ನೆನಪು | ಗಣಿತದ ಗಣಿ ಶ್ರೀನಿವಾಸ ರಾಮಾನುಜನ್‌ - Vistara News

ಅಂಕಣ

ನೆನಪು | ಗಣಿತದ ಗಣಿ ಶ್ರೀನಿವಾಸ ರಾಮಾನುಜನ್‌

ರಾಮಾನುಜನ್‍ರವರ ಅತ್ಯುತ್ಕೃಷ್ಟವಾದ ಸಂಶೋಧನೆಗಳನ್ನು ಮೆಚ್ಚಿ ಜಗದ್ವಿಖ್ಯಾತವಾದ ಲಂಡನ್ನಿನ ರಾಯಲ್ ಸೊಸೈಟಿಯು 1918 ಫೆಬ್ರವರಿ 28ರಂದು ‘F.R.S’ (ಫೆಲೋ ಆಫ್ ರಾಯಲ್ ಸೊಸೈಟಿ) ಎಂಬ ತನ್ನ ಅತ್ಯುನ್ನತ ಪ್ರಶಸ್ತಿಯನ್ನು ಕೊಟ್ಟು ಅವರನ್ನು ಗೌರವಿಸಿತು. ಆಗ ರಾಮಾನುಜನ್‍ರವರಿಗೆ ಕೇವಲ 30 ವರ್ಷ. ಇಂದು ಅವರು ಹುಟ್ಟಿದ ದಿನ. ಈ ಸಂದರ್ಭದಲ್ಲಿ ಅವರ ಬಗ್ಗೆ ಒಂದಿಷ್ಟು ತಿಳಿದುಕೊಳ್ಳೋಣ.

VISTARANEWS.COM


on

srinivasa ramanujan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
dc ramachandra

| ಡಾ. ಡಿ.ಸಿ. ರಾಮಚಂದ್ರ

ಗಣಿತ ಕಬ್ಬಿಣದ ಕಡಲೆ ಎನ್ನುವವರಿಗೆ ರಾಮನುಜನ್ ಹೆಸರೇ ಪ್ರೇರಣಾ ಶಕ್ತಿ. ಭಾರತದ ಪ್ರಸಿದ್ಧ ಗಣಿತಜ್ಞರು, ಸಣ್ಣ ವಯಸ್ಸಿನಿಂದಲೇ ಅಸಾಧಾರಣ ಪ್ರತಿಭೆ ತೋರಿದ ರಾಮಾನುಜನ್ ವಿಶ್ವವಿದ್ಯಾಲಯದಲ್ಲಿ ಸಾಂಪ್ರದಾಯಿಕ ಶಿಕ್ಷಣ ಪಡೆಯದ ಸ್ವ-ಶಿಕ್ಷಕ ಗಣಿತಜ್ಞರಾಗಿದ್ದರು. ಮುಖ್ಯವಾಗಿ ಸಂಖ್ಯಾಶಾಸ್ತ್ರದಲ್ಲಿ ಸಂಶೋಧನೆ ನಡೆಸಿದ ರಾಮಾನುಜನ್ ಅನೇಕ ಸಂಕಲನ ಸೂತ್ರಗಳನ್ನು ಪ್ರತಿಪಾದಿಸಿದ್ದಕ್ಕಾಗಿ ವಿಶೇಷವಾಗಿ ಪ್ರಸಿದ್ಧರು.

ಇಂದಿನ ಮದ್ರಾಸ್ ಪ್ರಾಂತ್ಯದ (ಈಗಿನ ತಮಿಳುನಾಡಿನ) ಕೊಯಮತ್ತೂರು ಜಿಲ್ಲೆಯ ಈರೋಡಿನಲ್ಲಿ 22ನೇ ಡಿಸೆಂಬರ್ 1877ರಂದು ಸರ್ವಜಿತ್ ಸಂವತ್ಸರದ ಮಾರ್ಗಶಿರ ಶುಕ್ಲ ನವಮಿಯಂದು ತಾಯಿಯ ತವರು ಮನೆಯಲ್ಲಿ ಜನಿಸಿದರು. ಇವರ ತಂದೆ ಶ್ರೀನಿವಾಸ ಅಯ್ಯಂಗಾರ್, ತಾಯಿ ಕೋಮಲತ್ತಮ್ಮಾಳ್ ಆರ್ಥಿಕವಾಗಿ ಅಷ್ಟು ಸದೃಢವಲ್ಲದ ಮಧ್ಯಮ ವರ್ಗದ ಶ್ರೀವೈಷ್ಣವ ಕುಟುಂಬಕ್ಕೆ ಸೇರಿದವರು. ಇವರ ಮೂವರು ಮಕ್ಕಳಲ್ಲಿ ರಾಮಾನುಜನ್‍ರೇ ಜ್ಯೇಷ್ಠ ಪುತ್ರ. ಲಕ್ಷ್ಮೀನರಸಿಂಹನ್ ಮತ್ತು ತಿರುನಾರಾಯಣನ್ ಎಂಬ ಇಬ್ಬರೂ ಇವರ ತಮ್ಮಂದಿರು.

ವಿಶ್ವವಿಖ್ಯಾತ ಗಣಿತ ಪ್ರತಿಭೆ ಶ್ರೀನಿವಾಸ ಅಯ್ಯಂಗಾರ್ ರಾಮಾನುಜನ್‍ರವರ 135ನೇ ಜನ್ಮ ವರ್ಷವಾದ 2012ನ್ನು ಭಾರತ ಸರ್ಕಾರ ‘ರಾಷ್ಟ್ರೀಯ ಗಣಿತ ವರ್ಷʼ ಎಂದು ಘೋಷಿಸಿತ್ತು. ಇದು ನಿಜಕ್ಕೂ ಮಹತ್ವಪೂರ್ಣವಾದ ನಡೆಯಾಗಿತ್ತು. ರಾಷ್ಟ್ರದಾದ್ಯಂತ ಗಣಿತವನ್ನು ಜನಸಮುದಾಯದಲ್ಲಿ ಜನಪ್ರಿಯಗೊಳಿಸಲು ಹಾಗೂ ರಾಮಾನುಜನ್ ಅವರ ಜೀವನ ಮತ್ತು ಕೊಡುಗೆಗಳನ್ನು ಪರಿಚಯಿಸಲು ದೇಶ ಬಹಳ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಗಣಿತಜ್ಞನ ಬಾಲ್ಯ

ರಾಮಾನುಜನ್‍ರ ವಿದ್ಯಾಭ್ಯಾಸ ಕುಂಭಕೋಣಂನ ಸರ್ಕಾರಿ ಪ್ರೌಢಶಾಲೆಯಲ್ಲೂ ಅನಂತರ ಅಲ್ಲಿಯ ಸರ್ಕಾರಿ ಕಾಲೇಜಿನಲ್ಲೂ ನಡೆಯಿತು. ಇವರು ಚಿಕ್ಕಂದಿನಿಂದಲೂ ಬಹಳ ಮಿತಭಾಷಿ, ಅಂತರ್ಮುಖಿ. ಸಹಪಾಠಿಗಳೊಂದಿಗೆ ಹೆಚ್ಚು ಸೇರುತ್ತಿರಲಿಲ್ಲ. ಒಮ್ಮೆ ರಾಮಾನುಜನ್ ಪ್ರಾಥಮಿಕ ತರಗತಿಯಲ್ಲಿದ್ದಾಗ ಉಪಾಧ್ಯಾಯರು ‘ಯಾವುದೇ ಸಂಖ್ಯೆಯನ್ನು ಅದೇ ಸಂಖ್ಯೆಯಿಂದ ಭಾಗಿಸಿದಾಗ ಭಾಗಲಬ್ಧವು ಒಂದು ಆಗುತ್ತದೆ’ ಎಂದು ವಿವರಿಸಿದಾಗ, ಪುಟ್ಟ ವಿದ್ಯಾರ್ಥಿ ರಾಮಾನುಜನ್ ತಕ್ಷಣ ನಿಂತು ಕೇಳಿದ ಪ್ರಶ್ನೆ ‘ಹಾಗಾದರೆ ಸೊನ್ನೆಯನ್ನು ಸೊನ್ನೆಯಿಂದ ಭಾಗಿಸಿದರೆ ಏನು ಬರುತ್ತದೆ?’ ತಬ್ಬಿಬ್ಬಾದ ಗುರುಗಳು ಏನೆಂದು ಉತ್ತರಿಸಿದ್ದು ಈಗ ಅಪ್ರಸ್ತುತ. ರಾಮಾನುಜನ್ ಕೇಳುತ್ತಿದ್ದ ಪ್ರಶ್ನೆಗಳು ಬಹಳ ಅರ್ಥಪೂರ್ಣವೂ ಉಚ್ಚಮಟ್ಟದ್ದಾಗಿದ್ದರೂ ಕೂಡ ಅವರು ಎಂದೂ ಕುಚೋದ್ಯ ಮಾಡಿದವರಲ್ಲ, ಇನ್ನು ಅಹಂಕಾರ ಎಂಬುದು ಅವರ ಬಳಿ ಎಂದೂ ಸುಳಿದಿದ್ದೇ ಇಲ್ಲ, ರಾಮಾನುಜನ್‍ರವರು ತಮ್ಮ ಜೀವನದಲ್ಲಿ ಅತ್ಯಂತ ಸರಳತೆಯ, ಮುಗ್ಧತೆಯ ಮತ್ತು ನಮ್ರತೆಯ ಸಾಕಾರಮೂರ್ತಿಯಾಗಿದ್ದರು.

ರಾಮಾನುಜರಿಗೆ ಬಹಳ ಸ್ಫೂರ್ತಿಯನ್ನಿತ್ತು ಆತನ ಗಣಿತ ಪ್ರತಿಭೆಯನ್ನು ವಿಕಾಸಗೊಳಿಸಿದ್ದು ಕಾರ್ ಎಂಬಾತನ ‘ಸಿನೋಪ್ಸಿಸ್ ಆಫ್ ಪ್ಯೂರ್ ಮ್ಯಾಥಮೆಟಿಕ್ಸ್’ ಎಂಬ ಗ್ರಂಥ, ಇದು ಗಣಿತ ಸೂತ್ರಗಳ ಹಾಗೂ ಕೇವಲ ಫಲಿತಾಂಶಗಳ ಒಂದು ಸಂಕಲನವೇ ಹೊರತು ಗಣಿತ ಶಾಸ್ತ್ರದ ಯಾವುದೇ ಒಂದು ಶಾಖೆಯನ್ನು ಶಾಸ್ತ್ರೀಯವಾಗಿ ವಿವೇಚಿಸಿ ಅಧ್ಯಯನ ಮಾಡುವ ಪಠ್ಯಪುಸ್ತಕವಾಗಲಿ, ಸಂಶೋಧನಾ ಗ್ರಂಥವಾಗಲಿ ಅಲ್ಲ. ಆದರೆ ಎಸ್.ಎಸ್.ಎಲ್.ಸಿಯಲ್ಲಿ ಓದುತ್ತಿದ್ದ ರಾಮಾನುಜನ್ ಆ ಪುಸ್ತಕವನ್ನು ಗಣಿತದ ಅದ್ಭುತವಾದ ತತ್ವಗಳ ಒಂದು ಮಹಾಗಣಿಯೆಂದೇ ಪರಿಗಣಿಸಿದರು. ಅದರಿಂದ ಒಂದೊಂದು ಫಲಿತಾಂಶವೂ ರಾಮಾನುಜನ್‍ರವರಿಗೆ ಒಂದೊಂದು ಸಂಶೋಧನಾ ಸಮಸ್ಯೆಯಾಗಿಯೇ ತೋರಿತು. ಅಂತಹ ಸಮಸ್ಯೆಗಳನ್ನು ಯಾರ ಸಹಾಯವೂ ಇಲ್ಲದೇ ತನ್ನ ಸ್ವಂತಿಕೆಯಿಂದಲೇ ಬಿಡಿಸುವ ತನಕ ಸಮಾಧಾನಗೊಳ್ಳದ ಹಠ ರಾಮಾನುಜನ್‍ರವರದ್ದು, ಈ ವಿಶೇಷವಾದ ಸಾಧನೆಯಲ್ಲಿ ಬೌದ್ಧಿಕ ಸಾಹಸವನ್ನು ಕೈಗೊಂಡ ರಾಮಾನುಜನ್ ತನ್ನದೇ ಆದ ಒಂದು ವಿಲಕ್ಷಣವಾದ ಸಂಶೋಧನಾ ಮಾರ್ಗವನ್ನು ರೂಪಿಸಿಕೊಳ್ಳಬೇಕಾಯಿತು. ಪ್ರತಿಭೆಯ ಈ ಘಟ್ಟದಲ್ಲಿ ರಾಮಾನುಜನ್‍ರವರು ಎಸ್.ಎಸ್.ಎಲ್.ಸಿಯಲ್ಲಿ ಓದುತ್ತಿದ್ದ ಒಬ್ಬ ಓರ್ವ ಬಡ ವಿದ್ಯಾರ್ಥಿ ಎಂಬುದನ್ನು ನಾವು ಮರೆಯಬಾರದು.

ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವೇಳೆಗಾಗಲೇ (1903) ತಮ್ಮದೇ ಆದ ರೀತಿಯಲ್ಲಿ ಪರಿಶ್ರಮ ಹಾಗೂ ಪರಿಣಿತಗಳಿಂದ ಮಾಯಾಚೌಕ (Magic Squares) ರೇಖಾ ಗಣಿತದ ಕ್ಲಿಷ್ಟ ಸಮಸ್ಯೆಗಳು, ಬೀಜಗಣಿತದ ವಿಧಾನಗಳು, ಕಲನಶಾಸ್ತ್ರ (calculus) ಗಣಿತ ವಿಶ್ಲೇಷಣಾ ಶಾಸ್ತ್ರ Analysis) ಮುಂತಾದ ಕ್ಷೇತ್ರಗಳಲ್ಲಿ ಆಸಕ್ತಿಯನ್ನು ರಾಮಾನುಜನ್ ಬೆಳೆಸಿಕೊಂಡಿದ್ದರು. ಅನಂತರ 1904ರಲ್ಲಿ ಕುಂಭಕೋಣಂನ ಸರ್ಕಾರಿ ಕಾಲೇಜಿನಲ್ಲಿ ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದ ರಾಮಾನುಜನ್ ಗಣಿತ ಮತ್ತು ಇಂಗ್ಲೀಷ್ ವಿಷಯಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗೆ ಮೀಸಲಾಗಿದ್ದ ‘ಸುಬ್ರಹ್ಮಣ್ಯಂ ಸ್ಕಾಲರ್‌ಷಿಪ್‌’ ಗಳಿಸಿಕೊಂಡರು, ಇದರಿಂದಾಗಿ ತಮ್ಮ ಹೊಟ್ಟೆ, ಬಟ್ಟೆ ಮತ್ತು ಪುಸ್ತಕಗಳ ಖರ್ಚನ್ನು ನಿರ್ವಹಿಸಲು ಬಹಳ ಮಟ್ಟಿಗೆ ಸಹಾಯವಾಯಿತು. ಆದರೆ ತಮ್ಮಲ್ಲಿದ್ದ ಆಸಕ್ತಿಯನ್ನು ಏಕೈಕ ವಿಷಯದತ್ತ ಅದು ಅವರ ತರಗತಿಯ ಮಟ್ಟಕ್ಕಿಂತ ಬಹಳ ಉನ್ನತಸ್ತರದ ಗಣಿತದತ್ತ ಕೇಂದ್ರೀಕರಿಸಿದ ಫಲವಾಗಿ ಇತರ ವಿಷಯಗಳಲ್ಲಿ ಸಾಕಷ್ಟು ಆಸಕ್ತಿಯನ್ನು ತೋರದೆ ಎಫ್.ಎ (ಈಗಿನ ಪಿ.ಯು.ಸಿ)ಯಲ್ಲಿ ಅನುತ್ತೀರ್ಣರಾದರು.

ರಾಮಾನುಜನ್‍ಗೆ 1909ರಲ್ಲಿ ಕೇವಲ 9 ವರ್ಷಗಳ ಪುಟ್ಟ ಬಾಲಕಿಯಾದ ಜಾನಕಿಯೊಂದಿಗೆ ವಿವಾಹವಾಯಿತು. ಆರ್ಥಿಕ ಪರಿಸ್ಥಿತಿ ಬಹಳ ಹದಗೆಟ್ಟು ಹೊಟ್ಟೆಪಾಡಿಗಾಗಿ ಯಾವ ಕೆಲಸವೂ ಸಿಗದಿದ್ದರೂ ರಾಮಾನುಜನ್ ಸತತವಾಗಿ ಉಚ್ಚಮಟ್ಟದ ಗಣಿತ ಸಂಶೋಧನೆಯಲ್ಲೇ ತೊಡಗಿ ತಾನು ಸಾಧಿಸಿದ ಫಲಿತಾಂಶಗಳನ್ನು ತಮ್ಮ ಒಂದು ನೋಟ್ ಪುಸ್ತಕದಲ್ಲಿ ಬರೆದಿಟ್ಟುಕೊಳ್ಳಲಾರಂಭಿಸಿದರು.

ದಕ್ಷಿಣ ಆರ್ಕಾಟ್ ಜಿಲ್ಲೆಯ ತಿರುಕೊಯಿಲೂರಿನಲ್ಲಿ ಡೆಪ್ಯೂಟಿ ಕಲೆಕ್ಟರ್ ಆಗಿದ್ದ ವಿ.ರಾಮಸ್ವಾಮಿ ಅಯ್ಯರ್ ಹಾಗೂ ರಾಮಾನುಜನ್‍ನ ಪ್ರತಿಭೆಯನ್ನು ಈಗಾಗಲೇ ತಿಳಿದುಕೊಂಡಿದ್ದ ಕುಂಭಕೋಣಂನ ಕಾಲೇಜಿನ ಮುಖ್ಯಸ್ಥರು ಆನಂತರ ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜಿನ ಗಣಿತ ಪ್ರಾಧ್ಯಾಪಕರೂ ಆಗಿದ್ದ ಪ್ರೊ.ಪಿ.ವಿ.ಶೇಷು ಅಯ್ಯರ್ ಇವರುಗಳ ಸಹಾಯದಿಂದ ರಾಮಾನುಜನ್‍ಗೆ ಅಕೌಂಟೆಂಟ್ ಜನರಲ್‍ರವರ ಕಚೇರಿಯಲ್ಲಿ ಒಂದು ಹಂಗಾಮಿ ಗುಮಾಸ್ತನ ಕೆಲಸ ದೊರೆಯಿತು. ಹಂಗಾಮಿ ಗುಮಾಸ್ತಗಿರಿ ಮುಗಿದ ನಂತರ ರಾಮಾನುಜನ್ ಪುನಃ ನಿರುದ್ಯೋಗಿ ಆದರೂ ಅವರ ಗಣಿತ ಸಂಶೋಧನೆ ಸತತವಾಗಿ ನಡೆಯುತ್ತಲೇ ಇತ್ತು.

ರಾಮಾನುಜನ್ ತಮ್ಮ ಹಳೆಯ ಮಿತ್ರರಾದ ಸಿ.ವಿ.ರಾಜಗೋಪಾಲಾಚಾರಿ ಹಾಗೂ ಹಿತೈಷಿ ಪ್ರಾಧ್ಯಾಪಕರಾದ ಶೇಷು ಅಯ್ಯರ್ ಇವರುಗಳ ಸಲಹೆಯಂತೆ ಮಿತ್ರ ಕೃಷ್ಣರಾವ್ ಮೂಲಕ ನೆಲ್ಲೂರು ಜಿಲ್ಲೆಯ ಕಲೆಕ್ಟರ್ ಆಗಿದ್ದ ದಿವಾನ್ ಬಹದ್ದೂರ್ ಆರ್.ರಾಮಚಂದ್ರ ರಾವ್ ಅವರನ್ನು ಭೇಟಿಯಾದರು. ರಾಯರು ಸ್ವತಃ ಗಣಿತದಲ್ಲಿ ಪರಿಶ್ರಮವನ್ನು ಹೊಂದಿದ್ದು ಆಗ ಇಂಡಿಯನ್ ಮ್ಯಾಥಮೆಟಿಕಲ್ ಸೊಸೈಟಿಯ ಅಧ್ಯಕ್ಷರಾಗಿದ್ದರು. ಇವರಿಗೆ ರಾಮಾನುಜನ್‍ರವರು ತಮ್ಮ ಕೆಲವು ಸರಳವಾದ ಫಲಿತಾಂಶಗಳನ್ನು ತೋರಿಸಿದರು. ರಾಮಾನುಜನ್ ಒಬ್ಬ ವಿಲಕ್ಷಣ ಪ್ರತಿಭಾವಂತ ಮೇಧಾವಿ ಎಂದು ಮನಗಂಡರು. ಅವರನ್ನು ರಾಮಾನುಜನ್ ಹಂತಹಂತವಾಗಿ Elliptic Integralls, Hyper Geometric Series, Divergent Series ಮುಂತಾದವುಗಳ ಒಂದು ಅದ್ಭುತವಾದ ಗಣಿತ ಲೋಕಕ್ಕೆ ಕೊಂಡೊಯ್ದರಂತೆ. ಇವುಗಳಿಂದ ಪೂರ್ತಿ ಮನಸೋತ ದಿವಾನ್ ಬಹದ್ದೂರ್ ರಾಮಚಂದ್ರ ರಾಯರು ರಾಮಾನುಜನ್‍ಗೆ ನಿನಗೆ ನನ್ನಿಂದ ಏನು ಸಹಾಯ ಬೇಕಾಗಿದೆ ಎಂದು ಕೇಳಿದರಂತೆ. ಅದಕ್ಕೆ ರಾಮಾನುಜನ್ ಕೊಟ್ಟ ನೇರ ಸರಳ ಉತ್ತರ ‘ನನ್ನ ಗಣಿತ ಸಂಶೋಧನೆಯನ್ನು ಮುಂದುವರಿಸಿಕೊಂಡು ಹೋಗುವಷ್ಟರ ಮಟ್ಟಿಗೆ ಬದುಕಿಕೊಂಡಿರಲು ಅನ್ನ ಸಹಾಯ ಬೇಕುʼ!

ರಾಮಚಂದ್ರ ರಾಯರ ಔದಾರ್ಯದಿಂದ 1911-12ರ ಕೆಲವು ತಿಂಗಳುಗಳ ಕಾಲ ತಾತ್ಕಾಲಿಕ ಪರಿಹಾರ ದೊರೆಯಿತು. ಈ ಸಮಯದಲ್ಲೇ ‘ಜರ್ನಲ್ ಆಫ್ ದಿ ಇಂಡಿಯನ್ ಮ್ಯಾಥಮ್ಯಾಟಿಕಲ್ ಸೊಸೈಟಿ’ ಎಂಬ ಸಂಶೋಧನಾ ನಿಯತಕಾಲಿಕಕ್ಕೆ ತಮ್ಮ ಮೊಟ್ಟ ಮೊದಲ ಕೊಡುಗೆಯನ್ನು ರಾಮಾನುಜನ್ ಕಳುಹಿಸಿದರು. ಆಮೇಲೆ ಆಗಿಂದಾಗ ಒಂದಾದ ಮೇಲೊಂದರಂತೆ ಅನೇಕ ಪ್ರಮುಖ ಫಲಿತಾಂಶಗಳನ್ನು, ಸಮಸ್ಯೆಗಳನ್ನು ಹಾಗೂ ಉತ್ತರಗಳನ್ನು ಕಳುಹಿಸುತ್ತಿದ್ದರು ಈ ಎಲ್ಲವೂ ಪ್ರಕಟಣೆಯಾದವು.

ಭಾರತದ ಕೆಲವು ಸಂಶೋಧನಾ ಪತ್ರಿಕೆಗಳಲ್ಲಿ ತಮ್ಮ ಸಂಶೋಧನೆಗಳನ್ನು ಪ್ರಕಟಿಸಿದ ನಂತರ ಯೂರೋಪ್‍ನ ಕೆಲವು ಗಣಿತಜ್ಞರಲ್ಲಿ ಇವರ ಬಗ್ಗೆ ಆಸಕ್ತಿ ಕೆರಳಿಸಿತು. 1913 ರ ಜನವರಿ 16ರಂದು ಇಂಗ್ಲೆಂಡ್‍ನ ಪ್ರಸಿದ್ಧ ಗಣಿತಜ್ಞರಾಗಿದ್ದ ಪ್ರೊ.ಜಿ.ಹೆಚ್.ಹಾರ್ಡಿಯವರಿಗೆ ರಾಮಾನುಜನ್ ಬರೆದ ಪತ್ರದಲ್ಲಿ ಅನೇಕ ಸಿದ್ಧಾಂತಗಳನ್ನು ಮಂಡಿಸಿದ್ದರು. ಮೊದಲಿಗೆ ಸ್ವಲ್ಪ ಅಪನಂಬಿಕೆ ತೋರಿಸಿದರು. ಹಾರ್ಡಿ ಬೇಗನೇ ಅವರ ಪ್ರತಿಭೆಯನ್ನು ಮನಗಂಡು ಇಂಗ್ಲೆಂಡ್‍ಗೆ ಬರುವಂತೆ ಆಹ್ವಾನವಿತ್ತರು.

ಇಂಗ್ಲೆಂಡ್‌ನಲ್ಲಿ ಪ್ರತಿಭೆಯ ಪ್ರವಾಹ

ಮದ್ರಾಸ್ ವಿಶ್ವವಿದ್ಯಾಲಯವು ರಾಮಾನುಜನ್‍ರವರಿಗೆ ವರ್ಷಕ್ಕೆ 250 ಪೌಂಡ್‍ಗಳಂತೆ ಎರಡು ವರ್ಷಗಳ ವೇತನವನ್ನು ಹಾಗೂ ಇಂಗ್ಲೆಂಡ್‍ಗೆ ಹೋಗಲು ಹಡಗಿನ ಖರ್ಚನ್ನು ಮಂಜೂರು ಮಾಡಿತು. ಆ ವೇತನದಲ್ಲಿ ತಿಂಗಳಿಗೆ 60 ರೂಪಾಯಿಗಳನ್ನು ಕುಂಭಕೋಣಂನಲ್ಲಿದ್ದ ತಮ್ಮ ವೃದ್ಧ ತಾಯಿಯವರಿಗೆ ಕೊಡಬೇಕೆಂದು ವ್ಯವಸ್ಥೆ ಮಾಡಿ, ಹಾರ್ಡಿಯವರ ಸಹೋದ್ಯೋಗಿಯಾಗಿದ್ದ ಪ್ರೊ. ಇ.ಎಸ್.ನೆವಿಲ್ಲೆ ಅವರ ಜೊತೆಯಲ್ಲಿ ಮಾರ್ಚ್ 17, 1914ರಂದು ರಾಮಾನುಜನ್ ಇಂಗ್ಲೆಂಡ್‍ನತ್ತ ಹಡಗಿನಲ್ಲಿ ಪ್ರಯಾಣ ಬೆಳೆಸಿದರು.

ಇದನ್ನೂ ಓದಿ | ಸ್ಮರಣೆ | ಸ್ವದೇಶೀ ಚಿಂತನೆಯ ಹರಿಕಾರ ರಾಜೀವ್ ದೀಕ್ಷಿತ್

ಮಡಿವಂತಿಕೆ ಹಾಗೂ ಶಾಖಾಹಾರದ ಅಭ್ಯಾಸದಿಂದ ಬಹಳ ಉಸಿರುಗಟ್ಟುವ ಸನ್ನಿವೇಶವಿದ್ದಾಗ್ಯೂ ಈ ಕಷ್ಟಗಳಿಂದ ವಿಚಲಿತರಾಗದೆ ಕೇವಲ ತಮ್ಮ ಸಂಶೋಧನೆಯ ಮೇಲೆ ಮಾತ್ರ ಕೇಂದ್ರೀಕರಿಸಿ, ತಾವು ಕೇಂಬ್ರಿಡ್ಜ್‌ನಲ್ಲಿದ್ದ ಐದು ವರ್ಷಗಳ ಕಾಲ (1914-1919) ಬಹಳ ವಿಪುಲವಾದ, ಗಾಢವಾದ ಮತ್ತು ಅತ್ಯದ್ಭುತವಾದ ಗಣಿತ ಸಾಧನೆಯನ್ನು ಮಾಡಿದ ಹಿರಿಮೆ ರಾಮಾನುಜನ್ ಅವರದ್ದು. ಹಾರ್ಡಿ ಮತ್ತು ರಾಮಾನುಜನ್ ಸೇರಿ ಹತ್ತು ಹಲವು ಸಂಶೋಧನೆಗಳನ್ನು ಮಂಡಿಸಿದರು. ಹಲವಾರು ವರ್ಷಗಳ ನಂತರ ಸಂದರ್ಶನವೊಂದರಲ್ಲಿ ಹಾರ್ಡಿ ತಮ್ಮ ಗಣಿತ ಜೀವನದ ಎಲ್ಲಕ್ಕಿಂತ ಮುಖ್ಯ ಸಾಧನೆಯೆಂದರೆ ರಾಮಾನುಜನ್‌ರವರನ್ನು ಬೆಳಕಿಗೆ ತಂದದ್ದು ಎಂದು ಬಹಳ ಹೆಮ್ಮೆಯಿಂದ ಹೇಳಿಕೊಂಡರು.

ರಾಮಾನುಜನ್‍ರವರ ಅತ್ಯುತ್ಕೃಷ್ಟವಾದ ಸಂಶೋಧನೆಗಳನ್ನು ಮೆಚ್ಚಿ ಜಗದ್ವಿಖ್ಯಾತವಾದ ಲಂಡನ್ನಿನ ರಾಯಲ್ ಸೊಸೈಟಿಯು 1918 ಫೆಬ್ರವರಿ 28ರಂದು ‘F.R.S’ (ಫೆಲೋ ಆಫ್ ರಾಯಲ್ ಸೊಸೈಟಿ) ಎಂಬ ತನ್ನ ಅತ್ಯುನ್ನತ ಪ್ರಶಸ್ತಿಯನ್ನು ಕೊಟ್ಟು ಅವರನ್ನು ಗೌರವಿಸಿತು. ಆಗ ರಾಮಾನುಜನ್‍ರವರಿಗೆ ಕೇವಲ 30 ವರ್ಷ. ಈ ಮೊದಲೇ 1916 ಮಾರ್ಚಿಯಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯವು ರಾಮಾನುಜನ್‍ಗೆ ಪ್ರತ್ಯೇಕವಾಗಿ ‘ಸಂಶೋಧನೆಯ ಮೂಲಕ’ ಬಿ.ಎ ಪದವಿಯನ್ನು ಕೊಟ್ಟಿತು. ತಮ್ಮ ‘F.R.S’ ಪ್ರಶಸ್ತಿಯಿಂದ ಇನ್ನೂ ಹೆಚ್ಚು ಸ್ಫೂರ್ತಿಗೊಂಡು ಸಂಪೂರ್ಣವಾಗಿ ‘ಗಣಿತ ಜೀವಿಯೇ’ ಆಗಿಬಿಟ್ಟರು. ರಾಮಾನುಜನ್ ಅವರ ಗಣಿತದ ಕಮ್ಮಟದಿಂದ ಹೊರಬರುತ್ತಿದ್ದ ಅವ್ಯಾಹತ ಧಾರೆಯಿಂದ ಅಸಂಖ್ಯಾತ ಕಣಗಳಿಂದಲೇ ಜೀವಿಸುವ ‘ಗಣಿತ ಕಣಾದರೇ’ ಆದರು.

ಜೀವನವಿಡೀ ಆರೋಗ್ಯದ ತೊಂದರೆಗಳಿಂದ ಬಾಧಿತರಾಗಿದ್ದ ರಾಮಾನುಜನ್ ಅವರ ಆರೋಗ್ಯ ಲಂಡನ್ನಿನಲ್ಲಿ ಮತ್ತಷ್ಟು ಹದಗೆಟ್ಟಿತು. ಅಲ್ಲಿ ಸಸ್ಯಾಹಾರ ಸುಲಭವಾಗಿ ಸಿಗದೇ ಇದ್ದದ್ದು ಇದಕ್ಕೆ ಒಂದು ಮುಖ್ಯ ಕಾರಣ, ಜೀವಸತ್ತ್ವಗಳ ಕೊರತೆ ಮತ್ತು ಕ್ಷಯ ರೋಗದಿಂದ ನರಳಿದ ರಾಮಾನುಜನ್ 1919ರಲ್ಲಿ ಭಾರತಕ್ಕೆ ಮರಳಿದರು. ರಾಮಾನುಜನ್‍ರ ದೇಹಸ್ಥಿತಿಯು ಇನ್ನೂ ಹೆಚ್ಚು ಹೆಚ್ಚು ಕೆಡಲಾರಂಭಿಸಿ ಅವರ ಶುಶ್ರೂಷೆಗಾಗಿ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿ ಕೊನೆಗೆ 1920ರ ಏಪ್ರಿಲ್ 26ರಂದು ಸೋಮವಾರ ರಾಮಾನುಜನ್‍ರವರ ದೇಹಾಂತ್ಯವಾಯಿತು. ಆಗ ಅವರಿಗೆ ಕೇವಲ 33 ವರ್ಷಗಳು. ಅವರ ಬಹಳ ಪ್ರೀತಿಪಾತ್ರರಾಗಿದ್ದ ವೃದ್ಧ ತಾಯಿ ಕೋಮಲತ್ತಮ್ಮಾಳ್ ಶೋಕತಪ್ತರಾದರು. ಅವರ ಪತ್ನಿ ಜಾನಕಿಯಮ್ಮಾಲ್‌ಗೆ ಆಗ ಕೇವಲ 20 ವರ್ಷ. ಚೆನ್ನೈ ನಗರದ ಸಮೀಪವೇ ಇದ್ದು 94 ವರ್ಷಗಳ ಕಾಲ ಬದುಕಿದ್ದ ಅವರು 1994ರಲ್ಲಿ ನಿಧರಾದರು. ಹೀಗೆ ರಾಮಾನುಜನ್ ಎಂಬ ಜಗದ್ವಿಖ್ಯಾತವಾದ ಒಂದು ಅಪೂರ್ವ ಗಣಿತ ಪ್ರತಿಭೆಯ ದೀಪ ನಂದಿತು.

ಇದನ್ನೂ ಓದಿ | ಖುದಿರಾಮ್ ಬೋಸ್ ಸ್ಮರಣೆ | ಸ್ವಾತಂತ್ರ್ಯ ಸಂಗ್ರಾಮದ ಕಿರಿಯ ಬಲಿದಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

ರಾಜಮಾರ್ಗ ಅಂಕಣ: ಅದು 1984ರಲ್ಲಿ ಮುಂಬೈಯಲ್ಲಿ ಜನ್ಮ ತಾಳಿದ ಮತ್ತು ಇಂದು ಭಾರತದ ನೂರಾರು ನಗರಗಳಿಗೆ ವಿಸ್ತರಿಸಿರುವ ಭಾರತದ ಟಾಪ್ ಮೋಸ್ಟ್ ಐಸ್ ಕ್ರೀಮ್ ಬ್ರಾಂಡ್ ಬೆಳೆದು ನಿಂತ ಕಥೆ ತುಂಬಾ ರೋಚಕ. ಅದರ ಹಿಂದಿರುವ ವಿಶನರಿ ಒಬ್ಬ ಹಣ್ಣಿನ ವ್ಯಾಪಾರಿಯ ಮಗ. ಅವರು ಮೂಲತಃ ಮುಲ್ಕಿಯವರು. ಹೆಸರು ರಘುನಂದನ್ ಶ್ರೀನಿವಾಸ್ ಕಾಮತ್.

VISTARANEWS.COM


on

natural ice cream 1 rajamarga coumn
Koo

ಮಂಗಳೂರಿನ ಒಬ್ಬ ಸಾಮಾನ್ಯ ಹಣ್ಣಿನ ವ್ಯಾಪಾರಿಯ ಮಗ 300 ಕೋಟಿ ರೂ. ವಾರ್ಷಿಕ ಆದಾಯದ ಕಂಪೆನಿಯನ್ನು ಕಟ್ಟಿದ ಕಥೆ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ʼನ್ಯಾಚುರಲ್ ಐಸ್ ಕ್ರೀಮ್’ (ಣಾಇಂದು ಯಾರಿಗೆ ಗೊತ್ತಿಲ್ಲ ಹೇಳಿ? ವೆನಿಲ್ಲಾ, ಸ್ಟ್ರಾಬೆರಿ, ಚಾಕೊಲೇಟ್ ಮೊದಲಾದ ಕೃತಕ ಫ್ಲೇವರಗಳ ಈ ಕಾಲದಲ್ಲಿ ತಾಜಾ ಹಣ್ಣುಗಳ ರುಚಿ ರುಚಿಯಾದ ತಿರುಳನ್ನು ಬೆರೆಸಿ ತಯಾರಿಸಿರುವ ಸ್ವಾದಿಷ್ಟವಾದ ಐಸ್ ಕ್ರೀಂ ಯಾರಿಗೆ ಇಷ್ಟ ಆಗೋದಿಲ್ಲ ಹೇಳಿ?

ಅದು 1984ರಲ್ಲಿ ಮುಂಬೈಯಲ್ಲಿ ಜನ್ಮ ತಾಳಿದ ಮತ್ತು ಇಂದು ಭಾರತದ ನೂರಾರು ನಗರಗಳಿಗೆ ವಿಸ್ತರಿಸಿರುವ ಭಾರತದ ಟಾಪ್ ಮೋಸ್ಟ್ ಐಸ್ ಕ್ರೀಮ್ ಬ್ರಾಂಡ್ ಬೆಳೆದು ನಿಂತ ಕಥೆ ತುಂಬಾ ರೋಚಕ. ಅದರ ಹಿಂದಿರುವ ವಿಶನರಿ ಒಬ್ಬ ಹಣ್ಣಿನ ವ್ಯಾಪಾರಿಯ ಮಗ. ಅವರು ಮೂಲತಃ ಮುಲ್ಕಿಯವರು. ಹೆಸರು ರಘುನಂದನ್ ಶ್ರೀನಿವಾಸ್ ಕಾಮತ್.

15ನೆಯ ವರ್ಷಕ್ಕೆ ಮುಂಬೈಗೆ ಹೊರಟರು

ಅವರ ತಂದೆ ಮೂಲ್ಕಿಯಲ್ಲಿ ಒಬ್ಬ ಸಣ್ಣ ಹಣ್ಣಿನ ವ್ಯಾಪಾರಿ ಆಗಿದ್ದರು. ಈ ಹುಡುಗ ರಘುನಂದನ್ ಕಾಮತ್ ಮನೆಯ ಏಳು ಮಂದಿ ಮಕ್ಕಳಲ್ಲಿ ಅತ್ಯಂತ ಕಿರಿಯರು. ಹುಟ್ಟಿದ್ದು 1954ರಲ್ಲಿ. ಮನೆಯಲ್ಲಿ ತೀವ್ರ ಬಡತನ ಇದ್ದ ಕಾರಣ ಶಿಕ್ಷಣ ಅರ್ಧಕ್ಕೆ ನಿಂತಿತು. ಅಪ್ಪನ ಜೊತೆ ಹೋಗಿ ಹಣ್ಣುಗಳನ್ನು ಕಿತ್ತು ತರುವುದು, ಒಳ್ಳೆಯ ಹಣ್ಣುಗಳನ್ನು ಆಯುವುದು ಅವರ ಕೆಲಸ. ಮುಂದೆ ಹಸಿವು ತಡೆಯಲು ಕಷ್ಟ ಆದಾಗ ಹದಿನೈದನೇ ವರ್ಷಕ್ಕೇ ಮುಂಬೈಗೆ ಪ್ರಯಾಣ ಬೆಳೆಸಿದರು.

ಅಲ್ಲಿ ಅವರ ಅಣ್ಣನ ಸಣ್ಣ ಹೋಟೆಲು ಇತ್ತು. ಅಲ್ಲಿ ಕೆಲಸ ಮಾಡುತ್ತ ರಘುನಂದನ್ ಹೋಟೆಲ್ ಕೆಲಸ ಕಲಿತರು. ಅಣ್ಣನ ಹೋಟೆಲಿನಲ್ಲಿ ವಿವಿಧ ಕಂಪೆನಿಯ ಐಸ್ ಕ್ರೀಮ್ ದೊರೆಯುತ್ತಿದ್ದವು. ಅವುಗಳೆಲ್ಲವೂ ಕೃತಕವಾದ ಫ್ಲೇವರ್ ಹೊಂದಿದ್ದವು. ನಾವ್ಯಾಕೆ ತಾಜಾ ಹಣ್ಣಿನ ತಿರುಳು ಇರುವ ಐಸ್ ಕ್ರೀಂ ಮಾಡಬಾರದು? ಎಂಬ ಯೋಚನೆಯು ಅವರ ಪುಟ್ಟ ಮೆದುಳಿಗೆ ಬಂದಿತು. ಅದನ್ನು ಅವರ ತನ್ನ ಅಣ್ಣನ ಜೊತೆಗೆ ಚರ್ಚೆ ಮಾಡಿದಾಗ ಅಣ್ಣ ರಿಸ್ಕ್ ತೆಗೆದುಕೊಳ್ಳಲು ಒಪ್ಪಲಿಲ್ಲ. ಬಂಡವಾಳ ಹಾಕೋದು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಆದರೆ ರಘುನಂದನ್ ಕನಸು ಸಾಯಲೇ ಇಲ್ಲ.

1983ರಲ್ಲಿ ಜುಹೂನಲ್ಲಿ ಅವರ ಒಂದು ಸಣ್ಣ ಹೋಟೆಲು ಆರಂಭ ಮಾಡಿದರು.

ರಘುನಂದನ್ ಆರಂಭ ಮಾಡಿದ 200 ಚದರಡಿ ಜಾಗದ ಉಸಿರು ಕಟ್ಟುವ ಸಣ್ಣ ಹೋಟೆಲು ಅದು. ನಾಲ್ಕು ಜನ ಕೆಲಸದವರು. ಒಟ್ಟು ಆರು ಟೇಬಲಗಳು. ಪಾವ್ ಬಾಜಿ ಮತ್ತು ಕೆಲವೇ ಕೆಲವು ತಾಜಾ ಹಣ್ಣಿನ ಐಸ್ ಕ್ರೀಂ ತಯಾರಿಸಿ ಗ್ರಾಹಕರ ಮುಂದೆ ಅವರು ಇರಿಸಿದರು. ಆರಂಭದಲ್ಲಿ ಅನಾನಸು, ದ್ರಾಕ್ಷಿ, ಪಪ್ಪಾಯ, ಚಿಕ್ಕು, ಸೀಬೆ, ಮಾವು, ದಾಳಿಂಬೆ ಮೊದಲಾದ ಹಣ್ಣುಗಳ ಐಸ್ ಕ್ರೀಮ್ ರೆಡಿ ಆದವು.

ಮುಂಬೈಯ ಗ್ರಾಹಕರಿಗೆ ಈ ನ್ಯಾಚುರಲ್ ಐಸ್ ಕ್ರೀಂ ಭಾರೀ ಇಷ್ಟ ಆಯ್ತು. ಜನರು ಕ್ಯೂ ನಿಂತು ಐಸ್ ಕ್ರೀಮ್ ಚಪ್ಪರಿಸಿ ತಿಂದರು. ಜುಹೂ ನಗರದ ರಸ್ತೆಗಳಲ್ಲಿ ಇವರ ಕ್ರೀಮ್ ಪಾರ್ಲರ್ ಕಾರಣಕ್ಕೆ ಟ್ರಾಫಿಕ್ ಜಾಮ್ ಆಯಿತು! ಒಂದು ವರ್ಷ ಮುಗಿಯುವುದರ ಒಳಗೆ ಹತ್ತು ಹಣ್ಣಿನ ತಿರುಳು ಇರುವ ಐಸ್ ಕ್ರೀಮಗಳನ್ನು ಅವರು ರೆಡಿ ಮಾಡಿದ್ದರು. ಜನರಿಗೆ ತುಂಬಾ ತಾಜಾ ಆದ ಹಾಗೂ ಸ್ವಾದಿಷ್ಟತೆ ಇರುವ ಈ ಹಣ್ಣುಗಳ ಐಸ್ ಕ್ರೀಂ ರುಚಿ ತುಂಬಾನೇ ಇಷ್ಟ ಆಯ್ತು. ಕ್ರಮೇಣ ಪಾವ್ ಭಾಜಿ ನಿಲ್ಲಿಸಿ ಅವರು ಐಸ್ ಕ್ರೀಂ ಕಾರ್ನರ್ ಮಾತ್ರ ಮುಂದುವರೆಸಿದರು.

ನ್ಯಾಚುರಲ್ ಐಸ್ ಕ್ರೀಮ್ ಅಂದರೆ ರಾಜಿಯೇ ಇಲ್ಲದ ಗುಣಮಟ್ಟ ಮತ್ತು ಸ್ವಾದ

ರಘುನಂದನ್ ಕಾಮತ್ ಅವರ ದಣಿವರಿಯದ ಅದ್ಭುತ ಉತ್ಸಾಹ, ಸಂಶೋಧನಾ ಪ್ರವೃತ್ತಿ, ಗ್ರಾಹಕರ ಅಭಿರುಚಿ ರೀಡ್ ಮಾಡುವ ಕೌಶಲ ಮತ್ತು ಗುಣಮಟ್ಟ ಕಾಪಾಡುವ ಆಸ್ತೆ………ಇವುಗಳಿಂದ NATURALS ICE CREAM ಮುಂಬೈ ಮಹಾನಗರದ ಭಾರೀ ದೊಡ್ಡ ಬ್ರಾಂಡ್ ಆಗಿ ಬೆಳೆಯಲು ಹೆಚ್ಚು ವರ್ಷ ಬೇಕಾಗಲಿಲ್ಲ. Taste the original ಅನ್ನುವುದು ಅದರ ಟ್ಯಾಗ್ ಲೈನ್ ಆಗಿತ್ತು.

ಕೇವಲ ಹತ್ತು ವರ್ಷಗಳ ಅವಧಿಯಲ್ಲಿ ಮುಂಬೈಯಲ್ಲಿ ಐದು ಸುಸಜ್ಜಿತ ಕ್ರೀಮ್ ಪಾರ್ಲರ್ ಉದ್ಘಾಟನೆ ಆದವು. ಪೇರಳೆ, ಸೀಯಾಳ, ಹಲಸಿನ ಹಣ್ಣು, ಮಸ್ಕ್ ಮೇಲನ್, ಕಲ್ಲಂಗಡಿ, ಮಾವಿನ ಹಣ್ಣು, ಲಿಚ್ಚಿ, ಫಿಗ್, ಸೀತಾ ಫಲ, ಜಾಮೂನ್, ತಾಳೆ ಹಣ್ಣು, ನೇರಳೆ ಹಣ್ಣುಗಳ ಐಸ್ ಕ್ರೀಂಗಳು ಭಾರೀ ಜನಪ್ರಿಯವಾದವು.

ಜಾಹೀರಾತಿಗೆ ವಿನಿಯೋಗ ಮಾಡಿದ್ದು 1% ದುಡ್ಡು ಮಾತ್ರ!

ಪಾರ್ಲರಗಳಲ್ಲಿ ಗ್ರಾಹಕರ ಅಭಿರುಚಿಗೆ ಅನುಗುಣವಾದ ವಾತಾವರಣವು ರೆಡಿ ಆಯ್ತು. ತರಬೇತು ಆದ ಸಿಬ್ಬಂದಿ ವರ್ಗ ಗ್ರಾಹಕರ ಸೇವೆಗೆ ಸಿದ್ಧವಾಯಿತು. ಗುಣಮಟ್ಟ ಮತ್ತು ಸ್ವಾದ ಚೆನ್ನಾಗಿದ್ದ ಕಾರಣ ಕಾಮತರು ಕೇವಲ ಒಂದು ಶೇಕಡಾ ವ್ಯಾಪಾರದ ದುಡ್ಡನ್ನು ಜಾಹೀರಾತಿಗೆ ಖರ್ಚು ಮಾಡಿದರು. ಅವರ ಐಸ್ ಕ್ರೀಮ್ ಗೆ ಅವರೇ ಬ್ರಾಂಡ್ ರಾಯಭಾರಿ ಆದರು. ಗ್ರಾಹಕರ ಬಾಯಿಂದ ಬಾಯಿಗೆ ತಲುಪುವ ಮೆಚ್ಚುಗೆಯ ಮಾತುಗಳೇ ಕಂಪೆನಿಗೆ ಜಾಹೀರಾತು ಆದವು. ಗ್ರಾಹಕರ ವಿಶ್ವಾಸವು ಹೆಚ್ಚಿದಂತೆ ಅವರ ಐಸ್ ಕ್ರೀಂ ಬಹಳ ದೊಡ್ಡ ಬ್ರಾಂಡ್ ಆಗಿ ಬೆಳೆಯಿತು.

ನಾವೀನ್ಯತೆ, ಸಂಶೋಧನೆ ಮತ್ತು ಬ್ರಾಂಡಿಂಗ್!

ಮುಂದೆ ದೂರದ ಊರುಗಳಿಂದ ಬೇಡಿಕೆ ಬಂದಾಗ ಐಸ್ ಕ್ರೀಂ ಸಾಗಾಟವು ತೊಂದರೆ ಆಯಿತು. ಆಗ ಕಾಮತರು ವಿಶೇಷವಾದ ಥರ್ಮೋಕೊಲ್ ಪ್ಯಾಕೇಜಿಂಗ್ ಇಂಡಸ್ಟ್ರಿ ಆರಂಭ ಮಾಡಿದರು. ಅದರಿಂದ ಐಸ್ ಕ್ರೀಮನ್ನು ದೀರ್ಘ ಕಾಲಕ್ಕೆ ಕಾಪಿಡಲು ಸಾಧ್ಯ ಆಯ್ತು. ರಘುನಂದನ್ ಕಾಮತ್ ಅವರ ಉತ್ಸಾಹಕ್ಕೆ ಎಣೆಯೇ ಇರಲಿಲ್ಲ. ಅವರು ಶುದ್ಧವಾದ ಹಾಲು, ಫಾರ್ಮ್ ಫ್ರೆಶ್ ತೋಟದ ಹಣ್ಣುಗಳು ಇಡೀ ವರ್ಷ ದೊರೆಯುವಂತೆ ಮಾಡಿದರು. ಕೆಲವೇ ಕೆಲವು ಸೀಸನಲ್ ಹಣ್ಣುಗಳ ಐಸ್ ಕ್ರೀಮ್ ಕೂಡ ಸಿದ್ಧವಾಯಿತು. ಎಲ್ಲಾ ಹಣ್ಣುಗಳನ್ನು ಅವರು ರೈತರಿಂದ ನೇರ ಖರೀದಿ ಮಾಡಿದರು. ಇದೆಲ್ಲದರ ಫಲವಾಗಿ ನ್ಯಾಚುರಲ್ ಐಸ್ ಕ್ರೀಂ ಕಂಪೆನಿಯು ಮುಂಬೈ ಮಹಾನಗರದ ಹೊರಗೆ ತನ್ನ ಶಾಖೆಗಳನ್ನು ತೆರೆಯಿತು. ಫ್ರಾಂಚೈಸಿಗಳಿಗೆ ಭಾರೀ ಬೇಡಿಕೆ ಬಂದಿತು.

ನ್ಯಾಚುರಲ್ ಐಸ್ ಕ್ರೀಂ ಬ್ರಾಂಡಿನ ಸೀಮೋಲ್ಲಂಘನ!

2015ರ ಹೊತ್ತಿಗೆ ಕಂಪೆನಿಯು 125 ಹಣ್ಣುಗಳ ತಿರುಳು ಇರುವ ಐಸ್ ಕ್ರೀಮ್ ರೆಡಿ ಮಾಡಿತು. ನೂರು ಕೋಟಿ ಟರ್ನ್ ಓವರ್ ದಾಖಲು ಮಾಡಿತು. ಭಾರತದ ನೂರಾರು ನಗರಗಳನ್ನು ತಲುಪಿತು. ಕೋಟಿ ಕೋಟಿ ಗ್ರಾಹಕರ ನಾಲಗೆಯಲ್ಲಿ ಸ್ವಾದದ ಸಿಗ್ನೇಚರ್ ಮಾಡಿ ಜನಪ್ರಿಯ ಆಯಿತು. 2020ರ ಹೊತ್ತಿಗೆ ಕಂಪೆನಿಯು ವಾರ್ಷಿಕ 330 ಕೋಟಿ ಟರ್ನ್ ಓವರ್ ದಾಖಲಿಸಿ ಭಾರೀ ದೊಡ್ಡ ದಾಖಲೆಯನ್ನು ಮಾಡಿತು. ಒಮ್ಮೆ 2009ರಲ್ಲಿ 3000 ಕಿಲೋಗ್ರಾಂ ತೂಗುವ ಒಂದೇ ಫ್ಲೇವರ್ ಇರುವ ಕ್ರೀಮ್ ಸ್ಲಾಬ್ ರೆಡಿ ಮಾಡಿ ಲಿಮ್ಕಾ ದಾಖಲೆ ಕೂಡ ಬರೆಯಿತು. ಅವರ ಸೌತೆಕಾಯೀ ತಿರುಳಿನ ಐಸ್ ಕ್ರೀಂ ರಾಷ್ಟ್ರೀಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆಯಿತು.

ಈಗ ನ್ಯಾಚುರಲ್ ಐಸ್ ಕ್ರೀಂಗೆ ಸ್ಪರ್ಧೆಯೇ ಇಲ್ಲ!

ಈಗ ರಘುನಂದನ್ ಕಾಮತ್ ಅವರ ಮಗ ಸಿದ್ಧಾಂತ ಕಾಮತ್ ಅಪ್ಪನ ಉದ್ಯಮದಲ್ಲಿ ಕೈ ಜೋಡಿಸಿದ್ದಾರೆ. ಭಾರತದ 150 ಮಹಾನಗರಗಳಲ್ಲಿ ಇಂದು ನ್ಯಾಚುರಲ್ ಐಸ್ ಕ್ರೀಮಿನ ಔಟ್ ಲೆಟ್ ಇವೆ. ಹನ್ನೊಂದು ರಾಜ್ಯಗಳ ಮಾರ್ಕೆಟ್ ಗೆದ್ದು ಆಗಿದೆ. ನೂರಾ ಹತ್ತೊಂಬತ್ತು ಫ್ರಾಂಚೈಸಿ ಸ್ಟೋರ್ ಇವೆ. ವಿದೇಶದ ನಗರಗಳಿಗೆ ನ್ಯಾಚುರಲ್ ಐಸ್ ಕ್ರೀಂ ತಲುಪಿಸುವ ಪ್ರಯತ್ನಗಳು ಆರಂಭ ಆಗಿವೆ. ಇಂದು ನ್ಯಾಚುರಲ್ ಐಸ್ ಕ್ರೀಂ ಭಾರತದ ಟಾಪ್ 3 ಫ್ಲೇವರಗಳಲ್ಲಿ ಸ್ಥಾನ ಪಡೆದಿದೆ! ಅದರ ಹಿಂದೆ ರಘುನಂದನ್ ಕಾಮತ್ ಎಂಬ ಉದ್ಯಮಿಯ ಪರಿಶ್ರಮ ಮತ್ತು ದುಡಿಮೆ ಇವೆ.

ಸಜ್ಜನಿಕೆಯ ಸಾಕಾರ ಮೂರ್ತಿ ಅವರು.

ಅಂತಹ ರಘುನಂದನ್ ಕಾಮತ್ ಅವರನ್ನು ಒಂದು ಸಮ್ಮೇಳನದಲ್ಲಿ ನಾನು ಭೇಟಿ ಮಾಡಿದ್ದೆ. ಅಂದು ಅವರು ಹೇಳಿದ ಮಾತು ನನಗೆ ಅದ್ಭುತವಾದ ಸ್ಫೂರ್ತಿ ನೀಡಿತ್ತು.

‘ವೆನಿಲ್ಲಾ, ಸ್ಟ್ರಾಬೆರಿ, ಚಾಕೊಲೇಟ್ ಮೊದಲಾದ ಕೃತಕ ಫ್ಲೇವರ್ ರೆಡಿ ಮಾಡಲು ನಾನು ಹೊರಟಿದ್ದರೆ ಇಷ್ಟೆಲ್ಲ ಕಷ್ಟ ಪಡುವ ಅಗತ್ಯವೇ ಇರಲಿಲ್ಲ. ಗ್ರಾಹಕರಿಗೆ ತಾಜಾ ಹಣ್ಣುಗಳ ಸ್ವಾದವನ್ನು ಐಸ್ ಕ್ರೀಂ ಮಾಧ್ಯಮದ ಮೂಲಕ ನೀಡಬೇಕು ಎಂಬುದು ನನ್ನ ಬಯಕೆ ಆಗಿತ್ತು. ಜನರಿಗೂ ಅದು ಇಷ್ಟ ಆಯ್ತು. ಇದು ನನ್ನ ಸಾಧನೆ ಏನೂ ಇಲ್ಲ. ನಾನು ನಂಬಿರುವ ದೇವರು ನನ್ನ ಕೈಯನ್ನು ಹಿಡಿದು ಮುನ್ನಡೆಸುತ್ತಿದ್ದಾರೆ’ ಎಂದಿದ್ದರು.

ಅಂತಹ ಕಾಮತರು ನಿನ್ನೆ ಮುಂಬೈಯಲ್ಲಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸು. ಸೊನ್ನೆಯಿಂದ ಉದ್ಯಮದ ಮಹಾ ಸಾಮ್ರಾಜ್ಯವನ್ನು ಕಟ್ಟಿದ ಆ ಚೇತನಕ್ಕೆ ನಮ್ಮ ಶ್ರದ್ಧಾಂಜಲಿ ಇರಲಿ.

ಭರತ ವಾಕ್ಯ

ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಹೆಚ್ಚಿನ ನಗರಗಳಲ್ಲಿ ನ್ಯಾಚುರಲ್ ಐಸ್ ಕ್ರೀಂ ಔಟ್‌ಲೆಟ್‌ಗಳಿವೆ. ಒಮ್ಮೆ ಭೇಟಿ ಕೊಡಿ ಮತ್ತು ತೋಟದ ಹಣ್ಣುಗಳ ಫ್ರೆಶ್ ರುಚಿ ಇರುವ ಐಸ್ ಕ್ರೀಂ ನೀವು ಸವಿದು ಇಷ್ಟಪಟ್ಟರೆ ನಮ್ಮ ರಘುನಂದನ್ ಕಾಮತ್ ಅವರಿಗೊಂದು ಶ್ರದ್ಧಾಂಜಲಿ ಹೇಳಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

ಧವಳ ಧಾರಿಣಿ ಅಂಕಣ: ತನ್ನ ಬಾಣದಿಂದ ಆನೆಯನ್ನು ಕೊಲ್ಲಬಲ್ಲೆ ಎನ್ನುವ ಹಮ್ಮಿನಿಂದ ಶಬ್ದ ಬಂದ ಕಡೆ ಬಾಣವನ್ನು ಬಿಟ್ಟ. ಮರುಕ್ಷಣದಲ್ಲಿ ಮನುಷ್ಯನ ಕೂಗು ಕೇಳಿಬಂತು. ಓಡಿಹೋಗಿ ನೋಡಿದರೆ ಆತ ಬಿಟ್ಟ ಬಾಣ ದೇಹದಲ್ಲಿ ನೆಟ್ಟುಕೊಂಡ ಕಾರಣದಿಂದ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಋಷಿಕುಮಾರನನ್ನು ಕಂಡ. ಎಲ್ಲವೂ ಕೈಮೀರಿ ಹೋಗಿತ್ತು.

VISTARANEWS.COM


on

king dasharatha dhavala dharini
Koo

ಕರ್ಮಫಲವನ್ನು ತಾನೇ ಅರಿತು ಅನುಭವಿಸಿದ ಸೂರ್ಯವಂಶದ ಮಹಾನ್ ಚಕ್ರವರ್ತಿ

dhavala dharini by Narayana yaji

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕವೆನ್ನುವುದು ದಶರಥನಿಗೆ ಮಹಾನ್ ಸಂಕಲ್ಪವಾಗಿತ್ತು. ಅದಕ್ಕಾಗಿಯೇ ಆತ ಏನೆಲ್ಲ ಕಸರತ್ತನ್ನು ಮಾಡಿದ್ದ ಎನ್ನುವುದನ್ನು ನೋಡಿದ್ದೇವೆ.

ಕೈಕೇಯಿ ಮಂಥರೆಯ ದುರ್ಬೋಧನೆಯಿಂದ ಎಷ್ಟರಮಟ್ಟಿಗೆ ಪ್ರಭಾವಿತಳಾಗಿದ್ದಳೆಂದರೆ ಅರಸನ ಯಾವ ಒದ್ದಾಟವೂ ಅವಳನ್ನು ಕರಗಿಸಲಿಲ್ಲ. ರಾಮನನ್ನು ಬಿಟ್ಟರೆ ತಾನು ಬದುಕಿರಲಾರೆ ಎನ್ನುವ ಮಾತುಗಳು ಕಾದ ಮರಳಲ್ಲಿ ಬಿದ್ದ ನೀರಿನಂತೆಯೇ ಇಂಗಿಹೋಯಿತು. ಕೈಕೇಯಿ ತಿರುಗಿ ರಾಜನಿಗೆ ಧರ್ಮೋಪದೇಶ ಮಾಡುತ್ತಾಳೆ. ಶೈಭ್ಯ, ಅಲರ್ಕ ಮೊದಲಾದ ರಾಜರ್ಷಿಗಳು ಪ್ರತಿಜ್ಞಾಬದ್ಧರಾಗಿ ತಮ್ಮ ತಮ್ಮ ಜೀವವನ್ನೇ ಒತ್ತೆಯಾಗಿರಿಸಿದ ಸಂಗತಿಯನ್ನು ಹೇಳುತ್ತಾ ಪರೋಕ್ಷವಾಗಿ ದೊರೆಯ ಸಾವಿನ ಕುರಿತು ತಾನು ಅಂಜುವವಳಲ್ಲ ಎನ್ನುತ್ತಾಳೆ. ಅವಳಿಗೆ ತನ್ನ ಮಗ ಭರತ ಪಟ್ಟಕ್ಕೇರಲೇ ಬೇಕಾಗಿದೆ. ಆಕೆ ಕೌಸಲ್ಯೆಯನ್ನು ಎಷ್ಟರಮಟ್ಟಿಗೆ ದ್ವೇಷಿಸುತ್ತಿದಳೆಂದರೆ “ರಾಮ ಪಟ್ಟಾಭಿಷೇಕವಾದೊಡನೆಯೇ ರಾಜಮಾತೆಯಾಗಿ ಸಕಲಪ್ರಜೆಗಳಿಂದ ಗೌರವವನ್ನು ಸ್ವೀಕರಿಸುವ ಕೌಸಲ್ಯೆಯನ್ನು ತಾನು ಒಂದು ದಿನವೂ ನೋಡಿಸಹಿಸಲಾರೆ ಎನ್ನುತ್ತಾಳೆ. ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿ ಕೌಸಲ್ಯೆಯೊಂದಿಗೆ ನಿತ್ಯವೂ ರಮಿಸಲು ಇಚ್ಛಿಸುವ ನಿನ್ನ ಹುನ್ನಾರ ತನಗೆ ಗೊತ್ತು ಎಂದು ಜರಿಯುತ್ತಾಳೆ.

ದಶರಥನಿಗೆ ಮಾತು ಬಾರದಾಗಿದೆ. ಆತ ರಾಮನನ್ನು ಕಾಡಿಗೆ ಕಳುಹಿಸುವುದು ಬೇಡವೆಂದು ಬಗೆಬಗೆಯಲ್ಲಿ ಗೋಳಾಡುತ್ತಾನೆ. ಸ್ತ್ರೀಸುಖಕ್ಕೊಸ್ಕರವಾಗಿ ತನ್ನ ಪ್ರಿಯಸುತನನ್ನೇ ಅರಣ್ಯಕ್ಕೆ ಕಳುಹಿಸಿದ ತನ್ನನ್ನು ಅತಿಕಾಮಿಯೆಂದು ಪುರಜನರು ಆಡಿಕೊಳ್ಳುವರು, ಆ ಅಪವಾದ ಬರುತ್ತದೆಯೆಂದು ಗೋಗೆರೆಯುತ್ತಾನೆ. “ಹೆಂಗಸರೆಲ್ಲ ಮೋಸಗಾರರು, ಸ್ವಾರ್ಥಪರಾಯಣರು ಎಂದು ಉದ್ವೇಗದಿಂದ ಕೂಗಾಡುತ್ತಾನೆ. ಬಹುಶಃ ಆಗ ಆತನಿಗೆ ತನ್ನ ಹಿರಿಯ ಹೆಂಡತಿಯರಾದ ಕೌಸಲ್ಯೆ ಮತ್ತು ಸುಮಿತ್ರೆಯರ ನೆನಪಾಗಿರಬೇಕು. ಇಲ್ಲ, ಪ್ರಪಂಚದಲ್ಲಿ ಎಲ್ಲಾ ಹೆಂಗಸರೂ ಹಾಗಿಲ್ಲ’ ಕೇವಲ ಭರತನ ತಾಯಿಗೆ ಮಾತ್ರ ತನ್ನ ಮಾತು ಅನ್ವಯಿಸುತ್ತದೆ ಎಂದು ಕೂಗಾಡುತ್ತಾನೆ. ರಾಮನನ್ನು ಅರಣ್ಯಕ್ಕೆ ಕಳುಹಿಸುವ ಒಂದು ಮಾತನ್ನು ಬಿಟ್ಟು ಬೇರೆ ಏನನ್ನಾದರೂ ಕೇಳು ಎನ್ನುವ ಮಾತುಗಳು ಕೈಕೇಯಿಯ ಮೇಲೆ ಪರಿಣಾಮ ಬೀರದಿದ್ದಾಗ ಕೊನೆಯ ಅಸ್ತ್ರವೆನ್ನುವಂತೆ ದಶರಥ ಲೋಕಮರ್ಯಾದೆಯನ್ನು ಮೀರಿ ಅನಾಥನಂತೆ ಗೋಳಾಡುತ್ತಾ ಆಕೆಯ ಕಾಲಿಗೆ ನಮಸ್ಕರಿಸಲು ಹೋಗುತ್ತಾನೆ. ಆಗ ಕೈಕೇಯಿ ತಿರಸ್ಕಾರದಿಂದ ತನ್ನ ಕಾಲನ್ನು ದೂರಕ್ಕೆ ಚಾಚಿದುದರಿಂದ ಅವೂ ಆತನಿಗೆ ಸಿಕ್ಕದೇ ರೋಗಿಯೊಬ್ಬ ತತ್ತರಿಸಿ ಬೀಳುವಂತೆ ನೆಲದಮೇಲೆ ಬೀಳುತ್ತಾನೆ. ಅವನ ಈ ಸ್ಥಿತಿಯನ್ನು ನೋಡಿದ ರಾಮಾಯಣದ ಕವಿ ವಾಲ್ಮೀಕಿಗೂ ದಶರಥನ ಮೇಲೆ ಹೇಸಿಗೆಯುಂತಾಗುತ್ತದೆ. ಚಕ್ರವರ್ತಿ ತನ್ನ ಘನತೆಯನ್ನು ಮರೆತು ಹೀಗೆ ಮಾಡಬಾರದಿತ್ತು ಎಂದು ಅಸಮಾಧಾನವನ್ನು ವ್ಯಕ್ತಪಡಿಸುತ್ತಾನೆ.

ಅತದರ್ಹಂ ಮಹಾರಾಜಂ ಶಯಾನಮತಥೋಚಿತಮ್.
ಯಯಾತಿಮಿವ ಪುಣ್ಯಾನ್ತೇ ದೇವಲೋಕಾತ್ಪರಿಚ್ಯುತಮ್৷৷ಅಯೋ. .13.1৷৷

ರಾಜಾಧಿರಾಜನಾದಂತಹ ದಶರಥನು ಕೈಕೇಯಿಯ ಪಾದಗಳ ಮೇಲೆ ಬೀಳಲು ಹೋಗಬಾರದಿತ್ತು(ಅತದರ್ಹಂ) ಎಂದು ಬಹಿರಂಗವಾಗಿಯೇ ಸಿಡಿಮಿಡಿಗೊಳ್ಳುತ್ತಾನೆ. ರಾಮಾಯಣದ ಈ ಸನ್ನಿವೇಶ ವಾಲ್ಮೀಕಿಯ ಕಣ್ಣಿಗೆ ಅಂಗೈಯಲ್ಲಿನ ನೆಲ್ಲಿಕಾಯಿಯಂತೆ ಸ್ಪಷ್ಟವಾಗಿ ಕಾಣುತ್ತಿದೆ. ನಿರುಧ್ವಿಘ್ನವಾಗಿ ಕಥೆಯನ್ನು ಹೇಳುತ್ತಾಹೋಗಬೇಕಾದ ಕವಿ ಸೀತೆಗೆ ತೊಂದರೆಯಾದ ಉತ್ಕಟಕ್ಷಣಗಳಲ್ಲಿ ರಸಭಾವವನ್ನು ಹತ್ತಿಕ್ಕಲಾರದೇ ತಾನೇ ಕಥೆಯೊಳಗೆ ಪ್ರವೇಶಿಸುವುದುಂಟು. ಆದರೆ ಇಲ್ಲಿ ಮಾತ್ರ ಆತನಿಗೆ ದಶರಥನ ಒಟ್ಟಾರೆಯ ವ್ಯವಹಾರವೇ ರೇಜಿಗೆ ಹುಟ್ಟಿಸಿದೆ. ಕೈಕೇಯಿಯನ್ನು ಇಕ್ಷಾಕುವಂಶಕ್ಕೇ ಅನರ್ಥಕಾರಿಣಿಯೆಂದು ತಿರಸ್ಕಾರದಿಂದ ಕವಿಹೇಳುತ್ತಾನೆ. ಸೂರ್ಯವಂಶದ ಪುಣ್ಯದ ಕಾರಣದಿಂದ ದಶರಥನಿಗೆ ಕೈಕೇಯಿಯ ಪಾದಗಳು ಸಿಗಲಿಲ್ಲ. ಎನ್ನುತ್ತಾನೆ. ಈ ಭಾಗವನ್ನು ದಶರಥವಿಲಾಪವೆನ್ನುವ ಹೆಸರಿನಿಂದ ಕರೆದರೂ ಇಲ್ಲಿ ಕಾಳಿದಾಸನ ಪ್ರಸಿದ್ಧಕಾವ್ಯ ರಘುವಂಶದ ಅಜವಿಲಾಪ ನೆನಪಿಗೆ ಬರುತ್ತದೆ. ರಘುವಂಶದಲ್ಲಿ ಅಜ ಮತ್ತು ಇಂದುಮತಿ ದಂಪತಿಗಳ ಪ್ರೇಮದ ವಿಷಯ ಪ್ರಸಿದ್ಧ. ದಿವ್ಯಪುಷ್ಪಮಾಲೆಯೊಂದು ಅಜನ ಪತ್ನಿ ಇಂದುಮತಿಯಮೇಲೆ ಬಿದ್ದಾಗ ಅವಳು ಮೃತಳಾಗುತ್ತಾಳೆ. ಆಗ ಅಜ ತನ್ನ ಪತ್ನಿಗಾಗಿ ಮಾಡುವ ದುಃಖವು ಅಜವಿಲಾಪವೆಂದೇ ಪ್ರಸಿದ್ಧಿಯಾಗಿದೆ. ಪತ್ನಿಯ ವಿರಹವನ್ನು ತಾಳಲಾರದೇ ಕುಗ್ಗಿ ಕುಗ್ಗಿ ಸಾಯುವ ಅಜನೂ ಸ್ತ್ರೀ ಕಾರಣದಿಂದ ಸಾಯುತ್ತಾನಾದರೂ ಅದು ಪ್ರೇಮಕಾವ್ಯದ ಉತ್ತುಂಗಗಳಲ್ಲೊಂದೆಂದು ಪರಿಗಳಿಸಲ್ಪಟ್ಟಿದೆ. ಅದರ ವಿರುದ್ಧವಾಗಿ ಅಜನ ಮಗನಾದ ದಶರಥನ ಒದ್ದಾಟವಿದೆ. ಅವನ ವಿಲಾಪಕ್ಕೆ ಸಹಾನುಭೂತಿಯನ್ನು ವ್ಯಕ್ತಪಡಿಸಲು ಯಾರೂ ಬರುವುದಿಲ್ಲ. ಅವನ ವಿಲಾಪಕ್ಕೆ ರಾತ್ರಿಯೇ ಹೆದರಿ ಓಡಿಹೋಯಿತು.

ಬೆಳಗಾದರೂ ದೊರೆ ಗೋಳಾಡುವುದನ್ನು ಬಿಟ್ಟು ರಾಮನನ್ನು ಪಟ್ಟಗಟ್ಟುವ ಯಾವ ಸೂಚನೆಯನ್ನೂ ನೀಡುವುದಿಲ್ಲ. ಎಲ್ಲಿಯಾದರೂ ಬೇರೆಯವರಿಗೆ ತಿಳಿದರೆ ತನ್ನ ಕೆಲಸ ಕೆಟ್ಟಿತೆನ್ನುವ ಚಿಂತೆ ಕೈಕೇಯಿಯಲ್ಲುಂಟಾಯಿತು. ರಾಜನನ್ನು ಧರ್ಮಪರಿಪಾಲನೆಯೆನ್ನುವ ಹಗ್ಗದಲ್ಲಿ ಕಟ್ಟಿಹಾಕಿದ್ದಳು.

ಸತ್ಯಮೇಕಪದಂ ಬ್ರಹ್ಮ ಸತೇ ಧರ್ಮಃ ಪ್ರತಿಷ್ಠಿತಃ
ಸತ್ಯಮೇವಾಕ್ಷಯಾ ವೇದಾಃ ಸತ್ಯೇನೈವಾಪ್ಯತೇ ಪರಮ್ II ಅಯೋ.14-7II

ಸತ್ಯವೆನ್ನುವುದೇ ಬ್ರಹ್ಮವಾಚಕವಾದ ಪ್ರಣವಸ್ವರೂಪವು. ಸತ್ಯದಲ್ಲಿಯೇ ಸಮಸ್ತ ಧರ್ಮಗಳೂ ಅಡಗಿರುವವು. ಕ್ಷಯವೃದ್ಧಿಗಳಿಲ್ಲದ ವೇದಗಳು ಸತ್ಯದ ಸ್ವರೂಪಗಳೇ ಆಗಿವೆ. ಪರಮೋತ್ಕ್ರಷ್ಟವಾದ ಲೋಕಗಳೂ ಸತ್ಯದ ಅವಲಂಬನೆಯಿಂದಲೇ ಲಭಿಸುತ್ತವೆ.

ಸಮಗ್ರವಾದ ಉಪನಿಷತ್ತಿನ ಸಾರವನ್ನು ಸಾರುವ ಈ ಮಾತು ಕೈಕೇಯಿಯಿಂದ ಬೇರೆ ಯಾವ ಸಂದರ್ಭದಲ್ಲಿಯಾದರೂ ಬಂದಿದ್ದರೆ ಆಕೆಯನ್ನು ಗಾರ್ಗಿ, ಲೋಪಾಮುದ್ರಾ ಮೊದಲಾದವರಸಾಲಿಗೆ ಸೇರಿಸಿಬಿಡುತ್ತಿದ್ದರೇನೋ. ಆಕೆಯ ತಂದೆ ಅಶ್ವಪತಿ ವೈಶ್ವಾನರ ವಿದ್ಯೆಯನ್ನು ಉದ್ಧಾಲಕನಿಗೆ ಕಲಿಸಿದ ಕುರಿತು “ಛಾಂದೋಗ್ಯ ಉಪನಿಷತ್ತಿನಲ್ಲಿ ಬರುತ್ತದೆ”. ರಾವಣನೂ ಸಹ ಎಲ್ಲಾ ವೇದಗಳನ್ನು ಓದಿಕೊಂಡಿದ್ದ. ಮೂಲತಃ ಸ್ವಭಾವದಲ್ಲಿ ಸಾತ್ವಿಕ ಗುಣಗಳಿಲ್ಲದಿದ್ದರೆ ಅವೆಲ್ಲವೂ ವ್ಯರ್ಥವಾಗುತ್ತದೆ. ಕೈಕೇಯಿಗಾಗಿರುವುದೂ ಅದೇ. ತನಗೆ ತಿಳಿದಿರುವ ಧರ್ಮಸೂತ್ರಗಳನ್ನು ತನ್ನ ಸ್ವಾಥಕ್ಕಾಗಿ ಬಳಸಿಕೊಳ್ಳುತ್ತಿದ್ದಾಳೆ. ಗಂಗಾನದಿಯೇ ಆದರೂ, ಬಚ್ಚಲುಮನೆಯಿಂದ ಹೊರಬಂದರೆ ಅದನ್ನು ಯಾರೂ ತೀರ್ಥವೆಂದು ಪರಿಗಣಿಸುವುದಿಲ್ಲ. ರಾಜನನ್ನು ಕರೆದೊಯ್ಯಲು ಸುಮಂತ್ರ ಕೈಕೇಯಿಯ ಅರಮನೆಗೆ ಬಂದಾಗ ಎಲ್ಲದರಲ್ಲಿಯೂ ಸೋತ ರಾಜನೇ “ರಾಮನನ್ನು ನೋಡಬೇಕೆಂದಿದ್ದೇನೆ, ಅವನನ್ನಿಲ್ಲಿಗೆ ಕರೆದುಕೊಂಡು ಬಾ” ಎನ್ನುತ್ತಾನೆ. ಆಗಲೆಂದು ಹೊರಟ ಸುಮಂತ್ರನಿಗೆ ಮನಸ್ಸಿನಲ್ಲಿ ಏನೋ ಒಂಡು ಸಂಶಯಕಾಡಿತು. ಸಭೆಗೆಬಂದವ ಅದಾಗಲೇ ಬಂದುಸೇರಿದ್ದ ಅರಸರ ವಿಷಯಗಳನ್ನು ತಿಳಿಸುವ ನೆವಮಾಡಿ ಮತ್ತೊಮ್ಮೆ ಕೈಕೇಯಿಯ ಅಂತಃಪುರಕ್ಕೆ ಬಂದ. ಕೈಕೇಯಿಗೆ ರಾಮನನ್ನು ಗುಪ್ತವಾಗಿ ಅರಣ್ಯಕ್ಕೆ ಕಳುಹಿಸಿ ಭರತನನ್ನು ಪಟ್ಟಾಭಿಷೇಕಕ್ಕೆ ಏರಿಸಬೇಕಿತ್ತು. ಚಾಣಾಕ್ಷಳಾಗಿದ್ದ ಆಕೆಗೆ ಈ ವಿಷಯ ಬಹಿರಂಗಕ್ಕೆ ಬಂದರೆ ಸಾಮಂತರೆಲ್ಲರೂ ತಿರುಗಿಬೀಳುವರು ಎನ್ನುವುದರ ಅರಿವಿತ್ತು. ಅದಕ್ಕಾಗಿಯೇ ಅವಳು ರಾಮ ತನ್ನ ಮನೆಗೇ ಬರಲಿ ಎಂದು ರಾಜನನ್ನು ಒತ್ತಾಯಿಸಿದಳು. ಎರಡನೆಯ ಸಾರಿ ಸುಮಂತ ಬಂದಾಗ ಸ್ವಲ್ಪ ಸಿಟ್ಟಿನಿಂದಲೇ ರಾಮನನ್ನು ಇಲ್ಲಿಗೆ ಕರೆತರಬೇಕು. ಇದು ತನ್ನ ಆಜ್ಞೆ ಎಂದು ಕಠೋರವಾಗಿಯೇ ಹೇಳುತ್ತಾನೆ. “ದಶರಥನ ಮಾತು ಸೋತ ಹೊತ್ತು ಅದು”. ದೊರೆ ಅಸಹಾಯಕನಾಗಿದ್ದ. ತನ್ನೆದುರೇ ತನ್ನ ಪರವಾಗಿ ಕೈಕೇಯಿ ರಾಮನಲ್ಲಿ ತನ್ನ ವರದ ಕುರಿತು ಒಡಂಬರಿಸುತ್ತಿರುವಾಗ ಮೌನವಾಗಿದ್ದ. ನಾಲಿಗೆ ಮಾತನ್ನು ಆಡುವುದು ಬುದ್ಧಿಯಬಲದಿಂದ. ದಶರಥನ ಬುದ್ಧಿಯನ್ನು ಸಂಪೂರ್ಣವಾಗಿ ಕೈಕೇಯಿ ಆಕ್ರಮಿಸಿಕೊಂಡಿದ್ದಳು. ರಾಮನ ಪ್ರಿಯಮಾತೆ ಕೈಕೇಯಿ ರಾಜನ ಪರವಾಗಿ ಆಡುವ ಮಾತಾಗಿದ್ದಳು. ಸಮಯ ಸರಿದಷ್ಟೂ ತನಗೇ ಅಪಾಯವೆಂದು ಅವಳಿಗೆ ಅರಿವಾಗತೊಡಗಿತು. ತಂದೆಯ ನೋಡಲು ಬಂದ ರಾಮ ಆತನ ಚಿಂತೆಗೆ ಕಾರಣವನ್ನು ಕೇಳೆದರೆ ಆತನಲ್ಲಿ ದೊರೆಯ ಮನಸ್ಸಿನಲ್ಲಿರುವುದು ಭರತನು ರಾಜನಾಗುವ ಮತ್ತು ರಾಮನ ಅರಣ್ಯಗಮನದ ವರಗಳನ್ನು ಹೇಳುತ್ತಾಳೆ. ಅಷ್ಟೇ ಅಲ್ಲ,’ “ಎಲ್ಲಿಯವರೆಗೆ ನೀನು ಈ ಅಯೋಧ್ಯೆಯನ್ನು ಬಿಟ್ಟು ಅರಣ್ಯಕ್ಕೆ ಹೋಗುವುದಿಲ್ಲವೋ ಅಲ್ಲಿಯವರೆಗೆ ರಾಜನು ಸ್ನಾನವನ್ನೂ ಮಾಡುವುದಿಲ್ಲ, ಊಟವನ್ನೂ ಮಾಡುವುದಿಲ್ಲ” ಎನ್ನುವ ಮಾತನ್ನು ಹೇಳಿದಾಗ ರಾಮ ಇನ್ನು ತಡಮಾಡುವುದು ಸರಿಯಲ್ಲವೆಂದು ಅರಣ್ಯಕ್ಕೆ ಹೊರಟಕಥೆ ಎಲ್ಲರಿಗೂ ಚಿರಪರಿಚಿತ.

dhavala dharini king dasharatha

ದಶರಥನಿಗೆ ರಾಮನ ಅಗಲುವಿಕೆಯ ದುಃಖಕ್ಕಿಂತ ಆತ ಸುಮಂತ್ರನ ಹತ್ತಿರ ತನ್ನ ತಂದೆ ಮತ್ತು ತಾಯಿಗೆ ಹೇಳುವ ಸಂದೇಶ ಇನ್ನಷ್ಟು ಶೋಕವನ್ನು ಕೊಡುತ್ತದೆ. ರಾಮ ತನ್ನ ತಾಯಿಗೆ ತಾಳ್ಮೆಯಿಂದ ಇರಲು ಹೇಳಿಕಳುಹಿಸುತ್ತಾನೆ. ಹದಿನಾಲ್ಕುವರ್ಷಗಳ ತನಕ ಹೇಗೋ ಭರತನ ಜೊತೆ ಹೊಂದಿಕೊಂಡು ಹೋಗು ಎಂದಿದ್ದ. ಭರತನಿಗೂ ಕೈಕೇಯಿಯಂತೇ ತನ್ನ ತಾಯಯಿಂದರನ್ನು ನೋಡಿಕೊಳ್ಳುವಂತೆ ಕಾಠಿಣ್ಯದಿಂದ ತುಂಬಿದ ಎಚ್ಚರಿಕೆಯ ಸಂದೇಶನ್ನು ಕಳಿಹಿಸುತ್ತಾನೆ. ಕೌಸಲ್ಯಯ ಕುರಿತು ಹೇಳುವಾಗ ರಾಮನ ಕಣ್ಣಲ್ಲಿ ನೀರು ಹರಿಯುತ್ತಿರುವುದನ್ನು ಕಂಡ ಲಕ್ಷ್ಮಣ ಕ್ರುದ್ಧನಾಗಿರುವ ವಿಷಯವನ್ನು ಹೇಳುವಾಗ ಅರಸನಿಗೆ ಕಾಮಮೋಹಿತನಾಗಿದ್ದ ತಾನೇ ಅವಸರದಿಂದ ಕೈಕೇಯಿಯನ್ನು ಓಲೈಸಲು ಹೋದೆ ಅನಿಸುತ್ತದೆ. ರಾಜ ಯಾವ ನಿರ್ಣಯಗಳನ್ನು ಕೈಗೊಳ್ಳುವಾಲೂ ಮೊದಲು ಅಮಾತ್ಯರೊಡನೆ ಸಮಾಲೋಚಿಸಿ ಅವರ ಸಲಹೆಪಡೆದು, ಅದು ಧರ್ಮಸಮ್ಮತವಾಗಿದ್ದರೆ ತನಗೆ ಯುಕ್ತವಾದ ನಿರ್ಣಯವನ್ನು ಕೈಗೊಳ್ಳಬೇಕು. ಇಲ್ಲಿ ಅದೇನನ್ನೂ ಮಾಡದೇ ಇರುವ ಅಪರಾಧೀ ಭಾವ ಕಾಡುತ್ತದೆ. ವನವಾಸಕ್ಕೆ ಹೊರಟ ರಾಮ, ಸೀತಾ ಲಕ್ಷ್ಮಣರು ನಗುತ್ತಲೇ ಹೊರಟರು, ಗುಹನಲ್ಲಿ ಆಲದ ಹಾಲನ್ನು ತರಿಸಿ ತಪಸ್ವಿಗಳಂತೆ ಜಟಾಧಾರಿಯಾದ ವಿಷಯವನ್ನು ಕೇಳಿದ ಕೌಸಲ್ಯೆಯ ಮಾತ್ರಭಾವಕ್ಕೆ ಬಲವಾದ ನೋವನ್ನು ಕೊಡುತ್ತದೆ. ಅನೇಕವರ್ಷಗಳಕಾಲ ಧಶರಥನಿಂದ ಅಲಕ್ಷಕ್ಕೆ ಒಳಗಾದರೂ ಆಕೆ ಅದನ್ನೆಲ್ಲ ಸಹಿಸಿಕೊಂಡು ಮೌನಿಯಾಗಿದ್ದವಳು ಬಲುತೀಕ್ಷ್ಣವಾದ ಮಾತುಗಳಿಂದ ಗಂಡನನ್ನು ನಿಂದಿಸುತ್ತಾಳೆ. ಕೊನೆಯದಾಗಿ “ಮಹರಾಜಾ! ನಿನ್ನ ಈ ದುಶ್ಚರ್ಯೆಯಿಂದಾಗಿ ನಾನು ಮತ್ತು ನನ್ನ ಮಗನು ಮಾತ್ರ ವಿನಾಶ ಹೊಂದಲಿಲ್ಲ. ರಾಮನನ್ನು ಕಾಡಿಗಟ್ಟಿ ರಾಷ್ಟ್ರಸಹಿತವಾದ ರಾಜ್ಯವನ್ನು ಹಾಳುಮಾಡಿದೆ. (ಹತಂ ತ್ವಯಾ ರಾಜ್ಯಮಿದಂ ಸರಾಷ್ಟ್ರಂ ಹತಸ್ತಥಾತ್ಮಾ ಸಹ ಮಂನ್ತ್ರಿಭಿಶ್ಚ) ಮಂತ್ರಿಗಳೊಡನೇ ನೀನೂ ಹಾಳಾದೆ” ಎನ್ನುವ ಕಠೋರಮಾತುಗಳನ್ನಾಡುತ್ತಾಳೆ.

ಅದುತನಕ ಅದುಮಿಟ್ಟುಕೊಂಡ ಅವಮಾನ, ತಿರಸ್ಕಾರಗಳೆಲ್ಲವೂ ಸ್ಪೋಟಗೊಂಡಹೊತ್ತು ಅದು. ಆಕೆಯ ಮಾತುಗಳು ಎಷ್ಟು ತೀಕ್ಷ್ಣವಾಗಿತ್ತೆಂದರೆ ದಶರಥ ಅದನ್ನು ಕೇಳಿದವನೇ ಮೂರ್ಛಿತನಾದ. ಆತನನ್ನು ಉಪಚರಿಸಿದ ಕೌಸಲ್ಯೆ ತಾನು ಹಾಗೇ ಮಾತಾಡಬಾರದಾಗಿತ್ತೆಂದು ದುಃಖಪಡುತ್ತಾಳೆ. ದಶರಥನ ಕಾಲಿಗೆ ಬಿದ್ದು ತನ್ನನ್ನು ಕ್ಷಮಿಸು ಎಂದು ಕೇಳಿಕೊಳ್ಳುತ್ತಾಳೆ. ಕೌಸಲ್ಯಾ ಮತ್ತು ಸುಮಿತ್ರಾ ಇಬ್ಬರೂ ಸೇರಿ ಗಂಡನ ಶುಶ್ರೂಷೇ ಮಾಡುತ್ತಾ ತಾವೇ ದುಃಖಿಸುತ್ತಲೂ ಇರುತ್ತಾರೆ. ದಶರಥನಿಗೆ ತಾನು ಇಷ್ಟೆಲ್ಲಾ ಒಳ್ಳೆಯ ಕಾರ್ಯವನ್ನು ಮಾಡಿದರೂ ತನಗೆ ಏಕೆ ಹೀಗೆ ಆಯಿತು ಎಂದು ಚಿಂತಿಸುತ್ತಾ ಯಾವುದೋ ಒಂದು ವಿಷಯವನ್ನು ಹೇಳಲೋ ಬೇಡವೋ ಎನ್ನುವಂತೆ ಇದ್ದ. ಆರನೆಯದಿನದ ಅರ್ಧರಾತ್ರಿಯಲ್ಲಿ ಇದ್ದಕ್ಕಿದ್ದಂತೆ ತನ್ನ ಪುತ್ರವಿಯೋಗಕ್ಕೆ ಕಾರಣವಾದ ತನ್ನ ಕರ್ಮಫಲದ ಕುರಿತು ಹೇಳಲು ನಿಶ್ಚಯಿಸಿದ. ಅದು ಎಲ್ಲರಿಗೂ ತಿಳಿದ ಕಥೆಯಾದ ಶ್ರವಣಕುಮಾರನ ಕಥೆ, ರಾಮಾಯಣದಲ್ಲಿ ಶ್ರವಣಕುಮಾರ ಎನ್ನುವ ಹೆಸರಿಲ್ಲ. ಕರಣ ಎಂದು ಆತನ ಹೆಸರು. ಆತನ ತಂದೆ ಓರ್ವ ಋಷಿಯಾಗಿದ್ದ. ಈ ಕಥೆ ಒಂದೇ ರೀತಿಯದಾದರೂ ಕಾಲಾಂತರದಲ್ಲಿ ಬೇರೆ ಬೇರೆ ರಾಮಾಯಣಗಳಲ್ಲಿ ಶ್ರವಣಕುಮಾರ ಎನ್ನುವ ಹೆಸರು ಬಂತು.

ಈ ಘಟನೆ ನಡೆಯುವಾಗ ದಶರಥನಿಗೆ ಪ್ರಾಯದ ಕಾಲ. ಆತ ಶಬ್ದವೇಧಿ ವಿದ್ಯೆಯಲ್ಲಿ ಮಹಾಚತುರ ಎನ್ನುವ ಕೀರ್ತಿ ಹಬ್ಬಿತ್ತು. ಅದನ್ನು ಪ್ರಯೋಗಿಸುವ ಹವ್ಯಾಸ ದೊರೆಗೆ. ಹಾಗಾಗಿ ಕಾಡಿಗೆ ಹೋಗಿ ಬೇಟೆಯಾಡುವ ವ್ಯಸನವನ್ನು ಹಚ್ಚಿಕೊಂಡಿದ್ದ. ಯುವರಾಜನಾಗಿದ್ದ ಆತನಿಗೆ ಆಗಿನ್ನೂ ಮದುವೆಯಾಗಿರಲಿಲ್ಲ (ದೇವ್ಯನೂಢಾ ತ್ವಮಭವೋ ಯುವರಾಜೋ ಭವಾಮ್ಯಹಮ್). ಮಳೆಗಾಲದ ಒಂದು ದಿನ ಬೇಟೆಗೆ ಹೋದಾಗ ಅನೆ ನೀರು ಕುಡಿಯುತ್ತಿರುವ ಸದ್ದು ಕೇಳಿಬಂತು. ತನ್ನ ಬಾಣದಿಂದ ಆನೆಯನ್ನು ಕೊಲ್ಲಬಲ್ಲೆ ಎನ್ನುವ ಹಮ್ಮಿನಿಂದ ಶಬ್ದ ಬಂದ ಕಡೆ ಬಾಣವನ್ನು ಬಿಟ್ಟ. ಮರುಕ್ಷಣದಲ್ಲಿ ಮನುಷ್ಯನ ಕೂಗು ಕೇಳಿಬಂತು. ಓಡಿಹೋಗಿ ನೋಡಿದರೆ ಆತ ಬಿಟ್ಟ ಬಾಣ ದೇಹದಲ್ಲಿ ನೆಟ್ಟುಕೊಂಡ ಕಾರಣದಿಂದ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಋಷಿಕುಮಾರನನ್ನು ಕಂಡ. ಎಲ್ಲವೂ ಕೈಮೀರಿ ಹೋಗಿತ್ತು. ಆತನೇ ಕುರುಡರಾದ ತನ್ನ ತಂದೆಯ ವಿಷಯವನ್ನು ಹೇಳಿ ಅವರಿಗೆ ನೀರನ್ನು ತೆಗೆದುಕೊಂಡು ಹೋಗು ಎಂದು ಕೇಳಿದ. ದಶರಥ ಯೌವನ ಮದದಿಂದ ಅಪರಾಧವನ್ನು ಮಾಡಿದರೂ ಪಶ್ಚಾತ್ತಾಪದಿಂದ ತೋಯ್ದು ಹೋಗಿದ್ದ. ಕುರುಡ ದಂಪತಿಗಳ ಬಳಿಗೆ ಬಂದು ಪ್ರಾಮಾಣಿಕವಾಗಿ ನಡೆದ ಸಂಗತಿಯನ್ನು ಹೇಳಿದ. ಬಾಲಕನ ಶವ ಸಂಸ್ಕಾರವನ್ನು ಅವರ ಹತ್ತಿರವೇ ಮಾಡಿಸಿದ. ಉದ್ಧೇಶಪೂರ್ವಕವಾಗಿ ತನ್ನ ಮಗನನ್ನು ಕೊಲ್ಲದ ಕಾರಣ ದೊರೆಗೆ ಬ್ರಹ್ಮಹತ್ಯಾ ಶಾಪವು ತಟ್ಟದು ಎಂದು ಹೇಳಿದರು. ಸಾಯುವ ಕಾಲದಲ್ಲಿ ತಮಗೆ ಆದ ರೀತಿಯಲ್ಲಿಯೇ ನಿನಗೂ ಪುತ್ರವಿಯೋಗವುಂಟಾಗಲಿ ಎಂದು ಶಾಪವನ್ನಿತ್ತು ಮಗನ ಚಿತೆಯನ್ನು ಏರಿ ದಿವ್ಯ ಶರೀರವನ್ನು ಧರಿಸಿ ಸ್ವರ್ಗಕ್ಕೆ ಹೋದರು.

king dasharatha kaikeyi dhavala dharini column

ರಾಜ ಕಾಲಾಂತರದಲ್ಲಿ ಅದನ್ನೆಲ್ಲ ಮರೆತಿದ್ದ. ಈಗ ರಾಮನ ಅಗಲುವಿಕೆಯೆನ್ನುವದು ಆತನಲ್ಲಿ ಅಪರಾಧೀ ಭಾವವನ್ನು ಮೂಡಿಸಿದೆ. ತನ್ನ ಕೊನೆಯ ದಿನಗಳು ಹತ್ತಿರ ಬಂತು ಎಂದು ದೊರೆಗೆ ಅನಿಸಲು ಸುರುವಾಯಿತು. ಸತ್ಯವಂತನಾದ, ಧರ್ಮಮಾರ್ಗದಲ್ಲಿ ನಡೆದ ತನಗೆ ಈ ಗತಿ ಏಕೆ ಬಂತು ಎಂದು ಚಿಂತಾಮಗ್ನನಾಗಿರುವಾಗ ಅವನಿಗೆ ತಾನೆಸಗಿದ ಈ ದುಷೃತ್ಯ ನೆನಪಿಗೆ ಬಂತು. ಪಶ್ಚಾತ್ತಾಪದಿಂದ ತೋಯ್ದು ಹೋಗಿದ್ದ. ಮುನಿಯ ಶಾಪ ಫಲಿಸುವ ಕಾಲ ಬಂತು ಎಂದು ಕೌಸಲ್ಯೆಗೆ ಹೇಳಿ ಇದಕ್ಕೆ ಕಾರಣ ತನ್ನ ಕರ್ಮಫಲ ಎನ್ನುತ್ತಾನೆ. ಮಾಡಿದ್ದಕ್ಕೆ ತಕ್ಕ ಕರ್ಮಫಲವನ್ನು ಅನುಭವಿಸುತ್ತಾರೆ ಎನ್ನುವ ನಂಬಿಕೆ ಪುನರ್ಜನ್ಮದಷ್ಟೇ ಪ್ರಾಚೀನವಾದುದು. ತಾನು ಬದುಕಬೇಕೆಮ್ದರೆ ರಾಮ ಬಂದು ತನ್ನನ್ನು ಒಂದು ಬಾರಿ ಸ್ಪರ್ಶಿಸಿದರೆ ಸಾಕು, ತಾನು ಬದುಕುವೆ ರಾಘವನ ವಿಷಯದಲ್ಲಿ ಘನತೆಯಿಂದ ತಾನು ನಡೆದುಕೊಳ್ಳಲಿಲ್ಲ ವೆಂದು ನಿರಂತರವಾಗಿ ಶೋಕಿಸುತ್ತಾನೆ. ಇಷ್ಟಾದರೂ ಪಾಯಸದ ಮಹಿಮೆಯಿಂದ ಜನಿಸಿದ ಮಕ್ಕಳು ಎನ್ನುವ ವಿಷಯವೇ ಮರೆತುಹೋಗಿದೆ. ಋಷಿಮುನಿಗಳಿಗೆ ಕಂಡ ರಾಮನ ನಿಜರೂಪದ ಅರಿವು ದಶರಥನಿಗೆ ಆಗಲೇ ಇಲ್ಲ. ಅತನನ್ನು ಸಮಾಧಾನ ಮಾಡುತ್ತಾ ಕೌಸಲ್ಯೆ ಮತ್ತು ಸುಮಿತ್ರೆಯರು ತಮ್ಮ ನಡುವೆ ಮಲಗಿಸಿಕೊಂಡಿದ್ದರು ಆರುದಿನಗಳಿಂದಲೂ ಬಾರದ ನಿದ್ರೆ ಇಬ್ಬರೂ ರಾಣಿಯರಿಗೂ ತಡರಾತ್ರಿ ಬಂತು. ರಾಘವನ ನೆನಪು ಮಾಡುತ್ತಲೇ ಇದ್ದ ರಾಜನನ್ನು ಚಿರನಿದ್ರೆ ಸೆಳೆದುಬಿಟ್ಟಿತು.

ರಘುವಂಶದ ಘನತೆಯ ಚಕ್ರವರ್ತಿಯೆಂದು ಹೆಸರು ಮಾಡಿದ ಯಶೋವಂತನಾದ ದೊರೆ ತನ್ನ ಕರ್ಮ ಫಲವನ್ನು ಅನುಭವಿಸಿ ಕೊನೆಗಾಲವನ್ನು ಕಂಡ. ಯಾವಾತ ತನ್ನ ಕರ್ಮಫಲವನ್ನು ಜೀವಿತಾವಧಿಯಲ್ಲಿ ಅನುಭವಿಸುತ್ತಾನೆಯೋ, ಆ ಕಾರಣದಿಂದ ಅವರು ಪಶ್ಚಾತ್ತಾಪ ಪಡುತ್ತಾರೆಯೋ ಅಂತವರು ಸತ್ತಮೇಲೆ ನರಕದಲ್ಲಿ ಆ ಶಿಕ್ಷೆ ಅನುಭವಿಸುವುದಿಲ್ಲ. ಈ ಎಲ್ಲಾ ಅವಸ್ಥೆಯನ್ನು ಅನುಭವಿಸಿದ ಸೂರ್ಯವಂಶದ ಯಶೋವಂತ ಅರಸನೂ ಸಹ ಸ್ವರ್ಗಕ್ಕೆ ನಡೆದ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

Continue Reading

ಅಂಕಣ

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

ಸೈಬರ್‌ ಸೇಫ್ಟಿ ಅಂಕಣ: ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಸಾಧಿಸುವುದು ಮುಖ್ಯ. ಸಂಪರ್ಕಿಸಲು, ಹಂಚಿಕೊಳ್ಳಲು ಮತ್ತು ಮಾಹಿತಿ ಪಡೆಯಲು ಸಾಮಾಜಿಕ ಮಾಧ್ಯವನ್ನು ಬಳಸಿ. ಆದರೆ ನಿಮ್ಮ ಜೀವನದಲ್ಲಿ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ ಮತ್ತು ಆರೋಗ್ಯಕರ ಅಭ್ಯಾಸಗಳ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಿ.

VISTARANEWS.COM


on

esim cyber safety column
Koo

ಭಾಗ-2

cyber safety logo

ಸೈಬರ್‌ ಸೇಫ್ಟಿ ಅಂಕಣ: ಸಾಮಾಜಿಕ ಮಾಧ್ಯಮದ ವ್ಯಸನದ (Social media addiction) ಬಗ್ಗೆ ಸ್ನೇಹಿತ ನೀರಜ್‌ ಕುಮಾರ್‌ ಅವರ ವೀಡಿಯೊಗಳನ್ನು ಆಧರಿಸಿ ಬರೆದ ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ? ಲೇಖನದ ಮುಂದುವರಿದ ಭಾಗ ಈ ವಾರ. ಕಾರಣಾಂತರದಿಂದ ಎರಡು ವಾರಗಳ ಬ್ರೇಕ್‌ ಕೊಡಬೇಕಾಯಿತು.

ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯೇ ಎಂದು ಸ್ವಪರೀಕ್ಷೆ ಮಾಡಿಕೊಳ್ಳಲು ನೀರಜ್‌ 5C ಫ್ರೇಮ್‌ವರ್ಕ್‌ ಬಗ್ಗೆ ತಮ್ಮ ವೀಡಿಯೊದಲ್ಲಿ ವಿವರಿಸಿದ್ದಾರೆ. ಕಡುಬಯಕೆ (Craving), ನಿಯಂತ್ರಣ (Control), ನಿಭಾಯಿಸುವಿಕೆ (Coping), ಒತ್ತಾಯ (Compulsioin) ಮತ್ತು ಪರಿಣಾಮ (Consequence) ಎಂಬ ಈ ಐದು C ಗಳು ನಿಮ್ಮಲ್ಲಿ ಎಷ್ಟು ಪ್ರಮಾಣದಲ್ಲಿದೆ ಎಂದು ಸೊನ್ನೆಯಿಂದ ಹತ್ತರವರೆಗಿನ ಮಾಪನದಲ್ಲಿ ಅಂಕ ಕೊಟ್ಟುಕೊಳ್ಳಬಹುದು. ಅದರ ಒಟ್ಟು ಮೊತ್ತ ಶೇಕಡ 60ಕ್ಕಿಂತ ಹೆಚ್ಚು ಅಂದರೆ ಮೂವತ್ತು ಅಥವಾ ಜಾಸ್ತಿ ಇದ್ದರೆ ನಿಮ್ಮ ವ್ಯಸನ ಗಂಭೀರಮಟ್ಟದಲ್ಲಿದೆ ಎನ್ನುತ್ತಾರೆ. ಇದರಿಂದ ಹೊರಬರಲು ಮಾನಸಿಕ ತಜ್ಞರೊಂದಿಗೆ ಸಮಾಲೋಚನೆ ಮಾಡುವುದು ಒಳ್ಳೆಯದು.

ಈಗ ಈ ವ್ಯಸನದಿಂದ ಹೊರಬರುವುದು ಹೇಗೆ ನೋಡೋಣ.

ಸಾಮಾಜಿಕ ಮಾಧ್ಯಮ ವ್ಯಸನವನ್ನು ನಿವಾರಿಸುವ ಮೊದಲ ಹೆಜ್ಜೆ ನಿಮಗೆ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದು. 5C ಫ್ರೇಮ್‌ವರ್ಕ್‌ನಲ್ಲಿ ನಿಮ್ಮ ಸ್ಕೋರ್‌ಗಳನ್ನು ಪರಿಶೀಲನೆ ಮಾಡಿ, ಯಾವ ಅಂಶದಲ್ಲಿ ನಿಮ್ಮ ಸ್ಕೋರ್ ಜಾಸ್ತಿ ಇದೆ ಎನ್ನುವುದನ್ನು ಕಂಡುಕೊಳ್ಳಿ. ಅವುಗಳನ್ನು ಕಡಿಮೆ ಮಾಡುವ ಸಲಹೆಗಳನ್ನು ಅನುಸರಿಸಿ. ಜೊತೆಗೆ ನಿಯಮಿತವಾಗಿ ಮರುಮೌಲ್ಯಮಾಪನ ಮಾಡಿಕೊಂಡು, ಆರೋಗ್ಯಕರ ಸಾಮಾಜಿಕ ಮಾಧ್ಯಮ ಅಭ್ಯಾಸಗಳ ಕಡೆಗೆ ನಿಮ್ಮ ಪ್ರಗತಿಯನ್ನು ನೀವು ಟ್ರ್ಯಾಕ್ ಮಾಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಮಿತಿಗಳನ್ನು ರೂಪಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನೀರಜ್ ಕುಮಾರ್ ಒತ್ತಿಹೇಳುತ್ತಾರೆ.

ಸಾಮಾಜಿಕ ಮಾಧ್ಯಮವು ಸಂಪರ್ಕ ಮತ್ತು ಮಾಹಿತಿಗಾಗಿ ಬಳಸುವ ಅಮೂಲ್ಯವಾದ ಸಾಧನವಾಗಿದೆ. ಆದರೆ ಜೀವನದಲ್ಲಿ ಆರೋಗ್ಯಕರ ಸಮತೋಲನವನ್ನು ಕಾಪಾಡಿಕೊಳ್ಳಲು ಇದು ನಿರ್ಣಾಯಕವಾಗಿದೆ. ವ್ಯಸನದ ಚಿಹ್ನೆಗಳನ್ನು ಗುರುತಿಸುವ ಮೂಲಕ ಮತ್ತು ಮಿತಿಮೀರಿದ ಬಳಕೆಯನ್ನು ನಿಗ್ರಹಿಸಲು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ನಾವು ನಮ್ಮ ಸಮಯ ಮತ್ತು ಗಮನದ ನಿಯಂತ್ರಣವನ್ನು ಪುನಃ ಪಡೆದುಕೊಳ್ಳಬಹುದು. ಸಾಮಾಜಿಕ ಮಾಧ್ಯಮವು ನಮ್ಮ ಜೀವನವನ್ನು ವರ್ಧಿಸುವಂತೆ ಅಳವಡಿಸಿಕೊಳ್ಳಬಹುದು.

ಕೆಲವು ಉಪಯುಕ್ತ ಸಲಹೆಗಳು: ‌

ಸಮಯದ ಮಿತಿಗಳನ್ನು ಹೊಂದಿಸಿ: ದಿನಕ್ಕೆ ನಿರ್ದಿಷ್ಟ ಸಮಯವನ್ನು ಸಾಮಾಜಿಕ ಮಾಧ್ಯಮಕ್ಕೆ ಮೀಸಲಿಡಿ ಮತ್ತು ಅದಕ್ಕೆ ಬದ್ಧರಾಗಿರಿ.
ಅಧಿಸೂಚನೆಗಳನ್ನು ಆಫ್ ಮಾಡಿ: ಕಂಪಲ್ಸಿವ್ ಫೋನ್ ಬಳಕೆಗೆ ನಿರಂತರ ಅಧಿಸೂಚನೆಗಳು ಪ್ರಮುಖ ಪ್ರಚೋದಕವಾಗಬಹುದು. ಹೆಚ್ಚಿನ ಅಪ್ಲಿಕೇಶನ್‌ಗಳಿಂದ ಅವುಗಳನ್ನು ಆಫ್ ಮಾಡುವುದು ಒಳ್ಳೆಯದು.
ಫೋನ್-ಮುಕ್ತ ವಲಯಗಳನ್ನು ರಚಿಸಿ: ನಿಮ್ಮ ಮನೆಯಲ್ಲಿ ನಿಮ್ಮ ಮಲಗುವ ಕೋಣೆಯಲ್ಲಿ ಅಥವಾ ಊಟ ಮಾಡುವಾಗ ಫೋನ್ ಬಳಕೆಯನ್ನು ನಿರ್ಭಂದಿಸಿ.
ಪರ್ಯಾಯ ಚಟುವಟಿಕೆಗಳನ್ನು ಹುಡುಕಿ: ಸಮಯ ವ್ಯರ್ಥವಾಗುವ ಅನುಪಯೋಗಿ ಸ್ಕ್ರೋಲಿಂಗ್ ಅನ್ನು ನೀವು ಆನಂದಿಸುವ ಚಟುವಟಿಕೆಗಳೊಂದಿಗೆ ಬದಲಾಯಿಸಿ. ಉದಾಹರಣೆಗೆ ಓದುವುದು, ಹೊರಾಂಗಣದಲ್ಲಿ ಸಮಯ ಕಳೆಯುವುದು ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ವೈಯಕ್ತಿಕವಾಗಿ ಬೆರೆಯುವುದು. ಸಂಗೀತ, ಸಾಹಿತ್ಯ, ಚಿತ್ರಕಲೆ ಅಲ್ಲದೆ ಅಂಚೆಚೀಟಿ ಸಂಗ್ರಹಣೆ, ನಾಣ್ಯಗಳ ಸಂಗ್ರಹಣೆ ಮುಂತಾದ ಹವ್ಯಾಸಗಳೂ ನಿಮ್ಮನ್ನು ಮೊಬೈಲ್‌ ಗೀಳಿನಿಂದ ವಿಮುಖಗೊಳಿಸುತ್ತವೆ.

World Social Media Day

ಸಾಮಾಜಿಕ ಮಾಧ್ಯಮ ಡಿಟಾಕ್ಸ್: ನಿಮ್ಮ ಮನಸ್ಸಿನ ರೀಬೂಟ್

ಸಾಮಾಜಿಕ ಮಾಧ್ಯಮ ನಿರ್ವಿಶೀಕರಣವನ್ನು (ಡಿಟಾಕ್ಸಿನೇಷನ್) ಪರಿಗಣಿಸಿ! ನಿರ್ದಿಷ್ಟ ಅವಧಿಗೆ ಸಾಮಾಜಿಕ ಮಾಧ್ಯಮದಿಂದ ವಿರಾಮ ತೆಗೆದುಕೊಳ್ಳಿ, ನಿಮ್ಮ ಮೊಬೈಲ್‌ನ್ನು ಕೇವಲ ಸಂಪರ್ಕಕ್ಕೆ ಮಾತ್ರ ಬಳಸಿ. ಯಾವುದೇ ಸೋಷಿಯಲ್‌ ಆ್ಯಪ್‌ಗಳಿಂದ ದೂರ ಇರಿ. ಅದು ಒಂದು ದಿನ, ವಾರಾಂತ್ಯ ಅಥವಾ ಒಂದು ವಾರವೂ ಆಗಿರಲಿ. ನೈಜ-ಜಗತ್ತಿನ ಸಂಪರ್ಕ ಮತ್ತು ನೀವು ನಿರ್ಲಕ್ಷಿಸಿರುವ ಚಟುವಟಿಕೆಗಳ ಸಂತೋಷಗಳನ್ನು ಮರುಶೋಧಿಸಲು ಇದು ನಿಮಗೆ ಸಹಾಯ ಮಾಡುತ್ತದೆ. ನಿರಂತರ ಸಾಮಾಜಿಕ ಮಾಧ್ಯಮ ಪುಲ್ ಇಲ್ಲದೆ ನೀವು ಎಷ್ಟು ಹೆಚ್ಚು ಉತ್ಪಾದಕ ಮತ್ತು ಪ್ರಸ್ತುತವನ್ನು ಅನುಭವಿಸುತ್ತೀರಿ ಎಂದು ನಿಮಗೇ ಆಶ್ಚರ್ಯವಾಗಬಹುದು.

ನೆನಪಿಡಿ, ನೀವು ಒಬ್ಬಂಟಿಯಲ್ಲ

ಸಾಮಾಜಿಕ ಮಾಧ್ಯಮ ವ್ಯಸನವು ಬೆಳೆಯುತ್ತಿರುವ ಸಮಸ್ಯೆಯಾಗಿದೆ. ಇದರಲ್ಲಿ ನೀವು ಮಾತ್ರ ಸಿಲುಕಿದವರಲ್ಲ. ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಕಾಪಾಡಿಕೊಳ್ಳಲು ಅನೇಕ ಜನರು ಹೆಣಗಾಡುತ್ತಿದ್ದಾರೆ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ, 5C ಫ್ರೇಮ್‌ವರ್ಕ್ ಅನ್ನು ಬಳಸಿಕೊಳ್ಳುವ ಮೂಲಕ ಮತ್ತು ಈ ಸಲಹೆಗಳನ್ನು ಕಾರ್ಯಗತಗೊಳಿಸುವುದರ ಮೂಲಕ, ನಿಮ್ಮ ಸಾಮಾಜಿಕ ಮಾಧ್ಯಮ ಅಭ್ಯಾಸಗಳನ್ನು ನೀವು ನಿಯಂತ್ರಿಸಬಹುದು ಮತ್ತು ಅದು ನಿಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿಯಾಗಬಲ್ಲದು.

ಸಾಮಾಜಿಕ ಮಾಧ್ಯಮ ಮತ್ತು ಮಾನಸಿಕ ಆರೋಗ್ಯ: ಕಾಳಜಿಗೆ ಕಾರಣ

ಸಾಮಾಜಿಕ ಮಾಧ್ಯಮಗಳು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆಯಿಂದ ಹೆಚ್ಚಿದ ಆತಂಕ, ಖಿನ್ನತೆ ಮತ್ತು ಅಸಮರ್ಪಕತೆಯ ಭಾವನೆಗಳ ನಡುವಿನ ಪರಸ್ಪರ ಸಂಬಂಧವನ್ನು ಅಧ್ಯಯನಗಳು ತೋರಿಸಿವೆ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಕಾಣುವ ಜೀವನದ ಕ್ಯುರೇಟೆಡ್ ಮತ್ತು ಅವಾಸ್ತವಿಕ ಚಿತ್ರಣಗಳು ನಿಮ್ಮಲ್ಲಿ ಹೋಲಿಕೆ ಮತ್ತು ಅಸಮರ್ಪಕತೆಯ ಭಾವನೆಗಳಿಗೆ ಕಾರಣವಾಗಬಹುದು. ಸಾಮಾಜಿಕ ಮಾಧ್ಯಮ ಫೀಡ್‌ಗಳು, ಸಾಮಾನ್ಯವಾಗಿ ಎಚ್ಚರಿಕೆಯಿಂದ ರಚಿಸಲಾದ ಹೈಲೈಟ್ ರೀಲ್‌ಗಳು, ವಾಸ್ತವದ ಪ್ರಾತಿನಿಧ್ಯವಲ್ಲ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ.

ನೈಜ ಸಂಪರ್ಕಗಳ ಮೇಲೆ ಕೇಂದ್ರೀಕರಿಸಿ ಮತ್ತು ನೀವು ಪ್ರೀತಿಸುವ ಜೀವನವನ್ನು ನಿರ್ಮಿಸಿ

ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕದಲ್ಲಿರಲು ಸಾಮಾಜಿಕ ಮಾಧ್ಯಮವು ಉತ್ತಮ ಸಾಧನವಾಗಿದೆ, ಆದರೆ ಇದು ನೈಜ-ಪ್ರಪಂಚದ ಸಂವಹನವನ್ನು ಬದಲಿಸಬಾರದು. ಮುಖಾಮುಖಿ ಸಂವಹನಗಳಿಗೆ ಆದ್ಯತೆ ನೀಡಲು ಮತ್ತು ನಿಮ್ಮ ಜೀವನದಲ್ಲಿ ಅರ್ಥಪೂರ್ಣ ಸಂಬಂಧಗಳನ್ನು ಬೆಳೆಸಲು ಪ್ರಯತ್ನವನ್ನು ಮಾಡಿ.

ಅಂತಿಮವಾಗಿ, ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಸಾಧಿಸುವುದು ಮುಖ್ಯ. ಸಂಪರ್ಕಿಸಲು, ಹಂಚಿಕೊಳ್ಳಲು ಮತ್ತು ಮಾಹಿತಿ ಪಡೆಯಲು ಸಾಮಾಜಿಕ ಮಾಧ್ಯವನ್ನು ಬಳಸಿ. ಆದರೆ ನಿಮ್ಮ ಜೀವನದಲ್ಲಿ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ ಮತ್ತು ಆರೋಗ್ಯಕರ ಅಭ್ಯಾಸಗಳ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ, ನಿಮ್ಮ ಸಮಯ ಮತ್ತು ಗಮನದ ನಿಯಂತ್ರಣವನ್ನು ನೀವು ಮರುಪಡೆಯಬಹುದು. ಸಾಮಾಜಿಕ ಮಾಧ್ಯಮವು ನಿಮ್ಮ ಜೀವನವನ್ನು (ಸಮಯವನ್ನು) ಕಡಿಮೆಗೊಳಿಸುವುದಕ್ಕಿಂತ ಹೆಚ್ಚಿಸುತ್ತದೆ ಎಂದು ಖಚಿತಪಡಿಸಿಕೊಳ್ಳಬಹುದು. ಆದ್ದರಿಂದ, ನಿಮ್ಮ ಫೋನ್ ಅನ್ನು ಕೆಳಗೆ ಇರಿಸಿ, ಪರದೆಯಿಂದ ಮೇಲಕ್ಕೆ ನೋಡಿ ಮತ್ತು ಅಲ್ಲಿಗೆ ಹೋಗಿ ಮತ್ತು ನಿಮ್ಮ ಜೀವನವನ್ನು ಜೀವಿಸಿ.
ಮೋಬೈಲ್‌ ಸ್ಕ್ರೋಲಿಂಗ್‌ ನಿಲ್ಲಿಸಿ, ಜೀವನದಲ್ಲಿ ಸ್ಟ್ರೋಲಿಂಗ್ ಮಾಡಿ. Stop scrolling, Start Strolling.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಮುದ್ರಾ ಯೋಜನೆಯ ಹೆಸರಲ್ಲಿ ರಾಷ್ಟ್ರವ್ಯಾಪಿ ಸೈಬರ್ ವಂಚನೆ

Continue Reading

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading
Advertisement
Russia Tourism
ಪ್ರವಾಸ3 mins ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ3 mins ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ10 mins ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 202411 mins ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ32 mins ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ32 mins ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ36 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ37 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

SSLC 2024 Exam 2
ಪ್ರಮುಖ ಸುದ್ದಿ47 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ55 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌