ವೈದ್ಯ ದರ್ಪಣ ಅಂಕಣ: ನೆತ್ತಿಯೊಳಗಿನ ವಿದ್ಯುತ್ ಮತ್ತು ಮಾನಸಿಕ ಸಂತೃಪ್ತಿ - Vistara News

ಅಂಕಣ

ವೈದ್ಯ ದರ್ಪಣ ಅಂಕಣ: ನೆತ್ತಿಯೊಳಗಿನ ವಿದ್ಯುತ್ ಮತ್ತು ಮಾನಸಿಕ ಸಂತೃಪ್ತಿ

ಭಯೋತ್ಪಾದಕರನ್ನು ಕಂಡರೆ ಅಂಜುವ ಆಕೆ ಮೆದುಳಿಗೆ ತುಸು ವಿದ್ಯುತ್‌ ಪ್ರಚೋದನೆ ನೀಡಿದಾಗ ಅವರನ್ನು ಗುಂಡಿಟ್ಟು ಕೊಂದಳು! ಇದು ಹೇಗೆ ಸಾಧ್ಯ? ಪ್ರಯತ್ನದ ಲವಲೇಶವೂ ಇಲ್ಲದೆ, ತಂತ್ರಜ್ಞಾನದ ನೆರವಿನಿಂದ ಯಾವುದೇ ಕೆಲಸದಲ್ಲಿ ಪರಿಣತಿ ಪಡೆಯಲು ಸಾಧ್ಯವೇ? ಇದು ತಂದೊಡ್ಡಬಹುದಾದ ನೈತಿಕ ಪ್ರಶ್ನೆಗಳೇನು?

VISTARANEWS.COM


on

9 volts nirvana
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
kiran column

ಮಾನಸಿಕ ಸಂತೃಪ್ತಿಯ ಸಂಶೋಧಕರಲ್ಲಿ ಒಂದು ನಗೆಯ ಮಾತಿದೆ. “ನೀವು ನಿಮ್ಮ ಗಂಡ/ಹೆಂಡತಿಯನ್ನು ಪ್ರೀತಿಸುತ್ತೀರಾ?” ಮತ್ತು “ನೀವು ನಿಮ್ಮ ವೃತ್ತಿಯನ್ನು ಪ್ರೀತಿಸುತ್ತೀರಾ?” ಎನ್ನುವ ಪ್ರಶ್ನೆಗಳ ಪೈಕಿ ಯಾವುದಕ್ಕೆ ಹೆಚ್ಚು “ಹೌದು” ಎನ್ನುವ ಉತ್ತರ ಬರುತ್ತದೆ ಎಂದು ಯಾರಿಗೂ ತಿಳಿಯದು. ಜೊತೆಗೆ ಈ ಎರಡೂ ಪ್ರಶ್ನೆಗಳು ಸಾಪೇಕ್ಷವಾಗಿ ವಿಲೋಮವಂತೆ! ಅಂದರೆ, ಮೊದಲ ಪ್ರಶ್ನೆಗೆ ಹೌದು/ಇಲ್ಲ ಎಂದವರು ಎರಡನೆಯ ಪ್ರಶ್ನೆಗೆ ಇಲ್ಲ/ಹೌದು ಎನ್ನುವರಂತೆ! “ನೀವು ಸೋಮವಾರದ ಮುಂಜಾನೆಗೆ ಕಾಯುತ್ತಿದ್ದೀರಿ ಎಂದರೆ, ಒಂದೋ ನೀವು ನಿಮ್ಮ ಕೆಲಸವನ್ನು ಹೆಚ್ಚು ಪ್ರೀತಿಸುತ್ತೀರಿ ಅಥವಾ ನಿಮ್ಮ ಮನೆಯಾಕೆ/ಮನೆಯಾತನನ್ನು ಹೆಚ್ಚು ದ್ವೇಷಿಸುತ್ತೀರಿ ಎಂದರ್ಥ” ಎನ್ನುವ ಚಮತ್ಕಾರದ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಒಟ್ಟಿನಲ್ಲಿ, ವೃತ್ತಿಯ ಮೇಲಿನ ಪ್ರೀತಿ ಎನ್ನುವುದು ಸುಲಭವಾಗಿ ಪರಿಹಾರವಾಗುವಂಥದ್ದಲ್ಲ.

ಕೆಲವೊಮ್ಮೆ ಇಷ್ಟವಿಲ್ಲದೆ ಮಾಡುವ ಕೆಲಸಗಳನ್ನು ಬಹಳ ಕಾಲ ಮಾಡುತ್ತಿದ್ದರೆ ಒಂದು ರೀತಿಯ ಆತ್ಮೀಯತೆ ಬಂದುಬಿಡುತ್ತದೆ. ಇದೇ ತತ್ತ್ವವನ್ನು ಆಧರಿಸಿ ಬಲವಂತದ ಮದುವೆಗಳನ್ನು ಮಾಡಿಸುತ್ತಿದ್ದ ಕಾಲವೂ ಇತ್ತು! “ಮಾಡುವ ವೃತ್ತಿಯ ಬಗ್ಗೆ ಪ್ರೀತಿ ಇದೆಯೇ?” ಎನ್ನುವ ಪ್ರಶ್ನೆಯನ್ನು “ನಿಮ್ಮ ವೃತ್ತಿಯ ಬಗ್ಗೆ ಸಂತೃಪ್ತಿ ಇದೆಯೇ?” ಎಂದು ಬದಲಾಯಿಸಿದರೆ ಧನಾತ್ಮಕ ಉತ್ತರಗಳ ಪರಿಮಾಣ ಮತ್ತಷ್ಟು ಕಡಿಮೆಯಾಗಬಹುದು. ಕೆಲಸದಲ್ಲಿ ಸಂತೃಪ್ತಿ ಎಂದರೇನು? ಅದು ಯಾವಾಗ ಬರುತ್ತದೆ? ಎನ್ನುವುದರ ಬಗ್ಗೆ ಸಂಶೋಧಕರು ಬಹಳ ಕಾಲದಿಂದ ಗಮನ ಹರಿಸಿದ್ದಾರೆ. ಇದರಲ್ಲಿ ಎರಡು ಮಾಪನಗಳಿವೆ.

9 volts nirvana
ಸಂತೃಪ್ತಿಯ ಫ್ಲೋ ತತ್ತ್ವವನ್ನು ವಿವರಿಸುವ ನಕ್ಷೆ. ಕೃಪೆ: ವಿಕಿಪೀಡಿಯಾ

ಒಂದು: ಮಾಡುವ ಕೆಲಸದಲ್ಲಿ ನಮ್ಮ ಪರಿಣತಿ. ಎರಡು: ಆ ಕೆಲಸ ಒಡ್ಡುವ ಸವಾಲುಗಳು. ಕೆಲಸದಲ್ಲಿ ಪರಿಣತಿ ಇರದಿದ್ದರೆ ಸವಾಲಿನ ಮಟ್ಟ ಹೆಚ್ಚಿದಂತೆ ಆತಂಕ ಹೆಚ್ಚುತ್ತದೆ. “ಇದನ್ನು ನಾನು ಮಾಡಲಾರೆ. ಆದರೆ, ಇದು ಮೇಲ್ವಿಚಾರಕರಿಗೆ ತಿಳಿದುಹೋದರೆ ಕೆಲಸ ಹೋಗಬಹುದು. ಹೀಗಾಗಿ, ನಾನು ಕೆಲಸದಿಂದ ತಪ್ಪಿಸಿಕೊಳ್ಳುವ ಉಪಾಯಗಳನ್ನು ಹುಡುಕಬೇಕು” ಎನ್ನುವ ಮನಸ್ಥಿತಿ ಬೆಳೆಯುತ್ತದೆ. ಅಂತೆಯೇ, ನಮ್ಮ ಪರಿಣತಿ ಬಹಳ ಚೆನ್ನಾಗಿದ್ದು, ನಾವು ಮಾಡಬೇಕಾದ ಕೆಲಸದಲ್ಲಿ ಸವಾಲುಗಳೇ ಇಲ್ಲವಾದರೆ ಒಂದು ರೀತಿಯ ಆಲಸ್ಯ ಬೆಳೆಯುತ್ತದೆ. ಹತ್ತು ಫೈಲುಗಳನ್ನು ಒಂದೇ ದಿನಕ್ಕೆ ವಿಲೇವಾರಿ ಮಾಡುವ ಸಾಮರ್ಥ್ಯದ ನೌಕರನಿಗೆ ದಿನಕ್ಕೊಂದೇ ಫೈಲು ನೀಡಿದರೆ ಆತ ಹತ್ತನೆಯ ದಿನದವರಗೆ ಸೋಮಾರಿಯಾಗಿ ಕಳೆದು, ಹತ್ತನೆಯ ದಿನ ಚಕಚಕನೆ ಹತ್ತೂ ಫೈಲುಗಳನ್ನು ಮುಗಿಸಿ ಒಗೆಯುತ್ತಾನೆ. ಇದು ಕೆಲಸಗಾರನ ಸಾಮರ್ಥ್ಯವನ್ನು ಸರಿಯಾಗಿ ಗ್ರಹಿಸಬಲ್ಲ ನಾಯಕರ ಅಭಾವದಿಂದ ಆಗುವ ಪ್ರಕ್ರಿಯೆ. ಈ ಎರಡೂ ಸಾಧ್ಯತೆಗಳ ಪರಮೋಚ್ಚ ಉದಾಹರಣೆಗಳು ನಮ್ಮ ದೇಶದಲ್ಲಿ ಒಂದೇ ಕಡೆ ಲಭಿಸುತ್ತವೆ. ಅದನ್ನು ನಾವೆಲ್ಲರೂ ಕಂಡಿರುತ್ತೇವೆ.

ಇದರ ಮತ್ತಷ್ಟು ಆಯಾಮಗಳನ್ನು ಗಮನಿಸಬಹುದು: ಕಡಿಮೆ ಸಾಮರ್ಥ್ಯದ ಕೆಲಸಗಾರನಿಗೆ ಕಡಿಮೆ ಸವಾಲಿನ ಕೆಲಸ ನೀಡಿದರೆ ಆತನಿಗೆ ನಿರ್ಲಕ್ಷ್ಯ ಧೋರಣೆ ಬೆಳೆಯುತ್ತದೆ. ಸವಾಲಿನ ಮಟ್ಟ ಒಂದೆರಡು ಇಂಚು ಬೆಳೆದರೂ ಆತ ಚಿಂತೆಗೊಳಗಾಗುತ್ತಾನೆ; ಇತರರ ಸಹಾಯಕ್ಕೆ ಹಂಬಲಿಸುತ್ತಾನೆ. ತಕ್ಕಮಟ್ಟಿನ ಸಾಮರ್ಥ್ಯದ ವ್ಯಕ್ತಿಗೆ ಕಡಿಮೆ ಸವಾಲಿನ ಕೆಲಸ ಬೋರು ಹೊಡೆಸುತ್ತದೆ. ಆದರೆ, ಅದೇ ವ್ಯಕ್ತಿಗೆ ಹೆಚ್ಚು ಸವಾಲಿನ ಕೆಲಸ ನೀಡಿದರೆ ಆತನ ಮನಸ್ಥಿತಿಯನ್ನು ಉತ್ತೇಜಿಸಿದಂತಾಗುತ್ತದೆ. ಉನ್ನತ ಸಾಮರ್ಥ್ಯದ ವ್ಯಕ್ತಿ ಮಧ್ಯಮ ಸವಾಲಿನ ಕೆಲಸವನ್ನು ಬಹುಬೇಗ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಾನೆ.

ಈ ಸಮೀಕರಣದ ಅಂತಿಮ ಆಯಾಮ ಉನ್ನತ ಸಾಮರ್ಥ್ಯದ ವ್ಯಕ್ತಿಗೆ ಹೆಚ್ಚಿನ ಸವಾಲಿನ ಕೆಲಸ ನೀಡುವುದು. ಜಗತ್ತಿನ ಸಾಧಕರು ಇದೇ ಗುಂಪಿಗೆ ಸೇರಿದವರು. ತನ್ನ ಸಾಮರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಬಲ್ಲ ಸವಾಲಿಗೆ ಆತ ಯಾವಾಗಲೂ ಹಾತೊರೆಯುತ್ತಾನೆ. ಅದನ್ನು ಸಶಕ್ತವಾಗಿ ನಿರ್ವಹಿಸಲು ತನ್ನ ಶಕ್ತಿಯನ್ನು ಪಣಕ್ಕಿಡುತ್ತಾನೆ. ಸಮಯದ ಪರಿವೆಯಿಲ್ಲದೆ ಆ ಕೆಲಸದಲ್ಲಿ ನೈಪುಣ್ಯ ಸಾಧಿಸುತ್ತಾನೆ. ಒಂದು ವಿಧದಲ್ಲಿ ಆತನ ಮಾನಸಿಕತೆ ಕಠಿಣ ಕೆಲಸದ ಜೊತೆ ಸಮನ್ವಯವಾಗುತ್ತದೆ. ಅದನ್ನು ಮಾಡುತ್ತಾ ಹೋದಂತೆ ಅಸಾಧಾರಣ ಸಂತೃಪ್ತಿ ಆವರಿಸುತ್ತದೆ. ಮನಃಶಾಸ್ತ್ರಜ್ಞರು ಇಂತಹ ಮನಸ್ಥಿತಿಯನ್ನು “ಫ್ಲೋ” (Flow) ಎಂದು ಕರೆಯುತ್ತಾರೆ. ತನ್ನ ಕೆಲಸವನ್ನು ಪ್ರೀತಿಸುವ, ಅದರಲ್ಲಿ ಸಂತೃಪ್ತಿ ಕಾಣುವ ಇಂತಹ ಮನಸ್ಥಿತಿ ಪ್ರತಿಯೊಬ್ಬ ಸಾಮರ್ಥ್ಯಶಾಲಿಯ ಕನಸಾದರೂ, ಅದನ್ನು ಸಾಧಿಸಬಲ್ಲ ಅವಕಾಶ, ಅನುಕೂಲ, ಅದೃಷ್ಟ ಇರುವವರು ಕಡಿಮೆಯೇ. ಪ್ರಪಂಚದ ದಿಕ್ಕನ್ನು ಬದಲಿಸಿದ ಬಹುತೇಕ ಮಂದಿ ಈ ಗುಂಪಿನವರು.

ಆದರೆ ಈ ಗುಂಪಿಗೆ ಸೇರುವುದು ಸುಲಭವಲ್ಲ. ಇದೊಂದು ರೀತಿಯ ತಪಸ್ಸಿನಂತೆ. ಜಗದ್ವಿಖ್ಯಾತ ಸಂಗೀತಕಾರ ಬಿಥೋವನ್ ಕುರಿತಾದ ಒಂದು ಪ್ರಸಂಗವಿದೆ. ಇಳಿವಯಸ್ಸಿನಲ್ಲಿ ಆತನಿಗೆ ಕಿವಿ ಕೇಳುತ್ತಿರಲಿಲ್ಲ. ಅದು ಆತನ ಸಂಗೀತ ಸಾಧನೆಗೆ ಅಡ್ಡಿಯಾಗಲಿಲ್ಲ. ಒಮ್ಮೆ ಆತನ ಕಛೇರಿಯ ನಂತರ ತುಸು ವಯಸ್ಸಾದ ಹೆಂಗಸೊಬ್ಬರು ಆತನನ್ನು ಅಭಿನಂದಿಸುತ್ತಾ “ನಿಮ್ಮಷ್ಟು ನೈಪುಣ್ಯವನ್ನು ಆ ಭಗವಂತ ನನಗೆ ಕೊಟ್ಟಿದ್ದರೆ…” ಎಂದರಂತೆ. ತನ್ನ ಸಹಾಯಕನಿಂದ ಸನ್ನೆಗಳ ಮೂಲಕ ಆಕೆಯ ಮಾತನ್ನು ಅರಿತ ಬಿಥೋವನ್ ಆಕೆಗೆ ಉತ್ತರಿಸಿದರಂತೆ: “ಅಂತಹ ಸಾಮರ್ಥ್ಯವನ್ನು ಭಗವಂತನಿಂದ ನೀವು ಕೂಡ ಪಡೆಯಬಹುದು. ಹೆಚ್ಚೇನಿಲ್ಲ – ದಿನಕ್ಕೆ ಹದಿನಾಲ್ಕು ಗಂಟೆಗಳಂತೆ ಒಂದು ದಿನವೂ ಬಿಡದೆ ಮೂವತ್ತು ವರ್ಷಗಳ ಕಾಲ ಅಭ್ಯಾಸ ಮಾಡಿದರೆ ಸಾಕು; ಭಗವಂತ ಇಷ್ಟು ನೈಪುಣ್ಯವನ್ನು ಮುಲಾಜಿಲ್ಲದೆ ಪ್ರಸಾದಿಸುತ್ತಾನೆ”. ಸಾಧಕರ ಅಂತಿಮ ಪ್ರದರ್ಶನವನ್ನು ನೋಡುವವರಿಗೆ ಅದರ ಹಿಂದಿನ ನಿರಂತರ ಅಭ್ಯಾಸದ ಅಂದಾಜು ಮೂಡುವುದಿಲ್ಲ. “ಯಾವುದೇ ಕೆಲಸ ನೋಡುಗರಿಗೆ ಸುಲಭ ಎನಿಸಿದರೆ ಆ ಕೆಲಸ ಸುಲಭ ಎಂತಲ್ಲ. ಬದಲಿಗೆ ಅದನ್ನು ಮಾಡುತ್ತಿರುವ ವ್ಯಕ್ತಿ ಅತ್ಯಂತ ಸಮರ್ಥ ಎಂದರ್ಥ” ಎನ್ನುವ ಮಾತಿದೆ. ಶಿಲ್ಪಕಲೆಯೋ, ಶಸ್ತ್ರಚಿಕಿತ್ಸೆಯೋ, ರೇಸ್ ವಾಹನ ಚಾಲನೆಯೋ, ಚಿತ್ರಕಲೆಯೋ, ಪ್ರಯೋಗವೋ – ಯಾವುದನ್ನಾದರೂ ದಣಿವರಿಯದೆ, ಅತೀವ ಆನಂದದಿಂದ ಮಾಡುವ ವ್ಯಕ್ತಿ ಅದರಲ್ಲಿ ತನ್ನ “ಫ್ಲೋ” ಎನ್ನುವ ಸಂತೃಪ್ತಿಯನ್ನು ಕಂಡುಕೊಂಡಿರುತ್ತಾನೆ.

ಈಗ ಸ್ವಲ್ಪ ಕಾಲದ ಮಟ್ಟಿಗೆ ಬೇರೊಂದು ಪ್ರದೇಶಕ್ಕೆ ಹೋಗೋಣ. ಉಸುಕಿನಿಂದ ತುಂಬಿದ ಇಪ್ಪತ್ತು ಗೋಣಿಚೀಲಗಳು. ಅದರ ಹಿಂದೆ ನಿಂತಿರುವ, ಹುಲ್ಲೆಯಂತೆ ನಡುಗುತ್ತಿರುವ ಮೂವತ್ತರ ಹರೆಯದ ಓರ್ವ ಹೆಣ್ಣುಮಗಳು. ಆಕೆಯ ಕೈಲೊಂದು ಆಟೊಮ್ಯಾಟಿಕ್ ಬಂದೂಕು. ಚೀಲಗಳ ಮತ್ತೊಂದು ಬದಿ ಜೋರಾಗಿ ಚೀರುತ್ತಾ ಈಕೆಯೆಡೆಗೆ ಮುನ್ನುಗ್ಗುತ್ತಿರುವ ಇಪ್ಪತ್ತು ಮಂದಿ ಮುಸುಕುಧಾರಿ ಆತ್ಮಾಹುತಿ ಭಯೋತ್ಪಾದಕರು. ಅವರ ಸೊಂಟದಲ್ಲೊಂದು ಬಾಂಬ್; ಕೈಯಲ್ಲಿ ಬಂದೂಕು. ಇವರಲ್ಲಿ ಒಬ್ಬರನ್ನು ಆಕೆ ಗುಂಡು ಹೊಡೆದು ಬೀಳಿಸಿದರೆ ಮೂವರು ಮುನ್ನುಗ್ಗುವರು. ಆಕೆಯ ಹಣೆಯಲ್ಲಿ ಬೆವರ ಸಾಲು; ಕೈಲಿ ನಡುಕ. ಈ ಆತಂಕದಿಂದ ಆಗಾಗ ಜ್ಯಾಮ್ ಆಗುತ್ತಿರುವ ಬಂದೂಕಿನ ಟ್ರಿಗ್ಗರ್. ಬಂದೂಕು ಚಲಾಯಿಸುವ ತನ್ನ ವೇಗ ಸಾಲದಾಗಿದೆ ಎನ್ನುವ ಭೀತಿ ಆಕೆಯದ್ದು; ನೀಡಿದ ಕೆಲಸ ನಿಭಾಯಿಸಲು ತಾನು ಅಸಮರ್ಥಳು ಎನ್ನುವ ಭಾವ .ಎಲ್ಲ ಮುಗಿದುಹೋಯಿತು ಎನ್ನುವ ಮನಸ್ಥಿತಿ.

ಈ ವಿಷಮ ಪರಿಸ್ಥಿತಿಯಲ್ಲಿ ಇದ್ದ ಒಂದೇ ಒಂದು ಸಮಾಧಾನ ಎಂದರೆ ಇದೊಂದು ವಿಡಿಯೋ ಆಟ ಎನ್ನುವುದು ಮಾತ್ರ. ಆಕೆ ಉಸುಕಿನ ಚೀಲಗಳ ಹಿಂದೆ ಇದ್ದದ್ದು ನಿಜ. ಆದರೆ ಆಕೆಯ ಕೈಲಿದ್ದದ್ದು ಆಟಿಕೆಯ ಬಂದೂಕು. ಉಳಿದೆಲ್ಲವೂ ಆ ಚೀಲಗಳ ಮತ್ತೊಂದು ಬದಿ ಇದ್ದ ದೊಡ್ಡ ಪರದೆಯ ಮೇಲೆ ನೈಜತೆಗೆ ಸವಾಲೊಡ್ಡುವಂತೆ ಮೂಡುತ್ತಿದ್ದ ಬಿಂಬಗಳು. ಇದು ನಡೆಯುತ್ತಿದ್ದುದು ಕ್ಯಾಲಿಫೋರ್ನಿಯಾದ ಸೈನಿಕ ತರಬೇತಿ ಕೇಂದ್ರದ ಮಿಲಿಟರಿ ಪ್ರಯೋಗಾಲಯದಲ್ಲಿ. ಶಾರ್ಪ್ ಶೂಟರ್‌ಗಳ ತರಬೇತಿಗೆ ಬಳಸುವ ಪ್ರಯೋಗದ ಒಂದು ಭಾಗವಾಗಿ ಜನಪ್ರಿಯ ವಿಜ್ಞಾನದ ಲೇಖಕಿಯಾದ ಆಕೆ ಪ್ರಯೋಗಾಲಯಕ್ಕೆ ಭೇಟಿ ನೀಡಿದ್ದರು. ಇಪ್ಪತ್ತು ನಿಮಿಷಗಳ ಕಾಲ ನಡೆದ ಪ್ರಯೋಗದ ಭಾಗವಾಗಿ ಆಕೆ ಉಸುಕಿನ ಚೀಲಗಳ ಹಿಂದೆ ಬಂದೂಕು ಹಿಡಿದು ನಿಂತಿದ್ದರು. ಆ ಇಪ್ಪತ್ತು ನಿಮಿಷಗಳ ಉಸಿರುಗಟ್ಟಿಸುವ ಅವಧಿಯ ನಂತರ ಆಕೆ ಸಾಗಿದ್ದು ತನ್ನ ಜೀವನದಲ್ಲಿ ಮರೆಯಲಾಗದ ಒಂದು ಅನುಭವದ ಮೂಲಕ.

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ | ನಮ್ಮ ಶರೀರವನ್ನು ನಿಯಂತ್ರಿಸುವವರು ಯಾರು?

ಮಿಲಿಟರಿ ತರಬೇತಿ ಕೇಂದ್ರದ ಸಂಶೋಧಕರು ಆಕೆಯ ತಲೆಗೆ ಕೆಲವು ವಿದ್ಯುತ್ ವಾಹಕಗಳನ್ನು ಒಳಗೊಂಡ ಹೆಲ್ಮೆಟ್ ಮಾದರಿಯ ತಲೆಗವಚವನ್ನು ಜೋಡಿಸಿದರು. ಇದಕ್ಕೆ 9 ವೋಲ್ಟಿನ ಪುಟ್ಟ ಬ್ಯಾಟರಿ ಸಂಪರ್ಕ ನೀಡಿದರು. ಇದರಿಂದ ಅಲ್ಪ ಪ್ರಮಾಣದ ವಿದ್ಯುತ್ ನೇರವಾಗಿ ಆಕೆಯ ಮಿದುಳಿನ ಕೆಲವು ನಿರ್ದಿಷ್ಟವಾದ ಭಾಗಗಳನ್ನು ಪ್ರಚೋದಿಸುತ್ತಿತ್ತು. ಮತ್ತೊಮ್ಮೆ ಬಂದೂಕು ಹಿಡಿದ ಆಕೆ ಉಸುಕಿನ ಚೀಲಗಳ ಹಿಂದೆ ನಿಂತರು. ಮುಂದಿನ ಇಪ್ಪತ್ತು ನಿಮಿಷಗಳ ಕಾಲ ಆಕೆ ಬೇರೆಯೇ ವ್ಯಕ್ತಿಯಾದರು. ಆಕೆಯ ಬಂದೂಕಿನ ಗುರಿ ಒಮ್ಮೆಯೂ ತಪ್ಪಲಿಲ್ಲ. ಸರಣಿಯಲ್ಲಿ ಆತ್ಮಾಹುತಿ ಭಯೋತ್ಪಾದಕರು ಆಕೆಯೆಡೆಗೆ ನುಗ್ಗಿ ಬರುತ್ತಿದ್ದರೂ ಆಕೆ ಒಂದಿನಿತೂ ಅಳುಕಲಿಲ್ಲ. ಭೀತಿ ಎಂಬುದು ಆಕೆಯ ಅನುಭವಕ್ಕೂ ಬರಲಿಲ್ಲ. ಭಯವಿಲ್ಲ; ಆತ್ಮಶಂಕೆಯಿಲ್ಲ; ಗೊಂದಲವಿಲ್ಲ. ಆಕೆಯ ಬಂದೂಕಿನ ಪ್ರತಿಯೊಂದು ನಿಶಾನೆಯೂ ನಿಶಿತ, ನಿಖರ. ದಶಕಗಳ ನಿರಂತರ ಪ್ರಯತ್ನಗಳಿಂದ ಪಳಗಿದ ಗುರಿಕಾರನ ರೀತಿಯಲ್ಲಿ ಸಂದರ್ಭವನ್ನು ಶಾಂತವಾಗಿ, ಸಂಪೂರ್ಣ ನಿಯಂತ್ರಣದಿಂದ ನಿಭಾಯಿಸಿದರು. ಇಪ್ಪತ್ತು ನಿಮಿಷಗಳ ಅವಧಿ ಮುಗಿದಾಗ ಆಕೆಯ ಎದುರು ಒಬ್ಬ ಭಯೋತ್ಪಾದಕನೂ ಉಳಿದಿರಲಿಲ್ಲ. ತಾನು ಮಾಡುತ್ತಿರುವ ಕೆಲಸದಲ್ಲಿ ಬಹಳ ಉನ್ನತ ಮಟ್ಟದ ಸಾಮರ್ಥ್ಯ ಆ ಇಪ್ಪತ್ತು ನಿಮಿಷಗಳ ಕಾಲ ಆಕೆಯದಾಗಿತ್ತು. ಅಷ್ಟೂ ವೇಳೆಯೂ ಅತ್ಯಂತ ಕಠಿಣವಾದ ಕೆಲಸವನ್ನು ಆಕೆ ನಿಷ್ಪ್ರಯಾಸದಿಂದ ಮಾಡಿ ಸಂತೃಪ್ತಿಯ “ಫ್ಲೋ” ಅನುಭವಿಸಿದರು. ಆಕೆಯ ತಲೆಯಿಂದ ವಿದ್ಯುತ್ ವಾಹಕಗಳನ್ನು ತೆಗೆದುಹಾಕಿದ ಕೂಡಲೇ ಮೊದಲಿನ ಬೆದರಿದ ಹುಲ್ಲೆಯಾದರು.

ತನ್ನ ಈ ಅನುಭವವನ್ನು ಆಕೆ ನ್ಯೂ ಸೈಂಟಿಸ್ಟ್ ಪತ್ರಿಕೆಯಲ್ಲಿ ಪ್ರಕಟಿಸಿದಾಗ ಒಂದು ಸಂಚಲನವೇ ಮೂಡಿತು. ಯುವಲ್ ನೋಹ್ ಹರಾರಿಯಂತಹ ಪ್ರಸಿದ್ಧ ಲೇಖಕರು ಆಕೆಯ ಅನುಭವದ ಬಗ್ಗೆ ತಮ್ಮ ಪುಸ್ತಕದಲ್ಲಿ ಬರೆದರು. ತನ್ನ ಈ ಅನುಭವವನ್ನು ಆಕೆ The nine-volt Nirvana (9 ವೋಲ್ಟ್ ನಿರ್ವಾಣ) ಎಂದು ಬಣ್ಣಿಸಿದರು. ಯಾವ ಸಂತೃಪ್ತಿಯ ಸಾಧನೆಗಾಗಿ ದಶಕಗಳ ನಿರಂತರ ಶ್ರಮ ಹಿಡಿಯುತ್ತದೆಯೋ ಅದನ್ನು ತಲೆಗೆ ಹಚ್ಚಿದ ವಿದ್ಯುತ್ ವಾಹಕಗಳ ಹೆಲ್ಮೆಟ್ ಮತ್ತು ಪುಟ್ಟ ಬ್ಯಾಟರಿಗಳು ಮಾಡಿದ್ದವು. ಆ ಸಮಯದಲ್ಲಿ ಆಕೆಗೆ ಯಾವ ಅಡ್ಡ ಪರಿಣಾಮಗಳೂ ಆಗಲಿಲ್ಲ. ಆ ಸಂತೃಪ್ತಿಯ ಗುಂಗಿನಿಂದ ಹೊರಬರಲು ಆಕೆಗೆ ಮೂರು ದಿನಗಳು ಹಿಡಿದವು. “ಈ ಅನುಭವ ಮತ್ತೊಮ್ಮೆ ಆಗಲಿ” ಎಂದು ಆಕೆಯ ಮನಸ್ಸು ಹಾತೊರೆಯಹತ್ತಿತು. ವಿದ್ಯುತ್ ವಾಹಕಗಳ ಹೆಲ್ಮೆಟ್ ಧರಿಸಿದ ಆ ಇಪ್ಪತ್ತು ನಿಮಿಷಗಳ ಕಾಲ ಆಕೆಗೆ ಆದದ್ದೇನು? ಆಕೆಯ ಮನದಲ್ಲಿ ಈ ಮೊದಲೇ ಮನೆಮಾಡಿದ್ದ ಸೋಲಿನ ಭೀತಿ, ಆತ್ಮಶಂಕೆಗಳಂತಹ ಹಿಂಜರಿತಗಳು ಇಲ್ಲವಾದವೇ? ಅಥವಾ ಆಕೆಯ ಮಿದುಳು ಈ ಮೊದಲು ಎಂದೂ ಅರಿಯದ ಹೊಸ ಬಗೆಯ ಕಲಿಕೆಯನ್ನು ಅನುಭವಿಸಿತೇ? ಈ ಅನುಭವ ಆಕೆಯಿಂದ ಹಳೆಯ ಏನನ್ನಾದರೂ ಕಳೆಯಿತೇ ಅಥವಾ ಹೊಸದಾದ ಏನನ್ನಾದರೂ ನೀಡಿತೇ?

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ | ಮನುಷ್ಯನ ಆಯಸ್ಸು ಎಷ್ಟು?

ಈ ಪ್ರಶ್ನೆಗಳ ಉತ್ತರ ಸುಲಭವಲ್ಲ. ಪರಿಣತಿ ಎಂದರೇನು? ನಿರಂತರ ಪ್ರಯತ್ನಗಳಿಂದ ನಾವು ನಮ್ಮ ಮಿದುಳಿನಲ್ಲಿ ವಿವಿಧ ನರಕೋಶಗಳ ನಡುವೆ ಶಕ್ತಿಶಾಲಿಯಾದ ಸಂಪರ್ಕಗಳನ್ನು ನಿರ್ಮಿಸಿಕೊಳ್ಳುತ್ತೇವೆ. ಅದು ಸಂಗೀತಗಾರನೊಬ್ಬನ ಹಾಡುಗಾರಿಕೆಯಿರಬಹುದು; ವಾದ್ಯವೊಂದರ ಮೇಲಿನ ನೈಪುಣ್ಯವಿರಬಹುದು; ವಾಹನದ ಕ್ಲಿಷ್ಟಕರ ರಿಪೇರಿಯ ಸೂಕ್ಷ್ಮ ಹಂತಗಳಿರಬಹುದು; ಕಠಿಣವಾದ ಶಸ್ತ್ರಚಿಕಿತ್ಸೆಯ ಹತ್ತಾರು ಅಂಶಗಳಿರಬಹುದು; ಕುಸುರಿ ಕೆಲಸ ಮಾಡುವ ಅಕ್ಕಸಾಲಿಯ ಪರಿಶ್ರಮವಿರಬಹುದು – ಪ್ರತಿಬಾರಿಯ ಸಾಧನೆ, ಅನುಭವದ ಕಲಿಕೆ, ತಪ್ಪುಗಳನ್ನು ಒಪ್ಪಗೊಳಿಸುವುದು, ಹಿಂದಿನ ಬಾರಿಯ ಸಾಫಲ್ಯವನ್ನು ಮತ್ತಷ್ಟು ಚಂದಗೊಳಿಸುವುದು, ಒಂದು ಹಂತದ ಪ್ರಾವೀಣ್ಯ ಪಡೆದ ಮೇಲೆ ಆ ಕೆಲಸಕ್ಕೆ ಮತ್ತೊಂದು ನವೀನ ಆಯಾಮವನ್ನು ಜೋಡಿಸುವುದು – ಹೀಗೆ ಪ್ರತಿಬಾರಿಯೂ ಆ ಕೆಲಸ ಮಾಡುವಾಗ ಮಿದುಳು ಹೊಸಹೊಸ ನರಕೋಶಗಳನ್ನು ಜೋಡಿಸುತ್ತಾ, ಹಿಂದೆಂದೂ ಆಗಿಲ್ಲದ ಸಂಪರ್ಕಗಳನ್ನು ನಿರ್ಮಿಸುತ್ತದೆ. ಪ್ರತಿ ಬಾರಿ ಈ ಸಾಧನೆಯಲ್ಲಿ ಯಶಸ್ಸು ಕಂಡಾಗ ಆಗುವ ಆನಂದದ ಭಾವ, ನಮಗೆ ಸಂತಸವನ್ನು ಉಂಟುಮಾಡುವ ಮಿದುಳಿನ ಭಾಗದ ಜೊತೆಗೆ ಈ ಬಲಶಾಲಿ ಸಂಪರ್ಕಗಳನ್ನು ಸಮನ್ವಯಗೊಳಿಸಿ ಬೆಸೆಯುತ್ತದೆ. ಸಾಧನೆ ಕಠಿಣವಾದಷ್ಟೂ ಸಂತಸದ ಪ್ರಮಾಣ ಹೆಚ್ಚುತ್ತದೆ. ಇದು ಒಂದು ಹಂತವನ್ನು ಮೀರಿದಾಗ ಆನಂದದ ಭಾವ ಸ್ಥಾಯಿಯಾಗುತ್ತದೆ. ಇದನ್ನೇ ಸಂತೃಪ್ತಿಯ “ಫ್ಲೋ” ಎಂದು ಬಣ್ಣಿಸುತ್ತಾರೆ. ಅಸಲಿಗೆ ಈ ಫ್ಲೋ ಎನ್ನುವುದು ಮಿದುಳಿನ ವಿವಿಧ ನರಕೋಶಗಳ ನಡುವಿನ ಸಂಪರ್ಕಗಳ ಮೂಲಕ ಹರಿಯುವ ಸಣ್ಣ ಪ್ರಮಾಣದ ವಿದ್ಯುದಾವೇಶ. ತಲೆಯ ಮೇಲ್ಭಾಗದಲ್ಲಿ ಅಂಟಿಸಿದ ವಿದ್ಯುತ್ ವಾಹಕಗಳ ಹೆಲ್ಮೆಟ್ ಮೂಲಕ ಮಿದುಳಿನ ನರಗಳಿಗೆ ಕೃತಕ ಸಂಪರ್ಕ ಕಲ್ಪಿಸಿ ನೀಡಿದ ವಿದ್ಯುದಾವೇಶವೂ ಸಾಧಿಸಿದ್ದು ಇದನ್ನೇ.

ಇದರ ದೂರಗಾಮಿ ಪರಿಣಾಮಗಳೇನು? ಪ್ರಯತ್ನದ ಲವಲೇಶವೂ ಇಲ್ಲದೆ ಪರಿಣತ ಸಾಧಕರಾಗುವ ಭಾಗ್ಯವನ್ನು ಯಾರು ತಾನೇ ನಿರಾಕರಿಸಬಲ್ಲರು? ಆಧುನಿಕ ತಂತ್ರಜ್ಞಾನಗಳನ್ನು ಬಳಸಿ, ಮಿದುಳಿನ ಕೆಲಸಗಳನ್ನು ಚೆನ್ನಾಗಿ ಅರಿತುಕೊಂಡು, ಸರಿಯಾದ ಹಾದಿಯಲ್ಲಿ ವಿದ್ಯುದಾವೇಶ ಕಲ್ಪಿಸಿ, ಹಾದಿಬದಿಯ ಯಾರನ್ನು ಬೇಕಾದರೂ ಸೂಪರ್ ಮ್ಯಾನ್ ಮಾಡಬಲ್ಲ ವಿಧಾನಗಳು ಮನುಕುಲವನ್ನು ಸರಿಯಾದ ಹಾದಿಯಲ್ಲಿ ಒಯ್ಯಲು ಸಾಧ್ಯವೇ? ಇಂತಹ ಪ್ರಯೋಗಗಳು ಅಸಾಧುವಲ್ಲವೇ? ಇದು ಹೀಗೆಯೇ ಮುಂದುವರೆದರೆ ನಾಳೆ ಇಂತಹ ತಂತ್ರಜ್ಞಾನದ ಲಭ್ಯತೆ ಇಲ್ಲದ ಸಾಮಾನ್ಯರ ಪಾಡೇನು?

ಈ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯ ಸದ್ಯಕ್ಕಂತೂ ಕಂಡುಬಂದಿಲ್ಲ. ಆದರೆ ಎಂದಾದರೊಂದು ದಿನ ಇವು ನಮ್ಮ ಮುಂದೆ ರಾಕ್ಷಸಾಕಾರವಾಗಿ ನಿಲ್ಲುತ್ತವೆ. ಅಷ್ಟರೊಳಗೆ ಇದರ ಸಮ್ಯಕ್ ಉತ್ತರಗಳನ್ನು ನಾವು ಆಲೋಚಿಸಲೇಬೇಕು. ಪ್ರಗತಿಯ ನಾಗಾಲೋಟವನ್ನು ತಡೆಯುವುದು ಅಸಾಧ್ಯ. ಆದರೆ ಅದನ್ನು ಒಳ್ಳೆಯ ಹಾದಿಯಲ್ಲಿ ಬಳಸಿಕೊಳ್ಳಲು ಸರಿಯಾದ ನಿಯಮಗಳನ್ನು ರೂಪಿಸುವುದರಲ್ಲಿ ಮನುಕುಲದ ಭವಿಷ್ಯ ಅಡಗಿದೆ.

ಇದನ್ನೂ ಓದಿ: ವೈದ್ಯ ದರ್ಪಣ ಅಂಕಣ | ರೊಬೊಟ್ ಇಲಿಗಳು, ಕೃತಕ ಕಣ್ಣು, ಸಿಂಗ್ಯುಲಾರಿಟಿ ಇತ್ಯಾದಿ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Bhajanotsava
ಬೆಂಗಳೂರು1 hour ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ3 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ3 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ3 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ4 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ4 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ4 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ4 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ5 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ5 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌