ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ - Vistara News

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

ನನ್ನ ದೇಶ ನನ್ನ ದನಿ ಅಂಕಣ: ಅಪಾರ ಅನುಭವದ ಜೈಶಂಕರ್ ತಮ್ಮ “THE INDIA WAY” ಕೃತಿಯಲ್ಲಿ ಅಂತಾರಾಷ್ಟ್ರೀಯ ಜಗತ್ತಿನ ಅನೇಕ ಆಯಾಮಗಳ ಬಗೆಗೆ ಅದ್ಭುತವಾದ ವ್ಯಾಖ್ಯಾನ ನೀಡುತ್ತಾರೆ. ಇದು ಈಗ ಕನ್ನಡದಲ್ಲೂ ಲಭ್ಯವಿದೆ.

VISTARANEWS.COM


on

s jaishankar book the india way
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ನಮ್ಮ ಪರಂಪರೆಯನ್ನು, ನಮ್ಮ ಶಾಸ್ತ್ರಗ್ರಂಥಗಳನ್ನು, ನಮ್ಮ ಆರ್ಷ ಚಿಂತನೆಯನ್ನು ನಾವು ಮರೆತೇಬಿಟ್ಟಿದ್ದೇವೆ. ಸಾಮುದಾಯಿಕವಾಗಿ ಸೂಕ್ತವಾಗಿ ಗೌರವಿಸುವುದೂ ಹಿನ್ನೆಲೆಗೆ ಸರಿದಿದೆ. ಯಾರಾದರೂ ನೆನಪು ಮಾಡಿದರೂ, ಉಲ್ಲೇಖಿಸಿದರೂ “ಬಿಡ್ರೀ, obsolete – old – outdated ವಿಚಾರಗಳನ್ನು ಒದರಬೇಡ್ರೀ” ಎಂದು ಝಾಡಿಸುತ್ತೇವೆ. ಹೌದು. ನಮ್ಮ “ಆಧುನಿಕ” ಶಿಕ್ಷಣ ವ್ಯವಸ್ಥೆಯು, ಭಾರತೀಯರಾದ ನಮ್ಮ ಮನೋಭೂಮಿಕೆಯನ್ನು ರೂಪಿಸಿರುವುದೇ ಹಾಗೆ. ಯಾರಾದರೂ ಅಂತಾರಾಷ್ಟ್ರೀಯ ರಾಜಕೀಯದ ಬಗೆಗೆ, ವಿಶ್ವ ಮಾರುಕಟ್ಟೆಯ ಬಗೆಗೆ, ಭಾರತೀಯ ಅರ್ಥ ವ್ಯವಸ್ಥೆಯ ಬಗೆಗೆ ಮಾತನಾಡುವಾಗ, ಅಪ್ಪಿತಪ್ಪಿ ಯಾರಾದರೂ “ಚತುರ್ವಿಧ ಪುರುಷಾರ್ಥ”ಗಳನ್ನು ಉಲ್ಲೇಖಿಸಿದರೆ, ಧರ್ಮ – ಅರ್ಥ – ಕಾಮ – ಮೋಕ್ಷಗಳಿಗೆ ನಮ್ಮ ಪೂರ್ವಿಕರು ಸಮಾನ ಮಹತ್ತ್ವ ನೀಡಿದ್ದರು, ಎಂದರೆ ಸೇರಿದವರು ಗಹಗಹಿಸಿ ನಗಬಹುದು. ಮೂರ್ನಾಲ್ಕು ದಶಕಗಳ ಹಿಂದೆ ವಿಜೃಂಭಿಸುತ್ತಿದ್ದ ಸಮಾಜವಾದಿ ಹಿನ್ನೆಲೆಯ ಕೆಲವು ಸಂಪಾದಕರೋ ಪತ್ರಕರ್ತರೋ ಈಗ ಇದ್ದಿದ್ದರೆ, ಉಲ್ಲೇಖಿಸಿದವರು “Get lost” “Get out” ಎಂದು ಅನ್ನಿಸಿಕೊಳ್ಳಬೇಕಾಗಿತ್ತೋ ಏನೋ!

ಕಾಲ ಬದಲಾಗಿದೆ, ಬಿಡಿ. 2014ರ ಅನಂತರ ತುಂಬ ತುಂಬ ಬದಲಾಗುತ್ತಲೂ ಇದೆ.

ಹಿಂದೊಮ್ಮೆ ವಾಜಪೇಯಿ ಅವರು ಹೇಳಿದ್ದರು, ನಾವು ಇತಿಹಾಸ ಬದಲಿಸಬಹುದು, ಆದರೆ, ಭೂಗೋಳವನ್ನು (Geography) ಬದಲಿಸಲಾರೆವು ಎಂದು. ಪಾಕಿಸ್ತಾನ, ಬಾಂಗ್ಲಾದೇಶ, ಚೀನಾ ದೇಶಗಳಂತಹ ಮಗ್ಗುಲ ಮುಳ್ಳುಗಳು ಆ ಉದ್ಗಾರಕ್ಕೆ ಕಾರಣವಾಗಿದ್ದವು. ಹಿಂದೂ ಸಮಾಜ ಎಚ್ಚೆತ್ತುಕೊಂಡರೆ, of course, ಜಡತ್ವವನ್ನು ಮೈಕೊಡವಿಕೊಂಡು ಎದ್ದರೆ ಅಸಾಧ್ಯವೂ ಸಾಧ್ಯವಾದೀತು.

ರಾಷ್ಟ್ರೀಯ ಅರ್ಥವ್ಯವಸ್ಥೆಯಿರಲಿ, ಅಂತಾರಾಷ್ಟ್ರೀಯ ಅರ್ಥವ್ಯವಸ್ಥೆಯಿರಲಿ, ಅರ್ಥ ಮಾಡಿಕೊಳ್ಳಲು ನಾವು ಸಾಮಾನು ಸರಂಜಾಮು ಸಾಗಿಸುವ ಹಡಗುಗಳನ್ನು, ಕಾರ್ಗೋ (cargo) ವಿಮಾನಗಳನ್ನು, ಗೂಡ್ಸ್ ಗಾಡಿಗಳನ್ನು, ದೊಡ್ಡ ದೊಡ್ಡ ಹೆದ್ದಾರಿಗಳನ್ನು ಒಂದಿಷ್ಟು ವಿಚಕ್ಷಣೆಯಿಂದ ನೋಡಬೇಕು. ತೈಲ ಸಾಗಣೆಯ ಹಡಗುಗಳನ್ನೂ, ಕಲ್ಲಿದ್ದಲು ಸಾಗಿಸುವ ರೈಲು ಗಾಡಿಗಳನ್ನೂ ಗಮನಿಸಬೇಕು. ಆಗ ಮನುಕುಲದ ಎಂಟು ಶತಕೋಟಿ ಮಾನವಜೀವಿಗಳ ಅಗತ್ಯಗಳನ್ನು ಪೂರೈಸುವ ವಿಶಾಲ ಅರ್ಥವ್ಯವಸ್ಥೆಯ ಸ್ಥೂಲ ನೋಟ ದೊರೆಯುತ್ತದೆ. ಈ ವ್ಯವಸ್ಥೆ ನಮ್ಮ ನರಮಂಡಲದಂತೆ. ಅರೆಕ್ಷಣವೂ ಸಹ ಈ ವ್ಯವಸ್ಥೆಯಿಲ್ಲದೆ ಮನುಷ್ಯ ಬದುಕಲಾರ. ಇತಿಹಾಸದ ಹಿನ್ನೋಟದಲ್ಲಿ ಸಾವಿರಾರು ವರ್ಷಗಳ ಹಿಂದೆ, ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಭಾರತದ್ದೇ ಸಿಂಹಪಾಲು. ಅಂದಿನ ಸಿಲ್ಕ್ ರೂಟ್, ಸಾರ್ಥಗಳು, ಯೂರೋಪಿನಲ್ಲಿಯೂ ಹೆಸರು ಮಾಡಿದ್ದ ನಮ್ಮ ಸಿದ್ಧವಸ್ತುಗಳು, ಬಟ್ಟೆಗಳು ಎಲ್ಲವೂ ಜಗತ್ತಿನ ಆರ್ಥಿಕತೆಯ ಬಹು-ಆಯಾಮಗಳನ್ನು ನೆನಪಿಸುತ್ತವೆ. ಭಾರತ ಇದ್ದುದೇ ಹಾಗೆ. ಅಧ್ಯಾತ್ಮ – ಅರ್ಥ ವ್ಯವಸ್ಥೆ ಎರಡರಲ್ಲಿಯೂ ನಾವು ಔನ್ನತ್ಯ ಸಾಧಿಸಿದ್ದೆವು. ಶತ್ರುಗಳನ್ನು – ಪಾಶವೀ ರಿಲಿಜನ್ನುಗಳನ್ನು ಅರ್ಥ ಮಾಡಿಕೊಳ್ಳದೇ, ಶತಶತಮಾನಗಳ ಕಾಲ ಗುಲಾಮರಾಗಿಬಿಟ್ಟೆವು, ದರಿದ್ರರಾಗಿಬಿಟ್ಟೆವು, ಕಿಂಕರ್ತವ್ಯಮೂಢರಾಗಿಬಿಟ್ಟೆವು.

ಅರ್ಥ ವ್ಯವಸ್ಥೆ ಅಷ್ಟೇ ಅಲ್ಲ, ಜಗತ್ತಿನ ಅಂತಾರಾಷ್ಟ್ರೀಯ ಸಂಬಂಧಗಳು ತೀರಾ ತೀರಾ ಸಂಕೀರ್ಣ. ಅಂತಾರಾಷ್ಟ್ರೀಯ ಸ್ತರದಲ್ಲಿ ಕಳೆದ ನೂರು ವರ್ಷಗಳ ಭಾರತದ ಇತಿಹಾಸವನ್ನು ಗಮನಿಸಿದರೆ, ನಾವು ಉಳಿದಿರುವುದೇ ಹೆಚ್ಚು ಎಂಬುದು ಸ್ಪಷ್ಟವಾಗಿಬಿಡುತ್ತದೆ. ಐವತ್ತು ವರ್ಷಗಳ ಹಿಂದೆ, ಬ್ರಿಟಿಷರ ಪ್ರೀತಿಪಾತ್ರ ಪಕ್ಷವು ಅಧಿಕಾರದಲ್ಲಿದ್ದಾಗ, ಸಂಸತ್ತಿನಲ್ಲಿ ಅಕ್ಷರಶಃ ನೂರಾರು ಜನ ಸಂಸತ್ ಸದಸ್ಯರು CIA – KGB ಸಂಸ್ಥೆಗಳ Pay Rollನಲ್ಲಿದ್ದರಂತೆ. ಅವರಿಗೆ regular ಆಗಿ ವಿದೇಶೀ ಹಣ ಬರುತ್ತಿತ್ತು. ಕೆಲವು ವರ್ಷಗಳ ಹಿಂದೆ, ಈ ಗೂಢಚಾರೀ ಸಂಸ್ಥೆಗಳ ದಾಖಲೆಗಳು ಬಯಲಾದಾಗ (De-classification) ವಿಷಯ ತಿಳಿದ ನಾವೆಲ್ಲಾ ಚೇತರಿಸಿಕೊಳ್ಳಲು ಬಹಳ ಕಾಲವೇ ಹಿಡಿಯಿತು.

ಬಹಳ ವರ್ಷಗಳ ಕಾಲ ನಮ್ಮ ದೇಶದ ವಿದೇಶಾಂಗ ಮಂತ್ರಿಗಳು ಅಕ್ಷರಶಃ ಜೋಕರ್‌ಗಳಾಗಿಬಿಟ್ಟಿದ್ದರು. ತೈಲ ರಾಷ್ಟ್ರಗಳ ಮುಂದೆಹೋಗಿ, ಹಲ್ಲು ಗಿಂಜುತ್ತಿದ್ದರು, ಕರೆಯದಿದ್ದರೂ ಹೋಗಿ ಥೂ ಎನ್ನಿಸಿಕೊಂಡು ಬರುತ್ತಿದ್ದರು. ಅವರೆಲ್ಲಾ ಅಮೆರಿಕಾ ಇಲ್ಲವೇ ಸೋವಿಯತ್ ಒಕ್ಕೂಟದ ಆಜ್ಞಾನುವರ್ತಿಯಾಗಿರುವುದೇ ವಿದೇಶಾಂಗ ನೀತಿ ಎಂದುಕೊಂಡುಬಿಟ್ಟಿದ್ದರು. ಎರಡೂ ಶಕ್ತಿಕೇಂದ್ರದವರಿಂದ ಭಾರತ ಒದೆ ತಿಂದಿದ್ದೇ ಹೆಚ್ಚು. ಇಂಟೆಲಿಜೆನ್ಸ್ ಬ್ಯೂರೋ ಅಧಿಕಾರಿಗಳೂ, ಲೇಖಕರೂ, ಚಿಂತಕರೂ ಆಗಿದ್ದ ಆರ್.ಎನ್.ಕುಲಕರ್ಣಿಯವರು ವಿಷಾದದಿಂದ “ನಮ್ಮ ದೇಶಕ್ಕೆ ವಿದೇಶಾಂಗ ನೀತಿ ಎಂಬುದೇ ಇಲ್ಲ” ಎಂದಿದ್ದರು. ಹಲವಾರು ದೇಶಗಳಲ್ಲಿ ವಿದೇಶಾಂಗ ಇಲಾಖೆಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿ, ಕಟು-ಸತ್ಯಗಳನ್ನು ಕಂಡಿದ್ದ ಅವರಿಗೆ ಅಂದಿನ ಗೊಂದಲದ ವಿದೇಶಾಂಗ ನೀತಿ (?) ಭ್ರಮನಿರಸನ ಉಂಟುಮಾಡಿತ್ತು.

ಮೋದಿ ಸರ್ಕಾರದ ಪ್ರಥಮ ವಿದೇಶಾಂಗ ಮಂತ್ರಿಯಾಗಿ ಸುಷ್ಮಾ ಅದ್ಭುತವಾಗಿ ಕಾರ್ಯನಿರ್ವಹಿಸಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಅನಂತರ ಉತ್ತರಾಧಿಕಾರಿ ಯಾರು ಎಂಬುದು ದೇಶಕ್ಕೆ ಚಿಂತೆಯ ಸಂಗತಿಯಾಗಿತ್ತು. ರಾಜಕಾರಣಿಗಳನ್ನು ಮಾತ್ರವೇ ವಿದೇಶಾಂಗ ಮಂತ್ರಿ ಸ್ಥಾನದಲ್ಲಿ ಕಲ್ಪಿಸಿಕೊಳ್ಳುತ್ತಿದ್ದವರಿಗೆ IFS ಅಧಿಕಾರಿಯೊಬ್ಬರು ಅತಿ-ಮಹತ್ತ್ವದ ಆ ಸ್ಥಾನಕ್ಕೆ ಆಯ್ಕೆ ಆಗಬಹುದು, ಎಂದು ಬಹಳ ಜನ ಪತ್ರಕರ್ತರೇ ಊಹಿಸಿರಲಿಲ್ಲ. ಇನ್ನು ಬಹುಪಾಲು ಕಾಂಗ್ರೆಸ್ ಆಡಳಿತದಲ್ಲಿಯೇ ವಿದೇಶಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಜೈಶಂಕರ್ ಅಂತಹವರು, ಬೇರೆಯೇ ಕಾರ್ಯಶೈಲಿಯ ಮೋದಿ ತಂಡದಲ್ಲಿ, ಸುಷ್ಮಾ ಅವರಿಗೆ ಸಮರ್ಥ ಉತ್ತರಾಧಿಕಾರಿಯಾಗಿ ಯಶಸ್ಸು ಪಡೆಯಬಲ್ಲರೇ ಎಂಬ ಸಂದೇಹ ಇದ್ದುದೂ ನಿಜವೇ.

S jaishankar

ಯುದ್ಧಗಳು, ಅಂಟುರೋಗಗಳು, ಬದಲಾಗುವ ದೇಶ-ದೇಶಗಳ ನಡುವಿನ ಸಂಬಂಧಗಳು, ಔಷಧಿ – ಶಸ್ತ್ರಾಸ್ತ್ರಗಳನ್ನು ತಯಾರಿಸುವವರ ಕಟ್-ಥ್ರೋಟ್ ರಾಜಕೀಯಗಳ ನಡುವೆ ದೇಶವೊಂದರ ಪ್ರಧಾನಮಂತ್ರಿ – ವಿದೇಶಾಂಗ ಮಂತ್ರಿಗಳ ಪಾತ್ರ ಯಾವಾಗಲೂ ಕಷ್ಟತಮವಾದುದೇ, ಸಂಕೀರ್ಣವಾದುದೇ. ತುಂಬ ಯೋಚಿಸಿ ಇಟ್ಟ ಹೆಜ್ಜೆಯೂ ಕೆಲವೊಮ್ಮೆ ಮುಜುಗರಕ್ಕೆ ಕಾರಣವಾಗುತ್ತದೆ. ಭೂಕಂಪಕ್ಕೆ ತುತ್ತಾದ ಟರ್ಕಿ ದೇಶಕ್ಕೆ ತ್ವರಿತ ಸಹಾಯ ಹಸ್ತ ಚಾಚಿದ ಮತ್ತು ತುರ್ತು ಅಗತ್ಯಗಳನ್ನು ಪೂರೈಸಿದ ಭಾರತಕ್ಕೆ, ಕೆಲವೇ ದಿನಗಳಲ್ಲಿ ಆ ಜಿಹಾದೀ ಟರ್ಕಿ ದೇಶವು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿ ದ್ರೋಹ ಬಗೆಯಿತು. ಮಾಲ್ಡೀವ್ಸ್ ನಂತಹ ಜಿರಳೆ ಗಾತ್ರದ ದೇಶವು ಭಾರತಕ್ಕೆ ಸೆಡ್ಡು ಹೊಡೆಯುತ್ತದೆ, ಸವಾಲು ಹಾಕುತ್ತದೆ, ಅವಮಾನ ಮಾಡುತ್ತದೆ. ಇಂತಹ ನೂರೆಂಟು ಅಪಸವ್ಯಗಳು ಅಂತಾರಾಷ್ಟ್ರೀಯ ರಾಜಕಾರಣದಲ್ಲಿ ಇರುವಂತಹುವೇ! ಈ ಹಿನ್ನೆಲೆಯಲ್ಲಿ ವಿದೇಶಾಂಗ ಖಾತೆಯನ್ನು ನಿಭಾಯಿಸುವುದು ಸರಳವೂ ಅಲ್ಲ, ಸುಲಭವೂ ಅಲ್ಲ.

ಅಪಾರ ಅನುಭವದ ಜೈಶಂಕರ್ ತಮ್ಮ “THE INDIA WAY” ಕೃತಿಯಲ್ಲಿ ಅಂತಾರಾಷ್ಟ್ರೀಯ ಜಗತ್ತಿನ ಅನೇಕ ಆಯಾಮಗಳ ಬಗೆಗೆ ಅದ್ಭುತವಾದ ವ್ಯಾಖ್ಯಾನ ನೀಡುತ್ತಾರೆ. ಅಮೆರಿಕದಂತಹ ದೇಶದ ಸ್ಥಾನಮಾನದ ಬಗೆಗೆ, ನಮ್ಮ ದೇಶದ ಕಾರ್ಯತಂತ್ರ ಸಂಸ್ಕೃತಿಯ ಬಗೆಗೆ, ಭಾರತದ ಮೇಲಿರುವ ಗತಕಾಲದ ಭಾರದ ಬಗೆಗೆ, ಜಾಗತಿಕ ಮಟ್ಟದಲ್ಲಿ ತಡವಾಗಿಯಾದರೂ ದೊರೆತಿರುವ – ದೊರೆಯುತ್ತಿರುವ ಅವಕಾಶಗಳ ಬಗೆಗೆ, ಅಂತಾರಾಷ್ಟ್ರೀಯ ಶಕ್ತಿಗಳ ಹೊಸ ಸಮೀಕರಣದ ಬಗೆಗೆ, ತುಂಬಾ ಮೌಲಿಕವಾದ ಬರೆಹವನ್ನು ನೀಡಿದ್ದಾರೆ. ಈ ಅಂತಾರಾಷ್ಟ್ರೀಯ ಸಂಗತಿಗಳ ಜಗತ್ತೇ ಹೀಗೆ, ದೇಶದೊಳಗಿನ ರಾಜಕಾರಣದ ಒಳಹೂರಣವನ್ನು ಬಗೆದು – ತೆಗೆದು ಬರೆದಂತೆ ಅಲ್ಲವೇ ಅಲ್ಲ. ಪ್ರತಿಯೊಂದು ಸಾಲಿಗೂ ಪ್ರತಿಯೊಂದು ಸಂಗತಿಗೂ, ಬಹು-ಆಯಾಮದ ಮುಖಗಳಿರುತ್ತವೆ, ಅಷ್ಟೇ ಅಲ್ಲ, ವೈಫಲ್ಯದ ವಿಸಂಗತಿಗಳೂ ಇರುತ್ತವೆ. ಏನೇ ನಿರ್ಧಾರ ತೆಗೆದುಕೊಂಡರೂ, ಅನಂತರ ಹೇಗೆ ವಿಶ್ಲೇಷಿಸಿದರೂ ಪ್ರತಿಯೊಂದಕ್ಕೂ ಕೊಂಕು ತೆಗೆಯುವ ಟೀಕಾಕಾರರೂ ಇರುತ್ತಾರೆ.

ವಿದೇಶಾಂಗ ವ್ಯವಹಾರ ಇರುವುದೇ ಹಾಗೆ.

ಜೈಶಂಕರ್ ತಮ್ಮ ಕಾರ್ಯನಿರ್ವಹಣೆಯಲ್ಲಿ ಯಶಸ್ಸು ಪಡೆದಂತೆಯೇ, ಈ ಕೃತಿ ರಚನೆಯಲ್ಲಿಯೂ ಔನ್ನತ್ಯ ಸಾಧಿಸಿದ್ದಾರೆ. ವಿಶೇಷವೆಂದರೆ ಕ್ಲಿಷ್ಟವೂ ಸಂಕೀರ್ಣವೂ, ಮುಖ್ಯವಾಗಿ ತುಂಬಾ ತಾಂತ್ರಿಕವೂ ಆದ ಇಂತಹ ಕೃತಿಗಳನ್ನು ಸಮರ್ಪಕವಾಗಿ ಕನ್ನಡಕ್ಕೆ ಭಾಷಾಂತರಿಸುವುದು ಬಹಳ ದೊಡ್ಡ ಸವಾಲಿನ ಕೆಲಸ. ಸಾಮಾನ್ಯ ಅನುವಾದವನ್ನು ಮೀರಿದ, ಇಂತಹ ರಾಜತಾಂತ್ರಿಕ ಮತ್ತು ವಿದೇಶಾಂಗ ಮಗ್ಗುಲುಗಳ ಗ್ರಂಥವೊಂದನ್ನು ಬಿ.ಎಸ್.ಜಯಪ್ರಕಾಶ ನಾರಾಯಣ ತುಂಬಾ ಚೆನ್ನಾಗಿ ಕನ್ನಡಕ್ಕೆ ತಂದಿದ್ದಾರೆ. ಮೂಲ ಇಂಗ್ಲಿಷ್ ಮತ್ತು ಕನ್ನಡಾನುವಾದದ ಎರಡೂ ಪಠ್ಯಗಳನ್ನು ಜೊತೆಜೊತೆಯಲ್ಲಿಯೇ ನೋಡಿದಾಗ, ಗಮನಿಸಿದಾಗ, ಹೋಲಿಸಿದಾಗ ಜಯಪ್ರಕಾಶರ ಶ್ರಮ ಎಂತಹುದು ಎಂಬುದು ತಿಳಿಯುತ್ತದೆ. ನಿಜಕ್ಕೂ JP ಅಭಿನಂದನೀಯರು.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

“…..ನಾವು ದೇಶಗಳ ಗಡಿ ಮತ್ತು ಸಾಂಪ್ರದಾಯಿಕ ಮಾದರಿಯ ರಾಜಕಾರಣದ ಆಚೆಗೆ ಕೂಡ ಮಾತನಾಡುತ್ತಿದ್ದೇವೆ. ಅಧಿಕಾರವನ್ನು ವ್ಯಾಖ್ಯಾನಿಸುತ್ತಿದ್ದ ಸಂಗತಿಗಳಾಗಲೀ, ರಾಷ್ಟ್ರೀಯ ನಿಲುವನ್ನು ನಿರ್ಧರಿಸುತ್ತಿದ್ದ ಸಂಗತಿಗಳಾಗಲೀ, ಈಗ ಹಿಂದಿನಂತೆಯೇ ಉಳಿದಿಲ್ಲ. ಅವುಗಳ ಜಾಗದಲ್ಲಿ ತಂತ್ರಜ್ಞಾನ, ಸಂಪರ್ಕ ಸೌಲಭ್ಯ ಮತ್ತು ವಾಣಿಜ್ಯ ವಹಿವಾಟುಗಳು ಮುನ್ನೆಲೆಗೆ ಬಂದಿವೆ. ನಿರ್ಬಂಧಿತವೂ ಅಂತರವಲಂಬಿತವೂ ಆಗಿರುವ ಸದ್ಯದ ಜಗತ್ತಿನಲ್ಲಿ ನಮಗೆ ಎದುರಾಗುವ ಸ್ಪರ್ಧೆಯನ್ನು ನಾವು ಹೆಚ್ಚು ಜಾಣ್ಮೆಯಿಂದ ಎದುರಿಸಬೇಕು. ಬಹುಧ್ರುವೀಯ ವ್ಯವಸ್ಥೆಯು ದುರ್ಬಲವಾಗುತ್ತಿದ್ದಂತೆಯೇ, ಜಾಗತಿಕ ಒಳಿತು ಎನ್ನುವುದು ಕೂಡ ಹೆಚ್ಚು ವಿವಾದಾಸ್ಪದವಾಗಿದೆ. ಒಂದು “ಆರ್ಕ್ಟಿಕ್ ಪ್ಯಾಸೇಜ್”ಅನ್ನು ತೆರೆಯುವ ಮೂಲಕ ಹವಾಮಾನ ಬದಲಾವಣೆಯಂತಹ ವಿಚಾರ ಕೂಡ ಜಾಗತಿಕ ರಾಜಕಾರಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಇಷ್ಟೇ ಅಲ್ಲ, ಎಲ್ಲರ ನಿರೀಕ್ಷೆಯನ್ನು ಮೀರಿ ಕರೋನಾ ಸಾಂಕ್ರಾಮಿಕ ಕೂಡ ಇಲ್ಲಿ “ವೈಲ್ಡ್ ಕಾರ್ಡ್” ಆಗಿ ಹೊರಹೊಮ್ಮಿದೆ. ಚುಟುಕಾಗಿ ಹೇಳುವುದಾದರೆ, ಬದಲಾವಣೆಗಳು ಹಿಂದೆಂದೂ ಇಲ್ಲದಂತಹ ರೀತಿಯಲ್ಲಿ ಅಭೂತಪೂರ್ವವಾಗಿ ಸಂಭವಿಸುತ್ತಿವೆ……” (“ಭಾರತ ಪಥ” ಪುಟ ೧೧೮).

20ನೆಯ ಶತಮಾನದ ಪರಿಪ್ರೇಕ್ಷ್ಯದಲ್ಲಿ, ವಿದೇಶಾಂಗ – ಆರ್ಥಿಕ – ಅಂತಾರಾಷ್ಟ್ರೀಯ ಆಯಾಮಗಳ ಭಾರತೇತಿಹಾಸದ ಒಂದು ಮಹತ್ತ್ವದ ಚಿತ್ರ ನೀಡುವಲ್ಲಿ ಜೈಶಂಕರ್ ಯಶಸ್ವಿಯಾಗಿದ್ದಾರೆ ಮತ್ತು ಒಂದು ರೀತಿಯಲ್ಲಿ ಇತಿಹಾಸಕಾರರೂ ಆಗಿಬಿಟ್ಟಿದ್ದಾರೆ.

“ಭಾರತ ಪಥ” ನಾವೆಲ್ಲ ಗಮನಿಸಲೇಬೇಕಾದ ಕೃತಿಗಳಲ್ಲೊಂದು.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ವಾರಾಣಸಿಯ ನಂದಿ ಮುಖ ಮಾಡಿದ ಕಡೆಗೆ ಶಿವ ಬರಲು ಇನ್ನೆಷ್ಟು ಕಾಯಬೇಕು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading
Advertisement
Pakistan Inflation
ವಿದೇಶ1 hour ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ2 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು2 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ2 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ3 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ3 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ3 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ3 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ3 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ3 hours ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202413 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202414 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ21 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌