅವರು ಅದನ್ನು ಪುನಃ ಕ್ಷತ್ರಿಯರಿಗೇ ಕೊಟ್ಟು ಮತ್ತೆ ಭೂಮಂಡಳದಲ್ಲಿ ರಾಜರಾಳುವಿಕೆಯನ್ನು ಪ್ರಾರಂಭಿಸಿದ್ದರು. ವೇದಗಳಲ್ಲಿ ಇರುವ ಎಲ್ಲವನ್ನೂ ಇದ್ದಂತೆ ಅರ್ಥಮಾಡಲು ಆಗುವುದಿಲ್ಲ. ಅದಕ್ಕೆಲ್ಲ ಗೂಢಾರ್ಥವಿರುತ್ತದೆ. ದೇವತೆಗಳು ಪರೋಕ್ಷ ಪ್ರಿಯರು. ಮನುಷ್ಯರಿಗೆ ಮಾದುಷರು ಎನ್ನುತ್ತಾರೆ. ಇಲ್ಲಿ ರಾಜನ ತ್ಯಾಗ ಮತ್ತು ಋತ್ವಿಜರ ನಿಷ್ಕಲಂಕ ಮನೋಭಾವ ಎರಡೂ ನಿಕಷಕ್ಕೆ ಒಡ್ಡಲ್ಪಡುತ್ತದೆ. ಅಶ್ವವೆಂದರೆ ಮನಸ್ಸು. ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಕ್ರಿಯೆ ಅದು. ಕಷ್ಮಲವನ್ನೇ ಅರಿಯದವ ಋಷ್ಯಶೃಂಗ; ತ್ಯಾಗದ ಮಹೋನ್ನತೆಯನ್ನು ಪ್ರದರ್ಶಿದ ಅತಿರಥನಾದ ದಶರಥ. ಹಾಗಾಗಿ ಆತ್ಮಸಂಯಮವನ್ನು, ಲೋಕಹಿತವನ್ನು ಬಯಸಿದ ಈ ಸಭೆ ಅದುತನಕ ಭೂಲೋಕದಲ್ಲಿ ನಡೆದ ಮಹತ್ವದ ಸಭೆಯೆನಿಸಿ ದೇವತೆಗಳ ಗಮನವನ್ನು ಸೆಳೆಯುವಲ್ಲಿ ಸಫಲವಾಯಿತು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾವತಾರಕ್ಕೊಂದು ಪೀಠಿಕಾ ಪ್ರಕರಣ

ಸ್ವರ್ಗದಲ್ಲಿ ಸೇರಿದ ಸಭೆಯಲ್ಲಿ ರಾವಣನ ಸಂಹಾರಕ್ಕಾಗಿ ದೇವತೆಗಳೆಲ್ಲರ ವಿನಂತಿಯಂತೆ ಮಹಾವಿಷ್ಣು ತಾನು ಮಾನವನಾಗಿ ಜನಿಸಲು ಒಪ್ಪಿದ್ದ ಘಳಿಗೆಗೂ ಇಲ್ಲಿ ಪುತ್ರಕಾಮೇಷ್ಟಿಯಾಗದ ಸಂಕಲ್ಪಕ್ಕೂ ಸರಿಯಾಯಿತು. ಮೇಲಿನ ಸಭೆಯಲ್ಲಿ ಕುಳಿತವರು ಇಲ್ಲಿನ ಈ ಸಭೆಯನ್ನು ಗಮನಿಸಿದರು. ದಶರಥನ ಕೀರ್ತಿ ಆ ಮೊದಲೇ ದೇವತೆಗಳಿಗೂ ತ್ರಿಮೂರ್ತಿಗಳಿಗೂ ತಿಳಿದಿತ್ತು. ಯಜ್ಞವನ್ನು ಸಾಂಗವಾಗಿ ಮಾಡಿದ ದಶರರಥ ಹೇರಳವಾದ ದಾನವನ್ನು ಮಾಡುತ್ತಿದ್ದ. ಅಲ್ಲಿ ಯಾವ ಬೇಧವಿರಲಿಲ್ಲ. ಈ ಹೊತ್ತಿನಲ್ಲಿ ಬಡ ವಿಪ್ರನೋರ್ವನ ಗಮನ ದಶರಥನ ಕೈಯಲ್ಲಿರುವ ಬೆಲೆಬಾಳುವ ಕಡಗದ ಕಡೆ ಹೋಯಿತು. ಸಹಜವಾಗಿ ಅದರ ಕುರಿತು ಆಸೆಯಾಯಿತು. ಅದನ್ನುಬಾಯಿಬಿಟ್ಟು ಕೇಳುವುದರೊಳಗೆ ರಾಜ ಆ ಕಡಗವನ್ನು ತೆಗೆದು ಆ ಮುದಿವಿಪ್ರನಿಗೆ ದಾನವಾಗಿ ನೀಡಿದ. ಇದನ್ನೆಲ್ಲ ನಿರೀಕ್ಷಿಸುತ್ತಿದ್ದ ಮಹಾವಿಷ್ಣು ತನ್ನ ಅವತರಣಿಕೆಗೆ ಪ್ರಶಸ್ತವಾದ ಕ್ಷೇತ್ರವೆಂದರೆ ಅಯೋಧ್ಯೆಯ ಅರಸು ಮನೆತನವೇ ಎಂದು ಹೊಳೆಯಿತು. ಘನತೆ, ವಿವೇಕ, ಸಂಯಮ, ಸಿದ್ಧಿ, ನಿಪುಣತೆ, ಧರ್ಮಪ್ರಜ್ಞೆ ಮತ್ತು ಬೂತದಯೆ ಇವೆಲ್ಲವೂ ಮೇಳೈಸಿರುವ ಈ ಮನೆತನಕ್ಕಿಂತ ಬೇರೆ ಯಾವುದೂ ಇಲ್ಲವೆಂದು ತಿಳಿದ ಪುರುಷೋತ್ತಮ ತನ್ನನ್ನು ಧಾರಣ ಮಾಡುವ ಶಕ್ತಿ ದಶರಥನಲ್ಲಿದೆ ಎಂದವನೆ ಅಲ್ಲಿಯೇ ಅವತರಿಸಲು ಸಂಕಲ್ಪ ಮಾಡಿದ. ದೇವತೆಗಳಿಗೂ ತನ್ನೊಂದಿಗೆ ಸಹಕಾರಿಯಾಗಲು ಭಲ್ಲೂಕ, ವಾನರ ಹೀಗೆ ಬೇರೆ ಬೇರೆ ಕಡೆ ಜನಿಸುವಂತೆ ಸಲಹೆ ಕೊಟ್ಟ. ವಿಷ್ಣು ತನ್ನ ಮಹಿಮೆಯ ಎಲ್ಲ ಗುಣಗಳನ್ನು ರಸರೂಪಕ್ಕೆ ತಂದು ಪಾಯಸವನ್ನು ಮಾಡುವಂತೆ ದೇವತೆಗಳಿಗೆ ಹೇಳಿದ. ಅದರ ಫಲವೇ ಸುಕೃತವಾದ ಪಾಯಸ. ಲೋಕವನ್ನು ಕೂಗಿಸಿದ ಶಕ್ತಿ ಅಡಗಿದರೆ ಅಲ್ಲಿರುವುದು ಆನಂದ ಮಾತ್ರ. ಆ ಅನಂದವೆನ್ನುವುದು ಬ್ರಹ್ಮವೇ. ಅದೇ ರಸರೂಪದಲ್ಲಿ ಇರುವಂತಹದ್ದು. ಅಲ್ಲಿಂದ ಭೂಲೋಕಕ್ಕೆ ಇಳಿದು ಭೂಮಿಯ ಗಂಧವನ್ನು ಹೊದ್ದುಕೊಳ್ಳಲು ಬಯಸಿದ ಕ್ಷಣ.

ಮಹಾವಿಷ್ಣುವೇ ದಶರಥ ರಾಜನನ್ನು ತನ್ನ ತಂದೆಯನ್ನಾಗಿ ಮಾಡಿಕೊಳ್ಳಲು ನಿಶ್ಚಯಿಸಿದ. ಅದೇ ಭಾವವೇ ಮಧುರವಾಗಿ ಯಜ್ಞಕುಂಡದಲ್ಲಿ ದೇವನಿರ್ಮಿತ ಪಾತ್ರವನ್ನು ಕೊಡುವ ಸಲುವಾಗಿ ಅಗ್ನಿಯಲ್ಲಿ ಮಹಾಪುರುಷನೊಬ್ಬ ಪಾಯಸದ ಪಾತ್ರೆಯನ್ನು ಧರಿಸಿ ಪ್ರಕಟವಾದ. ಅಗ್ನಿಯ ತೇಜಸ್ಸನ್ನು ಮೀರಿದ ದಿವ್ಯಾಭರಣಗಳನ್ನು ಧರಿಸಿದ ದಿವ್ಯಪ್ರಭಾವಳಿಯಿಂದ ಆವೃತನಾದ ಆತ ನಗಾರಿಯಂತೆ ಕಂಠನಿನಾದದೊಂದಿಗೆ ತಾನು ಪ್ರಜಾಪತಿಯಿಂದ(ಬ್ರಹ್ಮ) ಕಳುಹಿಸಲ್ಪಟ್ಟವ ಎಂದು ಪರಿಚಯಿಸಿಕೊಂಡ. “ದೇವನಿರ್ಮಿತವಾದ ಈ ದಿವ್ಯಪಾಯಸವು ನೀನು ಮಾಡಿದ ಅಶ್ವಮೇಧ ಮತ್ತು ಪುತ್ರಕಾಮೇಷ್ಟಿ ಯಾಗದ ಫಲ, ಅದನ್ನು ನಿನ್ನ ಪತ್ನಿಯರಿಗೆ ಕೊಡು. ಯಾವ ಫಲಕ್ಕಾಗಿ ನೀನು ಈ ಯಜ್ಞವನ್ನು ಮಾಡಿರುವೆಯೋ ಅದು ಈಡೇರುತ್ತದೆ. ಈ ದಿವ್ಯ ಪಾಯಸವನ್ನು ಭುಂಜಿಸಿದ ಪತ್ನಿಯರಲ್ಲಿ ನೀನು ಪುತ್ರರನ್ನು ಪಡೆಯುವೆ” ಎನ್ನುವ ಮಾತನ್ನು ನುಡಿದು ಆ ಸ್ವರ್ಣ ಪಾತ್ರೆಯನ್ನು ದಶರಥನಿಗೆ ನೀಡಿ ಯಜ್ಞದಲ್ಲಿ ಐಕ್ಯನಾದ. ಕಡುಬಡವನಿಗೆ ಅಪಾರ ಸಂಪತ್ತು ದೊರಕಿದರೆ ಎಷ್ಟು ಸಂತೋಷವಾಯಿತೋ ಅದೇ ಸಂತೋಷ ಆ ಮಾತನ್ನು ಕೇಳಿದ ದಶರಥನ ಸಹಿತ ಎಲ್ಲರಿಗೂ ಆಯಿತು. ದೇವತೆಗಳೂ ಸಹ ಸಂತಸದಲ್ಲಿ ತಮ್ಮ ಕಷ್ಟಗಳು ಪರಿಹಾರವಾಗುವ ಕಾಲ ಬಂತು ಎಂದು ಹರ್ಷಿತರಾದರು.

ರಾಮ ಅವತರಿಸುವ ಕಾಲ ಸನ್ನಿಹಿತವಾಯಿತು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಸರಯೂತೀರದ ಅಪರಿ; ಅಯೋಧ್ಯೆಯೆನ್ನುವ ಪ್ರಾಚೀನ ನಗರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Prajwal Revanna Case Revanna denied anticipatory bail today Court allows SIT to file objections
ಕ್ರೈಂ29 mins ago

Prajwal Revanna Case: ರೇವಣ್ಣಗೆ ಇಂದು ಸಿಗಲಿಲ್ಲ ನಿರೀಕ್ಷಣಾ ಜಾಮೀನು; ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿದ ಕೋರ್ಟ್!

Covaxin
ದೇಶ50 mins ago

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ52 mins ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

KL Rahul
ಕ್ರೀಡೆ1 hour ago

KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

T20 World Cup
ಕ್ರೀಡೆ1 hour ago

T20 World Cup : ವಿಶ್ವ ಕಪ್​ ಗೆಲ್ಲುವುದು ಭಾರತ; ವಿಶ್ವ ಕಪ್​ ವಿಜೇತ ಲಂಕಾ ಆಟಗಾರನ ಸ್ಪಷ್ಟ ನುಡಿ

Shine Shetty Summer Fashion
ಫ್ಯಾಷನ್2 hours ago

Summer Fashion: ಉರಿ ಬಿಸಿಲಿನಲ್ಲಿ ಗಮನ ಸೆಳೆವ ನಟ ಶೈನ್‌ ಶೆಟ್ಟಿಯ ಕೂಲ್‌ ಸ್ಮೈಲ್‌ & ಸ್ಟೈಲ್‌!

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

assault Case
ಬೆಂಗಳೂರು2 hours ago

Assault Case : ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

Prajwal Revanna Case Centre says it has no power to revoke Prajwal diplomatic passport Big relief for MP
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಮಾಡೋ ಅಧಿಕಾರ ನಮಗಿಲ್ಲ ಎಂದ ಕೇಂದ್ರ! ಸಂಸದನಿಗೆ ಬಿಗ್‌ ರಿಲೀಫ್‌?

Virat kohli
ಪ್ರಮುಖ ಸುದ್ದಿ2 hours ago

Virat Kohli : ಅಂಕಿ, ಅಂಶ ಪಂಡಿತರೇ ಬಾಯ್ಮುಚ್ಚಿ; ಕೊಹ್ಲಿಯನ್ನು ಟೀಕಿಸಿದವರ ಬೆಂಡೆತ್ತಿದ ಡಿ’ವಿಲಿಯರ್ಸ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ52 mins ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ15 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌