ವಿಸ್ತಾರ ಅಂಕಣ: ಬಜರಂಗದಳ ಬ್ಯಾನ್ ಮಾಡುತ್ತೇವೆ ಎನ್ನುವುದು ತಪ್ಪು ಹೇಳಿಕೆಯಲ್ಲ, ಐತಿಹಾಸಿಕ ಪ್ರಮಾದ… - Vistara News

ಅಂಕಣ

ವಿಸ್ತಾರ ಅಂಕಣ: ಬಜರಂಗದಳ ಬ್ಯಾನ್ ಮಾಡುತ್ತೇವೆ ಎನ್ನುವುದು ತಪ್ಪು ಹೇಳಿಕೆಯಲ್ಲ, ಐತಿಹಾಸಿಕ ಪ್ರಮಾದ…

ಕಾಂಗ್ರೆಸ್‌ ಹೇಳಿದಂತೆ ನಿಜಕ್ಕೂ ಬಜರಂಗ ದಳವನ್ನು ನಿಷೇಧಿಸಲು ಸಾಧ್ಯವೇ? ಅದು ನಿಷೇಧಿಸುವಂಥ ಸಂಘಟನೆಯೇ? ಅಥವಾ, ಹಿಂದೂಗಳನ್ನು ದಮನಿಸುವ ಕಾರ್ಯವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂಬುದಕ್ಕೆ ನಿದರ್ಶನವೇ?

VISTARANEWS.COM


on

bajarang dal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

“ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಅವರ (ಮುಸ್ಲಿಮರ) ನಿಶ್ಚಿತ ಠೇವಣಿಗಳು. ಅವರೆಡೂ ಇಸ್ಲಾಮಿಕ್ ದೇಶಗಳು. ಅವೆರಡರ ಮೇಲೆ ಬೇರೆ ಯಾರೂ ಹಕ್ಕುಸ್ವಾಮ್ಯ ಸಾಧಿಸಲು ಸಾಧ್ಯವಿಲ್ಲ. ಆದರೆ ಭಾರತ ಜಂಟಿ ಖಾತೆ. ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಬಹುದು.”
-ಹೀಗೆಂದಿದ್ದರು ಖ್ಯಾತ ಬಂಗಾಳಿ ಲೇಖಕ ಶಿವಪ್ರಸಾದ್ ರಾಯ್. ಅನೇಕ ದಶಕಗಳ ಹಿಂದೆಯೇ ರಾಯ್ ನೀಡಿದ ಈ ಹೇಳಿಕೆಯನ್ನು ಖ್ಯಾತ ಲೇಖಕ, ಸಂಶೋಧಕ ಹಾಗೂ ಇತಿಹಾಸಕಾರ ಸೀತಾರಾಂ ಗೋಯೆಲ್ ಅವರು ತಮ್ಮ ʼಮುಸ್ಲಿಂ ಪ್ರತ್ಯೇಕತಾವಾದʼ ಕೃತಿಯ ಮೊದಲ ಸಾಲಿನಲ್ಲೇ ಉಲ್ಲೇಖಿಸಿದ್ದಾರೆ. ಸೀತಾರಾಂ ಗೋಯೆಲ್ ಅವರ ಈ ಮಾತನ್ನು ಹಿಡಿದುಕೊಂಡು ಇಲ್ಲಿಯವರೆಗೆ ಯಾರೂ ಭಾರತದ ಮುಸ್ಲಿಮರೆಲ್ಲರೂ ಪ್ರತ್ಯೇಕತಾವಾದಿಗಳು ಎಂದು ಹೇಳಿಲ್ಲ. ನಮ್ಮ ಪಕ್ಕದ ಮನೆಯಲ್ಲಿರುವ ಇಲ್ಲವೇ ಕಾಲೇಜಿನಲ್ಲಿರುವ ಮುಸ್ಲಿಂ ಸ್ನೇಹಿತರನ್ನು ಯಾರೊಬ್ಬರು ಭಯೋತ್ಪಾದಕರಂತೆ ಕಂಡಿಲ್ಲ. ಬೆಂಗಳೂರು ಸೇರಿ ಅನೇಕ ಕಡೆಗಳಲ್ಲಿ ತಮ್ಮ ಜತೆಗೆ ಓದುತ್ತಿದ್ದ ಮುಸ್ಲಿಂ ಸ್ನೇಹಿತರೇ ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿ, ಸಿಕ್ಕಿ ಹಾಕಿಕೊಂಡರೂ, ಉಳಿದ ಮುಸ್ಲಿಂ ಸ್ನೇಹಿತರನ್ನು ಯಾರೂ ಅನುಮಾನಿಸಿಲ್ಲ. ಅವರನ್ನು ಭಾರತೀಯರು ನಂಬಿದ್ದಾರೆ. ನೆನಪಿರಲಿ- ಹೊರದೇಶಗಳಲ್ಲಿ, ತಮ್ಮ ಧರ್ಮೀಯ ಮತಾಂಧರು ಎಸಗುವ ಭಯೋತ್ಪಾದನಾ ಕೃತ್ಯಗಳ ಕಾರಣಕ್ಕೆ ಸಾಮಾನ್ಯ ಮುಸ್ಲಿಮರು ಘೋರ ಅನುಮಾನಕ್ಕೆ, ಅವಮಾನಕ್ಕೆ ತುತ್ತಾಗುತ್ತಾರೆ.

ಆದರೆ, ಭಾರತೀಯ ಸಮಾಜ ಹಾಗಲ್ಲ. ಎಲ್ಲರನ್ನೂ ನಂಬುತ್ತಲೇ ಭಾರತೀಯರು ಪರಸ್ಪರ ಸಹಬಾಳ್ವೆಯ ಜೀವನ ಮುಂದುವರಿಸಿದೆ. ಇದು ನಿಜವಾದ ಹಿಂದು ಸಮಾಜದ ಮಾನಸಿಕತೆ. ಇಷ್ಟಾದರೂ, ಮುಸ್ಲಿಮರ ಕುರಿತ ಹಿಂದೂಗಳ ಸಹಬಾಳ್ವೆ ನಿಲುವು ಕುರಿತು ನಮ್ಮ ದೇಶದ ಬುದ್ಧಿಜೀವಿಗಳು ಯಾವತ್ತೂ ಮಾತನಾಡಿಲ್ಲ. ಹಿಂದೂ ಸಮಾಜ ಎಷ್ಟು ವಿಶಾಲವಾಗಿ ಯೋಚನೆ ಮಾಡುತ್ತದೆ ಎಂದು ಉದಾರವಾಗಿ ಯಾರೊಬ್ಬರು ಹೇಳಿದ್ದನ್ನು ನಾವ್ಯಾರು ಕೇಳಿಲ್ಲ.

ಆದರೆ, ದೇಶದ ಯಾವುದೋ ಒಂದು ಮೂಲೆಯಲ್ಲಿ ಬಜರಂಗದಳದ ಮಾಜಿ ಸದಸ್ಯನೊಬ್ಬ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದು ಕೇಳಿದರೆ ಸಾಕು, ನಮ್ಮ ಬುದ್ಧಿಜೀವಿಗಳೆಲ್ಲರೂ ಅಲರ್ಟ್ ಆಗಿಬಿಡುತ್ತಾರೆ. “ಇಡೀ ದೇಶದಲ್ಲಿ ಅಲ್ಪಸಂಖ್ಯಾತರಿಗೆ ಅಪಾಯವಾಗುತ್ತಿದೆ. ಅವರಿಗೆ ಉಳಿಗಾಲವಿಲ್ಲ. ಹಿಂದೂ ಸಮಾಜ ಮೂಲಭೂತವಾದಿತನವನ್ನು ಅಳವಡಿಸಿಕೊಂಡಿದೆ,” ಎಂದು ಬೊಬ್ಬೆ ಹಾಕುತ್ತಾರೆ.

ಬುದ್ಧಿಜೀವಿಗಳೆನ್ನಲಾದ ಇಂಥಾ ಜೀವಿಗಳ ತರ್ಕಹೀನ ಬೊಬ್ಬೆಗೆ ಕರ್ನಾಟಕದ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಮತ್ತೆ ಓಗೊಟ್ಟಂತೆ ಕಾಣುತ್ತಿದೆ. ಉದಾಹರಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವ ಸಂಗತಿಯನ್ನು ಗಮನಿಸಿ. “ಬಜರಂಗದಳ ಮತ್ತು ಪಿಎಫ್ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಯಾವುದೇ ಸಂಘಟನೆಗಳು, ಸಂವಿಧಾನ ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಇಂತಹ ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಮೂರು ದಿನದ ಹಿಂದೆ ಬಿಡುಗಡೆಯಾದ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಎಚ್ಚರಿಸಿದೆ.

ಹಿಂದುಗಳನ್ನು ಈ ದೇಶದಲ್ಲಿ ದಮನಿಸುವ ಕೆಲಸ ಆಗುತ್ತಿದೆ ಎನ್ನುವುದು ಹಳಹಳಿಕೆಯ, ಕ್ಲೀಷೆಯ ಮಾತೇ ಆದರೂ ಕಾಂಗ್ರೆಸ್ಸಿನ ಇಂಥಾ ನಡೆಗಳು, ಹಿಂದೂ ದಮನಕ್ಕೆ ನಿದರ್ಶನಗಳಾಗುತ್ತವೆ.

ಆದರೆ, ನಿಜಕ್ಕೂ ಬಜರಂಗದಳ ನಿಷೇಧಿಸಲು ಸಾಧ್ಯವೇ? ಅದು ನಿಷೇಧಿಸುವಂಥ ಸಂಘಟನೆಯೇ? ಅದನ್ನು ಪಿಎಫ್ಐನಂಥ ಸಂಘಟನೆ ಜತೆ ಹೋಲಿಸುವುದು ತರವೇ ? ಈ ಕುರಿತು ವಿವರವಾಗಿ ಚರ್ಚಿಸೋಣ.

ಮೊದಲನೆಯದು: ಬಜರಂಗದಳವನ್ನು ತಾಂತ್ರಿಕವಾಗಿ ಬ್ಯಾನ್ ಮಾಡುವ ಅಧಿಕಾರವೇ ರಾಜ್ಯ ಸರಕಾರಕ್ಕಿಲ್ಲ. ಒಂದು ವೇಳೆ ಈ ಸಂಘಟನೆಯೇನಾದರೂ ಸಂವಿಧಾನ ವಿರೋಧಿ ಕೃತ್ಯದಲ್ಲಿ ತೊಡಗಿದ್ದರೆ, ನಿಷೇಧಿಸುವ ಅಧಿಕಾರವಿರುವುದು ಕೇಂದ್ರ ಸರಕಾರಕ್ಕೆ. ಹಾಗಾಗಿ ಇದು ಅಸಾಧ್ಯದ ಮಾತು. ಇನ್ನೂ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರಕಾರ ಈಗಾಗಲೇ ನಿಷೇಧಿಸಿದೆ. ಕರ್ನಾಟಕದಲ್ಲಿ ಪ್ರವೀಣ್ ನೆಟ್ಟಾರು ಸೇರಿದಂತೆ ಕೇರಳ, ಅಸ್ಸಾಂ ಮುಂತಾದ ರಾಜ್ಯಗಳಲ್ಲಿ ಆ ಸಂಘಟನೆ ಎಸಗಿದ ಹತ್ಯೆಗಳನ್ನು ಪರಿಗಣಿಸಿ, ಎನ್ಐಎ ಶಿಫಾರಸು ಅನ್ವಯ ಈಗಾಗಲೆ ಬ್ಯಾನ್ ಮಾಡಿದೆ. ಹಾಗಾಗಿ, ಅದನ್ನು ಮತ್ತೆ ಬ್ಯಾನ್ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಚ್ಚರಿಸಿರುವುದೇ ಬಾಲಿಶತನ.

ಎರಡನೆಯ ವಿಚಾರ, ಈ ಪ್ರಸ್ತಾವನೆ ಮೂಲಕ ಕಾಂಗ್ರೆಸ್ ರಾಜಕೀಯ ಲೆಕ್ಕಾಚಾರಕ್ಕೆ ಇಳಿದಿರುವುದು ಸ್ಪಷ್ಟ. ಬಜರಂಗದಳ ನಿಷೇಧದ ಮಾತು ಮುಂದಿಡುವ ಮೂಲಕ, ತನ್ನಿಂದ ಚದುರಿ ಹೋಗುತ್ತಿದ್ದ ಮುಸ್ಲಿಮರ ಮತಗಳನ್ನು ಭದ್ರ ಪಡಿಸಲು ಆ ಪಕ್ಷ ಮುಂದಾಗಿದೆಯಷ್ಟೆ. ಆದರೆ, ಈ ನಡೆ ಬಿಜೆಪಿಗೆ ಅನುಕೂಲ ಮಾಡಿಕೊಡಬಹುದು ಎಂದು ಲೆಕ್ಕಾಚಾರ ಹಾಕುವಲ್ಲಿ ಆ ಪಕ್ಷ ಸೋತಿದೆಯಷ್ಟೆ. ತಮ್ಮ ಸಂಘಟನೆಯ ನಿಷೇಧದ ಪ್ರಸ್ತಾವನೆ ಎದ್ದತಕ್ಷಣ, ಬಜರಂಗದಳದ ಕಾರ್ಯಕರ್ತರು ಮತ್ತು ನಾಯಕರು ಹನುಮ ಭಜನೆಗೆ ಇಳಿದಿದ್ದಾರೆ. ಹನುಮಾನ್ ಚಾಲೀಸಾ ಪ್ರತಿಗಳನ್ನು ಮುದ್ರಣ ಮಾಡಿಕೊಂಡು ಗುರುವಾರ ಪಠಣ ಮಾಡಿ ʼಪ್ರತಿಭಟಿಸಿದ್ದಾರೆʼ. ಇದರಿಂದ ಹಿಂದೂ ಮತಗಳು ಬಿಜೆಪಿ ಕಡೆಗೆ ಹೊರಳುತ್ತದೆ ಎನ್ನುವುದು ಅವರ ಲೆಕ್ಕ.

How PFI is bypassing the ban in Karnataka, here is a detailed report

ಇಂಥಾ ಲೆಕ್ಕಾಚಾರ ಏನೇ ಇರಲಿ, ಪ್ರಮುಖವಾಗಿ ಚರ್ಚಿಸಬೇಕಾದ ಮೂರನೆಯ ವಿಷಯ ಏನೆಂದರೆ, ಬಜರಂಗದಳ ಹಾಗೂ ಪಿಎಫ್ಐ ನಡುವೆ ಹೋಲಿಕೆ ಸರಿಯೇ ? ಕಾಂಗ್ರೆಸ್ ಯಾಕೆ ಹೀಗೆ ಮಾಡಿತು ? ಇದು ನಿಜವಾಗಲೂ ಗಂಭೀರ ವಿಚಾರ. ಮೊದಲು ಈ ಎರಡೂ ಸಂಘಟನೆಗಳ ಹುಟ್ಟು-ಉದ್ದೇಶ-ಬೆಳವಣಿಗೆ ಗಮನಿಸೋಣ.

ಕೇರಳ ಸರಕಾರ ಅಧಿಕೃತವಾಗಿ ಹೇಳಿರುವ ಪ್ರಕಾರ, ಪಿಎಫ್ಐ ಎಂಬುದು ನಿಷೇಧಿತ ಸಿಮಿಯ ಹೊಸ ರೂಪವಷ್ಟೆ. ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರವಿದ್ದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ-SIMI)ದ ಕಾರ್ಯಚಟುವಟಿಕೆಗಳನ್ನು ಪಿಎಫ್ ಐ ಮುಂದುವರಿಸಿತ್ತು.

ಈ ಪಿಎಫ್ಐ ಹುಟ್ಟಿದ್ದು ಕೂಡ ಸ್ವಾರಸ್ಯಕರ. ಕರ್ನಾಟಕ ಫೋರಮ್ ಫಾರ್ ಡಿಗ್ನಿಟಿ (ಕೆಎಫ್ಡಿ) ಹಾಗೂ ನ್ಯಾಷನಲ್ ಡೆವಲಪ್ಮೆಂಟ್ ಫೋರಂ (ಎನ್ಡಿಎಫ್) ವಿಲೀನ ಮಾಡುವುದರ ಮೂಲಕ 2006ರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜನ್ಮ ತಾಳಿತು.

ಹಾಗಾದರೆ ಸಿಮಿ ಆರಂಭವಾಗಿದ್ದು ಹೇಗೆ?

ಉತ್ತರ ಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ 1977ರಲ್ಲಿ ಸಿಮಿ ಆರಂಭವಾಯಿತು. ಇದರ ಘೋಷಿತ ಉದ್ದೇಶವೇ- ʼಭಾರತವನ್ನು ಸ್ವತಂತ್ರವಾಗಿಸುವುದುʼ. ಭಾರತ 1947ರಲ್ಲೇ ಸ್ವತಂತ್ರವಾಯಿತು. ಅಂದಮೇಲೆ ಇದ್ಯಾವ ಸ್ವತಂತ್ರ ಎಂದು ಹುಬ್ಬೇರಿಸುವಿರಾ ? ಭಾರತವನ್ನು ಇಸ್ಲಾಂ ದೇಶವಾಗಿಸುವ ಮೂಲಕ ಇಲ್ಲಿನ ಜನರನ್ನು, ದೇಶವನ್ನು ಸ್ವತಂತ್ರವಾಗಿಸುವ ಉದ್ದೇಶವನ್ನು ಈ ಸಿಮಿ ಸಂಘಟನೆ ಹೊಂದಿತ್ತು. ದಾರ್ ಉಲ್ ಹರಾಂ (ಅಂದರೆ ಅಪವಿತ್ರ ನಾಡು) ನೆಲವನ್ನು ದಾರ್ ಉಲ್ ಇಸ್ಲಾಂ (ಪವಿತ್ರ ನೆಲ) ಮಾಡುವುದು ಉದ್ದೇಶ. ಇದನ್ನೇನು ಅವು ಭಯೋತ್ಪಾದನೆ ಎಂದು ಅವರು ಹೇಳಿಲ್ಲ. ಯಾರು ಈ ಸಂಘಟನೆಯನ್ನು ಆರಂಭಿಸಿದರೋ ಅವರಿಗೆ ಇದು ಪವಿತ್ರ ಕೆಲಸ.
ಹಾಗೆ ನೋಡಿದರೆ, ಇಂಥದ್ದೊಂದು ಕೆಟ್ಟ ಆಲೋಚನೆ ಹರಿಯಬಿಟ್ಟಿದ್ದು ಮೊಹಮ್ಮದ್ ಅಲಿ ಜಿನ್ನಾ. ಅವರ ʼದ್ವಿರಾಷ್ಟ್ರ ಸಿದ್ಧಾಂತʼದ ಪ್ರಕಾರ, ಮುಸ್ಲಿಂ ಹಾಗೂ ಹಿಂದುಗಳು ಎರಡು ಪ್ರತ್ಯೇಕ ಸಮುದಾಯಗಳು. ಒಂದು ಸಮುದಾಯವನ್ನು ಮತ್ತೊಂದು ಪ್ರಭಾವಿಸದೆ, ದಮನ ಮಾಡದೆ ಒಂದೇ ವ್ಯವಸ್ಥೆಯಲ್ಲಿ ಸಹಜೀವನ ನಡೆಸಲು ಸಾಧ್ಯವಿಲ್ಲ ಎಂದು ಜಿನ್ನಾ ಹೇಳಿದ್ದರು. ಇದರ ಕಾರಣವೇ ದೇಶ 1947ರಲ್ಲಿ ಎರಡು ತುಂಡಾಯಿತು. ಹೀಗೆ, ಇಂದು ಕಾಂಗ್ರೆಸ್ ಹೇಳಿರುವ ಪಿಎಫ್ಐ ಸಂಘಟನೆಗಳೂ, 1947ರ ದೇಶ ವಿಭಜನೆಗೂ ನೇರ ಸಂಬಂಧವಿದೆ.

ಹಾಗಾದರೆ ಬಜರಂಗದಳ ಆರಂಭವಾಗಿದ್ದು ಹೇಗೆ? ಕಾಕತಾಳೀಯ ಎಂಬಂತೆ ಬಜರಂಗ ದಳ ಆರಂಭವಾಗಿದ್ದೂ ಅದೇ ಉತ್ತರ ಪ್ರದೇಶದ ನೆಲದಲ್ಲಿ, 1984ರಲ್ಲಿ. ಅದಾಗಲೇ ಸ್ಥಾಪನೆಯಾಗಿ ಅನೇಕ ಸಾಮಾಜಿಕ ಜಾಗೃತಿಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವಿಶ್ವ ಹಿಂದು ಪರಿಷತ್ ನ ಯುವ ವಿಭಾಗವಾಗಿ ಬಜರಂಗದಳ ಆರಂಭವಾಯಿತು. ಬಜರಂಗದಳದ ಘೋಷ ವಾಕ್ಯ ʼಸೇವಾ-ಸುರಕ್ಷಾ- ಸಂಸ್ಕೃತಿʼ. ಸಾಮೂಹಿಕ ಮತಾಂತರ ಆಗುತ್ತಿದ್ದಾಗ ನುಗ್ಗಿ ಎಚ್ಚರಿಕೆ ನೀಡುವಂತಹ ಕಾರ್ಯ ನಡೆಸುತ್ತಿರುವ ಬಜರಂಗ ದಳದ ಕಾರ್ಯಕರ್ತರನ್ನು ಅನೇಕರು ನೋಡಿರುತ್ತಾರೆ. ಏಕೆಂದರೆ ಇಂತಹ ಘಟನೆಗಳು ಹೆಚ್ಚೆಚ್ಚು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ಬಜರಂಗದಳ ಸ್ಥಾಪನೆಯ ಉದ್ದೇಶ, ವಿಶ್ವ ಹಿಂದು ಪರಿಷತ್ ಸ್ವತಃ ಘೋಷಿಸಿಕೊಂಡಿರುವಂತೆ, “ಶ್ರೀರಾಮನ ಕಾರ್ಯಕ್ಕೆ ಹನುಮಂತನು ಸದಾ ಇರುತ್ತಾನೆ. ಅದೇ ರೀತಿ ಇಂದಿನ ಯುಗದಲ್ಲಿ ಶ್ರೀರಾಮನ ಕಾರ್ಯಕ್ಕೆ ಈ ಬಜರಂಗದಳ ಕೆಲಸ ಮಾಡಲಿದೆ. ಬಜರಂಗದಳದ ಸಂಘಟನೆಯು ಯಾರ ವಿರುದ್ಧವೂ ಅಲ್ಲ. ಆದರೆ ಸಮಾಜ ವಿರೋಧಿ ಶಕ್ತಿಗಳಿಂದ ಹಿಂದೂಗಳನ್ನು ರಕ್ಷಿಸಲು” ಎಂದು ಹೇಳಿದೆ.

ಜತೆಗೆ, ಬಜರಂಗದಳಕ್ಕೆ ದೇಶ ಮತ್ತು ಧರ್ಮ ಫಸ್ಟ್. ಉಳಿದಿದ್ದಲ್ಲವೂ ನೆಕ್ಸ್ಟ್. ಇಂಥಾ ಬಜರಂಗದಳವನ್ನು ಕಾಂಗ್ರೆಸ್, ತನಗೆ ಅಧಿಕಾರವೇ ಇಲ್ಲದಿದ್ದರೂ ನಿಷೇಧಿಸಲು ಹೊರಟಿದೆ.

ಹಾಗೆ ನೋಡಿದರೆ ಬಜರಂಗದಳವನ್ನು ನಮ್ಮ ಸಮಾಜದ ಸಾಂಸ್ಕೃತಿಕ ಸಂಘಟನೆಯನ್ನಾಗಿಯೋ, ದೇಶವಿರೋಧಿಗಳ ವಿರುದ್ಧದ ಪ್ರತಿರೋಧ ಸಂಘಟನೆಯನ್ನಾಗಿಯೇ ಬಹುಜನರು ಪರಿಗಣಿಸುತ್ತಾರೆ. ಕಾಂಗ್ರೆಸ್, ಜೆಡಿಎಸ್, ಅಷ್ಟೇ ಏಕೆ, ಕಮ್ಯುನಿಷ್ಟ್ ಪಕ್ಷದಲ್ಲಿರುವ ಬಹಳಷ್ಟು ಜನ, ಬಜರಂಗದಳ ಸಂಘಟನೆಯ ಚಟುವಟಿಕೆಯನ್ನು ಒಳಗೊಳಗೆ ಬೆಂಬಲಿಸುತ್ತಾರೆ. ಪ್ರತ್ಯೇಕತವಾದಿ ಸಂಘಟನೆಗಳು ಹಾಗೂ ಹಿಂದೂ ಸಂಸ್ಕೃತಿ ವಿರುದ್ಧದ ಸಂಘಗಳನ್ನು ಬಜರಂಗದಳ ಯಾವುದೇ ಮುಲಾಜು ಇಲ್ಲದೇ ವಿರೋಧಿಸುತ್ತದೆ. ಖಂಡಿಸುತ್ತದೆ. ಒಂದು ಸಮಾಜಕ್ಕೆ ಇಂಥಾ ಸಂಘಟನೆ ಬೇಕೆ ಬೇಕು. ಹಾಗೆ ನೋಡಿದರೆ, ಎಲ್ಲ ದೇಶ, ಎಲ್ಲ ಸಮಾಜಗಳು ಇಂಥಾ ಸಂಘಟನೆಗಳನ್ನು ಪೋಷಿಸುತ್ತಲೇ ಇರುತ್ತವೆ. ಇದೊಂದು ರೀತಿ ಸ್ವಾತಂತ್ರ್ಯಪೂರ್ವದ ಮಂದಗಾಮಿಗಳು ಹಾಗೂ ತೀವ್ರಗಾಮಿಗಳ ಕಥೆ ಇದ್ದಂತೆ. ಮಂದಗಾಮಿಗಳಿಂದ ಆಗದ ಕೆಲಸ ತೀವ್ರಗಾಮಿಗಳಿಂದ ಆಗುತ್ತಿತ್ತು.
ಇದರರ್ಥ, ಬಜರಂಗದಳ ಕಾರ್ಯಕರ್ತರಿಂದ ತಪ್ಪುಗಳು ನಡೆದೇ ಇಲ್ಲ ಎಂದೇನಿಲ್ಲ. ಸುದ್ದಿಗೋಷ್ಠಿ ನಡೆಯುತ್ತಿರುವಾಗ ದಾಳಿ ಮಾಡಿರುವ, ವ್ಯಾಲೆಂಟೈನ್ಸ್ ಡೇ ದಿನದಂದು ಪ್ರೇಮಿಗಳ ಮೇಲೆ ದಾಳಿ ಮಾಡುವುದು, ಗೋ ಸಂರಕ್ಷಣೆ ಹೆಸರಿನಲ್ಲಿ ಅನೇಕ ಬಾರಿ ವಿಪರೀತ ವರ್ತನೆ ಮಾಡಿರುವ ಘಟನೆಗಳು ಕಣ್ಣಮುಂದಿವೆ. ಈ ಎಲ್ಲವೂ ವಿಪರೀತ ಎನಿಸಿದರೂ, ಅದರ ಉದ್ದೇಶವನ್ನು ಪ್ರಶ್ನೆ ಮಾಡುವಂತಿರಲಿಲ್ಲ.

“ಕನ್ನಡ ವಿರೋಧಿಗಳ ಮುಖಕ್ಕೆ ಮಸಿ ಬಳಿಯದೇ, ಫೇರ್ ಅಂಡ್ ಲವ್ಲಿ ಮೆತ್ತಲು ಸಾಧ್ಯವೇ,” ಎಂದು ಪೂರ್ಣಚಂದ್ರ ತೇಜಸ್ವಿ ಅವರು ಪ್ರಶ್ನೆ ಬಜರಂಗಿಗಳಿಗೂ ಸಲ್ಲುತ್ತದೆ.

ಜತೆಗೆ, ದೋಷಗಳೂ ಇರಬಹುದು. ಇಡೀ ದೇಶದಲ್ಲಿ ವ್ಯಾಪಿಸಿರುವ ಸಂಘಟನೆ ಎಂದ ಮೇಲೆ, ಅಲ್ಲಿ ಎಲ್ಲರೂ ಒಂದೇ ಆಲೋಚನೆಯವರು ಇರುತ್ತಾರೆ ಎಂದೇನಿಲ್ಲ. ಕೆಲವರು ತಮ್ಮ ಸ್ವಾರ್ಥಕ್ಕಾಗಿಯೂ ಸೇರಿಕೊಂಡಿರುತ್ತಾರೆ. ಸಂಘಟನೆಯಲ್ಲಿ ಸೇರಿದ್ದರೂ ಅನೇಕರ ವೈಯಕ್ತಿಕ ಸ್ವಭಾವಗಳಲ್ಲಿ ಬದಲಾವಣೆ ಆಗಿರುವುದಿಲ್ಲ. ಅಂಥವರಿಂದ ಈ ರೀತಿಯ ಕೆಲಸಗಳು ಆಗುತ್ತವೆ. ಆದರೆ ಇಂತಹ ಕೃತ್ಯಗಳು ನಡೆದಾಗ ಆ ಸಂಘಟನೆಯ ಪ್ರಮುಖರು ಏನು ಹೇಳಿದರು, ಏನು ಕ್ರಮ ಕೈಗೊಂಡರು ಎನ್ನುವುದು ಮುಖ್ಯ. ಕಾರ್ಯಕರ್ತರು ಸಂಘಟನೆಯ ಮೂಲ ಆಶಯಕ್ಕೆ ವಿರುದ್ಧವಾಗಿ ಸ್ವಹಿತಾಸಕ್ತಿಗೆ ದುಡಿಯುತ್ತಿರುವಾಗ, ಜಾತಿ ಆಧಾರಿತ ನಡೆ ಪ್ರದರ್ಶಿಸಿದಾಗ ಅಂಥವರನ್ನು ಹೊರಗೆ ಕಳಿಸಲಾಗಿದೆ. ಎರಡು ವರ್ಷದ ಹಿಂದೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಇಂಥವರಿಗೆ ಎಚ್ಚರಿಕೆ ನೀಡಿದ್ದರು. ಗೋ ಸಂರಕ್ಷಣೆ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯಲ್ಲ ಎಂದು ಸ್ಪಷ್ಟ ಧ್ವನಿಯಲ್ಲಿ ಹೇಳಿದ್ದರು.

Vishva Hindu Parishad request that Cancellation registration of SP and RJD

ಸಮಾಜ ಸೇವೆ ಮತ್ತು ರಕ್ಷಣೆಯಲ್ಲಿ ಬಜರಂಗದಳ ಕಾರ್ಯಕರ್ತರು ತೊಡಗಿದ್ದಾರೆ. ಯುವಕರು ವ್ಯಸನದಿಂದ ಮುಕ್ತವಾಗಬೇಕು ಎಂದು ಶ್ರಮಿಸುತ್ತಿದೆ. ಸಾವಿರಾರು ಕಡೆಗಳಲ್ಲಿ ರಕ್ತದಾನದ ಮೂಲಕ ಸೇವೆ ಸಲ್ಲಿಸುತ್ತಿದೆ. ಹನುಮನ ಜನ್ಮಸ್ಥಾನ ಅಂಜನಾದ್ರಿಯನ್ನು ಸಮಾಜದಲ್ಲಿ ಪ್ರಖ್ಯಾತಗೊಳಿಸಿ ಇಂದು ತೀರ್ಥ ಸ್ಥಳ ಹಾಗೂ ಪ್ರವಾಸಿ ತಾಣವಾಗಿಸಿದ್ದು ಬಜರಂಗದಳ. ಅದಕ್ಕಿಂತಲೂ ಮೊದಲು ದತ್ತಪೀಠ ಹೋರಾಟವನ್ನು ಕೈಗೆತ್ತಿಕೊಂಡು ತಾರ್ಕಿಕ ಅಂತ್ಯ ಮುಟ್ಟಿಸಿದ್ದು ಬಜರಂಗ ದಳದ ಸಾಧನೆ.

ಇಂಥಾ ಸಂಘಟನೆಯನ್ನು ನಿಷೇಧಿಸಬೇಕು ಎಂದು ಕಾಂಗ್ರೆಸ್ ಹೇಳಿದ್ದೇಕೆ ? ಅಂಥಾ ಯಾವ ಕೃತ್ಯವನ್ನು ಎಸಗಿದೆ ? ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ (UAPA) ಅಡಿಯಲ್ಲಿ ಬಜರಂಗದಳ ವಿರುದ್ಧ ಯಾವುದಾದರೂ ಪ್ರಕರಣ ದಾಖಲಾಗಿದೆಯೇ? ಅಷ್ಟಕ್ಕೂ ಬಜರಂಗದಳ ಹಾಗೂ ಆರ್ಎಸ್ಎಸ್ನಂತಹ ಸಂಘಟನೆಗಳು ಅಂತಹ ಯಾವ ದೇಶ ವಿರೋಧಿ ಕೆಲಸ ಮಾಡಿವೆ? ಆರ್ ಎಸ್ ಎಸ್ ಸಂಸ್ಥಾಪಕ ಡಾ. ಹೆಗಡೆವಾರ್ ಅವರೇ, “ಈ ದೇಶದಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಇಲ್ಲದಿದ್ದರೂ ತಾನು ಆರ್ ಎಸ್ ಎಸ್ ಸ್ಥಾಪನೆ ಮಾಡುತ್ತಿದ್ದೆ” ಎಂದು ಹೇಳಿದ್ದರು. ಆರ್ ಎಸ್ ಎಸ್ ಸ್ಥಾಪನೆಯಾಗಿದ್ದು ಹಿಂದುಗಳಲ್ಲಿ ಕಣ್ಮರೆಯಾಗಿರುವ ಒಗ್ಗಟ್ಟು, ಸ್ವಾಭಿಮಾನವನ್ನು ಜಾಗೃತಗೊಳಿಸಲೇ ಹೊರತು ಇನ್ಯಾರದ್ದೋ ವಿರೋಧಕ್ಕಲ್ಲ. ಇಂತಹ ಆರ್ ಎಸ್ ಎಸ್ ಸಂಘಟನೆಯನ್ನು ಮಹಾತ್ಮಾ ಗಾಂಧಿ ಹತ್ಯೆ ಆರೋಪದಲ್ಲಿ ಜವಾಹರಲಾಲ್ ನೆಹರೂ ಅವರ ಸರ್ಕಾರ 1948ರಲ್ಲಿ ಬ್ಯಾನ್ ಮಾಡಿತು, ನಂತರ ನಿಷೇಧವನ್ನು ಹಿಂಪಡೆಯಿತು.. ಆದರೆ 1962ರಲ್ಲಿ ಚೀನಾ ಯುದ್ಧದ ಸಂದರ್ಭದಲ್ಲಿ ಆರ್ ಎಸ್ ಎಸ್ ಸ್ವಯಂಸೇವಕರು ಅಪಾರ ಸೇವೆ ಸಲ್ಲಿಸಿದರು. ಸೈನಿಕರ ಕಾರ್ಯಕ್ಕೆ ಬೆನ್ನೆಲುಬಾಗಿ ನಿಂತ ಆರ್ ಎಸ್ ಎಸ್ ಕಾರ್ಯಕ್ಕೆ ಸ್ವತಃ ಜವಾಹರಲಾಲ್ ನೆಹರೂ ಮೆಚ್ಚುಗೆ ಸೂಚಿಸಿ 1963ರ ಜನವರಿ 26ರಂದು ನವದೆಹಲಿಯಲ್ಲಿ ನಡೆದ ಗಣರಾಜ್ಯ ಪಥ ಸಂಚಲನದಲ್ಲಿ ಮೂರು ಸಾವಿರ ಆರ್ ಎಸ್ ಎಸ್ ಸ್ವಯಂಸೇವಕರು ಭಾಗವಹಿಸಲು ಅವಕಾಶ ನೀಡಿದರು.

ಇದನ್ನೂ ಓದಿ: Mann Ki Baat: ವಿಸ್ತಾರ ಅಂಕಣ; ಮನ್ ಕಿ ಬಾತ್ ಮೂಲಕ ಭಾರತೀಯರೊಂದಿಗೆ ಮೋದಿ ಕುಶಲೋಪರಿ

ಸ್ವತಃ ಮಹಾತ್ಮ ಗಾಂಧಿಯವರು 1940ರ ಆಸುಪಾಸಿನಲ್ಲಿ ಆರ್ ಎಸ್ ಎಸ್ ಶಿಬಿರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಶಿಬಿರದಲ್ಲಿದ್ದ ಶಿಸ್ತನ್ನು ಕಂಡು ಮೆಚ್ಚಿದ್ದರು. ಅದಕ್ಕಿಂತಲೂ ಹೆಚ್ಚಾಗಿ, ಅಲ್ಲಿ ಅಸ್ಪೃಶ್ಯತೆಯ, ಮೇಲು ಕೀಳು ಭಾವನೆಯ ಲವಲೇಷವೂ ಇಲ್ಲದ್ದನ್ನು ಕಂಡು ಅಪಾರ ಸಂತಸಗೊಂಡಿದ್ದರು. ತಾವು ಅಸ್ಪೃಶ್ಯತೆಯ ನಿರ್ಮೂಲನೆಗೆ ಕೈಗೊಳ್ಳುತ್ತಿರುವ ಕಾರ್ಯವನ್ನು ಅತ್ಯಂತ ಸರಳವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿ ಮಾಡುತ್ತಿರುವ ಸಂಘಟನೆ ಎಂದು ತಿಳಿಸಿದ್ದರು.

In the most of the cases RSS members are victims, not criminals: Says Supreme Court

ಡಾ. ಬಿ.ಆರ್. ಅಂಬೇಡ್ಕರ್ ಅವರು ನೇರವಾಗಿ ಆರ್ಎಸ್ಎಸ್ ಸಂಪರ್ಕಕ್ಕೆ ಬರಲಿಲ್ಲವಾದರೂ ಎರಡು ಬಾರಿ ಮುಂಬೈಯಲ್ಲಿ ಚುನಾವಣೆ ಎದುರಿಸಿದಾಗಲೂ ಅವರ ಚುನಾವಣಾ ಏಜೆಂಟರಾಗಿ, ಪ್ರಚಾರ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದು ಆರ್ಎಸ್ಎಸ್ ಪ್ರಚಾರಕರಾಗಿದ್ದ ಹಾಗೂ ಕಾರ್ಮಿಕ ಸಂಘಟನೆಯ ಪ್ರಮುಖರಾಗಿದ್ದ ದತ್ತೋಪಂಥ ಠೇಂಗಡಿ ಅವರು. ಈ ಎರಡೂ ಚುನಾವಣೆಗಳಲ್ಲಿ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅವರನ್ನು ಸೋಲಿಸಿದ್ದು ಅಂದಿನ ಕಾಂಗ್ರೆಸ್ ಪಕ್ಷ ಎನ್ನುವುದು ಸತ್ಯವಾದರೂ, ರಾಜಕೀಯ ವಿಷಯವಾದ್ದರಿಂದ ಇಲ್ಲಿ ಚರ್ಚಿಸುತ್ತಿಲ್ಲ.

ಇದನ್ನೂ ಓದಿ: ವಿಸ್ತಾರ ಅಂಕಣ: ಶೆಟ್ಟರ್‌ಗೆ ಟಿಕೆಟ್ ನಿರಾಕರಿಸಿದ್ದರ ಹಿಂದೆ ಬಿ.ಎಲ್ ಸಂತೋಷ್ ಸ್ವಹಿತಾಸಕ್ತಿ ಏನಿದೆ?

ದೇಶದ ಮೇಲೆ 1975ರಲ್ಲಿ ಪ್ರಧಾನಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದರು. ಜನತಾ ಪಕ್ಷದ ಹಾಗೂ ಜನಸಂಘದ ಅನೇಕ ನಾಯಕರುಗಳನ್ನು ಸರ್ಕಾರ ಬಂಧಿಸಿತು. ಈ ಸಂದರ್ಭದಲ್ಲಿ ದೇಶಾದ್ಯಂತ ತುರ್ತು ಪರಿಸ್ಥಿತಿ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತ, ಮತ್ತೆ ಪ್ರಜಾಪ್ರಭುತ್ವ ಮರುಸ್ಥಾಪನೆಗೆ ಶ್ರಮಿಸಿದ್ದು ಆರ್ಎಸ್ಎಸ್ ಕಾರ್ಯಕರ್ತರು. ತುರ್ತು ಪರಿಸ್ಥಿತಿಯನ್ನು ತೆರವುಗೊಳಿಸಿದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳೀಪಟವಾಗಿ ಜನತಾ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಜನಸಂಘವೂ ಅದರ ಭಾಗವಾಗಿತ್ತು. ಈ ಸಮಯದಲ್ಲಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಆರ್ಎಸ್ಎಸ್ ಕುರಿತು ಮಾತನಾಡಿದ್ದರು. ಆರ್ಎಸ್ಎಸ್ ಒಂದು ದೇಶಭಕ್ತ ಸಂಘಟನೆ. ಆ ಸಂಘಟನೆ ಸಿದ್ಧಾಂತದ ಕುರಿತು ನಮಗೆ ಅನೇಕ ಭಿನ್ನಾಭಿಪ್ರಾಯಗಳಿವೆ. ಆದರೆ ದೇಶ ಭಕ್ತಿ ಹಾಗೂ ಸಂಸ್ಕೃತಿಯನ್ನು ಕಾಪಾಡಲು, ಬೆಳೆಸಲು ಆರ್ಎಸ್ಎಸ್ನಂತಹ ಸಂಘಟನೆಗಳ ಅವಶ್ಯಕತೆ ಇದೆ ಎಂದಿದ್ದರು.

ಇಂತಹ ಆರ್ ಎಸ್ ಎಸ್ ವಿಚಾರಧಾರೆಯಿಂದ ಪ್ರೇರಿತಗೊಂಡಿರುವುದು ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ. ಕೆಲವು ಮೂಲಭೂತವಾದಿ ಮುಸ್ಲಿಮರು ಭಯೋತ್ಪಾದಕ ಕೃತ್ಯಗಳಲ್ಲಿ, ಸಮಾಜ ವಿರೋಧಿ ಕೃತ್ಯಗಳಲ್ಲಿ ತೊಡಗಿದ ತಕ್ಷಣ ಹೇಗೆ ಇಡೀ ದೇಶದ ಎಲ್ಲ ಮುಸ್ಲಿಮರನ್ನೂ ಭಯೋತ್ಪಾದಕರು ಎನ್ನಲು ಸಾಧ್ಯವಿಲ್ಲವೊ, ಹಾಗೆಯೇ ಸಂಘಟನೆಯ ಕೆಲವು ಕಾರ್ಯಕರ್ತರು ಅಲ್ಲಲ್ಲಿ ಮಾಡಿದ ತಪ್ಪು ಹಾಗೂ ಕಾನೂನು ಬಾಹಿರ ಕೃತ್ಯಗಳನ್ನು ಇಡೀ ಸಂಘಟನೆಯ ಮೇಲೆ ಹೊರಿಸಲು ಸಾಧ್ಯವಿಲ್ಲ. ಹಾಗೆಯೇ, ಬಜರಂಗದಳದ ಮೂಲ ಸಿದ್ಧಾಂತದಲ್ಲೇ ದೇಶವಿರೋಧ ಎನ್ನುವ ಸೂತ್ರ ಇಲ್ಲ. ಇಂತಹ ಮೂಲ ಅಂಶಗಳನ್ನು ಅರ್ಥ ಮಾಡಿಕೊಂಡು ಎಲ್ಲರೂ ನಡೆಯಬೇಕು.

ಈ ಬಾರಿಯ ವಿಧಾನಸಭೆ ಚುನಾವಣೆ ಮೇ 10ಕ್ಕೆ ಬರುತ್ತಿದೆ. ನಂತರ 2024ರಲ್ಲಿ ಲೋಕಸಭೆ ಚುನಾವಣೆ ಬರುತ್ತದೆ. ನಂತರ ಐದು ವರ್ಷಕ್ಕೆ ಮತ್ತೆ ಇದೇ ಪ್ರಕ್ರಿಯೆಗ ಪುನರಾವರ್ತನೆ ಆಗುತ್ತದೆ. ಯಾವುದೇ ಪಕ್ಷ ಗೆಲ್ಲಬಹುದು, ಯಾವುದೇ ಸೋಲಬಹುದು. ಆದರೆ ಈ ದೇಶದ ಸಂಸ್ಕೃತಿ, ಪರಂಪರೆ ನಿರಂತರ ಹಾಗೂ ಶಾಶ್ವತವಾದದ್ದು. ಕ್ಷಣಿಕ ಚುನಾವಣಾ ವಿಜಯಕ್ಕಾಗಿ ಶಾಶ್ವತ ಮೌಲ್ಯಗಳು ಹಾಗೂ ಸಂಸ್ಕೃತಿಯ ಮೇಲೆ, ಅವನ್ನು ರಕ್ಷಣೆ ಮಾಡುತ್ತಿರುವವರ ವಿರುದ್ಧ ನಡೆಸುವ ದಾಳಿ ಅಪಾರ ಹಾನಿಯನ್ನು ಉಂಟು ಮಾಡುತ್ತದೆ. ಕಾಂಗ್ರೆಸ್ ಪಕ್ಷ ಇಂತಹ ಅನವಶ್ಯಕ ನಡೆಗಳಿಂದಲೇ ದೇಶಾದ್ಯಂತ ನೆಲಕಚ್ಚಿದೆ. ಕರ್ನಾಟಕದಲ್ಲಿ ಸ್ಥಳೀಯ ನಾಯಕತ್ವದ ಸಲುವಾಗಿ ಇನ್ನೂ ಸದೃಢವಾಗಿದೆ. ಮುಸ್ಲಿಂ ಮತಗಳು ಲಭಿಸಿಬಿಡುತ್ತವೆ ಎಂಬ ಆಸೆಯಲ್ಲಿ ಬಜರಂಗದಳವನ್ನೂ ಬ್ಯಾನ್ ಮಾಡುತ್ತೇವೆ ಎನ್ನುವಂತಹ ಬಾಲಿಷ ಮಾತುಗಳ ಮೂಲಕ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಬಾರದು ಎನ್ನುವ ಸಣ್ಣ ಸಾಮಾನ್ಯ ಜ್ಞಾನ, ರಾಜಕೀಯ ಜಾಣತನವನ್ನಾದರೂ ಕಾಂಗ್ರೆಸ್ ಪ್ರದರ್ಶಿಸಬೇಕಿದೆ.

ಇದನ್ನೂ ಓದಿ: ವಿಸ್ತಾರ ಅಂಕಣ: ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆಯನ್ನು ಆಯೋಗಕ್ಕೆ ಮಾತ್ರ ಹೊರಿಸುವುದು ಹೊಣೆಗೇಡಿತನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ1 hour ago

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

IPL 2024
ಪ್ರಮುಖ ಸುದ್ದಿ2 hours ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ2 hours ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ2 hours ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ2 hours ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election
ದೇಶ2 hours ago

Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

Amit Shah
ದೇಶ3 hours ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ3 hours ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ3 hours ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ7 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ20 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌