ವಿಸ್ತಾರ Explainer | ಮೋದಿ ನೋಟು ಬ್ಯಾನ್‌ ಮಾಡಿ 6 ವರ್ಷ; ಇದು ಪಾಸಾ, ಫೇಲಾ? - Vistara News

EXPLAINER

ವಿಸ್ತಾರ Explainer | ಮೋದಿ ನೋಟು ಬ್ಯಾನ್‌ ಮಾಡಿ 6 ವರ್ಷ; ಇದು ಪಾಸಾ, ಫೇಲಾ?

ನೋಟು ಅಮಾನ್ಯತೆಗೆ 6 ವರ್ಷ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಇದರ ಸಾಧಕ-ಬಾಧಕಗಳ ಸುತ್ತ ಚರ್ಚೆ ನಡೆಯುತ್ತಿದೆ. (ವಿಸ್ತಾರ Explainer) ವಿವರ ಇಲ್ಲಿದೆ.

VISTARANEWS.COM


on

demonetisation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈಗಲೂ ಈ ಪ್ರಶ್ನೆ ಆಗಿಂದಾಗ್ಗೆ ಚರ್ಚೆಯಾಗುತ್ತಲೇ ಇದೆ!

ಹೌದು, ನಿಮಗೆ ನೆನಪಿರಬಹುದು! 2016ರ ನವೆಂಬರ್‌ 8ರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು 500 ರೂ. ಹಾಗೂ 1000 ರೂ. ನೋಟುಗಳನ್ನು ಅಮಾನ್ಯಗೊಳಿಸುವ ಐತಿಹಾಸಿಕ ಘೋಷಣೆಯನ್ನು ಮಾಡಿದ್ದರು! ಮೊದಲು ಹೊಸ 2,000 ರೂ.ಗಳ ನೋಟನ್ನು ಬಿಡುಗಡೆಗೊಳಿಸಲಾಗಿತ್ತು. ಬಳಿಕ ಹೊಸ 500 ರೂ. ಹಾಗೂ 200 ರೂ. ಮುಖಬೆಲೆಯ ನೋಟನ್ನೂ (ವಿಸ್ತಾರ Explainer) ಪರಿಚಯಿಸಲಾಯಿತು.

ಕೆಲವು ಕ್ಷಣಗಳ ಕಾಲ ಜನತೆಗೆ ಇದನ್ನು ಅರಗಿಸಿಕೊಳ್ಳಲು ಕಷ್ಟವಾಗಿತ್ತು. ಅಂದು ಮಧ್ಯ ರಾತ್ರಿಯಿಂದಲೇ ಜನ ಎಟಿಎಂ ಮುಂದೆ ಸರದಿಯಲ್ಲಿ ನಿಂತು ನಗದು ಪಡೆಯಲು ಗಂಟೆಗಟ್ಟಲೆ ಕಾದರು. ವಾರಗಟ್ಟಲೆ ಕಾಲ ಎಟಿಎಂಗಳಲ್ಲಿ ನಗದಿಗೋಸ್ಕರ ಹಾಹಾಕಾರ ಉಂಟಾಯಿತು. ಆನ್‌ಲೈನ್‌ ಮೂಲಕ ಹಣಕಾಸು ವರ್ಗಾವಣೆಗೆ ಅವಕಾಶ ಇದ್ದರೂ, ಆಗ ಈಗಿನಷ್ಟು ಯುಪಿಐ ಪಾವತಿಗಳು ನಡೆಯುತ್ತಿರಲಿಲ್ಲ. ಹೀಗಾಗಿ ಜನತೆಗೆ ತಿಂಗಳುಗಟ್ಟಲೆ ಸಮಸ್ಯೆಯಾಗಿತ್ತು. ದೇಶವಿಡೀ ಜನಜೀವನ ಸ್ತಬ್ಧವಾದಂಥ ಸನ್ನಿವೇಶ. ಬ್ಯಾಂಕ್‌ಗಳಲ್ಲಿಯೂ ಅಮಾನ್ಯಗೊಂಡ ನೋಟುಗಳ ವಿನಿಮಯಕ್ಕೆ ಭಾರಿ ಸರದಿಗಳು ಸಾಮಾನ್ಯವಾಗಿತ್ತು. ನಗರ-ಪಟ್ಟಣಗಳಲ್ಲಿನ ಎಟಿಎಂಗಳಲ್ಲಿ ನಗದು ಬರಿದಾಗಿ, ನೋ ಕ್ಯಾಶ್‌ ಬೋರ್ಡ್‌ಗಳನ್ನು ಕಂಡು ಜನ ಪರದಾಡಿದ್ದರು. ಆದರೂ, ಕಪ್ಪುಹಣದ ವಿರುದ್ಧದ ಹೋರಾಟಕ್ಕೆ ಜನ ಬೆಂಬಲವಿತ್ತು. ಹೀಗಾಗಿ ಎಲ್ಲೂ ದಂಗೆಯಾಗಲಿಲ್ಲ.

ಪರ-ವಿರೋಧ: ಕಪ್ಪುಹಣ ಹಾಗೂ ನಕಲಿ ನೋಟುಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಎಂದು ಬೆಂಬಲಿಸಿದವರು ಒಂದೆಡೆಯಾದರೆ, ಮತ್ತೊಂದು ಕಡೆ ಇದರಿಂದ ಏನೂ ಪ್ರಯೋಜನವಾಗಿಲ್ಲ, ಇದೊಂದು ಘೋರ ಪ್ರಮಾದ ಎನ್ನುವ ಮಂದಿ ಮತ್ತೊಂದು ಕಡೆ! ಹಾಗಾದರೆ ಯಾವುದು ಸರಿ- ಯಾವುದು ತಪ್ಪು? ಈ ಚರ್ಚೆ ಡಿಮಾನಿಟೈಸೇಶನ್‌ ಆಗಿ ಆರು ವರ್ಷಗಳ ಬಳಿಕವೂ ನಡೆಯುತ್ತಿದೆ.

ಸರಿಯೋ-ತಪ್ಪೊ ಗೊಂದಲ

ನೋಟು ಅಮಾನ್ಯತೆಯ ಘೋಷಿಸಿದ 2016ರ ನವೆಂಬರ್‌ 8 ಅನ್ನು ಕಪ್ಪು ಹಣದ ವಿರುದ್ಧ ಗದಾ ಪ್ರಹಾರ ಮಾಡಿದ ದಿನ ಎಂದು ಬಣ್ಣಿಸಲಾಗುತ್ತಿದೆ. ಮತ್ತೊಂದು ಕಡೆ ಕಪ್ಪು ದಿನ ಎಂದೂ ಖಂಡಿಸಲಾಗುತ್ತಿದೆ. ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಏನೆಂದಿದ್ದರು? ಅದರ ಸಾರಾಂಶ ಇಂತಿದೆ-

ದೀಪಾವಳಿಯ ಈ ಶುಭ ಸಂದರ್ಭದಲ್ಲಿ ಕೆಲವು ಮಹತ್ವದ ನಿರ್ಣಯಗಳ ಬಗ್ಗೆ ನಾನು ಮಾತನಾಡಲು ಬಯಸುವೆ. ನಿಮ್ಮಲ್ಲಿ ವಿಶೇಷ ಮನವಿ ಮಾಡುತ್ತಿದ್ದೇನೆ. 2014ರ ಮೇ 2014ರ ವೇಳೆಗೆ ದೇಶದ ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂಬುದನ್ನು ನೀವು ಸ್ಮರಿಸಿಕೊಳ್ಳಬಹುದು. ಬ್ರಿಕ್ಸ್‌ (BRICS) ದೇಶಗಳ ಪೈಕಿ ಭಾರತದ ಪರಿಸ್ಥಿತಿ ಅಭದ್ರವಾಗಿತ್ತು. ಬಳಿಕ ಎರಡು ವರ್ಷಗಳ ಬರಗಾಲ ಬಂತು. ಹೀಗಿದ್ದರೂ ಕಳೆದ ಎರಡೂ ವರ್ಷಗಳಲ್ಲಿ ಭಾರತವು ಜಾಗತಿಕ ಆರ್ಥಿಕತೆಯಲ್ಲಿ ಮಹತ್ವದ ಸ್ಥಾನ ಗಳಿಸಿದೆ. ನಾನಿದನ್ನು ಹೇಳುತ್ತಿಲ್ಲ, ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಮತ್ತು ವಿಶ್ವಬ್ಯಾಂಕ್‌ ಹೇಳುತ್ತಿವೆ. ಕಳೆದ ದಶಕಗಳಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣದಿಂದ ಆರ್ಥಿಕತೆಗೆ ಭಾರಿ ಹಾನಿ ಸಂಭವಿಸಿದೆ. ಭ್ರಷ್ಟಾಚಾರ ನಿಗ್ರಹಿಸಲು ಹಲವು ಕ್ರಮ ಕೈಗೊಂಡಿದ್ದರೂ, ಮತ್ತಷ್ಟು ಕಠಿಣ ಕ್ರಮಗಳ ಅಗತ್ಯ ಇದೆ. ಭ್ರಷ್ಟಾಚಾರಿಗಳಿಂದಾಗಿ ಬಡವರಿಗೆ ಸಿಗಬೇಕಾದ ಸವಲತ್ತುಗಳು ಸಿಗುತ್ತಿಲ್ಲ. ಸೋದರ, ಸೋದರಿಯರೇ, ಭ್ರಷ್ಟಾಚಾರ ಮತ್ತು ಕಪ್ಪುಹಣದ ಹಿಡಿತವನ್ನು ಬಿಡಿಸಲು ನಾವು ಇಂದು ಮಧ್ಯ ರಾತ್ರಿಯಿಂದ 500 ರೂ. ಮತ್ತು 1000 ರೂ. ನೋಟುಗಳ ಮಾನ್ಯತೆಯನ್ನು ರದ್ದುಪಡಿಸುತ್ತಿದ್ದೇವೆ. ದೇಶ ದ್ರೋಹಿಗಳು ಹಾಗೂ ಸಮಾಜಘಾತುಕ ಶಕ್ತಿಗಳು ಹೊಂದಿರುವ 500 ಮತ್ತು 1000 ರೂ. ನೋಟುಗಳು ಇಂದಿನಿಂದ ಕೇವಲ ಕಾಗದದ ತುಣುಕುಗಳಾಗಿವೆ. ಜನತೆ ಬೆವರು ಹರಿಸಿ ದುಡಿದು ಸಂಪಾದಿಸಿದ ಹಣವನ್ನು ಸಂರಕ್ಷಿಸಲಾಗುವುದು. ಇದು ಭ್ರಷ್ಟಾಚಾರ, ಕಪ್ಪು ಹಣ, ನಕಲಿ ನೋಟು ಮತ್ತು ಭಯೋತ್ಪಾದನೆ ವಿರುದ್ಧದ ಪ್ರಬಲ ಹೋರಾಟವಾಗಿದೆ. ಇದಕ್ಕಾಗಿ ಕೆಲ ದಿನಗಳ ಕಾಲ ಅಡಚಣೆಗಳನ್ನು, ಕಷ್ಟಗಳನ್ನು ಸಹಿಸಿಕೊಳ್ಳಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುವೆ. 125 ಕೋಟಿ ಭಾರತೀಯರು ಈ ಮಹಾ ಅಭಿಯಾನದಲ್ಲಿ ಸಹಕರಿಸುವ ವಿಶ್ವಾಸ ನನಗಿದೆ.

ನಾಲ್ಕು ವರ್ಷಗಳ ಬಳಿಕ, ಅಂದರೆ 2020ರ ನವೆಂಬರ್‌ನಲ್ಲಿ ಪ್ರಧಾನಿ ಮೋದಿಯವರು, ಕಪ್ಪುಹಣವನ್ನು ನಿಯಂತ್ರಿಸುವಲ್ಲಿ, ತೆರಿಗೆ ಸಂಗ್ರಹ ಏರಿಕೆಗೆ ಮತ್ತು ಆರ್ಥಿಕತೆ ಚಟುವಟಿಕೆಗಳನ್ನು ಔಪಚಾರಿಕವಾಗಿಸಲು ಮತ್ತು ಪಾರದರ್ಶಕತೆಗೆ ನೋಟು ಅಮಾನ್ಯತೆ ಸಹಕಾರಿಯಾಗಿದೆ. ಇದು ರಾಷ್ಟ್ರದ ಪ್ರಗತಿಗೆ ಪೂರಕವಾಗಿ ಪರಿಣಮಿಸಿದೆ ಎಂದು ಹೇಳಿದ್ದರು. ನೋಟು ಅಮಾನ್ಯತೆಯ ಬಳಿಕ ನಾಲ್ಕು ವರ್ಷಗಳಲ್ಲಿ ತೆರಿಗೆದಾರರ ಸಂಖ್ಯೆ ಹೆಚ್ಚಳವಾಗಿರುವುದನ್ನು ತಿಳಿಸಿದ್ದರು.

ಆರ್ಥಿಕ ತಜ್ಞರಲ್ಲಿ ಭಿನ್ನಾಭಿಪ್ರಾಯ: ನೋಟು ಅಮಾನ್ಯತೆಯ ವಿಚಾರದಲ್ಲಿ ಆರ್ಥಿಕ ತಜ್ಞರ ನಡುವೆಯೂ ಭಿನ್ನಾಭಿಪ್ರಾಯ ಉಂಟಾಗಿತ್ತು. ಚಲಾವಣೆಯಲ್ಲಿರುವ 86% ಕರೆನ್ಸಿಗಳು ಘೋಷಣೆಯಾದ ನಾಲ್ಕೇ ಗಂಟೆಯೊಳಗೆ ಅಮಾನ್ಯವಾಗಿತ್ತು. ಇದರ ಪರಿಣಾಮಗಳನ್ನು ಎದುರಿಸಲು ಸರ್ಕಾರ ಸೂಕ್ತ ವ್ಯವಸ್ಥೆಯನ್ನು ಏರ್ಪಡಿಸಿದೆಯೇ ಎಂಬ ಪ್ರಶ್ನೆಯ ಜತೆಗೆ, ಕರೆನ್ಸಿಯಲ್ಲಿ ಕಪ್ಪುಹಣದ ಪ್ರಮಾಣ ಕೇವಲ 5 ಪರ್ಸೆಂಟ್‌ ಮಾತ್ರ ಇತ್ತು. ಉಳಿದ ಕಪ್ಪುಹಣವು ರಿಯಲ್‌ ಎಸ್ಟೇಟ್‌, ಬಂಗಾರ ಇತ್ಯಾದಿ ಇತರ ಆಸ್ತಿಗಳಲ್ಲಿ ಇರುವುದರಿಂದ ನೋಟು ಅಮಾನ್ಯತೆ ಫಲ ನೀಡುವುದು ಅನುಮಾನ ಎಂಬುದು ಕೆಲ ಆರ್ಥಿಕ ತಜ್ಞರ ಅಭಿಪ್ರಾಯವಾಗಿತ್ತು.

ಕಪ್ಪು ಹಣ ವಶಪಡಿಸಿದ್ದೆಷ್ಟು? : ನೋಟು ಅಮಾನ್ಯತೆಯಿಂದ ಕಪ್ಪುಹಣದ ನಿಯಂತ್ರಣ ಆಗಿದೆಯೇ ಎಂಬುದು ನಿರ್ಣಾಯಕ ಪ್ರಶ್ನೆ. ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಪ್ರಕಾರ ಅಮಾನ್ಯಗೊಂಡಿದ್ದ ನೋಟುಗಳ ಪೈಕಿ 99% ಕೂಡ ಬ್ಯಾಂಕಿಂಗ್‌ ವ್ಯವಸ್ಥೆಗೆ ಮರಳಿ ಬಂದಿತ್ತು. ಒಟ್ಟು 15.41 ಲಕ್ಷ ಕೋಟಿ ರೂ. ನೋಟುಗಳು ಅಮಾನ್ಯವಾಗಿತ್ತು. ಹಾಗೂ 15.31 ಲಕ್ಷ ಕೋಟಿ ರೂ. ಬ್ಯಾಂಕ್‌ಗಳಿಗೆ ವಾಪಸ್‌ ಬಂದಿತ್ತು. ಹೀಗಾಗಿ ನೋಟು ಅಮಾನ್ಯತೆ ಒಂದರಿಂದಲೇ ಎಷ್ಟು ಕಪ್ಪು ಹಣ ನಿರ್ನಾಮವಾಗಿದೆ ಎಂದು ಹೇಳುವುದು ಕಷ್ಟ. ಆದರೆ 2019ರಲ್ಲಿ ಅಂದಿನ ಹಣಕಾಸು ಸಚಿವ ಪಿಯೂಷ್‌ ಗೋಯೆಲ್‌ ಸಂತ್ತಿಗೆ, 1.3 ಲಕ್ಷ ಕೋಟಿ ರೂ. ಕಪ್ಪುಹಣವನ್ನು ನಾನಾ ಕಪ್ಪುಹಣ ವಿರೋಧಿ ಕಾರ್ಯಾಚರಣೆಗಳ ಮೂಲಕ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಕೆಲ ವರದಿಗಳ ಪ್ರಕಾರ ಸರ್ಕಾರ 3-4 ಲಕ್ಷ ಕೋಟಿ ರೂ. ಕಪ್ಪು ಹಣ ವ್ಯವಸ್ಥೆಯಿಂದ ಹೊರ ಹೋಗಲಿದೆ ಎಂದು ಭಾವಿಸಿತ್ತು. ಆದರೆ ಅದು ಆಗಿಲ್ಲ. ಈ ನಡುವೆ ಕಪ್ಪು ಹಣವನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗಳನ್ನು ತೆರಿಗೆ ಇಲಾಖೆ ಮುಂದುವರಿಸಿದೆ.

ನಕಲಿ ನೋಟುಗಳ ಸಂಖ್ಯೆಯಲ್ಲಿ ಏರಿಕೆ: ಆರ್‌ಬಿಐ ಕಳೆದ ಮೇ 27ಕ್ಕೆ ಬಿಡುಗಡೆಗೊಳಿಸಿರುವ ವಾರ್ಷಿಕ ವರದಿಯ ಪ್ರಕಾರ 2021-22ರಲ್ಲಿ ನಕಲಿ ನೋಟುಗಳ ಸಂಖ್ಯೆಯಲ್ಲಿ 10% ಏರಿಕೆಯಾಗಿದೆ. 500 ರೂ. ಮುಖಬೆಲೆಯ ನಕಲಿ ನೋಟುಗಳಲ್ಲಿ 101% ಹಾಗೂ 2,000 ರೂ. ಮುಖಬೆಲೆಯ ನಕಲಿ ನೋಟುಗಳಲ್ಲಿ 54% ಹೆಚ್ಚಳವಾಗಿದೆ.

ಜನರ ಕೈಯಲ್ಲಿರುವ ನಗದು 30.88 ಲಕ್ಷ ಕೋಟಿ ರೂ.ಗೆ ಜಿಗಿತ: ನೋಟು ಅಮಾನ್ಯತೆಯ ಆರು ವರ್ಷಗಳ ಬಳಿಕವೂ ದೇಶದ ಜನರ ಕೈಯಲ್ಲಿರುವ ಒಟ್ಟು ನಗದು, ಕಳೆದ ಅಕ್ಟೋಬರ್‌ 21ಕ್ಕೆ 30.88 ಲಕ್ಷ ಕೋಟಿ ರೂ.ಗೆ ಏರಿತ್ತು. ಅಂದರೆ 2016ರ ನವೆಂಬರ್‌ಗೆ ಹೋಲಿಸಿದರೆ 71% ಹೆಚ್ಚು. 2016ರ ನವೆಂಬರ್‌ 4ರಂದು 17.7 ಲಕ್ಷ ಕೋಟಿ ರೂ. ನಗದು ವ್ಯವಸ್ಥೆಯಲ್ಲಿ ಇತ್ತು.

ಡಿಜಿಟಲ್‌ ಪೇಮೆಂಟ್‌ ಹೆಚ್ಚಳ: ಡೆಬಿಟ್‌, ಕ್ರೆಡಿಟ್ ಕಾರ್ಡ್‌ ಬಳಕೆ‌, ಯುಪಿಐ ವರ್ಗಾವಣೆಗಳು ಕೂಡ ಇತ್ತೀಚಿನ ವರ್ಷಗಳಲ್ಲಿ ಹಂತ ಹಂತವಾಗಿ ಏರಿಕೆಯಾಗಿದೆ ಎಂದು ಆರ್‌ಬಿಐ ಅಧ್ಯಯನ ವರದಿ ತಿಳಿಸಿದೆ. ಎಸ್‌ಬಿಐ ಪ್ರಕಾರ ಈ ಸಲದ ದೀಪಾವಳಿಯ ವಾರದಲ್ಲಿ ಕರೆನ್ಸಿ ಚಲಾವಣೆ 7,600 ಕೋಟಿ ರೂ.ಗೆ ಇಳಿಕೆಯಾಗಿತ್ತು.

ಯುಪಿಐ ವರ್ಗಾವಣೆ ಏರಿಕೆಯಾಗಿದ್ದು ಹೀಗೆ

upi

ಭಾರತದಲ್ಲಿ ಯುಪಿಐ (Unified Payments Interface) ವರ್ಗಾವಣೆಗಳ ಸಂಖ್ಯೆಯಲ್ಲಿ ಕಳೆದ ಅಕ್ಟೋಬರ್‌ನಲ್ಲಿ 7.7% ಹೆಚ್ಚಳವಾಗಿತ್ತು. ಸೆಪ್ಟೆಂಬರ್‌ನಲ್ಲಿ 11.16 ಲಕ್ಷ ಕೋಟಿ ರೂ. ಯುಪಿಐ ವರ್ಗಾವಣೆಯಾಗಿದ್ದರೆ, ಅಕ್ಟೋಬರ್‌ನಲ್ಲಿ 12.11 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿತ್ತು. ಅಂದರೆ 678 ಕೋಟಿ ರೂ. ವೃದ್ಧಿಸಿತ್ತು. ( ಯುಪಿಐ ತಂತ್ರಜ್ಞಾನ ಆಧಾರಿತ ಮೊಬೈಲ್‌ ಅಪ್ಲಿಕೇಶನ್‌ಗಳಿಗೆ ಉದಾಹರಣೆಗಳು: ಫೋನ್‌ ಪೇ, ಪೇಟಿಎಂ, ಗೂಗಲ್‌ಪೇ, ಭೀಮ್, ಮೊಬಿವಿಕ್‌, ಎಸ್‌ಬಿಐ ಪೇ, ಬಿಒಬಿ ಯುಪಿಐ ಇತ್ಯಾದಿ) ಕಳೆದ ಮೇನಲ್ಲಿ 10 ಲಕ್ಷ ಕೋಟಿ ರೂ.ಗಳ ಮೈಲುಗಲ್ಲನ್ನು ಕ್ರಮಿಸಿತ್ತು. ಸೆಪ್ಟೆಂಬರ್‌ನಲ್ಲಿ 11 ಲಕ್ಷ ಕೋಟಿ ರೂ. ಮೈಲುಗಲ್ಲನ್ನು ದಾಟಿತ್ತು. 2022ರಲ್ಲಿ ಈಗಾಗಲೇ 7,100 ಕೋಟಿ ಡಿಜಿಟಲ್‌ ವರ್ಗಾವಣೆಗಳು ನಡೆದಿವೆ. 2015ರಿಂದೀಚೆಗೆ ಯುಪಿಐ ವರ್ಗಾವಣೆಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ.

ಆಧಾರ್‌ ಕಾರ್ಡ್‌ ಆಧಾರಿತ AePS ವರ್ಗಾವಣೆಗಳೂ ಕಳೆದ ಅಕ್ಟೋಬರ್‌ನಲ್ಲಿ 11.77 ಕೋಟಿಗೆ ಏರಿಕೆಯಾಗಿದೆ. ಸೆಪ್ಟೆಂಬರ್‌ನಲ್ಲಿ 10.27 ಕೋಟಿಯಾಗಿತ್ತು. ಈ ವರ್ಗಾವಣೆಗಳ ಮೊತ್ತದಲ್ಲಿ ಕೂಡ 26,665 ಕೋಟಿ ರೂ.ಗಳಿಂದ 31,112 ಕೋಟಿ ರೂ.ಗೆ ಏರಿಕೆಯಾಗಿದೆ.

FASTag ಮೂಲಕ ಟೋಲ್‌ ಸಂಗ್ರಹ ಹೆಚ್ಚಳ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ವಹಿಸುವ FASTag ಮೂಲಕ ಪ್ರಾಧಿಕಾರದ ಟೋಲ್‌ ಬೂತ್‌ಗಳಲ್ಲಿ ಆಟೊಮ್ಯಾಟಿಕ್‌ ಆಗಿ ಟೋಲ್‌ ಸಂಗ್ರಹಿಸಲಾಗುತ್ತಿದೆ. ಸೆಪ್ಟೆಂಬರ್‌ನಲ್ಲಿ 28.3 ಕೋಟಿ ರೂ. ವರ್ಗಾವಣೆಗಳು ದಾಖಲಾಗಿದ್ದು, 9.3% ಹೆಚ್ಚಳವಾಗಿದೆ. ಈ ವರ್ಗಾವಣೆಗಳ ಮೌಲ್ಯ ಸೆಪ್ಟೆಂಬರ್- ಅಕ್ಟೋಬರ್‌ ನಡುವೆ 4,244 ಕೋಟಿ ರೂ.ಗಳಿಂದ 4,451 ಕೋಟಿ ರೂ.ಗೆ ವೃದ್ಧಿಸಿದೆ.

ನಗದು ಏರಿಕೆಯಾಗಿದ್ದೇಕೆ?

cash

ರಿಸರ್ವ್‌ ಬ್ಯಾಂಕ್‌ ಕಾಯಿದೆಯ ಸೆಕ್ಷನ್‌ 22ರ ಪ್ರಕಾರ ಆರ್‌ಬಿಐಗೆ ನೋಟುಗಳನ್ನು ಮುದ್ರಿಸಿ ವಿತರಿಸುವ ಹಕ್ಕು ಇದೆ. ಆದರೆ ಕೇಂದ್ರ ಸರ್ಕಾರ ಮತ್ತು ಆರ್‌ಬಿಐನ ಕೇಂದ್ರೀಯ ಮಂಡಳಿ ಸಮಾಲೋಚನೆ ನಡೆಸಿ, ಎಷ್ಟು ನೋಟುಗಳನ್ನು ಮುದ್ರಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ.

ಆರ್ಥಿಕ ವ್ಯವಸ್ಥೆಯಲ್ಲಿ ಬೆಳವಣಿಗೆಯ ಪ್ರಮಾಣ ಮತ್ತು ಬೇಡಿಕೆಯನ್ನು ಆಧರಿಸಿ ಎಷ್ಟು ನೋಟುಗಳನ್ನು ಮುದ್ರಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಹೀಗಾಗಿ ನೋಟುಗಳ ಸಂಖ್ಯೆ ಹೆಚ್ಚಳವಾಗಿರುವುದರಿಂದ ಬೇಡಿಕೆ ಮತ್ತು ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯನ್ನು ಬಿಂಬಿಸುತ್ತದೆ. ಬೇಡಿಕೆಗಿಂತ ಹೆಚ್ಚು ನೋಟುಗಳನ್ನು ಮುದ್ರಿಸಿದರೂ, ಹಣದುಬ್ಬರ ಉಂಟಾಗುತ್ತದೆ. ಹೀಗಾಗಿ ನೋಟುಗಳ ಸಂಖ್ಯೆ ಹೆಚ್ಚಳವಾಗಿರುವುದು ಆರ್ಥಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ. ಅಭಿವೃದ್ಧಿ ಹೊಂದಿರುವ ದೇಶಗಳಲ್ಲಿಯೂ ನಗದು ಕೂಡ ದೊಡ್ಡ ಮೊತ್ತದಲ್ಲಿ ಬಳಕೆಯಾಗುತ್ತಿರುವುದನ್ನು ಗಮನಿಸಬಹುದು ಎನ್ನುತ್ತಾರೆ ತಜ್ಞರು.

ಎಸ್‌ಬಿಐ ಸಂಶೋಧನಾ ವರದಿ ಹೇಳಿದ್ದೇನು? ಎಸ್‌ಬಿಐ ಸಂಶೋಧನಾ ವರದಿಯ ಪ್ರಕಾರ ಪಾವತಿ ವ್ಯವಸ್ಥೆಯಲ್ಲಿ ಚಲಾವಣೆಯಲ್ಲಿರುವ ಕರೆನ್ಸಿ (Currency In Circulation) 2015-16ರಿಂದ 2021-22 ಅವಧಿಯಲ್ಲಿ 88%ರಿಂದ 20%ಕ್ಕೆ ಇಳಿಕೆಯಾಗಿದೆ. 2026-27ರಲ್ಲಿ ಇದು 11.5%ಕ್ಕೆ ಇಳಿಕೆಯಾಗಲಿದೆ.

ನೋಟು ಅಮಾನ್ಯತೆ ಬಗ್ಗೆ ಸುಪ್ರೀಂ ಕೋರ್ಟ್‌ ವಿಚಾರಣೆ

Supreme Court

ನೋಟು ಅಮಾನ್ಯತೆಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ 58 ಅರ್ಜಿಗಳು ಸಲ್ಲಿಕೆಯಾಗಿದ್ದು, ವಿಚಾರಣೆ ಮುಂದುವರಿದಿದೆ. ಕಪ್ಪುಹಣದ ಬಳಕೆ ನಿಯಂತ್ರಣ, ಭಯೋತ್ಪಾದನೆಗೆ ಹಣಕಾಸು ಪೂರೈಕೆ ಸ್ಥಗಿತದ ಉದ್ದೇಶಗಳು ಈಡೇರಿವೆಯೇ ಎಂದು ಸುಪ್ರೀಂಕೋರ್ಟ್‌, ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ವಿವರಣೆಯನ್ನು ಕೋರಿದೆ. ನ್ಯಾಯಮೂರ್ತಿ ಎಸ್.‌ ಅಬ್ದುಲ್‌ ನಜೀರ್‌, ಬಿಆರ್‌ ಗವಾಯ್‌, ಎಎಸ್‌ ಬೋಪಣ್ಣ, ವಿ. ರಾಮಸುಬ್ರಮಣಿಯನ್‌ ಮತ್ತು ಬಿ.ವಿ ನಾಗರತ್ನ ಅವರನ್ನು ಒಳಗೊಂಡಿರುವ ಐವರು ನ್ಯಾಯಮೂರ್ತಿಗಳ ಪೀಠ ಈ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ. ನವೆಂಬರ್‌ 9ಕ್ಕೆ ವಿಚಾರಣೆ ಮುಂದುವರಿಯಲಿದೆ.

ನೋಟು ಅಮಾನ್ಯತೆಗೆ ಪೂರ್ವಭಾವಿಯಾಗಿ ಆರ್‌ಬಿಐ ನಡೆಸಿದ್ದ ಮಂಡಳಿ ಸಭೆಗಳ ದಾಖಲಾತಿಗಳನ್ನೂ ಸುಪ್ರೀಂಕೋರ್ಟ್‌ ನಿರೀಕ್ಷಿಸಿದೆ. ಮುಂಬರುವ ದಿನಗಳಲ್ಲಿ ಸರ್ಕಾರಗಳು ನೋಟು ಅಮಾನ್ಯತೆಯನ್ನು ಕೈಗೊಳ್ಳುವ ಸಂದರ್ಭ ಸೃಷ್ಟಿಯಾದರೆ, ಸುಪ್ರೀಂಕೋರ್ಟ್‌ ವಿಚಾರಣೆ ಮತ್ತು ಅದರ ತೀರ್ಪು ನಿರ್ಣಾಯಕವಾಗಲಿದೆ. ನೋಟು ಅಮಾನ್ಯತೆಯ ವಿಷಯ ಕೇವಲ ಅಕಾಡೆಮಿಕ್‌ ಆಗಿದ್ದರೆ, ಸುಪ್ರೀಂಕೋರ್ಟ್‌ನ ಸಮಯವನ್ನು ವ್ಯರ್ಥಪಡಿಸುವುದರಲ್ಲಿ ಅರ್ಥವಿಲ್ಲ ಎಂದು ನ್ಯಾಯಮೂರ್ತಿ ನಜೀರ್‌ ಹೇಳಿರುವುದು ಗಮನಾರ್ಹ.

ಪ್ರತಿಪಕ್ಷಗಳ ಆರೋಪವೇನು?: ಪ್ರತಿ ಪಕ್ಷ ಕಾಂಗ್ರೆಸ್‌ ನೋಟು ಅಮಾನ್ಯತೆ ವಿರುದ್ಧ ಮಾಡಿರುವ ಪ್ರಮುಖ ಆರೋಪಗಳು ಇಂತಿವೆ-

೧. ಇದು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿಯವರು ಎಸಗಿರುವ ಮಹಾ ಪ್ರಮಾದ. ನವೆಂಬರ್‌ 8ರ ನೋಟು ಅಮಾನ್ಯತೆಯಿಂದ ವಿಶ್ವದ ಎರಡನೇ ಅತಿ ದೊಡ್ಡ ಪ್ರಗತಿಪರ ಮಾರುಕಟ್ಟೆ ಎನಿಸಿದ್ದ ಭಾರತದಲ್ಲಿ ಅಲ್ಲೋಲಕಲ್ಲೋಲವಾಯಿತು. ಸಾರ್ವಜನಿಕ ಜನಜೀವನ ಬುಡಮೇಲಾಯಿತು. ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಕಂಡು ಕೇಳರಿಯದಷ್ಟು ಹಾನಿ ಸಂಭವಿಸಿತು. ಸಣ್ಣ ಮತ್ತು ಮಧ್ಯಮ ವರ್ಗದ ಉದ್ದಿಮೆಗಳು ನಾಶವಾಯಿತು. ಅನೇಕ ಅಂಗಡಿಗಳು, ಉದ್ದಿಮೆಗಳು ಶಾಶ್ವತವಾಗಿ ಮುಚ್ಚಿದವು. ನೋಟು ಅಮಾನ್ಯತೆಯ ಒಂದು ವರ್ಷದೊಳಗೆ 3.72 ಕೋಟಿ ಉದ್ಯೋಗಗಳು ನಷ್ಟವಾಯಿತು.

೨. ವಾಸ್ತವವಾಗಿ ಕಪ್ಪುಹಣ ನೋಟುಗಳಲ್ಲಿ ಶೇಖರಣೆಯಾಗಿರುವುದಿಲ್ಲ. ಆಸ್ತಿ, ಚಿನ್ನ ಮತ್ತು ಸುಲಭವಾಗಿ ಪರಿವರ್ತಿಸಬಹುದಾದ ಡಾಲರ್‌ನಲ್ಲಿ ಶೇಖರಣೆಯಾಗುತ್ತದೆ.

೩. ನೋಟು ಅಮಾನ್ಯತೆಯ ಪರಿಣಾಮ ರಾಷ್ಟ್ರೀಯ ಆದಾಯದಲ್ಲಿ 3 ಲಕ್ಷ ಕೋಟಿ ರೂ. ನಷ್ಟವಾಗಿದೆ.

೪. ನೋಟು ಬ್ಯಾನ್‌ನ ಸಂಕಷ್ಟಗಳ ಪರಿಣಾಮ 115 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

೫. ನೋಟ್‌ ಬಂದಿಯ ಪರಿಣಾಮ 4 ಲಕ್ಷ ಕೋಟಿ ರೂ. ಕಪ್ಪು ಹಣ ಮರೆಯಾಗಿ, ಅಷ್ಟು ಲಾಭವಾಗಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ನಿರೀಕ್ಷಿಸಿದ್ದರು. ಆದರೆ ಕೇವಲ 16,000 ಕೋಟಿ ರೂ. ಮಾತ್ರ ಮರಳಿ ಬಂದಿಲ್ಲ. ಬದಲಿಗೆ ಹೊಸ ನೋಟುಗಳ ಮುದ್ರಣಕ್ಕೆ 21,000 ಕೋಟಿ ರೂ. ಖರ್ಚಾಗಿದೆ. ಆದ್ದರಿಂದ ನೋಟು ಅಮಾನ್ಯತೆಯ ಉದ್ದೇಶ ಸಂಪೂರ್ಣ ವಿಫಲವಾಗಿದೆ.

ಚುನಾವಣೆಗಳ ಮೇಲೆ ನೋಟು ಅಮಾನ್ಯತೆಯ ಪ್ರಭಾವ? ನೋಟು ಅಮಾನ್ಯತೆಯ ಬಳಿಕ 2017ರಲ್ಲಿ ಏಳು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಿತು. ಈ ಚುನಾವಣೆಗಳಲ್ಲಿ ಬಿಜೆಪಿಗೆ ಪ್ರತಿಕೂಲ ಪ್ರಭಾವ ಬೀರಬಹುದೇ ಎಂಬ ಕುತೂಹಲ ಇತ್ತು. ಕೇಂದ್ರ ಸರ್ಕಾರಕ್ಕೆ ಇದು ಲಿಟ್ಮಸ್‌ ಪರೀಕ್ಷೆಯಾಗಿತ್ತು. ಆದರೆ ಚುನಾವಣಾ ಫಲಿತಾಂಶ ಪ್ರಕಟವಾದಾಗ, ಬಿಜೆಪಿಯು ಉತ್ತರಪ್ರದೇಶ, ಉತ್ತರಾಖಂಡ್‌, ಗುಜರಾತ್‌, ಹಿಮಾಚಲ ಪ್ರದೇಶಗಳಲ್ಲಿ ಜಯ ಗಳಿಸಿತ್ತು. ನೋಟು ಅಮಾನ್ಯತೆ ಪಕ್ಷಕ್ಕೆ ಪ್ರತಿಕೂಲವಾಗಿರಲಿಲ್ಲ ಎಂಬುದನ್ನು ಚುನಾವಣಾ ಫಲಿತಾಂಶ ಬಿಂಬಿಸಿತ್ತು.

ನೋಟು ಅಮಾನ್ಯತೆಯಿಂದ ಆರ್ಥಿಕತೆ ಸ್ವಚ್ಛವಾಗುವ ಪ್ರಕ್ರಿಯೆ ಶುರುವಾಗಿದೆ. ಈ ಹಿಂದೆ ಅನೌಪಚಾರಿಕವಾಗಿದ್ದ‌ ಎಕಾನಮಿ ಈಗ ಔಪಚಾರಿಕವಾಗುತ್ತಿದೆ. ಹೀಗಾಗಿ ಜನ ಸಾಮಾನ್ಯರಿಗೆ ಅನುಕೂಲವಾಗುತ್ತಿದೆ. ಹಣಕಾಸು ನೆರವು-ಸಾಲ ಸೌಲಭ್ಯ ಸಿಗುವಂತಾಗಿದೆ. ಕಳೆದ ಕೆಲ ವರ್ಷಗಳಿಂದೀಚೆಗೆ ಬ್ಯಾಂಕ್‌ಗಳಲ್ಲಿ ಸಾಲ ವಿತರಣೆ ಏರಿಕೆಯಾಗಿದೆ. ಆರ್ಥಿಕ ಚಟುವಟಿಕೆಗಳು ವಿಸ್ತಾರವಾಗಿದೆ. ನಗದು ಸಂಖ್ಯೆ ಹೆಚ್ಚಿರುವುದು ಎಂದರೆ ನೋಟು ಅಮಾನ್ಯತೆ ವೈಫಲ್ಯ ಎಂಬುದಲ್ಲ. ಕರೆನ್ಸಿ ಮತ್ತು ಜಿಡಿಪಿಯ ಅನುಪಾತವನ್ನು ಗಮನಿಸಿದರೆ, ನೋಟುಗಳ ಬಳಕೆ ಕಡಿಮೆಯಾಗುರುವುದನ್ನು ಕಾಣಬಹುದು. ಜಿಡಿಪಿ ಬೆಳವಣಿಗೆಯಾದಾಗ ನೋಟುಗಳ ಸಂಖ್ಯೆಯೂ ಹೆಚ್ಚುವುದು ಸ್ವಾಭಾವಿಕ ಎಂದು ಬಿಜೆಪಿ ವಾದಿಸಿದೆ.

ಜಿಎಸ್‌ಟಿಯ ಯಶಸ್ಸಿಗೆ ನೋಟು ಅಮಾನ್ಯತೆ ಬುನಾದಿ: ಎಸ್.‌ ಗುರುಮೂರ್ತಿ

ಡಿಮಾನಿಟೈಸೇಶನ್‌ ಮಾಡದಿರುತ್ತಿದ್ದರೆ, ಜಿಎಸ್‌ಟಿ ಯಶಸ್ವಿಯಾಗುತ್ತಿರಲಿಲ್ಲ. ಈ ಕಠಿಣ ನಿರ್ಧಾರವನ್ನು ಕೈಗೊಳ್ಳಬೇಕಾಗಿತ್ತು ಎನ್ನುತ್ತಾರೆ ಹಿರಿಯ ಆರ್ಥಿಕ ತಜ್ಞ ಎಸ್.‌ ಗುರುಮೂರ್ತಿ. ನೋಟು ಅಮಾನ್ಯತೆ ಘೋಷಿಸಿದಾಗ ಅನೇಕ ಮಂದಿ ಟೀಕಿಸಿದ್ದರು. ಈಗಲೂ ಕೆಲವರು ಅದನ್ನು ಮುಂದುವರಿಸಿದ್ದಾರೆ. ಆದರೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ವರದಿಯ ಪ್ರಕಾರ ಭಾರತದಲ್ಲಿ ಅನೌಪಚಾರಿಕ ಆರ್ಥಿಕತೆ (Informal Economy) ಇವತ್ತು ಇಳಿಕೆಯ ಹಾದಿಯಲ್ಲಿದೆ. ಶೇ.೫೨% ಇದ್ದುದು ಇದೀಗ 15%-16% ಕ್ಕೆ ಇಳಿದಿದೆ. ದೇಶದ ಅಭ್ಯುದಯದ ನಿಟ್ಟಿನಲ್ಲಿ ಇದು ಸಕಾರಾತ್ಮಕ ಬೆಳವಣಿಗೆ. ಜಿಎಸ್‌ಟಿಯ ಸಮರ್ಪಕ ಜಾರಿಗೆ ಇದು ಬುನಾದಿ ಆಯಿತು ಎನ್ನುತ್ತಾರೆ ಎಸ್.‌ ಗುರುಮೂರ್ತಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
HD Revanna
ಕರ್ನಾಟಕ3 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ3 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ3 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ3 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ3 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ4 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ4 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ4 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ4 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ4 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ22 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌