ವಿಸ್ತಾರ ಅಂಕಣ: ರಾಜಕೀಯ ಕಲಿಸಲು ಶಾಲೆಯಲ್ಲ, ಬೇಕಿರುವುದು ಶಾಲಾ ದಿನಗಳಿಂದಲೇ ರಾಜಕೀಯ - Vistara News

ಅಂಕಣ

ವಿಸ್ತಾರ ಅಂಕಣ: ರಾಜಕೀಯ ಕಲಿಸಲು ಶಾಲೆಯಲ್ಲ, ಬೇಕಿರುವುದು ಶಾಲಾ ದಿನಗಳಿಂದಲೇ ರಾಜಕೀಯ

ವಿದ್ಯಾರ್ಥಿ ನಾಯಕತ್ವ, ಯುವ ನಾಯಕತ್ವ ಹಾಗೂ ಸಾಮಾಜಿಕ ನಾಯಕತ್ವವನ್ನು ಮೆಟ್ಟಿ ನಿಂತು, ರಾಜಕಾರಣಕ್ಕೆ ಯೋಗ್ಯರು ಆಗಮಿಸುತ್ತಿಲ್ಲ ಎಂದು ಆಳುವುದರಲ್ಲಿ ಅರ್ಥವಿಲ್ಲ. ವಿದ್ಯಾರ್ಥಿ ಚುನಾವಣೆ, ಸಾಮಾಜಿಕ ಆಂದೋಲನಗಳನ್ನು ಹತ್ತಿಕ್ಕುವ ಬದಲು ಪ್ರಜಾತಾಂತ್ರಿಕ ವ್ಯವಸ್ಥೆಗೆ ಅನುಗುಣವಾಗಿ ಸಂವಾದ, ಚರ್ಚೆಗಳನ್ನು ನಡೆಸುವುದನ್ನು ರೂಢಿಸಿಕೊಂಡರೆ ಕರ್ನಾಟಕದಲ್ಲಿ ನಾಯಕತ್ವಕ್ಕೆ ಕೊರತೆ ಆಗುವುದಿಲ್ಲ.

VISTARANEWS.COM


on

student protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

ಕರ್ನಾಟಕ ವಿಧಾನಸಭೆಗೆ (Karnataka assembly) ಈ ಬಾರಿ ಹೊಸದಾಗಿ 70 ಶಾಸಕರು ಆಯ್ಕೆಯಾಗಿದ್ದಾರೆ. 224 ಜನರ ವಿಧಾನಸಭೆಯಲ್ಲಿ 70 ಹೊಸ ಶಾಸಕರು ಎಂದರೆ ಮೂರನೇ ಒಂದು ಭಾಗದಷ್ಟು ಹೊಸ ನೀರು ಹರಿದು ಬಂದಿದೆ ಎಂದು ಖುಷಿ ಪಡಬಹುದು. ಪ್ರಮುಖವಾಗಿ ಕಾಂಗ್ರೆಸ್ ಪಕ್ಷವು ಹೆಚ್ಚು ಹೊಸಬರಿಗೆ, ಅನೇಕ ಕಡೆಗಳಲ್ಲಿ ಬಿಜೆಪಿಯೂ ಹೊಸಬರಿಗೆ ಟಿಕೆಟ್ ನೀಡಿದ್ದು ಈ ಹರಿವಿಗೆ ಕಾರಣ. ಹೊಸಬರಿಗೆ ಟಿಕೆಟ್ ನೀಡಿದ್ದು ಕಾಂಗ್ರೆಸ್ಸಿಗೆ ಲಾಭ ತಂದಿದ್ದರೆ, ಬಿಜೆಪಿಗೆ ಸ್ವಲ್ಪ ನಷ್ಟವೇ ಆಗಿದೆ. ವಿಧಾನಸಭೆ ಚುನಾವಣೆ (Karnataka assembly election 2023) ಸಂದರ್ಭದಲ್ಲಿ ಹೊಸಬರಿಗೆ ಟಿಕೆಟ್ ನೀಡಬೇಕು ಎಂಬ ಧಾವಂತದಲ್ಲಿ ಪ್ರಕ್ರಿಯೆಗಳನ್ನು ಸರಿಯಾಗಿ ನಿರ್ವಹಿಸದೆ ಎಡವಿತು ಎನ್ನಬಹುದು. ಒಟ್ಟಾರೆ ಇಷ್ಟು ಸಂಖ್ಯೆಯಲ್ಲಿ ಹೊಸಬರು ವಿಧಾನಸಭೆ ಮೆಟ್ಟಿಲು ತುಳಿಯುತ್ತಿರುವುದು ನಿಜಕ್ಕೂ ಸಂತೋಷದ ವಿಚಾರ.

ನೂತನ ಶಾಸಕರಿಗೆ ಸಭಾ ನಡಾವಳಿಗಳು, ಕಾಯ್ದೆ ಕಾನೂನುಗಳ ಪ್ರಾಥಮಿಕ ಪರಿಚಯ ನೀಡುವ ಸಲುವಾಗಿ ವಿಧಾನಸಭೆ ಸಚಿವಾಲಯವು ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ನಡೆಸಿದೆ. ಐದು ವರ್ಷಗಳಿಗೊಮ್ಮೆ ವಿಕಾಸಸೌಧದ ನಾಲ್ಕು ಗೋಡೆಗಳ ನಡುವೆ ಸರ್ಕಾರಿ ಕಾರ್ಯಕ್ರಮದಂತೆ ನಡೆಯುತ್ತಿದ್ದ ಕಾರ್ಯಾಗಾರವೂ ಈ ಬಾರಿ ಹೊಸತನಕ್ಕೆ ಸಾಕ್ಷಿಯಾಗಿದೆ. ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಬೆಂಗಳೂರಿನ ನೆಲಮಂಗಲದ ಬಳಿಯ ಕ್ಷೇಮವನದ ಪರಿಸರದಲ್ಲಿ ಆಯೋಜನೆ ಮಾಡಿದ್ದರು. ಯೋಗ, ಆಯುರ್ವೇದದಂಥ ಹಸಿರು ವಾತಾವರಣದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಾಧಕಿಯರು ನೈತಿಕ ಬದುಕಿನ ಕುರಿತು ನೂತನ ಶಾಸಕರೊಂದಿಗೆ ಚರ್ಚಿಸಿದ್ದಾರೆ. ಇದಕ್ಕಾಗಿ ಯು.ಟಿ. ಖಾದರ್ ಅವರು ಅಭಿನಂದನಾರ್ಹರು.

ಈ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಸ್ವತಃ ಯು.ಟಿ. ಖಾದರ್ ಅವರು ಹೇಳಿದ ಮಾತು ಮುಖ್ಯವಾದದ್ದು ಹಾಗೂ ಇಂದಿನ ಲೇಖನಕ್ಕೆ ಅನುಗುಣವಾಗಿಯೂ ಇದೆ. “ರಾಜಕೀಯಕ್ಕೆ ಆಗಮಿಸುವವರಿಗೆ ಯಾವುದೇ ಶಿಕ್ಷಣ ಸಿಗುತ್ತಿಲ್ಲ. ಹಾಗಾಗಿ ವಿಧಾನಸಭೆ ಸಚಿವಾಲಯದಿಂದಲೇ ಒಂದು ವರ್ಷದ ರಾಜಕೀಯ ಕೋರ್ಸ್ ಮಾಡುವ ಆಲೋಚನೆಯಿದೆ” ಎಂದಿದ್ದಾರೆ. ಹಾಗೆಯೇ, “ಪುಣೆಯಲ್ಲಿ ಖಾಸಗಿ ಸಂಸ್ಥೆಯೊಂದು ಮಾತ್ರ ದೇಶದಲ್ಲಿ ರಾಜಕೀಯ ತರಬೇತಿ ನೀಡುತ್ತಿದೆ (ಬಹುಶಃ ʼರಾಮಭಾವೂ ಮಾಳಗಿ ಪ್ರಬೋಧಿನಿʼ ಸಂಸ್ಥೆಯನ್ನು ಕುರಿತು ಹೇಳಿರಬಹುದು), ಇನ್ನೆಲ್ಲೂ ಇಲ್ಲ. ಇಂತಹ ಕೋರ್ಸ್ ಆರಂಭಿಸುವ ಕುರಿತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೂ ಚರ್ಚಿಸಿದ್ದೇನೆ” ಎಂದಿದ್ದಾರೆ. ಇದು ಒಂದು ಉತ್ತಮ ಆಲೋಚನೆ ಎಂದು ಮೇಲ್ನೋಟಕ್ಕೆ ಅನಿಸಬಹುದು. ಆದರೆ ನಿಜವಾಗಲೂ ಇದರ ಅಗತ್ಯವಿದೆಯೇ? ಅಗತ್ಯವಿದೆ ಎನ್ನುವಂತೆ ಮಾಡಿದವರು ಯಾರು? ಹಿಂದೆಲ್ಲ ರಾಜಕೀಯಕ್ಕೆ ನಾಯಕರು ಎಲ್ಲಿಂದ ಲಭಿಸುತ್ತಿದ್ದರು? ಈ ಬಗ್ಗೆ ತುಸು ಆಲೋಚಿಸೋಣ.

Vidhanasabhe

ಭಾರತದ ಇತಿಹಾಸದಲ್ಲಿ ನೂರಾರು ಆಂದೋಲನಗಳು ನಡೆದಿವೆ. ಇವುಗಳಲ್ಲಿ ವಿದ್ಯಾರ್ಥಿ ಚಳವಳಿಗಳಿಗೆ ತನ್ನದೇ ಆದ ಇತಿಹಾಸವಿದೆ. 1965ರಲ್ಲಿ ತಮಿಳುನಾಡಿನಲ್ಲಿ ಹಿಂದಿ ವಿರೋಧಿ ಚಳವಳಿ ನಡೆದಾಗ, ಅದರ ಮುಂಚೂಣಿಯಲ್ಲಿದ್ದವರು ವಿದ್ಯಾರ್ಥಿಗಳು. ಶುಲ್ಕ ಹೆಚ್ಚಳದ ಕಾರಣಕ್ಕೆ ಗುಜರಾತ್ ವಿವಿಯಲ್ಲಿ 1974ರಲ್ಲಿ ಆರಂಭವಾದ ಪ್ರತಿಭಟನೆ ಕೊನೆಗೆ ಚಿಮನ್ ಬಾಯಿ ಪಟೇಲ್ ಸರ್ಕಾರದ ಪತನಕ್ಕೆ ಕಾರಣವಾಯಿತು. ಅದೇ ವರ್ಷ ನಡೆದ ಭ್ರಷ್ಟಾಚಾರ, ಸ್ವಜನಪಕ್ಷಪಾತದಂತಹ ಅನೇಕ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಹಾರದಲ್ಲಿ ಜಯಪ್ರಕಾಶ್ ನಾರಾಯಣರ ನೇತೃತ್ವದಲ್ಲಿ ಆರಂಭವಾದ ಛಾತ್ರ ಸಂಘರ್ಷ ಸಮಿತಿಯ ಆಂದೋಲನ ಶಾಂತಿಯುತವಾಗಿತ್ತು. ಆ ಆಂದೋಲನದಲ್ಲಿ ತೊಡಗಿಸಿಕೊಂಡ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್, ಮುಲಾಯಂ ಸಿಂಗ್ ಯಾದವ್ ಸೇರಿ ಅನೇಕರು ಭಾರತದ ರಾಜಕಾರಣವನ್ನು ಪ್ರಭಾವಿಸುವ ನಾಯಕರಾದರು. ನಂತರ ಜಯಪ್ರಕಾಶ ನಾರಾಯಣರ ನೇತೃತ್ವದಲ್ಲೆ 1975ರ ತುರ್ತುಪರಿಸ್ಥಿತಿಯನ್ನು ವಿರೋಧಿಸಿ ಆಂದೋಲನ ನಡೆಯಿತು. ತುರ್ತು ಪರಿಸ್ಥಿತಿಯಲ್ಲಂತೂ ವಿದ್ಯಾರ್ಥಿಗಳು, ಯುವಜನರದ್ದೇ ಮೇಲುಗೈ. ಅಲ್ಲಿಂದ ಹೊರಬಂದ ನಾಯಕರುಗಳಿಗೆ ಲೆಕ್ಕವಿಲ್ಲ. ನಂತರ ನಡೆದ ಚುನಾವಣೆಯಲ್ಲಿ ಇಂದಿರಾ ಗಾಂಧಿ ಸರ್ಕಾರವನ್ನೇ ಕೆಡವಿ, ದೇಶದ ಮೊದಲ ಕಾಂಗ್ರೆಸೇತರ ಸರ್ಕಾರ ರಚನೆಗೂ ಇದು ಕಾರಣವಾಯಿತು.

1979-1985ರವರೆಗೆ ಅಸ್ಸಾಂನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಹೊರಹಾಕುವಂತೆ ಹೋರಾಟ ನಡೆಯಿತು. ಅಂದು ಮುಂಚೂಣಿಯಲ್ಲಿದ್ದ ವಿದ್ಯಾರ್ಥಿ ನಾಯಕ ಪ್ರಫುಲ್ಲ ಮಹಂತಾ, ನಂತರ ಅಸ್ಸಾಂನ ಅತಿ ಕಿರಿಯ ಮುಖ್ಯಮಂತ್ರಿಯೂ ಆದರು. ನಂತರ 1990ರಲ್ಲಿ ಮಂಡಲ್ ವಿರೋಧಿ ಆಂದೋಲನ, 2011ರ ಆಸುಪಾಸಿನಲ್ಲಿ ಭ್ರಷ್ಟಾಚಾರ ವಿರೋಧಿಸಿ ಅಣ್ಣಾ ಹಜಾರೆ ನೇತೃತ್ವದಲ್ಲಿ ನಡೆದ ಆಂದೋಲನದಲ್ಲೂ ಮುಂಚೂಣಿಯಲ್ಲಿದ್ದವರು ಕೂಡ ವಿದ್ಯಾರ್ಥಿಗಳು ಮತ್ತು ಯುವಜನರೆ. ಅಣ್ಣಾ ಹಜಾರೆ ಆಂದೋಲನದಿಂದಲೇ ನಾಯಕರಾದ ಅರವಿಂದ ಕೇಜ್ರಿವಾಲ್ ಈಗ ಮುಖ್ಯಮಂತ್ರಿಯಾಗಿದ್ದಾರೆ. ಕರ್ನಾಟಕದಲ್ಲೂ 1973ರಲ್ಲಿ ಸಚಿವರಾಗಿದ್ದ ಬಸವಲಿಂಗಪ್ಪನವರು ʼಕನ್ನಡ ಸಾಹಿತ್ಯದಲ್ಲಿ ಇರುವುದೆಲ್ಲ ದಲಿತರ ಪಾಲಿಗೆ ಬೂಸ (ದನಗಳ ಮೇವು) ಇದ್ದಂತೆʼ ಎಂದು ಹೇಳಿದ್ದು ವಿವಾದವಾಯಿತು. ಇದು ಸಾಹಿತ್ಯಕ್ಕೆ ಸೀಮಿತವಾಗದೆ ಕೊನೆಗೆ ದಲಿತ, ದಲಿತೇತರ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಳವಳಿಯಾಗಿ, ಬೂಸಾ ಚಳವಳಿ ಎಂದೇ ನಡೆದು, ಕೊನೆಗೆ ದಲಿತ ಸಾಹಿತ್ಯ ಸೃಷ್ಟಿಗೂ ಕಾರಣವಾಯಿತು. ಇದರಲ್ಲೂ ಮುಂಚೂಣಿಯಲ್ಲಿದ್ದವರು ವಿದ್ಯಾರ್ಥಿಗಳೆ, ಯುವಜನರೆ. ಹೀಗೆ, ದೇಶದಲ್ಲಿ ನಡೆದ ಅನೇಕ ಹಾಗೂ ಬಹುತೇಕ ಚಳವಳಿಗಳಲ್ಲಿ ವಿದ್ಯಾರ್ಥಿಗಳ ಪಾತ್ರವಿದೆ.

jayaprakash narayan

ಆದರೆ ಕರ್ನಾಟಕದ ಮಟ್ಟಿಗೆ ಹಾಗೂ ದೇಶದಲ್ಲೂ ಬಹಳ ಕಡೆ ಈಗ ಏನಾಗಿದೆ? ವಿದ್ಯಾರ್ಥಿಗಳು ನಾಯಕರಾಗುವ ಅವಕಾಶವನ್ನೇ ವ್ಯವಸ್ಥಿತವಾಗಿ ಚಿವುಟಲಾಗಿದೆ. ವಿದ್ಯಾರ್ಥಿಗಳ ಆಯ್ಕೆಯಾಗಿ ಶಾಲೆಗಳ ಮಟ್ಟದಲ್ಲೇ ಚುನಾವಣೆಗಳನ್ನು ನಡೆಸಲಾಗುತ್ತಿತ್ತು. ಪದವಿಪೂರ್ವ ಕಾಲೇಜುಗಳಲ್ಲೂ ಇಂತಹ ಪದ್ಧತಿಗಳಿದ್ದವು. ಇನ್ನು ಪದವಿ ಹಂತದಲ್ಲಂತೂ ಯೂನಿವರ್ಸಿಟಿ ಎಲೆಕ್ಷನ್ ಎನ್ನುವುದು ಜನರಲ್ ಎಲೆಕ್ಷನ್ನಷ್ಟೆ ಕ್ರೇಜ್ ಇದ್ದಂತಹ ಒಂದು ವಿದ್ಯಮಾನವಾಗಿತ್ತು. ಎಬಿವಿಪಿ, ಎನ್ಎಸ್ಯುಐ, ಎಸ್ ಎಫ್ಐನಂಥ ವಿವಿಧ ವಿದ್ಯಾರ್ಥಿ ಸಂಘಟನೆಗಳ ಮೂಲಕ ರಾಜಕೀಯ ಕ್ಷೇತ್ರಕ್ಕೆ ನಾಯಕರು ಲಭಿಸುತ್ತಿದ್ದರು. ವಿದ್ಯಾರ್ಥಿಗಳ ಪರವಾದ ಅನೇಕ ಹೋರಾಟಗಳನ್ನು ನಡೆಸಿ, ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದವರೂ ನಾಯಕರಾಗುತ್ತಿದ್ದರು. ಆದರೆ, ವಿದ್ಯಾರ್ಥಿ ಚುನಾವಣೆಗಳಲ್ಲಿ ಅಲ್ಲಲ್ಲಿ ನಡೆದ ಹಿಂಸಾಚಾರಗಳನ್ನು ನೆಪವಾಗಿಸಿಕೊಂಡು ಅದನ್ನು ಹತ್ತಿಕ್ಕಲಾಯಿತು. ವಿದ್ಯಾರ್ಥಿಗಳು ಚುನಾವಣೆ ಬದಲಿಗೆ ಓದಿನಲ್ಲಿ ಗಮನಹರಿಸಲಿ ಎಂದು ಕೆಲವರು ಹೇಳಿದರು. ವಿದ್ಯಾರ್ಥಿ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದದ್ದರಿಂದ ಹೀಗೆ ಮಾಡಲಾಯಿತು ಎಂದರು. ಹಾಗಾದರೆ, ಈಗ ನಡೆಯುತ್ತಿರುವ ವಿಧಾನಸಭೆ, ವಿಧಾನಪರಿಷತ್, ಲೋಕಸಭೆ ಚುನಾವಣೆಗಳು ಶುದ್ಧವಾಗಿ ನಡೆಯುತ್ತಿವೆಯೇ? ಅಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿರುವುದರಿಂದ ಅದನ್ನೂ ಏಕೆ ರದ್ದುಪಡಿಸಿ ರಾಷ್ಟ್ರಪತಿ ಆಳ್ವಿಕೆ ತರಬಾರದು? ಎಂದು ಕೇಳಬಹುದಲ್ಲವೇ? ಹಾಗಾಗಿ, ಚುನಾವಣೆ ಹಿಂಸಾಚಾರ, ಭ್ರಷ್ಟಾಚಾರಗಳೆಲ್ಲವೂ ವಿದ್ಯಾರ್ಥಿ ಚಳವಳಿಯನ್ನು ಹತ್ತಿಕ್ಕುವ ಕೆಲ ರಾಜಕೀಯ ನಾಯಕರ ಹುನ್ನಾರ ಅಷ್ಟೆ.

ಇಷ್ಟರ ನಂತರವೂ ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅದನ್ನೂ ಹತ್ತಿಕ್ಕಲು ಸೆಮಿಸ್ಟರ್ ಪದ್ಧತಿ ತರಲಾಯಿತು. ವರ್ಷದಲ್ಲಿ ಆರೇಳು ತಿಂಗಳು ಕಾಲೇಜಿನ ಜತೆಗೆ ಸಾಮಾಜಿಕ ಚಟುವಟಿಕೆ, ಹೋರಾಟ, ಹವ್ಯಾಸ, ಕ್ರೀಡೆಯಲ್ಲಿ ತೊಡಗುತ್ತಿದ್ದ ವಿದ್ಯಾರ್ಥಿಗಳು ನಾಲ್ಕು ತಿಂಗಳಿಗೇ ಪರೀಕ್ಷೆ ಬರೆಯುವಂತೆ ಮಾಡಲಾಯಿತು. ಹೀಗೆ, ಸತತವಾಗಿ ವಿದ್ಯಾರ್ಥಿ ಹೋರಾಟವನ್ನು ವ್ಯವಸ್ಥಿತವಾಗಿ ಇಲ್ಲವಾಗಿಸಲು ಎಲ್ಲ ರಾಜಕೀಯ ಪಕ್ಷಗಳ ಪ್ರಯತ್ನವೂ ಇದೆ. ವಿದ್ಯಾರ್ಥಿ ನಾಯಕತ್ವ ರೂಪುಗೊಂಡರೆ ತಮ್ಮ ನಿರಂಕುಶ ಹಾಗೂ ಕುಟುಂಬ ಆಧಾರಿತ ರಾಜಕಾರಣಕ್ಕೆ ಕುಂದುಂಟಾಗುತ್ತದೆ ಎನ್ನುವುದು ರಾಜಕಾರಣಿಗಳ ಮೊದಲ ಭಯ. ಯೂನಿವರ್ಸಿಟಿ ಚುನಾವಣೆಗಳನ್ನು ರದ್ದುಪಡಿಸಿದ್ದರಿಂದ ವಿದ್ಯಾರ್ಥಿ ಆಂದೋಲನಗಳಷ್ಟೆ ಅಲ್ಲ, ಯುವಕರನ್ನು ಒಳಗೊಂಡ ಎಲ್ಲ ಆಂದೋಲನಗಳೂ ಮೇಲೆ ಏಳದಂತಾದವು. ವಿದ್ಯಾರ್ಥಿ ಹಂತದಲ್ಲೇ ನಾಯಕತ್ವವನ್ನು ಚಿವುಟಿದ ನಂತರ ಮುಂದಿನ ಹಂತದಲ್ಲೂ ಇದು ಕಾಣಲಿಲ್ಲ.

ವಿದ್ಯಾರ್ಥಿ ಚಳವಳಿ, ಯುವಕರ ಚಳವಳಿಗಳಿಂದ ಬಂದವರೆಲ್ಲರೂ ಶುಭ್ರವಾಗಿದ್ದಾರೆಯೇ? ಅವರೇ ಭ್ರಷ್ಟಾಚಾರ, ಅನಾಚಾರ, ಜಾತಿ ರಾಜಕಾರಣ, ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ ಅಲ್ಲವೇ? ಎಂದು ಪ್ರಶ್ನೆ ಕೇಳಬಹುದು. ಅದು ಹೌದು. ಜಯಪ್ರಕಾಶ ನಾರಾಯಣ್ ಬೆಂಬಲಿಗರು ಸೇರಿಕೊಂಡು ರಚಿಸಿದ ಸರ್ಕಾರ ಹಾಗೂ ಪ್ರಫುಲ್ಲ ಮಹಂತಾ ಅವರ ಅಸ್ಸಾಂ ಸರ್ಕಾರ- ಎರಡೂ ಮೊದಲ ಬಾರಿಗೇ ಜನರಲ್ಲಿ ಭ್ರಮನಿರಸನ ಉಂಟುಮಾಡಿ ಪತನವಾದವು. ಆದರೆ ಇದೆಲ್ಲ ರಾಜಕೀಯ ಲೆಕ್ಕಾಚಾರಗಳು. ಹೋರಾಟದ ಮೂಲಕ ನಾಯಕನು ರೂಪುಗೊಂಡ, ಆತನನ್ನು ಜನರು ಬೆಂಬಲಿಸಿ ಅಧಿಕಾರಕ್ಕೆ ತಂದರು. ಅಧಿಕಾರಕ್ಕೆ ಬಂದ ನಂತರ ಆತ ಸ್ವಾರ್ಥಿಯೋ, ನಿಷ್ಕ್ರಿಯನೋ ಆಗುವ ಸಾಧ್ಯತೆಯೂ ಇರುತ್ತದೆ. ಇಲ್ಲಿ ಅನೇಕ ನಾಯಕರಲ್ಲಿ ಆಗಿರುವುದು ಹಾಗೆಯೇ. ಆದರೆ ಅವರಲ್ಲಿಯೇ ಅಟಲ್ ಬಿಹಾರಿ ವಾಜಪೇಯಿ, ಜಾರ್ಜ್ ಫರ್ನಾಂಡಿಸ್ ಅವರಂಥವರಿದ್ದರು. ತಮ್ಮ 18-19ನೇ ವಯಸ್ಸಿನಲ್ಲೆ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ, 20ನೇ ವಯಸ್ಸಿನಲ್ಲೇ ರೈತ ಚಳವಳಿ ರೂಪಿಸಿದ, 1975ರಲ್ಲಿ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ರಾಮಕೃಷ್ಣ ಹೆಗಡೆಯವರಂಥವರೂ ಇಂಥದ್ದೇ ಹೋರಾಟಗಳಿಂದ ಬಂದವರು ಎನ್ನುವುದನ್ನು ನಾವು ಮರೆಯಬಾರದು. ಹೋರಾಟಗಳಿಂದ ನಾಯಕರು ರೂಪುಗೊಳ್ಳದ ಪರಿಣಾಮ, ದೊಡ್ಡ ನಾಯಕರ ಚೇಲಾಗಳು, ಅವರು ಹೇಳಿದಂತೆ ತಲೆಯಾಡಿಸುವ ಜೀ ಹುಜೂರ್ಗಳು, ವ್ಯವಹಾರಗಳನ್ನು ರಕ್ಷಿಸಿಕೊಳ್ಳಲು ಆಗಮಿಸುವ ಉದ್ಯಮಿಗಳು ನೀತಿ ನಿರೂಪಕರಾಗುತ್ತಿದ್ದಾರೆ.

ಹೋರಾಟಗಳಿಂದಲೇ ಬಂದ ರಾಜಕೀಯ ನಾಯಕರು ಒಂದೆಡೆ ಯುವ ಸಮೂಹದಿಂದ, ಶಾಲಾ ಕಾಲೇಜುಗಳಿಂದ ನಾಯಕತ್ವ ಹೊರಹೊಮ್ಮುವುದನ್ನು ತಡೆಯುತ್ತಿದ್ದಾರೆ. ಇನ್ನೊಂದೆಡೆ ಸಾಮಾಜಿಕ ವಲಯದಿಂದಲೂ ನಾಯಕತ್ವ ತಲೆಯೆತ್ತದಂತೆ ನೋಡಿಕೊಳ್ಳುತ್ತಿದ್ದಾರೆ.

ಹಿಂದೆಲ್ಲ ರಾಜಕೀಯ ನಾಯಕರಾದವರು, ನಿಜವಾಗಿ ರಾಜಕೀಯ ನಾಯಕರೇ ಆಗಿರಲಿಲ್ಲ. ಅವರು ಸಾಮಾಜಿಕ ನಾಯಕರಾಗಿದ್ದರು ಮೊದಲು, ನಂತರವೂ. ಯಾವುದಾದರೂ ಒಂದು ಹೋರಾಟದಲ್ಲಿ ತೊಡಗಿಸಿಕೊಂಡು, ಯಾವುದಾದರೂ ಸಾಮಾಜಿಕ ಸೇವೆಯಲ್ಲಿ ಜನಮನ್ನಣೆ ಗಳಿಸಿರುತ್ತಿದ್ದರು. ಒಬ್ಬ ಜನಪ್ರತಿನಿಧಿಗೆ ವಯಸ್ಸಾಗಿಯೊ, ಮತ್ತೊಂದು ಕಾರಣಕ್ಕೊ ಬದಲಾಯಿಸಬೇಕು ಎಂದಾಗ ಈ ಸಾಮಾಜಿಕ ನಾಯಕತ್ವ ಕಣ್ಣಿಗೆ ಬೀಳುತ್ತಿತ್ತು. ಆ ನಾಯಕನೂ ಅಷ್ಟೆ, ತನಗೆ ಸಿಕ್ಕ ಅಧಿಕಾರ ತನಗೆ ಮಾತ್ರ ಸಿಕ್ಕಿದ್ದು ಎಂದು ಸ್ಪಷ್ಟವಾಗಿ ತಿಳಿದಿರುತ್ತಿದ್ದ. ಮದುವೆಯಾಗದ ಅಟಲ್ ಬಿಹಾರಿ ವಾಜಪೇಯಿ ಅವರಷ್ಟೆ ಅಲ್ಲ. ಮದುವೆಯಾದ, ಮಕ್ಕಳಿರುವ ಜಾರ್ಜ್ ಫರ್ನಾಂಡೀಸ್, ಲಾಲಕೃಷ್ಣ ಆಡ್ವಾಣಿ, ಲಾಲ್ ಬಹದ್ದೂರ್ ಶಾಸ್ತ್ರಿಯವರಂಥವರೂ ಹಾಗೆಯೇ ಭಾವಿಸಿದರು.

George_Fernandes_2

ಪ್ರತಿಭಾನ್ವಿತ ವಿದ್ಯಾರ್ಥಿ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ನೀಡಲು, ಅಗತ್ಯವಿರುವವರಿಗೆ ಸಾಲವನ್ನೊ ಅಥವಾ ಧನಸಹಾಯವನ್ನೋ ನೀಡಲು ಸಾಮಾಜಿಕ ದುರ್ಬಲ ಸಮುದಾಯಗಳಿಗೆ ನಿಗಮ, ಮಂಡಳಿಗಂತಹ ವ್ಯವಸ್ಥೆಯಿದೆ. ಆದರೆ ಒಂದು ಸಮುದಾಯವಾಗಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿಯೂ ಸದೃಢವಾಗಿರುವ ಸಮುದಾಯಗಳೂ ಅಂತಹ ಸೌಲಭ್ಯಗಳನ್ನು ಕೇಳುವಂತೆ ಮಾಡಲಾಗುತ್ತಿದೆ. ತನ್ನ ಸಮುದಾಯದಲ್ಲಿರುವವರ ಅವಶ್ಯಕತೆಗಳನ್ನು ವಿದ್ಯಾರ್ಥಿ ವೇತನದ ಮೂಲಕವೊ, ಧನಸಹಾಯದ ರೂಪದಲ್ಲೊ, ಸಾಲವಾಗಿಯೊ ಪೂರೈಸಲು ಆ ಸಮುದಾಯದಿಂದ ಸಾಧ್ಯವಿಲ್ಲವೇ? ಆ ಸಮುದಾಯದಲ್ಲೇ ಇರುವ ಕೋಟ್ಯಧೀಶರು, ಉದ್ಯಮಿಗಳು, ಉನ್ನತ ಹುದ್ದೆಯಲ್ಲಿರುವವರು, ಶಿಕ್ಷಣ ಸಂಸ್ಥೆ ನಡೆಸುತ್ತಿರುವವರು, ಸಹಕಾರ ಸಂಸ್ಥೆ ನೇತೃತ್ವ ವಹಿಸಿರುವವರು ಅನುಕೂಲ ಮಾಡಿಕೊಡಲು ಆಗುವುದಿಲ್ಲವೇ? ಈಗಿನ ರಾಜಕೀಯ ಸನ್ನಿವೇಶ ಇಂತಹ ಸಾಧ್ಯತೆಗಳನ್ನು ಇಲ್ಲವಾಗಿಸುವತ್ತ ಸಾಗಿದೆ.

ಸಾಮಾಜಿಕ ನೇತೃತ್ವವನ್ನು ಹಾಳುಗೆಡವಿ, ಎಲ್ಲವೂ ತನ್ನ ಸುತ್ತಲೇ ಸುತ್ತಬೇಕು ಎಂದು ರಾಜಕೀಯ ಬಯಸುತ್ತಿದೆ. ಯಾವುದೇ ಸಮುದಾಯದ ಸಾಮಾಜಿಕ ನಾಯಕತ್ವ ಗಟ್ಟಿಯಾಗಿದ್ದರೆ ನಾಳೆ ಅದೇ ತನ್ನನ್ನು ನಿಯಂತ್ರಿಸಬಹುದು. ತನ್ನ ಮಗನನ್ನೋ, ಮಗಳನ್ನೋ ಎಂಎಲ್ಎ ಮಾಡುತ್ತೇನೆ ಎಂದು ಹೇಳಿದಾಗ, ಸಮುದಾಯದಿಂದ ಇನ್ಯಾರಾದರೂ ಆದರೆ ಒಳ್ಳೆಯದಲ್ಲವೇ ಎಂದು ಹೇಳಬಹುದು. ಅದಕ್ಕಾಗಿ ಎಲ್ಲರಿಗೂ ಹಣದ, ಅಧಿಕಾರದ ರುಚಿಯನ್ನು ಹತ್ತಿಸಿ ತನ್ನ ಸುತ್ತಲೇ ಸುತ್ತುವಂತೆ ಮಾಡಲಾಗುತ್ತದೆ. ಎರಡು-ಮೂರು-ನಾಲ್ಕು-ಐದು ಬಾರಿ ಶಾಸಕ, ಸಂಸದನಾದರೂ ತನ್ನನ್ನು ಬಿಟ್ಟು ಬೇರೆ ಯಾರನ್ನೂ ಬೆಳೆಯಲೂ ಬಿಟ್ಟಿರುವುದಿಲ್ಲ. ಕೊನೆಗೆ, ಇವರನ್ನು ಬಿಟ್ಟರೆ ಬೇರೆ ಯಾರೂ ಇಲ್ಲ ಎನ್ನುವ ವಾತಾವರಣ ನಿರ್ಮಿಸಿ, ತಾನು ಅಥವಾ ತನ್ನ ಕುಟುಂಬವೇ ಅಧಿಕಾರ ಮುಂದುವರಿಸಿಕೊಂಡು ಹೋಗುವಂತೆ ಮಾಡಿಕೊಂಡಿರುತ್ತಾರೆ.

ಇದನ್ನೂ ಓದಿ: ವಿಸ್ತಾರ ಅಂಕಣ: ಭಾರತವು ವಿಶ್ವ ಗುರು ಪಟ್ಟ ಉಳಿಸಿಕೊಳ್ಳಬೇಕಾ, ಇಲ್ಲ ಸೂಪರ್ ಪವರ್ ಆಗಬೇಕಾ?

ಇಂದು ಒಂದು ವಿಧಾನಸಭೆ ಚುನಾವಣೆ ಸೋತ ತಕ್ಷಣವೇ ಬಿಜೆಪಿಯಲ್ಲಿ ನಾಯಕರೇ ಇಲ್ಲದಂತಾಗಿದ್ದಾರೆ. 66 ಶಾಸಕರು ಗೆದ್ದಿದ್ದಾರಾದರೂ ಒಬ್ಬ ವಿಧಾನಸಭೆ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ, ರಾಜ್ಯ ಘಟಕಕ್ಕೆ ಒಬ್ಬ ಸಮರ್ಥರು ಅವರಿಗೆ ಸಿಗುತ್ತಿಲ್ಲ. ಒಬ್ಬೊಬ್ಬರಲ್ಲಿಯೂ ಹತ್ತಾರು ಹುಳುಕು, ದೌರ್ಬಲ್ಯಗಳ ಆಗರವೇ ಆಗಿದ್ದಾರೆ. ಅವರಲ್ಲಿಯೇ ʼಉತ್ತಮʼರನ್ನು ಆಯ್ಕೆ ಮಾಡಿಕೊಳ್ಳುವ ಪ್ರಯತ್ನ ಕಳೆದ ಒಂದು ತಿಂಗಳಿಂದ ನಡೆದಿದೆ. ಇನ್ನು ಕಾಮಗ್ರೆಸ್ನಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಈಗಿನ ಸರ್ಕಾರದಲ್ಲಿರುವ ಮೊದಲ ಹಂತದ ನಾಯಕರನ್ನು ಬಿಟ್ಟರೆ ನಂತರ ಇರುವವರಿಗೆ ಜನಸಂಪರ್ಕವೇ ಇಲ್ಲ. ಯಾವ್ಯಾವುದೋ ಮಾರ್ಗದಲ್ಲಿ ಆಗಮಿಸಿ ಒಟ್ಟು ಶಾಸಕರಾಗಿ ಆಯ್ಕೆಯಾಗಿರುತ್ತಾರೆ. ಲೋಕಸಭೆ ಚುನಾವಣೆ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕಾದಾಗ ಬಿಜೆಪಿ ಸ್ಥಿತಿಯೇ ಕಾಂಗ್ರೆಸ್‌ಗೂ ಎದುರಾಗಲಿದೆ. ಜೆಪಿ ಚಳವಳಿಯಿಂದಾಗಿಯೇ ಮೇಲೆ ಬಂದ ಎಚ್.ಡಿ. ದೇವೇಗೌಡರ ಪಕ್ಷದಲ್ಲೂ ತಮ್ಮ ಕುಟುಂಬದವರನ್ನು ಬಿಟ್ಟರೆ ಬೇರೆ ನಾಯಕರೇ ಇಲ್ಲ ಎನ್ನುವ ಮಟ್ಟಿನ ಸ್ಥಿತಿ ಇದೆ.

ವಿದ್ಯಾರ್ಥಿ ನಾಯಕತ್ವ, ಯುವ ನಾಯಕತ್ವ ಹಾಗೂ ಸಾಮಾಜಿಕ ನಾಯಕತ್ವವನ್ನು ಮೆಟ್ಟಿ ನಿಂತು, ರಾಜಕಾರಣಕ್ಕೆ ಯೋಗ್ಯರು ಆಗಮಿಸುತ್ತಿಲ್ಲ ಎಂದು ಆಳುವುದರಲ್ಲಿ ಅರ್ಥವಿಲ್ಲ. ವಿದ್ಯಾರ್ಥಿ ಚುನಾವಣೆ, ಸಾಮಾಜಿಕ ಆಂದೋಲನಗಳನ್ನು ಹತ್ತಿಕ್ಕುವ ಬದಲು ಪ್ರಜಾತಾಂತ್ರಿಕ ವ್ಯವಸ್ಥೆಗೆ ಅನುಗುಣವಾಗಿ ಸಂವಾದ, ಚರ್ಚೆಗಳನ್ನು ನಡೆಸುವುದನ್ನು ರೂಢಿಸಿಕೊಂಡರೆ ಕರ್ನಾಟಕದಲ್ಲಿ ನಾಯಕತ್ವಕ್ಕೆ ಕೊರತೆ ಆಗುವುದಿಲ್ಲ. ವಿಧಾನಸಭೆ ಸಚಿವಾಲಯದಿಂದ ಕೋರ್ಸ್ ನಡೆಸುವುದಕ್ಕಿಂತಲೂ ನೂರು ಪಟ್ಟು ನಾಯಕರು ರಾಜ್ಯಕ್ಕೆ ಸಿಗುತ್ತಾರೆ. ಈ ನಿಟ್ಟಿನಲ್ಲಿ ಸಮಾಜ ಯೋಚಿಸುವುದು ಒಳಿತು.

ಇಂಗ್ಲಿಷಿನಲ್ಲಿ ಯುವಶಕ್ತಿ ಕುರಿತು ಒಂದು ಪ್ರಸಿದ್ಧ ಮಾತಿದೆ.

The battle of waterloo is fought at Eton and Oxford and it was lost in the hotels of Paris.

1915ರಲ್ಲಿ ವಾಟರ್ಲೂ ಎಂಬ ಪ್ರದೇಶದಲ್ಲಿ ಫ್ರಾನ್ಸಿನ ನೆಪೋಲಿಯನ್ ಮತ್ತು ಇಂಗ್ಲೆಂಡ್ ನೇತೃತ್ವದ ಏಳನೇ ಒಕ್ಕೂಟದ ಸೇನೆಗಳ ನಡುವೆ ನಡೆದ ನಿರ್ಣಾಯಕ ಸಮರದಲ್ಲಿ ನೆಪೋಲಿಯನ್ ಸೋಲುತ್ತಾನೆ. ಆ ಯುದ್ಧದ ಮೂಲಕ ಫ್ರಾನ್ಸ್‌ನ ಚಕ್ರಾಧಿಪತ್ಯ ನೆಲಕಚ್ಚಿತು. ಆದರೆ, ಈ ಯುದ್ಧ ನಿಜವಾಗಿಯೂ ನಡೆದಿದ್ದು ವಾಟರ್ಲೂ ಎಂಬಲ್ಲಿ ಅಲ್ಲ. ಅದು ನಡೆದಿದ್ದು ಇಂಗ್ಲೆಂಡಿನ ಈಟನ್ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ !
ಯುದ್ಧ ಗೆದ್ದ ಮೈತ್ರಿ ದೇಶಗಳು ತಮ್ಮ ದೇಶದ ಯುವಜನತೆಯನ್ನು ವಿವಿಗಳಲ್ಲಿ, ಶಾಲೆಗಳಲ್ಲಿ ಸಜ್ಜುಗೊಳಿಸಿದ್ದರು. (ನೆಪೋಲಿಯನ್ ಕಡೆಯ ಯುವಜನರು ಫ್ರಾನ್ಸಿನ ಹೋಟೆಲ್‌ಗಳಲ್ಲಿ ಕಾಲ ಕಳೆದು ಸಮರವನ್ನು ಅಲ್ಲಿ ಸೋತರು)

ನಾವು ನಮ್ಮ ವಿದ್ಯಾರ್ಥಿಗಳನ್ನು, ಯುವಜನತೆಯನ್ನು ಭವಿಷ್ಯದ ರಾಜಕೀಯಕ್ಕೆ ಸಜ್ಜು ಮಾಡಬೇಕಿರುವುದು ಅವರ ವಿದ್ಯಾರ್ಥಿ ಜೀವನದಲ್ಲಿ, ವಿವಿಗಳಲ್ಲಿ !

ಇದನ್ನೂ ಓದಿ: ವಿಸ್ತಾರ ಅಂಕಣ: ದೇಶವನ್ನು ಹರಾಜು ಹಾಕಲು ಈ ರಾಜಕೀಯ ಪಕ್ಷಗಳಿಗೆ ಯಾರೂ ಅಧಿಕಾರ ಕೊಟ್ಟಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Shata Chandika Yaga
ಚಿಕ್ಕಬಳ್ಳಾಪುರ5 mins ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ31 mins ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ59 mins ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ1 hour ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ1 hour ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ1 hour ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ2 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ2 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ2 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Ikbal hussain
ಕರ್ನಾಟಕ3 hours ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌