Rupay debit card | ರುಪೇ ಡೆಬಿಟ್‌ ಕಾರ್ಡ್‌, ಕಡಿಮೆ ಮೌಲ್ಯದ ಯುಪಿಐ ವ್ಯವಹಾರ ಉತ್ತೇಜಿಸಲು 2,600 ಕೋಟಿ ರೂ. ನೆರವು - Vistara News

ಪ್ರಮುಖ ಸುದ್ದಿ

Rupay debit card | ರುಪೇ ಡೆಬಿಟ್‌ ಕಾರ್ಡ್‌, ಕಡಿಮೆ ಮೌಲ್ಯದ ಯುಪಿಐ ವ್ಯವಹಾರ ಉತ್ತೇಜಿಸಲು 2,600 ಕೋಟಿ ರೂ. ನೆರವು

ದೇಶದಲ್ಲಿ ರುಪೇಕಾರ್ಡ್‌ ಮತ್ತು ಯುಪಿಐ ಮೂಲಕ ಹಣಕಾಸು ವ್ಯವಹಾರಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ 2,600 ಕೋಟಿ ರೂ. ನೀಡಲಿದೆ. ನಗದು ರಹಿತ (Rupay debit card) ವ್ಯವಹಾರಗಳಿಗೆ ಇದು ಬೆಂಬಲಿಸಲಿದೆ.

VISTARANEWS.COM


on

rupay card
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದಲ್ಲಿ ರುಪೇ ಡೆಬಿಟ್‌ ಕಾರ್ಡ್‌ ಹಾಗೂ ಕಡಿಮೆ ಮೌಲ್ಯದ ಯುಪಿಐ ಹಣಕಾಸು ವರ್ಗಾವಣೆಗಳನ್ನು ಉತ್ತೇಜಿಸಲು 2,600 ಕೋಟಿ ರೂ.ಗಳ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ.( Rupay debit card) ಈ ಕುರಿತ ಪ್ರಸ್ತಾಪವನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

ವ್ಯಕ್ತಿಯಿಂದ ವ್ಯಾಪಾರಿಗೆ (Person-to-merchant) ಯುಪಿಐ ಮೂಲಕ ಹಣ ಪಾವತಿಗೆ ಇನ್ಸೆಂಟಿವ್‌ ಸಿಗಲಿದೆ. ರುಪೇ ಡೆಬಿಟ್‌ ಕಾರ್ಡ್‌ ಬಳಕೆಗೂ ಉತ್ತೇಜನ ಸಿಗಲಿದೆ.

ವ್ಯಾಪಾರಿಗಳ ಜತೆಗೆ ಯುಪಿಐ ಕ್ಯುಆರ್‌ ಕೋಡ್‌ ವ್ಯವಸ್ಥೆ ಅಳವಡಿಸುವ ಬ್ಯಾಂಕ್‌ಗಳಿಗೆ ಇನ್ಸೆಂಟಿವ್‌ ಸಿಗಲಿದೆ. ಪ್ರಸ್ತುತ ಯುಪಿಐ ಅಥವಾ ರುಪೇ ಡೆಬಿಟ್‌ ಕಾರ್ಡ್‌ ಮೂಲಕ ಹಣ ಸ್ವೀಕರಿಸುವಾಗ ವ್ಯಾಪಾರಿಗಳಿಗೆ ಯಾವುದೇ ಶುಲ್ಕ ತಗಲುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಐಪಿಎಲ್ 2024

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

IPL 2024: IPL 2024: ಹೈದರಾಬಾದ್‌ನ ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಇದರ ಮಧ್ಯೆಯೇ, ಹೈದರಾಬಾದ್‌ ಫ್ಯಾನ್ಸ್‌ಗೆ ಆರ್‌ಸಿಬಿ ಫ್ಯಾನ್ಸ್‌ ತಿರುಗೇಟು ನೀಡಿದ್ದಾರೆ.

VISTARANEWS.COM


on

IPL 2024
Koo

ಹೈದರಾಬಾದ್:‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಎಂದರೆ, ಅದು ಸ್ಟೇಡಿಯಂನಲ್ಲಿ ಕೇವಲ ಆಟಗಾರರ ನಡುವಿನ ಕಾಳಗ ಅಲ್ಲ. ಮೈದಾನದಲ್ಲಿ ಪಂದ್ಯ ಕುತೂಹಲ ಹಂತ ತಲುಪಿದಾಗ, ಯಾವುದೇ ತಂಡ ಸೋತಾಗ ಎದುರಾಳಿ ತಂಡದ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಾರೆ. ಅದರಲ್ಲೂ, ಆರ್‌ಸಿಬಿ ಅಭಿಮಾನಿಗಳ ಅಬ್ಬರ ಮೈದಾನದಲ್ಲೂ ಅಥವಾ ಹೊರಗೂ ಜೋರಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಅಭಿಮಾನಿಗಳು (RCB Fans) ಎಸ್‌ಆರ್‌ಎಚ್‌ ಅಭಿಮಾನಿಗಳ (SRH Fans) ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡಿದ್ದಾರೆ.

ಹೌದು, ಪ್ರಸಕ್ತ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಎಸ್‌ಆರ್‌ಎಚ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋಲನುಭವಿಸಿದ್ದಾಗ ಎಸ್‌ಆರ್‌ಎಚ್‌ ಅಭಿಮಾನಿಗಳು ಸುಮ್ಮನಿರಿ, ಬಾಯಿಮುಚ್ಚಿ ಎಂಬ ರೀತಿಯಲ್ಲಿ ಸನ್ನೆ ಮಾಡಿದ್ದರು. ಇದು ಸಹಜವಾಗಿಯೇ ಆರ್‌ಸಿಬಿ ಅಭಿಮಾನಿಗಳನ್ನು ಕೆರಳಿಸಿತ್ತು. ಆದರೆ, ಗುರುವಾರ (ಏಪ್ರಿಲ್‌ 25) ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಇದಾದ ಬಳಿಕ ಆರ್‌ಸಿಬಿ ಅಭಿಮಾನಿಗಳು ಕೂಡ ಗಪ್‌ ಚುಪ್‌ ಎಂಬ ಸನ್ನೆ ಮಾಡುವ ಮೂಲಕ ಎಸ್‌ಆರ್‌ಎಚ್‌ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ರಾಜೀವ್​ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬ್ಯಾಟ್ ಮಾಡಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹೈದರಾಬಾದ್ ಬಳಗ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ ನಷ್ಟಕ್ಕೆ 181 ರನ್ ಬಾರಿಸಿ ಸೋತಿತು. ಈ ಗೆಲುವಿನೊಂದಿಗೆ ಆರ್​ಸಿಬಿಗೆ ಒಟ್ಟು ನಾಲ್ಕು ಅಂಕಗಳು ದೊರಕಿದವು.

ಕೊಹ್ಲಿ, ಪಾಟೀದಾರ್ ಅರ್ಧ ಶತಕ

ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿಯ ಪ್ರದರ್ಶನವೇನೂ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್​ ವಿರಾಟ್ ಕೊಹ್ಲಿ ಮತ್ತೆ ಸ್ಟ್ರೈಕ್​ ರೇಟ್​ ಟೀಕೆಯನ್ನು ಮರೆತು 43 ಎಸೆತಕ್ಕೆ 51 ರನ್ ಬಾರಿಸಿದರು. ಅದಕ್ಕೆ ಅವರು ಟೀಕೆಯನ್ನೂ ಎದುರಿಸಿದರು. ಆದರೆ, ರಜತ್ ಪಾಟೀದಾರ್​ 20 ಎಸೆತಕ್ಕೆ 50 ರನ್ ಬಾರಿಸಿ ತಂಡಕ್ಕೆ ದೊಡ್ಡ ಪ್ರಮಾಣದಲ್ಲಿ ನೆರವಾದರು. ಕ್ಯಾಮೆರೂನ್ ಗ್ರೀನ್​ 37 ರನ್ ಬಾರಿಸಿದರೆ ಫಾಫ್​​ ಡು ಪ್ಲೆಸಿಸ್​ 25 ಕೊಡುಗೆ ಕೊಟ್ಟರು. ಹೀಗಾಗಿ ಪೇಚಾಡಿ 200 ರನ್​ಗಳ ಗಡಿ ದಾಟಿತು. ಬೌಲಿಂಗ್‌ನಲ್ಲಿ ಪರಾಕ್ರಮ ತೋರಿದ ಆರ್‌ಸಿಬಿ ಬೌಲರ್‌ಗಳು ತಂಡಕ್ಕೆ 35 ರನ್‌ಗಳ ಗೆಲುವು ತಂದುಕೊಟ್ಟರು.

ಇದನ್ನೂ ಓದಿ: Yuzvendra Chahal : ​ ಚಾಹಲ್ ಕೈಬಿಟ್ಟಿರುವುದರ ಹಿಂದಿನ ಕಾರಣ ಬಹಿಂಗ ಮಾಡಿದ ಆರ್​ಸಿಬಿ ಮಾಜಿ ಡೈರೆಕ್ಟರ್​

Continue Reading

ದೇಶ

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Tech Mahindra: ಐಟಿ ಸೇವೆಗಳಿಗೆ ಹೆಸರುವಾಸಿಯಾಗಿರುವ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದದಲ್ಲಿ 661 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೇ, 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಟೆಕ್‌ ಮಹೀಂದ್ರಾ ತೀರ್ಮಾನಿಸಿದೆ. ಇದು ಫ್ರೆಶರ್‌ಗಳಿಗೆ ಭಾರಿ ಅನುಕೂಲವಾಗಲಿದೆ.

VISTARANEWS.COM


on

Tech Mahindra
Koo

ನವದೆಹಲಿ: ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ, ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

“ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. ನಾಲ್ಕನೇ ತ್ರೈಮಾಸಿಕದಲ್ಲಿ ಟೆಕ್‌ ಮಹೀಂದ್ರಾ ನಿವ್ವಳ ಲಾಭದ ಪ್ರಮಾಣವು 709.47 ಕೋಟಿ ರೂ. ಇರಲಿದೆ ಎಂಬುದಾಗಿ ಮನಿಕಂಟ್ರೋಲ್‌ (Moneycontrol) ಅಂದಾಜಿಸಿತ್ತು.

6 ಸಾವಿರ ಫ್ರೆಶರ್‌ಗಳ ನೇಮಕ

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

50 ಸಾವಿರ ನೌಕರರಿಗೆ ಎಐ ತರಬೇತಿ

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಇನ್ನು, ಟೆಕ್‌ ಟೆಕ್‌ ಮಹೀಂದ್ರಾ ಕಂಪನಿಯ ವಾರ್ಷಿಕ ಲಾಭವೂ ಶೇ.6.2ರಷ್ಟು ಅಂದರೆ, 12,871 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೂ ಉದ್ಯೋಗ ಸೃಷ್ಟಿ ಸೇರಿ ಹಲವು ಯೋಜನೆಗಳಿಗೆ ಟೆಕ್‌ ಮಹೀಂದ್ರಾ ಚಾಲನೆ ನೀಡುತ್ತಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Continue Reading

ದೇಶ

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

China Road: ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

VISTARANEWS.COM


on

China Road
Koo

ನವದೆಹಲಿ: ಕಾಶ್ಮೀರದ ಲಡಾಕ್‌ ಬಳಿಯ ವಾಸ್ತವ ನಿಯಂತ್ರಣ ರೇಖೆ (LoC) ಬಳಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿ ಬಿಕ್ಕಟ್ಟು ಸೃಷ್ಟಿಸಿದ್ದ ಚೀನಾ ಈಗ ಮತ್ತೊಂದು ಉದ್ಧಟತನ ತೋರಿದೆ. ಹೌದು, ಪಾಕ್‌ ಆಕ್ರಮಿತ ಕಾಶ್ಮೀರದ (Pak Occupied Kashmir) ಬಳಿ ನೂತನವಾಗಿ ರಸ್ತೆ ನಿರ್ಮಿಸುವ (China Road) ಮೂಲಕ ಚೀನಾ ಗಡಿ ನಿಯಮಗಳನ್ನು ಗಾಳಿಗೆ ತೂರಿದೆ. ಇದು ಭಾರತದ ಜತೆ ಮತ್ತೊಂದು ಬಿಕ್ಕಟ್ಟು ಸೃಷ್ಟಿಸುವ ಹುನ್ನಾರ ಎಂದು ಹೇಳಲಾಗುತ್ತಿದೆ. ಕಳೆದ ವರ್ಷದ ಜೂನ್‌ ಹಾಗೂ ಆಗಸ್ಟ್‌ ಅವಧಿಯಲ್ಲಿ ಚೀನಾ ರಸ್ತೆ ನಿರ್ಮಾಣ ಆರಂಭಿಸಿದ್ದು, ಇದರ ಚಿತ್ರಗಳನ್ನು ಯುರೋಪಿಯನ್‌ ಸ್ಪೇಸ್‌ ಏಜೆನ್ಸಿ ಬಿಡುಗಡೆ ಮಾಡಿದೆ. ಚೀನಾ ರಸ್ತೆ ನಿರ್ಮಿಸಿದ ಚಿತ್ರಗಳು ಸ್ಪಷ್ಟವಾಗಿ ಕಾಣುತ್ತಿವೆ.

ವಿಶ್ವದಲ್ಲೇ ಅತಿ ಎತ್ತರದ ಯುದ್ಧಭೂಮಿ ಎನಿಸಿರುವ ಸಿಯಾಚಿನ್‌ ಹಿಮಪ್ರದೇಶದ ಬಳಿಯೇ ಚೀನಾ ರಸ್ತೆ ನಿರ್ಮಿಸಿರುವ ಸ್ಯಾಟಲೈಟ್‌ ಫೋಟೊಗಳು ಲಭ್ಯವಾಗಿವೆ. 1963ರಲ್ಲಿ ಚೀನಾಗೆ ಬಿಟ್ಟುಕೊಟ್ಟಿರುವ, ಪಾಕ್‌ ಆಕ್ರಮಿತ ಕಾಶ್ಮೀರದ ಭಾಗವಾಗಿದ್ದ ಶಾಕ್ಸ್‌ಗಾಮ್‌ ಕಣಿವೆಯಲ್ಲಿ ಚೀನಾ ರಸ್ತೆ ನಿರ್ಮಿಸಿದೆ. ಇದು ಭಾರತದ ಇಂದಿರಾ ಕೋಲ್ ಪ್ರದೇಶದಿಂದ ಕೇವಲ 50 ಕಿಲೋ ಮೀಟರ್‌ ದೂರದಲ್ಲಿರುವುದರಿಂದ ಆತಂಕ ಹೆಚ್ಚಾಗಿದೆ.

ಇಂದಿರಾ ಕೋಲ್‌ ಪ್ರದೇಶಕ್ಕೆ ಕಳೆದ ಮಾರ್ಚ್‌ನಿಂದ ಇದುವರೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಎರಡು ಬಾರಿ ಭೇಟಿ ನೀಡಿದ್ದರು. ಇದರಿಂದ ಕೇವಲ 50 ಕಿಲೋಮೀಟರ್‌ ದೂರದಲ್ಲಿ ಚೀನಾ ರಸ್ತೆ ನಿರ್ಮಿಸಿದ ಕಾರಣ ಮುಂದಿನ ದಿನಗಳಲ್ಲಿ ಭಾರತದ ಜತೆಗಿನ ಬಿಕ್ಕಟ್ಟನ್ನು ಉಲ್ಬಣಿಸುವ ಸಾಧ್ಯತೆ ಇದೆ. ಇದೇ ಸಂಚಿನಿಂದಾಗಿಯೇ ಚೀನಾ ರಸ್ತೆ ನಿರ್ಮಾಣ ಮಾಡಿದೆ ಎಂದು ಹೇಳಲಾಗುತ್ತಿದೆ.

ಭಾರತಕ್ಕೆ ಏಕೆ ಆತಂಕಕಾರಿ?

ಸಿಯಾಚಿನ್‌ ಹಿಮಪ್ರದೇಶದಲ್ಲಿ ಚೀನಾ ರಸ್ತೆ ನಿರ್ಮಿಸಿರುವುದು ಭಾರತಕ್ಕೆ ಹಲವು ರೀತಿಯಲ್ಲಿ ಆತಂಕ ಎನಿಸಿದೆ. ಗಡಿಯಲ್ಲಿ ರಸ್ತೆ ನಿರ್ಮಿಸಿದರೆ ಚೀನಾ ಸುಲಭವಾಗಿ ಮಿಲಿಟರಿ ಸಲಕರಣೆಗಳನ್ನು, ಸೈನಿಕರನ್ನು ಗಡಿಗೆ ನಿಯೋಜಿಸಬಹುದು. ಇದಾದ ಬಳಿಕ ಭಾರತದ ಜತೆ ತಗಾದೆ ತೆಗೆಯಲು ಚೀನಾಗೆ ಅನುಕೂಲವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಆದರೆ, ಇದಕ್ಕೆ ಭಾರತ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Lok Sabha Election 2024 Ganesh vote by que prakash raj Cast His Vote
Lok Sabha Election 202412 mins ago

Lok Sabha Election 2024: ಸರತಿ ಸಾಲಿನಲ್ಲಿ ನಿಂತು ವೋಟ್‌ ಮಾಡಿದ ಗಣೇಶ್ ದಂಪತಿ: ಪ್ರಕಾಶ್‌ ರಾಜ್‌ ಮನವಿ ಏನು?

IPL 2024
ಐಪಿಎಲ್ 202417 mins ago

IPL 2024: ಎಸ್‌ಆರ್‌ಎಚ್‌ ಫ್ಯಾನ್ಸ್‌ ಬಾಯಿಮುಚ್ಚಿಸಿ ಸೇಡು ತೀರಿಸಿಕೊಂಡ ಆರ್‌ಸಿಬಿ ಫ್ಯಾನ್ಸ್;‌ ವಿಡಿಯೊ ವೈರಲ್

ರಾಜಕೀಯ18 mins ago

Lok sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರೋ ಅತ್ಯಂತ ಸಿರಿವಂತ, ಬಡ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ?

Kiran Raj Met Jon Abraham
ಸ್ಯಾಂಡಲ್ ವುಡ್41 mins ago

Kiran Raj : ʻ777 ಚಾರ್ಲಿʼ ನಿರ್ದೇಶಕ ಬಾಲಿವುಡ್‌ ನಟ ಜಾನ್ ಅಬ್ರಹಾಂ ಭೇಟಿ ಮಾಡಿದ್ದೇಕೆ?

Tech Mahindra
ದೇಶ41 mins ago

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Pune Police 60 Hours Operation; Drugs worth more than Rs 1300 crore seized
ಕ್ರೈಂ1 hour ago

Physical Abuse: ಹಿಟಾಚಿ ಕೆಳಗೇ 7 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಪಿಶಾಚಿ

Lok Sabha Election 2024 sandalwood celebs where do cast their votes
ರಾಜಕೀಯ1 hour ago

Lok Sabha Election 2024: ಸ್ಯಾಂಡಲ್‌ವುಡ್‌ ತಾರೆಯರು ಎಲ್ಲೆಲ್ಲಿ ವೋಟ್‌ ಹಾಕ್ತಾರೆ?

China Road
ದೇಶ1 hour ago

China Road: ಕಾಶ್ಮೀರ ಗಡಿಯಲ್ಲಿ ರಸ್ತೆ ನಿರ್ಮಿಸಿ ಚೀನಾ ಮತ್ತೆ ಉದ್ಧಟತನ; ಇಲ್ಲಿವೆ ಸ್ಯಾಟಲೈಟ್‌ ಚಿತ್ರಗಳು

Lok sabha election 2024
ದೇಶ2 hours ago

Lok Sabha Election 2024: 12 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾನ ಶುರು

Crime Scene
ಕ್ರೈಂ2 hours ago

UDR Case: ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ5 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ18 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ18 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ21 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202423 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌