ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ? - Vistara News

ಪ್ರಮುಖ ಸುದ್ದಿ

ವಿಸ್ತಾರ ಅಂಕಣ: ಪಠ್ಯ ಪುಸ್ತಕ ಪರಿಷ್ಕರಣೆ ಎಂದರೆ ಮಕ್ಕಳ ಆಟ ಎಂದುಕೊಂಡಿದೆಯೇ ಸರ್ಕಾರ?

ಯಾವುದೋ ಒಂದು ಗುಂಪನ್ನು ಮೆಚ್ಚಿಸಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ಪಠ್ಯ ಪುಸ್ತಕ ರಚನೆಯ ಜವಾಬ್ದಾರಿಯನ್ನು ರಾಜಕೀಯ ಹಿತಾಸಕ್ತಿ ಇಲ್ಲದ ಚಿಂತಕರಿಗೆ ಒಪ್ಪಿಸಬೇಕು.

VISTARANEWS.COM


on

karnataka government decision to revise textbook vistara column
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

“ಮೊಘಲ್ ಬಾದಶಹರಲ್ಲಿ ಕೊನೆಯವನಾದ ಔರಂಗಜೇಬನು ಕಾಲಚಕ್ರವನ್ನು ಹಿಂದಕ್ಕೆ ತಿರುಗಿಸಲು ಪ್ರಯತ್ನ ಮಾಡಿ ಪ್ರಗತಿಯನ್ನು ತಡೆದು, ಕಡೆಗೆ ನುಚ್ಚು ನೂರು ಮಾಡಿದನು. ಜನತೆಯ ಸ್ವಭಾವಕ್ಕನುಗುಣವಾಗಿ ಎಲ್ಲಿಯವರೆಗೆ ಎಲ್ಲರನ್ನೂ ಸಮಾನವಾಗಿ ಕಂಡು, ರಾಷ್ಟ್ರೀಯ ಭಾವನೆಯನ್ನು ಉದ್ದೀಪನಗೊಳಿಸಲು ಮೊಘಲ್ ರಾಜರು ಪ್ರಯತ್ನಿಸಿದರೋ, ಅಲ್ಲಿಯವರೆಗೂ ಅವರು ಬಲಿಷ್ಠರಾಗಿದ್ದರು. ಔರಂಗಜೇಬನು ಇದಕ್ಕೆ ವಿರುದ್ಧವಾಗಿ ನಡೆದುಕೊಂಡು, ಭಾರತೀಯನಲ್ಲದ ಮುಸ್ಲಿಂ ಚಕ್ರವರ್ತಿಯಾಗಲು ಪ್ರಯತ್ನಪಟ್ಟನೋ ಅಂದಿನಿಂದಲೇ ಮೊಘಲ್ ಚಕ್ರಾಧಿಪತ್ಯವು ಕುಸಿಯಲು ಆರಂಭವಾಯಿತು. ಅಕ್ಬರನೂ ಅವನ ವಂಶಿಕರೂ ಮಾಡಿದ ಕೆಲಸವೆಲ್ಲ ನಿರರ್ಥಕವಾಯಿತು. “
-ಜವಾಹರಲಾಲ್ ನೆಹರು

ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರು ತಮ್ಮ ʼಭಾರತ ದರ್ಶನʼ ಸರಣಿಯ ಮೊದಲ ಸಂಪುಟದಲ್ಲಿ ಬರೆದಿರುವ ಈ ಮಾತಿಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಬಹುದು. ಮೊಘಲ್ ವಂಶದ ಬಹುತೇಕ ರಾಜರು ಔರಂಗಜೇಬನ ರೀತಿಯೇ ಇದ್ದರು ಎನ್ನಲೂ ಬಹುದು. ಇನ್ನೂ ಕೆಲವರು ಇದು ನೆಹರು ಅವರ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಎನ್ನಲೂ ಬಹುದು. ಈ ಎಲ್ಲವೂ ಚರ್ಚೆಯ ವಿಷಯಗಳು. ಆದರೆ, ನೆಹರು ಅವರ ಈ ಮಾತಿನಲ್ಲಿ- ರಾಜನೊಬ್ಬ ಹೇಗಿರಬೇಕು ಎಂಬ ವಿವೇಕವನ್ನು ಗಮನಿಸಬೇಕು.

ಆಡಳಿತ ಎನ್ನುವುದು ಎಲ್ಲಿಯವರೆಗೆ ಜನರ ಭಾವನೆಗಳಿಗೆ ಅನುಗುಣವಾಗಿ ಇರುತ್ತದೆಯೋ ಅಲ್ಲಿಯವರೆಗೆ ನಿರಾತಂಕವಾಗಿ ನಡೆಯುತ್ತದೆ. ಆದರೆ ಎಂದು ಕೆಲವೇ ತನ್ನ ಸುತ್ತಮುತ್ತಲಿರುವವರ ವಿಷಯವನ್ನೋ ಅಥವಾ ತನ್ನ ಖಾಸಗಿ ನಂಬಿಕೆಯನ್ನೋ ಸಮಾಜದ ಮೇಲೆ ಹೇರಲು ಹೊರಟಾಗ ಸಮಾಜ ಅದನ್ನು ಪ್ರತಿಭಟಿಸುತ್ತದೆ. ಅದು ರಾಜಾಡಳಿತವಾದರೂ ಅಷ್ಟೆ, ಆಕ್ರಮಣಕಾರರಾದರೂ ಅಷ್ಟೆ, ಪ್ರಜಾಪ್ರಭುತ್ವವಾದರೂ ಅಷ್ಟೆ. ಈ ಸಂದೇಶವು ಕರ್ನಾಟಕದಲ್ಲಿ 10-15 ವರ್ಷದಿಂದ ನಡೆಯುತ್ತಿರುವ ಕದನಕ್ಕೆ ಹೊಂದಿಕೆಯಾಗುತ್ತದೆ.

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಪೂರ್ಣಪ್ರಮಾಣದ ಸರ್ಕಾರ ರಚನೆಯಾದ ನಂತರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (textbook revision) ಕೈ ಹಾಕಲಾಯಿತು. ಪ್ರೊ. ಮುಡಂಬಡಿತ್ತಾಯ ಅವರ ಅಧ್ಯಕ್ಷತೆಯ ಸಮಿತಿ ರಚಿಸಿದ್ದ ಬಿಜೆಪಿ ಸರ್ಕಾರ, ಪಠ್ಯಪುಸ್ತಕ ಬದಲಾಯಿಸುವ, ವಿವಿಧ ಪಠ್ಯವನ್ನು ಸೇರಿಸುವ ಕೆಲಸ ಮಾಡಿತು. ಧರಣಿ ಮಂಡಲ ಮಧ್ಯದೊಳಗೆ ಪದ್ಯದ ಆಶಯವನ್ನೇ ಬಿಜೆಪಿ ತಿರುಚಿದೆ ಎಂದು ಆರೋಪಿಸಲಾಯಿತು. ಇದಕ್ಕೆ ಸಹಜವಾಗಿಯೇ ಕಾಂಗ್ರೆಸ್ ಹಾಗೂ ಎಡಪಂಥೀಯ ಒಲವುಳ್ಳ ಲೇಖಕರು ವಿರೋಧ ವ್ಯಕ್ತಪಡಿಸಿದರು.

2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಿಜೆಪಿ ಮಾಡಿದ ಈ ‘ತಪ್ಪನ್ನುʼ ಸರಿಮಾಡಲು ಮುಂದಾಯಿತು. ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ರಚನಾ ಸಮಿತಿಯನ್ನು ರಚಿಸಿತು. ಈ ಸಮಿತಿಯು ಅನೇಕ ಬದಲಾವಣೆಗಳನ್ನು ಮಾಡಿತು. ಆದರೆ, ಬ್ರಾಹ್ಮಣರು ಯಜ್ಞ ಯಾಗಾದಿಗಳನ್ನು ಮಾಡಲು ತುಪ್ಪವನ್ನು ಬಳಸಿದ್ದರಿಂದ ಪ್ರಪಂಚದಲ್ಲಿ ಆಹಾರದ ಅಭಾವ ಸೃಷ್ಟಿಯಾಯಿತು ಎಂಬ ಸಾಲುಗಳನ್ನು ಈ ಸಮಿತಿ ಸೇರಿಸಿತ್ತು. ಇದಕ್ಕೆ ಬಿಜೆಪಿ ವಲಯದಿಂದ ಸಹಜವಾಗಿ ವಿರೋಧ ವ್ಯಕ್ತವಾಯಿತು.

siddaramaiah and niranjanaradhya

ಕಾಂಗ್ರೆಸ್ ಸಮಯದಲ್ಲಿ ಮಾಡಿದ್ದ ಈ ʼಮಹಾ ಪ್ರಮಾದʼವನ್ನು ಸರಿಪಡಿಸಲು 2019ರಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮುಂದಾಯಿತು. ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಸಮಿತಿ ರಚನೆ ಮಾಡಿ ಪಠ್ಯಪುಸ್ತಕವನ್ನು ತಿದ್ದಿತು. ಇದರಲ್ಲಿ ನಾರಾಯಣಗುರು, ಕುವೆಂಪು ಸೇರಿ ಅನೇಕರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಮತ್ತೊಮ್ಮೆ ಇನ್ನೊಂದು ತುದಿಯಲ್ಲಿದ್ದ ಕಾಂಗ್ರೆಸ್ ಹಾಗೂ ಎಡ ಪರ ಲೇಖಕರ ವಲಯದಿಂದ ಕೇಳಿಬಂದಿತು.
ಇದೀಗ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೇರಿ ಇನ್ನೂ ಒಂದು ತಿಂಗಳೂ ಕಳೆದಿಲ್ಲ. ಈಗಾಗಲೆ ಶಾಲೆಗಳು ಆರಂಭವಾಗಿದ್ದರೂ, ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡುವ ಮಾತುಗಳನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಆದಿಯಾಗಿ ಅನೇಕರು ಮಾತನಾಡುತ್ತಿದ್ದಾರೆ. ಸ್ವತಃ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪಠ್ಯಪುಸ್ತಕ ಪರಿಷ್ಕರಣೆ ಆಗುವುದು ಖಚಿತ ಎಂದಿದ್ದಾರೆ. ಇದೆಲ್ಲವೂ ರಾಜಕೀಯ ಪಕ್ಷಗಳು ತಮ್ಮ ಸೈದ್ಧಾಂತಿಕ ನೆಲೆಯನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರ ಸ್ಪಷ್ಟ ಸಂಕೇತ. ಆದರೆ, ಈ ಪ್ರಯತ್ನದಲ್ಲಿ ವಿದ್ಯಾರ್ಥಿಗಳು ಸಂತ್ರಸ್ತರಾಗುತ್ತಿದ್ದಾರೆ ಎಂಬುದನ್ನೇ ಸರಕಾರ ಮರೆತಿದೆ.

ದೇಶದ ಎರಡನೇ ರಾಷ್ಟ್ರಪತಿಯಾಗಿದ್ದ ಡಾ. ಎಸ್. ರಾಧಾಕೃಷ್ಣನ್ ಅವರು ಸ್ವತಃ ಶಿಕ್ಷಕರು, ಶಿಕ್ಷಣ ತಜ್ಞರೂ ಆಗಿದ್ದರು. ಅವರು ಹೇಳಿರುವಂತೆ, “ಶಿಕ್ಷಣದ ಅಂತಿಮ ಗುರಿಯು ಮುಕ್ತ ಆಲೋಚನೆಯ ಮನುಷ್ಯನನ್ನು ಸೃಜಿಸುವುದಾಗಿರಬೇಕು. ಈ ಮನುಷ್ಯನು ಐತಿಹಾಸಿಕ ಸನ್ನಿವೇಶಗಳು ಹಾಗೂ ನಿಸರ್ಗದ ಪ್ರತಿಕೂಲಗಳ ವಿರುದ್ಧ ಹೋರಾಡುವವನಾಗಿರಬೇಕು” ಎಂದರು. ಅಲ್ಲಿಗೆ, ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಪ್ರವಾಹವನ್ನು ಕಾಯ್ದುಕೊಳ್ಳಬೇಕು ಎಂಬ ಸಂದೇಶವನ್ನು ರಾಧಾಕೃಷ್ಣನ್ ಅವರು ನೀಡಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐದು ವರ್ಷಕ್ಕೊಮ್ಮೆ ವಿಧಾನಸಭೆ, ಲೋಕಸಭೆ ಚುನಾವಣೆಗಳನ್ನು ನಡೆಸಲಾಗುತ್ತದೆ. ತಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡುವವರನ್ನು ಜನರು ಆಯ್ಕೆ ಮಾಡಲಿ, ತಮಗೆ ಇಷ್ಟ ಇಲ್ಲದವರನ್ನು ಮನೆಗೆ ಕಳಿಸಲಿ ಎಂದು ಮಾಡಿಕೊಂಡಿರುವ ವ್ಯವಸ್ಥೆ. ಹೊಸ ಸರ್ಕಾರ ಬಂದ ಕೂಡಲೆ ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಬೇಕು. ಹಳೆಯ ವ್ಯವಸ್ಥೆಯಲ್ಲಿರುವಲೋಪದೋಷಗಳನ್ನು, ವ್ಯವಸ್ಥೆಗೆ ಧಕ್ಕೆ ಆಗದಂತೆ ಹೊರತೆಗೆಯಬೇಕು ಎನ್ನುವುದು. ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಬರಬಹುದು, ಮತ್ತೆ ಕಾಂಗ್ರೆಸ್ ಸರ್ಕಾರ ಹೋಗಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಬಹುದು. ಇಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಯಾವುದೇ ಪಕ್ಷಗಳು ಬದಲಾಗುತ್ತವೆಯೇ ವಿನಃ ಸರ್ಕಾರ ಅಲ್ಲ. ಸರ್ಕಾರ ಎನ್ನುವುದು ನಿರಂತರ ವ್ಯವಸ್ಥೆ. ಒಟ್ಟಾರೆಯಾಗಿ ಅದು ಕರ್ನಾಟಕ ಸರ್ಕಾರ, ಭಾರತ ಸರ್ಕಾರ, ಮಹಾರಾಷ್ಟ್ರ ಸರ್ಕಾರ, ಇತ್ಯಾದಿ ಇತ್ಯಾದಿ. ಪಕ್ಷಗಳೂ ಹೆಸರು ಹೇಳುವುದು, ಸಿಎಂ, ಪಿಎಂ ಇಲ್ಲವೇ ಪಕ್ಷಗಳ ಹೆಸರಿನಲ್ಲಿ ಸರ್ಕಾರವನ್ನು ಸಂಬೋಧಿಸುವುದು ನಮ್ಮ ಅನುಕೂಲಕ್ಕಾಗಿ ಮಾತ್ರ.

ಬಿಜೆಪಿ ಸರ್ಕಾರ ರಚನೆ ಮಾಡಿದ ಕೂಡಲೆ ಅದರ ಕಣ್ಣು ಶಾಲಾ ಮಕ್ಕಳ ಪಠ್ಯಪುಸ್ತಕದ ಮೇಲೆ ಹೋಗುತ್ತದೆ. ಅವರ ವಾದ ಏನು? ಭಾರತದ ಇತಿಹಾಸವನ್ನು ಕಳೆದ 75 ವರ್ಷಗಳಲ್ಲಿ ತಪ್ಪಾಗಿ ಹೇಳಲಾಗಿದೆ. ಅಲೆಕ್ಸಾಂಡರ್, ಅಕ್ಬರ್, ಟಿಪ್ಪುವನ್ನೇ ಮೆರೆಸಲಾಗಿದೆ. ನಮ್ಮದೇ ರಾಜರಾದ ಕೃಷ್ಣದೇವರಾಯ, ಶಿವಾಜಿ, ರಾಣಾ ಪ್ರತಾಪನನ್ನು ಮರೆತಿದ್ದಾರೆ. ಕೇವಲ ಮಹಾತ್ಮ ಗಾಂಧಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಬಿಂಬಿಸಲಾಗಿದೆ. ಕ್ರಾಂತಿಕಾರಿಗಳನ್ನು ಕಡೆಗಣಿಸಲಾಗಿದೆ…. ಹೀಗೆ ಇತಿಹಾಸದಲ್ಲಿ ಆಗಿರುವ ಪ್ರಮಾದಗಳ ದೊಡ್ಡ ಪಟ್ಟಿಯೇ ಬಿಜೆಪಿ ಹಾಗೂ ಅದರ ಚಿಂತಕ ವಲಯದಲ್ಲಿದೆ. ಇದು ಸತ್ಯ ಕೂಡ. ನಮ್ಮ ದೇಶದ ಇತಿಹಾಸವನ್ನು ಮಕ್ಕಳಿಗೆ ತಿಳಿಸಿದರೆ ಅವರಲ್ಲಿ ಸ್ವಾಭಿಮಾನ ಜಾಗೃತಿಯಾಗುತ್ತದೆ. ಅವರು ಯಾವುದೇ ಭ್ರಷ್ಟಾಚಾರ, ಅನಾಚಾರಕ್ಕೆ ಮುಂದಾಗದೆ ದೇಶದ ಏಳಿಗೆಗಾಗಿ ದುಡಿಯುತ್ತಾರೆ. ಆಗ ದೇಶವು ಇಡೀ ವಿಶ್ವದಲ್ಲಿ ಗೌರವಯುತ ಸ್ಥಾನ ಪಡೆಯುತ್ತದೆ. ಇದರಲ್ಲಿ ತಪ್ಪೇನೂ ಇಲ್ಲ.

Vinayak Damodar Savarkar and Keshav Baliram Hedgewar

ಆದರೆ ಶಿಕ್ಷಣ ಎನ್ನುವುದು ಕೇವಲ ಪಠ್ಯಪುಸ್ತಕ ಎಂಬ ತಪ್ಪು ತಿಳುವಳಿಕೆ ಇಲ್ಲಿದೆ. ಸಮಾಜ ವಿಜ್ಞಾನ, ಕನ್ನಡ ಪಠ್ಯಪುಸ್ತಕ ಬದಲು ಮಾಡಿಬಿಟ್ಟರೆ ಇಡೀ ಮಕ್ಕಳ ಮನಸ್ಥಿತಿ ಬದಲಾಗಿಬಿಡುತ್ತದೆ ಎನ್ನುವುದು ಭ್ರಮೆ. ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕವೂ ಒಂದು ಭಾಗ. ಇದರಲ್ಲಿ ಶಾಲಾ ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ, ಶಿಕ್ಷಕರ ತರಬೇತಿ, ಮೌಲ್ಯಮಾಪನ ವ್ಯವಸ್ಥೆ, ಬೋಧನಾ ವಿಧಾನ, ಆಟೋಟಗಳಿಗೆ ಪ್ರೋತ್ಸಾಹಕ, ವಿಜ್ಞಾನ ತಿಳಿವಳಿಕೆ… ಹೀಗೆ ಹತ್ತಾರು ವಿಚಾರಗಳು ಸೇರಿ ಒಬ್ಬ ಒಳ್ಳೆಯ, ದೇಶಭಕ್ತ ವಿದ್ಯಾರ್ಥಿ ತಯಾರಾಗುತ್ತಾನೆ. ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಮಾನವ ಸಂಪನ್ಮೂಲ ಸಚಿವರಾಗಿದ್ದ ಡಾ. ಮುರಳೀಮನೋಹರ ಜೋಶಿ ಅವರು ಪಠ್ಯಪುಸ್ತಕಗಳ ಪರಿಷ್ಕರಣೆಗೆ ಕೈಹಾಕಿದರು. ಆಗ ದೇಶಾದ್ಯಂತ ಕೇಸರೀಕರಣದ ಹುಯಿಲೆಬ್ಬಿಸಲಾಯಿತು. ಆನಂತರ 2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಬಂದಾಗ, ಬಿಜೆಪಿ ಅವಧಿಯ ಅನೇಕ ಬದಲಾವಣೆಗಳನ್ನು ತೆಗೆದುಹಾಕಿತು. ಆಗ ಬಿಜೆಪಿ ಮತ್ತೆ, ಇದು ಹಿಂದುಗಳನ್ನು ದಮನ ಮಾಡುವ ಕ್ರಿಯೆ ಎಂದು ಬೊಬ್ಬೆ ಹಾಕಿತು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸರಳ ಬಹುಮತ ಪಡೆದು ಸ್ಥಾಪನೆಯಾಗಿದೆ. ಯಾವುದೇ ಪಕ್ಷ ಸುಲಭವಾಗಿ ಆಪರೇಷನ್ ಮಾಡಿ ಸರ್ಕಾರವನ್ನು ಬೀಳಿಸಲು ಸಾಧ್ಯವಾಗದಿರುವಷ್ಟು ಸುಭದ್ರ ಸಂಖ್ಯೆಯನ್ನು ಜನರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ಈಗ ಜನರಿಗೆ ಅತ್ಯಗತ್ಯವಾಗಿ ಬೇಕಾದ ಅನೇಕ ವಿಚಾರಗಳತ್ತ ಸರ್ಕಾರ ಗಮನ ಹರಿಸುವ ಅಗತ್ಯವಿದೆ.

ಈಗಾಗಲೆ ಚುನಾವಣೆಯಲ್ಲಿ ಘೋಷಣೆ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಒಟ್ಟಾರೆ ಪ್ರಣಾಳಿಕೆಯನ್ನು ಜಾರಿಗೆ ತರಬೇಕಿದೆ. ಪ್ರತಿ ವರ್ಷ ಬಜೆಟ್ ಮಂಡಿಸುವ ಮೂಲಕ ಒಂದೊಂದೇ ಹೆಜ್ಜೆ ರಾಜ್ಯವನ್ನು ಸುಭಿಕ್ಷದೆಡೆಗೆ ಕರೆದೊಯ್ಯಬೇಕಿದೆ. ಇದೆಲ್ಲದರ ನಡುವೆ ಎದುರಾಗುವ ಬರ, ನೆರೆ ಮುಂತಾದ ಪ್ರಕೃತಿ ವಿಕೋಪಗಳಿಗೂ ಸ್ಪಂದಿಸಬೇಕಿದೆ. ಆದರೆ ಕಾಂಗ್ರೆಸ್ ಸರ್ಕಾರ ಇದೆಲ್ಲವನ್ನೂ ಬಿಟ್ಟು ಮತ್ತೆ ಪಠ್ಯಪುಸ್ತಕಕ್ಕೆ ಕೈ ಹಾಕಿದೆ. ಬಿಜೆಪಿ ಅವಧಿಯಲ್ಲಿ ನಡೆಸಿದ ತಿದ್ದುಪಡಿಗಳನ್ನು ಬದಲಾಯಿಸಲು ಮುಂದಾಗಿದೆ. ಯಾರದ್ದೋ ಮೇಲಿನ ದ್ವೇಷವನ್ನು ಪಠ್ಯದ ಮೇಲೆ ತೀರಿಸಲು ಹೊರಟಿದೆ. ಸ್ವಾತಂತ್ರ್ಯ ಹೋರಾಟಗಾರರ ಕುರಿತ ಪಾಠ, ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರು ರಚಿಸಿರುವ ಪಾಠ, ಆರ್ ಎಸ್ ಎಸ್ ಸಂಸ್ಥಾಪಕ ಡಾ. ಕೇಶವ ಬಲಿರಾಮ್ ಹೆಡಗೆವಾರ್ ಅವರ ಭಾಷಣದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ. ಕಾಂಗ್ರೆಸ್ ಹೇಳುವ ಪ್ರಕಾರ ಈ ಪಠ್ಯಪುಸ್ತಕವನ್ನು ಸರಿಯಾದ ಕ್ರಮದಲ್ಲಿ ಪರಿಷ್ಕರಣೆ ಮಾಡಲಿಲ್ಲ. ಸಮಿತಿಯಲ್ಲಿ ಇದ್ದವರಿಗೆ ಅದಕ್ಕೆ ತಕ್ಕ ಅರ್ಹತೆ ಇರಲಿಲ್ಲ, ಒಟ್ಟಾರೆ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ಆದೇಶವನ್ನೇ ನೀಡಿಲ್ಲ ಎಂಬಂತಹ ವಾದಗಳನ್ನು ಮುಂದಿಡಲಾಗುತ್ತಿದೆ. ಚಿಂತಕರು ಎಂದು ಹೇಳಿಕೊಂಡ, ಎಡ ಪರ, ಕಾಂಗ್ರೆಸ್ ಪರ ಸಾಹಿತಿಗಳ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕೈಬಿಡಲು ಮನವಿ ಮಾಡಿದೆ.

ಈಗಾಗಲೆ ಚುನಾವಣೆ ಪ್ರಣಾಳಿಕೆಯಲ್ಲೂ ಕಾಂಗ್ರೆಸ್ ಈ ವಿಷಯವನ್ನು ಹೇಳಿರುವುದರಿಂದ ಅದಕ್ಕೆ ಬದ್ಧವಾಗಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಇಲ್ಲಿರುವ ಪ್ರಶ್ನೆ, ಇಷ್ಟೆಲ್ಲ ರಾದ್ಧಾಂತದ ನಂತರ ಶಾಲೆಯಲ್ಲಿ ಪಾಠ ಓದುವ ಮಕ್ಕಳ ಪಾಡೇನು? ಇಂತಹ ಪಾಠವನ್ನು ಈ ಬಾರಿ ಮೌಲ್ಯಮಾಪನಕ್ಕೆ ಪರಿಗಣನೆ ಮಾಡುವುದಿಲ್ಲ ಎಂದು ತಿದ್ದೋಲೆಯನ್ನು ಸರ್ಕಾರ ಕಳಿಸಬಹುದು. ಆಗ ಶಿಕ್ಷಕರು ಆ ಪಾಠವನ್ನು ಬೋಧನೆ ಮಾಡುವುದಿಲ್ಲ. ಆದರೆ ಆ ಪಾಠ ವಿದ್ಯಾರ್ಥಿಯ ಪುಸ್ತಕದಲ್ಲಿ ಆ ಪಾಠ ಹಾಗೆಯೇ ಇರುತ್ತದೆ ಅಲ್ಲವೇ? ಮೌಲ್ಯಮಾಪನ ಮಾಡದಿದ್ದ ಮಾತ್ರಕ್ಕೆ, ಶಿಕ್ಷಕರು ಬೋಧಿಸದ ಮಾತ್ರಕ್ಕೆ ವಿದ್ಯಾರ್ಥಿಗಳು ಆ ಪಾಠವನ್ನು ಓದುವುದನ್ನು ತಡೆಯಲು ಆಗುತ್ತದೆಯೇ? ಸ್ವಾತಂತ್ರ್ಯ ಹೋರಾಟಗಾರರ ಕುರಿತು ಇಂತಹ ಒಳ್ಳೆಯ ಪಾಠವನ್ನು ಸರ್ಕಾರ ಏಕೆ ನಿಷೇಧ ಮಾಡಿದೆ? ಎಂದು ವಿದ್ಯಾರ್ಥಿಗೆ ಅನ್ನಿಸುವುದಿಲ್ಲವೇ? ಆಗ ಸರ್ಕಾರದ ಬಗ್ಗೆ ಆತನಿಗೆ ಯಾವ ಅಭಿಪ್ರಾಯ ಬರಬಹುದು? ಇಂತಹ ಸೂಕ್ಷ್ಮ ಸಂಗತಿಗಳನ್ನೂ ಆಳುವವರು ಗಮನದಲ್ಲಿ ಇರಿಸಿಕೊಳ್ಳಬೇಕು. ಏಕೆಂದರೆ ರಾಧಾಕೃಷ್ಣನ್ ಅವರು ಹೇಳಿದಂತೆ ಶಿಕ್ಷಣ ಎನ್ನುವುದು ಮನುಷ್ಯನನ್ನು ಸೃಜನಶೀಲನನ್ನಾಗಿಸಬೇಕೆ ಹೊರತು ಈ ರೀತಿ ಒಟ್ಟಾರೆ ವ್ಯವಸ್ಥೆಯ ಮೇಲೆಯೇ ಅನುಮಾನವನ್ನು ಹುಟ್ಟುಹಾಕುವುದಲ್ಲ.

ಇದನ್ನೂ ಓದಿ: ವಿಸ್ತಾರ ಅಂಕಣ: ವಿದೇಶದಲ್ಲಿ ಕಾಲಿಟ್ಟ ತಕ್ಷಣ ರಾಹುಲ್ ಗಾಂಧಿ ಭಾರತ ವಿರೋಧಿ ಆಗುವುದೇಕೆ?

ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ ತಪ್ಪನ್ನು ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಲಿಲ್ಲ. ಕೇವಲ ಪಠ್ಯಪುಸ್ತಕ ಪರಿಷ್ಕರಣೆಯಿಂದ ಯಾವ ಉದ್ದೇಶವೂ ಈಡೇರುವುದಿಲ್ಲ ಎನ್ನುವುದು ಆ ಪಕ್ಷದ ಅರಿವಿಗೆ ಬಂದಿತ್ತು. ಹಾಗಾಗಿ ಒಟ್ಟಾರೆ ಶಿಕ್ಷಣ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಬದಲಾವಣೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಆರಂಭಿಸಿದೆ. ಹಂತಹಂತವಾಗಿ ಸುಮಾರು 10 ವರ್ಷದಲ್ಲಿ ಈ ಯೋಜನೆ ಜಾರಿಯಾದಾಗ ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎನ್ನುವುದು ನಿರೀಕ್ಷೆ.

No textbooks from 3 years to 6 years Children

ಈಗಂತೂ ಶಾಲೆಗಳು ಆರಂಭವಾಗಿವೆ. ಪ್ರಸಕ್ತ ವರ್ಷದಲ್ಲಿ ಪಾಠ ಪ್ರವಚನಗಳು ಎಂದಿನಂತೆ ನಡೆಯಲಿ. ಮುಖ್ಯವಾಗಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಕಟ್ಟಡಗಳು ಬೀಳುವ ಹಂತದಲ್ಲಿವೆ. ವಿದ್ಯಾರ್ಥಿಗಳು ಕಿಲೋಮೀಟರ್ ಗಟ್ಟಲೆ ನಡೆದೇ ಶಾಲೆಗೆ ಹೋಗುತ್ತಿದ್ದಾರೆ. ಶಿಕ್ಷಕರ ಹತ್ತಾರು ಬೇಡಿಕೆಗಳನ್ನು ಈಡೇರಿಸಬೇಕಿದೆ. ಶಿಕ್ಷಕರ ತರಬೇತಿಯತ್ತಲೂ ಗಮನ ನೀಡಬೇಕಿದೆ. ಬೇಕಿದ್ದರೆ ಪಠ್ಯಪುಸ್ತಕ ಪರಿಷ್ಕರಣೆಗೊಂದು ತಜ್ಞರ ಸಮಿತಿಯನ್ನು ರಚನೆ ಮಾಡಿ ಕೆಲಸ ಆರಂಭಿಸಲಿ. ಅವರು ಈ ವರ್ಷದ ಅಂತ್ಯಕ್ಕೆ ವರದಿ ನೀಡಿ, ಆ ವರದಿಯ ಅನುಷ್ಠಾನದ ಕುರಿತು ಸರ್ಕಾರ ನಿರ್ಧಾರ ಮಾಡಲಿ. ಮುಂದಿನ ವರ್ಷದಿಂದ ಹೊಸ ಪಠ್ಯಕ್ರಮಕ್ಕೆ ತೆರೆದುಕೊಳ್ಳಬಹುದು. ಅದನ್ನು ಬಿಟ್ಟು, ಯಾವುದೋ ಒಂದು ಗುಂಪನ್ನು ಮೆಚ್ಚಿಸುವ ಸಲುವಾಗಿ ಹಾಗೂ ಸರ್ಕಾರದ ಮೇಲಿನ ಗಮನವನ್ನು ಬೇರೆಡೆ ಸೆಳೆಯಲು ದಿನಬೆಳಗಾದರೆ ಪಠ್ಯಪುಸ್ತಕ ಪರಿಷ್ಕರಣೆಯ ಮಾತನ್ನು ಸರ್ಕಾರದ ಭಾಗವಾಗಿರುವವರು ನಿಲ್ಲಿಸುವುದು ಒಳ್ಳೆಯದು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ಸಮಾಜ ಸುಧಾರಣೆಗೆ ಶ್ರಮಿಸಿದವರನ್ನು ರಾಜಕಾರಣ ಹಾಗೂ ಸ್ವಾರ್ಥಕ್ಕಾಗಿ ಅವಮಾನಿಸುವುದಕ್ಕೆ ಅಂತ್ಯ ಹಾಡುವ ಕೆಲಸ ಕಾಂಗ್ರೆಸ್ ಸರ್ಕಾರದಿಂದಲೇ ಆರಂಭವಾಗಲಿ.

ಇದನ್ನೂ ಓದಿ: ವಿಸ್ತಾರ ಅಂಕಣ: ಗ್ಯಾರಂಟಿ ಮರೆಮಾಚಲು ʼಗೋಹತ್ಯೆʼ ಗುರಾಣಿಯಾಗಬೇಕೆ?

ಕಡೆಯದಾಗಿ ನೆಹರು ಅವರು ಬರೆದಿರುವ ಮೊಘಲ್ ಚಕ್ರಾಧಿಪತ್ಯದ ಸಾಲುಗಳಿಗೆ ಮರಳೋಣ. ಅವರು ಹೇಳಿದರೆ, ನಾನು ಹಾಗೂ ನನ್ನ ವಯಸ್ಸಿನ(35ರಿಂದ 45) ತಲೆಮಾರು ಬಾಬರ್ ನಿಂದ ಔರಂಗಬೇಬ್ ವರೆಗೆ ಎಲ್ಲರನ್ನೂ ಓದಿದ್ದೇವೆ. ಅವರ ಚಿತ್ರಪಟುಗಳು ನಮ್ಮ ಸ್ಮೃತಿಪಟಲದಲ್ಲಿವೆ. ಆದರೆ, ಕೃಷ್ಣದೇವರಾಯ, ಶಿವಾಜಿ, ರಾಣಾ ಪ್ರತಾಪ ಬಗ್ಗೆ ನಾವು ಓದಿದ್ದು ಕಡಿಮೆ. ಅಂತೆಯೇ ನಮ್ಮ ರಾಜ್ಯದಲ್ಲೂ ಟಿಪ್ಪು, ಹೈದರಾಲಿ ಬಗ್ಗೆ ಓದಿದಷ್ಟು ನಾಲ್ವಡಿ, ಮುಮ್ಮಡಿ ಒಡೆಯರ್ ಬಗ್ಗೆ ಓದಿದ್ದು ಕಡಿಮೆ. ಏಕೆಂದರೆ, ಪಠ್ಯ ಪುಸ್ತಕದ ಮೇಲೆ ಬಹಳಷ್ಟು ವರ್ಷಗಳ ಕಾಲ ಎಡಪಂಥೀಯ ಸಿದ್ಧಾಂತವಾದಿಗಳ ಹಿಡಿತವಿತ್ತು. ಅವರು ಎಲ್ಲವನ್ನೂ ತಮ್ಮ ಸಿದ್ಧಾಂತಕ್ಕೆ ಅನುಗುಣವಾಗಿಯೇ ರೂಪಿಸಿದರು. ಬಳಿಕ ಬಂದ ಬಿಜೆಪಿ ಸರಕಾರ, ಈ ಪ್ರಮಾದವನ್ನು ಸರಿಪಡಿಸುತ್ತಲೇ, ತನಗಿಷ್ಟವಾದ ಸಿದ್ಧಾಂತವನ್ನು ಮೆರೆಸಲು ಯತ್ನಿಸಿತು. ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಈ ಎರಡೂ ತಪ್ಪೇ.

ಹಾಗಾಗಿ, ಪಠ್ಯ ಪುಸ್ತಕ ಪರಿಷ್ಕರಣೆಯ ಜವಾಬ್ದಾರಿಯನ್ನು. ಆಯಾ ಕಾಲದ ರಾಜಕೀಯ ಪಕ್ಷಗಳ ಸಿದ್ಧಾಂತವಾದಿಗಳಿಗೆ ಒಪ್ಪಿಸುವ ಬದಲು . ಚಿಂತನೆಯ ಸಂಸ್ಥೆಗೆ ಒಪ್ಪಿಸುವ ಅಗತ್ಯವಿದೆ. ಇದಕ್ಕಾಗಿ ಸರಕಾರ ರಾಜಕಿಯೇತರವಾದ ಒಂದು ಶಾಶ್ವತ ಸಾಂವಿಧಾನಿಕ ಸಂಸ್ಥೆಯನ್ನು ಹುಟ್ಟುಹಾಕಿದರೂ ತಪ್ಪಲ್ಲ. ಯಾವುದೇ ಪಂಥಕ್ಕೆ ಅಂಟಿಕೊಳ್ಳದ, ವೃತ್ತಿಪರವಾಗಿ ಆಲೋಚಿಸುವ ದೊಡ್ಡ ಮಾನವ ಸಂಪನ್ಮೂಲ ಭಾರತದಲ್ಲಿ ಇದೆ. ಅವರನ್ನು ದುಡಿಸಿಕೊಳ್ಳುವ ಜರೂರತ್ತೂ ಇದೆ.

ಇದನ್ನೂ ಓದಿ: ವಿಸ್ತಾರ ಅಂಕಣ: ಜನಕಲ್ಯಾಣದ ಕನಸಿಗೆ ಕಾರ್ಯಾಂಗವೂ ಕೈ ಜೋಡಿಸಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 15:23 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 09:32 ಯೋಗ: ಬ್ರಹ್ಮ 26:04
ಕರಣ: ತೈತುಲ 15:23 ಅಮೃತ ಕಾಲ: ರಾತ್ರಿ 10:38 ರಿಂದ 12:10ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನವಿದು. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ:ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯವನ್ನು ಬೇಡುವರು ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Vijayapura News: ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

VISTARANEWS.COM


on

Vijayapura news
Koo

ವಿಜಯಪುರ : ತಮ್ಮ ಮಗಳನ್ನು ಮದುವೆಯಾಗಲು ಬಂದ ಆಕೆಯ ಪ್ರಿಯಕರನ ಮೇಲೆ ಪೋಷಕರೇ ಪೆಟ್ರೋಲ್​ ಹಾಕಿ ಸುಟ್ಟಿರುವ ಪ್ರಕರಣವೊಂದು ವಿಜಯಪುರ ಜಿಲ್ಲೆಯ (Vijayapura News) ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಅದರೆ, ಯುವತಿಯ ಪೋಷಕರು ಇದನ್ನು ನಿರಾಕರಿಸಿದ್ದು ಮಗಳನ್ನು ಕೊಡದಿರಲು ನಿರ್ಧರಿಸಿದ ನಮ್ಮನ್ನು ಸುಡಲು ಯುವಕ ಪೆಟ್ರೋಲ್ ತಂದಿದ್ದ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಪ್ರಿಯಕರ ರಾಹುಲ್​ ರಾಮನಗೌಡ ಬಿರಾದಾರ ಸುಟ್ಟ ಗಾಯಗಳು ಹಾಗೂ ಮಾರಕಾಸ್ತ್ರಗಳ ಪೆಟ್ಟಿನಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಯುವತಿಯ ಮನೆಯ ನಾಲ್ವರು ಆಸ್ಪತ್ರೆ ಸೇರಿದ್ದಾರೆ. ಘಟನೆ ಬಗ್ಗೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದೆ.

ಆಸ್ಪತ್ರೆ ಸೇರಿರುವ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರ ಅವರ ಕುಟುಂಬಸ್ಥರು ಆತನ ಪ್ರಿಯತಮೆ ಐಶ್ವರ್ಯ ಮದರಿ ಅವರ ಚಿಕ್ಕಪ್ಪ ಮುತ್ತು ಮದರಿ, ಚಿಕ್ಕಮ್ಮ ಸೀಮಾ ಮದರಿ ಎಂಬುವರ ಮೇಲೆ ದೂರು ದಾಖಲಿಸಿದ್ದಾರೆ. ಕನ್ಯೆ ಕೇಳಲು ಹೋದ ನಮ್ಮಣ್ಣನಿಗೆ ಬೆಂಕಿ ಹಾಕಿ ಸುಟ್ಟು ರಾಡ್​ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ ಐಶ್ವರ್ಯ ಸೇರಿದಂತೆ ಅವರ ಕುಟುಂಬಸ್ಥರು ಮದುವೆಗೆ ಒಪ್ಪದ ನಮ್ಮನ್ನು ಸುಡಲು ರಾಹುಲ್ ಯತ್ನಿಸಿದ್ದಾನೆ ಎಂದು ದೂರು ನೀಡಿದ್ದಾರೆ. ಶೇಕಡಾ 70ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿರುವ ರಾಹುಲ್​ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏನಿದು ಪ್ರಕರಣ?

ರಾಹುಲ್ ರಾಮನಗೌಡ ಬಿರಾದಾರ ಅವರು ಐಶ್ವರ್ಯ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಮೂರು ವರ್ಷದಿಂದ ಪರಸ್ಪರ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದರು. ಅಂತೆಯೇ ಅವರು ಮದುವೆಯಾಗಲು ನಿರ್ಧರಿಸಿದ್ದರು. ಇಬ್ಬರ ಪ್ರೀತಿ ವಿಚಾರ ತಿಳಿದ ಯುವತಿಯ ಪೋಷಕರು ಹುಡುಗನ ಮನೆಯವರಿಗೆ ಬರಲು ಹೇಳಿದ್ದರು. ಅವರು ಅಲ್ಲಿಗೆ ಹೋಗಿದ್ದಾಗ ಯುವತಿ ಮದುವೆ ನಿರಾಕರಿಸಿದ್ದಳು. ಆತನ ಗುಣ ಸರಿ ಇಲ್ಲ, ಹೀಗಾಗಿ ನಾನು ಮದ್ವೆಯಾಗಲ್ಲ ಎಂದು ಹೇಳಿದ್ದಳು. ಹುಡುಗಿ ಮದುವೆ ನಿರಾಕರಣೆ ಮಾಡಿದ್ದಾಳೆ ಎಂದು ರಾಹುಲ್ ಮನೆಯವರು ವಾಪಸ್ ಹೋಗಿದ್ದರು.

ಪ್ರೀತಿಸಿದ ಹುಡುಗಿಯೇ ಸಿಗಬೇಕು ಹಠ ಹಿಡಿದು ರಾಹುಲ್​ ಮತ್ತೆ ಹುಡುಗಿ ಮನೆಗೆ ಹೋಗಿದ್ದ. ಅಲ್ಲದೆ, ಮದುವೆಯಾಗದೇ ಹೋದರೆ ತಾವಿಬ್ಬರು ಜತೆಗಿದ್ದ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದ. ಫೋಟೋ ಬೆದರಿಕೆಗೆ ತಣ್ಣಾಗಾದ ಯುವತಿಯ ಕುಟುಂಬಸ್ಥರು ಆಕೆ ಒಪ್ಪಿದರೆ ಲಗ್ನ ಮಾಡಿ ಕೊಡುವುದಾಗಿ ರಾಜಿ ಮಾಡಿ ಕಳುಹಿಸಿದ್ದರು. ಆ ಬಳಿಕವೂ ವಿವಾದ ಮುಂದುವರಿದಿತ್ತು. ಅಲ್ಲದೆ, ಹಲವು ಬಾರಿ ರಾಜಿ ಪಂಚಾಯತಿ ಕೂಡಾ ಮಾಡಲಾಗಿತ್ತು.

ಇದನ್ನೂ ಓದಿ: Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

ಸೋಮವಾರ ಮತ್ತೆ ರಾಹುಲ್ ಬಿರಾದಾರ ಐಶ್ವರ್ಯಾ ಮನೆಗೆ ಮತ್ತೆ ಹೋಗಿದ್ದ. ಈ ವೇಳೆ ಮತ್ತೆ ಮಾತುಕತೆ ನಡೆದಿದೆ. ಐಶ್ವರ್ಯಾ ಪೋಷಕರ ಪ್ರಕಾರ ಆತ ಮಾತುಕತೆಗೆ ಬರುವಾಗ ಪೆಟ್ರೋಲ್ ತಂದಿದ್ದ. ಅದನ್ನು ನಮ್ಮ ಮೇಲೆ ಹಾಕಿ ಸುಡಲು ಯತ್ನಿಸಿದ್ದ. ಆದರೆ, ಯುವಕನ ಪೋಷಕರು ಹೇಳುವ ಪ್ರಕಾರ ಐಶ್ವರ್ಯಾ ಅವರ ಪೋಷಕರು ರಾಹುಲ್ ಕೈಯಲ್ಲಿದ್ದ ಮೊಬೈಲ್ ಕಸಿಯಲು ಯತ್ನಿಸಿದ್ದಾರೆ. ಕೊಡದೇ ಹೋದಾಗ ರಾಡ್​ನಿಂದ ತಲೆಗೆ ಹಲ್ಲೆ ಮಾಡಿದ್ದಾರೆ. ಬಳಿಕ ಮೊದಲೇ ತಂದಿಟ್ಟಿದ್ದ ಪೆಟ್ರೋಲ್​ನಿಂದ ಸುಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಾಳಪ್ಪ ನಂದಗಾಂವ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸೈಗಳಾದ ಸಂಜಯ್ ತಿಪ್ಪರಡ್ಡಿ, ಎಸ್.ಆರ್.ನಾಯಕ ಅವರು ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ. ವಿಜಯಪುರದಿಂದ ಆಗಮಿಸಿದ್ದ ವಿಶೇಷ ತಂಡ ಘಟನಾ ಸ್ಥಳದಲ್ಲಿನ ಬೆರಳಚ್ಚು ಸೇರಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Prajwal Revanna Case: ಮಂಗಳವಾರ (ಮೇ 27ರಂದು) ನಾಳೆ ಯಾವುದೇ ಪರಿಸ್ಥಿತಿಯಲ್ಲಿ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಪಡಬೇಕು ಎಂದು ಎಸ್ಐಟಿ ತಿಳಿಸಿದೆ. ಪೆನ್ ಡ್ರೈವ್ ಪ್ರಕರಣ ಸದ್ದು ಮಾಡಿದಾಗ ಅದರಲ್ಲಿ ಕೇಳಿ ಬಂದ ಹೆಸರಗಳಲ್ಲಿ ಒಂದು ಹೆಸರು ಚೇತನ್​. ಸದ್ಯ ಎಸ್ಐಟಿ ಯಿಂದ ಚೇತನ್ ಗೌಡ ಗೆ ನೋಟಿಸ್ ಜಾರಿ ಮಾಡಲಾಗಿದ್ದು ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್ ರೇವಣ್ಣಗೆ ಸೇರಿದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೊ ಹಗರಣದ (Prajwal Revanna Case ) ಸಂಬಂಧ ತನಿಖೆ ನಡೆಸುತ್ತಿರವು ಎಸ್​ಐಟಿ ಪೊಲೀಸರು ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತ ಚೇತನ್ ಗೌಡ ಅವರಿಗೆ ನೋಟಿಸ್ ಜಾರಿ ಮಾಡಿದೆ. ಹಾಸನದ ಸೆನ್ ಪೋಲಿಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಮಂಗಳವಾರ (ಮೇ 27ರಂದು) ನಾಳೆ ಯಾವುದೇ ಪರಿಸ್ಥಿತಿಯಲ್ಲಿ ಸಿಐಡಿ ಕಚೇರಿಗೆ ಹಾಜರಾಗಿ ವಿಚಾರಣೆಗೆ ಒಳಪಡಬೇಕು ಎಂದು ಎಸ್ಐಟಿ ತಿಳಿಸಿದೆ. ಪೆನ್ ಡ್ರೈವ್ ಪ್ರಕರಣ ಸದ್ದು ಮಾಡಿದಾಗ ಅದರಲ್ಲಿ ಕೇಳಿ ಬಂದ ಹೆಸರಗಳಲ್ಲಿ ಒಂದು ಹೆಸರು ಚೇತನ್​. ಸದ್ಯ ಎಸ್ಐಟಿ ಯಿಂದ ಚೇತನ್ ಗೌಡ ಗೆ ನೋಟಿಸ್ ಜಾರಿ ಮಾಡಲಾಗಿದ್ದು ವಿಚಾರಣೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ನಾಳೆ ಚೇತನ್ ಗೌಡ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದ್ದು, ಬೆಳಗ್ಗೆ 11 ಗಂಟೆ ಮೊದಲು ಬರಲು ಸೂಚನೆ ನೀಡಲಾಗಿದೆ. ಹೀಗಾಗಿ ಚೇತನ್​ 10 ಗಂಟೆ ಸುಮಾರಿಗೆ ಸಿಐಡಿ ಕಚೇರಿಗೆ ಬರಲಿದ್ದಾರೆ. ಪೆನ್ ಡ್ರೈವ್ ಲೀಕ್ ವಿಚಾರವಾಗಿ ಚೇತನ್ ಗೌಡ ನನ್ನು ಎಸ್.ಐ.ಟಿ ವಿಚಾರಿಸುವ ಸಾಧ್ಯತೆ ಇದೆ.

ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

ಪ್ರಜ್ವಲ್‌ ರೇವಣ್ಣ ಅವರು ಬರಲಿ ವಿಚಾರಣೆ ಎದುರಿಸಲಿ. ಸಂತ್ರಸ್ತೆಯರಲ್ಲಿ ಜೆಡಿಎಸ್‌ ಕಾರ್ಯಕರ್ತರೆಯರೇ ಹೆಚ್ಚಾಗಿದ್ದಾರೆ. ಅವರಿಗೆಲ್ಲ ನ್ಯಾಯ ದೊರಕಬೇಕು. ಪ್ರಜ್ವಲ್‌ ಕೇಸ್‌ನಿಂದ (Prajwal Revanna Case) ಎಷ್ಟೋ ಜನ ಹೆಣ್ಣು ಮಕ್ಕಳು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಎಸ್‌ಐಟಿ ಮುಂದೆ ವಿಚಾರಣೆಗೆ ಅವರೂ ಬರಲಿ, ನಾನೂ ಹಾಜರಾಗುತ್ತೇನೆ ಎಂದು ಅಶ್ಲೀಲ ವಿಡಿಯೊ ವೈರಲ್‌ ಪ್ರಕರಣದ ಆರೋಪಿ, ತಲೆಮರೆಸಿಕೊಂಡಿರುವ ನವೀನ್‌ ಗೌಡ ಹೇಳಿದ್ದಾನೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನಿಗೆ ಭವಾನಿ ರೇವಣ್ಣ ಅರ್ಜಿ

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31ರಂದು ಬೆಂಗಳೂರಿಗೆ ಆಗಮಿಸುತ್ತೇನೆ ಎಂದು ಹೇಳಿದ ಬೆನ್ನಲ್ಲೇ ನವೀನ್‌ ಗೌಡ ವಿಸ್ತಾರ ನ್ಯೂಸ್‌ಗೆ ಪ್ರತಿಕ್ರಿಯೆ ನೀಡಿದ್ದಾನೆ.

ಅಶ್ಲೀಲ ವಿಡಿಯೊ ಆರೋಪದಲ್ಲಿ ಏ. 23ರಂದು ನನ್ನ ಮೇಲೆಯೂ ಎಫ್‌ಐಆರ್‌ ದಾಖಲಿಸಿದ್ದಾರೆ. ಹಾಸನದಲ್ಲಿ ಕಳೆದ 10 ವರ್ಷದಲ್ಲಿ ಎಷ್ಟು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ನಾಪತ್ತೆಯಾಗಿದ್ದಾರೆ ಎಂಬುವುದು ಮರು ತನಿಖೆಯಾಗಬೇಕಿದೆ. ಈ ಆತ್ಮಹತ್ಯೆಗಳಿಗೂ ಕೂಡ ಪ್ರಜ್ವಲ್‌ ರೇವಣ್ಣಗೆ ಸಂಬಂಧವಿದೆ. ಎಸ್‌ಐಟಿಯವರುವ ವಿಚಾರಣೆಗೆ ನನ್ನನ್ನು ಕರೆದಿಲ್ಲ. ಅವರು ಕರೆದರೆ ನಾನು ಹೋಗುತ್ತೇನೆ. ನಾನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಕೇಸ್‌ ಹಾಕಿದ್ದಾರೆ ಹೇಳಿದ್ದಾನೆ.

ಅಶ್ಲೀಲ ವಿಡಿಯೊ ವಿಷಯ ಬಹಿರಂಗಪಡಿಸದಂತೆ ನನಗೂ ಪ್ರಜ್ವಲ್‌ ರೇವಣ್ಣ ಅವರು ಆಮಿಷ ಒಡ್ಡಿದ್ದರು. ಅವರ ಸಹಚರನನ್ನು ನನ್ನ ಭೇಟಿಯಾಗಲು ಕಳುಹಿಸಿದ್ದರು ಎಂದು ಆರೋಪಿಸಿದ್ದಾನೆ.

ನವೀನ್‌ ಗೌಡ ಯಾರು?

ನವೀನ್‌ ಗೌಡ ಕಾಂಗ್ರೆಸ್‌ ಕಾರ್ಯಕರ್ತರಾಗಿದ್ದು, ಶಾಸಕ ಜಮೀರ್‌ ಅಹಮ್ಮದ್‌ ಆಪ್ತರಲ್ಲೊಬ್ಬನಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಈತ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೀಲ್‌ಗೂ ಆಪ್ತರಾಗಿದ್ದರು. ಚುನಾವಣೆ ವೇಳೆ ಶ್ರೇಯಸ್‌ ಪರವಾಗಿ ಪ್ರಚಾರವನ್ನೂ ಮಾಡಿದ್ದ. ಈತನೇ ಹಾಸನ ಜಿಲ್ಲಾದ್ಯಂತ ಪೆನ್‌ಡ್ರೈವ್‌ ಅನ್ನು ಹಂಚಿಕೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ನವೀನ್ ಗೌಡ ಮೇಲೆ ಏ.23ರಂದು ಹಾಸನ ಸೆನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ಬಳಿಕ ನವೀನ್ ಗೌಡ ನಾಪತ್ತೆಯಾಗಿದ್ದ. ಆದರೆ, ಭಾನುವಾರ ಫೇಸ್‌ಬುಕ್‌ನಲ್ಲಿ ದಿಢೀರನೆ ಪ್ರತ್ಯಕ್ಷ

Continue Reading

ಪ್ರಮುಖ ಸುದ್ದಿ

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Kavya Maran: ಈ ಋತುವಿನಲ್ಲಿ ಎಲ್ಲಾ ಬ್ಯಾಟಿಂಗ್ ದಾಖಲೆಗಳನ್ನು ಮುರಿದ ರೀತಿಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕಾವ್ಯಾ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಐಪಿಎಲ್ 2023 ರಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದ ನಂತರ ಫೈನಲ್ ತಲುಪಿದ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡಕ್ಕೆ ಅವರು ತಮ್ಮ ಭಾಷಣದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.

VISTARANEWS.COM


on

Kavya Maran
Koo

ಚೆನ್ನೈ: ಐಪಿಎಲ್ 2024ರ (IPL 2024) ಆವೃತ್ತಿಯ ಫೈನಲ್​​ನಲ್ಲಿ ಕೆಕೆಆರ್ ವಿರುದ್ಧದ ಸೋಲಿನ ನಂತರ ಎಸ್​ಆರ್​ಎಚ್​ ತಂಡದ ಮಾಲೀಕರಾದ ಕಾವ್ಯಾ ಮಾರನ್​ (Kavya Maran) ಸ್ಟೇಡಿಯಮ್​ನಲ್ಲಿ ಕುಳಿತು ಕಣ್ಣೀರು ಹಾಕಿದ್ದರು. ಅದರೆ, ಆ ಬಳಿಕ ಅವರು ತಂಡದ ಡ್ರೆಸಿಂಗ್ ರೂಮ್​ಗೆ ತೆರಳಿ ಮಾತನಾಡಿ ಆಟಗಾರರನ್ನು ನಗಿಸಿದರು. ಈ ವೇಳೆ ಅವರು ಪ್ರೋತ್ಸಾಹಭರಿತ ಮಾತುಗಳನ್ನು ಆಡಿದರು. ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ತಂಡ ಹೀನಾಯ ಸೋಲನುಭವಿಸಿತ್ತು. ಇದು ಅಭಿಮಾನಿಗಳ ಮತ್ತು ಮಾಲೀಕರ ಹೃದಯವನ್ನು ಕಲ್ಲಾಗಿಸಿತ್ತು. ಆದಾಗ್ಯೂ ಕಾವ್ಯಾ ಅವರು ಡ್ರೆಸಿಂಗ್ ರೂಮ್​ಗೆ ಹೋಗಿ ಆಟಗಾರರ ಬಗ್ಗೆ ಅಭಿಮಾನದ ಮಾತುಗಳನ್ನು ಆಡಿದ್ದರು. ಫ್ರಾಂಚೈಸಿಯ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಕಾವ್ಯಾ ಅವರ ಹೃದಯಸ್ಪರ್ಶಿ ಮಾತುಗಳ ವೀಡಿಯೊವನ್ನು ಪೋಸ್ಟ್ ಮಾಡಿದೆ.

ಈ ಋತುವಿನಲ್ಲಿ ಎಲ್ಲಾ ಬ್ಯಾಟಿಂಗ್ ದಾಖಲೆಗಳನ್ನು ಮುರಿದ ರೀತಿಗೆ ನಿಜವಾಗಿಯೂ ಹೆಮ್ಮೆಯಿದೆ ಎಂದು ಕಾವ್ಯಾ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಐಪಿಎಲ್ 2023 ರಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದ ನಂತರ ಫೈನಲ್ ತಲುಪಿದ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡಕ್ಕೆ ಅವರು ತಮ್ಮ ಭಾಷಣದಲ್ಲಿ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ನೀವೆಲ್ಲರೂ ನಮ್ಮನ್ನು ತುಂಬಾ ಹೆಮ್ಮೆಪಡುವಂತೆ ಮಾಡಿದ್ದೀರಿ. ನಾನು ಇಲ್ಲಿಗೆ ಬಂದು ಅದನ್ನು ನಿಮಗೆ ಹೇಳಬೇಕಾಗಿತ್ತು. ಅಂದರೆ ನಾವು ಟಿ 20 ಕ್ರಿಕೆಟ್ ಆಡುವ ವಿಧಾನವನ್ನು ನೀವು ಮರು ವ್ಯಾಖ್ಯಾನಿಸಿದ್ದೀರಿ ಮತ್ತು ಎಲ್ಲರೂ ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ನಿಜವಾಗಿಯೂ ನೀವು ಉತ್ತಮ ಕೆಲಸ ಮಾಡಿದ್ದೀರಿ” ಎಂದು ಕಾವ್ಯಾ ಹೇಳಿದ್ದಾರೆ.

ಕಳೆದ ವರ್ಷ ನಾವು ಕೊನೆಯ ಸ್ಥಾನವನ್ನು ಪಡೆದಿದ್ದರೂ, ನಿಮ್ಮಲ್ಲಿರುವ ಸಾಮರ್ಥ್ಯದಿಂದಾಗಿ ನಾವು ಗಮನ ಸೆಳೆದಿದ್ದೇವೆ. ಎಲ್ಲರೂ ನಮ್ಮ ಬಗ್ಗೆ ಮಾತನಾಡುತ್ತಿದ್ದಾರೆ. ಕೆಕೆಆರ್ ಗೆದ್ದರೂ, ಎಲ್ಲರೂ ನಾವು ಆಡಿದ ಕ್ರಿಕೆಟ್ ಶೈಲಿಯ ಬಗ್ಗೆ ಮಾತನಾಡಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಧನ್ಯವಾದಗಳು ಆಟಗಾರರೆ ಕಾಳಜಿ ವಹಿಸಿ. ನಾವು ಫೈನಲ್ ಆಡಿದ್ದೇವೆ, ಇದು ದೊಡ್ಡ ಪಂದ್ಯವೇ . ನನ್ನ ಪ್ರಕಾರ ಇತರ ಎಲ್ಲಾ ತಂಡಗಳು ಇಂದು ರಾತ್ರಿ ನಮ್ಮನ್ನು ನೋಡಿವೆ. ಧನ್ಯವಾದಗಳು, ನಾನು ಶೀಘ್ರದಲ್ಲೇ ನಿಮಗೆ ಸಿಗುತ್ತೇನೆ ಎಂದು ಕಾವ್ಯಾ ಹೇಳಿದ್ದಾರೆ.

ಎಸ್​ಆರ್​ಎಚ್​ಗೆ ದುಸ್ವಪ್ನ


ಕಾವ್ಯಾ ಅವರು ಭುಜಗಳನ್ನು ಕುಲುಕಿ ಹೊರಟು ನಿಂತಾಗ ತಂಡದ ಪ್ರತಿಯೊಬ್ಬರ ಮುಖದಲ್ಲಿ ನಗುವಿದೆ ಎಂದು ಖಚಿತಪಡಿಸಿಕೊಂಡರು. ಫೈನಲ್​ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋತಾಗ ತಂಡದ ಮಾಲೀಕರು ಕಣ್ಣೀರಿಟ್ಟಿದ್ದರು. ಯಾವಾಗಲೂ ಬೆಂಬಲಿಸುವ ಫ್ರ್ಯಾಂಚೈಸಿ ಮಾಲೀಕರಾಗಿ, ಕಾವ್ಯಾ ಕ್ರೀಡಾಂಗಣಗಳಾದ್ಯಂತ ಪ್ರತಿಯೊಂದು ಪಂದ್ಯದಲ್ಲೂ ತನ್ನ ತಂಡವನ್ನು ಬೆಂಬಲಿಸಿದ್ದರು.

Continue Reading
Advertisement
Cooking In An Iron Pot
ಆರೋಗ್ಯ13 mins ago

Cooking In An Iron Pot: ಕಬ್ಬಿಣದ ಪಾತ್ರೆಯಲ್ಲಿ ಅಡುಗೆ ಮಾಡುವುದು ಒಳ್ಳೆಯದು! ಯಾಕೆ ಗೊತ್ತೇ?

karnataka weather Forecast
ಮಳೆ13 mins ago

Karnataka Weather : ಕರಾವಳಿ, ಮಲೆನಾಡಲ್ಲಿ ಗುಡುಗು, ಮಿಂಚು; ಒಳನಾಡಿನಲ್ಲಿ ಸಾಧಾರಣ ಮಳೆ

Which Type Of Roti Is Best
ಆಹಾರ/ಅಡುಗೆ1 hour ago

Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Vijayapura news
ಪ್ರಮುಖ ಸುದ್ದಿ6 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ7 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ8 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ8 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ8 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ13 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌