ವಿಸ್ತಾರ ವಿಶ್ಲೇಷಣೆ | ʼಕಥನʼವೇ ಇಲ್ಲದೆ ಕತ್ತಲಲ್ಲಿ ಕತ್ತಿ ಬೀಸುತ್ತಿರುವ ಬಿಜೆಪಿ; ಫೆ. 17ಕ್ಕಾದರೂ ಸಿಗಲಿದೆಯೇ ಸೂತ್ರ? - Vistara News

ಅಂಕಣ

ವಿಸ್ತಾರ ವಿಶ್ಲೇಷಣೆ | ʼಕಥನʼವೇ ಇಲ್ಲದೆ ಕತ್ತಲಲ್ಲಿ ಕತ್ತಿ ಬೀಸುತ್ತಿರುವ ಬಿಜೆಪಿ; ಫೆ. 17ಕ್ಕಾದರೂ ಸಿಗಲಿದೆಯೇ ಸೂತ್ರ?

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳು ಹತ್ತಿರವಾದಂತೆಲ್ಲ ರಾಜಕೀಯ ಪಕ್ಷಗಳ ನಡೆಗಳು ಒಂದೊಂದಾಗಿ ಸ್ಪಷ್ಟವಾಗುತ್ತಿವೆ. ಆದರೆ ಆಡಳಿತಾರೂಢ ಬಿಜೆಪಿ ಮಾತ್ರ ಇನ್ನೂ ಸ್ಪಷ್ಟವಾದ ಮಾರ್ಗದ ಹುಡುಕಾಟದಲ್ಲೇ ಇದೆ.

VISTARANEWS.COM


on

karnataka-election CM Basavaraja bommai says conress is pressure cooker party
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಮೇಶ ದೊಡ್ಡಪುರ
ಮೂವತ್ತು ಕಿಲೋಮೀಟರ್ ಪ್ರತಿ ಗಂಟೆ ವೇಗದಲ್ಲಿ ಪ್ಯಾಸೆಂಜರ್ ಗಾಡಿಯಂತೆ ಸಾಗುತ್ತಿದ್ದ ಕರ್ನಾಟಕ ಚುನಾವಣಾ ರೈಲು ಜನವರಿ 11ನೇ ತಾರೀಖಿನಿಂದ ಇದ್ದಕ್ಕಿದ್ದಂತೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ವೇಗದಲ್ಲಿ ಓಡಲು ಶುರು ಮಾಡಿದೆ. ಅಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ನ ʼಪ್ರಜಾಧ್ವನಿʼ ಯಾತ್ರೆ ನಡೆದಾಗಿನಿಂದ ಈ ಬದಲಾವಣೆ.

ರಾಜ್ಯದ ಎಲ್ಲ ಮನೆಗಳಿಗೆ ಪ್ರತಿ ತಿಂಗಳು 200 ಯುನಿಟ್‌ ಉಚಿತವಾಗಿ ವಿದ್ಯುತ್ ಕೊಡಲಾಗುತ್ತದೆ ಎಂದು ಕಾಂಗ್ರೆಸ್ ಘೋಷಣೆ ಮಾಡಿತು. ಈ ಘೋಷಣೆ ಆಗಿದ್ದೇ ತಡ ರಾಜ್ಯಾದ್ಯಂತ ಚುನಾವಣೆ ಹರಟೆಕಟ್ಟೆಗಳ ಚಟುವಟಿಕೆ ಬಿರುಸಾಗಿದೆ. ಈಗಾಗಲೆ ಜನಸಾಮಾನ್ಯ, ಅದರಲ್ಲೂ ಮಧ್ಯಮ ವರ್ಗ, ತಳ ಮಧ್ಯಮ ವರ್ಗವು ಬೆಲೆ ಏರಿಕೆಯಿಂದ ಬೇಸತ್ತಿದೆ. ಈ ಹಿಂದೆ ಈರುಳ್ಳಿ ರೇಟ್ ಹೆಚ್ಚಾಗಿದ್ದಕ್ಕೆ ದೆಹಲಿ ಸರ್ಕಾರ ಬಿದ್ದ ಉದಾಹರಣೆ ಈ ದೇಶದಲ್ಲಿದೆ. ಆದರೆ ಈಗ ಆ ಪರಿಸ್ಥಿತಿ ಇಲ್ಲ. ಜನರ ಕೈಯಲ್ಲಿ ಒಂದಷ್ಟು ದುಡ್ಡು ಓಡಾಡುತ್ತಾ ಇದೆ. ತೀರಾ ಈರುಳ್ಳಿ, ಆಲೂಗಡ್ಡೆ ರೇಟಿಗೆ ಗೌರ್ನಮೆಂಟನ್ನು ಬೀಳಿಸುವುದಿಲ್ಲ. ಹೆಚ್ಚು ಅಂದರೆ ಒಂದಷ್ಟು ಆಕ್ರೋಶ ವ್ಯಕ್ತಪಡಿಸಬಹುದು ಎನ್ನುವುದು ಇತ್ತೀಚೆಗೆ ಅನೇಕ ಸಲ TOP(Tomato, Onion, Potato) ದರ ಹೆಚ್ಚಳವಾದಾಗ ತಿಳಿದಿದೆ. ಆದರೆ ಜನರ ಆದ್ಯತೆಗಳು ಈಗ ಬದಲಾಗಿವೆ.

ಪೆಟ್ರೋಲ್, ಡೀಸೆಲ್ ದರ ನೂರರ ಗಡಿ ದಾಟಿದೆ. ಈಗಂತೂ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಎಲ್ಲರ ಮನೆಯಲ್ಲಿ ಕನಿಷ್ಟ ಒಂದು ದ್ವಿಚಕ್ರ ವಾಹನ ಇದೆ. ಸಾಕಷ್ಟು ಜನರು ಕಾರು ಕೊಂಡಿದ್ದಾರೆ. ಪೆಟ್ರೋಲ್, ಡೀಸೆಲ್ ಜತೆಗೆ ಎಲ್‌ಪಿಜಿ ದರ ದಿನನಿತ್ಯ ಕಾಡುತ್ತಿದೆ. 400-500 ರೂ. ರೇಂಜ್‌ನಲ್ಲಿ ಇರುತ್ತಿದ್ದ ದರ ಈಗ ಸಾವಿರದ ಗಡಿ ದಾಟಿದೆ. ಪ್ರಾರಂಭದಲ್ಲಿ ಬ್ಯಾಂಕ್ ಅಕೌಂಟಿಗೆ ಬಂದು ಬೀಳುತ್ತಿದ್ದ ಸಬ್ಸಿಡಿ ಹಣ ಗೊತ್ತೇ ಆಗದಂತೆ ನಿಂತುಹೋಗಿಬಿಟ್ಟಿದೆ. ಈ ವರ್ಗವು ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಗೃಹಸಾಲ ಪಡೆದುಕೊಂಡಿದೆ. ತಲೆ ಮೇಲೆ ಒಂದು ಸೂರು ಇರಲಿ ಎಂಬ ಕಾರಣಕ್ಕೆ 15-20 ವರ್ಷದವರೆಗೆ ತೀರಿಸುವಂತೆ ಸಾಲ ಮಾಡಿಕೊಂಡಿದೆ. ಆ ಸಾಲದ ಬಡ್ಡಿ ಮೊತ್ತ 2-3 ವರ್ಷದ ಹಿಂದೆ 6% ಇದ್ದದ್ದು ಈಗ ಬರೊಬ್ಬರಿ 9%ವರೆಗೆ ಆಗಿದೆ. ಈ ಹೊಸ ಸಮಸ್ಯೆಗಳು ಮಧ್ಯಮ ಮತ್ತು ಕೆಳ ಮಧ್ಯಮ ವರ್ಗವನ್ನು ಕಾಡುತ್ತಿವೆ. ಈಗಂತೂ ಎಲೆಕ್ಟ್ರಿಕ್ ಸ್ಟೌ, ಎಲೆಕ್ಟ್ರಿಕ್ ವಾಟರ್ ಹೀಟರ್ ಜತೆಗೆ ಎಲೆಕ್ಟ್ರಿಕ್ ವಾಹನಗಳು ಜನಪ್ರಿಯವಾಗುತ್ತಿವೆ. ಒಂದೆಡೆ ಎಲ್ಪಿಜಿ ದುಬಾರಿ, ಇನ್ನೊಂದೆಡೆ ಪೆಟ್ರೋಲ್ ದುಬಾರಿ, ಮಧ್ಯದಲ್ಲಿ 200 ಯುನಿಟ್ ವಿದ್ಯುತ್ ಫ್ರೀ ಎಂದರೆ ಯಾರಿಗೆ ಖುಷಿ ಆಗುವುದಿಲ್ಲ? ಎಲ್ಪಿಜಿ ಸ್ಟೌ ಬದಲಿಗೆ ಎಲೆಕ್ಟ್ರಿಕ್ ಸ್ಟೌ ಬಳಸಬಹುದು, ಪೆಟ್ರೋಲ್ ಗಾಡಿ ಬದಲಿಗೆ ಎಲೆಕ್ಟ್ರಿಕ್ ಗಾಡಿ. ಹೀಗಾಗಿ ಕಾಂಗ್ರೆಸ್ ಜನವರಿ 11ರಂದು ಹೂಡಿದ ತಂತ್ರ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.

BJP

ಇದೀಗ ಜನವರಿ 16ರ ಸೋಮವಾರ ಬೆಂಗಳೂರಿನಲ್ಲಿ ನಡೆದ ʼನಾ ನಾಯಕಿʼ ಕಾರ್ಯಕ್ರಮದಲ್ಲಿ, ರಾಜ್ಯದಲ್ಲಿರುವ, ಮಹಿಳೆಯರು ಮುಖ್ಯಸ್ಥರಾಗಿರುವ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂ. ನೀಡುವುದಾಗಿ ಎರಡನೇ ಗ್ಯಾರಂಟಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಕಾಂಗ್ರೆಸ್ ನಾಯಕರೇ ಬಣ್ಣಿಸಿದಂತೆ ʼಜೂನಿಯರ್ ಇಂದಿರಾಗಾಂಧಿʼ ಪ್ರಿಯಾಂಕಾ ಗಾಂಧಿ ವಾದ್ರ ಅವರಿಂದಲೇ ಈ ಘೋಷಣೆ ಮಾಡಿಸಿದೆ. 200 ಯುನಿಟ್ ವಿದ್ಯುತ್ ಘೋಷಣೆ ಜತೆಗೆ ಇದೀಗ 2,000 ರೂ. ಪ್ರತಿ ತಿಂಗಳು ನೀಡುವುದಾಗಿ ಹೇಳಿರುವುದು ಕಾಂಗ್ರೆಸ್‌ಗೆ ಮತ್ತಷ್ಟು ಉತ್ಸಾಹ ನೀಡಿದೆ. ಭಾರತದಲ್ಲಿ ಪ್ರತಿಪಕ್ಷದಲ್ಲಿದ್ದುಕೊಂಡು ಚುನಾವಣೆ ಎದುರಿಸುವುದು ಸ್ವಲ್ಪ ಸುಲಭದ ಕೆಲಸ. ಸರ್ಕಾರಕ್ಕೆ ಹೊಡೆಯಲು ಸಾಕಷ್ಟು ಕಲ್ಲುಗಳಿರುತ್ತವೆ. ಇದಕ್ಕೆ ಐತಿಹಾಸಿಕ ಅಂಕಿ ಅಂಶಗಳೂ ಸಾಕ್ಷಿ ಇವೆ.

ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದ ಮೊದಲ 25 ವರ್ಷವನ್ನು ಆಡಳಿತಾರೂಢ ಪಕ್ಷಗಳ ʼಹನಿಮೂನ್ʼ ಅವಧಿ ಎಂದೇ ಕರೆಯಬಹುದು. 1952ರ ಮೊದಲ ಚುನಾವಣೆಯಿಂದ 1977ರವರೆಗೆ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ಚುನಾವಣೆಯಲ್ಲಿ, ಶೇ.82 ಸರ್ಕಾರಗಳು ಪುನರಾಯ್ಕೆ ಆದವು. ಈ ಅವಧಿಯಲ್ಲಿ ಹೆಚ್ಚಿನ ಬಾರಿ ಕಾಂಗ್ರೆಸ್ ಅಧಿಕಾರ ಹಿಡಿಯುತ್ತಿತ್ತು. ಮತದಾರನೂ, ಪ್ರಜಾಪ್ರಭುತ್ವ ಸರ್ಕಾರದ ಬಗ್ಗೆ ಬಹಳಷ್ಟು ವಿಶ್ವಾಸ ಹೊಂದಿದ್ದ(ಳು).

ರಾಜಕಾರಣಿಗಳೂ, ತಮ್ಮ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯನ್ನು ಇರಿಸಿಕೊಂಡು ಪುನರಾಯ್ಕೆ ಆಗುತ್ತಲೇ ಇದ್ದರು. ಆದರೆ 1977ರಿಂದ 2002ರವರೆಗಿನ ಎರಡನೇ ಅವಧಿ ಚಪಾತಿ ಮಗುಚಿ ಹಾಕಿದ ಹಾಗೆ ಉಲ್ಟಾ. ಈ ಅವಧಿಯಲ್ಲಿ ಮತದಾರ ಸಂಪೂರ್ಣ ವ್ಯಘ್ರ. ಸರ್ಕಾರವನ್ನು ಬದಲಿ ಮಾಡುವುದೇ ಅವರಿಗೆ ಖುಷಿಯಾಗಿತ್ತು. ಈ ಅವಧಿಯಲ್ಲಿ ದೇಶಾದ್ಯಂತ ಪುನರಾಯ್ಕೆ ಆದ ಸರ್ಕಾರಗಳ ಸಂಖ್ಯೆ ಕೇವಲ 29%. ಅಂದರೆ ಉಳಿದ 71% ಬಾರಿ ಸರ್ಕಾರಗಳು ಬದಲಾಗುತ್ತಲೇ ಇದ್ದವು. ಕೆಲವು ರಾಜ್ಯಗಳಲ್ಲಂತೂ ಇದು 94% ಇತ್ತು. ನಂತರದಲ್ಲಿ ಭಾರತದ ಮತದಾರ ಬುದ್ಧಿವಂತ ಆಗುತ್ತಾ ಸಾಗಿದ.

2002ರಿಂದ 2019ರವರೆಗಿನ ಅವಧಿಯನ್ನು ಫಿಫ್ಟಿ ಫಿಫ್ಟಿ ಅವಧಿ ಎನ್ನಲಾಗುತ್ತದೆ. ಈ ಅವಧಿಯಲ್ಲಿ ದೇಶದಲ್ಲಿ 48% ಸರ್ಕಾರಗಳು ಪುನರಾಯ್ಕೆ ಆದರೆ, 52% ಸರ್ಕಾರಗಳು ಬದಲಾದವು. ಅಂದರೆ ಮತದಾರ ಸುಖಾಸುಮ್ಮನೆ ಒಂದು ಸರ್ಕಾರದ ಪರ ಮತ ಹಾಕುವ ಅಥವಾ ಒಂದು ಸರ್ಕಾರದ ವಿರುದ್ಧ ಮತ ಹಾಕುವ ಜಾಯಮಾನವನ್ನು ಬಿಟ್ಟು, ಆಲೋಚನೆ ಮಾಡುತ್ತಿದ್ದಾನೆ. ತನಗೆ ಇಷ್ಟವಾದರೆ ಸರ್ಕಾರವನ್ನು ಉಳಿಸಿಕೊಳ್ಳುವ, ಇಲ್ಲವಾದರೆ ಬದಲಿಸುವ ನಿರ್ಧಾರ ಆಗುತ್ತಿದೆ.

ಸ್ವತಃ ಪ್ರಧಾನಿ ನರೇಂದ್ರ ಮೋದಿ ತಮ್ಮ ತವರು ರಾಜ್ಯ ಗುಜರಾತನ್ನು ಉಳಿಸಿಕೊಳ್ಳಬೇಕಾದರೆ ಬೆವರು ಹರಿಸಬೇಕಾಗಿದೆ. ಇಷ್ಟು ಪವರ್‌ಫುಲ್‌ ಪ್ರಧಾನಿ ಇದ್ದಾಗ್ಯೂ, ಅತ್ಯಂತ ದುರ್ಬಲ ಎನ್ನಲಾಗುವ ಕಾಂಗ್ರೆಸ್ ಪಕ್ಷ ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಜಯಭೇರಿ ಬಾರಿಸುತ್ತದೆ ಎನ್ನುವುದೇ ಇದಕ್ಕೆ ತಾಜಾ ಉದಾಹರಣೆ.

ಫಿಫ್ಟಿ ಫಿಫ್ಟಿ ಜಮಾನಾದ ನಡುವೆಯೂ ಮತದಾರ, ಸ್ವಲ್ಪ ಒಲವನ್ನು ಸರ್ಕಾರ ಬದಲಿಸುವ ಕಡೆಗೇ ಹೊಂದಿದ್ದಾನೆ. ಅಂದರೆ 52% ಒಲವು ಸರ್ಕಾರವನ್ನು ಬದಲಿಸುವ ಕಡೆಗೇ ಇದೆ. ಹಾಗಾಗಿಯೇ ಆಗ ಹೇಳಿದ್ದು, ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸ್ವಲ್ಪ ಹೆಚ್ಚಿನ ಅನುಕೂಲ ಇರುತ್ತದೆ. ಈ ಸಮಯದಲ್ಲಿ ಆಡಳಿತಾರೂಢ ಸರ್ಕಾರ ತನ್ನ ಸಾಧನೆಯನ್ನು ಹೆಚ್ಚೆಚ್ಚು ಜನರೆಡೆಗೆ ಕೊಂಡೊಯ್ಯಬೇಕಾಗುತ್ತದೆ. ಸರ್ಕಾರ ತಮಗೆ ನೀಡುತ್ತಿರುವ ಅನುಕೂಲತೆಗಳ ಹೋಲಿಕೆಯಲ್ಲಿ ಪ್ರತಿಪಕ್ಷಗಳು ಮಾಡುವ ಘೋಷಣೆ ನಗಣ್ಯ ಎನ್ನುವಂತೆ ಜನರ ಮನಸ್ಸಿನಲ್ಲಿ ಭಾವನೆ ಬಿತ್ತಬೇಕಾಗುತ್ತದೆ. ಇದಕ್ಕಾಗಿ ಸರ್ಕಾರಕ್ಕೂ ಅಧಿಕಾರ, ಕಾನೂನು ಸುವ್ಯವಸ್ಥೆ, ಪ್ರಚಾರ ಸಾಮಗ್ರಿ ಜತೆಗೆ ಹಣಕಾಸು ಸೇರಿ ಸಾಕಷ್ಟು ಅನುಕೂಲ ಇರುತ್ತವೆ.

BJP For Lok Sabha Election

ಆದರೆ ಇಂದು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಇದ್ಯಾವ ಟೂಲ್‌ಗಳನ್ನೂ ಬಳಸಿಕೊಂಡು ಪ್ರಚಾರ ಮಾಡುತ್ತಿರುವಂತೆ ಕಾಣುತ್ತಿಲ್ಲ. ಹಾಗೆ ಹೇಳಬೇಕೆಂದರೆ ಸಂಘಟನಾತ್ಮಕವಾಗಿ ಕಾಂಗ್ರೆಸ್‌ಗಿಂತ ಬಿಜೆಪಿ ಸದೃಢವಾಗಿದೆ. ಬಹುತೇಕ ಎಲ್ಲ ಬೂತ್ ಕಮಿಟಿ ರಚನೆ ಆಗಿವೆ. ಸುಮಾರು ಒಂದು ಕೋಟಿ ಮನೆಗಳ ಮೇಲೆ ಪಕ್ಷದ ಧ್ವಜ ಕಟ್ಟುವ ಕಾರ್ಯ ನಡೆದಿದೆ. ಅನೇಕ ಮೋರ್ಚಾಗಳಿಗೆ ತಾಲೂಕು ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಆಗಿದೆ. ಪೇಜ್ ಪ್ರಮುಖರ ನೇಮಕವೂ ಭರದಿಂದ ಸಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ರಾಜ್ಯ ಬಿಜೆಪಿ ಇತಿಹಾಸದಲ್ಲೆ ಬಹುಶಃ ಅತಿ ಹೆಚ್ಚು ಬಾರಿ ರಾಜ್ಯವನ್ನು ಸುತ್ತಿದ ಅಧ್ಯಕ್ಷರಿದ್ದಾರೆ. ನಳಿನ್ ಕುಮಾರ್ ಕಟೀಲ್ ನಡೆಸಿದ ಸಂಘಟನಾ ಪ್ರವಾಸವನ್ನು ಕಂಡು ಆ ಪಕ್ಷದ ಹಿರಿಯರೇ ಅಚ್ಚರಿಗೊಂಡಿದ್ದಾರೆ. ಇದೆಲ್ಲವೂ ಇದೆ. ಆದರೆ,

ಚುನಾವಣೆಗೆ ಸಂಘಟನೆ ಜತೆಗೆ ಬೇಕಿರುವುದು ನಾಯಕತ್ವ. ಅದೆಲ್ಲಕ್ಕಿಂತ ಮುಖ್ಯವಾಗಿ ಬೇಕಿರುವುದು Narrative. ಅಂದರೆ ಕಥನ. ಇದು ರಾಜಕೀಯ ಶಾಸ್ತ್ರದ ವ್ಯಾಖ್ಯಾನ. ಮತ್ತೊಮ್ಮೆ ಜನರು ಈ ಸರ್ಕಾರವನ್ನು ಆಯ್ಕೆ ಮಾಡಬೇಕಿರುವುದು ಏಕೆ? ಎನ್ನುವುದಕ್ಕೆ ಒಪ್ಪಬಹುದಾದ ಕಥನ ಇರಬೇಕು. ಅದು ಸತ್ಯವೇ ಇರಬಹುದು, ಕೆಲವೊಮ್ಮೆ ಹೆಣೆದ ಕಥೆಯೂ ಇರಬಹುದು. ಈ ಸರ್ಕಾರದಲ್ಲಿ ಜಾರಿ ಮಾಡಿದ ಒಂದು ಅತಿ ದೊಡ್ಡ ಯೋಜನೆಯೂ ಆಗಬಹುದು, ಪ್ರತಿಪಕ್ಷವು ಸರ್ಕಾರ ನಡೆಸುವ ಸಾಮರ್ಥ್ಯ ಹೊಂದಿಲ್ಲ ಎನ್ನುವುದನ್ನು ನಿರೂಪಿಸುವುದೂ ಇರಬಹುದು. 2018ರ ವೇಳೆಯಲ್ಲಿ ಬಿಜೆಪಿಯ ಬಳಿ ಹಾಗೂ ಆಡಳಿತದಲ್ಲಿದ್ದ ಕಾಂಗ್ರೆಸ್ ಸರ್ಕಾರದ ಬಳಿಯೂ ಕಥನ ಇತ್ತು. ಸಿದ್ದರಾಮಯ್ಯ ಸರ್ಕಾರ ತನ್ನ ಅನ್ನ ಭಾಗ್ಯ, ಇಂದಿರಾ ಕ್ಯಾಂಟೀನ್‌ನಂತಹ ಯೋಜನೆಗಳನ್ನು ಹಿಡಿದು ಹೊರಟಿತ್ತು. ಇತ್ತ ಬಿಜೆಪಿಯು ಡಬಲ್‌ ಇಂಜಿನ್‌ ಸರ್ಕಾರದ ಲಾಭ, ಸಿದ್ದರಾಮಯ್ಯ ಸರ್ಕಾರದ ಹಿಂದು ವಿರೋಧಿ ನಡೆವನ್ನು ಮುಂದಾಗಿಸಿ ಕಥನವನ್ನು ಹೆಣೆದಿತ್ತು. ಆದರೆ ಈ ಬಾರಿ ಪ್ರತಿಪಕ್ಷ ಕಾಂಗ್ರೆಸ್‌ಗೆ ಕಥನವಿದೆ. ಸರ್ಕಾರದ ವಿರುದ್ಧ 40% ಭ್ರಷ್ಟಾಚಾರದ ಒಂದು ಕಥನವನ್ನು ಕಾಂಗ್ರೆಸ್ ಯಶಸ್ವಿಯಾಗಿ ರೂಪಿಸಿದೆ. ಆದರೆ ಸರ್ಕಾರದ ಬಳಿ ಇದು ಇಲ್ಲ. ಡಬಲ್ ಇಂಜಿನ್ ಸರ್ಕಾರ ಎನ್ನುವ ಘೋಷಣೆ ಅಮೂರ್ತವಾಗಿದೆ.

ಇದೆಲ್ಲದರ ನಡುವೆ ಬಿಜೆಪಿ ಸರ್ಕಾರ ಬಹುಮುಖ್ಯವಾದ ನಿರ್ಧಾರ ಕೈಗೊಂಡಿದೆ. ಎಸ್‌ಸಿಎಸ್‌ಟಿ ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಿದೆ. ಎಸ್‌ಸಿ ಮೀಸಲನ್ನು ಶೇ.13ರಿಂದ ಶೇ.17ಕ್ಕೆ, ಎಸ್‌ಟಿ ಮೀಸಲನ್ನು ಶೇ.3ರಿಂದ ಶೇ.7ಕ್ಕೆ ಏರಿಸಿದೆ. ಈಗಾಗಲೆ ಅಧಿಸೂಚನೆಯೂ ಆಗಿದೆ. ಇದೊಂದು ನಿರ್ಧಾರದಿಂದ ತನಗೆ ಬಹುದೊಡ್ಡ ಲಾಭ ಆಗುತ್ತದೆ ಎಂದು ಬಿಜೆಪಿ ಹಾಗೂ ಸರ್ಕಾರದ ಅನೇಕರು ಹೇಳುತ್ತಿದ್ದಾರೆ. ಇದು ದೊಡ್ಡ ನಿರ್ಧಾರವೇ ಆದರೂ, ಅದರ ಲಾಭ ತಾನೇ ತಾನಾಗಿ ದೊರಕುವುದಿಲ್ಲ. ಈ ಘೋಷಣೆಯನ್ನು ಮತಗಳನ್ನಾಗಿ ಪರಿವರ್ತನೆ ಮಾಡಲು ಬಿಜೆಪಿಯಲ್ಲಿ ಆ ಸಮುದಾಯಗಳ, ವಿಶೇಷವಾಗಿ ಎಸ್‌ಸಿ ಸಮುದಾಯದ ʼನಾಯಕರುʼ ಸಾಕಷ್ಟು ಸಂಖ್ಯೆಯಲ್ಲಿ ಇಲ್ಲ. ಎಸ್‌ಟಿ ಸಮುದಾಯದಲ್ಲಿ ಕೆಲವು ನಾಯಕರಿದ್ದಾರೆ. ಆದರೆ ಎಸ್‌ಸಿ ಸಮುದಾಯದಲ್ಲಿ ಈ ಅನುಕೂಲ ಇಲ್ಲದಿರುವ ಕಾರಣಕ್ಕೆ ಮೀಸಲಾತಿ ಹೆಚ್ಚಳವನ್ನು ಪಡೆಯುವ ಗಂಭೀರ ಪ್ರಯತ್ನಗಳೂ ಕಾಣುತ್ತಿಲ್ಲ.

ಬಿಜೆಪಿಯು ತನ್ನ ಕೋರ್ ಏರಿಯಾ, ಹಿಂದುತ್ವದಲ್ಲೂ ಆಕ್ರಮಣಕಾರಿಯಾಗಿಲ್ಲ. ಹಿಜಾಬ್-ಹಲಾಲ್-ಮತಾಂತರ ವಿಚಾರಗಳು ತಣ್ಣಗಾಗಿವೆ. ದೇವಸ್ಥಾನಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವುದಾಗಿ ಮಾಡಿದ ಘೋಷಣೆ ವರ್ಷ ಕಳೆದರೂ ಈಡೇರಿಲ್ಲ. ಹಲಾಲ್ ಸರ್ಟಿಫಿಕೇಟ್ ನೀಡುವುದನ್ನು ನಿಷೇಧಿಸುವ ಕುರಿತು ಇತ್ತೀಚೆಗೆ ವಿಧಾನ ಪರಿಷತ್ನಲ್ಲಿ ಮಂಡನೆಯಾದ ಖಾಸಗಿ ವಿಧೇಯಕಕ್ಕೆ ಸ್ವಪಕ್ಷದಲ್ಲೇ ಬೆಂಬಲ ಸಿಕ್ಕಿಲ್ಲ. ದೇಶದಲ್ಲಿ ಇಡಬ್ಲ್ಯುಎಸ್‌ ಜಾರಿಯಾಗಿದ್ದರೂ ಕರ್ನಾಟಕದಲ್ಲಿ ಮಾತ್ರ ಮಾಡಿಲ್ಲ ಎಂದು ಬಿಜೆಪಿಯ ಸಾಂಪ್ರದಾಯಿಕ ಮತದಾರರಲ್ಲಿ ತಣ್ಣನೆಯ ಆಕ್ರೋಶ ಇದೆ. ಇದೇ ವೇಳೆ ಪಂಚಮಸಾಲಿ-ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು ಇದೇ ಇಡಬ್ಲ್ಯುಎಸ್‌ನಿಂದ ಹಂಚಿ ನೀಡುವ ನಿರ್ಧಾರ ಮಾಡಿದೆ. ಇದರಿಂದಾಗ ಅತ್ತ ಇಡಬ್ಲ್ಯುಎಸ್‌ ವರ್ಗದಲ್ಲಿಯೂ ಅಸಮಾಧಾನವವಿದೆ, ಇತ್ತ ಪಂಚಮಸಾಲಿ ಸಮುದಾಯವೂ ಮುನಿಸಿಕೊಂಡಿದೆ.

ಸಂಘಟನೆಯಾಗಿ ಬಿಜೆಪಿ ಗಟ್ಟಿಯಾಗಿದೆಯಾದರೂ, ದಿನೇದಿನೇ ಬಿಜೆಪಿ ವಲಯದಲ್ಲಿ ಗೊಂದಲಗಳು ಹೆಚ್ಚಾಗುತ್ತಿವೆ. ಈಗ ಬಿಜೆಪಿಯೆದುರು ಉಳಿದಿರುವ ಸುವರ್ಣಾವಕಾಶ ಎಂದರೆ ಬಜೆಟ್. ಫೆಬ್ರವರಿ 1ರಂದು ಕೇಂದ್ರ ಸರ್ಕಾರ ಬಜೆಟ್ ಮಂಡಿಸುತ್ತದೆ. ಅಂದಾಜು ಫೆಬ್ರವರಿ 17ರಂದು ರಾಜ್ಯ ಬಜೆಟ್ ಮಂಡನೆ ಆಗಬಹುದು. ಎರಡೂ ಬಜೆಟ್‌ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಬಹುಶಃ ಬಿಜೆಪಿಯೂ ಚುನಾವಣೆಗೆ ಕಥನವನ್ನು ರೂಪಿಸಿಕೊಳ್ಳಲು ಅನುಕೂಲ ಆಗಬಹುದು.

ಸದ್ಯಕ್ಕೆ ಕಾಂಗ್ರೆಸ್ ಹವಾ ಇರುವುದಂತೂ ನಿಜ. ಆದರೆ ಇಷ್ಟೇ ಅಲ್ಲ. ಈಗ ಒಂದೆರಡು ಘೋಷಣೆಗಳ ಕಾರಣಕ್ಕೆ ಲೈಮ್ ಲೈಟ್‌ನಲ್ಲಿರುವ ಕಾಂಗ್ರೆಸ್‌ಗೂ ಮುಂದಿನ ಮಾರ್ಗ ಸಲೀಸಾಲಗಿಲ್ಲ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಈಗಿನ ʼಹೊಂದಾಣಿಕೆʼಯ ಲಿಟ್ಮಸ್ ಟೆಸ್ಟ್ ಆಗುವುದು ಫೆಬ್ರವರಿ ಮೊದಲ ವಾರದಲ್ಲಿ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಆದಾಗ. ಆ ಸಮಯದಲ್ಲಿ ಒಂದು ಮಹಾಸ್ಫೋಟ ಆಗುವುದು ಖಂಡಿತ. ಆ ಮಹಾ ಸ್ಫೋಟವು ಬಿಗ್ ಬ್ಯಾಂಗ್ ರೀತಿಯಲ್ಲಿ ನಡೆದು ಕಾಂಗ್ರೆಸ್‌ಗೆ ಅಧಿಕಾರದ ಹೊಸ ಜಗತ್ತನ್ನು ಸೃಷ್ಟಿಸಬಹುದು. ಅಥವಾ ಹಿರೋಶಿಮಾ ನಾಗಸಾಕಿ ಮೇಲೆ ಎರಗಿದ ಅಣುಬಾಂಬ್ ರೀತಿಯಲ್ಲಿ ನಷ್ಟವನ್ನೇ ತಂದುಕೊಡಬಹುದು, ಗೊತ್ತಿಲ್ಲ. ಇಬ್ಬರೂ ನಾಯಕರನ್ನು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹೇಗೆ ನಿಭಾಯಿಸುತ್ತಾರೆ ಎನ್ನುವ ಕುಶಲತೆಯ ಮೇಲೆ ನಿಂತಿದೆ.

ಹಾಗೆಯೇ, ಈಗಿರುವ ನರೇಂದ್ರ ಮೋದಿ-ಅಮಿತ್ ಶಾ ನೇತೃತ್ವದ ಬಲಿಷ್ಠ ಬಿಜೆಪಿ ಅಧಿಕಾರ ಕೇಂದ್ರವು ಅಷ್ಟು ಸುಲಭವಾಗಿ ಚುನಾವಣೆಯನ್ನು ಕೈಚೆಲ್ಲುವುದಿಲ್ಲ. ಇತಿಹಾಸ ನೋಡಿದಾಗ ಇದು ಗೊತ್ತಾಗುತ್ತದೆ. ಕಡೆ ಕ್ಷಣದವರೆಗೂ ಎದುರಾಳಿಯನ್ನು ಕಾಡುತ್ತಲೇ ಜಯದ ಕಡೆಗೆ ಸಾಗುತ್ತದೆ ಈ ತಂಡ. ಇನ್ನೂ ಬಿಜೆಪಿ ನಾಯಕರ ಬತ್ತಳಿಕೆಯಲ್ಲಿ ಯಾವ್ಯಾವ ಅಸ್ತ್ರಗಳು ಅಡಗಿವೆ ಎನ್ನುವುದು ಒಂದೊಂದಾಗಿ ಬಿಚ್ಚಿಕೊಳ್ಳುತ್ತಲೇ ಸಾಗುತ್ತವೆ ಎಂಬುದರಲ್ಲಿ ಅನುಮಾನವಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ರಾಜಮಾರ್ಗ ಅಂಕಣ: ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ.

VISTARANEWS.COM


on

Lok Sabha Election
Koo

ಮತದಾನ ಮಾಡಲು ಹೆಚ್ಚಿನ ಕಡೆ ಸುಶಿಕ್ಷಿತ ಯುವಜನತೆಯ ನಿರುತ್ಸಾಹ ಯಾಕೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತದಲ್ಲಿ ಚುನಾವಣೆಗಳನ್ನು ʼಪ್ರಜಾಪ್ರಭುತ್ವದ ಹಬ್ಬ’ (Festivals of democracy) ಎಂದು ಕರೆಯುತ್ತೇವೆ. ದೇಶ ಅಭಿವೃದ್ಧಿ ಆಗಬೇಕಾದರೆ ಸಧೃಡ ಸರಕಾರಗಳು ಬೇಕು. ದೇಶದ ನಾಗರಿಕರು ಚುನಾವಣೆಯಲ್ಲಿ ಬಂದು ಮತ ಚಲಾವಣೆ (Voting) ಮಾಡಬೇಕಾದದ್ದು, ಬಲಿಷ್ಟ ಸರಕಾರ ರಚಿಸಬೇಕಾದದ್ದು ಅನಿವಾರ್ಯ.

ದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಭಾರತ ಸರಕಾರದ SVEEP (Systematic Voters’ Education and Electoral Participation) ಎಂಬ ಸಮಿತಿಯು ಇದೆ. ಅದು ವಿವಿಧ ಮಾಧ್ಯಮಗಳ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತದೆ. ಮನರಂಜನಾ ಮಾಧ್ಯಮಗಳನ್ನು ಕೂಡ ಬಳಸಿಕೊಳ್ಳುತ್ತದೆ. ಆದರೂ ನಗರ ಪ್ರದೇಶಗಳ ಕೆಲವು ಕಡೆಗಳಲ್ಲಿ ಮತದಾನದ ಪ್ರಮಾಣವು ಉತ್ತೇಜಕವಾಗಿ ಇಲ್ಲ. ವಿಶೇಷವಾಗಿ ಹೆಚ್ಚಿನ ವಿದ್ಯಾವಂತ ಯುವಜನತೆಯು ಮತದಾನದಲ್ಲಿ ಉತ್ಸಾಹ ತೋರುತ್ತಿಲ್ಲ ಎನ್ನುವ ಆರೋಪಗಳು ಇವೆ. ಈ ಬಾರಿ ಕೂಡ ಹೆಚ್ಚು ಟೆಕ್ಕಿಗಳು ಇರುವ ಬೆಂಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಮತದಾನ ದಾಖಲು ಆಗಿದೆ. ಯಾಕೆ ಹೀಗೆ? ಯಾರು ಗೆದ್ದರೂ ನಮಗೇನು ಲಾಭ ಎಂಬ ನಕಾರಾತ್ಮಕ ಧೋರಣೆ ಯಾಕೆ?

ಭಾರತದಲ್ಲಿ ಕಡ್ಡಾಯ ಮತದಾನ ಯಾಕೆ ಸಾಧ್ಯವಿಲ್ಲ?

ಭಾರತವು ಡೆಮಾಕ್ರಟಿಕ್ ರಾಷ್ಟ್ರ ಅನ್ನುವುದು ಈ ಪ್ರಶ್ನೆಗೆ ಉತ್ತರ. ಅದಕ್ಕೆ ಪೂರಕವಾದ ಕಾನೂನು ಇನ್ನೂ ಭಾರತದಲ್ಲಿ ರೂಪುಗೊಂಡಿಲ್ಲ. ಇಲ್ಲಿ ಯಾರಿಗೂ ಒತ್ತಡ ಹಾಕುವ ಹಾಗಿಲ್ಲ. ಮನ ಒಲಿಕೆಯ ಮೂಲಕ ಮಾತ್ರ ಯಾರನ್ನಾದರೂ ಮತ ಹಾಕಲು ಕರೆದುಕೊಂಡು ಬರಬಹದು. ನಾಗರಿಕರನ್ನು ಎಜೂಕೆಟ್ ಮಾಡುವುದು ಸುಲಭದ ಕೆಲಸ ಅಲ್ಲ.

ಸ್ವೀಪ್ ಸಮಿತಿಯು ಅವಿರತ ಪ್ರಯತ್ನಗಳು

SVEEP ಸಮಿತಿಯು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಆಕರ್ಷಕವಾದ ಮತದಾನ ಕೇಂದ್ರಗಳನ್ನು ತೆರೆದಿದೆ. ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನವನ್ನು ಮಾಡುವ ಸೌಲಭ್ಯವನ್ನು ನೀಡಿದೆ. ಮತದಾನ ಸಿಬ್ಬಂದಿಗಳಿಗೆ EDC ಮತ್ತು ಪೋಸ್ಟಲ್ ಬ್ಯಾಲೆಟ್ ಸೌಲಭ್ಯಗಳನ್ನು ನೀಡಿದೆ. BLOಗಳು ಮನೆ ಮನೆಗೆ ಹೋಗಿ ಗುರುತು ಚೀಟಿ ನೀಡಲು ಆದೇಶ ಮಾಡಿದೆ. No Voter to be Left Behind ಎಂಬ ಘೋಷಣಾ ವಾಕ್ಯದಡಿಯಲ್ಲಿ ಅವಿರತ ಜಾಗೃತಿ ಕೆಲಸಗಳು ಆಗಿವೆ. ಯಕ್ಷಗಾನ, ಬೀದಿ ನಾಟಕ ಮೊದಲಾದ ಮಾಧ್ಯಮಗಳು ಕೂಡ ಬಳಕೆ ಆಗಿವೆ. ಆದರೂ ಕೆಲವು ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ ಎನ್ನುವುದು ನೋವಿನ ಸಂಗತಿ.

rajamarga column voting 1

31 ರಾಷ್ಟ್ರಗಳಲ್ಲಿ ಕಡ್ಡಾಯ ಮತದಾನ ಇದೆ!

ಈ ರಾಷ್ಟ್ರಗಳಲ್ಲಿ ಹೆಚ್ಚಿನವು ಡೆಮಾಕ್ರಟಿಕ್ ರಾಷ್ಟ್ರಗಳೇ ಆಗಿವೆ. ಆದರೆ ಅಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಯಲ್ಲಿದೆ. ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ. ಪರಿಣಾಮವಾಗಿ ಅಲ್ಲಿ ಬಲಿಷ್ಠ ಸರಕಾರಗಳು ಆರಿಸಿ ಬರುತ್ತವೆ ಮತ್ತು ಜನರ ಜೀವನಮಟ್ಟ ತುಂಬಾ ಸುಧಾರಣೆ ಆಗಿದೆ.

ಬೆಲ್ಜಿಯಂ ಮಾದರಿ

ಅಲ್ಲಿ ಮೊದಲ ಬಾರಿಗೆ ಮತದಾನ ಮಾಡದಿದ್ದರೆ 4,000 ಯುರೋ ದಂಡ ಸರಕಾರ ವಿಧಿಸುತ್ತದೆ. ಎರಡನೇ ಬಾರಿಗೆ ಮತದಾನ ಮಾಡದಿದ್ದರೆ 10,000 ಯುರೋ ದಂಡ ಕಟ್ಟಬೇಕು. ಎಲ್ಲ ಸರಕಾರಿ ಸೌಲಭ್ಯಗಳು ಅವರಿಗೆ ಕಡಿತ ಆಗುತ್ತವೆ. 4 ಬಾರಿ ಮತದಾನಕ್ಕೆ ಬಾರದಿದ್ದರೆ ಅವರ ಹೆಸರು ಮತದಾನ ಪಟ್ಟಿಯಲ್ಲಿ ಕಡಿತ ಆಗುತ್ತದೆ.

ಬೊಲಿವಿಯಾ ಮಾದರಿ

ಈ ರಾಷ್ಟ್ರವು ಮತದಾನ ಮಾಡುವರಿಗೆ ಒಂದು ಗುರುತು ಚೀಟಿ ನೀಡುತ್ತದೆ. ಅವರಿಗೆ ಮಾತ್ರ ರೇಶನ್ ಸೌಲಭ್ಯ, ವಿದ್ಯುತ್, ವಸತಿ, ಇತರ ಸರಕಾರಿ ಸೌಲಭ್ಯಗಳು ದೊರೆಯುತ್ತವೆ. ಸರಕಾರಿ ನೌಕರರು ಮತದಾನಕ್ಕೆ ಬಾರದಿದ್ದರೆ ಅವರಿಗೆ ವೇತನ ಕಡಿತ ಆಗುತ್ತದೆ.

ಆಸ್ಟ್ರೇಲಿಯ ಮಾದರಿ

ಈ ದೇಶದಲ್ಲಿ ಶಕ್ತಿಶಾಲಿ ಡೆಮಾಕ್ರಟಿಕ್ ಸರಕಾರ ಇದೆ. ಮತದಾನ ಕಡ್ಡಾಯ ಕಾನೂನು ಇದೆ. ಮತದಾನದ ಪ್ರಮಾಣ ಅಲ್ಲಿ 96%ಕ್ಕಿಂತ ಕೆಳಗೆ ಬಂದದ್ದೇ ಇಲ್ಲ!

ಗ್ರೀಸ್ ಮಾದರಿ

ಅಲ್ಲಿ ಮತದಾನ ಮಾಡದಿದ್ದರೆ ಸರಕಾರ ನಾಗರಿಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುತ್ತದೆ. ತೃಪ್ತಿಕರವಾದ ಉತ್ತರ ಬಾರದೆ ಹೋದರೆ ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್ಪೋರ್ಟ್ ರದ್ದು ಆಗುತ್ತದೆ.

ಸಿಂಗಾಪುರ ಮಾದರಿ

ಇಲ್ಲಿ ಬಲಿಷ್ಟವಾದ ಸರಕಾರ ಇದೆ. ಮತದಾನ ಮಾಡದವರಿಗೆ ಕಾರಣ ಕೇಳಿ ನೋಟಿಸ್ ನೀಡಿದ ನಂತರ ತೃಪ್ತಿಕರ ಉತ್ತರ ಬಾರದಿದ್ದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಲಾಗುತ್ತದೆ.

ಅಮೇರಿಕಾ ಮಾದರಿ

ಇಲ್ಲಿ ಯಾವುದೇ ಕಡ್ಡಾಯ ಕಾನೂನು ಇಲ್ಲ. ವೋಟಿಂಗ್ ದಿನ ರಜೆಯು ಕೂಡ ಇಲ್ಲ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮತದಾನ ಕೇಂದ್ರಗಳು ತೆರೆದಿರುತ್ತವೆ. ಅಲ್ಲಿ ಮತದಾನದ ಪ್ರಮಾಣವು ಉತ್ತಮವಾಗಿಯೇ ಇದೆ.

ಭಾರತದಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಗೆ ಬರಲಿ ಮತ್ತು ಸುಸ್ಥಿರ ಸರಕಾರಗಳು ಆರಿಸಿಬರಲಿ ಎನ್ನುವುದೇ ನಮ್ಮೆಲ್ಲರ ಹಾರೈಕೆ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಧವಳ ಧಾರಿಣಿ ಅಂಕಣ: ಕಾಮವೆನ್ನುವುದು ಎಂತಹವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುತ್ತಾನೆ.

VISTARANEWS.COM


on

king dasharatha kaikeyi dhavala dharini column
Koo

ಪ್ರಾಣಕ್ಕಿಂತ ಪ್ರಿಯಳಾದ ಸತಿಯಿಂದ ಪ್ರಾಪ್ತವಾದ ಪುತ್ರ ವಿಯೋಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸ ಕೈಕೇಯ್ಯಾ ಗೃಹಂ ಶ್ರೇಷ್ಠಂ ಪ್ರವಿವೇಶ ಮಹಾಯಶಾಃ
ಪಾಣ್ಡುರಾಭ್ರಮಿವಾಕಾಶಂ ರಾಹುಯುಕ್ತಂ ನಿಶಾಕರಃ ৷৷ಅ.ಯೋ.10.11৷৷

ಬಿಳಿಯದಾದ ಮೋಡಗಳಿಂದ ಕೂಡಿದ ಆಕಾಶದಲ್ಲಿ ರಾಹುವಿಗೆ ಗ್ರಾಸವಾಗುವ ಸಲುವಾಗಿ ಚಂದ್ರನು ಪ್ರವೇಶಿಸುವಂತೆ ಮಹಾಯಶೋವಂತನಾದ ರಾಜನು ಭವ್ಯವಾದ ಕೈಕೇಯಿಯ ಅಂತಃಪುರವನ್ನು ಪ್ರವೇಶಿಸಿದನು.

ಕವಿಸಮಯವೆನ್ನುವದು ರಾಮಾಯಣ ಕಾವ್ಯದ ವಿಶೇಷ. ವಾಲ್ಮೀಕಿ ಕಾವ್ಯವನ್ನು ಕೇವಲ ಉಅಪದೇಶಕ್ಕಾಗಿಯಲ್ಲ, ಅದನ್ನು ತಾಳವಾದ್ಯಗಳೊಂದಿಗೆ ರಾಗವಾಗಿ ಹಾಡಲು ಅನುಕೂಲವಾಗುವಂತೆ ಬರೆದಿದ್ದಾನೆ. ಹಾಡುಗಾರಿಕೆಯಲ್ಲಿ ವರ್ಣನೆಗೆ ಮಹತ್ವ ಬರುತ್ತದೆ. ಕಾವ್ಯದ ಮುಂಗಾಣ್ಕೆ ಅಲ್ಲಲ್ಲಿ ವ್ಯಕ್ತವಾಗುತ್ತಾ ಹೋಗುತ್ತದೆ. ಕೈಕೇಯಿಯ ಅರಮನೆಗೆ ಹೋಗುವ ರಾಜನ ಕುರಿತು ವರ್ಣಿಸುವಾಗ ಬಿಳಿಯದಾದ ಮೋಡ, ರಾಹು, ಆಕಾಶ, ಚಂದ್ರ ಎನ್ನುವ ಉಪಮೆಗಳ ಮೂಲಕ ಹೇಳಿದ್ದಾನೆ. ಆಕಾಶ ಎನ್ನುವುದು ಮನಸ್ಸಿನಲ್ಲಿ ಆಸೆಗಳ ವಿಸ್ತಾರದವನ್ನು ಸೂಚಿಸಿದೆ. ಬಿಳಿಯದಾದ ಮೋಡವೆನ್ನುವದು ಅರ್ಥಪೂರ್ಣವಾದ ಉಪಮೆ. ನೀರಿನಿಂದ ಯುಕ್ತವಾದ ಮೋಡ ಕಪ್ಪಾಗಿರುತ್ತದೆ. ಮನಸ್ಸಿನಲ್ಲಿ ತನ್ನ ಮಗನ ಪಟ್ಟಾಭಿಷೇಕದ ಕುರಿತು ಯಾವ ಆಸೆಯನ್ನೇ ಇರಿಸಿಕೊಳ್ಳಲಿ, ಅದೆಲ್ಲವೂ ನೀರಿಲ್ಲದ ಮೋಡದಂತೆ ವ್ಯರ್ಥವಾಗಿ ಹಾರಿಹೋಗುತ್ತದೆ ಎನ್ನುವುದನ್ನು ಹೇಳುತ್ತಾನೆ. ರಾಹು ಮತ್ತು ಕೇತುಗಳು ಭಾರತೀಯ ಖಗೋಳಶಸ್ತ್ರದ ಪ್ರಕಾರ ಎರಡು ವಿರುದ್ಧದಿಕ್ಕುಗಳಲ್ಲಿರುವ ಬಿಂದುಗಳು. ಈ ಬಿಂದುವಿಗೆ ಸೂರ್ಯಚಂದರು ಬಂದಾಗ ಗ್ರಹಣವಾಗುತ್ತದೆ. ಚಂದ್ರ ಮನಸ್ಸಿನ ಕಾರಕ. ಸಂತೊಷ ಮತ್ತು ಕಾಮವಿಕಾರಗಳು ಮನಸ್ಸಿನಲ್ಲಿ ಉತ್ಪನ್ನವಾಗುವಂತವು. ಚಂದ್ರ ತನ್ನ ಪರಿಭ್ರಮಣದಲ್ಲಿ ರಾಹುವಿನ ಬಿಂದುವಿಗೆ ಬಂದಾಗ ಗ್ರಹಣವಾಗಿ ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತಾನೋ ಅದೇರಿತಿ ರಾಜ ತನ್ನೆಲ್ಲ ಕನಸನ್ನು ಕಳೆದುಕೊಂಡು ನಿಶ್ಚಿತವಾಗಿ ಮರಣದತ್ತ ಸಾಗಲು ಬಂದಿದ್ದಾನೆ ಎನ್ನುವುದನ್ನು ಉಪಮಾಮಲಂಕಾರದಲ್ಲಿ ಕವಿ ವರ್ಣಿಸಿದ್ದಾನೆ.

ದಶರಥನ ಪಾತ್ರವನ್ನು ವಿವೇಚಿಸುವಾಗ ಮೊದಲಿನಿಂದಲೂ ಕಂಡುಬಂದ ಅಂಶವೆಂದರೆ ಮಹಾನ್ ರಾಜರ್ಶಿಯಾಗಿದ್ದ ದೊರೆ ರಾಮನ ಕುರಿತು ಕಡುಲೋಭಿಯಾಗಿ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ದಶರಥನ ವ್ಯಕ್ತಿತ್ವವೆನ್ನುವುದು ಸಂಕೀರ್ಣವೇನೂ ಅಲ್ಲ. ಶೂರನಾಗಿದ್ದ; ಸೂರ್ಯವಂಶದ ಧ್ಯೇಯೋದ್ಧಶವಾದ ಧರ್ಮಸ್ಥಾಪನೆಯ ವಿಷಯದಲ್ಲಿ ಸದಾ ನಿರತನಾಗಿದ್ದ. ಅದೇ ಕಾಲಕ್ಕೆ ಅಯೋಧ್ಯೆಯ ಸಿಂಹಾಸನವೆನ್ನುವುದು ಗಣತಂತ್ರವ್ಯವಸ್ಥೆಯಲ್ಲಿ ಇತ್ತು. ರಾಜರಾಗುವವರು ಯಾರೇ ಆದರೂ ಅದಕ್ಕೆ ಪ್ರಜೆಗಳ ಒಪ್ಪಿಗೆ ಪಡೆಯಬೇಕಾಗಿತ್ತು. ಪ್ರಾಚೀನ ಗ್ರೀಸಿನಲ್ಲಿದ್ದ ರೀತಿಯ ಗಣತಂತ್ರವ್ಯವಸ್ಥೆ ಅಯೋಧ್ಯೆಯಲ್ಲಿ ಇತ್ತು ಎನ್ನುವುದಕ್ಕೆ ವಾಲ್ಮೀಕಿಯ ರಾಮಾಯಣವನ್ನು ಮತ್ತು ಮತ್ತು ಪ್ಲೇಟೋವಿನ “The Republic” ಕೃತಿಯನ್ನು ತುಲನೆ ಮಾಡಿದಾಗ ಅನಿಸುತ್ತದೆ. ಅದನ್ನು ಕೇವಲ ತೋರಿಕೆಗಾಗಿ ಆಚರಣೆಯಲ್ಲಿ ಇಟ್ಟು ತನಗೆ ಬೇಕಾದಂತೆ ಉತ್ತರಾಧಿಕಾರಿಯನ್ನು ಆರಿಸುವ ತಂತ್ರವನ್ನು ದಶರಥ ಅನುಸರಿಸಿರುವುದು ರಾಮನಿಗೆ ಪಟ್ಟಗಟ್ಟಬೇಕೆನ್ನುವ ಸಂದರ್ಭದಲ್ಲಿ ಕಾಣಬಹುದು. ಆತನ ಚಾಣಾಕ್ಷನಡೆಯ ಒಳಗಿರುವದು ತನ್ನದು ಎನ್ನುವ ಮೋಹದ ಅರಿವು ಎನ್ನುವುದು ಯಾರ ಗಮನಕ್ಕೂ, ಹೆಚ್ಚೇನು ರಾಮನ ಅರಿವಿಗೂ ಬಾರದ ಹಾಗೆ ನಡೆದುಕೊಂಡಿದ್ದಾನೆ. ಪರಿಪೂರ್ಣ ವ್ಯಕ್ತಿತ್ವದ ರಾಮನಂತಹ ದೊರೆ ತಮಗೆ ಸಿಗುತ್ತಾನೆ ಎನ್ನುವ ಕಾರಣಕ್ಕೆ ಪ್ರಜೆಗಳು ಸಂಭ್ರಮಿಸುವುದು ಸಹಜವೇ ಆಗಿದೆ. ತಾನು ಅಶ್ವಪತಿಗೆ ಕೊಟ್ಟ ಮಾತುಗಳು ಹೀಗೆ ಮರೆಯಾದ ಕಾರಣ ಅದು ದೊರೆಗೆ ಅಪರಿಮಿತ ಸಂತೋಷವನ್ನು ಕೊಟ್ಟಿದೆ. ಇಳಿವಯಸ್ಸಿನಲ್ಲಿ ಕಿರಿಯ ಚಲುವೆಯಾದ ಕೈಕೇಯಿಯ ಹಿಂದೆ ಬಿದ್ದಿದ್ದ ದೊರೆಗೆ ವೃದ್ದಾಪ್ಯದಲ್ಲಿ ಮಕ್ಕಳಾದ ಮೇಲೆ ರಾಮ ಎನ್ನುವ ಕುರುಡು ಮೋಹ ಆವರಿಸಿಕೊಂಡಿತ್ತು. ಆತನ ಕುರಿತು ಮಂಥರೆ ಹೇಳುವ ಮಾತು

ಧರ್ಮವಾದೀ ಶಠೋ ಭರ್ತಾ ಶ್ಲಕ್ಷ್ಣವಾದೀ ಚ ದಾರುಣಃ
ಶುದ್ಧಭಾವೇ ನ ಜಾನೀಷೇ ತೇನೈವ ಮತಿಸಂಧಿತಾ৷৷ಬಾ.ಕಾಂ.7.24৷৷

ನಿನ್ನ ಗಂಡನು ಮೇಲೆಮೇಲೆ ಧರ್ಮಸಮ್ಮತವಾದ ಮಾತುಗಳನ್ನು ಆಡುತ್ತಿದ್ದರೂ ಅಂತರಂಗದಲ್ಲಿ ಬಹಳ ಕಪಟಸ್ವಭಾವದವನು. ಬಾಯಲ್ಲಿ ಮೃದುವಾದ ಮಾತುಗಳನ್ನು ಆಡುತ್ತಿದ್ದರೂ ನಂಬಿಸಿ ಮೋಸಮಾಡುವುದು ಹೇಗೆಂದು ಯೋಚಿಸುತ್ತಿರುತ್ತಾನೆ. ಕರುಣೆಯೆನ್ನುವುದೇ ಇಲ್ಲ, ಬಹಳ ಋಜುಸ್ವಭಾವದವಳಾದ ನೀನು ಆತನ ಕಪಟವನ್ನು ಅರಿಯದೇ ಹೋದೆಯಲ್ಲವೇ.

ಮಂಥರೆ ಇಲ್ಲಿ ಕೈಕೇಯಿಯ ಮನಸ್ಸನ್ನು ತಿರುಗಿಸಲು ಹೇಳಿರುವಳಾದರೂ ಪಾಯಸವನ್ನು ತನ್ನ ರಾಣಿಯರಿಗೆ ಹಂಚುವಲ್ಲಿಂದ ಹಿಡಿದು ರಾಮಪಟ್ಟಾಭಿಷೇಕದ ವರೆಗೆ ದಶರಥ ಏಕಪಕ್ಷೀಯವಾಗಿ ತೆಗೆದುಕೊಂಡ ತೀರ್ಮಾನವನ್ನು ಗಮನಿಸಿದಾಗ ನಮ್ಮ ದೌರ್ಬಲ್ಯ ಶತ್ರುಗಳಿಗೆ ಆಯುಧ ಎನ್ನುವ ನೀತಿಶಾಸ್ತ್ರದ ಮಾತನ್ನು ನೆನಪಿಸುತ್ತದೆ. ಅಂತೂ ತನ್ನ ಕಾರ್ಯವಾದ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಯಾವ ತೊಂದರೆಯಿಲ್ಲದೇ ಸಾಂಗವಾಗಿ ನಡೆಯುವುದು ಎನ್ನುವ ನಂಬಿಕೆಯೊಂದಿಗೆ ಸಂತೊಷವೆನ್ನುವುದು ಅತಿರೇಕಕ್ಕೆ ಹೋಗಿತ್ತು. ಸಂತೋಷ ಅತಿರೇಕಕ್ಕೆ ಹೋದಾಗ ಅದು ಮದಕ್ಕೆ ತಿರುಗುತ್ತದೆ. ಮದವೆನ್ನುವುದು ಕಾಮಕ್ಕೆ ಮೂಲ. ಅದನ್ನು ಇಳಿಸಿಕೊಳ್ಳಲು ಸಂಗಾತಿಯನ್ನು ಹುಡಿಕಿಕೊಳ್ಳುವುದು ಜೀವಿಗಳ ಸಹಜ ಕ್ರಿಯೆ. ಅರಸನಿಗೆ ತನ್ನ ಆಲೋಚನೆಯನ್ನು ಹಂಚಿಕೊಳ್ಳುವ ಸಂಗಾತಿಯ ಅಗತ್ಯ ತುರ್ತಾಗಿ ಎದುರಾಯಿತು. ವಶಿಷ್ಠರಲ್ಲಿಯಾಗಲಿ, ವಾಮದೇವರಲ್ಲಿಯಾಗಲಿ ಇದನ್ನೆಲ್ಲವನ್ನು ಹಂಚಿಕೊಳ್ಳಲು ಅವರೇನು ಸಾಮಾನ್ಯದವರಾಗಿರಲಿಲ್ಲ.

ರಾಮ ಯುವರಾಜ ಪಟ್ಟಕ್ಕೆ ಅರ್ಹನಾಗಿದ್ದರೂ, ಅಯೋಧ್ಯೆಯಲ್ಲಿ ಆ ಸಾಯಂಕಾಲ ನಡೆದ ಸಿದ್ಧತೆ ದಶರಥನ ವೈಯಕ್ತಿಕ ಕಾಮನೆಯ ಫಲವಾಗಿತ್ತು. ಪ್ರಜೆಗಳು ರಾಮನನ್ನು ರಾಜನ್ನಾಗಿ ನೋಡಲು ಬಯಸಿದ್ದರೆನ್ನುವುದು ನಿಜವಾದರೂ ಇಲ್ಲಿಮೊದಲ ಸಾರಿ ರಾಮನ ಪಟ್ಟಾಭಿಷೇಕಕ್ಕಾಗಿ ದಶರಥ ಹೇಗೆಲ್ಲಾ ಮಂಡಿಗೆಯನ್ನು ಹಾಕಿದ್ದ ಎನುವುದನ್ನು ಹಿಂದಿನ ಭಾಗಗಳಲ್ಲಿ ನೋಡಿದ್ದೇವೆ. ರಾಮನನ್ನು ಕೇವಲ ಮಗನಾಗಿ ಮಾತ್ರ ನೋಡಿದ್ದಾನೆಯೇ ಹೊರತು ವಿಶ್ವಾಮಿತ್ರ, ವಶಿಷ್ಠರು, ಪರಶುರಾಮ ಮೊದಲಾದವರಿಗೆ ರಾಮನ ಅವತಾರದ ಹಿಂದಿರುವ ದೈವತ್ವದ ದರ್ಶನ ಅರಸನಿಗೆ ಸಾಯುವವರೆಗೂ ಆಗಲೇ ಇಲ್ಲ. ರಾಮನಿಗೆ ಪಟ್ಟಗಟ್ಟುವ ತನ್ನ ಮನಸ್ಸಿನ ಮಂಡಿಗೆ ಯಶಸ್ವಿಯಾದ ವಿಷಯವನ್ನು ವಿವರವಾಗಿ ವರ್ಣಿಸಿ ಹೇಳಲು ಕಿರಿಯ ರಾಣಿಯಷ್ಟು ಆಪ್ತರು ಬೇರೆ ಯಾರೂ ಇಲ್ಲ. ಕೌಸಲ್ಯೆಗೆ ಹೇಳಿದರೆ ಆಕೆಗೆ ಸಂತೋಷವೇನೋ ಆಗಬಹುದಾದರೂ ಆಕೆಯಲ್ಲಿ ಕಾಮದ ಆಕರ್ಷಣೆ ದೊರೆಗೆ ಬತ್ತಿಹೋಗಿತ್ತು. ಸುಮಿತ್ರೆಯೂ ಅಷ್ಟೇ. ಚಿಕ್ಕವಯಸ್ಸಿನ ಕೈಕೆಯಿಯನ್ನು ಚೆನ್ನಾಗಿ ಮರಳುಮಾಡಿ ಇಟ್ಟುಕೊಂಡಿದ್ದ. ತನಗೆ ಬೇಕಾದ ಹಾಗೆ ಸುಖವನ್ನು ಅವಳಿಂದ ಪಡೆಯುತ್ತಿದ್ದ. ಆಕೆ ರಾಜನಿಗೋಸ್ಕರ ಅಲಂಕರಿಸಿಕೊಂಡು ನಗುಮುಖದಿಂದ ಯಾವತ್ತಿಗೂ ಸ್ವಾಗತಿಸಲು ಸಿದ್ಧಳಾಗಿರುತ್ತಿದ್ದಳು. ಕೈಕೇಯಿ ಮಂಥರೆಯ ಮಾತಿನಿಂದ ಪ್ರಭಾವಿತಳಾಗಿ ರಾಜನನ್ನು ಮಣಿಸಲೇ ಬೇಕೆಂದು ಕೋಪಾಗಾರವನ್ನು ಸೇರಿದರೆ ಇಳಿವಯಸ್ಸಿನ ರಾಜ “ರಾಮಾಭಿಷೇಕದ ಸಂತೋಷದ ವಾರ್ತೆಯನ್ನು ಕೈಕೇಯಿಗೆ ತಿಳಿಸಿ ರತಿಸುಖವನ್ನು ಪಡೆಯಬೇಕೆಂದು ಬಯಸಿ ಅತ್ಯಾಸೆಯಿಂದ ಕೈಕೇಯಿಯ ಅಂತಃಪುರಕ್ಕೆ ಧಾವಿಸಿ ಬರುತ್ತಾನೆ”.

ಕೈಕೇಯಿ ಅಂತಃಪುರದಲ್ಲಿ ಇಲ್ಲವಾಗಿರುವುದನ್ನು ಕಂಡವನಿಗೆ ವ್ಯಾಕುಲವಾಯಿತು. ಪ್ರತಿಹಾರಿ ಹೇಳಿದ “ದೇವ ದೇವಿ ಬೃಶಂ ಕ್ರುದ್ಧಾ ಕ್ರೋಧಾಗಾರಮಭಿದ್ರುತಾ-ಪರಮ ಕ್ರುದ್ಧೆಯಾಗಿ ದೇವಿ ಕೋಪಾಗಾರವನ್ನು ಸೇರಿದ್ದಾಳೆ” ಎನ್ನುವ ಮಾತನ್ನು ಕೇಳಿ ಕಂಗಾಲಾದ. ಕೋಪಾಗಾರಕ್ಕೆ ಧಾವಿಸಿ ನೋಡಿದರೆ ತನ್ನ ಪ್ರೇಯಸಿ ಅಸ್ತವ್ಯಸ್ತವಾಗಿ ನೆಲದ ಮೇಲೆ ಮಲಗಿದ್ದಾಳೆ. ಪ್ರಿಯತಮೆಯನ್ನು ಆಕಾಶದಿಂದ ಚ್ಯುತಳಾದ ಅಪ್ಸರೆಯಂತೆ ಕಂಡವನಿಗೆ ಎದೆಯೊಡೆದು ಹೋಯಿತು. “ನಿಷ್ಕಳಂಕನಾದ ದಶರಥ ಪಾಪಸಂಕಲ್ಪವನ್ನು ಹೊತ್ತ ಕೈಕೇಯಿಯನ್ನು ಕಂಡ” ಎನ್ನುವ ಮಾತು ಇಲ್ಲಿ ಬರುತ್ತದೆ. ಸಂಕಲ್ಪವೆನ್ನುವುದು ಹೊಸ ಕಾರ್ಯಕ್ಕೆ ಹೇತು. ಮುಂದಿನ ಘಟನೆಗೆ ಇಲ್ಲಿ ನಾಂದಿಯಾಗುತ್ತಿದೆ. ಧರ್ಮಮಾರ್ಗದಲ್ಲಿ ಸದಾ ನಡೆಯುತ್ತಿದ್ದ ಅರಸ ಕಾಮಮೋಹಿತನಾಗಿ ಕೈಕೇಯಿಯನ್ನು ಸಮಾಧಾನ ಮಾಡಲು ಹೇಳುವ ಮಾತುಗಳು ಸೂರ್ಯವಂಶಕ್ಕೆ ಹೇಳಿಸಿದ್ದಲ್ಲ.

ಅವಧ್ಯೋ ವಧ್ಯತಾಂ ಕೋ ವಾ ವಧ್ಯಃ ಕೋವಾ ವಿಮುಚ್ಯತಾಮ್.
ದರಿದ್ರಃ ಕೋ ಭವದಾಢ್ಯೋ ದ್ರವ್ಯವಾನ್ಕೋSಪ್ಯಕಿಂಚನಃ৷৷ಅ. ಕಾಂ.10.33৷৷

ಕಾಮವೆನ್ನುವುದು ಎಂತವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುವ ಮಾತುಗಳು ದೊರೆತನಕ್ಕೆ ತಕ್ಕುದಲ್ಲ. ಆತ ಅವಳನ್ನು ಸಮಾಧಾನಿಸುತ್ತಾ “ಪ್ರಿಯತಮೆಯಲ್ಲಿ ನನಗೆ ನಿನಗಿಂತ- ಮನುಜರಲ್ಲಿ ರಾಮನಿಗಿಂತ ಹೆಚ್ಚಿನವರು ಯಾರೂ ಇಲ್ಲ” ಎನ್ನುವಲ್ಲಿ ರಾಮನ ಹೆಸರನ್ನು ಕೇಳಿದ ಆಕೆಗೆ ಮತ್ತುಷ್ಟು ಉರಿ ಹತ್ತಿತು. ದೊರೆ ಮನ್ಮಥನ ಬಾಣಕ್ಕೆ ಈಡಾಗಿರುವುದನ್ನು ಪಕ್ಕಾ ಮಾಡಿಕೊಂಡಳು. ಸ್ವಲ್ಪ ಹೊತ್ತು ಕಾಡಿಸಬೇಕು ಎಂದು ಸುಮ್ಮನಾದವಳು. ದಶರಥನಿಗೆ ಸಹಿಸಲಾಗಿಲ್ಲ. ಆಕೆಯ ರೂಪಲಾವಣ್ಯಕ್ಕೆ ಸೋತಿದ್ದ. ಅವಳ ನೋವನ್ನು ಬಗೆಹರಿಸುವುದು ತನ್ನ ಆದ್ಯ ಕರ್ತವ್ಯವೆಂದು ಬಗೆದ.. ಅದು ತನಕ ತಾನು ಗಳಿಸಿದ ಸುಕೃತದ ಮೇಲೆ ಆಣೆಯಿಟ್ಟು ಅವಳ ಬಯಕೆಯನ್ನು ಈಡೇರಿಸುವೆ ಎಂದು ಅಂಗಲಾಚಿದ.

dhavala dharini king dasharatha

ಆದರೂ ಸುಮ್ಮನಿದ್ದ ಕೈಕೇಯಿಗೆ ಕೊನೆಯದಾಗಿ “ನನ್ನ ರಾಮನಾಣೆಗೂ ನೀನು ಹೇಳುವ ಕಾರ್ಯವನ್ನು ಮಾಡುತ್ತೇನೆ” ಎಂದು ಪ್ರತಿಜ್ಞೆ ಮಾಡಿಬಿಟ್ಟ. ಗಾಳದಲ್ಲಿ ಚಿಕ್ಕಮೀನನ್ನು ಚುಚ್ಚಿ ದೊಡ್ಡಮೀನನ್ನು ಸೆಳೆಯುವಂತೆ ಚಕ್ರವರ್ತಿಯನ್ನು ಮಟ್ಟುಹಾಕಿ ತನ್ನ ಕಾರ್ಯಸಾಧಿಸಲು ಇದೇ ಸಮಯವೆಂದು ತಿಳಿದ ಕೈಕೇಯಿ ಬಯಕೆಯನ್ನು ಹೇಳುವ ಮುನ್ನ ರಾಜನಲ್ಲಿನ ಧರ್ಮಪ್ರಜ್ಞೆಯನ್ನು ಜಾಗ್ರತಗೊಳಿಸಲು “ನೀನು ಮಾಡಿದ ಈ ಪ್ರತಿಜ್ಞೆಯನ್ನು ಮೂವತ್ತುಮೂರು ಕೋಟಿ ದೇವತೆಗಳು ಕೇಳಲಿ, ಚಂದ್ರಸೂರ್ಯರೂ ಕೇಳಲಿ, ಆಕಾಶವೂ ಇದಕ್ಕೆ ಸಾಕ್ಷಿಯಾಗಲಿ, ನವಗ್ರಹಗಳು, ಹಗಲು-ರಾತ್ರಿಗಳು, ಎಂಟುದಿಕ್ಕುಗಳು,ಗಂಧರ್ವರಾಕ್ಷಸರನ್ನೊಳಗೊಂಡಿರುವ ಸ್ವರ್ಗ-ಮರ್ತ್ಯ-ಪಾತಾಳ, ನಿಶಾಚರರೂ, ಪಿಶಾಚಗಳೂ, ಭೂತಗಣಗಳೂ, ಗೃಹದೇವತೆಗಳೂ ಸಹಿತ ಎಲ್ಲರೂ ನೀನು ಹೇಳಿದ ಈ ಪ್ರತಿಜ್ಞಾವಾಕ್ಯಕ್ಕೆ ಸಾಕ್ಷಿಗಳಾಗಲಿ” ಎಂದವಳೇ ಆತನನ್ನು ಸಂಪೂರ್ಣವಾಗಿ ಖೆಡ್ಡಾಕ್ಕೆ ತೋಡುವ ಈ ಮಾತನ್ನು ಆಡುತ್ತಾಳೆ.

ಸತ್ಯಸಂಧೋ ಮಹಾತೇಜಾಃ ಧರ್ಮಜ್ಞಃ ಸುಸಮಾಹಿತಾಃ.
ವರಂ ಮಮ ದದಾತ್ಯೇಷಃ ತನ್ಮೇ ಶ್ರೃಣ್ವನ್ತು ದೈವತಾಃ৷৷ಅಯೋ.11.16৷৷

ಎಲೈ ದೇವತೆಗಳಿರಾ! ನೀವೆಲ್ಲರೂ ಕೇಳಿರಿ. ಸತ್ಯಸಂಧನಾದ ಮಹಾತೇಜಸ್ವಿಯಾದ, ಧರ್ಮಜ್ಞನಾದ ಧಶರಥನು ಸಮಾಧಾನಚಿತ್ತನಾಗಿ ತಾನು ಪ್ರತಿಜ್ಞೆ ಮಾಡಿರುವಂತೆ ನನಗೆ ವರವನ್ನು ದಯಪಾಲಿಸಲಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ವ್ಯಾಧನ ಧ್ವನಿಯಿಂದ ಆಕರ್ಷಿತಳಾಗಿ ಬಲೆಗೆ ಬೀಳುವ ಜಿಂಕೆಯಂತೆ ರಾಜನು ತನ್ನ ವಿನಾಶಕ್ಕಾಗಿ ಧರ್ಮಪಾಶವನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು ಹೀಗೆ. ಅವನಿಗೆ ಮುಂದೆ ಮಾತಾಡಲು ಅವಕಾಶಕೊಡದಂತೆ ಆತನನ್ನು ಬಿಗಿದಪ್ಪಿ ತನಗೆ ಹಿಂದೆ ಕೊಟ್ಟಿದ್ದ ವರಗಳನ್ನು ಅಪೇಕ್ಷಿಸಿ ಅದಕ್ಕೆ ರಾಜ ಬೇರೆ ಏನನ್ನಾದರೂ ಹೇಳಬಾರದೆಂದು, “ರಾಮನಿಗೆ ಪಟ್ಟಾಭಿಷೇಕಕ್ಕೆ ಯಾವೆಲ್ಲಾ ಸಿದ್ಧತೆಗಳಾಗಿವೆಯೋ ಅದೇ ಸಾಂಬಾರಪದಾರ್ಥಗಳಿಂದ ಭರತನಿಗೆ ಪಟ್ಟಾಭಿಷೇಕವಾಗಬೇಕು. ಎರಡನೇಯ ವರವನ್ನೂ ಹೇಳಿಯೇಬಿಡುವೆ.

ನವ ಪಞ್ಚ ಚ ವರ್ಷಾಣಿ ದಣ್ಡಕಾರಣ್ಯಮಾಶ್ರಿತಃ
ಚೀರಾಜಿನಜಟಾಧಾರೀ ರಾಮೋ ಭವತು ತಾಪಸಃ.

ಹದಿನಾಲ್ಕು ವರುಷಗಳ ಕಾಲ ರಾಮನು ದಂಡಕಾರಣ್ಯಕ್ಕೆ ಹೋಗಿ ಅಲ್ಲಿ ಅವನು ಜಟಾಧಾರಿಯಾಗಿ ನಾರಮುಡಿಯನ್ನುಟ್ಟು ಕೃಷ್ಣಾಜಿನವನ್ನು ಧರಿಸಿ ತಾಪಸನಂತೆ ಇರಬೇಕು.

ಕೈಕೇಯಿ ಇಷ್ಟಕ್ಕೇ ನಿಲ್ಲಿಸುವುದಿಲ್ಲ. “ಆದ್ಯ ಚೈವ ಹಿ ಪಶ್ಯೇಯಂ ಪ್ರಯಾನ್ತಂ ರಾಘವಂ ವನಮ್- ರಾಘವನು ಚೀರಾಜಿನ-ಜಟಾಧಾರಿಯಾಗಿ ಕಾಡಿಗೆ ಹೋಗುವುದನ್ನು ಈಗಲೇ ನಾನು ನೋಡಬೇಕು, ಸತ್ಯವಚನನಾದ ನೀನು ಈಗಲೇ ನಡೆಸಿಕೊಡು” ತನ್ನ ಇಬ್ಬರು ಪ್ರಿಯರಲ್ಲಿ ಒಬ್ಬನಾದ ರಾಮನಿಗೆ ಆಘಾತಕಾರಿಯಾದ ವಿಷಯಗಳನ್ನು ಹೇಳುವ ಮಾತುಗಳು ದಶರಥನ ಕಾಮದ ಪಿತ್ಥವನ್ನು ಜರ್ರನೆ ಇಳಿಸಿಯೇಬಿಟ್ಟಿತು; ಜೊತೆಗೆ ಆತನ ಮನೋಧೈರ್ಯವನ್ನೂ ಸಹ! ಲೋಕದ ಎಲ್ಲಾ ರಾಜರನ್ನು, ಪ್ರಜೆಗಳನ್ನು ಮತ್ತು ವಶಿಷ್ಠರಾದಿಯಾಗಿರುವ ಎಲ್ಲಾ ಋಷಿಗಳನ್ನು ತನ್ನ ಇಷ್ಟಕ್ಕೆ ಒಗ್ಗಿಕೊಳ್ಳುವಂತೆ ತಂತ್ರವನ್ನು ಹೂಡಿದ ಅರಸನ ಇಚ್ಛೆ ಇಲ್ಲಿ ತರಗೆಲೆಗಳಂತೆ ಗಾಳಿಗೆ ಹಾರಿಹೋಯಿತು. ಯಾವ ಉದ್ಧೇಶಕ್ಕಾಗಿ ಕೈಕೇಯಿಯ ಅರಮನೆಗೆ ಬಂದಿದ್ದನೋ ಅವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಕದಡಿಹೋಯಿತು. ಅವನ ಜೀವನದಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿವದೊಂದೇ ಗುರಿ ಇದ್ದಿದ್ದು. ತನ್ನ ಪ್ರೀತಿಯ ರಾಣಿಯಿಂದಲೇ ಹೀಗೆ ವಿಘ್ನಬರಬಹುದೆಂದು ರಾಜ ಎಣಿಸಿರಲಿಲ್ಲ. ಅಂಥ ಸ್ವಲ್ಪ ಅನುಮಾನ ಬಂದಿದ್ದರೂ ಆತ ಕೈಕೇಯಿಯ ಅರಮನೆಗೆ ಬರುತ್ತಲೇ ಇರಲಿಲ್ಲ. ಒಮ್ಮೆಲೇ ಎಚ್ಚರತಪ್ಪಿ ಬಿದ್ದ. ತನ್ನ ರಾಜತ್ವಕ್ಕೆ ಧಿಕ್ಕಾರ ಹಾಕಿಕೊಂಡ. ಕೊನೆಗೆ ಅನಿವಾರ್ಯವಾಗಿ ಕೈಕೇಯಿಗೆ ನಮಸ್ಕರಿಸಿಕೊಂಡು “ನಿನ್ನ ಕಾಲನ್ನು ಬೇಕಾದರೂ ಹಿಡಿಯುತ್ತೇನೆ, ರಾಮನನ್ನು ರಕ್ಷಿಸು. ವರದಾನವೆನ್ನುವ ಒಂದು ಪ್ರತಿಜ್ಞೆಯಲ್ಲಿ ನನ್ನನ್ನು ಸಿಕ್ಕಿಹಾಕಿಸಿ ನಿರಪರಾಧಿಯನ್ನು ಕಾಡಿಗಟ್ಟಿದ ದೋಷ ನನಗೆ ಬಾರದಿರಲಿ” ಎಂದು ನೆಲದಲ್ಲಿ ಹೊರಳಾಡತೊಡಗಿದ.

ಮೂಂದಿನ ಭಾಗದಲ್ಲಿ ತನ್ನ ಕರ್ಮಫಲವನ್ನು ತಾನು ಉಂಡ ಮಹಾರಾಜ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading
Advertisement
International Nurses’s Day
ಆರೋಗ್ಯ2 mins ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ2 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ5 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ6 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು6 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು7 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್7 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ8 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ8 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 mins ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು14 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌