Mann ki Baat @100: ಮನೆಮನೆಯ ಸದಸ್ಯನ ಮೂಲಕ ಹರಿದು ಬಂದ ಪ್ರಜೆಗಳ ಮನದ ಮಾತು - Vistara News

ಅಂಕಣ

Mann ki Baat @100: ಮನೆಮನೆಯ ಸದಸ್ಯನ ಮೂಲಕ ಹರಿದು ಬಂದ ಪ್ರಜೆಗಳ ಮನದ ಮಾತು

ಮನ್ ಕೀ ಬಾತ್ ಗೆ ನೂರರ ಸಂಭ್ರಮ. ಅಗಸ್ಟ್ 15, ಜನವರಿ 26 ಅಲ್ಲ, ಪ್ರತಿ ತಿಂಗಳೂ ಪ್ರಧಾನಿ ದೇಶದ ಜನತೆಯೊಡನೆ ಮಾತನಾಡುತ್ತಾರೆ ಎಂಬುದು ಬಹಳ ವಿಶೇಷ ಸಂಗತಿಯಾಗಿತ್ತು. ದೇಶದಾದ್ಯಂತ ಎಲ್ಲಾ ಆಕಾಶವಾಣಿ ಕೇಂದ್ರಗಳು ಇದಕ್ಕಾಗಿ ತಯಾರಾಗುತ್ತಿದ್ದವು.

VISTARANEWS.COM


on

modi mann ki baat new
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

:: ಬಿ.ಕೆ ಸುಮತಿ, ಆಕಾಶವಾಣಿ ಉದ್ಘೋಷಕರು

ಇಸವಿ 1947. ಮಧ್ಯರಾತ್ರಿ 12 ಗಂಟೆ. ಎಲ್ಲೆಡೆ ಸ್ವಾತಂತ್ರ್ಯದ ಸಂಭ್ರಮ. ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಭಾರತ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ಭಾಷಣ ಇಂದಿಗೂ ಆಕಾಶವಾಣಿಯಲ್ಲಿ ಲಭ್ಯವಿದೆ. Tryst with Destiny ಎಂಬ ಶೀರ್ಷಿಕೆ ಉಳ್ಳ ಈ ಭಾಷಣವನ್ನು ಎಷ್ಟು ಸಲ ಕೇಳಿದರೂ ರೋಮಾಂಚನವಾಗುತ್ತದೆ.

ಇಸವಿ 1947. ಭಾರತ ವಿಭಜನೆಯ ಕಾಲ. ಅನೇಕ ಅಹಿತಕರ ಘಟನೆಗಳು ನಡೆಯುತ್ತಿದ್ದ ಸಂದರ್ಭ. ನವೆಂಬರ್ 12ನೇ ತಾರೀಖು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ನವದೆಹಲಿಯ ಆಕಾಶವಾಣಿ ಸ್ಟುಡಿಯೋಸ್‌ಗೆ ಆಗಮಿಸಿದರು. ಜನರಿಗೆ ಸಂದೇಶ ನೀಡಿದರು. ಸಾಂತ್ವನ ಹೇಳಿದರು. ಈ ಭಾಷಣವೂ ಆಕಾಶವಾಣಿಯ ಧ್ವನಿ ಮುದ್ರಣ ಭಂಡಾರದಲ್ಲಿ ಸುರಕ್ಷಿತವಾಗಿದೆ.

bk sumathi
ಬಿ.ಕೆ ಸುಮತಿ

ನಂತರದ ದಿನಗಳಲ್ಲಿ ನವೆಂಬರ್ 12ನೇ ತಾರೀಖು ಮಹಾತ್ಮ ಗಾಂಧೀಜಿ ಅವರು ಆಕಾಶವಾಣಿಗೆ ಭೇಟಿ ನೀಡಿದ ದಿನ ಎಂಬ ಕಾರಣಕ್ಕೆ ಸಾರ್ವಜನಿಕ ಪ್ರಸಾರ ದಿನವನ್ನಾಗಿ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿಯೇ ರೇಡಿಯೋ ಕೇಂದ್ರಗಳು ಇದ್ದವು. ವಿವಿಧ ರೂಪಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದ್ದವು. ಸ್ವಾತಂತ್ರ್ಯಾನಂತರ ಆಕಾಶವಾಣಿ ಅಥವಾ ಆಲ್ ಇಂಡಿಯಾ ರೇಡಿಯೋ ಇಡೀ ದೇಶವನ್ನು ಆವರಿಸಿಕೊಂಡ ಪರಿ ಅನನ್ಯ.

ಸಂಗೀತ, ಸಂಸ್ಕೃತಿ, ಮಾತು, ಹಾಡು, ಕೃಷಿ , ಶಿಕ್ಷಣ, ಆರೋಗ್ಯ, ಮಹಿಳೆ, ಮಕ್ಕಳು, ಕ್ರೀಡೆ .. ಹೀಗೆ ಎಲ್ಲ ವಿಭಾಗಗಳಲ್ಲೂ ಕಾರ್ಯಕ್ರಮಗಳನ್ನು ರೂಪಿಸುತ್ತ ಜನಮಾನಸದಲ್ಲಿ ಒಂದಾಯಿತು. ದೇಶದ ಅಭಿವೃದ್ಧಿಯಲ್ಲಿ ತನ್ನ ಪಾಲೂ ಇದೆ ಎಂದು ಸಾಬೀತುಪಡಿಸಿತು. ಇದೆಲ್ಲ ಒಂದು ಕಡೆ ಆದರೆ, ಮತ್ತೊಂದು ವಿಚಾರ ಜನರ ಕೇಳುವಿಕೆ.

“ಆಕಾಶವಾಣಿ. ಸ್ವಾತಂತ್ರ್ಯೋತ್ಸವದ ಮುನ್ನಾ ದಿನವಾದ ಇಂದು ರಾಷ್ಟ್ರಪತಿಗಳಾದ ……… ಅವರು ರಾಷ್ಟ್ರವನ್ನು ಉದ್ದೇಶಿಸಿ ಮಾಡುವ ಪ್ರಸಾರ ಭಾಷಣ.” ಎಂಬ ಉದ್ಘೋಷಣೆ. ಬಹುಮುಖ್ಯ ಕಾರ್ಯಕ್ರಮಕ್ಕಾಗಿ ಎದ್ದು ನಿಲ್ಲಿ ಎಂಬ ಸಂದೇಶ. ಜನಗಣಮನ ಪ್ರಸಾರ, ಅದಾದ ನಂತರ ರಾಷ್ಟ್ರಪತಿಗಳ ಮಾತು ಆರಂಭ. ಈ ವಿಶೇಷ ಉದ್ಘೋಷಣೆಗಳನ್ನು ಕೇಳಲು ಜನ ಕಾತುರದಿಂದ ಕಾಯುತ್ತಿದ್ದರು.

ಅದೇ ರೀತಿ ಆಗಸ್ಟ್ 15. “ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಆವರಣದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಪ್ರಧಾನಮಂತ್ರಿಗಳಾದ ………,ಅವರು ಮಾಡುವ ಭಾಷಣದ ನೇರ ಪ್ರಸಾರವನ್ನು ಈಗ ಆಲಿಸುವಿರಿ. ನಾವೀಗ ನಮ್ಮ ಶ್ರೋತೃಗಳನ್ನು ಕೆಂಪುಕೋಟೆಯ ಆವರಣಕ್ಕೆ ಕರೆದೊಯ್ಯುತ್ತಿದ್ದೇವೆ.” ಈ ಮಾತುಗಳನ್ನು ಉದ್ಘೋಷಕರು ಸ್ಫುಟವಾಗಿ ಉಲಿಯುತ್ತಿದ್ದರೆ, ಮತ್ತೆ ಮತ್ತೆ ಅದನ್ನು ಕೇಳಬೇಕು ಎನಿಸುತ್ತಿತ್ತು.

ಅದೇ ರೀತಿ ಜನವರಿ 26, ಗಣರಾಜ್ಯೋತ್ಸವದ ಪಥ ಸಂಚಲನ ಕಾರ್ಯಕ್ರಮದ ನೇರ ಪ್ರಸಾರಗಳು, ಪ್ರಧಾನಿಗಳ ಭಾಷಣ, ಇವುಗಳನ್ನು ಕೇಳಲು ಜನ ಇಷ್ಟ ಪಡುತ್ತಿದ್ದರು. ಇದು ಆಕಾಶವಾಣಿ ಬಿತ್ತಿ ಬೆಳೆಸಿದ ಸಂಸ್ಕೃತಿ.

ಹೀಗೆ ರಾಷ್ಟ್ರಪತಿಗಳ ಅಥವಾ ಪ್ರಧಾನ ಮಂತ್ರಿಗಳ ಭಾಷಣ ಪ್ರಸಾರವಾದಾಗಲೆಲ್ಲ ಸಾಮಾನ್ಯವಾಗಿ ಅವುಗಳ ಅನುವಾದವನ್ನು ಆಯಾ ರಾಜ್ಯಗಳ ಭಾಷೆಗಳಲ್ಲಿ ಮಾಡಿಸಿ ನಿಗದಿತ ಸಮಯದಲ್ಲಿ ಪ್ರಸಾರ ಮಾಡುವುದು ಕೂಡ ಆಕಾಶವಾಣಿಯ ಕೈಂಕರ್ಯವಾಗಿತ್ತು. ಇದು ಒಂದು ಇತಿಹಾಸ.

ಭಾರತದಲ್ಲಿ ಮಾಧ್ಯಮ ಲೋಕ, ತಂತ್ರಜ್ಞಾನ ತೆರೆದುಕೊಂಡ ಪರಿ ವಿಶಿಷ್ಟ. ಇಸವಿ 2014, ಅಕ್ಟೋಬರ್ 3 ನೇ ತಾರೀಖು. ಪ್ರಧಾನ ಮಂತ್ರಿಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂಬ ಸೂಚನೆ. ಆಗಸ್ಟ್ 15 ಅಲ್ಲ, ಜನವರಿ 26 ಅಲ್ಲ, ಇದೇನಿದು ಎಂಬ ಆಶ್ಚರ್ಯ!

ಅಂದು ಪ್ರಧಾನಿಗಳು ಮಾತನಾಡಿದ್ದು ವಿಶಿಷ್ಟವಾಗಿತ್ತು. “ನಾನು ಇನ್ನು ಮುಂದೆ ನಿಮ್ಮೊಡನೆ ಪ್ರತಿ ತಿಂಗಳು ಸಂಭಾಷಿಸುತ್ತೇನೆ.” ಎಂದು ಹೇಳಿದ ಪ್ರಧಾನ ಮಂತ್ರಿಗಳು ಒಂದು ತಿಂಗಳೂ ತಪ್ಪಿಸದೆ ನೂರು ಕಾರ್ಯಕ್ರಮಗಳನ್ನು ಪೂರೈಸಿದರು. ಅದೇ ಜನಜನಿತ ಲೋಕ ಪ್ರಿಯ ಕಾರ್ಯಕ್ರಮ “ಮನ್ ಕೀ ಬಾತ್”

ಮಧ್ಯೆ ಚುನಾವಣೆ ಬಂದಿತ್ತು. ಐದು ವರ್ಷ ಪೂರೈಸಿದ್ದ ಪ್ರಧಾನಿ ಚುನಾವಣೆ ಫಲಿತಾಂಶ ಬಂದ ಮೇಲೆ ಮತ್ತೊಮ್ಮೆ ನಿಮ್ಮನ್ನು ಭೇಟಿ ಮಾಡುವೆ ಎಂದಿದ್ದರು. ಆಗ ಇವರೇ ಪ್ರಧಾನಿ ಆಗುವರೇ… ಎಂದು ಅನೇಕರು ತಮ್ಮಳಗೇ ಕೇಳಿಕೊಂಡಿದ್ದರು. ಚುನಾವಣೆ ಫಲಿತಾಂಶ ಬಂತು. ಮತ್ತೆ ಪ್ರಧಾನಿಗಳು ಮಾತನಾಡಿದರು. ಮನ್ ಕಿ ಬಾತ್ ಮುಂದುವರೆಯಿತು. “ನಾನು ಮುಂದಿನ ತಿಂಗಳು ಬರುತ್ತೇನೆ ಎಂದಿದ್ದೆ, ಅಂತೆಯೇ ಬರಮಾಡಿಕೊಂಡಿದ್ದೀರಿ” ಎಂದೇ ಭಾಷಣ ಆರಂಭಿಸಿದರು.

ಇದೇ ಏಪ್ರಿಲ್ 30. ಮನ್ ಕೀ ಬಾತ್ ಗೆ ನೂರರ ಸಂಭ್ರಮ. ಅಗಸ್ಟ್ 15, ಜನವರಿ 26 ಅಲ್ಲ, ಪ್ರತಿ ತಿಂಗಳೂ ಪ್ರಧಾನಿ ದೇಶದ ಜನತೆಯೊಡನೆ ಮಾತನಾಡುತ್ತಾರೆ ಎಂಬುದು ಬಹಳ ವಿಶೇಷ ಸಂಗತಿಯಾಗಿತ್ತು. ದೇಶದಾದ್ಯಂತ ಎಲ್ಲಾ ಆಕಾಶವಾಣಿ ಕೇಂದ್ರಗಳು ಇದಕ್ಕಾಗಿ ತಯಾರಾಗುತ್ತಿದ್ದವು. ಪ್ರತಿ ತಿಂಗಳ ಕೊನೆಯ ಭಾನುವಾರ ಪ್ರಧಾನಿಗಳ ಭಾಷಣ ಎಂಬುದು ಎಲ್ಲ ನೌಕರರ ಉದ್ಯೋಗಿಗಳ ಮನದಲ್ಲಿ ಸ್ಥಿರವಾಯಿತು.

ಅದಕ್ಕೆ ಸೂಕ್ತ ಪ್ರಚಾರವನ್ನು ನೀಡಲಾಯಿತು. ಮನೆ ಮನೆಗಳಲ್ಲಿ ಮನ್ ಕಿ ಬಾತ್ ಮೊಳಗಿತು. ಆರಂಭದ ದಿನಗಳಲ್ಲಿ ಮನ ಕೀ ಬಾತ್ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾದರೆ ರಾತ್ರಿ ಎಂಟು ಗಂಟೆಗೆ ಪ್ರಾದೇಶಿಕ ಅವತರಣಿಕೆ ಪ್ರಸಾರವಾಗುತ್ತಿತ್ತು. ಜನಪ್ರಿಯತೆ ಹೆಚ್ಚಾದಂತೆಲ್ಲ ಕಾರ್ಯಕ್ರಮ ಸ್ವರೂಪ ಸ್ವಲ್ಪ ಬದಲಾಯಿತು. 11 ಗಂಟೆಗೆ ಪ್ರಧಾನಿಗಳ ಭಾಷಣ, ಕೂಡಲೇ ಪ್ರಾದೇಶಿಕ ಅನುವಾದ, ಮತ್ತೆ ಪ್ರಾದೇಶಿಕ ಅನುವಾದದ ಮರು ಪ್ರಸಾರ ರಾತ್ರಿ 8 ಗಂಟೆಗೆ. ಹೀಗೆ ನಿಗದಿತವಾಯಿತು.

ಮೊದಲ ದಿನಗಳಲ್ಲಿ ಭಾನುವಾರವೇ ಅನುವಾದಗೊಳ್ಳುತ್ತಿತ್ತು. ಸ್ವಲ್ಪ ಸಮಯದ ನಂತರ ಶನಿವಾರವೇ ಭಾಷಣದ ಲಿಖಿತ ರೂಪವನ್ನು ಎಲ್ಲ ಆಕಾಶವಾಣಿ ಕೇಂದ್ರಗಳಿಗೂ ಕಳುಹಿಸಿಕೊಡಲು ತೀರ್ಮಾನಿಸಲಾಯಿತು. ಪ್ರಾದೇಶಿಕ ಅನುವಾದ ಮಾಡಿ ಅದರ ಧ್ವನಿ ಮುದ್ರಣವನ್ನು ಮಾಡಿ ಪ್ರಧಾನಿಗಳ ಭಾಷಣದ ನಂತರ ಪ್ರಸಾರ ಮಾಡುವುದು ಎಂದು ನಿರ್ಧರಿಸಲಾಯಿತು. ದಿನದಿಂದ ದಿನಕ್ಕೆ ಮನ್ ಕಿ ಬಾತ್ ಒಂದು ಸಂಭ್ರಮವಾಯಿತು.

ಹಿರಿಯ ಉದ್ಯೋಗಿಗಳಿಗೆ, ನಿರ್ದೇಶಕರಿಗೆ, ಸುದ್ದಿ ವಿಭಾಗದವರಿಗೆ, ಅನುವಾದಕರಿಗೆ, ಸಮನ್ವಯಕಾರರಿಗೆ, ಪಾಳಿಗಳಲ್ಲಿ ಕೆಲಸ ನಿರ್ವಹಿಸುವ ಇಂಜಿನಿಯರ್‌ಗಳು ಮತ್ತು ಉದ್ಘೋಷಕರಿಗೆ ಇದೊಂದು ವಿಶೇಷ ಜವಾಬ್ದಾರಿ ಆಯಿತು. ಪ್ರತಿ ತಿಂಗಳ ಕೊನೆಯ ಭಾನುವಾರ ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ಉದ್ಯೋಗಿಗಳು ನಿರ್ವಹಿಸಿದರು. ಮತ್ತು ನಿರ್ವಹಿಸುತ್ತಿದ್ದಾರೆ.

mann ki baat

ಈ ನೂರು ಕಾರ್ಯಕ್ರಮಗಳಲ್ಲಿ ಪ್ರಧಾನಿಗಳು ಮಾತನಾಡದ ವಿಷಯವೇ ಇಲ್ಲ. ಮಾದಕ ವ್ಯಸನ, ಸ್ವಚ್ಛ ಭಾರತ ಅಭಿಯಾನ, ಯೋಗ, ಹೆಣ್ಣು ಮಕ್ಕಳು, ಯೋಧರು, ಯೋಜನೆಗಳು, ಕೊರೊನಾ, ಸಂಕಷ್ಟಗಳು, ಮುದ್ರಾ ಬ್ಯಾಂಕ್, ಖಾದಿ, ಕ್ರೀಡೆ, ಓದುವಿಕೆ, ಲೈಬ್ರರಿ, ನೀರು, ಮ್ಯೂಸಿಯಂಗಳು, ಮೊಬೈಲ್ ಬಳಕೆ, ಕಥೆ ಹೇಳುವ ಹವ್ಯಾಸ, ತಂತ್ರಜ್ಞಾನ, ಚಂದ್ರಯಾನ, ಆರೋಗ್ಯ, ಜೂಗಳ ನಿರ್ವಹಣೆ, ಪ್ರಾಣಿಗಳು, ಕುಶಲಕರ್ಮಿಗಳು ಮತ್ತು ಕೌಶಲ್ಯ, ರೈತರು, ವಿದ್ಯಾರ್ಥಿಗಳು, ಒತ್ತಡ, ಪರೀಕ್ಷೆ, ಹೀಗೆ ಹತ್ತು ಹಲವಾರು ವಿಷಯಗಳನ್ನು ಪ್ರಧಾನಿಗಳು ಚರ್ಚಿಸಿದರು.

ಆರಂಭದ ದಿನಗಳಲ್ಲಿ ಪ್ರಧಾನಿಗಳು ಮಾತನಾಡುತ್ತಿದ್ದರು. ನಂತರದ ದಿನಗಳಲ್ಲಿ ಜನರನ್ನು ಸಂಪರ್ಕಿಸಲು ಆರಂಭಿಸಿದರು. ದೇಶದ ವಿವಿಧ ಮೂಲೆಗಳಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಹಾಗೆಯೇ ಮನ್ ಕಿ ಬಾತ್ ಕೇಳುವ ಶ್ರೋತೃ ವರ್ಗವನ್ನು ಪ್ರಧಾನಿಗಳು ಸಂಪರ್ಕಿಸಿದರು. ಸ್ವತಹ ಅವರನ್ನು ಫೋನ್ ಮೂಲಕ ಮಾತನಾಡಿಸಿದರು. ತನ್ಮೂಲಕ ಸಲಹೆ ಸೂಚನೆಗಳನ್ನು ನೀಡಿದರು.ಅಹವಾಲುಗಳನ್ನು ಆಲಿಸಿದರು. ಸ್ಪೂರ್ತಿ ತುಂಬಿದರು.

ಈ ಬಾರಿ ಪ್ರಧಾನಿಗಳು ಏನು ಹೇಳುತ್ತಾರೆ? ಯಾವ ವಿಷಯ ಚರ್ಚೆ ಮಾಡಬಹುದು? ಇದಕ್ಕೂ ಬೆಟ್ಟಿಂಗುಗಳು ನಡೆಯುತ್ತಿದ್ದವು. ಮನ್ ಕಿ ಬಾತ್ ನ ಕೆಲವು ಸಂಚಿಕೆಗಳಲ್ಲಿ ವಿಶೇಷ ಅತಿಥಿಗಳು ಪಾಲ್ಗೊಂಡಿದ್ದರು. 2015 ರ ಮನ್ ಕಿ ಬಾತ್ ಒಂದರಲ್ಲಿ ಅಮೆರಿಕಾದ ಅಧ್ಯಕ್ಷರಾದ ಬರಾಕ್ ಒಬಾಮ ಅವರು ಭಾಗವಹಿಸಿದ್ದರು. 2019 ಸೆಪ್ಟೆಂಬರ್ 29ರ ವಿಶೇಷ ಮನ್ ಕಿ ಬಾತ್ ನಲ್ಲಿ ಲತಾ ಮಂಗೇಶ್ಕರ್ ಅವರು ಭಾಗವಹಿಸಿದ್ದರು.

ಪ್ರಧಾನಮಂತ್ರಿಗಳ ಕಛೇರಿಯಿಂದ ಬರುವ ಸೂಚನೆಗಳ ಅನುಸಾರ ರಾಷ್ಟ್ರದಾದ್ಯಂತ ಜನರನ್ನು ಸಂಪರ್ಕಿಸಲಾಯಿತು. ಬಾಯಿಂದ ಬಾಯಿಗೆ ಮನ್ ಕಿ ಬಾತ್ ನ ಯಶಸ್ಸು ಹರಡಿತು. ಹಾಲು ಮಾರುವವರು, ದಿನಪತ್ರಿಕೆ ಹಾಕುವವರು, ಕೈಗಾಡಿಗಳನ್ನು ತಳ್ಳುವವರು, ಹೋಟೇಲು ಕಾರ್ಮಿಕರು, ಗೃಹಿಣಿಯರು , ವಿದ್ಯಾರ್ಥಿಗಳು, ಉದ್ಯಮಿಗಳು ಎಲ್ಲರನ್ನೂ ತಲುಪಿತು.

ಏಪ್ರಿಲ್ 30 ಮನ್ ಕಿ ಬಾತ್ ಅಭಿಮಾನಿಗಳಿಗೆ ವಿಶೇಷ ದಿನ. 100 ಸಂಚಿಕೆಗಳನ್ನು ಪೂರೈಸಿದ ಮನ್ ಕಿ ಬಾತ್ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದೆ. ಆಕಾಶವಾಣಿಗೆ ಮತ್ತೊಮ್ಮೆ ಜನಪ್ರಿಯತೆಯನ್ನು ತಂದುಕೊಟ್ಟ ಕಾರ್ಯಕ್ರಮ ಮನ್ ಕಿ ಬಾತ್. ಈ 100 ತಿಂಗಳುಗಳಲ್ಲಿ 100 ಸಂಚಿಕೆಗಳಲ್ಲಿ ಭಾರತದ 130 ಕೋಟಿ ಪ್ರಜೆಗಳಲ್ಲಿ 100 ಕೋಟಿ ಪ್ರಜೆಗಳು ಮನ್ ಕಿ ಬಾತ್ ನ ಒಂದಾದರೂ ಸಂಚಿಕೆಯನ್ನು ಕೇಳಿದ್ದಾರೆ. ದೇಶದ ಪ್ರತಿ ಪ್ರಜೆಗೂ ಮನ್ ಕಿ ಬಾತ್ ಕಾರ್ಯಕ್ರಮದ ಅರಿವಿದೆ. ರೋಹ್ಟಕ್‌ನ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ಸಮೀಕ್ಷೆ ಹೇಳುವ ಪ್ರಕಾರ ದೇಶದ 23 ಕೋಟಿ ಜನ ಇದನ್ನು ಪ್ರತಿ ತಿಂಗಳು ಆಲಿಸುತ್ತಾರೆ.

CSRS ಸಮೀಕ್ಷೆ ಪ್ರಕಾರ ಶೇ.66.7 ದೇಶವಾಸಿಗಳು ಇದನ್ನು ಕೇಳಿದ್ದಾರೆ. ಇದೊಂದು ಜನಾಂದೋಲನ ಎಂದಿದ್ದಾರೆ ಖ್ಯಾತ ಕಲಾವಿದ ಅಮೀರ್ ಖಾನ್. ಅತ್ಯಂತ ಪ್ರಭಾವ ಬೀರಿದ ಕಾರ್ಯಕ್ರಮ ಎಂದಿದ್ದಾರೆ ಹಿರಿಯ ನಟ ಅಮಿತಾಭ್‌ ಬಚ್ಚನ್.

ಮನ್ ಕಿ ಬಾತ್ ನ 100ನೇ ಸಂಭ್ರಮವನ್ನು ದೇಶದಾದ್ಯಂತ ವಿಶಿಷ್ಟವಾಗಿ ಆಚರಿಸಲು ತೀರ್ಮಾನಿಸಲಾಯಿತು. ಕೆಲವೆಡೆ ಚುನಾವಣೆಗಳು ನಡೆಯುವುದಿತ್ತು. ಹಾಗಾಗಿ ಚುನಾವಣಾ ಆಯೋಗದ ಅನುಮತಿಯನ್ನು ಪಡೆದು ಆಯಾ ರಾಜ್ಯಗಳ ರಾಜ್ಯಪಾಲರ ಕಚೇರಿಗಳಲ್ಲಿ ಅಂದರೆ ರಾಜ ಭವನದಲ್ಲಿ ಆಹ್ವಾನಿತ ಅತಿಥಿಗಳ ಸಮ್ಮುಖದಲ್ಲಿ 100ನೇ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಯಿತು.

Does Mann Ki Baat Cost Rs over Core Per Episode PIB Fact Check report here

100ನೇ ಕಾರ್ಯಕ್ರಮದ ಯಶಸ್ಸು ಅಭೂತಪೂರ್ವ. 9 ಲಕ್ಷ tweet ಗಳು, 11 ಲಕ್ಷ Photo Postಗಳು ಮಿಲಿಯನ್‌ಗಟ್ಟಲೆ like ಮತ್ತು view ಪಡೆದು ದಾಖಲೆ ಮಾಡಿದೆ. “ನನಗೆ ಇದು ಜನರ ಆರಾಧನೆ, ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಹಾಗೆ, ನೈವೇದ್ಯ ಇಟ್ಟ ಹಾಗೆ” ಎಂದು ಭಾವುಕರಾಗಿ ಪ್ರಧಾನಿಗಳು ಹೇಳಿದರು. “ನಾನು ನಿಮ್ಮ ಮನೆಯಲ್ಲಿ ಕುಳಿತು ಹಿರಿಯ ಸದಸ್ಯನಂತೆ ಮಾತಾಡುತ್ತೇನೆ, ನೀವು ಕೇಳಿದ್ದೀರಿ” ಎಂದಾಗ ಚಪ್ಪಾಳೆ ತಟ್ಟಿದರು ಜನ.

ರೇಡಿಯೋ ಯಾರು ಕೇಳುತ್ತಾರೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಜಸ್ಥಾನದಲ್ಲಿ ರಿಷಭ್ ಎಂಬ ವ್ಯಕ್ತಿ ಒಬ್ಬ ಮನ್ ಕಿ ಬಾತ್ ನ 100ನೇ ಸಂಚಿಕೆಯನ್ನು ಕೇಳಬೇಕು ಎಂದು ತನ್ನ ವಿವಾಹ ಮುಹೂರ್ತವನ್ನು ಮುಂದೂಡಿದ. ಏನಾದರೂ ತೊಂದರೆ ತಾಪತ್ರಯಗಳು ಯಾರನ್ನಾದರೂ ಬಾಧಿಸಿದಾಗ, “ಮನ್ ಕಿ ಬಾತ್ ಗೆ ಬರೆದು ಹಾಕಿ” ಎಂದು ಹೇಳಿದ್ದನ್ನು ಸ್ವತಹ ಕೇಳಿದ್ದೇನೆ.

ಇದನ್ನೂ ಓದಿ: Mann Ki Baat: ಪ್ರಧಾನಿ ಮೋದಿಯವರ ಮಾರ್ಗದರ್ಶಕ ಯಾರು?; ಮನ್​ ಕೀ ಬಾತ್​​ನಲ್ಲಿ ಸ್ಮರಣೆ

ಮೊದಲನೆಯ ಮನ್ ಕಿ ಬಾತ್ ನಿಂದ ಹಿಡಿದು 100ನೇ ಮನ್ ಕಿ ಬಾತ್ ವರೆಗೆ ಹಲವಾರು ಕಾರ್ಯಕ್ರಮಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಸರ್ಕಾರದ ಕಾರ್ಯಕ್ರಮ ಒಂದು ಜನಪ್ರಿಯವಾದಾಗ , ಯಶಸ್ವಿಯಾದಾಗ, ಸಿಗುವ ಆತ್ಮ ತೃಪ್ತಿಯೇ ಬೇರೆ. ಯಾರೋ ಹೇಳಿದರು ; ಪ್ರಧಾನಿಗಳು ರೇಡಿಯೋ ಮಾಧ್ಯಮವನ್ನು ಬಳಸಿಕೊಂಡರು ಎಂದು. ಮತ್ತೊಬ್ಬರು ಹೇಳಿದರು. “ಪ್ರಸಾರವಾಗಿದ್ದು ಸರ್ಕಾರದ ವಾಹಿನಿಯಲ್ಲಿ ಆದರೂ ಇದನ್ನು ಜನಪ್ರಿಯಗೊಳಿಸಿದ್ದು ಖಾಸಗಿ ವಾಹಿನಿಗಳು” ಎಂದು. ಪ್ರಧಾನಮಂತ್ರಿಗಳ ಹಿಂದೆ ಸುದ್ದಿಗಾಗಿ ಯಾವುದೇ ವಾಹಿನಿಯಾದರೂ ಬರಲೇಬೇಕು. ಪ್ರಧಾನಿ ಆಕಾಶವಾಣಿಯನ್ನು ಆಯ್ದುಕೊಂಡಾಗ ಸುದ್ದಿಗಾಗಿ ಖಾಸಗಿ ವಾಹಿನಿಗಳು ಆಶ್ರಯಿಸಿದವೇ ಹೊರತು ಮನ್ ಕಿ ಬಾತ್ ಜನಪ್ರಿಯಗೊಳಿಸುವ ಯಾವುದೇ ತತ್ವ ವಿಚಾರ ಅಲ್ಲಿರಲಿಲ್ಲ.

100 ಕಾರ್ಯಕ್ರಮಗಳ ಧ್ಯಾನ ಸಫಲವಾಗಿದೆ. ನಿರಂತರತೆಯಿಂದ ಜನಪ್ರಿಯವಾಗಿದೆ. ರೇಡಿಯೋ ಮಾಧ್ಯಮವನ್ನು ಜನಹಿತಕ್ಕಾಗಿ ಬಳಸಿಕೊಳ್ಳಲಾಗಿದೆಯೇ ಹೊರತು ಬೇರೆ ಉದ್ದೇಶಗಳಿಗೆ ಅಲ್ಲ ಎಂದು ಅಲ್ಲಿ ಪ್ರಸ್ತಾಪಿಸಲಾದ ವಿಚಾರಗಳನ್ನು ಅವಲೋಕಿಸಿದಾಗ ತನ್ನಂ ತಾನೇ ತಿಳಿಯುತ್ತದೆ. ಇದಕ್ಕಾಗಿ ವಿಶೇಷ duty, ಅನುವಾದಗಳು, ಅದರ ಸುಸೂತ್ರ ಪ್ರಸಾರ, ಇದರ ಸುತ್ತ ದೇಶದ ಎಲ್ಲ ಆಕಾಶವಾಣಿ ಕೇಂದ್ರಗಳೂ ಕೆಲಸ ಮಾಡುತ್ತಾ ಬಂದಿವೆ.

“ಮೇರೆ ಪ್ಯಾರೇ ದೇಶ ವಾಸಿಯೋ..” ಅಂತ ಶುರು ಆದರೆ, ಎಲ್ಲರೂ ಕಿವಿಗೊಡಲು ಶುರು ಮಾಡಿದರು. ಕೋಟಿ ಕೋಟಿ ಜನ ಆಲಿಸಿದರು. ಪ್ರಧಾನಿಗಳು ಜನರನ್ನು ಯಾವ ರೀತಿ ಬೇಕಾದರೂ ತಲುಪಬಹುದಿತ್ತು. ಆದರೆ ಅವರು ಅರಿಸಿಕೊಂಡದ್ದು ಆಕಾಶವಾಣಿಯನ್ನು. ದೇಶದ ಶೇ 99ಕ್ಕೂ ಹೆಚ್ಚು ಮಂದಿಯನ್ನು ತಲುಪುವ ಸಾಂಪ್ರದಾಯಿಕ ಸಂಸ್ಕೃತಿ ವಾಹಿನಿ ಆಕಾಶವಾಣಿಯನ್ನು. ಆಕಾಶವಾಣಿ ಎಂಬ ನೆನಪನ್ನು ಎಲ್ಲರ ಹೃದಯಗಳಲ್ಲಿ ಅರಳಿಸಿದರು.

ಮನ್ ಕೀ ಬಾತ್.. ಇಂದು ಜನಜನಿತ. ಆಟೋ ದಲ್ಲಿ ಹೋಗುವಾಗ, “ಆಕಾಶವಾಣಿ” destination ನೋಡಿ ಅವ ಕೇಳುತ್ತಾನೆ, “ಅಲ್ಲಿಂದನೇ ಅಲ್ವಾ ಮನ್ ಕಿ ಬಾತ್ ಬರೋದು.” ಮನೆಯಲ್ಲಿ ಏನಾದರೂ ಕಾರ್ಯ ಕ್ರಮ ಇದ್ದು, ಭಾನುವಾರ ಆದರೂ ಹೋಗದೆ ಇದ್ದರೆ, ಅಮ್ಮ ಕೇಳ್ತಾರೆ, “ಏನೇ, ಮನ್ ಕೀ ಬಾತ್ dutyನಾ” ಅಂತ. ಹೇಗೆ ಮಾಡ್ತಾರೆ ಮನ್ ಕಿ ಬಾತ್.. ಸ್ನೇಹಿತರ ಪ್ರಶ್ನೆ. ಒಟ್ಟಿನಲ್ಲಿ ಮನ್ ಕಿ ಬಾತ್ ಪ್ರಧಾನಿಗಳ ಮಾತಾಗಿ ಉಳಿದಿಲ್ಲ. ಅವರೇ ಹೇಳಿದಂತೆ ಅದು ಪ್ರತಿಯೊಬ್ಬರ ಮನದ ಮಾತಾಗಿ ಹರಿಯಿತು.

ಇದನ್ನೂ ಓದಿ: Mann Ki Baat: ಮೋದಿಯವರ ಮನ್​ ಕೀ ಬಾತ್​ ಒಂದು ಎಪಿಸೋಡ್​ಗೆ 8.3 ಕೋಟಿ ರೂ.ವೆಚ್ಚ?; ವೈರಲ್​ ಸಂದೇಶ ನಿಜವೇ?

ಖಾಸಗಿ ವಾಹಿನಿಗಳು, ಪತ್ರಿಕೆಗಳು… you tube ವಾಹಿನಿಗಳು ಈ ಸಲ ಏನು ಅಂತ ಕಾದು ಕುಳಿತಿರುತ್ತಿದ್ದರು. ಮನ್ ಕೀ ಬಾತ್ ಕಾರ್ಯಕ್ರಮವನ್ನು ಹೀಗಳೆದವರೂ ಇಂದು ಮೂಗಿನ ಮೇಲೆ ಬೆರಳಿಡುವಂತೆ ಆಗಿದೆ. ಇದು ಮನೆಯ ಸದಸ್ಯನಾಗಿದೆ. ಇದು ಜನರ ಆಂದೋಲನವೇ ಆಗಿದೆ. ಇಲ್ಲಿ ಪಕ್ಷ ಮುಖ್ಯ ಅಲ್ಲ, ಪ್ರಧಾನಿ ಮತ್ತು ದೇಶ ಮುಖ್ಯ ಎಂಬುದನ್ನು ಗಮನದಲ್ಲಿ ಇರಿಸಿ ನೋಡಿದರೆ ನೀವು ಹೆಮ್ಮೆ ಪಡುತ್ತೀರಿ. ಖಂಡಿತ.

(ಲೇಖಕರು ಉದ್ಘೋಷಕರಾಗಿ ಕಳೆದ 30 ವರ್ಷಗಳಿಂದ ಆಕಾಶವಾಣಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಪ್ರಸ್ತುತ ಪಡಿಸಿದ್ದಾರೆ. ಮಾಧ್ಯಮ ಮತ್ತು ಭಾಷೆ ವಿಶೇಷ ಆಸಕ್ತಿ. ನಿರೂಪಣೆ, ಮಾತಲ್ಲ ಗೀತೆ ಪ್ರಕಟಿತ ಕೃತಿಗಳು. ಲೇಖನ ಅಂಕಣಗಳನ್ನು ಬರೆದಿದ್ದಾರೆ. ಕೊರೊನಾ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದ್ದಾರೆ. ಪ್ರಧಾನಮಂತ್ರಿಗಳು ಕೊರೊನಾ ಸಮಯದಲ್ಲಿ ನಿರೂಪಕರ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಬೆಂಗಳೂರು ಆಕಾಶವಾಣಿಯನ್ನು ಪ್ರತಿನಿಧಿಸಿದ್ದಾರೆ.)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Lok Sabha Election
ಪ್ರಮುಖ ಸುದ್ದಿ3 hours ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ3 hours ago

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

IPL 2024
ಪ್ರಮುಖ ಸುದ್ದಿ3 hours ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ3 hours ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ3 hours ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ3 hours ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ4 hours ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ4 hours ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ4 hours ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ4 hours ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ8 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ22 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌