ವಿಸ್ತಾರ ಅಂಕಣ: ಭಾರತದ ಆರ್ಥಿಕತೆ 3ನೇ ಸ್ಥಾನಕ್ಕೇರಲು ಕರ್ನಾಟಕದ ಕೊಡುಗೆ ಎಷ್ಟು ʼಗ್ಯಾರಂಟಿʼ? - Vistara News

ಅಂಕಣ

ವಿಸ್ತಾರ ಅಂಕಣ: ಭಾರತದ ಆರ್ಥಿಕತೆ 3ನೇ ಸ್ಥಾನಕ್ಕೇರಲು ಕರ್ನಾಟಕದ ಕೊಡುಗೆ ಎಷ್ಟು ʼಗ್ಯಾರಂಟಿʼ?

ಯುವ ಜನರಿಗೆ ಕೌಶಲ್ಯ ಕಲಿಸುವ, ಉದ್ಯಮಶೀಲತೆ (entrepreneurship) ಬೆಳೆಸುವ, ಹೆಚ್ಚೆಚ್ಚು ಜನರಿಗೆ ಕೆಲಸ ಕೊಡುವ ಸಾಮರ್ಥ್ಯವನ್ನು ಬೆಳೆಸಿದರೆ ಕರ್ನಾಟಕದ ಆರ್ಥಿಕತೆ ಸಬಲವಾಗುತ್ತದೆಯೇ ವಿನಃ ಕೆಲಸ ಕೊಡದೆ ಮನೆಯಲ್ಲಿ ಕೂರಿಸಿ ತಿಂಗಳಿಗೆ ಮೂರು ಸಾವಿರ ರೂ. ನೀಡುವುದರಿಂದಲ್ಲ.

VISTARANEWS.COM


on

jai hind
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

“ಭಾರತದ ವಿಕಾಸ ಯಾತ್ರೆಯನ್ನು (India development) ಯಾರೂ ತಡೆಯಲು ಸಾಧ್ಯವಿಲ್ಲ. ನಮ್ಮ ಸರ್ಕಾರ ಆಡಳಿತ ಆರಂಭಿಸಿದಾಗ 2014ರಲ್ಲಿ 10ನೇ ಪ್ರಬಲ ಆರ್ಥಿಕತೆಯಾಗಿತ್ತು ಭಾರತ. ನಮ್ಮ ಮೊದಲ ಅವಧಿಯಲ್ಲಿ ಐದನೇ ಅತಿ ದೊಡ್ಡ ಆರ್ಥಿಕತೆ ಆಯಿತು. ನಮ್ಮ ಮೂರನೇ ಅವಧಿಯಲ್ಲಿ ಮೂರನೇ ಅತಿ ದೊಡ್ಡ ಆರ್ಥಿಕತೆ (3rd economy) ಆಗುತ್ತದೆ”. ಇದು ಜುಲೈ 26ರಂದು ನವದೆಹಲಿಯಲ್ಲಿ ಬೃಹತ್ ಗಾತ್ರದ “ಭಾರತ ಮಂಟಪಂ” ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ ಮಾತಿದು.

ಮೋದಿಯವರಷ್ಟೆ ಅಲ್ಲ, 2027ರ ವೇಳೆಗೆ ಭಾರತ ಮೂರನೆ ಅತಿ ದೊಡ್ಡ ಆರ್ಥಿಕತೆ (biggest economy) ಆಗುತ್ತದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ. 2028ಕ್ಕೆ ಭಾರತದ ಮೂರನೇ ಅತಿ ದೊಡ್ಡ ಆರ್ಥಿಕತೆ ಆಗುತ್ತದೆ ಎಂದು ಕಳೆದ ವರ್ಷವೇ ಎಸ್‌ಬಿಐ ಸಮೀಕ್ಷೆಯೂ ಹೇಳಿದೆ. ಅಷ್ಟೆಅಲ್ಲ, 2075ರ ವೇಳೆಗೆ ಭಾರತವು ಅಮೆರಿಕವನ್ನೂ ಹಿಂದಿಕ್ಕಿ ಎರಡನೆಯ ಅತಿ ದೊಡ್ಡ ಆರ್ಥಿಕತೆ ಆಗುತ್ತದೆ ಎಂದೂ ವರದಿಗಳು ಹೇಳುತ್ತಿವೆ. ಈ ಮಾರ್ಗದಲ್ಲಿ ಜಪಾನ್ ಹಾಗೂ ಜರ್ಮನಿಯನ್ನೂ ಭಾರತ ಹಿಂದಿಕ್ಕುತ್ತದೆ. 2014ರಿಂದೀಚೆಗೆ ಮೋದಿ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣೆಗಳ ಪರಿಣಾಮ ಈ ಬೆಳವಣಿಗೆ ಸಾಧ್ಯ ಎಂದು ವರದಿಗಳು ಹೇಳುತ್ತವೆ. ಹಿಂದಿನ ಸರ್ಕಾರಗಳು ಹೇಗೆ ನಿರ್ಧಾರ ಕೈಗೊಂಡವು, ವಿದೇಶಿ ಹೂಡಿಕೆಯನ್ನು (foreign investment) ಹೇಗೆ ಆಕರ್ಷಿಸಿದವು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಾವ ನಿರ್ಧಾರ ಕೈಗೊಂಡಿತು ಎಂಬ ಇತ್ಯಾದಿ ವಿಚಾರಗಳನ್ನು ಆರ್ಥಿಕ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ. ನಾವು ಆರ್ಥಿಕ ದೃಷ್ಟಿಕೋನದ ಬದಲಿಗೆ ಸಾಮಾನ್ಯ ಸಾಮಾಜಿಕ ಸನ್ನಿವೇಶದಲ್ಲಿ ವಿಚಾರ ನೋಡೋಣ.

ಕೋವಿಡ್ ಸಂದರ್ಭದಲ್ಲಿ ಒಂದು ವೇಳೆ ನಮ್ಮ ದೇಶದಲ್ಲಿ ಯುಪಿಐ ವಹಿವಾಟು (UPI transactions) ವಿಕಸಿತ ಆಗಿಲ್ಲದಿದ್ದರೆ ಏನಾಗುತ್ತಿತ್ತು? ಇಷ್ಟು ಹೊತ್ತಿಗೆ ಮೊಬೈಲ್ ಇಂಟರ್ನೆಟ್ ಹಳ್ಳಿ ಹಳ್ಳಿಗೆ ತಲುಪಿಲ್ಲದಿದ್ದರೆ ಏನಾಗುತ್ತಿತ್ತು? ಈ ಸಮಯದಲ್ಲಿ ದೇಶದ ಜನರಿಗೆ ನೀಡಲು ಅಗತ್ಯವಾದ ಆಹಾರ ಧಾನ್ಯದ ಸಂಗ್ರಹ ಇಲ್ಲದಿದ್ದರೆ ಏನಾಗುತ್ತಿತ್ತು? ಫೋನ್ ಮೂಲಕ ಬುಕ್ ಮಾಡಿದ ಉತ್ಪನ್ನಗಳು ಮನೆಬಾಗಿಲಿಗೆ ಬರುವ ಇ ಕಾಮರ್ಸ್ ವ್ಯಾಪಕತೆ ಪಡೆಯದೇ ಇದ್ದಿದ್ದರೆ ಏನಾಗುತ್ತಿತ್ತು? ಇಂತಹ ಪ್ರಶ್ನೆಗಳನ್ನು ನಾವು ಕೇಳಿಕೊಂಡಿದ್ದೇವೆಯೇ? ಇವೆಲ್ಲವೂ ಆಗಿಹೋಗಿವೆಯಲ್ಲ? ಈಗೇಕೆ ಪ್ರಶ್ನಾರ್ಥಕ, ಊಹಾತ್ಮಕ ಮಾತುಗಳು ಎಂದು ಯಾರಾದರೂ ಕೇಳಬಹುದು.

ಇಂತಹ ಪ್ರಶ್ನೆಗಳನ್ನು ಕೇಳಿಕೊಂಡರೆ ನಾವು ಹೇಗೆ ಕೋವಿಡ್ ಸಮಯದಲ್ಲಿ ಅದನ್ನು ಎದುರಿಸಿ ಹೊರಬಂದೆವು ಎನ್ನುವುದು ತಿಳಿಯುತ್ತದೆ. ಒಬ್ಬರ ಕೈಯಿಂದ ಇನ್ನೊಬ್ಬರು ಏನನ್ನೂ ಪಡೆದುಕೊಳ್ಳುವುದೇ ಅಪಾಯ ಎಂದಿದ್ದ ಸಮಯದಲ್ಲಿ ಆನ್ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಅನುಕೂಲ ಜನರಿಗೆ ಒದಗಿತ್ತು. ಪ್ರಧಾನಿ ನರೇಂದ್ರ ಮೋದಿಯವರಿಗೆ ತಂತ್ರಜ್ಞಾನದ ಕುರಿತು ಅಪಾರ ಆಸಕ್ತಿ. ಹೀಗಾಗಿಯೇ ದೇಶದಲ್ಲಿ ಮೊಬೈಲ್ ಬ್ಯಾಂಕಿಂಗ್, ಯುಪಿಐನಂತಹ ಉಪಕ್ರಮಗಳಿಂದಾಗಿ ಡಿಜಿಟಲ್ ಆರ್ಥಿಕತೆಯತ್ತ ದೇಶ ದಾಪುಗಾಲು ಹಾಕಿತು. ಡಿಮಾನೆಟೈಸೇಷನ್ (demonetization) ಕಾರಣದಿಂದಲೂ ಅನಿವಾರ್ಯವಾಗಿ ಆರ್ಥಿಕ ಚಟುವಟಿಕೆ ವೇಗವಾಗಿ ಡಿಜಿಟಲ್ ಆಯಿತು. ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಹಾಗೆಯೇ ಕಾಂಗ್ರೆಸ್ ಸಮಯದಲ್ಲಿ ಇಂಟರ್ನೆಟ್ ವ್ಯವಸ್ಥೆಗೆ ಸಿಕ್ಕ ಪ್ರೋತ್ಸಾಹವನ್ನೂ ಯಾರೂ ಮರೆಯುವಂತಿಲ್ಲ. ವಿಶೇಷವಾಗಿ ರಾಜೀವ್ ಗಾಂಧಿ ಈ ಕುರಿತು ಬಹು ಮುಖ್ಯ ನಿರ್ಧಾರ ಕೈಗೊಂಡಿದ್ದರು. ಕೋವಿಡ್ ಸಮಯದಲ್ಲಿ ಅಷ್ಟು ಪ್ರಮಾಣದ ಆಹಾರ ಧಾನ್ಯ ಸಂಗ್ರಹಣೆಯನ್ನು ಮೋದಿ ಸರ್ಕಾರದ ಅವಧಿಯಲ್ಲೇ ಮಾಡಲಾಗಿತ್ತು. ಆದರೆ ಒಟ್ಟಾರೆ ಆಹಾರ ಸಂಗ್ರಹದ (food security) ವ್ಯವಸ್ಥೆ, ಆಹಾರ ಧಾನ್ಯದಲ್ಲಿ ಸ್ವಾವಲಂಬಿಯಾಗುವ ಹಸಿರು ಕ್ರಾಂತಿ (green revolution) ನಡೆದಿದ್ದು ಕಾಂಗ್ರೆಸ್ ಸಮಯದಲ್ಲೆ ಅಲ್ಲವೇ? ನಾವೀಗ ಅಮೃತಕಾಲದಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಆಗಿಂದಾಗ್ಗೆ ಹೇಳಿದ್ದಾರೆ. ಆದರೆ ಈ ಅಮೃತಕಾಲದಲ್ಲಿ ನಾವು ಒಬ್ಬರ ಮೇಲೊಬ್ಬರು ವಿನಾಕಾರಣ ಆರೋಪ ಪ್ರತ್ಯಾರೋಪ ಮಾಡುವುದರಿಂದ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿಸಲು ಸಾಧ್ಯವಿಲ್ಲ. ಎಲ್ಲ ಸರ್ಕಾರಗಳೂ ದೇಶದ ಏಳಿಗೆಗೆ ಒಂದಷ್ಟು ಕೊಡುಗೆಗಳನ್ನು ಕೊಟ್ಟೇ ಇವೆ ಎನ್ನುವುದು ಸತ್ಯ. ಹೌದು. ಕಾಂಗ್ರೆಸಿಗರು ಹೇಳುವಂತೆ ಆಧಾರ್ ಆರಂಭಿಸಿದ್ದು ಕಾಂಗ್ರೆಸ್. ಆದರೆ ಅದಕ್ಕೆ ಅತ್ಯಂತ ಹೆಚ್ಚಿನ ವೇಗ ನೀಡಿದ್ದು ನರೇಂದ್ರ ಮೋದಿ ಎನ್ನುವುದನ್ನೂ ಹೇಳಲೇಬೇಕು. ಇಲ್ಲದಿದ್ದರೆ ಮುಂದಿನ 5-10 ವರ್ಷದಲ್ಲಿ ಅದು ಸಾಕಾರವಾಗುತ್ತಿತ್ತು.

Narendra-Modi

ಇತ್ತೀಚೆಗೆ ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವರೂ ಆದ ಮಣಿ ಶಂಕರ್ ಅಯ್ಯರ್ ಅವರ ಲೇಖನವೊಂದನ್ನು ಓದುತ್ತಿದ್ದೆ. ಭಾರತ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತೇನೋ ಸರಿ, ಆದರೆ ಕಾಂಗ್ರೆಸ್ ಅವಧಿಗಿಂತ ಭಾರತ 100 ಅಂಶಗಳಷ್ಟು ಬೆಳವಣಿಗೆ ಕುಂಠಿತಗೊಂಡಿದೆ ಎನ್ನುವುದು ಅವರ ವಾದ. ಯುಪಿಎ ಅವಧಿಯಲ್ಲಿ ದೇಶದ ಬೆಳವಣಿಗೆ ದರ 183 ಶೇಕಡಾ ಅಂಶವಿದ್ದದ್ದು ಈಗ 2014ರಿಂದೀಚೆಗೆ 83 ಶೇಕಡಾ ಅಂಶಕ್ಕೆ ಕುಸಿದಿದೆ ಎಂದು ಹೇಳಿದ್ದಾರೆ. ಅವರ ಪ್ರಕಾರ, ಕಾಂಗ್ರೆಸ್ ಸರ್ಕಾರದ ದರದಲ್ಲೇ ಸಾಗಿದ್ದರೆ ಇಷ್ಟು ಹೊತ್ತಿಗಾಗಲೇ ಭಾರತವು ಜಪಾನ್ ಹಾಗೂ ಜರ್ಮನಿಯನ್ನು ಹಿಂದಿಕ್ಕುತ್ತಿತ್ತಂತೆ. ನಾವು 2027ಕ್ಕೆ ಮೂರನೇ ಆರ್ಥಿಕತೆ ಆದರೂ ಮೊದಲ ಹಾಗೂ ಎರಡನೇ ಆರ್ಥಿಕತೆಯಾದ ಅಮೆರಿಕ ಹಾಗೂ ಚೀನಾ ಹೋಲಿಕೆಯಲ್ಲಿ ಸಾಕಷ್ಟು ಹಿಂದಿರುತ್ತದೆ. ಅಮೆರಿಕದ ಹೋಲಿಕೆಯಲ್ಲಿ 8 ಪಟ್ಟು ಹಾಗೂ ಚೀನಾ ಹೋಲಿಕೆಯಲ್ಲಿ 5 ಪಟ್ಟು ಕಡಿಮೆ ಗಾತ್ರ ಹೊಂದಿರುತ್ತದೆ, ಇತ್ಯಾದಿ ಇತ್ಯಾದಿ… ಹೀಗೆ ನಕಾರಾತ್ಮಕ ಅಂಶಗಳನ್ನು ಬಿತ್ತುವುದರಿಂದ ಇವರಿಗೆ ಯಾವ ಲಾಭವಿದೆಯೋ ಗೊತ್ತಿಲ್ಲ.

ಭಾರತದ ಆರ್ಥಿಕತೆಯು ಮೂರನೇ ಸ್ಥಾನಕ್ಕೆ ಹೋಗುತ್ತದೆ ಎನ್ನುವುದು ಮೊದಲನೆಯದಾಗಿ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಬೇಕು. ಮೂರನೇ ಆರ್ಥಿಕತೆ ಎನ್ನುವುದು ತನ್ನಪಾಡಿಗೆ ತಾನೇ ಆಗಿಬಿಡುತ್ತದೆ ಎಂದಲ್ಲ. ಈ ಲೆಕ್ಕಾಚಾರಗಳನ್ನು ಮಾಡುವಾಗ ಅನೇಕ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈಗಿನ ಆರ್ಥಿಕತೆಯ ಪ್ರಮಾಣ, ಅದರ ಬೆಳವಣಿಗೆ ದರ, ದೇಶದಲ್ಲಿರುವ ನೈಸರ್ಗಿಕ ಸಂಪನ್ಮೂಲ, ತಂತ್ರಜ್ಞಾನ ಬೆಳವಣಿಗೆ ಹಾಗೂ ಸಂಶೋಧನೆಯ ಸ್ಥಿತಿ ಮುಂತಾದ ಅನೇಕ ಅಂಶಗಳ ಆಧಾರದಲ್ಲಿ ಮುಂದಿನ ವರ್ಷಗಳಲ್ಲಿ ಯಾವ ಸ್ಥಿತಿಯಲ್ಲಿರಬಹುದು ಎಂದು ಅಂದಾಜಿಸಲಾಗುತ್ತದೆ. ಹಾಗಾಗಿ ಮುಂದಿನ ಭಾರತದ ಸ್ಥಿತಿ ಧನಾತ್ಮಕವಾಗಿರುತ್ತದೆ ಎಂದಾಯಿತು. ಆದರೆ ಮಣಿಶಂಕರ್ ಅಯ್ಯರ್ ಅಂಥವರ ಪ್ರಕಾರ ಭಾರತ ತನ್ನ ಸ್ಥಾನವನ್ನು ಎತ್ತರಿಸಿಕೊಳ್ಳುತ್ತಿರುವುದು ತನ್ನ ಶಕ್ತಿಯಿಂದಲ್ಲ, ಬದಲಿಗೆ 2008-09ರಲ್ಲಿ ಸಂಭವಿಸಿದ ಜಾಗತಿಕ ಆರ್ಥಿಕ ಮುಗ್ಗಟ್ಟಿನಿಂದಾಗಿ ಇತರೆ ಆರ್ಥಿಕತೆಗಳ ಬೆಳವಣಿಗೆ ಸ್ಥಗಿತವಾಗಿವೆ ಅಥವಾ ಕುಂಠಿತವಾಗಿವೆ. ಇದರಿಂದಾಗಿ ಭಾರತದ ಸ್ಥಾನ ಉತ್ತಮವಾಗುತ್ತ ಸಾಗಿದೆ ಎಂದು ಅಯ್ಯರ್ ನುಡಿಮುತ್ತು ಸುರಿಸುತ್ತಾರೆ. 2008-09ರ ಜಾಗತಿಕ ಆರ್ಥಿಕ ಮುಗ್ಗಟ್ಟಿನಿಂದ ಪ್ರಪಂಚ ತತ್ತರಿಸಿದರೆ ಭಾರತ ಏಕೆ ಅಷ್ಟೊಂದು ಹೊಡೆತ ತಿನ್ನಲಿಲ್ಲ? ಉಳಿದ ಆರ್ಥಿಕತೆಗಳು ಸ್ಥಗಿತ ಅಥವಾ ಕುಂಠಿತವಾದಾಗ ಭಾರತ ಮಾತ್ರ ಹೇಗೆ ಧನಾತ್ಮಕ ಬೆಳವಣಿಗೆಯನ್ನೇ , ನಿಧಾನವಾಗಿಯಾದರೂ, ಕಂಡಿತು? ಹಾಗಾದರೆ ಭಾರತವು ವಿಶ್ವದ ಆರ್ಥಿಕ ಕುಸಿತದಿಂದ ಪ್ರತಿರೋಧ ಬೆಳೆಸಿಕೊಂಡಿರುವುದು ಹೇಗೆ? ಈ ಬಗ್ಗೆ ಬಹುಶಃ ಮಣಿಶಂಕರ್ ಅಯ್ಯರ್ ಅಂಥವರಿಗೆ ಉತ್ತರ ತಿಳಿದಿಲ್ಲ ಅಥವಾ ತಿಳಿದಿದ್ದರೂ ಹೇಳುವುದಿಲ್ಲ.

ಭಾರತದ ಈಗಿನ ಸ್ಥಿತಿಗೆ ಇಲ್ಲಿನ ಜನಸಂಖ್ಯೆಯೇ ಆಧಾರ. ಈ ಜನಸಂಖ್ಯೆಗೆ ಇಲ್ಲಿನ ಸಂಸ್ಕೃತಿ, ಜೀವನ ದೃಷ್ಟಿಯೇ ಮಾರ್ಗಸೂಚಕ. ಹೆಚ್ಚೆಚ್ಚು ಹಣ ಗಳಿಸಬೇಕು ಎನ್ನುವುದಕ್ಕಿಂತಲೂ ಹೆಚ್ಚೆಚ್ಚು ಉತ್ತಮನಾಗುವತ್ತಲೇ ಭಾರತದ ಸಂಸ್ಕೃತಿ ನಮ್ಮನ್ನು ಪ್ರೇರೇಪಿಸುತ್ತದೆ. ಉತ್ತಮನಾಗುವ ಮಾರ್ಗದಲ್ಲಿ ಹೆಚ್ಚೆಚ್ಚು ಜನರಿಗೆ ಸಹಾಯ ಮಾಡುವ ಮೂಲಕ ಆರ್ಥಿಕ ಚಟುವಟಿಕೆಗೂ ಅನುವು ಮಾಡಿಕೊಡುತ್ತದೆ. ಇದು ಹಣಕಾಸು ಉನ್ನತಿಗೂ ಕಾರಣವಾಗುತ್ತದೆ. ನಾವೆಲ್ಲ ಶಾಲೆಯಲ್ಲಿ ಓದುತ್ತಿರುವ ಸಮಯದಲ್ಲಿ ಬಹುತೇಕ ಎಲ್ಲ ವರ್ಷವೂ ಕೇಳಿಬರುತ್ತಿದ್ದ ಮಾತು ʼಜನಸಂಖ್ಯಾ ಸ್ಫೋಟʼ ಎನ್ನುವುದು. ಭಾರತದಲ್ಲಿ ಜನಸಂಖ್ಯೆ ವಿಪರೀತವಾಗಿದೆ, ಇಲ್ಲಿ ಸಂಪನ್ಮೂಲ ಕೊರತೆಯಿದೆ, ಹೀಗೆಯೇ ಆದರೆ ಬಡತನ, ನಿರಾಶ್ರಿತರ ಸಂಖ್ಯೆ ಹೆಚ್ಚುತ್ತದೆ, ಆಹಾರದ ಕೊರತೆ ಆಗುತ್ತದೆ ಎಂಬ ಮಾತುಗಳು ಢಾಳಾಗಿ ಕೇಳಿಬರುತ್ತಿತ್ತು. ಅಯ್ಯೋ ನಾವು ಈ ಭೂಮಿಯಲ್ಲಿ ಹುಟ್ಟಿ ಪಾಪ ಮಾಡಿಬಿಟ್ಟೆವೋ ಎಂಬ ಪಾಪಪ್ರಜ್ಞೆ ಕಾಡುತ್ತಿತ್ತು. ಆದರೆ ಬಹುಶಃ ಯಾರಾದರೂ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳನ್ನು ಗಮನವಿಟ್ಟು ಕೇಳಿಸಿಕೊಂಡಿದ್ದರೆ, ಅವರು ಎಂದಿಗೂ ಜನಸಂಖ್ಯೆಯನ್ನು ಹೊಂದು ಸ್ಫೋಟ, ಹೊರೆಯಾಗಿ ನೋಡಿಯೇ ಇಲ್ಲ. ಡೆಮಾಗ್ರಫಿಕ್ ಡಿವಿಡೆಂಡ್ ಎಂದೇ ಮೋದಿ ಸಂಬೋಧಿಸುತ್ತಾರೆ. ಅಂದರೆ ಜನಸಂಖ್ಯೆ ಎನ್ನುವುದು ಒಂದು ಆಸ್ತಿಯೇ ಹೊರತು ಅನುತ್ಪಾದಕ ಸಾಲವಲ್ಲ ಎನ್ನುವುದು ಅವರ ಮಾತಿನ ಒಳಾರ್ಥ.

population

ಜನಸಂಖ್ಯೆ ಹೆಚ್ಚಾಯಿತು ಎಂದು ಈಗಾಗಲೆ ಸಾಕಷ್ಟು ನಿಯಂತ್ರಣ ಹೇರಲಾಗಿದೆ. ಇನ್ನೂ ನಿಯಂತ್ರಿಸಲು ಹೋದರೆ ಚೀನಾ ಸ್ಥಿತಿ ಎದುರಾಗುತ್ತದೆ. ಒಂದೇ ಮಗುವಿಗೆ ನಿರ್ಬಂಧ ಹೇರಿದ್ದರಿಂದ ಚೀನಾ ಸದ್ಯದ ಭವಿಷ್ಯದಲ್ಲೇ ಮುದುಕರ ದೇಶವಾಗುವ ಅಪಾಯ ಎದುರಿಸುತ್ತಿದೆ. ಹಾಗಾಗಿಯೇ ಈಗ ಒಂದೇ ಮಗು ನೀತಿಯನ್ನು ಕೈಬಿಟ್ಟಿದೆ. ಹಾಗಾಗಿ, ಜನಸಂಖ್ಯೆಯನ್ನು ಹೊರೆ ಎಂದು ತಿಳಿದು ಅದನ್ನು ನಿಯಂತ್ರಿಸಲು ಹರಸಾಹಸಪಟ್ಟರೆ ಅದು ನಕಾರಾತ್ಮಕ ಅಥವಾ ಕೌಂಟರ್ ಪ್ರೊಡಕ್ಟಿವ್ ಆಗುತ್ತದೆಯೇ ಹೊರತು ದೀರ್ಘಕಾಲಿಕ ಪರಿಹಾರ ನೀಡುವುದಿಲ್ಲ. ಭಾರತದ ಪ್ರತಿಯೊಬ್ಬರಲ್ಲೂ ಇದ್ದದ್ದು ಉದ್ಯಮಶೀಲತೆ.

ಉದ್ಯಮೇನ ಹಿ ಸಿದ್ಧ್ಯಂತಿ ಕಾರ್ಯಾಣಿ ನ ಮನೋರಥೈಃ |
ನ ಹಿ ಸುಪ್ತಸ್ಯ ಸಿಂಹಸ್ಯ ಪ್ರವಿಶಂತಿ ಮುಖೇ ಮೃಗಾಃ ||

ಈ ಸಂಸ್ಕೃತ ಶ್ಲೋಕದ ಅರ್ಥವೇನೆಂದರೆ, ಕಾರ್ಯ ಮಾಡುವುದರಿಂದಷ್ಟೇ ಫಲ ದೊರೆಯುತ್ತದೆ. ಕೇವಲ ಯೋಚಿಸುವುದರಿಂದಲ್ಲ. ಮಲಗಿದ್ದ ಸಿಂಹದ ಬಾಯಿಗೆ ಪ್ರಾಣಿಗಳು ಬಂದು ಬೀಳುವುದಿಲ್ಲ ಎಂದು. ಸಿಂಹ ತಾನು ಕಾಡಿನ ರಾಜ ಎಂದುಕೊಂಡು ಸುಮ್ಮನೆ ಮಲಗಿದ್ದರೆ ಪ್ರಾಣಿಗಳು ಬಂದು ಬೀಳುವುದಿಲ್ಲ. ತನ್ನ ಗಾಂಭೀರ್ಯ, ಬೇಟೆಯಾಡುವ ಗುಣದಿಂದಲೇ ಸಿಂಹ ಕಾಡಿನ ರಾಜನಾಗಿದೆ. ಬೇಟೆಯಾಡುವುದನ್ನು ಮುಂದುವರಿಸಿದರಷ್ಟೆ ಸಿಂಹದ ಹೊಟ್ಟೆ ತುಂಬುವುದು ಹಾಗೂ ಕಾಡಿನ ರಾಜ ಎಂಬ ಪಟ್ಟವೂ ಉಳಿಯುವುದು. ಭಾರತಕ್ಕೆ ಪ್ರಾಚೀನ ಸಂಸ್ಕೃತಿ ಇದೆ, ನಾಗರಿಕತೆಯಿದೆ, ಚಾಣಕ್ಯ, ಚಂದ್ರಗುಪ್‌, ಶಿವಾಜಿ ಮಹಾರಾಜರ ಇತಿಹಾಸವಿದೆ ಎಂದುಕೊಂಡು ಸುಮ್ಮನೆ ಕೂತರೆ ಭಾರತದ ಆರ್ಥಿಕತೆ ಮೂರನೇ ಸ್ಥಾನಕ್ಕೆ ಏರುವುದಿಲ್ಲ. ಇದರ ಬಗ್ಗೆ ಕನ್ನಡದ ಸುಂದರ ಸಾಲುಗಳು ಹೀಗಿವೆ.

ಮೂರು ಸಾಗರ ನೂರು ಮಂದಿರ ದೈವಸಾಸಿರವಿದ್ದರೆ
ಗಂಗೆಯಿದ್ದರೆ ಸಿಂಧುವಿದ್ದರೆ ಗಿರಿಹಿಮಾಲಯವಿದ್ದರೆ
ವೇದವಿದ್ದರೆ ಭೂಮಿಯಿದ್ದರೆ ಘನಪರಂಪರೆಯಿದ್ದರೆ
ಏನು ಸಾರ್ಥಕ ಮನೆಯ ಜನರೆ ಮಲಗಿ ನಿದ್ರಿಸುತ್ತಿದರೆ!

ನಮ್ಮ ದೇಶದ ಪ್ರಾಚೀನ ಸಂಸ್ಕೃತಿಯು ನಮಗೆ ದುಡಿಮೆಯನ್ನು ಕಲಿಸಿದೆ. ಕಾಯಕವೇ ಕೈಲಾಸ ಎಂದು ಇದೇ ಮಾತನ್ನು ವಚನಕಾರರು ಅಚ್ಚ ಕನ್ನಡದಲ್ಲಿ ಹೇಳಿದರು. ಭಾರತವು ಮೂರನೇ ಆರ್ಥಿಕತೆ ಆಗಬೇಕೆಂದರೆ ಇಲ್ಲಿನ ಸಂಸ್ಕೃತಿ, ಸಂಪನ್ಮೂಲಗಳ ಆಧಾರದಲ್ಲಿ ಜನರು ದುಡಿಯುವ ಮಾನಸಿಕತೆಯನ್ನು ನಿರ್ಮಿಸಬೇಕು. ಏಕೆಂದರೆ ಕಳೆದ 75 ವರ್ಷಗಳಲ್ಲಿ ಸರ್ಕಾರಗಳ ನೀತಿಯ ಕಾರಣಕ್ಕೆ ಭಾರತೀಯರಲ್ಲಿ ಉದ್ಯಮಶೀಲತೆಯನ್ನು ನುಚ್ಚುನೂರು ಮಾಡಲಾಗಿದೆ. ಕಷ್ಟ ಪಟ್ಟು ಓದಿ ಅದರ ಪ್ರಮಾಣಪತ್ರದ ಆಧಾರದಲ್ಲಿ ಒಂದು ಕೆಲಸ ಗಿಟ್ಟಿಸಿಕೊಂಡು ಜೀವನದಲ್ಲಿ ಸೆಟಲ್‌ ಆಗಬೇಕು ಎಂಬ ಭಾವನೆ ಬಿತ್ತಲಾಗಿದೆ. ಒಂದು ಸರ್ಕಾರಿ ಉದ್ಯೋಗ ಇದ್ದುಬಿಟ್ಟರೆ ಸಾಕು ಮಗಳನ್ನು ಮದುವೆ ಮಾಡಿಕೊಡುತ್ತೇವೆ ಎಂಬ ವಧುವಿನ ಪೋಷಕರಿಗೆ ಕೊರತೆಯೇನಿಲ್ಲ. ಉದ್ಯಮ ಆರಂಭಿಸುವ, ಅದರಲ್ಲಿನ ಕಷ್ಟ ನಷ್ಟವನ್ನು ಅನುಭವಿಸುವ, ಮತ್ತೆ ಉದ್ಯಮ ಕಟ್ಟುವ ಮಾನಸಿಕತೆಯನ್ನು ಹಾಳುಗೆಡವಲಾಗಿದೆ. ದೊಡ್ಡ ಮನೆಯನ್ನೋ, ಐಷಾರಾಮಿ ಕಾರನ್ನೋ ನೋಡಿದ ತಕ್ಷಣ ಇವನು ಎಷ್ಟು ಜನರಿಗೆ ಮೋಸ ಮಾಡಿ ಈ ಮನೆ ಕಟ್ಟಿರಬೇಕು? ಯಾರ ತಲೆ ಒಡೆದು ಸಂಪಾದಿಸಿದನೋ? ಕಷ್ಟ ಪಟ್ಟು ದುಡಿದರೆ ಇಷ್ಟೆಲ್ಲ ಸಂಪಾದನೆ ಮಾಡೋಕೆ ಆಗುತ್ತ? ಎನ್ನುವ ಸಾಮಾನ್ಯ ಮಾನಸಿಕತೆಯನ್ನು ಬೆಳೆಸಲಾಗಿದೆ.

ಶ್ರೀಮಂತರು ಎಂದರೆ ದುಷ್ಟರು, ಬಡವರು ಎಂದರೆ ಒಳ್ಳೆಯವರು ಎಂಬ ಬೈನರಿಯನ್ನು ನಮ್ಮ ತಲೆಯಲ್ಲಿ ಕಮ್ಯುನಿಸಂ ತುಂಬಿದೆ. ಶ್ರೀಮಂತರಲ್ಲೂ ಒಳ್ಳೆಯವರಿರುತ್ತಾರೆ, ಬಡವರಲ್ಲೂ ಕೆಟ್ಟವರಿರುತ್ತಾರೆ ಎನ್ನುವುದು ಸತ್ಯವಲ್ಲವೇ? ಒಬ್ಬ ಉದ್ಯಮಿ ತಾನು ಉದ್ಯಮ ಕಟ್ಟುವಾಗ ದಿನಕ್ಕೆ 8 ಗಂಟೆ ಕೆಲಸ ಮಾಡಿರುವುದಿಲ್ಲ. ಆತನ ಪ್ರಾರಂಭಿಕ ಹತ್ತಾರು ವರ್ಷಗಳು ಮನೆ ಮಠ ಬಿಟ್ಟು ಅಲೆದಿರುತ್ತಾನೆ. ತಾನು ಹಣ ಮಾಡುವುದರ ಜತೆಗೆ ಹತ್ತಾರು, ನೂರಾರು ಜನರಿಗೆ ಕೆಲಸ ಕೊಟ್ಟಿರುತ್ತಾನೆ. ಉದ್ಯಮ ನಷ್ಟವಾದರೆ, ಕೆಲಸಕ್ಕಿರುವವರು ಹೇಗೊ ಬೇರೆ ಕೆಲಸ ನೋಡಿಕೊಳ್ಳುತ್ತಾರೆ. ಆದರೆ ಉದ್ಯಮ ಆರಂಭಿಸಿದ ವ್ಯಕ್ತಿ ಮತ್ತೆ ಶೂನ್ಯದಿಂದ ಆರಂಭಿಸುತ್ತಾನೆ. ಬಡವ-ಶ್ರೀಮಂತ ಎಂಬ ಭೇದ ಬಿತ್ತಿದ ಕಮ್ಯುನಿಸ್ಟರು 30 ವರ್ಷದಲ್ಲಿ ಪಶ್ಚಿಮ ಬಂಗಾಳವನ್ನು ಮ್ಯಾಂಚೆಸ್ಟರ್‌ನಿಂದ ಬರಗಾಡು ಮಾಡಿದರು. ಸಾಂಸ್ಕೃತಿಕ ಸಂಪದ್ಭರಿತ ಕೇರಳದಲ್ಲಿ ಕೈಗಾರಿಕೆಗಳ, ಉದ್ಯಮ ಸ್ಥಾಪನೆ ಬದಲಿಗೆ ವಿದೇಶಗಳಿಗೆ ಮಾನವ ರಫ್ತು ಕಾರ್ಖಾನೆ ಮಾಡಿದ್ದಾರೆ. ತನ್ನನ್ನು ಕಮ್ಯುನಿಸ್ಟ್‌ ಎಂದು ಹೇಳಿಕೊಳ್ಳುವ ಚೀನಾದಲ್ಲಿ ಕಮ್ಯುನಿಸಂ ಎನ್ನುವುದು ಅಲ್ಲಿನ ಧ್ವಜದಲ್ಲಿ ಮಾತ್ರ ಉಳಿದುಕೊಂಡಿದೆ.

ಇದನ್ನೂ ಓದಿ: ವಿಸ್ತಾರ ಅಂಕಣ: ಪ್ರಜಾಪ್ರಭುತ್ವದ ಗುಣ ಭಾರತೀಯರ ಜೀನ್‌ನಲ್ಲಿಯೇ ಇದೆ !

ಭಾರತದಲ್ಲೂ ಜನರನ್ನು ಸಬಲರಾಗಿಸುವ, ಉದ್ಯಮಶೀಲವಾಗಿಸುವ ಪ್ರಯತ್ನಗಳು ನಡೆದಿವೆ. ಗುಡ್ಡಗಾಡು ಪ್ರದೇಶ, ಅನಕ್ಷರತೆಯನ್ನೇ ಹಾಸು ಹೊದ್ದಿದ್ದ ಮಧ್ಯಪ್ರದೇಶ ಚೇತರಿಸಿಕೊಂಡಿದೆ. ಬಿಹಾರ, ಛತ್ತೀಸ್‌ಗಢ, ಜಾರ್ಖಂಡ್‌ ಸಹ ಮುಖ್ಯವಾಹಿನಿಗೆ ಸೇರಿಕೊಳ್ಳುತ್ತಿವೆ. ಭಾರತದ ಇತಿಹಾಸದಲ್ಲೇ ಅಭಿವೃದ್ಧಿಯ ಫಲ ಕಾಣದ ಈಶಾನ್ಯ ರಾಜ್ಯಗಳೂ ಈಗ ಭಾರತದೊಂದಿಗೆ ಬೆಸೆದುಕೊಳ್ಳುತ್ತಿವೆ. ಇಡೀ ದೇಶಕ್ಕೆ ಭಾರ ಎನ್ನಲಾಗುತ್ತಿದ್ದ ಉತ್ತರ ಪ್ರದೇಶ ಬೆಳವಣಿಗೆಯತ್ತ ಸಾಗಿದೆ. ಆದರೆ ದೇಶದ ಆರ್ಥಿಕತೆಗೆ ಅತಿ ದೊಡ್ಡ ಕೊಡುಗೆ ನೀಡುತ್ತಿರುವ ಕರ್ನಾಟಕದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭ್ರಷ್ಟಾಚಾರವೇ ಮುಖ್ಯ ಉದ್ಯಮವಾಗಿದೆ ಎನ್ನುವುದು ಬೇಸರದ ಸಂಗತಿ. ಇಡೀ ದೇಶದಲ್ಲಿ ಚುನಾವಣೆಗೆ ಅತಿ ಹೆಚ್ಚು ಹಣ ಖರ್ಚಾಗುವುದು ಕರ್ನಾಟಕದಲ್ಲಿ ಎಂದರೆ ನಂಬಲೇಬೇಕು. ಇಂತಹ ರಾಜ್ಯದಲ್ಲಿ ಬೆಂಗಳೂರನ್ನು ಬಿಟ್ಟರೆ ಬೇರೆ ನಗರಗಳನ್ನು ಉದ್ಯಮಶೀಲವಾಗಿಸುವ ಪ್ರಯತ್ನಗಳು ಮಾತಾಗಿಯೇ ಉಳಿದವು. ಇನ್ನು ಈಗಿನ ಸರ್ಕಾರವಂತೂ ಬಡವರ ಹೆಸರಿನ ರಾಜಕಾರಣವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ. ಗ್ಯಾರಂಟಿಗಳ (congress guarantee) ಹೆಸರಿನಲ್ಲಿ ಹಣ ಹಂಚಿಕೆ ನಡೆಯುತ್ತಿದೆ. ಬಡತನ ನಿರ್ಮೂಲನೆಗೆ ಮುಖ್ಯವಾಗಿ ಆಹಾರ ಸಮಸ್ಯೆ ನೀಗಬೇಕು. ರಾಜ್ಯದ ಜನರನ್ನು ಹಸಿವೆಯಲ್ಲಿ ಕೂರಿಸಿ ಅಭಿವೃದ್ಧಿ ಸಾಧ್ಯವಿಲ್ಲ. ಹೊಟ್ಟೆ ತುಂಬಿದ ಮೇಲೆ ಏನು? ಖರ್ಚಿಗೆ ಹಣ ಕೊಡುವುದ ಅಥವಾ ಹಣ ದುಡಿಯುವ ಮಾರ್ಗ ತೋರಿಸುವುದ? ಜನರಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಬೇಕೇ ಹೊರತು ಅನುತ್ಪಾದನೆಗೆ ಪ್ರೋತ್ಸಾಹ ನೀಡುವುದಲ್ಲ. ರಾಜಕೀಯ ಲೆಕ್ಕಾಚಾರಗಳು ಏನೇ ಇರಲಿ, ಕರ್ನಾಟಕದ ಆರ್ಥಿಕತೆಗೆ ದೂರಗಾಮಿಯಾಗಿ ಇದು ಅನುತ್ಪಾದಕತೆಯಾಗಿಯೇ ಪರಿಣಮಿಸುವ ಅಪಾಯವಿದೆ.

ಮೋದಿಯವರು ಹೇಳಿದಂತೆಯಾಗಲಿ, ಐಎಂಎಫ್‌ (IMF) ಹೇಳಿದಂತೆಯಾಗಲಿ ದೇಶ ತನ್ನಪಾಡಿಗೆ ತಾನು ಮೂರನೇ ಆರ್ಥಿಕತೆ ಆಗುವುದಿಲ್ಲ. ಅದನ್ನು ಸಾಧಿಸಬೇಕಾಗುತ್ತದೆ. ಈ ಗುರಿ ಸಾಧನೆಯಲ್ಲಿ ಕರ್ನಾಟಕದ ಪಾತ್ರ ಅತ್ಯಂತ ಪ್ರಮುಖವಾದದ್ದು. ಯುವಜನರಿಗೆ ಕೌಶಲ್ಯ ಕಲಿಸುವ, ಉದ್ಯಮಶೀಲತೆ ಬೆಳೆಸುವ, ಹೆಚ್ಚೆಚ್ಚು ಜನರಿಗೆ ಕೆಲಸ ಕೊಡುವ ಸಾಮರ್ಥ್ಯವನ್ನು ಬೆಳೆಸಿದರೆ ಕರ್ನಾಟಕದ ಆರ್ಥಿಕತೆ ಸಬಲವಾಗುತ್ತದೆಯೇ ವಿನಃ ಕೆಲಸ ಕೊಡದೆ ಮನೆಯಲ್ಲಿ ಕೂರಿಸಿ ತಿಂಗಳಿಗೆ ಮೂರು ಸಾವಿರ ರೂ. ನೀಡುವುದರಿಂದಲ್ಲ.

ಇದನ್ನೂ ಓದಿ: ವಿಸ್ತಾರ ಅಂಕಣ: ಮುಸ್ಲಿಂ ಮಹಿಳೆಯರ ಜತೆ ರಕ್ಷಾ ಬಂಧನ ಹಾಗೂ ಸಂವಿಧಾನದ ಆಶಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು.

VISTARANEWS.COM


on

Michel Phelps ರಾಜಮಾರ್ಗ ಅಂಕಣ
Koo

ಜಗತ್ತಿನ ಮಹೋನ್ನತ ಸ್ವಿಮ್ಮರ್ ನೀರಿಗೆ ಇಳಿದರೆ ದಾಖಲೆ ಮತ್ತು ದಾಖಲೆಗಳೇ ನಿರ್ಮಾಣ ಆಗುತ್ತಿದ್ದವು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಒಲಿಂಪಿಕ್ಸ್ (Olympics) ವೇದಿಕೆಗಳಲ್ಲಿ ಒಂದೋ ಅಥವಾ ಎರಡೋ ಪದಕಗಳನ್ನು (medals) ಗೆಲ್ಲುವ ಕನಸು ಕಂಡವರು, ಅದನ್ನು ಸಾಧನೆ ಮಾಡಿದವರು ಲೆಜೆಂಡ್ ಅಂತ ಅನ್ನಿಸಿಕೊಳ್ಳುತ್ತಾರೆ. ಆದರೆ ಈ ಅಮೇರಿಕನ್ ಈಜುಗಾರ (Swimmer) ಒಟ್ಟು ನಾಲ್ಕು ಒಲಿಂಪಿಕ್ ಕೂಟಗಳಲ್ಲಿ ಭಾಗವಹಿಸಿ ಗೆದ್ದದ್ದು ಬರೋಬ್ಬರಿ 28 ಒಲಿಂಪಿಕ್ ಪದಕಗಳನ್ನು ಅಂದರೆ ನಂಬಲು ಸಾಧ್ಯವೇ ಇಲ್ಲ! ಅದರಲ್ಲಿ ಕೂಡ 23 ಹೊಳೆಯುವ ಚಿನ್ನದ ಪದಕಗಳು! ಆತನು ನೀರಿಗೆ ಇಳಿದರೆ ಸಾಕು ದಾಖಲೆಗಳು ಮತ್ತು ದಾಖಲೆಗಳು ಮಾತ್ರ ನಿರ್ಮಾಣ ಆಗುತ್ತಿದ್ದವು.

ಆತನು ಅಮೇರಿಕಾದ ಮಹೋನ್ನತ ಈಜುಗಾರ ಮೈಕೆಲ್ ಫೆಲ್ಪ್ಸ್ (Michel Phelps).

ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. ಸತತವಾಗಿ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಆತ ಭಾಗವಹಿಸಿದ್ದು ಮಾತ್ರವಲ್ಲ ಪ್ರತೀ ಬಾರಿ ನೀರಿಗೆ ಇಳಿದಾಗ ಒಂದಲ್ಲ ಒಂದು ದಾಖಲೆ, ಒಂದಲ್ಲ ಒಂದು ಪದಕ ಗೆಲ್ಲದೆ ಆತ ಮೇಲೆ ಬಂದ ಉದಾಹರಣೆಯೇ ಇಲ್ಲ!

ಬಾಲ್ಟಿಮೋರ್‌ನ ಬುಲ್ಲೆಟ್!

1985ನೇ ಜೂನ್ 30ರಂದು ಅಮೇರಿಕಾದ ಬಾಲ್ಟಿಮೋರ್ ಎಂಬ ಪ್ರಾಂತ್ಯದಲ್ಲಿ ಹುಟ್ಟಿದ ಆತ ತನ್ನ ಒಂಬತ್ತನೇ ವಯಸ್ಸಿಗೆ ಅಪ್ಪ ಮತ್ತು ಅಮ್ಮನ ಪ್ರೀತಿಯಿಂದ ವಂಚಿತವಾದನು. ಅದಕ್ಕೆ ಕಾರಣ ಅವರ ವಿಚ್ಛೇದನ. ಅದರಿಂದಾಗಿ ಆತನಿಗೆ ಮಾನಸಿಕ ನೆಮ್ಮದಿ ಹೊರಟುಹೋಯಿತು. ಆತನಿಗೆ Attention Deficit Hyper active Disorder (ADHD) ಎಂಬ ಮಾನಸಿಕ ಸಮಸ್ಯೆಯು ಬಾಲ್ಯದಿಂದಲೂ ತೊಂದರೆ ಕೊಡುತ್ತಿತ್ತು. ರಾತ್ರಿ ನಿದ್ದೆ ಬಾರದೆ ಆತ ಒದ್ದಾಡುತ್ತಿದ್ದನು. ಈ ಸಮಸ್ಯೆಗಳಿಂದ ಹೊರಬರಲು ಆತ ಆರಿಸಿಕೊಂಡ ಮಾಧ್ಯಮ ಎಂದರೆ ಅದು ಸ್ವಿಮ್ಮಿಂಗ್ ಪೂಲ್! ತನ್ನ ಏಳನೇ ವಯಸ್ಸಿಗೆ ನೀರಿಗೆ ಇಳಿದ ಆತನಿಗೆ ಬಾಬ್ ಬೌಮಾನ್ ಎಂಬ ಕೋಚ್ ಸಿಕ್ಕಿದ ನಂತರ ಆತನ ಬದುಕಿನ ಗತಿಯೇ ಬದಲಾಯಿತು. ಆತ ದಿನದ ಹೆಚ್ಚು ಹೊತ್ತನ್ನು ನೀರಿನಲ್ಲಿಯೇ ಕಳೆಯಲು ತೊಡಗಿದನು.

ಆತನ ಕಣ್ಣ ಮುಂದೆ ಇಬ್ಬರು ಸ್ವಿಮ್ಮಿಂಗ್ ಲೆಜೆಂಡ್ಸ್ ಇದ್ದರು. ಒಬ್ಬರು ಒಂದೇ ಒಲಿಂಪಿಕ್ ಕೂಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದ ಮಾರ್ಕ್ ಸ್ಪಿಟ್ಜ್ (1972). ಇನ್ನೊಬ್ಬರು ಆಸ್ಟ್ರೇಲಿಯಾದ ಸ್ವಿಮಿಂಗ್ ದೈತ್ಯ ಇಯಾನ್ ತೋರ್ಪ್. ಅವರಿಂದ ಸ್ಫೂರ್ತಿ ಪಡೆದ ಆತ ಮುಂದೆ ಮಾಡಿದ್ದು ಎಲ್ಲವೂ ವಿಶ್ವ ದಾಖಲೆಯ ಸಾಧನೆಗಳೇ ಆಗಿವೆ. ಜನರು ಆತನನ್ನು ಬಾಲ್ಟಿಮೋರದ ಬುಲೆಟ್ ಎಂದು ಪ್ರೀತಿಯಿಂದ ಕರೆದರು.

ಸತತ ನಾಲ್ಕು ಒಲಿಂಪಿಕ್ಸ್ – 28 ಪದಕಗಳು – ಅದರಲ್ಲಿ 23 ಚಿನ್ನದ ಪದಕಗಳು!

2004ರ ಅಥೆನ್ಸ್ ಒಲಿಂಪಿಕ್ಸ್ – ಒಟ್ಟು ಎಂಟು ಪದಕಗಳು.
2008 ಬೀಜಿಂಗ್ ಒಲಿಂಪಿಕ್ಸ್ – ಒಟ್ಟು ಎಂಟು ಚಿನ್ನದ ಪದಕಗಳು.
2012 ಲಂಡನ್ ಒಲಿಂಪಿಕ್ಸ್ – ನಾಲ್ಕು ಚಿನ್ನ ಮತ್ತು ಎರಡು ಬೆಳ್ಳಿಯ ಪದಕಗಳು.
2016 ರಿಯೋ ಒಲಿಂಪಿಕ್ಸ್ – ಐದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ.

ಅಂದರೆ ಸತತ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಒಟ್ಟು 28 ಪದಕಗಳನ್ನು ಬೇರೆ ಯಾರೂ ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ! ಬಟರ್ ಫ್ಲೈ, ಮೆಡ್ಲಿ, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್ಸ್…ಹೀಗೆ ಪ್ರತೀಯೊಂದು ವಿಭಾಗಳಲ್ಲಿಯೂ ಮೈಕೆಲ್ ಒಂದರ ಮೇಲೊಂದು ಪದಕಗಳನ್ನು ಗೆಲ್ಲುತ್ತಾ ಹೋಗಿದ್ದಾನೆ! ಆ 16 ವರ್ಷಗಳ ಅವಧಿಯಲ್ಲಿ ಆತನಿಗೆ ಸ್ಪರ್ಧಿಗಳೇ ಇರಲಿಲ್ಲ ಎನ್ನಬಹುದು!

ಮೈಕೆಲ್ ಎಂಬ ಚಿನ್ನದ ಮೀನಿನ ಜಾಗತಿಕ ದಾಖಲೆಗಳು

೧) ಆತನು ತನ್ನ ಜೀವಮಾನದಲ್ಲಿ ಗೆದ್ದ ಒಟ್ಟು ಅಂತಾರಾಷ್ಟ್ರೀಯ ಪದಕಗಳ ಸಂಖ್ಯೆ ಬೆರಗು ಹುಟ್ಟಿಸುತ್ತದೆ. ಒಟ್ಟು 82 ಪದಕಗಳು. ಅದರಲ್ಲಿ 65 ಚಿನ್ನ, 14 ಬೆಳ್ಳಿ ಮತ್ತು 3 ಕಂಚು!
೨) ಒಟ್ಟು 20 ಗಿನ್ನೆಸ್ ದಾಖಲೆಗಳು ಆತನ ಹೆಸರಿನಲ್ಲಿ ಇವೆ!
೩) ಒಟ್ಟು 39 ವಿಶ್ವದಾಖಲೆಗಳು ಆತನ ಹೆಸರಿನಲ್ಲಿ ಇವೆ. ಅದರಲ್ಲಿ 29 ವೈಯಕ್ತಿಕ ಮತ್ತು 10 ರಿಲೇ ಸ್ಪರ್ಧೆಗಳದ್ದು!
೪) 2004ರಿಂದ 2018ರವರೆಗೆ ನಡೆದ ವಿಶ್ವ ಈಜು ಚಾಂಪಿಯನಶಿಪ್ ಸ್ಪರ್ಧೆಗಳಲ್ಲಿ ಆತ ಪದಕಗಳ ಗೊಂಚಲು ಗೆಲ್ಲದೆ ಹಿಂದೆ ಬಂದ ನಿದರ್ಶನವೇ ಇಲ್ಲ!
೫) ಒಟ್ಟು ಎಂಟು ಬಾರಿ ಅವನಿಗೆ ‘ವರ್ಲ್ಡ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೬) ಒಟ್ಟು 11 ಬಾರಿ ‘ಅಮೇರಿಕನ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೭) ಒಂದೇ ಒಲಿಂಪಿಕ್ ಕೂಟದಲ್ಲಿ ಆತ ಎಂಟು ಚಿನ್ನದ ಪದಕಗಳನ್ನು (2008 ಬೀಜಿಂಗ್) ಗೆದ್ದ ದಾಖಲೆಯನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲವೇ ಇಲ್ಲ!
೮) ಆತನಿಗೆ ಜಾಗತಿಕ ಒಲಿಂಪಿಕ್ ಸಮಿತಿಯು ಜಗತ್ತಿನ ಅತ್ಯುತ್ತಮ ಸ್ವಿಮ್ಮರ್ ಪ್ರಶಸ್ತಿ ನೀಡಿ ಗೌರವಿಸಿದೆ!
೯) 100 ಮೀಟರ್ ಬಟರ್ ಫ್ಲೈ, 200 ಮೀಟರ್ ಬಟರ್ ಫ್ಲೈ, 200 ಮೀಟರ್ ಇಂಡಿವಿಜುವಲ್ ಮೆಡ್ಲಿ, 400 ಮೀಟರ್ ಇಂಡಿವಿಜುವಲ್ ಮೆಡ್ಲಿ ಈ ವಿಭಾಗದಲ್ಲಿ ಆತ ಮಾಡಿದ ಜಾಗತಿಕ ದಾಖಲೆಗಳನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲ ಎಂದು ಭಾವಿಸಲಾಗುತ್ತಿದೆ!

ಈ ಎಲ್ಲಾ ಸಾಧನೆಗಳಿಗೆ ಕಾರಣ ಆತನ ಈಜುವ ಪ್ಯಾಶನ್!

ಆತನ ಆತ್ಮಚರಿತ್ರೆಯ ಪುಸ್ತಕವನ್ನು ಒಮ್ಮೆ ತಿರುವಿ ಹಾಕಿದಾಗ ಆತನ ಸ್ವಿಮ್ಮಿಂಗ್ ಪ್ಯಾಶನ್ ಬಗ್ಗೆ ಹಲವು ಉದಾಹರಣೆಗಳು ದೊರೆಯುತ್ತವೆ.

ಒಮ್ಮೆ ಏನಾಯಿತೆಂದರೆ 2001 ಸೆಪ್ಟೆಂಬರ್ 11ರಂದು ಅಮೆರಿಕದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ಧಾಳಿ ನಡೆದು ಇಡೀ ಟವರ್ ಕುಸಿದು ಹೋದದ್ದು, ಇಡೀ ಅಮೇರಿಕಾ ನಲುಗಿ ಹೋದದ್ದು ನಮಗೆಲ್ಲ ಗೊತ್ತಿದೆ. ಸರಿಯಾಗಿ ಅದೇ ಹೊತ್ತಿಗೆ ಮೈಕೆಲ್ ಸ್ವಿಮ್ಮಿಂಗ್ ಪೂಲನಲ್ಲಿ ಈಜುತ್ತಾ ತನ್ನ ಕೋಚಗೆ ಕಾಲ್ ಮಾಡಿ ಕೇಳಿದ್ದನಂತೆ- ಸರ್, ಎಲ್ಲಿದ್ದೀರಿ? ನಾನು ಪೂಲಲ್ಲಿ ಪ್ರಾಕ್ಟೀಸ್ ಮಾಡ್ತಾ ಇದ್ದೇನೆ!

ಮೈಕೆಲ್ ಫೆಲ್ಫ್ಸ್ ಇಷ್ಟೊಂದು ವಿಶ್ವ ದಾಖಲೆಗಳನ್ನು ಕ್ರಿಯೇಟ್ ಮಾಡಿದ್ದು ಸುಮ್ಮನೆ ಅಲ್ಲ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

ರಾಜಮಾರ್ಗ ಅಂಕಣ: ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

VISTARANEWS.COM


on

ರಾಜಮಾರ್ಗ ಅಂಕಣ Kargil Vijay Diwas 2024
Koo

ಇಂದು ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತವು ಗೆದ್ದ ಅತ್ಯಂತ ಕಠಿಣ ಯುದ್ಧ (Kargil Vijay Diwas) ಅದು! 1999ರಲ್ಲಿ ಭಾರತೀಯ ಸೇನಾ ಮುಖ್ಯಸ್ಥರಾಗಿದ್ದ ಜನರಲ್ ವಿ.ಪಿ ಮಲಿಕ್ ಬರೆದಿರುವ ‘KARGIL – FROM SURPRISE TO VICTORY’ ಓದುತ್ತಾ ಹೋದಂತೆ ನಾನು ಹಲವಾರು ಬಾರಿ ಬೆಚ್ಚಿಬಿದ್ದಿದ್ದೇನೆ! ಯಾಕೆಂದರೆ ಅದು ಭಾರತವು ಎದುರಿಸಿದ ಅತ್ಯಂತ ಕಠಿಣವಾದ ಯುದ್ಧ (India0 Pakistan War) ಮತ್ತು ದೀರ್ಘಕಾಲದ ಯುದ್ಧ. ಪಾಕಿಸ್ತಾನ (Pakistan) ಎಂಬ ದ್ರೋಹಿ ರಾಷ್ಟ್ರವನ್ನು ಇನ್ನು ಮುಂದೆ ಯಾವಾಗಲೂ ನಂಬಲೇ ಬಾರದು ಎಂಬ ಪಾಠವನ್ನು ಭಾರತಕ್ಕೆ ಕಲಿಸಿಹೋದ ಮೃತ್ಯುಂಜಯ ಯುದ್ಧ ಅದು!

ಯುದ್ಧದ ಹಿನ್ನೆಲೆ – ಮುಷರಫ್ ಕುತಂತ್ರ

ಆಗಷ್ಟೇ ಭಾರತವು ಅಣುಪರೀಕ್ಷೆ ಮಾಡಿ ಜಗತ್ತಿನ ಕಣ್ಣು ಕೋರೈಸುವ ಸಾಧನೆಯನ್ನು ಮಾಡಿತ್ತು. ಪಾಕ್ ಕೂಡ ಅಮೇರಿಕಾದ ನೆರವು ಪಡೆದು ತನ್ನ ಬಳಿ ಅಣುಬಾಂಬು ಇದೆ ಎಂದು ಹೇಳಿಕೊಂಡಿತ್ತು. ಆಗ ಭಾರತದ ಪ್ರಧಾನಿ ಆಗಿದ್ದ ವಾಜಪೇಯಿ (Atal Bihari Vajpayee) ಅವರು ತುಂಬಾ ಮೃದು ನಿಲುವಿನ ನಾಯಕ ಎಂದು ಪಾಕ್ ನಂಬಿ ಕುಳಿತಿತ್ತು. ಪಾಕಿಸ್ಥಾನಕ್ಕೆ ಜಗತ್ತಿನ ಅತೀ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ (Siachin) ವಶಪಡಿಸಿಕೊಳ್ಳಬೇಕು ಎಂಬ ದುರಾಸೆ. ಅಲ್ಲಿಂದ ಮುಂದೆ ಕಾರ್ಗಿಲ್ ಮತ್ತು ಮುಂದೆ ಇಡೀ ಕಾಶ್ಮೀರವನ್ನು ಕಬಳಿಸಬೇಕು ಎನ್ನುವ ಮಾಸ್ಟರ್ ಪ್ಲಾನ್! ಆಗ ಪಾಕಿಸ್ತಾನದ ಸೇನಾ ನಾಯಕ ಪರ್ವೇಜ್ ಮುಷರಫ್ (Parvez Musharraf) ಹೊಂಚು ಹಾಕಿ ಕುಳಿತ ಕಾಲ ಅದು.

ಅದಕ್ಕೆ ಪೂರಕವಾಗಿ 1998ರ ಜೂನ್ ತಿಂಗಳಿಂದಲೇ ಪಾಕಿಸ್ಥಾನದ 5000ರಷ್ಟು ಸೈನಿಕರು ಲೈನ್ ಆಫ್ ಕಂಟ್ರೋಲ್ ದಾಟಿ ಭಾರತದ 4-10 ಕಿ.ಮೀ. ಒಳಗೆ ಬಂದು ಎತ್ತರದ ಪ್ರದೇಶದಲ್ಲಿ ಜಮಾವಣೆ ಆಗತೊಡಗಿದ್ದರು! ಅವರ ಬಳಿಗೆ ಆಧುನಿಕ ಶಸ್ತ್ರಾಸ್ತ್ರಗಳು ಬಂದು ತಲುಪಿದ್ದವು. ಆದರೆ 1999ರ ಮೇ 18ರವರೆಗೆ ಭಾರತ ಸರಕಾರಕ್ಕೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಭಾರತೀಯ ಸೇನಾ ಗೂಢಚಾರ ಸಂಸ್ಥೆಯವರು ಇನ್ನೂ ಸ್ವಲ್ಪ ದಿನ ಮೈಮರೆತಿದ್ದರೆ…! ಆ ಕುರಿಗಾಹಿ ಹುಡುಗರು ಆ ನುಸುಳುಕೋರ ಸೈನಿಕರ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ಕೊಡದೇ ಹೋಗಿದ್ದರೆ…! ನಾನು ಬೆಚ್ಚಿ ಬಿದ್ದದ್ದು ಆಗ.

ಭಾರತದ ಸೈನಿಕರ ಬಳಿ ಯುದ್ಧದ ಸಿದ್ಧತೆಗೆ ಸಮಯ ಇರಲಿಲ್ಲ

ಗಡಿಯ ಒಳಗೆ ಅಷ್ಟು ದೊಡ್ಡ ಸಂಖ್ಯೆಯ ಸೈನಿಕರು ನುಸುಳಿಬಂದ ವಿಷಯ ಭಾರತಕ್ಕೆ ಗೊತ್ತಾಯಿತು ಅಂದಾಗ ಮುಷರಫ್ ಅಲರ್ಟ್ ಆದರು. ಅವರು ನಮ್ಮ ಸೈನಿಕರೇ ಅಲ್ಲ, ಯಾವುದೋ ಭಯೋತ್ಪಾದಕ ಸಂಘಟನೆಯವರು ಎಂದು ಬಿಟ್ಟರು ಮುಷರಫ್! ಆದರೆ ಈಗ ಭಾರತದ ಪ್ರಧಾನಿ ವಾಜಪೇಯಿ, ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸೇನಾ ಮುಖ್ಯಸ್ಥರನ್ನು ಕರೆಸಿ ಯುದ್ಧ ಘೋಷಣೆ ಮಾಡಿಬಿಟ್ಟರು. ಆದರೆ ಭಾರತೀಯ ಸೈನ್ಯಕ್ಕೆ ಆ ಯುದ್ಧಕ್ಕೆ ಸಿದ್ಧತೆ ಮಾಡಲು ದೊರೆತದ್ದು 24 ಘಂಟೆ ಮಾತ್ರ! ಆದರೂ 1999ರ ಮೇ 3ರಂದು ಭಾರತ ಯುದ್ಧ ಘೋಷಣೆ ಮಾಡಿ ಆಗಿತ್ತು!

ಆರಂಭದಲ್ಲಿ ಭಾರತಕ್ಕೆ ಹಿನ್ನಡೆ ಆದದ್ದು ನಿಜ. ಆದರೆ ಮೇ 30 ಆಗುವಾಗ ಭಾರತದ 30,000 ಸೈನಿಕರು ಟೈಗರ್ ಹಿಲ್ ಬಳಿ ಬಂದು ಜಮಾವಣೆ ಮಾಡಿ ಆಗಿತ್ತು. ಭಾರತದ ಭೂಸೈನ್ಯ ಮತ್ತು ವಾಯು ಸೈನ್ಯಗಳು ವೀರಾವೇಶದಿಂದ ಹೋರಾಟಕ್ಕೆ ಇಳಿದಿದ್ದವು. ಎರಡೂ ಕಡೆಯ ಸೈನಿಕರು, ಬಾಂಬುಗಳು, ಮದ್ದುಗುಂಡುಗಳು, ಶೆಲ್‌ಗಳು ಸಿಡಿಯುತ್ತ ಕಾರ್ಗಿಲ್ ಯುದ್ಧಭೂಮಿಯು ರಕ್ತದಲ್ಲಿ ಒದ್ದೆಯಾಗುತ್ತಾ ಹೋಯಿತು. ಟೈಗರ್ ಹಿಲ್ ಏರಿ 10 ಪಾಕ್ ಸೈನಿಕರ ಹತ್ಯೆಯನ್ನು ನಮ್ಮ ಸೈನಿಕರು ಮಾಡಿದಾಗ ಭಾರತವು ಯುದ್ಧದಲ್ಲಿ ಸಣ್ಣ ಮೇಲುಗೈ ಸಾಧಿಸಿತು.

ಅಲ್ಲಿಂದ ಮುಂದೆ ಭಾರತದ ರಕ್ಷಣಾ ಮಂತ್ರಿ ಜಾರ್ಜ್ ಫೆರ್ನಾಂಡಿಸ್ ಸ್ವತಃ ಯುದ್ಧಭೂಮಿಗೆ ಬಂದು ಸೈನಿಕರ ಆತ್ಮಸ್ಥೈರ್ಯ ಹೆಚ್ಚಿಸಿದ್ದು, ಪ್ರಧಾನಿ ವಾಜಪೇಯಿ ವಾರ್ ರೂಮಿನಲ್ಲಿ ಕುಳಿತು ಸೈನ್ಯಕ್ಕೆ ನಿರ್ದೇಶನವನ್ನು ಕೊಟ್ಟದ್ದು ಭಾರತವನ್ನು ಗೆಲ್ಲಿಸುತ್ತಾ ಹೋದವು. 75 ದಿನಗಳ ಘನಘೋರ ಯುದ್ಧದ ನಂತರ ಭಾರತ ಜುಲೈ 26ರಂದು ದ್ರಾಸ್ ಪರ್ವತದ ತಪ್ಪಲಲ್ಲಿ ಇದ್ದ ಕೊನೆಯ ಪಾಕ್ ಸೈನಿಕನನ್ನೂ ಹೊಸಕಿ ಹಾಕಿದಾಗ ಭಾರತ ವಿಜಯೋತ್ಸವ ಆಚರಣೆ ಮಾಡಿತು. ಕಾರ್ಗಿಲ್ ಮೈದಾನದಲ್ಲಿ ಸೈನಿಕರ ನಡುವೆ ತ್ರಿವರ್ಣಧ್ವಜ ಹಾರಿಸಿದ ಕ್ಷಣವೇ ಕಾರ್ಗಿಲ್ ವಿಜಯ ದಿನ.

Kargil Vijay Diwas 2024
Kargil Vijay Diwas 2024

ಹುತಾತ್ಮರಾದವರು ಭಾರತದ 527 ಸೈನಿಕರು!

ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಭಾರತೀಯ ಸೈನಿಕರ ಬಲಿದಾನ ಭಾರತಕ್ಕೆ ಒಂದು ದೊಡ್ಡ ವಿಜಯವನ್ನು ತಂದುಕೊಟ್ಟಿತ್ತು. ಅದರಲ್ಲಿ ಕರ್ನಾಟಕದ 21 ಸೈನಿಕರೂ ಇದ್ದರು. ಸಾವಿರಾರು ಯೋಧರು ತೀವ್ರವಾಗಿ ಗಾಯಗೊಂಡರು. ಪಾಕಿಸ್ತಾನವೂ ದೊಡ್ಡ ಸಂಖ್ಯೆಯ ಸೈನಿಕರನ್ನು ಕಳೆದುಕೊಂಡಿತ್ತು.

ನಮ್ಮ ಸೈನಿಕರಾದ ಸಿಯಾಚಿನ್ ಹೀರೋ ನಾಯಬ್ ಸುಬೇದಾರ್ ಬಾಣಾ ಸಿಂಗ್, ಕ್ಯಾಪ್ಟನ್ ವಿಕ್ರಮ್ ಬಾತ್ರಾ, ಮೇಜರ್ ಪದ್ಮಪಾಣಿ ಆಚಾರ್ಯ, ಗ್ರೆನೆಡಿಯರ್ ಯೋಗೇಂದರ್ ಸಿಂಘ್ ಯಾದವ್, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ, ಕ್ಯಾಪ್ಟನ್ ಅನುಜ್ ನಯ್ಯರ್, ಲೆಫ್ಟಿನೆಂಟ್ ಬಲವಾನ್ ಸಿಂಘ್, ರೈಫಲ್ ಮ್ಯಾನ್ ಸಂಜಯ ಕುಮಾರ್, ಕ್ಯಾಪ್ಟನ್ ವಿಜಯವಂತ್ ಥಾಪರ್, ಮೇಜರ್ ಸೋನಂ ವಾಂಗಚುಕ್, ಲೆಫ್ಟಿನೆಂಟ್ ಕರ್ನಲ್ ವೈ.ಕೆ. ಜೋಷಿ ಇವರೆಲ್ಲರೂ ನಿಜವಾದ ಕಾರ್ಗಿಲ್ ಹೀರೋಗಳು. ಅದರಲ್ಲಿ ಹೆಚ್ಚಿನವರು ಹುತಾತ್ಮರಾದವರು. ಅವರಿಗೆಲ್ಲ ವಿವಿಧ ಸೇನಾ ಶೌರ್ಯ ಪ್ರಶಸ್ತಿಗಳನ್ನು ನೀಡಿ ಭಾರತ ಸರಕಾರವು ಗೌರವಿಸಿತು.

ಕಾರ್ಗಿಲ್ ಯುದ್ಧದ ಫಲಶ್ರುತಿ ಏನೆಂದರೆ ಮುಂದೆ ಭಾರತವು ಎಂದಿಗೂ ಪಾಕಿಸ್ತಾನವನ್ನು ನಂಬಲಿಲ್ಲ ಮತ್ತು ಪಾಕಿಸ್ತಾನ ಯಾವತ್ತೂ ಭಾರತದ ಮೇಲೆ ಮತ್ತೆ ದಂಡೆತ್ತಿ ಬರುವ ಸಾಹಸವನ್ನು ಮಾಡಲಿಲ್ಲ!

ಜೈ ಹಿಂದ್.

ಇದನ್ನೂ ಓದಿ: ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

Continue Reading

ಅಂಕಣ

ರಾಜಮಾರ್ಗ ಅಂಕಣ:  ಕನ್ನಡದ ಶ್ರೇಷ್ಠ ಲೇಖಕ ನಿರಂಜನರನ್ನು ನಾಡು ಮರೆತರೆ ಹೇಗೆ?

ರಾಜಮಾರ್ಗ ಅಂಕಣ: ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಈ ವರ್ಷ ಅವರ ಜನ್ಮ ಶತಮಾನೋತ್ಸವ.

VISTARANEWS.COM


on

ರಾಜಮಾರ್ಗ ಅಂಕಣ
Koo

ಈ ವರ್ಷ (2024) ಲೇಖಕ ನಿರಂಜನರ ಜನ್ಮ ಶತಮಾನೋತ್ಸವ

Rajendra-Bhat-Raja-Marga-Main-logo

ಕುಳಕುಂದ ಶಿವರಾವ್ ಅಂದರೆ ಯಾರಿಗೂ ಥಟ್ಟನೆ ಪರಿಚಯ ಆಗಲಾರದು. ಆದರೆ ಕನ್ನಡದ ಶ್ರೇಷ್ಠ ಲೇಖಕ ನಿರಂಜನ (Niranjana) ಎಂದರೆ ಎಲ್ಲರಿಗೂ ಪರಿಚಯ ಆಗುತ್ತದೆ. ಅವರು 71 ವರ್ಷಗಳ ಕಾಲ ಬದುಕಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರು. ಕನ್ನಡದ ಮೊದಲ ಮತ್ತು ಜನಪ್ರಿಯ ಅಂಕಣ ಲೇಖಕರು ಅಂದರೆ ಅದು ನಿರಂಜನ! (ರಾಜಮಾರ್ಗ ಅಂಕಣ)

ಬಾಲ್ಯದಿಂದಲೂ ಬರವಣಿಗೆ

1924 ಜೂನ್ 15ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಳಕುಂದ ಎಂಬ ಗ್ರಾಮದಲ್ಲಿ ಜನಿಸಿದ ಅವರು ಸಣ್ಣ ಪ್ರಾಯದಲ್ಲಿ ಪತ್ರಿಕೆಗಳಿಗೆ ಬರೆಯಲು ತೊಡಗಿದರು. ಮೊದಲು ಕಂಠೀರವ ಪತ್ರಿಕೆ ಅವರಿಗೆ ಬರೆಯಲು ಅವಕಾಶ ಕೊಟ್ಟಿತು. ಮುಂದೆ ಕನ್ನಡದ ಎಲ್ಲ ಪ್ರಸಿದ್ಧ ಪತ್ರಿಕೆಗಳಿಗೆ ಅವರು ಅಂಕಣಗಳನ್ನು ಬರೆಯುತ್ತಾ ಹೋದರು. ರಾಷ್ಟ್ರಬಂಧು ಎಂಬ ಪತ್ರಿಕೆಯ ಪ್ರಮುಖ ಲೇಖಕರಾಗಿ ಅವರು ಸಾವಿರಾರು ಅಂಕಣಗಳನ್ನು ಬರೆದರು. ಅವರ ಅಂಕಣ ಲೇಖನಗಳು ಎಂಟು ಕೃತಿಗಳಾಗಿ ಹೊರಬಂದು ಅವರಿಗೆ ಅಪಾರ ಜನಪ್ರಿಯತೆ ಕೊಟ್ಟವು. ಅವರು ಕನ್ನಡದ ಮೊದಲ ಅಂಕಣಕಾರ ಎಂಬ ದಾಖಲೆಯೂ ನಿರ್ಮಾಣವಾಯಿತು.

ಪ್ರಭಾವಶಾಲಿ ಸಣ್ಣ ಕಥೆಗಳು

ಸಣ್ಣ ಕಥೆಗಳು ಅವರಿಗೆ ಇಷ್ಟವಾದ ಇನ್ನೊಂದು ಪ್ರಕಾರ. ಅವರ 156 ಸಣ್ಣ ಕಥೆಗಳ ಸಂಗ್ರಹವಾದ ‘ಧ್ವನಿ’ ಕನ್ನಡದ ಶ್ರೇಷ್ಠ ಕೃತಿ ಆಗಿದೆ. ಕಾರಂತರ ಸಂಪರ್ಕ, ಲೆನಿನ್ ಬಗ್ಗೆ ಓದು ಅವರನ್ನು ಬೆಳೆಸುತ್ತಾ ಹೋದವು.

ಬಾಪೂಜಿ ಬಾಪು ಅವರ ಅತ್ಯಂತ ಶ್ರೇಷ್ಟವಾದ ಸಣ್ಣ ಕಥೆ. ಗಾಂಧೀಜಿ ಬದುಕಿದ್ದಾಗಲೇ ಅವರು ಸತ್ತಂತೆ ಕಲ್ಪಿಸಿಕೊಂಡು ಬರೆದ ಕಥೆ ಇದು! ರಕ್ತ ಸರೋವರ ಕಾಶ್ಮೀರದ ದಾಲ್ ಸರೋವರದ ಹಿನ್ನೆಲೆಯಲ್ಲಿ ಅರಳಿದ ಅದ್ಭುತವಾದ ಕಥೆ.
ತಿರುಕಣ್ಣನ ಮತದಾನ ರಾಜಕೀಯ ವಿಡಂಬನೆಯ ಕಥೆ. ಅವರ ಸಣ್ಣ ಕಥೆಗಳು ಕರ್ನಾಟಕದ ಬೇರೆ ಬೇರೆ ಪ್ರದೇಶಗಳಲ್ಲಿ, ಬೇರೆ ಬೇರೆ ಸಂಸ್ಕೃತಿಯಲ್ಲಿ ಅರಳಿದ ಕಥೆಗಳು. ಕನ್ನಡದಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ನಂತರ ಇಷ್ಟೊಂದು ವೈವಿಧ್ಯಮಯವಾದ ಸಣ್ಣ ಕಥೆಗಳನ್ನು ಬರೆದವರು ನಿರಂಜನ ಮಾತ್ರ ಅಂದರೆ ಅದು ಅತಿಶಯೋಕ್ತಿ ಅಲ್ಲ!

ಕಾದಂಬರಿಕಾರರಾಗಿ ನಿರಂಜನರು

ಅವರು ಬರೆದದ್ದು ಒಟ್ಟು 21 ಕಾದಂಬರಿಗಳು. ವರ್ಗ ಸಂಘರ್ಷ ಮತ್ತು ಸಾಮಾಜಿಕ ಸಮಾನತೆ ಅವರ ಹೆಚ್ಚಿನ ಕಾದಂಬರಿಗಳ ಹೂರಣ. 700 ಪುಟಗಳ ಬೃಹತ್ ಕಾದಂಬರಿ ಮೃತ್ಯುಂಜಯ ಅದೊಂದು ಮಾಸ್ಟರಪೀಸ್ ಕಲಾಕೃತಿ. ವಿಮೋಚನೆ, ಬನಶಂಕರಿ, ಅಭಯ, ಚಿರಸ್ಮರಣೆ, ರಂಗಮ್ಮನ ವಟಾರ ಮೊದಲಾದ ಕಾದಂಬರಿಗಳು ಒಮ್ಮೆ ಓದಿದರೆ ಮರೆತುಹೋಗೋದಿಲ್ಲ. ಸುಳ್ಯ ಮತ್ತು ಮಡಿಕೇರಿ ಪ್ರದೇಶದಲ್ಲಿ ಕಲ್ಯಾಣಸ್ವಾಮಿ ಎಂಬಾತ ನಡೆಸಿದ ರಕ್ತಕ್ರಾಂತಿಯ ಹಸಿಹಸಿ ಕಥೆಯನ್ನು ಹೊಂದಿರುವ ಒಂದು ಶ್ರೇಷ್ಟವಾದ ಕಾದಂಬರಿ ಅವರು ಬರೆದಿದ್ದಾರೆ. ನಿರಂಜನರು ಬರೆದ ನಾಟಕಗಳೂ ಜನಪ್ರಿಯವಾಗಿವೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೇಪಥ್ಯಕ್ಕೆ ಸರಿದ ರಂಗ ನಿರ್ದೇಶಕ ಸದಾನಂದ ಸುವರ್ಣ

ನಿರಂಜನ ಅವರ ಸಂಪಾದನಾ ಗ್ರಂಥಗಳು

ಇಂದು ಕನ್ನಡ ನಾಡು ನಿರಂಜನರನ್ನು ನೆನಪಿಟ್ಟುಕೊಳ್ಳಲೇ ಬೇಕಾದ ಮುಖ್ಯ ಕಾರಣ ಎಂದರೆ ಅವರ ಸಂಪಾದನೆಯ ಗ್ರಂಥಗಳು. 25 ಸಂಪುಟಗಳ ವಿಶ್ವ ಕಥಾಕೋಶ, ಜ್ಞಾನಗಂಗೋತ್ರಿ ಹೆಸರಿನ ಎಳೆಯರ ಏಳು ಸಂಪುಟಗಳ ವಿಶ್ವ
ಜ್ಞಾನಕೋಶ, ಪುರೋಗಾಮಿ ಪ್ರಕಾಶನದ ಎಂಟು ಪುಸ್ತಕಗಳು, ಜನತಾ ಸಾಹಿತ್ಯಮಾಲೆಯ 25 ಪುಸ್ತಕಗಳು….ಹೀಗೆ ಲೆಕ್ಕ ಮಾಡುತ್ತಾ ಹೋದರೆ ಸಾವಿರಾರು ಪುಟಗಳ ಅದ್ಭುತ ಜ್ಞಾನಕೋಶಗಳು ಅರಳಿದ್ದು ನಿರಂಜನರ ಸಂಪಾದಕತ್ವದಲ್ಲಿ! ಅವರ ಇಡೀ ಜೀವನವನ್ನು ನಿರಂಜನರು ಅಧ್ಯಯನ ಮತ್ತು ಬರವಣಿಗೆಯಲ್ಲಿಯೇ ಕಳೆದರು.

ಇಡೀ ಕುಟುಂಬವು ಸಾಹಿತ್ಯಕ್ಕೆ ಮೀಸಲು

ನಿರಂಜನರ ಪತ್ನಿ ಅನುಪಮಾ ನಿರಂಜನ ಕನ್ನಡದ ಸ್ಟಾರ್ ಕಾದಂಬರಿಕಾರರು. ಹೆಣ್ಣು ಮಕ್ಕಳಾದ ತೇಜಸ್ವಿನಿ ಮತ್ತು ಸೀಮಂತಿನಿ ಇಬ್ಬರೂ ಕನ್ನಡದ ಪ್ರಭಾವೀ ಲೇಖಕರಾಗಿ ಗುರುತಿಸಿಕೊಂಡವರು. ಹಾಗೆ ನಿರಂಜನರ ಇಡೀ ಕುಟುಂಬವು ಕನ್ನಡದ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿತು.

ಕರ್ನಾಟಕ ವಿವಿಯಿಂದ ಗೌರವ ಡಾಕ್ಟರೇಟ್, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಅವರಿಗೆ ದೊರೆತವು. 1995ರಲ್ಲಿ ಅವರು ನಮ್ಮನ್ನು ಅಗಲಿದರು. ಕನ್ನಡ ಸಾಹಿತ್ಯಲೋಕವನ್ನು ಚಂದವಾಗಿ ಬೆಳೆಸಿದ ನಿರಂಜನರ ಜನ್ಮ ಶತಮಾನೋತ್ಸವದ ಈ ವರ್ಷ ಕನ್ನಡ ಸಾರಸ್ವತ ಲೋಕ ಒಂದು ಸ್ಮರಣೀಯ ಕಾರ್ಯಕ್ರಮವನ್ನು ಅವರ ನೆನಪಿನಲ್ಲಿ ಮಾಡಬೇಕು ಎನ್ನುವುದು ನಮ್ಮೆಲ್ಲರ ಆಗ್ರಹ ಆಗಬೇಕು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಆಲ್ಫೀ ಹೆವೆಟ್ಟ್- ವೀಲ್ ಚೇರ್ ಮೇಲಿನ ಟೆನ್ನಿಸ್ ಬೆರಗು

Continue Reading

ಅಂಕಣ

Guru Purnima 2024: ಗುರು ಎಂದರೆ ವ್ಯಕ್ತಿಯಲ್ಲ, ಅದ್ಭುತವಾದ ಶಕ್ತಿ!

Guru Purnima 2024: ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು, ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು, ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಹೀಗೆ ಗುರು-ಶಿಷ್ಯರಿಗೆ ಪರಂಪರೆಗಳ ಐತಿಹ್ಯವಿದೆ.

VISTARANEWS.COM


on

Guru Purnima 2024
Koo

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)

ಆಷಾಢ ಮಾಸ ಶುಕ್ಲ ಪಕ್ಷದಲ್ಲಿ ಬರುವ “ಕಡ್ಲಿಗರ ಹುಣ್ಣಿಮೆ”ಯನ್ನು ನಾವು ಆಚರಿಸ್ಪಡುವ, ಶ್ರೇಷ್ಠವಾದ ಪರ್ವವೆಂದರೆ ಅದು “ಗುರು ಪೂರ್ಣಿಮೆ”.
ಈ ದಿನ ನಾವು ನಂಬಿದ ನಮ್ಮಲ್ಲಿಯ ಅಂಧಕಾರವನ್ನು ತೊಲಗಿಸಿ ಜ್ಞಾನ ಸಾಕ್ಷಾತ್ಕಾರ ಮಾಡಿಸಿದ ನಮ್ಮ ಗುರುಗಳಿಗೆ ವಂದನೆ (Guru Purnima 2024) ಸಲ್ಲಿಸುವ ದಿನ. ಆ ಗುರುವನ್ನು ನೆನೆದು ಅವರ ಮಹತ್ವವನ್ನು ಸಾರುವ ದಿನ. ಗುರುಗಳು ನಮಗೆ ನಮ್ಮ ಜೀವನಕ್ಕೆ ಸರಿಯಾದ ಮಾರ್ಗ ಸೂಚಿಸುವ, ನಮ್ಮ ಕೈ ಹಿಡಿದು ನಡೆಸುವ ದಿಕ್ಸೂಚಿ,ದಾರಿದೀಪ. ಪರಮಾತ್ಮನ, ಪರಮಾರ್ಥದ ಅರಿವನ್ನು ತಿಳಿಯಲು ನಮ್ಮೊಳಗಿರುವ ನಮ್ಮ ಆತ್ಮಜ್ಯೋತಿಯನ್ನು ಜ್ಞಾನವೆಂಬ ತೈಲ ಹಾಕಿ ಬೆಳುಗುವಂತೆ ಮಾಡಿ ಜಾಗೃತಿಗೊಳಿಸುವ ಮಹತ್ವದ ವ್ಯಕ್ತಿ. ಆಧ್ಯಾತ್ಮದ ಜತೆಗೆ ಲೌಕಿಕ ಪ್ರಪಂಚದ ಹಾದಿಯಲ್ಲಿ ನಮ್ಮನ್ನು ನಡೆಸಿ, ನಮ್ಮ ಗುರಿ ಮುಟ್ಟವ ತನಕ ಸಹಾಯ ಮಾಡುವವನೇ “ ಶ್ರೇಷ್ಠಗುರು”.

ಅಲೆದು ಅಲೆದು ಹುಡಕಿದರೆ ಸಿಗುವವನಲ್ಲ ಗುರು, ನಮ್ಮನ್ನು ಹುಡುಕಿ, ನಾವು ಗುರುವನ್ನು ಕಾಣುವ ಮಟ್ಟಿಗೆ ಸಾಧನೆ ಮಾಡಿದ್ದರೆ ತಾನಾಗೇ ನಮ್ಮ ಬಳಿಗೆ ಬರುವವನು. ನಾವುಗಳೆಲ್ಲರೂ ಆ ಗುರುವಿನ ಮುಖಾಂತರವೇ ಪರಮಾತ್ಮನ ಅರಿವು, ಪ್ರಪಂಚದ ಅರಿವು, ಅರಿಯಬೇಕಾಗಿರುವುದರಿಂದ, ನಾವು ಪ್ರತಿ ಆಷಾಢ ಮಾಸದ ಈ ಪೌರ್ಣಿಮೆಯಂದು ಮಾತ್ರ ಗುರುವನ್ನು ಪೂಜಿಸದೆ.. ಅನು ದಿನ, ಅನು ಕ್ಷಣ, ಗುರುವನ್ನು ನಮ್ಮ ಅಂತರಂಗದಲ್ಲೇ ಪ್ರತಿಷ್ಠಾಪಿಸಿ ಪೂಜಿಸುತ್ತಾ ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹೀಗೆ ನನ್ನದೇನೂ ಇಲ್ಲ ಎಂದು ಅಂತಹ ಗುರುವಿಗೆ ಶರಣಾದಾಗ ಮಾತ್ರ ನಮ್ಮ ಗುರಿ ಮುಟ್ಟುವ ಪ್ರಯತ್ನ ಫಲಪ್ರದವಾಗುತ್ತದೆ.

ಉಪನಿಷತ್ತಿನಲ್ಲಿ ಗುರು

ಉಪನಿಷತ್ತಿನಲ್ಲಿ ಗುರು ಎಂಬುದನ್ನು ಈ ರೀತಿಯಾಗಿ ವಿವರಿಸಿದ್ದಾರೆ. “ಗು” ಎಂದರೆ ಅಂಧಕಾರವೆಂದು “ರು” ಎಂದರೆ ದೂರೀಕರಿಸುವ ಅಥವಾ ಅಜ್ಞಾನದ ಅಂಧಕಾರವನ್ನು ನಿವಾರಿಸಿ ಜ್ಞಾನದ ಹಾದಿಯ ಕಡೆಗೆ ನಡೆಸುವ ಎಂಬ ಅರ್ಥವಾಗುತ್ತದೆ. ಸಂಸ್ಕೃತದಲ್ಲಿ “ಗುರು” ಪದಕ್ಕೆ ಭಾರವಾದ ಎನ್ನುವ ಅರ್ಥವೂ ಇದೆಯೆನ್ನುತ್ತಾರೆ. ಯಾರು ಜ್ಞಾನದಿಂದ ಭಾರವಾಗಿರುವನೋ ಅವನೇ ನಿಜವಾದ ಗುರು ಎಂದು ಅರ್ಥೈಸಬಹುದೇನೋ ಎಂಬ ಅಭಿಪ್ರಾಯ.

ಆದಿಗುರು ಶ್ರೀ ಶಂಕರಭಗವತ್ಪಾದಚಾರ್ಯರು ಗುರು ಮಹಿಮೆ ಕುರಿತು ಹೀಗೆ ಸ್ತೋತ್ರವನ್ನು ಹೇಳಿದ್ದಾರೆ:

ಗುರುರ್ಬ್ರಹ್ಮಾ ಗುರುರ್ವಿಷ್ಣುಃ | ಗುರುರ್ದೇವೋ ಮಹೇಶ್ವರಃ |
ಗುರುಸ್ಸಾಕ್ಶಾತ್ ಪರಬ್ರಹ್ಮಃ | ತಸ್ಮೈ ಶ್ರೀ ಗುರವೇ ನಮಃ ||

ಗುರುವು ತ್ರೀಮೂರ್ತಿ ಸ್ವರೂಪಿಯಾಗಿದ್ದು, ಅದಕ್ಕೂ ಮಿಗಿಲಾದ ಪರಬ್ರಹ್ಮ ತತ್ತ್ವವೇ ಆಗಿದ್ದಾನೆ. ಅಂಥ ಗುರುವಿಗೆ ಪ್ರಣಾಮಗಳು ಎಂಬ ಅರ್ಥವಾಗುತ್ತದೆ. ಸ್ಕಂದ ಪುರಾಣದ “ಗುರುಗೀತೆ”ಯಲ್ಲಿ ಗುರುವನ್ನು ನಂದಾದೀಪದಂತೆ ಬೆಳಗುವ ಜ್ಯೋತಿಯಂತೆ ಎಂದು ಗುರುವಿನ ಹಿರಿಮೆಯನ್ನು ವಿಸ್ತಾರವಾಗಿ ತಿಳಿಸಲ್ಪಟಿದೆ :

ಅಖಂಡ ಮಂಡಲಾಕಾರಂ ವ್ಯಾಪ್ತಂ ಯೇನಾ ಚರಾಚರಂ।
ತತ್ಪದಂ ದರ್ಶಿತಂ ಯೇನಾ ತಸ್ಮೈ ಶ್ರೀಗುರವೇ ನಮಃ॥
ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ।
ಚಕ್ಷುರುನ್ಮೀಲಿತಂ ಯೇನ
ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ನಮ್ಮಲ್ಲಿರುವ ಅಜ್ಞಾನವೆಂಬ ಕಣ್ಣಿಗೆ ಅಂಟಿದ ಅಂಧಕಾರವನ್ನು ಜ್ಞಾನವೆಂಬ ಕಡ್ಡಿಯಿಂದ ಗುಣಪಡಿಸಿ, ಶಿಷ್ಯನ ಏಳ್ಗಿಗೆ ಬೇಕಾದ ಸೋಪಾನವನ್ನು ಹತ್ತಿಸುವ ಹಾಗೂ ಸಾಧನೆಯ ಮಾರ್ಗದರ್ಶನ ಮಾಡುವ ಶ್ರೀ ಗುರುವಿಗೆ ವಂದನೆಗಳು.
ಹೀಗೆ ನಮ್ಮ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಗುರುವಿನ ಮಹತ್ವವನ್ನು ಸಾರುತ್ತಾ ಬಂದಿದ್ದಾರೆ..

ನ ಗುರೋರಧಿಕಂ ತತ್ವಂ, ನ ಗುರೋರಧಿಕಂ ತಪಃ।
ತತ್ವ ಜ್ಞಾನಾತ್ ಪರಂ ನಾಸ್ತಿ, ತಸ್ಮೈ ಶ್ರೀ ಗುರವೇ ನಮಃ॥

ಅಂದರೆ ಗುರುವಿಗಿಂತ ಮೀರಿದ ತತ್ವ, ತಪಸ್ಸು ಯಾವುದೂ ಇಲ್ಲ. ಜ್ಞಾನವೆಂಬ ದಾರಿದೀಪವಾಗಿರುವ ಶ್ರೀ ಗುರುವೇ ನಿನಗೆ ವಂದನೆಗಳು ಎಂದು ಹೇಳಿದ್ದಾರೆ. ಶಾಶ್ವತವಾದ ಆನಂದವನ್ನು ಪಡೆಯುವುದು ಆ ಸದ್ಗುರುವಿನಿಂದಲೆ ಮಾತ್ರವೇ ಸಾಧ್ಯ ಎಂದು ಶ್ರೀ ಶಂಕರಾಚಾರ್ಯರು ತಮ್ಮ “ಗುರ್ವಷ್ಟಕಮ್” ಎಂಬ ಸ್ತೂತ್ರದಲ್ಲಿ ಹೀಗೆ ಹೇಳಿದ್ದಾರೆ :
ಶರೀರಂ ಸುರೂಪಂ ತಥಾ ವಾ ಕಲತ್ರಂ ಯಶಶ್ಚಾರು ಚಿತ್ರಂ ಧನಂ ಮೇರುತುಲ್ಯಮ್ ।

ಕಲತ್ರಂ ಧನಂ ಪುತ್ರಪೌತ್ರಾದಿ ಸರ್ವಂಗೃಹಂ ಬಾಂಧವಾಃ ಸರ್ವಮೇತದ್ಧಿ ಜಾತಮ್।।

ನಮಗೆ ಸುಂದರ ಶರೀರ, ಅಪಾರ ಅಂತಸ್ತು, ಕೀರ್ತಿ, ಸಂಸಾರ ಎಲ್ಲವೂ ಇದ್ದರೂ ಗುರುವಿನ ಚರಣಗಳಲ್ಲಿ ಭಕ್ತಿ, ಶ್ರದ್ಧೆ ಇಲ್ಲದವನಿಗೆ ಮೋಕ್ಷವಿಲ್ಲ ಎಂದು.ಏನೆಲ್ಲ ಸಾಧಿಸಿದ್ದರೂ, ತ್ಯಜಿಸಿದ್ದರೂ,ಗುರುವಿನ ಕರುಣೆಯಿಲ್ಲದೆ ಎಲ್ಲವೂ ವ್ಯರ್ಥ ಎಂದು ತಿಳಿಯುತ್ತದೆ.ಗುರುವಿನ ಪಾದಗಳಲ್ಲಿ ಮನಸ್ಸನ್ನು ನಿಲ್ಲಿಸದಿದ್ದರೆ ನಮ್ಮ ಸಾಧನೆ ಕಷ್ಟಸಾದ್ಯ ಎನ್ನುತ್ತಾ ಗುರುವಿನ ಮಹತ್ವನ್ನು ವಿವರಿಸುತ್ತಾರೆ ಆಚಾರ್ಯರು.

ನಮ್ಮ ಈ ಸನಾತನ ಪರಂಪರೆಯಲ್ಲಿ ಈಗಿರುವ “ಗುರುವಿನ ಗುರುವಿಗೆ ಪರಮಗುರು”ಎಂದೂ, “ಪರಮ ಗುರುವಿನ ಗುರುವನ್ನು ಪರಾಪರ ಗುರು”ಎಂದೂ,”ಪರಾಪರ ಗುರುವಿನ ಗುರುವನ್ನು ಪರಮೇಷ್ಠಿ ಗುರು”ಎಂದೂ ಗುರುತಿಸಲ್ಪಡುತ್ತಾರೆ. “ಗುರು ಪೂರ್ಣಿಮೆ’ಯಂದು ಸಮಸ್ತ ಗುರು ಪರಂಪರೆಯೇ ಪೂಜಿಸಲ್ಪಡುತ್ತದೆ. ವೇದದಲ್ಲಿನ ಬ್ರಹ್ಮ ತತ್ವವನ್ನು ಅರಿತಿದ್ದ ವಿಷ್ಣುವಿನ ಅವತಾರ ವಂದೇ ಕರೆಯಲ್ಪಡುವ ಶ್ರೀ ವೇದವ್ಯಾಸರನ್ನ ನಾವು ವಿಶೇಷವಾಗಿ ನಮ್ಮ ಗುರು ಪರಂಪರೆಯ ಜತೆಗೇ “ಗುರು ಪೂರ್ಣಿಮೆ”ಯಂದು ಪೂಜಿಸುತ್ತೇವೆ. ಲೋಕಗುರು, ಪರಮಗುರು ಎಂದೇ ಪ್ರಖ್ಯಾತರಾಗಿದ್ದರು ಶ್ರೀ ವೇದವ್ಯಾಸರು. ವೇದಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿದ್ದರಿಂದ ಇವರನ್ನು ವೇದವ್ಯಾಸರೆಂದು ಕರೆದರು. ಇಡೀ ಮಾನವ ಕುಲಕ್ಕೇ ಒಳಿತಾಗಲೆಂದು ಮತ್ತು ವೇದಗಳ ರಹಸ್ಯ ಸಾಮಾನ್ಯರೂ ಅರಿಯುವಂತಾಗ ಬೇಕೆಂದು ಅವರು ನಮಗಾಗಿ “ಮಹಾಭಾರತ”ವೆಂಬ ಲಕ್ಷ್ಯ ಶ್ಲೋಕಗಳಿರುವ “ಪಂಚಮವೇದ”ವನ್ನು ರಚಿಸಿ ಕೊಟ್ಟರು. ಜತೆಗೇ ಭಾಗವತವನ್ನೂ ಮತ್ತು ಹದಿನೆಂಟು ಪುರಾಣಗಳನ್ನೂ ರಚಿಸಿಕೊಟ್ಟರು. ಇಂತಹ ಪುಣ್ಯಾತ್ಮರು ವೇದವ್ಯಾಸರು. ಆದ್ದರಿಂದಲೇ ಅವರನ್ನು ಲೋಕಗುರುವೆಂದು ಕರೆದು ಶ್ರದ್ಧೆ ಹಾಗೂ ಭಕ್ತಿಯಿಂದ ಗುರು ಪೂರ್ಣಿಮೆಯಂದು ಪೂಜಿಸುತ್ತೇವೆ. “ಗುರು” ಬೇರೆ ಬೇರೆ ಗುರುಗಳು ಭೌತಿಕ ಶರೀರದಿಂದ ಅಂದರೆ ಹೊರಗಿನಿಂದ ನೋಡಲು ವ್ಯತ್ಯಾಸವಾಗಿದ್ದರೂ ಅವರೆಲ್ಲರ ಒಳಗಿನ “ಗುರು ತತ್ವ” ಮಾತ್ರ ಒಂದೇ ಆಗಿರುತ್ತದೆ. ಅವೆರೆಲ್ಲರೂ ಹೊರ ಹೊಮ್ಮಿಸುವ, ಪಸರಿಸುವ ಲಹರಿಗಳು ತುಂಬ ಚೈತನ್ಯದಾಯಕವಾಗಿರುತ್ತದೆ.

ಗುರುವಿಗೆ ಯಾವಾಗಲೂ ಶಿಷ್ಯನ ಉನ್ನತಿಯ, ಬೆಳವಣಿಗೆಯ ಚಿಂತನೆಯೇ ಆಗಿರುತ್ತದೆ. ಗುರು ತನ್ನ ಶಿಷ್ಯನನ್ನು ತಾನೇ ಹುಡುಕಿ ಕೊಳ್ಳುತ್ತಾನೆ. ಶಿಷ್ಯ ಸಿಕ್ಕಿದ ಕ್ಷಣವೇ ಗುರು ಶಿಷ್ಯನ ಏಳಿಗೆಯ “ ಸಿದ್ಧ ಸಂಕಲ್ಪ” ಮಾಡಿಕೊಂಡು ಬಿಟ್ಟಿರುತ್ತಾನೆ. ನಮ್ಮ ಉಪನಿಷತ್ತು, ಪುರಾಣಗಳು, ವೇದ, ಶಾಸ್ತ್ರಗಳೆಲ್ಲದರಲ್ಲೂ ಮತ್ತು ವಿಶೇಷವಾಗಿ ಭಕ್ತಿ ಮಾರ್ಗದಲ್ಲೂ ಗುರುವಿಗೆ ಅತ್ಯಂತ ಮಹತ್ವದ ಸ್ಥಾನವಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣ – ಅರ್ಜುನರ ಸಂಬಂಧ ಮತ್ತು ರಾಮಾಯಣದಲ್ಲಿ ಶ್ರೀರಾಮ – ಹನುಮರ ಸಂಬಂಧಗಳು ,ಗುರುಗೋವಿಂದ ಭಟ್ಟರು-ಸಂತ ಶಿಶುನಾಳ ಶರೀಫ , ರಾಮಕೃಷ್ಣ ಪರಮಹಂಸರು- ಸ್ವಾಮಿ ವಿವೇಕಾನಂದರು,ಬ್ರಹ್ಮಚೈತನ್ಯ ಗೊಂದಾವಲಿಕರ ಮಹಾರಾಜ-ಬ್ರಹ್ಮಾನಂದ ಮಹಾರಾಜ… ಇವರೆಲ್ಲ ಗುರು – ಶಿಷ್ಯರ ಸಂಬಂಧಕ್ಕೆ ಅತಿ ಸೂಕ್ತವಾದ ನಿದರ್ಶನಗಳು.

ಗುರುವಿನ ಬಗೆಗೆ ವರ್ಣಿಸುತ್ತಾ ಹೊರಟರೆ ಅದು ಸಾಗರದಷ್ಟು ಆಳ, ಅಗಲ. ಆಗಸದಷ್ಟು ವಿಶಾಲ, ವಿಸ್ತಾರ. ಗುರು ಎನ್ನುವುದು ಒಬ್ಬ ವ್ಯಕ್ತಿ ಎಂದು ನೋಡದೆ ನಾವು ಒಂದು ಅದ್ಬುತ ಶಕ್ತಿ ಎಂದು ಅರ್ಥೈಸಿ ತಿಳಿದುಕೊಂಡರೆ ನಮಗೆ ಗುರುವಿನ ಮಹತ್ವ ಇನ್ನೂ ಹೆಚ್ಚು ಆಳವಾಗಿ ತಿಳಿಯುತ್ತದೆ….

ಇದನ್ನೂ ಓದಿ: Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Continue Reading
Advertisement
Paris Olympics 2024
ಫ್ಯಾಷನ್39 seconds ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ34 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ42 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ57 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ60 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌