Why does Rahul Gandhi become anti-India as soon as he steps abroad?ವಿಸ್ತಾರ ಅಂಕಣ: ವಿದೇಶದಲ್ಲಿ ಕಾಲಿಟ್ಟ ತಕ್ಷಣ ರಾಹುಲ್ ಗಾಂಧಿ ಭಾರತ ವಿರೋಧಿ ಆಗುವುದೇಕೆ? - Vistara News

ಅಂಕಣ

ವಿಸ್ತಾರ ಅಂಕಣ: ವಿದೇಶದಲ್ಲಿ ಕಾಲಿಟ್ಟ ತಕ್ಷಣ ರಾಹುಲ್ ಗಾಂಧಿ ಭಾರತ ವಿರೋಧಿ ಆಗುವುದೇಕೆ?

ತಮ್ಮನ್ನು ಸಂಸತ್ತಿನಿಂದ ಹೊರಹಾಕಿದ್ದನ್ನೇ ಏನೋ ಘೋರ ಅಪರಾಧ ಎಂಬಂತೆ, ತಾವು ಹುತಾತ್ಮ ಎಂಬಂತೆ ಮಾತನಾಡುತ್ತಾರೆ ರಾಹುಲ್ ಗಾಂಧಿ. ಆದರೆ ಯಾವ ಕಾರಣಕ್ಕೆ ತಮ್ಮನ್ನು ಹೊರಹಾಕಲಾಯಿತು ಎನ್ನುವುದನ್ನು ಮಾತ್ರ ಎಲ್ಲಿಯೂ ಹೇಳುವುದಿಲ್ಲ. ಸ್ವಯಂಕೃತ ಅಪರಾಧಕ್ಕಾಗಿ ಸಂಸತ್ತಿನಿಂದ ಹೊರಗಿರುವ ರಾಹುಲ್‌ ಈಗ ವಿದೇಶಗಳಲ್ಲಿ ಭಾರತದ ಕುರಿತು ನಕಾರಾತ್ಮಕ ಅಂಶಗಳನ್ನೇ ಬಿಂಬಿಸುತ್ತಿದ್ದಾರೆ.

VISTARANEWS.COM


on

Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Column @ Hariprakash Konemane

ಕಥೆಯನ್ನು ಅನೇಕ ಬಾರಿ ಕೇಳಿರಬಹುದು, ಕೆಲವರು ಕೇಳಿಲ್ಲದೆಯೂ ಇರಬಹುದು. ಆದರೂ ದೇಶದ ಇಂದಿನ ಇಂದಿನ ರಾಜಕೀಯ ಸನ್ನಿವೇಶಕ್ಕೆ ಹಾಗೂ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮಾಡುತ್ತಿರುವ ಎಡವಟ್ಟನ್ನು ಖಂಡಿಸಲು ಅನಿವಾರ್ಯತೆ ಇರುವುದರಿಂದ ಮತ್ತೊಮ್ಮೆ ಹೇಳುವೆ..
‘ಪಗಡೆ ಆಟದಲ್ಲಿ ಪಾಂಡವರನ್ನು ಸೋಲಿಸಿದ ನಂತರ, ಕೌರವರು ಅವರನ್ನು 12 ವರ್ಷಗಳ ಕಾಲ ಕಾಡಿನಲ್ಲಿ ವನವಾಸಕ್ಕೆ ಮತ್ತು ಹೆಚ್ಚುವರಿ ಒಂದು ವರ್ಷ ಅಜ್ಞಾತವಾಸಕ್ಕೆ ಕಳಿಸಿದರು. ಪಾಂಡವರು ವನವಾಸದಲ್ಲಿದ್ದಾಗ ಕೌರವರು ತಮ್ಮ ಕುಟುಂಬ ಸದಸ್ಯರೊಂದಿಗೆ ಪಾಂಡವರು ವಾಸಿಸುತ್ತಿದ್ದ ಪ್ರದೇಶಕ್ಕೆ ಭೇಟಿ ನೀಡಿದರು. ತಾವು ಎಷ್ಟು ಚೆನ್ನಾಗಿದ್ದೆವೆ, ನೀವೆಷ್ಟು ಕೀಳು ಜೀವನ ನಡೆಸುತ್ತಿದ್ದೀರ ಎಂದು ಪಾಂಡವರನ್ನು ಗೇಲಿ ಮಾಡಿದರು. ತನ್ನ ಕುಟುಂಬದ ಸದಸ್ಯರೊಂದಿಗೆ ಒಮ್ಮೆ ದುರ್ಯೋಧನ, ಕಾಡಿನಲ್ಲಿರುವ ಸರೋವರಕ್ಕೆ ತೆರಳಿದ. ಆ ಸಮಯದಲ್ಲಿ ಚಿತ್ರಸೇನ ಎಂಬ ಗಂಧರ್ವ ತನ್ನ ಸಖಿಯರೊಂದಿಗೆ ಜಲ ಕ್ರೀಡೆಗಳನ್ನು ಆನಂದಿಸುತ್ತಿದ್ದ. ದುರ್ಯೋಧನನನ್ನು ಕಂಡ ಗಂಧರ್ವ, ಸರೋವರಕ್ಕೆ ಬರಬೇಡ ಎಂದ. ಈ ಆಕ್ಷೇಪದಿಂದ ದುಶ್ಶಾಸನ ಕೋಪಗೊಂಡ. ಕೋಪದಲ್ಲಿ ಅವನು ಗಂಧರ್ವರಿಗೆ ಯುದ್ಧಕ್ಕೆ ಸವಾಲು ಹಾಕಿದ. ಎರಡು ಪಕ್ಷಗಳ ನಡುವೆ ಘೋರ ಯುದ್ಧ ನಡೆದು ಗಂಧರ್ವರದ್ದೇ ಮೇಲುಗೈ ಆಯಿತು. ಗಂಧರ್ವರು ಕೌರವರನ್ನು ಸೋಲಿಸಿದರು. ಕೌರವರು ಗಂಧರ್ವರ ಮುಂದೆ ಶೋಚನೀಯ ಸ್ಥಿತಿಯಲ್ಲಿದ್ದರು. ತಮ್ಮ ಉಳಿವು ಕಷ್ಟ ಎಂದು ಅರಿತ ಕೌರವರ 4-5 ಸೈನಿಕರು ಹೇಗೋ ತಪ್ಪಿಸಿಕೊಂಡು ಪಾಂಡವರು ಬೀಡುಬಿಟ್ಟಿದ್ದ ಕಾಡನ್ನು ತಲುಪಿದರು. ಅವರು ಯುಧಿಷ್ಠಿರನನ್ನು ಸಂಪರ್ಕಿಸಿದರು. ಅವರ ಕಾಲಿಗೆ ಬಿದ್ದು ಕುರು ಮನೆತನದ ಗೌರವ ಕಾಪಾಡುವಂತೆ ಮನವಿ ಮಾಡಿದರು.

ಇದನ್ನು ಕೇಳಿದ ಭೀಮ “ನಾವು ಈಗ ಏನನ್ನೂ ಮಾಡುವುದಿಲ್ಲ. ಗಂಧರ್ವರ ಕೈಯಲ್ಲಿ ಕೌರವರೆಲ್ಲ ನಾಶವಾಗಲಿ. ಕಂಟಕವಾಗಿರುವ ಕೌರವರು ನಿರ್ಮೂಲನೆಗೆ ಅರ್ಹರು. ನಾವೀಗ ಸುಮ್ಮನಿದ್ದರೆ ಯಾವುದೇ ಪ್ರಯತ್ನವಿಲ್ಲದೆ ಇವರನ್ನು ನಾಶ ಮಾಡಬಹುದು” ಎಂದ. ಆದರೆ ಭೀಮನ ಈ ಅಭಿಪ್ರಾಯ ಯುಧಿಷ್ಠಿರನಿಗೆ ಸಮ್ಮತವಾಗಲಿಲ್ಲ. “ನಾವು ನಮ್ಮೊಳಗೆ ಹೋರಾಡುವಾಗ ನಾವು ಐವರು ಪಾಂಡವರು ಹಾಗೂ ನೂರು ಕೌರವರ ವಿರುದ್ಧ ಹೋರಾಡುವುದು ಸರಿ. ಆದರೆ ಹೊರಗಿನವರ ಜತೆ ಹೋರಾಡುವ ವಿಷಯವಾದಾಗ, ನಾವು ಒಟ್ಟು 105 ಜನರು (ವಯಂ ಪಂಚಾಧಿಕಂ ಶತಂ)” ಎಂದು ಹೇಳುತ್ತಾನೆ. ಆಗ ಎಲ್ಲ ಪಾಂಡವರೂ ಸರೋವರದ ಬಳಿ ತೆರಳಿ ಗಂಧರ್ವರ ವಿರುದ್ಧ ಹೋರಾಡಿ ಕೌರವರನ್ನು ರಕ್ಷಿಸುತ್ತಾರೆ.

ಕೆಲ ತಿಂಗಳ ಹಿಂದಷ್ಟೆ ಅಂದರೆ ಮಾರ್ಚಿಯಲ್ಲಿ ವಿದೇಶಕ್ಕೆ ತೆರಳಿದ್ದ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದರು. ಸಂವಿಧಾನದ ಮೂಲ ಸ್ವರೂಪದ ಮೇಲೆ ದಾಳಿ ಆಗುತ್ತಿದೆ ಎಂದು ಹೇಳಿ ಸುದ್ದಿಯಾಗಿದ್ದರು. ಇದೀಗ 10 ದಿನಗಳ ಅಮೆರಿಕ ಭೇಟಿ ನಡೆಸಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ ಸಂವಾದವೊಂದರಲ್ಲಿ ಮಾತನಾಡುತ್ತ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ್ದಾರೆ. “ಮುಸ್ಲಿಮರು ಮಾತ್ರವಲ್ಲ, ಸಿಖ್, ಕ್ರೈಸ್ತ, ದಲಿತ ಹಾಗೂ ಆದಿವಾಸಿಗಳೂ ತಮ್ಮ ಮೇಲೆ ದಾಳಿಯಾಗುತ್ತಿದೆ ಎಂದು ಭಾವಿಸುತ್ತಿದ್ದಾರೆ. 1980ರ ದಶಕದಲ್ಲಿ ಭಾರತದಲ್ಲಿ ದಲಿತರಿಗಿದ್ದ ಸ್ಥಿತಿಯೇ ಇಂದು ಭಾರತದಲ್ಲಿ ಮುಸ್ಲಿಮರದ್ದಾಗಿದೆ” ಎಂದಿದ್ದಾರೆ. ಮಾತು ಎಷ್ಟು ಸತ್ಯ ಎನ್ನುವುದೇ ಮೊದಲನೆಯದಾಗಿ ಪ್ರಶ್ನಾರ್ಥಕ.

ಭಾರತ ದೇಶದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯಗಳು ಎಂತಹದ್ದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಳ್ಳಿ ಹಳ್ಳಿಗಳಲ್ಲಿ ಕೆರೆಯ ನೀರು ಕುಡಿಯಲು ನೀಡಿದ ಕಿರುಕುಳ, ಕೇರಳದಂತಹ ರಾಜ್ಯದಲ್ಲಿ ದಲಿತರ ನೆರಳನ್ನೂ ತುಳಿಯದಷ್ಟು ಅಸಹನೆ, ಕರ್ನಾಟಕದ ಕಂಬಾಲಪಲ್ಲಿ ಸೇರಿ ಅನೇಕ ಕಡೆ ದಲಿತರ ಹತ್ಯೆಗಳು ಎಷ್ಟೆಲ್ಲಾ ನಡೆದವು. ಸ್ವತಃ ಡಾ. ಬಿ.ಆರ್. ಅಂಬೇಡ್ಕರ್ ಅವರು ಬಾಲ್ಯದಲ್ಲಿ ಹಾಗೂ ವಿದ್ಯಾವಂತನಾಗಿ ವಿದೇಶದಿಂದ ವಾಪಸಾದ ನಂತರವೂ ಅನುಭವಿಸಿದ ಕಿರುಕುಳ ಯಾವುದೇ ಮಾನವ ಸಮಾಜಕ್ಕೆ ಅಪಮಾನಕರ. ಈ ವಿಚಾರವನ್ನು ಹಿಂದೂ ಸಮಾಜ ಎಂದಿಗೂ ಮುಚ್ಚಿಟ್ಟಿಲ್ಲ. ಹಿಂದೆ ಆದಂತಹ ತಪ್ಪುಗಳು ಮುಂದೆ ಆಗದಂತೆ ಸುಧಾರಣೆ ಮಾಡಿಕೊಳ್ಳುವತ್ತ ಹಿಂದುಗಳು ಎಂದೂ ಹಿಂದೆ ಬಿದ್ದಿಲ್ಲ. ಆದರೆ ಇಷ್ಟೆಲ್ಲ ಹೀನಕೃತ್ಯಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಈಗ ಭಾರತದಲ್ಲಿ ನಡೆಯುತ್ತಿದೆಯೇ? ಉತ್ತರ ಪ್ರದೇಶದ ದಾದ್ರಿಯಲ್ಲಿ ಅಖ್ಲಾಖ್ ಎಂಬ ಮುಸ್ಲಿಮನನ್ನು ಹಿಂದೂಗಳು ಹತ್ಯೆ ಮಾಡಿದರು ಎಂಬ 2015ರ ಘಟನೆಯನ್ನು ಮುಂದಿಟ್ಟುಕೊಂಡು ಉದಾಹರಣೆ ನೀಡಲಾಗುತ್ತಿದೆ. ಹಾಗಾದರೆ ಬಿಜೆಪಿಯ ನೂಪುರ್ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದ ಎಂಬ ಒಂದೇ ಕಾರಣಕ್ಕೆ ಉದಯಪುರದ ದರ್ಜಿಯ ಕತ್ತು ಕೊಯ್ದದ್ದು ಸತ್ಯವಲ್ಲವೇ? ಎರಡೂ ಕಡೆ ನಡೆಯುವ ಇಂತಹ ಘಟನೆಗಳನ್ನು ಸಹಿಸುವುದು ಅಸಾಧ್ಯ. ಆದರೆ ಇಂತಹ ದುರ್ಘಟನೆಗಳು ಆಯಾ ಸಂದರ್ಭಕ್ಕೆ ಅನುಗುಣವಾಗಿ ನಡೆಯುತ್ತವೆಯೇ ವಿನಃ ಇಡೀ ದೇಶದಲ್ಲಿ ಮುಸ್ಲಿಮರನ್ನು ವ್ಯವಸ್ಥಿತವಾಗಿ ಹಿಂಸೆ ಮಾಡಲಾಗುತ್ತಿದೆ ಎನ್ನಲು ಯಾವುದಾದರೂ ಪುರಾವೆ ಬೇಕಲ್ಲವೇ? ಹಾಗಾದರೆ ಇದನ್ನು ಪ್ರಶ್ನಿಸಲು ನ್ಯಾಯಾಂಗ ಇಲ್ಲವೇ? ಸಂವಿಧಾನ ಇಲ್ಲವೇ? ಇಡೀ ದೇಶದ ಬೌದ್ಧಿಕ ವರ್ಗ, ಮಾಧ್ಯಮವಷ್ಟೇ ಅಲ್ಲದೆ ನ್ಯಾಯಾಂಗವನ್ನೂ ನಿಯಂತ್ರಣದಲ್ಲಿ ಇರಿಸಿಕೊಳ್ಳುವಷ್ಟು ಈಗಿನ ಸರ್ಕಾರ ಶಕ್ತಿಯುತವಾಗಿದೆಯೇ ಎಂದೂ ಪ್ರಶ್ನಿಸಬೇಕಾಗುತ್ತದೆ. 1975ರಲ್ಲಿ ಇಂದಿರಾ ಗಾಂಧಿ ತುರ್ತು ಸ್ಥಿತಿ ಹೇರಿದಾಗಲೂ ದೇಶವು ಎದೆಗುಂದದೆ ಹೋರಾಡಿ ಗೆದ್ದಿದೆ. ಅಂತಹ ದೇಶವನ್ನು ಒಂದು ಸರ್ಕಾರ ಮಣಿಸಿಬಿಡುತ್ತದೆ ಎಂದು ಸಾರಾಸಗಟಾಗಿ ಹೇಳುವುದು ಇಲ್ಲಿನ 140 ಕೋಟಿ ಜನರಿಗೆ ಮಾಡುವ ಅಪಮಾನ.

ಅಷ್ಟಕ್ಕೂ ಇಂತಹ ಘಟನೆ ನಡೆದಿದೆ ಎಂದರೆ ಎಲ್ಲಿ ಚರ್ಚಿಸಬೇಕು? ಸಂಸತ್ತಿನಲ್ಲಿ ಅಲ್ಲವೇ? ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ನರೇಂದ್ರ ಮೋದಿ ವಿರುದ್ಧ ದಾಳಿ ಮಾಡುವ ಭರದಲ್ಲಿ ‘ಮೋದಿʼ ಎಂಬ ಸರ್ ನೇಮ್ ವಿರುದ್ಧ ನಾಲಗೆ ಹರಿಬಿಟ್ಟವರು ರಾಹುಲ್ ಗಾಂಧಿ. ಒಬ್ಬ ವ್ಯಕ್ತಿಯನ್ನು ತೆಗಳುವ ಭರದಲ್ಲಿ ಒಂದಿಡೀ ಜನಾಂಗವನ್ನೇ ತೆಗಳುವ ಅಸಾಂವಿಧಾನಿಕ ಕೃತ್ಯಕ್ಕೆ ಇದೀಗ ತಮ್ಮ ಸಂಸತ್ ಸದಸ್ಯತ್ವವನ್ನೇ ಕಳೆದುಕೊಂಡಿದ್ದಾರೆ. ತಮ್ಮನ್ನು ಸಂಸತ್ತಿನಿಂದ ಹೊರಹಾಕಿದ್ದನ್ನೇ ಏನೋ ಘೋರ ಅಪರಾಧ ಎಂಬಂತೆ, ತಾನು ಹುತಾತ್ಮ ಎಂಬಂತೆ ಮಾತನಾಡುವ ರಾಹುಲ್ ಗಾಂಧಿ, ಯಾವ ಕಾರಣಕ್ಕೆ ತಮ್ಮನ್ನು ಹೊರಹಾಕಲಾಯಿತು ಎನ್ನುವುದನ್ನು ಮಾತ್ರ ಎಲ್ಲಿಯೂ ಹೇಳುವುದಿಲ್ಲ. ಸಂಸತ್ತಿನಲ್ಲಿ ಚರ್ಚೆ ನಡೆಸುವ ಬದಲಿಗೆ ಗದ್ದಲ ಎಬ್ಬಿಸಿ ಸಂಸತ್ತಿನ ಕಾರ್ಯಕಲಾಪಕ್ಕೆ ಅಡ್ಡಿಪಡಿಸುವುದನ್ನು ಇಡೀ ದೇಶವೇ ನೋಡಿದೆ. ಈಗ ಸಂಸತ್ತಿನಿಂದ ಹೊರಗಿರುವ ಕಾರಣ, ವಿದೇಶಕ್ಕೆ ತೆರಳಿ ಭಾರತದ ಕುರಿತು ನಕಾರಾತ್ಮಕ ಅಂಶಗಳನ್ನೇ ಬಿಚ್ಚಿಡುತ್ತಿದ್ದಾರೆ.

ನರೇಂದ್ರ ಮೋದಿಯವರೂ ವಿದೇಶಕ್ಕೆ ತೆರಳುತ್ತಾರೆ. ಇತ್ತೀಚೆಗೆ ಆಸ್ಟ್ರೇಲಿಯಾ ಪ್ರವಾಸದ ಸಂದರ್ಭದಲ್ಲಿ ಅಲ್ಲಿನ ಜನರು ನೀಡಿದ ಅಭೂತಪೂರ್ವ ಬೆಂಬಲವನ್ನು ಇಡೀ ವಿಶ್ವ ನೋಡಿ ಮೆಚ್ಚಿದೆ. ನರೇಂದ್ರ ಮೋದಿ ಯಾವಾಗಲೇ ವಿದೇಶ ಪ್ರವಾಸಕ್ಕೆ ತೆರಳಿದಾಗಲೂ ಭಾರತದ ಹಿರಿಮೆ, ಗರಿಮೆಯನ್ನೇ ಮಾತನಾಡುತ್ತಾರೆ. ಭಾರತೀಯರ ಕೊಡುಗೆ ಏನು? ಸಾಮರ್ಥ್ಯ ಏನು? ಎಂದು ಬೆಳಕು ಚೆಲ್ಲುತ್ತಾರೆ. ಎಲ್ಲಿಯೂ ಒಂದೂ ನಕಾರಾತ್ಮಕ ಅಂಶ ಇಲ್ಲ. ಆದರೆ ಈ ರಾಹುಲ್ ಗಾಂಧಿ ಮಾತ್ರ ಏಕೆ ಹೀಗೆ? ಮಾತೆತ್ತಿದರೆ ತಾನೊಬ್ಬ ಜನಿವಾರ ಧರಿಸುವ ಹಿಂದೂ ಎನ್ನುವ ರಾಹುಲ್ ಗಾಂಧಿಯವರಿಗೆ, ಮೇಲೆ ತಿಳಿಸಿದ ಮಹಾಭಾರತದ ಸಣ್ಣ ಕಥೆ ತಿಳಿದಿಲ್ಲವೇ? ಹಾಗೆ ನೋಡಿದರೆ, ಮುಸ್ಲಿಮರ ಕುರಿತು ಇದು ರಾಹುಲ್ ಗಾಂಧಿಯವರಿಗೆ ಮಾತ್ರವಲ್ಲ, ಕಾಂಗ್ರೆಸ್ ಪಕ್ಷಕ್ಕೇ ಸಮಸ್ಯೆ ಇದೆ.

ಭಾರತ ದೇಶ ಕಂಡ ಚಿಂತಕರಲ್ಲಿ ಸೀತಾರಾಮ್ ಗೋಯೆಲ್ ಅವರು ಪ್ರಮುಖರು. ಭಾರತದ ಇತಿಹಾಸವನ್ನು ತಿಳಿಸುವ ಜತೆಗೆ ಭಾರತದ ಮನೋಧರ್ಮ, ಇಲ್ಲಿನ ಜನರ ಮೇಲೆ ನಡೆದಿರುವ ಆಕ್ರಮಣ, ಅನ್ಯಾಯಗಳನ್ನು ನೆನಪಿಸುವ ಕೆಲಸವನ್ನು ಗೋಯೆಲ್ ಮನೋಜ್ಞವಾಗಿ ಮಾಡಿದವರು. ಅವರು ಪ್ರಕಟಿಸಿದ ವಾಯ್ಸ್ ಆಫ್ ಇಂಡಿಯಾ ಸರಣಿಯು ಭಾರತದ ಕುರಿತು ನಾವೀಗ ಹೊಂದಿರುವ ದೃಷ್ಟಿಕೋನವನ್ನೇ ಬದಲಾಯಿಸುವ ಸತ್ಯಸಂಗತಿಗಳನ್ನು ಹೊಂದಿದೆ.

ಸೀತಾರಾಮ್ ಗೋಯೆಲ್ ಅವರ ಅನೇಕ ಕೃತಿಗಳಲ್ಲಿ ” ಸೆಕ್ಯುಲರಿಸಂ: ರಾಷ್ಟ್ರದ್ರೋಹದ ಹೊಸ ಹೆಸರು” ಎಂಬ ಹಿಂದಿ ಪುಸ್ತಕ ಪ್ರಮುಖವಾದದ್ದು. ಇಲ್ಲಿ ಸೀತಾರಾಮ್ ಗೋಯೆಲ್ ಅವರು ಒಂದು ತಪ್ಪು ಮಾಡಿದ್ದರು. ಅದನ್ನು ಅವರು ಇಂಗ್ಲಿಷ್ ಭಾಷೆಗೆ ಈ ಪುಸ್ತಕ ಅನುವಾದಗೊಂಡಾಗ ಒಪ್ಪಿಕೊಂಡಿದ್ದಾರೆ. ಸೆಕ್ಯುಲರಿಸಂ ಅನ್ನೇ ತೆಗಳುತ್ತಿರುವಂತೆ ಹಿಂದಿ ಪುಸ್ತಕದ ಶೀರ್ಷಿಕೆ ಇತ್ತು. ಆದರೆ ಅವರು ಮೂಲ ಸೆಕ್ಯುಲರಿಸಂನ ವಿರೋಧಿಯಾಗಿರಲಿಲ್ಲ. ಹಾಗಾಗಿ ಇಂಗ್ಲಿಷ್ ಆವೃತ್ತಿಯಲ್ಲಿ ಈ ತಪ್ಪನ್ನು ತಿದ್ದಿಕೊಂಡು ” India’s Secularism” ಅಂದರೆ ಭಾರತದ ಸೆಕ್ಯುಲರಿಸಂ ಎಂದು ಬದಲಾಯಿಸಿದರು.

ಸೆಕ್ಯುಲರಿಸಂ ಹೇಗೆ ಬೆಳೆಯಿತು ಎಂಬುದಕ್ಕೆ ಸೀತಾರಾಂ ಗೋಯೆಲ್‌ರ ವಿವರಣೆಯ ಸಾರಾಂಶ ಹೀಗೆ ಇದೆ:
“ಐರೋಪ್ಯ ದೇಶಗಳಲ್ಲಿ 4ನೇ ಶತಮಾನದ ನಂತರ ಚರ್ಚ್ ಮತ್ತು ರಾಜ್ಯಾಡಳಿತದ ನಡುವೆ ಗಾಢ ಸಂಬಂಧವಿತ್ತು. ರಾಜ್ಯಾಂಗದ ಕೆಲಸ ಕೇವಲ ಜನರ ಭೌತಿಕ ಅವಶ್ಯಕತೆ ಪೂರೈಸುವ, ಮೂಲಸೌಕರ್ಯ ಒದಗಿಸುವುದಲ್ಲ. ಬದಲಿಗೆ ಪರಲೋಕದಲ್ಲಿ ಜನರ ಸಾಲ್ವೇಷನ್ (ಸರಿಯಾದ ಅರ್ಥ ಅಲ್ಲದಿದ್ದರೂ ಹತ್ತಿರದ್ದಾಗಿ ಮುಕ್ತಿ ಎಂದು ಬಳಸಬಹುದು) ಕೆಲಸ ಮಾಡುವುದೂ ಆಗಿತ್ತು. ಸಾಲ್ವೇಷನ್ ಹೊಂದಲು ಅದರ ಬಾಗಿಲಿನ ಕೀಲಿಕೈ ಚರ್ಚ್ ಬಳಿ ಇರುತ್ತಿತ್ತು. ಚರ್ಚ್ ಆಗಿಂದಾಗ್ಗೆ ನಿರೂಪಿಸುವ ಕಾನೂನನ್ನು ಪಾಲನೆ ಮಾಡುವಲ್ಲಿ ಯಾರೇ ವಿಫಲವಾದರೂ ಅವರ ವಿರುದ್ಧ ಚರ್ಚ್ ಕ್ರಮ ಕೈಗೊಳ್ಳುತ್ತಿರಲಿಲ್ಲ. ಬದಲಿಗೆ ಅಂಥವರು ಸ್ವರ್ಗಕ್ಕೆ ಹೋಗುವ ಬಾಗಿಲನ್ನು ತನ್ನ ಕೀಲಿಕೈ ಮೂಲಕ ಬಂದ್ ಮಾಡಿಬಿಡುತ್ತಿತ್ತು. ಮುಂದಿನ ಹಂತದಲ್ಲಿ ರಾಜ್ಯಾಡಳಿತವು ಕೆಲಸ ಮುಂದುವರಿಸುತ್ತಿತ್ತು. ಚರ್ಚ್ ಕೆಂಗಣ್ಣಿಗೆ ಗುರಿಯಾದವರಿಗೆ ಜೈಲು ಶಿಕ್ಷೆಯಿಂದ ಮರಣ ದಂಡನೆವರೆಗೆ ಶಿಕ್ಷೆ ವಿಧಿಸುತ್ತಿತ್ತು. ಅದಕ್ಕಾಗಿ ರಾಜ್ಯಾಡಳಿತವನ್ನು ಚರ್ಚಿನ ʼಸೆಕ್ಯುಲರ್ ಅಂಗʼ ಎಂದು ಕರೆಯಲಾಗುತ್ತಿತ್ತು. ರಾಜ್ಯಾಂಗವೂ ಸಹ, ಚರ್ಚ್ ಸೇವೆ ಮಾಡುವುದೇ ತನ್ನ ಕೆಲಸ ಎಂದು ಒಪ್ಪಿಕೊಂಡಿತ್ತು.

ಐರೋಪ್ಯ ದೇಶಗಳಲ್ಲಿ ಇನ್ನೂ ಕ್ರೈಸ್ತಮತವನ್ನು ಒಪ್ಪಿಕೊಳ್ಳಬೇಕಿರುವ ಇತರೆ ಜನರು ಇರುವವರೆಗೂ ಚರ್ಚ್ ಹಾಗೂ ರಾಜ್ಯಾಂಗದ ನಡುವೆ ಈ ಬಾಂಧವ್ಯ ಮುಂದುವರಿಯಿತು. ರಾಜ್ಯಾಂಗವು ವಿವಿಧ ಪ್ರದೇಶಗಳಲ್ಲಿ ತನ್ನ ಸಾಮ್ರಾಜ್ಯ ವಿಸ್ತರಣೆ ಮಾಡುತ್ತ ಸಾಗಿತು. ಅಲ್ಲೆಲ್ಲ ಚರ್ಚ್ ಕ್ರೈಸ್ತ ಮತವನ್ನು ವಿಸ್ತರಿಸುತ್ತ ಸಾಗಿತು. ಆದರೆ 15ನೇ ಶತಮಾನದ ಅಂತ್ಯಕ್ಕೆ ಇಡೀ ಐರೋಪ್ಯ ಜಗತ್ತು ಕ್ರಿಶ್ಚಿಯನ್ ಆಯಿತು. ಈ ಸಂದರ್ಭದಲ್ಲಿ ರಾಜರಿಗೆ ಚರ್ಚಿನ ಅವಶ್ಯಕತೆ ಬೇಡವಾಯಿತು. ಚರ್ಚ್ ದಿನಬೆಳಗಾದರೆ ನೀಡುವ ಆದೇಶಗಳು ರಾಜರಿಗೆ ಕಿರಿಕಿರಿ ಉಂಟುಮಾಡುತ್ತಿದ್ದವು. ಈ ಸಂದರ್ಭದಲ್ಲಿ ರಾಜ್ಯಾಂಗದ ಹಾಗೂ ಚರ್ಚ್ ಬೆಂಬಲಿಗರ ನಡುವೆ ಕಾದಾಗ, ಬಡಿದಾಟ, ರಕ್ತಪಾತಗಳು ನಡೆದವು. ಅಲ್ಲಿನ ಅನೇಕ ಚಿಂತಕರು ಗ್ರೀಕ್ ಸಂಸ್ಕೃತಿ, ಭಾರತೀಯ ಸಂಸ್ಕೃತಿ, ಚೈನಾ ಸಂಸ್ಕೃತಿ ಸೇರಿ ವಿವಿಧ ಮಾನವ ಧರ್ಮಗಳಿಂದ ಪ್ರೇರಿತರಾಗಿ ಕ್ರೈಸ್ತ ಮತದ ವಿರುದ್ಧ ಸೆಟೆದೆದ್ದರು. 18ನೇ ಶತಮಾನದ ಅಂತ್ಯಕ್ಕೆ ಫ್ರೆಂಚ್ ಕ್ರಾಂತಿಯ ಜತೆಜತೆಗೆ ಚರ್ಚ್ ವಿರೋಧಿ ಹೋರಾಟವೂ ಉತ್ತುಂಗಕ್ಕೇರಿತು.

ಈ ಹಿನ್ನೆಲೆಯಲ್ಲಿ ಐರೋಪ್ಯ ರಾಷ್ಟ್ರಗಳಲ್ಲಿ ಸೆಕ್ಯುಲರಿಸಂ ಉದಯವಾಯಿತು. ರಾಜ್ಯವು ಚರ್ಚಿನ ಕಪಿಮುಷ್ಠಿಯಿಂದ ಬಿಡುಗಡೆಯಾಯಿತು. ಜನರ ಸಾಲ್ವೇಷನ್‌ಗೆ ಕೆಲಸ ಮಾಡುವುದು ರಾಜ್ಯದ ಕೆಲಸ ಅಲ್ಲ ಎಂದು ಹೇಳಲಾಯಿತು. ಯಾವುದೇ ಮತ ಧರ್ಮವನ್ನು ನಂಬುವುದು ಆಯಾ ಜನರ ಇಚ್ಛೆಗೆ ಅನುಗುಣವಾಗಿರತಕ್ಕದ್ದು. ಈ ಪ್ರಪಂಚದಲ್ಲಿ ಪ್ರಜೆಗಳ ಯೋಗಕ್ಷೇಮ ನೋಡಿಕೊಳ್ಳುತ್ತೇವೆಯೇ ಹೊರತು, ಪರಲೋಕಕ್ಕೂ ತಮಗೂ ಸಂಬಂಧವಿಲ್ಲ ಎಂದು ಘೋಷಿಸಿದವು. ಇದೇ ಸೆಕ್ಯುಲರಿಸಂ ಉದಯವಾಗಲು ಕಾರಣವಾಯಿತು.

ಇದನ್ನೂ ಓದಿ: ವಿಸ್ತಾರ ಅಂಕಣ: ಬಜರಂಗದಳ ಬ್ಯಾನ್ ಮಾಡುತ್ತೇವೆ ಎನ್ನುವುದು ತಪ್ಪು ಹೇಳಿಕೆಯಲ್ಲ, ಐತಿಹಾಸಿಕ ಪ್ರಮಾದ…

ಹೀಗೆ, ಐರೋಪ್ಯ ದೇಶಗಳಲ್ಲಿ ಸಕಾರಾತ್ಮಕವಾಗಿ ಉದಯವಾಗಿದ್ದ ಸೆಕ್ಯುಲರಿಸಂ ಅನ್ನು ಭಾರತಕ್ಕೆ ಇಲ್ಲಿನ ಬುದ್ಧಿಜೀವಿಗಳು ಆಮದು ಮಾಡಿದರು. ಸ್ವಾತಂತ್ರ್ಯಾನಂತರ ಯಾವ ರೀತಿಯ ದೇಶ ಇರಬೇಕು ಎನ್ನುವ ಚರ್ಚೆಯ ನಡುವೆ, ಸೆಕ್ಯುಲರ್ ದೇಶ ಎಂದುಬಿಟ್ಟರು. ಅಸಲಿಗೆ ಭಾರತದಲ್ಲಿ ಇಲ್ಲಿನ ಧರ್ಮವಾಗಲಿ, ಧರ್ಮಗುರುಗಳಾಗಲಿ, ಎಂದಿಗೂ ರಾಜ್ಯಾಡಳಿತದಲ್ಲಿ ನೇರವಾಗಿ ಮೂಗು ತೂರಿಸಿದವರೇ ಅಲ್ಲ. ಸ್ವತಃ ರಾಜನೇ ಧರ್ಮ ಗುರುವಿನ ಬಳಿ ಆಗಮಿಸುತ್ತಿದ್ದ. ಧರ್ಮಗುರುಗಳು ತಮ್ಮ ಪಾಡಿಗೆ ಆಶ್ರಮದಲ್ಲಿ ಪಾಠ ಮಾಡಿಕೊಂಡಿರುತ್ತಿದ್ದರು. ಇಸ್ಲಾಂ ಹಾಗೂ ಕ್ರಿಶ್ಚಿಯನ್ ಮತಗಳು ಭಾರತಕ್ಕೆ ಪ್ರವೇಶ ಮಾಡುವವರೆಗೆ ಭಾರತಲ್ಲಿ ಒಂದು ನಂಬಿಕೆಯವರು ಮತ್ತೊಂದರ ವಿರುದ್ಧ ಕತ್ತಿ ಮಸೆದ, ಕೊಲೆ ಮಾಡಿದ ಉದಾಹರಣೆಯೇ ಇರಲಿಲ್ಲ. ಇಂತಹ ಭಾರತಕ್ಕೆ ಅನಗತ್ಯವಾಗಿ ಸೆಕ್ಯುಲರಿಸಂ ಅನ್ನು ಹೇರಲಾಯಿತು. ಈ ಹೇರಿಕೆಗೆ ಬೆಂಬಲವಾಗಿ ನಿಂತದ್ದೇ ಕಾಂಗ್ರೆಸ್.

ಭಾರತದ ಕುರಿತು ಅಪಾರ ಅಧ್ಯಯನ ನಡೆಸಿರುವ ಸಂಶೋಧಕ ಕೋನ್ರಾಡ್ ಎಲ್ಸ್ಟ್ ಅವರು ತಮ್ಮ “Negationism in India” ಎಂಬ ಕೃತಿಯಲ್ಲಿ ಈ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇಸ್ಲಾಂ ಆಕ್ರಮಣಕಾರರು ಭಾರತವೂ ಸೇರಿ ವಿಶ್ವದ ಅನೇಕ ಕಡೆ ನಡೆಸಿದ ಕ್ರೌರ್ಯ ಎಲ್ಲರಿಗೂ ತಿಳಿದಿದೆ. ಆದರೆ ಸೆಕ್ಯುಲರಿಸಂ ಹೆಸರಿನಲ್ಲಿ ಭಾರತದಲ್ಲಿ ಈ ಎಲ್ಲ ಅಂಶಗಳನ್ನೂ ನಿರಾಕರಿಸಲಾಯಿತು. ಇಸ್ಲಾಂ ದಾಳಿ ನಡೆಯುತ್ತದೆ ಎನ್ನುವುದು ಕಪೋಲಕಲ್ಪಿತ ವಿಚಾರ, ಈ ರೀತಿ ಮಾತನಾಡುವವರು ಕೋಮುವಾದಿಗಳು ಎಂಬ ಹಣೆಪಟ್ಟಿ ಕಟ್ಟಲಾಯಿತು. ಮೂಲತಃ, ಎರಡನೇ ವಿಶ್ವಯುದ್ಧದ ಸಮಯದಲ್ಲಿ ಯಹೂದಿಗಳು ಹಾಗೂ ಜಿಪ್ಸಿಗಳ ವಿರುದ್ಧ ನಾಜಿಗಳು ನಡೆಸಿದ ಕ್ರೌರ್ಯವನ್ನು ಮುಚ್ಚಿಹಾಕಲು ಬಳಸಿದ ತಂತ್ರವೇ ನೆಗೋಷನಿಸಂ. ಇದನ್ನು ಭಾರತದಲ್ಲಿ ಬಳಸುತ್ತಲೇ ಬರಲಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಬೆಂಬಲವಾಗಿ ನಿಂತಿದೆ. ಇಸ್ಲಾಂ ಆಕ್ರಮಣ ನಡೆದಿದೆ ಎಂದು ಯಾರಾದರೂ ಹೇಳಿದ ಕೂಡಲೆ ಅದನ್ನು ಇಲ್ಲಿನ ಮುಸ್ಲಿಮರ ಕಡೆಗೆ ತಿರುಗಿಸುವ ಅಪಾಯಕಾರಿ ಪ್ರವೃತ್ತಿಯನ್ನು ಅನುಸರಿಸಲಾಯಿತು.

ಇಂದು ಇಡೀ ವಿಶ್ವದಲ್ಲಿ ಭಯೋತ್ಪಾದನೆ ನಡೆಯುತ್ತಿರುವುದು ಇಸ್ಲಾಂ ವಿಚಾರಗಳನ್ನು ಇಟ್ಟುಕೊಂಡ ಮೂಲಭೂತವಾದಿಗಳೇ ತಾನೆ? ಅವರು ಏನೋ ಖುಷಿಗಾಗಿ, ರಾಜ್ಯಕ್ಕಾಗಿ, ಹಣಕ್ಕಾಗಿ ಭಯೋತ್ಪಾದನೆ ಮಾಡುತ್ತಿಲ್ಲ. ತಮ್ಮ ಮತವನ್ನು ಎಲ್ಲೆಡೆ ಪಸರಿಸಬೇಕು ಎಂಬ ಕಾರಣ ಹೊಂದಿದ್ದಾರೆ ಎನ್ನುವುದು ಅತ್ಯಂತ ಸ್ಪಷ್ಟವಾಗಿದೆ ಅಲ್ಲವೇ? ಆದರೆ ಈ ವಿಷಯವನ್ನು ಭಾರತದ ಮುಸ್ಲಿಮರು ಹಾಗೂ ಕಾಂಗ್ರೆಸ್ಸಿಗರು ಎಂದಿಗೂ ಹೇಳುವುದೇ ಇಲ್ಲ. ಇಂತಹ ಕೃತ್ಯ ಎಸಗುವವರನ್ನು ಸಾಮಾಜಿಕವಾಗಿ ದೂರವಿಡುವ ಮೂಲಕ ಮುಸ್ಲಿಂ ಸಮುದಾಯದ ಏಳಿಗೆಗೆ ಕಾಂಗ್ರೆಸ್ ಪ್ರಯತ್ನಿಸಲೇ ಇಲ್ಲ.

ಇದನ್ನೂ ಓದಿ : ವಿಸ್ತಾರ ಅಂಕಣ: ಗ್ಯಾರಂಟಿ ಮರೆಮಾಚಲು ʼಗೋಹತ್ಯೆʼ ಗುರಾಣಿಯಾಗಬೇಕೆ?

ಇತ್ತೀಚೆಗೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್, ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾಪವನ್ನು ಇಟ್ಟಿತು. ಒಂದು ದೇಶಭಕ್ತ ಸಂಘಟನೆಯನ್ನು ನಿಷೇಧಿಸುವುದನ್ನು ಇಡೀ ದೇಶದ ಜನರು ವಿರೋಧಿಸುತ್ತಾರೆ. ಆದರೆ ಬಿಜೆಪಿಯವರು ಈ ವಿಚಾರವನ್ನು ಬಜರಂಗಬಲಿ ಹನುಮಂತನಿಗೇ ಲಿಂಕ್ ಮಾಡಲು ಹೊರಟರು. ಬಜರಂಗ ದಳ ನಿಷೇಧಿಸುವುದು ಸರಿಯಲ್ಲ ಎಂದು ಒಪ್ಪಿದರೂ, ಅದನ್ನು ನಿಷೇಧಿಸುವುದಕ್ಕೂ ಬಜರಂಗಬಲಿಯನ್ನು ಅವಮಾನಿಸುವುದಕ್ಕೂ ಏನು ಸಂಬಂಧ? ಹಾಗಾಗಿ ಕರ್ನಾಟಕದ ಜನರು ಈ ನಡೆಯನ್ನು ಒಪ್ಪಲಿಲ್ಲ. ಮುಸ್ಲಿಂ ಹಾಗೂ ಇಸ್ಲಾಮಿಕ್ ಆಕ್ರಮಣದ ಕುರಿತು ಕಾಂಗ್ರೆಸ್ ಇದೇ ನಡೆಯನ್ನು ಅನುಸರಿಸುತ್ತ ಬಂದಿದೆ. ಮುಸ್ಲಿಮರಲ್ಲಿನ ಮೂಲಭೂತವಾದಿಗಳು ಮಾಡಿದ್ದರ ಕುರಿತು ಜಾಣಕುರುಡು ಪ್ರದರ್ಶಿಸುತ್ತ, ಮುಸ್ಲಿಮರ ಮೇಲೆ ದಾಳಿಯಾಗುತ್ತಿದೆ ಎನ್ನುವುದನ್ನೇ ರಾಜಕೀಯ ದಾಳವನ್ನಾಗಿ ಮಾಡಿಕೊಂಡಿದೆ. ಇಸ್ಲಾಮಿಕ್ ಆಕ್ರಮಣದ ಕುರಿತು ಹೇಳಿದರೆ ಮುಸ್ಲಿಮರ ಕಡೆಗೆ ಏಕೆ ತಿರುಗಿಸಬೇಕು?
ಅದೂ ಸಹ ವಿದೇಶಕ್ಕೆ ತೆರಳಿ ಅಲ್ಲಿ ಯಾವುದೋ ವಿವಿ ತಮ್ಮನ್ನು ಆಹ್ವಾನಿಸಿದೆ ಎನ್ನುವಂತಹ ಸುಳ್ಳನ್ನು ಕಾಂಗ್ರೆಸ್ ಹಬ್ಬಿಸುತ್ತಿದೆ. ವಿಶ್ವವಿದ್ಯಾಲಯವೊಂದರ ಆಡಿಟೋರಿಯಂ ಅನ್ನು ಬಾಡಿಗೆ ಪಡೆದು ತಮ್ಮದೇ ಜನಗಳನ್ನು ಅಲ್ಲಿ ಕೂರಿಸಿಕೊಂಡು ಭಾರತವನ್ನು ಬೈಯುವ ಭಾಷಣ ಮಾಡಲು ಕಾಂಗ್ರೆಸ್ ಮುಂದಾಗಿದೆ. ಅಷ್ಟೇ ಅಲ್ಲದೆ ಜೂನ್ 4ರಂದು ನ್ಯೂಯಾರ್ಕ್‌ನಲ್ಲಿ ನಡೆಯುವ ಸಂವಾದ ಕಾರ್ಯಕ್ರಮವನ್ನು, ಪಾಕಿಸ್ತಾನಿ ಪರ ಮುಸ್ಲಿಂ ಸಂಘಟನೆಗಳು ಆಯೋಜನೆ ಮಾಡುತ್ತಿವೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಇದನ್ನು ಕಾಂಗ್ರೆಸ್ ನಿರಾಕರಿಸಿದೆಯಾದರೂ ಅನುಮಾನಪಡಲು ಸಾಕಷ್ಟು ಪುರಾವೆಗಳಿವೆ.

ಕಾಂಗ್ರೆಸ್ ಇತಿಹಾಸದುದ್ದಕ್ಕೂ ಇಂತಹದ್ದೇ ವಿಭಜನಕಾರಿ ನಡೆಗಳಿಂದ ದೇಶದ ಜನರಿಂದ ತಿರಸ್ಕರಿಸಲ್ಪಟ್ಟಿದೆ. ಭಾರತದಲ್ಲಿ ಮುಸ್ಲಿಂ ಸಮುದಾಯ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವುದನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ರಚಿಸಿದ್ದ ಸಾಚಾರ್ ಸಮಿತಿ ತಿಳಿಸಿದೆ. ಆ ಸಮುದಾಯವನ್ನೂ ಸಮಾಜದ ಮುಖ್ಯವಾಹಿನಿಗೆ ತರಲು ಬೇಕಾದ ಕ್ರಮದ ಕುರಿತು ರಾಹುಲ್ ಗಾಂಧಿ ಆಲೋಚಿಸಲಿ. ಅದನ್ನು ಬಿಟ್ಟು ದೇಶವಿರೋಧಿಯಾಗಿರುವ ಗುಂಪುಗಳ ಮೂಲಕ ಕಾರ್ಯಕ್ರಮ ಆಯೋಜಿಸುವುದು, ವಿದೇಶಕ್ಕೆ ತೆರಳಿ ಭಾರತ ವಿರೋಧಿ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದು ಆಗ್ರಹಿಸೋಣ ಅಲ್ಲವೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ಅಂಕಣ

ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

ರಾಜಮಾರ್ಗ ಅಂಕಣ (Rajamarga column): ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

VISTARANEWS.COM


on

arijit singh rajamarga column 2
Koo

ದ ಮ್ಯೂಸಿಕಲ್ ಲೆಜೆಂಡ್, ಜೇನು ದನಿಯ ಸರದಾರ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ (Rajamaraga Column): ಏಪ್ರಿಲ್ 25 ಬಂತು ಅಂದರೆ ಅದು ದೇಶದ ಯುವ ಸಂಗೀತ ಪ್ರೇಮಿಗಳಿಗೆ ಬಹಳ ದೊಡ್ಡ ಹಬ್ಬ. ಏಕೆಂದರೆ ಅದು ಅವರ ಹೃದಯದ ಬಡಿತವೇ ಆಗಿರುವ ಅರ್ಜಿತ್ ಸಿಂಗ್‌ (Arijit singh)) ಹುಟ್ಟಿದ ಹಬ್ಬ (Birthday)!

ಆತನ ವ್ಯಕ್ತಿತ್ವ, ಆತನ ಹಾಡುಗಳು, ಆತನ ಸ್ವರ ವೈವಿಧ್ಯ ಎಲ್ಲವೂ ಆತನ ಕೋಟಿ ಕೋಟಿ ಅಭಿಮಾನಿಗಳಿಗೆ ಹುಚ್ಚು ಹಿಡಿಸಿ ಬಿಟ್ಟಿವೆ. ಅದರಿಂದಾಗಿ ಇಂದು ಆತನಿಗೆ ದೇಶದಲ್ಲಿ ಸ್ಪರ್ಧಿಗಳೇ ಇಲ್ಲ ಎನ್ನುವುದನ್ನು ಅವನ ಸ್ಪರ್ಧಿಗಳೇ ಒಪ್ಪಿಕೊಂಡು ಬಿಟ್ಟಿದ್ದಾರೆ! ನಾನು ಇಂದು ಯಾವ ಕಾಲೇಜಿಗೆ ಹೋದರೂ ಅರ್ಜಿತ್ ಧ್ವನಿಯನ್ನು ಅನುಕರಣೆ ಮಾಡಿ ಹಾಡಲು ತೀವ್ರ ಪ್ರಯತ್ನ ಮಾಡುವ ಯುವಕ, ಯುವತಿಯರು ಇದ್ದಾರೆ. 2015ರಿಂದ ಆತನ ಜನಪ್ರಿಯತೆಯ ಗ್ರಾಫ್ ಕೆಳಗೆ ಬಂದದ್ದೇ ಇಲ್ಲ. ಅರ್ಜಿತ್ ಸಿಂಗ್‌ (Arijit Singh) ಇಂದು ಜಗತ್ತಿನ ಅತ್ಯಂತ ಜನಪ್ರಿಯ ಗಾಯಕರಲ್ಲಿ ಮೂರನೇ ಸ್ಥಾನವನ್ನು, ಏಷಿಯಾದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ ಅಂದರೆ ಆತನ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಅಭಿಮಾನ ಮೂಡುತ್ತದೆ.

ಆತನದ್ದು ಬಂಗಾಳದ ಸಂಗೀತದ ಹಿನ್ನೆಲೆಯ ಕುಟುಂಬ

ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಒಂದು ಸಣ್ಣ ಹಳ್ಳಿಯಿಂದ ಬಂದವರು ಅರ್ಜಿತ್. ಅವನ ಅಜ್ಜಿ, ಅವನ ಅತ್ತೆ ಎಲ್ಲರೂ ಚೆನ್ನಾಗಿ ಹಾಡುತ್ತಿದ್ದರು. ಸಹಜವಾಗಿ ಹುಡುಗನಲ್ಲಿ ಸಂಗೀತದ ಆಸಕ್ತಿ ಮೂಡಿತ್ತು. ಒಂಬತ್ತನೇ ವರ್ಷಕ್ಕೆ ರಾಜೇಂದ್ರ ಪ್ರಸಾದ್ ಹಜಾರಿ ಎಂಬ ಶಾಸ್ತ್ರೀಯ ಸಂಗೀತದ ಗುರುವಿನಿಂದ ಸಂಗೀತದ ಕಲಿಕೆ ಆರಂಭವಾಯಿತು. ಬಂಗಾಳದಲ್ಲಿ ರಬೀಂದ್ರ ಸಂಗೀತದ ಪ್ರಭಾವದಿಂದ ಯಾರೂ ಹೊರಬರಲು ಸಾಧ್ಯವಿಲ್ಲ. ಅದರ ಜೊತೆಗೆ ವಿಶ್ವದ ಶ್ರೇಷ್ಠ ಸಂಗೀತಗಾರರಾದ ಮೊಜಾರ್ಟ್ ಮತ್ತು ಬೀತೊವೆನ್ ಅವರ ಹಾಡುಗಳನ್ನು ಕೇಳುತ್ತಾ ಅರ್ಜಿತ್ ಬೆಳೆದರು. ಅದರ ಜೊತೆಗೆ ಕಿಶೋರ್ ಕುಮಾರ್, ಮನ್ನಾಡೆ, ಹೇಮಂತ್ ಕುಮಾರ್ ಅವರ ಹಾಡುಗಳನ್ನು ಕೇಳುತ್ತಾ ಆರ್ಜಿತ್ ತನ್ನದೇ ಸಿಗ್ನೇಚರ್ ಧ್ವನಿಯನ್ನು ಸಂಪಾದನೆ ಮಾಡಿಕೊಂಡರು. ಸೂಫಿ ಹಾಡುಗಳು, ಗಜಲ್, ಪಾಪ್ ಹಾಡುಗಳು, ಶಾಸ್ತ್ರೀಯ ಹಾಡುಗಳು, ಭಜನ್, ಜಾನಪದ ಹಾಡುಗಳು….ಹೀಗೆ ಎಲ್ಲ ವಿಧವಾದ ಹಾಡುಗಳನ್ನು ಅದ್ಭುತವಾಗಿ ಹಾಡಲು ಕಲಿತರು.

ರಿಯಾಲಿಟಿ ಶೋದಲ್ಲಿ ಸೋಲು!

ಅರ್ಜಿತ್ ತನ್ನ 18ನೆಯ ವಯಸ್ಸಿನಲ್ಲಿ FAME GURUKUL ಎಂಬ ಟಿವಿ ರಿಯಾಲಿಟಿ ಶೋದಲ್ಲಿ ಭಾಗವಹಿಸಿದ್ದರು. ಚೆಂದವಾಗಿ ಹಾಡಿದರು ಕೂಡ. ಆದರೆ ಆಡಿಯೆನ್ಸ್ ಪೋಲ್ ಇದ್ದ ಕಾರಣ ಅದರಲ್ಲಿ ಸೋತರು. ಆದರೆ ಆತನ ಧ್ವನಿಯ ಮಾಧುರ್ಯವನ್ನು ಗುರುತಿಸಿದ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರು ತನ್ನ ಮುಂದಿನ ಸಿನೆಮಾ ಸಾವರಿಯಾದಲ್ಲಿ ಒಂದು ಹಾಡನ್ನು ಆತನಿಂದ ಹಾಡಿಸಿದರು.

ಆದರೆ ಆ ಹಾಡು ಸಿನೆಮಾ ಎಡಿಟ್ ಆಗುವಾಗ ಬಿಟ್ಟು ಹೋಯಿತು! ಮುಂದೆ TIPS ಸಂಗೀತ ಕಂಪೆನಿ ಆತನೊಂದಿಗೆ ಒಪ್ಪಂದ ಮಾಡಿಕೊಂಡು ಹಲವು ಆಲ್ಬಂ ಸಾಂಗ್ಸ್ ರೆಕಾರ್ಡ್ ಮಾಡಿಕೊಂಡಿತು. ಆದರೆ ಅದ್ಯಾವುದೂ ಬಿಡುಗಡೆ ಆಗಲಿಲ್ಲ! ಆತನಲ್ಲಿ ಅಪ್ಪಟ ಪ್ರತಿಭೆ ಇದ್ದರೂ ದುರದೃಷ್ಟವು ಆತನಿಗಿಂತ ಮುಂದೆ ಇತ್ತು! ಆದರೆ ಈ ಸೋಲುಗಳ ನಡುವೆ ಅರ್ಜಿತ್ ಸಂಗೀತವನ್ನು ಬಿಟ್ಟು ಹೋಗಿಲ್ಲ ಅನ್ನೋದು ಅದ್ಭುತ!

ಮುಂದೆ ಇನ್ನೊಂದು ಟಿವಿ ರಿಯಾಲಿಟಿ ಶೋ (10ಕೆ 10ಲೆ ಗಯೇ ದಿಲ್)ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗೆದ್ದಾಗ ಆತನ ಬದುಕಿನಲ್ಲಿ ದೊಡ್ಡ ತಿರುವು ಉಂಟಾಯಿತು. ಆಗ ದೊರೆತ ಹತ್ತು ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತಂದು ಮುಂಬೈಯಲ್ಲಿ ಒಂದು ಸ್ಟುಡಿಯೋ ಸ್ಥಾಪನೆ ಮಾಡಿದರು. ಒಂದು ಪುಟ್ಟ ಬಾಡಿಗೆ ಮನೆಯಲ್ಲಿ ವಾಸ, ಒಂದು ಹೊತ್ತಿನ ಊಟವೂ ಕಷ್ಟ ಆಗಿದ್ದ ದಿನಗಳು ಅವು! ಅರ್ಜಿತ್ ಒಂದು ದೊಡ್ಡ ಬ್ರೇಕ್ ಥ್ರೂ ಕಾಯುತ್ತ ಕೂತಿದ್ದರು. ಈ ಅವಧಿಯಲ್ಲಿ ನೂರಾರು ಜಿಂಗಲ್, ಜಾಹೀರಾತುಗಳ ಸಂಗೀತವನ್ನು ಕಂಪೋಸ್ ಮಾಡಿ ಸ್ವತಃ ಹಾಡಿದರು.

arijit singh rajamarga column 2

2011ರಲ್ಲಿ ಅರ್ಜಿತ್ ಭಾಗ್ಯದ ಬಾಗಿಲು ತೆರೆಯಿತು!

ಆ ವರ್ಷ ಬಿಡುಗಡೆ ಆದ ಮರ್ಡರ್ 2 ಸಿನೆಮಾದ ‘ಫೀರ್ ಮೊಹಬ್ಬತೆ ‘ ಹಾಡು ಸೂಪರ್ ಹಿಟ್ ಆಯಿತು. ಬಾಲಿವುಡ್ ಆತನ ಟಿಪಿಕಲ್ ಧ್ವನಿಗೆ ಮಾರುಹೋಯಿತು. ಮುಂದೆ ರಬಟಾ ( ಏಜೆಂಟ್ ವಿನೋದ್), ಉಸ್ಕಾ ಹೀ ಬನಾನಾ (ಎವಿಲ್ ರಿರ್ಟರ್ನ್) ಲಾಲ್ ಇಷ್ಕ್ ಮತ್ತು ಗೋಲಿಯೋನ್ ಕಿ ರಾಸ ಲೀಲಾ (ರಾಮ್ ಲೀಲಾ) ಮೊದಲಾದ ಹಾಡುಗಳು ಭಾರೀ ಹಿಟ್ ಆದವು. ಮನವಾ ಲಾಗೇ ಮತ್ತು ಮಸ್ತ್ ಮಗನ್ ಹಾಡುಗಳು ಇಡೀ ಬಾಲಿವುಡ್ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದವು. ಪದ್ಮಾವತ್ ಸಿನೆಮಾದ ‘ಬಿನ್ ತೆ ದಿಲ್ ‘ ಹಾಡಿಗೆ ರಾಷ್ಟ್ರಪ್ರಶಸ್ತಿಯು ಒಲಿದು ಬಂತು. 7 ಫಿಲಂಫೇರ್ ಪ್ರಶಸ್ತಿಗಳು ಬಂದವು. ಹಿಂದೀ, ತೆಲುಗು, ತಮಿಳು, ಬಂಗಾಳಿ ಸಿನೆಮಾಗಳಲ್ಲಿ ಅರ್ಜಿತ್ ಅವರಿಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಯಿತು. ಭಾರೀ ದೊಡ್ಡ ಫ್ಯಾನ್ ಬೇಸ್ ಡೆವಲಪ್ ಆಯಿತು. ಇಂದು ಅರ್ಜಿತ್ ತನ್ನ ಸಂಗೀತದ ಪ್ರತಿಭೆಯಿಂದ ಭಾರೀ ಎತ್ತರಕ್ಕೆ ಬೆಳೆದಿದ್ದಾರೆ.

ಜವಾನ್, ಡುಮ್ಕಿ, ಅನಿಮಲ್ ಮೊದಲಾದ ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಲ್ಲಿ ಆರ್ಜಿತ್ ಹಾಡಿದ ಹಾಡುಗಳು ಇವೆ. ಆತ ಹಾಡಿದ ಎಲ್ಲ ಹಾಡುಗಳೂ ಸೂಪರ್ ಹಿಟ್ ಆಗಿವೆ.

ಸ್ಟುಡಿಯೋ ಹಾಡುಗಳು ಮತ್ತು ಸ್ಟೇಜ್ ಕಾರ್ಯಕ್ರಮಗಳು

ಹಿನ್ನೆಲೆ ಹಾಡುಗಳು ಮತ್ತು ಆಲ್ಬಂ ಹಾಡುಗಳನ್ನು ಸ್ಟುಡಿಯೋ ಒಳಗೆ ಹಾಡುವ ಟ್ಯಾಲೆಂಟ್ ಒಂದೆಡೆ. ಸ್ಟೇಜ್ ಮೇಲೆ ಲಕ್ಷಾಂತರ ಮಂದಿ ಹುಚ್ಚು ಅಭಿಮಾನಿಗಳ ಮುಂದೆ ಗಿಟಾರ್ ಹಿಡಿದುಕೊಂಡು ಹಾಡುವ ಟ್ಯಾಲೆಂಟ್ ಇನ್ನೊಂದೆಡೆ. ಆರ್ಜಿತ್ ಎರಡೂ ಕಡೆಯಲ್ಲಿ ಗೆದ್ದಿದ್ದಾರೆ. ದೇಶ ವಿದೇಶಗಳ ನೂರಾರು ವೇದಿಕೆಗಳಲ್ಲಿ ಅವರ ಲೈವ್ ಸ್ಟೇಜ್ ಶೋಗಳಿಗೆ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಾರೆ. ಆರ್ಜಿತ್ ಮತ್ತು ಶ್ರೇಯಾ ಘೋಷಾಲ್ ಸಂಗೀತದ ಶೋಗಳಿಗೆ ಇಂದು ಭಾರೀ ಡಿಮಾಂಡ್ ಇದೆ!

ಲೆಟ್ ದೇರ್ ಬಿ ಲೈಟ್ ಎಂಬ NGO ಸ್ಥಾಪನೆ ಮಾಡಿ ಆರ್ಜಿತ್ ತನ್ನ ಸಂಪಾದನೆಯ ಬಹು ದೊಡ್ಡ ಭಾಗವನ್ನು ಚಾರಿಟಿ ಉದ್ದೇಶಕ್ಕೆ ಖರ್ಚು ಮಾಡುತ್ತಿರುವುದು ನಿಜಕ್ಕೂ ಅಭಿನಂದನೀಯ. ಆರ್ಜಿತ್ ಇಂದು ಭಾರತದ ನಂಬರ್ ಒನ್ ಹಿನ್ನೆಲೆ ಗಾಯಕ ಎಂದು ಸೋನು ನಿಗಮ್ ಸಾಕಷ್ಟು ವೇದಿಕೆಯಲ್ಲಿ ಹೇಳಿದ್ದಾರೆ. ಅವರಿಬ್ಬರೂ ಒಳ್ಳೆಯ ಗೆಳೆಯರು ಎಂದು ಕೂಡ ಸಾಬೀತಾಗಿದೆ.

ಅಂತಹ ಅನನ್ಯ ಪ್ರತಿಭೆ, ಜೇನು ದನಿಯ ಸರದಾರ ಅರ್ಜಿತ್ ಸಿಂಗ್ ಅವರಿಗೆ ಇಂದು ನೆನಪಲ್ಲಿ ಹುಟ್ಟುಹಬ್ಬದ ಶುಭಾಶಯ ಹೇಳಿ ಆಯ್ತಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

Continue Reading

ಅಂಕಣ

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

ದಶಮುಖ ಅಂಕಣ: ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ?

VISTARANEWS.COM


on

dashamukha column madness
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

dashamukha column logo

ದಶಮುಖ ಅಂಕಣ: ʻಹುಚ್ಚುʼ (madness) ಎಂಬ ಶಬ್ದ ಕಿವಿಗೆ ಬೀಳುತ್ತಿದ್ದಂತೆ ನೆನಪಾಗುವ ಚಿತ್ರಗಳ ಬಗ್ಗೆ ಹೆಚ್ಚು ಹೇಳುವುದು ಬೇಡವಲ್ಲ. ಯಾವುದೇ ದೇಶ, ಭಾಷೆ, ಸಂಸ್ಕೃತಿಗಳಲ್ಲಿ ನೋಡಿದರೂ ʻಹುಚ್ಚಿಗೆʼ ಹೆಚ್ಚಿಗೆ ಅರ್ಥಗಳಿಲ್ಲ… ಅದೊಂದೇ ಅರ್ಥ! ಹಾಗಾಗಿಯೇ ʻಅದೊಂಥರಾ ಹುಚ್ಚು, ಅವನಿಗೊಂದು ಹುಚ್ಚುʼ ಎಂಬಿತ್ಯಾದಿ ಮಾತುಗಳ ಬೆನ್ನಿಗೇ ʻಅಲ್ಲೇನೋ ಒಂದು ಅತಿರೇಕವಿದೆʼ ಎಂಬ ಭಾವ ಬಂದುಬಿಡುತ್ತದೆ. ಅದಕ್ಕಾಗಿಯೇ ʻಹುಚ್ಚು ಸಾಹಸ, ಹುಚ್ಚು ಪ್ರೀತಿʼ ಮುಂತಾದ ಪ್ರಯೋಗಗಳನ್ನು ಮಾಡುತ್ತಾ, ಬೈಯ್ಯುವುದಕ್ಕೆ, ವ್ಯಂಗ್ಯಕ್ಕೆ, ಕುಹಕಕ್ಕೆ, ಟೀಕೆಗೆ, ತಮಾಷೆಗೆ… ಅಥವಾ ಇಂಥದ್ದೇ ಋಣಾತ್ಮಕ ಎನ್ನಬಹುದಾದ ಛಾಯೆಗಳಲ್ಲಿ ಈ ಶಬ್ದವನ್ನು ಬಳಸುತ್ತೇವೆ. ನಿಜಕ್ಕೂ ಈ ಶಬ್ದವನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಬದುಕಿನಲ್ಲಿ ಪ್ರೀತಿ, ಸೌಖ್ಯ, ಖುಷಿಯನ್ನು ಅರಸುವವರಿಗೂ ಇದನ್ನು ಬಳಸಬಹುದೇ? ಸಾಹಿತ್ಯ-ಸಿನೆಮಾಗಳಲ್ಲಿ ಕಾಣುವ ಪ್ರೀತಿ, ಪ್ರೇಮಗಳಿಗೆ ಹುಚ್ಚನ್ನು ಪರ್ಯಾಯವಾಗಿ ಬಳಸುವುದು ಹೊಸದೇನಲ್ಲ. ಆದರೆ ಇಲ್ಲೀಗ ಅಂಥ ಹರೆಯದ ಪ್ರೀತಿಯ ಬಗ್ಗೆಯಲ್ಲ ಹೇಳುತ್ತಿರುವುದು. ಇತರರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವವರಿಗೂ ಈ ಶಬ್ದ ಸಲ್ಲುತ್ತದೆಯೇ?

ಇತ್ತೀಚೆಗೆ ಭೇಟಿ ಮಾಡಿದ ಒಂದಿಬ್ಬರು ವ್ಯಕ್ತಿಗಳು ಇಂಥದ್ದೊಂದು ಮಂಥನವನ್ನು ಹುಟ್ಟು ಹಾಕಿದ್ದು ಹೌದು. ಎಲ್ಲರಿಗಿಂತ ಭಿನ್ನವಾದ ಬದುಕನ್ನು ಆಯ್ದುಕೊಳ್ಳುವವರು, ತಮ್ಮ ಜೀವನದ ರೀತಿ-ನೀತಿಗಳನ್ನು ಅಥವಾ ಧ್ಯೇಯ-ಆದರ್ಶಗಳನ್ನು ʻಹುಚ್ಚುʼ ಎನ್ನುವಷ್ಟು ಪ್ರೀತಿಸದಿದ್ದರೆ, ಖುಷಿಯಿಂದ ಬದುಕುವುದು ಸಾಧ್ಯವೇ? ಎಷ್ಟೇ ಸುಭಿಕ್ಷವಾದ ಬದುಕನ್ನೂ ಹಳಿಯುತ್ತಲೇ ಬದುಕುವ ಇಂದಿನ ದಿನಗಳಲ್ಲಿ, ಇರುವ ಬದುಕಲ್ಲಿ ಸುಭಿಕ್ಷವನ್ನು ಸೃಷ್ಟಿಸುವ ಅವರನ್ನು ಹುಚ್ಚರೆಂದರೆ ಅತಿರೇಕವಾದೀತೇ? ಬದುಕನ್ನು ಕೊರಗಿನಲ್ಲೇ ಕಳೆಯುವುದು ಹುಚ್ಚೋ ಅಥವಾ ಇತರರ ಕೊರಗನ್ನು ಕಳೆಯುವುದು ಹುಚ್ಚೋ?

ಹೀಗೆನ್ನುವಾಗ ಅನಂತ್‌ ಸರ್‌ ನೆನಪಾಗುತ್ತಾರೆ. ಬದುಕಲ್ಲಿ ವಿದ್ಯೆ ದೊರೆಯದ ಮಕ್ಕಳನ್ನು ಶಿಕ್ಷಣದ ಹಾದಿಗೆ ಹಚ್ಚಿ, ನೆಲೆ ಕಾಣಿಸುವ ಅವರ ಸಾಹಸವನ್ನು ವರ್ಣಿಸುವುದಕ್ಕೆ ಬೇರೆ ಪದಗಳಿಗೆ ಸಾಧ್ಯವಿಲ್ಲ. ಮನೆ ಇದ್ದೂ ಇಲ್ಲದಂತಾದವರು, ಮನೆಯೇ ಇಲ್ಲದವರು, ಪಾಲಕರು ಇಲ್ಲದವರು, ಪಾಲಕರು ಯಾಕಾದರೂ ಇದ್ದಾರೋ ಎನ್ನುವಂಥ ಹಲವು ನಮೂನೆಯ ವಾತಾವರಣದಿಂದ ಬಂದ ಮಕ್ಕಳಿಗೆ ಊಟ, ವಸತಿಯ ಜೊತೆಗೆ ವಿದ್ಯೆ ನೀಡುವುದನ್ನೇ ಧ್ಯೇಯವಾಗಿಸಿಕೊಂಡವರು. ಹತ್ತು-ಹನ್ನೆರಡು ವರ್ಷಗಳವರೆಗೆ ಶಾಲೆಯ ಮುಖವನ್ನೂ ಕಾಣದವರು, ಎಂದೊ ಶಾಲೆಗೆ ಹೋಗಿ ನಡುವಲ್ಲೇ ಕಳೆದುಹೋದವರು- ಇಂಥ ನೂರಾರು ಮುಖಗಳಲ್ಲಿ ನಗು ಅರಳಿಸುವುದಕ್ಕೆ ಇರಬೇಕಾದ ಅದಮ್ಯ ಪ್ರೀತಿಯೂ ಒಂದು ಬಗೆಯ ಹುಚ್ಚೇ ತಾನೇ? ಹಾಗಿಲ್ಲದಿದ್ದರೆ, ಇಂಥ ಸಾಹಸಿಗಳು ಲೋಕದಲ್ಲಿ ನಮಗೆ ವಿರಳವಾಗಿ ಕಾಣುವುದೇಕೆ?

ಆರೇಳು ವರ್ಷದವರನ್ನು ಒಂದನೇ ಕ್ಲಾಸಿಗೆ ಕೂರಿಸುವಲ್ಲಿ ಅಷ್ಟೇನು ಸಮಸ್ಯೆಯಾಗಲಿಕ್ಕಿಲ್ಲ. ವರ್ಷದ ಆಧಾರದ ಮೇಲೆಯೇ ತಾನೆ ನಮ್ಮ ಶಿಕ್ಷಣ ವ್ಯವಸ್ಥೆ ರೂಪುಗೊಂಡಿರುವುದು. ಆದರೆ ಹದಿಹರೆಯಕ್ಕೆ ಕಾಲಿಟ್ಟವರು ಇನ್ನೂ ಶಾಲೆಯ ಮೆಟ್ಟಿಲನ್ನೇ ಹತ್ತದಿರುವಾಗ ಅವರನ್ನೂ ಒಂದನೇ ಕ್ಲಾಸಿಗೆ ಕೂರಿಸುವುದು ಹೇಗೆ? ʻಹಾಗಾಗಿಯೇ ದೈಹಿಕ ವಯಸ್ಸಿನ ಆಧಾರದ ಮೇಲಲ್ಲದೆ, ಮಕ್ಕಳ ಬೌದ್ಧಿಕ ವಯಸ್ಸಿಗೆ ಅನುಗುಣವಾಗಿ ಕಲಿಯುವ ಗುಂಪುಗಳನ್ನಾಗಿ ವಿಂಗಡಿಸಿಕೊಳ್ಳುತ್ತೇವೆ. ಹಾಗೆಯೇ ಅವರ ಕಲಿಕೆ ಮುಂದುವರಿಯುತ್ತದೆʼ ಎನ್ನುವುದು ಅನಂತ್‌ ಸರ್‌ ಹೇಳುವ ಮಾತು. ದೂರದ ಅಸ್ಸಾಂ, ಬಿಹಾರಗಳಿಂದ ಬಂದ ಮಕ್ಕಳಿಗೆ ಶಾಲೆಯ ಕಲ್ಪನೆಯೂ ಇಲ್ಲದಿರುವಾದ, ಇವರ ಭಾಷೆ ಅವರಿಗೆ-ಅವರ ಭಾಷೆ ಇವರಿಗೆ ತಿಳಿಯದಿರುವಾಗ, ವಿದ್ಯೆಯ ಶ್ರೀಕಾರ ಆಗುವುದು ಹೇಗೆ? ʻಇದೊಂಥರಾ ಹುಚ್ಚು. ಇದೂ ಆಗತ್ತೆʼ ಎನ್ನುವಾಗಿನ ಇವರ ಮುಖದ ನಗುವನ್ನು ಏನೆಂದು ಅರ್ಥ ಮಾಡಿಕೊಳ್ಳುವುದು?

ಈ ಚೌಕಟ್ಟಿನಾಚೆಯ ಮನೆಯಲ್ಲಿ ಕಲಿತು ಹೊರಬಿದ್ದು, ದುಡಿದು ಸಂಪಾದಿಸಿ ಬದುಕುತ್ತಿರುವ ತಮ್ಮ ಮಕ್ಕಳ ಬಗ್ಗೆ ಹೇಳುವಾಗ ಅವರ ಮುಖದ ನಗುವಿಗಿರುವ ಅರ್ಥದ ಅರಿವಾಗುತ್ತದೆ ನಮಗೆ. ಹುಚ್ಚಿಗೂ ಎಷ್ಟೊಂದು ಸುಂದರ, ಸಲ್ಲಕ್ಷಣಗಳಿವೆ ಎಂಬುದನ್ನು ತಿಳಿಯುವುದಕ್ಕೆ ಅದೊಂದು ನಗು ಸಾಕು. ಕೊರಗಿ ಕಳೆಯುವುದಕ್ಕಿಂತ, ಹೀಗೆ ಕೊರಗು ಕಳೆಯುವ ಹುಚ್ಚು ಒಳ್ಳೆಯದಲ್ಲವೇ? ನಮಗಿರುವ ಹುಚ್ಚು ಯಾವುದು ಎಂದು ಎಂದಾದರೂ ಯೋಚಿಸಿದ್ದೇವೆಯೇ?

ಈ ಎಲ್ಲ ಮಾತಿನ ನಡುವೆ ಪ್ರದೀಪ ಎನ್ನುವ ಆ ವ್ಯಕ್ತಿ ನೆನಪಾಗುತ್ತಾನೆ. ಕಪ್ಪು ಬಣ್ಣದ ಸಾಧಾರಣ ಮೈಕಟ್ಟಿನ ಆತ ಪುಟ್ಟ ದ್ವೀಪ ರಾಷ್ಟ್ರವೊಂದರ ನಿವಾಸಿ. ಅರಳಿದಂತಿರುವ ಕನ್ನಡಿಗಣ್ಣು, ಅವನದ್ದೇ ಆದ ವಿಶಿಷ್ಟ ಲಯದ ಇಂಗ್ಲಿಷ್‌ ಭಾಷೆಯ ಆತ ನಮಗೆ ಪರಿಚಯವಾಗಿದ್ದು ಪ್ರವಾಸವೊಂದರ ಭಾಗವಾಗಿ. ಅಲೆಯುವ ಹುಚ್ಚಿರುವ ಜನ ಲೋಕದಲ್ಲಿ ಎಷ್ಟೋ ಮಂದಿ ಇದ್ದಾರೆ. ಆದರೆ ಜೊತೆಗೆ ತಿರುಗಾಡುವವರ ಸೌಖ್ಯವೇ ತನಗೆ ಪ್ರೀತಿ ಎನ್ನುವವರೂ ಇದ್ದಾರೆಂಬುದು ತಿಳಿದಿದ್ದು ಆಗಲೇ. ಈತ ವೃತ್ತಿಯಲ್ಲಿ ಪ್ರವಾಸಿ ಗೈಡ್‌. ನಮ್ಮ ಯಾವುದೇ ಪ್ರವಾಸಿ ತಾಣಗಳಿಗೆ ಹೋದರೆ ಅಲ್ಲಿ ʻಗೈಡ್‌ ಬೇಕೆ?ʼ ಎಂದು ಮುತ್ತಿಗೆ ಹಾಕುವ ಗುಂಪಿನಲ್ಲಿ ಆತನೂ ಇರಬಹುದಾಗಿದ್ದವ. ಆದರೆ ತಮಗೆ ತಿಳಿದಷ್ಟನ್ನು ತೋಚಿದಂತೆ ಒದರಿ, ಬಂದವರಿಂದ ದುಡ್ಡು ಕಿತ್ತು ಕಳಿಸುವ ಗೈಡ್‌ಗಳ ಸಾಲಿನಿಂದ ಗಾವುದಗಟ್ಟಲೆ ದೂರದಲ್ಲಿ ಇರುವವ ಈತ.

ʻತಿರುಗಾಡಿದಷ್ಟೇ, ತಿರುಗಾಡಿಸುವುದೂ ನನಗಿಷ್ಟʼ ಎನ್ನುವ ಈತ, ತನ್ನ ಕಾರು ಓಡುವ ಪ್ರತಿಯೊಂದು ರಸ್ತೆಯ ಪರಿಚಯವನ್ನೂ ಮಾಡಿಕೊಡಬಲ್ಲ. ಯಾವ ಊರಿನ ಮಳೆ-ಬೆಳೆ ಹೇಗೆ ಎಂಬುದರಿಂದ ಹಿಡಿದು ಅಲ್ಲಿನ ಡೆಮಗ್ರಾಫಿಕ್‌ ವಿಶ್ಲೇಷಣೆಯನ್ನೂ ನೀಡಬಲ್ಲ. ʻಈ ಭಾಗದಲ್ಲಿ ತುಂಬಾ ಎಮ್ಮೆ ಸಾಕುತ್ತಾರೆ. ಮಣ್ಣಿನ ಗಡಿಗೆಯಲ್ಲಿ ಹಾಲು ಹೆಪ್ಪಾಕಿ, ಮೊಸರು ಮಾರುತ್ತಾರೆ. ಅದನ್ನೊಮ್ಮೆ ತಿನ್ನದಿದ್ದರೆ ಈ ರಸ್ತೆಯಲ್ಲಿ ಪ್ರಯಾಣ ಮಾಡಿದ್ದೇ ವ್ಯರ್ಥʼ ಎಂದು ಸರಕ್ಕನೆ ಗಾಡಿ ನಿಲ್ಲಿಸಿ, ಎರಡು ಪುಟ್ಟ ಗಡಿಗೆಗಳನ್ನು ಹಿಡಿದು ತರುತ್ತಾನೆ. ʻಇಷ್ಟು ದೂರ ಬಂದವರು ಈ ಸಿಹಿ ತಿನ್ನದಿದ್ದರೆ, ನಿಮ್ಮ ತಿರುಗಾಟವೇ ಅಪೂರ್ಣʼ ಎನ್ನುತ್ತಾ ಯಾವುದೋ ಸಿಹಿ ಎದುರಿಗಿಡುತ್ತಾನೆ. ʻಇಲ್ಲಿ ಭರಪೂರ ತರಕಾರಿ ಬೆಳೆಯುತ್ತಾರೆ. ಇದರಲ್ಲೊಂದು ಸಲಾಡ್‌ ಮಾಡುತ್ತೇನೆ ನೋಡಿ, ತಿನ್ನುವುದಕ್ಕೆ ಪುಣ್ಯ ಬೇಕುʼ ಎಂದು ಉಪಚಾರ ಮಾಡುತ್ತಾನೆ. ಇಂಥ ಯಾವುದನ್ನೂ ಮಾಡಬೇಕಾದ ಅಗತ್ಯ ಆತನಿಗಿಲ್ಲ. ನಮ್ಮ ಜಾಗಕ್ಕೆ ಕರೆದೊಯ್ದರೆ ಅವನ ಕೆಲಸ ಮುಗಿಯಿತು; ಅವನ ದುಡ್ಡು ಅವನ ಕೈ ಸೇರುತ್ತದೆ. ʻತಿರುಗಾಡುವುದು, ತಿರುಗಾಡಿಸುವುದು ನಂಗೊಂಥರಾ ಹುಚ್ಚು. ಹೊಸ ಜನರೊಂದಿಗೆ ನಂಟು ಬೆಸೆಯುವುದು, ಅವರನ್ನು ಖುಷಿಯಾಗಿಡುವುದು ನಂಗಿಷ್ಟʼ ಎನ್ನುತ್ತಾ ಹಿಂದಿ ನಟ ದೇವಾನಂದ್‌ ರೀತಿಯಲ್ಲಿ ನಗೆ ಬೀರುತ್ತಾನೆ.

ಇದನ್ನೂ ಓದಿ: ದಶಮುಖ ಅಂಕಣ: ಮೌನವೆಂಬ ಭಾವಸೇತು

ಗುರಿ ತಲುಪುವುದಕ್ಕಿಂತ ಖುಷಿ ನೀಡುವುದು ಗಮ್ಯದೆಡೆಗಿನ ದಾರಿಗಳಲ್ಲವೇ? ಯಾವುದೇ ದಾರಿಯಲ್ಲಿ ಎದುರಾಗುವ ಊರೊಂದರ ಹೆಸರಿನ ಹಿಂದಿನ ಗಮ್ಮತ್ತು ತಿಳಿಸುವುದು, ಯಾವುದೋ ದೇಶದಿಂದ ಬರುವ ಚಿತ್ರವಿಚಿತ್ರ ಅಲೆಮಾರಿಗಳ ಜಾಯಮಾನ ವಿಸ್ತರಿಸುವುದು- ಇವೆಲ್ಲ ತನ್ನ ಪ್ರಯಾಣಿಕರ ದಾರಿಯನ್ನು ಬೋರಾಗದಂತೆ ಕಳೆಯುವ ಮತ್ತು ಅವರೊಂದಿಗೆ ನಂಟು ಬೆಸೆಯುವ ಆತನ ಉದ್ದೇಶಕ್ಕೆ ಒದಗುವಂಥವು. ವಿಹಾರಕ್ಕೆ, ವಿರಾಮಕ್ಕೆ, ಅಧ್ಯಯನಕ್ಕೆ ಮುಂತಾದ ಹಲವು ಕಾರಣಗಳನ್ನು ಹೊತ್ತು ಬರುವ ಜನರ ಕಥೆಗಳು ಆತನ ಸಂಚಿಯಲ್ಲಿವೆ. ಎಲ್ಲರಿಗೂ ಅವರವರ ಉದ್ದೇಶ ಈಡೇರುವಂತೆ ಶ್ರಮಿಸುವುದು ತನಗೆ ಪ್ರಿಯವಾದ ಸಂಗತಿ ಎನ್ನುವ ಇಂಥವರು ಜೊತೆಗಿದ್ದರೆ, ಅಲ್ಲಾವುದ್ದೀನನ ಮಾಂತ್ರಿಕ ಚಾಪೆಯ ಮೇಲೆ ತೇಲಿದಂತೆ ದಾರಿ ಸಾಗುತ್ತದೆ. ಇಂಥವರನ್ನು ನೋಡಿದಾಗ, ಇನ್ನೊಬ್ಬರ ಸೌಖ್ಯದಲ್ಲಿ ತಮ್ಮ ಸ್ವಾಸ್ಥ್ಯವನ್ನು ಅರಸುವ ಸ್ವಭಾವದ ಬಗ್ಗೆ ಬೇರೆ ಶಬ್ದಗಳು ನೆನಪಾಗುತ್ತಿಲ್ಲ.

ಹಣ, ಸಂಪತ್ತು, ಖ್ಯಾತಿ, ಅಧಿಕಾರಗಳ ಹುಚ್ಚು ಅಂಟಿಸಿಕೊಂಡವರು ನಮ್ಮೆದುರಿಗೆ ಮೆರವಣಿಗೆ ಹೊರಟಿದ್ದಾರೆ ಈಗ. ಚುನಾವಣೆಯ ಕಣದಲ್ಲಿಳಿದು ಅಧಿಕಾರ ದಕ್ಕಿಸಿಕೊಳ್ಳಲು, ದಕ್ಕದಿದ್ದರೆ ಯಾವ ಮಟ್ಟಕ್ಕೂ ಇಳಿಯುವಷ್ಟು ಹುಚ್ಚರಾಗಿದ್ದಾರೆ ಇಂದು. ಯಾರಿಗಾಗಿ ತಾವು ಆಯ್ಕೆಯಾಗುತ್ತಿದ್ದೇವೆಯೋ ಅವರ ಸೌಖ್ಯವನ್ನು ಗಮನಿಸುವುದೇ ಮರುಳು ಎನಿಸುತ್ತಿದೆ ಅಭ್ಯರ್ಥಿಗಳಿಗೆ. ಇಂಥವುಗಳನ್ನು ನೋಡಿದಾಗ ಮತ್ತದೇ ಪ್ರಶ್ನೆಗಳು ಮೂಡುತ್ತವೆ. ಹುಚ್ಚು ಎನ್ನುವುದನ್ನು ಯಾವುದಕ್ಕೆಲ್ಲ ಸಂವಾದಿಯಾಗಿ ಬಳಸಬಹುದು? ಇತರರ ಖುಷಿಯನ್ನು ಬಯಸುವವರು ಹುಚ್ಚರೋ ಅಥವಾ ಇತರರ ಖರ್ಚಲ್ಲಿ ಖುಷಿ ಪಡುವವರೋ? ಇದಕ್ಕೆಲ್ಲ ಸಂವೇದನೆಗಳಿಗೆ ತಕ್ಕಂತೆ ಉತ್ತರ ಹುಡುಕುವುದೋ ಕಾಲಕ್ಕೆ ತಕ್ಕಂತೆಯೋ? ಹುಚ್ಚಿಗೆ ಹೆಚ್ಚಿಗೆ ಅರ್ಥಗಳಿಲ್ಲವೆಂದು ಈಗಲೂ ಹೇಳಬಹುದೇ?

ಇದನ್ನೂ ಓದಿ: ದಶಮುಖ ಅಂಕಣ: “ಮಧುಮಾಸವೆ ಅಡಿ ಇಡುತಿದೆ ಹೊಸವರ್ಷದ ಬೆಳಗೆ”

Continue Reading
Advertisement
Dina Bhavishya
ಭವಿಷ್ಯ21 mins ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Implement the work without damaging the drinking water pipelines says ZP CEO Sadashiva Prabhu
ವಿಜಯನಗರ5 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ5 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ6 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ6 hours ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ6 hours ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20246 hours ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ7 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ7 hours ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ21 mins ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ17 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202418 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202418 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌