Adani Enterprises | ಷೇರು ಪೇಟೆಯಲ್ಲಿ ನಿಫ್ಟಿ 50 ಲೀಗ್‌ಗೆ ಸೇರ್ಪಡೆಯಾದ ಅದಾನಿ ಎಂಟರ್‌ಪ್ರೈಸಸ್ - Vistara News

ಪ್ರಮುಖ ಸುದ್ದಿ

Adani Enterprises | ಷೇರು ಪೇಟೆಯಲ್ಲಿ ನಿಫ್ಟಿ 50 ಲೀಗ್‌ಗೆ ಸೇರ್ಪಡೆಯಾದ ಅದಾನಿ ಎಂಟರ್‌ಪ್ರೈಸಸ್

ಅದಾನಿ ಎಂಟರ್‌ಪ್ರೈಸಸ್‌, ನ್ಯಾಶನಲ್‌ ಸ್ಟಾಕ್‌ ಎಕ್ಸ್‌ಚೇಂಜ್‌ನ ನಿಫ್ಟಿ 50 ಲೀಗ್‌ಗೆ ಸೇರ್ಪಡೆಯಾಗಿದೆ. ಇದರೊಂದಿಗೆ ಅದಾನಿ ಎಂಟರ್‌ಪ್ರೈಸಸ್‌ ಷೇರು ದರ ಸೂಚ್ಯಂಕದ ಏರಿಳಿತಗಳ ಮೇಲೆ ನಿರ್ಣಾಯಕ ಎನ್ನಿಸಲಿದೆ.

VISTARANEWS.COM


on

Hindenburg an unethical short-seller, profited from stock trading: Adani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಅದಾನಿ ಸಮೂಹದ ಪ್ರಮುಖ ಕಂಪನಿಯಾದ ಅದಾನಿ ಎಂಟರ್‌ಪ್ರೈಸಸ್‌, ನ್ಯಾಶನಲ್‌ ಸ್ಟಾಕ್‌ ಎಕ್ಸ್‌ಚೇಂಜ್‌ನ ನಿಫ್ಟಿ 50 ಸೂಚ್ಯಂಕಕ್ಕೆ ಸೇರ್ಪಡೆಯಾಗಿದೆ. (Adani Enterprises) ಸಿಮೆಂಟ್‌ ಉತ್ಪಾದಕ ಶ್ರೀ ಸಿಮೆಂಟ್‌ನ ಸ್ಥಾನವನ್ನು ಅದಾನಿ ಎಂಟರ್‌ಪ್ರೈಸಸ್‌ ವಹಿಸಲಿದೆ.

ನಿಫ್ಟಿ 50 ಮಾತ್ರವಲ್ಲದೆ ನಿಫ್ಟಿ 500 ನಿಫ್ಟಿ 200 ಮತ್ತು ನಿಫ್ಟಿ 100 ಇಂಡೆಕ್ಸ್‌ನಲ್ಲೂ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್‌ 30 ರಿಂದ ಈ ಹೊಸ ಬದಲಾವಣೆ ಜಾರಿಯಾಗಿದೆ.

ಹೊಸ ಪಟ್ಟಿಯಲ್ಲಿ ಭಾರತದ 50 ಅತಿ ದೊಡ್ಡ ಕಂಪನಿಗಳು ಇವೆ. ಅದಾನಿ ಟೋಟಲ್‌ ಗ್ಯಾಸ್‌, ಭಾರತ್‌ ಎಲೆಕ್ಟ್ರಾನಿಕ್ಸ್‌ (ಬಿಇಎಲ್)‌, ಎಚ್‌ಎಎಲ್‌, ಐಆರ್‌ಸಿಟಿಸಿ ಷೇರುಗಳೂ ನಿಫ್ಟಿ 50 ಕ್ಕೆ ಸೇರ್ಪಡೆಯಾಗಲಿವೆ. ನಿಫ್ಟಿ 50 ಇಂಡೆಕ್ಸ್‌ನಲ್ಲಿರುವ ಷೇರುಗಳ ಚಲನವಲನಗಳು ನಿಫ್ಟಿ ಸೂಚ್ಯಂಕದ ಏರಳಿತವನ್ನು ನಿರ್ಧರಿಸಲಿವೆ. ಹೀಗಾಗಿ ಈ ಕಂಪನಿಗಳ ಷೇರು ದರಗಳು ನಿರ್ಣಾಯಕವಾಗುತ್ತದೆ.

ಇದನ್ನೂ ಓದಿ: Adani | ಷೇರುಗಳ ವರ್ಗಾವಣೆಗೆ ತೆರಿಗೆ ಇಲಾಖೆ ಅನುಮತಿ ಅಗತ್ಯ ಎಂಬ ಎನ್‌ಡಿಟಿವಿ ವಾದ ತಳ್ಳಿ ಹಾಕಿದ ಅದಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಅನ್ಯಕೋಮಿ‌ನ ಯುವಕ ಅರೆಸ್ಟ್‌

Physical Abuse: ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ.

VISTARANEWS.COM


on

Physical Abuse
ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಅನ್ಯಕೋಮಿನ ಯುವಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ಎದುರು ಹಿಂದು ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
Koo

ಹುಬ್ಬಳ್ಳಿ: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಅನ್ಯಕೋಮಿ‌ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಆಘಾತಕಾರಿ ವಿಷಯ ತಿಳಿಸಿದ್ದರು. ಮಗಳು ಗರ್ಭಿಣಿಯಾದ ಸುದ್ದಿ ತಿಳಿದು ಪೋಷಕರು ಕಂಗಾಲಾಗಿದ್ದರು. ಹೀಗಾಗಿ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ್ದ ಯುವಕ, ಇದರ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೀಗಾಗಿ ಯುವಕನ ವಿರುದ್ಧ ಹಿಂದುಪರ ಸಂಘಟನೆಗಳು ಆಕ್ರೋಶ ಹೊರಹಾಕಿ, ಆರೋಪಿಯನ್ನು ಕೂಡಲೇ ಬಂಧಿಸುವಂತೆ ಶುಕ್ರವಾರ ಸಂಜೆ ನವನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ರಾಪ್ತೆ ಆಸ್ಪತ್ರೆಗೆ ಹೋಗಿದ್ದನ್ನು ಅರಿತ ಯುವಕ, ಆಕೆ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಹೀಗಾಗಿ ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹಿಂದು ಪರ ಸಂಘಟನೆಗಳ ಆಕ್ರೋಶ ಹೊರಹಾಕಿವೆ.

ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Kidnap case in Bengaluru

ಬೆಂಗಳೂರು: ಹಣಕ್ಕಾಗಿ ಯುವಕನೊಬ್ಬ ತನ್ನ ಸಹಚರರೊಂದಿಗೆ ಸೇರಿ ಗೆಳೆಯನನ್ನೇ ಕಿಡ್ನ್ಯಾಪ್‌ ಮಾಡಿ (Kidnap Case) ಜೈಲುಪಾಲಾಗಿದ್ದಾನೆ. ಕೇರಳ ಮೂಲದ ಸಾಹೀಲ್ ಸಲೀಂ ಕಿಡ್ನ್ಯಾಪ್‌ ಆದವನು. ಪ್ರಮುಖ ಆರೋಪಿ ಮುಬಾರಕ್‌ ಎಂಬಾತ ತನ್ನ ಸ್ನೇಹಿತ ಸುಂದರ್‌ ಜತೆಗೆ ಮತ್ತೊಂದಿಷ್ಟು ಜನರೊಟ್ಟಿಗೆ ಪ್ಲ್ಯಾನ್‌ ಮಾಡಿ ಸಾಹೀಲ್‌ನನ್ನು ಕಿಡ್ನ್ಯಾಪ್‌ ಮಾಡಿದ್ದರು.

ಪದವಿ ವ್ಯಾಸಂಗ ಮಾಡುತ್ತಿದ್ದ ಸಾಹೀಲ್‌ ಬೆಂಗಳೂರಿನ ಸಂಪಿಗೆಹಳ್ಳಿಯ ಪಿಜಿವೊಂದರಲ್ಲಿ ವಾಸವಿದ್ದ. ಮುಬಾರಕ್ ಹಾಗೂ ಸಾಹೀಲ್ ಇಬ್ಬರು ಪಿಯುಸಿಯಲ್ಲಿ ಕ್ಲಾಸ್ ಮೇಟ್ಸ್ ಆಗಿದ್ದರು.

ಸಾಹೀಲ್ ಆರ್ಮಿ ಆಫೀಸರ್‌ ಮಗ.. ಆತನ ಬಳಿ ಸಿಕ್ಕಾಪಟ್ಟೆ ಹಣ ಇರುತ್ತೆ ಎಂದು ಕಿಡ್ನ್ಯಾಪ್‌ ಪ್ಲಾನ್ ಮಾಡಿದ್ದ. ಪಿಜಿಯಲ್ಲಿದ್ದ ಸಾಹೀಲ್‌ನನ್ನು ಕರೆಸಿ ಶೆಡ್‌ವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಈ ವೇಳೆ ಸಾಹೀಲ್‌ನಿಂದ 25 ಸಾವಿರ ರೂ. ಹಣ ಪಡೆದು ಬಿಟ್ಟು ಕಳಿಸಿದ್ದರು. ಇದರಿಂದ ಹೆದರಿದ ಸಾಹೀಲ್‌ ಕೇರಳ ಸೇರಿದ್ದ.

ಮಗ ಪಿಜಿ ತೊರೆದು ಮನೆ ಸೇರಿದ್ದು ಪೋಷಕರಿಗೆ ಅನುಮಾನ ಮೂಡಿಸಿತ್ತು. ಹೀಗಾಗಿ ವಿಚಾರಿಸಿದಾಗ ಸಾಹಿಲ್‌ ತನ್ನ ತಂದೆ ಬಳಿ ನಡೆದಿದ್ದನ್ನು ತಿಳಿಸಿದ್ದ. ಸದ್ಯ ಸಾಹೀಲ್ ತಂದೆ ನೀಡಿದ ದೂರಿನನ್ವಯ ಸಂಪಿಗೆಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಿಗಾಗಿ ಬಲೆಬೀಸಿದ್ದಾರೆ.

6 ವರ್ಷದ ಬಾಲಕಿಯ ಅಪಹರಿಸಲು ಯತ್ನಿಸಿದ ದುಷ್ಟ

ಯಾದಗಿರಿ: ಹಾಡಹಗಲೆ ದುಷ್ಕರ್ಮಿಯೊಬ್ಬ ಶಾಲಾ ವಿದ್ಯಾರ್ಥಿನಿಯನ್ನು ಅಪಹರಿಸಲು (kidnap case) ಯತ್ನಿಸಿದ್ದಾರೆ. ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ (Crime News) ನಡೆದಿದೆ. 6 ವರ್ಷದ ಸಂಜನಾ ಎಂಬಾಕೆ ಎಂದಿನಂತೆ ಸ್ನೇಹಿತೆ ಮನೆಯಿಂದ ಟ್ಯೂಶನ್‌ಗೆ ತೆರಳುತ್ತಿದ್ದಳು.

ಇದನ್ನೂ ಓದಿ: Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಈ ವೇಳೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೊರ್ವ ಬಾಲಕಿಯ ಕಣ್ಣಿಗೆ ಸ್ಪ್ರೇ ಮಾಡಿದ್ದಾನೆ. ಬಳಿಕ ಅಪಹರಿಸಲು ಯತ್ನಿಸಿದಾಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಬಂದಿದ್ದಾಳೆ. ಸದ್ಯ ಪೋಷಕರ ದೂರಿನ ಮೇರೆಗೆ ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Rachita Taneja: ಅಂತಾರಾಷ್ಟ್ರೀಯ ಮಾಧ್ಯಮ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತದ ರಚಿತಾ ತನೇಜಾ ಹಾಗೂ ಜುಂಜಿ ಅವರಿಗೆ ಕೋಫಿ ಅನ್ನಾನ್‌ ಕರೇಜ್‌ ಇನ್‌ ಕಾರ್ಟೂನಿಂಗ್‌ ಅವಾರ್ಡ್‌ ನೀಡಲಾಗಿದೆ. ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪ್ರಶಸ್ತಿ ಪಡೆದವರು ಯಾರು, ಅವರ ಹಿನ್ನೆಲೆ ಏನು ಎಂಬುದು ಸೇರಿ ಹಲವು ಮಾಹಿತಿ ಇಲ್ಲಿದೆ.

VISTARANEWS.COM


on

Rachita Taneja
Koo

ನವದೆಹಲಿ: ಭಾರತದ ಖ್ಯಾತ ವ್ಯಂಗ್ಯ ಚಿತ್ರ ಕಲಾವಿದೆ, ಮೊನಚು ಕಾರ್ಟೂನ್‌ಗಳ ಮೂಲಕ ದೇಶಾದ್ಯಂತ ಗಮನ ಸೆಳೆದಿರುವ ರಚಿತಾ ತನೇಜಾ (Rachita Taneja) ಅವರಿಗೆ ಪ್ರತಿಷ್ಠಿತ ‘ಕೋಫಿ ಅನ್ನಾನ್‌ ಕರೇಜ್‌ ಇನ್‌ ಕಾರ್ಟೂನಿಂಗ್‌ ಅವಾರ್ಡ್‌’ (Kofi Annan Courage in Cartooning Award) ಲಭಿಸಿದೆ. ರಚಿತಾ ತನೇಜಾ ಹಾಗೂ ಹಾಂಕಾಂಗ್‌ನ ಜುಂಜಿ ಅವರಿಗೆ (Zunzi) ಅವರಿಗೆ ಸ್ವಿಟ್ಜರ್‌ಲ್ಯಾಂಡ್‌ನ ಜಿನೀವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಾಧ್ಯಮ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತದ ರಚಿತಾ ತನೇಜಾ ಹಾಗೂ ಜುಂಜಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಮೊನಚು ಕಾರ್ಟೂನ್‌ಗಳ ಮೂಲಕವೇ ಮಾಧ್ಯಮ ಸ್ವಾತಂತ್ರ್ಯವನ್ನು ಎತ್ತಿಹಿಡಿದ, ಜನರಲ್ಲಿ ಅರಿವು ಮೂಡಿಸಿದ ಹಿನ್ನೆಲೆಯಲ್ಲಿ ಇವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಮಾಧ್ಯಮ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಭಾರತವು 180 ರಾಷ್ಟ್ರಗಳ ಪಟ್ಟಿಯಲ್ಲಿ 161ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಹಾಂಕಾಂಗ್‌ 140ನೇ ಸ್ಥಾನದಲ್ಲಿದೆ.

ಯಾರಿವರು ರಚಿತಾ ತನೇಜಾ?

ರಚಿತಾ ತನೇಜಾ ಅವರು ಕಾರ್ಟೂನಿಸ್ಟ್‌ ಆಗಿದ್ದು, ಸ್ಯಾನಿಟರಿ ಪ್ಯಾನೆಲ್ಸ್‌ ಎಂಬ ವೆಬ್‌ಕಾಮಿಕ್‌ ಆನ್‌ಲೈನ್‌ ವೇದಿಕೆ ಮೂಲಕವೇ ವ್ಯಂಗ್ಯಚಿತ್ರಗಳನ್ನು ಪ್ರಕಟಿಸುತ್ತಾರೆ. ಕಿರುಕುಳ, ಹೆಣ್ಣುಮಕ್ಕಳ ಮುಟ್ಟು, ಸರ್ವಾಧಿಕಾರ ಸೇರಿ ಹಲವು ವಿಷಯಗಳ ಕುರಿತು ಇವರ ಕಾರ್ಟೂನ್‌ಗಳು ಚರ್ಚೆಯನ್ನು ಹುಟ್ಟುಹಾಕಿವೆ. ಇವರ ವಿರುದ್ಧ ಎಬಿವಿಪಿ ಕೇಸ್‌ ಕೂಡ ದಾಖಲಿಸಿದೆ. ನ್ಯಾಯಾಂಗ ನಿಂದನೆಯ ಪ್ರಕರಣದ ವಿಚಾರಣೆಯೂ ನಡೆಯುತ್ತಿದ್ದು, ಪ್ರಕರಣ ಸಾಬೀತಾದರೆ ಇವರನ್ನು ಜೈಲಿಗೆ ಕಳುಹಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

“ಮುಖ್ಯವಾಹಿನಿಯಲ್ಲಿರುವ ಪತ್ರಕರ್ತರು ಪಾರದರ್ಶಕವಾಗಿ ಕೆಲಸ ಮಾಡಲು ಆಗದಿದ್ದರೆ ಅಥವಾ ಅವರು ಆಡಳಿತ ಪಕ್ಷದಿಂದ ಪ್ರಭಾವಿತರಾಗಿದ್ದರೆ, ಅಂತಹ ಸಂದರ್ಭದಲ್ಲಿ ಕಾರ್ಟೂನಿಸ್ಟ್‌ಗಳು ಮಾಧ್ಯಮ ಸ್ವಾತಂತ್ರ್ಯವನ್ನು ಮುನ್ನಡೆಸಬೇಕು, ನಿಷ್ಪಕ್ಷಪಾತವಾಗಿ ವ್ಯಂಗ್ಯಚಿತ್ರಗಳನ್ನು ಪ್ರಕಟಿಸಬೇಕು” ಎಂಬುದಾಗಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ರಚಿತಾ ತನೇಜಾ ಹೇಳಿದರು. ಹಾಂಕಾಂಗ್‌ನ ಜುಂಜಿ ಅವರು ಪತ್ರಿಕೆಯೊಂದರಲ್ಲಿ ಕಾರ್ಟೂನಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಚೀನಾ ನೂತನ ಭದ್ರತಾ ಕಾನೂನುಗಳನ್ನು ಅಳವಡಿಸಿಕೊಂಡ ಬಳಿಕ ಪತ್ರಿಕೆಯು ಇವರನ್ನು ಕೆಲಸದಿಂದ ವಜಾಗೊಳಿಸಿತ್ತು.

ಇದನ್ನೂ ಓದಿ: Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

Continue Reading

ಪ್ರಮುಖ ಸುದ್ದಿ

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Rahul Gandhi : ನೀವು ಬೇಕಾರೆ ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಮುಂದಿನ ಮಹಾತ್ಮ ಗಾಂಧಿಯಾಗಿ ಹೊರಹೊಮ್ಮಲಿದ್ದಾರೆ. ಗಾಂಧೀಜಿ ಸ್ವಲ್ಪ ಕುತಂತ್ರಿಯಾಗಿದ್ದರು. ಆದರೆ, ರಾಹುಲ್ ಸಂಪೂರ್ಣವಾಗಿ ಮುಕ್ತ ಮತ್ತು ಶುದ್ಧ ಹೃದಯದವರು” ಎಂದು ರಾಜ್​​ಗುರು ಮೇ 1 ರಂದು ರಾಜ್​ಕೋಟ್​ನಲ್ಲಿ ನಡೆದ ಕಾಂಗ್ರೆಸ್​​ ಸಭೆಯಲ್ಲಿ ಹೇಳಿದರು.

VISTARANEWS.COM


on

Rahul Gandhi
Koo

ನವದೆಹಲಿ: ರಾಹುಲ್ ಗಾಂಧಿ (Rahul Gandhi) ಭಾರತ ದೇಶದ ಮುಂದಿನ ‘ಮಹಾತ್ಮ’ ಆಗಲು ಸಜ್ಜಾಗಿದ್ದಾರೆ ಎಂದು ಗುಜರಾತ್ ಕಾಂಗ್ರೆಸ್ ಮುಖಂಡ ಇಂದ್ರನಿಲ್ ರಾಜ್​ಗುರು ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ರಾಹುಲ್ ಮಹಾತ್ಮ ಗಾಂಧಿಗಿಂತಲೂ ಗುಣದಲ್ಲಿ ಒಂದು ಹೆಜ್ಜೆ ಮುಂದು. ರಾಹುಲ್ “ಮುಕ್ತ” ಮತ್ತು “ಶುದ್ಧ ಹೃದಯದವರು”. ಆದರೆ ಗಾಂಧೀಜಿ ಸ್ವಲ್ಪ “ಕುತಂತ್ರಿ” ಯಾಗಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ನೀವು ಬೇಕಾದರೆ ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಮುಂದಿನ ಮಹಾತ್ಮ ನಾಗಿ ಹೊರಹೊಮ್ಮಲಿದ್ದಾರೆ. ಗಾಂಧೀಜಿ ಸ್ವಲ್ಪ ಕುತಂತ್ರಿಯಾಗಿದ್ದರು. ಆದರೆ, ರಾಹುಲ್ ಸಂಪೂರ್ಣವಾಗಿ ಮುಕ್ತ ಮತ್ತು ಶುದ್ಧ ಹೃದಯದವರಾಗಿದ್ದಾರೆ ಎಂದು ರಾಜ್​​ಗುರು ಮೇ 1 ರಂದು ರಾಜ್​ಕೋಟ್​ನಲ್ಲಿ ನಡೆದ ಕಾಂಗ್ರೆಸ್​​ ಸಭೆಯಲ್ಲಿ ಹೇಳಿದ್ದರೆ. ಮಾಜಿ ಶಾಸಕರಾಗಿರುವ ರಾಜ್​ಗುರ್​, ರಾಹುಲ್ ಗಾಂಧಿ ದೇಶದ ಮಹಾನ್​ “ನಾಯಕ” ಎಂಬುದಾಗಿ ಬಣ್ಣಿಸಿದ್ದಾರೆ.

ಕೆಲವು ಜನರು ಅವರನ್ನು ಪಪ್ಪು (ಪೆದ್ದ) ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ. ಆದರೆ ದೇಶವು ಈಗ ಅವರನ್ನು ತನ್ನ ನಾಯಕನಾಗಿ ಸ್ವೀಕರಿಸಿದೆ ಎಂದು ರಾಜ್​ಗುರು ಹೇಳಿದ್ದಾರೆ.

ಬಿಜೆಪಿ ಪ್ರತಿಕ್ರಿಯೆ ಏನು?

ಕಾಂಗ್ರೆಸ್ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವ ಮೂಲಕ ಜನರು ಮಹಾತ್ಮ ಗಾಂಧಿ ವಿರುದ್ಧದ ಹೇಳಿಕೆ ಪ್ರತಿಕಾರ ತೀರಿಸಬೇಕು ಎಂದು ಕರೆ ಕೊಟ್ಟಿದೆ.

ಇದನ್ನೂ ಓದಿ: 2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

“ಗಾಂಧೀಜಿ ನಮ್ಮ ರಾಷ್ಟ್ರದ ಪಿತಾಮಹ ಮತ್ತು ನಮ್ಮನ್ನು ಸ್ವಾತಂತ್ರ್ಯದ ಕಡೆಗೆ ನಮ್ಮನ್ನು ಕರೆದೊಯ್ದವರು. ಇಂತಹ ಹೇಳಿಕೆಗಳಿಗಾಗಿ ಭಾರತ ಮತ್ತು ಗುಜರಾತ್ ಜನರು ಕಾಂಗ್ರೆಸ್ ಅನ್ನು ಕ್ಷಮಿಸುವುದಿಲ್ಲ. ಈ ಕೋಪವು ಚುನಾವಣಾ ಫಲಿತಾಂಶದಲ್ಲಿ ಪ್ರತಿಫಲಿಸುತ್ತದೆ” ಎಂದು ಗುಜರಾತ್ ಬಿಜೆಪಿ ಘಟಕದ ಉಪಾಧ್ಯಕ್ಷ ಭರತ್ ಬೋಘರಾ ಹೇಳಿದ್ದಾರೆ.

ರಾಜ್​ಗುರು ಸ್ಪಷ್ಟನೆ ಏನು?

ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜ್​ಗುರು, ಅವರು ಇತಿಹಾಸ ಪುಸ್ತಕದಲ್ಲಿ “ಕುತಂತ್ರ” ಎಂಬ ಪದವನ್ನು ಮಹಾತ್ಮರಿಗೆ ಬಳಸಲಾಗಿದೆ ಎಂದು ಹೇಳಿದೆ. “ಕುತಂತ್ರ” ಎಂದರೆ ಅವರು ನಿಜವಾಗಿಯೂ “ಬುದ್ಧಿವಂತರು” ಎಂದು ನಾನು ಹೇಳಿಕೆ ನೀಡಿದ್ದೆ ಎಂಬುದಾಗಿ ರಾಜ್​ಗುರು ಹೇಳಿದ್ದಾರೆ.

ನಾನು ಗಾಂಧೀಜಿಗೆ ಸಂಬಂಧಿಸಿದ ಅನೇಕ ಇತಿಹಾಸ ಪುಸ್ತಕಗಳನ್ನು ಓದಿದ್ದೇನೆ ಮತ್ತು ಅಂತಹ ಒಂದು ಪುಸ್ತಕದಲ್ಲಿ ಕುತಂತ್ರ ಎಂಬ ಉಲ್ಲೇಖವಿದೆ. ನಾನು ನನ್ನ ಸ್ವಂತ ಪದಗಳನ್ನು ಸೇರಿಸಿಲ್ಲ. ನಾನು ರಾಹುಲ್ ಗಾಂಧಿಯನ್ನು ‘ಮುಂದಿನ ಮಹಾತ್ಮ’ ಎಂದು ಕರೆದಿದ್ದೇನೆ. ಏಕೆಂದರೆ ಇಂದು, ಮಹಾತ್ಮ ಗಾಂಧಿ ಬ್ರಿಟಿಷರ ವಿರುದ್ಧ ಹೋರಾಡಿದಂತೆಯೇ ಅವರು ಮಾತ್ರ ಬಿಜೆಪಿ ವಿರುದ್ಧ ಹೋರಾಡುತ್ತಿದ್ದಾರೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ” ಎಂದು ಮಾಜಿ ಹೇಳಿದರು.

Continue Reading

ಕ್ರೈಂ

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Prajwal Revanna Case: ಈ ವೇಳೆ ಎಚ್.ಡಿ. ರೇವಣ್ಣ ಪರ ವಕೀಲರಾದ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದ್ದು, ಕೆ.ಆರ್. ನಗರ ಠಾಣೆಯ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನದಡಿ ಕೇಸ್‌ ದಾಖಲು ಮಾಡಲಾಗಿದೆ. ಇವುಗಳು ಜಾಮೀನು ರಹಿತವಾಗಿವೆ ಎಂದು ದೂರಿನ ಸಾರಾಂಶವನ್ನು ಓದಿ ತಿಳಿಸಿದರು. ಅಲ್ಲದೆ, ಈ ದೂರಿನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಇನ್ನು ನಾಳೆ ಎಸ್ಐಟಿ ಮುಂದೆ ಎಚ್.ಡಿ. ರೇವಣ್ಣ ಹಾಜರಾಗಲು ಸಿದ್ಧರಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

VISTARANEWS.COM


on

Prajwal Revanna Case Kidnapping case filed against Revanna Anticipatory bail plea postponed
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರಕ್ಕೆ ಮುಂದೂಡಿದೆ. ಇದೇ ವೇಳೆ ರೇವಣ್ಣ ಶನಿವಾರ ಎಸ್‌ಐಟಿ ಮುಂದೆ ಹಾಜರಾಗಲು ಸಿದ್ಧರಿದ್ದಾರೆ ಎಂದು ಅವರ ಪರ ವಕೀಲರು ಕೋರ್ಟ್‌ಗೆ ತಿಳಿಸಿದ್ದಾರೆ.

ಎರಡನೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್‌ ನೀಡಿದೆ. ಬಳಿಕ ವಿಚಾರಣೆಯನ್ನು ಶನಿವಾರಕ್ಕೆ (ಮೇ 4) ಮುಂದೂಡಿದೆ.

ನಾಳೆ ಎಸ್‌ಐಟಿ ಮುಂದೆ ರೇವಣ್ಣ ಹಾಜರ್

ಈ ವೇಳೆ ಎಚ್.ಡಿ. ರೇವಣ್ಣ ಪರ ವಕೀಲರಾದ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದ್ದು, ಕೆ.ಆರ್. ನಗರ ಠಾಣೆಯ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನದಡಿ ಕೇಸ್‌ ದಾಖಲು ಮಾಡಲಾಗಿದೆ. ಇವುಗಳು ಜಾಮೀನು ರಹಿತವಾಗಿವೆ ಎಂದು ದೂರಿನ ಸಾರಾಂಶವನ್ನು ಓದಿ ತಿಳಿಸಿದರು. ಅಲ್ಲದೆ, ಈ ದೂರಿನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಇನ್ನು ನಾಳೆ ಎಸ್ಐಟಿ ಮುಂದೆ ಎಚ್.ಡಿ. ರೇವಣ್ಣ ಹಾಜರಾಗಲು ಸಿದ್ಧರಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ಶನಿವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದು, ಎಸ್ಐಟಿ ಪರ ಎಸ್‌ಪಿಪಿಗೆ ಕೋರ್ಟ್ ನೋಟಿಸ್ ನೀಡಿದ್ದಾರೆ.

ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

ಲುಕ್‌ಔಟ್ ನೋಟಿಸ್‌ಗಳನ್ನು ಲುಕ್‌ಔಟ್ ಸರ್ಕ್ಯುಲರ್‌ಗಳು (LOC) ಎಂದೂ ಕರೆಯಲಾಗುತ್ತದೆ. ತಲೆಮರೆಸಿಕೊಂಡಿರುವ ಅಪರಾಧಿಗಳನ್ನು ಪತ್ತೆಹಚ್ಚಲು ಇವುಗಳನ್ನು ಇಶ್ಯೂ ಮಾಡಲಾಗುತ್ತದೆ. ಇದನ್ನು ದೇಶದ ವಲಸೆ ಬ್ಯೂರೋ (Bureau of Immigration) ಹಾಗೂ ಗೃಹ ಸಚಿವಾಲಯ (MHA) ಮಾತ್ರ ನೀಡಬಹುದು. ವಿಮಾನ ನಿಲ್ದಾಣ (Airport) ಮತ್ತಿತರ ಸಂಚಾರ ಪಾಯಿಂಟ್‌ಗಳಲ್ಲಿ ಕಾನೂನು ಜಾರಿ ಅಧಿಕಾರಿಗಳಿಗೆ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿಗಾ ಇಡಲು, ಪರಿಣಾಮಕಾರಿಯಾಗಿ ತಡೆಗಟ್ಟಲು ಇದನ್ನು ಹೊರಡಿಸಲಾಗುತ್ತದೆ.

ಒಂದು ದೇಶದ ವಲಸೆ ಅಧಿಕಾರಿಗಳು ಯಾವುದೇ ತಲೆಮರೆಸಿಕೊಂಡಿರುವ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ ಹೊರಡಿಸಿದರೆ, ಆ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಬಹುದು. ಅಪರಾಧಿಗಳು ಇದರಿಂದಾಗಿ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ನಾವು ಆಗಾಗ ಕೇಳುತ್ತಿರುತ್ತೇವೆ.

ಮಾರ್ಗಸೂಚಿಗಳು

ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಈ ಸರ್ಕ್ಯುಲರ್‌ಗಳ ಮೂಲ ಮಾರ್ಗಸೂಚಿಗಳನ್ನು ಗೃಹ ವ್ಯವಹಾರಗಳ ಸಚಿವಾಲಯ (MHA) ಹೊರಡಿಸಿದೆ. ಈ ಮಾರ್ಗಸೂಚಿಗಳು ಹೀಗಿವೆ:

1) LOC ನೀಡುವ ವಿನಂತಿಯನ್ನು ಭಾರತ ಸರ್ಕಾರದ ಉಪ ಕಾರ್ಯದರ್ಶಿ, ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ, ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಯ ಅಧಿಕಾರಿಗಳು ಮಾತ್ರ ಮಾಡಬಹುದು.

2) ಯಾವುದೇ ಭಾರತೀಯ ವ್ಯಕ್ತಿಯ ವಿರುದ್ಧ ಎಲ್ಲಾ ವಲಸೆ ಚೆಕ್‌ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು.

3) ನೋಟಿಸ್ ನೀಡುವ ಏಜೆನ್ಸಿಯು ಆರೋಪಿಯ ಸಂಪೂರ್ಣ ಗುರುತಿನ ವಿವರಗಳನ್ನು ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ಮಾನದಂಡಗಳಿದ್ದಲ್ಲಿ LOC ನೀಡಲಾಗುವುದಿಲ್ಲ.

4) ಸಾಮಾನ್ಯವಾಗಿ ಲುಕ್‌ಔಟ್ ನೋಟೀಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮಾಡಬಹುದು. ಒಂದು ವರ್ಷದ ನಿಗದಿತ ಅವಧಿಯೊಳಗೆ LOCಯನ್ನು ವಿಸ್ತರಿಸಲು ಯಾವುದೇ ವಿನಂತಿ ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿಕಾರವಿದೆ.

ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟೀಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್‌ಔಟ್ ನೋಟಿಸ್‌ನ ದುರ್ಬಳಕೆ

ಹಲವು ಪ್ರಕರಣಗಳಲ್ಲಿ ಲುಕ್‌ಔಟ್‌ ನೋಟಿಸ್‌ ದುರ್ಬಳಕೆಯಾಗಿದೆ. ಯಾರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆಯೋ ಅವರಿಗೂ ಲುಕ್‌ಔಟ್ ನೋಟಿಸ್ ಬಗ್ಗೆ ಕೆಲವೊಮ್ಮ ತಿಳಿದಿರುವುದಿಲ್ಲ. ವ್ಯಕ್ತಿ ತನ್ನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವುದನ್ನು ನಿರೀಕ್ಷಿಸದೇ ಇರಬಹುದು. ವಿಮಾನ ನಿಲ್ದಾಣ/ಗಡಿ ಇತ್ಯಾದಿಗಳಲ್ಲಿ ವಲಸೆ ಅಧಿಕಾರಿಗಳು ತಡೆದಾಗ ಅಥವಾ ಬಂಧಿಸಿದಾಗ ಮಾತ್ರ ಆರೋಪಿಗೆ ತಿಳಿಯುತ್ತದೆ.

ಆದರೆ ಮಾಹಿತಿ ತಂತ್ರಜ್ಞಾನ ಕ್ರಾಂತಿಯ ಯುಗದಲ್ಲಿ ಹೀಗಾಗದು. ಕೆಲವೊಮ್ಮೆ ಲುಕ್‌ಔಟ್ ನೋಟಿಸ್‌ಗಳನ್ನು ಎಲ್ಲಾ ನಿಯಮಗಳ ಪಾಲನೆಯಾಗದೆ ನೀಡಲಾಗುತ್ತದೆ. ಈ ಪ್ರಕರಣಗಳು ಶಂಕಿತ ವ್ಯಕ್ತಿಗಳು, ದೇಶ ವಿರೋಧಿ ಅಂಶಗಳು ಇತ್ಯಾದಿಗಳೊಂದಿಗೆ ಸಂಬಂಧ ಹೊಂದಿವೆ. ಇಂತಹ ಪ್ರಕರಣಗಳಿಂದ ಬಾಧಿತರಾದ ಯಾವುದೇ ವ್ಯಕ್ತಿ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಪರಿಹಾರ ಪಡೆಯಲು ಮಾನವ ಹಕ್ಕುಗಳ ಆಯೋಗ ಅಥವಾ ಹೈಕೋರ್ಟ್‌ಗಳನ್ನು ಸಂಪರ್ಕಿಸಬಹುದು. ಆದರೆ ಈ ಪ್ರಕ್ರಿಯೆ ಹಲವು ವರ್ಷಗಳನ್ನು ತೆಗೆದುಕೊಳ್ಳಬಹುದು ಮತ್ತು ತುಂಬಾ ದುಬಾರಿಯಾಗಬಹುದು.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ಲುಕ್‌ಔಟ್ ನೋಟಿಸ್‌ಗಳು ಅಪರಾಧಿಗಳಲ್ಲಿ ಭಯವನ್ನು ಉಂಟುಮಾಡುತ್ತವೆಯೇ? ಅನೇಕ ಪ್ರಕರಣಗಳಲ್ಲಿ ಅನೇಕ ಅಪರಾಧಿಗಳು ಮತ್ತು ಆರೋಪಿಗಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಭಾರತದಲ್ಲಿ ಲುಕ್‌ಔಟ್ ನೋಟಿಸ್‌ಗಳನ್ನು ಹೊರಡಿಸಲಾಗಿದೆ. ಆದರೆ ಇದರಿಂದ ಅವರು ವಿಚಲಿತರಾದಂತಿಲ್ಲ. ಇಲ್ಲಿಯವರೆಗೆ ಎಷ್ಟು ಲುಕ್‌ಔಟ್ ನೋಟಿಸ್‌ಗಳನ್ನು ನೀಡಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.

Continue Reading
Advertisement
Physical Abuse
ಕರ್ನಾಟಕ3 mins ago

Physical Abuse: ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಅನ್ಯಕೋಮಿ‌ನ ಯುವಕ ಅರೆಸ್ಟ್‌

Rachita Taneja
ದೇಶ17 mins ago

Rachita Taneja: ಭಾರತದ ಕಾರ್ಟೂನಿಸ್ಸ್ ರಚಿತಾ ತನೇಜಾಗೆ ಕೋಫಿ ಅನ್ನಾನ್‌ ಪ್ರಶಸ್ತಿ ಗರಿ

Rahul Gandhi
ಪ್ರಮುಖ ಸುದ್ದಿ19 mins ago

Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Prajwal Revanna Case Kidnapping case filed against Revanna Anticipatory bail plea postponed
ಕ್ರೈಂ22 mins ago

Prajwal Revanna Case: ರೇವಣ್ಣ ಮೇಲೆ ಕಿಡ್ನ್ಯಾಪ್‌ ಕೇಸ್;‌ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ, ನಾಳೆ SIT ಮುಂದೆ ಹಾಜರ್‌?

Prajwal Revanna Case HD Revanna ready to leave the country SIT issues lookout notice
ಕ್ರೈಂ49 mins ago

Prajwal Revanna Case: ದೇಶ ಬಿಟ್ಟು ಹೋಗಲು ಸಜ್ಜಾದರೇ ಎಚ್.ಡಿ. ರೇವಣ್ಣ? ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದ SIT!

IPL 2024
Latest54 mins ago

IPL 2024 : ಕೊಹ್ಲಿಯ ಸ್ಟ್ರೈಕ್ ರೇಟ್ ಪ್ರಶ್ನಿಸುವವರಿಗೆ ತಕ್ಕ ಪಾಠ ಹೇಳಿದ ಕೈಫ್​, ಪಠಾಣ್​​

Faisal Raza Abidi
ದೇಶ59 mins ago

2026ರಲ್ಲಿ ಭಾರತ ಪೀಸ್‌ ಪೀಸ್‌ ಆಗುತ್ತದೆ ಎಂದ ಪಾಕ್‌ ಮಾಜಿ ಸಂಸದ; ಮೋದಿ ಹಿಂದುತ್ವವೂ ಪತನ ಎಂದು ಹೇಳಿಕೆ!

Wonderla Bengaluru
ಕರ್ನಾಟಕ1 hour ago

Wonderla Bengaluru: ಬೇಸಿಗೆ ರಜೆಯನ್ನು ಇನ್ನಷ್ಟು ಮಜವಾಗಿಸಲು ವಂಡರ್‌ಲಾದಲ್ಲಿ ʼಸಮ್ಮರ್‌ಲಾ ಫಿಯೆಸ್ಟಾ-2024ʼ: ಭರಪೂರ ಆಫರ್ಸ್‌

training for election duty staff in Karwar
ಉತ್ತರ ಕನ್ನಡ1 hour ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ1 hour ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ5 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ16 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌