ವೈದ್ಯ ದರ್ಪಣ ಅಂಕಣ: ಚಿರಂಜೀವ ಚಿರಂಜೀವ ಸುಖೀ ಭವ ಸುಖೀ ಭವ… - Vistara News

ಅಂಕಣ

ವೈದ್ಯ ದರ್ಪಣ ಅಂಕಣ: ಚಿರಂಜೀವ ಚಿರಂಜೀವ ಸುಖೀ ಭವ ಸುಖೀ ಭವ…

ಚಿರತಾರುಣ್ಯವನ್ನು ಪಡೆಯುವ, ಸಾಯುವವರೆಗೂ ಅನಾರೋಗ್ಯ ಬಾಧಿಸದಂತೆ ಬದುಕುವ ಮನುಷ್ಯನ ಆಕಾಂಕ್ಷೆ ಅನಾದಿ- ಅನಂತವಾದುದು. ಈ ದಿಕ್ಕಿನಲ್ಲಿ ವಿಜ್ಞಾನವೂ ಹಲವು ಹೆಜ್ಜೆ ಮುಂದಿಟ್ಟಿದೆ.

VISTARANEWS.COM


on

eternal youth
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
kiran column

ನಮ್ಮ ಪುರಾಣಗಳಲ್ಲಿ ಸಪ್ತ ಚಿರಂಜೀವಿಗಳ ಪ್ರಸ್ತಾಪವಿದೆ. “ಅಶ್ವತ್ಥಾಮ ಬಲಿಃ ವ್ಯಾಸೋ…” ಎನ್ನುವ ಶ್ಲೋಕ ಪಠಣ ಮಾಡಿದರೆ ಆಯಸ್ಸು ವೃದ್ಧಿಯಾಗುತ್ತದೆ ಎನ್ನುವ ನಂಬಿಕೆಯಿದೆ. ಚಿರಂಜೀವ ಎಂದರೆ ಬಹುಕಾಲ ಜೀವಿಸುವವರು ಎಂದಷ್ಟೇ ಲಿಟರಲ್ ಅರ್ಥವಾದರೂ, ಅದು “ಸದಾ ಕಾಲ ಜೀವಿಸುವವರು” ಎನ್ನುವ ಪ್ರತೀತಿ ಜನಮಾನಸದಲ್ಲಿದೆ. ಪ್ರತಿಯೊಂದು ನಾಗರಿಕತೆಯ ರಮ್ಯ ಕಥಾನಕಗಳಲ್ಲೂ ಚಿರತಾರುಣ್ಯವನ್ನು ನೀಡಬಲ್ಲ ಸಾಧನಗಳ ಮನಮೋಹಕ ಮಿಥಕಗಳಿವೆ. ಹತ್ತಾರು ಬೆಟ್ಟಗಳನ್ನು, ಕಾಡುಗಳನ್ನು ದಾಟಿದ ನಂತರ ಸಿಗುವ ವಿಶಿಷ್ಟ ನೀರಿನ ಊಟೆ; ಕಡಿದಾದ ಪರ್ವತದ ಮೇಲೆ ತಪಸ್ಸು ಮಾಡುತ್ತಿರುವ ಋಷಿಯ ಪ್ರಸಾದ; ಯಾವುದೋ ಅಪರಿಚಿತ ದೇಶದ ಪ್ರವಾಸಿಯೊಬ್ಬ ತಂದುಕೊಟ್ಟ ಮಾಯಾವಿ ಹಣ್ಣು – ಹೀಗೆ ಹಲವಾರು ಕಥಾನಕಗಳು ಚಿರತಾರುಣ್ಯದ ನಮ್ಮ ಆಸೆಯನ್ನು ಜೀವಂತವಾಗಿಟ್ಟಿವೆ. “ಪ್ರತಿಯೊಂದು ಜೀವಿಯೂ ಕಾಲಕ್ರಮೇಣ ಸವೆದು ನಶಿಸುವ ಯಂತ್ರ” ಎಂದೇ ಹೇಳುವ ವಿಜ್ಞಾನ ತನ್ನ ನಿಲುವನ್ನು ಬದಲಿಸಿ ಚಿರಂಜೀವತ್ವದ ಪರವಾಗಿ ನಿಲ್ಲುತ್ತದೆಯೇ? ಚಿರತಾರುಣ್ಯದ (eternal youth) ನಮ್ಮ ಕಾಲಾಂತರದ ಬಯಕೆ ನಿಜವಾದೀತೆ? ವರ್ತಮಾನ ಮತ್ತು ಸದ್ಯೋಭವಿಷ್ಯದಲ್ಲಿ ಇದರ ಪ್ರಾಯೋಗಿಕತೆಗಳ ಬಗ್ಗೆ ಹೀಗೊಂದು ನೋಟ:

ವಿಜ್ಞಾನದ ನೆರವಿನಿಂದ ನೂರೈವತ್ತು ವರ್ಷಗಳವರೆಗೆ ಬದುಕಬಲ್ಲ ಸಾಧ್ಯತೆಗಳನ್ನು ಈಚೆಗೆ ಗಮನಿಸಿದ್ದೇವೆ. (ನೋಡಿ: ಇದೇ ಅಂಕಣದ ಇನ್ನೊಂದು ಲೇಖನ ). ಇದು ನಮ್ಮ ಆಯಸ್ಸನ್ನು ಸಹಜವಾಗಿ ಮುಗಿಸಬಲ್ಲ ಕಾರಣಗಳಿಂದ ತಪ್ಪಿಸಿಕೊಂಡು, ವಿಧಿ ನೀಡಿದ ಪೂರ್ಣಾಯಸ್ಸನ್ನು ಪಡೆಯುವ ಮಾತಾಯಿತು. ಅದಕ್ಕಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ, ದೇಹದೊಳಗೆ ಆಯಸ್ಸನ್ನು ಕಳೆಯುವ ಪ್ರಕ್ರಿಯೆಗಳನ್ನು ನಿವಾರಿಸಿಕೊಳ್ಳುತ್ತಾ ಜೀವನಾವಧಿಯನ್ನು ಹೆಚ್ಚಿಸಿಕೊಳ್ಳಲು ಸಾಧ್ಯವೇ? ಸಾಂಕ್ರಾಮಿಕ ಕಾಯಿಲೆಯೊಂದರ ಉದಾಹರಣೆ ನೋಡೋಣ. ಸಾಂಕ್ರಾಮಿಕ ಕಾಯಿಲೆಯ ಪರಿಣಾಮದಿಂದ ತಪ್ಪಿಸಿಕೊಳ್ಳಲು ಸದ್ಯಕ್ಕೆ ಎರಡು ಪ್ರಮುಖ ದಾರಿಗಳಿವೆ. ಒಂದು: ಕಾಯಿಲೆ ಬಂದ ನಂತರ ಅದಕ್ಕೆ ಸೂಕ್ತವಾದ ಔಷಧಗಳನ್ನು ತೆಗೆದುಕೊಂಡು ಕಾಯಿಲೆಯನ್ನು ನಿವಾರಿಸಿಕೊಳ್ಳುವುದು. ಎರಡು: ಕಾಯಿಲೆ ಬಾರದಂತೆ ಲಸಿಕೆಗಳನ್ನು ತೆಗೆದುಕೊಳ್ಳುವುದು. ಇವೆರಡೂ ನೂರಕ್ಕೆ ನೂರಷ್ಟು ಪರಿಣಾಮಕಾರಿ ಅಲ್ಲದಿದ್ದರೂ ಮಾನವ ಇತಿಹಾಸದ ದಿಕ್ಕನ್ನು ಬದಲಿಸಿದ ಆವಿಷ್ಕಾರಗಳು. ಮೂರನೆಯ ದಾರಿ ಉಂಟೇ? ಒಂದು ವೇಳೆ ಸಾಂಕ್ರಾಮಿಕ ಕಾಯಿಲೆಗೆ ಪೂರಕವಾಗಿರುವ ನಮ್ಮ ಜೀನ್ ರಚನೆಯನ್ನು ಬದಲಾಯಿಸಿದರೆ? ಅಥವಾ, ಸಾಂಕ್ರಾಮಿಕ ಕಾಯಿಲೆ ಉಂಟುಮಾಡುವ ಪರೋಪಜೀವಿ ದೇಹದ ಒಳಗೆ ಪ್ರವೇಶಿಸಿದರೂ ಅದು ಜೀವಕೋಶದ ಒಳಗೆ ನುಗ್ಗಲು ಸಾಧ್ಯವಿಲ್ಲದಂತಹ ಸ್ಥಿತಿಯನ್ನು ನಿರ್ಮಿಸಿದರೆ? ವೈಜ್ಞಾನಿಕ ಪ್ರಗತಿಯ ನಾಗಾಲೋಟವನ್ನು ಗಮನಿಸಿದವರಿಗೆ ಇದು ಅಸಾಧ್ಯದ ಮಾತು ಎಂದೇನೂ ಅನಿಸುವುದಿಲ್ಲ. ಇದೇ ನಿಟ್ಟಿನಲ್ಲಿ ಮುಂದುವರೆದು, ಸಾವಿಗೆ ಕಾರಣವಾಗುವ ಅಂಶಗಳನ್ನೂ ನಿಯಂತ್ರಿಸಬಹುದೇ?

ಟ್ವಿಟ್ಟರ್ ಸಂಸ್ಥೆಯನ್ನು ಖರೀದಿಸಿದ ಇಲಾನ್ ಮಸ್ಕ್ ಎಂಬ ಸಾಹಸಿಯ ಕತೆ ಕೇಳಿರುತ್ತೇವೆ. ಅಂತರ್ಜಾಲ ಆರಂಭವಾದ ದಿನಗಳಲ್ಲಿ ಅದನ್ನು ಕರೆನ್ಸಿ ನೋಟು-ರಹಿತ ಹಣಸಂದಾಯದ ಮಾರ್ಗವಾಗಿ ಬಳಸಬಹುದೆಂಬ ಆಲೋಚನೆಯ “ಪೇ-ಪಾಲ್” ಎನ್ನುವ ಸಂಸ್ಥೆಯೂ ಅವರ ನಿರ್ವಹಣೆಯಲ್ಲೇ ಇತ್ತು. ಮೂಲತಃ ಪೇ-ಪಾಲ್ ಸಂಸ್ಥೆಯನ್ನು ಆರಂಭಿಸಿ, ಅದರ ನಿರ್ವಹಣೆಯಲ್ಲಿ ಮಸ್ಕ್ ಅವರ ಜೊತೆಗಾರರಾಗಿದ್ದವರು ಪೀಟರ್ ಥೇಲ್ ಎಂಬ ಮತ್ತೊಬ್ಬ ಸಾಹಸಿ. ಜಗತ್ತಿನ ಮುನ್ನೂರು ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಥೇಲ್ ಅವರು 2006 ರ ಸೆಪ್ಟೆಂಬರ್ ತಿಂಗಳಿನಲ್ಲಿ ಚಿರತಾರುಣ್ಯದ ಸಂಶೋಧನೆಗೆ ಬೃಹತ್ ಮೊತ್ತವನ್ನು ದೇಣಿಗೆಯಾಗಿ ನೀಡುವ ಸಂಕಲ್ಪ ಮಾಡಿದರು. ಜೀವವಿಜ್ಞಾನದ ಸಂಶೋಧನೆಗಳಿಂದ ಭವಿಷ್ಯದಲ್ಲಿ ಎಲ್ಲರಿಗೂ ಸಾಕಷ್ಟು ಆಯಸ್ಸು ಮತ್ತು ಆರೋಗ್ಯ ದೊರೆಯುವ ಕನಸು ನನಸಾಗುತ್ತದೆ ಎಂದು ಅವರ ಗಟ್ಟಿ ನಂಬಿಕೆ. ಇಳಿವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯಗಳು ಕಾಡಬಾರದೆಂದರೆ ದೇಹವು ತಾರುಣ್ಯದ ವೇಳೆ ಹೇಗಿತ್ತೋ, ಹಾಗೆಯೇ ಇರಬೇಕು. ಕಾಯಿಲೆಗಳಿಂದ ಜರ್ಜರಿತವಾದ ಆಯಸ್ಸು ಯಾರಿಗೆ ತಾನೇ ಸಹ್ಯ? ನಮಗೆ ಬೇಕಾದ್ದು ಜಿರಂಜೀವತ್ವ ಮಾತ್ರವಲ್ಲ; ಚಿರತಾರುಣ್ಯ ಕೂಡ. ಥೇಲ್ ಅವರ ಕನಸೂ ಇಂತಹದ್ದೇ. ಉಳಿದವರು ಈ ಕನಸು ಕಂಡರೆ ಅದು ಕನಸಾಗಿಯೇ ಉಳಿಯಬಹುದು. ಆದರೆ ನವೋದ್ಯಮಗಳ ಹಣಹೂಡಿಕೆಯಲ್ಲಿ ಅಪಾರ ಸಾಫಲ್ಯ ಕಂಡ ಥೇಲ್ ಅವರಂತಹ ವಿನಿಯೋಜಕರು ಸಾಕಷ್ಟು ಅಧ್ಯಯನವಿಲ್ಲದೆ ಯಾವುದರಲ್ಲೂ ಬೃಹತ್ ಮೊತ್ತವನ್ನು ಹೂಡುವುದಿಲ್ಲ. ಹೀಗಾಗಿ, ಚಿರತಾರುಣ್ಯದ ಸಂಶೋಧನೆಯಲ್ಲಿ ಥೇಲ್ ಆಸಕ್ತಿ ವಹಿಸಿದ್ದಾರೆ ಎಂದರೆ ಅದನ್ನು ಗಂಭೀರವಾಗಿಯೇ ಪರಿಗಣಿಸಬೇಕು.

eternal youth

ಏಕಕೋಶ ಜೀವಿಗಳಾದ ಬ್ಯಾಕ್ಟೀರಿಯಾಗಳಿಂದ ಹಿಡಿದು ಬೃಹತ್ ಗಾತ್ರದ ತಿಮಿಂಗಲಗಳವರೆಗೆ ವ್ಯಾಪಿಸಿರುವ ಅಪಾರ ಜೀವವೈವಿಧ್ಯಗಳಲ್ಲಿ ಈಗಾಗಲೇ ಸಹಜವಾಗಿ, ನಿಸರ್ಗವೇ ಪ್ರಸಾದಿಸಿರುವಂತೆ ಚಿರತಾರುಣ್ಯ ಅನುಭವಿಸುತ್ತಿರುವ ಪ್ರಭೇದಗಳು ಇವೆಯೇ? ಅಂದರೆ, ವೃದ್ಧಾಪ್ಯವೇ ಇಲ್ಲದ ಜೀವಿಗಳು ಸೃಷ್ಟಿಯ ಅಸ್ತಿತ್ವದಲ್ಲಿ ಉಂಟೇ? ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರ “ಹೌದು”! ಜೀವವಿಕಾಸದ ಹಂತಗಳನ್ನು ಗಮನಿಸಿದಾಗ ಕೆಲವೊಂದು ಅಚ್ಚರಿಯ ಮಾಹಿತಿಗಳು ಗೋಚರಿಸುತ್ತವೆ. ಏಕಕೋಶ ಬ್ಯಾಕ್ಟೀರಿಯಾಗಳು ತಮ್ಮ ಸಂಖ್ಯೆಯಲ್ಲಿ ವೃದ್ಧಿಯಾಗುವುದು ವಿದಳನದಿಂದ. ಅಂದರೆ, ತನ್ನ ನಿಶ್ಚಿತ ಜೀವಿತಾವಧಿಯ ನಂತರ ಒಂದು ಬ್ಯಾಕ್ಟೀರಿಯಾ ಎರಡಾಗಿ ಒಡೆಯುತ್ತದೆ. ಹೀಗೆ ಒಂದು ಮುದಿ ಬ್ಯಾಕ್ಟೀರಿಯಾ ವಿದಳನಗೊಂಡು ಎರಡು ಮುದಿ ಬ್ಯಾಕ್ಟೀರಿಯಾಗಳು ಆಗುವುದಿಲ್ಲ; ಬದಲಿಗೆ, ಎರಡು ಯುವ ಬ್ಯಾಕ್ಟೀರಿಯಾಗಳು ಹುಟ್ಟುತ್ತವೆ. ವಿಕಾಸದ ಹಾದಿಯಲ್ಲಿ ಹೀಗೆಯೇ ಮುಂದುವರೆದರೆ ಆರಂಭಿಕ ಬಹುಕೋಶ ಜೀವಿಗಳಲ್ಲಿಯೂ ವೃದ್ಧಾಪ್ಯದ ಛಾಯೆಯಿಲ್ಲದ ಜೀವಿಗಳು ಕಾಣುತ್ತವೆ. ಸ್ಪಾಂಜಿನ ತುಣುಕಿನಂತೆ ಕಾಣುವ ಸಮುದ್ರಸೌತೆ, ನಾವು ಶಾಲೆಯ ಪಠ್ಯಗಳಲ್ಲಿ ಓದಿದ್ದ ಹೈಡ್ರಾ, ಕೆಲಬಗೆಯ ಹವಳ ಉತ್ಪಾದಿಸುವ ಜೀವಿಗಳು, ಮಿದುಳೇ ಇಲ್ಲದೆ ಬಹುಕಾಲ ಬದುಕುವ ಖ್ಯಾತಿಯ ಜೆಲ್ಲಿಫಿಶ್ ಈ ಗುಂಪಿಗೆ ಸೇರುವ ಚಿರತಾರುಣ್ಯದ ಫಲಾನುಭವಿಗಳು.

ಮಾನವ ದೇಹವೂ ಇಂತಹ ಕೋಶ-ವಿಭಜನೆಯ ಪ್ರಕ್ರಿಯೆಯಿಂದಲೇ ಅಭಿವೃದ್ಧಿಯಾಗುತ್ತದೆ. ಭ್ರೂಣದ ಹಂತದಲ್ಲಿರುವ ಬಹುತೇಕ ಕೋಶಗಳು ಒಂದು ನಿರ್ದಿಷ್ಟ ಘಟ್ಟದ ನಂತರ ಹೊಸದಾಗಿ ಉತ್ಪತ್ತಿಯಾಗುವುದಿಲ್ಲ; ಬದಲಿಗೆ, ಇರುವ ಕೋಶಗಳೇ ವಿಭಜನೆಗೊಳ್ಳುತ್ತಾ ಸಂಖ್ಯೆಯಲ್ಲಿ ವೃದ್ಧಿಸುತ್ತವೆ. ಆದರೆ ಈ ವಿಭಜನೆ ನಿರಂತರವಾಗಿ ಮುಂದುವರೆಯಲಾರದು. ಪ್ರತಿ ಬಾರಿ ಒಂದು ಕೋಶ ವಿಭಜನೆಗೆ ಒಳಗಾದಾಗ ಅದರ ವರ್ಣತಂತುಗಳ ತುದಿಯ ಭಾಗ ಸ್ವಲ್ಪ ಗಿಡ್ಡದಾಗುತ್ತದೆ. ಸುಮಾರು 40-60 ವಿಭಜನೆಗಳ ನಂತರ ಕೋಶಗಳು ತಮ್ಮ ಸಾಮರ್ಥ್ಯವನ್ನು ಬಹುತೇಕ ಕಳೆದುಕೊಳ್ಳುತ್ತವೆ. ಆನಂತರ ಅದರ ವಿಭಜನೆಯ ತಾಕತ್ತು ನಿಂತುಹೋಗುತ್ತದೆ. ಅಂತಹ ಮುದಿಕೋಶಗಳು ದೇಹದ ಕೆಲಸಕ್ಕೆ ಬಾರವು. ಕೋಶವಿಭಜನೆಯ ಈ ಮಿತಿಯನ್ನು ಹೇಫ್ಲಿಕ್ ಮಿತಿ ಎಂದು ಕರೆಯುತ್ತಾರೆ. ಹೇಫ್ಲಿಕ್ ಮಿತಿ ತಲುಪಿದ ಕೋಶಗಳ ವರ್ಣತಂತುಗಳ ತುದಿ ಭಾಗ ತೀರಾ ಸಣ್ಣದಾಗಿರುವುದನ್ನು ಗಮನಿಸಿದ ವಿಜ್ಞಾನಿಗಳು, ಈ ಭಾಗಕ್ಕೂ ವೃದ್ಧಾಪ್ಯಕ್ಕೂ ಇರುವ ಸಂಬಂಧವನ್ನು ಗಟ್ಟಿಯಾಗಿ ಅನುಮಾನಿಸುತ್ತಾರೆ. ಟೀಲೊಮರ್ ಎಂದು ಕರೆಯಲ್ಪಡುವ ಈ ತುದಿ ಭಾಗ ವೃದ್ಧಾಪ್ಯ ಸಂಶೋಧಕರ ನೆಚ್ಚಿನ ವಸ್ತು. ಒಂದು ವೇಳೆ ವರ್ಣತಂತುವಿನ ತುದಿ ಭಾಗ ಗಿಡ್ಡವಾಗದಂತೆ ಕೋಶ ವಿಭಜನೆಯನ್ನು ಸಾಧಿಸಿದರೆ? ಆಗ ವೃದ್ಧಾಪ್ಯಕ್ಕೆ ಇತಿಶ್ರೀ ಹಾಡಬಹುದೇ? ವಿಜ್ಞಾನಿಗಳಿಗೆ ಇದೊಂದು ಚೇತೋಹಾರಿ ಕನಸು.

ಪ್ರಾಥಮಿಕ ಜೀವವರ್ಗಗಳನ್ನು ಹೊರತುಪಡಿಸಿ, ನಾವು ಸಂಪರ್ಕದಲ್ಲಿರುವ ಇತರ ಜೀವಿಗಳನ್ನು ಪರಿಗಣಿಸಿದರೆ ಎಲ್ಲವೂ ವೃದ್ಧಾಪ್ಯ ಅನುಭವಿಸುವ ಗುಂಪಿಗೇ ಸೇರಿದ್ದವು. ಅಂದರೆ, ವೃದ್ಧಾಪ್ಯವೆಂಬುದು ನಿಸರ್ಗದ ಸಹಜ ನಿಯಮವಲ್ಲ. ಯಾವುದೋ ಕಾರ್ಯಸಾಧನೆಗೆ ಜೀವವಿಕಾಸದ ಒಂದು ಹಂತದಲ್ಲಿ ಖುದ್ದು ನಿಸರ್ಗವೇ ಜೀವಿಗಳ ದೇಹಕ್ಕೆ ಸೇರಿಸಿದ ಪ್ರಕ್ರಿಯೆ ಎಂದಾಯಿತು. ವೃದ್ಧಾಪ್ಯವನ್ನು ಶರೀರದೊಳಗೆ ಸೇರಿಸಲು ನಿಸರ್ಗ ಜೀವಿಗಳ ದೇಹದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿರಬೇಕು. ಇಂತಹ ಬದಲಾವಣೆಗಳನ್ನು ಅಧ್ಯಯನ ಮಾಡಿ ವೃದ್ಧಾಪ್ಯವನ್ನು ನಿವಾರಿಸಿಕೊಳ್ಳಲು ಸಾಧ್ಯವೇ? ಅಸಲಿಗೆ ನಮ್ಮನ್ನು ಸೃಷ್ಟಿಸಿದ ಹಿಂದೆ ನಿಸರ್ಗಕ್ಕೆ ಏನಾದರೂ ಉದ್ದೇಶವಿದೆಯೇ? ಆ ಉದ್ದೇಶಸಾಧನೆಗೆ ವೃದ್ಧಾಪ್ಯ ಪೂರಕವೇ? ಅದು ಪೂರಕವಾಗಿದ್ದರೆ ನಾವು ವೃದ್ಧಾಪ್ಯವನ್ನು ಮೀರಲಾದೀತೆ? ಪೀಟರ್ ಥೇಲ್ ಅವರಿಂದ ಅನುದಾನ ಪಡೆದಿರುವ ಸಂಶೋಧಕರಿಗೆ ಇವೆಲ್ಲವೂ ಉತ್ತರ ಪಡೆಯಬೇಕಾದ ಕೌತುಕದ ಪ್ರಶ್ನೆಗಳು.

ಪ್ರಯೋಗಾಲಯದ ಪ್ರಾಣಿಗಳಲ್ಲಿ ನಡೆಸಿರುವ ಪರೀಕ್ಷೆಗಳಿಂದ ಆಯಸ್ಸನ್ನು ಹೆಚ್ಚಿಸಲು ಮೂರು ವಿಧಾನಗಳನ್ನು ಪತ್ತೆ ಮಾಡಲಾಗಿದೆ. ಮೊದಲನೆಯದು – ಕೇವಲ ಅಗತ್ಯ ಪ್ರಮಾಣದ ಶಕ್ತಿ ಮತ್ತು ಪೋಷಣೆಗಳನ್ನು ನೀಡುವಷ್ಟು ಆಹಾರವನ್ನು ಮಾತ್ರ ಸೇವಿಸುವುದು. ಇದರಿಂದ ಅನಗತ್ಯ ಕ್ಯಾಲೊರಿಗಳು ದೇಹವನ್ನು ಸೇರುವುದು ತಪ್ಪುತ್ತದೆ; ಈ ಹೆಚ್ಚುವರಿ ಕ್ಯಾಲೊರಿಗಳನ್ನು ನಿರ್ವಹಿಸುವ ಹೊಣೆಗಾರಿಕೆ ಶರೀರಕ್ಕೆ ಇಲ್ಲವಾಗುತ್ತದೆ. ಇದರಿಂದ ಮಹತ್ವದ ರಾಸಾಯನಿಕ ಪ್ರಕ್ರಿಯೆಗಳಿಗೆ ಬೇಕಾಗುವ ಅಧಿಕ ಶಕ್ತಿಯ ಉಳಿತಾಯವಾಗುತ್ತದೆ. ಜೀವಿತಾವಧಿ ಏರುತ್ತದೆ. ಎರಡನೆಯದು – ಔಷಧ ಚಿಕಿತ್ಸೆ. ನಮ್ಮ ದೇಹ ಸಮರ್ಪಕವಾಗಿ ಕೆಲಸ ಮಾಡಲು ವಯಸ್ಸಾದ ಜೀವಕೋಶಗಳ ಸ್ಥಾನದಲ್ಲಿ ಹೊಸದಾಗಿ ವಿದಳನಗೊಂಡ ಜೀವಕೋಶಗಳು ತಯಾರಾಗುತ್ತಲೇ ಇರಬೇಕು. ಮುದಿ ಜೀವಕೋಶಗಳನ್ನು ವ್ಯವಸ್ಥಿತವಾಗಿ ನಾಶ ಮಾಡುವ ವ್ಯವಸ್ಥೆ ನಮ್ಮ ಶರೀರದಲ್ಲಿದೆ. ಈ ವ್ಯವಸ್ಥೆ ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಜೀವಕೋಶಗಳ ವಿದಳನಕ್ಕೆ ಅಡ್ಡಿಯಾಗುತ್ತದೆ. ಇಂತಹ ಸಹಜ ವ್ಯವಸ್ಥೆಗೆ ಪೂರಕವಾಗಿ ಕೆಲಸ ಮಾಡಬಲ್ಲ ಔಷಧಗಳಿದ್ದರೆ ಹೇಗೆ? ಈ ಔಷಧಗಳು ಮುದಿ ಜೀವಕೋಶಗಳನ್ನು ಮಾತ್ರ ಆಯ್ದು ಹುಡುಕಿ, ಅವನ್ನು ನಿವಾರಿಸಬಲ್ಲವು. ಈ ಮೂಲಕ ಅವುಗಳ ಸ್ಥಾನದಲ್ಲಿ ಸಮರ್ಥವಾಗಿ ಕೆಲಸ ಮಾಡಬಲ್ಲ ಜೀವಕೋಶಗಳ ನೆರವಿನಿಂದ ಶರೀರ ಚುರುಕಾಗಿಯೇ ಇರುತ್ತದೆ. ಇದರ ಜೊತೆಗೆ ಜೀವಕೋಶಗಳ ಮುದಿತನವನ್ನು ಕಳೆದು ಅವಕ್ಕೆ ನವಚೈತನ್ಯ ನೀಡಬಲ್ಲ ಔಷಧಗಳಿವೆ.

eternal youth

ಮೂರನೆಯದು ಜೀನ್ ಮಟ್ಟದ ಚಿಕಿತ್ಸೆ. ಸದ್ಯಕ್ಕೆ ಇದು ಪ್ರಾಥಮಿಕ ಹಂತದ ಪ್ರಯೋಗದಲ್ಲಿದೆ. ಔಷಧದ ರೀತಿಯಲ್ಲಿ ನಿರ್ದಿಷ್ಟ ಜೀನ್‌ಗಳನ್ನು ಶರೀರಕ್ಕೆ ಸೇರಿಸಿದರೆ, ಅವು ಶರೀರಕ್ಕೆ ಅಗತ್ಯವಾದ, ಆದರೆ ವಯಸ್ಸಾದ ಕೋಶಗಳಲ್ಲಿ ತಯಾರಾಗಲು ಸಾಧ್ಯವಿಲ್ಲದ ಪ್ರೋಟೀನ್‌ಗಳನ್ನು ತಯಾರಿಸಿ, ಕೊರತೆಯನ್ನು ನೀಗಬಲ್ಲವು. ಇದರಿಂದ ಶರೀರಕ್ಕೆ ಹೊಸ ಚೈತನ್ಯ ಮೂಡಿದಂತಾಗುತ್ತದೆ. ಜೀವಕೋಶಗಳ ಒಳಗೆ ವೃದ್ಧಾಪ್ಯದ ಅಥವಾ ಕಾಯಿಲೆಗಳಿಂದ ಹಾಳಾಗಿರುವ ಸಹಜ ಜೀನ್‌ಗಳ ಬದಲಿಗೆ ಅದೇ ರೀತಿಯ ಹೊಸ ಜೀನ್‌ಗಳನ್ನು ನೀಡಬಹುದು. ಇದರಿಂದ ಜೀವಕೋಶಗಳು ಮತ್ತೊಮ್ಮೆ ಚುರುಕಾಗಿ ಕೆಲಸ ಮಾಡಲು ಉಪಕ್ರಮಿಸುತ್ತವೆ. ಈ ರೀತಿಯ ಜೀನ್ ಚಿಕಿತ್ಸೆಯ ನೆರವಿನಿಂದ ಪ್ರಯೋಗಾಲಯದ ಇಲಿಗಳ ಆಯಸ್ಸನ್ನು ಶೇಕಡಾ 50 ಹೆಚ್ಚಿಸಲಾಗಿದೆ. ಅಂದರೆ, ಸುಮಾರು 3 ವರ್ಷಗಳ ಕಾಲ ಬದುಕುವ ಇಂತಹ ಇಲಿಗಳು 4-5 ವರ್ಷಗಳ ಕಾಲ ಬದುಕಿವೆ. ಜೀನ್ ಚಿಕಿತ್ಸೆಯ ಮೂಲಕ ಲಾಡಿಹುಳುವಿನಂತಹ ಚಪ್ಪಟೆ ದೇಹದ ಹುಳುಗಳ ಜೀವಿತಾವಧಿಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ.

ಈ ಚಿಕಿತ್ಸೆಯ ಅತಿ ಮುಖ್ಯ ಭಾಗವೆಂದರೆ ಯಾವ ಜೀನ್‌ಗಳನ್ನು ಪ್ರಭಾವಶಾಲಿಯಾಗಿ ಬಳಸಬಹುದೆಂದು ಪತ್ತೆ ಮಾಡುವುದು. ಸಣ್ಣ ಗಾತ್ರದ ಜೀವಿಗಳಲ್ಲಿ ಇಂತಹ ಜೀನ್‌ಗಳ ಸಂಖ್ಯೆ ಕಡಿಮೆಯಿರುತ್ತದೆ. ಅಲ್ಲಿ ಹುಡುಕಾಟ ಸುಲಭ. ಮನುಷ್ಯರಂತಹ ಸಂಕೀರ್ಣ ಜೀವಿಗಳಲ್ಲಿ ಇಂತಹ ನಿರ್ದಿಷ್ಟ ಜೀನ್‌ಗಳ ಪತ್ತೆ ಸುಲಭವಲ್ಲ. ವಿಜ್ಞಾನಿಗಳು ಇದಕ್ಕಾಗಿ ಅನೇಕ ರಾಷ್ಟ್ರಗಳ ಜನಗಣತಿ ಮಾಹಿತಿಗೆ ಪಾತಾಳಗರಡಿ ಹಾಕಿದ್ದಾರೆ. ದೀರ್ಘಕಾಲ ಆರೋಗ್ಯವಂತರಾಗಿ ಬದುಕಿರುವ ಸುಮಾರು 17 ಲಕ್ಷ ಜನರ ಮಾಹಿತಿ ಸಂಗ್ರಹಿಸಿ, ಅವರ ಜೀನ್ ಪರೀಕ್ಷೆ ನಡೆಸಿ, ಹತ್ತು ನಿರ್ದಿಷ್ಟ ಜೀನ್ ಕೇಂದ್ರಗಳನ್ನು ಪತ್ತೆ ಮಾಡಿದ್ದಾರೆ. ಇವುಗಳ ಪೈಕಿ ಐದು ಜೀನ್‌ಗಳು ಈ ಮುನ್ನ ವಿಜ್ಞಾನಿಗಳ ಸಂಶೋಧನೆಯ ವ್ಯಾಪ್ತಿಗೆ ಬಂದಿರಲಿಲ್ಲ. ಈ ಹಾದಿಯಲ್ಲಿ ಕಂಡುಬಂದ ಅಚ್ಚರಿಯ ಅಂಶವೆಂದರೆ, ರಕ್ತದಲ್ಲಿ ಕಬ್ಬಿಣದ ಅಂಶ ಅಗತ್ಯಕ್ಕಿಂತ ಅಧಿಕವಾದರೆ ಜೀವಕೋಶಗಳ ಕಾರ್ಯಕ್ಷಮತೆ ಕ್ಷೀಣಿಸುತ್ತದೆ ಎಂಬುದು. ಹಾಗೆಂದು ಆಹಾರದಲ್ಲಿ ಕಬ್ಬಿಣದ ಅಂಶವನ್ನು ತಗ್ಗಿಸಿದರೆ ರಕ್ತಹೀನತೆ ಉಂಟಾಗುತ್ತದೆ. ಇದಕ್ಕೆ ದಾರಿಯೆಂದರೆ, ಶರೀರದಲ್ಲಿ ಅಧಿಕ ಕಬ್ಬಿಣದ ಅಂಶವನ್ನು ಸಮರ್ಥವಾಗಿ ನಿವಾರಿಸುವ ಜೀನ್‌ಗಳನ್ನು ವೃದ್ಧಿಸುವುದು. ಇದರಿಂದ ಜೀವಿತಾವಧಿ ಮತ್ತು ಒಟ್ಟಾರೆ ಆರೋಗ್ಯ ಹೆಚ್ಚುತ್ತದೆ ಎಂದು ವಿಜ್ಞಾನಿಗಳ ಆಂಬೋಣ. ಈ ನಿಟ್ಟಿನ ಸಂಶೋಧನೆ ಕುತೂಹಲಕಾರಿಯಾಗಲಿದೆ.

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ | ನಮ್ಮ ಶರೀರವನ್ನು ನಿಯಂತ್ರಿಸುವವರು ಯಾರು?

ವಿಜ್ಞಾನದ ನೆರವಿನಿಂದ ವಯಸ್ಸನ್ನು ಹಿಂದಕ್ಕೆ ಹಾಕಲಾದೀತೆ? 1922ರಲ್ಲಿ ಸ್ಕಾಟ್ ಫಿಟ್ಸ್’ಜೆರಾಲ್ಡ್ ಅವರು ಬರೆದಿದ್ದ ಸಣ್ಣ ಕತೆಯನ್ನು ಆಧರಿಸಿ 2008ರಲ್ಲಿ ಅಮೆರಿಕನ್ ನಟ ಬ್ರಾಡ್ ಪಿಟ್ ನಟಿಸಿದ್ದ ಬೆಂಜಮಿನ್ ಬಟನ್ ಎಂಬ ಹೆಸರಿನ ಚಲನಚಿತ್ರ ಬಂದಿತ್ತು. ವೃದ್ಧನಾಗಿ ಹುಟ್ಟಿ, ಕಾಲ ಕಳೆಯುತ್ತಾ ವಯಸ್ಸು ಕಿರಿದಾಗುತ್ತಾ ಹೋಗುವ ವ್ಯಕ್ತಿಯ ಕತೆ. ಆದರೆ ಚಿರತಾರುಣ್ಯ ಬಯಸುವ ಮಂದಿ ತಮ್ಮ ವಯಸ್ಸನ್ನು ಕಡಿಮೆ ಮಾಡಲಾರರು. ಹೆಚ್ಚಿನ ವಯಸ್ಸಿನಲ್ಲೂ ಕಡಿಮೆ ವಯಸ್ಸಿನವರ ಚೈತನ್ಯವನ್ನು ಮಾತ್ರ ಹೊಂದಬಲ್ಲರು. ಶರೀರದ ಅಂಗಗಳಲ್ಲಿ ಘಾಸಿಯಾದ ಕೋಶಗಳನ್ನು ಕಾಲಕಾಲಕ್ಕೆ ಬದಲಾಯಿಸುತ್ತಾ; ದೇಹದಲ್ಲಿ ಕುಂಠಿತವಾಗಿರುವ ರಾಸಾಯನಿಕಗಳನ್ನು, ಹಾರ್ಮೋನುಗಳನ್ನು, ಕಿಣ್ವಗಳನ್ನು ಬಾಹ್ಯವಾಗಿ ನೀಡುತ್ತಾ; ಆಹಾರ, ವ್ಯಾಯಾಮ, ಸೂಕ್ತ ಪೋಷಕಾಂಶಗಳ ನೆರವಿನಿಂದ ಮರುಚೈತನ್ಯ ಪಡೆಯುತ್ತಾ ಹೋದರೆ ಚಿರತಾರುಣ್ಯ ಪ್ರಾಯೋಗಿಕವಾಗಿ ಸಾಧ್ಯ. ಆದರೆ, ಈ ಮಟ್ಟವನ್ನು ತಲುಪಲು ಇನ್ನೂ ಕೆಲ ದಶಕಗಳೇ ಬೇಕಾಗಬಹುದು.

ವೃದ್ಧಾಪ್ಯವನ್ನು ಕಾಯಿಲೆ ಎಂದು ಪರಿಗಣಿಸಬೇಕೆ ಎನ್ನುವ ಕುತೂಹಲಕಾರಿ ಚರ್ಚೆ ಚಾಲ್ತಿಯಲ್ಲಿದೆ. ಅದು ಶರೀರದ ಸಹಜ ಸ್ಥಿತಿಯೇ ಹೊರತು ಕಾಯಿಲೆಯಲ್ಲ ಎಂದು ವಾದಿಸುವವರ ಸಂಖ್ಯೆ ಹೆಚ್ಚು. ಆದರೆ, ಅದನ್ನು ಕಾಯಿಲೆ ಎಂದು ಪರಿಗಣಿಸಿದರೆ ನಮಗೆ ಲಾಭಗಳು ಅಧಿಕ ಎಂದು ಭಾವಿಸುವವರಿದ್ದಾರೆ. ಇದು ಕಾನೂನಾತ್ಮಕ ವಿಶ್ಲೇಷಣೆ. ಕಾಯಿಲೆಗಳ ಸಂಶೋಧನೆಗೆ ಸರ್ಕಾರ ಹಣ ನೀಡುತ್ತದೆ; ಔಷಧ ಕಂಪನಿಗಳು ಮದ್ದು ಹುಡುಕುತ್ತವೆ; ಹೊಸ ಮಾದರಿಯ ಚಿಕಿತ್ಸೆಗಳು, ಸಲಕರಣೆಗಳು ಲಭ್ಯವಾಗುತ್ತವೆ. ಇವೆಲ್ಲ ಕಾಯಿಲೆಗಳಿಗೆ ಇರುವ ವಿಶೇಷ ಕಾನೂನು ವ್ಯಾಪ್ತಿ. ಒಂದು ವೇಳೆ ವೃದ್ಧಾಪ್ಯವನ್ನು ಸಹಜ ಎಂದು ನಿರ್ಧರಿಸಿದರೆ, ಅದರ ವಿರುದ್ಧ ಮಾಡುವ ಸಂಶೋಧನೆಯ ಚೌಕಟ್ಟು ಬೇರೆಯೇ ಆಗುತ್ತದೆ. ಇದರಲ್ಲಿ ಚಿಕಿತ್ಸೆ ಎನ್ನುವ ಆಯಾಮ ಇರುವುದಿಲ್ಲ. ಇದಕ್ಕೆ ಮದ್ದು ಹುಡುಕುವುದು ಅಪರಾಧ ಅನಿಸಿಕೊಳ್ಳುತ್ತದೆ! ಹೀಗಾಗಿ, ಕಾಯಿಲೆಯ ದಾಯರೆಗಳೊಳಗೆ ವೃದ್ಧಾಪ್ಯವನ್ನು ಸೇರಿಸಬೇಕೆಂಬ ತುಡಿತ ಸಂಶೋಧಕರದ್ದು.

ಜೀವನದ ಅತಿ ದೊಡ್ಡ ಸುಖವೆಂದರೆ ಒಳ್ಳೆಯ ಆರೋಗ್ಯ ಎನ್ನುವ ಮಾತಿದೆ. ಆರೋಗ್ಯಪೂರ್ಣವಾದ ಸಂತೃಪ್ತ ದೀರ್ಘ ಜೀವನ ಪ್ರತಿಯೊಬ್ಬ ಮಾನವನ ಕನಸು. ಮಾಯಾಬಜಾರ್ ಚಲನಚಿತ್ರದಲ್ಲಿ ಘಟೋತ್ಕಚನ ಅಹಂಕಾರ ಮುರಿಯಲು ಕೃಷ್ಣ ವೃದ್ಧನ ವೇಷದಲ್ಲಿ ಕಾಣಿಸಿಕೊಂಡು “ಚಿರಂಜೀವ ಚಿರಂಜೀವ ಸುಖೀಭವ ಸುಖೀಭವ” ಎಂದು ಹಾಡುತ್ತಾ ಇರುವ ಪ್ರಸಂಗವಿದೆ. ಜಗತ್ತೆನ್ನುವ ಮಾಯಾಬಜಾರಿನಲ್ಲಿ ಮಾನವಜೀವಿಯ ಮೃಗತೃಷ್ಣೆಯೂ ಇದೇ ಮಾತು! ಚಿರತಾರುಣ್ಯದ ಸಾಕಾರದತ್ತ ಅದೆಷ್ಟೋ ಸಂಶೋಧಕರು ಪ್ರಯತ್ನ ನಡೆಸಿದ್ದಾರೆ. ಒಟ್ಟಿನಲ್ಲಿ, ಮನುಕುಲದ ನಾಡಿದ್ದು ಕೌತುಕಮಯವಾಗಲಿದೆ.

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ: ನೆತ್ತಿಯೊಳಗಿನ ವಿದ್ಯುತ್ ಮತ್ತು ಮಾನಸಿಕ ಸಂತೃಪ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Temperature Warning
ರಾಯಚೂರು2 seconds ago

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Swara Bhasker reveals big difference between Kangana Ranaut and herself
ಬಾಲಿವುಡ್43 seconds ago

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Yakshagana Artist No more
ದಕ್ಷಿಣ ಕನ್ನಡ19 mins ago

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

prajwal revanna case look out notice
ಪ್ರಮುಖ ಸುದ್ದಿ27 mins ago

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Star Suvarna Kannada Janaki Samsara
ಕಿರುತೆರೆ38 mins ago

Star Suvarna Kannada: ಪ್ರೀತಿಯ ಸ್ವಾದವನ್ನು ಹೊತ್ತು ಬರುತ್ತಿದೆ ಈ ಹೊಸ ಕಥೆ! ʻಜಾನಕಿ ಸಂಸಾರʼ ಯಾವಾಗ?

T20 World Cup
ಕ್ರಿಕೆಟ್45 mins ago

T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

Health Tips
ಆರೋಗ್ಯ50 mins ago

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Gangster Goldy Brar
ವಿದೇಶ57 mins ago

Gangster Goldy Brar:”ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

prajawal revanna case driver karthik phone
ಕ್ರೈಂ60 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

Ilaiyaraaja Issues Legal Notice to Rajinikanth Coolie
ಕಾಲಿವುಡ್60 mins ago

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌