ಪಶ್ಚಿಮ ಬಂಗಾಳದ ಚುನಾಣಾ ಜಂಗಿ ಕುಸ್ತಿಯಲ್ಲಿ ಗೆಲವು ಯಾರಿಗೆ? - Vistara News

Latest

ಪಶ್ಚಿಮ ಬಂಗಾಳದ ಚುನಾಣಾ ಜಂಗಿ ಕುಸ್ತಿಯಲ್ಲಿ ಗೆಲವು ಯಾರಿಗೆ?

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಮತದಾನ ಆರಂಭವಾಗಿದ್ದು ಚುರುಕಿನಿಂದ ಸಾಗಿದೆ. ತಮಿಳುನಾಡಿನ ಎಲ್ಲಾ 234 ಹಾಗೂ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ 152 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಈ ಹಿಂದಿನ ವಿಧಾನಭೆ ಚುನಾವಣೆಯಲ್ಲಿ ಮೊದಲ ಹಂತದ 122 ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿತ್ತು. ಚುನಾವಣೆಯಲ್ಲಿ ಟಿಎಂಸಿ ಶೇ.47ರಷ್ಟು ಮತಗಳನ್ನು ಪಡೆದಿತ್ತು.

ಆದರೆ ಶೇ.40ರಷ್ಟು ಮತಗಳನ್ನು ಪಡೆದಿದ್ದ ಬಿಜೆಪಿ 59 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಅಂದರೆ ಕಳೆದ ಚುನಾವಣೆಯಲ್ಲಿ ಈಗ ಮೊದಲ ಹಂತದ ಮತದಾನ ನಡೆಯುತ್ತಿರುವ 152 ಕ್ಷೇತ್ರಗಳಲ್ಲಿ, ಟಿಎಂಸಿ ಮತ್ತು ಬಿಜೆಪಿ ನಡುವೆ ಶೇ.7ರಷ್ಟು ಮತಗಳ ಅಂತರವಿತ್ತು. ಕಾಂಗ್ರೆಸ್ ಶೇ 4.33 ಹಾಗೂ ಸಿಪಿಎಂ ಶೇ.3.26ರಷ್ಟು ಮತಗಳಿಕೆಗಷ್ಟೇ ಸೀಮಿತವಾಗಿದ್ದವು. ಆದರೆ ಚಲಾವಣೆಯಾದ ಮತಗಳ ಒಟ್ಟು ಪ್ರಮಾಣ ಶೇ.82.64 ರಷ್ಟಿತ್ತು.

ಪಶ್ಚಿಮ ಬಂಗಾಳದಲ್ಲಿ ಈ ಬಾರಿ, ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ. ಆದರೆ, ಈ ಬಾರಿ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಸಿಆರ್ ಪಿಎಫ್ ಮತ್ತಿತರ ಪ್ಯಾರ ಮಿಲಿಟರಿ ಪಡೆ ಯೋಧರನ್ನು ನಿಯೋಜಿಸಿದೆ.

ಪೊಲೀಸ್ ಮುಖ್ಯಸ್ಥರು ಹಾಗೂ ಜಿಲ್ಲಾಧಿಕಾರಿಗಳು ಸ್ವಯಿಚ್ಚೆ ಮೇರೆಗೆ ಬೇರೆಡೆ ವರ್ಗವಾಗಿದ್ದಾರೆ. ಗಮನಾರ್ಹ ವಿಷಯವೇನೆಂದರೆ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 122 ಕ್ಷೇತ್ರಗಳಲ್ಲಿ ಪ್ರತಿ ಕ್ಷೇತ್ರದಲ್ಲಿ ತಲಾ 9 ಸಾವಿರ ಮಂದಿಯಂತೆ ಒಟ್ಟು 14 ಲಕ್ಷ ಮತದಾರರ ಹೆಸರಗಳನ್ನು ಸಾವನ್ನಪ್ಪಿರುವುದೂ, ನಕಲಿ ಮತದಾರರು ಸೇರಿದಂತೆ ವಿವಿಧ ಕಾರಣಗಳ ಮೇರೆಗೆ ಕೈ ಬಿಡಲಾಗಿದೆ.

ಇಷ್ಟೆಲ್ಲಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ನಿರ್ಭೀತ ವಾತಾವರಣದಲ್ಲಿ ಶುದ್ಧ ಮತದಾರರಷ್ಟೇ ಮತಚಲಾಯಿಸುತ್ತಾರೆ ಎನ್ನುವುದಾದರೆ, ಒಟ್ಟಾರೆ ಮತ ಚಲಾವಣೆಯ ಪ್ರಮಾಣದಲ್ಲಿ ಭಾರಿ ಏರಿಕೆಯಾಗಬೇಕು, ಅದಾಗದಿದ್ದರೆ ಚುನಾವಣಾ ಆಯೋಗದ ವೈಫಲ್ಯವೇಂದೇ ಪರಿಗಣಿಸಬಹುದೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಮೊದಲ ಹಂತದ ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಟಕ್ಕರ್ ಕೊಡಲು ಸಾಧ್ಯ ಎಂದು ಹೇಳಲಾಗುತ್ತಿದೆ. ಏಕೆಂದರೆ ಎರಡನೇ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಟಿಎಂಸಿಯ ಪ್ರಾಬಲ್ಯವಿದೆ ಎಂದೆನ್ನಲಾಗುತ್ತಿದೆ.

ಇನ್ನು ಬಿಜೆಪಿ ಮತ್ತು ಟಿಎಂಸಿ ಪಕ್ಷಗಳ ನಡುವಿನ ಬಲಾಬಲ ಮತ್ತು ದೌರ್ಬಲ್ಯಗಳನ್ನು ಅವಲೋಕಿಸುವುದಾರೆ, ಬಿಜೆಪಿ ಕೇಂದ್ರದಲ್ಲಿ ಆಡಳಿತರೂಢ ಪಕ್ಷವಾಗಿರುವುದರಿಂದ ಸಹಜವಾಗಿ ಸಿಬಿಐ, ಇ.ಡಿ ನಂತಹ ತನಿಖಾ ಸಂಸ್ಥೆಗಳು ಹಾಗೂ ಸಿಆರ್ ಪಿ ಎಫ್ ಮತ್ತಿತರ ಪ್ಯಾರಾಮಿಲಿಟರಿ ಪಡೆಗಳು ಮಿಗಿಲಾಗಿ ಚುನಾವಣಾ ಆಯೋಗ ನೀಡಿರುವ ಸಾಥ್ ಮತ್ತಿತರ ಅಂಶಗಳು ಬಿಜೆಪಿ ಪಾಲಿಗೆ ವರವಾಗಬಹುದು ಎಂದೆನ್ನಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಆಡಳಿತರೂಢ ಟಿಎಂಸಿಗೆ ಆಡಳಿತ ವಿರೋಧಿ ಅಲೆಯ ಆತಂಕವಿದೆ. ಮುಖ್ಯವಾಗಿ ಮಹಿಳೆಯರಿಗೆ ಮಮತಾ ಸರ್ಕಾರ ನೀಡುತ್ತಿರುವ ಮಾಸಿಕ ಒಂದೂವರೆ ಸಾವಿರ ರೂಪಾಯಿ ಮೊತ್ತವನ್ನು ಮಾಸಿಕ ಮೂರು ಸಾವಿರ ರೂಪಾಯಿಗೇರಿಸುವ ಭರವಸೆಯನ್ನು ಕಮಲ ಪಾಳೆಯ ನೀಡಿರುವುದು ಮಹಿಳಾ ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ.

ಹಾಗೆ ನೋಡಿದರೆ ಪಶ್ಚಿಮಬಂಗಾಳದ ಗ್ರಾಮೀಣ ಪ್ರದೇಶಗಳಲ್ಲಿ ಕೇಡರ್ ಗಳ ತೀವ್ರ ಕೊರತೆಯನ್ನು ಬಿಜೆಪಿ ಎದುರಿಸುತ್ತಿದೆ ಎಂದು ಹೇಳಲಾಗುತ್ತಿದೆ. ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಮುಸ್ಲಿಂ ಮತದಾರರ ಸಂಖ್ಯೆಯಲ್ಲಿ ಭಾರಿ ಪ್ರಮಾಣದ ಕಡಿತ ಟಿಎಂಸಿ ಪಕ್ಷದ ನಿದ್ದೆಗೆಡಿಸಿದೆ ಎನ್ನಲಾಗಿದೆ.

ಒಟ್ಟಾರೆ, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಟಿಎಂಸಿ ಮತ್ತು ಬಿಜೆಪಿ ನಡುವೆ ಸಮಪ್ರಮಾಣದ ಜಂಗಿ ಕುಸ್ತಿ ನಡೆದಿದೆ. ಯಾರೇ ಗೆದ್ದರೂ ಮತಗಳಿಕೆಯ ಪ್ರಮಾಣ ಅತ್ಯಲ್ಪ ಎಂದೆನ್ನಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

VISTARANEWS.COM


on

ಇಂದು ಬಿಜಿಎಸ್‌ ಹೆಲ್ತ್‌ ಮತ್ತು ಎಜುಕೇಶನ್‌ ಸಿಟಿಯಲ್ಲಿ ನಡೆದ ಎಸ್‌ಜೆಬಿ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಗಳು ಆಯೋಜಿಸಿದ್ದ ವರ್ಚಸ್ವ ಫ್ಲ್ಯಾಶ್‌ ಮಾಬ್‌ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.

ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ, ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಗೆ ಗೌರವ ಸೂಚಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಸೇರಿದಂತೆ ಬಿಜಿಎಸ್‌ ಮತ್ತು ಎಸ್‌ಜೆಬಿ ಸಮೂಹ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಫ್ಲ್ಯಾಶ್‌ ಮಾಬ್‌ ಪ್ರದರ್ಶಿಸಿದರು.

ವರ್ಚಸ್ವ ಫ್ಲ್ಯಾಶ್‌ ಮಾಬ್‌ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರತಿಭೆ, ಉತ್ಸಾಹ ಮತ್ತು ಸಾಂಸ್ಕೃತಿಕ ಸೌಹಾರ್ದತೆಯ ಪ್ರತಿಬಿಂಬವಾಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

Continue Reading

ಪ್ರಮುಖ ಸುದ್ದಿ

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

VISTARANEWS.COM


on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್​ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಅಸೆಂಬ್ಲಿಯಲ್ಲಿ ವಿಜಯ್​ ನೇತೃತ್ವದ ಟಿವಿಕೆಗೆ 144 ಸದಸ್ಯರ ಬೆಂಬಲ ಸಿಕ್ಕಿದೆ. 22 ಶಾಸಕರು ವಿಶ್ವಾಸ ಮತದ ವಿರುದ್ಧ ಮತ ಚಲಾಯಿಸಿದ್ದರು. ಐವರು ಶಾಸಕರು ಮತದಾನದಿಂದ ದೂರ ಉಳಿದಿದ್ದರು. ಎಐಡಿಎಂಕೆಯ ಒಂದು ಬಣ ಅಸೆಂಬ್ಲಿಯಲ್ಲಿ ಟಿವಿಕೆ ಪರ ಮತ ಚಲಾಯಿಸಿದೆ. ವಿರೋಧಪಕ್ಷ ಡಿಎಂಕೆ ಸಭಾತ್ಯಾಗ ಮಾಡಿತ್ತು. 108 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿತ್ತು. ವಿಜಯ್ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು.


ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ, 30 ಶಾಸಕರಿಂದ ಟಿವಿಕೆಗೆ ಮತ
ವಿಜಯ್ ವಿಶ್ವಾಸ ಮತ ಯಾಚನೆ ವೇಳೆ 30 ಎಐಎಡಿಎಂಕೆ ಶಾಸಕರು ಟಿವಿಕೆ ಪರ ಮತಚಲಾಯಿಸಿದ್ದು, ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಡಿಎಂಕೆಯಲ್ಲಿ ಈಗ ಅತಿ ದೊಡ್ಡ ಆಂತರಿಕ ಸಂಘರ್ಷ ಏರ್ಪಟ್ಟಿದೆ. ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ 47 ಶಾಸಕರನ್ನು ಹೊಂದಿದೆ. ಇದರಲ್ಲಿ 30 ಶಾಸಕರು ಟಿವಿಕೆ ಪರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. ಪಕ್ಷದ ವಿಪ್​​ ಹೊರತಾಗಿಯೂ, ಈ ಶಾಸಕರು ವಿಜಯ್​​ಗೆ ಜೈ ಎಂದಿದ್ದಾರೆ. ವಿಜಯ್​ ಪರ ಮತ ಚಲಾಯಿಸಿದ ಎಐಎಡಿಎಂಕೆ ಶಾಸಕರು ಪಕ್ಷಾಂತರ ನಿಷೇಧ ಕಾಯಿದೆ ತೂಗು ಕತ್ತಿಯಿಂದ ಪಾರಾಗ್ತಾರಾ ಅನ್ನೋದು ಸದ್ಯದ ಕುತೂಹಲವಾಗಿದೆ.

Continue Reading

ಸಿನಿಮಾ

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

VISTARANEWS.COM


on

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ಮಾಪಕ ದಿಲೀಪ್‌ ರಾಜ್‌ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 47 ವರ್ಷ ವಯಸ್ಸಿನ ದಿಲೀಪ್‌ ರಾಜ್‌ ಅವರನ್ನು ಬೆಳಗಿನ ಜಾವ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


ದಿಲೀಪ್ ರಾಜ್ ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಲವ್‌ ಮಾಕ್‌ಟೇಲ್‌-3 ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ನಿರ್ಮಾಪಕರಾಗಿಯೂ ಅವರು ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದರು.


ಸ್ಯಾಂಡಲ್‌ವುಡ್‌ನ ನಟರು, ನಿರ್ದೇಶಕರು,ನಿರ್ಮಾಪಕರು ಸೇರಿದಂತೆ ಚಿತ್ರರಂಗ ಗಣ್ಯರು ದಿಲೀಪ್‌ ರಾಜ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದಿಲೀಪ್ ರಾಜ್ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Continue Reading

Latest

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

VISTARANEWS.COM


on

ನೀಟ್ ಪರೀಕ್ಷೆ ರದ್ದು ವಿಚಾರದಲ್ಲಿ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್‌ ಕಿಡಿಕಾರಿದ್ದಾರೆ.

ಶ್ರಮವಹಿಸಿ ವಿದ್ಯಾರ್ಥಿಗಳು ಬರೆದಿದ್ದ ನೀಟ್‌ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದರ ಸಂಪೂರ್ಣ ಹೊರೆಯನ್ನು ನೇರವಾಗಿ ಕೇಂದ್ರ ಸರ್ಕಾರ ಹೊರಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳು ಕಷ್ಟಪಟ್ಟು ಪರೀಕ್ಷೆ ಬರೆದಿದ್ದು, ಅವರ ಬಾಳಲ್ಲಿ ಯಾರೂ ಚೆಲ್ಲಾಟವಾಡಬಾರದು. ನೀಟ್‌ ಪರೀಕ್ಷೆ ವೈಫಲ್ಯದ ಕುರಿತು ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಎನ್‌ಟಿಎ ಸಾಕಷ್ಟು ಬಾರಿ ನೀಟ್‌ ಪರೀಕ್ಷೆ ನಡೆಸಲು ವಿಫಲವಾಗಿದ್ದು, ಅಯಾ ರಾಜ್ಯಗಳಿಗೆ ವೈದ್ಯಕೀಯ ಪ್ರವೇಶ ಪರೀಕ್ಷೆ ‌ನಡೆಸಲು ಅವಕಾಶ ‌ಮಾಡಿಕೊಡಬೇಕು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಬಾರದು. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರು, ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಬೇಕು. ಜೊತೆಗೆ, ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಸಚಿವ ಸುಧಾಕರ್ ಆಗ್ರಹಿಸಿದ್ದಾರೆ.

Continue Reading
Advertisement
Latest11 hours ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ13 hours ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ16 hours ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ16 hours ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

Latest2 days ago

ನೀಟ್‌ ಪರೀಕ್ಷೆ ರದ್ದು: ಕೇಂದ್ರ ಸರ್ಕಾರವೇ ಹೊಣೆ- ಡಾ.ಎಂ.ಸಿ.ಸುಧಾಕರ್‌

Latest2 days ago

ಪ್ರಶ್ನೆ ಪತ್ರಿಕೆ ಸೋರಿಕೆ : ನೀಟ್‌ ಪರೀಕ್ಷೆ ರದ್ದು, ಮರುಪರೀಕ್ಷೆಗೆ ಆದೇಶ

Latest2 days ago

ಅಸ್ಸಾಂ ಸಿಎಂ ಆಗಿ ಹಿಮಂತ್‌ ಬಿಸ್ವಾ ಪದಗ್ರಹಣ

Latest3 days ago

ಸಿಎಂ ಆದ ಮರುದಿನವೇ ಮಾಜಿ ಸಿಎಂ ಸ್ಟಾಲಿನ್‌ ಭೇಟಿಯಾದ ವಿಜಯ್‌

Latest4 days ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ4 days ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌