Adani Group shares : ಅದಾನಿ ಕಂಪನಿಗಳ ಷೇರು ಮಾರುಕಟ್ಟೆ ಮೌಲ್ಯದಲ್ಲಿ 8 ಲಕ್ಷ ಕೋಟಿ ರೂ. ನಷ್ಟ - Vistara News

ಪ್ರಮುಖ ಸುದ್ದಿ

Adani Group shares : ಅದಾನಿ ಕಂಪನಿಗಳ ಷೇರು ಮಾರುಕಟ್ಟೆ ಮೌಲ್ಯದಲ್ಲಿ 8 ಲಕ್ಷ ಕೋಟಿ ರೂ. ನಷ್ಟ

ಹಿಂಡೆನ್‌ ಬರ್ಗ್‌ ಶಾರ್ಟ್‌ ಸೆಲ್ಲರ್‌ ಸ್ಫೋಟಕ ವರದಿಯ ಬಳಿಕ ಅದಾನಿ ಸಮೂಹದ ಷೇರುಗಳ ಮಾರುಕಟ್ಟೆ ಮೌಲ್ಯದಲ್ಲಿ ಇಲ್ಲಿವರೆಗೆ 8 ಲಕ್ಷ ಕೋಟಿ ರೂ. ಕರಗಿದ್ದು, (Adani Group shares) ಕಾರ್ಪೊರೇಟ್‌ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ.

VISTARANEWS.COM


on

Adani Group SEBI seeks 6 months from Supreme Court to submit report on Adani companies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ಉಂಟಾಗಿರುವ ನಷ್ಟ 100 ಶತಕೋಟಿ ಡಾಲರ್‌ಗೆ (ಅಂದಾಜು 8 ಲಕ್ಷ ಕೋಟಿ ರೂ.) ಏರಿಕೆಯಾಗಿದೆ. (Adani Group shares) ಈ ಭಾರಿ ನಷ್ಟ ಕಂಪನಿಗಳ ಮೇಲೆ ಬೀರಬಹುದಾದ ಪ್ರತಿಕೂಲ ಪರಿಣಾಮಗಳ ಬಗ್ಗೆ ಕಾರ್ಪೊರೇಟ್‌ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ.

ಸಿಟಿ ಗ್ರೂಪ್‌ ಅದಾನಿ ಸಮೂಹದ ಸೆಕ್ಯುರಿಟೀಸ್‌ಗಳ ಆಧಾರದಲ್ಲಿ ತನ್ನ ಗ್ರಾಹಕರಿಗೆ ಸಾಲ ವಿತರಿಸುವುದನ್ನು ಸ್ಥಗಿತಗೊಳಿಸಿದೆ. ಅದಾನಿ ಸಮೂಹವು ಹಲವಾರು ವಿದೇಶಿ ಕಂಪನಿಗಳ ಜತೆಗೆ ಪಾಲುದಾರಿಕೆ ಒಪ್ಪಂದಗಳನ್ನು ಮಾಡಿಕೊಂಡಿದೆ. ಉದಾಹರಣೆಗೆ ಫ್ರಾನ್ಸ್‌ನ ಟೋಟಲ್‌ ಎನರ್ಜಿ, ಅಬುಧಾಬಿಯ ಇಂಟರ್‌ನ್ಯಾಶನಲ್ ಹೋಲ್ಡಿಂಗ್ಸ್ ಜತೆಗೆ ಹೂಡಿಕೆ ಮಾಡಿದೆ.

ವಿದೇಶಿ ಬ್ಯಾಂಕ್‌ಗಳು ನೀಡಿರುವ ಸಾಲ ಹೆಚ್ಚು

ಸಿಎಲ್‌ಎಸ್‌ಎ ಹಣಕಾಸು ಸಂಸ್ಥೆಯ ವರದಿ ಪ್ರಕಾರ, ಅದಾನಿ ಸಮೂಹದ ಪ್ರಮುಖ ಕಂಪನಿಗಳು ಪಡೆದಿರುವ ಸಾಲದ ಮೊತ್ತ ಕಳೆದ 3-4 ವರ್ಷಗಳಲ್ಲಿ 2 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಈ ಒಟ್ಟು ಸಾಲದಲ್ಲಿ ಬ್ಯಾಂಕ್‌ಗಳು ಕೊಟ್ಟಿರುವ ಸಾಲ ಸುಮಾರು 40% ಆಗಿವೆ. ಉಳಿದ 60% ಸಾಲವನ್ನು ಬಾಂಡ್‌ಗಳು, ಹಣಕಾಸು ಸಂಸ್ಥೆಗಳು ಮತ್ತು ವಿದೇಶಿ ಬ್ಯಾಂಕ್‌ಗಳು ನೀಡಿವೆ.

ಆರ್‌ಬಿಐ ಸೂಚನೆ

ಅದಾನಿ ಗ್ರೂಪ್‌ಗೆ ನೀಡಿರುವ ಸಾಲಗಳ ವಿವರಗಳನ್ನು ನೀಡುವಂತೆ ಎಲ್ಲ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚಿಸಿದೆ. ಅದಾನಿ ಎಂಟರ್‌ಪ್ರೈಸಸ್‌ ತನ್ನ 20,000 ಕೋಟಿ ರೂ. ಎಫ್‌ಪಿಐ ಅನ್ನು ರದ್ದುಪಡಿಸಿದ ಬಳಿಕ ಆರ್‌ಬಿಐ ಈ ಸೂಚನೆಯನ್ನು ನೀಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Jay Shah: ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳ ಬಳಿಕ ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದ ಬಳಲುತ್ತಿದ್ದರು. ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಅಯ್ಯರ್ ಅವರು ತಮ್ಮ ತವರಿನ ಮುಂಬೈ ತಂಡವು ರಣಜಿ ಟ್ರೋಫಿ ಪಂದ್ಯವನ್ನು ಆಡುವಲ್ಲಿ ನಿರತರಾಗಿದ್ದಾಗ ಮುಂಬೈನಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ಶಿಬಿರದಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಲಾಗಿದೆ.

VISTARANEWS.COM


on

Jay Shah
Koo

ಬೆಂಗಳೂರು: ಎಡಗೈ ವಿಕೆಟ್​ಕೀಪರ್ ಬ್ಯಾಟರ್​ ಇಶಾನ್ ಕಿಶನ್ (Ishan Kishan) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ ಶಕ್ತಿ ಶ್ರೇಯಸ್ ಅಯ್ಯರ್ (Shreya Iyer) ಅವರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ (BCCI Central Contract list) ಕೈಬಿಡಲು ನಿರ್ಧರಿಸಿದವರು ಯಾರು ಎಂಬುದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಬಹಿರಂಗಪಡಿಸಿದ್ದಾರೆ. ದೇಶೀಯ ಕ್ರಿಕೆಟ್ ಆಡಲು ಬಿಸಿಸಿಐ ಮತ್ತು ಭಾರತ ತಂಡದ ಮ್ಯಾನೇಜ್ಮೆಂಟ್​​ನ ನಿರ್ದೇಶನವನ್ನು ಈ ಆಟಗಾರರು ನಿರ್ಲಕ್ಷಿಸಿದ ನಂತರ ಇದನ್ನು ಮಾಡಲಾಗಿದೆ ಎಂಬುದಾಗಿ ಅವರು ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳ ಬಳಿಕ ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದ ಬಳಲುತ್ತಿದ್ದರು. ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಅಯ್ಯರ್ ಅವರು ತಮ್ಮ ತವರಿನ ಮುಂಬೈ ತಂಡವು ರಣಜಿ ಟ್ರೋಫಿ ಪಂದ್ಯವನ್ನು ಆಡುವಲ್ಲಿ ನಿರತರಾಗಿದ್ದಾಗ ಮುಂಬೈನಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ಶಿಬಿರದಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಲಾಗಿದೆ.

ವಿಚಾರ ಬಹಿರಂಗಗೊಂಡಿ ಅಯ್ಯರ್ ನಾಕೌಟ್ ಹಂತಗಳಲ್ಲಿ ಮುಂಬೈ ಪರ ಆಡಿದ್ದರೂ, ಅವರನ್ನು ಬಿಸಿಸಿಐ ಕೇಂದ್ರ ಒಪ್ಪಂದಗಳಲ್ಲಿ ಆಯ್ಕೆ ಮಾಡಲಾಗಿಲ್ಲ.

ನೆಪ ಹೇಳಿದ್ದ ಇಶಾನ್​

ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದಿರುಗಿದ ನಂತರ ಇಶಾನ್ ಕಿಶನ್ ಮಾನಸಿಕ ಆರೋಗ್ಯ ವಿರಾಮದಲ್ಲಿದ್ದರು. ಆಯ್ಕೆಗಾಗಿ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಮುಂಚಿತವಾಗಿ ರಣಜಿ ಟ್ರೋಫಿ ಆಡುವಂತೆ ಭಾರತ ತಂಡದ ಮ್ಯಾನೇಜ್ಮೆಂಟ್ ಒತ್ತಾಯಿಸಿದ ಹೊರತಾಗಿಯೂ ಅವರು ಬಿಸಿಸಿಐ ಮತ್ತು ಅವರ ತವರಿನ ರಾಜ್ಯ ಮಂಡಳಿ ಜಾರ್ಖಂಡ್​ ಕ್ರಿಕೆಟ್​ ಸಂಸ್ಥೆ ಯಾವುದೇ ಸಂಪರ್ಕ ಸಾಧಿಸಿರಲಿಲ್ಲ.

ಅವರು ಐಪಿಎಲ್ 2024 ಕ್ಕೆ ಮುಂಚಿತವಾಗಿ ಕ್ರಿಕೆಟ್​ಗೆ ಮರಳಿದ್ದರು. ಇದರರ್ಥ ಇಬ್ಬರೂ ಆಟಗಾರರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಆಟಗಾರರ ಪಟ್ಟಿಯಿಂದ ಹೊರಗಿಡಲಾಗಿದೆ.

ಇದು ಅಗರ್ಕರ್ ನಿರ್ಧಾರ

ಈ ವರ್ಷದ ಬಿಸಿಸಿಐ ಕೇಂದ್ರ ಒಪ್ಪಂದದಿಂದ ಭಾರತದ ಆಟಗಾರರಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡುವ ನಿರ್ಧಾರವನ್ನು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತೆಗೆದುಕೊಂಡಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ.

“ನೀವು ಸಂವಿಧಾನವನ್ನು ಪರಿಶೀಲಿಸಬಹುದು. ನಾನು ಆಯ್ಕೆ ಸಭೆಯ ಸಂಚಾಲಕನಾಗಿದ್ದೇನೆ. ಆ ನಿರ್ಧಾರವು ಅಜಿತ್ ಅಗರ್ಕರ್ ಅವರಿಗೆ ಸಂಬಂಧಿಸಿದ್ದು. ಈ ಇಬ್ಬರು ಆಟಗಾರರು (ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್) ದೇಶೀಯ (ಕ್ರಿಕೆಟ್) ಆಡದ ಕಾರಣ ಅವರನ್ನು (ಕೇಂದ್ರ ಗುತ್ತಿಗೆ ಪಟ್ಟಿಯಿಂದ) ಕೈಬಿಡುವ ನಿರ್ಧಾರವು ಅವರದಾಗಿತ್ತು ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ: Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

ನನ್ನ ಪಾತ್ರ ಕೇವಲ ಕಾರ್ಯಗತಗೊಳಿಸುವುದಾಗಿದೆ. ಸಂಜು ಸ್ಯಾಮ್ಸನ್ ಅವರಂತಹ ಹೊಸ ಆಟಗಾರರನ್ನು ನಾವು ಹೊಂದಿದ್ದೇವೆ. ಹೀಗಾಗಿ ಯಾರೂ ಅನಿವಾರ್ಯವಲ್ಲ, “ಎಂದು ಜಯ್ ಶಾ ಗುರುವಾರ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಹೌದು, ನಾನು ಆಟಗಾರರೊಂದಿಗೆ ಮಾತನಾಡಿದ್ದೇನೆ. ಮಾಧ್ಯಮಗಳು ಸಹ ವರದಿಗಳನ್ನು ಪ್ರಸಾರ ಮಾಡಿದ್ದವು” ಎಂದು ಅವರು ಹೇಳಿದರು. ಬಿಸಿಸಿಐ ತನ್ನನ್ನು ವೈಟ್ ಬಾಲ್ ಸ್ವರೂಪಕ್ಕೆ ಮಾತ್ರ ಪರಿಗಣಿಸಿದರೆ, ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುವುದಾಗಿ ಹಾರ್ದಿಕ್ ಪಾಂಡ್ಯ ನನಗೆ ಹೇಳಿದ್ದಾರೆ ಎಂದೂ ಶಾ ಹೇಳಿದರು.

ಮುಂಬಯಿ ತಂಡಕ್ಕೆ ಆಡಲಿ

ಐಪಿಎಲ್​​ನಲ್ಲಿ ಯಾರು ಉತ್ತಮವಾಗಿ ಆಡುತ್ತಾರೋ ಅವರು ಮುಂದುವರಿಯುತ್ತಾರೆ ಎಂಬುದು ತಪ್ಪು. ಇಶಾನ್ ಕಿಶನ್ ಅವರಂತೆ ಹಾರ್ದಿಕ್​ ಪಾಂಡ್ಯ ಭಾರತ ತಂಡದೊಂದಿಗೆ ಭಾಗವಹಿಸಲು ಕಷ್ಟಪಡುತ್ತಾರೆ. ಅವರು ಮುಂಬೈ ಇಂಡಿಯನ್ಸ್​ನಲ್ಲಿ ಆಟಗಾರನಾಗಿ ಆಡುತ್ತಿದ್ದಾರೆ. ಯಾರೇ ಆದರೂ ಟೀಮ್ ಇಂಡಿಯಾದಲ್ಲಿ ನೀವು ನಿಮ್ಮನ್ನು ಸಾಬೀತುಪಡಿಸಬೇಕು ಮತ್ತು ಬ್ಯಾಕ್ ಟು ಬ್ಯಾಕ್ ಪ್ರದರ್ಶನವನ್ನು ನೀಡಬೇಕು. ಅದನ್ನು ನಿಭಾಯಿಸಬಲ್ಲ ವ್ಯಕ್ತಿಯನ್ನು ಸರಿಯಾದ ಆಟಗಾರ ಎಂದು ವಿವರಿಸಬಹುದು, “ಎಂದು ಅವರು ಹೇಳಿದರು.

ಗುಜರಾತ್ ಟೈಟಾನ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್ ಪಂದ್ಯದ ನಂತರ ಕಿಶನ್ ಅವರೊಂದಿಗಿನ ಸಂಭಾಷಣೆಯ ವಿವರಗಳನ್ನು ಶಾ ಬಹಿರಂಗಪಡಿಸಿದರು. ಇಲ್ಲ, ನಾನು ಇಶಾನ್​ಗೆ ಯಾವ ಸಲಹೆಯನ್ನೂ ನೀಡಿಲ್ಲ. ಅವರು ಉತ್ತಮವಾಗಿ ಆಡಬೇಕು ಎಂದು ಹೇಳಿದ್ದೆ. ಮತ್ತು ನಾನು ಎಲ್ಲಾ ಆಟಗಾರರೊಂದಿಗೆ ಆ ರೀತಿ ಮಾತನಾಡುತ್ತೇನೆ “ಎಂದು ಜಯ್​ ಶಾ ಹೇಳಿದರು.

Continue Reading

ದೇಶ

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Naxals Encounter: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಗಂಗಲೂರ್‌ ಅರಣ್ಯ ಪ್ರದೇಶದಲ್ಲಿನಕ್ಸಲರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ನಕ್ಸಲರು ಕೂಡ ಪ್ರತಿ ದಾಳಿ ನಡೆಸಿದ್ದು, ಇದೇ ವೇಳೆ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು 12 ನಕ್ಸಲರನ್ನು ಹತ್ಯೆಗೈದಿದ್ದಾರೆ. ಭದ್ರತಾ ಸಿಬ್ಬಂದಿ ಶೌರ್ಯಕ್ಕೆ ಮುಖ್ಯಮಂತ್ರಿ ವಿಷ್ಣುದೇವ್‌ ಸಾಯಿ ಅವರು ಮೆಚ್ಚುಗೆ ಸೂಚಿಸಿದ್ದಾರೆ.

VISTARANEWS.COM


on

Naxals K
Koo

ರಾಯ್‌ಪುರ: ಛತ್ತೀಸ್‌ಗಢದಲ್ಲಿ ನಕ್ಸಲರ ನಿಗ್ರಹಕ್ಕೆ ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು ಶುಕ್ರವಾರ (ಮೇ 10) ಭರ್ಜರಿಯಾಗಿಯೇ ಬೇಟೆಯಾಡಿದೆ. ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ (Bijapur District) ಭದ್ರತಾ ಸಿಬ್ಬಂದಿಯು ಶುಕ್ರವಾರ 12 ಮಾವೋವಾದಿಗಳನ್ನು (Naxals Encounter) ಹೊಡೆದುರುಳಿಸಿದ್ದಾರೆ. ನಕ್ಸಲರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ನಕ್ಸಲರು ಕೂಡ ಪ್ರತಿ ದಾಳಿ ನಡೆಸಿದ್ದು, ಇದೇ ವೇಳೆ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು 12 ನಕ್ಸಲರನ್ನು ಹತ್ಯೆಗೈದಿದ್ದಾರೆ.

ನಕ್ಸಲರ ನಿಗ್ರಹದ ಕಾರ್ಯಾಚರಣೆ ಕುರಿತು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣುದೇವ್‌ ಸಾಯಿ ಅವರು ಮಾಹಿತಿ ನೀಡಿದ್ದಾರೆ. “ಬಿಜಾಪುರ ಜಿಲ್ಲೆಯ ಗಂಗಲೂರ್‌ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡು 12 ನಕ್ಸಲರನ್ನು ಹತ್ಯೆಗೈದಿದ್ದಾರೆ. ಇದುವರೆಗೆ ಎಲ್ಲ 12 ಶವಗಳು ಪತ್ತೆಯಾಗಿವೆ. ನಮ್ಮ ಭದ್ರತಾ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳಿಗೆ ಅಭಿನಂದನೆಗಳು” ಎಂದು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ, ಪೊಲೀಸರು ಕೈಗೊಂಡ ಜಂಟಿ ಕಾರ್ಯಾಚರಣೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

13 ನಕ್ಸಲರ ಹತ್ಯೆ

ಏಪ್ರಿಲ್‌ 2ರಂದು ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ 13 ಮಂದಿ ನಕ್ಸಲರು ಹತರಾಗಿದ್ದರು. ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಮತ್ತು ಛತ್ತೀಸ್‌ಗಢ ಪೊಲೀಸರ ಭದ್ರತಾ ಪಡೆಗಳೊಂದಿಗಿನ ಭೀಕರ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದರು. ಇದು 2024ರಲ್ಲಿ ನಡೆದ ಬೃಹತ್‌ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ಎನಿಸಿತ್ತು. ಇದಾದ ಕೆಲ ದಿನಗಳ ಬಳಿಕವೂ ಮೂವರು ನಕ್ಸಲರನ್ನು ಹತ್ಯೆಗೈಯಲಾಗಿತ್ತು. ಒಂದು ವಾರದ ಹಿಂದಷ್ಟೇ 10 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

5 ತಿಂಗಳಲ್ಲಿ 70ಕ್ಕೂ ನಕ್ಸಲರ ಖತಂ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಶುಕ್ರವಾರ ಹತ್ಯೆಗೈದ 12 ನಕ್ಸಲರು ಸೇರಿ ಪ್ರಸಕ್ತ ವರ್ಷದ ಐದು ತಿಂಗಳಲ್ಲಿ 70ಕ್ಕೂ ಅಧಿಕ ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Naxals Killed: ಮತ್ತೆ ಮೂವರು ನಕ್ಸಲರನ್ನು ಹತ್ಯೆಗೈದ ಭದ್ರತಾ ಸಿಬ್ಬಂದಿ; ಈ ವರ್ಷದ ಸ್ಕೋರ್‌ 49

Continue Reading

ದೇಶ

Arvind Kejriwal: ಪ್ರಜಾಪ್ರಭುತ್ವ ಉಳಿಸಲು ಹೋರಾಟ; ಜೈಲಿಂದ ಬಿಡುಗಡೆ ಬಳಿಕ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್!

Arvind Kejriwal: ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿತ್ತು. ಹಲವು ಬಾರಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಆದರೆ, ಶುಕ್ರವಾರ (ಮೇ 10) ಸುಪ್ರೀಂ ಕೋರ್ಟ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕಾರಣ ತಿಹಾರ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ (Delhi Excise Policy Case) ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಕಳೆದ 50 ದಿನಗಳಿಂದ ಜೈಲಿನಲ್ಲೇ ಇದ್ದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಶುಕ್ರವಾರ (ಮೇ 10) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕಾರಣ ಶುಕ್ರವಾರ ಸಂಜೆ ತಿಹಾರ ಜೈಲಿನಿಂದ (Tihar Jail) ಅವರನ್ನು ಬಿಡುಗಡೆ ಮಾಡಲಾಯಿತು. ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು.

ಯಾವುದೇ ಕಡತಗಳಿಗೆ ಸಹಿ ಹಾಕಬಾರದು ಎಂಬುದು ಸೇರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನ್ಯಾಯಾಲಯವು ಹಲವು ಷರತ್ತುಗಳನ್ನು ವಿಧಿಸಿದೆ. ಹಾಗೆಯೇ, ಜೂನ್‌ 2ರಂದು ಮತ್ತೆ ಶರಣಾಗಬೇಕು ಎಂಬುದಾಗಿ ಸೂಚಿಸಿದೆ. ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿತ್ತು. ಹಲವು ಬಾರಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಈಗ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.

ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

ಜೈಲಿನಿಂದ ಬಿಡುಗಡೆಯಾದ ಬಳಿಕ ಕಾರ್ಯಕರ್ತರು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮೆರವಣಿಗೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, “ನಾನು ನಿಮಗೆಲ್ಲ ಧನ್ಯವಾದ ಹೇಳಲು ಬಯಸುತ್ತೇನೆ. ನೀವೆಲ್ಲರೂ ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೂ ನಾನು ಧನ್ಯವಾದ ತಿಳಿಸುತ್ತೇನೆ. ಅವರಿಂದಾಗಿಯೇ ನಾನು ಈಗ ಜೈಲಿನಿಂದ ಬಿಡುಗಡೆಯಾಗಿದ್ದೇನೆ. ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಎಲ್ಲರೂ ಹೋರಾಡೋಣ” ಎಂದು ಹೇಳಿದರು.

‌ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

Continue Reading

Latest

Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

VISTARANEWS.COM


on

Rahul Dravid
Koo

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹೆಡ್​ ಕೋಚ್​ ಹುದ್ದೆಗೆ ಶೀಘ್ರದಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅರ್ಜಿ ಕರೆದು ಜಾಹೀರಾತು ನೀಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದಾರೆ. ರಾಹುಲ್​ ದ್ರಾವಿಡ್ (Rahul Dravid) ಅವರು ವಿಸ್ತರಿತ ಕೋಚಿಂಗ್​ ಗುತ್ತಿಗೆಯೊಂದಿಗೆ ಇದೀಗ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂಬರುವ ಟಿ20 ವಿಶ್ವ ಕಪ್ (T20 World Cup 2024)​ ಬಳಿಕ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ವರ್ಷದ ಜೂನ್ ನಲ್ಲಿ ಅವರು ಹುದ್ದೆಯನ್ನು ತ್ಯಜಿಸಬೇಕಾಗುತ್ತದೆ. ಹೀಗಾಗಿ ಹೊಸ ಅರ್ಜಿಯನ್ನು ಕರೆಯಲು ಬಿಸಿಸಿಐ ಮುಂದಾಗಿದೆ. ಅಂದ ಹಾಗೆ ದ್ರಾವಿಡ್ ಅವರು ಟೀಮ್ ಇಂಡಿಯಾದ (Team India) ಹೆಡ್​ ಕೋಚ್ ಆಗಲು ಎರಡು ವರ್ಷಗಳ ಒಪ್ಪಂದವನ್ನು ಹೊಂದಿದ್ದರು. 2023ರ ವರ್ಷ ನವೆಂಬರ್​ನ ಏಕದಿನ ವಿಶ್ವಕಪ್ ಮುಗಿದ ನಂತರ ಅದು ಕೊನೆಗೊಂಡಿತು. ಬಳಿಕ ಬಿಸಿಸಿಐ ಅವರ ಸಹಾಯಕ ಸಿಬ್ಬಂದಿಯೊಂದಿಗೆ ವಿಸ್ತರಣೆಯನ್ನು ನೀಡಿತ್ತು.

“ಮುಂದಿನ ಕೆಲವೇ ದಿನಗಳಲ್ಲಿ ಕೋಚ್​ ಹುದ್ದೆಗಳಿಗೆ ನಾವು ಅರ್ಜಿಗಳನ್ನು ಕರೆಯಲಿದ್ದೇವೆ. ಯಾಕೆಂದರೆ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳುತ್ತಿದೆ. ದ್ರಾವಿಡ್ ಅವರು ಮುಂದುವರಿಯಲು ಬಯಸಿರೆ ಅವರು ಮತ್ತೆ ಅರ್ಜಿ ಸಲ್ಲಿಸಬೇಕು. ನಾವು ಮೂರು ವರ್ಷಗಳ ಕಾಲ ದೀರ್ಘಾವಧಿಯ ಸೇವೆ ಸಲ್ಲಿಸುವ ತರಬೇತುದಾರನನ್ನು ಹುಡುಕುತ್ತಿದ್ದೇವೆ” ಎಂದು ಬಿಸಿಸಿಐ ಕಾರ್ಯದರ್ಶಿ ಶಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ಗೆ ಸಹಾಯಕ ಕೋ ತಂಡವನ್ನು ಹೊಸ ತರಬೇತುದಾರರನ್ನು ನೇಮಿಸಿದ ನಂತರ ಹೆಡ್​ ಕೋಚ್ ಹುದ್ದೆಯನ್ನು ಅಂತಿಮಗೊಳಿಸಲಾಗುವುದು ಎಂಬುದಾಗಿಯೂ ಅವರು ಹೇಳಿದ್ದಾರೆ.

ಈ ಹುದ್ದೆಗೆ ಯಾರು ಇರಬೇಕು ಎಂಬುದನ್ನು ಕ್ರಿಕೆಟ್ ಸಲಹಾ ಸಮಿತಿಗೆ (ಸಿಎಸಿ) ತೀರ್ಮಾನಿಸಲಿದೆ. ವಿದೇಶಿ ಅಥವಾ ಸ್ವದೇಶಿ ತರಬೇತುದಾರರಿಗೆ ಅವಕಾಶ ನೀಡುವ ವಿಚಾರವನ್ನೂ ಅವರು ತೀರ್ಮಾನಿಸಲಿದ್ದಾರೆ. ಆದರೆ ಎಲ್ಲಾ ಸ್ವರೂಪಗಳಿಗೆ ಒಬ್ಬರೇ ತರಬೇತುದಾರರು ಇರುತ್ತಾರೆ. ವೈಟ್-ಬಾಲ್ ಸ್ವರೂಪಗಳು ಮತ್ತು ಟೆಸ್ಟ್ ಕ್ರಿಕೆಟ್​ಗೆ ವಿಭಿನ್ನ ತರಬೇತುದಾರರು ಎಂಬ ಯೋಚನೆ ಇಲ್ಲ ಎಂದು ಶಾ ಹೇಳಿದರು.

“ಸಿಎಸಿ ವಿದೇಶಿ ಕೋಚ್ ಆಯ್ಕೆ ಮಾಡಿದರೆ ನಾವು ಆ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಆ ನಿರ್ಧಾರವನ್ನು ಬಿಸಿಸಿಯ ಒಪ್ಪಿಕೊಳ್ಳಲಿದೆ. ಭಾರತದಲ್ಲಿ ಸದ್ಯ ಪರಿಸ್ಥಿತಿಗೆ ಯಾವುದೇ ಪೂರ್ವನಿದರ್ಶನ ಇರುವುದಿಲ್ಲ ಎಂದು ಶಾ ಹೇಳಿದರು.

ಇದನ್ನೂ ಓದಿ: Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

ಖಾಲಿ ಇರುವ ಏಕೈಕ ರಾಷ್ಟ್ರೀಯ ಆಯ್ಕೆಗಾರ ಹುದ್ದೆಗೆ ಈಗಾಗಲೇ ಕೆಲವು ಅಭ್ಯರ್ಥಿಗಳನ್ನು ಸಂದರ್ಶನ ಮಾಡಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಬಹಿರಂಗಪಡಿಸಿದರು. ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

“ಆಯ್ಕೆಗಾರರ ಹುದ್ದೆಗೆ ಈಗಾಗಲೇ ಕೆಲವು ಸಂದರ್ಶನಗಳು ನಡೆದಿವೆ. ನಾವು ಅದನ್ನು ಶೀಘ್ರದಲ್ಲೇ ಘೋಷಿಸುತ್ತೇವೆ” ಎಂದು ಅವರು ಹೇಳಿದರು.

ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್ ಗುರಿ

2027 ರಿಂದ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಅನ್ನು ಬೇರೆ ಸ್ಥಳದಲ್ಲಿ ಆಯೋಜಿಸುವ ಸಾಮರ್ಥ್ಯದ ಬಗ್ಗೆ ಐಸಿಸಿಯೊಂದಿಗೆ ಚರ್ಚಿಸಲು ಬಿಸಿಸಿಐ ಯೋಜಿಸಿದೆ ಎಂದು ಶಾ ಹೇಳಿದ್ದಾರೆ. ಟೆಸ್ಟ್ ಕ್ರಿಕೆಟ್ ವಿಶ್ವ ಕಪ್​ನ ಮೊದಲ ಎರಡು ಆವೃತ್ತಿಗಳಿಗೆ ಇಂಗ್ಲೆಂಡ್ ಆತಿಥ್ಯ ವಹಿಸಿದೆ.

“ನಾವು 2027ರ ಟೆಸ್ಟ್​ ಚಾಂಪಿಯನ್​ಷಿಪ್​ ಬಗ್ಗೆ ಐಸಿಸಿಯೊಂದಿಗೆ ಈ ಬಗ್ಗೆ ಮಾತನಾಡಿದ್ದೇವೆ. ಭಾರತ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಎಂಬ ಮೂರು ಪ್ರಮುಖ ಟೆಸ್ಟ್ ಕೇಂದ್ರಗಳಿವೆ. ಆ ವಿಂಡೋದಲ್ಲಿ ನೀವು ಅದನ್ನು ಆಸ್ಟ್ರೇಲಿಯಾದಲ್ಲಿ ಅಥವಾ ಭಾರತದಲ್ಲಿಯೂ ಹಿಡಿದಿಡಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೂ ಆ ಸಮಯದಲ್ಲಿ ಮಳೆಯಾಗುತ್ತದೆ” ಎಂದು ಅವರು ಹೇಳಿದರು.

Continue Reading
Advertisement
Dietary Guidelines
Latest17 mins ago

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

Lover refused to marriage Young woman committed suicide in kalaburagi
ಕಲಬುರಗಿ21 mins ago

Self Harming: ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ

Jay Shah
ಪ್ರಮುಖ ಸುದ್ದಿ21 mins ago

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Naxals K
ದೇಶ25 mins ago

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Veg v/s Non Veg Thali
ಆರೋಗ್ಯ30 mins ago

Veg v/s Non Veg Thali: ಭಾರತದಲ್ಲಿ ನಾನ್‌ವೆಜ್‌ ಊಟಕ್ಕಿಂತ ವೆಜ್ ಊಟ ದುಬಾರಿ! ಏಕೆ ಗೊತ್ತಾ?

Maruti Suzuki
ಆಟೋಮೊಬೈಲ್31 mins ago

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

Prajwal Revanna Case
ಕರ್ನಾಟಕ40 mins ago

Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

Arvind Kejriwal
ದೇಶ41 mins ago

Arvind Kejriwal: ಪ್ರಜಾಪ್ರಭುತ್ವ ಉಳಿಸಲು ಹೋರಾಟ; ಜೈಲಿಂದ ಬಿಡುಗಡೆ ಬಳಿಕ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್!

Xiaomi Smart Phone
ಗ್ಯಾಜೆಟ್ಸ್59 mins ago

Xiaomi Smart Phone: ವರ್ಷಾಂತ್ಯಕ್ಕೆ ಬರಲಿದೆ ಶಿಯೊಮಿಯ ಫೋಲ್ಡಿಂಗ್​ ಫೋನ್​ಗಳು; ಇಲ್ಲಿದೆ ಸಂಪೂರ್ಣ ವಿವರ

Rahul Dravid
Latest1 hour ago

Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ5 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ7 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ8 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ15 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ22 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ23 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ24 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌