ಶಬ್ದಸ್ವಪ್ನ ಅಂಕಣ | ಭಾಷಾ ಬೋಧನೆಯ ಸೃಜನಶೀಲ ನೆಲೆಗಳು - Vistara News

ಅಂಕಣ

ಶಬ್ದಸ್ವಪ್ನ ಅಂಕಣ | ಭಾಷಾ ಬೋಧನೆಯ ಸೃಜನಶೀಲ ನೆಲೆಗಳು

ʼಉಪ್ಪುʼ ಎಂದಾಗ ನಮ್ಮ ಮನಸ್ಸಿನಲ್ಲಿ ಮೂಡುವ ಚಿತ್ರವೇ ಬೇರೆ, ʼಸಾಲ್ಟ್‌ʼ ಎಂದಾಗ ಮೂಡುವ ಚಿತ್ರಣವೇ ಬೇರೆ. ಭಾಷೆಯ ಕಲಿಕೆ ಎಂದರೆ ನೋಡಲು ಬಿಡುವುದು ಎನ್ನುತ್ತಾರೆ ಶ್ರೀಧರ ಬಳಗಾರ.

VISTARANEWS.COM


on

shabda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
balagar logo

ಭಾಷೆಯ ಕುರಿತಿರುವ ಅಪಾರ್ಥಗಳೇ ಅದನ್ನು ‘ಬೋಧಿಸುವ’ ಯತ್ನದಲ್ಲಿ ಅನುಸರಿಸಲಾದ ತಪ್ಪು ವಿಧಾನಗಳಿಗೆ ಬಹು ಮುಖ್ಯ ಕಾರಣವಾಗಿವೆ. ಭಾಷೆಯನ್ನು ಬೋಧಿಸಬಹುದಾದ ವಸ್ತು ಎಂಬ ಗ್ರಹಿಕೆ ಮೊದಲ ತಪ್ಪಾದರೆ ಅದೊಂದು ಮಾಧ್ಯಮ ಎಂಬ ನಂಬಿಕೆ ಎರಡನೆಯದು. ಹೇಯ್ಡೇಗರ್ ‘ಭಾಷೆ ಮಾನವನ ಗುಣವಲ್ಲ; ಮಾನವ ಭಾಷೆಯ ಗುಣ. ಮಾನವ ತನ್ನ ಸಾರ ಮಾತ್ರದಿಂದ ಭಾಷೆಗೆ ಯೋಗ್ಯವಾಗಿದ್ದಾನೆ. ಇರುವುದನ್ನು, ಅಂದರೆ ತನ್ನನ್ನು ಸಹ, ಇರುವಿಕೆಯಿಂದ ಪ್ರತ್ಯೇಕಿಸಿ ನೋಡುವ ಸಾಮರ್ಥ್ಯ ಹೊಂದಿದ್ದಾನೆ. ಇರುವುದನ್ನು ಹೇಳುವ-ತೋರಿಸುವ ವಿಶೇಷ ಸಾಮರ್ಥ್ಯ ಅವನಲ್ಲಿದೆ’ ಎಂದಿದ್ದಾನೆ. ಮನುಷ್ಯ ವ್ಯಕ್ತಿತ್ವದ ಸಾರ ಭಾಷೆ ಮತ್ತು ಅದರಿಂದ ತನ್ನ ಇರುವಿಕೆಯನ್ನು ಪ್ರತ್ಯೇಕಿಸಿ ನೋಡುವ ಸಾಮರ್ಥ್ಯ ಭಾಷೆ ಎಂಬ ಅವನ ಕಾಣ್ಕೆ ಭಾಷೆಯ ಅನನ್ಯ ಅಸ್ತಿತ್ವವನ್ನು ಎತ್ತಿ ತೋರಿಸುತ್ತದೆ.

ಆಲೋಚನೆ ಭಾಷೆಯ ಹೊರಗಿನ ವಿದ್ಯಮಾನ; ಭಾಷೆ ಆಲೋಚನೆಯ ನಂತರ ಬರುವಂಥದ್ದು; ಆಲೋಚನೆ ಮನಸಿನ ಕೆಲಸವೇ ಹೊರತು ಭಾಷೆಯ ಕೆಲಸವಲ್ಲ; ಭಾಷೆ ಆಲೋಚನೆಯ ಸಾಧನ…ಹೀಗೆ ಭಾಷೆ ಮತ್ತು ಆಲೋಚನೆಯನ್ನು ಪ್ರತ್ಯೇಕಿಸುವ ಕ್ರಮವನ್ನು ಅವನು ನಿರಾಕರಿಸಿದ. ಹಾಗಾದರೆ, ಆಲೋಚನೆ ಎಂದರೇನು? ಅದರ ಮೂಲಧಾತು ಯಾವುದು? ಆಲೋಚನೆ ಬಂದಿರುವುದು ‘ಆಲೋಚ್’ ಧಾತುವಿನಿಂದ. ‘ಲೋಚನ’ ಎಂದರೆ ಕಣ್ಣು. ಆಲೋಚನೆ ಎಂದರೆ ನೋಡುವುದು, ಕಾಣುವುದು ಎಂದರ್ಥ. ಏನನ್ನು ನೋಡುವುದು? ಹೇಯ್ಡೇಗರ್ ಪ್ರಕಾರ ‘ಆಲೋಚನೆ’ ನೋಡುವುದು ಇರುವಿಕೆಯ ಅಗಾಧ ಸಾಧ್ಯತೆಗಳನ್ನು. ಇರುವಿಕೆ ಮತ್ತು ಇರುವುದರ ಅಗಾಧತೆಯನ್ನು ತನ್ನ ಮೂಲರೂಪದಲ್ಲಿ ಅನಾವರಣಗೊಳಿಸುವುದೇ ಆಲೋಚನೆ.

ಭಾಷಾ ವಿಜ್ಞಾನಿ ವಿಟ್ಗಿನ್‌ಸ್ಟನ್ ಭಾಷೆಯನ್ನು ಮೀರಿದ ಆಲೋಚನೆ ಎಂಬುದಿಲ್ಲ ಎಂದು ಪ್ರತಿಪಾದಿಸುತ್ತಾನೆ. ಭಾಷೆ ಆಲೋಚನೆಯ ನಂತರ ಬರುವುದಾದರೆ ಅಭಿವ್ಯಕ್ತಿಗಿಂತ ಮುಂಚೆ ಆಲೋಚನೆ ಎಲ್ಲಿತ್ತು? ಅಭಿವ್ಯಕ್ತಿಗಿಂತ ಮುಂಚೆ ಆಲೋಚನೆ ಏನನ್ನು ಒಳಗೊಂಡಿತ್ತು? ಹಾಗೆ ಆಲೋಚನೆ ಮತ್ತು ಭಾಷೆ ಪ್ರತ್ಯೇಕವಿರಲು ಸಾಧ್ಯವೇ ಇಲ್ಲ; ಆಲೋಚನೆಯನ್ನು ಅಭಿವ್ಯಕ್ತಿಯಿಂದ ಪ್ರತ್ಯೇಕಿಸಲು ಸಾಧ್ಯವೇ ಇಲ್ಲ. ಭಾಷೆಗೂ ಆಲೋಚನೆಗೂ ವ್ಯತ್ಯಾಸವಿಲ್ಲ ಎಂಬ ವಾದವನ್ನು ಒಪ್ಪಿದ ನಂತರ ವಿಭಿನ್ನ ಭಾಷೆಗಳು ವಿಭಿನ್ನವಾಗಿ ಆಲೋಚಿಸುತ್ತವೆ ಎಂದಂತಾಯಿತು. ಒಂದೇ ಆಲೋಚನೆಯನ್ನು ಭಿನ್ನ ಭಾಷೆಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರತಿ ಭಾಷೆಯೂ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಆಲೋಚಿಸುತ್ತದೆ. ಅನುವಾದವೇನಿದ್ದರೂ ಸೀಮಿತ ಅರ್ಥದಲ್ಲಿ ಮಾತ್ರ ಜರುಗುತ್ತದೆ. ಉದಾಹರಣೆಗೆ ಸಾಲ್ಟ್ ಅನ್ನು ಉಪ್ಪು ಎಂದು ಭಾಷಾಂತರಿಸಿದರೆ ಅದರ ಅರ್ಥದ ಸಾರ-ಸಂದರ್ಭ ಭಿನ್ನವಾಗುತ್ತದೆ. ಉಪ್ಪಿನ ಅನುಭವದ ಸಹಯೋಗವೇ ಭಿನ್ನ. ಉಪ್ಪು ಎಂದರೆ ಶಾಲೆಯಲ್ಲಿ ಕನ್ನಡ ಪಾಠ ಮಾಡಿದ್ದ ಮಾಸ್ತರರ ‘ತಾಯಿಗಿಂತ ಬಂಧುವಿಲ್ಲ ಉಪ್ಪಿಗಿಂತ ರುಚಿಯಿಲ್ಲ’ ಎಂಬ ಗಾದೆ ಮಾತು ಕೇಳುತ್ತದೆ; ಮಣ್ಣಿನ ನೆಲದಲ್ಲಿ ಹಾಸಿದ ಬಾಳೆ ಎಲೆಯ ಮೇಲಿನ ಬಾಯಲ್ಲಿ ನೀರೂರಿಸುವ ಕೆಂಪು ಹರಳು ನೆನಪಾಗುತ್ತದೆ; ಅಮ್ಮನ ಅಕ್ಕರೆಯ ಉಪಚಾರ ರುಚಿಯಲ್ಲಿ ಬೆರೆಯುತ್ತದೆ; ಸಾಣೆಕಟ್ಟೆಯ ಉರಿ ಬಿಸಿಲಲ್ಲಿ ಬೆವರುತ್ತ ಉಪ್ಪಿನ ರಾಶಿ ಒಟ್ಟುವ ಗಂಜಿಯ ಬಡವರು ಪ್ರತ್ಯಕ್ಷರಾಗುತ್ತಾರೆ; ಉಪ್ಪಿನ ಸತ್ಯಾಗ್ರಹದ ಚಿತ್ರ ಮೂಡುತ್ತದೆ…ಸಾಲ್ಟ್ ಎಂದಾಕ್ಷಣ ಪ್ಲಾಸ್ಟಿಸ್ಟಿಕ್ ಚೀಲ, ಫ್ಯಾಕ್ಟರಿ, ಉಪ್ಪಿನ ಗುಣಗಾನ ಮಾಡುವ ಇಂಗ್ಲಿಶ್ ವಾಕ್ಯಗಳು, ಹೊಟೇಲ್ ಇತ್ಯಾದಿ ನೆನಪಾಗುತ್ತವೆ.

ಭಾಷಾ ವಿಜ್ಞಾನಿ ಬೋರೋಡಿಟಸ್ಕಿ ತನ್ನದೊಂದು ಪ್ರಯೋಗದಲ್ಲಿ ಇದನ್ನು ಇನ್ನಷ್ಟು ಖಚಿತವಾಗಿ ತೋರಿಸುತ್ತಾರೆ. ಸ್ಪಾನಿಶ್ ಮತ್ತು ಜರ್ಮನ್ ಭಾಷೆಯನ್ನು ಮಾತಾಡುವ ಎರಡು ಗುಂಪುಗಳಿಗೆ ಒಟ್ಟಿಗೆ ಕೆಲವೊಂದು ವಸ್ತುಗಳನ್ನು ತೊರಿಸಿ, ಅವುಗಳ ವರ್ಣನೆ ಮಾಡುವಂತೆ ಹೇಳುತ್ತಾರೆ. ಕೀಲಿಕೈಗೆ ಸ್ಪಾನಿಶ್ ಭಾಷೆ ಸ್ತ್ರೀಲಿಂಗ ಕೊಟ್ಟರೆ ಜರ್ಮನ್ ಭಾಷೆ ಪುಲ್ಲಿಂಗ ಕೊಡುತ್ತದೆ. ಪ್ರಯೋಗದಲ್ಲಿ ಸ್ಪಾನಿಶ್ ಗುಂಪು ಕೀಲಿಕೈಯನ್ನು ಸಣ್ಣದು, ಫಳಫಳಿಸುತ್ತಿರುವುದು, ಸುಂದರ ಎಂದೆಲ್ಲ ವರ್ಣಿಸಿದರೆ, ಜರ್ಮನ್ ಗುಂಪು ಗಟ್ಟಿ, ಭಾರ ಎಂದು ವರ್ಣಿಸಿತು. ಸ್ತ್ರೀ ಮತ್ತು ಪುರುಷರ ಸಾಮಾನ್ಯ ಕಲ್ಪನೆಗಳು ಈ ವಸ್ತುವಿಗೆ ನೀಡಿದ ಲಿಂಗದ ಕಾರಣ ವಸ್ತುವಿನ ವರ್ಣನೆ ಮೇಲೆ ಪರಿಣಾಮ ಬೀರುತ್ತದೆ.

shabda

ಬೆಂಜಮಿನ್ ಲೀ ವಾಫ್, ಬಳಸುವವನ ಕೈಯಲ್ಲಿ ಭಾಷೆ ಪಡೆಯುವ ಜೀವ ಮತ್ತು ಭಾಷೆಯ ಮೂಲಕ ಜಗತ್ತು ಪಡೆದುಕೊಳ್ಳುವ ಚಿತ್ತಾರಗಳ ಬಗ್ಗೆ ವಿವರಿಸುತ್ತಾರೆ. ಜಗತ್ತನ್ನು ಸೀಳಿ ಅಥವ ಜೋಡಿಸಿ, ಕತ್ತರಿಸಿ ಅಥವ ಹೆಣೆದು, ಗುಂಪಾಗಿಸುವ ಅಥವ ಬಿಡಿಯಾಗಿಸುವ ಕೆಲಸವನ್ನು ಭಾಷೆ ಮಾಡುತ್ತದೆ ಎಂಬುದರ ಬಗ್ಗೆ ಅನುಮಾನ ಉಳಿದಿಲ್ಲ. ವಾಫ್ ಹೇಳುವಂತೆ ʼʼನಮ್ಮ ಸ್ವಂತ ಭಾಷೆ ಹಾಕಿ ಕೊಡುವ ಗೆರೆಗಳ ಆಧಾರದ ಮೇಲೆ ನಾವು ಲೋಕವನ್ನು ವಿಭಜಿಸುತ್ತೇವೆ. ಜಗತ್ತು ಜಟಿಲವಾದ ಚರ್ವಿತಚರ್ವಣವಾದ ವರ್ಣಮಯ ಗುರುತುಗಳ ರಾಶಿಯನ್ನೇ ನಮಗೆ ನೀಡುತ್ತದೆ. ಇದಕ್ಕೆ ನಿರ್ದಿಷ್ಟ ರೂಪವನ್ನು ಒದಗಿಸುವ ಕೆಲಸವನ್ನು ನಮ್ಮ ಮನಸಿನ ಭಾಷಾ ವ್ಯವಸ್ಥೆಗಳು ಮಾಡುತ್ತವೆ. ಜಗತ್ತನ್ನು ಕತ್ತರಿಸಿ, ಪರಿಕಲ್ಪನೆಗಳ ಮೂಲಕ ಸಂಘಟಿಸಿ, ಅದಕ್ಕೆ ವಿಧ ವಿಧ ಮಹತ್ವವನ್ನು ಗೊತ್ತು ಮಾಡುವುದು ಭಾಷೆ ಎಂಬ ಸಾಮುದಾಯಿಕ ಒಪ್ಪಂದದ ಕಾರಣದಿಂದಾಗಿ. ಈ ಒಪ್ಪಂದ ಒದಗಿಸುವ ವಿಭಾಗೀಕರಣ ಅಥವ ಸಂಘಟನೆ ಇಲ್ಲದೆ ಹೋಗಿದ್ದರೆ ನಾವು ಮಾತನಾಡಲೂ ಸಾಧ್ಯವಾಗುತ್ತಿರಲಿಲ್ಲ.ʼ’
ಈ ವರ್ಣಚಿತ್ರದ ನಿರೂಪಣೆಯಲ್ಲಿ ವರ್ಣ ಮತ್ತು ಗೆರೆಗಳ ಉಲ್ಲೇಖವಿದೆ. ವರ್ಣ ಮತ್ತು ಗೆರೆ ಚಿತ್ರಕಲೆಯ ಭಾಷೆಯ ಅಂಗಗಳು. ಲೋಕಾನುಭವ ವರ್ಣವಾದರೆ ಮನಸಿನೊಳಗಿರುವುದು ಗೆರೆಗಳು. ಬಣ್ಣಕ್ಕೆ ರೂಪ ಕೊಟ್ಟು ಲೋಕಾಕಾರವನ್ನು ದೀಪ್ತಿಗೊಳಿಸುವುದೇ ಭಾಷೆ ಅಂದ ಹಾಗಾಯಿತಲ್ಲವೆ? ಚಿತ್ತಾರದಲ್ಲಿ ಬಣ್ಣ ಮತ್ತು ಗೆರೆಗಳು ಹಾಸುಹೊಕ್ಕಾಗಿರುವಂತೆ ಭಾಷೆ ಮತ್ತು ಆಲೋಚನೆ ಸಂಯೋಗ ಹೊಂದಿರುತ್ತವೆ. ಆದ್ದರಿಂದಲೇ ಒಂದು ಭಾಷೆಯ ಲಿಪಿ ಸಮೂಹವನ್ನು ವರ್ಣಮಾಲೆ ಎಂದು ಕರೆಯುತ್ತಿರಬಹುದೆ?

ಇದನ್ನೂ ಓದಿ: ಶಬ್ದಸ್ವಪ್ನ ಅಂಕಣ: ಸ್ಪರ್ಶದಲ್ಲಿ ಸರ್ವಸ್ವ

ಈ ಮೇಲಿನ ವಿವರಣೆ ತಾತ್ವಿಕ ಪ್ರತಿಪಾದನೆಯಲ್ಲ; ಬದಲಿಗೆ ಪ್ರತಿಯೊಬ್ಬನ ಬಾಲ್ಯ ಕಾಲದ ‘ಮಾತನಾಡು’ವ ವಿಸ್ಮಯ ಅನುಭವ. ಮಾತೊಂದು ಆಟ ಎಂಬುದು ಕವಿಸಮಯ ಮಾತ್ರವಾಗಬೇಕಿಲ್ಲ. ನೋಡುವ ವಸ್ತು, ಮಾಡುವ ಕೆಲಸವೇ ತಾನಾಗಿ ಬಿಡುವ ಅದ್ವೈತವೇ ಆಟ. ನಮ್ಮೊಳಗೆ ಭವ ಸಂಭವಿಸುವುದು ಭಾಷೆಯಿಂದ. ಭಾಷೆ ತೆರೆಯುತ್ತ ಇರುವ ಅನುಭವ ಅರಿವಿಗೆ ಬರುವುದು. ಇಲ್ಲಿ ಭಾಷೆ ಮಾಧ್ಯಮವೇ ಅಲ್ಲವೇ ಎಂಬ ಪ್ರಶ್ನೆಯೇ ಅನಗತ್ಯ. ಬದುಕುವ ಮತ್ತು ಭಾಷೆಯನ್ನು ಅನುಭವಿಸುವ ಕ್ರಿಯೆಯನ್ನು ವಿಂಗಡಿಸುವ ಯತ್ನ ಮಾಡದಿರುವುದರಿಂದ ಭಾಷೆಯನ್ನು ಕಲಿಯಲು ವ್ಯಾಕರಣ ಜ್ಞಾನ ಬೇಕು, ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂಬಿತ್ಯಾದಿ ತಾಂತ್ರಿಕ ಸರ್ಕಸ್ಸಿನ ಉಸಾಬರಿಯನ್ನು ಮೈ ಮೇಲೆ ಎಳೆದುಕೊಳ್ಳುವುದಿಲ್ಲ. ಕೌಶಲ್ಯ ಸಾಧಿಸಿ, ಭಾಷೆ ಕಲಿತು, ಜ್ಞಾನ ಸಂಪಾದನೆ ಮಾಡುವುದು ಎಂಬುದನ್ನು ಬೋಧನೆ ಗುರುತಿಸಿದ ತಪ್ಪು ಹಾದಿಯೇ ವಿನಃ ಸುಪ್ತ ಸ್ತರದಲ್ಲಿ ಜರಗುವ ಭಾಷಾ ಕಲಿಕೆಗೆ ಸಂಬಂಧಿಸಿದ್ದಲ್ಲ. ಕೌಶಲ್ಯವನ್ನು ಅಭ್ಯಾಸದಿಂದ ಯಾರೂ ಉಪಯೋಗಿಸಬಹುದಾದ ಸಿದ್ಧ ಸಲಕರಣೆ ಎಂಬರ್ಥದಲ್ಲಿ ಸ್ವೀಕರಿಸಿರುವ ಕಾರಣ ಬೋಧನೆ ಮಾತೃಭಾಷಾ ಮಾಂತ್ರಿಕತೆಯನ್ನು ಮರೆತು ಪ್ರಮಾದ ಎಸಗುವಂತಾಯಿತು. ಭಾಷೆ ಜ್ಞಾನ ಭಂಡಾರವನ್ನು ತುಂಬಲಿರುವ ಮಾಯಾ ಪಾತ್ರೆ ಎಂಬ ಅಪಗ್ರಹಿಕೆಯೂ ಬೋಧನೆಯ ಹೆಸರಿನಲ್ಲಿ ನಡೆಯುತ್ತಿರುವ ತಪ್ಪು ಹೆಜ್ಜೆಯೇ.

ಭಾಷೆಯನ್ನು ಬೋಧಿಸುವ ವಸ್ತು ಎಂಬ ಗ್ರಹಿಕೆಯಿಂದ ಕಲಿಕೆಯ ಸಹಜ ಪ್ರವೃತ್ತಿಯನ್ನು ಪ್ರತಿರೋಧಿಸುವ ಯತ್ನಕ್ಕೆ ಶಿಕ್ಷಕ ಅರಿವಿಲ್ಲದೆ ಮುಂದಾಗುತ್ತಾನೆ. ಬೋಧಿಸುವ ಅತಿಯಾದ ಉತ್ಸಾಹದಲ್ಲಿ ಭಾಷೆ ಎಂದರೆ ಸಂವಹನ ಮಾಧ್ಯಮ ಮತ್ತು ಜ್ಞಾನಾರ್ಜನೆಯ ಸಾಧನ ಎಂದೇ ಭಾವಿಸಲಾಗುತ್ತದೆ. ಇವೆರಡನ್ನು ಕೆಲವು ಮನಶಾಸ್ತ್ರೀಯ ಮತ್ತು ಸಾಮಾಜಿಕ ತಂತ್ರೋಪಾಯಗಳನ್ನು ಪರಿಚಯಿಸಿಕೊಂಡು ಪ್ರಯೋಗಿಸಿದರೆ ಸಂಪಾದಿಸಬಹುದು ಎಂದು ತಾನೇ ಹೆಚ್ಚು ಸಕ್ರಿಯನಾಗುತ್ತಾನೆ. ವಿದ್ಯಾರ್ಥಿಗಳನ್ನು ನಿಷ್ಕ್ರಿಯ ಗ್ರಾಹಕರ ಸ್ಥಾನದಲ್ಲಿರಿಸುತ್ತಾನೆ. ಭಾಗವಹಿಸಲು ಅವಕಾಶ ನೀಡುವುದರ ಬದಲು ಅವರನ್ನು ತಟಸ್ಥ ವೀಕ್ಷಕರಾಗಿರುವಂತೆ ನಿಯಂತ್ರಿಸುತ್ತಾನೆ. ಬೋಧಿಸುವವನ ನಂಬಿಕೆ ಏನೆಂದರೆ ಅತ್ಯಂತ ಶಿಸ್ತಿನಿಂದ, ವ್ಯವಸ್ಥಿತವಾಗಿ ಭಾಷಾ ಕಲಿಕೆಗೆ ಬೇಕಾದ ಅಗತ್ಯ ತಂತ್ರೋಪಾಯಗಳನ್ನು ಅವನು ರವಾನಿಸುತ್ತಿದ್ದಾನೆ; ತೀರ ಗಂಭೀರ ಮತ್ತು ಪ್ರಾಮಾಣಿಕ ಕಳಕಳಿಯಿಂದ ಶಿಕ್ಷಕ ವಿದ್ಯಾರ್ಥಿಯ ಪರವಾಗಿ ಕಲಿಕಾ ಚಟುವಟಿಕೆಗಳನ್ನು ನಿರ್ವಹಿಸುತ್ತಿರುತ್ತಾನೆ; ಈ ಏಕಪಾತ್ರ ಅಭಿನಯ ಸಾರಭೂತ ಆಲೋಚನೆಯನ್ನು ಉದ್ದೀಪಿಸುವ ಉದ್ದೇಶ ಹೊಂದಿರದೆ ಕೇವಲ ಮೇಲ್ಪದರಿನ, ಹೊರ ಸುತ್ತಿನ ಯಾಂತ್ರಿಕ ಕ್ರಿಯೆಯಾಗಿ ಪರಿಣಮಿಸುತ್ತದೆ. ಅಚ್ಚರಿ ಎಂದರೆ ಬೋಧಿಸುವವನ ನಿಷ್ಫಲ ಪ್ರಯತ್ನೆಗಳೆಲ್ಲ ನಿರರ್ಗಳ ಭಾಷಾ ಕಲಿಕೆಗೆ ಅಡಚಣೆಯಾಗಿ, ಕಲಿಕೆ ಕಷ್ಟದಾಯಕವಾಗಿಸುವುದು ಗಮನಕ್ಕೆ ಬಾರದೆ ಇರುವುದು! ಅರಿವಿಲ್ಲದೆ ಸ್ವವಿರೋಧಿ ಪ್ರಮಾದದಲ್ಲಿ ಭಾಗಿಯಾಗುವ ಶಿಕ್ಷಕ ಅದೆಷ್ಟು ಮೈಮರೆತು ಬೋಧನೆಯಲ್ಲಿ ತಲ್ಲೀನನಾಗಿರುತ್ತಾನೆಂದರೆ ವಿದ್ಯಾರ್ಥಿಯ ಕಲಿಕಾ ಸಾಮರ್ಥ್ಯವನ್ನೇ ಅವನು ನಂಬಲಾರ. ಈ ಅಪನಂಬಿಕೆ ವಿದ್ಯಾರ್ಥಿಯ ಸ್ವಂತ, ಸ್ವತಂತ್ರ, ಸ್ವಾಯತ್ತ ಕಲಿಕಾ ಕಂಪನ ಚೈತನ್ಯವನ್ನು ಹಾಳುಗರೆಯುತ್ತದೆ. ತಾನು ತಿಳಿಸುವ, ವಿದ್ಯಾರ್ಥಿ ತಿಳಿದುಕೊಳ್ಳುವ ಪ್ರಕ್ರಿಯೆಯೇ ಬೋಧನೆ ಎಂದು ಭ್ರಮೆಯಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿಯರ ಪಾತ್ರ ವ್ಯಾಖ್ಯಾನ ತಪ್ಪಾಗಿ ಪರಿಣಮಿಸುತ್ತದೆ. ತನಗೆ ಬೇಕಾದ ರೀತಿಯಲ್ಲಿ ಕಲಿಕಾರ್ಥಿಯನ್ನು ರೂಪಿಸುವ ಹಠದಲ್ಲಿ ಕಲಿಕಾರ್ಥಿಗೂ ಸತ್ವವಿದೆ, ನೆನಪಿನ ಕಣಜವಿದೆ, ಸೂಕ್ಷ್ಮ ಪಂಚೇಂದ್ರಿಯಗಳ ಸಂವೇದನಾಶೀಲತೆಯಿದೆ, ಅಗಾಧ ಕಲ್ಪನಾ ಪ್ರತಿಭೆಯಿದೆ ಎಂಬ ವಾಸ್ತವ ನಿರಾಕರಿಸಲ್ಪಡುತ್ತದೆ. ಪರಿಣಾಮದಲ್ಲಿ ವಿದ್ಯಾರ್ಥಿಯನ್ನು ಟೀಚರ್, ಟೆಕ್ಸ್ಟ್‌ ಮತ್ತು ಟೆಸ್ಟ್ ಈ ಮೂರು ವಿಧಿಗಳನ್ನು ಅತಿಯಾಗಿ ಅವಲಂಬಿಸುವ ಪರಾವಲಂಬಿ ಜೀವಿಗಳನ್ನಾಗಿ ಪರಿವರ್ತಿಸಲಾಗಿದೆ.

ಶಿಕ್ಷಕನಿಂದ ಭಾಷೆಯನ್ನು ಕಲಿಯಲು ಸಾಧ್ಯ ಎಂಬುದೇ ಅಸತ್ಯ. ಕಲಿಕಾ ಪ್ರವೃತ್ತಿಗೆ ಪೂರಕವಾಗಿ ಪ್ರೇರಕನಾಗಿ ಅವನು ಹಿನ್ನೆಲೆಯಲ್ಲಿರಬಹುದಷ್ಟೆ. ಮಕ್ಕಳಲ್ಲಿ ಭಾಷೆಯ ಬೆಳಕನ್ನು ತಡೆಯುವ ತಡೆಗೋಡೆಯಾಗಿ ನಿಲ್ಲುವ ಸಾಧ್ಯತೆಯೇ ಹೆಚ್ಚು. ನಿಜವಾದ ಶಿಕ್ಷಕ ಬೋಧಿಸುವುದೇ ಇಲ್ಲ ಎಂಬ ಮಹರ್ಷಿ ಅರವಿಂದರ ಮಾತನ್ನೊ ಶಾಲೆಯಲ್ಲಿ ಶಿಕ್ಷಕರು ಬೋಧಿಸಿದ್ದನ್ನೆಲ್ಲ ಮರೆತ ನಂತರ ಮಕ್ಕಳ ಮನಸಿನಲ್ಲಿ ಉಳಿದಿರುವುದೇ ನಿಜವಾದ ಶಿಕ್ಷಣ ಎಂದ ಐನ್‌ಸ್ಟೈನ್ ಮತ್ತು ಮಾರ್ಕ್‌ ಟ್ವೇನ್ ಅವರ ಮಾತಿನಾರ್ಥವನ್ನು ತಿಳಿದುಕೊಂಡು ಶಿಕ್ಷಕರು ತಮ್ಮ ಹಸ್ತಕ್ಷೇಪವನ್ನು ನಿಲ್ಲಿಸಿ, ವಿದ್ಯಾರ್ಥಿಗಳನ್ನು ಅನಿಷ್ಟವಾಗಿಸಿದ ಮೂರು ‘ಟಿ’ಗಳಿಂದ ಬಿಡುಗಡೆಗೊಳಿಸುವುದು ಜರೂರಾಗಿದೆ. ಪಠ್ಯ ಪುಸ್ತಕಗಳು ಮಾಹಿತಿಗಳ ಸಂಗ್ರಹವೇ ವಿನಃ ಅವು ತಮ್ಮಷ್ಟಕ್ಕೆ ತಾವು ಜ್ಞಾನಭಂಡಾರಗಳೇನಲ್ಲ. ವಿದ್ಯಾರ್ಥಿಗಳ ಬೌದ್ಧಿಕ ಉದ್ದೀಪನೆಗೆ ಅವುಗಳನ್ನು ಸೂಚಕಗಳನ್ನಾಗಿ ಬಳಸಬಹುದೇ ಹೊರತು ಮೂಲ ಸಾರವನ್ನಾಗಲ್ಲ. ಅನೇಕ ಸಲ ಪ್ರಕೃತಿ ಅಥವ ಪರಿಸರದ ವಿಸ್ಮಯಗಳನ್ನು ತಮ್ಮ ನಿರ್ಜೀವ, ಯಾಂತ್ರಿಕ ಜಡತ್ವದಿಂದ ಮಂಕಾಗಿಸುವ ಹೊರೆಯಾಗಿಯೇ ಅವು ನಿಲ್ಲುತ್ತವೆ. ಪಠ್ಯ ವಸ್ತು ಜಡವಾಗಿದ್ದರೂ ಅದನ್ನು ಮರುಜೋಡಣೆಯ ಮೂಲಕ ಜೀವಂತಗೊಳಿಸುವ ಒಳನೋಟದ ಅಗತ್ಯವನ್ನು ಶಿಕ್ಷಕ ಮನಗಾಣಬೇಕಿದೆ. ತನ್ನ ಪ್ರತಿಭೆಯನ್ನು ಜಾಗ್ರತಗೊಳಿಸಿಕೊಂಡು ಪಠ್ಯವಸ್ತುವನ್ನು ಹೊಸ ವಿನ್ಯಾಸದಲ್ಲಿ ಪುನರ‍್ರಚಿಸುವ, ಶೋಧಿಸುವ ಸಂದರ್ಭಸೃಷ್ಟಿ ಸವಾಲಿನದು. ಪರೀಕ್ಷೆಗಳೆಂದರೆ ಬೋಧಿಸಿದ ವಿಷಯಗಳನ್ನು ವಿದ್ಯಾರ್ಥಿಗಳು ಎಷ್ಟರ ಮಟ್ಟಿಗೆ ತಿಳಿದುಕೊಂಡಿದ್ದಾರೆಂದು ಪತ್ತೆ ಹಚ್ಚಲು ಬಳಸುವ ಮಾನದಂಡವಲ್ಲ; ಪ್ರಶ್ನೆಗಳ ರೂಪದಲ್ಲಿ ಮಂಥನಕ್ಕೆ ಒಳಪಡುವ ಪರೀಕ್ಷೆಗಳು ಸಿಲೆಬಸ್‌ನ್ನು ಮುಗಿಸಿದ ನಂತರ ಕೈಗೊಳ್ಳುವ ರಿಚುವಲ್ ಮಾತ್ರವಲ್ಲ. ಪ್ರತಿಕ್ಷಣದ ಅರಿಯುವಿಕೆಯ ಮೆಟ್ಟಿಲುಗಳು ಅವು.

ಶಾಲೆಗಳಲ್ಲಿ ಸಿಲೆಬಸ್‌ನ್ನು ವಿಷಯ ಮತ್ತು ಭಾಷೆಗಳು ಎಂದು ವರ್ಗೀಕರಿಸುವುದೇ ಅತ್ಯಂತ ಅಸಹಜ ನಡೆಯಾಗಿದೆ. ವಿಷಯ ಬೋಧಿಸುವ ಶಿಕ್ಷಕರು ಭಾಷೆಯ ಬಗ್ಗೆ ಉದಾಸೀನತೆಯಿಂದಿರುವುದೂ ಭಾಷಾ ಶಿಕ್ಷಕರು ವಿಷಯ ಜ್ಞಾನ ಸಂಪಾದನೆ ತಮ್ಮ ಕ್ಷೇತ್ರವಲ್ಲವೆಂದೂ ತಿಳಿಯುವುದೇ ಅವೈಜ್ಞಾನಿಕವಾದದು. ವಿಷಯವೆಂದರೆ ಸಮಾಜ ವಿಜ್ಞಾನ, ಭೌತಶಾಸ್ತ್ರ, ಗಣಿತ ಇತ್ಯಾದಿ; ಭಾಷೆಗಳೆಂದರೆ ಕನ್ನಡ, ಇಂಗ್ಲಿಶ್, ಹಿಂದಿ ಇತ್ಯಾದಿ. ಭಾಷೆ ಮತ್ತು ವಿಷಯಯಗಳು ಹೀಗೆ ವಿಭಜನೆ ಮಾಡಿದಷ್ಟು ಸರಳವಾದವುಗಳಲ್ಲ. ಆದರೆ, ಭೌತಶಾಸ್ತ್ರ ಬೋಧಿಸುವ ಶಿಕ್ಷಕನಿಗೆ ಭೌತಶಾಸ್ತ್ರಕ್ಕೇ ವಿಶಿಷ್ಟವಾದ ಭಾಷೆ ಗೊತ್ತಿಲ್ಲದಿದ್ದರೆ ಅವನು ಅದನ್ನು ಅರ್ಥೈಯಿಸಲಾರ. ಅಂತಯೇ ಕನ್ನಡ ಬೋಧಿಸುವ ಶಿಕ್ಷಕ ವಿವಿಧ ವಿಷಯಗಳ ಸಂಚಯವಾದ ಪಠ್ಯವನ್ನು ಕೇವಲ ವ್ಯಾವಹಾರಿಕ ಭಾಷೆಯಿಂದ ಅರ್ಥೈಯಿಸಲಾರ. ವಿಷಯ ಅಂತರ್ಗತವಾಗಿರದೆ ಭಾಷೆಯಾಗಲಿ ಮತ್ತು ಭಾಷಾಭಿವ್ಯಕ್ತಿಯ ಹೊರಗೇ ಇರುವ ವಿಷಯವಾಗಲಿ ಇರಲು ಸಾಧ್ಯವಿಲ್ಲ. ಎಲ್ಲ ವಿಷಯ ಶಿಕ್ಷಕರು ಭಾಷಾ ಶಿಕ್ಷಕರೇ ಮತ್ತು ಎಲ್ಲ ಭಾಷಾ ಶಿಕ್ಷಕರು ವಿಷಯ ಶಿಕ್ಷಕರೇ.

ಇದನ್ನೂ ಓದಿ: ಸಾಲಭಂಜಿಕೆ ಅಂಕಣ: ಚೋಮನ ದುಡಿಯೂ ನಮ್ಮ ನುಡಿಯೂ

ಭಾಷೆಯ ಆಯ್ಕೆ ಕೇವಲ ಮಾಧ್ಯಮದ ಪ್ರಶ್ನೆಯಲ್ಲ ಎಂಬ ವಾಸ್ತವಕ್ಕೆ ಕರ್ನಾಟಕದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ನಡೆದ ವಿದ್ಯಮಾನಗಳೇ ಸಾಕ್ಷಿ. ಹತ್ತನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದು ಕಡ್ಡಾಯ ಎಂಬ ಸರ್ಕಾರಿ ಕಾನೂನಿನ ಸುತ್ತೋಲೆಯನ್ನು ಪ್ರಶ್ನಿಸಿ ಕೆಲ ಖಾಸಗಿ ವಿದ್ಯಾ ಸಂಸ್ಥೆಗಳು ಕೋರ್ಟ್‌ ಮೆಟ್ಟಿಲೇರಿದವು. ಅವರ ವಾದವನ್ನು ಗಮನಿಸಿದ ನ್ಯಾಯಾಲಯ ಭಾಷಾ ಆಯ್ಕೆಯ ಹಕ್ಕು ವಿದ್ಯಾರ್ಥಿ ಮತ್ತು ಅವರ ಪಾಲಕರದ್ದೇ ವಿನಃ ಸರ್ಕಾರ ಕಡ್ಡಾಯಗೊಳಿಸುವುದು ಸಂವಿಧಾನ ಬಾಹಿರ ಎಂದು ತೀರ್ಪು ನೀಡಿತು. ಆಧುನಿಕ ಪ್ರಪಂಚದಲ್ಲಿ ಉದ್ಯೋಗ ಅವಕಾಶಕ್ಕೆ ಇಂಗ್ಲಿಶ್ ಕಲಿಕೆ ಅಗತ್ಯವೆಂದೂ ಇದರಿಂದ ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಇಷ್ಟು ದಿನಗಳವರೆಗೆ ಅವುಗಳಿಂದ ವಂಚಿತರಾದವರಿಗೆ ಒದಗಿಸಬಹುದೆಂದೂ ಖಾಸಗಿ ವಿದ್ಯಾಸಂಸ್ಥೆಗಳನ್ನು ನಡೆಸುವವರು ಪ್ರತಿಪಾದಿಸಿದರು. ಭಾಷೆಗೂ ಆರ್ಥಿಕ ಸ್ವಾವಲಂಬನೆಗೂ ಇರುವ ಆಂತರಿಕ ಸಂಬಂಧ ಭಾಷೆಯನ್ನು ಕೇವಲ ಮಾಧ್ಯಮದ ನೆಲೆಯಲ್ಲಿ ನೋಡುವುದನ್ನು ಈ ವಾದ ನಿರಾಕರಿಸುತ್ತದೆಯಲ್ಲವೆ?

ಸಾಮಾನ್ಯವಾಗಿ ಶಾಲೆಗೆ ಬರುವಷ್ಟರಲ್ಲಿ ಮಕ್ಕಳು ಒಂದು ಅಥವ ಎರಡು ಭಾಷೆಗಳನ್ನು ಬಳಸಬಲ್ಲವರಾಗಿರುತ್ತಾರೆ. ಉದಾಹರಣೆಗೆ, ಕನ್ನಡವು ಮಗುವೊಂದರ ಮಾತೃಭಾಷೆಯಾಗಿದ್ದ ಪಕ್ಷದಲ್ಲಿ, ಅದಾಗಲೇ ಆ ಮಗು ವ್ಯಾವಹಾರಿಕ ಸಂವಹನಕ್ಕೆ ಅಗತ್ಯವಿರುವಷ್ಟು ಕನ್ನಡವನ್ನು ಉಪಯೋಗಿಸುವ ಸಾಮರ್ಥ್ಯ ಹೊಂದಿರುವಾಗ ಶಾಲೆಯಲ್ಲಿ ಅದೇ ಭಾಷೆಯನ್ನು ಕಲಿಯುವ ಸನ್ನಿವೇಶವನ್ನು ಯಾಕೆ ಸೃಷ್ಟಿಸಬೇಕು? ಇಲ್ಲಿ ಭಾಷೆಯನ್ನು ಬಳಸುವುದೆಂದರೆ ಆಲೋಚಿಸುವುದು ಎಂದರ್ಥವಲ್ಲವೆ? ಭಾಷೆಯ ಮೂಲಕ ಆಲೋಚಿಸುವುದಲ್ಲ; ಭಾಷೆಯನ್ನು ದೀಪ್ತಿಗೊಳಿಸುವುದೆಂದರೆ ಆಲೋಚಿಸುವ ಕ್ರಮವೆಂದೇ ಅರ್ಥ. ಮೊದಲು ಭಾಷೆಯನ್ನು ಕಲಿಯೋಣ; ಅನಂತರ ವಿಷಯಜ್ಞಾನ ಪಡೆಯೋಣ ಎಂಬ ನಂಬಿಕೆಯನ್ನು ಆಧರಿಸಿದ ಸಾಂಪ್ರದಾಯಿಕ ಬೋಧನೆ ಅನಗತ್ಯ ಬಿಕ್ಕಟ್ಟನ್ನು ಸ್ವಯಂ ಅಪರಾಧದಿಂದ ಸೃಷ್ಟಿಸಿಕೊಂಡಿದೆ. ಮೊದಲಿಗೆ ಯೋಚಿಸುತ್ತೇನೆ; ಆಮೇಲೆ ಯೋಚನೆಗೆ ಯೋಗ್ಯವಾದ ನುಡಿರೂಪಗಳನ್ನು ಅಭಿವ್ಯಕ್ತಿಯ ಪರಿಕರಗಳನ್ನಾಗಿ ತೊಡಿಸುತ್ತೇನೆ ಎಂಬುದು ಸುಳ್ಳು. ವ್ಯಾಕರಣ ತಿಳಿಸುವುದರಿಂದ ಭಾಷೆಯನ್ನು ಕಲಿಸಬಹುದು ಎಂಬುದು ಇನ್ನೊಂದು ಪ್ರಮಾದ. ವಿಷಯವನ್ನು ವೈವಿಧ್ಯಪೂರ್ಣವಾಗಿ ಯೋಚಿಸುವ ರೀತಿಯಲ್ಲೇ ಭಾಷೆಯ ಹಲವು ಆಯಾಮಗಳು ಗೋಚರಿಸತೊಡಗುತ್ತವೆ. ಭಾಷೆ ಎಂದರೆ ಆಲೋಚಿಸುವುದು; ಆಲೋಚಿಸುವುದೆಂದರೆ ಮೂರ್ತವಾಗಿ ನೋಡುವುದು ಎಂದು ಹೇಯ್ಡೇಗೆರ್‌ ಹೇಳಿಲ್ಲವೆ? ಏನನ್ನು ನೋಡುವುದು? ನಮ್ಮ ಇರುವಿಕೆಯನ್ನು ನೋಡುವುದು; ನೋಡಿದ್ದನ್ನು ಹೇಳುವುದು. ಸೂಕ್ಷ್ಮ ನೋಡುವಿಕೆಯೇ ಭಾಷೆ. ಬೋಧನೆ ಎಂದರೆ ನೋಡಲು ಮಗುವನ್ನು ಬಿಡುವುದು; ಎಲ್ಲವನ್ನು ಶಿಕ್ಷಕನೇ ತೋರಿಸುವುದಲ್ಲ.

ಇದನ್ನೂ ಓದಿ: ಧೀಮಹಿ ಅಂಕಣ: ಈ ನೆಲದ ಮೊದಲ ವೈದಿಕ ರಾಷ್ಟ್ರಗೀತೆ ಇದು! ಅಂದಿನ ಆಡಳಿತ ಹೀಗಿತ್ತು

ಉಲ್ಲೇಖಗಳು:
1 Word and Sentence: Two Perspectives, Bhartrari and Wittegenstein; edited by Sibajiban Bhattacharyya.
2 Indian Philosophy and Philosophy of Science, Sundar Sarukkai; PHISPC.
3 Language, Thought, and Reality by Benjamin Lee Whorf.
4 How the Language We Speak Shapes the Way We Think; Lera Boroditsky.

  1. ಭಾಷೆಗಳ ಭಿನ್ನ ಆಲೋಚನಾ ಕ್ರಮ, ಸಹನಾ ಉಡುಪ; ದೇಶ ಕಾಲ ೧೪ನೇ ಸಂಚಿಕೆ.

ಅಂಕಣಕಾರರ ಪರಿಚಯ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬಳಗಾರಿನಲ್ಲಿ ಜನಿಸಿದ ಶ್ರೀಧರ ಬಳಗಾರ ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಟೀಚರ್ ಎಜ್ಯುಕೇಟರ್ ಆಗಿ ಪಾಠ ಮಾಡುತ್ತ ಸದ್ಯ ಕುಮಟಾದಲ್ಲಿ ನೆಲೆಸಿದ್ದಾರೆ. ಅಧೋಮುಖ (೧೯೯೫), ಮುಖಾಂತರ (೧೯೯೮), ಇಳೆ ಎಂಬ ಕನಸು (೨೦೦೩೦), ಒಂದು ಫೋಟೋದ ನೆಗೆಟೀವ್ (೨೦೦೮), ಈಸಾಡತಾವ ಜೀವ (೨೦೧೫)- ಕಥಾ ಸಂಕಲನಗಳು. ಕೇತಕಿಯ ಬನ (೨೦೦೩), ಆಡುಕಳ (೨೦೧೪), ಮೃಗಶಿರ (೨೦೧೯)ಕಾದಂಬರಿಗಳು. ರಥಬೀದಿ (೨೦೦೯), ಕಾಲಪಲ್ಲಟ (೨೦೧೧)- ಅಂಕಣ ಬರೆಹಗಳು. ಮೊಳದಷ್ಟು ಹೂವು (೨೦೧೯೦) ಲೇಖನ ಸಂಗ್ರಹ. ಕುವೆಂಪು ಭಾಷಾಭಾರತಿಗೆ ಪೀಟರ್ ವ್ಯಾಟ್ಸನ್ ಮತ್ತು ನಿರ್ಮಲ್ ವರ್ಮಾರವರ ಆಯ್ದ ಬರೆಹಗಳ ಅನುವಾದ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಸ್ವಾತಂತ್ರ್ಯೋತ್ತರ ಕನ್ನಡ ಚಿಂತನಾತ್ಮಕ ಲೇಖನಗಳ ಸಂಪಾದನೆ ಮಾಡಿದ್ದಾರೆ. ಮೂರು ಸಲ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಪ್ರಶಸ್ತಿ, ಮಾಸ್ತಿ ಪುರಸ್ಕಾರ, ನಿರಂಜನ ಸಾಹಿತ್ಯ ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದ ಯು. ಆರ್. ಅನಂತಮೂರ್ತಿ ಕಥಾ ಪ್ರಶಸ್ತಿ, ದ. ರಾ. ಬೇಂದ್ರೆ ಸಾಹಿತ್ಯ ಪುರಸ್ಕಾರ, ವಾರಂಬಳ್ಳಿ ಪ್ರತಿಷ್ಠಾನ ಕಥಾ ಪ್ರಶಸ್ತಿ, ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ, ಡಾ. ಬೆಸಗರಹಳ್ಳಿ ರಾಮಣ್ಣ ಸಂಸ್ಮರಣಾ ಸಾಹಿತ್ಯ ಪ್ರಶಸ್ತಿ, ಅಜೂರ ಪುಸ್ತಕ ಪ್ರತಿಷ್ಠಾನ ಪ್ರಶಸ್ತಿ, ‘ಅಮ್ಮ’ ಪ್ರಶಸ್ತಿ, ಬರಗೂರು ಪುಸ್ತಕ ಪ್ರಶಸ್ತಿ ಪುರಸ್ಕೃತರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು.

VISTARANEWS.COM


on

Michel Phelps ರಾಜಮಾರ್ಗ ಅಂಕಣ
Koo

ಜಗತ್ತಿನ ಮಹೋನ್ನತ ಸ್ವಿಮ್ಮರ್ ನೀರಿಗೆ ಇಳಿದರೆ ದಾಖಲೆ ಮತ್ತು ದಾಖಲೆಗಳೇ ನಿರ್ಮಾಣ ಆಗುತ್ತಿದ್ದವು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಒಲಿಂಪಿಕ್ಸ್ (Olympics) ವೇದಿಕೆಗಳಲ್ಲಿ ಒಂದೋ ಅಥವಾ ಎರಡೋ ಪದಕಗಳನ್ನು (medals) ಗೆಲ್ಲುವ ಕನಸು ಕಂಡವರು, ಅದನ್ನು ಸಾಧನೆ ಮಾಡಿದವರು ಲೆಜೆಂಡ್ ಅಂತ ಅನ್ನಿಸಿಕೊಳ್ಳುತ್ತಾರೆ. ಆದರೆ ಈ ಅಮೇರಿಕನ್ ಈಜುಗಾರ (Swimmer) ಒಟ್ಟು ನಾಲ್ಕು ಒಲಿಂಪಿಕ್ ಕೂಟಗಳಲ್ಲಿ ಭಾಗವಹಿಸಿ ಗೆದ್ದದ್ದು ಬರೋಬ್ಬರಿ 28 ಒಲಿಂಪಿಕ್ ಪದಕಗಳನ್ನು ಅಂದರೆ ನಂಬಲು ಸಾಧ್ಯವೇ ಇಲ್ಲ! ಅದರಲ್ಲಿ ಕೂಡ 23 ಹೊಳೆಯುವ ಚಿನ್ನದ ಪದಕಗಳು! ಆತನು ನೀರಿಗೆ ಇಳಿದರೆ ಸಾಕು ದಾಖಲೆಗಳು ಮತ್ತು ದಾಖಲೆಗಳು ಮಾತ್ರ ನಿರ್ಮಾಣ ಆಗುತ್ತಿದ್ದವು.

ಆತನು ಅಮೇರಿಕಾದ ಮಹೋನ್ನತ ಈಜುಗಾರ ಮೈಕೆಲ್ ಫೆಲ್ಪ್ಸ್ (Michel Phelps).

ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. ಸತತವಾಗಿ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಆತ ಭಾಗವಹಿಸಿದ್ದು ಮಾತ್ರವಲ್ಲ ಪ್ರತೀ ಬಾರಿ ನೀರಿಗೆ ಇಳಿದಾಗ ಒಂದಲ್ಲ ಒಂದು ದಾಖಲೆ, ಒಂದಲ್ಲ ಒಂದು ಪದಕ ಗೆಲ್ಲದೆ ಆತ ಮೇಲೆ ಬಂದ ಉದಾಹರಣೆಯೇ ಇಲ್ಲ!

ಬಾಲ್ಟಿಮೋರ್‌ನ ಬುಲ್ಲೆಟ್!

1985ನೇ ಜೂನ್ 30ರಂದು ಅಮೇರಿಕಾದ ಬಾಲ್ಟಿಮೋರ್ ಎಂಬ ಪ್ರಾಂತ್ಯದಲ್ಲಿ ಹುಟ್ಟಿದ ಆತ ತನ್ನ ಒಂಬತ್ತನೇ ವಯಸ್ಸಿಗೆ ಅಪ್ಪ ಮತ್ತು ಅಮ್ಮನ ಪ್ರೀತಿಯಿಂದ ವಂಚಿತವಾದನು. ಅದಕ್ಕೆ ಕಾರಣ ಅವರ ವಿಚ್ಛೇದನ. ಅದರಿಂದಾಗಿ ಆತನಿಗೆ ಮಾನಸಿಕ ನೆಮ್ಮದಿ ಹೊರಟುಹೋಯಿತು. ಆತನಿಗೆ Attention Deficit Hyper active Disorder (ADHD) ಎಂಬ ಮಾನಸಿಕ ಸಮಸ್ಯೆಯು ಬಾಲ್ಯದಿಂದಲೂ ತೊಂದರೆ ಕೊಡುತ್ತಿತ್ತು. ರಾತ್ರಿ ನಿದ್ದೆ ಬಾರದೆ ಆತ ಒದ್ದಾಡುತ್ತಿದ್ದನು. ಈ ಸಮಸ್ಯೆಗಳಿಂದ ಹೊರಬರಲು ಆತ ಆರಿಸಿಕೊಂಡ ಮಾಧ್ಯಮ ಎಂದರೆ ಅದು ಸ್ವಿಮ್ಮಿಂಗ್ ಪೂಲ್! ತನ್ನ ಏಳನೇ ವಯಸ್ಸಿಗೆ ನೀರಿಗೆ ಇಳಿದ ಆತನಿಗೆ ಬಾಬ್ ಬೌಮಾನ್ ಎಂಬ ಕೋಚ್ ಸಿಕ್ಕಿದ ನಂತರ ಆತನ ಬದುಕಿನ ಗತಿಯೇ ಬದಲಾಯಿತು. ಆತ ದಿನದ ಹೆಚ್ಚು ಹೊತ್ತನ್ನು ನೀರಿನಲ್ಲಿಯೇ ಕಳೆಯಲು ತೊಡಗಿದನು.

ಆತನ ಕಣ್ಣ ಮುಂದೆ ಇಬ್ಬರು ಸ್ವಿಮ್ಮಿಂಗ್ ಲೆಜೆಂಡ್ಸ್ ಇದ್ದರು. ಒಬ್ಬರು ಒಂದೇ ಒಲಿಂಪಿಕ್ ಕೂಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದ ಮಾರ್ಕ್ ಸ್ಪಿಟ್ಜ್ (1972). ಇನ್ನೊಬ್ಬರು ಆಸ್ಟ್ರೇಲಿಯಾದ ಸ್ವಿಮಿಂಗ್ ದೈತ್ಯ ಇಯಾನ್ ತೋರ್ಪ್. ಅವರಿಂದ ಸ್ಫೂರ್ತಿ ಪಡೆದ ಆತ ಮುಂದೆ ಮಾಡಿದ್ದು ಎಲ್ಲವೂ ವಿಶ್ವ ದಾಖಲೆಯ ಸಾಧನೆಗಳೇ ಆಗಿವೆ. ಜನರು ಆತನನ್ನು ಬಾಲ್ಟಿಮೋರದ ಬುಲೆಟ್ ಎಂದು ಪ್ರೀತಿಯಿಂದ ಕರೆದರು.

ಸತತ ನಾಲ್ಕು ಒಲಿಂಪಿಕ್ಸ್ – 28 ಪದಕಗಳು – ಅದರಲ್ಲಿ 23 ಚಿನ್ನದ ಪದಕಗಳು!

2004ರ ಅಥೆನ್ಸ್ ಒಲಿಂಪಿಕ್ಸ್ – ಒಟ್ಟು ಎಂಟು ಪದಕಗಳು.
2008 ಬೀಜಿಂಗ್ ಒಲಿಂಪಿಕ್ಸ್ – ಒಟ್ಟು ಎಂಟು ಚಿನ್ನದ ಪದಕಗಳು.
2012 ಲಂಡನ್ ಒಲಿಂಪಿಕ್ಸ್ – ನಾಲ್ಕು ಚಿನ್ನ ಮತ್ತು ಎರಡು ಬೆಳ್ಳಿಯ ಪದಕಗಳು.
2016 ರಿಯೋ ಒಲಿಂಪಿಕ್ಸ್ – ಐದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ.

ಅಂದರೆ ಸತತ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಒಟ್ಟು 28 ಪದಕಗಳನ್ನು ಬೇರೆ ಯಾರೂ ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ! ಬಟರ್ ಫ್ಲೈ, ಮೆಡ್ಲಿ, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್ಸ್…ಹೀಗೆ ಪ್ರತೀಯೊಂದು ವಿಭಾಗಳಲ್ಲಿಯೂ ಮೈಕೆಲ್ ಒಂದರ ಮೇಲೊಂದು ಪದಕಗಳನ್ನು ಗೆಲ್ಲುತ್ತಾ ಹೋಗಿದ್ದಾನೆ! ಆ 16 ವರ್ಷಗಳ ಅವಧಿಯಲ್ಲಿ ಆತನಿಗೆ ಸ್ಪರ್ಧಿಗಳೇ ಇರಲಿಲ್ಲ ಎನ್ನಬಹುದು!

ಮೈಕೆಲ್ ಎಂಬ ಚಿನ್ನದ ಮೀನಿನ ಜಾಗತಿಕ ದಾಖಲೆಗಳು

೧) ಆತನು ತನ್ನ ಜೀವಮಾನದಲ್ಲಿ ಗೆದ್ದ ಒಟ್ಟು ಅಂತಾರಾಷ್ಟ್ರೀಯ ಪದಕಗಳ ಸಂಖ್ಯೆ ಬೆರಗು ಹುಟ್ಟಿಸುತ್ತದೆ. ಒಟ್ಟು 82 ಪದಕಗಳು. ಅದರಲ್ಲಿ 65 ಚಿನ್ನ, 14 ಬೆಳ್ಳಿ ಮತ್ತು 3 ಕಂಚು!
೨) ಒಟ್ಟು 20 ಗಿನ್ನೆಸ್ ದಾಖಲೆಗಳು ಆತನ ಹೆಸರಿನಲ್ಲಿ ಇವೆ!
೩) ಒಟ್ಟು 39 ವಿಶ್ವದಾಖಲೆಗಳು ಆತನ ಹೆಸರಿನಲ್ಲಿ ಇವೆ. ಅದರಲ್ಲಿ 29 ವೈಯಕ್ತಿಕ ಮತ್ತು 10 ರಿಲೇ ಸ್ಪರ್ಧೆಗಳದ್ದು!
೪) 2004ರಿಂದ 2018ರವರೆಗೆ ನಡೆದ ವಿಶ್ವ ಈಜು ಚಾಂಪಿಯನಶಿಪ್ ಸ್ಪರ್ಧೆಗಳಲ್ಲಿ ಆತ ಪದಕಗಳ ಗೊಂಚಲು ಗೆಲ್ಲದೆ ಹಿಂದೆ ಬಂದ ನಿದರ್ಶನವೇ ಇಲ್ಲ!
೫) ಒಟ್ಟು ಎಂಟು ಬಾರಿ ಅವನಿಗೆ ‘ವರ್ಲ್ಡ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೬) ಒಟ್ಟು 11 ಬಾರಿ ‘ಅಮೇರಿಕನ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೭) ಒಂದೇ ಒಲಿಂಪಿಕ್ ಕೂಟದಲ್ಲಿ ಆತ ಎಂಟು ಚಿನ್ನದ ಪದಕಗಳನ್ನು (2008 ಬೀಜಿಂಗ್) ಗೆದ್ದ ದಾಖಲೆಯನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲವೇ ಇಲ್ಲ!
೮) ಆತನಿಗೆ ಜಾಗತಿಕ ಒಲಿಂಪಿಕ್ ಸಮಿತಿಯು ಜಗತ್ತಿನ ಅತ್ಯುತ್ತಮ ಸ್ವಿಮ್ಮರ್ ಪ್ರಶಸ್ತಿ ನೀಡಿ ಗೌರವಿಸಿದೆ!
೯) 100 ಮೀಟರ್ ಬಟರ್ ಫ್ಲೈ, 200 ಮೀಟರ್ ಬಟರ್ ಫ್ಲೈ, 200 ಮೀಟರ್ ಇಂಡಿವಿಜುವಲ್ ಮೆಡ್ಲಿ, 400 ಮೀಟರ್ ಇಂಡಿವಿಜುವಲ್ ಮೆಡ್ಲಿ ಈ ವಿಭಾಗದಲ್ಲಿ ಆತ ಮಾಡಿದ ಜಾಗತಿಕ ದಾಖಲೆಗಳನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲ ಎಂದು ಭಾವಿಸಲಾಗುತ್ತಿದೆ!

ಈ ಎಲ್ಲಾ ಸಾಧನೆಗಳಿಗೆ ಕಾರಣ ಆತನ ಈಜುವ ಪ್ಯಾಶನ್!

ಆತನ ಆತ್ಮಚರಿತ್ರೆಯ ಪುಸ್ತಕವನ್ನು ಒಮ್ಮೆ ತಿರುವಿ ಹಾಕಿದಾಗ ಆತನ ಸ್ವಿಮ್ಮಿಂಗ್ ಪ್ಯಾಶನ್ ಬಗ್ಗೆ ಹಲವು ಉದಾಹರಣೆಗಳು ದೊರೆಯುತ್ತವೆ.

ಒಮ್ಮೆ ಏನಾಯಿತೆಂದರೆ 2001 ಸೆಪ್ಟೆಂಬರ್ 11ರಂದು ಅಮೆರಿಕದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ಧಾಳಿ ನಡೆದು ಇಡೀ ಟವರ್ ಕುಸಿದು ಹೋದದ್ದು, ಇಡೀ ಅಮೇರಿಕಾ ನಲುಗಿ ಹೋದದ್ದು ನಮಗೆಲ್ಲ ಗೊತ್ತಿದೆ. ಸರಿಯಾಗಿ ಅದೇ ಹೊತ್ತಿಗೆ ಮೈಕೆಲ್ ಸ್ವಿಮ್ಮಿಂಗ್ ಪೂಲನಲ್ಲಿ ಈಜುತ್ತಾ ತನ್ನ ಕೋಚಗೆ ಕಾಲ್ ಮಾಡಿ ಕೇಳಿದ್ದನಂತೆ- ಸರ್, ಎಲ್ಲಿದ್ದೀರಿ? ನಾನು ಪೂಲಲ್ಲಿ ಪ್ರಾಕ್ಟೀಸ್ ಮಾಡ್ತಾ ಇದ್ದೇನೆ!

ಮೈಕೆಲ್ ಫೆಲ್ಫ್ಸ್ ಇಷ್ಟೊಂದು ವಿಶ್ವ ದಾಖಲೆಗಳನ್ನು ಕ್ರಿಯೇಟ್ ಮಾಡಿದ್ದು ಸುಮ್ಮನೆ ಅಲ್ಲ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

ರಾಜಮಾರ್ಗ ಅಂಕಣ: ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

VISTARANEWS.COM


on

ರಾಜಮಾರ್ಗ ಅಂಕಣ Kargil Vijay Diwas 2024
Koo

ಇಂದು ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತವು ಗೆದ್ದ ಅತ್ಯಂತ ಕಠಿಣ ಯುದ್ಧ (Kargil Vijay Diwas) ಅದು! 1999ರಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿ.ಪಿ ಮಲಿಕ್ ಬರೆದಿರುವ ‘KARGIL – FROM SURPRISE TO VICTORY’ ಓದುತ್ತಾ ಹೋದಂತೆ ನಾನು ಹಲವಾರು ಬಾರಿ ಬೆಚ್ಚಿಬಿದ್ದಿದ್ದೇನೆ! ಯಾಕೆಂದರೆ ಅದು ಭಾರತವು ಎದುರಿಸಿದ ಅತ್ಯಂತ ಕಠಿಣವಾದ ಯುದ್ಧ (India0 Pakistan War) ಮತ್ತು ದೀರ್ಘಕಾಲದ ಯುದ್ಧ. ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

ಯುದ್ಧದ ಹಿನ್ನೆಲೆ – ಮುಷರಫ್ ಕುತಂತ್ರ

ಆಗಷ್ಟೇ ಭಾರತವು ಅಣುಪರೀಕ್ಷೆ ಮಾಡಿ ಜಗತ್ತಿನ ಕಣ್ಣು ಕೋರೈಸುವ ಸಾಧನೆಯನ್ನು ಮಾಡಿತ್ತು. ಪಾಕ್ ಕೂಡ ಅಮೇರಿಕಾದ ನೆರವು ಪಡೆದು ತನ್ನ ಬಳಿ ಅಣುಬಾಂಬು ಇದೆ ಎಂದು ಹೇಳಿಕೊಂಡಿತ್ತು. ಆಗ ಭಾರತದ ಪ್ರಧಾನಿ ಆಗಿದ್ದ ವಾಜಪೇಯಿ (Atal Bihari Vajpayee) ಅವರು ತುಂಬಾ ಮೃದು ನಿಲುವಿನ ನಾಯಕ ಎಂದು ಪಾಕ್ ನಂಬಿ ಕುಳಿತಿತ್ತು. ಪಾಕಿಸ್ಥಾನಕ್ಕೆ ಜಗತ್ತಿನ ಅತೀ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ (Siachin) ವಶಪಡಿಸಿಕೊಳ್ಳಬೇಕು ಎಂಬ ದುರಾಸೆ. ಅಲ್ಲಿಂದ ಮುಂದೆ ಕಾರ್ಗಿಲ್ ಮತ್ತು ಮುಂದೆ ಇಡೀ ಕಾಶ್ಮೀರವನ್ನು ಕಬಳಿಸಬೇಕು ಎನ್ನುವ ಮಾಸ್ಟರ್ ಪ್ಲಾನ್! ಆಗ ಪಾಕಿಸ್ತಾನದ ಸೇನಾ ನಾಯಕ ಪರ್ವೇಜ್ ಮುಷರಫ್ (Parvez Musharraf) ಹೊಂಚು ಹಾಕಿ ಕುಳಿತ ಕಾಲ ಅದು.

ಅದಕ್ಕೆ ಪೂರಕವಾಗಿ 1998ರ ಜೂನ್ ತಿಂಗಳಿಂದಲೇ ಪಾಕಿಸ್ಥಾನದ 5000ರಷ್ಟು ಸೈನಿಕರು ಲೈನ್ ಆಫ್ ಕಂಟ್ರೋಲ್ ದಾಟಿ ಭಾರತದ 4-10 ಕಿ.ಮೀ. ಒಳಗೆ ಬಂದು ಎತ್ತರದ ಪ್ರದೇಶದಲ್ಲಿ ಜಮಾವಣೆ ಆಗತೊಡಗಿದ್ದರು! ಅವರ ಬಳಿಗೆ ಆಧುನಿಕ ಶಸ್ತ್ರಾಸ್ತ್ರಗಳು ಬಂದು ತಲುಪಿದ್ದವು. ಆದರೆ 1999ರ ಮೇ 18ರವರೆಗೆ ಭಾರತ ಸರಕಾರಕ್ಕೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಭಾರತೀಯ ಸೇನಾ ಗೂಢಚಾರ ಸಂಸ್ಥೆಯವರು ಇನ್ನೂ ಸ್ವಲ್ಪ ದಿನ ಮೈಮರೆತಿದ್ದರೆ…! ಆ ಕುರಿಗಾಹಿ ಹುಡುಗರು ಆ ನುಸುಳುಕೋರ ಸೈನಿಕರ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಕೊಡದೇ ಹೋಗಿದ್ದರೆ…! ನಾನು ಬೆಚ್ಚಿ ಬಿದ್ದದ್ದು ಆಗ.

ಭಾರತದ ಸೈನಿಕರ ಬಳಿ ಯುದ್ಧದ ಸಿದ್ಧತೆಗೆ ಸಮಯ ಇರಲಿಲ್ಲ

ಗಡಿಯ ಒಳಗೆ ಅಷ್ಟು ದೊಡ್ಡ ಸಂಖ್ಯೆಯ ಸೈನಿಕರು ನುಸುಳಿಬಂದ ವಿಷಯ ಭಾರತಕ್ಕೆ ಗೊತ್ತಾಯಿತು ಅಂದಾಗ ಮುಷರಫ್ ಅಲರ್ಟ್ ಆದರು. ಅವರು ನಮ್ಮ ಸೈನಿಕರೇ ಅಲ್ಲ, ಯಾವುದೋ ಭಯೋತ್ಪಾದಕ ಸಂಘಟನೆಯವರು ಎಂದು ಬಿಟ್ಟರು ಮುಷರಫ್! ಆದರೆ ಈಗ ಭಾರತದ ಪ್ರಧಾನಿ ವಾಜಪೇಯಿ, ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸೇನಾ ಮುಖ್ಯಸ್ಥರನ್ನು ಕರೆಸಿ ಯುದ್ಧ ಘೋಷಣೆ ಮಾಡಿಬಿಟ್ಟರು. ಆದರೆ ಭಾರತೀಯ ಸೈನ್ಯಕ್ಕೆ ಆ ಯುದ್ಧಕ್ಕೆ ಸಿದ್ಧತೆ ಮಾಡಲು ದೊರೆತದ್ದು 24 ಘಂಟೆ ಮಾತ್ರ! ಆದರೂ 1999ರ ಮೇ 3ರಂದು ಭಾರತ ಯುದ್ಧ ಘೋಷಣೆ ಮಾಡಿ ಆಗಿತ್ತು!

ಆರಂಭದಲ್ಲಿ ಭಾರತಕ್ಕೆ ಹಿನ್ನಡೆ ಆದದ್ದು ನಿಜ. ಆದರೆ ಮೇ 30 ಆಗುವಾಗ ಭಾರತದ 30,000 ಸೈನಿಕರು ಟೈಗರ್ ಹಿಲ್ ಬಳಿ ಬಂದು ಜಮಾವಣೆ ಮಾಡಿ ಆಗಿತ್ತು. ಭಾರತದ ಭೂಸೈನ್ಯ ಮತ್ತು ವಾಯು ಸೈನ್ಯಗಳು ವೀರಾವೇಶದಿಂದ ಹೋರಾಟಕ್ಕೆ ಇಳಿದಿದ್ದವು. ಎರಡೂ ಕಡೆಯ ಸೈನಿಕರು, ಬಾಂಬುಗಳು, ಮದ್ದುಗುಂಡುಗಳು, ಶೆಲ್‌ಗಳು ಸಿಡಿಯುತ್ತ ಕಾರ್ಗಿಲ್ ಯುದ್ಧಭೂಮಿಯು ರಕ್ತದಲ್ಲಿ ಒದ್ದೆಯಾಗುತ್ತಾ ಹೋಯಿತು. ಟೈಗರ್ ಹಿಲ್ ಏರಿ 10 ಪಾಕ್ ಸೈನಿಕರ ಹತ್ಯೆಯನ್ನು ನಮ್ಮ ಸೈನಿಕರು ಮಾಡಿದಾಗ ಭಾರತವು ಯುದ್ಧದಲ್ಲಿ ಸಣ್ಣ ಮೇಲುಗೈ ಸಾಧಿಸಿತು.

ಅಲ್ಲಿಂದ ಮುಂದೆ ಭಾರತದ ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸ್ವತಃ ಯುದ್ಧಭೂಮಿಗೆ ಬಂದು ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಿದ್ದು, ಪ್ರಧಾನಿ ವಾಜಪೇಯಿ ವಾರ್ ರೂಮಿನಲ್ಲಿ ಕುಳಿತು ಸೈನ್ಯಕ್ಕೆ ನಿರ್ದೇಶನವನ್ನು ಕೊಟ್ಟದ್ದು ಭಾರತವನ್ನು ಗೆಲ್ಲಿಸುತ್ತಾ ಹೋದವು. 75 ದಿನಗಳ ಘನಘೋರ ಯುದ್ಧದ ನಂತರ ಭಾರತ ಜುಲೈ 26ರಂದು ದ್ರಾಸ್ ಪರ್ವತದ ತಪ್ಪಲಲ್ಲಿ ಇದ್ದ ಕೊನೆಯ ಪಾಕ್ ಸೈನಿಕನನ್ನೂ ಹೊಸಕಿ ಹಾಕಿದಾಗ ಭಾರತ ವಿಜಯೋತ್ಸವ ಆಚರಣೆ ಮಾಡಿತು. ಕಾರ್ಗಿಲ್ ಮೈದಾನದಲ್ಲಿ ಸೈನಿಕರ ನಡುವೆ ತ್ರಿವರ್ಣಧ್ವಜ ಹಾರಿಸಿದ ಕ್ಷಣವೇ ಕಾರ್ಗಿಲ್ ವಿಜಯ ದಿನ.

Kargil Vijay Diwas 2024
Kargil Vijay Diwas 2024

ಹುತಾತ್ಮರಾದವರು ಭಾರತದ 527 ಸೈನಿಕರು!

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೈನಿಕರ ಬಲಿದಾನ ಭಾರತಕ್ಕೆ ಒಂದು ದೊಡ್ಡ ವಿಜಯವನ್ನು ತಂದುಕೊಟ್ಟಿತ್ತು. ಅದರಲ್ಲಿ ಕರ್ನಾಟಕದ 21 ಸೈನಿಕರೂ ಇದ್ದರು. ಸಾವಿರಾರು ಯೋಧರು ತೀವ್ರವಾಗಿ ಗಾಯಗೊಂಡರು. ಪಾಕಿಸ್ತಾನವೂ ದೊಡ್ಡ ಸಂಖ್ಯೆಯ ಸೈನಿಕರನ್ನು ಕಳೆದುಕೊಂಡಿತ್ತು.

ನಮ್ಮ ಸೈನಿಕರಾದ ಸಿಯಾಚಿನ್ ಹೀರೋ ನಾಯಬ್ ಸುಬೇದಾರ್ ಬಾಣಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮೇಜರ್ ಪದ್ಮಪಾಣಿ ಆಚಾರ್ಯ, ಗ್ರೆನೆಡಿಯರ್ ಯೋಗೇಂದರ್ ಸಿಂಘ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ಅನುಜ್ ನಯ್ಯರ್, ಲೆಫ್ಟಿನೆಂಟ್ ಬಲವಾನ್ ಸಿಂಘ್, ರೈಫಲ್ ಮ್ಯಾನ್ ಸಂಜಯ ಕುಮಾರ್, ಕ್ಯಾಪ್ಟನ್ ವಿಜಯವಂತ್ ಥಾಪರ್, ಮೇಜರ್ ಸೋನಂ ವಾಂಗಚುಕ್, ಲೆಫ್ಟಿನೆಂಟ್ ಕರ್ನಲ್ ವೈ.ಕೆ. ಜೋಷಿ ಇವರೆಲ್ಲರೂ ನಿಜವಾದ ಕಾರ್ಗಿಲ್ ಹೀರೋಗಳು. ಅದರಲ್ಲಿ ಹೆಚ್ಚಿನವರು ಹುತಾತ್ಮರಾದವರು. ಅವರಿಗೆಲ್ಲ ವಿವಿಧ ಸೇನಾ ಶೌರ್ಯ ಪ್ರಶಸ್ತಿಗಳನ್ನು ನೀಡಿ ಭಾರತ ಸರಕಾರವು ಗೌರವಿಸಿತು.

ಕಾರ್ಗಿಲ್ ಯುದ್ಧದ ಫಲಶ್ರುತಿ ಏನೆಂದರೆ ಮುಂದೆ ಭಾರತವು ಎಂದಿಗೂ ಪಾಕಿಸ್ತಾನವನ್ನು ನಂಬಲಿಲ್ಲ ಮತ್ತು ಪಾಕಿಸ್ತಾನ ಯಾವತ್ತೂ ಭಾರತದ ಮೇಲೆ ಮತ್ತೆ ದಂಡೆತ್ತಿ ಬರುವ ಸಾಹಸವನ್ನು ಮಾಡಲಿಲ್ಲ!

ಜೈ ಹಿಂದ್.

ಇದನ್ನೂ ಓದಿ: ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

Continue Reading

ಅಂಕಣ

ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

ರಾಜಮಾರ್ಗ ಅಂಕಣ: ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಈ ವರ್ಷ ಅವರ ಜನ್ಮ ಶತಮಾನೋತ್ಸವ.

VISTARANEWS.COM


on

ರಾಜಮಾರ್ಗ ಅಂಕಣ
Koo

ಈ ವರ್ಷ (2024) ಲೇಖಕ ನಿರಂಜನರ ಜನ್ಮ ಶತಮಾನೋತ್ಸವ

Rajendra-Bhat-Raja-Marga-Main-logo

ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ (Niranjana) ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಅವರು 71 ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು. ಕನ್ನಡದ ಮೊದಲ ಮತ್ತು ಜನಪ್ರಿಯ ಅಂಕಣ ಲೇಖಕರು ಅಂದರೆ ಅದು ನಿರಂಜನ! (ರಾಜಮಾರ್ಗ ಅಂಕಣ)

ಬಾಲ್ಯದಿಂದಲೂ ಬರವಣಿಗೆ

1924 ಜೂನ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಳಕುಂದ ಎಂಬ ಗ್ರಾಮದಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿ ಪತ್ರಿಕೆಗಳಿಗೆ ಬರೆಯಲು ತೊಡಗಿದರು. ಮೊದಲು ಕಂಠೀರವ ಪತ್ರಿಕೆ ಅವರಿಗೆ ಬರೆಯಲು ಅವಕಾಶ ಕೊಟ್ಟಿತು. ಮುಂದೆ ಕನ್ನಡದ ಎಲ್ಲ ಪ್ರಸಿದ್ಧ ಪತ್ರಿಕೆಗಳಿಗೆ ಅವರು ಅಂಕಣಗಳನ್ನು ಬರೆಯುತ್ತಾ ಹೋದರು. ರಾಷ್ಟ್ರಬಂಧು ಎಂಬ ಪತ್ರಿಕೆಯ ಪ್ರಮುಖ ಲೇಖಕರಾಗಿ ಅವರು ಸಾವಿರಾರು ಅಂಕಣಗಳನ್ನು ಬರೆದರು. ಅವರ ಅಂಕಣ ಲೇಖನಗಳು ಎಂಟು ಕೃತಿಗಳಾಗಿ ಹೊರಬಂದು ಅವರಿಗೆ ಅಪಾರ ಜನಪ್ರಿಯತೆ ಕೊಟ್ಟವು. ಅವರು ಕನ್ನಡದ ಮೊದಲ ಅಂಕಣಕಾರ ಎಂಬ ದಾಖಲೆಯೂ ನಿರ್ಮಾಣವಾಯಿತು.

ಪ್ರಭಾವಶಾಲಿ ಸಣ್ಣ ಕಥೆಗಳು

ಸಣ್ಣ ಕಥೆಗಳು ಅವರಿಗೆ ಇಷ್ಟವಾದ ಇನ್ನೊಂದು ಪ್ರಕಾರ. ಅವರ 156 ಸಣ್ಣ ಕಥೆಗಳ ಸಂಗ್ರಹವಾದ ‘ಧ್ವನಿ’ ಕನ್ನಡದ ಶ್ರೇಷ್ಠ ಕೃತಿ ಆಗಿದೆ. ಕಾರಂತರ ಸಂಪರ್ಕ, ಲೆನಿನ್ ಬಗ್ಗೆ ಓದು ಅವರನ್ನು ಬೆಳೆಸುತ್ತಾ ಹೋದವು.

ಬಾಪೂಜಿ ಬಾಪು ಅವರ ಅತ್ಯಂತ ಶ್ರೇಷ್ಟವಾದ ಸಣ್ಣ ಕಥೆ. ಗಾಂಧೀಜಿ ಬದುಕಿದ್ದಾಗಲೇ ಅವರು ಸತ್ತಂತೆ ಕಲ್ಪಿಸಿಕೊಂಡು ಬರೆದ ಕಥೆ ಇದು! ರಕ್ತ ಸರೋವರ ಕಾಶ್ಮೀರದ ದಾಲ್ ಸರೋವರದ ಹಿನ್ನೆಲೆಯಲ್ಲಿ ಅರಳಿದ ಅದ್ಭುತವಾದ ಕಥೆ.
ತಿರುಕಣ್ಣನ ಮತದಾನ ರಾಜಕೀಯ ವಿಡಂಬನೆಯ ಕಥೆ. ಅವರ ಸಣ್ಣ ಕಥೆಗಳು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ, ಬೇರೆ ಬೇರೆ ಸಂಸ್ಕೃತಿಯಲ್ಲಿ ಅರಳಿದ ಕಥೆಗಳು. ಕನ್ನಡದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ನಂತರ ಇಷ್ಟೊಂದು ವೈವಿಧ್ಯಮಯವಾದ ಸಣ್ಣ ಕಥೆಗಳನ್ನು ಬರೆದವರು ನಿರಂಜನ ಮಾತ್ರ ಅಂದರೆ ಅದು ಅತಿಶಯೋಕ್ತಿ ಅಲ್ಲ!

ಕಾದಂಬರಿಕಾರರಾಗಿ ನಿರಂಜನರು

ಅವರು ಬರೆದದ್ದು ಒಟ್ಟು 21 ಕಾದಂಬರಿಗಳು. ವರ್ಗ ಸಂಘರ್ಷ ಮತ್ತು ಸಾಮಾಜಿಕ ಸಮಾನತೆ ಅವರ ಹೆಚ್ಚಿನ ಕಾದಂಬರಿಗಳ ಹೂರಣ. 700 ಪುಟಗಳ ಬೃಹತ್ ಕಾದಂಬರಿ ಮೃತ್ಯುಂಜಯ ಅದೊಂದು ಮಾಸ್ಟರಪೀಸ್ ಕಲಾಕೃತಿ. ವಿಮೋಚನೆ, ಬನಶಂಕರಿ, ಅಭಯ, ಚಿರಸ್ಮರಣೆ, ರಂಗಮ್ಮನ ವಟಾರ ಮೊದಲಾದ ಕಾದಂಬರಿಗಳು ಒಮ್ಮೆ ಓದಿದರೆ ಮರೆತುಹೋಗೋದಿಲ್ಲ. ಸುಳ್ಯ ಮತ್ತು ಮಡಿಕೇರಿ ಪ್ರದೇಶದಲ್ಲಿ ಕಲ್ಯಾಣಸ್ವಾಮಿ ಎಂಬಾತ ನಡೆಸಿದ ರಕ್ತಕ್ರಾಂತಿಯ ಹಸಿಹಸಿ ಕಥೆಯನ್ನು ಹೊಂದಿರುವ ಒಂದು ಶ್ರೇಷ್ಟವಾದ ಕಾದಂಬರಿ ಅವರು ಬರೆದಿದ್ದಾರೆ. ನಿರಂಜನರು ಬರೆದ ನಾಟಕಗಳೂ ಜನಪ್ರಿಯವಾಗಿವೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

ನಿರಂಜನ ಅವರ ಸಂಪಾದನಾ ಗ್ರಂಥಗಳು

ಇಂದು ಕನ್ನಡ ನಾಡು ನಿರಂಜನರನ್ನು ನೆನಪಿಟ್ಟುಕೊಳ್ಳಲೇ ಬೇಕಾದ ಮುಖ್ಯ ಕಾರಣ ಎಂದರೆ ಅವರ ಸಂಪಾದನೆಯ ಗ್ರಂಥಗಳು. 25 ಸಂಪುಟಗಳ ವಿಶ್ವ ಕಥಾಕೋಶ, ಜ್ಞಾನಗಂಗೋತ್ರಿ ಹೆಸರಿನ ಎಳೆಯರ ಏಳು ಸಂಪುಟಗಳ ವಿಶ್ವ
ಜ್ಞಾನಕೋಶ, ಪುರೋಗಾಮಿ ಪ್ರಕಾಶನದ ಎಂಟು ಪುಸ್ತಕಗಳು, ಜನತಾ ಸಾಹಿತ್ಯಮಾಲೆಯ 25 ಪುಸ್ತಕಗಳು….ಹೀಗೆ ಲೆಕ್ಕ ಮಾಡುತ್ತಾ ಹೋದರೆ ಸಾವಿರಾರು ಪುಟಗಳ ಅದ್ಭುತ ಜ್ಞಾನಕೋಶಗಳು ಅರಳಿದ್ದು ನಿರಂಜನರ ಸಂಪಾದಕತ್ವದಲ್ಲಿ! ಅವರ ಇಡೀ ಜೀವನವನ್ನು ನಿರಂಜನರು ಅಧ್ಯಯನ ಮತ್ತು ಬರವಣಿಗೆಯಲ್ಲಿಯೇ ಕಳೆದರು.

ಇಡೀ ಕುಟುಂಬವು ಸಾಹಿತ್ಯಕ್ಕೆ ಮೀಸಲು

ನಿರಂಜನರ ಪತ್ನಿ ಅನುಪಮಾ ನಿರಂಜನ ಕನ್ನಡದ ಸ್ಟಾರ್ ಕಾದಂಬರಿಕಾರರು. ಹೆಣ್ಣು ಮಕ್ಕಳಾದ ತೇಜಸ್ವಿನಿ ಮತ್ತು ಸೀಮಂತಿನಿ ಇಬ್ಬರೂ ಕನ್ನಡದ ಪ್ರಭಾವೀ ಲೇಖಕರಾಗಿ ಗುರುತಿಸಿಕೊಂಡವರು. ಹಾಗೆ ನಿರಂಜನರ ಇಡೀ ಕುಟುಂಬವು ಕನ್ನಡದ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿತು.

ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ದೊರೆತವು. 1995ರಲ್ಲಿ ಅವರು ನಮ್ಮನ್ನು ಅಗಲಿದರು. ಕನ್ನಡ ಸಾಹಿತ್ಯಲೋಕವನ್ನು ಚಂದವಾಗಿ ಬೆಳೆಸಿದ ನಿರಂಜನರ ಜನ್ಮ ಶತಮಾನೋತ್ಸವದ ಈ ವರ್ಷ ಕನ್ನಡ ಸಾರಸ್ವತ ಲೋಕ ಒಂದು ಸ್ಮರಣೀಯ ಕಾರ್ಯಕ್ರಮವನ್ನು ಅವರ ನೆನಪಿನಲ್ಲಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಆಗ್ರಹ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

Continue Reading

ಅಂಕಣ

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Guru Purnima 2024: ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು, ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು, ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಹೀಗೆ ಗುರು-ಶಿಷ್ಯರಿಗೆ ಪರಂಪರೆಗಳ ಐತಿಹ್ಯವಿದೆ.

VISTARANEWS.COM


on

Guru Purnima 2024
Koo

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)

ಆಷಾಢ ಮಾಸ ಶುಕ್ಲ ಪಕ್ಷದಲ್ಲಿ ಬರುವ “ಕಡ್ಲಿಗರ ಹುಣ್ಣಿಮೆ”ಯನ್ನು ನಾವು ಆಚರಿಸ್ಪಡುವ, ಶ್ರೇಷ್ಠವಾದ ಪರ್ವವೆಂದರೆ ಅದು “ಗುರು ಪೂರ್ಣಿಮೆ”.
ಈ ದಿನ ನಾವು ನಂಬಿದ ನಮ್ಮಲ್ಲಿಯ ಅಂಧಕಾರವನ್ನು ತೊಲಗಿಸಿ ಜ್ಞಾನ ಸಾಕ್ಷಾತ್ಕಾರ ಮಾಡಿಸಿದ ನಮ್ಮ ಗುರುಗಳಿಗೆ ವಂದನೆ (Guru Purnima 2024) ಸಲ್ಲಿಸುವ ದಿನ. ಆ ಗುರುವನ್ನು ನೆನೆದು ಅವರ ಮಹತ್ವವನ್ನು ಸಾರುವ ದಿನ. ಗುರುಗಳು ನಮಗೆ ನಮ್ಮ ಜೀವನಕ್ಕೆ ಸರಿಯಾದ ಮಾರ್ಗ ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ ದಿಕ್ಸೂಚಿ,ದಾರಿದೀಪ. ಪರಮಾತ್ಮನ, ಪರಮಾರ್ಥದ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮಜ್ಯೋತಿಯನ್ನು ಜ್ಞಾನವೆಂಬ ತೈಲ ಹಾಕಿ ಬೆಳುಗುವಂತೆ ಮಾಡಿ ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಜತೆಗೆ ಲೌಕಿಕ ಪ್ರಪಂಚದ ಹಾದಿಯಲ್ಲಿ ನಮ್ಮನ್ನು ನಡೆಸಿ, ನಮ್ಮ ಗುರಿ ಮುಟ್ಟವ ತನಕ ಸಹಾಯ ಮಾಡುವವನೇ “ ಶ್ರೇಷ್ಠಗುರು”.

ಅಲೆದು ಅಲೆದು ಹುಡಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವುಗಳೆಲ್ಲರೂ ಆ ಗುರುವಿನ ಮುಖಾಂತರವೇ ಪರಮಾತ್ಮನ ಅರಿವು, ಪ್ರಪಂಚದ ಅರಿವು, ಅರಿಯಬೇಕಾಗಿರುವುದರಿಂದ, ನಾವು ಪ್ರತಿ ಆಷಾಢ ಮಾಸದ ಈ ಪೌರ್ಣಿಮೆಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ನಮ್ಮ ಅಂತರಂಗದಲ್ಲೇ ಪ್ರತಿಷ್ಠಾಪಿಸಿ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲ ಎಂದು ಅಂತಹ ಗುರುವಿಗೆ ಶರಣಾದಾಗ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಫಲಪ್ರದವಾಗುತ್ತದೆ.

ಉಪನಿಷತ್ತಿನಲ್ಲಿ ಗುರು

ಉಪನಿಷತ್ತಿನಲ್ಲಿ ಗುರು ಎಂಬುದನ್ನು ಈ ರೀತಿಯಾಗಿ ವಿವರಿಸಿದ್ದಾರೆ. “ಗು” ಎಂದರೆ ಅಂಧಕಾರವೆಂದು “ರು” ಎಂದರೆ ದೂರೀಕರಿಸುವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಯ ಕಡೆಗೆ ನಡೆಸುವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ನಿಜವಾದ ಗುರು ಎಂದು ಅರ್ಥೈಸಬಹುದೇನೋ ಎಂಬ ಅಭಿಪ್ರಾಯ.

ಆದಿಗುರು ಶ್ರೀ ಶಂಕರಭಗವತ್ಪಾದಚಾರ್ಯರು ಗುರು ಮಹಿಮೆ ಕುರಿತು ಹೀಗೆ ಸ್ತೋತ್ರವನ್ನು ಹೇಳಿದ್ದಾರೆ:

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ |
ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ತ್ರೀಮೂರ್ತಿ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು ಎಂಬ ಅರ್ಥವಾಗುತ್ತದೆ. ಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಲ್ಪಟಿದೆ :

ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ।
ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ॥
ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ।
ಚಕ್ಷುರುನ್ಮೀಲಿತಂ ಯೇನ
ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳ್ಗಿಗೆ ಬೇಕಾದ ಸೋಪಾನವನ್ನು ಹತ್ತಿಸುವ ಹಾಗೂ ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.
ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ ಬಂದಿದ್ದಾರೆ..

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ।
ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಯಾವುದೂ ಇಲ್ಲ. ಜ್ಞಾನವೆಂಬ ದಾರಿದೀಪವಾಗಿರುವ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ. ಶಾಶ್ವತವಾದ ಆನಂದವನ್ನು ಪಡೆಯುವುದು ಆ ಸದ್ಗುರುವಿನಿಂದಲೆ ಮಾತ್ರವೇ ಸಾಧ್ಯ ಎಂದು ಶ್ರೀ ಶಂಕರಾಚಾರ್ಯರು ತಮ್ಮ “ಗುರ್ವಷ್ಟಕಮ್” ಎಂಬ ಸ್ತೂತ್ರದಲ್ಲಿ ಹೀಗೆ ಹೇಳಿದ್ದಾರೆ :
ಶರೀರಂ ಸುರೂಪಂ ತಥಾ ವಾ ಕಲತ್ರಂ ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ।

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್।।

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ, ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ ಎಂದು.ಏನೆಲ್ಲ ಸಾಧಿಸಿದ್ದರೂ, ತ್ಯಜಿಸಿದ್ದರೂ,ಗುರುವಿನ ಕರುಣೆಯಿಲ್ಲದೆ ಎಲ್ಲವೂ ವ್ಯರ್ಥ ಎಂದು ತಿಳಿಯುತ್ತದೆ.ಗುರುವಿನ ಪಾದಗಳಲ್ಲಿ ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾದ್ಯ ಎನ್ನುತ್ತಾ ಗುರುವಿನ ಮಹತ್ವನ್ನು ವಿವರಿಸುತ್ತಾರೆ ಆಚಾರ್ಯರು.

ನಮ್ಮ ಈ ಸನಾತನ ಪರಂಪರೆಯಲ್ಲಿ ಈಗಿರುವ “ಗುರುವಿನ ಗುರುವಿಗೆ ಪರಮಗುರು”ಎಂದೂ, “ಪರಮ ಗುರುವಿನ ಗುರುವನ್ನು ಪರಾಪರ ಗುರು”ಎಂದೂ,”ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು”ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ಯಂದು ಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ. ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರ ವಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನ ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜತೆಗೇ “ಗುರು ಪೂರ್ಣಿಮೆ”ಯಂದು ಪೂಜಿಸುತ್ತೇವೆ. ಲೋಕಗುರು, ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು. ಜತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು. ಆದ್ದರಿಂದಲೇ ಅವರನ್ನು ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ. “ಗುರು” ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ “ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬ ಚೈತನ್ಯದಾಯಕವಾಗಿರುತ್ತದೆ.

ಗುರುವಿಗೆ ಯಾವಾಗಲೂ ಶಿಷ್ಯನ ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ. ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ ಸಿದ್ಧ ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ. ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ,ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು,ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಇವರೆಲ್ಲ ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಗುರುವಿನ ಬಗೆಗೆ ವರ್ಣಿಸುತ್ತಾ ಹೊರಟರೆ ಅದು ಸಾಗರದಷ್ಟು ಆಳ, ಅಗಲ. ಆಗಸದಷ್ಟು ವಿಶಾಲ, ವಿಸ್ತಾರ. ಗುರು ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಅದ್ಬುತ ಶಕ್ತಿ ಎಂದು ಅರ್ಥೈಸಿ ತಿಳಿದುಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ….

ಇದನ್ನೂ ಓದಿ: Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Continue Reading
Advertisement
Mumbai Girl
ದೇಶ3 mins ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ11 mins ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ31 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ41 mins ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ52 mins ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ1 hour ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್2 hours ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ3 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ3 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ8 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌