5G auction| ಜಿಯೊದಿಂದ 14,000 ಕೋಟಿ ರೂ. ಠೇವಣಿ, ಅದಾನಿ 100 ಕೋಟಿ ಸಲ್ಲಿಕೆ - Vistara News

ಪ್ರಮುಖ ಸುದ್ದಿ

5G auction| ಜಿಯೊದಿಂದ 14,000 ಕೋಟಿ ರೂ. ಠೇವಣಿ, ಅದಾನಿ 100 ಕೋಟಿ ಸಲ್ಲಿಕೆ

ಮುಂಬರುವ 5ಜಿ ಸ್ಪೆಕ್ಟ್ರಮ್‌ ಹರಾಜಿನಲ್ಲಿ ರಿಲಯನ್ಸ್‌ ಜಿಯೊ ಇತರ ಎಲ್ಲ ಕಂಪನಿಗಳಿಗಿಂತ ಹೆಚ್ಚು ಪ್ರಾಬಲ್ಯ ಸಾಧಿಸುವ ನಿರೀಕ್ಷೆ ಉಂಟಾಗಿದೆ. ಅತಿ ಹೆಚ್ಚು ಠೇವಣಿ ಸಲ್ಲಿಸಿರುವುದು ಇದಕ್ಕೆ ಕಾರಣ.

VISTARANEWS.COM


on

5g
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬಹು ನಿರೀಕ್ಷೆಯ ೫ಜಿ ಸ್ಪೆಕ್ಟ್ರಮ್‌ ಹರಾಜಿಗೆ ಸಂಬಂಧಿಸಿ ರಿಲಯನ್ಸ್‌ ಜಿಯೊ, ೧೪,೦೦೦ ಕೋಟಿ ರೂ.ಗಳ ಭದ್ರತಾ ಠೇವಣಿಯನ್ನು ‌ (ಅರ್ನೆಸ್ಟ್ ಮನಿ ಡೆಪಾಸಿಟ್‌ – ಇಎಂಡಿ) ಜಮೆ ಮಾಡಿದೆ.

ಭಾರ್ತಿ ಏರ್‌ಟೆಲ್‌ ೫,೫೦೦ ಕೋಟಿ ರೂ, ಅದಾನಿ ಡೇಟಾ ೧೦೦ ಕೋಟಿ ರೂ, ವೊಡಾಫೋನ್‌ ೨,೨೦೦ ಕೋಟಿ ರೂ. ಠೇವಣಿಯನ್ನು ಸಲ್ಲಿಸಿವೆ. ಇಎಂಡಿ ಮೊತ್ತವು ಕಂಪನಿಯ ಬಿಡ್ಡಿಂಗ್‌ ಕಾರ್ಯತಂತ್ರ, ಅರ್ಹತೆ, ಸಾಮರ್ಥ್ಯವನ್ನು ಬಿಂಬಿಸುತ್ತದೆ. ದೂರಸಂಪರ್ಕ ಇಲಾಖೆಯು ಈ ವಿಷಯವನ್ನು ತಿಳಿಸಿದೆ.

ಜುಲೈ ೨೬ರಿಂದ ೫ಜಿ ಸ್ಪೆಕ್ಟ್ರಮ್‌ ಹರಾಜು ನಡೆಯಲಿದೆ. ಇಎಂಡಿ ಆಧಾರದಲ್ಲಿ ಜಿಯೊ ಅತಿ ಹೆಚ್ಚು ಅರ್ಹತಾ ಅಂಕಗಳನ್ನು (೧೫೯೮೩೦) ಗಳಿಸಿದೆ. ಏರ್‌ಟೆಲ್‌ ೬೬೩೩೦ ಅಂಕಗಳನ್ನು ಪಡೆದಿದೆ. ವೊಡಾಫೋನ್‌ ಐಡಿಯಾ ೨೯೩೭೦ ಮತ್ತು ಅದಾನಿ ಗ್ರೂಪ್‌ ೧೬೫೦ ಅಂಕಗಳನ್ನು ಗಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Rain News: ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಅದೇ ರೀತಿ ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

VISTARANEWS.COM


on

Rain News
ಕೊಪ್ಪಳ ಜಿಲ್ಲೆಯ ಕಿನ್ನಾಳ ರಸ್ತೆ ಜಲಾವೃತವಾಗಿರುವುದು.
Koo

ವಿಜಯನಗರ/ಕೊಪ್ಪಳ: ರಾಜ್ಯದ ವಿಜಯನಗರ, ಕೊಪ್ಪಳ ಜಿಲ್ಲೆಯ ಹಲವೆಡೆ ಬುಧವಾರ ಮಳೆ (Rain News) ಆರ್ಭಟಿಸಿದ್ದು, ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ರಸ್ತೆಗಳು ಕೆರೆಗಳಂತೆ ಬದಲಾಗಿದ್ದವು. ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆ ಸೇರಿ ಸುತ್ತಮುತ್ತಲಿನ ಹಂಪಿ, ಕಮಲಾಪುರ, ಚಿತ್ತವಾಡಗಿ, ಶಾನಭಾಗ ಸರ್ಕಲ್ ಸೇರಿ ಹಲವು ಕಡೆ ನಿರಂತರ ಮಳೆ ಸುರಿದಿದ್ದರಿಂದ ಬೈಕ್ ಸವಾರರು ಹೈರಾಣಾದರು. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಕೂಡ್ಲಿಗಿ ತಾಲೂಕಿನಲ್ಲಿ ಹಳ್ಳದಂತಾದ ರಸ್ತೆಗಳು

ವಿಜಯನಗರ ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಮುಂದುವರಿದಿದ್ದು, ಕೂಡ್ಲಿಗಿ ತಾಲೂಕಿನ ಕೆಲವು ಗ್ರಾಮಗಳ ರಸ್ತೆಗಳು ಕಡೆ ಹಳ್ಳದಂತಾಗಿ ಬದಲಾಗಿದ್ದವು. ಕೂಡ್ಲಿಗಿ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ಹಳ್ಳದಂತೆ ಮಳೆ ನೀರು ಹರಿಯಿತು. ಇದರಿಂದ ದೊಡ್ಡ ಪ್ರಮಾಣದಲ್ಲಿ ಗ್ರಾಮದೊಳಕ್ಕೆ ನೀರು ನುಗಿದ್ದರಿಂದ ಜನ ಪರದಾಡುವಂತಾಗಿದೆ. ಇನ್ನು ಹೊಸಪೇಟೆಯ ರಾಣಿಪೇಟೆಯಲ್ಲಿ ಕೆಲವು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.

ಹೊಸಪೇಟೆಯಲ್ಲಿ ಭಾರಿ ಮಳೆ: ಮಳೆಯಿಂದಾಗಿ ಹೊಸಪೇಟೆಯ ಕೆಲವು ರಸ್ತೆಗಳು ಕೆರೆಯಂತಾಗಿದ್ದವು. ಕಾಲೇಜು ರಸ್ತೆ, ನೂರು ಹಾಸಿಗೆ ಆಸ್ಪತ್ರೆ ರಸ್ತೆ ಸೇರಿದಂತೆ ಕೆಲವು ಕಡೆ ಹಳ್ಳದಂತೆ ಮಳೆ ನೀರು ಹರಿಯಿತು. ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬೈಕ್‌ಗಳು ಅರ್ಧಕ್ಕರ್ಧ ಮುಳುಗಿದವು. ಮಳೆ ನೀರು ರಸ್ತೆ ಮೇಲೆಯೇ ನಿಂತಿದ್ದರಿಂದ ವಾಹನ ಸವಾರರು ಹೈರಾಣಾದರು.

ಕೊಪ್ಪಳ ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕಳೆದ ಎರಡು ದಿನಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಭರ್ಜರಿ ಮಳೆಗೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೊಪ್ಪಳ ನಗರದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಜಿಲ್ಲೆಯಾದ್ಯಂತ ನಿರಂತರ ಮಳೆಗೆ ರಸ್ತೆಗಳು ಹಳ್ಳಗಳಾಗಿ ಪರಿವರ್ತನೆಯಾಗಿವೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ಹಾಗೂ ಚರಂಡಿ ನೀರು ನುಗ್ಗುತ್ತಿರುವುದರಿಂದ ಜನರಿಗೆ ತೊಂದರೆಯಾಗಿದೆ.

ಇದನ್ನೂ ಓದಿ | Karnataka Weather : ಕರಾವಳಿ ಸೇರಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಮಳೆ ಜತೆಗೆ ರಭಸವಾಗಿ ಬೀಸಲಿದೆ ಗಾಳಿ

ಜಿಲ್ಲೆಯ ಕಿನ್ನಾಳದಲ್ಲಿ ರಾಜಕಾಲುವೆ ತುಂಬಿ ಹರಿದಿದ್ದರಿಂದ ರಸ್ತೆ ತುಂಬೆಲ್ಲಾ ನೀರು ಆವರಿಸಿತ್ತು. ಇದರಿಂದ ಮಂಗಳೂರು, ಕಿನ್ನಾಳ ಗ್ರಾಮಗಳಿಗೆ ತೆರಳಲು ಜನರ ಪರದಾಡಿದರು. ಪ್ರಗತಿ ನಗರ, ಕಲ್ಯಾಣ ನಗರಗಳಿಗೆ ತೆರಳಲೂ ಸಹ ಜನರ ಪರದಾಡುವಂತಾಯಿತು.

Continue Reading

ದೇಶ

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Narendra Modi: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಹಾಗೂ ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಇದೇ ವೇಳೆ, ಮೋದಿ ಅವರು ಚಿರಂಜೀವಿ ಹಾಗೂ ಪವನ್‌ ಕಲ್ಯಾಣ್‌ ಜತೆಗೂಡಿ ಒಗ್ಗಟ್ಟು ಪ್ರದರ್ಶಿಸಿದರು.

VISTARANEWS.COM


on

Narendra Modi
Koo

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಟಿಡಿಪಿಯ ಎನ್‌.ಚಂದ್ರಬಾಬು ನಾಯ್ಡು (N Chandrababu Naidu), ಉಪ ಮುಖ್ಯಮಂತ್ರಿಯಾಗಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ (Pawan Kalyan) ಅವರು ಬುಧವಾರ (ಜೂನ್‌ 12) ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೂ ಭಾಗಿಯಾದರು. ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರು ವೇದಿಕೆ ಮೇಲೆ ಮೆಗಾ ಸ್ಟಾರ್‌ ಚಿರಂಜೀವಿ, ಪವರ್‌ ಸ್ಟಾರ್‌ ಪವನ್‌ ಕಲ್ಯಾಣ್‌ ಅವರ ಕೈ ಹಿಡಿದು, ಅವರ ಕೈಗಳನ್ನು ಒಮ್ಮೆಲ್ಲೆ ಎತ್ತಿ ಹಿಡಿಯುವ ಮೂಲಕ ಗಮನ ಸೆಳೆದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ವಿಜಯವಾಡದಲ್ಲಿರುವ ಮೇಧಾ ಐಟಿ ಪಾರ್ಕ್‌ ಬಳಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಎನ್‌.ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ ಮೋದಿ ಅವರು ನಾಯ್ಡು ಅವರಿಗೆ ಶುಭ ಕೋರಿದರು. ನಂತರ ಪವನ್‌ ಕಲ್ಯಾಣ್‌ ಅವರು ತಮ್ಮ ಸಹೋದರ ಚಿರಂಜೀವಿ ಕೂಡ ಇಲ್ಲೇ ಇದ್ದಾರೆ ಎಂದು ಮೋದಿ ಅವರಿಗೆ ಹೇಳಿದರು. ಆಗ ಮೋದಿ ಅವರು ಚಿರಂಜೀವಿ ಬಳಿ ಹೋಗಿ, ಅವರ ಹಾಗೂ ಪವನ್‌ ಕಲ್ಯಾಣ್‌ ಕೈ ಹಿಡಿದು ವೇದಿಕೆಗೆ ಕರೆತಂದರು. ಬಳಿಕ ಮೂವರೂ ಕೈ ಎತ್ತಿದರು. ಆ ಮೂಲಕ ಒಗ್ಗಟ್ಟಿನ ಬಲ ಪ್ರದರ್ಶನ ಮಾಡಿದರು.

ಇದರ ಮಧ್ಯೆಯೇ ಚಂದ್ರಬಾಬು ನಾಯ್ಡು ಅವರು ನರೇಂದ್ರ ಮೋದಿ ಅವರ ಕಾಲು ಮುಟ್ಟಿ ನಮಸ್ಕರಿಸಲು ಮುಂದಾದರು. ಚಂದ್ರಬಾಬು ನಾಯ್ಡು ಅವರು ನರೇಂದ್ರ ಮೋದಿ ಅವರಿಗಿಂತ ಒಂದು ವರ್ಷ ದೊಡ್ಡವರು. ಹೀಗಿದ್ದರೂ ಮೋದಿ ಅವರ ಮೇಲಿನ ಗೌರವದಿಂದಾಗಿ ಅವರ ಕಾಲು ಮುಟ್ಟಿ ನಮಸ್ಕರಿಸಲು ಚಂದ್ರಬಾಬು ನಾಯ್ಡು ಮುಂದಾದರು. ಆದರೆ, ಇದಕ್ಕೆ ನರೇಂದ್ರ ಮೋದಿ ಅವರು ಅವಕಾಶ ಕೊಡದೆ, ಚಂದ್ರಬಾಬು ನಾಯ್ಡು ಅವರನ್ನು ತಬ್ಬಿಕೊಂಡು, ನೂತನ ಸರ್ಕಾರಕ್ಕೆ ಶುಭ ಹಾರೈಸಿದರು.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್‌ ಶಾ, ನಿತಿನ್‌ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ನಟರಾದ ಚಿರಂಜೀವಿ, ರಜನಿಕಾಂತ್‌, ಮಾಜಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ನಾಲ್ಕನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಚಂದ್ರಬಾಬು ನಾಯ್ಡು ಅವರು ದಾಖಲೆ ಬರೆದರು.

ಇದನ್ನೂ ಓದಿ: ಒಡಿಶಾಗೆ ಬಿಜೆಪಿಯ ಮೋಹನ್‌ ಚರಣ್‌ ಮಾಝಿ, ಅರುಣಾಚಲಕ್ಕೆ ಪೆಮಾ ಖಂಡು ಸಿಎಂ; ಖಂಡು ನಾಳೆ ಪದಗ್ರಹಣ

Continue Reading

ದೇಶ

Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

Terror attack: ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಬಸ್ ಮೇಲೆ ಭಯೋತ್ಪಾಕರು ದಾಳಿ ನಡೆಸಿ ಘಟನೆಯಲ್ಲಿ 9 ಮಂದಿ ಹಿಂದೂ ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದರು. ಬಸ್ ಚಾಲಕ ತನ್ನ ಪ್ರಾಣವನ್ನು ತ್ಯಾಗ ಮಾಡಿ ಪ್ರಯಾಣಿಕರ ಜೀವವನ್ನು ಉಳಿಸಿದ ಹೃದಯಸ್ಪರ್ಶಿ ಸನ್ನಿವೇಶದ ಬಗ್ಗೆ ಬಸ್‌ ಮಾಲೀಕ ಈಗ ವಿವರವಾದ ಮಾಹಿತಿ ನೀಡಿದ್ದಾರೆ.

VISTARANEWS.COM


on

Terror attack
Koo

ಜಮ್ಮು ಮತ್ತು ಕಾಶ್ಮೀರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು (Terror attack) ದಾಳಿ ನಡೆಸಿದ ಘಟನೆಯನ್ನು ನಾವು ಹಲವು ಬಾರಿ ಕೇಳಿದ್ದೇವೆ ಮತ್ತು ಟಿವಿಯಲ್ಲಿ ಕೂಡ ನೋಡುತ್ತಿರುತ್ತೇವೆ. ಅಲ್ಲಿನ ಜನರ ಜೀವನ ಬಹಳ ಶೋಚನೀಯವಾಗಿದೆ. ತಮ್ಮ ಮೇಲೆ ಯಾವಾಗ ಸಂಕಷ್ಟ ಬಂದು ಎರಗುತ್ತದೆಯೋ ಎಂಬ ಜೀವಭಯದಲ್ಲೇ ಅಲ್ಲಿನ ಜನ ಇರುತ್ತಾರೆ. ಇಂಥದೊಂದು ಘಟನೆ ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ನಡೆದಿದೆ. ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ ಮೇಲೆ ಭಯೋತ್ಪಾಕರು ಭಾನುವಾರ ಗುಂಡಿನ ದಾಳಿ ನಡೆಸಿದ್ದು, ಇದರ ಪರಿಣಾಮ ಬಸ್ ಆಳವಾದ ಕಮರಿಗೆ ಬಿದ್ದ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ನಡೆದಿದೆ. ಈ ವೇಳೆ ಉಗ್ರರ ಗುಂಡೇಟು ಬಿದ್ದರೂ ವಿಚಲಿತನಾಗದೆ ಬಸ್ ನಿಲ್ಲಿಸದೆ ಯಾತ್ರಿಕರ ಪ್ರಾಣ ಉಳಿಸಿ ತನ್ನ ಪ್ರಾಣ ತ್ಯಾಗ ಮಾಡಿರುವುದು ದೇಶದೆಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಶಿವಖೋರಿ ದೇವಸ್ಥಾನದಿಂದ ಪೋನಿ ಪ್ರದೇಶದ ಟೆಯಾರ್ತ್ ಗ್ರಾಮದ ಬಳಿಯ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ತೆರಳುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಹೊಂಚು ಹಾಕಿ ಗುಂಡು ಹಾರಿಸಿದ್ದರು. ಇದರ ಪರಿಣಾಮ ಒಂಬತ್ತು ಜನರು ಸಾವನಪ್ಪಿದ್ದು, 42 ಮಂದಿ ಗಾಯಗೊಂಡಿದ್ದರು. ಗುಂಡೇಟಿನ ನಡುವೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿತ್ತು.

ಈ ಕುರಿತು ಬಸ್ ಕಂಪನಿಯ ಮಾಲೀಕ ರಂಜಿತ್ ಸಿಂಗ್ ಈಗ ವಿವರವಾಗಿ ಮಾತನಾಡಿದ್ದು, “ಸಂಜೆ 5 ಗಂಟೆಗೆ ನಮ್ಮ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ನಮಗೆ ಕರೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ಅದು ಭಯೋತ್ಪಾದಕರ ದಾಳಿ ಎಂದು ತಿಳಿದು ಬಂತು. ಭಯೋತ್ಪಾದಕ ಬಸ್ ಹತ್ತಿ ಪ್ರಯಾಣಿಕರನ್ನು ಕೆಳಗಿಳಿಸುವಂತೆ ಚಾಲಕನಿಗೆ ಹೇಳಿದ. ಆಗ ಆ ವ್ಯಕ್ತಿ ಭಯೋತ್ಪಾದಕ ಎಂದು ತಿಳಿದ ಚಾಲಕ ಪ್ರಯಾಣಿಕರನ್ನು ಇಳಿಸಲು ನಿರಾಕರಿಸಿ ವೇಗವಾಗಿ ಬಸ್ ಓಡಿಸಿದ. ಆಗ ಭಯೋತ್ಪಾದಕ ಚಾಲಕನ ಮೇಲೆ ಗುಂಡಿ ಹಾರಿಸಿದ. ನಂತರ ಕಂಡಕ್ಟರ್ ಸ್ಟೀರಿಂಗ್ ಹಿಡಿದುಕೊಂಡಾಗ ಆತನ ಮೇಲೂ ಗುಂಡು ಹಾರಿಸಲಾಯಿತು. ಇದರಿಂದ ಬಸ್ ಆಯತಪ್ಪಿ ಕಮರಿಗೆ ಬಿತ್ತು. ಚಾಲಕ ಬುದ್ಧಿವಂತಿಕೆ ತೋರಿಸದಿದ್ದರೆ ಬಸ್‌ನಲ್ಲಿದ್ದ ಯಾವ ಪ್ರಯಾಣಿಕರೂ ಬದುಕಿರುತ್ತಿರಲಿಲ್ಲ. ಯಾಕೆಂದರೆ ಅವರು ಬಸ್‌ಗೆ ಬೆಂಕಿ ಹಚ್ಚುವ ಸಾಧ್ಯತೆ ಇತ್ತು. ಚಾಲಕನ ಬುದ್ಧಿವಂತಿಕೆಯಿಂದ 40 ಮಂದಿ ಪ್ರಯಾಣಿಕರ ಪ್ರಾಣ ಉಳಿದಿದೆ” ಎಂದು ಹೇಳಿದರು.

ಈ ದಾಳಿಯ ಹಿಂದೆ ಭಯೋತ್ಪಾದಕರ ಗುಂಪು ಲಷ್ಕರ್-ಎ-ತೊಯ್ಬಾ ಕೈವಾಡವಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ದಾಳಿಯ ಬಗ್ಗೆ ತನಿಖೆ ನಡೆಸಲು ಪೊಲೀಸರು ಹನ್ನೊಂದು ತಂಡಗಳನ್ನು ರಚಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆರು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

ಬಸ್ ತಿರುವಿನಲ್ಲಿ ಬಂದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಇದು ರಾಜೌರಿ ಮತ್ತು ಪೂಂಚ್ ದಾಳಿಗಳ ಮಾದರಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಭಯೋತ್ಪಾದಕರು ನಿಧಾನಗತಿಯಲ್ಲಿ ಬರುವ ವಾಹನಗಳನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುತ್ತಾರೆ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

Prajwal Revanna Case: ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಹೀಗಾಗಿ ತನಿಖಾಧಿಕಾರಿಗಳ ಮನವಿಯನ್ನು ಕೋರ್ಟ್‌ ಪುರಸ್ಕರಿಸಿ, ಮಾಜಿ ಸಂಸದನನ್ನು ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಆತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಮತ್ತೆ 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಮನವಿಯನ್ನು ಪುರಸ್ಕರಿಸಿರುವ ಕೋರ್ಟ್, ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಸೂಚಿಸಿದೆ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಇದೀಗ ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲಿನಲ್ಲಿ ಎರಡು ದಿನ ಕಾಲ ಕಳೆದಿದ್ದರು. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು. ಮಂಗಳವಾರ ರಾತ್ರಿ ಜೈಲಿನಲ್ಲಿ ನೀಡಿದ್ದ ಮುದ್ದೆ, ಚಪಾತಿ, ಅನ್ನ, ಸಾಂಬರ್‌, ಊಟ ಮಾಡಿದ್ದ ಪ್ರಜ್ವಲ್, ಬೇಗನೇ ನಿದ್ರೆಗೆ ಜಾರಿದ್ದರು. ಇಂದು ಬೆಳಗ್ಗೆ 5 ಗಂಟೆಗೆ ನಿದ್ದೆಯಿಂದ ಎದ್ದು ವಾಕಿಂಗ್ ಮಾಡಿದ್ದರು.

ಕೆಲ ಹೊತ್ತು ವಾಕಿಂಗ್ ಮಾಡಿ ಜೈಲ್ ಸಿಬ್ಬಂದಿ ಕೊಟ್ಟ ಕಾಫಿ ಕುಡಿದ ಬಳಿಕ ದಿನ ಪತ್ರಿಕೆಗಳನ್ನು ಓದಿ ಹೊರಗಿನ ವಿದ್ಯಮಾನಗಳ ಕಡೆ ಕಣ್ಣಾಡಿಸಿದರು. ಮತ್ತೆ ಜೈಲಿನ ಮೆನುವಿನಂತೆ ಪ್ರಜ್ವಲ್‌ಗೆ ಅವಲಕ್ಕಿ ಉಪ್ಪಿಟ್ಟು ನೀಡಲಾಗಿದೆ. ಹೊರಗೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದ ಮಾಜಿ ಸಂಸದನಿಗೆ ಜೈಲುವಾಸದಲ್ಲಿ ಚಡಪಡಿಸುತ್ತಿರರುವುದು ಕಂಡುಬಂದಿದೆ.

ಇದನ್ನೂ ಓದಿ | Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಜಾಮೀನು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ (Rave Party) ತೆಲುಗು ನಟಿ ಹೇಮಾಗೆ (Telugu actress Hema) ಜಾಮೀನು ಮಂಜೂರಾಗಿದೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ತೆಲುಗು ನಟಿ ಹೇಮಾಗೆ ಬೇಲ್ ಸಿಕ್ಕಿದೂ ಇಂದು ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಇದನ್ನೂ ಓದಿ | Murder Case: 300 ಕೋಟಿಯ ಆಸ್ತಿಗಾಗಿ ಮಾವನ ಕೊಲೆಗೆ ಸುಪಾರಿ ಕೊಟ್ಟ ಸೊಸೆ!

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

Continue Reading
Advertisement
ICC T20 Rankings
ಕ್ರೀಡೆ35 mins ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Rain News
ಪ್ರಮುಖ ಸುದ್ದಿ46 mins ago

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Chellagurki Shri Yerrithathanavara Maharathotsava in Ballari
ಧಾರ್ಮಿಕ51 mins ago

Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

Narendra Modi
ದೇಶ57 mins ago

Narendra Modi: ಆಂಧ್ರದಲ್ಲಿ ಮೆಗಾ ಸ್ಟಾರ್‌, ಪವರ್‌ ಸ್ಟಾರ್‌ ಜತೆ ‘ಪೊಲಿಟಿಕಲ್‌ ಸ್ಟಾರ್’‌ ಮೋದಿ; Video ನೋಡಿ

Terror attack
ದೇಶ1 hour ago

Terror attack : ಉಗ್ರರ ದಾಳಿ; ತನ್ನ ಪ್ರಾಣ ತ್ಯಾಗ ಮಾಡಿ ಪ್ರಯಾಣಿಕರ ಜೀವ ಉಳಿಸಿದ ಬಸ್‌ ಚಾಲಕ

Uttara Kannada MP Vishweshwara hegde kageri spoke in Thanksgiving ceremony for bjp party workers in banavasi
ಉತ್ತರ ಕನ್ನಡ1 hour ago

Uttara Kannada News: ಉ.ಕ ಜಿಲ್ಲೆ ಬಿಜೆಪಿ ಕಾರ್ಯಕರ್ತರ ಕ್ಷೇತ್ರ ಎಂಬುದು ಮತ್ತೊಮ್ಮೆ ಸಾಬೀತು: ಕಾಗೇರಿ

chandrababu naidu takes oath as andhra chief minister mlc TA Sharavana Congratulated
ಬೆಂಗಳೂರು1 hour ago

TA Sharavana: ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ; ಶರವಣ ಅಭಿನಂದನೆ

Hindu Jana Jagruti Samiti demands immediate ban on Maharaj movie
ದೇಶ1 hour ago

Maharaj Movie: `ಮಹಾರಾಜ್’ ಚಲನಚಿತ್ರ ನಿಷೇಧಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Minister Dr.Sharanaprakash patil spoke in World Homeopathy Day Celebration and Seminar Programme in Bengaluru
ಕರ್ನಾಟಕ1 hour ago

Bengaluru News: ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟುನಿಟ್ಟಿನ ಕ್ರಮ: ಶರಣಪ್ರಕಾಶ್‌ ಪಾಟೀಲ್‌

Opposition party leader r ashok visit mangalore hospital
ಕರ್ನಾಟಕ1 hour ago

R Ashok: ಗೂಂಡಾಗಳ ಕೈಗೆ ರಾಜ್ಯ ನೀಡಿದ ಕಾಂಗ್ರೆಸ್‌ ಸರ್ಕಾರ: ಆರ್‌. ಅಶೋಕ್‌ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ1 day ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ1 day ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ1 day ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ1 day ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌