ಸವಿಸ್ತಾರ ಅಂಕಣ | ಇತಿಹಾಸದ ಕಣ್ತೆರೆಸಿ ಸ್ವಾತಂತ್ರ್ಯ ಜ್ಯೋತಿ ಬೆಳಗಿಸಿದವರು ಸಾವರ್ಕರ್ - Vistara News

ಅಂಕಣ

ಸವಿಸ್ತಾರ ಅಂಕಣ | ಇತಿಹಾಸದ ಕಣ್ತೆರೆಸಿ ಸ್ವಾತಂತ್ರ್ಯ ಜ್ಯೋತಿ ಬೆಳಗಿಸಿದವರು ಸಾವರ್ಕರ್

ನಮ್ಮ ದೇಶದ ನೈಜ ಇತಿಹಾಸವನ್ನು ತಿಳಿಯುವ, ಜನತೆಗೆ ತಿಳಿಸುವ ಪ್ರಯತ್ನ ಮಾಡಿದವರು ಸ್ವಾತಂತ್ರ್ಯವೀರ ಸಾವರ್ಕರ್‌. ಹೋರಾಟದಲ್ಲಿ ತಮ್ಮದೇ ಹಾದಿ ತುಳಿದ ಅವರು ನೀಡಿದ ಪ್ರೇರಣೆ ಸಣ್ಣದಲ್ಲ- ಎನ್ನುತ್ತಾರೆ ಹರಿಪ್ರಕಾಶ್‌ ಕೋಣೆಮನೆ.

VISTARANEWS.COM


on

Veer Savarkar Chapter In Uttar Pradesh Textbooks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
savistara

“ಬ್ರಿಟಿಷರು, ಈಸ್ಟ್ ಇಂಡಿಯಾ ಕಂಪನಿ ಸೋಗಿನಲ್ಲಿ ಭಾರತಕ್ಕೆ ವ್ಯಾಪಾರಕ್ಕೆಂದು ಬಂದ್ರು. ಬಳಿಕ ಒಂದಿಷ್ಟು ಕಾಲ ಇಲ್ಲಿ ಆಡಳಿತ ನಡೆಸಿದರು ಕಣ್ರೀ. ಅವರಿಂದ ಸ್ವಲ್ಪ ಅನುಕೂಲನೂ ಆಯ್ತು!”

ಇತಿಹಾಸವನ್ನು ಹೀಗೆ ಸರಳೀಕರಿಸಿ ಉಡಾಫೆಯಿಂದ ಹೇಳುವವರೂ ನಮ್ಮ ನಡುವೆ ಇದ್ದಾರೆ. ಆದರೆ ಇತಿಹಾಸ ಅಷ್ಟು ಸರಳವೂ, ಸುಲಭವೂ ಅಗಿಲ್ಲ. ಬ್ರಿಟಿಷರಿಗಿಂತ ಮುಂಚೆಯೂ, ಭಾರತದ ಮೇಲೆ ಅನೇಕ ದಾಳಿಗಳು ನಡೆದಿವೆ. ಆದರೆ ಅವರ್ಯಾರಿಗೂ ಇಲ್ಲಿ ಶಾಶ್ವತವಾಗಿ ನೆಲೆಯೂರಲು ಈ ನೆಲ ಅವಕಾಶ ನೀಡಿಲ್ಲ. ಇಲ್ಲಿನ ರಾಜ ಮಹಾರಾಜರು, ಪಾಳೇಗಾರರು, ಸಾಮಂತರು, ದಳವಾಯಿಗಳು.. ಅಷ್ಟೇ ಏಕೆ ದೇಶದ ಶ್ರೀ ಸಾಮಾನ್ಯರು ಕೂಡ ದಾಳಿಕೋರರ ವಿರುದ್ಧ ಸೆಟೆದು ನಿಂತಿದ್ದಾರೆ. ಬಂದವರನ್ನು ಓಡಿಸಿದ್ದಾರೆ.

ಡಚ್ಚರು, ಫ್ರೆಂಚರಿಂದ ಮೊಘಲರವರೆಗೆ ಯಾರೂ ತಮ್ಮ ಸಾಮ್ರಾಜ್ಯದಲ್ಲಿ ನೆಮ್ಮದಿಯಿಂದ ಇದ್ದರು ಎಂಬ ಸ್ಥಿತಿಯೇ ಇತಿಹಾಸದಲ್ಲಿ ಇಲ್ಲ. ರಾಮಾಯಣ, ಮಹಾಭಾರತದ ಮೂಲಕ ಭಾವನಾತ್ಮಕವಾಗಿ ಮೊದಲಿನಿಂದಲೂ ಭರತ ದೇಶವಾಗಿಯೇ ಈ ನೆಲ ರೂಪುಗೊಂಡಿದೆ ಮತ್ತು ಎಲ್ಲ ಕಾಲದಲ್ಲೂ ದೇಶದ ಯಾವುದಾದರೊಂದು ಭಾಗ ದಬ್ಬಾಳಿಕೆಗೆ ಗುರಿಯಾಗಿದೆ. ಮಾತ್ರವಲ್ಲ, ಅದರ ವಿರುದ್ಧ ಪ್ರತಿರೋಧವನ್ನೂ ದಾಖಲಿಸಿದೆ !

ಹಾಗಾಗಿಯೇ ಇರಬೇಕು, ಭಾರತೀಯರ ಮನಸ್ಸಿನಲ್ಲಿ ಸುಮಾರು ಏಳು ಶತಮಾನ ಕಳೆದರೂ ಗುಲಾಮಿ ಮಾನಸಿಕತೆ ನೆಲೆಯೂರಲೇ ಇಲ್ಲ. ಜತೆಗೆ ಹೇಗಾದರೂ ಮಾಡಿ ಈ ಆಕ್ರಮಣಕಾರರನ್ನು ಹೊರದಬ್ಬಲೇಬೇಕು ಎಂಬ ಉತ್ಕಟ ಬಯಕೆ ತಲೆಮಾರುಗಳಿಂದ ತಲೆಮಾರುಗಳಿಗೆ ಹಸಿರಾಗಿ ಹರಿದು ಬಂದಿದೆ.

ಇದನ್ನು ಸೂಕ್ಷ್ಮವಾಗಿ ಮೊದಲು ಗ್ರಹಿಸಿದವರು ಬ್ರಿಟಿಷರೇ ಇರಬೇಕು. ನಾವೆಲ್ಲರೂ ಒಂದೇ ದೇಶದವರೆಂಬ ಭಾರತೀಯರ ಮನೋಬಲವನ್ನು ಹೊಡೆದುಹಾಕಲು ಅವರು ನಿರ್ಧರಿಸಿದರು. ತೋಳ್ಬಲ, ಸೈನ್ಯ ಬಲದ ಜತೆಗೆ ಭಾರತೀಯರೆಂಬ ಮನೋಬಲವನ್ನು ಸೋಲಿಸಲು ಹೊಸ ಅಸ್ತ್ರಕ್ಕಾಗಿ ಹುಡುಕಾಟ ನಡೆಸಿದರು. ಈ ನಿಟ್ಟಿನಲ್ಲಿ ಅವರು‌ ಮಾಡಿದ ಮೊದಲ ಕೆಲಸ- ಇಲ್ಲಿನ ನಾಗರಿಕತೆಯ ವಿವಿಧ ಆಯಾಮಗಳ ಆಳ ಅಗಲದ ಅಧ್ಯಯನ.

beautiful tree

ಅಂದಹಾಗೆ, ಭಾರತದ ಅಂದಿನ ಜನಮಾನಸ ಹೇಗಿತ್ತು ಎನ್ನುವುದನ್ನು ನಾವೂ ಅಧ್ಯಯನ ಮಾಡಬಹುದು. ಖ್ಯಾತ ಗಾಂಧಿವಾದಿ ಧರ್ಮಪಾಲ್ ಅವರ ʼದಿ ಬ್ಯೂಟಿಫುಲ್ ಟ್ರೀʼ ಎಂಬ ಕೃತಿ ಒಂದರ್ಥದಲ್ಲಿ ಭಾರತೀಯರ ಜನಮಾನಸದ ಆತ್ಮಚರಿತ್ರೆ. ಭಾರತದ ಕುರಿತು ಬ್ರಿಟಿಷ್ ಮಾನಸಿಕತೆಯ ಇತಿಹಾಸಕಾರರು ಸೃಷ್ಟಿಸಿರುವ ಸುಳ್ಳುಗಳನ್ನೇ ಸುಳ್ಳಾಗಿಸಲು ಧರ್ಮಪಾಲ್ ಅವರು ತಮ್ಮ ಜೀವಮಾನದ ಅತ್ಯಮೂಲ್ಯ ಸಮಯವನ್ನು ವ್ಯಯಿಸಿದ್ದಾರೆ. ಬ್ರಿಟಿಷ್ ದಾಖಲೆಗಳ ಮೂಲಕವೇ ನಿರೂಪಿಸಿರುವ ಬ್ಯೂಟಿಫುಲ್ ಟ್ರೀ ಪುಸ್ತಕದ ಕನ್ನಡ ಅವತರಣಿಕೆ “ಚೆಲುವ ತರು” ಕೂಡ ಈಗ ಲಭ್ಯವಿದೆ.

ಭಾರತದ ನಾಗರಿಕತೆಯಲ್ಲಿ ಶ್ರೇಷ್ಠ ಎನ್ನಬಹುದಾದ ಅನೇಕ ವಿಚಾರಗಳಿವೆ. ಇದರಲ್ಲಿ ಶಿಕ್ಷಣವೂ ಒಂದು. ಆದರೆ, ಸಾಮಾನ್ಯವಾಗಿ ಇದುವರೆಗೂ ನಾವು‌ ಕೇಳುತ್ತಾ ಬಂದಿರುವುದು ಏನೆಂದರೆ- “ಭಾರತದಲ್ಲಿ ಶಿಕ್ಷಣವನ್ನು ಮೇಲ್ವರ್ಗದವರು ಮಾತ್ರವೇ ಪಡೆಯುತ್ತಿದ್ದರು. ತಳ ಸಮುದಾಯದವರಿಗೆ, ಅದರಲ್ಲೂ ವಿಶೇಷವಾಗಿ ಶೂದ್ರರಿಗೆ ಶಿಕ್ಷಣವೇ ಲಭಿಸುತ್ತಿರಲಿಲ್ಲ.”!

ಚೆಲುವ ತರು ಪುಸ್ತಕದಲ್ಲಿರುವ ದಾಖಲೆಯ ಪ್ರಕಾರ, 18ನೇ ಶತಮಾನದಲ್ಲಿ ಬ್ರಿಟನ್ನಿನ ಹೌಸ್ ಆಫ್ ಕಾಮನ್ಸ್‌ನಲ್ಲಿ, ಭಾರತದ ಶಿಕ್ಷಣ ವ್ಯವಸ್ಥೆ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದವು. ಈ ಶಿಕ್ಷಣ ವ್ಯವಸ್ಥೆಯ ಸ್ವರೂಪ, ಅದರ‌ ಲಾಭ ನಷ್ಟಗಳ ಕುರಿತು ಬ್ರಿಟಿಷರು ತಮ್ಮ ಅಧಿಕಾರಿಗಳಿಂದ ಅಧ್ಯಯನ ವರದಿಗಳನ್ನು ತರಿಸಿಕೊಳ್ಳುತ್ತಿದ್ದರು. ಹೀಗೆ ಸಿದ್ಧಗೊಂಡಿರುವ ವರದಿಗಳು, ಭಾರತದಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಮಾತ್ರವೇ ಶಿಕ್ಷಣ ಲಭಿಸುತ್ತಿತ್ತು, ಶೂದ್ರರನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು ಎನ್ನುವುದಕ್ಕೆ ವ್ಯತಿರಿಕ್ತವಾದ ರಿಪೋರ್ಟ್ ನೀಡಿವೆ. ಇದಕ್ಕೆ ಧರ್ಮಪಾಲ್ ಬ್ರಿಟಿಷ್ ದಾಖಲೆಗಳನ್ನೇ ಮುಂದಿಟ್ಟಿದ್ದಾರೆ !

ಇಂತಹ ಶಿಕ್ಷಣ ಪಡೆದಿರುವ ಭಾರತೀಯರನ್ನು ಗೆಲ್ಲಬೇಕೆಂದರೆ, ಕೇವಲ ವ್ಯಾಪಾರಿ ಬಲ, ತೋಳ್ಬಲ ಇಲ್ಲವೇ ಸೈನ್ಯಬಲ ಸಾಕಾಗುವುದಿಲ್ಲ ಎಂಬ ನಿಕಷಕ್ಕೆ ಬ್ರಿಟಿಷರು ಬರುತ್ತಾರೆ. ಮೊದಲೇ ಹೇಳಿದಂತೆ, ಭಾರತದ‌ ನಾಗರಿಕತೆ, ಇಲ್ಲಿನ ಶಿಕ್ಷಣ ವ್ಯವಸ್ಥೆ ಬಗ್ಗೆ ಅಧ್ಯಯನಕ್ಕೆ ಇಳಿಯುತ್ತಾರೆ. ಬಳಿಕ ಸುದೀರ್ಘ ಚರ್ಚೆ ನಡೆಸಿ, ಮೆಕಾಲೆ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರುತ್ತಾರೆ ! ಈ ಸಂಗತಿಯನ್ನು ನಾವೆಲ್ಲರೂ ಓದಿದ್ದೇವೆ, ಕೇಳಿದ್ದೇವೆ‌.

ಮೆಕಾಲೆ ಶಿಕ್ಷಣ ಎಂದರೆ ಇನ್ನೇನೋ ಅಲ್ಲ. ತಾವೂ ಬ್ರಿಟಿಷರಂತೆ ಆಗಬೇಕು ಎಂಬ ಪ್ರಯತ್ನದಲ್ಲಿ ಭಾರತೀಯರು ತಮ್ಮತನವನ್ನು ಮರೆತು, ಸಂಬಳಕ್ಕೆ ದುಡಿಯುವ ಯಂತ್ರಗಳಂತೆ ಮಾಡುವುದೇ ಈ ಶಿಕ್ಷಣ ವ್ಯವಸ್ಥೆಯ ಉದ್ದೇಶ. ಇದರಿಂದ ಎರಡು ಕಾರ್ಯ ಈಡೇರುತ್ತದೆ. ಮೊದಲನೆಯದಾಗಿ ಭಾರತೀಯರು ತಮ್ಮತನವನ್ನು ಮರೆತು, ಬ್ರಿಟಿಷರ ವಿರುದ್ಧ ಯುದ್ಧ ಮಾಡುವ ಆಲೋಚನೆಯನ್ನು ಕೈಬಿಡುತ್ತಾರೆ. ಎರಡನೆಯದು, ಇಷ್ಟು ಬೃಹತ್ ದೇಶವನ್ನು ಆಳಲು ಅಧಿಕಾರಿಗಳಾಗಿ, ಅತ್ಯಂತ ಕಡಿಮೆ ಸಂಬಳಕ್ಕೆ ದುಡಿಯುವ ಕೆಲಸದವರು ಸಿಗುತ್ತಾರೆ.

ಈ ಕಾರ್ಯಕ್ಕೆ ಮೊದಲಿಗೆ ಶಿಕ್ಷಣ ವ್ಯವಸ್ಥೆಗೇ ಬ್ರಿಟಿಷರು ಕೈಹಾಕಿದರು. ಅದರ ಪರಿಣಾಮವಾಗಿ ಮೊದಲಿಗೆ, ಭಾರತೀಯರು ತಮ್ಮ ಇತಿಹಾಸವನ್ನು ನೋಡುವ ಮಾನಸಿಕತೆಯನ್ನು ಬದಲಾಯಿಸಲಾಯಿತು. ಎಲ್ಲವನ್ನೂ ಪಾಶ್ಚಾತ್ಯ ಆಲೋಚನೆಯ ಬೂದುಗನ್ನಡಿಯಲ್ಲೇ ನೋಡುವುದನ್ನು ಕಲಿಸಲಾಯಿತು. ಉದಾಹರಣೆಗೆ, ನಾವೆಲ್ಲರೂ ಭೌಗೋಳಿಕವಾಗಿ ಮಾತನಾಡುವಾಗ ಮಧ್ಯಪ್ರಾಚ್ಯ ದೇಶಗಳು ಎಂದು ಕರೆಯುತ್ತೇವೆ. ನಾವು ಭೂಪಟದಲ್ಲಿ ನೋಡಿದರೆ ಮಧ್ಯಪ್ರಾಚ್ಯ ಎಂದು ಕರೆಯುವ ಈ ದೇಶಗಳು (ಸುಡಾನ್, ಸೌದಿ ಅರೇಬಿಯಾ, ಯೆಮನ್, ಮುಂತಾದವು) ಭಾರತದಿಂದ ಪಶ್ಚಿಮ ಭಾಗಕ್ಕಿವೆ. ನಮಗೆ ಪೂರ್ವ ಭಾಗದಲ್ಲಿರುವ ದೇಶಗಳೆಂದರೆ ಚೀನಾ, ತೈವಾನ್, ವಿಯೆಟ್ನಾಮ್ ಮುಂತಾದವು. ಮಧ್ಯ ಪ್ರಾಚ್ಯ ಎನ್ನುವುದು ಯುರೋಪಿಯನ್ನರ ದೃಷ್ಟಿಕೋನದಲ್ಲಿ ಮಿಡಲ್ ಈಸ್ಟ್ ಎಂದಾಗುತ್ತವೆ. ಅಂದರೆ ನಾವು ಎದುರಿಗೆ ಕಾಣುವ ಭೂಗೋಳದಲ್ಲಿರುವ ಸತ್ಯವನ್ನೂ ಮರೆಮಾಚಿ, ನಮ್ಮ ಪಶ್ಚಿಮಕ್ಕಿರುವ ದೇಶಗಳನ್ನು ಪೂರ್ವ ದೇಶಗಳು ಎಂದು ಸಂಬೋಧಿಸುತ್ತಿದ್ದೇವೆ !

ಅಂದ ಮೇಲೆ ಇತಿಹಾಸದಲ್ಲಿ ಘಟಿಸಿಹೋದ ಘಟನೆಗಳ ಕುರಿತು ನಾವು ಎಷ್ಟು ಅಜ್ಞಾನಿಗಳಾಗಿರಬಹುದು? ಅಥವಾ ನಮ್ಮ ಕಣ್ಣುಗಳನ್ನು ಬ್ರಿಟಿಷರು ಹಾಗೂ ಅವರು ಸಾಕಿ ಸಲುಹಿದ ಕಪ್ಪು ತೊಗಲಿನ ಬ್ರಿಟಿಷರು ಹೇಗೆ ಅದಕ್ಕೆ ಸಹಕರಿಸಿರಬಹುದು ಎಂದು ಊಹಿಸಬಹುದು. ಇಷ್ಟೊಂದು ಪೀಠಿಕೆ ಏಕೆ ನೀಡಬೇಕಾಯಿತು ಎಂದರೆ, ಭಾರತೀಯರ ಕಣ್ಣಿಗೆ ಅಂಟಿದ್ದ ಈ ಪೊರೆಯನ್ನು ಕಳಚುವ ಮಹಾನ್ ಕಾರ್ಯವನ್ನು ಮೊದಲು ಮಾಡಿದವರು ಸ್ವಾತಂತ್ರ್ಯ ವೀರ ಸಾವರ್ಕರ್ ಎಂದು ತಿಳಿಸಲು.

ದೇಶವನ್ನು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕೆ ಸಿದ್ಧಪಡಿಸಬೇಕೆಂದರೆ ಮೊದಲು ಭಾರತೀಯರಲ್ಲಿರುವ ಇಂಥಾ ಗೊಂದಲಗಳನ್ನು ಬಗೆಹರಿಸಿ, ಮಾನಸಿಕವಾಗಿ ಅವರನ್ನು ಸಜ್ಜುಗೊಳಿಸಬೇಕಿತ್ತು. ಹೋರಾಟಕ್ಕೆ ಧುಮುಕುವ ನಾಯಕನಿಗೆ ಮಾತ್ರವಲ್ಲ, ಆತನನ್ನು ಹಿಂಬಾಲಿಸುವ ಜನ ಸಮುದಾಯಕ್ಕೂ ನಾವೇನು ಮಾಡುತ್ತಿದ್ದೇವೆ ಮತ್ತು ಯಾಕೆ ಮಾಡುತ್ತಿದ್ದೇವೆ ಎಂಬುದರ ಕುರಿತು ಒಂದು ಸ್ಪಷ್ಟತೆ(ಕ್ಲಾರಿಟಿ) ಬೇಕು. ಸಾವರ್ಕರ್ ಅವರಿಗೆ ಈ ಖಚಿತತೆ ಇತ್ತು.

ನೈಜ ಇತಿಹಾಸವನ್ನು ತಿಳಿಸುವ ಸಾವರ್ಕರ್ ಅವರ ಪ್ರಯತ್ನದಲ್ಲಿ ಪ್ರಮುಖ ಮೂರು ಅಂಶಗಳನ್ನು ನೋಡೋಣ.

೧. ಖಿಲಾಫತ್ ಚಳವಳಿ

khilafat
ಖಿಲಾಫತ್‌ ಚಳವಳಿ

ಇಡೀ ದೇಶದ ಎಲ್ಲ ಜನರೂ ಒಟ್ಟಾಗಿ ಹೋರಾಟ ನಡೆಸದೆ ಇದ್ದರೆ ಭಾರತಕ್ಕೆ ಸ್ವಾತಂತ್ರ್ಯ ಲಭಿಸುವುದಿಲ್ಲ ಎನ್ನುವುದು ಮಹಾತ್ಮಾ ಗಾಂಧೀಜಿಯವರ ಗಾಢ ನಂಬಿಕೆ. ಅಂದರೆ, ಬ್ರಾಹ್ಮಣರು, ಕ್ಷತ್ರಿಯರು, ವೈಶ್ಯರು, ಶೂದ್ರರು, ಹಳ್ಳಿಗರು, ನಗರವಾಸಿಗಳು, ಮಹಿಳೆಯರು, ಮಕ್ಕಳು… ಹೀಗೆ ಎಲ್ಲರೂ ಹೋರಾಟದಲ್ಲಿ ಭಾಗವಹಿಸಬೇಕು ಎಂಬುದು ಗಾಂಧಿ ಚಿಂತನೆ.

ಅಂತೆಯೇ, ದೇಶದ ಹಳ್ಳಿಹಳ್ಳಿಗಳಲ್ಲಿ, ನಗರ ಪಟ್ಟಣಗಳಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ಪಸರಿಸಲು ಗಾಂಧೀಜಿ ಕಾರಣರಾದರು. ದಂಡಿ ಸತ್ಯಾಗ್ರಹ, ಸ್ವದೇಶಿ ಚಳವಳಿ, ಅಸಹಕಾರ ಚಳವಳಿಯಂತಹ ಅನೇಕ ಅಹಿಂಸಾತ್ಮಕ ಮಾರ್ಗಗಳನ್ನು ಅನುಸರಿಸಿದರು. ಆದರೆ ಈ ಚಳವಳಿಗಳು ನಡೆದ ಕೂಡಲೆ ಬ್ರಿಟಿಷ್ ಸರ್ಕಾರದಲ್ಲಾಗಲಿ, ಅವರ ಆಡಳಿತದಲ್ಲಾಗಲಿ ಬದಲಾವಣೆ ಆಗುತ್ತಿರಲಿಲ್ಲ. ಗಾಂಧೀಜಿಯವರಿಗೆ ಅದು ಮುಖ್ಯವೂ ಆಗಿರಲಿಲ್ಲ. ಮುಖ್ಯವಾಗಿ ದೇಶದ ಜನರಲ್ಲಿ ಸ್ವಾತಂತ್ರ್ಯದ ಅರಿವು ಮೂಡಲಿ ಎಂದೇ ಬಾಪೂಜಿ ಭಾವಿಸಿದ್ದರು.‌

ಈ ಎಲ್ಲರೂ ಎನ್ನುವುದರಲ್ಲಿ, ಮುಸ್ಲಿಮರೂ ಇದ್ದರು. ಅವರನ್ನೂ ತಮ್ಮ ಜತೆಗೆ ಸ್ವಾತಂತ್ರ್ಯ ಚಳವಳಿಯಲ್ಲಿ ಕೊಂಡೊಯ್ಯಬೇಕೆನ್ನುವುದು ಗಾಂಧೀಜಿಯವರ ದೃಢನಿಶ್ಚಯವಾಗಿತ್ತು. ಪ್ರಾರಂಭದಿಂದಲೂ ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲ ಸಮುದಾಯದವರೂ ಭಾಗವಹಿಸುತ್ತಿದ್ದರು, ಗಾಂಧೀಜಿಯವರ ಕರೆಗೆ ಓಗೊಟ್ಟು ಅನೇಕರು ಹೋರಾಟಕ್ಕೆ ಧುಮುಕಿದರು. ಬ್ರಿಟಿಷರು ಹಿಂದು-ಮುಸ್ಲಿಮರನ್ನು ಒಡೆಯಲು ಪ್ರಯತ್ನ ನಡೆಸುತ್ತಿದ್ದು, ಈ ಸಮಸ್ಯೆಗೆ ಪರಿಹಾರವೂ ಹಿಂದು-ಮುಸ್ಲಿಂ ಐಕ್ಯತೆಯೇ ಎಂದು ನಂಬಿದ್ದರು ಗಾಂಧೀಜಿ.

ಗಾಂಧೀಜಿಯವರ ಈ ನಿರ್ಧಾರವನ್ನೇ ಮೊಹಮ್ಮದ್ ಆಲಿ ಹಾಗೂ ಶೌಕತ್ ಆಲಿ ಸಹೋದರರು ದುರುಪಯೋಗಪಡಿಸಿಕೊಳ್ಳಲು ಮುಂದಾದರು.

ರೌಲತ್ ಕಾಯಿದೆ ಮೂಲಕ ಬ್ರಿಟಿಷರು ಭಾರತೀಯರ ಮೇಲೆ ಮತ್ತಷ್ಟು ಹಿಡಿತ ಸಾಧಿಸಿದರು ಎನ್ನುವುದನ್ನು ಪ್ರಧಾನವಾಗಿಸಿಕೊಂಡು ಗಾಂಧೀಜಿ ಅಸಹಕಾರ ಚಳವಳಿ ರೂಪಿಸಲು ಮುಂದಾದರು. ಬ್ರಿಟಿಷರ ಎಲ್ಲ ಆಫೀಸುಗಳು ಮತ್ತು ಫ್ಯಾಕ್ಟರಿಗಳನ್ನು ಮುಚ್ಚಬೇಕು, ಬ್ರಿಟಿಷ್ ಪೊಲೀಸ್ ಇಲಾಖೆ, ಸೇನೆ ಮತ್ತು ನಾಗರಿಕ ಸೇವೆಗಳಿಂದ ಮತ್ತು ಮಕ್ಕಳನ್ನು ಶಾಲೆಗಳಿಂದ ಹಿಂತೆಗೆಯಬೇಕು ಎಂದು ಕರೆ ನೀಡಿದರು. ಎಲ್ಲ ಪ್ರತಿಭಟನಕಾರರೂ ಬಂಧಿತನಾಗಬೇಕು ಹಾಗೂ ಪೊಲೀಸರು ಹೊಡೆದರೆ ಹೊಡೆತ ಸಹಿಸಬೇಕೆ ಹೊರತು ತಿರುಗಿ ಹೊಡೆಯಬಾರದೆಂದರು. ಗಾಂಧೀಜಿಯವರ ಸಲಹೆಗೆ ಕಾಂಗ್ರೆಸ್‌ನಲ್ಲೇ ವಿರೋಧವಿದ್ದರೂ ದೇಶದ ಜನರು ಈ ಭಾವನೆಯನ್ನು ಬೆಂಬಲಿಸಿದ್ದರಿಂದ ಕಾಂಗ್ರೆಸ್ ನಾಯಕರೂ ಮರುಮಾತಿಲ್ಲದೆ ಒಪ್ಪಿಕೊಂಡರು.

ಇದೇ ಅವಕಾಶವನ್ನು ಕಾಯುತ್ತಿದ್ದ ಆಲಿ ಸಹೋದರರು, ದೂರದ ಟರ್ಕಿಯಲ್ಲಿ ತಮ್ಮ ಖಲೀಫನನ್ನು ಪದಚ್ಯುತಗೊಳಿಸಲಾಗಿದ್ದು, ಅದನ್ನು ವಿರೋಧಿಸಲು ನಮಗೆ ಬೆಂಬಲ ನೀಡಿದರೆ ನಾವು ಸ್ವಾತಂತ್ರ್ಯ ಹೋರಾಟವನ್ನು ಬೆಂಬಲಿಸುತ್ತೇವೆ ಎಂದರು. ಟರ್ಕಿಯಲ್ಲಿ ಖಲೀಫನನ್ನು ಪದಚ್ಯುತಗೊಳಿಸಲು ಅಲ್ಲಿನ ಜನರೇ ನಿರ್ಧರಿಸಿದ್ದರು. ಮತ್ತು ಯಾವುದೇ ರೀತಿಯಲ್ಲಿ ಇದು ಭಾರತಕ್ಕೆ ಸಂಬಂಧಿಸಿದ ವಿಷಯವೇ ಆಗಿರಲಿಲ್ಲ. ಆದರೆ ಆಲಿ ಸಹೋದರರ ಷರತ್ತಿಗೆ ಒಪ್ಪದಿದ್ದರೆ ಮುಸ್ಲಿಮರು ಸ್ವಾತಂತ್ರ್ಯ ಹೋರಾಟದಿಂದ ಹಿಂದೆ ಸರಿಯುತ್ತಾರೆ ಎಂಬ ಆತಂಕದಲ್ಲಿ ಗಾಂಧೀಜಿ ಒಪ್ಪಿಕೊಂಡರು. ಅಸಹಕಾರ ಹಾಗೂ ಖಿಲಾಫತ್ ಚಳವಳಿಯ ನಂತರ ಕೇವಲ ಒಂದೇ ವರ್ಷದಲ್ಲಿ ಸ್ವಾತಂತ್ರ್ಯ ಸಿಗುತ್ತದೆ ಎಂಬುದು ಗಾಂಧೀಜಿ ನಂಬಿಕೆಯಾಗಿತ್ತು.

ಇದನ್ನೂ ಓದಿ | ಸವಿಸ್ತಾರ ಅಂಕಣ | ನಮ್ಮ ನ್ಯಾಷನಲ್‌ ಹೀರೊಗಳನ್ನು ನಾವು ಗೌರವಿಸುವುದು ತಪ್ಪಾ?

ಈ ಸಮಯದಲ್ಲಿ ಗಾಂಧೀಜಿಯವರ ಮಾತಿಗೆ ವಿರುದ್ಧವಾಗಿ ಮಾತನಾಡುವ ಧೈರ್ಯ ಯಾರಿಗೂ ಇರಲಿಲ್ಲ. ಆದರೆ, ಸಾವರ್ಕರ್ ಇದೆಲ್ಲವೂ ಸಲ್ಲದು ಎಂದು ಎಚ್ಚರಿಕೆ ನೀಡಿದರು. ಈ ಚಳವಳಿಯು ಭೀಕರವಾಗಿ ಪರಿಣಮಿಸುವ ಎಲ್ಲ ಲಕ್ಷಣಗಳೂ ಇವೆ ಎಂದು ಕಿವಿಮಾತು ಹೇಳಿದರು. ಯಾವುದೇ ಸಮುದಾಯದ ಜನರನ್ನು ವಿರೋಧಿಸದ ಸಾವರ್ಕರರು, ಇತಿಹಾಸವನ್ನು ಬಲ್ಲವರಾಗಿದ್ದರು. ಇತಿಹಾಸವನ್ನು ಸರಿಯಾಗಿ ತಿಳಿದವರು ಮಾತ್ರ ಭವಿಷ್ಯವನ್ನು ಕಲ್ಪಿಸಿಕೊಳ್ಳಬಲ್ಲರು ಎಂಬಂತೆ, ಮುಂದೆ ಆಗಬಹುದಾದ ಅನಾಹುತವನ್ನು ಎಲ್ಲರ ಮುಂದೆ ಇಟ್ಟರು. ಆದರೆ ಈ ಮಾತನ್ನು ಕೇಳುವ ಸ್ಥಿತಿಯಲ್ಲಿ ಯಾರೂ ಇರಲಿಲ್ಲ.

೨. ಮೋಪ್ಲಾ ಕಾಂಡ

mopla
ಮೋಪ್ಲಾ ದಂಗೆಯ ಬಂದಿಗಳು

ಅಸಹಕಾರದ ಜತೆಜತೆಗೇ ಆರಂಭವಾದ ಖಿಲಾಫತ್ ಚಳವಳಿ ನಂತರ ಬಣ್ಣ ಬದಲಾಯಿಸಿತು. ಅಸಹಕಾರ ಚಳವಳಿಯನ್ನೇ ನುಂಗಿಕೊಂಡು, ಮೂಲಭೂತವಾದಿಗಳ ಹಿಡಿತಕ್ಕೆ ಸಿಲುಕಿತು. ಕೇರಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಾಪಿಳ್ಳೆಗಳ ಪ್ರದೇಶ ಸೇರಿ ಎಲ್ಲ ಕಡೆಯೂ ಕಾಂಗ್ರೆಸ್ ಹಾಗೂ ಖಿಲಾಫತ್ ಧ್ವಜಗಳನ್ನು ಹಾರಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರೆಲ್ಲ ಖಿಲಾಫತ್ ಸ್ವಯಂ ಸೇವಕರಾಗಿಬಿಟ್ಟರು. ನಿಜವಾಗಿ ಬ್ರಿಟಿಷರ ವಿರುದ್ಧ ನಡೆಯಬೇಕಿದ್ದ ಚಳವಳಿ, ಸ್ಥಳೀಯರ ಮೇಲೆ, ವಿಶೇಷವಾಗಿ ಹಿಂದುಗಳ ಮೇಲೆ ನಡೆಯಲಾರಂಭಿಸಿತು. ಕಂಡಕಂಡಲ್ಲಿ ಕತ್ತಿ ಝಳಪಿಸಿದ ಮಾಪಿಳ್ಳೆಗಳು (ಮೋಪ್ಲಾ) ಅನೇಕರನ್ನು ಕೊಚ್ಚಿಹಾಕಿದರು. ಸರ್ವೆಂಟ್ಸ್ ಆಫ್ ಇಂಡಿಯಾ ಸಂಸ್ಥೆಯ ವರದಿಯ ಪ್ರಕಾರ ಒಂದು ಸಾವಿರ ಹಿಂದುಗಳು ಕೊಲೆಯಾದರು, ಇಪ್ಪತ್ತು ಸಾವಿರ ಜನರು ಮತಾಂತರಗೊಂಡರು, ಸಾವಿರಾರು ಮಹಿಳೆಯರು ಅತ್ಯಾಚಾರಕ್ಕೊಳಗಾದರು, ಮೂರು ಕೋಟಿ ರೂಪಾಯಿಗೂ ಹೆಚ್ಚು ಹಣ ಲೂಟಿಯಾಯಿತು. ಮೋಪ್ಲಾ ಕಾಂಡವನ್ನು ಸ್ವಾತಂತ್ರ್ಯ ಹೋರಾಟ ಎಂದು ಬಣ್ಣಿಸುವ ಕಮ್ಯುನಿಸ್ಟ್ ಇತಿಹಾಸಕಾರರ ಲೆಕ್ಕದಲ್ಲಿಯೂ ಮೋಪ್ಲಾಗಳು ನೂರು ದೇವಸ್ಥಾನಗಳನ್ನು ಒಡೆದರು, ಐನೂರು ಜನರು ಕೊಲೆಯಾದರು, ಎರಡೂವರೆ ಸಾವಿರ ಜನರು ಮತಾಂತರವಾದರು.

ಈ ಹತ್ಯಾಕಾಂಡದ ಕುರಿತು ಭಾರತವೇ ಮೌನವಾಗಿತ್ತು. ಆದರೆ ಸಾವರ್ಕರರು ಮೋಪ್ಲಾ ಕಾಂಡದ ಕೃತಿಯನ್ನು ಕಾದಂಬರಿ ರೂಪದಲ್ಲಿ ಬರೆದರು. ಅದರ ಸ್ವರೂಪ ಕಾದಂಬರಿ ರೂಪದಲ್ಲಿದೆ. ಸಾವರ್ಕರ್ ಹಾಗೇಕೆ ಬರೆದರು? ಅವರ ಉದ್ದೇಶ ಓದುಗರಿಗೆ ಸತ್ಯ ಮುಟ್ಟಿಸುವುದು ಮತ್ತು ಎಚ್ಚರಿಸುವುದು ಆಗಿತ್ತಷ್ಟೆ.

ಇಂತಹ ಧೈರ್ಯ ತೋರಿ ಮೊದಲಿಗೆ, ಭಾರತದ ನಿಜವಾದ ದುರಂತವೊಂದನ್ನು ಹೊರತಂದವರು ಸಾವರ್ಕರ್. ಇಂತಹ ಇತಿಹಾಸಗಳನ್ನು ನಾವು ತಿಳಿಯದಿದ್ದರೆ ಭವಿಷ್ಯದಲ್ಲೂ ಇದೇ ತಪ್ಪನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

೩. ಮೊದಲ ಸ್ವಾತಂತ್ರ್ಯ ಸಂಗ್ರಾಮ

1857 war

ಬ್ರಿಟಿಷರ ವಿರುದ್ಧ ಸಂಗ್ರಾಮ ನಡೆಯುತ್ತಿದ್ದಾಗ, ಈ ಹೋರಾಟಕ್ಕೆ ಅತ್ಯಂತ ನಿರ್ಣಾಯಕ ನೇತೃತ್ವ ನೀಡಿದ್ದು 1857ರ ಸಂಗ್ರಾಮ. ಇಂದು ಈ ವಾಕ್ಯವನ್ನು ಅತ್ಯಂತ ಸಲೀಸಾಗಿ ಹೇಳಿಬಿಡುತ್ತೇವೆ. ಆದರೆ ಈ ಸ್ವಾತಂತ್ರ್ಯ ಸಂಗ್ರಾಮ ನಡೆದು ಐವತ್ತು ವರ್ಷ ಕಳೆಯುವವರೆಗೂ ಅದನ್ನು ಎಲ್ಲರೂ ಕರೆಯುತ್ತಿದ್ದದ್ದು ಸಿಪಾಯಿ ದಂಗೆ ಎಂಬ ಹೆಸರಿನಿಂದಲೆ. ಬ್ರಿಟಿಷರಿಗೆ ಇದು ಸಿಪಾಯಿ ದಂಗೆಯಾಗಿತ್ತು, ಅದನ್ನೇ ಭಾರತೀಯರಲ್ಲೂ ನಂಬಿಸಿದ್ದರು. ಉನ್ನತ ವ್ಯಾಸಂಗದ ನೆಪದಲ್ಲಿ ಲಂಡನ್ನಿಗೆ ತೆರಳಿದ ಸಾವರ್ಕರರು ಅಲ್ಲಿನ ಬ್ರಿಟಿಷ್ ಲೈಬ್ರರಿಯನ್ನು ತಡಕಾಡಿದರು. ಇದರಿಂದ ಅವರಿಗೆ ತಿಳಿದಿದ್ದು ಏನೆಂದರೆ, 1857ರಲ್ಲಿ ನಡೆದದ್ದು ಸಿಪಾಯಿ ದಂಗೆಯಲ್ಲ, ಅದು ಭಾರತದ ಮೊದಲ ಸ್ವಾತಂತ್ರ್ಯ ಹೋರಾಟವೇ ಆಗಿತ್ತು ಎನ್ನುವ ಸಂಗತಿ !

ಇದರಲ್ಲಿ ಭಾರತೀಯರು ಹೀನಾಯವಾಗಿ ಸೋಲಲಿಲ್ಲ, ವೀರೋಚಿತವಾಗಿ ಸೆಣೆಸಿದರು. ಹಾಗೆ ನೋಡಿದರೆ ಹೋರಾಟದಲ್ಲಿ ಬ್ರಿಟಿಷರ ಕೈ ಮೇಲಾಗಲಿಲ್ಲ, ಭಾರತೀಯರಲ್ಲಿ ಸ್ವಾತಂತ್ರ್ಯ ಪಡೆಯುವ ಕಿಚ್ಚು ಜಾಗೃತವಾಗಿದೆ ಎನ್ನುವುದು ಆ ಹೋರಾಟದಲ್ಲಿ ವೇದ್ಯವಾಗಿತ್ತು.

ಅಲ್ಲಿಯವರೆಗೆ ಬ್ರಿಟಿಷರು ಮುಚ್ಚಿಟ್ಟಿದ್ದ ಎಲ್ಲ ದಾಖಲೆಗಳನ್ನೂ ಸಂಗ್ರಹಿಸಿದ ಸಾವರ್ಕರ್, 1857ರ ಸ್ವಾತಂತ್ರ್ಯ ಸಂಗ್ರಾಮ ಕೃತಿಯನ್ನು ರಚಿಸಿದರು. ಅದು ಹೇಗೊ ಪೊಲೀಸರಿಗೆ ಗೊತ್ತಾಗಿ, ಪುಸ್ತಕ ಮುದ್ರಣವಾಗುವ ಮೊದಲೇ ನಿಷೇಧಿಸಿಬಿಟ್ಟರು. ಆದರೇನಂತೆ, ಸಾವರ್ಕರರು ತಮ್ಮ ಚಾಕಚಕ್ಯತೆಯಿಂದ ಇಂಗ್ಲಿಷ್ ಪುಸ್ತಕವನ್ನು ಹಾಲೆಂಡಿನಲ್ಲಿ ಮುದ್ರಣವಾಗುವಂತೆ ನೋಡಿಕೊಂಡರು. ಬಳಿಕ ಅದಕ್ಕೆ ಭಿನ್ನ ಭಿನ್ನ ಕಾದಂಬರಿಗಳ ಮುಖಪುಟವನ್ನು ಹೊದಿಸಿ ಭಾರತಕ್ಕೆ ಕಳುಹಿಸಿದರು. ಫ್ರಾನ್ಸ್, ಜರ್ಮನಿ, ಇಂಗ್ಲೆಂಡ್ ಇಲ್ಲೆಲ್ಲವೂ ಅಪಾರ ಸಂಖ್ಯೆಯ ಭಾರತೀಯರು ಈ ಪುಸ್ತಕವನ್ನು ಕೊಂಡುಕೊಂಡರು. ಭಾರತದಲ್ಲಂತೂ ಇದರ ಅಧ್ಯಯನ ರಾಷ್ಟ್ರೀಯ ಕಾರ್ಯ ಎಂಬಂತೆ ಆಯಿತು. ಬ್ರಿಟಿಷರು ಸದಾ ಗೆಲ್ಲುವ ಕುದುರೆಗಳೇನೂ ಅಲ್ಲ. ಭಾರತೀಯರು ಅವರನ್ನು ಸೋಲಿಸಿದ್ದರು ಎನ್ನುವ ಸಂಗತಿ ತರುಣರಿಗೆ ಅರಿವಾಗುತ್ತಿದ್ದಂತೆ ಅವರ ಆತ್ಮವಿಶ್ವಾಸ ಹೆಚ್ಚಾಯಿತು.

ಇದನ್ನೂ ಓದಿ | ಧೀಮಹಿ ಅಂಕಣ | ಕಾಲದೇಶದ ಸ್ಮರಣೆಯ ಮಹಾಸಂಕಲ್ಪ

ಈ ಕೃತಿಯ ಮೂರನೇ ಮುದ್ರಣ ಪ್ರಕಾಶನಗೊಂಡಿದ್ದು ಗದರ್ ಕ್ರಾಂತಿಕಾರಿಗಳ ಮೂಲಕ. ನಾಲ್ಕನೇ ಮುದ್ರಣವನ್ನು ಭಗತ್‌ಸಿಂಗ್ ಮತ್ತವರ ಮಿತ್ರರು ಸೇರಿ ಮಾಡಿಸಿದರು. 1940ರ ಆಸುಪಾಸಿನಲ್ಲಿ ನೇತಾಜಿ ಸುಭಾಷ್‌ಚಂದ್ರ ಬೋಸರು ಐದನೇ ಮುದ್ರಣಕ್ಕೆ ಕಾರಣವಾದರು. ಅಪಾರ ಸಂಖ್ಯೆಯಲ್ಲಿರುವ ತಮಿಳು ಸೈನಿಕರಿಗೆ ಪ್ರೇರಣೆ ಸಿಗಲೆಂದು ಕೃತಿಯನ್ನು ತಮಿಳು ಭಾಷೆಗೂ ಅನುವಾದ ಮಾಡಿಸಿದರು. ಸಾವರ್ಕರ್ ಪುಸ್ತಕ ಮೊದಲು ಪ್ರಕಟಗೊಂಡಿದ್ದು 1909ರಲ್ಲಿ. ಇದು ಐದನೇ ಮುದ್ರಣ ಕಂಡಿದ್ದು ಸುಮಾರು 1942ರಲ್ಲಿ. ಹೆಚ್ಚು ಕಡಿಮೆ ಮೂರೂವರೆ ದಶಕಗಳ ಕಾಲ ಈ ಕೃತಿ ಭಾರತದಲ್ಲಿನ ಕ್ರಾಂತಿ ಕಾರ್ಯಕ್ಕೆ ಭೂಮಿಕೆ ಒದಗಿಸಿತು.

ಮೇಲಿನ ಮೂರು ಘಟನಾವಳಿಗಳಲ್ಲಿ ಕಾಣಸಿಗುವ ಸಾವರ್ಕರ್ ಎಂಥವರಾಗಿದ್ದರು ? ಎದುರಾಗುವ ಸವಾಲಿನ ಕುರಿತು ಅವರಿಗಿದ್ದ ತಿಳಿವಳಿಕೆ, ಅದನ್ನು ಬುದ್ಧಿವಂತಿಕೆಯಿಂದ ಎದುರಿಸುವ ಬಗೆ, ಚಾಕಚಕ್ಯತೆಯ ಪ್ರಯೋಗ, ಅಂತಾರಾಷ್ಟ್ರೀಯವಾಗಿಯೂ ನೆರವು ಪಡೆಯುವ ಕುಶಲತೆ- ಹೀಗೆ ಹತ್ತಾರು ಸ್ಫೂರ್ತಿ ಪ್ರೇರಣೆಗಳನ್ನು ಪಟ್ಟಿ ಮಾಡಬಹುದಲ್ಲವೇ ?

ಅವರು‌ ಗಾಂಧಿ, ಗೋಖಲೆ ಅವರಂತೆ ಅಹಿಂಸೆಯ ಮಾರ್ಗ ತುಳಿಯಲಿಲ್ಲ. ಆದರೆ, ಅವರಿಬ್ಬರಂತೆ ಹಿಂದೂ ಸಮಾಜದ ಅನಿಷ್ಟ ಅಸ್ಪೃಶ್ಯತೆ ವಿರುದ್ಧ ಹೋರಾಟ ನಡೆಸಿದ್ದರು. ಮಾತ್ರವಲ್ಲ, ಅದರ ನಿವಾರಣೆಗಾಗಿ ರತ್ನಗಿರಿ ಜಿಲ್ಲೆಯಲ್ಲಿ ರಚನಾತ್ಮಕ ಕಾರ್ಯ ಕೈಗೊಂಡಿದ್ದರು. ಅವರ ಪ್ರೇರಣೆ ದೊಡ್ಡದು.

ಆದರೆ, ಇಂಥ ಸಾವರ್ಕರ್ ಜೀವಮಾನವಿಡಿ ದೈಹಿಕವಾಗಿ, ಮಾನಸಿಕವಾಗಿ ಅಪಮಾನಗಳನ್ನು ಅನುಭವಿಸಿದರು. ಅಂಡಮಾನಿನ ಜೈಲಿನಲ್ಲಿ ಕರಿನೀರಿನ ಶಿಕ್ಷೆ ಅನುಭವಿಸಿದರು. ಯಾವ ಭಾರತೀಯರಿಗಾಗಿ ತಮ್ಮ ಕುಟುಂಬವೆಲ್ಲವನ್ನೂ ತ್ಯಾಗ ಮಾಡಿ ಶ್ರಮಿಸಿದರೊ ಅದೇ ಭಾರತೀಯರಿಂದ ತೆಗಳಲ್ಪಟ್ಟರು. ಇದೆಲ್ಲವೂ ಅವರು ಸ್ವಾತಂತ್ರ್ಯಕ್ಕಾಗಿ ವೈಯಕ್ತಿಕವಾಗಿ ನಡೆಸಿದ ಹೋರಾಟಗಳು. ಆದರೆ ಅವರು ತಮ್ಮ ಬರವಣಿಗೆ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾದರು.

ಸಾವರ್ಕರರ ಸಂಪರ್ಕಕ್ಕೆ ಬಂದ ಯುವಕರು ಸ್ವಾತಂತ್ರ್ಯ ಹೋರಾಟದಲ್ಲಿ ಹೇಗೆ ಧುಮುಕಿದರು, ಯಾವ ರೀತಿ ಪ್ರೇರಣೆ ಪಡೆದರು ಎನ್ನುವುದನ್ನು ಮುಂದಿನ ಭಾಗದಲ್ಲಿ ನೋಡೋಣ.

(ಗ್ರಂಥ ಋಣ: ಆತ್ಮಾಹುತಿ- ಶಿವರಾಮು, ಚೆಲುವ ತರು- ಧರ್ಮಪಾಲ್‌, 1857ರ ನಿಂದಕರು- ನೀ.ರ. ವರ್ಹಾಡಪಾಂಡೆ, ಮೋಪ್ಲಾ ಕಾಂಡ- ಸಾವರ್ಕರ್, 1857ರ ಸಂಗ್ರಾಮ-ಚಕ್ರವರ್ತಿ ಸೂಲಿಬೆಲೆ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ರಾಜಮಾರ್ಗ ಅಂಕಣ : ನನ್ನ ಬದುಕೇ ಬೇರೆ, ನನ್ನ ಸಿನಿಮಾನೇ ಬೇರೆ ಅಂದರೆ ಹೀಗೇ ಆಗೋದು!

ಒಬ್ಬ ಸಿನೆಮಾ ನಟ ತಾನು ಸಿನೆಮಾದಲ್ಲಿ ಮಾಡುವ ಪಾತ್ರಗಳಿಗೂ, ನಿಜ ಜೀವನದಲ್ಲಿ ಆತನ ವ್ಯಕ್ತಿತ್ವಕ್ಕೂ ಅಜಗಜಾಂತರ ಇದೆ ಅಂತಾದರೆ ಸಹಿಸಿಕೊಳ್ಳುವುದು ಹೇಗೆ? ಒಬ್ಬ ಸ್ಟಾರ್ ನಟ ಆಪಾದಿತನಾಗಿ ಕಟಕಟೆಯಲ್ಲಿ ತಲೆ ತಗ್ಗಿಸಿ ನಿಂತಾಗಲೂ ಜೈಕಾರ ಹಾಕುವ ಹುಚ್ಚು ಅಭಿಮಾನಿಗಳಿಗೆ ಏನೆಂದು ಹೇಳಬೇಕು? ಒಬ್ಬ ಸ್ಟಾರ್ ನಟನ ಕೋಟಿ ಅಭಿಮಾನಿಗಳು ಆತನ ಖಾಸಗಿ ಜೀವನವನ್ನು ಅನುಕರಣೆ ಮಾಡಲು ಹೋದರೆ ಸಮಾಜ ಹೇಗಿರಬಹುದು?

VISTARANEWS.COM


on

Actor Darshan
Koo

ರಾಜೇಂದ್ರ ಭಟ್ ಕೆ

Rajendra-Bhat-Raja-Marga-Main-logo

ಮೊದಲೇ ಹೇಳಿಬಿಡುತ್ತೇನೆ, ನಾನು ಯಾವುದೇ ಸಿನಿಮಾ ನಟನ ಅಭಿಮಾನಿಯಲ್ಲ. ದರ್ಶನ್ (Actor Darshan) ಎಂಬ ಕನ್ನಡದ ಸ್ಟಾರ್ ನಟನ ಬದುಕಿನಲ್ಲಿ ಈ ಎರಡು ದಿನಗಳ ಅವಧಿಯಲ್ಲಿ ಏನೆಲ್ಲ ಆಗಿದೆ ಅದರ ಬಗ್ಗೆ ನಾನು ತೀರ್ಪು ಕೊಡಲು ಹೋಗುವುದಿಲ್ಲ. ಆದರೆ ಈ ಘಟನೆಯು ಸಮಾಜಕ್ಕೆ ಬಹು ದೊಡ್ಡ ಸಂದೇಶ ಉಳಿಸಿ ಹೋಗಿದೆ. ಆತನ ಸಿನೆಮಾಗಳಲ್ಲಿ ಅವನು ಮಾಡುವ ಪಾತ್ರಗಳು, ಕೊಡುವ ಪೋಸ್, ಹೊಡೆಯುವ ಡೈಲಾಗುಗಳು, ಪ್ರಕಟಿಸುವ ಮೌಲ್ಯಗಳು….
ಛೇ! ಹೀಗಾಗಬಾರದಿತ್ತು. ಅವನನ್ನು ಕೋರ್ಟಿಗೆ ವಿಚಾರಣೆಗೆ ಕರೆತಂದಾಗ ಅಲ್ಲಿದ್ದ ಕೆಲವು ಅಭಿಮಾನಿಗಳು ‘ ಡಿ ಬಾಸಿಗೆ ಜಯವಾಗಲಿ’ ಅಂತ ಘೋಷಣೆ ಕೂಗಿದರಂತೆ! ಇನ್ನು ಅವನು ಈ ಕೇಸನ್ನು ಗೆದ್ದು ಬಂದರೆ ಸಾವಿರಾರು ಅಭಿಮಾನಿಗಳು ಮಾಲೆ ಹಿಡಿದು ಜೈಕಾರ ಹಾಕಲು ಕಾಯುತ್ತಿರುತ್ತಾರೆ! ಅಂಧಾಭಿಮಾನ ಈ ಮಟ್ಟಕ್ಕೆ ಹೋಗಬಾರದು.

ನಮ್ಮ ಖಾಸಗಿ ಜೀವನ ಮತ್ತು ವೃತ್ತಿ ಜೀವನ

ಪ್ರತಿಯೊಬ್ಬ ವ್ಯಕ್ತಿಗೂ ಒಂದು ಖಾಸಗಿ ಜೀವನ ಮತ್ತು ಇನ್ನೊಂದು ವೃತ್ತಿ ಜೀವನ ಇರುತ್ತದೆ. ಅದರ ಮಧ್ಯೆ ಒಂದು ಸಣ್ಣ ಗ್ಯಾಪ್ ಇದ್ದೇ ಇರುತ್ತದೆ. ಅದು ಸಹಜ ಕೂಡ.

ಆದರೆ ಅದೇ ಗ್ಯಾಪ್ ದೊಡ್ಡದಾದರೆ? ಒಬ್ಬ ಸಿನೆಮಾ ನಟ ತಾನು ಸಿನೆಮಾದಲ್ಲಿ ಮಾಡುವ ಪಾತ್ರಗಳಿಗೂ, ನಿಜ ಜೀವನದಲ್ಲಿ ಆತನ ವ್ಯಕ್ತಿತ್ವಕ್ಕೂ ಅಜಗಜಾಂತರ ಇದೆ ಅಂತಾದರೆ ಸಹಿಸಿಕೊಳ್ಳುವುದು ಹೇಗೆ? ಒಬ್ಬ ಸ್ಟಾರ್ ನಟ ಆಪಾದಿತನಾಗಿ ಕಟಕಟೆಯಲ್ಲಿ ತಲೆ ತಗ್ಗಿಸಿ ನಿಂತಾಗಲೂ ಜೈಕಾರ ಹಾಕುವ ಹುಚ್ಚು ಅಭಿಮಾನಿಗಳಿಗೆ ಏನೆಂದು ಹೇಳಬೇಕು? ಒಬ್ಬ ಸ್ಟಾರ್ ನಟನ ಕೋಟಿ ಅಭಿಮಾನಿಗಳು ಆತನ ಖಾಸಗಿ ಜೀವನವನ್ನು ಅನುಕರಣೆ ಮಾಡಲು ಹೋದರೆ ಸಮಾಜ ಹೇಗಿರಬಹುದು? ಒಬ್ಬ ಬಡ ಕುಟುಂಬದ ಹುಡುಗ ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿ ತೊಂದರೆ ಕೊಟ್ಟ ಎಂಬ ಕಾರಣಕ್ಕೆ ಸ್ಟಾರ್ ನಟ ಮತ್ತು ಅವನ ಗೆಳೆಯರು ಹೊಡೆದು ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ (ನನಗೆ ಗೊತ್ತಿಲ್ಲ) ಅಂದರೆ ಅದೆಂತಹ ಕ್ರೌರ್ಯ? ದರ್ಶನ್ ಸಿನೆಮಾದಲ್ಲಿ ಮಾಡುವ ಪಾತ್ರಗಳಿಗೂ ಇಂತಹ ಘಟನೆಗಳಿಗೂ ಎಷ್ಟೊಂದು ವ್ಯತ್ಯಾಸ ಅಲ್ವಾ?

ಹುಚ್ಚು ಅಭಿಮಾನಿಗಳ ಅತಿರೇಕಗಳು!:

ಬಹಳ ಹಿಂದೆ ಡಾಕ್ಟರ್ ರಾಜಕುಮಾರ್ ಅವರ ‘ಸಮಯದ ಗೊಂಬೆ ‘ ಸಿನೆಮಾ ಬಿಡುಗಡೆ ಆಗಿತ್ತು. ನಾನು ಅದನ್ನು ಬೆಂಗಳೂರಿನ ಒಂದು ಥಿಯೇಟರ್ ಒಳಗೆ ಕೂತು ನೋಡುತ್ತಾ ಇದ್ದೆ. ಅದರಲ್ಲಿ ರಾಜ್ ಅವರದ್ದು ಒಬ್ಬ ಸಾಮಾನ್ಯ ಕಾರ್ ಡ್ರೈವರ್ ಪಾತ್ರ ಆಗಿತ್ತು. ನಟ ಶ್ರೀನಾಥ್ ಅವರದ್ದು ಆ ಕಾರ್ ಯಜಮಾನನ ಪಾತ್ರ. ಒಂದು ಭಾವನಾತ್ಮಕ ಪಾತ್ರದಲ್ಲಿ ಸಿಟ್ಟು ಮಾಡಿಕೊಂಡ ಶ್ರೀನಾಥ್ ತನ್ನ ಡ್ರೈವರ್ ಆದ ರಾಜಕುಮಾರ್ ಅವರ ಕಪಾಳಕ್ಕೆ ಹೊಡೆಯುವ ಸನ್ನಿವೇಶ. ಸಿನೆಮಾದ ಕಥೆಯೇ ಹಾಗಿತ್ತು. ಆದರೆ ಅದನ್ನು ರಾಜ್ ಅಭಿಮಾನಿಗಳು ಸಹಿಸಿಕೊಳ್ಳಲಿಲ್ಲ.
‘ಏನೋ, ನಮ್ಮ ಅಣ್ಣಾವ್ರಿಗೆ ಹೊಡೀತಿಯೇನೋ?’ ಎಂದೆಲ್ಲ ಕೂಗಾಡಿದರು. ಥಿಯೇಟರ್ ಮೇಲೆ ಕಲ್ಲು ಬಿತ್ತು. ಶ್ರೀನಾಥ್ ಎಂಬ ನಟನಿಗೆ ಬೈಗುಳದ ಅಭಿಷೇಕವೇ ಆಯಿತು. ಕೊನೆಗೆ ಚಿತ್ರ ನಿರ್ಮಾಪಕರು ಕ್ಷಮೆ ಕೇಳಿ ಆ ದೃಶ್ಯವನ್ನು ಕತ್ತರಿಸುವ ಭರವಸೆ ಕೊಟ್ಟ ನಂತರ ಪ್ರೇಕ್ಷಕರ ಆಕ್ರೋಶವು ತಣಿಯಿತು.

ತಮಿಳುನಾಡಿನಲ್ಲಿ ಈ ಹುಚ್ಚು ಅಭಿಮಾನ ಇನ್ನೂ ಜಾಸ್ತಿ. ಎಂ ಜಿ ಆರ್, ಜಯಲಲಿತಾ, ಅಜಿತ್, ವಿಜಯ್, ರಜನೀಕಾಂತ್ ಅವರನ್ನು ದೇವರಾಗಿ ಕಂಡ ಜನ ಅವರು. ನಟಿ ಖುಷ್ಬೂಗೆ ಒಂದು ದೇವಸ್ಥಾನವನ್ನು ಕಟ್ಟಿದ ಜನ ಅವರು! ಒಬ್ಬ ನಟನ ಅಭಿಮಾನಿಗಳು ಇನ್ನೊಬ್ಬ ನಟನ ಅಭಿಮಾನಿಗಳ ಮೇಲೆ ಹಲ್ಲೆ ನಡೆಸುವ ಘಟನೆಗಳು ಅಲ್ಲಿ ನಿತ್ಯವೂ ನಡೆಯುತ್ತವೆ. ಅಂತಹ ಅಂಧಾಭಿಮಾನಿಗಳಿಗೆ ಕಪಾಳಕ್ಕೆ ಹೊಡೆದ ಹಾಗೆ ನಡೆದಿದೆ ಈ ಮರ್ಡರ್ ಕಥೆ. ಆದರೆ ಬಲಿಯಾದದ್ದು ಒಬ್ಬ ಬಡ ಅಪ್ಪ , ಅಮ್ಮನ ಒಬ್ಬನೇ ಮಗ, ಕುಟುಂಬದ ಒಬ್ಬನೇ ಆಧಾರ ಅನ್ನೋದು, ಒಬ್ಬ ಚೊಚ್ಚಲ ಬಾಣಂತಿಯ ಗಂಡ ಅನ್ನೋದು ಮಾತ್ರ ದುರಂತ!

ಕರಾವಳಿಯ ಜನ ಬುದ್ಧಿವಂತರು!:

ಇಲ್ಲಿಯ ಸಿನೆಮಾ ಪ್ರೇಕ್ಷಕರು ಕೇವಲ ಮನರಂಜನೆಗಾಗಿ ಸಿನೆಮಾ ನೋಡುತ್ತಾರೆ. ಕಥೆ ಚೆನ್ನಾಗಿದ್ದರೆ ಮಾತ್ರ ನೋಡುತ್ತಾರೆ. ಯಾವ ಸ್ಟಾರ್ ನಟ ಅಥವಾ ಸ್ಟಾರ್ ನಟಿಯ ಸಿನೆಮಾ ಬಂದರೂ ಆ ಸ್ಟಾರಗಿರಿಗೆ ಮೆಚ್ಚಿ ಸಿನೆಮಾ ನೋಡಲು ಬರುವುದೇ ಇಲ್ಲ. ‘ಹೀರೋ ವರ್ಶಿಪ್ ‘ ಕರಾವಳಿಯಲ್ಲಿ ತುಂಬಾ ಕಡಿಮೆ. ಈ ಪ್ರಬುದ್ಧತೆಯೇ ಇಂದು ನಿಜವಾಗಿ ಬೇಕಾಗಿರುವುದು. ಹಾಗೆಯೇ ನಾನು ಹಿಂದೊಮ್ಮೆ ಬರೆದ ವರನಟ ರಾಜಕುಮಾರ್ ಅವರ ಮಾತುಗಳನ್ನು ಇಲ್ಲಿ ಉಲ್ಲೇಖ ಮಾಡಬೇಕು.

ಇದನ್ನೂ ಓದಿ: Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

‘ನಮ್ಮಂತಹ ನಟರನ್ನು ಸಾವಿರಾರು ಅಭಿಮಾನಿಗಳು ಅನುಕರಣೆ ಮಾಡುತ್ತಾರೆ. ಆದ್ದರಿಂದ ನಮ್ಮ ಖಾಸಗಿ ಜೀವನವೂ ಅವರಿಗೆ ಅನುಕರಣೀಯ ಆಗಿರಬೇಕು.’ ಅವರು ತೆರೆಯ ಮೇಲೆ ಯಾವ ಪಾತ್ರಗಳನ್ನು ಮಾಡಿದ್ದರೋ ಅದೇ ರೀತಿ ಬದುಕಿದ್ದರು. ‘ನನ್ನ ಜೀವನವೇ ನನ್ನ ಸಂದೇಶ ‘ ಅಂದಿದ್ದರು ಗಾಂಧೀಜಿ. ಅವರ ಬದುಕಿನಲ್ಲಿಯೂ ಕೆಲವು ಕಪ್ಪು ಪುಟಗಳು ಇದ್ದವು. ಅದ್ಯಾವುದನ್ನೂ ಅವರು ಮುಚ್ಚಿಡಲಿಲ್ಲ. ಅವರ ಆತ್ಮಚರಿತ್ರೆಯ ಪುಸ್ತಕವಾದ
‘ಸತ್ಯಾನ್ವೇಷಣೆ ‘ಯಲ್ಲಿ ಅವರು ಆ ಕಪ್ಪು ಪುಟಗಳನ್ನು ಬರೆಯಲು ಹೇಸಿಗೆ ಮಾಡಲಿಲ್ಲ. ಅದಕ್ಕಾಗಿ ಅವರು ಲೆಜೆಂಡ್ ಆದರು. ನಮ್ಮ ಬದುಕು ಕೂಡ ಒಂದು ತೆರೆದ ಪುಸ್ತಕ ಆಗೋದು ಯಾವಾಗ?

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಸಾಕೇತದ ಅಮಾತ್ಯ ಸುಮಂತ್ರ, ರಾಮಾಯಣದ ರಹಸ್ಯನಿಧಿ

ಧವಳ ಧಾರಿಣಿ ಅಂಕಣ: ರಾಮಾಯಣದಲ್ಲಿ ಮಂತ್ರಿ ಸುಮಂತ್ರನ ಪಾತ್ರ ಸಣ್ಣದಾದರೂ ಮಹತ್ವದ್ದು. ದಶರಥ ಮಹಾರಾಜನ ಬಾಲ್ಯದ ಒಡನಾಡಿ ಇವನಾಗಿದ್ದ. ಬಹುಶಃ ದಶರಥನದೇ ವಯಸ್ಸು ಈತನಿಗೆ. ಈ ಕಾರಣದಿಂದಲೇ ದಶರಥನಿಗೆ ಆತ ನಂಬಿಗಸ್ಥ ಮಂತ್ರಿಯಾಗಿದ್ದನು. ಆತನ ಅಂತರಂಗದ ಆಪ್ತನೂ ಆಗಿದ್ದನು.

VISTARANEWS.COM


on

ಧವಳ ಧಾರಿಣಿ ಅಂಕಣ dasharatha sumantra
Koo

ಸುಮಂತ್ರ ಭಾಗ 1; ರಾಜ್ಯದ ರಹಸ್ಯಗಳನ್ನು ನಿಗೂಢವಾಗಿರಿಸಿದ ಮುತ್ಸದ್ಧಿ

dhavala dharini by Narayana yaji

ಧವಳ ಧಾರಿಣಿ ಅಂಕಣ: ತಸ್ಯಾಮಾತ್ಯಾ ಗುಣೈರಾಸನ್ನಿಕ್ಷ್ವಾಕೋಸ್ತು ಮಹಾತ್ಮನಃ
ಮನ್ತ್ರಜ್ಞಾಶ್ಚೇಙ್ಗಿತಜ್ಞಾಶ್ಚ ನಿತ್ಯಂ ಪ್ರಿಯಹಿತೇ ರತಾ: ৷৷ಬಾ.7.1৷৷

ಇಕ್ಷ್ವಾಕು ವಂಶದಲ್ಲಿ ಹುಟ್ಟಿದ ಮಹಾತ್ಮನಾದ ದಶರಥನಿಗೆ (king Dasharatha) ಮಂತ್ರಾಲೋಚನೆಯಲ್ಲಿ ಸಮರ್ಥರಾದ, ಕಾರ್ಯವಿಚಾರತತ್ಪರರಾದ ಮತ್ತು ಪರರಮನಸಿನಲ್ಲಿರುವುದನ್ನು ಮುಖಭಾವದಿಂದಲೇ ತಿಳಿಯುಬಲ್ಲ, ಯಾವಾಗಲೂ ರಾಜನ ಹಿತರಕ್ಷಣೆಯಲ್ಲಿಯೇ ನಿರತರಾಗಿರುವ ಮಂತ್ರಿಗಳಿದ್ದರು.

ಮಂತ್ರಿಗಳ ವಿಚಾರಕ್ಕೆ ಬರುವಾಗ ರಾಮಾಯಣದ (Ramayana) ಪ್ರಾರಂಭದ ಬಾಲಕಾಂಡಗಳಿಂದ ಹಿಡಿದು ಕೊನೆಯ ಉತ್ತರಕಾಂಡದ ಸೀತಾವಿಯೋಗದ ವರೆಗಿನ ಭಾಗಗಳಲ್ಲಿ ಕಂಡುಬರುವ ಪ್ರಮುಖ ಹೆಸರು ಸುಮಂತ್ರ (Sumantra) ಎನ್ನುವ ಮಹಾ ಅಮಾತ್ಯನದ್ದು. ಅಯೋಧ್ಯೆಯ ಹಿತವನ್ನು ಕಾಪಾಡಲು ಅಷ್ಟ ಮಂತ್ರಿಗಳಾದ ಧೃಷ್ಟಿ, ಜಯಂತ, ವಿಜಯ, ಸಿದ್ಧಾರ್ಥ, ಅರ್ಥಸಾಧಕ, ಅಶೋಕ, ಮಂತ್ರಪಾಲ ಮತ್ತು ಸುಮಂತ್ರ ಎನ್ನುವ ಎಂಟು ಮಂತ್ರಿಗಳಿದ್ದರು. ಅವರಲ್ಲಿ ಸುಮಂತ್ರನೆನ್ನುವ ಕೇವಲ ಮಂತ್ರಿ ಎನ್ನುವುದಕ್ಕಿಂತ ರಾಜನ ಅಂತರಂಗದ ಆಪ್ತನೂ ಆಗಿದ್ದ. ಅರ್ಥಶಾಸ್ತ್ರದಲ್ಲಿ ಸುಬಧ್ರವಾದ ರಾಜ್ಯಕ್ಕೆ “ರಾಜ, ಅಮಾತ್ಯ, ಜನಪದ, ದುರ್ಗ, ಕೋಶ, ಸೈನ್ಯ ಅಥವಾ ದಂಡ ಮತ್ತು ಮಿತ್ರ” ಎನ್ನುವ ಸಪ್ತಾಂಗ ಬಹಳ ಮಹತ್ವದ್ದು. ಅಮಾತ್ಯರಲ್ಲಿ ಮಂತ್ರಿಗಳು ಮತ್ತು ಪುರೋಹಿತ ವರ್ಗ ಎನ್ನುವ ಎರಡು ವಿಧಗಳಿವೆ. ದಕ್ಷ ಆಡಳಿತಕ್ಕೆ ಯೋಗ್ಯರಾದ ಸಚಿವರು ಮತ್ತು ಧರ್ಮಮಾರ್ಗದಲ್ಲಿ ರಾಜ ಸದಾ ಇರುವಂತೆ ನೋಡಿಕೊಳ್ಳುವ ಪುರೋಹಿತರು ಬಹು ಮುಖ್ಯ. ರಾಜನಿಗೆ ಕೆಟ್ಟ ಹೆಸರಾಗಲಿ, ಒಳ್ಳೆಯ ಹೆಸರಾಗಲಿ ಬರುವುದರಲ್ಲಿ ಅಮಾತ್ಯ ಮತ್ತು ಪುರೋಹಿತರ ಪಾತ್ರ ದೊಡ್ಡದು.

ಸುಮಂತ್ರ ಎನ್ನುವ ಮಂತ್ರಿ ಅಯೋಧ್ಯೆಯ ಆಧಾರ ಸ್ತಂಭಗಳಲ್ಲಿ ಒಂದಾಗಿದ್ದ. ಆಯೋಧ್ಯೆಯಲ್ಲಿ ಸಚಿವ ಪದವಿಯೆನ್ನುವುದು ವಂಶಪರಂಪರೆಯ ಕಾರಣ ಮಾತ್ರದಿಂದಲೇ ಬರುತ್ತಿರಲಿಲ್ಲ. ಅವರಲ್ಲಿ ಯೋಗ್ಯತೆಯೂ ಇರಬೇಕಾಗಿತ್ತು. ಯಾರನ್ನಾದರೂ ಹುದ್ದೆಗೆ ನಿಯಕ್ತಿಗೊಳಿಸುವ ಮುನ್ನ ಅವರನ್ನು ಚನ್ನಾಗಿ ಪರೀಕ್ಷಿಸಲಾಗುತ್ತಿತ್ತು. ಅರ್ಥಶಾಸ್ತ್ರದಲ್ಲಿ ರಾಜನ ಆಸ್ಥಾನದಲ್ಲಿರುವವರನ್ನು ಪರೀಕ್ಷಿಸುವ ವಿಧಾನವನ್ನು ಹೇಳುವಾಗ ಧರ್ಮಾದಿ, ಉಪಧಾ, ಅರ್ಥೋಪಧಾ, ಕಾಮೋಪಧಾ, ಭಯೋಪಧಾಗಳ ಮೂಲಕ ಪರೀಕ್ಷಿಸಬೇಕು ಎಂದು ಹೇಳುತ್ತದೆ. ಅಂದರೆ ರಾಜನಲ್ಲಿ ಅಧರ್ಮವನ್ನು ಕಲ್ಪಿಸಿ ಅವನನ್ನು ಪಟ್ಟದಿಂದ ಇಳಿಸೋಣವೇ ಎನ್ನುವ ಆಮಿಷಕ್ಕೆ ಒಡ್ಡಿದಾಗಲೂ ಅದನ್ನು ಯಾವಾತ ತಿರಸ್ಕರಿಸುತ್ತಾನೋ, ಹಣದ ಆಮಿಷದ ಮೂಲಕ ರಾಜನಿಂದ ಬೇರ್ಪಡಿಸಲು ಸಾಧ್ಯವೋ ಎನ್ನುವುದನ್ನು ಪರೀಕ್ಷಿಸುವುದು, ರಾಣಿ ನಿನ್ನನ್ನು ಬಯಸಿದ್ದಾಳೆ, ಅವಳನ್ನು ಸೇರಿದರೆ ನಿನಗೆ ಕೈತುಂಬಾ ಹಣಸಿಗುವುದು ಎನ್ನುವ ಆಮಿಷವನ್ನು ಒಡ್ಡಿದಾಗಲೂ ಅದನ್ನು ತಿರಸ್ಕರಿಸುವಂಥವರು, ರಾಜನಿಂದ ಅವಮಾನಿತರಾದ (ಹಾಗೇ ನಟಿಸಿ) ಅಮಾತ್ಯನಾದವ ಇತರರನ್ನು ನಾವೆಯಲ್ಲಿ ಕರೆದುಕೊಂಡು ಹೋಗಿ ರಾಜನ ವಿರುದ್ಧ ಅವರನ್ನು ಎತ್ತಿಕಟ್ಟಿದಾಗ ಯಾರು ತಿರಸ್ಕರಿಸಿ ರಾಜನಿಗೆ ನಿಷ್ಠೆಯುಳ್ಳವರಾಗಿರುತ್ತಾರೆಯೋ ಅಂಥವರು ಮಾತ್ರ ಅಮಾತ್ಯರಾಗಲು ಯೋಗ್ಯರು ಎನ್ನುತ್ತದೆ.

ರಾಜನ ಆಪ್ತಸಲಹೆಗಾರ

ದಶರಥ ಮಹಾರಾಜನ ಬಾಲ್ಯದ ಒಡನಾಡಿ ಇವನಾಗಿದ್ದ. ಬಹುಶಃ ದಶರಥನದೇ ವಯಸ್ಸು ಈತನಿಗೆ. ಈ ಕಾರಣದಿಂದಲೇ ದಶರಥನಿಗೆ ಆತ ನಂಬಿಗಸ್ಥ ಮಂತ್ರಿಯಾಗಿದ್ದನು. ಆತನ ಅಂತರಂಗದ ಆಪ್ತನೂ ಆಗಿದ್ದನು. ದಶರಥ ಕೌಸಲ್ಯೆ ಮತ್ತು ಸುಮಿತ್ರೆ ಇಬ್ಬರನ್ನೂ ಮದುವೆಯಾಗಿ ಹಲವುಕಾಲ ಕಳೆದಿದ್ದರೂ ಅವರಿಬ್ಬರಲ್ಲಿ ಮಕ್ಕಳಾಗಿರಲಿಲ್ಲ. ಅಯೋಧ್ಯೆಯ ಸಿಂಹಾಸನಕ್ಕೆ ವಾರಸುದಾರರು ಇಲ್ಲದೆ ಇರುವ ಕಾರಣದಿಂದ ಮತ್ತೊಂದು ಮದುವೆಯಾಗಲು ಕನ್ಯಾನ್ವೇಷಣೆಗೆ ದೊರೆ ತೊಡಗಿದ. ಆಗ ಆತನಿಗೆ ಕೇಕೇಯದ ದೊರೆ ಅಶ್ವಪತಿಗೆ ಕೈಕೇಯಿ ಎನ್ನುವ ಸುಂದರಿಯಾದ ಮಗಳು ಇರುವ ವರ್ತಮಾನ ಬಂತು. ಆಕೆಯನ್ನು ಮದುವೆಯಾಗುವ ಉದ್ಧೇಶದಿಂದ ಅಶ್ವಪತಿರಾಜನಲ್ಲಿ ಕೇಳಿದಾಗ ಆ ದೊರೆ “ತನ್ನ ಮಗಳಲ್ಲಿ ಜನಿಸುವ ಪುತ್ರನಿಗೆ ರಾಜ್ಯದ ಉತ್ತರಾಧಿಕಾರ ಸಿಗಬೇಕೆಂದು” ನಿಯಮ ಹಾಕಿ ಅದಕ್ಕೆ ಒಪ್ಪುವುದಾದರೆ ಮಗಳನ್ನು ಕೊಡುವೆ ಎಂದ. ದಶರಥನಿಗೆ ಮದುವೆ ಆಗಬೇಕಾಗಿತ್ತು. ಅದಾಗಲೇ ಆತನಿಗೆ ಇಬ್ಬರು ಹೆಂಡತಿಯರ ಜೊತೆ ಇನ್ನು ಮುನ್ನೂರೈವತ್ತು ಉಪಪತ್ನಿಯರೂ ಇದ್ದರು. ಪಟ್ಟಮಹಿಷಿಯರಲ್ಲಿ ಜನಿಸಿದವರಿಗೆ ಮಾತ್ರ ರಾಜ್ಯದ ಅಧಿಕಾರಕ್ಕೆ ಏರುವ ಅರ್ಹತೆ ಇರುತ್ತಿತ್ತು. ಹೇಗಿದ್ದರೂ ಮೊದಲ ಇಬ್ಬರು ಪತ್ನಿಯರಿಗೆ ಮಕ್ಕಳಿಲ್ಲ, ಹಾಗಾಗಿ ಕೈಕೇಯಿಯಲ್ಲಿ ಜನಿಸಿದ ಮಕ್ಕಳಿಗೆ ಸಹಜವಾಗಿ ಅಧಿಕಾರ ಸಿಗುತ್ತದೆ ಎನ್ನುವ ಕಾರಣಕ್ಕೆ ದೊರೆ ಮರುಮಾತಿಲ್ಲದೇ ಒಪ್ಪಿಕೊಂಡ.

ಈ ವಿಷಯಕ್ಕೆ ಸಾಕ್ಷಿಯಾಗಿ ಸುಮಂತ್ರ ಮಾತ್ರವೇ ಇದ್ದ. ಆದರೆ ಬುದ್ಧಿವಂತನಾದ ದಶರಥ ಮತ್ತು ಸುಮಂತ್ರ ಇಬ್ಬರೂ ಈ ವಿಷಯವನ್ನು ಗೌಪ್ಯವಾಗಿಟ್ಟಿದ್ದರು. ಅಶ್ವಪತಿ ತನ್ನ ಮಗಳಾದ ಕೈಕೇಯಿಗೂ ಈ ಮಾತನ್ನು ಹೇಳಿರಲಿಲ್ಲ. ನಂತರ ಅದು ಹೇಗೋ ರಾಮನಿಗೆ ತಿಳಿದಿತ್ತು. ರಾಜನಾಗುವಿಕೆ ಎಂದರೆ ಅದಕ್ಕೆ ಇನ್ನಿತರ ಯೋಗ್ಯತೆಯೂ ಬೇಕಿತ್ತು. ಭರತ ವನವಾಸಕ್ಕೆ ಬಂದಾಗ ಆತನಲ್ಲಿ ರಾಮ, ದಶರಥ ಕನ್ಯಾಶುಲ್ಕವಾಗಿ ಕೋಸಲ ರಾಜ್ಯವನ್ನು ಕೊಟ್ಟಿರುವ ವಿಷಯ ಹೇಳುತ್ತಾನೆ. ಮದುವೆಯಾಗುವಾಗ ಸುಳ್ಳು ಹೇಳಬಹುದು ಎನ್ನುವ ಕಾರಣಕ್ಕೆ ರಾಜ್ಯದ ಹಿತರಕ್ಷಣೆಯಿಂದ ಸುಮಂತ್ರ ಈ ವಿಷಯನ್ನು ಮುಚ್ಚಿಟ್ಟಿದ್ದ. ಮಹಾಭಾರತದಲ್ಲಿ “ಮನ್ತ್ರಗೂಢಾ ಹಿ ರಾಜಸ್ಯ ಮನ್ತ್ರಿಣೋ ಯೇ ಮನೀಷಿಣಃ – ಬುದ್ಧಿವಂತರಾದ ಮಂತ್ರಿಗಳೇ ರಾಜ್ಯದ ರಾಜ ರಹಸ್ಯಗಳನ್ನು ನಿಗೂಢವಾಗಿರಿಸುತ್ತಾರೆ” ಎನ್ನುವ ವಾಕ್ಯವಿದೆ. ಅದಕ್ಕೆ ತಕ್ಕಂತೆ ಇದ್ದವ ಸುಮಂತ್ರ.

ರಾಜ ಮತ್ತು ಅಮಾತ್ಯ ಈ ಇಬ್ಬರ ನಡುವೆ ಇರುವ ಸಂಬಂಧ ಪತಿ ಮತ್ತು ಧಾರಾ ಭಾವದಲ್ಲಿರಬೇಕು. ರಾಜನ ನಿರ್ಣಯದಲ್ಲಿ ದೋಷಕಂಡು ಅದರಲ್ಲಿ ಬದಲಾವಣೆ ಆಗಬೇಕಾದಾಗ ಬಹಿರಂಗವಾಗಿ ಆ ಕುರಿತು ಚರ್ಚಿಸಕೂಡದು. ಸಭಾಸದರ ಎದುರು ಸತ್ಯವೇ ಆದರೂ ಅದನ್ನು ಪ್ರಕಟಿಸಿದರೆ ರಾಜನ ಮಹತ್ವ ಕಡಿಮೆಯಾಗಿಬಿಡುತ್ತದೆ. ಸಚಿವನಾದವ ಹೆಂಡತಿ ತನ್ನ ಗಂಡನಿಗೆ ಏಕಾಂತದಲ್ಲಿ ಹೇಗೆ ಎಲ್ಲವನ್ನು ತಿಳಿಸಿ ಹೇಳುತ್ತಾಳೆಯೋ ಅದೇ ರೀತಿ ರಾಜ ಏಕಾಂತದಲ್ಲಿರುವಾಗ ಆತ ತೆಗೆದುಕೊಂಡ ನಿರ್ಣಯಗಳ ಕುರಿತು ವಿಮರ್ಶಿಸಿ ಮಾಡಬೇಕಾದ ಬದಲಾವಣೆಗಳನ್ನು ತಿಳಿಸಿ ಕಾರ್ಯರೂಪಕ್ಕೆ ತರುವಂತೆ ನೋಡಿಕೊಳ್ಳಬೇಕು. ದಶರಥನಿಗೆ ಬಹುಕಾಲದವರೆಗೂ ಮಕ್ಕಾಳಾಗಿಲ್ಲದ ಕಾರಣದಿಂದ ಆತ ತನ್ನ ಮಂತ್ರಿಗಳನ್ನು ಪುರೋಹಿತರಾದ ವಶಿಷ್ಠ, ವಾಮದೇವರನ್ನೂ ಕರೆಯಿಸಿ ಅವರಲ್ಲಿ ಪರಿಹಾರ ಕೇಳಿದಾಗ, ಅವರು ರಾಜನಿಗೆ ಅಶ್ವಮೇಧ ಯಾಗವನ್ನು ಮಾಡಲು ಸಲಹೆನೀಡುತ್ತಾರೆ. ಅದಕ್ಕೆ ದೊರೆ ಒಪ್ಪಿಗೆ ಸೂಚಿಸಿಯೂ ಆಗುತ್ತದೆ. ಆದರೆ ಅಲ್ಲೇ ಇದ್ದ ಸುಮಂತ್ರನಿಗೆ ಈ ಸಲಹೆ ಪೂರ್ತಿ ಮನಸ್ಸಿಗೆ ಬರಲಿಲ್ಲ. ಆತ ರಾಜನ ಅಂತಃಪುರಕ್ಕೆ ಸಾಯಂಕಾಲ ಬಂದು ರಾಜನಿಗೆ ಮಹತ್ವದ ವಿಷಗಳ ಕುರಿತು ಹೇಳುತ್ತಾನೆ.

ಸುಮಂತ್ರನ ಪಾತ್ರ ಮಹಾಭಾರತದ ವಿದುರನ ಪಾತ್ರವನ್ನು ಹೋಲುತ್ತದೆ. ಆತನಿಗೂ ವಿದುರನಂತೆ ಮಹಾನ್ ಋಷಿಗಳ ಸಂಪರ್ಕವಿತ್ತು. ಅವರಲ್ಲಿ ತನ್ನ ವಯಕ್ತಿಕವಾದ ವಿಷಯಗಳನ್ನು ಕೇಳುವುದಕ್ಕಿಂತ ಆತ ರಾಜ್ಯದ ಕಲ್ಯಾಣದ ವಿಷಯಗಳನ್ನು ಕೇಳುತ್ತಿದ್ದ. ಅಯೋಧ್ಯೆಯ ಅರಸನಿಗೆ ಮಕ್ಕಳಾಗಿಲ್ಲದ ವಿಷಯಗಳ ಕುರಿತು ಸುಮಂತ್ರನಿಗೂ ಚಿಂತೆ ಆಗಿತ್ತು. ಆ ಕುರಿತು ಆತ ಪರಿಹಾರಕ್ಕಾಗಿ ಅನೇಕ ಋಷಿಗಳನ್ನು ಬೇಡಿಕೊಳ್ಳುತ್ತಿದ್ದ. ಒಂದುಸಲ ಸುಮಂತ್ರ ಮಹಾತ್ಮರಾದ ಸನತ್ಕುಮಾರ ಋಷಿಗಳನ್ನು ಇನ್ನಿತರ ಮುನಿಗಳ ಸಮ್ಮುಖದಲ್ಲಿ ಭೇಟಿಯಾಗಿ ರಾಜನಿಗೆ ಮಕ್ಕಳಾಗುವಂತೆ ಬೇಡಿಕೊಂಡ. ಅದಕ್ಕೆ ಅವರು ವಿಭಾಂಡಕ ಮುನಿಯ ಮಗನಾದ ಋಷ್ಯಶೃಂಗನ ವಿಚಾರವನ್ನು ಹೇಳಿ, ಆತನ ಚರಿತ್ರೆಯನ್ನು ಅಮಾತ್ಯನಿಗೆ ವಿವರಿಸುತ್ತಾರೆ. ಋಷ್ಯಶೃಂಗನನ್ನು ಹೆಣ್ಣುಗಳ ಮೋಹದಲ್ಲಿ ಕೆಡಹಿ ತನ್ನ ರಾಜ್ಯಕ್ಕೆ ಕರೆಯಿಸಿಕೊಂಡ ರೋಮಪಾದ ರಾಜ ತನ್ನ ಮಗಳಾದ ಶಾಂತಾದೇವಿಯನ್ನು ಕೊಟ್ಟು ಮದುವೆಮಾಡಿದ್ದಾನೆ. ಸುಮಂತ್ರನ ನಿಸ್ಪ್ರಹ ಪ್ರಾರ್ಥನೆಗೆ ಮೆಚ್ಚಿದ ಸನತ್ಕುಮಾರರು ಧಶರಥನಿಗೆ ಮಕ್ಕಳಾಗಬೇಕೆಂದಿದ್ದರೆ ಆತ ಅಂಗರಾಜ್ಯಕ್ಕೆ ಹೋಗಿ ರೋಮಪಾದನನ್ನು ಒಲಿಸಿ ಋಷ್ಯಶೃಂಗನನ್ನು ಅಯೋಧ್ಯೆಗೆ ಕರೆಯಿಸಿ ಆತನಿಂದ ಪುತ್ರಕಾಮೇಷ್ಥಿ ಯಾಗವನ್ನು ಮಾಡಿಸಿದರೆ ನಾಲ್ವರು ಮಕ್ಕಳಾಗುವರು ಎಂದು ಉಪಾಯವನ್ನೂ ಸಹ ಹೇಳಿದ್ದ. ಈ ವಿಷಯವನ್ನು ಸೂಕ್ತ ಸಮಯದಲ್ಲಿ ದಶರಥನಿಗೆ ಹೇಳಬೇಕೆಂದುಕೊಂಡು ಅದು ತನಕ ಹೇಳಿರಲಿಲ್ಲ.

ದೇವಗುಟ್ಟು, ಋಷಿ ಗುಟ್ಟುಗಳನ್ನು ಏಕಾಏಕೀ ಬಹಿರಂಗಪಡಿಸಬಾರದೆಂದು ಶಾಸ್ತ್ರ ಹೇಳುತ್ತದೆ. ಕಾಲವಲ್ಲದ ಕಾಲದಲ್ಲಿ ಅದನ್ನು ಹೇಳಿದರೆ ಅದು ಫಲ ನೀಡದೇ ಹೋಗಬಹುದು. ಅದೂ ಅಲ್ಲದೇ ಮನುಷ್ಯ ಪ್ರಯತ್ನ ಮೀರಿದಾಗ ಮಾತ್ರವೇ, ದೇವತೆಗಳಲ್ಲಿ ಅನುಗ್ರಹಕ್ಕಾಗಿ ಕೋರಬೇಕು. ಮಕ್ಕಳಾಗಲು ಅಶ್ವಮೇಧ ಯಾಗವನ್ನು ಮಾಡುವಂತೆ ವಶಿಷ್ಠರು ಸಲಹೆ ನೀಡಿದಾಗ ಸಭೆಯ ಮರ್ಯಾದೆಯ ದೃಷ್ಟಿಯಿಂದ ಅಲ್ಲಿ ಸುಮಂತ್ರ ಏನೂ ಹೇಳಲಿಲ್ಲ. ಮಂತ್ರಾಲೋಚನೆಯ ನೆಪದಲ್ಲಿ ಅಂತಃಪುರಕ್ಕೆ ಬಂದು ಅರಸನಿಗೆ ತಾನು ರಾಜನ ಸಲುವಾಗಿ ಸನತ್ಕುಮಾರರಲ್ಲಿ ಮಕ್ಕಳಾಗುವಂತೆ ವರಬೇಡಿದುದರ ವಿಷಯವನ್ನು ಬಹಿರಂಗಪಡಿಸುತ್ತಾನೆ. ಸನತ್ಕುಮಾರರೇ ಸಲಹೆ ನೀಡಿದಂತೆ ಪುತ್ರಕಾಮೇಷ್ಟಿಯಾಗವನ್ನು ಮಾಡಲು ಪ್ರೇರೇಪಿಸುತ್ತಾನೆ. ಪುತ್ರಕಾಮೇಷ್ಟಿಯಾಗ ಅಥರ್ವ ಮಂತ್ರಕ್ಕೆ ಸಂಬಂಧಿಸಿದುದರಿಂದ ಸಭೆಯಲ್ಲಿ ನೇರವಾಗಿ ಹೇಳಕೂಡದು ಎನ್ನುವ ಪ್ರಜ್ಞೆ ಸುಮಂತ್ರನಲ್ಲಿತ್ತು. ಪುರೋಹಿತರಾದ ವಶಿಷ್ಠರು ಆಸ್ಥಾನದಲ್ಲಿ ಇರುವಾಗ ಇನ್ನೊಬ್ಬ ಪುರೋಹಿತರನ್ನು ಕರೆಯಿಸಿ ಯಾಗ ಮಾಡುವ ಸಲಹೆ ನೀಡಿದರೆ ಅದರಿಂದ ವಶಿಷ್ಠರಿಗೆ ಅವಮಾನ ಆಗಿ ಕೋಪಿಸಿಕೊಳ್ಳಬಹುದೆನ್ನುವ ಆತಂಕವೂ ಮನೆಮಾಡಿತ್ತು.

ಈ ಹಿಂದೆ ವಶಿಷ್ಠ ಪರಂಪರೆಯ ಹಿರಿಯರು ಹರಿಶ್ಚಂದ್ರನ ತಂದೆ ಸತ್ಯವ್ರತ(ತ್ರಿಶಂಕು)ನಿಗೆ ಇನ್ನೊಬ್ಬ ಪುರೋಹಿತರನ್ನು ಕರೆದು ಯಾಗ ಮಾಡಿಸುವೆ ಎಂದಾಗ ಶಾಪ ಕೊಟ್ಟಿದ್ದ. ಈ ಕಾರಣದಿಂದ ಮಹಾರಾಜನೇ ಋಷ್ಯಶೃಂಗನನ್ನು ಕರೆತರುವ ವಿಚಾರದಲ್ಲಿ ವಶಿಷ್ಠರನ್ನು ಒಲಿಸಲಿ ಎನ್ನುವ ವಿವೇಕದ ನಡತೆ ಅವನಲ್ಲಿತ್ತು. ವಿದ್ವಾಂಸನೂ ಎಲ್ಲಾ ಕಾರ್ಯಗಳಲ್ಲಿ ಶುದ್ಧನಾಗಿರುವವನು, ದೇಶಿಯನು (ಜಾನಪದಃ), ತೀಕ್ಷ್ಣವಾದ ಬುದ್ಧಿಯುಳ್ಳವ (ಕೃತಪ್ರಜ್ಞಶ್ಚ) ಆದ ಮಂತ್ರಿಯನ್ನು ಅರಸ ಹೊಂದಿರಬೇಕೆನ್ನುವ ಶೃತಿವಾಕ್ಯಕ್ಕೆ ನಿದರ್ಶನನಾಗಿ ಸುಮಂತ್ರ ಇದ್ದ. ಸುಮಂತ್ರನ ಸಲಹೆಯನ್ನು ಸ್ವೀಕರಿಸಿದ ರಾಜ ವಶಿಷ್ಠರ ನೇತ್ರತ್ವದಲ್ಲಿ ಅಶ್ವಮೇಧ ಯಾಗವನ್ನೂ ಆ ನಂತರ ಋಷ್ಯಶೃಂಗರ ಅದ್ವರ್ಯದಲ್ಲಿ ಪುತ್ರಕಾಮೇಷ್ಟಿ ಯಾಗವನ್ನೂ ನಡೆಸಲು ವಶಿಷ್ಥರಿಂದ ಅನುಮತಿ ಪಡೆಯುತ್ತಾನೆ. ನಂತರ ದಶರಥನ ಪರಿವಾರದೊಡನೆ ಅಂಗದೇಶಕ್ಕೆ ಹೋಗಿ ರೋಮಪಾದನೊಡನೆ ಋಷ್ಯಶೃಂಗನನ್ನು ಯಾಗಕ್ಕಾಗಿ ಕರೆತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವ ಸುಮಂತ್ರನೇ.

ಮಂತ್ರಾಲೋಚನಾ ಪ್ರವೀಣ

ಸುಮಂತ್ರನಲ್ಲಿ ಮದ ಮತ್ಸರ ಕ್ರೋಧಗಳು ಮನೆಮಾಡಿರಲಿಲ್ಲ. ಅಯೋಧ್ಯೆಯಲ್ಲಿ ಮಂತ್ರಿಗಳಾಗುವವರನ್ನು ಕಾಯಕ, ವಾಚಕ, ಮಾನಸಿಕ, ಕರ್ಮಕೃತ ಮತ್ತು ಸಂಕೇತಜನಿತ ಎನ್ನುವ ಐದು ಅಂಗಗಳಿಂದ ಪರೀಕ್ಷಿಸಿ ತೇರ್ಗಡೆಯಾದವರನ್ನು ಮಂತ್ರಿಗಳಾಗಿ ತೆಗೆದುಕೊಳ್ಳಲಾಗುತ್ತಿತ್ತು. ಸುಮಂತ್ರ ಈ ಎಲ್ಲಾ ವಿಷಯಗಳಲ್ಲಿ ರಾಜನ ಮೊದಲ ಆಯ್ಕೆಯಾಗಿದ್ದ. ಸುಮಂತ್ರನೆನ್ನುವುದು ಈತನಿಗೆ ಅನ್ವರ್ಥನಾಮವಾಗಿದ್ದಿರಬೇಕು. ಮಂತ್ರಕ್ಕೆ ಸಚಿವ ಎನ್ನುವ ಅರ್ಥವಿದೆ. “ಸುಮಂತ್ರ” ಎಂದರೆ ಒಳ್ಳೆಯ ಸಲಹೆಯನ್ನು ಕೊಡುವವ ಎಂದು ಆಗುತ್ತದೆ. ಸುಮಂತ್ರ ಮಂತ್ರಾಲೋಚನೆಯಲ್ಲಿ ನಿಪುಣನಾಗಿದ್ದ. ಕುಮಾರವ್ಯಾಸನ ಭಾರತದಲ್ಲಿ ರಾಜನಿಗೆ ನೆರವಾಗಲು ಮಂತ್ರಾಲೋಚನೆಯಲ್ಲಿ ಸಮರ್ಥರಾದ ಸಚಿವರಿರಬೇಕು ಎನ್ನುತ್ತಾನೆ.

ಮಂತ್ರವುಳ್ಳವನವನೆ ಹಿರಿಯನು
ಮಂತ್ರವುಳ್ಳವನವನೆ ರಾಯನು
ಮಂತ್ರವುಳ್ಳವನವನೆ ಸಚಿವ ನಿಯೋಗಿಯೆನಿಸುವನು |
ಮಂತ್ರವಿಲ್ಲದ ಬರಿಯ ಬಲು ತಳ
ತಂತ್ರದಲಿ ಫಲವಿಲ್ಲವೈ ಸ್ವಾ
ತಂತ್ರವೆನಿಸಲ್ಕರಿವುದೇ ಭೂಪಾಲ ಕೇಳೆಂದ || ಸ. ಸಂ.1-49 ||

ರಾಜನಾದವ ಇಂಥ ಗುಣಲಕ್ಷಣಗಳನ್ನು ಹೊಂದಿರಬೇಕು, ಅಥವಾ ಅಂತವರನ್ನು ತನ್ನ ಆಪ್ತರನ್ನಾಗಿ ಆಯಾ ಹುದ್ಧೆಗಳಲ್ಲಿ ನಿಯುಕ್ತರನ್ನಾಗಿಸಿಕೊಳ್ಳಬೇಕು ಎನ್ನುವ ತಾತ್ಪರ್ಯ ಇದರಲ್ಲಿದೆ. ಸುಮಂತ್ರ ಈ ಎಲ್ಲಾ ಗುಣಗಳ ಸಾಕಾರ ಮೂರ್ತಿಯಾಗಿದ್ದ. ಅಯೋಧ್ಯೆಯಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ನಡೆಸಲು ದಶರಥ ಹೂಡಿದ್ದ ಮಂತ್ರಾಲೋಚನೆ ಬಲು ಪ್ರಸಿದ್ಧ. ಅಲ್ಲಿ ಆತ ವಶಿಷ್ಠ, ವಾಮದೇವ ಮತ್ತು ಸುಮಂತ್ರನನ್ನು ಸೇರಿಸಿ ರಾಮನಿಗೆ ಯುವರಾಜ ಪಟ್ಟಾಭಿಷೇಕವನ್ನುಮಾಡುವ ತನ್ನ ಮನಸ್ಸಿನ ಆಶಯವನ್ನು ವ್ಯಕ್ತಪಡಿಸುತ್ತಾನೆ. ರಾಜನಿಗೆ ಅಶ್ವಪತಿಗೆ ಕೊಟ್ಟ ಮಾತು ತಪ್ಪಿಸಬೇಕಾಗಿದೆ. ಅದಕ್ಕೆ ಮಂತ್ರಿಗಳ ಒಪ್ಪಿಗೆ ಪಡೆದು ನಿಧಾನಕ್ಕೆ ಸಾಮಂತರ ಮತ್ತು ಪ್ರಜೆಗಳ ಒಪ್ಪಿಗೆಯನ್ನು ಪಡೆಯುವ ಹಂತದಲ್ಲಿ ಕರೆದ ಮಂತ್ರಾಲೋಚನೆ ಅದು. ಮಂತ್ರಾಲೋಚನೆಯ ವಿಷಯದಲ್ಲಿ ರಾಜ ಕೊಡಬೇಕಾದ ಮಹತ್ವವನ್ನು ಮಹಾಭಾರತದ ಶಾಂತಿಪರ್ವಲ್ಲಿ ವಿವರವಾಗಿ ಬಂದಿದೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

“ಮನ್ತ್ರಸಂಹನನೋ ರಾಜಾ ಮನ್ತ್ರಾಙ್ಗಾನೀತರೇ ಜನಾಃ – ಮಂತ್ರಾಲೋಚನೆಯೇ ರಾಜನ ದೇಹವಾಗಿರುತ್ತದೆ. ಮಂತ್ರಿಗಳು ರಾಜರಹಸ್ಯಕ್ಕೆ ಅಂಗಭೂತರಾಗಿರುತ್ತಾರೆ” ಮಂತ್ರಾಲೋಚನೆಯ ನಡೆಯುತ್ತಿರುವಾಗ ಆ ಸ್ಥಳದ ಸುತ್ತಮುತ್ತಲೂ ವಾಮನರೂ, ಕುಬ್ಜರೂ, ಸ್ತ್ರೀಯರೂ, ನಪುಂಸಕರೂ ಸುಳಿಯದಂತೆ ಎಚ್ಚರಿಕೆ ವಶಿಸಬೇಕೆಂದಿದೆ. ರಾಜ ಅಶ್ವಪತಿಗೆ ನೀಡಿದ ವರದ ಗುಟ್ಟು ತಿಳಿದಿರುವುದು ಅಲ್ಲಿ ಸೇರಿದ್ದ ಸುಮಂತ್ರನಿಗೆ ಮಾತ್ರ. ಹಾಗಾಗಿ ಅದನ್ನು ಮರೆಮಾಚಿ ರಾಮನಿಗೆ ಪಟ್ಟಕಟ್ಟುವ ವಿಷಯವನ್ನು ರಾಜನೇ ಪ್ರಸ್ತಾಪ ಮಾಡುವಾಗ ಅದನ್ನು ಮೌನವಾಗಿ ಅನುಮೋದಿಸುವವನು ಸುಮಂತ್ರ. ಇದರ ವಿವರವನ್ನು ದಶರಥನ ಭಾಗದಲ್ಲಿ ನೀಡಲಾಗಿದೆ. ಆನಂತರದಲ್ಲಿ ರಾಮನಿಗೆ ಅಯೋಧ್ಯೆಯ ಅಧಿಪತಿಯಾಗಿ ಪಟ್ಟಗಟ್ಟುವ ನಿರ್ಣಯವನ್ನು ತಿಳಿಸಲು ಕರೆತರಲು ಹೋಗುವುದೂ ಸಹ ಸುಮಂತ್ರನೇ. ರಾಜ ಸಭೆಯ ನಂತರ ಕೂಡಲೇ ದಶರಥ ಸುಮಂತ್ರನನ್ನು ಕರೆದು ಮಂತ್ರಾಲೋಚನೆ ಮಾಡುತ್ತಾನೆ. ರಾಜನಿಗೆ ಎಲ್ಲಿ ವಿಘ್ನಗಳು ಬಂದುಬಿಡುವವೋ ಎನ್ನುವ ಹೆದರಿಕೆ ಇದ್ದಿರಬೇಕು. ಆ ಕಾರಣಕ್ಕಾಗಿ ಇಬ್ಬರೂ ಸಮಾಲೋಚಿಸಿ ಮತ್ತೊಮ್ಮೆ ರಾಮನನ್ನು ದಶರಥನ ಅಂತಃಪುರಕ್ಕೆ ಕರೆತರಲು ಸುಮಂತ್ರನೇ ಹೋಗುತ್ತಾನೆ. ದಶರಥ ರಾಮನಲ್ಲಿ “ಭವನ್ತಿ ಬಹುವಿಘ್ನಾನಿ ಕಾರ್ಯಾಣ್ಯೇವಂವಿಧಾನಿ ಹಿ” ಎನ್ನುವ ಮೂಲಕ ಆತನ ಪಟ್ಟಾಭಿಷೇಕದ ವಿಷಯದಲ್ಲಿ ತನಗಿರುವ ಆತಂಕವನ್ನು ತೋಡಿಕೊಳ್ಳುತ್ತಾನೆ. ಈ ಸಂದರ್ಭದಲ್ಲಿ ರಾಜನ ಸನಿಹದಲ್ಲಿದ್ದವ ಸುಮಂತ್ರ ಮಾತ್ರ. ರಾಮಾಯಣ ಮಹಾಕಾವ್ಯದಲ್ಲಿ ಸುಮಂತ್ರ ಮಾತನಾಡುವುದು ಬಲು ಕಡಿಮೆ. ಆದರೆ ಆತನ ಕಾರ್ಯದಕ್ಷತೆ ಪ್ರತಿಯೊಂದು ಸಂದರ್ಭಗಳಲ್ಲಿಯೂ ಎದ್ದು ಕಾಣುತ್ತದೆ.

ಸುಮಂತ್ರನ ರಾಜನಿಷ್ಠೆ ಮತ್ತು ಭಾವಪರವಶತೆಯ ಕುರಿತು ಮುಂದಿನ ಭಾಗದಲ್ಲಿ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

Continue Reading

ಅಂಕಣ

ಸೈಬರ್‌ ಸೇಫ್ಟಿ ಅಂಕಣ: ಭಾರತದ ಭವಿಷ್ಯಕ್ಕೆ ಬ್ಲಾಕ್‌ಚೈನ್‌ನ ಬೆನ್ನೆಲುಬು

ತಂತ್ರಜ್ಞಾನದಲ್ಲಿ ಆಗಲಿರುವ ಭವಿಷ್ಯದ ಬದಲಾವನೆಗಳು ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನು ಅಧರಿಸಿರುತ್ತವೆ. ಬ್ಲಾಕ್‌ಚೈನ್‌ಗಳು ಕ್ರಿಪ್ಟೋಗ್ರಫಿ ಮೂಲಕ ಒಂದಕ್ಕೊಂದು ಲಿಂಕ್ ಮಾಡಲಾದ ಬ್ಲಾಕ್‌ಗಳಲ್ಲಿ ಡೇಟಾವನ್ನು ಸಂಗ್ರಹಿಸುತ್ತವೆ. ಇದರ ಇನ್ನಷ್ಟು ವಿವರ ಇಲ್ಲಿದೆ.

VISTARANEWS.COM


on

ಸೈಬರ್‌ ಸೇಫ್ಟಿ ಅಂಕಣ cyber safety column 2
Koo
cyber safety logo

ಸೈಬರ್‌ ಸೇಫ್ಟಿ ಅಂಕಣ: ವಿಶ್ವದಾದ್ಯಂತ ತಂತ್ರಜ್ಞಾನದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗುತ್ತಿವೆ. ಅವುಗಳನ್ನು A, B, C… ಎಂದು ಪಟ್ಟಿ ಮಾಡುವುದಾದರೆ artificial intelligence, (ಕೃತಕ ಬುದ್ಧಿವಂತಿಕೆ) blockchain (ಬ್ಲಾಕ್ ಚೈನ್‌) ಮತ್ತು cloud computing (ಕ್ಲೌಡ್‌ ಕಂಪ್ಯೂಟಿಂಗ್) ಎಂದು ಪ್ರಮುಖವಾಗಿ ವಿಂಗಡಿಸಬಹುದು. ಬ್ಲಾಕ್‌ಚೈನ್‌ ಒಂದು ಹಂಚಿಕೆಯ (distributed) ಡೇಟಾಬೇಸ್ ಆಗಿದ್ದು ನಾವು ಬಳಸುತ್ತಿರುವ ಕೇಂದ್ರೀಕೃತ (centralised) ಕ್ಲೈಂಟ್ – ಸರ್ವರ್ ಡೇಟಾಬೇಸ್‌ಗಿಂತ ಮಾಹಿತಿಯನ್ನು ಸಂಗ್ರಹಿಸುವ ರೀತಿಯಲ್ಲಿ ಭಿನ್ನವಾಗಿರುತ್ತದೆ.

ಬ್ಲಾಕ್‌ಚೈನ್‌ಗಳು ಕ್ರಿಪ್ಟೋಗ್ರಫಿ ಮೂಲಕ ಒಂದಕ್ಕೊಂದು ಲಿಂಕ್ ಮಾಡಲಾದ ಬ್ಲಾಕ್‌ಗಳಲ್ಲಿ ಡೇಟಾವನ್ನು ಸಂಗ್ರಹಿಸುತ್ತವೆ. ಇದು ಪಿಯರ್-ಟು-ಪಿಯರ್ ನೆಟ್ವರ್ಕಿನಲ್ಲಿ ಕಾರ್ಯ ನಿರ್ವಹಿಸುತ್ತದೆ. ವಿವಿಧ ರೀತಿಯ ಮಾಹಿತಿಯನ್ನು ಬ್ಲಾಕ್‌ಚೈನ್‌ನಲ್ಲಿ ಸಂಗ್ರಹಿಸಬಹುದು. ಆದರೆ ವಹಿವಾಟುಗಳನ್ನು ದಾಖಲಿಸುವ ಸಾಮಾನ್ಯ ಲೆಡ್ಜರ್‌ನಂತೆ ಹೆಚ್ಚು ಬಳಕೆಯಾಗುತ್ತಿದೆ. ಎಲ್ಲಾ ಬ್ಲಾಕ್‌ಚೈನ್‌ಗಳು DLTಗಳೆ. ಆದರೆ ಎಲ್ಲಾ DLT ಗಳು ಬ್ಲಾಕ್‌ಚೈನ್‌ ಅಲ್ಲ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿನ ಸರ್ಕಾರಿ ಸಂಸ್ಥೆಯಾದ ಭಾರತದ ರಾಷ್ಟ್ರೀಯ ಮಾಹಿತಿ ಕೇಂದ್ರ (ನ್ಯಾಷನಲ್‌ ಇನ್‌ಫರ್‌ಮೆಟಿಕ್ಸ್‌ಸೆಂಟರ್‌ – NIC) 8 ಮಿಲಿಯನ್ ಪರಿಶೀಲಿಸಬಹುದಾದ ಸರ್ಕಾರ ನೀಡಿದ ದಾಖಲೆಗಳನ್ನು ಹೋಸ್ಟ್ ಮಾಡುತ್ತಿದೆ ಎಂದು ಇತ್ತೀಚೆಗೆ ವರದಿ ಮಾಡಿದೆ.

NIC ತನ್ನ ಬ್ಲಾಕ್‌ಚೈನ್ ಉಪಕ್ರಮಗಳನ್ನು ಹೈಲೈಟ್ ಮಾಡಲು ಹೊಸ ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ. ಶಿಕ್ಷಣ, ಆಸ್ತಿ, ನ್ಯಾಯಾಂಗ ಮತ್ತು ಔಷಧ ಲಾಜಿಸ್ಟಿಕ್ಸ್‌ನಂತಹ ಕ್ಷೇತ್ರಗಳನ್ನು ಒಳಗೊಂಡಿರುವ ಸುಮಾರು 7.93 ಮಿಲಿಯನ್ ದಾಖಲೆಗಳು ಈಗಾಗಲೇ ಬ್ಲಾಕ್‌ಚೈನ್‌ ನೆಟ್ವರ್ಕಿಗೆ ಸ್ಥಳಾಂತರಗೊಂಡಿದೆ.

ಭಾರತದಲ್ಲಿ, ಉತ್ಪನ್ನಗಳ ಅಭಿವೃದ್ಧಿಯು ಪ್ರಾಥಮಿಕವಾಗಿ ಮೂರು ಬ್ಲಾಕ್‌ಚೈನ್ ಪ್ಲಾಟ್‌ಫಾರ್ಮ್‌ಗಳನ್ನು ಅವಲಂಬಿಸಿದೆ: ಹೈಪರ್ಲೆಡ್ಜರ್ ಫ್ಯಾಬ್ರಿಕ್, ಹೈಪರ್ಲೆಡ್ಜರ್ ಸಾವ್ಟೂತ್ ಮತ್ತು ಎಥೆರಿಯಮ್. ದೇಶವು ಪ್ರಸ್ತುತ ಐದು ಬ್ಲಾಕ್‌ಚೈನ್ ಉತ್ಪನ್ನಗಳನ್ನು ಬಳಸಿಕೊಳ್ಳುತ್ತದೆ: ಪ್ರಮಾಣಪತ್ರ ಸರಪಳಿ, ಡಾಕ್ಯುಮೆಂಟ್ ಚೈನ್, ಡ್ರಗ್ ಲಾಜಿಸ್ಟಿಕ್ಸ್ ಚೈನ್, ನ್ಯಾಯಾಂಗ ಸರಪಳಿ ಮತ್ತು ಆಸ್ತಿ ಸರಪಳಿ.

ಆರು ವಿಭಿನ್ನ ರಾಜ್ಯಗಳ ದಾಖಲೆಗಳು ಮತ್ತು ಸರ್ಕಾರಿ ಇಲಾಖೆಗಳಾದ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಗ್ರಾಹಕ ವ್ಯವಹಾರಗಳ ಸಚಿವಾಲಯ ಮತ್ತು ನ್ಯಾಯ ಸಚಿವಾಲಯದ ಬಹುತೇಕ ದಾಖಲೆಗಳು ಈಗಾಗಲೇ ಬ್ಲಾಕ್‌ಚೈನ್‌ ನೆಟ್ವರ್ಕಿನಲ್ಲಿ ಅಳವಡಿಸಲ್ಪಟ್ಟಿದೆ.

ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಇಲಾಖೆಗಳು ಆಸ್ತಿ ಮಾಲೀಕತ್ವ, ಜನನ ಮತ್ತು ಮರಣ ಪ್ರಮಾಣಪತ್ರಗಳಿಗಾಗಿ ಪರಿಶೀಲನಾ ಸೇವೆಗಳನ್ನು ಜಾರಿಗೆ ತಂದಿವೆ, ಜೊತೆಗೆ ಔಷಧಿಗಳು ಮತ್ತು ಶೈಕ್ಷಣಿಕ ಪ್ರಮಾಣಪತ್ರಗಳಿಗೆ ಪೂರೈಕೆ ಸರಪಳಿ ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿವೆ.

ಹೆಚ್ಚುವರಿಯಾಗಿ, ಭಾರತವು ಭೂ ದಾಖಲೆಗಳು, ರಕ್ತ ಬ್ಯಾಂಕುಗಳು, ಟ್ರ್ಯಾಕಿಂಗ್ ಸರಕು ಮತ್ತು ಸೇವಾ ತೆರಿಗೆ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಮೀಸಲಾಗಿರುವ ಪ್ರೂಫ್-ಆಫ್-ಕಾನ್ಸೆಪ್ಟ್ ಬ್ಲಾಕ್‌ಚೈನ್‌ಗಳನ್ನು ಸಕ್ರಿಯವಾಗಿ ಅಭಿವೃದ್ಧಿಪಡಿಸುತ್ತಿದೆ.

ಬ್ಲಾಕ್‌ಚೈನ್‌ನಲ್ಲಿ ಭಾರತದ ಆಸಕ್ತಿ ಹೊಸದೇನಲ್ಲ. 2023 ರಲ್ಲಿ, ಭಾರತದ ಅತಿದೊಡ್ಡ ತೈಲ ಮತ್ತು ಅನಿಲ ಕಂಪನಿಗಳಲ್ಲಿ ಒಂದಾದ ಹಿಂದೂಸ್ತಾನ್ ಪೆಟ್ರೋಲಿಯಂ, ಬ್ಲಾಕ್‌ಚೈನ್ ಆಧಾರಿತ ಡಿಜಿಟಲ್ ರುಜುವಾತು ತಂತ್ರಜ್ಞಾನವನ್ನು ಅದರ ಖರೀದಿ ಆದೇಶ ವ್ಯವಸ್ಥೆಯಲ್ಲಿ ಸಂಯೋಜಿಸಲು ಬ್ಲಾಕ್‌ಚೈನ್ ಸಾಫ್ಟ್‌ವೇರ್ ಸಂಸ್ಥೆ ಜುಪಲ್ ಲ್ಯಾಬ್ಸ್‌ನೊಂದಿಗೆ ಸಹಕರಿಸಿತು.

ಬ್ಲಾಕ್‌ಚೈನ್ ಅನ್ನು ಅಳವಡಿಸಿಕೊಳ್ಳುವ ಹಿಂದಿನ ಉದ್ದೇಶ ಡಾಕ್ಯುಮೆಂಟ್ ಫೋರ್ಜರಿ ಸಮಸ್ಯೆಯನ್ನು ಪರಿಹರಿಸುವುದಾಗಿದೆ. ಬ್ಲಾಕ್‌ಚೈನ್ ಅನ್ನು ನಿಯಂತ್ರಿಸುವ ಮೂಲಕ, ಭಾರತ ಸರ್ಕಾರವು ಡಿಜಿಟಲ್ ಆಗಿ ಪರಿಶೀಲಿಸಬಹುದಾದ ಮತ್ತು ಬದಲಾಯಿಸಲಾಗದ ಪ್ರಮಾಣಪತ್ರಗಳನ್ನು ನೀಡುತ್ತದೆ, ದುರುದ್ದೇಶಪೂರಿತ ಜನರಿಂದ ಬದಲಾವಣೆ ಅಥವಾ ದುರುಪಯೋಗವನ್ನು ತಡೆಯುತ್ತದೆ. ನಕಲಿ ದಾಖಲೆಗಳ ಹಾವಳಿಗೆ ಪೂರ್ಣ ವಿರಾಮ ಹಾಕುವ ನಿಟ್ಟಿನಲ್ಲಿ ಇದು ಒಂದು ಉತ್ತಮ ಪ್ರಯತ್ನ.

ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ವಿವಿಧ ಕ್ಷೇತ್ರಗಳಲ್ಲಿ ಬಳಸಲು ಸ್ಥಾಪಿತವಾದ ಉತ್ಕೃಷ್ಟತೆಯ ಕೇಂದ್ರವು (CoE) ರಾಷ್ಟ್ರದಾದ್ಯಂತ ಒಂದು ಸಂಘಟಿತ, ಇಂಟರ್‌ಆಪರೇಬಲ್ ಬ್ಲಾಕ್‌ಚೈನ್ ಪರಿಸರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇದು ಎಲ್ಲಾ ಪಾಲುದಾರರಿಗೆ ಹಂಚಿಕೆಯ ಕಲಿಕೆ, ಅನುಭವಗಳು ಮತ್ತು ಸಂಪನ್ಮೂಲಗಳಿಂದ ಪ್ರಯೋಜನ ಪಡೆಯಲು ಅನುವು ಮಾಡಿಕೊಡುತ್ತದೆ. ಉದ್ಯಮದ ತಿಳುವಳಿಕೆ ಮತ್ತು ಬ್ಲಾಕ್‌ಚೈನ್ ತಂತ್ರಜ್ಞಾನಗಳ ಅನುಷ್ಠಾನವನ್ನು ಅಭಿವೃದ್ಧಿಪಡಿಸಲು ಬ್ಲಾಕ್‌ಚೈನ್ ತಂತ್ರಜ್ಞಾನಗಳು, ಪ್ಲಾಟ್‌ಫಾರ್ಮ್‌ಗಳು, ಸ್ವತ್ತುಗಳು ಮತ್ತು ವ್ಯವಸ್ಥೆಗಳನ್ನು ಮುನ್ನಡೆಸುವುದರ ಮೇಲೆ CoE ಕೇಂದ್ರವು ಗಮನಹರಿಸುತ್ತದೆ.

ಈ CoE-BCT ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಎನ್‌ಐಸಿ ಕೈಗೊಂಡ ಯೋಜನೆಗಳಿಗೆ ಪರಿಹಾರಗಳನ್ನು ಪರೀಕ್ಷಿಸಲು ಮತ್ತು ಅಭಿವೃದ್ಧಿಪಡಿಸಲು ನವೀನ ಹೊಸ ಪರಿಹಾರಗಳಿಗೆ ಒಂದು ವೇದಿಕೆಯಾಗಿದೆ. ಪರಿಕಲ್ಪನೆಯ ಪುರಾವೆಯಿಂದ ಉತ್ಪಾದನೆಯವರೆಗೆ ನವೀನ ಬ್ಲಾಕ್‌ಚೈನ್ ಪರಿಹಾರಗಳ ಅಭಿವೃದ್ಧಿ ಮತ್ತು ಅನುಷ್ಠಾನವನ್ನು ಮುನ್ನಡೆಸಲು NIC CoE ತಂಡವು ಜಾಗತಿಕ ತಜ್ಞರೊಂದಿಗೆ ಸಹಕರಿಸುತ್ತದೆ. ಕೇಂದ್ರವು ಸಂಶೋಧನಾ-ನೇತೃತ್ವದ ಚಿಂತನೆಯ ನಾಯಕತ್ವವನ್ನು ಒದಗಿಸುತ್ತದೆ ಮತ್ತು ಸರ್ಕಾರಿ ಸೇವೆಗಳ ವಿತರಣೆಯನ್ನು ಸುಧಾರಿಸುವ ಕಡೆಗೆ ಆಡಳಿತದಲ್ಲಿನ ಸಂಕೀರ್ಣ ವ್ಯವಹಾರ ಸಮಸ್ಯೆಗಳನ್ನು ಪರಿಹರಿಸಲು ಕಾರ್ಯತಂತ್ರದ ಬ್ಲಾಕ್‌ಚೈನ್ ಬೆಳವಣಿಗೆಗಳನ್ನು ಚಾಲನೆ ಮಾಡುತ್ತದೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

ಬ್ಲಾಕ್‌ಚೈನ್ ತಂತ್ರಜ್ಞಾನಗಳ ಬಳಕೆಯನ್ನು ಉತ್ತೇಜನ, ಬ್ಲಾಕ್‌ಚೈನ್ ಆಧಾರಿತ ಪರಿಹಾರಗಳ ಕ್ಷಿಪ್ರ ಅಳವಡಿಕೆ ಮತ್ತು ಆನ್-ಬೋರ್ಡಿಂಗ್ ಅನ್ನು ಸುಗಮಗೊಳಿಸುವುದು, ಸರ್ಕಾರ, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ನಡುವೆ ಬಲವಾದ ಸಹಯೋಗವನ್ನು ಬೆಳೆಸುವುದು ಮತ್ತು ಇತ್ತೀಚಿನ ತಾಂತ್ರಿಕ ಮಾನದಂಡಗಳನ್ನು ಸುರಕ್ಷಿತವಾಗಿ ಮತ್ತು ವಿಶ್ವಾಸಾರ್ಹ ರೀತಿಯಲ್ಲಿ ಲಭ್ಯವಾಗುವಂತೆ ಮಾಡಲು NIC ಸಹಕರಿಸುತ್ತದೆ.

ಬ್ಲಾಕ್‌ಚೈನ್ ತಂತ್ರಜ್ಞಾನದ ಹೊರಹೊಮ್ಮುವಿಕೆಯು ಕೆಲವು ಡೇಟಾ ಚಟುವಟಿಕೆಗಳ ಬಗ್ಗೆ ನಂಬಿಕೆ ಮತ್ತು ಹೆಚ್ಚಿನ ಪಾರದರ್ಶಕತೆಯನ್ನು ಬೆಳೆಸಲು ಮತ್ತು ನಾಗರಿಕರೊಂದಿಗೆ ಘರ್ಷಣೆಯಿಲ್ಲದ ವಹಿವಾಟುಗಳನ್ನು ಒದಗಿಸಲು ಸರ್ಕಾರಕ್ಕೆ ಭರವಸೆ ನೀಡುತ್ತದೆ.

ತಂತ್ರಜ್ಞಾನದ ಜೊತೆಗೆ ತಂತ್ರಜ್ಞಾನದ ಸರಿಯಾದ ಅನ್ವಯಗಳನ್ನು ನಿರ್ಧರಿಸುವುದು ಅದರ ಅಳವಡಿಕೆಯನ್ನು ವೇಗಗೊಳಿಸಲು ನಿರ್ಣಾಯಕ ಅಂಶವಾಗಿದೆ. ಪ್ರಬುದ್ಧ ವ್ಯವಸ್ಥೆಗಳಂತೆ, ಸರ್ಕಾರಿ ಬ್ಲಾಕ್‌ಚೈನ್ ಕಾರ್ಯಕ್ರಮಗಳ ಬೆಂಬಲಿಗರು ಅಂತಹ ಹೂಡಿಕೆಗಳು ಹಣವನ್ನು ಉಳಿಸುತ್ತದೆ ಮತ್ತು ಈಗಾಗಲೇ ಉತ್ತಮ ಸ್ಥಿತಿಯಲ್ಲಿರುವ ಸೇವೆಗಳನ್ನು ಸುಧಾರಿಸುತ್ತದೆ ಎಂದು ಬಲವಾದ ಪುರಾವೆಗಳನ್ನು ವಿವಿಧ ಕ್ಷೇತ್ರಗಳಲ್ಲಿ ಅದರ ಉಪಯೋಗದ ಬಗ್ಗೆ use-cases ತಯಾರಿಸಿದ್ದಾರೆ.

ಈ ರೀತಿ ಬ್ಲಾಕ್‌ಚೈನ್‌ ತಂತ್ರಜ್ಞಾನ ಆಧರಿತ ಅಂತರ್ಜಾಲ ವ್ಯವಸ್ಥೆ ಹೆಚ್ಚಿನ ಸುರಕ್ಷತೆಯನ್ನು ಕೊಡುವುದರ ಮೂಲಕ ಸೈಬರ್‌ ದಾಳಿಗಳನ್ನು ಕಡಿಮೆ ಮಾಡಬಹುದು.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

Continue Reading

ಅಂಕಣ

ರಾಜಮಾರ್ಗ ಅಂಕಣ: ಮನರಂಜನೆಯ ಮಹಾ ದೊರೆ, ಕನಸುಗಾರನ ನಿರ್ಗಮನ

ರಾಜಮಾರ್ಗ ಅಂಕಣ: ಹಳ್ಳಿಯ ಬಡ ಕುಟುಂಬವೊಂದರಿಂದ ಬಂದು, ಯಾವುದೇ ಗಾಡ್ ಫಾದರ್ ಇಲ್ಲದೆ ಕೋಟಿಗಟ್ಟಲೆ ಮೌಲ್ಯದ ಮನರಂನಾ ಸಾಮ್ರಾಜ್ಯವನ್ನು ಸೃಷ್ಟಿಸಿದ ಧೀಮಂತ ರಾಮೋಜಿ ರಾವ್.‌ ಹೈದರಾಬಾದ್‌ನ ಫಿಲಂ ಸಿಟಿ ಅವರ ಕರ್ತೃತ್ವ ಶಕ್ತಿಯ ದ್ಯೋತಕ.

VISTARANEWS.COM


on

ರಾಜಮಾರ್ಗ ಅಂಕಣ ramoji rao
Koo

ಒಬ್ಬ ವ್ಯಕ್ತಿ – ನೂರಾರು ಸಂಸ್ಥೆಗಳು, ಅವರು ರಾಮೋಜಿ ರಾವ್

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಜಗತ್ತಿನ ಅತೀ ದೊಡ್ಡ ಫಿಲಂ ಸಿಟಿ (Film City) ಕಟ್ಟಿದವರು ಅವರು. ಹೆಸರು ರಾಮೋಜಿ ರಾವ್ (Ramoji Rao).

ನಿನ್ನೆ ಹೈದರಾಬಾದ್ (Hyderabad) ನಗರದಿಂದ ಬಂದ ಒಂದು ಶಾಕಿಂಗ್ ನ್ಯೂಸ್ ಭಾರತದ ಕೋಟಿ ಕೋಟಿ ಸಿನೆಮಾ ಅಭಿಮಾನಿಗಳನ್ನು ತಲ್ಲಣ ಮಾಡಿ ಹೋಯಿತು. ಅದು ರಾಮೋಜಿ ರಾವ್ ಅವರ ನಿರ್ಗಮನ.

ನನ್ನ ತರಬೇತಿ ಮತ್ತು ಭಾಷಣಗಳಲ್ಲಿ ಅತೀ ಹೆಚ್ಚು ಉಲ್ಲೇಖ ಪಡೆದ ಒಬ್ಬ ಲೆಜೆಂಡ್ ಇದ್ದರೆ ಅದು ರಾಮೋಜಿ ರಾವ್. ಅವರನ್ನು ಅವರದ್ದೇ ಸ್ಟುಡಿಯೋದಲ್ಲಿ ಭೇಟಿ ಮಾಡಿದ ಕ್ಷಣಗಳು ನನಗೆ ಪ್ರೇರಣಾದಾಯಕ. ಅವರು ತನ್ನ 87 ವರ್ಷಗಳ ಬದುಕಿನಲ್ಲಿ ಹುಟ್ಟು ಹಾಕಿದ್ದು ನೂರಾರು ಸಂಸ್ಥೆಗಳನ್ನು. ಅವರು ಬಿಟ್ಟು ಹೋದ ಸ್ಥಾನವನ್ನು ಬೇರೆ ಯಾರೂ ತುಂಬಲು ಸಾಧ್ಯವೇ ಇಲ್ಲ.

ಶೂನ್ಯದಿಂದ ಆರಂಭ

ಆಂಧ್ರಪ್ರದೇಶದ ಒಂದು ಸಣ್ಣ ಹಳ್ಳಿಯಿಂದ ಒಂದು ಕೃಷಿಕ ಕುಟುಂಬದಿಂದ ಬಂದವರು ರಾಮೋಜಿ ರಾವ್. ಓದಿದ್ದು ವಿಜ್ಞಾನ ಪದವಿ. ಬಾಲ್ಯದಲ್ಲಿ ಹೈದರಾಬಾದನ ಗಲ್ಲಿಗಳಲ್ಲಿ ಬೈಸಿಕಲ್ ಹಿಂದೆ ಉಪ್ಪಿನಕಾಯಿ ಭರಣಿಗಳನ್ನು ಕಟ್ಟಿಕೊಂಡು ಮನೆಮನೆಗೆ ಮಾರಿ ಒಂದಿಷ್ಟು ದುಡ್ಡು ಸಂಪಾದನೆ ಮಾಡಿದ ಅನುಭವ ಅವರದ್ದು. ಮುಂದೆ ಅದೇ ವ್ಯವಹಾರವು ‘ಪ್ರಿಯಾ ಉಪ್ಪಿನಕಾಯಿ ‘ ಎಂಬ ಉದ್ಯಮದ ರೂಪವನ್ನು ತಾಳಿತು. ಅವರು ಕೈ ಹಾಕಿದ ಪ್ರತೀ ಒಂದು ಕ್ಷೇತ್ರವನ್ನೂ ಉದ್ಯಮವಾಗಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ರಿಸ್ಕ್ ತೆಗೆದುಕೊಳ್ಳುವ ಶಕ್ತಿ, ಪಕ್ಕಾ ವ್ಯವಹಾರ ಪ್ರಜ್ಞೆ, ಮಾರ್ಕೆಟಿಂಗ್ ಕೌಶಲಗಳು, ಶಿಸ್ತಿನ ಜೀವನ ಕ್ರಮ ಮುಂದೆ ಅವರನ್ನು ಬಹಳ ಎತ್ತರಕ್ಕೆ ಬೆಳೆಸಿದವು. ಮುಂದೆ ರಮಾದೇವಿ ಎಂಬವರನ್ನು ಮದುವೆ ಆದ ನಂತರ ಅವರು ಹಿಂದೆ ತಿರುಗಿ ನೋಡಿದ್ದೇ ಇಲ್ಲ.

ಮಾರ್ಗದರ್ಶಿ ಚಿಟ್ ಫಂಡ್ ಸ್ಥಾಪನೆ

ಆಂಧ್ರಪ್ರದೇಶದ ಬ್ಯಾಂಕಿಂಗ್ ಸೆಕ್ಟರಗೆ ಸವಾಲಾಗಿ 1962ರಲ್ಲಿ ಮಾರ್ಗದರ್ಶಿ ಚಿಟ್ ಫಂಡ್ ಎಂಬ ಹಣಕಾಸು ಸಂಸ್ಥೆಯನ್ನು ಅವರು ಆರಂಭ ಮಾಡಿದರು. ಒಂದೊಂದು ರೂಪಾಯಿಯನ್ನೂ ಜಾಗ್ರತೆಯಿಂದ ಬಳಸುವ ಅವರ ಜಾಣ್ಮೆಯು ಆ ಸಂಸ್ಥೆಯನ್ನು ದಕ್ಷಿಣ ಭಾರತದ ಮಹೋನ್ನತ ಹಣಕಾಸು ಸಂಸ್ಥೆಯಾಗಿ ಮಾಡಿತು. ಇಂದು ಅದು ನೂರಾರು ಶಾಖೆಗಳ ಮೂಲಕ 10,000 ಕೋಟಿ ರೂ.
ಬಂಡವಾಳದ ಸಂಸ್ಥೆಯಾಗಿ ಬೆಳೆದು ನಿಂತಿದೆ.

ಮಾಧ್ಯಮದ ದೈತ್ಯ – ಈ ನಾಡು ಪತ್ರಿಕೆ

ಒಂದು ಉದ್ಯಮದಲ್ಲಿ ಬಂದ ಲಾಭವನ್ನು ಇನ್ನೊಂದು ಉದ್ಯಮದಲ್ಲಿ ತೊಡಗಿಸುವುದು ರಾಮೋಜಿ ರಾವ್ ಅವರ ಪಾಲಿಸಿ. ಸಾಲ ಮಾಡಿ ಬಿಸಿನೆಸ್ ಮಾಡಬಾರದು ಎಂದವರು ಹೇಳುತ್ತಿದ್ದರು. 1974ರಲ್ಲಿ ಅವರು ಆಂಧ್ರಪ್ರದೇಶದಲ್ಲಿ ʼಈ ನಾಡು’ (Eenadu news paper) ಎಂಬ ದಿನಪತ್ರಿಕೆಯನ್ನು ಆರಂಭ ಮಾಡಿದರು. ಅವರು ಪತ್ರಿಕೋದ್ಯಮದ ಯಾವ ಪಾಠವನ್ನೂ ಕಲಿತಿರಲಿಲ್ಲ. ಆದರೆ ಜನರಿಗೆ ಏನು ಬೇಕು ಎಂದು ಅವರಿಗೆ ಚೆನ್ನಾಗಿ ಗೊತ್ತಿತ್ತು. ಕೆಲವೇ ವರ್ಷಗಳಲ್ಲಿ ಅದು ತೆಲುಗಿನ ನಂಬರ್ ಒನ್ ಪತ್ರಿಕೆ ಆಗಿ ಬೆಳೆಯಿತು. ಅದೀಗ 23 ಪುರವಣಿಗಳನ್ನು ಹೊಂದಿದ್ದು ಲಕ್ಷಾಂತರ ಓದುಗರನ್ನು ತಲುಪುತ್ತಿದೆ. ಎಲ್ಲಾ ಕಡೆಗಳಲ್ಲಿ ಮಿಂಚಿದ್ದು ರಾಮೋಜಿ ರಾವ್ ಅವರ ವ್ಯವಹಾರ ಕುಶಲತೆ ಮತ್ತು ದಣಿವರಿಯದ ದುಡಿಮೆ.

ರಾಜಮಾರ್ಗ ಅಂಕಣ ramoji rao 2

ನೂರಾರು ಸಂಸ್ಥೆಗಳು ಮತ್ತು ಉದ್ಯಮಗಳು

ಅವರು ಮಹಾ ಶಿಸ್ತಿನ ಮನುಷ್ಯ. ದಿನವೂ 18 ಘಂಟೆಗಳ ದುಡಿತ. ಒಂದು ನಿಮಿಷ ವ್ಯರ್ಥ ಮಾಡುವುದು ಅವರಿಗೆ ಇಷ್ಟ ಆಗುವುದಿಲ್ಲ. ಹರಟೆ, ಗಾಸಿಪ್ಸ್ ಇಲ್ಲವೇ ಇಲ್ಲ. ನೆಗೆಟಿವ್ ವ್ಯಕ್ತಿಗಳನ್ನು ಹತ್ತಿರ ಸೇರಿಸಿಕೊಳ್ಳುವುದೇ ಇಲ್ಲ. ಪರಿಣಾಮವಾಗಿ ಅವರು ಒಬ್ಬ ಯಶಸ್ವೀ ಉದ್ಯಮಿಯಾಗಿ ಎಮರ್ಜ್ ಆದರು. ಅವರ ಪತ್ನಿ ರಮಾದೇವಿ ಗಂಡನ ಬಲಗೈ ಆಗಿ ನಿಂತು ವ್ಯವಹಾರವನ್ನು ಬೆಳೆಸಿದರು. ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್ಸ್, ರಮಾದೇವಿ ಶಿಕ್ಷಣ ಸಂಸ್ಥೆಗಳು, ಕಲಾಂಜಲಿ ಶಾಪಿಂಗ್ ಮಾಲ್ಸ್, ಪ್ರಿಯಾ ಉಪ್ಪಿನಕಾಯಿ …..ಹೀಗೆ ಅವರು ನೂರಾರು ಉದ್ಯಮಗಳನ್ನು ಸ್ಥಾಪನೆ ಮಾಡಿದರು. ಎಲ್ಲವನ್ನೂ ಗೆಲ್ಲಿಸಿದರು.

ರಾಮೋಜಿ ಫಿಲ್ಮ್ ಸಿಟಿ – ಇದು ಮ್ಯಾಗ್ನಮೋಪಸ್!

ರಾಜಮಾರ್ಗ ಅಂಕಣ ramoji rao

ರಾಮೋಜಿ ರಾವ್ ಅವರನ್ನು ಇಂದು ನಾವು ಅಗತ್ಯವಾಗಿ ನೆನಪಿಸಿಕೊಳ್ಳಬೇಕಾದದ್ದು ಈ ಫಿಲ್ಮ್ ಸ್ಟುಡಿಯೋ ಮೂಲಕ. ಹೈದರಾಬಾದ್ ನಗರದ ಹೃದಯ ಭಾಗದಲ್ಲಿ 1666 ಎಕರೆ ಜಾಗವನ್ನು ಅವರು ಖರೀದಿಸಿ ಅದರಲ್ಲಿ ತನ್ನ ಎಲ್ಲ ಕನಸುಗಳನ್ನು ಧಾರೆ ಎರೆದರು. ಎತ್ತರವಾದ ಪರ್ವತಗಳು, ಧುಮ್ಮಿಕ್ಕುವ ಜಲಪಾತಗಳು, ವಿಸ್ತಾರವಾದ ಬೀದಿಗಳು, ಹಸಿರು ಹೊದ್ದು ಮಲಗಿದ ಮೈದಾನಗಳು, ದಟ್ಟವಾದ ಅರಣ್ಯಗಳು, ಅರಮನೆಗಳು, ದೇಗುಲಗಳು ಕೋಟೆಗಳು…..ಹೀಗೆ ಎಲ್ಲವನ್ನೂ ಕೃತಕವಾಗಿ ನಿರ್ಮಿಸಿದರು. ಒಂದು ಚಿತ್ರ ನಿರ್ಮಾಣಕ್ಕೆ ಏನೆಲ್ಲ ಬೇಕೋ (ಹೊರಾಂಗಣ, ಒಳಾಂಗಣ, ಬೆಳಕು, ಸ್ಟುಡಿಯೋ, ಚಿತ್ರೀಕರಣ ಘಟಕ, ಟೆಕ್ನಿಕಲ್ ಸ್ಟಾಫ್) ಎಲ್ಲವನ್ನೂ ಒದಗಿಸಿದರು. ಒಬ್ಬ ನಿರ್ಮಾಪಕ ಮತ್ತು ನಿರ್ದೇಶಕ ದುಡ್ಡು ಮತ್ತು ಸ್ಟೋರಿ ತೆಗೆದುಕೊಂಡು ಅಲ್ಲಿಗೆ ಬಂದರೆ ಇಡೀ ಸಿನಿಮಾ ಶೂಟ್ ಮಾಡಿ, ಎಡಿಟಿಂಗ್ ಮಾಡಿ, ಮ್ಯೂಸಿಕ್, ಕಲರಿಂಗ್, VFX ಮುಗಿಸಿ ಸಿನಿಮಾ ತೆಗೆದುಕೊಂಡು ಹೋಗುವ ವ್ಯವಸ್ಥೆ ಅಲ್ಲಿ ಅವರು ಮಾಡಿದರು!

ಅದರ ಪರಿಣಾಮವಾಗಿ ಭಾರತದ ಸಾವಿರಾರು ಸಿನೆಮಾಗಳು ಅಲ್ಲಿ ನಿರ್ಮಾಣವಾದವು. ಬಾಹುಬಲಿ ( ಭಾಗ 1 ಮತ್ತು 2), ಕೆಜಿಎಫ್ ( ಭಾಗ 1 ಮತ್ತು 2), ಕ್ರಿಶ್, ರಾಜಕುಮಾರ ಮೊದಲಾದ ಮಹೋನ್ನತ ಸಿನೆಮಾಗಳು ಶೂಟಿಂಗ್ ಆದದ್ದು ಇದೇ ಸ್ಟುಡಿಯೋ ಒಳಗೆ! ನೂರಾರು ತೆಲುಗು, ಕನ್ನಡ, ಹಿಂದೀ ಧಾರಾವಾಹಿಗಳು ಅಲ್ಲಿ ಹುಟ್ಟು ಪಡೆದವು.

ರಾಮೋಜಿ ರಾವ್ ಅವರೇ ʼಉಷಾಕಿರಣ ಮೂವೀಸ್’ ಎಂಬ ಚಿತ್ರ ನಿರ್ಮಾಣ ಸಂಸ್ಥೆ ಸ್ಥಾಪನೆ ಮಾಡಿ ನೂರಾರು ತೆಲುಗು, ತಮಿಳು, ಹಿಂದಿ, ಕನ್ನಡ ಸಿನಿಮಾಗಳನ್ನು ನಿರ್ಮಿಸಿದರು. ಸಿನೆಮಾ ಹಂಚಿಕೆ ಮಾಡಿದರು. ಆ ಸ್ಟುಡಿಯೋವನ್ನು ಒಂದು ಪ್ರವಾಸೀ ತಾಣವಾಗಿ ಕೂಡ ಅಭಿವೃದ್ಧಿ ಪಡಿಸಿದರು. ಈಗ ವರ್ಷಕ್ಕೆ ಕನಿಷ್ಟ ಒಂದು ಕೋಟಿ ಪ್ರವಾಸಿಗರು ಅಲ್ಲಿ ಭೇಟಿ ಕೊಡುತ್ತಿದ್ದಾರೆ.

ವರ್ಷದ 365 ದಿನವೂ ಸಿನೆಮಾ ಚಟುವಟಿಕೆ ಹೊಂದಿರುವ ಸ್ಟುಡಿಯೋ ಅದು. ಜೊತೆಗೆ ಅದು ಹಾಲಿವುಡ್ ಮೀರಿದ ವೈಭವವನ್ನು ಹೊಂದಿದೆ. ರಾಮೋಜಿ ಫಿಲ್ಮ್ ಸ್ಟುಡಿಯೋ ಇಂದು ಜಗತ್ತಿನ ಅತೀ ದೊಡ್ಡ ಫಿಲ್ಮ್ ಸ್ಟುಡಿಯೋ ಎಂದು ಗಿನ್ನೆಸ್ ದಾಖಲೆ ಮಾಡಿದೆ!

ಮನರಂಜನೆಯ ಮಹಾ ದೊರೆ!

ಎಂಬತ್ತರ ದಶಕದಲ್ಲಿ ಭಾರತದಲ್ಲಿ ದೂರದರ್ಶನ ಎಂಬ ಒಂದೇ ಟಿವಿ ಚಾನೆಲ್ ಇತ್ತು. ಮನರಂಜನೆಗಾಗಿ ಮೀಸಲಾದ ಯಾವುದೇ ಟಿವಿ ಚಾನೆಲ್ ಇರಲಿಲ್ಲ. ಈ ಕೊರತೆಯನ್ನು ಮನಗಂಡ ರಾಮೋಜಿ ರಾವ್ ʼಈ ಟಿವಿ’ ಎಂಬ ಮಹಾ ಟಿವಿ ಚಾನೆಲ್ ಆರಂಭ ಮಾಡಿದರು. ಅದರಲ್ಲಿ ಸಮೃದ್ಧವಾದ ಮನರಂಜನೆ, ಧಾರಾವಾಹಿ, ಸಂಗೀತ, ನೃತ್ಯ, ರಿಯಾಲಿಟಿ ಶೋಗಳನ್ನು ಹೆಣೆದರು. ಅದು ಅತ್ಯಂತ ಜನಪ್ರಿಯವಾಯಿತು. ಇಂದು ಭಾರತದ ಎಲ್ಲ ಪ್ರಾದೇಶಿಕ ಭಾಷೆಗಳು ಮತ್ತು ಹಿಂದಿಯಲ್ಲಿ ಈ ಟಿವಿ ವಾಹಿನಿ ಇದೆ. ರಾಮೋಜಿ ರಾವ್ ಈ ಟಿವಿಯನ್ನು ಬಾನೆತ್ತರಕ್ಕೆ ಬೆಳೆಸಿದರು.

ರಾಜಕೀಯ ಪ್ರವೇಶ – ತೆಲುಗು ದೇಶಂ ಪಕ್ಷದ ಮಾರ್ಗದರ್ಶಕ

ಇಂದು ಅವರ ಉದ್ಯಮಗಳ ಮುಖಬೆಲೆಯು 37,583 ಕೋಟಿ ರೂಪಾಯಿ ಎಂದು ಅಂದಾಜು! ಶೂನ್ಯದಿಂದ ಆರಂಭ ಮಾಡಿ ಇಷ್ಟು ಎತ್ತರಕ್ಕೆ ಏರಿದ ಇನ್ನೊಬ್ಬ ಉದ್ಯಮಿ ನಮಗೆ ಭಾರತದಲ್ಲಿ ದೊರೆಯುವುದಿಲ್ಲ. ಅದೂ ಯಾವುದೇ ಗಾಡ್ ಫಾದರ್ ಇಲ್ಲದೆ! ಅವರು ಕಟ್ಟಿದ ಒಂದು ಉದ್ಯಮವೂ ನಷ್ಟ ಕಂಡಿಲ್ಲ ಅನ್ನೋದು ಅವರ ದುಡಿಮೆಗೆ ಒಂದು ತುರಾಯಿ.

ಇಷ್ಟೆಲ್ಲ ಸಾಧನೆ ಮಾಡಿದ ನಂತರ ರಾಜಕೀಯಕ್ಕೆ ಬಾರದಿದ್ದರೆ ಹೇಗೆ? ಎಂಬತ್ತರ ದಶಕದಲ್ಲಿ ತೆಲುಗು ಲೆಜೆಂಡ್ ನಟ NTR ತೆಲುಗು ದೇಶಂ (Telugu Desam party) ಪಕ್ಷವನ್ನು ಸ್ಥಾಪನೆ ಮಾಡಿದಾಗ ಆ ಪಕ್ಷದ ಮೆಂಟರ್ ಆಗಿ ನಿಂತವರು ರಾಮೋಜಿ ರಾವ್. ಹಲವು ಬಾರಿ ಅವರ ಪಕ್ಷ ಅಧಿಕಾರಕ್ಕೆ ಬಂದರೂ ಅವರು ಅಧಿಕಾರದ ಆಸೆ ಮಾಡದೇ ತೆರೆಯ ಮರೆಯಲ್ಲಿ ನಿಂತರು. ಕಿಂಗ್ ಮೇಕರ್ ಆದರು. ಸಾಯುವ ತನಕವೂ ತೆಲುಗು ದೇಶಂ ಪಕ್ಷದ ನಾಯಕರಲ್ಲಿ ಒಬ್ಬರಾಗಿ ಅದನ್ನು ಸ್ವಾಭಿಮಾನಿ ಪಕ್ಷವಾಗಿ ಬೆಳೆಸಿದರು.

ಪದ್ಮವಿಭೂಷಣ ಸೇರಿದಂತೆ ನೂರಾರು ಪ್ರಶಸ್ತಿಗಳು

ಭಾರತದ ಎರಡನೇ ಅತೀ ದೊಡ್ಡ ನಾಗರೀಕ ಪ್ರಶಸ್ತಿಯಾದ ಪದ್ಮ ವಿಭೂಷಣ ಸೇರಿದಂತೆ, ಸಿನೆಮಾ ನಿರ್ಮಾಣಕ್ಕೆ ರಾಷ್ಟ್ರ ಪ್ರಶಸ್ತಿ, ತೆಲುಗಿನ ಗೌರವದ ನಂದಿ ಪ್ರಶಸ್ತಿ, ಹತ್ತಾರು ಫಿಲಂ ಫೇರ್ ಪ್ರಶಸ್ತಿಗಳು ಅವರಿಗೆ ದೊರೆತಿವೆ. ಅವರೊಬ್ಬ ಶಿಸ್ತಿನ ಮನುಷ್ಯ. ಪ್ರಚಾರದಿಂದ ದೂರ ಉಳಿದ ಕಾಯಕ ಯೋಗಿ. ಯಾವಾಗಲೂ ಬಿಳಿ ಬಟ್ಟೆಯಲ್ಲಿಯೇ ಕಾಣಿಸಿಕೊಳ್ಳುತ್ತಿದ್ದ ನಗುಮುಖದ ವ್ಯಕ್ತಿತ್ವ.

ನಿನ್ನೆ (ಜೂನ್ 8) ಅವರ ನಿರ್ಗಮನದಿಂದ ಭಾರತದ ಅತೀ ಶ್ರೇಷ್ಟವಾದ ಉದ್ಯಮಿ, ಸಿನೆಮಾ ನಿರ್ಮಾಪಕ, ಜಗತ್ತಿನ ಅತೀ ದೊಡ್ಡ ಸ್ಟುಡಿಯೋ ಸ್ಥಾಪಕ, ಈ ಟಿವಿ, ಈ ನಾಡು ಸಂಸ್ಥಾಪಕ, ಮಹೋನ್ನತ ಮನೋರಂಜನಾ ದೊರೆ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಜಾರ್ಜ್ ಫರ್ನಾಂಡಿಸ್ ಮತ್ತು ಕೊಂಕಣ್ ರೈಲ್ವೆ ಎಂಬ ಮಹಾ ಕನಸು!

Continue Reading
Advertisement
Rahul Gandhi
ದೇಶ7 mins ago

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Euro 2024
ಕ್ರೀಡೆ22 mins ago

Euro 2024: ಡೆನ್ಮಾರ್ಕ್ ಸವಾಲನ್ನು ಮೆಟ್ಟಿ ನಿಂತೀತೇ ಸ್ಲೊವೇನಿಯಾ?; ಬಲಾಬಲ ಹೇಗಿದೆ?

Renuka Swamy murder
ಪ್ರಮುಖ ಸುದ್ದಿ23 mins ago

Renuka Swamy Murder:‌ ರೇಣುಕಾಸ್ವಾಮಿಗೆ 4 ಬಾರಿ ಎಲೆಕ್ಟ್ರಿಕ್ ಶಾಕ್; ಪೋಸ್ಟ್ ಮಾರ್ಟಂ ವರದಿಯಲ್ಲಿವೆ ಭಯಾನಕ ಅಂಶಗಳು!

Elon Musk
ಪ್ರಮುಖ ಸುದ್ದಿ1 hour ago

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Shootout Case
ಪ್ರಮುಖ ಸುದ್ದಿ1 hour ago

Shootout Case: ಭೀಮಾ ತೀರದಲ್ಲಿ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

kusina mane
ರಾಮನಗರ1 hour ago

Kusina Mane: ಗ್ರಾಮೀಣ ಮಹಿಳೆಯರ ಪಾಲಿಗೆ ವರದಾನವಾದ ಕೂಸಿನ ಮನೆ; ಮಕ್ಕಳ ದಾಖಲಾತಿ ಹೆಚ್ಚಳ

Job Alert
ಉದ್ಯೋಗ2 hours ago

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

murder case in Bengaluru rural
ಬೆಂಗಳೂರು ಗ್ರಾಮಾಂತರ2 hours ago

Murder case : ತಾಯಿಗೆ ಚಿತ್ರಹಿಂಸೆ ನೀಡುತ್ತಿದ್ದ ಬಾಯ್‌ಫ್ರೆಂಡ್‌ನನ್ನು ಕೊಂದು ಮುಗಿಸಿದ ಮಗ

V Cinemas multiplex inauguration by dolly dhanjay Ramesh arvind
ಸ್ಯಾಂಡಲ್ ವುಡ್2 hours ago

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

Petrol Diesel Price
ರಾಜಕೀಯ2 hours ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Vijayanagara News
ವಿಜಯನಗರ3 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಟ್ರೆಂಡಿಂಗ್‌