ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕದ ಕನಸಿನ ವಿಹಾರ - Vistara News

ಅಂಕಣ

ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕದ ಕನಸಿನ ವಿಹಾರ

ಧವಳ ಧಾರಿಣಿ ಅಂಕಣ: ಭರತ ಅಯೋಧ್ಯೆಯಲ್ಲಿ ಇಲ್ಲದ ಸಮಯದಲ್ಲಿ ರಾಮನ ಪಟ್ಟಾಭಿಷೇಕಕ್ಕೆ ದಶರಥ ಅವಸರ ಮಾಡಿದ್ದೇಕೆ? ರಾಮಾಯಣ ವಿಶ್ಲೇಷಣೆ ಇಲ್ಲಿದೆ.

VISTARANEWS.COM


on

king dasharatha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಶರಥ- ಭಾಗ 4: ಪಟ್ಟಾಭಿಷೇಕಕ್ಕಾಗಿ ಘನ ದೊರೆಯ ಜಾಣ ನಡೆ

dhavala dharini by Narayana yaji

ಧವಳ ಧಾರಿಣಿ ಅಂಕಣ: ದಿವ್ಯನ್ತರಿಕ್ಷೇ ಭೂಮೌ ಚ ಘೋರಮುತ್ಪಾತಜಂ ಭಯಮ್
ಸ್ಚಚಕ್ಷೇಥ ಮೇಧಾವೀ ಶರೀರೇ ಚಾತ್ಮನೋ ಜರಾಮ್. ৷৷ಅ. 1.42৷৷

“ಮೇಧಾವಿಯಾದ ದಶರಥನು (ಮಂತ್ರಿಗಳನ್ನು ಉದ್ದೇಶಿಸಿ) ಸ್ವರ್ಗಾಕಾಶ, ಭೂಮಿಯಲ್ಲಿ ದೃಷ್ಟಿಗೆ ಗೋಚರವಾಗುವಂತೆ ಉತ್ಪಾತಗಳಾಗುತ್ತಿವೆ. ಭಯಂಕರವಾದ ಕಾಲವು ಹತ್ತಿರದಲ್ಲಿಯೇ ಬರಲಿದೆ. ನನ್ನ ದೇಹದಲ್ಲಿ ದಿನದಿನಕ್ಕೆ ವಾರ್ಧಕವೂ ಹೆಚ್ಚಾಗುತ್ತಿದೆ.”

ದಶರಥ (king dasharath) ಅಶ್ವಪತಿ ರಾಜನಿಗೆ ಕೈಕೇಯಿಯನ್ನು (Kaikeyi) ಮದುವೆಯಾಗುವ ಸಮಯಕ್ಕೆ ಕೋಸಲ ರಾಜ್ಯವನ್ನು ಕನ್ಯಾಶುಲ್ಕವಾಗಿ ಕೊಟ್ಟಿದ್ದ. ಆದರೆ ಈಗ ಆತನಿಗೆ ತನ್ನ ಕುಲದ ಪರಂಪರೆಯನ್ನು ಮೀರಿ ಹೀಗೆ ಕನ್ಯಾಶುಲ್ಕವಾಗಿ ಕೊಡಲು ಮನಸ್ಸಿಲ್ಲ. ಆ ಕಾರಣಕ್ಕೆ ಭರತನನ್ನು ಕೇಕಯಕ್ಕೆ ಕಳುಹಿಸಿದ್ದಾನೆ. ಇತ್ತ ಅಯೋಧ್ಯೆಯಲ್ಲಿ ರಾಮ ತನ್ನ ಸಹಜವಾದ ಗುಣಗಳಿಂದಾಗಿ ಹೇಗೆ ಹೂವು ದುಂಬಿಯನ್ನು ಆಕರ್ಷಿಸುವುದೋ ಅದೇ ರೀತಿ ಎಲ್ಲರ ಮನವನ್ನೂ ಗೆದ್ದಿದ್ದನು. ಹಣ್ಣು ಬಲಿತಿದೆ, ಇದೇ ಸರಿಯಾದ ಸಮಯ ಎಂದು ದಶರಥ ತನ್ನ ಕೆಲವೇ ಮಂತ್ರಿಗಳನ್ನು ಕರೆಯಿಸಿ “ಪ್ರಕೃತಿಯಲ್ಲಿ ಕೆಲ ಉತ್ಪಾತಗಳನ್ನು ತಾನು ನೋಡುತ್ತಿದ್ದೇನೆ. ತಾನು ವೃದ್ಧನೂ ಆಗುತ್ತಿದ್ದೇನೆ. ಪ್ರಜೆಗಳ ಯೋಗಕ್ಷೇಮವನ್ನು ನೋಡಿಕೊಳ್ಳಲು ಸಮರ್ಥನಾದ ರಾಜನ ಆಯ್ಕೆಯ ಸಮಯ ಬಂದಿದೆಯೆಂದು” ಹೇಳುತ್ತಾನೆ. ಅವರಿಗೆ ಮಾತನಾಡಲು ಅವಕಾಶ ಕೊಡದೇ ತಕ್ಷಣವೇ ಪೂರ್ಣಚಂದ್ರನಂತೆ ಮುಖವುಳ್ಳ ರಾಮನು ರಾಜನಾದರೆ ಸೂಕ್ತವಾಗುವುದೆಂದು ಹೇಳುವನು. ರಾಮನೇ ರಾಜನಾಗಬೇಕೆಂಬ ಅತುಲವಾದ ಆಸೆ ತನಗಿದ್ದರೂ ಅದನ್ನು ತೋರಿಸಿಕೊಳ್ಳದೇ ಪ್ರಜೆಗಳ ಶ್ರೇಯೋಭಿವೃದ್ಧಿಗೋಸ್ಕರ ಇದೇ ಸೂಕ್ತವೆಂದು ಮತ್ತೆ ಮತ್ತೆ ಹೇಳುತ್ತಿದ್ದನು.

ಅವನ ಆತುರ ಎಷ್ಟಿತ್ತೆಂದರೆ ಸ್ವಲ್ಪವೇ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳಲೂ ಆತನಿಗೆ ಮನಸ್ಸಿರಲಿಲ್ಲ. ಆ ಕೂಡಲೇ ಪಟ್ಟಾಭಿಷೇಕಕ್ಕೆ (Sri Rama Pattabhisheka) ಬೇಕಾಗಿರುವ ಸಾಂಬಾರಗಳನ್ನು ಸಿದ್ಧಮಾಡಿಕೊಳ್ಳುವಂತೆ ಮಂತ್ರಿಗಳಿಗೆ ತ್ವರೆಮಾಡಿದನು. ರಾಜನೀತಿಯಲ್ಲಿ ರಾಜ ತನಗೆ ಅನುಕೂಲವಾದ ವಿಷಯಗಳನ್ನು ಒಪ್ಪಿಗೆ ಪಡೆಯಲು ಅನುಸರಿಸುವ ಮಾರ್ಗವೆಂದರೆ ಮೊದಲು ತನ್ನ ಮನಸ್ಸಿನಲ್ಲಿ ಯೋಜನೆಗಳನ್ನು ಚನ್ನಾಗಿ ಮನನಮಾಡಿಕೊಂಡಿರಬೇಕು. ಅದು ರಾಜ್ಯದ ಹಿತದ ಸಲುವಾಗಿ ಎನ್ನುವ ರೀತಿಯಲ್ಲಿ ಬಿಂಬಿಸಬೇಕು. ಅರಸವಿನ ಅಭಿಪ್ರಾಯ ಸರಿ ಎಂದು ಹೇಳಲು ಅಗತ್ಯವಿರುವ ಮಂತ್ರಿಗಳನ್ನೂ ಇತರರನ್ನೂ ಆ ಮೊದಲೇ ಮಾನಸಿಕವಾಗಿ ಸಿದ್ಧತೆ ಮಾಡಿಸಿರಬೇಕು. ಸಭಾಸದರಿಗೆ ಆ ಕುರಿತು ವಿಮರ್ಶಿಸಲು ಸಮಯ ನೀಡದೇ ವಿಷವನ್ನು ಮಂಡಿಸಿದ ತಕ್ಷಣ ತನ್ನ ಕಡೆಯವರು ಅದಕ್ಕೆ ಒಪ್ಪಿಗೆ ಸೂಚಿಸುವಂತೆ ಮಾಡಿ ಸಭೆಯ ಅಭಿಪ್ರಾಯವನ್ನು ಏಕತ್ರ ತರುವ ಚಾಕಚಕ್ಯತೆಯನ್ನು ಪ್ರದರ್ಶಿಸಬೇಕು. ಇದನ್ನು ಗುಂಪು ಒಪ್ಪಿಗೆ (Mass acceptance) ಎನ್ನುತ್ತಾರೆ. ಆ ಕೂಡಲೇ ದಶರಥನು ತನ್ನ ರಾಜ್ಯದ ನಗರ ಪ್ರದೇಶಗಳಿಂದ, ಗ್ರಾಮ ಪ್ರದೇಶಗಳಿಂದ ಜನರನ್ನು ಕರೆಯುವಂತೆ ಮಂತ್ರಿಗಳಿಗೆ ನಿರ್ದೇಶನವನ್ನು ನೀಡಿದನು. ಪೃಥ್ವಿಯ ಇತರ ರಾಜರನ್ನೂ ಸಹ ಕರೆಯಿಸಿದನು. ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಅವಸರದ ಕಾರಣದಿಂದ ಕೇಕಯ ರಾಜನನ್ನೂ ಜನಕನನ್ನೂ ಕರೆಯಲಿಲ್ಲವಂತೆ. ದಶರಥನ ಜಾಣತನ ಇಲ್ಲಿ ವ್ಯಕ್ತವಾಗುತ್ತಿದೆ. ಜನಕರಾಜನ ಕುರಿತು ಅವನಿಗೆ ಸಮಸ್ಯೆಯಿರಲಿಲ್ಲ. ಆದರೆ ಕೇಕಯ ರಾಜ ಅಶ್ವಪತಿಯೇನಾದರೂ ಬಂದಿದ್ದರೆ, ಮದುವೆಯ ಕಾಲಕ್ಕೆ ಕನ್ಯಾಶುಲ್ಕವನ್ನಾಗಿ ಕೋಸಲ ರಾಜ್ಯವನ್ನು ಕೊಟ್ಟಿರುವ ವಿಷಯವನ್ನು ಎತ್ತಿದ್ದರೆ ಎನ್ನುವ ಆತಂಕ ಆತನಿಗಿತ್ತು.

ಕೇವಲ ಅಶ್ವಪತಿಯನ್ನು ಬಿಟ್ಟರೆ ಅಪವಾದ ಬರುವುದೆಂದೆಣಿಸಿ ಜನಕನನ್ನು ಕರೆಯಲಿಲ್ಲ. ಕೇಳಿದರೆ ಬಹುದೂರವಿರುವ ಅವರನ್ನು ಕರೆಯಿಸಲಾಗಿಲ್ಲ ಎಂದು ಹೇಳಿ ತಪ್ಪಿಸಿಕೊಳ್ಳಬಹುದು. ರಾಜರುಗಳೆಲ್ಲರೂ ಬಂದು ಸೇರಲು ಕೆಲ ದಿನಗಳು ಹಿಡಿದಿರಬಹುದು. ಎಷ್ಟು ಸಮಯದೊಳಗೆ ಅವರೆಲ್ಲರೂ ಬಂದು ಸೇರಿದ್ದರು ಎನ್ನುವುದನ್ನು ವಾಲ್ಮೀಕಿ ಹೇಳುವುದಿಲ್ಲ. ಬಂದವರಿಗೆಲ್ಲ ಉಳಿದುಕೊಳ್ಳಲು ಯಥೋಚಿತವಾದ ಬಿಡಾರದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಬಂದು ಸೇರಿದ ರಾಜರುಗಳ ಮತ್ತು ಪ್ರಜೆಗಳ ವಿವರವನ್ನು ನೋಡಿದರೆ ಒಂದು ನಾಲ್ಕೈದು ದಿನಗಳಷ್ಟಾದರೂ ಸಮಯಬೇಕು. ದೂರದ ಗುಡ್ಡಗಾಡು ಪ್ರದೇಶದ ಮಾಂಡಲಿಕರು ಬರಬಹುದಾದರೆ ಕೇಕಯ ಮತ್ತು ಮಿಥಿಲೆಯವರಿಗೆ ಬರಲು ಸಾಧ್ಯವಿಲ್ಲವೇ! ರಾಮನ ಗುಣಗಳ ಕುರಿತು ಎಲ್ಲರಲ್ಲಿಯೂ ಒಳ್ಳೆಯ ಅಭಿಪ್ರಾಯ ಅದಾಗಲೇ ಮೂಡಿರುವುದರಿಂದ ಒಮ್ಮೆ ರಾಜನಾಗಿ ಬಿಟ್ಟರೆ ಅಶ್ವಪತಿ ತೋರಿಕೆಗಾದರೂ ಸಮ್ಮತಿ ಸೂಚಿಸಲೇ ಬೇಕಾಗುತ್ತದೆ. ಅವರೇನಾದರೂ ಕಾರಣ ಕೇಳಿದರೆ ತನಗೆ ಬಿದ್ದ ದುಃಸ್ವಪ್ನ ಮತ್ತು ಶುಕುನದ ವಿಷಯವನ್ನು ಹೇಳಿದರಾಯಿತು, ಎನ್ನುವ ನೆವ ಆತನಲ್ಲಿತ್ತು.

ಜನಕನಿಗೆ ತನ್ನ ಅಳಿಯ ರಾಜನಾಗುವುದು ಸಹಜವಾಗಿಯೇ ಸಂತೋಷದ ಸಂಗತಿ. ಸಂಶಯಾತ್ಮಾ ವಿನಶ್ಯತಿ ಎನ್ನುವ ಗಾದೆಯೊಂದಿದೆ. ರಾಜನೀತಿಯಲ್ಲಿ ರಾಜನಾದವ ಸದಾ ಜಾಗರೂಕನಾಗಿರಬೇಕು ಎನ್ನುವ ಹಿನ್ನೆಲೆಯಲ್ಲಿ ಒಂದು ಸಂಶಯದ ಕಣ್ಣನ್ನು ಇತರರಮೇಲೆ ಇರಿಸಬೇಕೆಂದಿದೆ. ರಾಜನ ಮೂರನೆಯ ಕಣ್ಣು ಮತ್ತು ಕಿವಿಯಾಗಿ ಸಮರ್ಥ ಗೂಢಾಚಾರರನ್ನು ಇರಿಸಿಕೊಂಡು ಆ ಮೂಲಕ ವಿಷಯಗಳನ್ನು ಸಂಗ್ರಹಿಸಿ ವಿವೇಚಿಸಿಬೇಕೆಂದಿದೆ. ದಶರಥ ಇಲ್ಲಿ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಬರಬಹುದಾದ ವಿಘ್ನಗಳ ಕುರಿತು ಆಲೋಚಿಸಿದ್ದಾನೆ. ಆದರೆ ರಾಮನ ಕುರಿತು ಅಶ್ವಪತಿಗಾಗಲಿ, ಯುಧಾಜಿತ್ತುಗಾಗಲಿ, ಕೈಕೇಯಿಗಾಗಲಿ, ಕೊನೆಗೆ ಭರತನಿಗಾಗಲಿ ಯಾವ ಅಭಿಪ್ರಾಯ ಇದೆ ಎನ್ನುವುದನ್ನು ಒಮ್ಮೆಯೂ ತಿಳಿದುಕೊಳ್ಳುವ ಪ್ರಯತ್ನವನ್ನು ಆತ ಮಾಡಿಲ್ಲ. ತನ್ನ ಮನಸ್ಸಿನೊಳಗೇ ಎಲ್ಲವನ್ನೂ ಕಲ್ಪಿಸಿಕೊಂಡು ಅಪರಾಧಿ ಪ್ರಜ್ಞೆಯಿಂದ ಹೇಗಾದರೂಸರಿ ರಾಮನನ್ನು ಪಟ್ಟಕ್ಕೆ ಏರಿಸಿಬಿಡಬೇಕೆನ್ನುವ ಹುಂಬತನ ಆತನಲ್ಲಿತ್ತು. ಹಾಗಾಗಿ ಆತ ತನ್ನ ಮನಸ್ಸಿನೊಳಗಿರುವುದನ್ನು ವಶಿಷ್ಠರಿಗೂ ಮೊದಲು ಹೇಳಿಲ್ಲ.

ಸಭೆಯನ್ನು ಸೇರಿಸಿದವನೇ ಎಲ್ಲರನ್ನೂ ಉದ್ಧೇಶಿಸಿ ಗಂಭೀರ ಧ್ವನಿಯಲ್ಲಿ ಮಾತನಾಡತೊಡಗಿದ. ಅವನ ಧ್ವನಿ ಭೇರಿಯ ಶಬ್ಧದಂತೆ ಇತ್ತು. ವಿಲಿಯಮ್ ಷೇಕ್ಸ್‌ಪಿಯರ್‌ನ ಪ್ರಸಿದ್ಧ ನಾಟಕ ಜ್ಯುಲಿಯಸ್ ಸೀಸರ್ ನಾಟಕದಲ್ಲಿ ಮಾರ್ಕ್ ಆಂಟನಿ ತನ್ನ ಅಭಿಪ್ರಾಯವನ್ನು ಪ್ರಜೆಗಳು ಒಪ್ಪುವಂತೆ ಮಾಡಿದ ಭಾಷಣ ಬಹು ಪ್ರಸಿದ್ಧ. ಭಾರತೀಯ ಕಾವ್ಯದಲ್ಲಿ ಸಂದರ್ಭದಲ್ಲಿ ದಶರಥನ ಮಾತುಗಳು ಅದಕ್ಕೆ ಮಿಗಿಲಾಗಿದ್ದವು. ಎರಡರಲ್ಲಿಯೂ ಸಂಧರ್ಭ ಮತ್ತು ಉದ್ಧೇಶ ಬೇರೆ ಬೇರೆ. ಆದರೆ ಪರಿಣಾಮಕಾರಿ ಮಾತುಗಳಿಗೆ ಇದೊಂದು ಉದಾಹರಣೆಯಾಗಬಹುದು. ಸೂರ್ಯವಂಶದ ಶ್ರೇಷ್ಠ ದೊರೆಗಳನ್ನು ಉದಾಹರಿಸುತ್ತ “ತನ್ನ ಅರವತ್ತು ಸಾವಿರ ವರ್ಷಗಳ ಆಡಳಿತವನ್ನೂ ಸಮರ್ಥಿಸುತ್ತಾನೆ. ರಾಜ ಪರಿಪಾಲನೆಯೆನ್ನುವುದು ಸುಲಭವಲ್ಲ, ಧೈರ್ಯ-ಶೌರ್ಯ-ಪರಾಕ್ರಮಗಳಿಂದ ಮಾತ್ರವೇ ರಾಜ್ಯವನ್ನು ಆಳಲು ಸಾಧ್ಯವಿದೆ. ಜಿತೇಂದ್ರಿಯನಲ್ಲದಿರುವವ ರಾಜ್ಯಾಡಳಿತವನ್ನು ನಿರ್ವಹಿಸಲಾರ, ಇಂಥ ಹೊಣೆಯನ್ನು ಹೊತ್ತಿರುವ ತಾನು ನಿಶ್ಚರ್ಯವಾಗಿಯೂ ಬಹಳ ಬಳಲಿದ್ದೇನೆ” ಎಂದವನೇ ಮುಂದೆ ಈ ರಾಜ್ಯವನ್ನು ಆಳಲು ಇಲ್ಲಿರುವ ಬ್ರಾಹ್ಮಣಶ್ರೇಷ್ಠರ ಅನುಮತಿ ಪಡೆದು “ಪುಷ್ಯನಕ್ಷತ್ರಯುಕ್ತನಾಗಿರುವ ರಾಮನನ್ನು ತೊಡಗಿಸಿಕೊಳ್ಳುವೆ” ಎನ್ನುತ್ತಾನೆ. ದಶರಥನ ಜಾಣನುಡಿಗಳನ್ನು ಗಮನಿಸಿ “ನಾನು ಧರ್ಮದಿಂದ ರಾಜ್ಯವಳುತಿರುವಾಗ ನನ್ನ ಮಗನು ಯುವರಾಜನಾಗುವುದನ್ನ ನೀವು ಸ್ವಾಗತಿಸುವಿರೋ ಹೇಗೆ” ಎನ್ನುವ ಮಾತುಗಳನ್ನಾಡಿ ಭಾಷಣವನ್ನು ಮುಗಿಸುತ್ತಾನೆ. ನವಿರಾದ ಮಾತುಗಳು ಹೇಗಿತ್ತೆಂದರೆ ಪ್ರತಿರೋಧ ಇರಲೇ ಬಾರದು. ಅದಾಗಲೇ ರಾಮ ಪ್ರಜೆಗಳ ಮನಸ್ಸನ್ನು ಗೆದ್ದಿದ್ದ ಕಾರಣದಿಂದ ಪ್ರತಿರೋಧದ ಮಾತೇ ಬಂದಿಲ್ಲ. ಒಕ್ಕೋರಲಿಂದ ಒಪ್ಪಿಗೆ ಸೂಚಿಸಿದರು.

ತೇ ತಮೂಚುರ್ಮಹಾತ್ಮಾನಂ ಪೌರಜಾನಪದೈಸ್ಸಹ.
ಬಹವೋ ನೃಪ ಕಲ್ಯಾಣಾ ಗುಣಾಃ ಪುತ್ರಸ್ಯ ಸನ್ತಿ ತೇ৷৷ಅ .2.26৷৷

ಅಲ್ಲಿ ಸೇರಿದ ಪೌರ ಜಾನಪದ- ಪಟ್ಟಣಗಳ ಮತ್ತು ಹಳ್ಳಿಗಳಿಂದ ಬಂದ ಪ್ರಜಾಜನರು ಇನ್ನಿತರ ರಾಜರೊಡನೆ ಏಕಕಂಠದಲ್ಲಿ “ಮಹಾರಾಜಾ, ನಿನ್ನ ಮಗನಲ್ಲಿ ಅನೇಕ ಕಲ್ಯಾಣಗುಣಗಳಿವೆ. ಆತ ಬುದ್ಧಿವಂತನಾದವ, ದೇವಸೃದಶನಾದವ, ಗುಣವಂತನಾದವ ಎನ್ನುತ್ತಾ ಆತನು ಯುವರಾಜನಾಗಲು ಒಪ್ಪಿಗೆಯನ್ನು ಸೂಚಿಸಿದರು. ಅರಸನ ಸಂತಸಕ್ಕೆ ಪಾರವೇ ಇರಲಿಲ್ಲ. ವಶಿಷ್ಠರ ಹತ್ತಿರ ತಿರುಗಿದವನೇ ಚೈತ್ರಪಕ್ಷದ ಪುಷ್ಯನಕ್ಷತ್ರದ ಸುಮೂರ್ತವೇ ಒಳ್ಳೆಯದು ಎಂದು ತಾನೇ ನಿಶ್ಚಯಿಸಿದ್ದ ಮುಹೂರ್ತವನ್ನು ಸಾರಿಯೂ ಬಿಟ್ಟ. ಗಮನಿಸಬೇಕಾದ ಸಂಗತಿಯೆಂದರೆ ರಾಮಪಟ್ಟಾಭಿಷೇಕದ ಈ ಭಾಗದಲ್ಲಿ ಇನ್ನಿತರ ಕಾವ್ಯದಲ್ಲಿ ಬರುವಂತೆ ವಶಿಷ್ಠರಾಗಲಿ, ವಾಮದೇವರಾಗಲಿ ಇಟ್ಟ ಮೂಹೂರ್ತವಲ್ಲ. ದಶರಥನಿಗೆ ಮುಹೂರ್ತಗಳ, ಜ್ಯೋತಿಷ್ಯದ ಕಲ್ಪನೆಯಿತ್ತು. ರಾಮನದ್ದು ಪುನರ್ವಸು ನಕ್ಷತ್ರ, ಪುನರ್ವಸುವಿನ ನಂತರ ಬರುವ ನಕ್ಷತ್ರ ಪುಷ್ಯ ರಾಮನಿಗೆ ಸಂಪತ್ತನ್ನು ತರುವ ತಾರೆಯಾಗುತ್ತದೆ. ಅದೂ ಅಲ್ಲದೇ ಪುಷ್ಯ ನಕ್ಷತ್ರ ಕರ್ಕಾಟಕ ರಾಶಿಯಲ್ಲಿ ಬರುತ್ತದೆ. ಇದು ಚಂದ್ರನಿಗೆ ಸ್ವಕ್ಷೇತ್ರ. ಸ್ವಕ್ಷೇತ್ರದಲ್ಲಿ ಗ್ರಹಗಳು ಪ್ರಭಲರಾಗಿರುತ್ತವೆ. ಚಂದ್ರ ಮನಃಕಾರಕ. ರಾಜನಾದವನಿಗೆ ಮನಸ್ಸಿನ ಸ್ಥೈರ್ಯ ಬೇಕು. ರಾಮನಿಗೆ ರಾಜನಿಟ್ಟ ಮುಹೂರ್ತ ಸಂಪತ್ತು ಮತ್ತು ಧೈರ್ಯವನ್ನು ತಂದುಕೊಡುತ್ತದೆ ಎನ್ನುವ ಅರ್ಥವನ್ನು ಕೊಡುತ್ತದೆ. ಅವನ ಅವಸರ ಎಷ್ಟಿತ್ತೆಂದರೆ ತಕ್ಷಣವೇ ಸುಮಂತ್ರನಿಗೆ ರಾಮನನ್ನು ಕರೆತರಲು ಹೇಳಿಕಳಿಸಿಯೂಬಿಟ್ಟ. ಸುಮಂತ್ರ ರಾಮನನ್ನು ಯುವರಾಜನಿಗೆ ಒಪ್ಪುವ ಬಿರುದುಬಾವಲಿಗಳಿಂದಲೇ ಕರೆದುತಂದ. ದಶರಥನಿಗೆ ರಾಮನನ್ನು ನೋಡಿ ಆನಂದವೋ ಆನಂದ. ತನ್ನ ಒತ್ತಿನಲ್ಲಿಯೇ ಕುಳ್ಳಿರಿಸಿ ಪ್ರಜೆಗಳನ್ನು ತೋರಿಸಿ ಇವರೆಲ್ಲರೂ ನಿನ್ನನ್ನು ಯುವರಾಜನನ್ನಾಗಿ ನೋಡಲು ಕಾತರದಿಂದ ಇದ್ದಾರೆ ಎಂದು ಸಂಭ್ರಮಿಸಿದ. ಸಭಾಸದರ ಹರ್ಷೋದ್ಗಾರಗಳ ನಡುವೆ ರಾಮನೂ ಸಂತೋಷದಿಂದ ಒಪ್ಪಿ ತನ್ನ ಅರಮನೆಗೆ ಹಿಂತಿರುಗಿದ. ಸಭೆಯೂ ವಿಸರ್ಜಿಸಲ್ಪಟಿತು.

king dasharatha dhavala dharini

ದಶರಥ ರಾಮ ಪಟ್ಟಾಭಿಷೇಕದ ವಿಷಯದಲ್ಲಿ ತಾನೋರ್ವನೇ ಎಲ್ಲವನ್ನೂ ನಿಶ್ಚಯಿಸಿದ್ದಾನೆ. ಸಭಾಸದರೆಲ್ಲ ಹೊರಟ ಮೇಲೆ ಅಲ್ಲಿದ್ದ ಮಂತ್ರಿಗಳು ಮತ್ತು ವಶಿಷ್ಠರನ್ನು ಕರೆಯುತ್ತಾನೆ. ಮೊದಲು ಯಾವುದೋ ಒಂದು ನೆವದಿಂದ ಅವಸರದಲ್ಲಿ ಸಭೆ ಸೇರಿಸಿದವ, ತನಗೆ ಅನುಕೂಲವಾಗುವಂತೆ ರಾಮನ ವಿಷಯವನ್ನು ಪ್ರಸ್ತಾಪಿಸಿದ. ಅದಕ್ಕೆ ಒಪ್ಪಿಗೆ ಸಿಕ್ಕಮೇಲೆ ಚೈತ್ರಮಾಸದ ಶುಕ್ಲಪಕ್ಷದ ಪುಷ್ಯ ನಕ್ಷತ್ರದಂದು ಎಂದ. ಈಗ ಮಂತ್ರಾಲೋಚನೆಯಲ್ಲಿ ಇನ್ನಷ್ಟು ತನ್ನ ತಂತ್ರವನ್ನು ವಿಶದಪಡಿಸುತ್ತಾನೆ. ನಾಳೆಯೇ ಪುಷ್ಯ ನಕ್ಷತ್ರದ ಯೋಗವಿದೆ. ಹಾಗಾಗಿ ನಾಳೆಯೇ ಮುಹೂರ್ತವನ್ನು ನಿಗದಿಪಡಿಸಿ ಎನ್ನುತ್ತಾನೆ. ಅವರೆಲ್ಲರೂ ಹೋದಮೇಲೆ ಪುನಃ ರಾಮನನ್ನು ಕರೆಯಲು ಸುಮಂತ್ರನಿಗೇ ಹೇಳುತ್ತನೆ. ಸುಮಂತ್ರ ದಶರಥನ ಅಂತರಂಗವನ್ನು ಅರಿತ ನಂಬಿಗಸ್ತನಾಗಿದ್ದ. ರಾಮ ಮನೆಗೆ ಹೋಗಿದ್ದನೋ ಇಲ್ಲವೋ ಮತ್ತೊಮ್ಮೆ ದಶರಥನನ್ನು ನೋಡಲು ಕರೆ ಬಂದಿರುವುದರಿಂದ ಅವಸರವಾಗಿ ತಂದೆಯನ್ನು ಕಂಡ. ಇಲ್ಲಿ ರಾಜ ತನ್ನ ಅಂತರಂಗದ ಮಾತುಗಳನ್ನು ರಾಮನಲ್ಲಿ ಆಡುತ್ತಾನೆ. ಪಟ್ಟಾಭಿಷೇಕಕ್ಕೆ ಸಿದ್ದನಾಗಬೇಕಾದ ನೀನು ನಿನ್ನ ಪತ್ನಿಯೊಡನೆ ಉಪವಾಸವಿದ್ದು ಈ ರಾತ್ರಿ ದರ್ಭಾಸ್ತರಣದಲ್ಲಿ ಮಲಗಬೇಕು ಎನ್ನುತ್ತಾನೆ.

ದರ್ಭಾಸ್ತರಣವೆನ್ನುವುದು ಇಂದು ಸತ್ತಮೇಲೆ ಮಲಗಿಸುವ ಕ್ರಿಯೆಯಾಗಿದೆ. ಅದರ ಮೂಲ ಕಾರಣ ರಾಜನಾದವನಿಗೆ ತನ್ನದು ಎನ್ನುವುದಿರುವುದಿಲ್ಲ. ಸಮಷ್ಟಿಯ ಹಿತವನ್ನು ಆತ ಗಮನಿಸುವಾಗ ಸ್ವಾರ್ಥರಹಿತನಾಗಿರಬೇಕಾಗುತ್ತದೆ. ಸನ್ಯಾಸವನ್ನು ಸ್ವೀಕರಿಸುವ ಮೊದಲದಿನ ರಾತ್ರಿಯೂ ದರ್ಭಾಸ್ತರಣದಲ್ಲಿ ಮಲಗಬೇಕಾಗುತ್ತದೆ. ಸನ್ಯಾಸಿಯೂ ಪ್ರಾಪಂಚಿಕ ಸುಖವನ್ನು ಆತ್ಮಶ್ರಾದ್ಧ ಮಾಡಿಕೊಂಡು ತ್ಯಜಿಸುತ್ತಾನೆ. ಒಂದು ಅವಸ್ಥೆಯಿಂದ ಇನ್ನೊಂದಕ್ಕೆ ಹೋಗುವಾಗ ತನ್ನದೆನ್ನುವ ಎಲ್ಲವನ್ನೂ ಬಿಡಬೇಕೆನ್ನುವುದು ಇದು ಸೂಚಿಸುತ್ತದೆ. ರಾಜ ಆತ್ಮ ಶಾದ್ಧ ಮಾಡಿಕೊಳ್ಳುವುದಿಲ್ಲ. ಆತ ಪ್ರಾಪಂಚಿಕ ಪ್ರಪಂಚದಲ್ಲಿ ಇದ್ದೂ ಇಲ್ಲದಂತಿರಬೇಕು. ಆತ್ಮ ಸಂಯಮವನ್ನು ಆತ ಇಟ್ಟುಕೊಳ್ಳಬೇಕು. ಸನ್ಯಾಸಿಯಂತೆ ಆತ ಋಣಮುಕ್ತನಲ್ಲ; ಆತನಿಗೆ ದೇವಋಣ, ಋಷಿಋಣ, ಪಿತೃಋಣಗಳ ಜೊತೆಗೆ ವಿಪ್ರಋಣ ಮತ್ತು ಆತ್ಮಋಣಗಳಿವೆ. ಈ ಭೂಮಿಯನ್ನು ಪರಶುರಾಮ ಕ್ಷತ್ರಿಯರನ್ನು ಗೆದ್ದ ಮೇಲೆ ಕಾಶ್ಯಪರಿಗೆ ದಾನವಾಗಿ ಕೊಟ್ಟಿದ್ದ. ಅವರು ಪುನಃ ಅದನ್ನು ಕ್ಷತ್ರಿಯರಿಗೆ ರಾಜ್ಯವಾಳಲು ಕೊಟ್ಟಿದ್ದರು. ಆ ಕಾರಣಕ್ಕೆ ವಿಪ್ರಋಣವಿರುತ್ತದೆ. ಅದರ ನಿವಾರಣೆಗೆ ಆತ ದಾನ ಧರ್ಮಗಳನ್ನು ಮಾಡಬೇಕು. ಶರೀರವನ್ನು ಪುಷ್ಟಿಯುತವಾಗಿರಿಸಿಕೊಳ್ಳಲೇ ಬೇಕಾಗಿರುವುದರಿಂದ ವಿಹಿತವಾದ ಸುಖವನ್ನು ಅನುಭವಿಸಬೇಕು. ಸನ್ಯಾಸಿ ಪ್ರಾಪಂಚಿಕವನ್ನು ಬಿಟ್ಟವನಾದರೆ, ರಾಜ ಪ್ರಾಪಂಚಿಕದಲ್ಲಿದ್ದು ತನ್ನದೆನ್ನುವ ಸ್ವಾರ್ಥವನ್ನು ಬಿಟ್ಟಿರಬೇಕು. ನಾನು ಎನ್ನುವುದು ವಯಕ್ತಿಕ ನಾವು ಎನ್ನುವುದು ಸಮಷ್ಟಿ. ಹಾಗಾಗಿ ಸನ್ಯಾಸಿಗಳು ಮತ್ತು ರಾಜ ತನ್ನನ್ನು ಉದ್ಧೇಶಿಸಿ ಹೇಳುವಾಗ ನಾನು ಎನ್ನದೇ ನಾವು ಎನ್ನುತ್ತಾರೆ. ಒಂದೊಂದು ಮಾತಿನ ಮೂಲಕವೂ ವಾಲ್ಮೀಕಿ ದಶರಥನ ಜ್ಞಾನ ಮತ್ತು ಸಮಯಪ್ರಜ್ಞೆಯನ್ನು ಎತ್ತಿ ತೋರಿಸುತ್ತಾರೆ. ಆಧ್ಯಾತ್ಮ ಮತ್ತು ಲೌಕಿಕ ಎರಡರಲ್ಲಿಯೂ ಪಾರಂಗತನಾಗಿರುವುದರಿಂದ ಆತ ರಾಜರ್ಷಿಯಾಗಿದ್ದ.

ಶುಕ್ರನೀತಿಯಲ್ಲಿ ದಶರಥ ಪರಿಣಿತನಾಗಿದ್ದ. ಆತನಿಗೆ ಶತ್ರುಗಳು ಎಲ್ಲಿಯಾದರೂ ಯುವರಾಜನಾಗುವ ರಾಮನ ಮೇಲೆ ಆಕ್ರಮಣ ಮಾಡಿದರೆ ಎನ್ನುವ ಸಂಶಯವಿದೆ. ಅದಕ್ಕೆ ಆತ ರಾಮನ ಹತ್ತಿರ ವ್ರತಸ್ಥನಾದ ರಾಮ ನಿರಾಯುಧನಾಗಿ ಇರುತ್ತಾನೆ. ಹಾಗಾಗಿ ಆತನಿಗೆ ನಂಬಿಗಸ್ತರಾದ ಸ್ನೇಹಿತರು ಆತನನ್ನು ಬಹಳ ಜಾಗರೂಕತೆಯಿಂದ ಕಾಯಬೇಕು. ಅಂಥವರನ್ನು ನಿಯಮಿಸಿಕೋ ಎನ್ನುತ್ತಾನೆ. ರಾಜಕಾರಣದ ಅಂತರಂಗವನ್ನೆಲ್ಲ ರಾಮನಿಗೆ ರಾಜ ಹೇಳುತ್ತಾನೆ. ರಾಮ ಇಷ್ಟು ಅವಸರವೇಕೆ ಎಂದು ಕೇಳಿದ್ದನೋ ಏನೋ. ಆಗ “ಭವನ್ತಿ ಬಹುವಿಘ್ನಾನಿ ಕಾರ್ಯಾಣ್ಯೇವಂವಿಧಾನಿ ಹಿ” ಮಹತ್ತರವಾದ ಕಾರ್ಯವಾಗಬೇಕಾದರೆ ಅದಕ್ಕೆ ಅನೇಕ ವಿಧವಾದ ವಿಘ್ನಗಳು ಬರುತ್ತದೆ ಎಂದು ಎಚ್ಚರಿಸುತ್ತಾ “ಭರತ ಬರುವದರೊಳಗಾಗಿ ನಿನಗೆ ಪಟ್ಟಾಭಿಷೇಕವಾಗಬೇಕು” ಎನ್ನುವ ಮಾತುಗಳನ್ನು ಆಡುತ್ತಾನೆ. ಅದರೊಂದಿಗೆ ಭರತನ ಗುಣಗಳನ್ನು “ಆತ ಸತ್ಪುರುಷರ ಮಾರ್ಗದಲ್ಲಿಯೇ ನಡೆಯತಕ್ಕವನು, ಅಣ್ಣನಾದ ನಿನ್ನನ್ನೇ ಅನುಸರಿಸಿ ಇರುವವನು; ಧರ್ಮಾತ್ಮನು; ದಯಾಪರನು; ಜಿತೇಂದ್ರಿಯನು ಇದರಲ್ಲಿ ಯಾವ ಸಂಶಯವೂ ಇಲ್ಲ ಎನ್ನುತ್ತಾ

ಕಿನ್ತು ಚಿತ್ತಂ ಮನುಷ್ಯಾಣಾಮನಿತ್ಯಮಿತಿ ಮೇ ಮತಿಃ.
ಸತಾಂ ಚ ಧರ್ಮನಿತ್ಯಾನಾಂ ಕೃತಶೋಭಿ ಚ ರಾಘವ!৷৷ಅ.4.27৷৷

“ಮಾನವರ ಮನಸ್ಸು ಸ್ಥಿರವಲ್ಲವೆಂಬುದು ನನ್ನ ಖಚಿತವಾದ ಅಭಿಪ್ರಾಯವಾಗಿದೆ. ಧರ್ಮನಿರತರಾದ ಸತ್ಪುರುಷರ ಮನಸ್ಸೂ ಸಹ ತತ್ತನ್ನಿಮಿತ್ತವಾದ ರಾಗದ್ವೇಷಗಳಿಂದ ಕೂಡಿರುತ್ತದೆ.”

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಶ್ರೀರಾಮ ಪಟ್ಟಾಭಿಷೇಕ ಸಂಕಲ್ಪದ ಹಿಂದಿನ ಗೂಢಗಳು

ಸ್ವಭಾವತ ಸಾಧುವಾದ ಭರತನ ಮನಸ್ಸು ಕೇಕಯದವರ ಮಾತುಗಳನ್ನು ಕೇಳಿ ವಿರುದ್ಧವಾಗಿ ವರ್ತಿಸಬಹುದು ಎನ್ನುವ ಎಚ್ಚರಿಕೆ ಇಲ್ಲಿದೆ. ದಶರಥನಿಗೆ ತನ್ನ ಮಾತುಗಳ ಕುರಿತು ಎಷ್ಟೊಂದು ಅಳುಕಿದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಈ ಸಂಭಾಷಣೆಯ ಹೊತ್ತಿನಲ್ಲಿಯೇ ರಾಮ ಇದಕ್ಕೆ ಕಾರಣವನ್ನು ಕೇಳಿರಬಹುದು. ಅದಕ್ಕೆ ಕನ್ಯಾಶುಲ್ಕದ ವಿಷಯ ಬಂದಿರಬಹುದಾಗಿದೆ. ಭರತ ಅರಣ್ಯಕ್ಕೆ ಬಂದು ರಾಮನಿಗೆ ಪುನಃ ಅರಮನೆಗೆ ಬರಬೇಕೆಂದು ಒತ್ತಾಯಿಸಿದಾಗ ಕನ್ಯಾಶುಲ್ಕದ ವಿಷಯವನ್ನು ಭರತನಿಗೆ ತಿಳಿಸುತ್ತಾನೆ. ರಾಜ್ಯ ಭರತನದೇ ಆಗಿತ್ತು ಎನ್ನುವುದನ್ನು ಒತ್ತಿಹೇಳಿ ತಾನು ಅರಣ್ಯದಿಂದ ಬರಲಾರೆ ಎನ್ನುತ್ತಾನೆ. ರಾಮ ತನ್ನ ತಂದೆಯ ಹತ್ತಿರ ಈ ವಿಷಯವನ್ನು ಹೇಳಿ ರಾಜ್ಯವನ್ನು ಏಕೆ ನಿರಾಕರಿಸಲಿಲ್ಲ. ಎನ್ನುವುದಕ್ಕೆ ಕಾರಣ ವಾಲ್ಮೀಕಿ ವಿವರಿಸುವುದಿಲ್ಲ. ಇದು ಧರ್ಮಸೂಕ್ಷ್ಮದ ಪ್ರಶ್ನೆ. ಮೊದಲನೆಯದ್ದು ಯುವರಾಜ ಪದವಿ ಎನ್ನುವುದು ಸೂರ್ಯವಂಶದಲ್ಲಿ ಜ್ಯೇಷ್ಠಾನುವರ್ತಿ. ಅದು ಹಿರಿಯವನ ಕರ್ತವ್ಯವೂ ಹೌದು. ಎರಡನೆಯದು ರಾಮ ತನ್ನ ತಂದೆಯ ಮಾತನ್ನು ಮೀರಲಾರ. ರಾಜನಾದವ ತನ್ನ ರಾಜ್ಯವನ್ನು ಯಾರು ಯಾರಿಗೋ ಕೊಡುವಂತಿಲ್ಲ ಎನ್ನುವುದನ್ನು ಗಣತಂತ್ರ ವ್ಯವಸ್ಥೆಯನ್ನು ಅನುಸರಿಸುತ್ತಿರುವ ಅಯೋಧ್ಯೆಯ ವಿಷಯದಲ್ಲಿ ಮೊದಲೇ ನೋಡಿದ್ದೇವೆ. ದಶರಥ ಕರೆದ ಸಭೆಯಲ್ಲಿ ಸಭಾಸದರು ಭರತ ಬೇಡ ಎಂದು ಹೇಳಿಬಿಟ್ಟಿದ್ದರೆ ದಶರಥನ ಭಾಷೆ ವ್ಯರ್ಥವಾಗಿ ಹೋಗುತ್ತಿತ್ತು. ರಾಘವಾಂಕನ ಹರಿಶ್ಚಂದ್ರ ಕಾವ್ಯದಲ್ಲಿ ರಾಜನ ಮುತ್ತಿನ ಸತ್ತಿಗೆಯನ್ನು ಕೊಡಲಾಗುವುದಿಲ್ಲ ಎನ್ನುವ ಅಭಿಪ್ರಾಯವಿದೆ.

ಅನುನಯದೊಳೆಲ್ಲವಂ ಕೊಡಬಹುದು ಬಿಡಬಹುದು
ಜನನಿಯಂ ಜನಕನಂ ನಲ್ಲಳಂ ದೈವವಂ
ಮನವಾರೆ ನಂಬಿ ನಚ್ಚಿರ್ದ ಪರಿವಾರಮಂ ಕೊಡುವ ಬಿಡುವತಿಕಲಿಗಳು
ಜನರೊಳಗೆ ಜನಿಸರೆಂದೆನಲು

ಯಜುರ್ವೇದದಲ್ಲಿಯೂ ರಾಜತ್ವವೆನ್ನುವುದು ಅರ್ಹರು ಮಾತ್ರ ಪಾಲಿಸಬೇಕಾದ ಹೊಣೆ ಎನ್ನುತ್ತದೆಯೇ ಹೊರತು ಕೇವಲ ಪಿತ್ರಾರ್ಜಿತವಾದ ಆಸ್ತಿಯಾಗಿರುವುದಲ್ಲ ಎಂದಿದೆ. “ವಿಶ್ವಾಮಿತ್ರರು ಆತನಿಗೆ ಎರಡೆರಡು ಸಾರಿ “ಕರ್ತವ್ಯಂ ದೈವಮಾನ್ಹಿಕಂ- ಕರ್ತವ್ಯವೇ ನಿನಗೆ ದೇವಪೂಜೆ” ಎಂದು ಹೇಳಿರುವುದರಿಂದ ದೊರೆತನವನ್ನು ರಾಮ ತಾನು ಪಾಲಿಸಬೇಕಾದ ಕರ್ತವ್ಯದ ಭಾಗವಾಗಿ ನೋಡಿದ್ದಾನೆ. ತಂದೆಯ ಮಾತು ಸಹ ಕರ್ತವ್ಯದ ಭಾಗವಾಗಿರುವುದರಿಂದ ಆತ ಮುಂದೆ ಭರತನಿಗೋಸ್ಕರ ಸಿಂಹಾಸನವನ್ನು ತ್ಯಜಿಸಿದ್ದಾನೆ. ಆ ವಿವರ ಮುಂದಿನ ಭಾಗದಲ್ಲಿ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಘನ ದಶರಥನಿಗೆ ನಿಲುಕದ ಅಪೂರ್ವ ಮಿಲನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ28 seconds ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ5 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ15 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ19 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 202439 mins ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ52 mins ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ1 hour ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್2 hours ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ2 hours ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20243 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20247 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌