ಮೊಗಸಾಲೆ ಅಂಕಣ: ಆಯಾರಾಂ ಗಯಾರಾಂ ಮರಕೋತಿ ಆಟ Vistara News
Connect with us

ಅಂಕಣ

ಮೊಗಸಾಲೆ ಅಂಕಣ: ಆಯಾರಾಂ ಗಯಾರಾಂ ಮರಕೋತಿ ಆಟ

ಪಕ್ಷಾಂತರ ಪಿಡುಗು ಎಂಬ ಸಮಾಜಕ್ಕೆ ಅಂಟಿರುವ ಆಯಾರಾಂ ಗಯಾರಾಂ ಎಂಬ ರಾಜಕೀಯ ಅರ್ಬುದಕ್ಕೆ ದೇಶದಲ್ಲಿ ಐದೂವರೆ ದಶಕಕ್ಕೂ ಹೆಚ್ಚು ಅವಧಿಯ ಕುಖ್ಯಾತ ಇತಿಹಾಸ ಇದೆ. ಕರ್ನಾಟಕದಲ್ಲಿ ವಿಧಾನ ಸಭೆ ಚುನಾವಣೆ ದಿನಗಳೆದಂತೆ ಸಮೀಪವಾಗುತ್ತಿದೆ.

VISTARANEWS.COM


on

mogasale defection
Koo
mogasale logo

ಗಿಡ ಮರಗಳು (ಒಂದಾನೊಂದು ಕಾಲದಲ್ಲಿ) ಧಾರಾಳವಾಗಿದ್ದ ಮಲೆನಾಡು ಪ್ರದೇಶದಲ್ಲಿ ಮಕ್ಕಳ ಮನರಂಜನೆಯ ಮುಖ್ಯ ಮಾರ್ಗವಾಗಿದ್ದುದು ಮರಕೋತಿ ಆಟ. ಆರು ಎಂಟು ವರ್ಷದ ಮಕ್ಕಳು ಮರವನ್ನೇರುತ್ತ ಕೆಳಕ್ಕೆ ಹಾರುತ್ತ; ಒಂದು ಮರದಿಂದ ಮತ್ತೊಂದಕ್ಕೆ ನೆಗೆಯುತ್ತ; ಎಲ್ಲರನ್ನೂ ಹಿಂದಕ್ಕೆ ಹಾಕಿ ಮುಂದಕ್ಕೆ ಜಿಗಿಯುತ್ತ ದೇಹ ದಣಿಯುವವರೆಗೂ ಕಸುಬುದಾರಿಕೆ ಪ್ರದರ್ಶಿಸುತ್ತ ಮೈಮನ ತಣಿಸಿಕೊಳ್ಳುವ ಆಟ ಅದು. ಇಲ್ಲೂ ಸ್ಪರ್ಧೆ ಎನ್ನುವುದು ಸಹಜ. ಒಮ್ಮೆ ಮರವೇರಿದ ಹುಡುಗ ಅಥವಾ ಹುಡುಗಿ ಸಾಕಷ್ಟು ಅವಧಿ ಮರದ ಒಂದು ಕೊಂಬೆಯಿಂದ ಮತ್ತೊಂದರದಲ್ಲಿ ಜಾಗ ಕಂಡುಕೊಳ್ಳುತ್ತ ನೆಲವನ್ನು ಮುಟ್ಟದೇ ಸ್ಪರ್ಧೆಯನ್ನು ಜೈಸುವುದು! ಮಲೆನಾಡಿನವರಲ್ಲದವರಿಗೆ ಇದು ಒಂದು ರೀತಿ ಸರ್ಕಸ್‌ನಂತೆ ತೋಚಿದರೆ ಅಚ್ಚರಿ ಇಲ್ಲ. ಆದರೆ ಮಲೆನಾಡ ಮಕ್ಕಳಿಗೆ ಇದು ಹೇಳಿ ಮಾಡಿಸಿದ್ದು. ದೇಹಕ್ಕೆ ಕಸರತ್ತು, ಮನಸ್ಸಿಗೆ ರಂಜನೆ.

ಚುನಾವಣೆ ಹತ್ತಿರ ಬಂತೆಂದರೆ ಮತ್ತೊಂದು ಬಗೆಯ ಮರಕೋತಿ ಆಟ ಶುರುವಾಗುತ್ತದೆ. ಇದರ ಪರಿಚಯ ನಗರವಾಸಿಗಳಿಗೂ ಇದೆ; ಹಳ್ಳಿ ಹೈದರಿಗೂ ಇದೆ. ಒಂದು ಪಕ್ಷದಿಂದ ಮತ್ತೊಂದಕ್ಕೆ ಜಿಗಿಯುವ (defection) ರಾಜಕಾರಣಿಗಳ ನಿಲುವನ್ನು ಮರಕೋತಿ ಆಟಕ್ಕೆ ಹೋಲಿಸುವುದು ಸಾಮಾನ್ಯವಾಗಿದೆ. ಎಲ್ಲಕ್ಕೂ ಇತಿಹಾಸ ಇರುವಂತೆ ರಾಜಕಾರಣದಲ್ಲಿ ಶುರುವಾದ ಮರ ಕೋತಿ ಆಟಕ್ಕೂ ಅದರದೇ ಆದ ಇತಿಹಾಸವಿದೆ. ಅದಕ್ಕೆ ಬಂದ ಹೆಸರು ಆಯಾರಾಂ ಗಯಾ ರಾಂ!

ಪಕ್ಷಾಂತರ ಪಿಡುಗು ಎಂಬ ಸಮಾಜಕ್ಕೆ ಅಂಟಿರುವ ಆಯಾರಾಂ ಗಯಾರಾಂ ಎಂಬ ರಾಜಕೀಯ ಅರ್ಬುದಕ್ಕೆ ದೇಶದಲ್ಲಿ ಐದೂವರೆ ದಶಕಕ್ಕೂ ಹೆಚ್ಚು ಅವಧಿಯ ಕುಖ್ಯಾತ ಇತಿಹಾಸ ಇದೆ. ಕರ್ನಾಟಕದಲ್ಲಿ ವಿಧಾನ ಸಭೆ ಚುನಾವಣೆ ದಿನಗಳೆದಂತೆ ಸಮೀಪವಾಗುತ್ತಿದೆ. ಟಿಕೆಟ್ ತಮಗೆ ಸಿಗಬೇಕು, ತಮ್ಮೊಂದಿಗೆ ತಮ್ಮ ಮಕ್ಕಳಲ್ಲಿ ಒಬ್ಬರಿಗೆ ಕೊಡಬೇಕು ಇಲ್ಲವೆ ಸೊಸೆ-ಅಳಿಯ, ತಮ್ಮನಿಗೆ ತಪ್ಪಿಸಬಾರದು ಎಂಬಿತ್ಯಾದಿ ಯತ್ನ ಹಲವರದು. ಈ ಪಕ್ಷದಲ್ಲಿ ಸಿಗಲಿಲ್ಲವೆಂದಾದರೆ ಮತ್ತೊಂದು ಪಕ್ಷದಲ್ಲಿ ಸಿಗುತ್ತದಾ ನೋಡಬೇಕು ಎನ್ನುವುದು ಅವರ ಗುರಿ. ಎಲ್ಲೂ ಸಿಗಲಿಲ್ಲ ಎಂದಾದರೆ ಟಿಕೆಟ್ ಪಡೆದು ಕಣಕ್ಕಿಳಿದ ಸ್ವಪಕ್ಷೀಯರನ್ನು ಸೋಲಿಸುವುದು ಹೇಗೆಂಬ ಒಳ ಲೆಕ್ಕಾಚಾರ. ಕಾಂಗ್ರೆಸ್ ಇಲ್ಲವೇ ಬಿಜೆಪಿಯಲ್ಲಿ ಟಿಕೆಟ್ ಸಿಗದಿದ್ದರೆ ಕೊನೆ ಯತ್ನವಾಗಿ ಜೆಡಿಎಸ್‌ನಲ್ಲಿ ಅವಕಾಶ ಸಿಕ್ಕೀತೇ ಎಂದು ನೋಡುವುದು. ರಾಜಕಾರಣದಲ್ಲಿರುವವರಿಗೆ ನಿವೃತ್ತಿ ಎಂಬ ಶಬ್ದದ ಪರಿಚಯವೇ ಇಲ್ಲ. ಕೂತರೆ ನಿಲ್ಲಲಾಗದ, ನಿಂತರೆ ಕೂರಲಾಗದ, ತೋಳು ಹಿಡಿದು ನಡೆಸುವರ ಆಸರೆ ಇಲ್ಲದೆ ಎರಡು ಹೆಜ್ಜೆ ನಡೆಯಲಾಗದ, ಈಗಲೋ ಆಗಲೋ ಎಂಬಂತಿರುವವರಿಗೂ ಟಿಕೆಟ್ ಬೇಕು. ಟಿಕೆಟ್ ಸಿಗದವರು ದ್ರಾಕ್ಷಿ ಹುಳಿ ಎಂದು ಸುಮ್ಮನಿರುವುದಿಲ್ಲ. ಸುದೀರ್ಘ ಸೇವೆ ಸಲ್ಲಿಸಿದವರನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಲು ಪಕ್ಷ ಸಿದ್ಧವಾಗಿರಬೇಕು.

ಕರ್ನಾಟಕದಲ್ಲಿ ಬಿಜೆಪಿ ಪುನಃ ಅಧಿಕಾರ ಹಿಡಿಯುವಷ್ಟು ಸರಳ ಬಹುಮತ ಗಳಿಸಲಾರದು ಎಂಬ ಭಾವನೆ ದಟ್ಟವಾಗಿದೆ. ಅವರೋ ಇವರೋ ಅಥವಾ ವಿರೋಧ ಪಕ್ಷದವರೋ ಹೇಳುವ ಮಾತಲ್ಲ ಇದು. ಸ್ವತಃ ಬಿಜೆಪಿ ಮುಖಂಡರೇ ಆಪ್ತ ಮಾತುಕತೆ ಸಂದರ್ಭದಲ್ಲಿ ತೋಡಿಕೊಳ್ಳುವ ನೋವು. ಐದು ವರ್ಷದ ಹಿಂದೆ ಕಾಂಗ್ರೆಸ್ ವಿರೋಧಿ ಅಲೆ ಇದ್ದಾಗಲೂ ಬಿಜೆಪಿ ಗಳಿಸಿದ್ದು 104 ಸೀಟನ್ನು ಮಾತ್ರ. ಸರಳ ಬಹುಮತಕ್ಕೆ 113 ಸೀಟು ಅಗತ್ಯ.

ಈ ಅವಧಿಯಲ್ಲಿ ಸರ್ಕಾರವಾಗಿ ಬಿಜೆಪಿ ಸಾಕಷ್ಟು ಮುಜುಗರಕ್ಕೆ ಒಳಗಾಗಿದೆ. ಹತ್ತಾರು ಬಗೆಯ ಹಗರಣಗಳು ಸರ್ಕಾರದ ಭವಿಷ್ಯವನ್ನು ಮುಕ್ಕತೊಡಗಿವೆ. 140 ಸೀಟು ಗೆಲ್ಲುವ “ವಿಶ್ವಾಸ”ದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರಿಗಾಗಲೀ; ಮಿಷನ್-150 ಎಂದುಕೊಂಡು ಹೊರಟಿರುವ ಅಮಿತ್ ಶಾ ಅವರಿಗಾಗಲೀ; ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇವೆಂದು ಹೋದಲ್ಲಿ ಬಂದಲ್ಲಿ ಹೇಳುತ್ತಿರುವ ಬಸವರಾಜ ಬೊಮ್ಮಾಯಿ ಅವರಿಗಾಗಲೀ ಸೋಲಿನ ಅರಿವು ಇಲ್ಲ ಎಂದಲ್ಲ. ವಿರೋಧಿ ಅಲೆಯನ್ನು ಮೆಟ್ಟಿನಿಂತು ಮತ್ತೆ ಸರ್ಕಾರ ರಚಿಸುವ ಉಮೇದನ್ನು ತುಂಬದಿದ್ದರೆ ಯುದ್ಧಕ್ಕಿಂತ ಮೊದಲೇ ಶಸ್ತ್ರತ್ಯಾಗ ಮಾಡಿದಂತಾಗುತ್ತದೆಂಬ ಭಯ ಅವರ ಹೇಳಿಕೆಗಳ ಹಿಂದಿದೆ. ಹರಸಾಹಸ ಮಾಡಿಯಾದರೂ ಸರ್ಕಾರ ಉಳಿಸಿಕೊಳ್ಳುವ ಮಾತು ಬಿಜೆಪಿಯ ಅಧಿಕೃತ ಮೂಲಗಳದು. ಹರ ಸಾಹಸ ಎಂದರೇನು ಎನ್ನುವುದರ ವಿವರಣೆ ಅನಗತ್ಯ. ದಕ್ಷಿಣ ಭಾರತದಲ್ಲಿ ಪುದುಚೆರಿ ಕೇಂದ್ರಾಡಳಿತ ಪ್ರದೇಶ ಬಿಜೆಪಿ ಆಡಳಿತದಲ್ಲಿದೆ. ಮುಖ್ಯ ರಾಜ್ಯ ಕರ್ನಾಟಕ. ಅದನ್ನು ಕಳೆದುಕೊಳ್ಳುವುದು ಕೇಂದ್ರದ ವರಿಷ್ಠರಿಗೆ ಬೇಕಾಗಿಲ್ಲ.

ಹೀಗಿದ್ದರೂ ಕಾಂಗ್ರೆಸ್ ಅಥವಾ ಜೆಡಿಎಸ್‌ನಿಂದ ಬಿಜೆಪಿಗೆ ಜಿಗಿಯುತ್ತಿರುವವರ; ಜೆಡಿಎಸ್ ಇಲ್ಲವೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ನೆಗೆಯುತ್ತಿರುವವರ, ಈ ಎರಡೂ ಪಕ್ಷದಲ್ಲಿ ವ್ಯಕ್ತಿಗತ ಭವಿಷ್ಯವಿಲ್ಲ ಎಂದು ಜೆಡಿಎಸ್‌ಗೆ ಹಾರುತ್ತಿರುವವರ ಸಂಖ್ಯೆ ಕಡಿಮೆಯದೇನೂ ಅಲ್ಲ. ಟಿಕೆಟ್ ಹಂಚಿಕೆ ಪ್ರಕ್ರಿಯೆ ಮುಗಿಯುವವರೆಗೂ ಈ ಬಗೆಯ ಹಾರಾಟ, ನೆಗೆದಾಟ, ನಿತ್ಯ ರಂಜನೆ ನೀಡುವುದು ಗ್ಯಾರಂಟಿ. ಬಿಜೆಪಿಯಲ್ಲೇ ರಾಜಕೀಯ ಹುಟ್ಟು ಏಳಿಗೆ ಇತ್ಯಾದಿ ಕಂಡಿರುವ ಸಂಘ ಪರಿವಾರ ಮೂಲದವರು ಟಿಕೆಟ್ ಸಿಗಲಿ ಸಿಗದಿರಲಿ ಪಕ್ಷಾಂತರ ಮಾಡುವ ಸಾಧ್ಯತೆ ಕಡಿಮೆ. ಬಿ.ಎಸ್. ಯಡಿಯೂರಪ್ಪ ಕೆಜೆಪಿ ಕಟ್ಟಿದಾಗ ಅವರನ್ನು ಹಿಂಬಾಲಿಸಿದ ಶೋಭಾ ಕರಂದ್ಲಾಜೆ ಮತ್ತಿತರ ಕೆಲವು ಅಪವಾದ ಇಲ್ಲವೆಂದಲ್ಲ. ಬಹುತೇಕರು ಈ ಜಾಡಿನಲ್ಲಿ ಹೆಜ್ಜೆ ಹಾಕುವುದಿಲ್ಲ.

ಇದನ್ನೂ ಓದಿ: ಮೊಗಸಾಲೆ ಅಂಕಣ: ಮತ್ತೆ ಮಧ್ಯರಂಗಕ್ಕೆ ಬಂದ ಬಿಎಸ್‍ ಯಡಿಯೂರಪ್ಪ

ಬರಲಿರುವ ಚುನಾವಣೆ ವಿಶೇಷವೆಂದರೆ ಬಿಜೆಪಿಯ ಕೆಲವು ಹಾಲಿ ಶಾಸಕರು ಟಿಕೆಟ್‌ಗಾಗಿ ಬೇಡಿಕೆ ಮಂಡಿಸಲು ಹಿಂದೇಟು ಹಾಕಿರುವುದು. ಹೇಗಿದ್ದರೂ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟ. ಅಷ್ಟೆಲ್ಲ ಮೈಕೈ ನೋವು ಮಾಡಿಕೊಂಡು, ಹಣವನ್ನು ವ್ಯರ್ಥ ಕಳೆದುಕೊಳ್ಳುವುದಕ್ಕಿಂತ ಐದು ವರ್ಷ ಮನೆಯಲ್ಲಿದ್ದು ಆರೋಗ್ಯ ನೋಡಿಕೊಳ್ಳುವುದೇ ವಿವೇಕಯುತ ಎಂಬ ನಿಲುವಿಗೆ ಅವರು ಬಂದಿರುವಂತಿದೆ. ಪಕ್ಷಾಂತರ ಮಾಡುವವರು ಮಾಡಿಕೊಳ್ಳಲಿ, ಟಿಕೆಟ್ ಸಿಗಲಿ ಸಿಗದಿರಲಿ ನೆಚ್ಚಿಕೊಂಡಿರುವ ಪಕ್ಷದಲ್ಲೇ ಇರೋಣ ಎನ್ನುವವರಿಗೆ ಮೂರೂ ಪಕ್ಷದಲ್ಲಿ ಕೊರತೆ ಇಲ್ಲ ಎನ್ನುವುದು ಕರ್ನಾಟಕ ರಾಜಕೀಯದ ಪುಣ್ಯ.

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಮತ್ತು ಪ್ರಧಾನಿ ಇಂದಿರಾ ಗಾಂಧಿ ನಡುವಿನ ಸಂಬಂಧ ಹಳಸಿದ್ದ ಎಂಬತ್ತರ ದಶಕದ ರಾಜಕೀಯ ರಾಜ್ಯ ಅದುವರೆಗೆ ಕಂಡು ಕೇಳರಿಯದ ಆಯಾರಾಂ ಗಯಾರಾಂ ಪ್ರಕ್ರಿಯೆಗೆ ಸಾಕ್ಷಿಯಾಯಿತು. ಕಾಂಗ್ರೆಸ್ ಶಾಸಕ ಎಚ್.ಸಿ. ಶ್ರೀಕಂಠಯ್ಯನವರು ಎಂಬತ್ತು ಜನ ಕಾಂಗ್ರೆಸ್ ಶಾಸಕರನ್ನು ಕಟ್ಟಿಕೊಂಡು ಅರಸುಗೆ ತಿರುಗಿಬಿದ್ದರು. ಅರಸು ಸರ್ಕಾರ ಪತನವಾಯಿತು. ಆದರೆ ಶ್ರೀಕಂಠಯ್ಯ ತಾವು ನಿರೀಕ್ಷಿಸಿದಂತೆ ಮುಖ್ಯಮಂತ್ರಿ ಆಗಲಿಲ್ಲ, ಬದಲಿಗೆ ಆ ಹುದ್ದೆಗೆ ಏರಿದ್ದು ಆರ್. ಗುಂಡೂರಾವ್. ಪಕ್ಷಾಂತರ ಎಂಬೋ ಮರಕೋತಿ ಆಟ ಅದೇ ಸ್ಥಿತಿಯಲ್ಲಿ ಈ ಹೊತ್ತಿಗೂ ಮುಂದುವರಿದಿದೆ. ಪಕ್ಷಾಂತರದ ಲಾಭ ಹಲವರಿಗೆ ಆಗಿದೆ. ಶ್ರೀಕಂಠಯ್ಯ ಥರದ ಉದಾಹರಣೆ ಹತ್ತಾರು ಇದ್ದಿದ್ದರೆ ಒಂದು ನಿಯಂತ್ರಣದಲ್ಲಿ ಈ ಪಿಡುಗು ಇರುತ್ತಿತ್ತೋ ಏನೋ. ಪಕ್ಷಾಂತರ ನಿಷೇಧ ಕಾಯ್ದೆ ನಮ್ಮಲ್ಲಿದೆ. 1985ರಲ್ಲಿ ಸಂವಿಧಾನ ತಿದ್ದುಪಡಿಗೂ ಒಳಗಾದ ಕಾಯ್ದೆಯಲ್ಲಿ ಅಂತರ್ಗತವಾಗಿರುವ ಲೋಪಗಳು ರಾಜಕಾರಣಿಗಳಿಗೆ ಹುಲ್ಲುಗಾವಲಾಗಿವೆ.

ಇದನ್ನೂ ಓದಿ: ಮೊಗಸಾಲೆ ಅಂಕಣ: ಸೋನಿಯಾ, ಬಿಎಸ್‌ವೈ ಮನಸ್ಸು ಭಾರ:ಚುನಾವಣೆ ಕಣದಿಂದ ದೂರ

“ಆಯಾರಾಂ ಗಯಾರಾಂ” ಪದಪುಂಜದ ಗಂಗೋತ್ರಿ ಹರಿಯಾಣಾ. ನಂತರದಲ್ಲಿ ಅದು ದೇಶದ ಉದ್ದಗಲಕ್ಕೆ ಆ ರಾಜ್ಯ ಈ ಪ್ರದೇಶವೆನ್ನದೆ ಎಲ್ಲ ಕಡೆಯಲ್ಲೂ ಹರಿಯುತ್ತಿದೆ. 1967ರ ಮಾತು. ಹರಿಯಾಣಾ ವಿಧಾನ ಸಭೆಗೆ ಗಯಾಲಾಲ್ ಎಂಬುವವರು ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದರು. ಪಕ್ಷದ ಶಾಸಕರಿಗೆ ಇರದ; ಪಕ್ಷೇತರರಿಗೆ ಇರುವ ಅಗಾಧ ಅನುಕೂಲವೆಂದರೆ ಅವರು ಯಾವ ಪಕ್ಷಕ್ಕೂ ಬೆಂಬಲವಾಗಿ ನಿಲ್ಲಬಹುದು. (ಇಲ್ಲಿ ಕರ್ನಾಟಕದಲ್ಲಿ 1983ರಲ್ಲಿ ಜನತಾ ಪಕ್ಷದ ಸರ್ಕಾರ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಾಗ ಅವರಿಗೆ ಬಹುಮತದ ಕೊರತೆ ಇತ್ತು. ಅದನ್ನು ತುಂಬಿಕೊಟ್ಟಿದ್ದು ಬಿಜೆಪಿ, ಉಭಯ ಕಮ್ಯೂನಿಸ್ಟ್ ಪಕ್ಷಗಳು ಮತ್ತು ಪಕ್ಷೇತರ ಶಾಸಕರು) ಈ ಮನುಷ್ಯ ಗಯಾರಾಂ ವಿಧಾನ ಸಭೆ ಅಧಿವೇಶನಕ್ಕೆ ಮೊದಲೇ ಕಾಂಗ್ರೆಸ್‌ಗೆ ಸೇರಿದರು. ಚೌಕಾಸಿ ಕೆಲಸ ಮಾಡಲಿಲ್ಲವೆನ್ನಬೇಕು. ಮುಂದಿನ ಹದಿನೈದು ದಿನದಲ್ಲಿ ಈ ಮಹರಾಯ ಮೂರು ಬಾರಿ ಪಕ್ಷಾಂತರ ಮಾಡಿದರು. ಪಕ್ಷೇತರ ಆಗಿದ್ದವರು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ತೊರೆದು ಸಂಯುಕ್ತ ರಂಗದಲ್ಲಿ ಬಾವುಟ ಹಾರಿಸಿದರು. ವ್ಯವಹಾರ ಕುದುರಿ ಮತ್ತೆ ಕಾಂಗ್ರೆಸ್‌ಗೆ ಬಂದರು. ಅಲ್ಲಿಂದ ಒಂಬತ್ತೇ ತಾಸಿನಲ್ಲಿ ಸಂಯುಕ್ತ ರಂಗಕ್ಕೆ ಜಿಗಿದು ಜಯದ ನಗು ಬೀರಿದರು. ಈ ನಡುವಿನ ಅವಧಿಯಲ್ಲಿ ಗಯಾರಾಂ ಅವರನ್ನು ಮಾಧ್ಯಮ ಗೋಷ್ಠಿಗೆ ಎಳೆದುತಂದಿದ್ದ ಕಾಂಗ್ರೆಸ್ ನಾಯಕ ರಾವ್ ಬೀರೇಂದ್ರ ಸಿಂಗ್ “ಗಯಾರಾಂ ಈಗ ಆಯಾರಾಂ” ಎಂದಿದ್ದರು. ಅಲ್ಲಿಂದ ಮುಂದಕ್ಕೆ ಪಕ್ಷಾಂತರ ಪಿಡುಗಿಗೆ ಹೊಸ ಹೆಸರು ಬಂತು.

ಪಕ್ಷಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ಯಾವ ರಾಜಕೀಯ ಪಕ್ಷವೂ ಗಂಭೀರವಾಗಿಲ್ಲ. ರಾಷ್ಟ್ರೀಯ ಪಕ್ಷಗಳಂತೆ ಪ್ರಾದೇಶಿಕ ಪಕ್ಷಗಳೂ ಪಕ್ಷಾಂತರಿಗಳನ್ನು ಆಧರಿಸಿ ಉತ್ತೇಜಿಸಿ ಅವರ ಬೇಕುಗಳಿಗೆ ಸ್ಪಂದಿಸಿ ರಾಜಕಾರಣ ಮಾಡುವ ಚಾಳಿಗೆ ಒಳಗಗಿವೆ. ತಾನಿರುವ ಪಕ್ಷದಲ್ಲಿ ಉಸಿರುಗಟ್ಟಿಸುವ ಸನ್ನಿವೇಶವಿದ್ದು ಅದನ್ನು ತ್ಯಜಿಸಿ ಸೇರಲಿರುವ ಪಕ್ಷದ ಸಿದ್ಧಾಂತ ಒಪ್ಪಿ ಬಂದಿರುವುದಾಗಿ ಒಂದು ಹೇಳಿಕೆ ನೀಡಿದರೆ ಅಲ್ಲಿಗೆ ಕಥೆ ಖತಂ ಆಗುತ್ತದೆ. ನಿನ್ನೆಯವರೆಗೆ ಕೋಮುವಾದಿಯಾಗಿದ್ದ ರಾಜಕಾರಣಿಯೊಬ್ಬ ಹೀಗೆ 24 ತಾಸು ಕಳೆಯುವುದರ ಒಳಗಾಗಿ ಜಾತ್ಯತೀತ ಆಗುವ ಪವಾಡ ಘಟಿಸುವುದು ಇಂಡಿಯಾದಲ್ಲಿ ಮಾತ್ರ. ಜಾತ್ಯತೀತ ಆಗಿದ್ದವರು 24 ತಾಸಿನಲ್ಲಿ ಕೋಮುವಾದಿ ಆಗುವುದು ಕೂಡಾ ಪವಾಡವೇ.

ಇದನ್ನೂ ಓದಿ: ಮೊಗಸಾಲೆ ಅಂಕಣ: ರೋಹಿಣಿ, ರೂಪಾ ರಂಪಾಟ: ಸರ್ಕಾರಕ್ಕೆ ಪೇಚಾಟ

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜ ಮಾರ್ಗ ಅಂಕಣ: ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಭಾಗ-5, ನೀವೂ ಈ ಯಶೋಗಾಥೆಗಳ ಗುಂಪಿಗೆ ಸೇರಬಹುದು!

ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳ ಮುಂದೆ, ಅವರ ಹೆತ್ತವರ ಮುಂದೆ ಕೆಲವೊಂದು ಯಶೋಗಾಥೆಗಳನ್ನು ತೆರೆದಿಟ್ಟಿದ್ದಾರೆ ಲೇಖಕರು. ನಿಮ್ಮ ಮಗ/ಮಗಳೂ ಈ ಪಟ್ಟಿ ಸೇರಲು ಎಲ್ಲ ಅವಕಾಶಗಳಿವೆ.

VISTARANEWS.COM


on

Edited by

Ranjan Bhadravati
ಎಸ್ಸೆಸೆಲ್ಸಿ ಬೋರ್ಡಿನ ಇತಿಹಾಸದಲ್ಲಿ ಮೊದಲ ಬಾರಿಗೆ 625/625 ಅಂಕ ಪಡೆದ ಭದ್ರಾವತಿಯ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ವಿದ್ಯಾರ್ಥಿ ರಂಜನ್‌ಗೆ ಅಮ್ಮನ ಸಿಹಿಮುತ್ತು (2016).
Koo

ನಾವು ಸಣ್ಣವರಿದ್ದಾಗ ಎಸ್ಸೆಸ್ಸೆಲ್ಸಿ, ಪಿಯುಸಿಗಳ ರ‍್ಯಾಂಕ್‌ ಘೋಷಣೆ ಆದಾಗ ಅವರನ್ನು ಬೆರಗು ಕಣ್ಣುಗಳಿಂದ ನೋಡುವುದೇ ಒಂದು ಸಂಭ್ರಮ! ಆಗೆಲ್ಲ ದೂರದರ್ಶನದಲ್ಲಿ ಅಂತಹ ಒಂದೆರಡು ಮಕ್ಕಳ ಸಂದರ್ಶನಗಳು ಪ್ರಸಾರ ಆಗುತ್ತಿದ್ದವು. ಮರುದಿನದ ಎಲ್ಲ ಪತ್ರಿಕೆಗಳಲ್ಲಿ ಮುಖಪುಟದಲ್ಲಿ ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳ ಫೋಟೊಸ್, ಅವರ ಹೆತ್ತವರು ಸಿಹಿ ತಿನಿಸುವ ಭಾವಚಿತ್ರಗಳು ನಮಗಂತೂ ಭಾರೀ ಕ್ರೇಜ್‌ ಹುಟ್ಟಿಸುತ್ತಿದ್ದವು! ಆಗ ಎಸ್ಸೆಸ್ಸೆಲ್ಸಿ, ಪಿಯುಸಿ ಬೋರ್ಡಿನವರು ಕೇವಲ ಹತ್ತು ರ‍್ಯಾಂಕ್‌ ಕೊಡುತ್ತಿದ್ದರು ಮತ್ತು ಅವುಗಳಲ್ಲಿ ಸಿಂಹಪಾಲು ರ‍್ಯಾಂಕ್‌ಗಳನ್ನು ಬೆಂಗಳೂರಿನ ಎರಡು ಪ್ರತಿಷ್ಠಿತವಾದ ಕಾಲೇಜುಗಳು ಬಾಚಿಕೊಳ್ಳುತ್ತಿದ್ದವು!

ರ‍್ಯಾಂಕ್‌ ಪಡೆದವರು ರಾತ್ರಿ ಹಗಲಾಗುವ ಹೊತ್ತಿಗೆ ಸೆಲೆಬ್ರಿಟಿ ಆಗುತ್ತಿದ್ದರು!

ಯಾರಾದ್ರೂ ಒಬ್ಬ ರ‍್ಯಾಂಕ್‌ ಪಡೆದನು/ ಪಡೆದಳು ಎಂದಾದರೆ ಅವರು ರಾತ್ರಿ ಹಗಲು ಆಗುವುದರೊಳಗೆ ಸೆಲೆಬ್ರಿಟಿ ಆಗಿ ಬಿಡುತ್ತಿದ್ದರು! ಅದರಲ್ಲಿ ಕೂಡ ಎಸೆಸೆಲ್ಸಿ ರ‍್ಯಾಂಕ್‌ ಪಡೆಯುವವರು ಎಲ್ಲರೂ ಆಂಗ್ಲ ಮಾಧ್ಯಮದ ಮಕ್ಕಳೇ ಆಗಿರುತ್ತಿದ್ದರು! ಈ ಅಪವಾದವನ್ನು ನಿವಾರಣೆ ಮಾಡಲು ಬೋರ್ಡು ಇಂಗ್ಲಿಷ್ ಮಾಧ್ಯಮಕ್ಕೆ ಹತ್ತು, ಕನ್ನಡ ಮಾಧ್ಯಮಕ್ಕೆ ಹತ್ತು.. ಹೀಗೆ ಇಪ್ಪತ್ತು ರ‍್ಯಾಂಕ್‌ಗಳನ್ನು ನೀಡಲು ಆರಂಭ ಮಾಡಿತು. ಮುಂದೆ ಕನ್ನಡ ಮಾಧ್ಯಮಕ್ಕೆ 20 ಮತ್ತು ಇಂಗ್ಲಿಷ್ ಮಾಧ್ಯಮಕ್ಕೆ 20 ಹೀಗೆ ರ‍್ಯಾಂಕ್‌ ಕೊಡಲು ಆರಂಭ ಮಾಡಿತು. ಆಗೆಲ್ಲ ನಮ್ಮ ಸುತ್ತಮುತ್ತಲಿನ ವಿದ್ಯಾರ್ಥಿಗಳು ರ‍್ಯಾಂಕ್‌ ಪಡೆಯಲು ಆರಂಭ ಮಾಡಿದರು. ಆಗೆಲ್ಲ ರ‍್ಯಾಂಕ್‌ ಪಡೆಯಲು ಅಡ್ಡ ದಾರಿಗಳು ಆರಂಭವಾದವು ಎನ್ನುವ ಕೂಗಿನ ನಡುವೆ ಕೂಡ ಮಕ್ಕಳ ಪ್ರತಿಭೆಗಳ ಬಗ್ಗೆ ಇರುವ ನಮ್ಮ ಉತ್ಕಟ ಅಭಿಮಾನ ಕಡಿಮೆ ಆಗಲೇ ಇಲ್ಲ. ಅದು ಕಡಿಮೆ ಆಗುವ ಕ್ರೇಜ್ ಅಲ್ಲವೇ ಅಲ್ಲ!

ಮುಂದೊಂದು ದಿನ ಎಸೆಸೆಲ್ಸಿ, ಪಿಯುಸಿ ರ‍್ಯಾಂಕ್‌ಗಳು ರದ್ದಾದವು!

ಈ ರ‍್ಯಾಂಕ್‌ ಪಡೆಯುವ ರೇಸಲ್ಲಿ ಮಕ್ಕಳ ಮೇಲೆ ಒತ್ತಡ ಹೆಚ್ಚಾಗುತ್ತಾ ಇದೆ ಮತ್ತು ಶಾಲೆಗಳು ಅಡ್ಡ ದಾರಿಯನ್ನು ಹಿಡಿಯುತ್ತಾ ಇವೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಎರಡೂ ಬೋರ್ಡ್‌ಗಳು ರ‍್ಯಾಂಕ್‌ ಪದ್ಧತಿ ಕೈಬಿಟ್ಟವು. ಆದರೆ ಶಾಲೆಗಳು ರಾಜ್ಯಕ್ಕೆ ಪ್ರಥಮ, ರಾಜ್ಯಕ್ಕೆ ದ್ವಿತೀಯ, ಜಿಲ್ಲೆಗೆ ಪ್ರಥಮ, ತಾಲೂಕಿಗೆ ಪ್ರಥಮ…….ಹೀಗೆಲ್ಲ ಘೋಷಿಸಿಕೊಳ್ಳುವುದನ್ನು ಬಿಡಲೇ ಇಲ್ಲ! ನಮ್ಮ ಶಾಲೆಗಳಿಗೆ ಅವರ ಮಕ್ಕಳ ಪ್ರತಿಭೆಗಳಿಗಿಂತ ತಮ್ಮ ಶಾಲೆಗಳನ್ನು ಮಾರ್ಕೆಟ್ ಮಾಡೋದೇ ಆದ್ಯತೆ ಆಗಿತ್ತು ಅನ್ನುವುದನ್ನು ಒಪ್ಪಲೇ ಬೇಕು. ಏನಿದ್ದರೂ ರ‍್ಯಾಂಕ್‌ ಪಡೆಯುವುದು ಕೂಡ ಒಂದು ಅನನ್ಯ ಪ್ರತಿಭೆ ಎಂದು ನಾನು ಒಪ್ಪಿಕೊಳ್ಳುತ್ತೇನೆ.

2016ರಲ್ಲಿ ಭದ್ರಾವತಿಯ ರಂಜನ್ ಧೂಳೆಬ್ಬಿಸಿದ!

ಆ ವರ್ಷ ಎಸೆಸೆಲ್ಸಿ ಫಲಿತಾಂಶ ಘೋಷಣೆ ಆದಾಗ ಇಡೀ ರಾಜ್ಯಕ್ಕೇ ಒಂದು ಶಾಕ್ ಕಾದಿತ್ತು! ಭದ್ರಾವತಿಯ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆಗಿದ್ದ ರಂಜನ್ ಎಸ್ಸೆಸೆಲ್ಸಿ ಬೋರ್ಡಿನ ಇತಿಹಾಸದಲ್ಲಿ ಮೊದಲ ಬಾರಿಗೆ 625/625 ಅಂಕ ಪಡೆದಿದ್ದ! ಆಗ ನಾನು ಸ್ಪಂದನ ಟಿವಿ ಸ್ಟುಡಿಯೋದಿಂದ ಅವನ ಜೊತೆಗೆ ಲೈವಲ್ಲಿ ಕಾಲ್ ಮಾಡಿ ಮಾತಾಡಿದ್ದೆ! ಮರುದಿನ ಕರ್ನಾಟಕದ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ರಂಜನ್ ಫೋಟೊ ವಿಜೃಂಭಿಸಿತ್ತು! ಅವನನ್ನು ಮುಖ್ಯಮಂತ್ರಿಗಳು ಬೆಂಗಳೂರಿಗೆ ಕರೆಸಿ ಸನ್ಮಾನ ಮಾಡಿದ್ದು ಆ ಕಾಲಕ್ಕೆ ಬಹಳ ದೊಡ್ಡ ಸುದ್ದಿ! ಸಾಕಷ್ಟು ಕುಹಕಿಗಳು ಅದು ಹೇಗೆ ಸಾಧ್ಯ? ಎಂದು ಪ್ರಶ್ನೆಗಳನ್ನು ಮಾಡಿದ್ದರು.

ಕೋರ್ ವಿಷಯಗಳಲ್ಲಿ ಓಕೆ, ಆದರೆ ಭಾಷೆಗಳಲ್ಲಿ ಹೇಗೆ ಪೂರ್ತಿ ಅಂಕ ಕೊಡುತ್ತಾರೆ? ಎಂದೆಲ್ಲ ಕೇಳಿದಾಗ ಎಸ್ಸೆಸೆಲ್ಸಿ ಬೋರ್ಡ್ ಅವನ ಆರೂ ವಿಷಯಗಳ ಉತ್ತರ ಪತ್ರಿಕೆಗಳನ್ನು ತನ್ನ ಜಾಲತಾಣದಲ್ಲಿ ಪಬ್ಲಿಷ್ ಮಾಡಿತ್ತು! ಅವನ ಉತ್ತರ ಪತ್ರಿಕೆಯಲ್ಲಿ ಒಂದು ಅಂಕ ಕೂಡ ಕಟ್ ಮಾಡುವ ಅವಕಾಶವೇ ಇರಲಿಲ್ಲ! ಅನಿಲ್ ಕುಂಬ್ಳೆ ಹತ್ತಕ್ಕೆ ಹತ್ತು ವಿಕೆಟ್ ಪಡೆದಂತೆ ಇತ್ತು ರಂಜನ್ ಯಶೋಗಾಥೆ!

ಮುಂದೆ ಅದೇ ಬೆಂಚ್ ಮಾರ್ಕ್ ಆಯ್ತು!

ಮುಂದೆ ಎಸೆಸೆಲ್ಸಿ ಬೋರ್ಡ್ ರ‍್ಯಾಂಕ್‌ ಘೋಷಣೆ ಮಾಡಲಿ ಅಥವಾ ಬಿಡಲಿ ಮುಂದಿನ ವರ್ಷಗಳಲ್ಲಿ 625/625 ಅಂಕ ಪಡೆಯುವುದೇ ಒಂದು ಸಂಪ್ರದಾಯ ಆಗಿ ಹೋಯಿತು! ಮುಂದಿನ ವರ್ಷ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅದೇ ಸಾಧನೆ ರಿಪೀಟ್ ಮಾಡಿದರು. 2021ರಲ್ಲಿ 157 ವಿದ್ಯಾರ್ಥಿಗಳು, 2022ರಲ್ಲಿ 145 ವಿದ್ಯಾರ್ಥಿಗಳು ಔಟ್ ಆಫ್ ಔಟ್ ಸ್ಕೋರ್ ಪಡೆದಿದ್ದಾರೆ. ಇದು ಮೊದಲ ಫಲಿತಾಂಶ ಘೋಷಣೆ ಆದಾಗ ಪಡೆದ ಸಂಖ್ಯೆ ಆಗಿದೆ (ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಪಡೆದು ಈ ಸಾಧನೆ ಮಾಡಿದವರ ಸಂಖ್ಯೆ ಅಷ್ಟೇ ಇದೆ!). ಈಗ ನಮ್ಮ ಸುತ್ತಮುತ್ತಲಿನ ಶಾಲೆಯ ಮಕ್ಕಳೂ ಈ ಸಾಧನೆ ಮಾಡುವುದನ್ನು ನೋಡುವಾಗ ಮಕ್ಕಳ ಪ್ರತಿಭೆಗೆ ನಾವು ಸೆಲ್ಯೂಟ್ ಹೊಡೆಯದೆ ಇರಲು ಸಾಧ್ಯವೇ ಇಲ್ಲ!

ಕೊರೊನಾದ ವರ್ಷದಲ್ಲಿ ಸಾವಿರಾರು ಮಂದಿ ಫುಲ್ ಮಾರ್ಕ್ಸ್ ಪಡೆದರು!

ಒಂದು ವರ್ಷ ಕೊರೊನಾ ತೀವ್ರವಾಗಿದ್ದ ಸಂದರ್ಭದಲ್ಲಿ ಎಲ್ಲ ಪ್ರಶ್ನೆಗಳನ್ನು MCQ ಕೊಟ್ಟು ಬೋರ್ಡು ಪ್ರಯೋಗಾತ್ಮಕವಾಗಿ ಪರೀಕ್ಷೆ ಮಾಡಿತು. ಆ ವರ್ಷ ಪರೀಕ್ಷೆಯನ್ನು ಬರೆದ ಎಲ್ಲ ಮಕ್ಕಳೂ (ತಾಂತ್ರಿಕ ಕಾರಣಕ್ಕೆ ಒಬ್ಬನನ್ನು ಬಿಟ್ಟು) ಪಾಸಾದರು! ಅದಕ್ಕಿಂತ ಹೆಚ್ಚಾಗಿ ಆ ವರ್ಷ ಸಾವಿರಾರು ಮಕ್ಕಳು 625/625 ಅಂಕ ಪಡೆದರು ಮತ್ತು ಕೊರೊನಾಕ್ಕೆ ಥ್ಯಾಂಕ್ಸ್ ಹೇಳಿದರು!

ಇಂತಹ ಸಾಧನೆ ಮಾಡಿದ ನೂರಾರು ವಿದ್ಯಾರ್ಥಿಗಳನ್ನು ನಾನು ಟಿವಿಯಲ್ಲಿ ಸಂದರ್ಶನ ಮಾಡಿದ್ದು ಅವರಲ್ಲಿ ಕೆಲವರ ಮನೆಗಳಿಗೂ ಹೋಗಿದ್ದೇನೆ. ಅಂತಹವರ ಕೆಲವು ಯಶೋಗಾಥೆಗಳು ನಿಮ್ಮ ಮುಂದೆ……..
(ಕೆಲವರ ಹೆಸರು ನನಗೆ ಮರೆತುಹೋಗಿದೆ. ಇನ್ನೂ ಕೆಲವರ ಹೆಸರನ್ನು ಉದ್ದೇಶಪೂರ್ವಕ ಬಿಟ್ಟಿದ್ದೇನೆ)

ಎಸ್ಸೆಸ್ಸೆಲ್ಸಿಯ ಯಶೋಗಾಥೆಗಳು..

1) ರಾಯಚೂರಿನ ಕೃಷಿ ಕಾರ್ಮಿಕನ ಮಗಳು 625/625 ಅಂಕಗಳನ್ನು ಪಡೆದಳು. ಆಕೆ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದವಳು!

2) ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ಟ್ರಂಕ್ ಹೊರುವ ಹಮಾಲಿಯ ಮಗ 625/625 ಅಂಕ ಪಡೆದಿದ್ದ. ಅವನೂ ಸರಕಾರಿ ಶಾಲೆಯ ಕನ್ನಡ ಮಾಧ್ಯಮದ ಹುಡುಗ. ಯಾವ ಟ್ಯೂಷನ್ ಕ್ಲಾಸ್ ಕೂಡ ಹೋದವನು ಅಲ್ಲ!

3) ನನ್ನ ಟಿವಿ ಕಾರ್ಯಕ್ರಮಕ್ಕೆ ಬಂದಿದ್ದ ಅತ್ಯುತ್ತಮ ಶ್ರೇಣಿ ಪಡೆದಿದ್ದ ಹುಡುಗಿಯ ಮನೆಯಲ್ಲಿ ಕರೆಂಟ್ ಇರಲಿಲ್ಲ! ಆಕೆ ಕೂಡ ಕನ್ನಡ ಮಾಧ್ಯಮದ ಸರಕಾರಿ ಶಾಲೆಯ ಹುಡುಗಿ!

4) ನಾನು ಭೇಟಿ ಮಾಡಿದ ಶಿರಸಿಯ ಮುಸ್ಲಿಂ ಕುಟುಂಬದ ಹುಡುಗಿ ಕೂಡ 625/625 ಅಂಕ ಪಡೆದಿದ್ದಳು. ಆಕೆಯ ಅಪ್ಪ ಒಬ್ಬ ಸಾಮಾನ್ಯ ರಿಕ್ಷಾ ಚಾಲಕ ಆಗಿದ್ದರು. ಆಕೆ ಸರಕಾರಿ ಶಾಲೆಯ ಹುಡುಗಿ!

5) ಕುಮಟಾದ ಒಬ್ಬ ಟೆಂಪೋ ಚಾಲಕನ ಮಗಳು ಹಠ ಹಿಡಿದು ಓದಿ 625/625 ಅಂಕ ಪಡೆದು ಲೆಜೆಂಡ್ ಆಗಿದ್ದಳು. ಆಕೆ ಕೂಡ ಟ್ಯೂಶನ್ ಕ್ಲಾಸಿಗೆ ಹೋದವಳು ಅಲ್ಲ!

6) ದಕ್ಷಿಣ ಕನ್ನಡದ ಸುಬ್ರಹ್ಮಣ್ಯದ ಸಮೀಪದ ಒಬ್ಬ ಹುಡುಗ ಪ್ರತೀ ದಿನವೂ 4-5 ಕಿಲೋಮೀಟರ್ ಬೈಸಿಕಲ್ ತುಳಿದು ಶಾಲೆಗೆ ಬರುತ್ತಿದ್ದ ಮತ್ತು ಮನೆಯಿಂದ ಟಿಫಿನ್ ಬಾಕ್ಸ್ ತೆಗೆದುಕೊಂಡು ಬಂದು ಮಧ್ಯಾಹ್ನದ ಊಟ ಮಾಡುತ್ತಿದ್ದ! ಆತನು ಕೂಡ 625/625 ಅಂಕ ಪಡೆದು ಸ್ಟಾರ್ ಆಗಿದ್ದ!

7) ಮೂಡಬಿದ್ರೆಯ ಒಬ್ಬ ವಿದ್ಯಾರ್ಥಿ ಔಟ್ ಆಫ್ ಮಾರ್ಕ್ಸ್ ತೆಗೆದುಕೊಂಡಿದ್ದ. ಆತನು ಎಂಟನೇ ತರಗತಿಯಿಂದ ಕೂಡ ಪ್ರತೀ ಪರೀಕ್ಷೆಯಲ್ಲಿ ಒಂದು ಮಾರ್ಕ್ ಕಡಿಮೆ ತೆಗೆದುಕೊಂಡದ್ದೇ ಇಲ್ಲ ಎಂದು ಅವನ ಪ್ರಿನ್ಸಿಪಾಲ್ ನನಗೆ ಹೇಳಿದ್ದರು!

8) ಶಿವಮೊಗ್ಗದ ಒಬ್ಬ ಹುಡುಗ ಪರೀಕ್ಷೆ ಮುಗಿಸಿ ಬಂದವನೇ ತನಗೆ ಫುಲ್ ಮಾರ್ಕ್ ಎಂದು ಘೋಷಣೆ ಮಾಡಿದ್ದ. ಆತನು ಪ್ರತಿಭಾವಂತ ಆಗಿದ್ದರೂ ಆತನ ಮಾತು ಯಾರೂ ನಂಬಲಿಲ್ಲ! ರಿಸಲ್ಟ್ ಹಿಂದಿನ ದಿನವೇ 5 ಕಿಲೋ ಸ್ವೀಟ್ ತಂದು ಇಟ್ಟುಕೊಂಡಿದ್ದನು. ಅವನಿಗೂ ರಿಸಲ್ಟ್ ಬಂದಾಗ 625 ಅಂಕ ಬಂದಿತ್ತು!

9) ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕಳೆದ ವರ್ಷ ರಾಜ್ಯ ಮಟ್ಟದಲ್ಲಿ ಸುದ್ದಿ ಆದನು. ಅದಕ್ಕೆ ಕಾರಣ ಅವನು ಪ್ರತೀ ದಿನವೂ (ಎಸೆಸೆಲ್ಸಿ ವರ್ಷವೂ ಸೇರಿದಂತೆ) ತನ್ನ ಅಪ್ಪನ ಜೊತೆ ಬೋಟಲ್ಲಿ ಹೋಗಿ ಫಿಶಿಂಗ್ ಮಾಡುತ್ತಿದ್ದ! ಬೆಳಿಗ್ಗೆ ಎರಡು ಘಂಟೆ ಮತ್ತು ಸಂಜೆ ಒಂದು ಘಂಟೆ! ಅದೂ ಸರಕಾರಿ ಶಾಲೆಯ ಹಿನ್ನೆಲೆಯ ಹುಡುಗ!

10) ಮತ್ತೊಬ್ಬಳು ನಮ್ಮೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಎಸೆಸೆಲ್ಸಿ ಪರೀಕ್ಷೆಯ ಹಿಂದಿನ ದಿನ ಬೆಂಗಳೂರಿಗೆ ಹೋಗಿ ಒಂದು ಖಾಸಗಿ ಸಂಸ್ಥೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದು ಇಡೀ ರಾತ್ರಿ ಜರ್ನಿ ಮಾಡಿಬಂದು ಪರೀಕ್ಷೆ ಬರೆದಿದ್ದಳು. ಆಕೆ ಪಡೆದ ಅಂಕಗಳು 623/625!

(ಮುಂದುವರಿಯುವುದು)

ಇವುಗಳನ್ನೂ ಓದಿ: ಸರಣಿಯ ಹಿಂದಿನ ಲೇಖನಗಳು

Continue Reading

ಅಂಕಣ

ದಶಮುಖ ಅಂಕಣ: ʻತಿರುತಿರುಗಿಯು ಹೊಸತಾಗಿರಿ ಎನುತಿದೆ ಋತುಗಾನ…ʼ

ಬೇಸಿಗೆಯ ತಾಪವನ್ನೆಲ್ಲಾ ಒಮ್ಮೆ ತಣ್ಣಗೆ ಕೂರಿಸಿ, ಅದರ ಮತ್ತೊಂದು ಮುಖದತ್ತ ದೃಷ್ಟಿ ಹರಿಸಿದರೆ ಕಾಣುವುದು, ವಸಂತನೆಂಬ ಅನಂಗ ಸಖ! ಹೊಸ ಹೊಳಪಿನಿಂದ ನಳನಳಿಸುವುದೇ ಈಗ ಪ್ರಕೃತಿಯ ನಿಯಮ!

VISTARANEWS.COM


on

Edited by

bangalore flowers
Koo

ಈ ಅಂಕಣವನ್ನು ಇಲ್ಲಿ ಕೇಳಿ:

alaka column

ʻಬಂದಿತಿದಿಗೋ ಬೇಸಿಗೆ, ಸಂದ ಸಮಯದ ಕೊರಗ ಕಳೆಯುತ ಮಂದಿಯೆಲ್ಲರ ಲೇಸಿಗೆʼ ಎಂಬ ಬೇಸಿಗೆಯ ತಂಪನ್ನು ವರ್ಣಿಸುವ ಕವಿವಾಣಿಯನ್ನು ಕೇಳಿದವರು, ಈಗಾಗಲೇ ಸೂರ್ಯ ಝಳಪಿಸುತ್ತಿರುವ ತಾಪದ ಮೊನೆಯನ್ನು ತೋರಿಸಿ ಹುಬ್ಬು ಗಂಟಿಕ್ಕಿದರೆ ತಪ್ಪಲ್ಲ. ಬೇಸಿಗೆ ಎನ್ನುತ್ತಿದ್ದಂತೆ ಬಿಸಿಲು, ಬೇಗೆ, ಬವಣೆ, ಬೆವರು, ಬಾಯಾರಿಕೆ, ಬಳಲಿಕೆ, ಬರ ಮುಂತಾದ ʻಬʼರ-ಪೂರವನ್ನೇ ಹರಿಸಬಹುದು. ಆದರೆ ಬೇಸಿಗೆಯ ತಾಪವನ್ನೆಲ್ಲಾ ಒಮ್ಮೆ ತಣ್ಣಗೆ ಕೂರಿಸಿ, ಅದರ ಮತ್ತೊಂದು ಮುಖದತ್ತ ದೃಷ್ಟಿ ಹರಿಸಿದರೆ ಕಾಣುವುದು, ವಸಂತನೆಂಬ ಅನಂಗ ಸಖ! ಚೈತ್ರಮಾಸ, ಮಧುಮಾಸ, ಶೃಂಗಾರಮಾಸ ಮುಂತಾದ ಹೆಸರುಗಳೆಲ್ಲಾ ಈ ಚತುರ ವಸಂತನ ಸಹವರ್ತಿಗಳದ್ದೇ. ಅರವಿಂದ, ಅಶೋಕ, ಚೂತ, ನವಮಲ್ಲಿಕೆ ಮತ್ತು ನೀಲೋತ್ಪಲಗಳೆಂಬ ಅನಂಗನ ಬಾಣ ಪಂಚಕಗಳು ಪರಿಣಾಮ ಬೀರುವುದಕ್ಕೆ ವಸಂತ ಆಗಮಿಸಲೇ ಬೇಕು- ಎಂಬಲ್ಲಿಗೆ ಪ್ರಕೃತಿಯ ಮೇಲೆ ಆತನ ಪ್ರಭಾವವೇನು ಎಂಬುದು ಸ್ಫುಟವಾಗುತ್ತದೆ.

ಈ ಬಾರಿ ಎಂದಿನಂತೆ ಇಲ್ಲದಿದ್ದರೂ, ಸಾಮಾನ್ಯವಾಗಿ ವಸಂತವೆಂದರೆ ಹಿತವಾದ ಕಾಲ. ಚಳಿಯ ಆರ್ಭಟವೆಲ್ಲಾ ಮುಗಿದಿದೆ, ಆದರೆ ಬಿಸಲಿನ ಪ್ರಕೋಪವಿನ್ನೂ ಜೋರಾಗಿಲ್ಲ ಎಂಬಂಥ ದಿನಗಳು. ಹಾಗೆಂದೇ ಈಗ ಸುಲಿಯುವ ತುಟಿಗಳು, ಒಡೆಯುವ ಹಿಮ್ಮಡಿಗಳು, ಬಿರಿಯುವ ಕೈಕಾಲುಗಳೆಲ್ಲಾ ಮಾರ್ಪಾಡಾಗಿ, ಪ್ರಕೃತಿಯ ನಿಯಮದಂತೆ ಹೊಸ ಹೊಳಪಿನಿಂದ ನಳನಳಿಸುತ್ತವೆ. ಉದುರಿ ಬೋಳಾಗಿ ಬೋಳುಗಳಚಿ ನಿಂತಿದ್ದ ಭೂಮಿಯೂ ಹಸಿರುಡುವ ಹೊತ್ತು. ಹಸಿರೆಂದರೇನು ಒಂದೇ ಬಣ್ಣವೇ? ಎಳೆ ಹಸಿರು, ತಿಳಿ ಹಸಿರು, ಗಿಳಿ ಹಸಿರು, ಸುಳಿ ಹಸಿರು, ಪಾಚಿ ಹಸಿರು, ಪಚ್ಚೆ ಹಸಿರು, ಅಚ್ಚ ಹಸಿರು, ಹಳದಿ ಮಿಶ್ರಿತ ನಿಂಬೆ ಹಸಿರು, ನೀಲಿ ಮಿಶ್ರಿತ ವೈಢೂರ್ಯದ ಹಸಿರು- ಒಂದೇ ವರ್ಣದಲ್ಲಿ ಎಷ್ಟೊಂದು ಛಾಯೆಗಳು! ಈ ಪರಿಯ ಹಸಿರಿನ ನಡುವೆ ನಾನಾ ವರ್ಣ ಮತ್ತು ವಿನ್ಯಾಸಗಳ ಹೂ-ಮಿಡಿಗಳ ವೈಭೋಗ. ಶಿಶಿರ ಸುರಿಯುವ ಕಸಿವಿಸಿಯನ್ನು ಸಂಪೂರ್ಣವಾಗಿ ತೊಡೆದು, ಎಲ್ಲೆಡೆ ಆಹ್ಲಾದ, ಉತ್ಸಾಹ, ಉಲ್ಲಾಸಗಳನ್ನು ಚೆಲ್ಲುವುದರಲ್ಲಿ ನಮ್ಮ ವಸಂತ ಬಲು ಉದಾರಿ.

ಚೈತ್ರ ಮಾಸದ ಮೊದಲ ದಿನವಾದ ಯುಗಾದಿ ಬರುವಷ್ಟರಲ್ಲಿ, ವ್ಯಾಯಾಮದ ಉತ್ಸಾಹಿಗಳಿಗೆ ಬೆಳಗ್ಗೆ ಏಳಲಾರದೆ ಮುದುರಿ ಮಲಗುವ ತಾಪತ್ರಯವಿಲ್ಲ. ಹಗಲು ನಿಧಾನವಾಗಿ ದೀರ್ಘವಾಗುವತ್ತ ಸಾಗುವುದರಿಂದ, ಮುಂಜಾನೆ ನಿರುಮ್ಮಳವಾಗಿ ಎದ್ದು ಬೆವರು ಹರಿಸಬಹುದು. (ವೈಶಾಖ ಬರುವಷ್ಟರಲ್ಲಿ ಶಾಖ ಹೆಚ್ಚಿ, ಬೆವರು ಹರಿಸುವ ಕಷ್ಟವೂ ಇಲ್ಲ, ತಾನಾಗಿ ಹರಿಯುತ್ತಿರುತ್ತದೆ!) ಚಾರಣ, ಪ್ರಯಾಣ ಇತ್ಯಾದಿಗಳಿಗೆ ಹೇಳಿ ಮಾಡಿಸಿದ ಕಾಲವಿದು. ಎಷ್ಟೋ ದೇಶಗಳಲ್ಲಿ ಸ್ಪ್ರಿಂಗ್‌ ಡ್ರೈವ್‌ ಅತ್ಯಂತ ಜನಪ್ರಿಯ. ಕಾರಣ, ಎಷ್ಟೋ ದೂರದವರೆಗೆ ಸಾಲಾಗಿ ಹೂ ಬಿಟ್ಟು ನಿಂತ ಮರಗಳ ನಡುವೆ ಜುಮ್ಮನೆ ಡ್ರೈವ್‌ ಮಾಡುವ ಸುಖ- ಸುಮ್ಮನೆ ಹೇಳುವುದಲ್ಲ, ಮಾಡಿಯೇ ಅರಿಯಬೇಕು. ಯುರೋಪ್‌ನ ಹಲವಾರು ದೇಶಗಳಿಗೆ ಹೂ ಬಿಡುವ ಕಾಲವನ್ನು ಕಣ್ತುಂಬಿಕೊಳ್ಳುವುದಕ್ಕಾಗಿಯೇ ಪ್ರಯಾಣಿಸುವವರ ಸಂಖ್ಯೆ ಲೆಕ್ಕವಿಲ್ಲದಷ್ಟು. ಫ್ರಾನ್ಸ್‌ ದೇಶದ ಘಮಘಮಿಸುವ ಲಾವೆಂಡರ್‌ ಹೂವುಗಳು ಮತ್ತು ಸೂರ್ಯಕಾಂತಿಗಳು, ಜರ್ಮನಿಯ ಚೆರ್ರಿ ಹೂಗಳ ಚಪ್ಪರ, ಇಟಲಿಯ ಮನ ಸೆಳೆಯುವ ಆರ್ಕಿಡ್‌ಗಳು, ಹಾಲೆಂಡ್‌ನ ಟುಲಿಪ್‌ಗಳ ವರ್ಣಲೋಕ, ಬ್ರಿಟನ್‌ನ ಬ್ಲೂಬೆಲ್‌ಗಳು, ಸ್ಪೇನ್‌ನಲ್ಲಿ ಹಿಮ ಹೊತ್ತಂತೆ ಕಾಣುವ ಬಾದಾಮಿ ಮರಗಳ ಬಿಳಿ ಹೂವುಗಳು- ಹೇಳುತ್ತಾ ಹೋದಷ್ಟಕ್ಕೂ ಮುಗಿಯುವುದೇ ಇಲ್ಲ ಹೂವುಗಳ ವೈಭವ.

bangalore flowers

ಯಾವುದೋ ದೇಶಗಳ ಮಾತೇಕೆ? ಅಗ್ದಿ ನಮ್ಮ ಕನ್ನಡದ ಕವಿ ಹರಿಹರನ ಪುಷ್ಟರಗಳೆಯಲ್ಲಿ ಪರಿಮಳಿಸುವ ಹೂವುಗಳೇನು ಕಡಿಮೆಯೇ? ಬೆಳ್ಳಂಬೆಳಗ್ಗೆ ಶಿವನನ್ನು ಪೂಜಿಸಲು ಹೊರಡುವ ಭಕ್ತನೊಬ್ಬ, ಹೂದೋಟಕ್ಕೆ ಹೋಗಿ, ಹೂವುಗಳನ್ನು ಕೊಯ್ದು, ಕಟ್ಟಿ ದೇವರಿಗೆ ಅರ್ಚಿಸುವ ವರ್ಣನೆಯನ್ನು ಹೊತ್ತ ರಗಳೆಯಿದು. ಇಡೀ ಕಾವ್ಯದುದ್ದಕ್ಕೂ ಶಿವನ ಭಕ್ತಿಯೇ ಪ್ರಧಾನವಾಗಿದ್ದರೂ, ಇಡೀ ಪ್ರಕ್ರಿಯೆಯ ನಿರೂಪಣೆ ಸುಂದರವಾಗಿದೆ, ಪುಷ್ಪಮಯವಾಗಿದೆ. ಶಿವನಿಗೆ ಸೇವಂತಿಗೆಯ ಅರಲ ಪನ್ನೀರಿನಿಂದ ಮುಖ ತೊಳೆಸುವ ಆ ಭಕ್ತ, ಪರಾಗದಿಂದ ವಿಭೂತಿಯ ತಿಲಕವನ್ನಿಕ್ಕಿ, ಜಟೆಯಲ್ಲಿರುವ ಸೋಮ ಮತ್ತು ಸುರನದಿಯರಿಗೆ ತೊಂದರೆಯಾಗದಂತೆ ಕೇತಕಿ, ಇರುವಂತಿ ಮತ್ತು ಸೇವಂತಿಯನ್ನು ಮುಡಿಸಿ, ಮರುಗ ಮತ್ತು ಸಂಪಿಗೆಗಳನ್ನೇ ಗಜ ಹಾಗೂ ಹುಲಿ ಚರ್ಮವಾಗಿ ಉಡಿಸುತ್ತಾನೆ ಎಂಬಂತೆ ನಾನಾ ರೀತಿಯ ವಿವರಗಳು ಶಿವ-ಭಕ್ತ-ಹೂವುಗಳ ಸುತ್ತ ಇಡೀ ಕಾವ್ಯದಲ್ಲಿ ಹರಡಿಕೊಂಡಿವೆ.

ವಸಂತ ಎಂದರೆ ಸಂತಸ ಮಾತ್ರವೇ? ಈ ಹೂವು, ಹಣ್ಣು, ಹಸಿರು, ಚಿಗುರು ಮುಂತಾದವೆಲ್ಲ ಯಾಕಿಷ್ಟು ಮುಖ್ಯವೆನಿಸುತ್ತವೆ ನಮಗೆ? ಏನೆಲ್ಲಾ ಭಾವಗಳು ಬೆರೆತಿವೆ ಇದೊಂದು ಋತುವಿನೊಂದಿಗೆ? ಏಳಿಗೆ, ಸಮೃದ್ಧಿ, ನಿರೀಕ್ಷೆ, ಭರವಸೆ, ಹರುಷ, ಹೊಸವರುಷ, ಪ್ರೀತಿ, ಒಲವು, ಶೃಂಗಾರ, ಝೇಂಕಾರ, ಕವಿಸಮಯ- ಇನ್ನೂ ಎಷ್ಟೊಂದು ಹೇಳುವುದಕ್ಕೆ ಇದೆಯಲ್ಲ. ಕೆಲವರಿಗೆ ಕೋಗಿಲೆ, ದುಂಬಿಗಳು ನೆನಪಾದರೆ, ಹಲವರು ಮಾವಿನ ಹಣ್ಣನ್ನೇ ಧೇನಿಸಬಹುದು. ಈ ವಿಷಯಗಳಲ್ಲಿ ಮೊದಲು ನೆನಪಾಗುವುದು ನಮ್ಮ ಪಂಪ. ʻನೀನೇ ಭುವನಕ್ಕಾರಾಧ್ಯನೈ ಚೂತರಾಜ, ತರುಗಳ್‌ ನಿನ್ನಂತೆ ಚೆನ್ನಂಗಳೇʼ ಎಂದು ಮಾವಿನ ಮರವನ್ನು ಕೊಂಡಾಡುತ್ತಾ, ಬನವಾಸಿಯಲ್ಲಿ ಮರಿದುಂಬಿಯಾಗಿ, ಕೋಗಿಲೆಯಾಗಿ ಹುಟ್ಟಲು ಹಂಬಲಿಸುತ್ತಾನೆ. ಇಂಥ ಘನಕವಿಯಿಂದ ಹಿಡಿದು, ʻಮಧುಮಾಸ ಬಂದಿಹುದು/ ಮಧುಕರಿಗಳೇ ಬನ್ನಿʼ ಎನ್ನುವ ಕುವೆಂಪು ಅವರು, ʻಬಾ ಭೃಂಗವೇ ಬಾ, ವಿರಾಗಿಯಂದದಿ ಭ್ರಮಿಸುವೆ ನೀನೇಕೆ?/ ಕಂಪಿನ ಕರೆಯಿದು ಸರಾಗವಾಗಿರೆ ಬೇರೆಯ ಕರೆ ಬೇಕೆ?ʼ ಎಂಬ ಬೇಂದ್ರೆಯವರು, ʻಇಮ್ಮಾವಿನ ಮಡಿಲಲ್ಲಿದೆ ದುಂಬಿಯ ಝೇಂಕಾರ/ ತರುಲತೆಗಳ ಮೈಗೊಪ್ಪಿದೆ ಕೆಂಪಿನಲಂಕಾರʼ ಎನ್ನುವ ಕೆ. ಎಸ್.‌ ನರಸಿಂಹಸ್ವಾಮಿಗಳರವರೆಗೆ ಮಾವು, ದುಂಬಿ, ಕೋಗಿಲೆಗಳ ಬಗ್ಗೆ ಸೃಷ್ಟಿಯಾದ ಕವಿಸಮಯಗಳಿಗೆ ಲೆಕ್ಕವೇ ಇಲ್ಲ.

bangalore flowers

ನಿಸರ್ಗದೊಂದಿಗೆ ನಿಕಟವಾಗಿ ಬೆರೆತು ಬದುಕುತ್ತಿದ್ದ ಹಿಂದಿನವರ ರೀತಿ-ನೀತಿಗಳನ್ನು ಹಳೆಗನ್ನಡ ಕಾವ್ಯ ಪರಂಪರೆಯಲ್ಲೂ ಕಾಣಬಹುದು. ಸೀತೆಯನ್ನು ಅರಸುತ್ತಾ ಹೋಗುವ ರಾಮ, ʻತಳಿರೇ ತಾಮರೆಯೇ ಮೃಗಾಳಿ ಸಂಕುಲಮೇ ಮತ್ತ ಕೋಕಿಲಮೇ ಕಂಡಿರೇ ಪಲ್ಲವಾಧರೆಯʼ ಎಂದು ಸುತ್ತಲಿನ ಪ್ರಕೃತಿಯನ್ನು ಕೇಳುತ್ತಾ ಹೋಗುವ ವರ್ಣನೆ ನಾಗಚಂದ್ರನ ರಾಮಚಂದ್ರಚರಿತ ಪುರಾಣದಲ್ಲಿದೆ. ʻಕಂಡಿರೇ ಚೆನ್ನಮಲ್ಲಿಕಾರ್ಜುನನʼ ಎನ್ನುವ ಅಕ್ಕನೂ ಪ್ರಕೃತಿಯೊಂದಿಗೆ ಸಂವಾದಿಸುವುದನ್ನು ವಚನಗಳಲ್ಲಿ ಕಾಣಬಹುದು. ನಾಡೊಂದು ಸುಭಿಕ್ಷವಾಗುವುದು ಹೇಗೆ ಎನ್ನುವುದನ್ನು, ʻಫಲವಿಲ್ಲದ ಮಾವು ಮಾವಿಲ್ಲದ ಮಲ್ಲಿಗೆ ಮಲ್ಲಿಕಾಲತಿಕೆ ಇಲ್ಲದ ವನ ವನವಿಲ್ಲದ ಭೋಗಿಗಳಿಲ್ಲ ದೇಶದೆಡೆಯೊಳುʼ ಎಂದು ವರ್ಣಿಸುತ್ತಾನೆ ನಂಜುಂಡ ಕವಿ.

ಇದನ್ನೂ ಓದಿ: ದಶಮುಖ ಅಂಕಣ: ಏನು ಹೇಳುತ್ತಿವೆ ಈ ಪ್ರತಿಮೆಗಳು?

ನಿಸರ್ಗದೊಂದಿಗಿನ ಅನುಸಂಧಾನ ಹೀಗಾದರೆ, ವಸಂತನ ಬಗ್ಗೆ ಹರಿದು ಬಂದ ಕವಿಸಾಲುಗಳಿಗೆ ತುದಿ-ಮೊದಲು ಉಂಟೇ? ʻಪಸರಿಸಿತು ಮಧುಮಾಸ ತಾವರೆ/ ಎಸಳ ದೋಣಿಯ ಮೇಲೆ ಹಾಯ್ದವು/ ಕುಸುಮ ರಸದ ಉಬ್ಬರ ತೆರೆಯನು ಕೂಡ ದುಂಬಿಗಳುʼ ಎಂದು ರಸವನ್ನೇ ಹರಿಸುತ್ತಾನೆ ರೂಪಕಗಳ ರಾಜ ಕುಮಾರವ್ಯಾಸ. ಶೃಂಗಾರ ರಸವೆಂಬುದು ವಸಂತನೊಂದಿಗೆ ಸ್ಥಾಯಿ ಎನ್ನುವಷ್ಟು ನಿಕಟವಾದ್ದರಿಂದ, ʻಲಲಿತ ಲವಂಗ ಲತಾ ಪರಿಶೀಲನ ಕೋಮಲ ಮಲಯ ಸಮೀರೆ/ ಮಧುಕರ ನಿಕರ ಕರಂಬಿತ ಕೋಕಿಲ ಕೂಜಿತ ಕುಂಜ ಕುಟೀರೆʼ (ಸ್ಥೂಲವಾಗಿ ಹೇಳುವುದಾದರೆ, ಪ್ರಕೃತಿಯಲ್ಲಿ ಅರಳಿ ನಿಂತ ಹೂಗಿಡ ಬಳ್ಳಿಗಳ ಕುಸುಮಗಳ ಸುಗಂಧವನ್ನು ಕೋಮಲವಾದ ಮರುತ ಹೊತ್ತು ತರುತ್ತಿದ್ದಾನೆ. ಕುಟೀರದ ಸುತ್ತೆಲ್ಲ ದುಂಬಿಗಳು ಝೇಂಕರಿಸುತ್ತಿವೆ) ಎನ್ನುವ ಜಯದೇವ ಕವಿಯ ವರ್ಣನೆಯಿಂದ, ಕೃಷ್ಣ-ಗೋಪಿಕೆಯರ ಇನ್ನೊಂದು ಲೋಕವೇ ತೆರೆದುಕೊಳ್ಳುತ್ತದೆ. ಹೊಸಗನ್ನಡದ ಹಾದಿಗಳೂ ವಸಂತನಿಂದ ಸಿಂಗಾರಗೊಂಡಂಥವೇ. ಬಿಎಂಶ್ರೀ ಅವರ ʻವಸಂತ ಬಂದ, ಋತುಗಳ ರಾಜ ತಾ ಬಂದʼ ಎನ್ನುವ ಸಾಲುಗಳಿಂದ ಮೊದಲ್ಗೊಂಡರೆ, ʻಗಿಡದಿಂದುದುರುವ ಎಲೆಗಳಿಗೂ ಮುದ, ಚಿಗುರುವಾಗಲೂ ಒಂದೇ ಹದ/ ನೆಲದ ಒಡಲಿನೊಳಗೇನು ನಡೆವುದೋ, ಎಲ್ಲಿ ಕುಳಿತಿಹನೋ ಕಲಾವಿದ!ʼ ಎಂಬ ಅಚ್ಚರಿ ಚನ್ನವೀರ ಕಣವಿಯವರದ್ದಾದರೆ, ʻಋತು ವಸಂತ ಬಂದನಿದೋ, ಉಲ್ಲಾಸವ ತಂದನಿದೋ/ ಬತ್ತಿದೆದೆಗೆ ಭರವಸೆಗಳ ಹೊಸ ಬಾವುಟವೇರಿಸಿ/ ಹಳೆಗಾಡಿಗೆ ಹೊಸ ಕುದುರೆಯ ಹೊಸಗಾಲಿಯ ಜೋಡಿಸಿʼ ಎಂದು ಸಂಭ್ರಮ ಪಲ್ಲವಿಸುವ ಬಗೆಯನ್ನು ಜಿ.ಎಸ್.ಶಿವರುದ್ರಪ್ಪನವರು ವರ್ಣಿಸುತ್ತಾರೆ. ಇದಿಷ್ಟೇ ಅಲ್ಲ, ಕುವೆಂಪು, ಬೇಂದ್ರೆ, ಪುತಿನ, ಅಡಿಗರು- ಹೀಗೆ ವಸಂತನ ಸೌಂದರ್ಯಕ್ಕೆ ಸೋಲದ ಕವಿಗಳೇ ಇಲ್ಲ.

ಇಷ್ಟೆಲ್ಲಾ ಬೆಡಗಿನೊಂದಿಗೆ ಇದೀಗ ಬಂದಿರುವ ವಸಂತನೇನೂ ನಿಲ್ಲುವವನಲ್ಲ, ಉಳಿದೆಲ್ಲರಂತೆಯೇ ಅವನೂ ಋತುಚಕ್ರದೊಂದಿಗೆ ಉರುಳುವವನೇ. ಇಂದು ಚೆಲುವಾಗಿ ಹಬ್ಬಿನಿಂತ ವಲ್ಲರಿ ಮುಂದೊಮ್ಮೆ ಎಲೆ ಉದುರಿಸಲೇಬೇಕು, ಒಣಗಲೇಬೇಕು, ಮತ್ತೆ ಚಿಗುರಲೇಬೇಕು. ಹಳತೆಲ್ಲ ಮಾಗಿ, ಹೋಗಿ, ಹೊಸದಕ್ಕೆ ಹಾದಿ ಬಿಡುವ ಈ ನೈಸರ್ಗಿಕ ಕ್ರಿಯೆಯನ್ನು ಸಹಜವಾಗಿ ಒಪ್ಪಿಕೊಂಡವರು ಮಾತ್ರವೇ ಕಾಲಪ್ರವಾಹದಲ್ಲಿ ದಡ ಸೇರಲು ಸಾಧ್ಯ. ಹಾಗಾಗಿ ಕಾಲಕ್ಕೆ ತಕ್ಕಂತೆ ಮಾಗಲಿ, ಸಾಗಲಿ ನಮ್ಮೆಲ್ಲರ ಜೀವನಚಕ್ರ.

ಇದನ್ನೂ ಓದಿ: ದಶಮುಖ ಅಂಕಣ: ವೈಜ್ಞಾನಿಕತೆ ಮತ್ತು ಭ್ರಮರ-ಕೀಟ ನ್ಯಾಯ!

Continue Reading

ಅಂಕಣ

ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತಿಮ ತಯಾರಿ ಭಾಗ-4; ಗಣಿತದ ಕುತೂಹಲಕಾರಿ ಅಪ್ಲಿಕೇಶನ್ ಪ್ರಶ್ನೆಗಳು

ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧವಾಗುತ್ತಿರುವ ಮಕ್ಕಳಿಗೆ ಅಂತಿಯ ತಯಾರಿಗೆ ಅನುಕೂಲವಾಗಲೆಂದು, ಪಾಸ್‌ ಆಗಲು ಕೆಲವು ಸೂತ್ರಗಳನ್ನು ಇಲ್ಲಿ ಕೊಡಲಾಗಿದೆ. ಇಂದು ಗಣಿತದ ಕುತೂಹಲಕಾರಿ ಅನ್ವಯಿಕ ಪ್ರಶ್ನೆಗಳು ಇಲ್ಲಿವೆ.

VISTARANEWS.COM


on

Edited by

Raja Marga Maths
Koo

ಪ್ರೀತಿಯ ವಿದ್ಯಾರ್ಥಿಗಳೇ,
ನಿನ್ನೆಯ ಸಂಚಿಕೆಯಲ್ಲಿ ವಿಜ್ಞಾನ ಪ್ರಶ್ನೆಪತ್ರಿಕೆಯ ಅಪ್ಲಿಕೇಶನ್ ಪ್ರಶ್ನೆಗಳ ಬಗ್ಗೆ ಮಾಹಿತಿಯನ್ನು ಕೊಟ್ಟಿದ್ದೆ. ಇಂದು ಅಷ್ಟೇ ಆಕರ್ಷಕವಾದ ಗಣಿತದ ಅಪ್ಲಿಕೇಶನ್ ಪ್ರಶ್ನೆಗಳನ್ನು ತಮ್ಮ ಮುಂದೆ ಇಡುತ್ತಿದ್ದೇನೆ.
ಗಣಿತದಲ್ಲಿಯೂ ವಿಜ್ಞಾನದ ಹಾಗೆ ನಾಲ್ಕು ರೀತಿಯ ಪ್ರಶ್ನೆಗಳು ಇದ್ದು 12-14 ಅಂಕದ ಪ್ರಶ್ನೆಗಳು ಮಾತ್ರ ಅನ್ವಯಿಕ ಪ್ರಶ್ನೆಗಳು ಆಗಿರುತ್ತವೆ. ಅಂದರೆ ಪಠ್ಯಪುಸ್ತಕದ ಜ್ಞಾನವನ್ನು ನಿಮ್ಮ ಜೀವನಕ್ಕೆ ಅನ್ವಯ ಮಾಡಿ ಕೇಳಿದ ಪ್ರಶ್ನೆಗಳು ಇವು ಆಗಿರುತ್ತವೆ.

ವಿಜ್ಞಾನದಲ್ಲಿ ಯಾವ ಪಾಠದಿಂದ ಅನ್ವಯಿಕ ಪ್ರಶ್ನೆಗಳು ಬರಬಹುದು ಎಂದು ಸ್ಪಷ್ಟವಾಗಿ ಹೇಳಲಾಗದು. ಆದರೆ, ಗಣಿತದಲ್ಲಿ ಆ ಸಮಸ್ಯೆ ಇಲ್ಲ. ಇದೇ ಪಾಠ ಎಂದು ಖಚಿತವಾಗಿ ಹೇಳಬಹುದು. ಪ್ರತೀ ವರ್ಷವೂ ಕೇಳುವ ಅನ್ವಯ ಪ್ರಶ್ನೆಗಳು ಬ್ರಾಂಡ್ ನ್ಯೂ ಆದ ಕಾರಣ ನೀವು ಮಾನಸಿಕವಾಗಿ ಪ್ರಿಪೇರ್ ಆಗಬೇಕು. ಆದರೆ, ಈ ಪ್ರಶ್ನೆಗಳು ಕಠಿಣ ಇರುವುದಿಲ್ಲ ಎಂದು ನಾನು ಖಂಡಿತವಾಗಿ ಹೇಳಬಲ್ಲೆ.

1. ಸಮಾಂತರ ಶ್ರೇಡಿ (Arithmatic Progression)

ಈ ಪಾಠದಿಂದ ನಾಲ್ಕು ಅಂಕಗಳ ಒಂದು ಅಪ್ಲಿಕೇಶನ್ ಪ್ರಶ್ನೆಯು ಪರೀಕ್ಷೆಗೆ ಬರುತ್ತದೆ ಮತ್ತು ಅದಕ್ಕೆ ಚಾಯ್ಸ್ ಕೂಡ ಇರುವ ಸಾಧ್ಯತೆ ಹೆಚ್ಚಿದೆ. ಕೆಲವು ಉದಾಹರಣೆ ನೋಡೋಣ.

1) ಸಮಾಂತರ ಶ್ರೇಡಿಯ ಹತ್ತನೇ ಮತ್ತು ಇಪ್ಪತ್ತನೇ ಪದಗಳು 22 ಮತ್ತು 42 ಇವೆ. ಇಪ್ಪತ್ತೈದನೇ ಪದ ಕಂಡು ಹಿಡಿಯಿರಿ.

2) ಸಮಾಂತರ ಶ್ರೇಢಿಯ ಮೂರು ಅನುಕ್ರಮ ಪದಗಳ ಮೊತ್ತ 15. ಅವುಗಳ ವರ್ಗಗಳ ಮೊತ್ತ 83. ಆ ಸಂಖ್ಯೆಗಳನ್ನು ಕಂಡು ಹಿಡಿಯಿರಿ.

3) 200ರಿಂದ 300ರ ವರೆಗಿನ ಮೂರರ ಅಪವರ್ತ್ಯಗಳ ಮೊತ್ತ ಕಂಡು ಹಿಡಿಯಿರಿ.

4) 50 ಪದಗಳಿರುವ ಒಂದು ಸಮಾಂತರ ಶ್ರೇಡಿಯ ಮೊತ್ತ 10 ಪದಗಳ ಮೊತ್ತ 210. ಕೊನೆಯ 15 ಪದಗಳ ಮೊತ್ತ 2565. ಹಾಗಿದ್ದರೆ ಸಮಾಂತರ ಶ್ರೇಡಿಯನ್ನು ಬರೆಯಿರಿ.

5) ಸಮಾಂತರ ಶ್ರೇಡಿಯ ನಾಲ್ಕು ಅನುಕ್ರಮ ಪದಗಳ ಮೊತ್ತ 32. ಮೊದಲ ಮತ್ತು ಕೊನೆಯ ಪದಗಳ ಗುಣಲಬ್ಧ ಮತ್ತು ಮಧ್ಯದ ಎರಡು ಪದಗಳ ಗುಣಲಬ್ಧಗಳ ಅನುಪಾತವು 7: 15 ಆಗಿದೆ. ಆ ಸಂಖ್ಯೆಗಳನ್ನು ಕಂಡುಹಿಡಿಯಿರಿ.

2. ವರ್ಗ ಸಮೀಕರಣ (Quadratic Equations)

ಈ ಪಾಠದಿಂದ ಮೂರು ಅಂಕಗಳ ಒಂದು ಅನ್ವಯ ಪ್ರಶ್ನೆಯು ಪರೀಕ್ಷೆಗೆ ಬರುತ್ತಿದ್ದು ಅದಕ್ಕೆ ಕೂಡ ಚಾಯ್ಸ್ ಇರುವ ಸಾಧ್ಯತೆ ಇರುತ್ತದೆ. ಕೆಲವು ಉದಾಹರಣೆ ಇಲ್ಲಿವೆ.

1) ಲಂಬಕೋನದ ವಿಕರ್ಣವು 13 ಸೆಂ.ಮೀ. ಇರುತ್ತದೆ. ಪಾದವು ಎತ್ತರಕ್ಕಿಂತ ಏಳು ಸೆಂ.ಮೀ. ಹೆಚ್ಚು ಉದ್ದ ಇರುತ್ತದೆ. ಪಾದ ಮತ್ತು ಎತ್ತರಗಳನ್ನು ಕಂಡು ಹಿಡಿಯಿರಿ.

2) ಒಂದು ಶಾಲೆಯಲ್ಲಿ ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ 3600 ರೂಪಾಯಿಗಳನ್ನು ಸಮನಾಗಿ ಹಂಚಲಾಯಿತು. ಅದರಲ್ಲಿ ನಾಲ್ಕು ವಿದ್ಯಾರ್ಥಿಗಳು ಕಡಿಮೆ ಬಂದ ಕಾರಣ ಉಳಿದವರಿಗೆ 10 ರೂ. ಹೆಚ್ಚು ದೊರೆಯಿತು. ಹಾಗಾದರೆ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು?

3) ಎರಡು ಸಂಖ್ಯೆಗಳ ಮೊತ್ತ 18. ಅವುಗಳ ವರ್ಗಗಳ ಮೊತ್ತ 290. ಆ ಸಂಖ್ಯೆ ಕಂಡುಹಿಡಿಯಿರಿ.

4) ಒಂದು ಆಯತದ ಸುತ್ತಳತೆ 54 ಸೆಂ.ಮೀ. ಅದರ ವಿಸ್ತೀರ್ಣವು 180 ಚದರ ಸೆಂ.ಮೀ. ಇದೆ. ಅದರ ಉದ್ದ ಅಗಲ ಕಂಡು ಹಿಡಿಯಿರಿ.

5.) ಬೆಂಗಳೂರಿನಿಂದ ಒಂದು ನಗರಕ್ಕೆ 1200 ಕಿಮೀ ದೂರ ಇದೆ. ಒಂದು ಪ್ಯಾಸೆಂಜರ್ ರೈಲಿನ ಸರಾಸರಿ ವೇಗಕ್ಕಿಂತ ಎಕ್ಸ್‌ಪ್ರೆಸ್ ರೈಲಿನ ಸರಾಸರಿ ವೇಗವು 20ಕಿ.ಮೀ. / ಗಂಟೆ ಹೆಚ್ಚಿದೆ. ಎಕ್ಸ್‌ಪ್ರೆಸ್ ರೈಲು ಪ್ಯಾಸೆಂಜರ್ ರೈಲಿಗಿಂತ ಎರಡು ಗಂಟೆ ಕಡಿಮೆ ಸಮಯದಲ್ಲಿ ಆ ನಗರವನ್ನು ತಲುಪಿದರೆ ಎರಡೂ ರೈಲುಗಳ ಸರಾಸರಿ ವೇಗ ಕಂಡುಹಿಡಿಯಿರಿ.

6.) ಮೂರು ಕ್ರಮಾನುಗತ ಸಂಖ್ಯೆಗಳ ವರ್ಗಗಳ ಮೊತ್ತವು 50. ಆದರೆ ಆ ಸಂಖ್ಯೆಗಳನ್ನು ಕಂಡು ಹಿಡಿಯಿರಿ.

3. ತ್ರಿಕೋನ ಮಿತಿ (Trigonometry)

ಈ ಪಾಠದಿಂದ ಮೂರು ಅಥವಾ ನಾಲ್ಕು ಅಂಕಗಳ ಒಂದು ಅನ್ವಯ ಪ್ರಶ್ನೆಯು ಪ್ರತೀ ವರ್ಷವೂ ಪರೀಕ್ಷೆಗೆ ಕೇಳಲ್ಪಡುತ್ತದೆ. ಆ ಪ್ರಶ್ನೆಗಳು ಉನ್ನತ ಕೋನ ಮತ್ತು ಅವನತ ಕೋನ ಆಧಾರಿತ ಆಗಿರುತ್ತವೆ. ಇಲ್ಲಿವೆ ಕೆಲವು ಉದಾಹರಣೆಗಳು. (ಆಕೃತಿಯನ್ನು ಅವರೇ ಕೊಡಬಹುದು ಅಥವಾ ಕೊಡದಿರಬಹುದು)

1) 100 ಮೀಟರ್ ಎತ್ತರವಿರುವ ದೀಪಸ್ತಂಭದ ಬುಡದಿಂದ ಸ್ವಲ್ಪ ದೂರದ ಒಂದು ಬಿಂದುವಿನಿಂದ ಆ ದೀಪಸ್ತಂಭದ ತುದಿಯನ್ನು ನೋಡಿದಾಗ ಉನ್ನತ ಕೋನವು 30 ಡಿಗ್ರಿ ಆಗಿರುತ್ತದೆ. ಅವನು ಸ್ವಲ್ಪ ದೂರ ದೀಪಸ್ತಂಭದ ಕಡೆಗೆ ನಡೆಯುತ್ತ ಇನ್ನೊಂದು ಬಿಂದು ತಲುಪುತ್ತಾನೆ. ಅಲ್ಲಿಂದ ದೀಪಸ್ತಂಭದ ತುದಿಯನ್ನು ನೋಡಿದಾಗ ಉನ್ನತ ಕೋನವು 60 ಡಿಗ್ರಿ ಆಗಿರುತ್ತದೆ. ಆ ಎರಡು ಬಿಂದುಗಳ ನಡುವಿನ ದೂರ ಎಷ್ಟು?

2) ಒಂದು ಎತ್ತರದ ಬೆಟ್ಟದ ಮೇಲೆ ಒಂದು ಧ್ವಜವು ಹಾರುತ್ತಿದೆ. ನೆಲದ ಮೇಲಿನ ಒಂದು ಬಿಂದುವಿನಿಂದ ಆ ಬೆಟ್ಟದ ತುದಿಯನ್ನು ನೋಡಿದಾಗ ಉನ್ನತ ಕೋನವು 45 ಡಿಗ್ರಿ ಇರುತ್ತದೆ. ಅದೇ ಬಿಂದುವಿನಿಂದ ಬಾವುಟದ ತುದಿಯನ್ನು ನೋಡಿದಾಗ ಉನ್ನತ ಕೋನವು 60 ಡಿಗ್ರಿ ಇದೆ. ಆ ನೆಲದ ಮೇಲಿನ ಬಿಂದುವು ಬೆಟ್ಟದ ಬುಡದಿಂದ 100 ಮೀಟರ್ ದೂರ ಇದ್ದರೆ ಆ ಬೆಟ್ಟ ಮತ್ತು ಬಾವುಟದ ಎತ್ತರ ಕಂಡುಹಿಡಿಯಿರಿ.

3) 100 ಮೀಟರ್ ಎತ್ತರವಿರುವ ಒಂದು ದೀಪಸ್ಥಂಭದ ತುದಿಯಿಂದ ಅದರ ಒಂದೇ ಪಾರ್ಶ್ವದಲ್ಲಿ ಇರುವ ಎರಡು ದೋಣಿಗಳನ್ನು ನೋಡಿದಾಗ ಅವುಗಳ ಅವನತ ಕೋನವು 30 ಡಿಗ್ರಿ ಮತ್ತು 45 ಡಿಗ್ರಿ ಇವೆ. ಒಂದು ಹಡಗು ಇನ್ನೊಂದರ ಹಿಂಬದಿಯಲ್ಲಿ ಇದ್ದರೆ ಆ ದೋಣಿಗಳ ನಡುವಿನ ಅಂತರ ಎಷ್ಟು?

4) 70 ಮೀಟರ್ ಎತ್ತರವಿರುವ ಒಂದು ಕಟ್ಟಡದ ತುದಿಯಿಂದ ಅದರ ಮುಂದೆ ಇರುವ ಒಂದು ಗೋಪುರದ ಮೇಲ್ತುದಿಯನ್ನು ನೋಡಿದಾಗ ಉನ್ನತ ಕೋನವು 60 ಡಿಗ್ರಿ ಇದೆ. ಅದೇ ಕಟ್ಟಡದ ಮೇಲ್ತುದಿಯಿಂದ ಗೋಪುರದ ಕೆಳ ತುದಿಯನ್ನು ನೋಡಿದಾಗ ಅವನತ ಕೋನವು 45 ಡಿಗ್ರಿ ಇದೆ. ಆ ಗೋಪುರದ ಎತ್ತರವನ್ನು ಕಂಡುಹಿಡಿಯಿರಿ.

4. ವಿಸ್ತೀರ್ಣ ಮತ್ತು ಘನಫಲ (Surface Area and Volume)

ಈ ಪಾಠದಲ್ಲಿ ಒಟ್ಟು 14 ಸೂತ್ರಗಳು ಇವೆ. ಆಕೃತಿಗಳನ್ನು ಕೊಡಬಹುದು ಅಥವಾ ಕೊಡದಿರಬಹುದು. ಈ ಪಾಠದಿಂದ 4/5 ಅಂಕಗಳ ಒಂದು ಅನ್ವಯಿಕ ಪ್ರಶ್ನೆಯು ಪರೀಕ್ಷೆಗೆ ಖಂಡಿತವಾಗಿಯೂ ಬರುತ್ತದೆ.

1) 21 ಮೀಟರ್ ಎತ್ತರವಿರುವ ಮತ್ತು 7 ಮೀಟರ್ ತ್ರಿಜ್ಯ ಇರುವ ಒಂದು ಸಿಲಿಂಡರ್‌ನ ಮೇಲೆ ಅಷ್ಟೇ ತ್ರಿಜ್ಯ ಇರುವ ಎರಡು ಅರ್ಧ ಗೋಲಗಳನ್ನು ಎರಡೂ ಪಾರ್ಶ್ವದಲ್ಲಿ ಜೋಡಿಸಿ ಒಂದು ಟ್ಯಾಂಕರ್ ಮಾಡಲಾಗಿದೆ. ಅದರ ಮೇಲ್ಮೈಗೆ ಬಣ್ಣ ಹಚ್ಚಲು ದೊರೆಯುವ ವಿಸ್ತೀರ್ಣ ಎಷ್ಟು? ಅದರಲ್ಲಿ ತುಂಬಿಸಲು ಸಾಧ್ಯವಾಗುವ ಡೀಸೆಲನ್ನು ಲೀಟರ್‌ನಲ್ಲಿ ಕಂಡುಹಿಡಿಯಿರಿ.

2) 15 ಮೀಟರ್ ಎತ್ತರವಿರುವ ಮತ್ತು 3.5 ಮೀಟರ್ ತ್ರಿಜ್ಯ ಇರುವ ಒಂದು ಸಿಲಿಂಡರ್ ಮೇಲೆ ಅಷ್ಟೇ ತ್ರಿಜ್ಯವಿರುವ ಒಂದು ಅರ್ಧಗೋಳ ಮತ್ತು ಕೆಲಭಾಗಗಳಲ್ಲಿ ಕೂಡ ಅಷ್ಟೇ ತ್ರಿಜ್ಯವಿರುವ ಮತ್ತು 7 ಮೀಟರ್ ಓರೆ ಎತ್ತರವಿರುವ ಒಂದು ಶಂಕುವನ್ನು ಫಿಟ್ ಮಾಡಲಾಗಿದೆ. ಅದರ ಒಟ್ಟು ಘನಫಲವನ್ನು ಕಂಡು ಹಿಡಿಯಿರಿ.

3) 21 ಮೀಟರ್ ಆಳವಿರುವ ಮತ್ತು 15 ಮೀಟರ್ ತ್ರಿಜ್ಯ ಇರುವ ಒಂದು ಸಿಲಿಂಡರ್ ಆಕಾರದ ಒಂದು ಬಾವಿಯನ್ನು ಕೊರೆದು ಆ ಮಣ್ಣನ್ನು ಒಂದು ಆಯತ ಘನಾಕೃತಿಯ ಒಂದು ಕಟ್ಟೆಯನ್ನು ಮಾಡಲಾಗಿದೆ. ಅದರ ಉದ್ದ ಮತ್ತು ಅಗಲಗಳು 3.5 ಮೀಟರ್ ಮತ್ತು 7 ಮೀಟರ್ ಇವೆ. ಅದರ ಎತ್ತರವನ್ನು ಕಂಡುಹಿಡಿಯಿರಿ.

4) 21 ಮೀಟರ್ ತ್ರಿಜ್ಯವಿರುವ ಮತ್ತು 15 ಮೀಟರ್ ಎತ್ತರವಿರುವ ಒಂದು ಘನ ಸಿಲಿಂಡರ್‌ನ ಆಕಾರದ ಒಂದು ಮರದ ಕಾಂಡದಿಂದ ಮೇಲೆ ಮತ್ತು ಕೆಳಗೆ 7 ಮೀಟರ್ ವ್ಯಾಸವಿರುವ ಎರಡು ಅರ್ಧ ಘನ ಗೋಲಗಳನ್ನು ಕೊರೆದು ತೆಗೆಯಲಾಗಿದೆ. ಉಳಿದ ಆಕೃತಿಯ ಘನಫಲ ಕಂಡುಹಿಡಿಯಿರಿ.

5) 3.5 ಮೀಟರ್ ತ್ರಿಜ್ಯ ಇರುವ ಮತ್ತು 12 ಮೀಟರ್ ಎತ್ತರ ಇರುವ ಒಂದು ಶಂಕುವಿನಾಕೃತಿಯ ಪಾತ್ರೆಯಲ್ಲಿ ತುಂಬಾ ಹಣ್ಣಿನ ಜ್ಯೂಸ್ ಇದೆ. ಅದನ್ನು 7 ಮೀಟರ್ ತ್ರಿಜ್ಯ ಇರುವ ಒಂದು ಸಿಲಿಂಡರ್ ಆಕಾರದ ಪಾತ್ರೆಗೆ ವರ್ಗಾವಣೆ ಮಾಡಲಾಯಿತು. ಆಗ ಎಷ್ಟು ಎತ್ತರದವರೆಗೆ ಜ್ಯೂಸ್ ಭರ್ತಿ ಆಗಿದೆ?

6) ಶಂಕುವಿನ ಒಂದು ಭಿನ್ನಕದ ಎತ್ತರವು 12 ಮೀಟರ್. ಅದರ ಎರಡು ತ್ರಿಜ್ಯಗಳು ಕ್ರಮವಾಗಿ 3.5 ಮೀಟರ್ ಮತ್ತು 5 ಮೀಟರ್ ಇವೆ. ಅದರ ವಿಸ್ತೀರ್ಣ ಮತ್ತು ಘನಫಲ ಕಂಡು ಹಿಡಿಯಿರಿ.

ಇತರ ಪಾಠಗಳ ಸಂಭನೀಯ ಪ್ರಶ್ನೆಗಳನ್ನು ಗಮನಿಸಿ

ಅದೇ ರೀತಿ ಸಂಭವನೀಯತೆ( Probability), ಪೈಥಾಗೊರಸ್ ಥಿಯರಂ ಮತ್ತು ವೃತ್ತಗಳಿಗೆ ಸಂಬಂಧಿಸಿದ
ವಿಸ್ತೀರ್ಣಗಳು ಈ ಪಾಠದಿಂದ ಕೂಡ ಒಂದೆರಡು ಅನ್ವಯಿಕ ಪ್ರಶ್ನೆಗಳು ಹಿಂದಿನ ಎಸೆಸೆಲ್ಸಿ ಪರೀಕ್ಷೆಗೆ ಬಂದಿವೆ ಅನ್ನುವುದು ನಿಮ್ಮ ಗಮನದಲ್ಲಿ ಇರಲಿ. ಈ ಪ್ರಶ್ನೆಗಳಿಗೆ ನೀವು ನಿಮ್ಮ ಗಣಿತ ಅಧ್ಯಾಪಕರನ್ನು ಸಂಪರ್ಕಿಸಿ ಉತ್ತರ ಪಡೆದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು. ಒಳ್ಳೆದಾಗಲಿ ನಿಮಗೆ.

(ನಾಳೆಗೆ ಮುಂದುವರಿಯುತ್ತದೆ)

ಇದನ್ನೂ ಓದಿ: ಸರಣಿಯ ಹಿಂದಿನ ಮೂರು ಲೇಖನಗಳು
1 ರಾಜ ಮಾರ್ಗ ಅಂಕಣ : ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಆರೇ ದಿನ ಓದಿದರೂ ಪಾಸ್ ಆಗಬಹುದು! ಹಾಗಿದ್ರೆ ಏನು ಮಾಡಬೇಕು?
2. ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಯಾವ ಪ್ರಶ್ನೆ ಬರ್ತದೆ? ಕೊನೇ ಕ್ಷಣದ ಸಿದ್ಧತೆ ಹೇಗಿರಬೇಕು? ಇಲ್ಲಿವೆ ಪವರ್‌ಫುಲ್‌ ಟಿಪ್ಸ್‌-ಭಾಗ 2
3.: ರಾಜ ಮಾರ್ಗ ಅಂಕಣ : SSLC ಪರೀಕ್ಷೆ ಅಂತಿಮ ತಯಾರಿ ಭಾಗ-3 ; ವಿಜ್ಞಾನದಲ್ಲಿ ಖುಷಿ ಕೊಡುವ ಅಪ್ಲಿಕೇಶನ್ ಪ್ರಶ್ನೆಗಳು

Continue Reading

ಅಂಕಣ

ವೈದ್ಯ ದರ್ಪಣ ಅಂಕಣ: ನೆತ್ತಿಯೊಳಗಿನ ವಿದ್ಯುತ್ ಮತ್ತು ಮಾನಸಿಕ ಸಂತೃಪ್ತಿ

ಭಯೋತ್ಪಾದಕರನ್ನು ಕಂಡರೆ ಅಂಜುವ ಆಕೆ ಮೆದುಳಿಗೆ ತುಸು ವಿದ್ಯುತ್‌ ಪ್ರಚೋದನೆ ನೀಡಿದಾಗ ಅವರನ್ನು ಗುಂಡಿಟ್ಟು ಕೊಂದಳು! ಇದು ಹೇಗೆ ಸಾಧ್ಯ? ಪ್ರಯತ್ನದ ಲವಲೇಶವೂ ಇಲ್ಲದೆ, ತಂತ್ರಜ್ಞಾನದ ನೆರವಿನಿಂದ ಯಾವುದೇ ಕೆಲಸದಲ್ಲಿ ಪರಿಣತಿ ಪಡೆಯಲು ಸಾಧ್ಯವೇ? ಇದು ತಂದೊಡ್ಡಬಹುದಾದ ನೈತಿಕ ಪ್ರಶ್ನೆಗಳೇನು?

VISTARANEWS.COM


on

Edited by

9 volts nirvana
Koo
kiran column

ಮಾನಸಿಕ ಸಂತೃಪ್ತಿಯ ಸಂಶೋಧಕರಲ್ಲಿ ಒಂದು ನಗೆಯ ಮಾತಿದೆ. “ನೀವು ನಿಮ್ಮ ಗಂಡ/ಹೆಂಡತಿಯನ್ನು ಪ್ರೀತಿಸುತ್ತೀರಾ?” ಮತ್ತು “ನೀವು ನಿಮ್ಮ ವೃತ್ತಿಯನ್ನು ಪ್ರೀತಿಸುತ್ತೀರಾ?” ಎನ್ನುವ ಪ್ರಶ್ನೆಗಳ ಪೈಕಿ ಯಾವುದಕ್ಕೆ ಹೆಚ್ಚು “ಹೌದು” ಎನ್ನುವ ಉತ್ತರ ಬರುತ್ತದೆ ಎಂದು ಯಾರಿಗೂ ತಿಳಿಯದು. ಜೊತೆಗೆ ಈ ಎರಡೂ ಪ್ರಶ್ನೆಗಳು ಸಾಪೇಕ್ಷವಾಗಿ ವಿಲೋಮವಂತೆ! ಅಂದರೆ, ಮೊದಲ ಪ್ರಶ್ನೆಗೆ ಹೌದು/ಇಲ್ಲ ಎಂದವರು ಎರಡನೆಯ ಪ್ರಶ್ನೆಗೆ ಇಲ್ಲ/ಹೌದು ಎನ್ನುವರಂತೆ! “ನೀವು ಸೋಮವಾರದ ಮುಂಜಾನೆಗೆ ಕಾಯುತ್ತಿದ್ದೀರಿ ಎಂದರೆ, ಒಂದೋ ನೀವು ನಿಮ್ಮ ಕೆಲಸವನ್ನು ಹೆಚ್ಚು ಪ್ರೀತಿಸುತ್ತೀರಿ ಅಥವಾ ನಿಮ್ಮ ಮನೆಯಾಕೆ/ಮನೆಯಾತನನ್ನು ಹೆಚ್ಚು ದ್ವೇಷಿಸುತ್ತೀರಿ ಎಂದರ್ಥ” ಎನ್ನುವ ಚಮತ್ಕಾರದ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಒಟ್ಟಿನಲ್ಲಿ, ವೃತ್ತಿಯ ಮೇಲಿನ ಪ್ರೀತಿ ಎನ್ನುವುದು ಸುಲಭವಾಗಿ ಪರಿಹಾರವಾಗುವಂಥದ್ದಲ್ಲ.

ಕೆಲವೊಮ್ಮೆ ಇಷ್ಟವಿಲ್ಲದೆ ಮಾಡುವ ಕೆಲಸಗಳನ್ನು ಬಹಳ ಕಾಲ ಮಾಡುತ್ತಿದ್ದರೆ ಒಂದು ರೀತಿಯ ಆತ್ಮೀಯತೆ ಬಂದುಬಿಡುತ್ತದೆ. ಇದೇ ತತ್ತ್ವವನ್ನು ಆಧರಿಸಿ ಬಲವಂತದ ಮದುವೆಗಳನ್ನು ಮಾಡಿಸುತ್ತಿದ್ದ ಕಾಲವೂ ಇತ್ತು! “ಮಾಡುವ ವೃತ್ತಿಯ ಬಗ್ಗೆ ಪ್ರೀತಿ ಇದೆಯೇ?” ಎನ್ನುವ ಪ್ರಶ್ನೆಯನ್ನು “ನಿಮ್ಮ ವೃತ್ತಿಯ ಬಗ್ಗೆ ಸಂತೃಪ್ತಿ ಇದೆಯೇ?” ಎಂದು ಬದಲಾಯಿಸಿದರೆ ಧನಾತ್ಮಕ ಉತ್ತರಗಳ ಪರಿಮಾಣ ಮತ್ತಷ್ಟು ಕಡಿಮೆಯಾಗಬಹುದು. ಕೆಲಸದಲ್ಲಿ ಸಂತೃಪ್ತಿ ಎಂದರೇನು? ಅದು ಯಾವಾಗ ಬರುತ್ತದೆ? ಎನ್ನುವುದರ ಬಗ್ಗೆ ಸಂಶೋಧಕರು ಬಹಳ ಕಾಲದಿಂದ ಗಮನ ಹರಿಸಿದ್ದಾರೆ. ಇದರಲ್ಲಿ ಎರಡು ಮಾಪನಗಳಿವೆ.

9 volts nirvana
ಸಂತೃಪ್ತಿಯ ಫ್ಲೋ ತತ್ತ್ವವನ್ನು ವಿವರಿಸುವ ನಕ್ಷೆ ಕೃಪೆ ವಿಕಿಪೀಡಿಯಾ

ಒಂದು: ಮಾಡುವ ಕೆಲಸದಲ್ಲಿ ನಮ್ಮ ಪರಿಣತಿ. ಎರಡು: ಆ ಕೆಲಸ ಒಡ್ಡುವ ಸವಾಲುಗಳು. ಕೆಲಸದಲ್ಲಿ ಪರಿಣತಿ ಇರದಿದ್ದರೆ ಸವಾಲಿನ ಮಟ್ಟ ಹೆಚ್ಚಿದಂತೆ ಆತಂಕ ಹೆಚ್ಚುತ್ತದೆ. “ಇದನ್ನು ನಾನು ಮಾಡಲಾರೆ. ಆದರೆ, ಇದು ಮೇಲ್ವಿಚಾರಕರಿಗೆ ತಿಳಿದುಹೋದರೆ ಕೆಲಸ ಹೋಗಬಹುದು. ಹೀಗಾಗಿ, ನಾನು ಕೆಲಸದಿಂದ ತಪ್ಪಿಸಿಕೊಳ್ಳುವ ಉಪಾಯಗಳನ್ನು ಹುಡುಕಬೇಕು” ಎನ್ನುವ ಮನಸ್ಥಿತಿ ಬೆಳೆಯುತ್ತದೆ. ಅಂತೆಯೇ, ನಮ್ಮ ಪರಿಣತಿ ಬಹಳ ಚೆನ್ನಾಗಿದ್ದು, ನಾವು ಮಾಡಬೇಕಾದ ಕೆಲಸದಲ್ಲಿ ಸವಾಲುಗಳೇ ಇಲ್ಲವಾದರೆ ಒಂದು ರೀತಿಯ ಆಲಸ್ಯ ಬೆಳೆಯುತ್ತದೆ. ಹತ್ತು ಫೈಲುಗಳನ್ನು ಒಂದೇ ದಿನಕ್ಕೆ ವಿಲೇವಾರಿ ಮಾಡುವ ಸಾಮರ್ಥ್ಯದ ನೌಕರನಿಗೆ ದಿನಕ್ಕೊಂದೇ ಫೈಲು ನೀಡಿದರೆ ಆತ ಹತ್ತನೆಯ ದಿನದವರಗೆ ಸೋಮಾರಿಯಾಗಿ ಕಳೆದು, ಹತ್ತನೆಯ ದಿನ ಚಕಚಕನೆ ಹತ್ತೂ ಫೈಲುಗಳನ್ನು ಮುಗಿಸಿ ಒಗೆಯುತ್ತಾನೆ. ಇದು ಕೆಲಸಗಾರನ ಸಾಮರ್ಥ್ಯವನ್ನು ಸರಿಯಾಗಿ ಗ್ರಹಿಸಬಲ್ಲ ನಾಯಕರ ಅಭಾವದಿಂದ ಆಗುವ ಪ್ರಕ್ರಿಯೆ. ಈ ಎರಡೂ ಸಾಧ್ಯತೆಗಳ ಪರಮೋಚ್ಚ ಉದಾಹರಣೆಗಳು ನಮ್ಮ ದೇಶದಲ್ಲಿ ಒಂದೇ ಕಡೆ ಲಭಿಸುತ್ತವೆ. ಅದನ್ನು ನಾವೆಲ್ಲರೂ ಕಂಡಿರುತ್ತೇವೆ.

ಇದರ ಮತ್ತಷ್ಟು ಆಯಾಮಗಳನ್ನು ಗಮನಿಸಬಹುದು: ಕಡಿಮೆ ಸಾಮರ್ಥ್ಯದ ಕೆಲಸಗಾರನಿಗೆ ಕಡಿಮೆ ಸವಾಲಿನ ಕೆಲಸ ನೀಡಿದರೆ ಆತನಿಗೆ ನಿರ್ಲಕ್ಷ್ಯ ಧೋರಣೆ ಬೆಳೆಯುತ್ತದೆ. ಸವಾಲಿನ ಮಟ್ಟ ಒಂದೆರಡು ಇಂಚು ಬೆಳೆದರೂ ಆತ ಚಿಂತೆಗೊಳಗಾಗುತ್ತಾನೆ; ಇತರರ ಸಹಾಯಕ್ಕೆ ಹಂಬಲಿಸುತ್ತಾನೆ. ತಕ್ಕಮಟ್ಟಿನ ಸಾಮರ್ಥ್ಯದ ವ್ಯಕ್ತಿಗೆ ಕಡಿಮೆ ಸವಾಲಿನ ಕೆಲಸ ಬೋರು ಹೊಡೆಸುತ್ತದೆ. ಆದರೆ, ಅದೇ ವ್ಯಕ್ತಿಗೆ ಹೆಚ್ಚು ಸವಾಲಿನ ಕೆಲಸ ನೀಡಿದರೆ ಆತನ ಮನಸ್ಥಿತಿಯನ್ನು ಉತ್ತೇಜಿಸಿದಂತಾಗುತ್ತದೆ. ಉನ್ನತ ಸಾಮರ್ಥ್ಯದ ವ್ಯಕ್ತಿ ಮಧ್ಯಮ ಸವಾಲಿನ ಕೆಲಸವನ್ನು ಬಹುಬೇಗ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಾನೆ.

ಈ ಸಮೀಕರಣದ ಅಂತಿಮ ಆಯಾಮ ಉನ್ನತ ಸಾಮರ್ಥ್ಯದ ವ್ಯಕ್ತಿಗೆ ಹೆಚ್ಚಿನ ಸವಾಲಿನ ಕೆಲಸ ನೀಡುವುದು. ಜಗತ್ತಿನ ಸಾಧಕರು ಇದೇ ಗುಂಪಿಗೆ ಸೇರಿದವರು. ತನ್ನ ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಬಲ್ಲ ಸವಾಲಿಗೆ ಆತ ಯಾವಾಗಲೂ ಹಾತೊರೆಯುತ್ತಾನೆ. ಅದನ್ನು ಸಶಕ್ತವಾಗಿ ನಿರ್ವಹಿಸಲು ತನ್ನ ಶಕ್ತಿಯನ್ನು ಪಣಕ್ಕಿಡುತ್ತಾನೆ. ಸಮಯದ ಪರಿವೆಯಿಲ್ಲದೆ ಆ ಕೆಲಸದಲ್ಲಿ ನೈಪುಣ್ಯ ಸಾಧಿಸುತ್ತಾನೆ. ಒಂದು ವಿಧದಲ್ಲಿ ಆತನ ಮಾನಸಿಕತೆ ಕಠಿಣ ಕೆಲಸದ ಜೊತೆ ಸಮನ್ವಯವಾಗುತ್ತದೆ. ಅದನ್ನು ಮಾಡುತ್ತಾ ಹೋದಂತೆ ಅಸಾಧಾರಣ ಸಂತೃಪ್ತಿ ಆವರಿಸುತ್ತದೆ. ಮನಃಶಾಸ್ತ್ರಜ್ಞರು ಇಂತಹ ಮನಸ್ಥಿತಿಯನ್ನು “ಫ್ಲೋ” (Flow) ಎಂದು ಕರೆಯುತ್ತಾರೆ. ತನ್ನ ಕೆಲಸವನ್ನು ಪ್ರೀತಿಸುವ, ಅದರಲ್ಲಿ ಸಂತೃಪ್ತಿ ಕಾಣುವ ಇಂತಹ ಮನಸ್ಥಿತಿ ಪ್ರತಿಯೊಬ್ಬ ಸಾಮರ್ಥ್ಯಶಾಲಿಯ ಕನಸಾದರೂ, ಅದನ್ನು ಸಾಧಿಸಬಲ್ಲ ಅವಕಾಶ, ಅನುಕೂಲ, ಅದೃಷ್ಟ ಇರುವವರು ಕಡಿಮೆಯೇ. ಪ್ರಪಂಚದ ದಿಕ್ಕನ್ನು ಬದಲಿಸಿದ ಬಹುತೇಕ ಮಂದಿ ಈ ಗುಂಪಿನವರು.

ಆದರೆ ಈ ಗುಂಪಿಗೆ ಸೇರುವುದು ಸುಲಭವಲ್ಲ. ಇದೊಂದು ರೀತಿಯ ತಪಸ್ಸಿನಂತೆ. ಜಗದ್ವಿಖ್ಯಾತ ಸಂಗೀತಕಾರ ಬಿಥೋವನ್ ಕುರಿತಾದ ಒಂದು ಪ್ರಸಂಗವಿದೆ. ಇಳಿವಯಸ್ಸಿನಲ್ಲಿ ಆತನಿಗೆ ಕಿವಿ ಕೇಳುತ್ತಿರಲಿಲ್ಲ. ಅದು ಆತನ ಸಂಗೀತ ಸಾಧನೆಗೆ ಅಡ್ಡಿಯಾಗಲಿಲ್ಲ. ಒಮ್ಮೆ ಆತನ ಕಛೇರಿಯ ನಂತರ ತುಸು ವಯಸ್ಸಾದ ಹೆಂಗಸೊಬ್ಬರು ಆತನನ್ನು ಅಭಿನಂದಿಸುತ್ತಾ “ನಿಮ್ಮಷ್ಟು ನೈಪುಣ್ಯವನ್ನು ಆ ಭಗವಂತ ನನಗೆ ಕೊಟ್ಟಿದ್ದರೆ…” ಎಂದರಂತೆ. ತನ್ನ ಸಹಾಯಕನಿಂದ ಸನ್ನೆಗಳ ಮೂಲಕ ಆಕೆಯ ಮಾತನ್ನು ಅರಿತ ಬಿಥೋವನ್ ಆಕೆಗೆ ಉತ್ತರಿಸಿದರಂತೆ: “ಅಂತಹ ಸಾಮರ್ಥ್ಯವನ್ನು ಭಗವಂತನಿಂದ ನೀವು ಕೂಡ ಪಡೆಯಬಹುದು. ಹೆಚ್ಚೇನಿಲ್ಲ – ದಿನಕ್ಕೆ ಹದಿನಾಲ್ಕು ಗಂಟೆಗಳಂತೆ ಒಂದು ದಿನವೂ ಬಿಡದೆ ಮೂವತ್ತು ವರ್ಷಗಳ ಕಾಲ ಅಭ್ಯಾಸ ಮಾಡಿದರೆ ಸಾಕು; ಭಗವಂತ ಇಷ್ಟು ನೈಪುಣ್ಯವನ್ನು ಮುಲಾಜಿಲ್ಲದೆ ಪ್ರಸಾದಿಸುತ್ತಾನೆ”. ಸಾಧಕರ ಅಂತಿಮ ಪ್ರದರ್ಶನವನ್ನು ನೋಡುವವರಿಗೆ ಅದರ ಹಿಂದಿನ ನಿರಂತರ ಅಭ್ಯಾಸದ ಅಂದಾಜು ಮೂಡುವುದಿಲ್ಲ. “ಯಾವುದೇ ಕೆಲಸ ನೋಡುಗರಿಗೆ ಸುಲಭ ಎನಿಸಿದರೆ ಆ ಕೆಲಸ ಸುಲಭ ಎಂತಲ್ಲ. ಬದಲಿಗೆ ಅದನ್ನು ಮಾಡುತ್ತಿರುವ ವ್ಯಕ್ತಿ ಅತ್ಯಂತ ಸಮರ್ಥ ಎಂದರ್ಥ” ಎನ್ನುವ ಮಾತಿದೆ. ಶಿಲ್ಪಕಲೆಯೋ, ಶಸ್ತ್ರಚಿಕಿತ್ಸೆಯೋ, ರೇಸ್ ವಾಹನ ಚಾಲನೆಯೋ, ಚಿತ್ರಕಲೆಯೋ, ಪ್ರಯೋಗವೋ – ಯಾವುದನ್ನಾದರೂ ದಣಿವರಿಯದೆ, ಅತೀವ ಆನಂದದಿಂದ ಮಾಡುವ ವ್ಯಕ್ತಿ ಅದರಲ್ಲಿ ತನ್ನ “ಫ್ಲೋ” ಎನ್ನುವ ಸಂತೃಪ್ತಿಯನ್ನು ಕಂಡುಕೊಂಡಿರುತ್ತಾನೆ.

ಈಗ ಸ್ವಲ್ಪ ಕಾಲದ ಮಟ್ಟಿಗೆ ಬೇರೊಂದು ಪ್ರದೇಶಕ್ಕೆ ಹೋಗೋಣ. ಉಸುಕಿನಿಂದ ತುಂಬಿದ ಇಪ್ಪತ್ತು ಗೋಣಿಚೀಲಗಳು. ಅದರ ಹಿಂದೆ ನಿಂತಿರುವ, ಹುಲ್ಲೆಯಂತೆ ನಡುಗುತ್ತಿರುವ ಮೂವತ್ತರ ಹರೆಯದ ಓರ್ವ ಹೆಣ್ಣುಮಗಳು. ಆಕೆಯ ಕೈಲೊಂದು ಆಟೊಮ್ಯಾಟಿಕ್ ಬಂದೂಕು. ಚೀಲಗಳ ಮತ್ತೊಂದು ಬದಿ ಜೋರಾಗಿ ಚೀರುತ್ತಾ ಈಕೆಯೆಡೆಗೆ ಮುನ್ನುಗ್ಗುತ್ತಿರುವ ಇಪ್ಪತ್ತು ಮಂದಿ ಮುಸುಕುಧಾರಿ ಆತ್ಮಾಹುತಿ ಭಯೋತ್ಪಾದಕರು. ಅವರ ಸೊಂಟದಲ್ಲೊಂದು ಬಾಂಬ್; ಕೈಯಲ್ಲಿ ಬಂದೂಕು. ಇವರಲ್ಲಿ ಒಬ್ಬರನ್ನು ಆಕೆ ಗುಂಡು ಹೊಡೆದು ಬೀಳಿಸಿದರೆ ಮೂವರು ಮುನ್ನುಗ್ಗುವರು. ಆಕೆಯ ಹಣೆಯಲ್ಲಿ ಬೆವರ ಸಾಲು; ಕೈಲಿ ನಡುಕ. ಈ ಆತಂಕದಿಂದ ಆಗಾಗ ಜ್ಯಾಮ್ ಆಗುತ್ತಿರುವ ಬಂದೂಕಿನ ಟ್ರಿಗ್ಗರ್. ಬಂದೂಕು ಚಲಾಯಿಸುವ ತನ್ನ ವೇಗ ಸಾಲದಾಗಿದೆ ಎನ್ನುವ ಭೀತಿ ಆಕೆಯದ್ದು; ನೀಡಿದ ಕೆಲಸ ನಿಭಾಯಿಸಲು ತಾನು ಅಸಮರ್ಥಳು ಎನ್ನುವ ಭಾವ .ಎಲ್ಲ ಮುಗಿದುಹೋಯಿತು ಎನ್ನುವ ಮನಸ್ಥಿತಿ.

ಈ ವಿಷಮ ಪರಿಸ್ಥಿತಿಯಲ್ಲಿ ಇದ್ದ ಒಂದೇ ಒಂದು ಸಮಾಧಾನ ಎಂದರೆ ಇದೊಂದು ವಿಡಿಯೋ ಆಟ ಎನ್ನುವುದು ಮಾತ್ರ. ಆಕೆ ಉಸುಕಿನ ಚೀಲಗಳ ಹಿಂದೆ ಇದ್ದದ್ದು ನಿಜ. ಆದರೆ ಆಕೆಯ ಕೈಲಿದ್ದದ್ದು ಆಟಿಕೆಯ ಬಂದೂಕು. ಉಳಿದೆಲ್ಲವೂ ಆ ಚೀಲಗಳ ಮತ್ತೊಂದು ಬದಿ ಇದ್ದ ದೊಡ್ಡ ಪರದೆಯ ಮೇಲೆ ನೈಜತೆಗೆ ಸವಾಲೊಡ್ಡುವಂತೆ ಮೂಡುತ್ತಿದ್ದ ಬಿಂಬಗಳು. ಇದು ನಡೆಯುತ್ತಿದ್ದುದು ಕ್ಯಾಲಿಫೋರ್ನಿಯಾದ ಸೈನಿಕ ತರಬೇತಿ ಕೇಂದ್ರದ ಮಿಲಿಟರಿ ಪ್ರಯೋಗಾಲಯದಲ್ಲಿ. ಶಾರ್ಪ್ ಶೂಟರ್‌ಗಳ ತರಬೇತಿಗೆ ಬಳಸುವ ಪ್ರಯೋಗದ ಒಂದು ಭಾಗವಾಗಿ ಜನಪ್ರಿಯ ವಿಜ್ಞಾನದ ಲೇಖಕಿಯಾದ ಆಕೆ ಪ್ರಯೋಗಾಲಯಕ್ಕೆ ಭೇಟಿ ನೀಡಿದ್ದರು. ಇಪ್ಪತ್ತು ನಿಮಿಷಗಳ ಕಾಲ ನಡೆದ ಪ್ರಯೋಗದ ಭಾಗವಾಗಿ ಆಕೆ ಉಸುಕಿನ ಚೀಲಗಳ ಹಿಂದೆ ಬಂದೂಕು ಹಿಡಿದು ನಿಂತಿದ್ದರು. ಆ ಇಪ್ಪತ್ತು ನಿಮಿಷಗಳ ಉಸಿರುಗಟ್ಟಿಸುವ ಅವಧಿಯ ನಂತರ ಆಕೆ ಸಾಗಿದ್ದು ತನ್ನ ಜೀವನದಲ್ಲಿ ಮರೆಯಲಾಗದ ಒಂದು ಅನುಭವದ ಮೂಲಕ.

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ | ನಮ್ಮ ಶರೀರವನ್ನು ನಿಯಂತ್ರಿಸುವವರು ಯಾರು?

ಮಿಲಿಟರಿ ತರಬೇತಿ ಕೇಂದ್ರದ ಸಂಶೋಧಕರು ಆಕೆಯ ತಲೆಗೆ ಕೆಲವು ವಿದ್ಯುತ್ ವಾಹಕಗಳನ್ನು ಒಳಗೊಂಡ ಹೆಲ್ಮೆಟ್ ಮಾದರಿಯ ತಲೆಗವಚವನ್ನು ಜೋಡಿಸಿದರು. ಇದಕ್ಕೆ 9 ವೋಲ್ಟಿನ ಪುಟ್ಟ ಬ್ಯಾಟರಿ ಸಂಪರ್ಕ ನೀಡಿದರು. ಇದರಿಂದ ಅಲ್ಪ ಪ್ರಮಾಣದ ವಿದ್ಯುತ್ ನೇರವಾಗಿ ಆಕೆಯ ಮಿದುಳಿನ ಕೆಲವು ನಿರ್ದಿಷ್ಟವಾದ ಭಾಗಗಳನ್ನು ಪ್ರಚೋದಿಸುತ್ತಿತ್ತು. ಮತ್ತೊಮ್ಮೆ ಬಂದೂಕು ಹಿಡಿದ ಆಕೆ ಉಸುಕಿನ ಚೀಲಗಳ ಹಿಂದೆ ನಿಂತರು. ಮುಂದಿನ ಇಪ್ಪತ್ತು ನಿಮಿಷಗಳ ಕಾಲ ಆಕೆ ಬೇರೆಯೇ ವ್ಯಕ್ತಿಯಾದರು. ಆಕೆಯ ಬಂದೂಕಿನ ಗುರಿ ಒಮ್ಮೆಯೂ ತಪ್ಪಲಿಲ್ಲ. ಸರಣಿಯಲ್ಲಿ ಆತ್ಮಾಹುತಿ ಭಯೋತ್ಪಾದಕರು ಆಕೆಯೆಡೆಗೆ ನುಗ್ಗಿ ಬರುತ್ತಿದ್ದರೂ ಆಕೆ ಒಂದಿನಿತೂ ಅಳುಕಲಿಲ್ಲ. ಭೀತಿ ಎಂಬುದು ಆಕೆಯ ಅನುಭವಕ್ಕೂ ಬರಲಿಲ್ಲ. ಭಯವಿಲ್ಲ; ಆತ್ಮಶಂಕೆಯಿಲ್ಲ; ಗೊಂದಲವಿಲ್ಲ. ಆಕೆಯ ಬಂದೂಕಿನ ಪ್ರತಿಯೊಂದು ನಿಶಾನೆಯೂ ನಿಶಿತ, ನಿಖರ. ದಶಕಗಳ ನಿರಂತರ ಪ್ರಯತ್ನಗಳಿಂದ ಪಳಗಿದ ಗುರಿಕಾರನ ರೀತಿಯಲ್ಲಿ ಸಂದರ್ಭವನ್ನು ಶಾಂತವಾಗಿ, ಸಂಪೂರ್ಣ ನಿಯಂತ್ರಣದಿಂದ ನಿಭಾಯಿಸಿದರು. ಇಪ್ಪತ್ತು ನಿಮಿಷಗಳ ಅವಧಿ ಮುಗಿದಾಗ ಆಕೆಯ ಎದುರು ಒಬ್ಬ ಭಯೋತ್ಪಾದಕನೂ ಉಳಿದಿರಲಿಲ್ಲ. ತಾನು ಮಾಡುತ್ತಿರುವ ಕೆಲಸದಲ್ಲಿ ಬಹಳ ಉನ್ನತ ಮಟ್ಟದ ಸಾಮರ್ಥ್ಯ ಆ ಇಪ್ಪತ್ತು ನಿಮಿಷಗಳ ಕಾಲ ಆಕೆಯದಾಗಿತ್ತು. ಅಷ್ಟೂ ವೇಳೆಯೂ ಅತ್ಯಂತ ಕಠಿಣವಾದ ಕೆಲಸವನ್ನು ಆಕೆ ನಿಷ್ಪ್ರಯಾಸದಿಂದ ಮಾಡಿ ಸಂತೃಪ್ತಿಯ “ಫ್ಲೋ” ಅನುಭವಿಸಿದರು. ಆಕೆಯ ತಲೆಯಿಂದ ವಿದ್ಯುತ್ ವಾಹಕಗಳನ್ನು ತೆಗೆದುಹಾಕಿದ ಕೂಡಲೇ ಮೊದಲಿನ ಬೆದರಿದ ಹುಲ್ಲೆಯಾದರು.

ತನ್ನ ಈ ಅನುಭವವನ್ನು ಆಕೆ ನ್ಯೂ ಸೈಂಟಿಸ್ಟ್ ಪತ್ರಿಕೆಯಲ್ಲಿ ಪ್ರಕಟಿಸಿದಾಗ ಒಂದು ಸಂಚಲನವೇ ಮೂಡಿತು. ಯುವಲ್ ನೋಹ್ ಹರಾರಿಯಂತಹ ಪ್ರಸಿದ್ಧ ಲೇಖಕರು ಆಕೆಯ ಅನುಭವದ ಬಗ್ಗೆ ತಮ್ಮ ಪುಸ್ತಕದಲ್ಲಿ ಬರೆದರು. ತನ್ನ ಈ ಅನುಭವವನ್ನು ಆಕೆ The nine-volt Nirvana (9 ವೋಲ್ಟ್ ನಿರ್ವಾಣ) ಎಂದು ಬಣ್ಣಿಸಿದರು. ಯಾವ ಸಂತೃಪ್ತಿಯ ಸಾಧನೆಗಾಗಿ ದಶಕಗಳ ನಿರಂತರ ಶ್ರಮ ಹಿಡಿಯುತ್ತದೆಯೋ ಅದನ್ನು ತಲೆಗೆ ಹಚ್ಚಿದ ವಿದ್ಯುತ್ ವಾಹಕಗಳ ಹೆಲ್ಮೆಟ್ ಮತ್ತು ಪುಟ್ಟ ಬ್ಯಾಟರಿಗಳು ಮಾಡಿದ್ದವು. ಆ ಸಮಯದಲ್ಲಿ ಆಕೆಗೆ ಯಾವ ಅಡ್ಡ ಪರಿಣಾಮಗಳೂ ಆಗಲಿಲ್ಲ. ಆ ಸಂತೃಪ್ತಿಯ ಗುಂಗಿನಿಂದ ಹೊರಬರಲು ಆಕೆಗೆ ಮೂರು ದಿನಗಳು ಹಿಡಿದವು. “ಈ ಅನುಭವ ಮತ್ತೊಮ್ಮೆ ಆಗಲಿ” ಎಂದು ಆಕೆಯ ಮನಸ್ಸು ಹಾತೊರೆಯಹತ್ತಿತು. ವಿದ್ಯುತ್ ವಾಹಕಗಳ ಹೆಲ್ಮೆಟ್ ಧರಿಸಿದ ಆ ಇಪ್ಪತ್ತು ನಿಮಿಷಗಳ ಕಾಲ ಆಕೆಗೆ ಆದದ್ದೇನು? ಆಕೆಯ ಮನದಲ್ಲಿ ಈ ಮೊದಲೇ ಮನೆಮಾಡಿದ್ದ ಸೋಲಿನ ಭೀತಿ, ಆತ್ಮಶಂಕೆಗಳಂತಹ ಹಿಂಜರಿತಗಳು ಇಲ್ಲವಾದವೇ? ಅಥವಾ ಆಕೆಯ ಮಿದುಳು ಈ ಮೊದಲು ಎಂದೂ ಅರಿಯದ ಹೊಸ ಬಗೆಯ ಕಲಿಕೆಯನ್ನು ಅನುಭವಿಸಿತೇ? ಈ ಅನುಭವ ಆಕೆಯಿಂದ ಹಳೆಯ ಏನನ್ನಾದರೂ ಕಳೆಯಿತೇ ಅಥವಾ ಹೊಸದಾದ ಏನನ್ನಾದರೂ ನೀಡಿತೇ?

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ | ಮನುಷ್ಯನ ಆಯಸ್ಸು ಎಷ್ಟು?

ಈ ಪ್ರಶ್ನೆಗಳ ಉತ್ತರ ಸುಲಭವಲ್ಲ. ಪರಿಣತಿ ಎಂದರೇನು? ನಿರಂತರ ಪ್ರಯತ್ನಗಳಿಂದ ನಾವು ನಮ್ಮ ಮಿದುಳಿನಲ್ಲಿ ವಿವಿಧ ನರಕೋಶಗಳ ನಡುವೆ ಶಕ್ತಿಶಾಲಿಯಾದ ಸಂಪರ್ಕಗಳನ್ನು ನಿರ್ಮಿಸಿಕೊಳ್ಳುತ್ತೇವೆ. ಅದು ಸಂಗೀತಗಾರನೊಬ್ಬನ ಹಾಡುಗಾರಿಕೆಯಿರಬಹುದು; ವಾದ್ಯವೊಂದರ ಮೇಲಿನ ನೈಪುಣ್ಯವಿರಬಹುದು; ವಾಹನದ ಕ್ಲಿಷ್ಟಕರ ರಿಪೇರಿಯ ಸೂಕ್ಷ್ಮ ಹಂತಗಳಿರಬಹುದು; ಕಠಿಣವಾದ ಶಸ್ತ್ರಚಿಕಿತ್ಸೆಯ ಹತ್ತಾರು ಅಂಶಗಳಿರಬಹುದು; ಕುಸುರಿ ಕೆಲಸ ಮಾಡುವ ಅಕ್ಕಸಾಲಿಯ ಪರಿಶ್ರಮವಿರಬಹುದು – ಪ್ರತಿಬಾರಿಯ ಸಾಧನೆ, ಅನುಭವದ ಕಲಿಕೆ, ತಪ್ಪುಗಳನ್ನು ಒಪ್ಪಗೊಳಿಸುವುದು, ಹಿಂದಿನ ಬಾರಿಯ ಸಾಫಲ್ಯವನ್ನು ಮತ್ತಷ್ಟು ಚಂದಗೊಳಿಸುವುದು, ಒಂದು ಹಂತದ ಪ್ರಾವೀಣ್ಯ ಪಡೆದ ಮೇಲೆ ಆ ಕೆಲಸಕ್ಕೆ ಮತ್ತೊಂದು ನವೀನ ಆಯಾಮವನ್ನು ಜೋಡಿಸುವುದು – ಹೀಗೆ ಪ್ರತಿಬಾರಿಯೂ ಆ ಕೆಲಸ ಮಾಡುವಾಗ ಮಿದುಳು ಹೊಸಹೊಸ ನರಕೋಶಗಳನ್ನು ಜೋಡಿಸುತ್ತಾ, ಹಿಂದೆಂದೂ ಆಗಿಲ್ಲದ ಸಂಪರ್ಕಗಳನ್ನು ನಿರ್ಮಿಸುತ್ತದೆ. ಪ್ರತಿ ಬಾರಿ ಈ ಸಾಧನೆಯಲ್ಲಿ ಯಶಸ್ಸು ಕಂಡಾಗ ಆಗುವ ಆನಂದದ ಭಾವ, ನಮಗೆ ಸಂತಸವನ್ನು ಉಂಟುಮಾಡುವ ಮಿದುಳಿನ ಭಾಗದ ಜೊತೆಗೆ ಈ ಬಲಶಾಲಿ ಸಂಪರ್ಕಗಳನ್ನು ಸಮನ್ವಯಗೊಳಿಸಿ ಬೆಸೆಯುತ್ತದೆ. ಸಾಧನೆ ಕಠಿಣವಾದಷ್ಟೂ ಸಂತಸದ ಪ್ರಮಾಣ ಹೆಚ್ಚುತ್ತದೆ. ಇದು ಒಂದು ಹಂತವನ್ನು ಮೀರಿದಾಗ ಆನಂದದ ಭಾವ ಸ್ಥಾಯಿಯಾಗುತ್ತದೆ. ಇದನ್ನೇ ಸಂತೃಪ್ತಿಯ “ಫ್ಲೋ” ಎಂದು ಬಣ್ಣಿಸುತ್ತಾರೆ. ಅಸಲಿಗೆ ಈ ಫ್ಲೋ ಎನ್ನುವುದು ಮಿದುಳಿನ ವಿವಿಧ ನರಕೋಶಗಳ ನಡುವಿನ ಸಂಪರ್ಕಗಳ ಮೂಲಕ ಹರಿಯುವ ಸಣ್ಣ ಪ್ರಮಾಣದ ವಿದ್ಯುದಾವೇಶ. ತಲೆಯ ಮೇಲ್ಭಾಗದಲ್ಲಿ ಅಂಟಿಸಿದ ವಿದ್ಯುತ್ ವಾಹಕಗಳ ಹೆಲ್ಮೆಟ್ ಮೂಲಕ ಮಿದುಳಿನ ನರಗಳಿಗೆ ಕೃತಕ ಸಂಪರ್ಕ ಕಲ್ಪಿಸಿ ನೀಡಿದ ವಿದ್ಯುದಾವೇಶವೂ ಸಾಧಿಸಿದ್ದು ಇದನ್ನೇ.

ಇದರ ದೂರಗಾಮಿ ಪರಿಣಾಮಗಳೇನು? ಪ್ರಯತ್ನದ ಲವಲೇಶವೂ ಇಲ್ಲದೆ ಪರಿಣತ ಸಾಧಕರಾಗುವ ಭಾಗ್ಯವನ್ನು ಯಾರು ತಾನೇ ನಿರಾಕರಿಸಬಲ್ಲರು? ಆಧುನಿಕ ತಂತ್ರಜ್ಞಾನಗಳನ್ನು ಬಳಸಿ, ಮಿದುಳಿನ ಕೆಲಸಗಳನ್ನು ಚೆನ್ನಾಗಿ ಅರಿತುಕೊಂಡು, ಸರಿಯಾದ ಹಾದಿಯಲ್ಲಿ ವಿದ್ಯುದಾವೇಶ ಕಲ್ಪಿಸಿ, ಹಾದಿಬದಿಯ ಯಾರನ್ನು ಬೇಕಾದರೂ ಸೂಪರ್ ಮ್ಯಾನ್ ಮಾಡಬಲ್ಲ ವಿಧಾನಗಳು ಮನುಕುಲವನ್ನು ಸರಿಯಾದ ಹಾದಿಯಲ್ಲಿ ಒಯ್ಯಲು ಸಾಧ್ಯವೇ? ಇಂತಹ ಪ್ರಯೋಗಗಳು ಅಸಾಧುವಲ್ಲವೇ? ಇದು ಹೀಗೆಯೇ ಮುಂದುವರೆದರೆ ನಾಳೆ ಇಂತಹ ತಂತ್ರಜ್ಞಾನದ ಲಭ್ಯತೆ ಇಲ್ಲದ ಸಾಮಾನ್ಯರ ಪಾಡೇನು?

ಈ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯ ಸದ್ಯಕ್ಕಂತೂ ಕಂಡುಬಂದಿಲ್ಲ. ಆದರೆ ಎಂದಾದರೊಂದು ದಿನ ಇವು ನಮ್ಮ ಮುಂದೆ ರಾಕ್ಷಸಾಕಾರವಾಗಿ ನಿಲ್ಲುತ್ತವೆ. ಅಷ್ಟರೊಳಗೆ ಇದರ ಸಮ್ಯಕ್ ಉತ್ತರಗಳನ್ನು ನಾವು ಆಲೋಚಿಸಲೇಬೇಕು. ಪ್ರಗತಿಯ ನಾಗಾಲೋಟವನ್ನು ತಡೆಯುವುದು ಅಸಾಧ್ಯ. ಆದರೆ ಅದನ್ನು ಒಳ್ಳೆಯ ಹಾದಿಯಲ್ಲಿ ಬಳಸಿಕೊಳ್ಳಲು ಸರಿಯಾದ ನಿಯಮಗಳನ್ನು ರೂಪಿಸುವುದರಲ್ಲಿ ಮನುಕುಲದ ಭವಿಷ್ಯ ಅಡಗಿದೆ.

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ | ರೊಬೊಟ್ ಇಲಿಗಳು, ಕೃತಕ ಕಣ್ಣು, ಸಿಂಗ್ಯುಲಾರಿಟಿ ಇತ್ಯಾದಿ…

Continue Reading
Advertisement
Establishment of Backward Classes Category-I Pinjara, Nadaf and 13 Other Castes Development Corporation
ಕರ್ನಾಟಕ1 hour ago

Reservation: ಒಬಿಸಿ ಮೀಸಲಾತಿ ಪುನರ್‌ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ; 2ಸಿ ಪ್ರವರ್ಗಕ್ಕೆ ಶೇ.6, 2ಡಿ ಪ್ರವರ್ಗಕ್ಕೆ ಶೇ.7 ಮೀಸಲಾತಿ

World’s first 7.2-metre high-rise train set on trial on Delhi-Jaipur route, video out
ದೇಶ2 hours ago

Viral Video: ಭಾರತದಲ್ಲಿ ವಿಶ್ವದಲ್ಲೇ ಎತ್ತರದ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ, ಇಲ್ಲಿದೆ ವಿಡಿಯೊ

Road Accident
ಕರ್ನಾಟಕ2 hours ago

Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು

High way robbery
ಕರ್ನಾಟಕ2 hours ago

Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್‌, ಐಫೋನ್‌ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್‌

Restrictions on entry to Dharwad, Supreme Court dismisses Vinay Kulkarni's plea seeking exemption
ಕರ್ನಾಟಕ2 hours ago

Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Ram Navami 2023
ಧಾರ್ಮಿಕ3 hours ago

Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? 

IPL 2023: Rohit likely to be unavailable for some IPL matches to relieve stress
ಕ್ರಿಕೆಟ್3 hours ago

IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್​ ಪಂದ್ಯಗಳಿಗೆ ರೋಹಿತ್​ ಅಲಭ್ಯ ಸಾಧ್ಯತೆ

Karnataka Elections 2023
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

Aam Aadmi Party announces 300 units of free electricity, Rs 3,000. unemployment allowance, Implementation of OPS guarantee scheme
ಕರ್ನಾಟಕ3 hours ago

Karnataka Election: ಎಎಪಿಯಿಂದ 300 ಯೂನಿಟ್‌ ವಿದ್ಯುತ್‌ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್‌ ಜಾರಿ ಗ್ಯಾರಂಟಿ

Indian govt let go of Rs 7 lakh in GST to save a baby girl’s life
ದೇಶ4 hours ago

ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್‌

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

amit shah convoy
ಕರ್ನಾಟಕ2 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ3 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 week ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 week ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ1 week ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ1 week ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ1 week ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

ಟ್ರೆಂಡಿಂಗ್‌

error: Content is protected !!