ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ? - Vistara News

ಪ್ರಮುಖ ಸುದ್ದಿ

ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?

ಯಾವುದೋ ಒಂದು ಗುಂಪನ್ನು ಮೆಚ್ಚಿಸಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ಪಠ್ಯ ಪುಸ್ತಕ ರಚನೆಯ ಜವಾಬ್ದಾರಿಯನ್ನು ರಾಜಕೀಯ ಹಿತಾಸಕ್ತಿ ಇಲ್ಲದ ಚಿಂತಕರಿಗೆ ಒಪ್ಪಿಸಬೇಕು.

VISTARANEWS.COM


on

karnataka government decision to revise textbook vistara column
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

“ಮೊಘಲ್ ಬಾದಶಹರಲ್ಲಿ ಕೊನೆಯವನಾದ ಔರಂಗಜೇಬನು ಕಾಲಚಕ್ರವನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನ ಮಾಡಿ ಪ್ರಗತಿಯನ್ನು ತಡೆದು, ಕಡೆಗೆ ನುಚ್ಚು ನೂರು ಮಾಡಿದನು. ಜನತೆಯ ಸ್ವಭಾವಕ್ಕನುಗುಣವಾಗಿ ಎಲ್ಲಿಯವರೆಗೆ ಎಲ್ಲರನ್ನೂ ಸಮಾನವಾಗಿ ಕಂಡು, ರಾಷ್ಟ್ರೀಯ ಭಾವನೆಯನ್ನು ಉದ್ದೀಪನಗೊಳಿಸಲು ಮೊಘಲ್ ರಾಜರು ಪ್ರಯತ್ನಿಸಿದರೋ, ಅಲ್ಲಿಯವರೆಗೂ ಅವರು ಬಲಿಷ್ಠರಾಗಿದ್ದರು. ಔರಂಗಜೇಬನು ಇದಕ್ಕೆ ವಿರುದ್ಧವಾಗಿ ನಡೆದುಕೊಂಡು, ಭಾರತೀಯನಲ್ಲದ ಮುಸ್ಲಿಂ ಚಕ್ರವರ್ತಿಯಾಗಲು ಪ್ರಯತ್ನಪಟ್ಟನೋ ಅಂದಿನಿಂದಲೇ ಮೊಘಲ್ ಚಕ್ರಾಧಿಪತ್ಯವು ಕುಸಿಯಲು ಆರಂಭವಾಯಿತು. ಅಕ್ಬರನೂ ಅವನ ವಂಶಿಕರೂ ಮಾಡಿದ ಕೆಲಸವೆಲ್ಲ ನಿರರ್ಥಕವಾಯಿತು. “
-ಜವಾಹರಲಾಲ್ ನೆಹರು

ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರು ತಮ್ಮ ʼಭಾರತ ದರ್ಶನʼ ಸರಣಿಯ ಮೊದಲ ಸಂಪುಟದಲ್ಲಿ ಬರೆದಿರುವ ಈ ಮಾತಿಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಬಹುದು. ಮೊಘಲ್ ವಂಶದ ಬಹುತೇಕ ರಾಜರು ಔರಂಗಜೇಬನ ರೀತಿಯೇ ಇದ್ದರು ಎನ್ನಲೂ ಬಹುದು. ಇನ್ನೂ ಕೆಲವರು ಇದು ನೆಹರು ಅವರ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಎನ್ನಲೂ ಬಹುದು. ಈ ಎಲ್ಲವೂ ಚರ್ಚೆಯ ವಿಷಯಗಳು. ಆದರೆ, ನೆಹರು ಅವರ ಈ ಮಾತಿನಲ್ಲಿ- ರಾಜನೊಬ್ಬ ಹೇಗಿರಬೇಕು ಎಂಬ ವಿವೇಕವನ್ನು ಗಮನಿಸಬೇಕು.

ಆಡಳಿತ ಎನ್ನುವುದು ಎಲ್ಲಿಯವರೆಗೆ ಜನರ ಭಾವನೆಗಳಿಗೆ ಅನುಗುಣವಾಗಿ ಇರುತ್ತದೆಯೋ ಅಲ್ಲಿಯವರೆಗೆ ನಿರಾತಂಕವಾಗಿ ನಡೆಯುತ್ತದೆ. ಆದರೆ ಎಂದು ಕೆಲವೇ ತನ್ನ ಸುತ್ತಮುತ್ತಲಿರುವವರ ವಿಷಯವನ್ನೋ ಅಥವಾ ತನ್ನ ಖಾಸಗಿ ನಂಬಿಕೆಯನ್ನೋ ಸಮಾಜದ ಮೇಲೆ ಹೇರಲು ಹೊರಟಾಗ ಸಮಾಜ ಅದನ್ನು ಪ್ರತಿಭಟಿಸುತ್ತದೆ. ಅದು ರಾಜಾಡಳಿತವಾದರೂ ಅಷ್ಟೆ, ಆಕ್ರಮಣಕಾರರಾದರೂ ಅಷ್ಟೆ, ಪ್ರಜಾಪ್ರಭುತ್ವವಾದರೂ ಅಷ್ಟೆ. ಈ ಸಂದೇಶವು ಕರ್ನಾಟಕದಲ್ಲಿ 10-15 ವರ್ಷದಿಂದ ನಡೆಯುತ್ತಿರುವ ಕದನಕ್ಕೆ ಹೊಂದಿಕೆಯಾಗುತ್ತದೆ.

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಪೂರ್ಣಪ್ರಮಾಣದ ಸರ್ಕಾರ ರಚನೆಯಾದ ನಂತರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (textbook revision) ಕೈ ಹಾಕಲಾಯಿತು. ಪ್ರೊ. ಮುಡಂಬಡಿತ್ತಾಯ ಅವರ ಅಧ್ಯಕ್ಷತೆಯ ಸಮಿತಿ ರಚಿಸಿದ್ದ ಬಿಜೆಪಿ ಸರ್ಕಾರ, ಪಠ್ಯಪುಸ್ತಕ ಬದಲಾಯಿಸುವ, ವಿವಿಧ ಪಠ್ಯವನ್ನು ಸೇರಿಸುವ ಕೆಲಸ ಮಾಡಿತು. ಧರಣಿ ಮಂಡಲ ಮಧ್ಯದೊಳಗೆ ಪದ್ಯದ ಆಶಯವನ್ನೇ ಬಿಜೆಪಿ ತಿರುಚಿದೆ ಎಂದು ಆರೋಪಿಸಲಾಯಿತು. ಇದಕ್ಕೆ ಸಹಜವಾಗಿಯೇ ಕಾಂಗ್ರೆಸ್ ಹಾಗೂ ಎಡಪಂಥೀಯ ಒಲವುಳ್ಳ ಲೇಖಕರು ವಿರೋಧ ವ್ಯಕ್ತಪಡಿಸಿದರು.

2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿ ಮಾಡಿದ ಈ ‘ತಪ್ಪನ್ನುʼ ಸರಿಮಾಡಲು ಮುಂದಾಯಿತು. ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ರಚನಾ ಸಮಿತಿಯನ್ನು ರಚಿಸಿತು. ಈ ಸಮಿತಿಯು ಅನೇಕ ಬದಲಾವಣೆಗಳನ್ನು ಮಾಡಿತು. ಆದರೆ, ಬ್ರಾಹ್ಮಣರು ಯಜ್ಞ ಯಾಗಾದಿಗಳನ್ನು ಮಾಡಲು ತುಪ್ಪವನ್ನು ಬಳಸಿದ್ದರಿಂದ ಪ್ರಪಂಚದಲ್ಲಿ ಆಹಾರದ ಅಭಾವ ಸೃಷ್ಟಿಯಾಯಿತು ಎಂಬ ಸಾಲುಗಳನ್ನು ಈ ಸಮಿತಿ ಸೇರಿಸಿತ್ತು. ಇದಕ್ಕೆ ಬಿಜೆಪಿ ವಲಯದಿಂದ ಸಹಜವಾಗಿ ವಿರೋಧ ವ್ಯಕ್ತವಾಯಿತು.

siddaramaiah and niranjanaradhya
No textbooks from 3 years to 6 years Children

ಕಾಂಗ್ರೆಸ್ ಸಮಯದಲ್ಲಿ ಮಾಡಿದ್ದ ಈ ʼಮಹಾ ಪ್ರಮಾದʼವನ್ನು ಸರಿಪಡಿಸಲು 2019ರಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮುಂದಾಯಿತು. ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಸಮಿತಿ ರಚನೆ ಮಾಡಿ ಪಠ್ಯಪುಸ್ತಕವನ್ನು ತಿದ್ದಿತು. ಇದರಲ್ಲಿ ನಾರಾಯಣಗುರು, ಕುವೆಂಪು ಸೇರಿ ಅನೇಕರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಮತ್ತೊಮ್ಮೆ ಇನ್ನೊಂದು ತುದಿಯಲ್ಲಿದ್ದ ಕಾಂಗ್ರೆಸ್ ಹಾಗೂ ಎಡ ಪರ ಲೇಖಕರ ವಲಯದಿಂದ ಕೇಳಿಬಂದಿತು.
ಇದೀಗ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೇರಿ ಇನ್ನೂ ಒಂದು ತಿಂಗಳೂ ಕಳೆದಿಲ್ಲ. ಈಗಾಗಲೆ ಶಾಲೆಗಳು ಆರಂಭವಾಗಿದ್ದರೂ, ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡುವ ಮಾತುಗಳನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಆದಿಯಾಗಿ ಅನೇಕರು ಮಾತನಾಡುತ್ತಿದ್ದಾರೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪಠ್ಯಪುಸ್ತಕ ಪರಿಷ್ಕರಣೆ ಆಗುವುದು ಖಚಿತ ಎಂದಿದ್ದಾರೆ. ಇದೆಲ್ಲವೂ ರಾಜಕೀಯ ಪಕ್ಷಗಳು ತಮ್ಮ ಸೈದ್ಧಾಂತಿಕ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರ ಸ್ಪಷ್ಟ ಸಂಕೇತ. ಆದರೆ, ಈ ಪ್ರಯತ್ನದಲ್ಲಿ ವಿದ್ಯಾರ್ಥಿಗಳು ಸಂತ್ರಸ್ತರಾಗುತ್ತಿದ್ದಾರೆ ಎಂಬುದನ್ನೇ ಸರಕಾರ ಮರೆತಿದೆ.

ದೇಶದ ಎರಡನೇ ರಾಷ್ಟ್ರಪತಿಯಾಗಿದ್ದ ಡಾ. ಎಸ್. ರಾಧಾಕೃಷ್ಣನ್ ಅವರು ಸ್ವತಃ ಶಿಕ್ಷಕರು, ಶಿಕ್ಷಣ ತಜ್ಞರೂ ಆಗಿದ್ದರು. ಅವರು ಹೇಳಿರುವಂತೆ, “ಶಿಕ್ಷಣದ ಅಂತಿಮ ಗುರಿಯು ಮುಕ್ತ ಆಲೋಚನೆಯ ಮನುಷ್ಯನನ್ನು ಸೃಜಿಸುವುದಾಗಿರಬೇಕು. ಈ ಮನುಷ್ಯನು ಐತಿಹಾಸಿಕ ಸನ್ನಿವೇಶಗಳು ಹಾಗೂ ನಿಸರ್ಗದ ಪ್ರತಿಕೂಲಗಳ ವಿರುದ್ಧ ಹೋರಾಡುವವನಾಗಿರಬೇಕು” ಎಂದರು. ಅಲ್ಲಿಗೆ, ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಪ್ರವಾಹವನ್ನು ಕಾಯ್ದುಕೊಳ್ಳಬೇಕು ಎಂಬ ಸಂದೇಶವನ್ನು ರಾಧಾಕೃಷ್ಣನ್ ಅವರು ನೀಡಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐದು ವರ್ಷಕ್ಕೊಮ್ಮೆ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ನಡೆಸಲಾಗುತ್ತದೆ. ತಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡುವವರನ್ನು ಜನರು ಆಯ್ಕೆ ಮಾಡಲಿ, ತಮಗೆ ಇಷ್ಟ ಇಲ್ಲದವರನ್ನು ಮನೆಗೆ ಕಳಿಸಲಿ ಎಂದು ಮಾಡಿಕೊಂಡಿರುವ ವ್ಯವಸ್ಥೆ. ಹೊಸ ಸರ್ಕಾರ ಬಂದ ಕೂಡಲೆ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಬೇಕು. ಹಳೆಯ ವ್ಯವಸ್ಥೆಯಲ್ಲಿರುವಲೋಪದೋಷಗಳನ್ನು, ವ್ಯವಸ್ಥೆಗೆ ಧಕ್ಕೆ ಆಗದಂತೆ ಹೊರತೆಗೆಯಬೇಕು ಎನ್ನುವುದು. ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಬರಬಹುದು, ಮತ್ತೆ ಕಾಂಗ್ರೆಸ್ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಬಹುದು. ಇಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಯಾವುದೇ ಪಕ್ಷಗಳು ಬದಲಾಗುತ್ತವೆಯೇ ವಿನಃ ಸರ್ಕಾರ ಅಲ್ಲ. ಸರ್ಕಾರ ಎನ್ನುವುದು ನಿರಂತರ ವ್ಯವಸ್ಥೆ. ಒಟ್ಟಾರೆಯಾಗಿ ಅದು ಕರ್ನಾಟಕ ಸರ್ಕಾರ, ಭಾರತ ಸರ್ಕಾರ, ಮಹಾರಾಷ್ಟ್ರ ಸರ್ಕಾರ, ಇತ್ಯಾದಿ ಇತ್ಯಾದಿ. ಪಕ್ಷಗಳೂ ಹೆಸರು ಹೇಳುವುದು, ಸಿಎಂ, ಪಿಎಂ ಇಲ್ಲವೇ ಪಕ್ಷಗಳ ಹೆಸರಿನಲ್ಲಿ ಸರ್ಕಾರವನ್ನು ಸಂಬೋಧಿಸುವುದು ನಮ್ಮ ಅನುಕೂಲಕ್ಕಾಗಿ ಮಾತ್ರ.

ಬಿಜೆಪಿ ಸರ್ಕಾರ ರಚನೆ ಮಾಡಿದ ಕೂಡಲೆ ಅದರ ಕಣ್ಣು ಶಾಲಾ ಮಕ್ಕಳ ಪಠ್ಯಪುಸ್ತಕದ ಮೇಲೆ ಹೋಗುತ್ತದೆ. ಅವರ ವಾದ ಏನು? ಭಾರತದ ಇತಿಹಾಸವನ್ನು ಕಳೆದ 75 ವರ್ಷಗಳಲ್ಲಿ ತಪ್ಪಾಗಿ ಹೇಳಲಾಗಿದೆ. ಅಲೆಕ್ಸಾಂಡರ್, ಅಕ್ಬರ್, ಟಿಪ್ಪುವನ್ನೇ ಮೆರೆಸಲಾಗಿದೆ. ನಮ್ಮದೇ ರಾಜರಾದ ಕೃಷ್ಣದೇವರಾಯ, ಶಿವಾಜಿ, ರಾಣಾ ಪ್ರತಾಪನನ್ನು ಮರೆತಿದ್ದಾರೆ. ಕೇವಲ ಮಹಾತ್ಮ ಗಾಂಧಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಬಿಂಬಿಸಲಾಗಿದೆ. ಕ್ರಾಂತಿಕಾರಿಗಳನ್ನು ಕಡೆಗಣಿಸಲಾಗಿದೆ…. ಹೀಗೆ ಇತಿಹಾಸದಲ್ಲಿ ಆಗಿರುವ ಪ್ರಮಾದಗಳ ದೊಡ್ಡ ಪಟ್ಟಿಯೇ ಬಿಜೆಪಿ ಹಾಗೂ ಅದರ ಚಿಂತಕ ವಲಯದಲ್ಲಿದೆ. ಇದು ಸತ್ಯ ಕೂಡ. ನಮ್ಮ ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸಿದರೆ ಅವರಲ್ಲಿ ಸ್ವಾಭಿಮಾನ ಜಾಗೃತಿಯಾಗುತ್ತದೆ. ಅವರು ಯಾವುದೇ ಭ್ರಷ್ಟಾಚಾರ, ಅನಾಚಾರಕ್ಕೆ ಮುಂದಾಗದೆ ದೇಶದ ಏಳಿಗೆಗಾಗಿ ದುಡಿಯುತ್ತಾರೆ. ಆಗ ದೇಶವು ಇಡೀ ವಿಶ್ವದಲ್ಲಿ ಗೌರವಯುತ ಸ್ಥಾನ ಪಡೆಯುತ್ತದೆ. ಇದರಲ್ಲಿ ತಪ್ಪೇನೂ ಇಲ್ಲ.

Vinayak Damodar Savarkar and Keshav Baliram Hedgewar
No textbooks from 3 years to 6 years Children

ಆದರೆ ಶಿಕ್ಷಣ ಎನ್ನುವುದು ಕೇವಲ ಪಠ್ಯಪುಸ್ತಕ ಎಂಬ ತಪ್ಪು ತಿಳುವಳಿಕೆ ಇಲ್ಲಿದೆ. ಸಮಾಜ ವಿಜ್ಞಾನ, ಕನ್ನಡ ಪಠ್ಯಪುಸ್ತಕ ಬದಲು ಮಾಡಿಬಿಟ್ಟರೆ ಇಡೀ ಮಕ್ಕಳ ಮನಸ್ಥಿತಿ ಬದಲಾಗಿಬಿಡುತ್ತದೆ ಎನ್ನುವುದು ಭ್ರಮೆ. ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕವೂ ಒಂದು ಭಾಗ. ಇದರಲ್ಲಿ ಶಾಲಾ ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ, ಶಿಕ್ಷಕರ ತರಬೇತಿ, ಮೌಲ್ಯಮಾಪನ ವ್ಯವಸ್ಥೆ, ಬೋಧನಾ ವಿಧಾನ, ಆಟೋಟಗಳಿಗೆ ಪ್ರೋತ್ಸಾಹಕ, ವಿಜ್ಞಾನ ತಿಳಿವಳಿಕೆ… ಹೀಗೆ ಹತ್ತಾರು ವಿಚಾರಗಳು ಸೇರಿ ಒಬ್ಬ ಒಳ್ಳೆಯ, ದೇಶಭಕ್ತ ವಿದ್ಯಾರ್ಥಿ ತಯಾರಾಗುತ್ತಾನೆ. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮಾನವ ಸಂಪನ್ಮೂಲ ಸಚಿವರಾಗಿದ್ದ ಡಾ. ಮುರಳೀಮನೋಹರ ಜೋಶಿ ಅವರು ಪಠ್ಯಪುಸ್ತಕಗಳ ಪರಿಷ್ಕರಣೆಗೆ ಕೈಹಾಕಿದರು. ಆಗ ದೇಶಾದ್ಯಂತ ಕೇಸರೀಕರಣದ ಹುಯಿಲೆಬ್ಬಿಸಲಾಯಿತು. ಆನಂತರ 2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬಂದಾಗ, ಬಿಜೆಪಿ ಅವಧಿಯ ಅನೇಕ ಬದಲಾವಣೆಗಳನ್ನು ತೆಗೆದುಹಾಕಿತು. ಆಗ ಬಿಜೆಪಿ ಮತ್ತೆ, ಇದು ಹಿಂದುಗಳನ್ನು ದಮನ ಮಾಡುವ ಕ್ರಿಯೆ ಎಂದು ಬೊಬ್ಬೆ ಹಾಕಿತು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸರಳ ಬಹುಮತ ಪಡೆದು ಸ್ಥಾಪನೆಯಾಗಿದೆ. ಯಾವುದೇ ಪಕ್ಷ ಸುಲಭವಾಗಿ ಆಪರೇಷನ್ ಮಾಡಿ ಸರ್ಕಾರವನ್ನು ಬೀಳಿಸಲು ಸಾಧ್ಯವಾಗದಿರುವಷ್ಟು ಸುಭದ್ರ ಸಂಖ್ಯೆಯನ್ನು ಜನರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ಈಗ ಜನರಿಗೆ ಅತ್ಯಗತ್ಯವಾಗಿ ಬೇಕಾದ ಅನೇಕ ವಿಚಾರಗಳತ್ತ ಸರ್ಕಾರ ಗಮನ ಹರಿಸುವ ಅಗತ್ಯವಿದೆ.

ಈಗಾಗಲೆ ಚುನಾವಣೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಒಟ್ಟಾರೆ ಪ್ರಣಾಳಿಕೆಯನ್ನು ಜಾರಿಗೆ ತರಬೇಕಿದೆ. ಪ್ರತಿ ವರ್ಷ ಬಜೆಟ್ ಮಂಡಿಸುವ ಮೂಲಕ ಒಂದೊಂದೇ ಹೆಜ್ಜೆ ರಾಜ್ಯವನ್ನು ಸುಭಿಕ್ಷದೆಡೆಗೆ ಕರೆದೊಯ್ಯಬೇಕಿದೆ. ಇದೆಲ್ಲದರ ನಡುವೆ ಎದುರಾಗುವ ಬರ, ನೆರೆ ಮುಂತಾದ ಪ್ರಕೃತಿ ವಿಕೋಪಗಳಿಗೂ ಸ್ಪಂದಿಸಬೇಕಿದೆ. ಆದರೆ ಕಾಂಗ್ರೆಸ್ ಸರ್ಕಾರ ಇದೆಲ್ಲವನ್ನೂ ಬಿಟ್ಟು ಮತ್ತೆ ಪಠ್ಯಪುಸ್ತಕಕ್ಕೆ ಕೈ ಹಾಕಿದೆ. ಬಿಜೆಪಿ ಅವಧಿಯಲ್ಲಿ ನಡೆಸಿದ ತಿದ್ದುಪಡಿಗಳನ್ನು ಬದಲಾಯಿಸಲು ಮುಂದಾಗಿದೆ. ಯಾರದ್ದೋ ಮೇಲಿನ ದ್ವೇಷವನ್ನು ಪಠ್ಯದ ಮೇಲೆ ತೀರಿಸಲು ಹೊರಟಿದೆ. ಸ್ವಾತಂತ್ರ್ಯ ಹೋರಾಟಗಾರರ ಕುರಿತ ಪಾಠ, ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರು ರಚಿಸಿರುವ ಪಾಠ, ಆರ್ ಎಸ್ ಎಸ್ ಸಂಸ್ಥಾಪಕ ಡಾ. ಕೇಶವ ಬಲಿರಾಮ್ ಹೆಡಗೆವಾರ್ ಅವರ ಭಾಷಣದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ. ಕಾಂಗ್ರೆಸ್ ಹೇಳುವ ಪ್ರಕಾರ ಈ ಪಠ್ಯಪುಸ್ತಕವನ್ನು ಸರಿಯಾದ ಕ್ರಮದಲ್ಲಿ ಪರಿಷ್ಕರಣೆ ಮಾಡಲಿಲ್ಲ. ಸಮಿತಿಯಲ್ಲಿ ಇದ್ದವರಿಗೆ ಅದಕ್ಕೆ ತಕ್ಕ ಅರ್ಹತೆ ಇರಲಿಲ್ಲ, ಒಟ್ಟಾರೆ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ಆದೇಶವನ್ನೇ ನೀಡಿಲ್ಲ ಎಂಬಂತಹ ವಾದಗಳನ್ನು ಮುಂದಿಡಲಾಗುತ್ತಿದೆ. ಚಿಂತಕರು ಎಂದು ಹೇಳಿಕೊಂಡ, ಎಡ ಪರ, ಕಾಂಗ್ರೆಸ್ ಪರ ಸಾಹಿತಿಗಳ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕೈಬಿಡಲು ಮನವಿ ಮಾಡಿದೆ.

ಈಗಾಗಲೆ ಚುನಾವಣೆ ಪ್ರಣಾಳಿಕೆಯಲ್ಲೂ ಕಾಂಗ್ರೆಸ್ ಈ ವಿಷಯವನ್ನು ಹೇಳಿರುವುದರಿಂದ ಅದಕ್ಕೆ ಬದ್ಧವಾಗಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಇಲ್ಲಿರುವ ಪ್ರಶ್ನೆ, ಇಷ್ಟೆಲ್ಲ ರಾದ್ಧಾಂತದ ನಂತರ ಶಾಲೆಯಲ್ಲಿ ಪಾಠ ಓದುವ ಮಕ್ಕಳ ಪಾಡೇನು? ಇಂತಹ ಪಾಠವನ್ನು ಈ ಬಾರಿ ಮೌಲ್ಯಮಾಪನಕ್ಕೆ ಪರಿಗಣನೆ ಮಾಡುವುದಿಲ್ಲ ಎಂದು ತಿದ್ದೋಲೆಯನ್ನು ಸರ್ಕಾರ ಕಳಿಸಬಹುದು. ಆಗ ಶಿಕ್ಷಕರು ಆ ಪಾಠವನ್ನು ಬೋಧನೆ ಮಾಡುವುದಿಲ್ಲ. ಆದರೆ ಆ ಪಾಠ ವಿದ್ಯಾರ್ಥಿಯ ಪುಸ್ತಕದಲ್ಲಿ ಆ ಪಾಠ ಹಾಗೆಯೇ ಇರುತ್ತದೆ ಅಲ್ಲವೇ? ಮೌಲ್ಯಮಾಪನ ಮಾಡದಿದ್ದ ಮಾತ್ರಕ್ಕೆ, ಶಿಕ್ಷಕರು ಬೋಧಿಸದ ಮಾತ್ರಕ್ಕೆ ವಿದ್ಯಾರ್ಥಿಗಳು ಆ ಪಾಠವನ್ನು ಓದುವುದನ್ನು ತಡೆಯಲು ಆಗುತ್ತದೆಯೇ? ಸ್ವಾತಂತ್ರ್ಯ ಹೋರಾಟಗಾರರ ಕುರಿತು ಇಂತಹ ಒಳ್ಳೆಯ ಪಾಠವನ್ನು ಸರ್ಕಾರ ಏಕೆ ನಿಷೇಧ ಮಾಡಿದೆ? ಎಂದು ವಿದ್ಯಾರ್ಥಿಗೆ ಅನ್ನಿಸುವುದಿಲ್ಲವೇ? ಆಗ ಸರ್ಕಾರದ ಬಗ್ಗೆ ಆತನಿಗೆ ಯಾವ ಅಭಿಪ್ರಾಯ ಬರಬಹುದು? ಇಂತಹ ಸೂಕ್ಷ್ಮ ಸಂಗತಿಗಳನ್ನೂ ಆಳುವವರು ಗಮನದಲ್ಲಿ ಇರಿಸಿಕೊಳ್ಳಬೇಕು. ಏಕೆಂದರೆ ರಾಧಾಕೃಷ್ಣನ್ ಅವರು ಹೇಳಿದಂತೆ ಶಿಕ್ಷಣ ಎನ್ನುವುದು ಮನುಷ್ಯನನ್ನು ಸೃಜನಶೀಲನನ್ನಾಗಿಸಬೇಕೆ ಹೊರತು ಈ ರೀತಿ ಒಟ್ಟಾರೆ ವ್ಯವಸ್ಥೆಯ ಮೇಲೆಯೇ ಅನುಮಾನವನ್ನು ಹುಟ್ಟುಹಾಕುವುದಲ್ಲ.

ಇದನ್ನೂ ಓದಿ: ವಿಸ್ತಾರ ಅಂಕಣ: ವಿದೇಶದಲ್ಲಿ ಕಾಲಿಟ್ಟ ತಕ್ಷಣ ರಾಹುಲ್ ಗಾಂಧಿ ಭಾರತ ವಿರೋಧಿ ಆಗುವುದೇಕೆ?

ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ ತಪ್ಪನ್ನು ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಲಿಲ್ಲ. ಕೇವಲ ಪಠ್ಯಪುಸ್ತಕ ಪರಿಷ್ಕರಣೆಯಿಂದ ಯಾವ ಉದ್ದೇಶವೂ ಈಡೇರುವುದಿಲ್ಲ ಎನ್ನುವುದು ಆ ಪಕ್ಷದ ಅರಿವಿಗೆ ಬಂದಿತ್ತು. ಹಾಗಾಗಿ ಒಟ್ಟಾರೆ ಶಿಕ್ಷಣ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಬದಲಾವಣೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಆರಂಭಿಸಿದೆ. ಹಂತಹಂತವಾಗಿ ಸುಮಾರು 10 ವರ್ಷದಲ್ಲಿ ಈ ಯೋಜನೆ ಜಾರಿಯಾದಾಗ ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎನ್ನುವುದು ನಿರೀಕ್ಷೆ.

No textbooks from 3 years to 6 years Children
No textbooks from 3 years to 6 years Children

ಈಗಂತೂ ಶಾಲೆಗಳು ಆರಂಭವಾಗಿವೆ. ಪ್ರಸಕ್ತ ವರ್ಷದಲ್ಲಿ ಪಾಠ ಪ್ರವಚನಗಳು ಎಂದಿನಂತೆ ನಡೆಯಲಿ. ಮುಖ್ಯವಾಗಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಕಟ್ಟಡಗಳು ಬೀಳುವ ಹಂತದಲ್ಲಿವೆ. ವಿದ್ಯಾರ್ಥಿಗಳು ಕಿಲೋಮೀಟರ್ ಗಟ್ಟಲೆ ನಡೆದೇ ಶಾಲೆಗೆ ಹೋಗುತ್ತಿದ್ದಾರೆ. ಶಿಕ್ಷಕರ ಹತ್ತಾರು ಬೇಡಿಕೆಗಳನ್ನು ಈಡೇರಿಸಬೇಕಿದೆ. ಶಿಕ್ಷಕರ ತರಬೇತಿಯತ್ತಲೂ ಗಮನ ನೀಡಬೇಕಿದೆ. ಬೇಕಿದ್ದರೆ ಪಠ್ಯಪುಸ್ತಕ ಪರಿಷ್ಕರಣೆಗೊಂದು ತಜ್ಞರ ಸಮಿತಿಯನ್ನು ರಚನೆ ಮಾಡಿ ಕೆಲಸ ಆರಂಭಿಸಲಿ. ಅವರು ಈ ವರ್ಷದ ಅಂತ್ಯಕ್ಕೆ ವರದಿ ನೀಡಿ, ಆ ವರದಿಯ ಅನುಷ್ಠಾನದ ಕುರಿತು ಸರ್ಕಾರ ನಿರ್ಧಾರ ಮಾಡಲಿ. ಮುಂದಿನ ವರ್ಷದಿಂದ ಹೊಸ ಪಠ್ಯಕ್ರಮಕ್ಕೆ ತೆರೆದುಕೊಳ್ಳಬಹುದು. ಅದನ್ನು ಬಿಟ್ಟು, ಯಾವುದೋ ಒಂದು ಗುಂಪನ್ನು ಮೆಚ್ಚಿಸುವ ಸಲುವಾಗಿ ಹಾಗೂ ಸರ್ಕಾರದ ಮೇಲಿನ ಗಮನವನ್ನು ಬೇರೆಡೆ ಸೆಳೆಯಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಮಾಜ ಸುಧಾರಣೆಗೆ ಶ್ರಮಿಸಿದವರನ್ನು ರಾಜಕಾರಣ ಹಾಗೂ ಸ್ವಾರ್ಥಕ್ಕಾಗಿ ಅವಮಾನಿಸುವುದಕ್ಕೆ ಅಂತ್ಯ ಹಾಡುವ ಕೆಲಸ ಕಾಂಗ್ರೆಸ್ ಸರ್ಕಾರದಿಂದಲೇ ಆರಂಭವಾಗಲಿ.

ಇದನ್ನೂ ಓದಿ: ವಿಸ್ತಾರ ಅಂಕಣ: ಗ್ಯಾರಂಟಿ ಮರೆಮಾಚಲು ʼಗೋಹತ್ಯೆʼ ಗುರಾಣಿಯಾಗಬೇಕೆ?

ಕಡೆಯದಾಗಿ ನೆಹರು ಅವರು ಬರೆದಿರುವ ಮೊಘಲ್ ಚಕ್ರಾಧಿಪತ್ಯದ ಸಾಲುಗಳಿಗೆ ಮರಳೋಣ. ಅವರು ಹೇಳಿದರೆ, ನಾನು ಹಾಗೂ ನನ್ನ ವಯಸ್ಸಿನ(35ರಿಂದ 45) ತಲೆಮಾರು ಬಾಬರ್ ನಿಂದ ಔರಂಗಬೇಬ್ ವರೆಗೆ ಎಲ್ಲರನ್ನೂ ಓದಿದ್ದೇವೆ. ಅವರ ಚಿತ್ರಪಟುಗಳು ನಮ್ಮ ಸ್ಮೃತಿಪಟಲದಲ್ಲಿವೆ. ಆದರೆ, ಕೃಷ್ಣದೇವರಾಯ, ಶಿವಾಜಿ, ರಾಣಾ ಪ್ರತಾಪ ಬಗ್ಗೆ ನಾವು ಓದಿದ್ದು ಕಡಿಮೆ. ಅಂತೆಯೇ ನಮ್ಮ ರಾಜ್ಯದಲ್ಲೂ ಟಿಪ್ಪು, ಹೈದರಾಲಿ ಬಗ್ಗೆ ಓದಿದಷ್ಟು ನಾಲ್ವಡಿ, ಮುಮ್ಮಡಿ ಒಡೆಯರ್ ಬಗ್ಗೆ ಓದಿದ್ದು ಕಡಿಮೆ. ಏಕೆಂದರೆ, ಪಠ್ಯ ಪುಸ್ತಕದ ಮೇಲೆ ಬಹಳಷ್ಟು ವರ್ಷಗಳ ಕಾಲ ಎಡಪಂಥೀಯ ಸಿದ್ಧಾಂತವಾದಿಗಳ ಹಿಡಿತವಿತ್ತು. ಅವರು ಎಲ್ಲವನ್ನೂ ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿಯೇ ರೂಪಿಸಿದರು. ಬಳಿಕ ಬಂದ ಬಿಜೆಪಿ ಸರಕಾರ, ಈ ಪ್ರಮಾದವನ್ನು ಸರಿಪಡಿಸುತ್ತಲೇ, ತನಗಿಷ್ಟವಾದ ಸಿದ್ಧಾಂತವನ್ನು ಮೆರೆಸಲು ಯತ್ನಿಸಿತು. ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಈ ಎರಡೂ ತಪ್ಪೇ.

ಹಾಗಾಗಿ, ಪಠ್ಯ ಪುಸ್ತಕ ಪರಿಷ್ಕರಣೆಯ ಜವಾಬ್ದಾರಿಯನ್ನು. ಆಯಾ ಕಾಲದ ರಾಜಕೀಯ ಪಕ್ಷಗಳ ಸಿದ್ಧಾಂತವಾದಿಗಳಿಗೆ ಒಪ್ಪಿಸುವ ಬದಲು . ಚಿಂತನೆಯ ಸಂಸ್ಥೆಗೆ ಒಪ್ಪಿಸುವ ಅಗತ್ಯವಿದೆ. ಇದಕ್ಕಾಗಿ ಸರಕಾರ ರಾಜಕಿಯೇತರವಾದ ಒಂದು ಶಾಶ್ವತ ಸಾಂವಿಧಾನಿಕ ಸಂಸ್ಥೆಯನ್ನು ಹುಟ್ಟುಹಾಕಿದರೂ ತಪ್ಪಲ್ಲ. ಯಾವುದೇ ಪಂಥಕ್ಕೆ ಅಂಟಿಕೊಳ್ಳದ, ವೃತ್ತಿಪರವಾಗಿ ಆಲೋಚಿಸುವ ದೊಡ್ಡ ಮಾನವ ಸಂಪನ್ಮೂಲ ಭಾರತದಲ್ಲಿ ಇದೆ. ಅವರನ್ನು ದುಡಿಸಿಕೊಳ್ಳುವ ಜರೂರತ್ತೂ ಇದೆ.

ಇದನ್ನೂ ಓದಿ: ವಿಸ್ತಾರ ಅಂಕಣ: ಜನಕಲ್ಯಾಣದ ಕನಸಿಗೆ ಕಾರ್ಯಾಂಗವೂ ಕೈ ಜೋಡಿಸಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬಿಗ್ ಬಾಸ್

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

ವಾರದ ಕತೆ ಕಿಚ್ಚನ ಜೊತೆ ಪಂಚಾಯ್ತಿಯಲ್ಲಿ ಯಾವೆಲ್ಲ ವಿಷ್ಯಗಳು ಚರ್ಚೆಗೆ ಬರುತ್ತೆ ಗೊತ್ತಾ?
ಕಿಚ್ಚನ ಪಂಚಾಯ್ತಿಗೆ ವೀಕ್ಷಕರು ಇಟ್ಟ ಬೇಡಿಕೆಗಳೇನು?

VISTARANEWS.COM


on

By

Bigg boss kannada
Koo

ಬೆಂಗಳೂರು: ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಶೋನಲ್ಲಿ ಕಿಚ್ಚು ಹೆಚ್ಚಾಗಿದೆ. ಇದೆ ಮೊದಲ ಸಲ ಬಿಗ್‌ ಬಾಸ್‌ ಮನೆಯಿಂದ ಇಬ್ಬರು ಸ್ಪರ್ಧಿಗಳು ನಿಯಮ ಮೀರಿದ ಹಿನ್ನೆಲೆಯಲ್ಲಿ ನೇರವಾಗಿ ಎಲಿಮಿನೇಟ್‌ ಆಗಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಲಾಯರ್‌ ಜಗದೀಶ್‌, ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಶುಕ್ರವಾರ ಮನೆ ತೊರೆದಿದ್ದರು.

ಇದೀಗ ವಾರದ ಕಥೆ ಕಿಚ್ಚ ಜತೆಯಲ್ಲಿ ನಟ ಸುದೀಪ್‌ ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ? ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು ಯಾವುದು ಎಂಬ ಕುತೂಹಲ ಮೂಡಿದೆ.

ಅಸಲಿಗೆ ದೊಡ್ಡ ಮನೆಯಲ್ಲಿ ಆ ದಿನ ನಡೆದಿದ್ದೇನು ಗೊತ್ತಾ?

ಕಳೆದ (ಬುಧವಾರ) ಟಾಸ್ಕ್‌ ಮುಗಿದ ಬಳಿಕ ಗಾರ್ಡನ್‌ ಏರಿಯಾದಲ್ಲಿ ಜಗದೀಶ್‌ ಮತ್ತು ಗೋಲ್ಡ್‌ ಸುರೇಶ್‌ ಮಾತನಾಡುತ್ತ ಕೂತಿದ್ದರು. ಈ ವೇಳೆ ಮಾತಿನ ಭರದಲ್ಲಿ ಜಗದೀಶ್‌ ಮನೆಯ ಸ್ಪರ್ಧಿಗಳ ಬಗ್ಗೆ ಇಲ್ಲ ಸಲ್ಲದ ಪದ ಬಳಕೆ ಮಾಡಿ ಮಾತನಾಡಲು ಶುರುಮಾಡಿದರು. ಜಗದೀಶ್‌ ಅವರ ಮಾತುಗಳು ಸುರೇಶ್‌ಗೆ ಅಸಹನೀಯ ಎನಿಸತೊಡಗಿದವು. ಕೂಡಲೇ ಇಂಥ ಪದಗಳ ಪ್ರಯೋಗ ನನ್ನ ಮುಂದೆ ಮಾಡಬೇಡ ಎಂದು ಬೇಡಿಕೊಂಡರು. ಮುಂದುವರಿದು, ಆ ಹಂಸಾ ಮುಂ* ಎಂಬ ಪದ ಬಳಕೆ ಪ್ರಯೋಗಿಸಿದರು .

ಅಲ್ಲಿಂದ ಶುರುವಾಯ್ತು ವಾರ್‌.. ಹಂಸಾಗೆ ಆ ಪದ ಪ್ರಯೋಗಿಸಿದ ವಿಚಾರ, ನಂತರ ಇಡೀ ಮನೆಗೂ ಗೊತ್ತಾಯ್ತು. ಮುಂದುವರಿದು ದೊಡ್ಡ ಮಟ್ಟದ ಮಾತಿನ ಚಕಮಕಿ ನಡೆಯಿತು. ಮಾತಿಗೆ ಮಾತು ಬೆಳೆಯಿತು. ತಳ್ಳಾಟ ನೂಕಾಟವೂ ನಡೆಯಿತು. ಲಾಯರ್‌ ಜಗದೀಶ್‌ ಅವರ ಮೇಲೆ ಇಡೀ ಮನೆಯ ಮಹಿಳಾ ಸ್ಪರ್ಧಿಗಳು ಮುಗಿಬಿದ್ದರು. ಇದೇ ವೇಳೆ ಮಾತುಕತೆ ಅತಿರೇಕಕ್ಕೆ ಹೋಗುತ್ತಿದ್ದಂತೆ, ಜಗದೀಶ್‌ ಅವರನ್ನು ಅಲ್ಲೇ ಇದ್ದ ರಂಜಿತ್‌ ತಳ್ಳಿದರು. ಇದೆಲ್ಲವನ್ನು ಗಮನಿಸಿದ ಬಿಗ್‌ಬಾಸ್‌ ಸಹ ತಾಳ್ಮೆ ಕಳೆದುಕೊಂಡು, ಮೊದಲ ಸಲ ಜೋರಾಗಿ ಕೂಗಿ ಎಲ್ಲರನ್ನು ಒಂದೆಡೆ ಕೂರಿಸಿದರು.

ದೈಹಿಕ ಹಲ್ಲೆ ಆರೋಪದ ಮೇಲೆ ರಂಜಿತ್‌ ಹೊರಕ್ಕೆ

ಇತ್ತ, ಕೆಲ ಹೊತ್ತಿನ ಬಳಿಕ ಮಹಿಳೆಯರಿಗೆ ನಿಂದನೆ, ಅಪಮಾನ ಸಹಿಸುವುದಿಲ್ಲ ಎಂಬ ಆರೋಪದ ಮೇಲೆ ಜಗದೀಶ್‌ ಅವರನ್ನು ಬಿಗ್‌ಬಾಸ್‌ನಿಂದ ನೇರವಾಗಿ ಎಲಿಮಿನೇಟ್‌ ಮಾಡಿ, ಹೊರಗೆ ಕಳಿಸಲಾಯಿತು. ಇತ್ತ ದೈಹಿಕ ಹಲ್ಲೆ ಅಕ್ಷಮ್ಯ ಅಪರಾಧ ಎಂಬ ನಿಯಮದಡಿ ರಂಜಿತ್‌ ಅವರನ್ನೂ ಹೊರಗೆ ಕಳಿಸಲಾಯಿತು. ಈ ಮೂಲಕ ಶುಕ್ರವಾರ ಅಚ್ಚರಿಯ ಬೆಳವಣಿಗೆಯಲ್ಲಿ ಡಬಲ್‌ ಶಾಕಿಂಗ್‌ ಎಲಿಮಿನೇಷನ್‌ ಆಯ್ತು. ಇತ್ತ ರಂಜಿತ್‌ ಮಾಡಿದ್ದು ಸರಿಯಿದೆ. ಅವರ ಉದ್ದೇಶ ಒಳ್ಳೆಯದು ಎಂದು ಸ್ಪರ್ಧಿಗಳು ಕಣ್ಣೀರಿಟ್ಟರೂ, ನಿಯಮ ಗೌರವಿಸುವ ಸಲುವಾಗಿ ಔಟ್‌ ಮಾಡಲಾಯಿತು.

ಇದೀಗ.. ವಾರದ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಲಿರುವ ‘ಗರಮಾ ಗರಂ’ ವಿಷಯಗಳು ಯಾವವು ಎಂಬುದನ್ನು ಕಲರ್ಸ್‌ ಕನ್ನಡ ಸೋಶಿಯಲ್‌ ಮೀಡಿಯಾದಲ್ಲಿ ನಿನ್ನೆ ಪೋಸ್ಟ್‌ ಹಂಚಿಕೊಂಡಿದೆ . ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳ ಮಹಾಪೂರವೇ ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚನ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ

ಈ ಸಲದ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರಲ್ಲಿ ಶಾಕಿಂಗ್‌ ಎಲಿಮಿನೇಷನ್‌ ನಡೆದಿದೆ. ಮಹಿಳಾ ಸ್ಪರ್ಧಿಗಳ ಬಗ್ಗೆ ಕೆಟ್ಟ ಪದ ಪ್ರಯೋಗ ಬಳಸಿದ್ದಕ್ಕೆ ಜಗದೀಶ್‌ ಎಲಿಮಿನೇಟ್‌ ಆದರೆ, ಒಳ್ಳೆಯ ಉದ್ದೇಶ ಇದ್ದರೂ, ದೈಹಿಕ ಹಲ್ಲೆ ಮಾಡಿದ ಆರೋಪದ ಮೇಲೆ ರಂಜಿತ್‌ ಮನೆಯಿಂದ ಹೊರ ನಡೆದಿದ್ದಾರೆ. ಇತ್ತ ಮನೆಯ ಸ್ಪರ್ಧಿಗಳು ರಂಜಿತ್‌ ತೆರಳಿದ್ದಕ್ಕೆ ಬೇಸರದಲ್ಲಿದ್ದರೆ, ಜಗದೀಶ್‌ ಹೊರ ನಡೆದಿದ್ದಕ್ಕೆ ಕುಣಿದು ಕುಪ್ಪಳಿಸಿದ್ದಾರೆ. ಇದೆಲ್ಲದರ ನಡುವೆಯೇ ವಾರಾಂತ್ಯವೂ ಬಂದಿದೆ. ಕಿಚ್ಚನ ಆಗಮನಕ್ಕೂ ಕ್ಷಣಗಣನೆ ಆರಂಭವಾಗಿದೆ.

ಕಳೆದ ವಾರ ಯಾವುದೇ ಎಲಿಮಿನೇಷನ್‌ ಇರಲಿಲ್ಲ. ಅಚ್ಚರಿಯ ಬೆಳವಣಿಗೆಯಲ್ಲಿ ಎಲ್ಲರೂ ಸೇವ್‌ ಆಗಿದ್ದರು. ಆದರೆ, ಈ ವಾರ ಹಾಗಾಗಲಿಲ್ಲ. ಯಾರೂ ನಿರೀಕ್ಷಿಸದೇ ಇಬ್ಬರು ಸ್ಪರ್ಧಿಗಳು ನೇರವಾಗಿ ಹೊರ ನಡೆಯಬೇಕಾಯಿತು. ಹೀಗಿರುವಾಗ ಈ ವಾರ ಎಲಿಮಿನೇಷನ್‌ ಇರುತ್ತಾ? ಎಂಬ ಒಂದಷ್ಟು ಪ್ರಶ್ನೆಗಳಂತೂ ಎಲ್ಲರ ಮನಸಿನಲ್ಲೂ ಮೂಡಿದೆ. ಅದರಲ್ಲೂ ವೀಕ್ಷಕರು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇದೀಗ ಕಿಚ್ಚನ ಪಂಚಾಯ್ತಿಯಲ್ಲಿ ಆ ಪ್ರಶ್ನೆಗಳಿಗೆ ಉತ್ತರ ಸಿಗಬಹುದಾ?

ಹೌದು. ಸೋಷಿಯಲ್‌ ಮೀಡಿಯಾದಲ್ಲಿ ಈ ವಾರದ ಕಿಚ್ಚನ ಪಂಚಾಯ್ತಿಯಲ್ಲಿ ಕಿಚ್ಚ ಮಾತನಾಡಬೇಕಿರೋ ‘ಗರಮಾ ಗರಂ’ ವಿಷಯಗಳು ಯಾವವು” ಎಂದು ಪೋಸ್ಟ್‌ ಹಂಚಿಕೊಂಡಿದೆ ಕಲರ್ಸ್‌ ಕನ್ನಡ. ಆ ಪೋಸ್ಟ್‌ಗೆ ಸಾವಿರಾರು ಕಾಮೆಂಟ್‌ಗಳು ಹರಿದು ಬಂದಿವೆ. ಆ ಪೈಕಿ ವೀಕ್ಷಕರ ಪ್ರಶ್ನೆಗಳೇನು? ಕಿಚ್ಚ ಸುದೀಪ್‌ ಮುಂದೆ ವೀಕ್ಷಕರು ಇಟ್ಟಿರುವ ಬೇಡಿಕೆಗಳೇನು? ಇಲ್ಲಿದೆ ನೋಡಿ ಆಯ್ದ ಕೆಲವು ಪ್ರಶ್ನೆಗಳು ಮತ್ತು ಬೇಡಿಕೆಗಳು.

ಸುದೀಪ್‌ಗೆ ವೀಕ್ಷಕರ ಪ್ರಶ್ನೆ ಮತ್ತು ಬೇಡಿಕೆ:

  • -ಜಗ್ಗು ಇಲ್ಲದ ಬಿಗ್‌ ಬಾಸ್ ನಾವು ನೋಡಲ್ಲ.‌ ಲಾಯರ್ ಜಗದೀಶ್‌ಗೆ ನ್ಯಾಯ ಸಿಗಬೇಕು. ಪುರುಷರಿಗೆ ಆದ ನಿಂದನೆ ಅಪಮಾನದ ಬಗ್ಗೆ ಕರ್ನಾಟಕದ ಜನತೆ ಸಹಿಸುವುದಿಲ್ಲ. ಅವರನ್ನ ಮತ್ತೆ ಅಖಾಡಕ್ಕೆ ಇಳಿಸಲೇಬೇಕು. ಹೆಣ್ಣಿಗೆ ಮಾತ್ರ ಅವಮಾನ ಆಗಿರಲಿಲ್ಲ ಗಂಡಿಗೂ ಅವಮಾನ ಆಗಿದೆ ಇದರ ಬಗ್ಗೆ ನೀವು ಪ್ರಶ್ನೆ ಎತ್ತಲೇಬೇಕು. ಗಂಡಿನ ಮರ್ಯಾದೆಗೆ ಧಕ್ಕೆ ಬರ್ತಿದೆ ಈ ಬಿಗ್ ಬಾಸ್ ಮನೆಯ ಹೆಣ್ಣು ಮಕ್ಕಳಿಂದ. ಮುಂದೆ ಪುರುಷ ರಕ್ಷಣಾ ವೇದಿಕೆಯನ್ನು ತೆರೆದರು ತೆರೆಯಬಹುದು.
  • -ಸುದೀಪ್‌ ಸರ್‌, ಜಗದೀಶ್‌ ಅವರನ್ನ ಏಕವಚನದಲ್ಲಿ ಮಾತಾಡುವುದಲ್ಲದೇ ಹೋರ್ಗಡೆ ಎನ್ ತಗೊಂಡು ಹೊಡೀತಾರೆ ನಿಂಗೆ ಎನ್ನುತ್ತ ತಳ್ಳಿದ್ದಾರೆ ಭವ್ಯ ಇದಕ್ಕೆ ನ್ಯಾಯ ಸಿಗುತ್ತಾ?
  • -ಮಾನಸ ಅವರು ಒಬ್ಬ ಗಂಡಸಿಗೆ ಸೀರೆ ಕೊಡ್ತೀನಿ ಉಟ್ಕೋ, ಅಂತಾರೆ ಅವಳ ಗಂಡ ತುಕಾಲಿ, ಹೆಂಡತಿ ತುಕಾಲಿ ಪ್ರೊ ಮ್ಯಾಕ್ಸ್ ಅಂತ ನೆಟ್ಟಿಗರು ಕಿಡಿಕಾರಿದ್ದಾರೆ. ಗಂಡಿನ ಘನತೆಗೆ ಧಕ್ಕೆ ಆದಾಗ ತಿರುಗೇಟು ಕೊಟ್ಟರೆ ಅದು ಮಹಿಳೆಗೆ ಅಗೌರವವೇ? ಕಿಚ್ಚ ಸುದೀಪ್ ಇದಕ್ಕೆ ನ್ಯಾಯ ಒದಗಿಸುವ ಮೂಲಕ ಪುರುಷರ ಘನತೆ ಕಾಪಾಡಬೇಕು ಅಂದಿದ್ದಾರೆ.
  • -ಜಗ್ಗುನ ಪ್ರವೋಕ್ ಮಾಡಿದ ಎಲ್ಲರಿಗೂ ಅವರ ತಪ್ಪಿನ ಅರಿವು ಮಾಡಿಸಬೇಕು. ಹೆಣ್ಣಿನ ಬಗ್ಗೆ ಕೆಟ್ಟದಾಗಿ ಮಾತಾಡುವುದು ತಪ್ಪು. ಜಗದೀಶ್‌ಗೆ ಶಿಕ್ಷೆಯಾಗಿದ್ದು ಸರಿ. ಆದರೆ ಚೈತ್ರ ಹೇಳ್ತಾರೆ ಅಪ್ಪನಿಗೆ ಹುಟ್ಟಿದರೆ ಬಾ, ಒಬ್ಬ ಅಪ್ಪನಿಗೆ ಹುಟ್ಟಿದ್ದರೆ ಬಾ ಅಂತ ಇದರಲ್ಲಿ ಆಗಿರುವುದು ಒಂದು ಹೆಣ್ಣಿಗೆ ಅವಮಾನ ಅಂದರೇ (ಜಗದೀಶ್ ತಾಯಿಯ ಬಗ್ಗೆ ) ಇದರ ಬಗ್ಗೆನೂ ಚರ್ಚೆ ಆಗಲೇಬೇಕು.
  • -ಜಗ್ಗು ಮಾತಾಡಿದ್ದು ತಪ್ಪು ಅದರಲ್ಲಿ 2 ಮಾತಿಲ್ಲ.. ಆದ್ರೆ ಸತತ 3 ದಿನಗಳಿಂದ ರಂಜಿತ್, ಮಂಜು, ತ್ರಿವಿಕ್ರಮ ಜಗಳ ಆಡೋ ತರ ಪ್ರಚೋದನೆ ಮಾಡಿದ್ದು ತಪ್ಪಲ್ವಾ?.. ಮಾನಸ ಮಾತು ಅಸಹ್ಯವಾಗಿತ್ತು ಅವಳನ್ನು ಯಾಕೆ ಹೊರಗೆ ಹಾಕಿಲ್ಲ. . ಚೈತ್ರ, ಭವ್ಯ, ಮಾನಸ 3 ಜನ ಅಮ್ಮ ಅಪ್ಪ ಹೆಂಡ್ತಿ ಅನ್ನೋ ಶಬ್ದ ಬಳಸಿ ಮಾತನಾಡುವುದಲ್ಲದೇ ಜಗದೀಶ್‌ ಅವರನ್ನ ಥಳಿಸಿದ್ದಾರೆ.

ರಂಜಿತ್‌ಗೆ ವೀಕ್ಷಕರ ಮೆಚ್ಚುಗೆ

ರಂಜಿತ್‌ ನೇರವಾಗಿ ಮನೆಯಿಂದ ಹೊರಬರುತ್ತಿದ್ದಂತೆ, ಸೋಷಿಯಲ್‌ ಮೀಡಿಯಾದಲ್ಲಿ ರಂಜಿತ್‌ ಪರವಾಗಿ ಮೆಚ್ಚುಗೆಯ ಕಾಮೆಂಟ್‌ಗಳು ಸಂದಾಯವಾಗುತ್ತಿವೆ. “ನಿಮ್ಮ ಹೆಸರು ಬಿಗ್‌ಬಾಸ್‌ನಲ್ಲಿ ಶಾಶ್ವತ. ಒಂದೊಳ್ಳೆಯ ಉದ್ದೇಶಕ್ಕೆ ನೀವು ನಿಯಮ ಮುರಿದಿದ್ದೀರಿ. ಇದನ್ನು ಬೇರೆಯವರೂ ಮಾಡಲು ಅಸಾಧ್ಯ” ಎಂದು ಧ್ರುವ ಎಂಬುವವರು ಟ್ವಿಟ್‌ ಮಾಡಿದ್ದಾರೆ. “ಉದ್ದೇಶ ಸರಿ. ಅಸಲಿ ವಿಚಾರ ಬಿಗ್‌ಬಾಸ್‌ಗೂ ಗೊತ್ತು, ಅಷ್ಟೇ ಸಾಕು.. ಮಿಸ್‌ ಯೂ ರಂಜಿತ್”‌ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಒಳ್ಳೆಯ ಉದ್ದೇಶಕ್ಕೆ ಹೋಗ್ತಿದ್ದೀಯಾ ಮಗ. ಸೂರ್ಯ ರಂಜಿತ್‌ ಬಿಬಿ ಇರೋವರೆಗೂ ಇದು ಒಂದು ಉದಾಹರಣೆಯಾಗಿ ನಿಲ್ಲಲಿದೆ. ಒಂದೊಳ್ಳೆಯ ಕಾರಣಕ್ಕೆ ನೀವು ಆಚೆ ಹೋಗಿದ್ದೀರಿ” ಎಂದು ವೀಕ್ಷಕರು ಟ್ವಿಟ್‌ ಮಾಡಿದ್ದಾರೆ.

Continue Reading

ಭವಿಷ್ಯ

Dina Bhavishya : ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ; ಈ ರಾಶಿಯವರು ಅಗತ್ಯವಿದ್ದಷ್ಟೆ ಮಾತನಾಡಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ವೃಷಭ ರಾಶಿಯಿಂದ ಶನಿವಾರ ಸಂಜೆ 04:07ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರು ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ- ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಬಿದಿಗೆ 09:48 ವಾರ: ಶನಿವಾರ
ನಕ್ಷತ್ರ: ಭರಣಿ 10:45 ಯೋಗ: ಸಿದ್ಧಿ 17:40
ಕರಣ: ಗರಜ 09:48 ಅಮೃತಕಾಲ: ಬೆಳಗ್ಗೆ 06:30 ರಿಂದ 07:56

ಸೂರ್ಯೋದಯ : 06:10   ಸೂರ್ಯಾಸ್ತ : 05:59

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಾಸ್ಯದ ಮನೋಭಾವನೆ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ. ಆಧ್ಯಾತ್ಮ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ ಇದೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರಲಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಇರಲಿದೆ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಆರೋಗ್ಯ, ಉದ್ಯೋಗದಲ್ಲಿ ಸಾಧಾರಣವಾಗಿರಲಿದೆ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಅನಗತ್ಯ ಖರ್ಚು ಇರಲಿದೆ. ಆರೋಗ್ಯ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ ಬೆಳಸಬೇಕಾಗಬಹುದು. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ಇರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಬೆಂಗಳೂರು

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

BMRCL : ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ ಬೆಂಗಳೂರಿನ ಗೋಡೆಗಳ ಮೇಲೆ ಚಿತ್ರಕಲೆ ಬಿಡಿಸುವ “ಗೋಡೆ ಬೆಂಗಳೂರು” (Gode Bengaluru) ಚಟುವಟಿಕೆಯನ್ನು ಅನ್‌ಬಾಕ್ಸಿಂಗ್‌ ಬೆಂಗಳೂರು ಘೋಷಿಸಿದೆ.

VISTARANEWS.COM


on

By

Gode Bengaluru
Koo

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಗೋಡೆಗಳನ್ನು ಚಿತ್ರಗಳಿಂದ ಕಂಗೊಳಿಸುವಂತೆ ಮಾಡುವ ಉದ್ದೇಶದಿಂದ ಅನ್‌ಬಾಕ್ಸಿಂಗ್‌ ಬೆಂಗಳೂರು ಫೌಂಡೇಷನ್‌, ಬಿಎಂಆರ್‌ಸಿಎಲ್‌ ಸಹಯೋಗದೊಂದಿಗೆ “ಗೋಡೆ ಬೆಂಗಳೂರು” ಶೀರ್ಷಿಕೆಯಡಿ (Gode Bengaluru) ಗೋಡೆಗಳ ಮೇಲೆ ಚಿತ್ರಬಿಡುಸುವ ಉಪಕ್ರಮವನ್ನು ಘೋಷಿಸಿದೆ.

ಬೆಂಗಳೂರಿನಾದ್ಯಂತ ಇರುವ ಗೋಡೆಗಳ ಮೇಲೆ ನಮ್ಮ ಕಲೆ, ಸಂಸ್ಕೃತಿ, ಆಚರಣೆ ಇತ್ಯಾದಿ ಸೊಬಗನ್ನು ಬಿಂಬಿಸುವ ಚಿತ್ರಗಳನ್ನು ಬಿಡಿಸುವ ಚಟುವಟಿಕೆ ನಡೆಸುತ್ತಿದೆ. ಸರ್ಕಾರದ ಸಹಭಾಗಿತ್ವದಲ್ಲಿ ಇದೇ ನವೆಂಬರ್ 30 ರಿಂದ ಡಿಸೆಂಬರ್ 15ರ ವರೆಗೆ “ಬೆಂಗಳೂರು ಹಬ್ಬ”ವನ್ನು ಅದ್ಧೂರಿಯಿಂದ ಅನ್‌ಬಾಕ್ಸಿಂಗ್‌ ಫೌಂಡೇಷನ್‌ ಆಚರಿಸಲು ಸಿದ್ಧತೆ ನಡೆಸುತ್ತಿದೆ.

Gode Bengaluru
Gode Bengaluru

ಇದರ ಭಾಗವಾಗಿ “ಗೋಡೆ ಬೆಂಗಳೂರು” ಚಟುವಟಿಕೆಯನ್ನು ಪ್ರಾರಂಭಿಸಲಾಗುತ್ತಿದೆ. ಬಿಎಂಆರ್‌ಸಿಎಲ್‌ನ ಸಹಯೋಗದಿಂದಿಗೆ “ಗೋಡೆ ಬೆಂಗಳೂರು” ಚಟುವಟಿಕೆ ನಡೆಯಲಿದ್ದು, ನಮ್ಮ ಸಂಸ್ಕೃತಿ ಹಾಗೂ ಕ್ರಿಯಾತ್ಮಕ ಮನೋಭಾವದ ಚಿತ್ರಗಳನ್ನು ಗೋಡೆಗಳ ಮೇಲೆ ಚಿತ್ರಿಸಿ ನಮ್ಮ ನಗರವನ್ನು ಸುಂದವಾಗಿಸಲು ಪ್ರಯತ್ನಿಸಲಾಗುತ್ತಿದೆ. ಈ ಉಪಕ್ರಮವು ಮೆಟ್ರೋ ನಿಲ್ದಾಣಗಳು, ನಗರದ ಪ್ರಮುಖ ಗೋಡೆಗಳ ಮೇಲೆ ಚಿತ್ರಿಸಲಾಗುತ್ತದೆ. ಬೆಂಗಳೂರಿನ ನಿವಾಸಿಗಳು ಹಾಗೂ ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಈ ಸುಂದರ ಕಲೆಗಳ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು.

ಈಗಾಗಲೇ ಆಗಸ್ಟ್ ತಿಂಗಳಲ್ಲೇ “ ಗೋಡೆ ಬೆಂಗಳೂರು” ಚಟುವಟಿಕೆಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಿ, ಹತ್ತು ಪ್ರತಿಭಾವಂತ ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಈ ಅರ್ಜಿಗಳನ್ನು 1ಶಾಂತಿರೋಡ್ ಸ್ಟುಡಿಯೋ/ಗ್ಯಾಲರಿಯ ಸಂಸ್ಥಾಪಕ, ದೃಶ್ಯ ಕಲಾವಿದ, ಕಲಾ ಇತಿಹಾಸಕಾರ ಮತ್ತು ಮೇಲ್ವಿಚಾರಕರಾದ ಸುರೇಶ್ ಜಯರಾಮ್, ಕಲಾವಿದೆ ಅರ್ಚನಾ ಹಂಡೆ, ಬಹುಶಿಸ್ತೀಯ ಕಲಾವಿದ ಮತ್ತು ಚಿತ್ರಕಲೆ, ಶಿಲ್ಪಕಲೆ ಕಲಾವಿದಾರದ ರವಿಕುಮಾರ್ ಕಾಶಿ ಈ ತೀರ್ಪುಗಾರರನ್ನು ಒಳಗೊಂಡ ಸ್ವತಂತ್ರ ಸಮಿತಿಯು ಪರಿಶೀಲನೆ ನಡೆಸಿ ಕಲಾವಿದರನ್ನು ಆಯ್ಕೆ ಮಾಡಿದೆ.

ಆಯ್ಕೆಯಾಗಿರುವ ಹತ್ತು ಪ್ರತಿಭಾವಂತ ಕಲಾವಿದರು ಬೆಂಗಳೂರಿನ ಗೋಡೆಗಳ ಮೇಲೆ ಸುಂದರ ಕಲಾಕೃತಿಗಳನ್ನು ರಚಿಸಲಿದ್ದಾರೆ. ಈ ಕಲಾವಿದರು ‘ಬೆಂಗಳೂರು ವರ್ಣಗಳು’ ಎಂಬ ವಿಷಯದ ಸುತ್ತ ಚಿತ್ರಗಳನ್ನು ರಚಿಸಲಿದ್ದಾರೆ. ಇದು ನಗರದ ಸಾರವನ್ನು ಸೆರೆಹಿಡಿಯುವ ಪ್ರಯತ್ನವಾಗಿದೆ. ನಮ್ಮ ನಗರದ ಇತಿಹಾಸ, ಸಂಸ್ಕೃತಿ, ಹಬ್ಬಗಳು, ಸಸ್ಯ ಮತ್ತು ಪ್ರಾಣಿಗಳು ಮತ್ತು ಬೆಂಗಳೂರನ್ನು ಅನನ್ಯವಾಗಿಸುವ ದೈನಂದಿನ ಮೋಡಿ ಸೇರಿದಂತೆ ಹಲವು ಪ್ರಮುಖ ಆಕರ್ಷಣೆಗಳು ಒಳಗೊಂಡರಲಿದೆ.’

ಗೋಡೆ ಬೆಂಗಳೂರಿನ ಮುಖ್ಯ ಕ್ಯುರೇಟರ್, ಕಾಮಿನಿ ಸಾಹ್ನಿ ಮಾತನಾಡಿ, ಈ ವಿನೂತನ ಉಪಕ್ರಮವು ನಮ್ಮ ಹೆಮ್ಮೆಯ ಕಲೆ ಮತ್ತು ಸಾಂಸ್ಕೃತಿಕ ಮಹತ್ವವನ್ನು ಎತ್ತಿ ತೋರಿಸಲಿದೆ. “ಗೋಡೆ ಬೆಂಗಳೂರು” ಶೀರ್ಷಿಕೆಯಲ್ಲಿ ಮೂಡಿ ಬರುವ ಗೋಡೆ ಚಿತ್ರಗಳು ಬೆಂಗಳೂರಿನ ಜನರ ಮನಸ್ಸಿನಲ್ಲಿ ಅವಿನಾಭಾವ ಸೆಳೆತ ಸೃಷ್ಟಿಸುವ ಪ್ರಯತ್ನ ಮಾಡಲಿದೆ..
ಈ ಗೋಡೆ ಚಿತ್ರಗಳು ನಮ್ಮ ಸಮುದಾಯ ಎತ್ತ ಸಾಗುತ್ತಿದೆ, ಸಂಸ್ಕೃತಿಯ ಮಹತ್ವ ಇತ್ಯಾದಿ ಅಂಶಗಳನ್ನು ಜನರ ನಡುವೆ ಸಂಭಾಷಣಾ ಕ್ಯಾನ್ವಾಸ್ ಆಗಿ ಕಾರ್ಯನಿರ್ವಹಿಸಬೇಕೆಂದು ನಾವು ಬಯಸುತ್ತೇವೆ. ಪ್ರತಿಯೊಂದು ಕಲೆಯು ಒಂದೊಂದು ವಿಶಿಷ್ಟವಾದ ಕಥೆಯನ್ನು ಹೇಳುತ್ತವೆ, ಈ ಉಪಕ್ರಮವು ಅನುಭವಿ ಮತ್ತು ಉದಯೋನ್ಮುಖ ಕಲಾವಿದರಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಇದು ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ಛಾಪು ಮೂಡಿಸಲು ಅನುವು ಮಾಡಿಕೊಡುತ್ತದೆ.

ಬೆಂಗಳೂರು ಹಬ್ಬಾ ಮುಖ್ಯ ಸಂಚಾಲಕ ರವಿಚಂದರ್ ವಿ ಅವರು, ಈ ಉಪಕ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿದರು, “ಗೋಡೆ ಬೆಂಗಳೂರು” ಕೇವಲ ಕಲೆಯನ್ನು ಚಿತ್ರಿಸುವುದಷ್ಟೇ ಅಲ್ಲದೆ, ಇದು ಬೆಂಗಳೂರಿನ ಜನರ ನಡುವೆ ಅವಿನಾಭಾವ ಸಂಬಂಧ ಬೆಸೆಯಲಿದೆ.ಈ ಉಪಕ್ರಮದ ಮೂಲಕ, ನಾವು ನಗರದ ಚೈತನ್ಯ, ವೈವಿಧ್ಯತೆ ಮತ್ತು ಅದನ್ನು ವ್ಯಾಖ್ಯಾನಿಸುವ ನಾವೀನ್ಯತೆಯ ಮನೋಭಾವವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದ್ದೇವೆ. ಕಲೆಯು ಜನರನ್ನು ಒಟ್ಟುಗೂಡಿಸುವ ಮತ್ತು ಸಂಭಾಷಣೆಗಳನ್ನು ಪ್ರೇರೇಪಿಸುವ ಶಕ್ತಿಯನ್ನು ಹೊಂದಿದ್ದು, ಇದನ್ನು ಗೋಡೆ ಬೆಂಗಳೂರಿನ ಮೂಲಕ ಸಾಕಾರಗೊಳಿಸಲಿದ್ದೇವೆ ಎಂದರು.

ಅನ್‌ಬಾಕ್ಸಿಂಗ್ ಬೆಂಗಳೂರು ವತಿಯಿಂದ ಇದೇ ನವೆಂಬರ್‌ ತಿಂಗಳಲ್ಲಿ ಆಚರಿಸಲಾಗುತ್ತಿರುವ “ಬೆಂಗಳೂರು ಹಬ್ಬ”ದ ಮುನ್ನ ವಾರದಲ್ಲಿ “ಗೋಡೆ ಬೆಂಗಳೂರು” ಮೂಲಕ ಗೋಡೆಗಳ ಮೇಲೆ ಕಲಾಕೃತಿಗಳು ಲೈವ್‌ ಇನ್‌ಸ್ಟಾಲ್‌ ಆಗಲಿವೆ. ಈ ಅದ್ಭುತ ಕಲಾಕೃತಿಗಳನ್ನು ಬೆಂಗಳೂರಿಗರು ಕಣ್ತುಂಬಿಕೊಳ್ಳಬಹುದು.

ಬೆಂಗಳೂರು ಹಬ್ಬ 2024

ಬೆಂಗಳೂರು ಹಬ್ಬ ಸರ್ಕಾರಿ ಬೆಂಬಲಿತ, ನಾಗರಿಕ-ಆಧಾರಿತ ಉತ್ಸವವಾಗಿದ್ದು, ಬೆಂಗಳೂರಿಗರಿಗಾಗಿ ಆಚರಿಸುತ್ತದೆ. ಉತ್ಸವದ ಎರಡನೇ ಆವೃತ್ತಿಯು ನವೆಂಬರ್ 30 ರಿಂದ ಡಿಸೆಂಬರ್ 15, 2024 ರವರೆಗೆ ನಡೆಯಲಿದೆ. ಬೆಂಗಳೂರು ಹಬ್ಬವನ್ನು ಅನ್‌ಬಾಕ್ಸಿಂಗ್‌ ಬಿಎಲ್‌ಆರ್ ಫೌಂಡೇಶನ್ ಆಯೋಜಿಸುತ್ತಿದೆ. ಇದು ಲಾಭೋದ್ದೇಶವಿಲ್ಲದ ವೇದಿಕೆ ಆಗಿದ್ದು, ಜನಸಾಮ್ಯರನ್ನು ಸಕ್ರಿಯಗೊಳಿಸುವ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಬೆಂಗಳೂರಿನ ಪ್ರಯಾಣವನ್ನು ಜಾಗತಿಕ ಟೆಕ್ ಹಬ್ ಮತ್ತು ಸಾಂಸ್ಕೃತಿಕ ನಗರಿಯನ್ನಾಗಿ ಆಚರಿಸುತ್ತದೆ. ಬೆಂಗಳೂರು ಹಬ್ಬ ಬೆರಗುಗೊಳಿಸುವ ಪ್ರದರ್ಶನಗಳು ಮತ್ತು ಕಲಾತ್ಮಕ ಪ್ರದರ್ಶನಗಳು ಮತ್ತು ತಲ್ಲೀನಗೊಳಿಸುವ ಅನುಭವಗಳಿಂದ ನಗರದ ರೋಮಾಂಚಕ ಸಂಸ್ಕೃತಿಯನ್ನು ಆಚರಿಸುತ್ತದೆ.

Continue Reading

ದೇಶ

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

Pralhad Joshi : ನನಗೆ ಸಹೋದರಿಯೇ ಇಲ್ಲ. ನನ್ನ ಸಹೋದರ ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ ಎಂದು ಪ್ರಲ್ಹಾದ ಜೋಶಿ ತಿಳಿಸಿದರು.

VISTARANEWS.COM


on

By

Pralhad Joshi
Koo

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ (Pralhad Joshi) ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಹೀಗೆ ಸ್ಪಷ್ಟನೆ ನೀಡಿದರು.

ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು. ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು.

I have no role in the Gopal Joshi case. If you have done anything wrong, you should take legal action  Pralhad Joshi
I have no role in the Gopal Joshi case. If you have done anything wrong, you should take legal action Pralhad Joshi

ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಪ್ರಲ್ಹಾದ ಜೋಶಿ ಸ್ಪಷ್ಟನೆ ನೀಡಿದರು . ಇನ್ನು, ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದರು.

ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ

ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ತಪ್ಪೆಸಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಬೌದ್ಧಿಕ ದಿವಾಳಿತನ ಪ್ರದರ್ಶನ ಮಾಡುತ್ತಿದೆ ಎಂದು ಜೋಶಿ ಕಿಡಿ ಕಾರಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿಯನ್ನು ಬಂಧಿಸಬೇಕೆನ್ನುವ ಮೂಲಕ ಕಾಂಗ್ರೆಸ್ ಮುಠ್ಠಾಳತನ ತೋರುತ್ತಿದೆ. ಸತ್ಯಾಸತ್ಯತೆ ವಿಮರ್ಶೆ ಮಾಡದೆ ಒಂದು ರೀತಿ ಹುಂಬತನ ಪ್ರದರ್ಶಿಸುತ್ತಿದೆ ಎಂದು ಲೇವಡಿ ಮಾಡಿದರು. ಕಳೆದ 25 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಇದ್ದೇನೆ. ಒಂದು ಕಾಲದಲ್ಲಿ “ಕೋಲ್ ಎಂದರೆ ಭ್ರಷ್ಟಾಚಾರ, ಹಗರಣದ್ದೇ ಸದ್ದು ಮಾಡುತ್ತಿತ್ತು”. ಇಂಥ ಒಂದು ಖಾತೆ ನಿರ್ವಹಿಸಿದಾಗ್ಯೂ ಯಾವತ್ತೂ ಕೈ ಮಸಿ ಮಾಡಿಕೊಂಡಿಲ್ಲ. ಇಂದಿಗೂ ಶುದ್ಧ ಹಸ್ತನಾಗಿದ್ದೇನೆ ಎಂದು ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು.

Continue Reading
Advertisement
Bigg boss kannada
ಬಿಗ್ ಬಾಸ್5 ಗಂಟೆಗಳು ago

Bigg Boss Kannada : ಕಿಚ್ಚನ ಪಂಚಾಯ್ತಿಯಲ್ಲಿ ಗರ್ಮಾಗರಂ ವಿಷ್ಯಗಳು; ಬಿಗ್‌ಬಾಸ್‌ ನಿರ್ಧಾರವನ್ನೇ ಪ್ರಶ್ನೆ ಮಾಡ್ತಾರಾ ಸುದೀಪ್‌!

missing case
ಗದಗ7 ಗಂಟೆಗಳು ago

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Dina Bhavishya
ಭವಿಷ್ಯ13 ಗಂಟೆಗಳು ago

Dina Bhavishya : ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ; ಈ ರಾಶಿಯವರು ಅಗತ್ಯವಿದ್ದಷ್ಟೆ ಮಾತನಾಡಿ

Gode Bengaluru
ಬೆಂಗಳೂರು1 ದಿನ ago

Gode Bengaluru : ಬೆಂಗಳೂರು ಗೋಡೆಗಳ ಮೇಲೆ ಚಿತ್ತಾರ; ʻಗೋಡೆ ಬೆಂಗಳೂರುʼ ಘೋಷಿಸಿದ ಅನ್‌ಬಾಕ್ಸಿಂಗ್‌

Pralhad Joshi
ದೇಶ1 ದಿನ ago

Pralhad Joshi : ನನಗೆ ಸಹೋದರಿಯೇ ಇಲ್ಲ! ಗೋಪಾಲ್ ಜೋಶಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ತಪ್ಪು ಮಾಡಿದ್ದರೆ ಕಾನೂನು ಕ್ರಮವಾಗಲಿ- ಪ್ರಲ್ಹಾದ ಜೋಶಿ

African boy successfully undergoes surgery for rare aplastic anemia
ಬೆಂಗಳೂರು1 ದಿನ ago

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Self Harming
ಚಿತ್ರದುರ್ಗ1 ದಿನ ago

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Actress Amulyas brother film director Deepak aras passes away
ಸಿನಿಮಾ1 ದಿನ ago

Deepak Aras: ನಟಿ ಅಮೂಲ್ಯ ಸಹೋದರ ಚಲನಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದಿಂದ ನಿಧನ

Fraud case Union Minister Pralhad Joshis brother duped of ticket for Lok Sabha polls
ಬೆಂಗಳೂರು1 ದಿನ ago

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Dina bhavishya
ಭವಿಷ್ಯ2 ದಿನಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌