Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್‍ 20 ಪಟ್ಟಿಯಲ್ಲಿ ಭಾರತದ 3 ಕಂಪನಿ! Vistara News

ಪ್ರಮುಖ ಸುದ್ದಿ

Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್‍ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!

Happiest Employees: ಇನ್‌ಡೀಡ್ ಜಾಬ್ ಸೈಟ್ ನಡೆಸಿದ ಸಮೀಕ್ಷೆಯಲ್ಲಿ ಅಮೆರಿಕ ಟಾಪ್ 20 ಸಂತೋಷದಾಯಕ ಕಂಪನಿಗಳ ಪಟ್ಟಿಯಲ್ಲಿ ಟಿಸಿಎಸ್, ವಿಪ್ರೋ ಮತ್ತು ಇನ್ಫೋಸಿಸ್ ಸ್ಥಾನಪಡೆದುಕೊಂಡಿವೆ.

VISTARANEWS.COM


on

3 Indian companies among America's happiest employees top 20 company list
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಉದ್ಯೋಗ ಹುಡುಕಲು ನೆರವು ನೀಡುವ ಜಾಲತಾಣ ಇನ್‌ಡೀಡ್ (Indeed Survey) ನಡೆಸಿದ ಉದ್ಯೋಗಿಗಳು ಯೋಗಕ್ಷೇಮ ಸಮೀಕ್ಷೆಯಲ್ಲಿ ಭಾರತೀಯ ಮೂಲದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ(Indian Company). ಅಮೆರಿಕದ ಉದ್ಯೋಗಿಗಳ ಯೋಗಕ್ಷೇಮ ಕೈಗೊಳ್ಳುವ ಕಂಪನಿಗಳ ಪಟ್ಟಿಯಲ್ಲಿ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಸ್ಟೋರ್ಸ್(Love’s Travel Stops & County Stores) ಮೊದಲ ಸ್ಥಾನದಲ್ಲಿದೆ. ಅತ್ಯಂತ ಸಂತೋಷದಾಯಕ ಉದ್ಯೋಗಿಗಳನ್ನು ಹೊಂದಿರುವ ಈ ಪಟ್ಟಿಯಲ್ಲಿ ಟೆಕ್ ದೈತ್ಯ ಕಂಪನಿಗಳಾದ ಟಿಸಿಎಸ್(TCS), ಇನ್ಫೋಸಿಸ್ (Infosys) ಮತ್ತು ವಿಪ್ರೋ (Wipro) ಕ್ರಮವಾಗಿ, 4, 8 ಮತ್ತು 9 ಸ್ಥಾನವನ್ನು ಪಡೆದುಕೊಂಡಿವೆ.

ಪ್ರಥಮ ಸ್ಥಾನದಲ್ಲಿರುವ ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್, 100 ಅಂಕಗಳ ಪೈಕಿ 83 ಅಂಕವನ್ನು ಸಂಪಾದಿಸಿದೆ. ಸಾವಿರಾರು ಅನಾಮಧೇಯ ಉದ್ಯೋಗಿಗಳ ವಿಮರ್ಶೆ, ಸಂತೋಷ, ಒತ್ತಡದ ಹಂತಗಳು, ಉದ್ಯೋಗ ಸಂತೃಪ್ತಿ ಮತ್ತು ಉದ್ದೇಶ ಸೇರಿ ಅನೇಕ ಸಂಗತಿಗಳ ಆಧಾರದ ಮೇಲೆ ಜಪಾನ್ ಮೂಲದ ಇನ್‌ಡೀಡ್ ಜಾಬ್ ಸೈಟ್ ಸಮೀಕ್ಷೆಯನ್ನು ಪೂರ್ತಿಗೊಳಿಸಿದೆ.

ಸಾವಿರಕ್ಕಿಂತಲೂ ಹೆಚ್ಚು ಉದ್ಯೋಗಿಗಳು ಇರುವ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ. ಏರ್‌ಲೈನ್ಸ್‌ನಿಂದ ಕನ್ಸಲ್ಟನ್ಸೀಸ್, ಫಾಸ್ಟ್ ಫುಡ್ ಚೈನ್ ಕಂಪನಿಗಳವರೆಗೆ ಹಲವು ವಿಧದ ಕಂಪನಿಗಳನ್ನು ಸಮೀಕ್ಷೆಗೆ ಪರಿಗಣಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Best Company of 2023: ‘ಟೈಮ್’ 100 ಬೆಸ್ಟ್‌ ಕಂಪನಿಗಳ ಲಿಸ್ಟ್‌ನಲ್ಲಿ ಭಾರತದ ಏಕೈಕ ಬೆಂಗಳೂರಿನ ಕಂಪನಿ!

ಆ 20 ಕಂಪನಿಗಳು ಯಾವವು?

ಲವ್ಸ್ ಟ್ರಾವೆಲ್ ಸ್ಟಾಪ್ಸ್ ಆ್ಯಂಡ್ ಕಂಟ್ರಿ ಸ್ಟೋರ್ಸ್, ಎಚ್ ಆ್ಯಂಡ್ ಆರ್ ಬ್ಲಾಕ್, ಡೆಲ್ಟಾ ಏರ್ ಲೈನ್ಸ್, ಟಾಟಾ ಕನ್ಸಲ್ಟನ್ಸಿ ಸರ್ವೀಸಸ್, ಅಕ್ಸೆಂಚರ್, ಐಬಿಎಂ, ಎಲ್3ಹ್ಯಾರಿಸ್, ವಿಪ್ರೋ, ಇನ್ಫೋಸಿಸ್, ನೈಕ್, ವ್ಯಾನ್ಸ್, ಇನ್-ಎನ್-ಔಟ್ ಬರ್ಗರ್, ಕಾಗ್ನಿಜಂಟ್ ಟೆಕ್ನಾಲಜಿ ಸಲೂಷನ್ಸ್, ಹಾಲ್ಮಾರ್ಕ್, ಮೈಕ್ರೋಸಾಫ್ಟ್, ನಾರ್ತ್‌ರಾಪ್ ಗ್ರುಮ್ಮನ್, ಫೆಡ್‌ಎಕ್ಸ್ ಫ್ರೈಟ್, ಡಚ್ ಬ್ರದರ್ಸ್ ಕಾಫಿ, ಆ್ಯಪಲ್.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

ಕರ್ನಾಟಕದ ಹುತಾತ್ಮ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

VISTARANEWS.COM


on

cm siddaramaih respect captain pranjal
Koo

ಬೆಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರಧನವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮಂಜೂರು ಮಾಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ (ಟ್ವಿಟರ್)‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. “ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆʼʼ ಎಂದು ಬರೆದಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ (Rajouri Encounter) ಕರ್ನಾಟಕದ ವೀರ ಯೋಧ ಪ್ರಾಂಜಲ್‌ (Captain Pranjal) ಮೃತಪಟ್ಟಿದ್ದರು. ಇವರ ಮನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆಯಲ್ಲಿದೆ. ಯೋಧನ ಮನೆಯ ಆವರಣದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನಡೆದಿತ್ತು. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲಿಗೆ ಭೇಟಿ ನೀಡಿ, ಹುತಾತ್ಮ ಯೋಧನ ಅಂತಿಮ ದರ್ಶನ ಪಡೆದಿದ್ದರು. ಸಂಬಂಧಿಕರು ಹಾಗೂ ಸಹಸ್ರಾರು ಸಾರ್ವಜನಿಕರ ಉಪಸ್ಥಿತಿಯಲ್ಲಿ ಅಂತ್ಯಸಂಸ್ಕಾರ ನಡೆದಿತ್ತು.

ಉಗ್ರರ ಜತೆಗಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಬಡಿದಾಡಿ ಪ್ರಾಣ ತ್ಯಾಗ ಮಾಡಿದ ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನ (MRPL) ನಿವೃತ್ತ ಆಡಳಿತ ನಿರ್ದೇಶಕ ವೆಂಕಟೇಶ್ ಅವರ ಏಕೈಕ ಪುತ್ರ. (MRPL) ನ ಮಾಜಿ ನಿರ್ದೇಶಕ ಎಂ.ವೆಂಕಟೇಶ್ ಅವರ ಪುತ್ರ. ಎಂಆರ್‌ಪಿಎಲ್‌ನ ಬಳಿಯೇ ಇರುವ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲೇ ಪ್ರಾಂಜಲ್‌ ವಿದ್ಯಾಭ್ಯಾಸ ಮಾಡಿದ್ದರು. ಕರಾವಳಿಯವರೇ ಆದ ವೆಂಕಟೇಶ್ ಅವರು ಮೇ 31ರಂದು ಸೇವಾ ನಿವೃತ್ತರಾಗಿದ್ದರು. ಕೆಲಕಾಲ ಮೈಸೂರಲ್ಲೂ ಇದ್ದರು. ತಂದೆಯ ನಿವೃತ್ತ ಸಮಾರಂಭಕ್ಕೆ ಪ್ರಾಂಜಲ್ ಆಗಮಿಸಿದ್ದರು. ನಿವೃತ್ತಿ ಬಳಿಕ ವೆಂಕಟೇಶ್ ಅವರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

Continue Reading

ಅಂಕಣ

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

Raja Marga Column : ಅಮ್ಮೆಂಬಳ ಸುಬ್ಬ ರಾವ್‌ ಪೈ ಅವರು ಕೆನರಾ ಬ್ಯಾಂಕ್‌ ಮತ್ತು ಕೆನರಾ ವಿದ್ಯಾ ಸಂಸ್ಥೆಗಳ ಸ್ಥಾಪಕರು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ, ಅವರು ಅದನ್ನು ಹೇಗೆ ಕಟ್ಟಿದರು ಅನ್ನುವುದು ತುಂಬಾ ಇಂಟ್ರೆಸ್ಟಿಂಗ್‌.

VISTARANEWS.COM


on

Canara Bank Ammembala Subbarao Pai
Koo
RAJAMARGA

ಅಮ್ಮೆಂಬಳ ಸುಬ್ಬರಾವ್ ಪೈ (Ammembala Subbarao Pai) ಅವರು ಬ್ಯಾಂಕಿಂಗ್ ವ್ಯವಸ್ಥೆಗೆ (Banking System) ಭಾರೀ ಸ್ಫೂರ್ತಿಯನ್ನು ನೀಡಿದ ಕೆನರಾ ಬ್ಯಾಂಕನ್ನು (Canara Bank) ದೇಶಕ್ಕೆ ಕೊಡುಗೆಯಾಗಿ ನೀಡಿದವರು. ಅದೇ ರೀತಿ ಶಿಕ್ಷಣ ಕ್ಷೇತ್ರದಲ್ಲಿ ಇಂದು ಭಾರೀ ಕೀರ್ತಿಯನ್ನು ಪಡೆದಿರುವ ಮಂಗಳೂರಿನ ಕೆನರಾ ವಿದ್ಯಾಸಂಸ್ಥೆಗಳನ್ನು (Canara Education Institutes) ಸಮರ್ಪಣೆ ಮಾಡಿದವರು (Raja Marga Column).

ಅಮ್ಮೆಂಬಳ ಸುಬ್ಬರಾವ್ ಪೈ ಅವರು 1852ರ ಇಸವಿಯ ನವೆಂಬರ್ 19ರಂದು ಮಂಗಳೂರಿನ ಹತ್ತಿರ ಇರುವ ಮೂಲ್ಕಿಯಲ್ಲಿ ಜನಿಸಿದರು. ಅವರ ತಂದೆ ಉಪೇಂದ್ರ ಪೈ ಅವರು ಮುನ್ಸಿಫರ ಕೋರ್ಟನಲ್ಲಿ ಜನಪ್ರಿಯ ವಕೀಲರಾಗಿದ್ದರು.

ಮಂಗಳೂರಿನ ಕನ್ನಡ ಶಾಲೆಯಲ್ಲಿ ಓದಿ ಎಫ್.ಎ ಪರೀಕ್ಷೆ ಮುಗಿಸಿದ ನಂತರ ಸುಬ್ಬರಾವ್ ಪೈ ಅವರು ಮದ್ರಾಸಿಗೆ ತೆರಳಿ ಪದವಿ ಮತ್ತು ಕಾನೂನು ಪದವಿಗಳನ್ನು ಪಡೆದರು. ಅಲ್ಲಿ ಅವರಿಗೆ ದೊರೆತ ಜಸ್ಟೀಸ್ ಹಾಲೋವೇ ಎಂಬ ಶಿಕ್ಷಕರ ವ್ಯಕ್ತಿತ್ವವು ಅವರ ಮೇಲೆ ಭಾರೀ ಪ್ರಭಾವ ಬೀರಿತು. ‘ಸ್ವಂತಕ್ಕಿಂತ ಸಮಾಜಕ್ಕೆ ಹೆಚ್ಚು’ ಎಂಬ ಕಲ್ಪನೆ ಕೊಟ್ಟದ್ದೇ ಅವರು.

1876ರಲ್ಲಿ ತಮ್ಮ ತಂದೆಯವರು ನಿಧನ ಆದ ಕಾರಣದಿಂದ ಮಂಗಳೂರಿಗೆ ಹಿಂದಿರುಗಿದ ಸುಬ್ಬರಾವ್ ಪೈಯವರು ಉತ್ತಮವಾಗಿ ವಕೀಲಿ ವೃತ್ತಿ ನಡೆಸುತ್ತಿದ್ದರು. ತಮಗೆ ದುಡ್ಡು ಬಾರದಿದ್ದರೂ ಚಿಂತೆಯಿಲ್ಲ ಎಂಬ ಧೋರಣೆ ಅವರದ್ದು. ಅದಕ್ಕಾಗಿ ಆದಷ್ಟೂ ಕೋರ್ಟಿನ ಹೊರಗೇ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಅವರ ಪ್ರಯತ್ನ ಜಾರಿಯಲ್ಲಿ ಇತ್ತು. ಅವರಿಗೆ ದುಡ್ಡು ಆದ್ಯತೆ ಆಗಿರಲಿಲ್ಲ.

ಕೆನರಾ ವಿದ್ಯಾಸಂಸ್ಥೆಗಳ ಸ್ಥಾಪನೆ

1891ರ ಹೊತ್ತಿಗೆ ಶಿಕ್ಷಕರಾಗಿದ್ದ ಅವರ ಕೆಲವು ಸ್ನೇಹಿತರು ಮಂಗಳೂರಿನಲ್ಲಿ ಉತ್ತಮ ಶಾಲೆಗಳ ಕೊರತೆಯನ್ನು ಪ್ರಸ್ತಾಪಿಸಿದರು. ಆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅವರು ತುಂಬಾ ಕಾಳಜಿಯನ್ನು ವಹಿಸಿ ಕೆನರಾ ವಿದ್ಯಾ ಸಂಸ್ಥೆಗಳನ್ನು ಪ್ರಾರಂಭಿಸಿದರು. ಮಂಗಳೂರಿನ ಕೇಂದ್ರ ಭಾಗದಲ್ಲಿ ಅವರ ತಂದೆ ಉಪೇಂದ್ರ ಪೈ ಅವರು ಉಚಿತವಾಗಿ ಕೊಟ್ಟ 22 ಎಕರೆ ಜಾಗದಲ್ಲಿ ಇಂದು ಕೆನರಾ ವಿದ್ಯಾಸಂಸ್ಥೆಗಳು ತಲೆ ಎತ್ತಿ ನಿಂತಿರುವುದನ್ನು ನೋಡುವುದೇ ಚಂದ. ಆ ವಿದ್ಯಾಸಂಸ್ಥೆಯಲ್ಲಿ ಇಂದು ಸಾವಿರಾರು ವಿದ್ಯಾರ್ಥಿಗಳು ಕ್ವಾಲಿಟಿ ಶಿಕ್ಷಣ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಯಾವಾಗಲೂ ಹೇಳುತ್ತಿದ್ದ ಮುಖ್ಯವಾದ ಮಾತು – ನಿಮ್ಮ ಗುರಿಗಳ ಮೇಲೆ ಫೋಕಸ್ ಮಾಡಿ. ಆಗ ಲಾಭವು ನಿಮ್ಮನ್ನು ಅನುಸರಿಸಿಕೊಂಡು ಬರುತ್ತದೆ.

ಅದಾದ ನಂತರ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಆಗುವಂತೆ 1894ರಲ್ಲಿ ಕೆನರಾ ಹೆಣ್ಣು ಮಕ್ಕಳ ಹೈಸ್ಕೂಲನ್ನು ಕೂಡ ಅವರು ತೆರೆದರು. ಅಂದಿನ ದಿನಗಳಲ್ಲಿ ಹೆಣ್ಣುಮಕ್ಕಳ ಶಿಕ್ಷಣದ ಬಗೆಗೆ ಸಮಾಜದಲ್ಲಿ ಪ್ರೋತ್ಸಾಹದ ವಾತಾವರಣ ಇರಲಿಲ್ಲ. ಆದ್ದರಿಂದ ಕೆನರಾ ವಿದ್ಯಾಸಂಸ್ಥೆಯ ಸ್ಥಾಪನೆಯು ಕ್ರಾಂತಿಕಾರಕ ಹೆಜ್ಜೆಯೇ ಆಗಿತ್ತು.

ಮುಂದೆ ಕೆನರಾ ವಿದ್ಯಾಸಂಸ್ಥೆಗಳು ಭಾರೀ ದೊಡ್ಡ ಹೆಮ್ಮರ ಆಗಿ ಬೆಳೆದು ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯೆ ನೀಡುತ್ತಾ ಮುಂದೆ ಸಾಗಿವೆ. ಶತಮಾನೋತ್ಸವ ಕಂಡಿವೆ.

ಹೆಣ್ಣುಮಕ್ಕಳ ವಿದ್ಯಾಭ್ಯಾಸದ ವಿಷಯದಲ್ಲಿ ಅಂದಿನ ದಿನಗಳಲ್ಲಿ ನಿರುತ್ಸಾಹದ ವಾತಾವರಣವನ್ನು ಕಂಡಾಗ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಕಂಡುಹಿಡಿದ ಪರಿಹಾರವು ಅದ್ಭುತವಾಗಿಯೇ ಇತ್ತು. ಅದು ಉಳಿತಾಯ ಪ್ರಜ್ಞೆ.

ಹಿಡಿಯಕ್ಕಿಯಿಂದ ಆರಂಭ ಆಯಿತು ಕೆನರಾ ಬ್ಯಾಂಕ್!

ತಮ್ಮ ಹೆಣ್ಣು ಮಕ್ಕಳಿಗೆ ಓದು ಬರಹ ಬೇಕು ಎಂದು ಆಸೆ ಪಡುವ ತಾಯಿಯರು ಪ್ರತೀದಿನ ‘ಹಿಡಿ ಅಕ್ಕಿ ಉಳಿಸಿ’ ಎಂಬ ಅಭಿಯಾನದ ಮೂಲಕ ಅಮ್ಮೆಂಬಳ ಪೈಯವರು ಜನರಲ್ಲಿ ಜಾಗೃತಿಯನ್ನು ಮೂಡಿಸಿದರು. ಇದೇ ಉಳಿತಾಯದ ಶ್ರೇಷ್ಠ ಚಿಂತನೆಯು ಮುಂದೆ ಯಶಸ್ವಿಯಾಗಿ ಅವರಿಂದ ಹುಟ್ಟಿದ್ದು ‘ಹಿಂದೂ ಪರ್ಮನೆಂಟ್ ಫಂಡ್ʼ ಎಂಬ ಹಣಕಾಸು ಸಂಸ್ಥೆ. ಇದೇ ಮುಂದೆ ಕೆನರಾ ಬ್ಯಾಂಕ್ ಆಯಿತು.

‘ಉತ್ತಮ ಬ್ಯಾಂಕ್ ಎನ್ನುವುದು ಸಮಾಜದ ಆರ್ಥಿಕ ಶಕ್ತಿಯ ಕೇಂದ್ರ ಮಾತ್ರವಲ್ಲ, ಅದು ಸಾಮಾನ್ಯ ಜನರ ಆರ್ಥಿಕ ಸ್ಥಿತಿಗತಿಗಳನ್ನು ಉತ್ತಮಪಡಿಸುವ ಜವಾಬ್ಧಾರಿಯನ್ನು ತನ್ನ ಮೇಲಿರಿಸಿಕೊಂಡಿದೆ’ ಎಂಬುದು ಅಮ್ಮೆಂಬಳ ಸುಬ್ಬರಾವ್ ಪೈ ಅವರು ಬಲವಾಗಿ ನಂಬಿದ ಧ್ಯೇಯ ಆಗಿತ್ತು. ಲಾಭದ ಗಳಿಕೆಗಿಂತ ಜನಸಾಮಾನ್ಯರ ಆರ್ಥಿಕ ಸಬಲೀಕರಣವು ಅವರ ಉದ್ದೇಶವಾಗಿತ್ತು.

ಬ್ರಿಟಿಷ್ ಬ್ಯಾಂಕುಗಳ ತಾರತಮ್ಯದ ವಿರುದ್ಧ ಸಿಡಿದು ನಿಂತ ಕೆನರಾ ಬ್ಯಾಂಕ್

1906ರಲ್ಲಿ ಕೆನರಾ ಬ್ಯಾಂಕ್ ಸ್ಥಾಪನೆಯು ಆಗಿನ ಕಾಲದಲ್ಲಿ ಭಾರೀ ಸಂಚಲನವನ್ನು ಮೂಡಿಸಿದ್ದು ಹೇಗೆ?

ಅದು ಶತಮಾನದ ಆರಂಭದ ದಶಕ. ಭಾರತದಲ್ಲಿ ಆಗ ಬ್ರಿಟನ್‌ ರಾಣಿಯ ಆಡಳಿತ. ಮಂಗಳೂರಿನಲ್ಲಿ ಆಗ ಇದ್ದದ್ದು ಬ್ರಿಟಿಷರಿಗೆ ಸೇರಿದ ಮದ್ರಾಸ್‌ ಬ್ಯಾಂಕಿನ ಶಾಖೆಯೊಂದೇ! ಸಂಪೂರ್ಣವಾಗಿ ಬ್ರಿಟಿಷ್‌ ಅಧಿಕಾರಿಗಳೇ ತುಂಬಿದ್ದ ಈ ಬ್ಯಾಂಕ್‌ನಲ್ಲಿ ಭಾರತೀಯರು ಕಾರಕೂನರ ಮತ್ತು ಜವಾನನ ಕೆಲಸಕ್ಕೆ ಮಾತ್ರ ನೇಮಕ ಆಗುತ್ತಿದ್ದರು. ಆ ಬ್ಯಾಂಕ್‌ ಕೇವಲ ಶ್ರೀಮಂತರತ್ತ ಮಾತ್ರ ಮುಖವನ್ನು ಮಾಡಿತ್ತು. ಆದರೆ ಅದು ವಿಧಿಸುತ್ತಿದ್ದ ಬಡ್ಡಿ ಮಾತ್ರ ವಿಪರೀತ ಪ್ರಮಾಣದ್ದಾಗಿತ್ತು. ಬಡವರು ಬ್ಯಾಂಕಿನ ಒಳಗೆ ಬರಲು ಸಾಧ್ಯವೇ ಇರಲಿಲ್ಲ!

Ammembala Subbarao pai Canara Bank

ಜನ ಸಾಮಾನ್ಯರು ತಮ್ಮ ಕಠಿಣ ದುಡಿಮೆಯ ಹಣವನ್ನು ಸುರಕ್ಷಿತವಾಗಿಡಲು ಪಡುತ್ತಿದ್ದ ಕಷ್ಟಗಳು, ಸಂಕಷ್ಟದ ವೇಳೆ ಸಾಲಕ್ಕಾಗಿ ಅಲೆದಾಡುತ್ತಿದ್ದ ಕಷ್ಟವನ್ನು ನೋಡಿ ಸುಬ್ಬರಾವ್ ಪೈ ಅವರು ಭಾರೀ ಚಿಂತನೆಗೆ ತೊಡಗಿದರು. ಬಡವರ ಕಷ್ಟಗಳಿಗೆ ಅವರ ಮನಸ್ಸು ಕರಗಿತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಣದಿಂದಲೇ ನಿಧಿ ಸ್ಥಾಪಿಸಿ, ಉಳಿತಾಯದ ಅವಕಾಶ ಮತ್ತು ಸಾಲವನ್ನು ನೀಡುವುದು ಅವರ ಉದೇಶ ಆಗಿತ್ತು.

ವಿಶೇಷವಾಗಿ ಶಿಕ್ಷಣದ ಸಾಲ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಕೆನರಾ ಬ್ಯಾಂಕಿನ ಆದ್ಯತೆ ಆಗುವಂತೆ ಅವರು ಮಾಡಿದರು. ಹೆಣ್ಣುಮಕ್ಕಳ ಶೈಕ್ಷಣಿಕ ಸಾಲವನ್ನು ಆದ್ಯತೆಯ ಸಾಲವಾಗಿ ಅವರು ಘೋಷಣೆ ಮಾಡಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ‘ಆದ್ಯತೆಯ ಸಾಲ’ ನೀಡಿದ ದೇಶದ ಮೊದಲ ಬ್ಯಾಂಕು ಎಂಬ ಕೀರ್ತಿಯು ಕೂಡ ಕೆನರಾ ಬ್ಯಾಂಕಿಗೆ ದೊರೆಯಿತು! ಇದೆಲ್ಲವೂ ಅಮ್ಮೆಂಬಳ ಸುಬ್ಬರಾವ್ ಪೈ ಅವರ ದೂರದೃಷ್ಟಿಯ ಸಂಕೇತವೇ ಆಗಿದೆ.

ಕೆನರಾ ಬ್ಯಾಂಕಿನ ನಿಧಿಯನ್ನು ಸಂಗ್ರಹಿಸಲು ಸುಬ್ಬರಾವ್ ಪೈ ಅವರು ಹಾಕಿದ ಶ್ರಮವು ಅಷ್ಟಿಷ್ಟಲ್ಲ. ಅವರು ಎತ್ತಿನ ಗಾಡಿಯಲ್ಲಿ ಊರೂರು ಸುತ್ತಿ ತಲಾ 50 ರೂ. ಬೆಲೆಯ ಎರಡು ಸಾವಿರ ಷೇರು ಪತ್ರಗಳನ್ನು ಮಾರಿ ನಿಧಿಯನ್ನು ಸಂಗ್ರಹಿಸಿದರು! ಹೀಗೆ ಸುಬ್ಬರಾವ್ ಪೈಯವರ ಘನ ಅಧ್ಯಕ್ಷತೆಯಲ್ಲಿ 1906ರಲ್ಲಿ ಆರಂಭ ಆದ ಬ್ಯಾಂಕು ಇಂದು ದೇಶ, ವಿದೇಶಗಳಲ್ಲಿ ಅವರು ಮಾಡಿರುವ ಶ್ರೇಷ್ಠವಾದ ಕಾಯಕವನ್ನು ಸಾರುತ್ತಿದೆ. ಆ ಬ್ಯಾಂಕ್ ಸ್ಥಾಪನೆಯಿಂದ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಹೆಸರು ಶಾಶ್ವತ ಸ್ಥಾನ ಪಡೆಯಿತು. ಇಂದು ಕೆನರಾ ಬ್ಯಾಂಕ್ ಭಾರತದ ಅತೀ ಶ್ರೇಷ್ಠವಾದ ಬ್ಯಾಂಕುಗಳ ಸಾಲಿನಲ್ಲಿ ಸ್ಥಾನ ಪಡೆದಿದೆ.

ಅಮ್ಮೆಂಬಳ ಪೈ ಅವರು 1909ರ ಜುಲೈ 25ರಂದು ಕೇವಲ ತಮ್ಮ 57ನೆಯ ವಯಸ್ಸಿನಲ್ಲಿ ನಿಧನರಾದರು. ಆದರೆ ಅವರು ಸ್ಥಾಪನೆ ಮಾಡಿದ ಸಂಸ್ಥೆಗಳು ಮತ್ತು ಶಾಲೆಗಳು ಮುಖ್ಯವಾದ ಸಾಮಾಜಿಕ ಕೊಡುಗೆಯಾಗಿ ಉಳಿದವು. ಹಗಲಿರುಳು ಬಡಜನತೆಗಾಗಿ ಮಾಡಿದ ಕಾರ್ಯಗಳು ಅವರನ್ನು ಚಿರಂಜೀವಿ ಆಗಿ ಮಾಡಿದವು.

ಇದನ್ನೂ ಓದಿ: Raja Marga Column : ಅನ್ನಕ್ಕಾಗಿ ಕಲ್ಲು ಒಡೆಯೋ ಕೆಲಸ ಮಾಡ್ತಿದ್ದ ಆಕೆ ಈಗ ಅಮೆರಿಕನ್‌ ಕಂಪನಿ ಸಿಇಓ!

ಮೌಢ್ಯಗಳ ವಿರುದ್ಧ ಹೋರಾಟ

ಅಮ್ಮೆಂಬಳ ಸುಬ್ಬರಾವ್ ಪೈ ಅವರು ಆಗಿನ ಕಾಲಕ್ಕೆ ತುಂಬಾ ಅಡ್ವಾನ್ಸ್ ಆಗಿದ್ದರು. ತನ್ನದೇ ಸಮಾಜದ ಒಬ್ಬ ಮಹಿಳೆಯು ಅಂತರ್ಜಾತೀಯ ಮದುವೆಯ ಕಾರಣಕ್ಕೆ ಸಾಮಾಜಿಕವಾದ ಬಹಿಷ್ಕಾರಕ್ಕೆ ಒಳಗಾದಾಗ ತುಂಬಾ ನೊಂದರು. ಮುಂದೆ ಅದೇ ಮಹಿಳೆ ನಿಧನರಾದಾಗ ಅವರ ಕೊನೆಯ ಇಚ್ಛೆಯಂತೆ ಪೈಯವರೇ ಮುಂದೆ ನಿಂತು ತನ್ನ ಗೆಳೆಯರ ಸಹಕಾರ ಪಡೆದು ಹಿಂದೂ ಸಂಪ್ರದಾಯದ ಪ್ರಕಾರ ಅವರ ಅಂತಿಮ ವಿಧಿಗಳನ್ನು ಪೂರ್ತಿ ಮಾಡಿದರು. ಈ ಕಾರಣಕ್ಕೆ ಅವರು ಒಂದು ಪ್ರಬಲ ವರ್ಗದ ಜನರ ತೀವ್ರ ಪ್ರತಿರೋಧ ಎದುರಿಸಬೇಕಾಯಿತು. ಆದರೆ ಪೈಯವರು ಅವುಗಳಿಗೆ ಕ್ಯಾರೇ ಅನ್ನಲಿಲ್ಲ!

ಮಂಗಳೂರಿನಲ್ಲಿ ತನ್ನದೇ ಗೆಳೆಯರ ಬಳಗ ಕಟ್ಟಿಕೊಂಡು ಅಮ್ಮೆಂಬಳ ಪೈಯವರು ಮೌಢ್ಯಗಳ ವಿರುದ್ಧ ಭಾರೀ ಹೋರಾಟಗಳನ್ನು ನಡೆಸಿದರು. ಅವರೇ ಸ್ಥಾಪನೆ ಮಾಡಿದ ಕೆನರಾ ಬ್ಯಾಂಕಿನ ಉದ್ದೇಶಗಳಲ್ಲಿ ಮೌಢ್ಯಗಳ ವಿರುದ್ಧ ಹೋರಾಟ ಕೂಡ ಒಂದಾಗಿದೆ. ಶಿಕ್ಷಣ ಸಾಲಕ್ಕಾಗಿ ಬ್ಯಾಂಕ್ ಒಳಗೆ ಕಾಲಿಟ್ಟ ಯಾವುದೇ ಹುಡುಗಿಗೆ ಒಂದು ಕ್ಷಣ ಕೂಡ ಕಾಯಿಸದೆ ಸಾಲ ಕೊಡಬೇಕು ಎನ್ನುವುದು ಅವರು ಬ್ಯಾಂಕ್ ಅಧಿಕಾರಿಗಳಿಗೆ ಕೊಟ್ಟ ನಿರ್ದೇಶನ ಆಗಿತ್ತು. ಅದನ್ನು ಬ್ಯಾಂಕ್ ಇಂದು ಕೂಡ ಪಾಲಿಸುತ್ತಿದೆ.

ಅವರು ಸ್ಥಾಪನೆ ಮಾಡಿದ ಕೆನರಾ ಬ್ಯಾಂಕ್ ಮತ್ತು ಕೆನರಾ ವಿದ್ಯಾಸಂಸ್ಥೆಗಳು ಇರುವ ತನಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಹೆಸರು ಶಾಶ್ವತ ಆಗಿರುವುದು ಖಂಡಿತ.

Continue Reading

ದೇಶ

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

CBSE Board Exam 2024: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ಹಾಗೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಅನೇಕ ಬದಲಾವಣೆಗಳನ್ನು ಘೋಷಣೆ ಮಾಡಿದೆ.

VISTARANEWS.COM


on

CBSE Board Exam 2024 and many more changes proposed implemented in this year
Koo

ನವದೆಹಲಿ: ಸಂಬಂಧಿಸಿದ ಹಲವರ ಸಲಹೆಗಳ ಮೇರೆಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅನೇಕ ಬದಲಾವಣೆಗಳನ್ನು ಘೋಷಣೆ ಮಾಡಿದೆ(CBSE Board Exam 2024). ಮಕ್ಕಳನ್ನು, ಪೋಷಕರನ್ನು ಮತ್ತು ಒಟ್ಟಾರೆ ಅವರ ವ್ಯಕ್ತಿತ್ವ, ಶೈಕ್ಷಣಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ಹೊಸ ಹೊಸ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಡಿವಿಷನ್, ಡಿಸ್ಟಿಂಕ್ಷನ್ ಘೋಷಣೆ ಮಾಡದಿರುವುದು ಸೇರಿದಂತೆ ಅನೇಕ ಬದಲಾವಣೆಗಳನ್ನು ತರಲು ಉದ್ದೇಶಿಸಲಾಗಿದೆ. ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಕೈಗೊಂಡಿರುವ ಹೊಸ ಬದಲಾವಣೆಗಳು ವಿದ್ಯಾರ್ಥಿಗಳ (Students) ಮೇಲಿನ ಮಾನಸಿಕ ಒತ್ತಡವನ್ನು (Mental Stress) ಕಡಿಮೆ ಮಾಡಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಕೌಂಟೆನ್ಸಿಗೆ ಆನ್ಸರ್ ಬುಕ್ ಇಲ್ಲ

ಅಕೌಂಟೆನ್ಸಿ ವಿಷಯದಲ್ಲಿ ನೀಡಲಾಗುತ್ತಿದ್ದ ಉತ್ತರ ಪುಸ್ತಕಗಳನ್ನು ರದ್ದುಪಡಿಸಲು ಮಂಡಳಿ ನಿರ್ಧರಿಸಿದೆ. ಆನ್ಸರ್ ಬುಕ್‌ ಬದಲಿಗೆ ಟೇಬಲ್ಸ್ ಒದಗಿಸಲಾಗುತ್ತದೆ. 2024 ರಿಂದ 12 ನೇ ತರಗತಿಯಲ್ಲಿ ಇತರ ವಿಷಯಗಳಲ್ಲಿ ಒದಗಿಸಲಾದ ಸಾಮಾನ್ಯ ಸಾಲುಗಳ ಉತ್ತರ ಪುಸ್ತಕಗಳನ್ನು ಅಕೌಂಟೆನ್ಸಿ ವಿಷಯದಲ್ಲೂ ಒದಗಿಸಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಡಿವಿಷನ್, ಡಿಸ್ಟಿಂಕ್ಷನ್ ಅಥವಾ ಅಗ್ರೇಗೆಟ್ ಇಲ್ಲ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12ನೇ ತರಗಿತ ಪರೀಕ್ಷೆಗಳಿಗೆ ಇನ್ನು ಮುಂದೆ ಡಿವಿಷನ್, ಡಿಸ್ಟಿಂಕ್ಷ್ ಅಥವಾ ಅಗ್ರೇಗೆಟ್ ಘೋಷಣೆ ಮಾಡುವುದಿಲ್ಲ ಎಂದು ಹೇಳಿದೆ. ವಿದ್ಯಾರ್ಥಿಗಳ ಶೇಕಡಾವಾರು ಲೆಕ್ಕಾಚಾರದ ಮಾನದಂಡವನ್ನು ತಿಳಿಸಲು ಬಹು ಅಭ್ಯರ್ಥಿಗಳಿಂದ ಮನವಿಗಳನ್ನು ಸ್ವೀಕರಿಸಿದ ನಂತರ ಮಂಡಳಿಯು ಇದನ್ನು ಘೋಷಿಸಿತು. ಹಾಗಾಗಿ, ಇನ್ನು ಮುಂದೆ ಮಂಡಳಿಯು ವಿದ್ಯಾರ್ಥಿಗಳು ಪಡೆಯುವ ಶೇಕಡವಾರು ಅಂಕಗಳನ್ನು ಲೆಕ್ಕ ಹಾಕುವುದಾಗಲೀ, ಘೋಷಣೆ ಮಾಡುವುದಾಗಲೀ ಅಥವಾ ಮಾಹಿತಿ ನೀಡುವುದಾಗಲಿ ಮಾಡುವುದಿಲ್ಲ ಎಂದು ಹೇಳಿದೆ.

ಕ್ರೀಡೆ, ಒಲಂಪಿಯಾಡ್ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದ ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಕ್ರೀಡಾಕೂಟಗಳು ಮತ್ತು ಅಂತರರಾಷ್ಟ್ರೀಯ ಒಲಂಪಿಯಾಡ್‌ಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಮಂಡಳಿಯು ನಂತರದ ದಿನಾಂಕದಲ್ಲಿ ವಿಶೇಷ ಪರೀಕ್ಷೆಗಳನ್ನು ನಡೆಸುತ್ತದೆ ಎಂದು ಮಂಡಳಿ ಹೇಳಿದೆ. ಆದಾಗ್ಯೂ, ವಿಭಾಗ ಮತ್ತು ಪ್ರಾಯೋಗಿಕ ಪರೀಕ್ಷೆಗಳಿಗೆ ಯಾವುದೇ ಪ್ರತ್ಯೇಕ ಅಥವಾ ವಿಶೇಷ ಪರೀಕ್ಷಾಅವಕಾಶಗಳಿರುವುದಿಲ್ಲ.

ಸ್ಯಾಂಪಲ್ ಪ್ರಶ್ನೆ ಪತ್ರಿಕೆ ಮಾರ್ಕಿಂಗ್ ಸ್ಕೀಂ

10ನೇ ತರಗತಿಗೆ ಮತ್ತು 77ನೇ ತರಗತಿಗೆ 12ನೇ ತರಗತಿಗೆ ಒಟ್ಟು 60 ಮಾದರಿ ಪ್ರಶ್ನೆಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ cbseacademic.nic.inನಲ್ಲಿ ಪರಿಶೀಲಿಸಬಹುದು. ಪ್ರತಿ ಉತ್ತರಕ್ಕೆ ಅಂಕಗಳೊಂದಿಗೆ ಉತ್ತರಗಳು ಅಂಕ ಯೋಜನೆಯಲ್ಲಿ ಕಾಣ ಸಿಗುತ್ತವೆ.

ವರ್ಷಕ್ಕೆ ಎರಡು ಬಾರಿ ಬೋರ್ಡ್ ಎಕ್ಸಾಂ

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ಹೊಸ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಸಿದ್ಧವಾಗಿದೆ. 2024 ರ ಶೈಕ್ಷಣಿಕ ಅಧಿವೇಶನಕ್ಕಾಗಿ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಹಿಂದೆ ಘೋಷಿಸಿದರು. ಎನ್‌ಸಿಎಫ್ ಪ್ರಕಾರ, ಬೋರ್ಡ್ ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು. ಎರಡು ಪರೀಕ್ಷೆಗಳ ಪೈಕಿ ಉತ್ತಮ ಅಂಕಗಳ ರಿಸಲ್ಟ್ ಅನ್ನು ಉಳಿಸಿಕೊಳ್ಳಬಹುದಾಗಿದೆ. ತಾನು ಪರೀಕ್ಷೆ ಬರೆಯಲು ಸಜ್ಜಾಗಿದ್ದೇನೆ ಎಂಬ ವಿಷಯಕ್ಕೆ ಮಾತ್ರವೇ ಎಕ್ಸಾಂ ಕೂಡ ಬರೆಯಬಹುದು.

ಈ ಸುದ್ದಿಯನ್ನೂ ಓದಿ: ಸಿಬಿಎಸ್‌ಇ 10, 12 ತರಗತಿ ಪರೀಕ್ಷೆಗೆ ಡಿವಿಷನ್, ಡಿಸ್ಟಿಂಕ್ಷನ್ ಘೋಷಣೆ ಇಲ್ಲ!

Continue Reading

ಉದ್ಯೋಗ

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

Teachers Recruitment : ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Physical Education Teacher
Koo

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karnataka Live News : ಪಿಎಸ್‌ಐ ಪರೀಕ್ಷೆ ಮುಂದೂಡಿಕೆ; ಜ. 23ಕ್ಕೆ ಎಕ್ಸಾಂ ಎಂದ ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?

ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಇಲ್ಲಿ ಪಿಡಿಎಫ್‌ ಪ್ರತಿಯನ್ನು ಲಗತ್ತಿಸಿದ್ದು, ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಪಡೆದುಕೊಳ್ಳಬಹುದು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Continue Reading
Advertisement
cm siddaramaih respect captain pranjal
ಕರ್ನಾಟಕ32 mins ago

CM Siddaramaiah: ಹುತಾತ್ಮ ಯೋಧ ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ

Canara Bank Ammembala Subbarao Pai
ಅಂಕಣ39 mins ago

Raja Marga Column: ಹಿಡಿಯಕ್ಕಿ ಸಂಗ್ರಹಿಸಿ ಕೆನರಾ ಬ್ಯಾಂಕ್ ಕಟ್ಟಿದ ಅಮ್ಮೆಂಬಳ ಸುಬ್ಬರಾವ್ ಪೈ

CBSE Board Exam 2024 and many more changes proposed implemented in this year
ದೇಶ40 mins ago

ಸಿಬಿಎಸ್‌ಇ ಬೋರ್ಡ್‌ ಎಕ್ಸಾಂಗೆ ಘೋಷಿಸಿದ ಪ್ರಮುಖ ಬದಲಾವಣೆಗಳೇನು?

Saurav Gangly
ಕ್ರಿಕೆಟ್1 hour ago

Virat Kohli : ಕೊಹ್ಲಿಯನ್ನು ನಾಯಕತ್ವದಿಂದ ಇಳಿಸಿದ್ದಕ್ಕೆ ಕಾರಣ ತಿಳಿಸಿದ ಸೌರವ್​ ಗಂಗೂಲಿ

Physical Education Teacher
ಉದ್ಯೋಗ1 hour ago

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

sufi
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಸಯ್ಯಿದ್ ರಿಜ್ವಿ ಸ್ವತಃ ಹೇಳಿದ ಸೂಫಿಗಳ ನಿಜ ಕಥನ

Rain in Karnataka woman listening to music with an umbrella
ಕರ್ನಾಟಕ1 hour ago

Karnataka Weather : ಇಂದು – ನಾಳೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಲ್ಲಿ ಭಾರಿ ಮಳೆ; ಇದು ಮಿಚುಂಗ್ ಎಫೆಕ್ಟ್‌

Congress party directed kamal nath to resign Madhya Pradesh Congress president post
ದೇಶ2 hours ago

ಎಂಪಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಮಲ್ ನಾಥ್‌ಗೆ ಸೂಚನೆ!

Dasara Elephant Arjuna
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ದಸರಾ ಹೀರೊ ‘ಅರ್ಜುನ’ ದಾರುಣ ಸಾವು, ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ

Foods To Avoid Eating With Bananas
ಆರೋಗ್ಯ2 hours ago

Foods To Avoid Eating With Bananas: ತಿಳಿದಿರಲಿ, ಬಾಳೆಹಣ್ಣಿನ ಜೊತೆಗೆ ಈ ಆಹಾರಗಳನ್ನು ಸೇರಿಸಿ ತಿನ್ನಬಾರದು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ1 day ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ2 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌