ಸಮರಾಂಕಣ: ಯುದ್ಧದಾಹದಿಂದ ಶಾಂತಿ ಸ್ಥಾಪಕನ ಸ್ಥಾನದತ್ತ: ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಡ್ರ್ಯಾಗನ್ ಚೀನಾ! - Vistara News

ಅಂಕಣ

ಸಮರಾಂಕಣ: ಯುದ್ಧದಾಹದಿಂದ ಶಾಂತಿ ಸ್ಥಾಪಕನ ಸ್ಥಾನದತ್ತ: ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ಡ್ರ್ಯಾಗನ್ ಚೀನಾ!

ರಷ್ಯಾ- ಉಕ್ರೇನ್‌ ಮಧ್ಯೆ ಶಾಂತಿ ಸಂಧಾನಕ್ಕೆ ಯತ್ನ, ಸುಡಾನ್‌ನ ದಂಗೆಯನ್ನು ಶಮನ ಮಾಡಲು ಯತ್ನ ಮುಂತಾದ ಪ್ರಯತ್ನಗಳ ಮೂಲಕ ಜಾಗತಿಕ ಶಾಂತಿಗೆ ಭಾರಿ ಯತ್ನ ಮಾಡುತ್ತಿರುವಂತೆ ಚೀನಾ ತೋರಿಸಿಕೊಳ್ಳುತ್ತಿದೆ.

VISTARANEWS.COM


on

russia china
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
samara logo

ಚೀನಾ (China) ಇತ್ತೀಚೆಗೆ ತಾನು ಜಾಗತಿಕ ಮಟ್ಟದಲ್ಲಿ ಪ್ರಾದೇಶಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಾಂತಿ ಸ್ಥಾಪಕ ಎಂಬ ಹೊಸ ಪಾತ್ರವನ್ನು ನಿರ್ವಹಿಸಲು ಹೊರಟಿದೆ. ಅದನ್ನು ಪುಷ್ಟೀಕರಿಸುವಂತಹ ಒಂದು ಬೆಳವಣಿಗೆಯಲ್ಲಿ ಇರಾನಿನ ಸೆಕ್ಯುರಿಟಿ ಕೌನ್ಸಿಲ್ ಅಲಿ ಶಮ್‌ಖಾನಿ ಹಾಗೂ ಸೌದಿ ಅರೇಬಿಯಾದ ಸಚಿವರಾದ ಮುಸಾದ್ ಬಿನ್ ಮೊಹಮ್ಮದ್ ಅಲ್ ಆಯ್ಬನ್ ಅವರಿಬ್ಬರೂ ಬೀಜಿಂಗ್‌ನಲ್ಲಿ ಪರಸ್ಪರ ಕೈ ಕುಲುಕಿದ್ದು, ಅವರಿಬ್ಬರ ಮಧ್ಯೆ ಚೀನಾದ ಅತ್ಯುನ್ನತ ರಾಜತಾಂತ್ರಿಕ ಅಧಿಕಾರಿ ವಾಂಗ್ ಯಿ ಅವರು ನಸುನಗುತ್ತಾ ನಿಂತಿದ್ದರು.

ಆ ಛಾಯಾಚಿತ್ರ ಸಾಂಪ್ರದಾಯಿಕ ವೈರಿಗಳಾದ ಸೌದಿ ಅರೇಬಿಯಾ ಮತ್ತು ಇರಾನ್‌ಗಳ ಮಧ್ಯೆ ಚೀನಾ‌ ಮಧ್ಯಸ್ಥಿಕೆ ವಹಿಸಿ, ರಾಜತಾಂತ್ರಿಕ ಸಂಬಂಧಗಳನ್ನು ಮರುಸ್ಥಾಪನೆ ಮಾಡಿದ ಸಂದರ್ಭದ್ದಾಗಿತ್ತು. ಈ ಬೆಳವಣಿಗೆಯಿಂದಾಗಿ ಚೀನಾ ಜಗತ್ತಿನಲ್ಲಿ ಶಕ್ತಿಶಾಲಿ ರಾಷ್ಡ್ರವಾಗಿದ್ದು, ಪ್ರಾದೇಶಿಕ ಕಾರ್ಯಗಳಲ್ಲಿ ಅಮೆರಿಕಾಗಿಂತಲೂ ತಾನು ಪ್ರಭಾವಶಾಲಿ ಎಂದು ಸಾಬೀತುಪಡಿಸಿದೆ. ಇದು ಒಂದು ರೀತಿಯಲ್ಲಿ ಚೀನಾ ಅಮೆರಿಕಾವನ್ನು ಹಿಂದಿಕ್ಕಿ, ತಾನು ಜಾಗತಿಕ ಶಾಂತಿಸ್ಥಾಪಕ ಎಂಬಂತೆ ಬಿಂಬಿಸಲು ನಡೆಸುತ್ತಿರುವ ಪ್ರಯತ್ನವಾಗಿದೆ.

ಜೆಲೆನ್‌ಸ್ಕಿಗೆ ದೂರವಾಣಿ ಕರೆ ಮಾಡಿದ ಕ್ಸಿ

ರಷ್ಯಾ (Russia) ಉಕ್ರೇನ್ (Ukraine) ಮೇಲೆ ದಾಳಿ ನಡೆಸಿದ 61 ವಾರಗಳ ಬಳಿಕ, ಚೀನಾದ ಸರ್ವಾಧಿಕಾರಿ ನಾಯಕ ಕ್ಸಿ ಜಿನ್‌ಪಿಂಗ್ (Xi jinping) ಅಂತಿಮವಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರೊಡನೆ ಬುಧವಾರ, ಎಪ್ರಿಲ್ 26ರಂದು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಕ್ಸಿ ಜಿನ್‌ಪಿಂಗ್ ಅವರು ಈ ದೂರವಾಣಿ ಕರೆಯಲ್ಲಿ ಚೀನಾ ಉಕ್ರೇನಿನ ಸಾರ್ವಭೌಮತ್ವ ಹಾಗೂ ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವುದಾಗಿ ಹೇಳಿದ್ದು, ಚೀನಾ ಮತ್ತು ಉಕ್ರೇನ್‌ಗಳ ಸಂಬಂಧ ವಿಶ್ವಸಂಸ್ಥೆ ರೂಪಿಸಿದ ರಾಜಕೀಯ ಬುನಾದಿಯ ಆಧಾರಿತವಾಗಿದೆ ಎಂದು ಹೇಳಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ವರದಿ ಮಾಡಿದೆ. ಆದರೆ ಚೀನಾ 2014ರಲ್ಲಿ ರಷ್ಯಾ ಆಕ್ರಮಿಸಿಕೊಂಡ ಕ್ರಿಮಿಯಾ ಪರ್ಯಾಯ ದ್ವೀಪದ ಕುರಿತು ಯಾವುದೇ ಮಾತನಾಡಿಲ್ಲ.

Xi Jinping was handed a third term as Chinese president

“ಚೀನಾ ಶಾಂತಿಯನ್ನು ಬಯಸುತ್ತದೆ. ಮಾತುಕತೆಯಿಂದ ಮಾತ್ರವೇ ಇದನ್ನು ಪರಿಹರಿಸಲು ಸಾಧ್ಯ” ಎಂದು ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ ಎನ್ನಲಾಗಿದೆ. “ಒಂದು ಪರಮಾಣು ಯುದ್ಧ ನಡೆದರೆ ಅದರಲ್ಲಿ ಯಾರೂ ಗೆಲ್ಲಲು ಸಾಧ್ಯವಿಲ್ಲ. ಇಂತಹ ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಿಕೊಳ್ಳಲು ಸೂಕ್ತವಾದ ಪರಿಸ್ಥಿತಿಯನ್ನು ನಿರ್ಮಿಸುವುದು ಅವಶ್ಯಕವಾಗಿದೆ. ಚೀನಾ ಮಾತುಕತೆಯನ್ನು ಆಯೋಜಿಸಲು ಪ್ರಯತ್ನ ನಡೆಸುವುದನ್ನು ಮುಂದುವರಿಸಿ, ಕದನ ವಿರಾಮದ ಘೋಷಣೆಗೆ ಮತ್ತು ಶಾಂತಿ ಸ್ಥಾಪನೆಗೆ ಪ್ರಯತ್ನಿಸಲಿದೆ” ಎಂದಿದ್ದಾರೆ. ಇದರಲ್ಲಿ ಉಕ್ರೇನ್ ಮತ್ತು ಇತರ ರಾಷ್ಟ್ರಗಳಿಗೆ ದೂತರನ್ನು ಕಳುಹಿಸುವುದು ಸಹ ಸೇರಿದ್ದು, “ಆ ಮೂಲಕ ನಾವು ಎಲ್ಲ ತಂಡಗಳೊಡನೆಯೂ ಆಳವಾದ ಸಂವಹನ ಸಾಧಿಸಿ, ಉಕ್ರೇನ್ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸುತ್ತೇವೆ” ಎಂದು ಕ್ಸಿ ಜಿನ್‌ಪಿಂಗ್ ಹೇಳಿದ್ದಾರೆ ಎನ್ನಲಾಗಿದೆ.

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಡನೆ ಸಭೆ ನಡೆಸಿದ ಒಂದು ತಿಂಗಳ ಬಳಿಕ ಕ್ಸಿ ಜಿನ್‌ಪಿಂಗ್ ಜೆಲೆನ್ಸ್ಕಿ ಅವರಿಗೆ ಕರೆ ಮಾಡಿದ್ದಾರೆ. ಪಾಶ್ಚಾತ್ಯ ನಾಯಕರು ಸತತವಾಗಿ ಚೀನಾ ಮೇಲೆ ಒತ್ತಡ ಹೇರಿ, ರಷ್ಯಾದ ಅಧ್ಯಕ್ಷ ಪುಟಿನ್ ಅವರೊಡನೆ ಸೌಹಾರ್ದ ಸಂಬಂಧ ಹೊಂದಿರುವ ಕ್ಸಿ ಜಿನ್‌ಪಿಂಗ್ ಅವರಿಗೆ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸುವಂತೆ ಒತ್ತಾಯ ಹೇರಿದ್ದರ ಪರಿಣಾಮವಾಗಿ ಜಿನ್‌ಪಿಂಗ್ ಈ ಕರೆ ಮಾಡಿದ್ದಾರೆ ಎನ್ನಲಾಗಿದೆ. ರಷ್ಯಾ 2022ರ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ದಾಳಿ ನಡೆಸಿದ ಬಳಿಕ, ಇದೇ ಮೊದಲ ಬಾರಿ ಕ್ಸಿ ಹಾಗೂ ಜೆಲೆನ್ಸ್ಕಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಜೆಲೆನ್ಸ್ಕಿ ಅವರೂ ಈ ಮಾತುಕತೆ ಧನಾತ್ಮಕವಾಗಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ. “ನಾನು ಚೀನಾ ಅಧ್ಯಕ್ಷರಾದ ಕ್ಸಿ ಜಿನ್‌ಪಿಂಗ್ ಅವರೊಡನೆ ದೀರ್ಘ ಕಾಲ ದೂರವಾಣಿ ಸಂಭಾಷಣೆ ನಡೆಸಿದೆ. ಈ ಕರೆ ಫಲಪ್ರದವಾಗಿದ್ದು, ಚೀನಾದಲ್ಲಿ ಉಕ್ರೇನ್ ರಾಯಭಾರಿಯ ನೇಮಕದ ಕುರಿತೂ ಚರ್ಚೆ ನಡೆಸಲಾಗಿದೆ. ಇದು ನಮ್ಮ ಎರಡು ರಾಷ್ಟ್ರಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಪೂರಕವಾಗಿದೆ” ಎಂದು ಜೆಲೆನ್ಸ್ಕಿ ಟ್ವೀಟ್ ಮಾಡಿದ್ದರು.

ಚೀನಾ ಮತ್ತು ರಷ್ಯಾ – ಉಕ್ರೇನ್ ಯುದ್ಧ

ಫೆಬ್ರವರಿ ತಿಂಗಳಲ್ಲಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಂಬಿಕಸ್ಥ, ಚೀನೀ ಕಮ್ಯೂನಿಸ್ಟ್‌ ಪಕ್ಷದ ಪಾಲಿಟ್ ಬ್ಯೂರೋ ಹಾಗೂ ಸೆಂಟ್ರಲ್ ಕಮಿಟಿಯ ಸದಸ್ಯ, ಫಾರೀನ್ ಅಫೇರ್ಸ್ ಕಮಿಷನ್ ಮುಖ್ಯಸ್ಥ ವಾಂಗ್ ಯಿ ಅವರು ತನ್ನ ಯುರೋಪ್ ಪ್ರವಾಸವನ್ನು ಧನಾತ್ಮಕವಾಗಿ ಮುಗಿಸಿದ್ದರು. ಮಾಸ್ಕೋದಲ್ಲಿ ಅವರು ಭದ್ರತಾ ಸಮಿತಿ ಕಾರ್ಯದರ್ಶಿ ಪಾಟ್ರುಶೆವ್, ಸೆರ್ಗೇ ಲೆವೆರೊವ್, ಹಾಗೂ ಅಧ್ಯಕ್ಷ ಪುಟಿನ್ ಜೊತೆ ಸಮಾಲೋಚನೆ ನಡೆಸಿದ್ದರು.

ಯುರೋಪಿನ ಕಠಿಣ ಹಾದಿ, ಹಲವು ಕಷ್ಟಕರ ಸಭೆಗಳು ಹಾಗೂ ಹೇಳಿಕೆಗಳು ಹಾಗೂ ಚೀನಾದ ವಿದೇಶಾಂಗ ನೀತಿಗಳನ್ನು ಗಮನಿಸಿದಾಗ, ಉಕ್ರೇನ್ ಸಮಸ್ಯೆಯನ್ನು ಸರಿಪಡಿಸಲು ಚೀನಾ ಏಕೈಕ ಮಧ್ಯಸ್ಥಿಕೆದಾರ ಎಂಬ ಭಾವನೆಗಳು ಮೂಡಿದ್ದವು. ಈಗಾಗಲೇ ಟರ್ಕಿ ಹಾಗೂ ಮಧ್ಯಪೂರ್ವ ರಾಷ್ಟ್ರಗಳು ವಿಫಲವಾದ ಶಾಂತಿ ಸ್ಥಾಪನೆಗೆ ಚೀನಾ ಪ್ರಯತ್ನ ಪಡಲಿದೆ.

ಸುಡಾನ್‌ನಲ್ಲಿ ಶಾಂತಿ ಸ್ಥಾಪನೆಗೆ ಚೀನಾದ ಕರೆ

ವಿಶ್ವಸಂಸ್ಥೆಯಲ್ಲಿ ಚೀನಾದ ಖಾಯಂ ಪ್ರತಿನಿಧಿ ಜಾ಼ಂಗ್ ಜುನ್ ಸೂಡಾನ್ ನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ತಡೆಗಟ್ಟಬೇಕು ಎಂದು ಆಗ್ರಹಿಸಿದ್ದರು. ಅವರು ಸುಡಾನಿನ ಸೇನಾ ಮುಖ್ಯಸ್ಥ ಅಬ್ದೆಲ್ ಫತ್ತಾ ಅಲ್ ಬುರ್ಹಾನ್ ಹಾಗೂ ಶಕ್ತಿಶಾಲಿ ಮಿಲಿಟರಿ ಗುಂಪು ರಾಪಿಡ್ ಸಪೋರ್ಟ್ ಫೋರ್ಸ್ ನಾಯಕತ್ವ ಹೊಂದಿರುವ ಮೊಹಮದ್ ಹಮ್ದಾನ್ ಡಗಾಲೋ ಅವರಿಗೆ ತಕ್ಷಣವೇ ಕದನವನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದರು.

ಇತ್ತೀಚಿನ ಸೂಡಾನಿನ ಕದನಗಳು ನಾಗರಿಕರ ಸಾವು ನೋವು ಮತ್ತು ಮೂಲಭೂತ ವ್ಯವಸ್ಥೆಗಳ ನಾಶಕ್ಕೆ ಕಾರಣವಾಗಿದೆ. ಸೂಡಾನಿನ ಉತ್ತಮ ಸ್ನೇಹಿತ ಮತ್ತು ಸಹಯೋಗಿಯಾಗಿರುವ ಚೀನಾಗೆ ಈ ಬೆಳವಣಿಗೆಗಳಿಂದ ಸಾಕಷ್ಟು ನೋವಾಗಿದ್ದು, ಸೂಡಾನ್ ಮರಳಿ ಪ್ರಕ್ಷುಬ್ಧತೆಯನ್ನು ಎದುರಿಸುವುದನ್ನು ನೋಡಲು ಕಷ್ಟವಾಗುತ್ತಿದೆ ಎಂದು ಜಾ಼ಂಗ್ ಹೇಳಿದ್ದಾರೆ.

ಇದನ್ನೂ ಓದಿ: ಸಮರಾಂಕಣ: ಸುಳ್ಳು ಪತ್ತೆ ಯಂತ್ರಗಳು ಎಷ್ಟು ನಂಬಿಕೆಗೆ ಅರ್ಹ? ಅವುಗಳನ್ನು ನಿಜಕ್ಕೂ ಬಳಸಬೇಕೆ?

ಸುಡಾನಿನ ಸಶಸ್ತ್ರ ಹೋರಾಟ ನೂರಾರು ಅಮಾಯಕರ ಸಾವುನೋವಿಗೆ, ಆಸ್ತಿಪಾಸ್ತಿ ನಾಶಕ್ಕೆ ಕಾರಣವಾಗಿದೆ. ಜಾ಼ಂಗ್ ಅವರ ಪ್ರಕಾರ, ಸೂಡಾನಿನ ಮಿತ್ರನಾಗಿರುವ ಚೀನಾಗೆ ಈ ಬೆಳವಣಿಗೆ ನೋವುಂಟು ಮಾಡಿದೆ.

sudan crisis

ಆಫ್ರಿಕಾದಾದ್ಯಂತ ಚೀನಾ ಒಂದು ಶಕ್ತಿಶಾಲಿ ಪಡೆಯಾಗಿದ್ದು, ಆಫ್ರಿಕಾ ಖಂಡದ ತುದಿಯಲ್ಲಿರುವ, ತೈಲ ಸಮೃದ್ಧ ಗಲ್ಫ್ ರಾಷ್ಟ್ರಗಳ ಸನಿಹವಿರುವ ಸೂಡಾನ್ ಶಕ್ತಿಯ ಸ್ಪರ್ಧೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ. ಆದರೆ ಚೀನಾ ಸೂಡಾನನ್ನು ಈ ಮೊದಲಿನಂತೆ ಧನಾತ್ಮಕವಾಗಿ ನೋಡುತ್ತಿಲ್ಲ. ಚೀನಾ ಈಗ ತೈಲ ಪೂರೈಕೆಗೆ ಈ ಉತ್ತರ ಆಫ್ರಿಕಾದ ರಾಷ್ಟ್ರದ ಮೇಲೆ ಅವಲಂಬಿತವಾಗಿಲ್ಲ. ಬಹುತೇಕ ಹತ್ತು ವರ್ಷಗಳ ಹಿಂದೆ, ಸೂಡಾನ್ ಚೀನಾದ ಆರನೇ ಅತಿದೊಡ್ಡ ವಿದೇಶೀ ತೈಲ ಪೂರೈಕೆದಾರ ರಾಷ್ಟ್ರವಾಗಿತ್ತು. ಅದು ಚೀನಾದ 5.5% ತೈಲದ ಅವಶ್ಯಕತೆಯನ್ನು ಪೂರೈಸುತ್ತಿತ್ತು.

ಆದರೆ ಸೂಡಾನ್ ಪಾಲಿಗೆ ಇಂದಿಗೂ ಚೀನಾ ಅತ್ಯಂತ ಪ್ರಮುಖ ವ್ಯಾಪಾರ ಸಹಯೋಗಿ ರಾಷ್ಟ್ರವಾಗಿದ್ದು, ಗಣಿಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಲ್ಲಿ ಚೀನಾ ಹೂಡಿಕೆದಾರನಾಗಿದೆ. ಹಲವಾರು ಚೀನೀಯರು ಸುಡಾನಿನ ಮೂಲಭೂತ ಸೌಲಭ್ಯ ಕ್ಷೇತ್ರದಲ್ಲಿ, ಹೈಡ್ರೋಕಾರ್ಬನ್ ಉದ್ಯಮದಲ್ಲಿ ತೊಡಗಿಕೊಂಡಿದ್ದಾರೆ.

ಒಂದು ವೇಳೆ ಚೀನಾ ಏನಾದರೂ ಸೆಣಸಾಡುತ್ತಿರುವ ಎರಡು ಪಕ್ಷಗಳನ್ನು ಮಾತುಕತೆಗೆ ಬರುವಂತೆ ಮಾಡಲು ಸಫಲವಾದರೆ ಅದೊಂದು ಆಸಕ್ತಿದಾಯಕ ಬೆಳವಣಿಗೆಯಾಗಲಿದೆ. ಆದರೆ ಗ್ಲೋಬಲ್ ಸೆಕ್ಯುರಿಟಿ ಇನಿಷಿಯೇಟಿವ್ (ಜಿಎಸ್ಐ) ಮೂಲಕ ಚೀನಾ ಜಾಗತಿಕ ಸಮಸ್ಯೆಗಳನ್ನು ಪರಿಹರಿಸಲು ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸುವ ನಿರೀಕ್ಷೆಗಳಿವೆ.

ಇದನ್ನೂ ಓದಿ: ಸಮರಾಂಕಣ | ವಿಮಾನವಾಹಕ ನೌಕೆಯ ಮೇಲಿಳಿಯುವ ಅವಕಾಶ ವಂಚಿತವಾದ ನೌಕಾಪಡೆಯ ಪೈಲಟ್‌ಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

ಧವಳ ಧಾರಿಣಿ ಅಂಕಣ: ತನ್ನ ಬಾಣದಿಂದ ಆನೆಯನ್ನು ಕೊಲ್ಲಬಲ್ಲೆ ಎನ್ನುವ ಹಮ್ಮಿನಿಂದ ಶಬ್ದ ಬಂದ ಕಡೆ ಬಾಣವನ್ನು ಬಿಟ್ಟ. ಮರುಕ್ಷಣದಲ್ಲಿ ಮನುಷ್ಯನ ಕೂಗು ಕೇಳಿಬಂತು. ಓಡಿಹೋಗಿ ನೋಡಿದರೆ ಆತ ಬಿಟ್ಟ ಬಾಣ ದೇಹದಲ್ಲಿ ನೆಟ್ಟುಕೊಂಡ ಕಾರಣದಿಂದ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಋಷಿಕುಮಾರನನ್ನು ಕಂಡ. ಎಲ್ಲವೂ ಕೈಮೀರಿ ಹೋಗಿತ್ತು.

VISTARANEWS.COM


on

king dasharatha dhavala dharini
Koo

ಕರ್ಮಫಲವನ್ನು ತಾನೇ ಅರಿತು ಅನುಭವಿಸಿದ ಸೂರ್ಯವಂಶದ ಮಹಾನ್ ಚಕ್ರವರ್ತಿ

dhavala dharini by Narayana yaji

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕವೆನ್ನುವುದು ದಶರಥನಿಗೆ ಮಹಾನ್ ಸಂಕಲ್ಪವಾಗಿತ್ತು. ಅದಕ್ಕಾಗಿಯೇ ಆತ ಏನೆಲ್ಲ ಕಸರತ್ತನ್ನು ಮಾಡಿದ್ದ ಎನ್ನುವುದನ್ನು ನೋಡಿದ್ದೇವೆ.

ಕೈಕೇಯಿ ಮಂಥರೆಯ ದುರ್ಬೋಧನೆಯಿಂದ ಎಷ್ಟರಮಟ್ಟಿಗೆ ಪ್ರಭಾವಿತಳಾಗಿದ್ದಳೆಂದರೆ ಅರಸನ ಯಾವ ಒದ್ದಾಟವೂ ಅವಳನ್ನು ಕರಗಿಸಲಿಲ್ಲ. ರಾಮನನ್ನು ಬಿಟ್ಟರೆ ತಾನು ಬದುಕಿರಲಾರೆ ಎನ್ನುವ ಮಾತುಗಳು ಕಾದ ಮರಳಲ್ಲಿ ಬಿದ್ದ ನೀರಿನಂತೆಯೇ ಇಂಗಿಹೋಯಿತು. ಕೈಕೇಯಿ ತಿರುಗಿ ರಾಜನಿಗೆ ಧರ್ಮೋಪದೇಶ ಮಾಡುತ್ತಾಳೆ. ಶೈಭ್ಯ, ಅಲರ್ಕ ಮೊದಲಾದ ರಾಜರ್ಷಿಗಳು ಪ್ರತಿಜ್ಞಾಬದ್ಧರಾಗಿ ತಮ್ಮ ತಮ್ಮ ಜೀವವನ್ನೇ ಒತ್ತೆಯಾಗಿರಿಸಿದ ಸಂಗತಿಯನ್ನು ಹೇಳುತ್ತಾ ಪರೋಕ್ಷವಾಗಿ ದೊರೆಯ ಸಾವಿನ ಕುರಿತು ತಾನು ಅಂಜುವವಳಲ್ಲ ಎನ್ನುತ್ತಾಳೆ. ಅವಳಿಗೆ ತನ್ನ ಮಗ ಭರತ ಪಟ್ಟಕ್ಕೇರಲೇ ಬೇಕಾಗಿದೆ. ಆಕೆ ಕೌಸಲ್ಯೆಯನ್ನು ಎಷ್ಟರಮಟ್ಟಿಗೆ ದ್ವೇಷಿಸುತ್ತಿದಳೆಂದರೆ “ರಾಮ ಪಟ್ಟಾಭಿಷೇಕವಾದೊಡನೆಯೇ ರಾಜಮಾತೆಯಾಗಿ ಸಕಲಪ್ರಜೆಗಳಿಂದ ಗೌರವವನ್ನು ಸ್ವೀಕರಿಸುವ ಕೌಸಲ್ಯೆಯನ್ನು ತಾನು ಒಂದು ದಿನವೂ ನೋಡಿಸಹಿಸಲಾರೆ ಎನ್ನುತ್ತಾಳೆ. ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿ ಕೌಸಲ್ಯೆಯೊಂದಿಗೆ ನಿತ್ಯವೂ ರಮಿಸಲು ಇಚ್ಛಿಸುವ ನಿನ್ನ ಹುನ್ನಾರ ತನಗೆ ಗೊತ್ತು ಎಂದು ಜರಿಯುತ್ತಾಳೆ.

ದಶರಥನಿಗೆ ಮಾತು ಬಾರದಾಗಿದೆ. ಆತ ರಾಮನನ್ನು ಕಾಡಿಗೆ ಕಳುಹಿಸುವುದು ಬೇಡವೆಂದು ಬಗೆಬಗೆಯಲ್ಲಿ ಗೋಳಾಡುತ್ತಾನೆ. ಸ್ತ್ರೀಸುಖಕ್ಕೊಸ್ಕರವಾಗಿ ತನ್ನ ಪ್ರಿಯಸುತನನ್ನೇ ಅರಣ್ಯಕ್ಕೆ ಕಳುಹಿಸಿದ ತನ್ನನ್ನು ಅತಿಕಾಮಿಯೆಂದು ಪುರಜನರು ಆಡಿಕೊಳ್ಳುವರು, ಆ ಅಪವಾದ ಬರುತ್ತದೆಯೆಂದು ಗೋಗೆರೆಯುತ್ತಾನೆ. “ಹೆಂಗಸರೆಲ್ಲ ಮೋಸಗಾರರು, ಸ್ವಾರ್ಥಪರಾಯಣರು ಎಂದು ಉದ್ವೇಗದಿಂದ ಕೂಗಾಡುತ್ತಾನೆ. ಬಹುಶಃ ಆಗ ಆತನಿಗೆ ತನ್ನ ಹಿರಿಯ ಹೆಂಡತಿಯರಾದ ಕೌಸಲ್ಯೆ ಮತ್ತು ಸುಮಿತ್ರೆಯರ ನೆನಪಾಗಿರಬೇಕು. ಇಲ್ಲ, ಪ್ರಪಂಚದಲ್ಲಿ ಎಲ್ಲಾ ಹೆಂಗಸರೂ ಹಾಗಿಲ್ಲ’ ಕೇವಲ ಭರತನ ತಾಯಿಗೆ ಮಾತ್ರ ತನ್ನ ಮಾತು ಅನ್ವಯಿಸುತ್ತದೆ ಎಂದು ಕೂಗಾಡುತ್ತಾನೆ. ರಾಮನನ್ನು ಅರಣ್ಯಕ್ಕೆ ಕಳುಹಿಸುವ ಒಂದು ಮಾತನ್ನು ಬಿಟ್ಟು ಬೇರೆ ಏನನ್ನಾದರೂ ಕೇಳು ಎನ್ನುವ ಮಾತುಗಳು ಕೈಕೇಯಿಯ ಮೇಲೆ ಪರಿಣಾಮ ಬೀರದಿದ್ದಾಗ ಕೊನೆಯ ಅಸ್ತ್ರವೆನ್ನುವಂತೆ ದಶರಥ ಲೋಕಮರ್ಯಾದೆಯನ್ನು ಮೀರಿ ಅನಾಥನಂತೆ ಗೋಳಾಡುತ್ತಾ ಆಕೆಯ ಕಾಲಿಗೆ ನಮಸ್ಕರಿಸಲು ಹೋಗುತ್ತಾನೆ. ಆಗ ಕೈಕೇಯಿ ತಿರಸ್ಕಾರದಿಂದ ತನ್ನ ಕಾಲನ್ನು ದೂರಕ್ಕೆ ಚಾಚಿದುದರಿಂದ ಅವೂ ಆತನಿಗೆ ಸಿಕ್ಕದೇ ರೋಗಿಯೊಬ್ಬ ತತ್ತರಿಸಿ ಬೀಳುವಂತೆ ನೆಲದಮೇಲೆ ಬೀಳುತ್ತಾನೆ. ಅವನ ಈ ಸ್ಥಿತಿಯನ್ನು ನೋಡಿದ ರಾಮಾಯಣದ ಕವಿ ವಾಲ್ಮೀಕಿಗೂ ದಶರಥನ ಮೇಲೆ ಹೇಸಿಗೆಯುಂತಾಗುತ್ತದೆ. ಚಕ್ರವರ್ತಿ ತನ್ನ ಘನತೆಯನ್ನು ಮರೆತು ಹೀಗೆ ಮಾಡಬಾರದಿತ್ತು ಎಂದು ಅಸಮಾಧಾನವನ್ನು ವ್ಯಕ್ತಪಡಿಸುತ್ತಾನೆ.

ಅತದರ್ಹಂ ಮಹಾರಾಜಂ ಶಯಾನಮತಥೋಚಿತಮ್.
ಯಯಾತಿಮಿವ ಪುಣ್ಯಾನ್ತೇ ದೇವಲೋಕಾತ್ಪರಿಚ್ಯುತಮ್৷৷ಅಯೋ. .13.1৷৷

ರಾಜಾಧಿರಾಜನಾದಂತಹ ದಶರಥನು ಕೈಕೇಯಿಯ ಪಾದಗಳ ಮೇಲೆ ಬೀಳಲು ಹೋಗಬಾರದಿತ್ತು(ಅತದರ್ಹಂ) ಎಂದು ಬಹಿರಂಗವಾಗಿಯೇ ಸಿಡಿಮಿಡಿಗೊಳ್ಳುತ್ತಾನೆ. ರಾಮಾಯಣದ ಈ ಸನ್ನಿವೇಶ ವಾಲ್ಮೀಕಿಯ ಕಣ್ಣಿಗೆ ಅಂಗೈಯಲ್ಲಿನ ನೆಲ್ಲಿಕಾಯಿಯಂತೆ ಸ್ಪಷ್ಟವಾಗಿ ಕಾಣುತ್ತಿದೆ. ನಿರುಧ್ವಿಘ್ನವಾಗಿ ಕಥೆಯನ್ನು ಹೇಳುತ್ತಾಹೋಗಬೇಕಾದ ಕವಿ ಸೀತೆಗೆ ತೊಂದರೆಯಾದ ಉತ್ಕಟಕ್ಷಣಗಳಲ್ಲಿ ರಸಭಾವವನ್ನು ಹತ್ತಿಕ್ಕಲಾರದೇ ತಾನೇ ಕಥೆಯೊಳಗೆ ಪ್ರವೇಶಿಸುವುದುಂಟು. ಆದರೆ ಇಲ್ಲಿ ಮಾತ್ರ ಆತನಿಗೆ ದಶರಥನ ಒಟ್ಟಾರೆಯ ವ್ಯವಹಾರವೇ ರೇಜಿಗೆ ಹುಟ್ಟಿಸಿದೆ. ಕೈಕೇಯಿಯನ್ನು ಇಕ್ಷಾಕುವಂಶಕ್ಕೇ ಅನರ್ಥಕಾರಿಣಿಯೆಂದು ತಿರಸ್ಕಾರದಿಂದ ಕವಿಹೇಳುತ್ತಾನೆ. ಸೂರ್ಯವಂಶದ ಪುಣ್ಯದ ಕಾರಣದಿಂದ ದಶರಥನಿಗೆ ಕೈಕೇಯಿಯ ಪಾದಗಳು ಸಿಗಲಿಲ್ಲ. ಎನ್ನುತ್ತಾನೆ. ಈ ಭಾಗವನ್ನು ದಶರಥವಿಲಾಪವೆನ್ನುವ ಹೆಸರಿನಿಂದ ಕರೆದರೂ ಇಲ್ಲಿ ಕಾಳಿದಾಸನ ಪ್ರಸಿದ್ಧಕಾವ್ಯ ರಘುವಂಶದ ಅಜವಿಲಾಪ ನೆನಪಿಗೆ ಬರುತ್ತದೆ. ರಘುವಂಶದಲ್ಲಿ ಅಜ ಮತ್ತು ಇಂದುಮತಿ ದಂಪತಿಗಳ ಪ್ರೇಮದ ವಿಷಯ ಪ್ರಸಿದ್ಧ. ದಿವ್ಯಪುಷ್ಪಮಾಲೆಯೊಂದು ಅಜನ ಪತ್ನಿ ಇಂದುಮತಿಯಮೇಲೆ ಬಿದ್ದಾಗ ಅವಳು ಮೃತಳಾಗುತ್ತಾಳೆ. ಆಗ ಅಜ ತನ್ನ ಪತ್ನಿಗಾಗಿ ಮಾಡುವ ದುಃಖವು ಅಜವಿಲಾಪವೆಂದೇ ಪ್ರಸಿದ್ಧಿಯಾಗಿದೆ. ಪತ್ನಿಯ ವಿರಹವನ್ನು ತಾಳಲಾರದೇ ಕುಗ್ಗಿ ಕುಗ್ಗಿ ಸಾಯುವ ಅಜನೂ ಸ್ತ್ರೀ ಕಾರಣದಿಂದ ಸಾಯುತ್ತಾನಾದರೂ ಅದು ಪ್ರೇಮಕಾವ್ಯದ ಉತ್ತುಂಗಗಳಲ್ಲೊಂದೆಂದು ಪರಿಗಳಿಸಲ್ಪಟ್ಟಿದೆ. ಅದರ ವಿರುದ್ಧವಾಗಿ ಅಜನ ಮಗನಾದ ದಶರಥನ ಒದ್ದಾಟವಿದೆ. ಅವನ ವಿಲಾಪಕ್ಕೆ ಸಹಾನುಭೂತಿಯನ್ನು ವ್ಯಕ್ತಪಡಿಸಲು ಯಾರೂ ಬರುವುದಿಲ್ಲ. ಅವನ ವಿಲಾಪಕ್ಕೆ ರಾತ್ರಿಯೇ ಹೆದರಿ ಓಡಿಹೋಯಿತು.

ಬೆಳಗಾದರೂ ದೊರೆ ಗೋಳಾಡುವುದನ್ನು ಬಿಟ್ಟು ರಾಮನನ್ನು ಪಟ್ಟಗಟ್ಟುವ ಯಾವ ಸೂಚನೆಯನ್ನೂ ನೀಡುವುದಿಲ್ಲ. ಎಲ್ಲಿಯಾದರೂ ಬೇರೆಯವರಿಗೆ ತಿಳಿದರೆ ತನ್ನ ಕೆಲಸ ಕೆಟ್ಟಿತೆನ್ನುವ ಚಿಂತೆ ಕೈಕೇಯಿಯಲ್ಲುಂಟಾಯಿತು. ರಾಜನನ್ನು ಧರ್ಮಪರಿಪಾಲನೆಯೆನ್ನುವ ಹಗ್ಗದಲ್ಲಿ ಕಟ್ಟಿಹಾಕಿದ್ದಳು.

ಸತ್ಯಮೇಕಪದಂ ಬ್ರಹ್ಮ ಸತೇ ಧರ್ಮಃ ಪ್ರತಿಷ್ಠಿತಃ
ಸತ್ಯಮೇವಾಕ್ಷಯಾ ವೇದಾಃ ಸತ್ಯೇನೈವಾಪ್ಯತೇ ಪರಮ್ II ಅಯೋ.14-7II

ಸತ್ಯವೆನ್ನುವುದೇ ಬ್ರಹ್ಮವಾಚಕವಾದ ಪ್ರಣವಸ್ವರೂಪವು. ಸತ್ಯದಲ್ಲಿಯೇ ಸಮಸ್ತ ಧರ್ಮಗಳೂ ಅಡಗಿರುವವು. ಕ್ಷಯವೃದ್ಧಿಗಳಿಲ್ಲದ ವೇದಗಳು ಸತ್ಯದ ಸ್ವರೂಪಗಳೇ ಆಗಿವೆ. ಪರಮೋತ್ಕ್ರಷ್ಟವಾದ ಲೋಕಗಳೂ ಸತ್ಯದ ಅವಲಂಬನೆಯಿಂದಲೇ ಲಭಿಸುತ್ತವೆ.

ಸಮಗ್ರವಾದ ಉಪನಿಷತ್ತಿನ ಸಾರವನ್ನು ಸಾರುವ ಈ ಮಾತು ಕೈಕೇಯಿಯಿಂದ ಬೇರೆ ಯಾವ ಸಂದರ್ಭದಲ್ಲಿಯಾದರೂ ಬಂದಿದ್ದರೆ ಆಕೆಯನ್ನು ಗಾರ್ಗಿ, ಲೋಪಾಮುದ್ರಾ ಮೊದಲಾದವರಸಾಲಿಗೆ ಸೇರಿಸಿಬಿಡುತ್ತಿದ್ದರೇನೋ. ಆಕೆಯ ತಂದೆ ಅಶ್ವಪತಿ ವೈಶ್ವಾನರ ವಿದ್ಯೆಯನ್ನು ಉದ್ಧಾಲಕನಿಗೆ ಕಲಿಸಿದ ಕುರಿತು “ಛಾಂದೋಗ್ಯ ಉಪನಿಷತ್ತಿನಲ್ಲಿ ಬರುತ್ತದೆ”. ರಾವಣನೂ ಸಹ ಎಲ್ಲಾ ವೇದಗಳನ್ನು ಓದಿಕೊಂಡಿದ್ದ. ಮೂಲತಃ ಸ್ವಭಾವದಲ್ಲಿ ಸಾತ್ವಿಕ ಗುಣಗಳಿಲ್ಲದಿದ್ದರೆ ಅವೆಲ್ಲವೂ ವ್ಯರ್ಥವಾಗುತ್ತದೆ. ಕೈಕೇಯಿಗಾಗಿರುವುದೂ ಅದೇ. ತನಗೆ ತಿಳಿದಿರುವ ಧರ್ಮಸೂತ್ರಗಳನ್ನು ತನ್ನ ಸ್ವಾಥಕ್ಕಾಗಿ ಬಳಸಿಕೊಳ್ಳುತ್ತಿದ್ದಾಳೆ. ಗಂಗಾನದಿಯೇ ಆದರೂ, ಬಚ್ಚಲುಮನೆಯಿಂದ ಹೊರಬಂದರೆ ಅದನ್ನು ಯಾರೂ ತೀರ್ಥವೆಂದು ಪರಿಗಣಿಸುವುದಿಲ್ಲ. ರಾಜನನ್ನು ಕರೆದೊಯ್ಯಲು ಸುಮಂತ್ರ ಕೈಕೇಯಿಯ ಅರಮನೆಗೆ ಬಂದಾಗ ಎಲ್ಲದರಲ್ಲಿಯೂ ಸೋತ ರಾಜನೇ “ರಾಮನನ್ನು ನೋಡಬೇಕೆಂದಿದ್ದೇನೆ, ಅವನನ್ನಿಲ್ಲಿಗೆ ಕರೆದುಕೊಂಡು ಬಾ” ಎನ್ನುತ್ತಾನೆ. ಆಗಲೆಂದು ಹೊರಟ ಸುಮಂತ್ರನಿಗೆ ಮನಸ್ಸಿನಲ್ಲಿ ಏನೋ ಒಂಡು ಸಂಶಯಕಾಡಿತು. ಸಭೆಗೆಬಂದವ ಅದಾಗಲೇ ಬಂದುಸೇರಿದ್ದ ಅರಸರ ವಿಷಯಗಳನ್ನು ತಿಳಿಸುವ ನೆವಮಾಡಿ ಮತ್ತೊಮ್ಮೆ ಕೈಕೇಯಿಯ ಅಂತಃಪುರಕ್ಕೆ ಬಂದ. ಕೈಕೇಯಿಗೆ ರಾಮನನ್ನು ಗುಪ್ತವಾಗಿ ಅರಣ್ಯಕ್ಕೆ ಕಳುಹಿಸಿ ಭರತನನ್ನು ಪಟ್ಟಾಭಿಷೇಕಕ್ಕೆ ಏರಿಸಬೇಕಿತ್ತು. ಚಾಣಾಕ್ಷಳಾಗಿದ್ದ ಆಕೆಗೆ ಈ ವಿಷಯ ಬಹಿರಂಗಕ್ಕೆ ಬಂದರೆ ಸಾಮಂತರೆಲ್ಲರೂ ತಿರುಗಿಬೀಳುವರು ಎನ್ನುವುದರ ಅರಿವಿತ್ತು. ಅದಕ್ಕಾಗಿಯೇ ಅವಳು ರಾಮ ತನ್ನ ಮನೆಗೇ ಬರಲಿ ಎಂದು ರಾಜನನ್ನು ಒತ್ತಾಯಿಸಿದಳು. ಎರಡನೆಯ ಸಾರಿ ಸುಮಂತ ಬಂದಾಗ ಸ್ವಲ್ಪ ಸಿಟ್ಟಿನಿಂದಲೇ ರಾಮನನ್ನು ಇಲ್ಲಿಗೆ ಕರೆತರಬೇಕು. ಇದು ತನ್ನ ಆಜ್ಞೆ ಎಂದು ಕಠೋರವಾಗಿಯೇ ಹೇಳುತ್ತಾನೆ. “ದಶರಥನ ಮಾತು ಸೋತ ಹೊತ್ತು ಅದು”. ದೊರೆ ಅಸಹಾಯಕನಾಗಿದ್ದ. ತನ್ನೆದುರೇ ತನ್ನ ಪರವಾಗಿ ಕೈಕೇಯಿ ರಾಮನಲ್ಲಿ ತನ್ನ ವರದ ಕುರಿತು ಒಡಂಬರಿಸುತ್ತಿರುವಾಗ ಮೌನವಾಗಿದ್ದ. ನಾಲಿಗೆ ಮಾತನ್ನು ಆಡುವುದು ಬುದ್ಧಿಯಬಲದಿಂದ. ದಶರಥನ ಬುದ್ಧಿಯನ್ನು ಸಂಪೂರ್ಣವಾಗಿ ಕೈಕೇಯಿ ಆಕ್ರಮಿಸಿಕೊಂಡಿದ್ದಳು. ರಾಮನ ಪ್ರಿಯಮಾತೆ ಕೈಕೇಯಿ ರಾಜನ ಪರವಾಗಿ ಆಡುವ ಮಾತಾಗಿದ್ದಳು. ಸಮಯ ಸರಿದಷ್ಟೂ ತನಗೇ ಅಪಾಯವೆಂದು ಅವಳಿಗೆ ಅರಿವಾಗತೊಡಗಿತು. ತಂದೆಯ ನೋಡಲು ಬಂದ ರಾಮ ಆತನ ಚಿಂತೆಗೆ ಕಾರಣವನ್ನು ಕೇಳೆದರೆ ಆತನಲ್ಲಿ ದೊರೆಯ ಮನಸ್ಸಿನಲ್ಲಿರುವುದು ಭರತನು ರಾಜನಾಗುವ ಮತ್ತು ರಾಮನ ಅರಣ್ಯಗಮನದ ವರಗಳನ್ನು ಹೇಳುತ್ತಾಳೆ. ಅಷ್ಟೇ ಅಲ್ಲ,’ “ಎಲ್ಲಿಯವರೆಗೆ ನೀನು ಈ ಅಯೋಧ್ಯೆಯನ್ನು ಬಿಟ್ಟು ಅರಣ್ಯಕ್ಕೆ ಹೋಗುವುದಿಲ್ಲವೋ ಅಲ್ಲಿಯವರೆಗೆ ರಾಜನು ಸ್ನಾನವನ್ನೂ ಮಾಡುವುದಿಲ್ಲ, ಊಟವನ್ನೂ ಮಾಡುವುದಿಲ್ಲ” ಎನ್ನುವ ಮಾತನ್ನು ಹೇಳಿದಾಗ ರಾಮ ಇನ್ನು ತಡಮಾಡುವುದು ಸರಿಯಲ್ಲವೆಂದು ಅರಣ್ಯಕ್ಕೆ ಹೊರಟಕಥೆ ಎಲ್ಲರಿಗೂ ಚಿರಪರಿಚಿತ.

dhavala dharini king dasharatha

ದಶರಥನಿಗೆ ರಾಮನ ಅಗಲುವಿಕೆಯ ದುಃಖಕ್ಕಿಂತ ಆತ ಸುಮಂತ್ರನ ಹತ್ತಿರ ತನ್ನ ತಂದೆ ಮತ್ತು ತಾಯಿಗೆ ಹೇಳುವ ಸಂದೇಶ ಇನ್ನಷ್ಟು ಶೋಕವನ್ನು ಕೊಡುತ್ತದೆ. ರಾಮ ತನ್ನ ತಾಯಿಗೆ ತಾಳ್ಮೆಯಿಂದ ಇರಲು ಹೇಳಿಕಳುಹಿಸುತ್ತಾನೆ. ಹದಿನಾಲ್ಕುವರ್ಷಗಳ ತನಕ ಹೇಗೋ ಭರತನ ಜೊತೆ ಹೊಂದಿಕೊಂಡು ಹೋಗು ಎಂದಿದ್ದ. ಭರತನಿಗೂ ಕೈಕೇಯಿಯಂತೇ ತನ್ನ ತಾಯಯಿಂದರನ್ನು ನೋಡಿಕೊಳ್ಳುವಂತೆ ಕಾಠಿಣ್ಯದಿಂದ ತುಂಬಿದ ಎಚ್ಚರಿಕೆಯ ಸಂದೇಶನ್ನು ಕಳಿಹಿಸುತ್ತಾನೆ. ಕೌಸಲ್ಯಯ ಕುರಿತು ಹೇಳುವಾಗ ರಾಮನ ಕಣ್ಣಲ್ಲಿ ನೀರು ಹರಿಯುತ್ತಿರುವುದನ್ನು ಕಂಡ ಲಕ್ಷ್ಮಣ ಕ್ರುದ್ಧನಾಗಿರುವ ವಿಷಯವನ್ನು ಹೇಳುವಾಗ ಅರಸನಿಗೆ ಕಾಮಮೋಹಿತನಾಗಿದ್ದ ತಾನೇ ಅವಸರದಿಂದ ಕೈಕೇಯಿಯನ್ನು ಓಲೈಸಲು ಹೋದೆ ಅನಿಸುತ್ತದೆ. ರಾಜ ಯಾವ ನಿರ್ಣಯಗಳನ್ನು ಕೈಗೊಳ್ಳುವಾಲೂ ಮೊದಲು ಅಮಾತ್ಯರೊಡನೆ ಸಮಾಲೋಚಿಸಿ ಅವರ ಸಲಹೆಪಡೆದು, ಅದು ಧರ್ಮಸಮ್ಮತವಾಗಿದ್ದರೆ ತನಗೆ ಯುಕ್ತವಾದ ನಿರ್ಣಯವನ್ನು ಕೈಗೊಳ್ಳಬೇಕು. ಇಲ್ಲಿ ಅದೇನನ್ನೂ ಮಾಡದೇ ಇರುವ ಅಪರಾಧೀ ಭಾವ ಕಾಡುತ್ತದೆ. ವನವಾಸಕ್ಕೆ ಹೊರಟ ರಾಮ, ಸೀತಾ ಲಕ್ಷ್ಮಣರು ನಗುತ್ತಲೇ ಹೊರಟರು, ಗುಹನಲ್ಲಿ ಆಲದ ಹಾಲನ್ನು ತರಿಸಿ ತಪಸ್ವಿಗಳಂತೆ ಜಟಾಧಾರಿಯಾದ ವಿಷಯವನ್ನು ಕೇಳಿದ ಕೌಸಲ್ಯೆಯ ಮಾತ್ರಭಾವಕ್ಕೆ ಬಲವಾದ ನೋವನ್ನು ಕೊಡುತ್ತದೆ. ಅನೇಕವರ್ಷಗಳಕಾಲ ಧಶರಥನಿಂದ ಅಲಕ್ಷಕ್ಕೆ ಒಳಗಾದರೂ ಆಕೆ ಅದನ್ನೆಲ್ಲ ಸಹಿಸಿಕೊಂಡು ಮೌನಿಯಾಗಿದ್ದವಳು ಬಲುತೀಕ್ಷ್ಣವಾದ ಮಾತುಗಳಿಂದ ಗಂಡನನ್ನು ನಿಂದಿಸುತ್ತಾಳೆ. ಕೊನೆಯದಾಗಿ “ಮಹರಾಜಾ! ನಿನ್ನ ಈ ದುಶ್ಚರ್ಯೆಯಿಂದಾಗಿ ನಾನು ಮತ್ತು ನನ್ನ ಮಗನು ಮಾತ್ರ ವಿನಾಶ ಹೊಂದಲಿಲ್ಲ. ರಾಮನನ್ನು ಕಾಡಿಗಟ್ಟಿ ರಾಷ್ಟ್ರಸಹಿತವಾದ ರಾಜ್ಯವನ್ನು ಹಾಳುಮಾಡಿದೆ. (ಹತಂ ತ್ವಯಾ ರಾಜ್ಯಮಿದಂ ಸರಾಷ್ಟ್ರಂ ಹತಸ್ತಥಾತ್ಮಾ ಸಹ ಮಂನ್ತ್ರಿಭಿಶ್ಚ) ಮಂತ್ರಿಗಳೊಡನೇ ನೀನೂ ಹಾಳಾದೆ” ಎನ್ನುವ ಕಠೋರಮಾತುಗಳನ್ನಾಡುತ್ತಾಳೆ.

ಅದುತನಕ ಅದುಮಿಟ್ಟುಕೊಂಡ ಅವಮಾನ, ತಿರಸ್ಕಾರಗಳೆಲ್ಲವೂ ಸ್ಪೋಟಗೊಂಡಹೊತ್ತು ಅದು. ಆಕೆಯ ಮಾತುಗಳು ಎಷ್ಟು ತೀಕ್ಷ್ಣವಾಗಿತ್ತೆಂದರೆ ದಶರಥ ಅದನ್ನು ಕೇಳಿದವನೇ ಮೂರ್ಛಿತನಾದ. ಆತನನ್ನು ಉಪಚರಿಸಿದ ಕೌಸಲ್ಯೆ ತಾನು ಹಾಗೇ ಮಾತಾಡಬಾರದಾಗಿತ್ತೆಂದು ದುಃಖಪಡುತ್ತಾಳೆ. ದಶರಥನ ಕಾಲಿಗೆ ಬಿದ್ದು ತನ್ನನ್ನು ಕ್ಷಮಿಸು ಎಂದು ಕೇಳಿಕೊಳ್ಳುತ್ತಾಳೆ. ಕೌಸಲ್ಯಾ ಮತ್ತು ಸುಮಿತ್ರಾ ಇಬ್ಬರೂ ಸೇರಿ ಗಂಡನ ಶುಶ್ರೂಷೇ ಮಾಡುತ್ತಾ ತಾವೇ ದುಃಖಿಸುತ್ತಲೂ ಇರುತ್ತಾರೆ. ದಶರಥನಿಗೆ ತಾನು ಇಷ್ಟೆಲ್ಲಾ ಒಳ್ಳೆಯ ಕಾರ್ಯವನ್ನು ಮಾಡಿದರೂ ತನಗೆ ಏಕೆ ಹೀಗೆ ಆಯಿತು ಎಂದು ಚಿಂತಿಸುತ್ತಾ ಯಾವುದೋ ಒಂದು ವಿಷಯವನ್ನು ಹೇಳಲೋ ಬೇಡವೋ ಎನ್ನುವಂತೆ ಇದ್ದ. ಆರನೆಯದಿನದ ಅರ್ಧರಾತ್ರಿಯಲ್ಲಿ ಇದ್ದಕ್ಕಿದ್ದಂತೆ ತನ್ನ ಪುತ್ರವಿಯೋಗಕ್ಕೆ ಕಾರಣವಾದ ತನ್ನ ಕರ್ಮಫಲದ ಕುರಿತು ಹೇಳಲು ನಿಶ್ಚಯಿಸಿದ. ಅದು ಎಲ್ಲರಿಗೂ ತಿಳಿದ ಕಥೆಯಾದ ಶ್ರವಣಕುಮಾರನ ಕಥೆ, ರಾಮಾಯಣದಲ್ಲಿ ಶ್ರವಣಕುಮಾರ ಎನ್ನುವ ಹೆಸರಿಲ್ಲ. ಕರಣ ಎಂದು ಆತನ ಹೆಸರು. ಆತನ ತಂದೆ ಓರ್ವ ಋಷಿಯಾಗಿದ್ದ. ಈ ಕಥೆ ಒಂದೇ ರೀತಿಯದಾದರೂ ಕಾಲಾಂತರದಲ್ಲಿ ಬೇರೆ ಬೇರೆ ರಾಮಾಯಣಗಳಲ್ಲಿ ಶ್ರವಣಕುಮಾರ ಎನ್ನುವ ಹೆಸರು ಬಂತು.

ಈ ಘಟನೆ ನಡೆಯುವಾಗ ದಶರಥನಿಗೆ ಪ್ರಾಯದ ಕಾಲ. ಆತ ಶಬ್ದವೇಧಿ ವಿದ್ಯೆಯಲ್ಲಿ ಮಹಾಚತುರ ಎನ್ನುವ ಕೀರ್ತಿ ಹಬ್ಬಿತ್ತು. ಅದನ್ನು ಪ್ರಯೋಗಿಸುವ ಹವ್ಯಾಸ ದೊರೆಗೆ. ಹಾಗಾಗಿ ಕಾಡಿಗೆ ಹೋಗಿ ಬೇಟೆಯಾಡುವ ವ್ಯಸನವನ್ನು ಹಚ್ಚಿಕೊಂಡಿದ್ದ. ಯುವರಾಜನಾಗಿದ್ದ ಆತನಿಗೆ ಆಗಿನ್ನೂ ಮದುವೆಯಾಗಿರಲಿಲ್ಲ (ದೇವ್ಯನೂಢಾ ತ್ವಮಭವೋ ಯುವರಾಜೋ ಭವಾಮ್ಯಹಮ್). ಮಳೆಗಾಲದ ಒಂದು ದಿನ ಬೇಟೆಗೆ ಹೋದಾಗ ಅನೆ ನೀರು ಕುಡಿಯುತ್ತಿರುವ ಸದ್ದು ಕೇಳಿಬಂತು. ತನ್ನ ಬಾಣದಿಂದ ಆನೆಯನ್ನು ಕೊಲ್ಲಬಲ್ಲೆ ಎನ್ನುವ ಹಮ್ಮಿನಿಂದ ಶಬ್ದ ಬಂದ ಕಡೆ ಬಾಣವನ್ನು ಬಿಟ್ಟ. ಮರುಕ್ಷಣದಲ್ಲಿ ಮನುಷ್ಯನ ಕೂಗು ಕೇಳಿಬಂತು. ಓಡಿಹೋಗಿ ನೋಡಿದರೆ ಆತ ಬಿಟ್ಟ ಬಾಣ ದೇಹದಲ್ಲಿ ನೆಟ್ಟುಕೊಂಡ ಕಾರಣದಿಂದ ಪ್ರಾಣೋತ್ಕ್ರಮಣ ಸ್ಥಿತಿಯಲ್ಲಿದ್ದ ಋಷಿಕುಮಾರನನ್ನು ಕಂಡ. ಎಲ್ಲವೂ ಕೈಮೀರಿ ಹೋಗಿತ್ತು. ಆತನೇ ಕುರುಡರಾದ ತನ್ನ ತಂದೆಯ ವಿಷಯವನ್ನು ಹೇಳಿ ಅವರಿಗೆ ನೀರನ್ನು ತೆಗೆದುಕೊಂಡು ಹೋಗು ಎಂದು ಕೇಳಿದ. ದಶರಥ ಯೌವನ ಮದದಿಂದ ಅಪರಾಧವನ್ನು ಮಾಡಿದರೂ ಪಶ್ಚಾತ್ತಾಪದಿಂದ ತೋಯ್ದು ಹೋಗಿದ್ದ. ಕುರುಡ ದಂಪತಿಗಳ ಬಳಿಗೆ ಬಂದು ಪ್ರಾಮಾಣಿಕವಾಗಿ ನಡೆದ ಸಂಗತಿಯನ್ನು ಹೇಳಿದ. ಬಾಲಕನ ಶವ ಸಂಸ್ಕಾರವನ್ನು ಅವರ ಹತ್ತಿರವೇ ಮಾಡಿಸಿದ. ಉದ್ಧೇಶಪೂರ್ವಕವಾಗಿ ತನ್ನ ಮಗನನ್ನು ಕೊಲ್ಲದ ಕಾರಣ ದೊರೆಗೆ ಬ್ರಹ್ಮಹತ್ಯಾ ಶಾಪವು ತಟ್ಟದು ಎಂದು ಹೇಳಿದರು. ಸಾಯುವ ಕಾಲದಲ್ಲಿ ತಮಗೆ ಆದ ರೀತಿಯಲ್ಲಿಯೇ ನಿನಗೂ ಪುತ್ರವಿಯೋಗವುಂಟಾಗಲಿ ಎಂದು ಶಾಪವನ್ನಿತ್ತು ಮಗನ ಚಿತೆಯನ್ನು ಏರಿ ದಿವ್ಯ ಶರೀರವನ್ನು ಧರಿಸಿ ಸ್ವರ್ಗಕ್ಕೆ ಹೋದರು.

king dasharatha kaikeyi dhavala dharini column

ರಾಜ ಕಾಲಾಂತರದಲ್ಲಿ ಅದನ್ನೆಲ್ಲ ಮರೆತಿದ್ದ. ಈಗ ರಾಮನ ಅಗಲುವಿಕೆಯೆನ್ನುವದು ಆತನಲ್ಲಿ ಅಪರಾಧೀ ಭಾವವನ್ನು ಮೂಡಿಸಿದೆ. ತನ್ನ ಕೊನೆಯ ದಿನಗಳು ಹತ್ತಿರ ಬಂತು ಎಂದು ದೊರೆಗೆ ಅನಿಸಲು ಸುರುವಾಯಿತು. ಸತ್ಯವಂತನಾದ, ಧರ್ಮಮಾರ್ಗದಲ್ಲಿ ನಡೆದ ತನಗೆ ಈ ಗತಿ ಏಕೆ ಬಂತು ಎಂದು ಚಿಂತಾಮಗ್ನನಾಗಿರುವಾಗ ಅವನಿಗೆ ತಾನೆಸಗಿದ ಈ ದುಷೃತ್ಯ ನೆನಪಿಗೆ ಬಂತು. ಪಶ್ಚಾತ್ತಾಪದಿಂದ ತೋಯ್ದು ಹೋಗಿದ್ದ. ಮುನಿಯ ಶಾಪ ಫಲಿಸುವ ಕಾಲ ಬಂತು ಎಂದು ಕೌಸಲ್ಯೆಗೆ ಹೇಳಿ ಇದಕ್ಕೆ ಕಾರಣ ತನ್ನ ಕರ್ಮಫಲ ಎನ್ನುತ್ತಾನೆ. ಮಾಡಿದ್ದಕ್ಕೆ ತಕ್ಕ ಕರ್ಮಫಲವನ್ನು ಅನುಭವಿಸುತ್ತಾರೆ ಎನ್ನುವ ನಂಬಿಕೆ ಪುನರ್ಜನ್ಮದಷ್ಟೇ ಪ್ರಾಚೀನವಾದುದು. ತಾನು ಬದುಕಬೇಕೆಮ್ದರೆ ರಾಮ ಬಂದು ತನ್ನನ್ನು ಒಂದು ಬಾರಿ ಸ್ಪರ್ಶಿಸಿದರೆ ಸಾಕು, ತಾನು ಬದುಕುವೆ ರಾಘವನ ವಿಷಯದಲ್ಲಿ ಘನತೆಯಿಂದ ತಾನು ನಡೆದುಕೊಳ್ಳಲಿಲ್ಲ ವೆಂದು ನಿರಂತರವಾಗಿ ಶೋಕಿಸುತ್ತಾನೆ. ಇಷ್ಟಾದರೂ ಪಾಯಸದ ಮಹಿಮೆಯಿಂದ ಜನಿಸಿದ ಮಕ್ಕಳು ಎನ್ನುವ ವಿಷಯವೇ ಮರೆತುಹೋಗಿದೆ. ಋಷಿಮುನಿಗಳಿಗೆ ಕಂಡ ರಾಮನ ನಿಜರೂಪದ ಅರಿವು ದಶರಥನಿಗೆ ಆಗಲೇ ಇಲ್ಲ. ಅತನನ್ನು ಸಮಾಧಾನ ಮಾಡುತ್ತಾ ಕೌಸಲ್ಯೆ ಮತ್ತು ಸುಮಿತ್ರೆಯರು ತಮ್ಮ ನಡುವೆ ಮಲಗಿಸಿಕೊಂಡಿದ್ದರು ಆರುದಿನಗಳಿಂದಲೂ ಬಾರದ ನಿದ್ರೆ ಇಬ್ಬರೂ ರಾಣಿಯರಿಗೂ ತಡರಾತ್ರಿ ಬಂತು. ರಾಘವನ ನೆನಪು ಮಾಡುತ್ತಲೇ ಇದ್ದ ರಾಜನನ್ನು ಚಿರನಿದ್ರೆ ಸೆಳೆದುಬಿಟ್ಟಿತು.

ರಘುವಂಶದ ಘನತೆಯ ಚಕ್ರವರ್ತಿಯೆಂದು ಹೆಸರು ಮಾಡಿದ ಯಶೋವಂತನಾದ ದೊರೆ ತನ್ನ ಕರ್ಮ ಫಲವನ್ನು ಅನುಭವಿಸಿ ಕೊನೆಗಾಲವನ್ನು ಕಂಡ. ಯಾವಾತ ತನ್ನ ಕರ್ಮಫಲವನ್ನು ಜೀವಿತಾವಧಿಯಲ್ಲಿ ಅನುಭವಿಸುತ್ತಾನೆಯೋ, ಆ ಕಾರಣದಿಂದ ಅವರು ಪಶ್ಚಾತ್ತಾಪ ಪಡುತ್ತಾರೆಯೋ ಅಂತವರು ಸತ್ತಮೇಲೆ ನರಕದಲ್ಲಿ ಆ ಶಿಕ್ಷೆ ಅನುಭವಿಸುವುದಿಲ್ಲ. ಈ ಎಲ್ಲಾ ಅವಸ್ಥೆಯನ್ನು ಅನುಭವಿಸಿದ ಸೂರ್ಯವಂಶದ ಯಶೋವಂತ ಅರಸನೂ ಸಹ ಸ್ವರ್ಗಕ್ಕೆ ನಡೆದ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

Continue Reading

ಅಂಕಣ

ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

ಸೈಬರ್‌ ಸೇಫ್ಟಿ ಅಂಕಣ: ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಸಾಧಿಸುವುದು ಮುಖ್ಯ. ಸಂಪರ್ಕಿಸಲು, ಹಂಚಿಕೊಳ್ಳಲು ಮತ್ತು ಮಾಹಿತಿ ಪಡೆಯಲು ಸಾಮಾಜಿಕ ಮಾಧ್ಯವನ್ನು ಬಳಸಿ. ಆದರೆ ನಿಮ್ಮ ಜೀವನದಲ್ಲಿ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ ಮತ್ತು ಆರೋಗ್ಯಕರ ಅಭ್ಯಾಸಗಳ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಿ.

VISTARANEWS.COM


on

esim cyber safety column
Koo

ಭಾಗ-2

cyber safety logo

ಸೈಬರ್‌ ಸೇಫ್ಟಿ ಅಂಕಣ: ಸಾಮಾಜಿಕ ಮಾಧ್ಯಮದ ವ್ಯಸನದ (Social media addiction) ಬಗ್ಗೆ ಸ್ನೇಹಿತ ನೀರಜ್‌ ಕುಮಾರ್‌ ಅವರ ವೀಡಿಯೊಗಳನ್ನು ಆಧರಿಸಿ ಬರೆದ ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ? ಲೇಖನದ ಮುಂದುವರಿದ ಭಾಗ ಈ ವಾರ. ಕಾರಣಾಂತರದಿಂದ ಎರಡು ವಾರಗಳ ಬ್ರೇಕ್‌ ಕೊಡಬೇಕಾಯಿತು.

ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯೇ ಎಂದು ಸ್ವಪರೀಕ್ಷೆ ಮಾಡಿಕೊಳ್ಳಲು ನೀರಜ್‌ 5C ಫ್ರೇಮ್‌ವರ್ಕ್‌ ಬಗ್ಗೆ ತಮ್ಮ ವೀಡಿಯೊದಲ್ಲಿ ವಿವರಿಸಿದ್ದಾರೆ. ಕಡುಬಯಕೆ (Craving), ನಿಯಂತ್ರಣ (Control), ನಿಭಾಯಿಸುವಿಕೆ (Coping), ಒತ್ತಾಯ (Compulsioin) ಮತ್ತು ಪರಿಣಾಮ (Consequence) ಎಂಬ ಈ ಐದು C ಗಳು ನಿಮ್ಮಲ್ಲಿ ಎಷ್ಟು ಪ್ರಮಾಣದಲ್ಲಿದೆ ಎಂದು ಸೊನ್ನೆಯಿಂದ ಹತ್ತರವರೆಗಿನ ಮಾಪನದಲ್ಲಿ ಅಂಕ ಕೊಟ್ಟುಕೊಳ್ಳಬಹುದು. ಅದರ ಒಟ್ಟು ಮೊತ್ತ ಶೇಕಡ 60ಕ್ಕಿಂತ ಹೆಚ್ಚು ಅಂದರೆ ಮೂವತ್ತು ಅಥವಾ ಜಾಸ್ತಿ ಇದ್ದರೆ ನಿಮ್ಮ ವ್ಯಸನ ಗಂಭೀರಮಟ್ಟದಲ್ಲಿದೆ ಎನ್ನುತ್ತಾರೆ. ಇದರಿಂದ ಹೊರಬರಲು ಮಾನಸಿಕ ತಜ್ಞರೊಂದಿಗೆ ಸಮಾಲೋಚನೆ ಮಾಡುವುದು ಒಳ್ಳೆಯದು.

ಈಗ ಈ ವ್ಯಸನದಿಂದ ಹೊರಬರುವುದು ಹೇಗೆ ನೋಡೋಣ.

ಸಾಮಾಜಿಕ ಮಾಧ್ಯಮ ವ್ಯಸನವನ್ನು ನಿವಾರಿಸುವ ಮೊದಲ ಹೆಜ್ಜೆ ನಿಮಗೆ ಸಮಸ್ಯೆ ಇದೆ ಎಂದು ಒಪ್ಪಿಕೊಳ್ಳುವುದು. 5C ಫ್ರೇಮ್‌ವರ್ಕ್‌ನಲ್ಲಿ ನಿಮ್ಮ ಸ್ಕೋರ್‌ಗಳನ್ನು ಪರಿಶೀಲನೆ ಮಾಡಿ, ಯಾವ ಅಂಶದಲ್ಲಿ ನಿಮ್ಮ ಸ್ಕೋರ್ ಜಾಸ್ತಿ ಇದೆ ಎನ್ನುವುದನ್ನು ಕಂಡುಕೊಳ್ಳಿ. ಅವುಗಳನ್ನು ಕಡಿಮೆ ಮಾಡುವ ಸಲಹೆಗಳನ್ನು ಅನುಸರಿಸಿ. ಜೊತೆಗೆ ನಿಯಮಿತವಾಗಿ ಮರುಮೌಲ್ಯಮಾಪನ ಮಾಡಿಕೊಂಡು, ಆರೋಗ್ಯಕರ ಸಾಮಾಜಿಕ ಮಾಧ್ಯಮ ಅಭ್ಯಾಸಗಳ ಕಡೆಗೆ ನಿಮ್ಮ ಪ್ರಗತಿಯನ್ನು ನೀವು ಟ್ರ್ಯಾಕ್ ಮಾಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಮಿತಿಗಳನ್ನು ರೂಪಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನೀರಜ್ ಕುಮಾರ್ ಒತ್ತಿಹೇಳುತ್ತಾರೆ.

ಸಾಮಾಜಿಕ ಮಾಧ್ಯಮವು ಸಂಪರ್ಕ ಮತ್ತು ಮಾಹಿತಿಗಾಗಿ ಬಳಸುವ ಅಮೂಲ್ಯವಾದ ಸಾಧನವಾಗಿದೆ. ಆದರೆ ಜೀವನದಲ್ಲಿ ಆರೋಗ್ಯಕರ ಸಮತೋಲನವನ್ನು ಕಾಪಾಡಿಕೊಳ್ಳಲು ಇದು ನಿರ್ಣಾಯಕವಾಗಿದೆ. ವ್ಯಸನದ ಚಿಹ್ನೆಗಳನ್ನು ಗುರುತಿಸುವ ಮೂಲಕ ಮತ್ತು ಮಿತಿಮೀರಿದ ಬಳಕೆಯನ್ನು ನಿಗ್ರಹಿಸಲು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ, ನಾವು ನಮ್ಮ ಸಮಯ ಮತ್ತು ಗಮನದ ನಿಯಂತ್ರಣವನ್ನು ಪುನಃ ಪಡೆದುಕೊಳ್ಳಬಹುದು. ಸಾಮಾಜಿಕ ಮಾಧ್ಯಮವು ನಮ್ಮ ಜೀವನವನ್ನು ವರ್ಧಿಸುವಂತೆ ಅಳವಡಿಸಿಕೊಳ್ಳಬಹುದು.

ಕೆಲವು ಉಪಯುಕ್ತ ಸಲಹೆಗಳು: ‌

ಸಮಯದ ಮಿತಿಗಳನ್ನು ಹೊಂದಿಸಿ: ದಿನಕ್ಕೆ ನಿರ್ದಿಷ್ಟ ಸಮಯವನ್ನು ಸಾಮಾಜಿಕ ಮಾಧ್ಯಮಕ್ಕೆ ಮೀಸಲಿಡಿ ಮತ್ತು ಅದಕ್ಕೆ ಬದ್ಧರಾಗಿರಿ.
ಅಧಿಸೂಚನೆಗಳನ್ನು ಆಫ್ ಮಾಡಿ: ಕಂಪಲ್ಸಿವ್ ಫೋನ್ ಬಳಕೆಗೆ ನಿರಂತರ ಅಧಿಸೂಚನೆಗಳು ಪ್ರಮುಖ ಪ್ರಚೋದಕವಾಗಬಹುದು. ಹೆಚ್ಚಿನ ಅಪ್ಲಿಕೇಶನ್‌ಗಳಿಂದ ಅವುಗಳನ್ನು ಆಫ್ ಮಾಡುವುದು ಒಳ್ಳೆಯದು.
ಫೋನ್-ಮುಕ್ತ ವಲಯಗಳನ್ನು ರಚಿಸಿ: ನಿಮ್ಮ ಮನೆಯಲ್ಲಿ ನಿಮ್ಮ ಮಲಗುವ ಕೋಣೆಯಲ್ಲಿ ಅಥವಾ ಊಟ ಮಾಡುವಾಗ ಫೋನ್ ಬಳಕೆಯನ್ನು ನಿರ್ಭಂದಿಸಿ.
ಪರ್ಯಾಯ ಚಟುವಟಿಕೆಗಳನ್ನು ಹುಡುಕಿ: ಸಮಯ ವ್ಯರ್ಥವಾಗುವ ಅನುಪಯೋಗಿ ಸ್ಕ್ರೋಲಿಂಗ್ ಅನ್ನು ನೀವು ಆನಂದಿಸುವ ಚಟುವಟಿಕೆಗಳೊಂದಿಗೆ ಬದಲಾಯಿಸಿ. ಉದಾಹರಣೆಗೆ ಓದುವುದು, ಹೊರಾಂಗಣದಲ್ಲಿ ಸಮಯ ಕಳೆಯುವುದು ಅಥವಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ವೈಯಕ್ತಿಕವಾಗಿ ಬೆರೆಯುವುದು. ಸಂಗೀತ, ಸಾಹಿತ್ಯ, ಚಿತ್ರಕಲೆ ಅಲ್ಲದೆ ಅಂಚೆಚೀಟಿ ಸಂಗ್ರಹಣೆ, ನಾಣ್ಯಗಳ ಸಂಗ್ರಹಣೆ ಮುಂತಾದ ಹವ್ಯಾಸಗಳೂ ನಿಮ್ಮನ್ನು ಮೊಬೈಲ್‌ ಗೀಳಿನಿಂದ ವಿಮುಖಗೊಳಿಸುತ್ತವೆ.

World Social Media Day

ಸಾಮಾಜಿಕ ಮಾಧ್ಯಮ ಡಿಟಾಕ್ಸ್: ನಿಮ್ಮ ಮನಸ್ಸಿನ ರೀಬೂಟ್

ಸಾಮಾಜಿಕ ಮಾಧ್ಯಮ ನಿರ್ವಿಶೀಕರಣವನ್ನು (ಡಿಟಾಕ್ಸಿನೇಷನ್) ಪರಿಗಣಿಸಿ! ನಿರ್ದಿಷ್ಟ ಅವಧಿಗೆ ಸಾಮಾಜಿಕ ಮಾಧ್ಯಮದಿಂದ ವಿರಾಮ ತೆಗೆದುಕೊಳ್ಳಿ, ನಿಮ್ಮ ಮೊಬೈಲ್‌ನ್ನು ಕೇವಲ ಸಂಪರ್ಕಕ್ಕೆ ಮಾತ್ರ ಬಳಸಿ. ಯಾವುದೇ ಸೋಷಿಯಲ್‌ ಆ್ಯಪ್‌ಗಳಿಂದ ದೂರ ಇರಿ. ಅದು ಒಂದು ದಿನ, ವಾರಾಂತ್ಯ ಅಥವಾ ಒಂದು ವಾರವೂ ಆಗಿರಲಿ. ನೈಜ-ಜಗತ್ತಿನ ಸಂಪರ್ಕ ಮತ್ತು ನೀವು ನಿರ್ಲಕ್ಷಿಸಿರುವ ಚಟುವಟಿಕೆಗಳ ಸಂತೋಷಗಳನ್ನು ಮರುಶೋಧಿಸಲು ಇದು ನಿಮಗೆ ಸಹಾಯ ಮಾಡುತ್ತದೆ. ನಿರಂತರ ಸಾಮಾಜಿಕ ಮಾಧ್ಯಮ ಪುಲ್ ಇಲ್ಲದೆ ನೀವು ಎಷ್ಟು ಹೆಚ್ಚು ಉತ್ಪಾದಕ ಮತ್ತು ಪ್ರಸ್ತುತವನ್ನು ಅನುಭವಿಸುತ್ತೀರಿ ಎಂದು ನಿಮಗೇ ಆಶ್ಚರ್ಯವಾಗಬಹುದು.

ನೆನಪಿಡಿ, ನೀವು ಒಬ್ಬಂಟಿಯಲ್ಲ

ಸಾಮಾಜಿಕ ಮಾಧ್ಯಮ ವ್ಯಸನವು ಬೆಳೆಯುತ್ತಿರುವ ಸಮಸ್ಯೆಯಾಗಿದೆ. ಇದರಲ್ಲಿ ನೀವು ಮಾತ್ರ ಸಿಲುಕಿದವರಲ್ಲ. ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಕಾಪಾಡಿಕೊಳ್ಳಲು ಅನೇಕ ಜನರು ಹೆಣಗಾಡುತ್ತಿದ್ದಾರೆ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ, 5C ಫ್ರೇಮ್‌ವರ್ಕ್ ಅನ್ನು ಬಳಸಿಕೊಳ್ಳುವ ಮೂಲಕ ಮತ್ತು ಈ ಸಲಹೆಗಳನ್ನು ಕಾರ್ಯಗತಗೊಳಿಸುವುದರ ಮೂಲಕ, ನಿಮ್ಮ ಸಾಮಾಜಿಕ ಮಾಧ್ಯಮ ಅಭ್ಯಾಸಗಳನ್ನು ನೀವು ನಿಯಂತ್ರಿಸಬಹುದು ಮತ್ತು ಅದು ನಿಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿಯಾಗಬಲ್ಲದು.

ಸಾಮಾಜಿಕ ಮಾಧ್ಯಮ ಮತ್ತು ಮಾನಸಿಕ ಆರೋಗ್ಯ: ಕಾಳಜಿಗೆ ಕಾರಣ

ಸಾಮಾಜಿಕ ಮಾಧ್ಯಮಗಳು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆಯಿಂದ ಹೆಚ್ಚಿದ ಆತಂಕ, ಖಿನ್ನತೆ ಮತ್ತು ಅಸಮರ್ಪಕತೆಯ ಭಾವನೆಗಳ ನಡುವಿನ ಪರಸ್ಪರ ಸಂಬಂಧವನ್ನು ಅಧ್ಯಯನಗಳು ತೋರಿಸಿವೆ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಕಾಣುವ ಜೀವನದ ಕ್ಯುರೇಟೆಡ್ ಮತ್ತು ಅವಾಸ್ತವಿಕ ಚಿತ್ರಣಗಳು ನಿಮ್ಮಲ್ಲಿ ಹೋಲಿಕೆ ಮತ್ತು ಅಸಮರ್ಪಕತೆಯ ಭಾವನೆಗಳಿಗೆ ಕಾರಣವಾಗಬಹುದು. ಸಾಮಾಜಿಕ ಮಾಧ್ಯಮ ಫೀಡ್‌ಗಳು, ಸಾಮಾನ್ಯವಾಗಿ ಎಚ್ಚರಿಕೆಯಿಂದ ರಚಿಸಲಾದ ಹೈಲೈಟ್ ರೀಲ್‌ಗಳು, ವಾಸ್ತವದ ಪ್ರಾತಿನಿಧ್ಯವಲ್ಲ ಎಂಬುದನ್ನು ನೆನಪಿಟ್ಟುಕೊಳ್ಳುವುದು ಬಹಳ ಮುಖ್ಯ.

ನೈಜ ಸಂಪರ್ಕಗಳ ಮೇಲೆ ಕೇಂದ್ರೀಕರಿಸಿ ಮತ್ತು ನೀವು ಪ್ರೀತಿಸುವ ಜೀವನವನ್ನು ನಿರ್ಮಿಸಿ

ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕದಲ್ಲಿರಲು ಸಾಮಾಜಿಕ ಮಾಧ್ಯಮವು ಉತ್ತಮ ಸಾಧನವಾಗಿದೆ, ಆದರೆ ಇದು ನೈಜ-ಪ್ರಪಂಚದ ಸಂವಹನವನ್ನು ಬದಲಿಸಬಾರದು. ಮುಖಾಮುಖಿ ಸಂವಹನಗಳಿಗೆ ಆದ್ಯತೆ ನೀಡಲು ಮತ್ತು ನಿಮ್ಮ ಜೀವನದಲ್ಲಿ ಅರ್ಥಪೂರ್ಣ ಸಂಬಂಧಗಳನ್ನು ಬೆಳೆಸಲು ಪ್ರಯತ್ನವನ್ನು ಮಾಡಿ.

ಅಂತಿಮವಾಗಿ, ಸಾಮಾಜಿಕ ಮಾಧ್ಯಮದೊಂದಿಗೆ ಆರೋಗ್ಯಕರ ಸಮತೋಲನವನ್ನು ಸಾಧಿಸುವುದು ಮುಖ್ಯ. ಸಂಪರ್ಕಿಸಲು, ಹಂಚಿಕೊಳ್ಳಲು ಮತ್ತು ಮಾಹಿತಿ ಪಡೆಯಲು ಸಾಮಾಜಿಕ ಮಾಧ್ಯವನ್ನು ಬಳಸಿ. ಆದರೆ ನಿಮ್ಮ ಜೀವನದಲ್ಲಿ ಪ್ರಾಬಲ್ಯ ಸಾಧಿಸಲು ಬಿಡಬೇಡಿ. ನಿಮ್ಮ ಫೋನ್ ಬಳಕೆಯ ಬಗ್ಗೆ ಗಮನಹರಿಸುವ ಮೂಲಕ ಮತ್ತು ಆರೋಗ್ಯಕರ ಅಭ್ಯಾಸಗಳ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ, ನಿಮ್ಮ ಸಮಯ ಮತ್ತು ಗಮನದ ನಿಯಂತ್ರಣವನ್ನು ನೀವು ಮರುಪಡೆಯಬಹುದು. ಸಾಮಾಜಿಕ ಮಾಧ್ಯಮವು ನಿಮ್ಮ ಜೀವನವನ್ನು (ಸಮಯವನ್ನು) ಕಡಿಮೆಗೊಳಿಸುವುದಕ್ಕಿಂತ ಹೆಚ್ಚಿಸುತ್ತದೆ ಎಂದು ಖಚಿತಪಡಿಸಿಕೊಳ್ಳಬಹುದು. ಆದ್ದರಿಂದ, ನಿಮ್ಮ ಫೋನ್ ಅನ್ನು ಕೆಳಗೆ ಇರಿಸಿ, ಪರದೆಯಿಂದ ಮೇಲಕ್ಕೆ ನೋಡಿ ಮತ್ತು ಅಲ್ಲಿಗೆ ಹೋಗಿ ಮತ್ತು ನಿಮ್ಮ ಜೀವನವನ್ನು ಜೀವಿಸಿ.
ಮೋಬೈಲ್‌ ಸ್ಕ್ರೋಲಿಂಗ್‌ ನಿಲ್ಲಿಸಿ, ಜೀವನದಲ್ಲಿ ಸ್ಟ್ರೋಲಿಂಗ್ ಮಾಡಿ. Stop scrolling, Start Strolling.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಮುದ್ರಾ ಯೋಜನೆಯ ಹೆಸರಲ್ಲಿ ರಾಷ್ಟ್ರವ್ಯಾಪಿ ಸೈಬರ್ ವಂಚನೆ

Continue Reading

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ರಾಜಮಾರ್ಗ ಅಂಕಣ: ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ.

VISTARANEWS.COM


on

Lok Sabha Election
Koo

ಮತದಾನ ಮಾಡಲು ಹೆಚ್ಚಿನ ಕಡೆ ಸುಶಿಕ್ಷಿತ ಯುವಜನತೆಯ ನಿರುತ್ಸಾಹ ಯಾಕೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತದಲ್ಲಿ ಚುನಾವಣೆಗಳನ್ನು ʼಪ್ರಜಾಪ್ರಭುತ್ವದ ಹಬ್ಬ’ (Festivals of democracy) ಎಂದು ಕರೆಯುತ್ತೇವೆ. ದೇಶ ಅಭಿವೃದ್ಧಿ ಆಗಬೇಕಾದರೆ ಸಧೃಡ ಸರಕಾರಗಳು ಬೇಕು. ದೇಶದ ನಾಗರಿಕರು ಚುನಾವಣೆಯಲ್ಲಿ ಬಂದು ಮತ ಚಲಾವಣೆ (Voting) ಮಾಡಬೇಕಾದದ್ದು, ಬಲಿಷ್ಟ ಸರಕಾರ ರಚಿಸಬೇಕಾದದ್ದು ಅನಿವಾರ್ಯ.

ದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಭಾರತ ಸರಕಾರದ SVEEP (Systematic Voters’ Education and Electoral Participation) ಎಂಬ ಸಮಿತಿಯು ಇದೆ. ಅದು ವಿವಿಧ ಮಾಧ್ಯಮಗಳ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತದೆ. ಮನರಂಜನಾ ಮಾಧ್ಯಮಗಳನ್ನು ಕೂಡ ಬಳಸಿಕೊಳ್ಳುತ್ತದೆ. ಆದರೂ ನಗರ ಪ್ರದೇಶಗಳ ಕೆಲವು ಕಡೆಗಳಲ್ಲಿ ಮತದಾನದ ಪ್ರಮಾಣವು ಉತ್ತೇಜಕವಾಗಿ ಇಲ್ಲ. ವಿಶೇಷವಾಗಿ ಹೆಚ್ಚಿನ ವಿದ್ಯಾವಂತ ಯುವಜನತೆಯು ಮತದಾನದಲ್ಲಿ ಉತ್ಸಾಹ ತೋರುತ್ತಿಲ್ಲ ಎನ್ನುವ ಆರೋಪಗಳು ಇವೆ. ಈ ಬಾರಿ ಕೂಡ ಹೆಚ್ಚು ಟೆಕ್ಕಿಗಳು ಇರುವ ಬೆಂಗಳೂರು ಲೋಕಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಮತದಾನ ದಾಖಲು ಆಗಿದೆ. ಯಾಕೆ ಹೀಗೆ? ಯಾರು ಗೆದ್ದರೂ ನಮಗೇನು ಲಾಭ ಎಂಬ ನಕಾರಾತ್ಮಕ ಧೋರಣೆ ಯಾಕೆ?

ಭಾರತದಲ್ಲಿ ಕಡ್ಡಾಯ ಮತದಾನ ಯಾಕೆ ಸಾಧ್ಯವಿಲ್ಲ?

ಭಾರತವು ಡೆಮಾಕ್ರಟಿಕ್ ರಾಷ್ಟ್ರ ಅನ್ನುವುದು ಈ ಪ್ರಶ್ನೆಗೆ ಉತ್ತರ. ಅದಕ್ಕೆ ಪೂರಕವಾದ ಕಾನೂನು ಇನ್ನೂ ಭಾರತದಲ್ಲಿ ರೂಪುಗೊಂಡಿಲ್ಲ. ಇಲ್ಲಿ ಯಾರಿಗೂ ಒತ್ತಡ ಹಾಕುವ ಹಾಗಿಲ್ಲ. ಮನ ಒಲಿಕೆಯ ಮೂಲಕ ಮಾತ್ರ ಯಾರನ್ನಾದರೂ ಮತ ಹಾಕಲು ಕರೆದುಕೊಂಡು ಬರಬಹದು. ನಾಗರಿಕರನ್ನು ಎಜೂಕೆಟ್ ಮಾಡುವುದು ಸುಲಭದ ಕೆಲಸ ಅಲ್ಲ.

ಸ್ವೀಪ್ ಸಮಿತಿಯು ಅವಿರತ ಪ್ರಯತ್ನಗಳು

SVEEP ಸಮಿತಿಯು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಆಕರ್ಷಕವಾದ ಮತದಾನ ಕೇಂದ್ರಗಳನ್ನು ತೆರೆದಿದೆ. ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನವನ್ನು ಮಾಡುವ ಸೌಲಭ್ಯವನ್ನು ನೀಡಿದೆ. ಮತದಾನ ಸಿಬ್ಬಂದಿಗಳಿಗೆ EDC ಮತ್ತು ಪೋಸ್ಟಲ್ ಬ್ಯಾಲೆಟ್ ಸೌಲಭ್ಯಗಳನ್ನು ನೀಡಿದೆ. BLOಗಳು ಮನೆ ಮನೆಗೆ ಹೋಗಿ ಗುರುತು ಚೀಟಿ ನೀಡಲು ಆದೇಶ ಮಾಡಿದೆ. No Voter to be Left Behind ಎಂಬ ಘೋಷಣಾ ವಾಕ್ಯದಡಿಯಲ್ಲಿ ಅವಿರತ ಜಾಗೃತಿ ಕೆಲಸಗಳು ಆಗಿವೆ. ಯಕ್ಷಗಾನ, ಬೀದಿ ನಾಟಕ ಮೊದಲಾದ ಮಾಧ್ಯಮಗಳು ಕೂಡ ಬಳಕೆ ಆಗಿವೆ. ಆದರೂ ಕೆಲವು ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಕಡಿಮೆ ಇದೆ ಎನ್ನುವುದು ನೋವಿನ ಸಂಗತಿ.

rajamarga column voting 1

31 ರಾಷ್ಟ್ರಗಳಲ್ಲಿ ಕಡ್ಡಾಯ ಮತದಾನ ಇದೆ!

ಈ ರಾಷ್ಟ್ರಗಳಲ್ಲಿ ಹೆಚ್ಚಿನವು ಡೆಮಾಕ್ರಟಿಕ್ ರಾಷ್ಟ್ರಗಳೇ ಆಗಿವೆ. ಆದರೆ ಅಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಯಲ್ಲಿದೆ. ಮತ ಹಾಕದವರಿಗೆ ಕಾರಣ ಕೇಳುವ ನೋಟೀಸ್ ಸರಕಾರ ಜಾರಿ ಮಾಡುವುದರಿಂದ ಹಿಡಿದು, ದಂಡ ವಿಧಿಸುವ, ಸರಕಾರದ ಸೌಲಭ್ಯಗಳನ್ನು ತಡೆಹಿಡಿಯುವ ಕಾನೂನು ಇವೆ. ಬೆಲ್ಜಿಯಂ, ಆಸ್ಟ್ರೇಲಿಯ, ಆಸ್ಟ್ರಿಯಾ, ಅರ್ಜೆಂಟೀನ, ಬೊಲಿವಿಯಾ, ಯುಕ್ರೇನ್, ಬ್ರೆಜಿಲ್, ಈಜಿಪ್ಟ್, ಗ್ರೀಸ್, ಇಟಲಿ, ಮೆಕ್ಸಿಕೊ, ಫಿಲಿಫೈನ್ಸ್, ಸಿಂಗಾಪುರ, ಥೈಲ್ಯಾಂಡ್, ಟರ್ಕಿ, ಸ್ವಿಜರ್ಲ್ಯಾಂಡ್….ಮೊದಲಾದ ರಾಷ್ಟ್ರಗಳು ಕಡ್ಡಾಯ ಮತದಾನದ ಕಾನೂನು ಹೊಂದಿವೆ. ಪರಿಣಾಮವಾಗಿ ಅಲ್ಲಿ ಬಲಿಷ್ಠ ಸರಕಾರಗಳು ಆರಿಸಿ ಬರುತ್ತವೆ ಮತ್ತು ಜನರ ಜೀವನಮಟ್ಟ ತುಂಬಾ ಸುಧಾರಣೆ ಆಗಿದೆ.

ಬೆಲ್ಜಿಯಂ ಮಾದರಿ

ಅಲ್ಲಿ ಮೊದಲ ಬಾರಿಗೆ ಮತದಾನ ಮಾಡದಿದ್ದರೆ 4,000 ಯುರೋ ದಂಡ ಸರಕಾರ ವಿಧಿಸುತ್ತದೆ. ಎರಡನೇ ಬಾರಿಗೆ ಮತದಾನ ಮಾಡದಿದ್ದರೆ 10,000 ಯುರೋ ದಂಡ ಕಟ್ಟಬೇಕು. ಎಲ್ಲ ಸರಕಾರಿ ಸೌಲಭ್ಯಗಳು ಅವರಿಗೆ ಕಡಿತ ಆಗುತ್ತವೆ. 4 ಬಾರಿ ಮತದಾನಕ್ಕೆ ಬಾರದಿದ್ದರೆ ಅವರ ಹೆಸರು ಮತದಾನ ಪಟ್ಟಿಯಲ್ಲಿ ಕಡಿತ ಆಗುತ್ತದೆ.

ಬೊಲಿವಿಯಾ ಮಾದರಿ

ಈ ರಾಷ್ಟ್ರವು ಮತದಾನ ಮಾಡುವರಿಗೆ ಒಂದು ಗುರುತು ಚೀಟಿ ನೀಡುತ್ತದೆ. ಅವರಿಗೆ ಮಾತ್ರ ರೇಶನ್ ಸೌಲಭ್ಯ, ವಿದ್ಯುತ್, ವಸತಿ, ಇತರ ಸರಕಾರಿ ಸೌಲಭ್ಯಗಳು ದೊರೆಯುತ್ತವೆ. ಸರಕಾರಿ ನೌಕರರು ಮತದಾನಕ್ಕೆ ಬಾರದಿದ್ದರೆ ಅವರಿಗೆ ವೇತನ ಕಡಿತ ಆಗುತ್ತದೆ.

ಆಸ್ಟ್ರೇಲಿಯ ಮಾದರಿ

ಈ ದೇಶದಲ್ಲಿ ಶಕ್ತಿಶಾಲಿ ಡೆಮಾಕ್ರಟಿಕ್ ಸರಕಾರ ಇದೆ. ಮತದಾನ ಕಡ್ಡಾಯ ಕಾನೂನು ಇದೆ. ಮತದಾನದ ಪ್ರಮಾಣ ಅಲ್ಲಿ 96%ಕ್ಕಿಂತ ಕೆಳಗೆ ಬಂದದ್ದೇ ಇಲ್ಲ!

ಗ್ರೀಸ್ ಮಾದರಿ

ಅಲ್ಲಿ ಮತದಾನ ಮಾಡದಿದ್ದರೆ ಸರಕಾರ ನಾಗರಿಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುತ್ತದೆ. ತೃಪ್ತಿಕರವಾದ ಉತ್ತರ ಬಾರದೆ ಹೋದರೆ ಡ್ರೈವಿಂಗ್ ಲೈಸೆನ್ಸ್ ಮತ್ತು ಪಾಸ್ಪೋರ್ಟ್ ರದ್ದು ಆಗುತ್ತದೆ.

ಸಿಂಗಾಪುರ ಮಾದರಿ

ಇಲ್ಲಿ ಬಲಿಷ್ಟವಾದ ಸರಕಾರ ಇದೆ. ಮತದಾನ ಮಾಡದವರಿಗೆ ಕಾರಣ ಕೇಳಿ ನೋಟಿಸ್ ನೀಡಿದ ನಂತರ ತೃಪ್ತಿಕರ ಉತ್ತರ ಬಾರದಿದ್ದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಲಾಗುತ್ತದೆ.

ಅಮೇರಿಕಾ ಮಾದರಿ

ಇಲ್ಲಿ ಯಾವುದೇ ಕಡ್ಡಾಯ ಕಾನೂನು ಇಲ್ಲ. ವೋಟಿಂಗ್ ದಿನ ರಜೆಯು ಕೂಡ ಇಲ್ಲ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮತದಾನ ಕೇಂದ್ರಗಳು ತೆರೆದಿರುತ್ತವೆ. ಅಲ್ಲಿ ಮತದಾನದ ಪ್ರಮಾಣವು ಉತ್ತಮವಾಗಿಯೇ ಇದೆ.

ಭಾರತದಲ್ಲಿ ಕಡ್ಡಾಯ ಮತದಾನದ ಕಾನೂನು ಜಾರಿಗೆ ಬರಲಿ ಮತ್ತು ಸುಸ್ಥಿರ ಸರಕಾರಗಳು ಆರಿಸಿಬರಲಿ ಎನ್ನುವುದೇ ನಮ್ಮೆಲ್ಲರ ಹಾರೈಕೆ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

Continue Reading
Advertisement
mumbai hoarding collapse
ಪ್ರಮುಖ ಸುದ್ದಿ33 mins ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ59 mins ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

king dasharatha dhavala dharini
ಅಂಕಣ1 hour ago

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

karnataka weather Forecast
ಮಳೆ1 hour ago

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Food Tips Kannada
ಆಹಾರ/ಅಡುಗೆ2 hours ago

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

Narendra Modi
ದೇಶ3 hours ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

IPL 2024
ಪ್ರಮುಖ ಸುದ್ದಿ8 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ8 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ13 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna jailed gets Bail
ಕ್ರೈಂ13 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ14 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ14 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ14 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ21 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌