Adani Group : ಅದಾನಿ-ಹಿಂಡೆನ್‌ಬರ್ಗ್‌ ವಿವಾದದ ಸೆಬಿ ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಲು ಸುಪ್ರೀಂ ನಕಾರ - Vistara News

ಪ್ರಮುಖ ಸುದ್ದಿ

Adani Group : ಅದಾನಿ-ಹಿಂಡೆನ್‌ಬರ್ಗ್‌ ವಿವಾದದ ಸೆಬಿ ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಲು ಸುಪ್ರೀಂ ನಕಾರ

Adani Group ಅದಾನಿ-ಹಿಂಡೆನ್‌ಬರ್ಗ್‌ ವಿವಾದಕ್ಕೆ ಸಂಬಂಧಿಸಿ ಸೆಬಿ ನಡೆಸುತ್ತಿರುವ ತನಿಖೆಗೆ ಹೆಚ್ಚಿನ ಕಾಲಾವಕಾಶ ನೀಡಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ವಿವರ ಇಲ್ಲಿದೆ.

VISTARANEWS.COM


on

Adani Stocks surge Adani Group shares surge market value rises to Rs 10 lakh crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅದಾನಿ ಗ್ರೂಪ್‌ (Adani Group) ಮತ್ತು ಹಿಂಡೆನ್‌ ಬರ್ಗ್‌ ನಡುವಣ ವಿವಾದದ ಕುರಿತು ಷೇರು ಮಾರುಕಟ್ಟೆ ನಿಯಂತ್ರಕ ಸೆಬಿ ನಡೆಸುತ್ತಿರುವ ತನಿಖೆಗೆ 6 ತಿಂಗಳಿನ ಹೆಚ್ಚುವರಿ ಕಾಲಾವಕಾಶ ನೀಡಲು ಸುಪ್ರೀಂಕೋರ್ಟ್‌ (supreme court) ಶುಕ್ರವಾರ ನಿರಾಕರಿಸಿದೆ.

ಅದಾನಿ ಗ್ರೂಪ್-ಹಿಂಡೆನ್‌ ಬರ್ಗ್‌ ವಿವಾದದ ತನಿಖೆಯನ್ನು (Adani-Hindenburg row) ಮುಂದುವರಿಸಲು ಆರು ತಿಂಗಳು ಹೆಚ್ಚುವರಿ ಕಾಲಾವಕಾಶವನ್ನು ಸೆಬಿ ಕೋರಿತ್ತು. ಮಾಡುವ ಕೆಲಸದಲ್ಲಿ ಚುರುಕುತನ ಇರಬೇಕು. ಆಗಸ್ಟ್‌ ಮಧ್ಯಭಾಗದಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ. ಆ ವೇಳೆಗೆ ಸೆಬಿಯ ವರದಿ ತಲುಪಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನೇತೃತ್ವದ ಸುಪ್ರೀಂಕೋರ್ಟ್‌ ಪೀಠ ಹೇಳಿದೆ.

ಇದನ್ನೂ ಓದಿ: Adani Group : ಹಿಂಡೆನ್‌ ಬರ್ಗ್‌ ಆರೋಪಗಳು ಭಾರತದ ಮೇಲಿನ ದಾಳಿ, ಸುಳ್ಳಿನ ಕಂತೆ, ಅದಾನಿ ತಿರುಗೇಟು, 413 ಪುಟಗಳ ರೆಸ್ಪಾನ್ಸ್

ಪ್ರಕರಣದಲ್ಲಿ ಸೆಬಿ ಯಾವುದೇ ರೀತಿಯಲ್ಲಿ ವಿಫಲವಾಗಿಲ್ಲ. ಆದ್ದರಿಂದ ಅದರ ಬಗ್ಗೆ ಆರೋಪಿಸುವಾಗ ಹುಷಾರಾಗಿರಿ ಎಂದು ಅರ್ಜಿದಾರರ ಪರ ವಕೀಲ ಜಯಾ ಠಾಕೂರ್‌ಗೆ ಕೋರ್ಟ್‌ ಎಚ್ಚರಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2. 627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು (Bank of Baroda Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).

ಹುದ್ದೆಗಳ ವಿವರ

627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ
ಆರ್ಕಿಟೆಕ್ಟ್: 8 ಹುದ್ದೆ
ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ
ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ
ಸೀನಿಯರ್ ಮ್ಯಾನೇಜರ್: 22 ಹುದ್ದೆ
ಮ್ಯಾನೇಜರ್: 11 ಹುದ್ದೆ
ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ
ಗ್ರೂಪ್ ಹೆಡ್: 4 ಹುದ್ದೆ
ಟೆರಿಟರಿ ಹೆಡ್: 8 ಹುದ್ದೆ
ಸೀನಿಯರ್ ರಿಲೇಶನ್‌ಶಿಪ್‌ ಮ್ಯಾನೇಜರ್: 234 ಹುದ್ದೆ
ಇ-ವೆಲ್ತ್ ರಿಲೇಶನ್‌ಶಿಪ್‌ ಮ್ಯಾನೇಜರ್: 26 ಹುದ್ದೆ
ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ
ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್‌ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ
ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ
ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 19 ಹುದ್ದೆ
ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 15 ಹುದ್ದೆ
ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ
ರಿಲೇಶನ್‌ಶಿಪ್‌ ಮ್ಯಾನೇಜರ್: 66 ಹುದ್ದೆ
ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ
ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್‌ – 3 ಹುದ್ದೆಗಳಿವೆ.

ವಿದ್ಯಾರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಎಸ್ ವರ್ಗಗಳಿಗೆ ಸೇರಿದ ಅರ್ಜಿದಾರರು 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ವರ್ಗಗಳಿಗೆ ಸೇರಿದ ಅರ್ಜಿದಾರರು 199 ರೂ. ಪಾವತಿಸಬೇಕಾಗುತ್ತದೆ. ಇದಕ್ಕೆ ತೆರಿಗೆ ಪ್ರತ್ಯೇಕ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24 ವರ್ಷಗಳಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.

ನಿಯಮಿತ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗುತ್ತಿಗೆ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading

ದೇಶ

Suresh Gopi: ಇಂದಿರಾ ಗಾಂಧಿ ಭಾರತದ ಮಾತೆ ಎಂದ ಬಿಜೆಪಿ ಸಂಸದ ಸುರೇಶ್‌ ಗೋಪಿ

Suresh Gopi: ಎಡರಂಗದ ಭದ್ರಕೋಟೆಯಾಗಿದ್ದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದು, ಕೇರಳದ ಮೊದಲ ಬಿಜೆಪಿ ಸಂಸದರಾಗಿ ಇತಿಹಾಸ ನಿರ್ಮಿಸಿದ್ದಾರೆ. ಸುರೇಶ್ ಗೋಪಿ ಅವರು ಸಿಪಿಐನ ವಿ.ಎಸ್.ಸುನಿಲ್ ಕುಮಾರ್ ಅವರನ್ನು 74,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇವರು ಭಾನುವಾರ ಕೇಂದ್ರ ಖಾತೆ ಸಹಾಯಕ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಇಂದಿರಾ ಗಾಂಧಿ ಬಗ್ಗೆ ನೀಡಿರುವ ಹೇಳಿಕೆಯು ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Suresh Gopi
Koo

ತಿರುವನಂತಪುರಂ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕೇರಳದ ತ್ರಿಶೂರ್‌ ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್‌ ಗೋಪಿ ಅವರು ಗೆಲುವು ಸಾಧಿಸುವ ಮೂಲಕ ದೇವರ ನಾಡಿನಲ್ಲಿ ಬಿಜೆಪಿ ಖಾತೆ ತೆರೆಯುವಂತೆ ಮಾಡಿದ್ದಾರೆ. ಇದೇ ಕಾರಣಕ್ಕಾಗಿ ನರೇಂದ್ರ ಮೋದಿ (Narendra Modi) ಅವರು ಇವರಿಗೆ ಸಚಿವ ಸ್ಥಾನವನ್ನೂ ನೀಡಿದ್ದಾರೆ. ಇದರ ಬೆನ್ನಲ್ಲೇ, “ಇಂದಿರಾ ಗಾಂಧಿ (Indira Gandhi) ಅವರು ದೇಶದ ತಾಯಿ. ಮಾರ್ಕ್ಸ್‌ವಾದಿ ನಾಯಕ ಇ.ಕೆ. ನಾಯನಾರ್‌ ನನ್ನ ರಾಜಕೀಯ ಗುರು” ಎಂದು ಸುರೇಶ್‌ ಗೋಪಿ (Suresh Gopi) ಹೇಳಿಕೆ ನೀಡಿದ್ದಾರೆ.

ಕೇರಳ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕರೂ ಆಗಿದ್ದ ಕೆ. ಕರುಣಾಕರನ್‌ ಅವರ ಸ್ಮಾರಕಕ್ಕೆ ಭೇಟಿ ನೀಡಿದ ಬಳಿಕ ಪುಂಕುಣ್ಣಮ್‌ನಲ್ಲಿ ಸುದ್ದಿಗಾರರೊಂದಿಗೆ ಸುರೇಶ್‌ ಗೋಪಿ ಮಾತನಾಡಿದರು. “ಇಂದಿರಾ ಗಾಂಧಿ ಅವರು ಭಾರತದ ಮಾತೆ ಇದ್ದಂತೆ. ಕೇರಳದಲ್ಲಿ ಕೆ. ಕರುಣಾಕರನ್‌ ಅವರು ತಂದೆ ಇದ್ದಂತೆ. ಇವರು ತುಂಬ ದಿಟ್ಟ ಆಡಳಿತಗಾರರಾಗಿದ್ದರು. ಕೆ. ಕರುಣಾಕರನ್‌ ಹಾಗೂ ಮಾರ್ಕ್ಸ್‌ವಾದಿ ಇ.ಕೆ. ನಾಯನಾರ್‌ ಅವರು ನನ್ನ ರಾಜಕೀಯ ಗುರು” ಎಂದು ಹೇಳಿದ್ದಾರೆ.

ಸುರೇಶ್‌ ಗೋಪಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇದಾದ ಬಳಿಕ ಅವರು ಸ್ಪಷ್ಟನೆ ನೀಡಿದ್ದರು. “ನಾನು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬುದಾಗಿ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಇದು ಶುದ್ಧ ಸುಳ್ಳು. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇರಳದ ಏಳಿಗೆಗೆ ಶ್ರಮಿಸುತ್ತೇನೆ” ಎಂಬುದಾಗಿ ಸುರೇಶ್‌ ಗೋಪಿ ಅವರು ಪೋಸ್ಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದರು.

ಎಡರಂಗದ ಭದ್ರಕೋಟೆಯಾಗಿದ್ದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದು, ಕೇರಳದ ಮೊದಲ ಬಿಜೆಪಿ ಸಂಸದರಾಗಿ ಇತಿಹಾಸ ನಿರ್ಮಿಸಿದ್ದಾರೆ. ಸುರೇಶ್ ಗೋಪಿ ಅವರು ಸಿಪಿಐನ ವಿ.ಎಸ್.ಸುನಿಲ್ ಕುಮಾರ್ ಅವರನ್ನು 74,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕೆ ಮುರಳೀಧರನ್ ಅವರನ್ನು ಕಣಕ್ಕಿಳಿಸಿತ್ತು. 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಸುರೇಶ್ ಗೋಪಿ ‘ತ್ರಿಶೂರ್​ಗೆ ಕೇಂದ್ರ ಸಚಿವ ಸ್ಥಾನ, ಮೋದಿಯವರ ಗ್ಯಾರಂಟಿ’ ಎಂಬ ಘೋಷಣೆಯೊಂದಿಗೆ ಪ್ರಚಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Suresh Gopi: ಸಚಿವ ಸ್ಥಾನಕ್ಕೆ ಬಿಜೆಪಿಯ ಸುರೇಶ್‌ ಗೋಪಿ ರಾಜೀನಾಮೆ; ಮಹತ್ವದ ಸ್ಪಷ್ಟನೆ ಕೊಟ್ಟ ಸಂಸದ

Continue Reading

Latest

Viral Video: ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಬೆಡಗಿ! ಈ ವಿಡಿಯೊ ನೋಡುವ ಮುನ್ನ ಯೋಚಿಸಿ!

Viral Video: ಜಿರಳೆ ತಿನ್ನುವುದು, ಕಪ್ಪೆ ತಿನ್ನುವುದು, ಹಲ್ಲಿ ತಿನ್ನುವುದು ಇಂತಹ ವಿಡಿಯೊಗಳನ್ನು ಆಗಾಗ ಸೋಷಿಯಲ್ ಮಿಡಿಯಾದಲ್ಲಿ ನೋಡಿರುತ್ತೇವೆ. ಈಗ ದಕ್ಷಿಣ ಕೊರಿಯಾದ ಹುಡುಗಿಯೊಬ್ಬಳು ಹಾವನ್ನು ತರಕಾರಿಗಳ ಜೊತೆಗೆ ಸೇರಿಸಿ ಕಚ್ಚಿ ಕಚ್ಚಿ ತಿನ್ನುತ್ತಿರುವ ವಿಡಿಯೊವೊಂದು ನೋಡುಗರನ್ನು ಬೆಚ್ಚಿ ಬೀಳಿಸುವುದರ ಜೊತೆಗೆ ಕೆಲವರಲ್ಲಿ ಅಸಹ್ಯ ಹುಟ್ಟಿಸುತ್ತಿದೆ. ಈ ವಿಡಿಯೊ ಇನ್ ಸ್ಟಾಗ್ರಾಂನಲ್ಲಿ ಹರಿದಾಡುತ್ತಿದ್ದು ಎಲ್ಲೆಡೆ ಸಖತ್ ವೈರಲ್ ಆಗಿದೆ. ತನ್ನ ಮುಂದೆ ಇರುವ ಪ್ಲೇಟ್‌ನಲ್ಲಿ ತರಕಾರಿಗಳ ಜೊತೆಗೆ ಹಾವುಗಳನ್ನು ಇಟ್ಟುಕೊಂಡ ಹುಡುಗಿ ಅದರಲ್ಲಿ ಒಂದು ಹಾವನ್ನು ತನ್ನ ಎರಡು ಕೈಗಳಿಂದ ಹಿಡಿದು ತಿನ್ನಲು ಶುರುಮಾಡಿದ್ದಾಳೆ.

VISTARANEWS.COM


on

Viral Video
Koo

ಹಾವೆಂದರೆ ಎಲ್ಲರೂ ಹೌಹಾರುತ್ತಾರೆ. ಅದರಲ್ಲೂ ಹುಡುಗಿಯರಂತೂ ಹಾವನ್ನು ಕಂಡರೆ ಕಿರುಚುತ್ತಾ ಎಲ್ಲೆಂದರಲ್ಲಿ ಓಡಿಹೋಗುತ್ತಾರೆ. ಇನ್ನು ಹಿಂದೂಗಳು ಹಾವನ್ನು ದೇವರೆಂದು ಪೂಜಿಸುತ್ತಾರೆ. ನಾಗರ ಪಂಚಮಿಯ ದಿನ ಹಾವಿಗೆ ಹಾಲೆರೆದು ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಳ್ಳುತ್ತಾರೆ. ಹಾಗಾಗಿ ಕೆಲವರು ಹಾವನ್ನು ಕಂಡು ಹೆದರಿದರೆ ಇನ್ನು ಕೆಲವರು ಹಾವನ್ನು ದೇವರೆಂದು ಪೂಜಿಸುತ್ತಾರೆ. ಇದೆಲ್ಲ ಅವರವರ ನಂಬಿಕೆಗೆ ಬಿಟ್ಟ ವಿಚಾರವಾಗಿದೆ. ಚೀನಾ, ವಿಯೆಟ್ನಾದಂತಹ ದೇಶಗಳಲ್ಲಿ ಹಾವನ್ನು ಮಸಾಲೆ ಜೊತೆಗೆ ಹುರಿದು, ಇಲ್ಲವಾದರೆ ಜೀವಂತ ಹಾವನ್ನೇ ನುಂಗಿ ಬಿಡುತ್ತಾರೆ. ಅಂತಹದೊಂದು ಭಯಾನಕ ವಿಡಿಯೊ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ದಕ್ಷಿಣ ಕೊರಿಯಾದ ಹುಡುಗಿಯೊಬ್ಬಳು ಹಾವನ್ನು ತರಕಾರಿಗಳ ಜೊತೆಗೆ ಸೇರಿಸಿ ಕಚ್ಚಿ ಕಚ್ಚಿ ತಿನ್ನುತ್ತಿರುವ ವಿಡಿಯೊವೊಂದು ನೋಡುಗರನ್ನು ಬೆಚ್ಚಿ ಬೀಳಿಸುವುದರ ಜೊತೆಗೆ ಕೆಲವರಲ್ಲಿ ಅಸಹ್ಯ ಹುಟ್ಟಿಸುತ್ತಿದೆ. ಈ ವಿಡಿಯೊ ಇನ್ ಸ್ಟಾಗ್ರಾಂನಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ದಕ್ಷಿಣ ಕೊರಿಯಾದ ಹುಡುಗಿ ತನ್ನ ಮುಂದೆ ಇರುವ ಪ್ಲೇಟ್‌ನಲ್ಲಿ ತರಕಾರಿಗಳ ಜೊತೆಗೆ ಹಾವುಗಳನ್ನು ಇಟ್ಟುಕೊಂಡಿದ್ದಾಳೆ. ನಂತರ ಅದರಲ್ಲಿ ಒಂದು ಹಾವನ್ನು ತನ್ನ ಎರಡು ಕೈಗಳಿಂದ ಹಿಡಿದು ತಿನ್ನಲು ಶುರುಮಾಡಿದ್ದಾಳೆ. ಒಮ್ಮೆ ಹಾವಿನ ತಲೆ, ಒಮ್ಮೆ ಮಧ್ಯಭಾಗ, ಒಮ್ಮೆ ಬಾಲದ ಹಸಿ ಮಾಂಸವನ್ನು ಜಗಿದು ಸವಿಯುವ ಅವಳ ಮುಖವನ್ನು ನೋಡಿದ್ದರೆ ವೀಕ್ಷಕರಿಗೆ ದಿಗ್ಭ್ರಮೆಯಾಗುತ್ತದೆ.

ಇದಕ್ಕೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಅನೇಕರು ಇದನ್ನು ಕಂಡು ಅಸಹ್ಯ ಪಟ್ಟಿದ್ದಾರೆ. ಕೆಲವರು ಈ ಕೃತ್ಯವನ್ನು ಟೀಕಿಸಿದ್ದಾರೆ. ಇನ್ನೂ ಕೆಲವರು ನಾವು ಭಾರತದಲ್ಲಿ ಜನಿಸಿರುವುದು ಒಳ್ಳೆಯದು ಎಂದು ತಮಗೆ ತಾವೇ ಸಮಾಧಾನ ಹೇಳಿಕೊಂಡಿದ್ದಾರೆ. ಹಾಗೇ ಇನ್ನೊಬ್ಬ ಬಳಕೆದಾರ, ಚೀನೀ ಜನರು ತೃಪ್ತರಾಗಲು ಇವುಗಳನ್ನು ತಿನ್ನುತ್ತಾರೆ. ಅವರ ಈ ಹೊಸ ಆಹಾರ ಪದ್ಧತಿಯಿಂದ ಹೊಸ ವೈರಸ್‌ಗಳು ಜಗತ್ತಿಗೆ ಬರುತ್ತಿವೆ ಎಂದು ಕಿಡಿಕಾರಿದ್ದಾರೆ.

ಈ ವಿಡಿಯೊ @asmrmukbangworld ಎಂಬ ಪ್ಲಾಟ್ ಫಾರ್ಮ್ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ 15 ಮಿಲಿಯನ್ ವೀವ್ಸ್ ಮತ್ತು 1 ದಶಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿದೆ.

Continue Reading

ಕರ್ನಾಟಕ

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Petrol Diesel Price: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಚುನಾವಣೆ ಮುಗಿದ ಕಾರಣ ಬೆಲೆಯೇರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದ ಜನರಿಗೆ ಐದು ಉಚಿತ ಗ್ಯಾರಂಟಿಗಳನ್ನು ನೀಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮದ್ಯದ ಬೆಲೆ ಹಾಗೂ ಆಸ್ತಿ ನೋಂದಣಿ ಶುಲ್ಕವನ್ನು ಹೆಚ್ಚಿಸಿ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಿತ್ತು. ಈಗ ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

Rs 8 to 10 price cut in Petrol and Diesel, PM Modi to announce on year end

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಮತ್ತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆತೀಕ್‌ ಅವರು ಸಿದ್ದರಾಮಯ್ಯ ಅವರ ಎದುರು ಕಡತ ಮುಂದಿರಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಅಂಕಿತ ಹಾಕಿದ್ದಾರೆ.

ಸಿದ್ದರಾಮಯ್ಯ ಅವರು ಸಹಿ ಹಾಕಿದ ಮರುದಿನವೇ ಅಂದರೆ, ಜೂನ್‌ 15ರಂದು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲಾಗಿದೆ. ಇದರಿಂದಾಗಿ ತಕ್ಷಣದಿಂದಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಆಗಿದೆ. ಮದ್ಯದ ಬೆಲೆಯೇರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರವು ಖಜಾನೆಗೆ ಹಣ ತುಂಬಿಸಿಕೊಳ್ಳುತ್ತಿದೆ. ಆಸ್ತಿ ನೋಂದಣಿ ಶುಲ್ಕವನ್ನೂ ಏರಿಕೆ ಮಾಡಿದೆ. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ

ಇದನ್ನೂ ಓದಿ: Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Continue Reading
Advertisement
New Fashion
ಫ್ಯಾಷನ್4 mins ago

New Fashion: ಬ್ಲ್ಯಾಕ್‌ ಡೆನಿಮ್‌ ಕೋ ಆರ್ಡ್ ಸೆಟ್‌ನಲ್ಲಿ ಟ್ರೆಂಡಿಯಾದ ಜಿಪ್ಪರ್‌ ಸ್ಟೈಲ್‌

Trent Boult
ಕ್ರೀಡೆ21 mins ago

Trent Boult: ಕೊನೆಯ ಟಿ20 ವಿಶ್ವಕಪ್​ ಆಡಲು ಸಿದ್ಧರಾದ ಟ್ರೆಂಟ್​ ಬೌಲ್ಟ್

Actor Darshan pavithra gowda relationship secrete
ಸ್ಯಾಂಡಲ್ ವುಡ್22 mins ago

Actor Darshan: ದರ್ಶನ್‌ ಬಲೆಗೆ ಪವಿತ್ರಾ ಗೌಡ ಬಿದ್ದಿದ್ದು ಹೇಗೆ? ಇವರು ಹೀರೋಯಿನ್‌ ಆಗಿದ್ದು ಯಾವಾಗ?

Job Alert
ಉದ್ಯೋಗ30 mins ago

Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Suresh Gopi
ದೇಶ39 mins ago

Suresh Gopi: ಇಂದಿರಾ ಗಾಂಧಿ ಭಾರತದ ಮಾತೆ ಎಂದ ಬಿಜೆಪಿ ಸಂಸದ ಸುರೇಶ್‌ ಗೋಪಿ

anekla news
ಬೆಂಗಳೂರು ಗ್ರಾಮಾಂತರ46 mins ago

Anekal News : ಯುವತಿ ಕೈ ಬಲಿ ಪಡೆದ ಅಕ್ರಮ ಡ್ರೈ ಕ್ಲೀನಿಂಗ್ ಕಾರ್ಖಾನೆ; ಚಿಕಿತ್ಸೆ ಕೊಡಿಸದೆ ಮಾಲೀಕ ಎಸ್ಕೇಪ್‌

Viral Video
Latest48 mins ago

Viral Video: ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಬೆಡಗಿ! ಈ ವಿಡಿಯೊ ನೋಡುವ ಮುನ್ನ ಯೋಚಿಸಿ!

Anganwadi workers and supervisors will get the new mobile in uttara Kannada district
ಉತ್ತರ ಕನ್ನಡ54 mins ago

Uttara Kannada News: ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಮೊಬೈಲ್ ಕೊಡುಗೆ

Petrol Diesel Price
ಕರ್ನಾಟಕ1 hour ago

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Pakistan Cricket Board
ಕ್ರಿಕೆಟ್1 hour ago

Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ3 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ23 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌