ವಿಸ್ತಾರ Explainer: Adani Group: ಅದಾನಿ ಗ್ರೂಪ್‌ ಕಂಪನಿಗಳ ಭವಿಷ್ಯವೇನು? ಷೇರು ಮಾರುಕಟ್ಟೆ ಚೇತರಿಸುತ್ತಿದೆಯೇ? - Vistara News

EXPLAINER

ವಿಸ್ತಾರ Explainer: Adani Group: ಅದಾನಿ ಗ್ರೂಪ್‌ ಕಂಪನಿಗಳ ಭವಿಷ್ಯವೇನು? ಷೇರು ಮಾರುಕಟ್ಟೆ ಚೇತರಿಸುತ್ತಿದೆಯೇ?

ಅದಾನಿ ಗ್ರೂಪ್‌ ಷೇರುಗಳ ಭಾರಿ ಕುಸಿತದ ಬಳಿಕ ಪ್ರತಿ ದಿನ ಹೊಸ ತಿರುವುಗಳನ್ನು ಪಡೆಯುತ್ತಿದೆ. ಹೂಡಿಕೆದಾರರ ವಿಶ್ವಾಸ ಗಳಿಸಲು ಕಂಪನಿ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ. (Adani Group) ಅದಾನಿ ಬಿಕ್ಕಟ್ಟಿನ ಹೊರತಾಗಿಯೂ ಭಾರತೀಯ ಷೇರು ಪೇಟೆ ಗಣನೀಯ ಚೇತರಿಕೆಯ ವಿಶ್ವಾಸದಲ್ಲಿದೆ. ಇಲ್ಲಿದೆ ವಿವರ.

VISTARANEWS.COM


on

Adani Stocks surge Adani Group shares surge market value rises to Rs 10 lakh crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅದಾನಿ ಸಮೂಹದ ಷೇರುಗಳ ಪತನ ಭಾರತೀಯ ಕಂಪನಿಗಳ ಮೇಲಿನ ದಾಳಿಯೇ? ಇದರಿಂದ ಭಾರತದ ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಗೆ ಹೊಡೆತ ಉಂಟಾಗಲಿದೆಯಾ?

ಅದಾನಿ ಗ್ರೂಪ್‌ ಕಂಪನಿಗಳ ಷೇರುಗಳ ಬಿಕ್ಕಟ್ಟು ಅಥವಾ ಎಫ್‌ಪಿಒ ಹಿಂತೆಗೆತದ ಪರಿಣಾಮ ಭಾರತದ ಆರ್ಥಿಕತೆಯ ಮೇಲೆ ಯಾವುದೇ ನಕಾರಾತ್ಮಕ ಪ್ರಭಾವ ಆಗದು ಎಂದು ಸ್ವತಃ ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದಾರೆ. ಬಾಂಬೆ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ೫,೦೦೦ಕ್ಕೂ ಹೆಚ್ಚು ಷೇರುಗಳು ನೊಂದಣಿಯಾಗಿವೆ. ಅವುಗಳಲ್ಲಿ 3 ಸಾವಿರಕ್ಕೂ ಹೆಚ್ಚು ಷೇರುಗಳು ನಿತ್ಯ ಸಕ್ರಿಯವಾಗಿ ವಹಿವಾಟು ನಡೆಸುತ್ತಿವೆ. ಅದಾನಿ ಷೇರುಗಳ ಬಿಕ್ಕಟ್ಟಿನ ಹೊರತಾಗಿಯೂ ಭಾರತೀಯ ಷೇರು ಮಾರುಕಟ್ಟೆ ಗಣನೀಯವಾಗಿ ಚೇತರಿಸುವ ವಿಶ್ವಾಸದಲ್ಲಿದೆ ಎನ್ನುತ್ತಾರೆ ವಿಶ್ಲೇಷಕರು.

ಅದಾನಿ ಗ್ರೂಪ್‌ ವಿರುದ್ಧ ಹಿಂಡೆನ್‌ ಬರ್ಗ್‌ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಸೆಬಿ, ಸುಪ್ರೀಂಕೋರ್ಟ್‌ ಮತ್ತು ಸರ್ಕಾರದ ಮಟ್ಟದಲ್ಲಿ ಇತ್ತೀಚಿನ ಬೆಳವಣಿಗೆಗಳೇನು? ಏನಾಗಬಹುದು?

ಸೆಬಿ ಸುಪ್ರೀಂಕೋರ್ಟ್‌ಗೆ ತಿಳಿಸಿರುವ ಮಾಹಿತಿಯ ಪ್ರಕಾರ ಹಿಂಡೆನ್‌ ಬರ್ಗ್‌ ವಿರುದ್ಧದ ಆರೋಪಗಳು ಹಾಗೂ ಅದಾನಿ ಕಂಪನಿಗಳ ಷೇರುಗಳ ದಿಢೀರ್‌ ಕುಸಿತದ ಬಗ್ಗೆ ತನಿಖೆ ಆರಂಭಿಸಿದೆ. ಆದರೆ ತನಿಖೆ ಪ್ರಾಥಮಿಕ ಹಂತದಲ್ಲಿ ಇರುವುದರಿಂದ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದು ತಿಳಿಸಿದೆ.

ಹಿಂಡೆನ್‌ ಬರ್ಗ್‌ ಉದ್ದೇಶವೇನು? ಅದಾನಿ ಗ್ರೂಪ್‌ ವಿರುದ್ಧ ಹಿಂಡೆನ್‌ ಬರ್ಗ್‌ ಮಾಡಿರುವ ಪ್ರಮುಖ ಆರೋಪವೇನು? ಭಾರತದ ಹಿತಾಸಕ್ತಿಯೇ ಅಥವಾ ಬೇರೆ ಏನಾದರೂ ವ್ಯವಹಾರದ ಉದ್ದೇಶ ಇತ್ತೇ?

ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಜನವರಿ 24ರಂದು ಅದಾನಿ ಗ್ರೂಪ್‌ ವಿರುದ್ಧ ಒಟ್ಟು 88 ಪ್ರಶ್ನೆಗಳನ್ನು ಮಾಡಿತ್ತು. ಇದಕ್ಕೆ ಅದಾನಿ ಗ್ರೂಪ್‌ ಕೆಲ ದಿನಗಳ ಬಳಿಕ 413 ಪುಟಗಳ ಉತ್ತರವನ್ನು ಕೊಟ್ಟಿತ್ತು. ಆದರೆ ಅದಾನಿ ಗ್ರೂಪ್‌ ತನ್ನ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟಿಲ್ಲ ಎಂದು ಹಿಂಡೆನ್‌ ಬರ್ಗ್‌ ಆರೋಪಿಸಿತ್ತು. ಆದರೆ ಅದಾನಿ ಕಂಪನಿಗಳ ವಿರುದ್ಧ ಶಾರ್ಟ್‌ ಸೆಲ್ಲರ್‌ ಮಾಡುತ್ತಿರುವುದಾಗಿ ತಿಳಿಸಿದೆ.

    ಅದಾನಿ ಕಂಪನಿಗಳ ಷೇರು ದರಗಳು ಈಗಲೂ ಸರಾಸರಿ 40% ಕುಸಿತದ ದರದಲ್ಲಿಯೇ ಮುಂದುವರಿದಿದೆ. ಇದರ ಚೇತರಿಗೆ ಇನ್ನೂ ಸಾಕಷ್ಟು ಕಾಲಾವಕಾಶ ಬೇಕಾಗಬಹುದು. ಹೂಡಿಕೆದಾರರಲ್ಲಿ ಆತ್ಮ ವಿಶ್ವಾಸ ಬರಬೇಕು. ಹಿಂಡೆನ್‌ ಬರ್ಗ್‌ ವರದಿಯ ಬಳಿಕ ಹೂಡಿಕೆದಾರರಲ್ಲಿ ಆತ್ಮ ವಿಶ್ವಾಸ ಮೂಡಿಸುವುದು ಹೇಗೆ ಎಂಬುದು ಅತಿ ದೊಡ್ಡ ಸವಾಲು. ಎರಡನೆಯದಾಗಿ ಎಫ್‌ಪಿಒ ಹಿಂತೆಗೆತದ ಬಳಿಕ ಕ್ಯೂ ಐಪಿ, ಪ್ರಿಫರೆನ್ಷಿಯಲ್‌ ಷೇರುಗಳ ಬಿಡುಗಡೆಯ ವಿಧಾನವನ್ನು ಅನುಸರಿಸಬೇಕಾಗಿದೆ. ಕ್ಯೂ ಐಪಿಯಲ್ಲಿ ಮಾರುಕಟ್ಟೆ ನಿಯಂತ್ರಕದ ಅನುಮತಿ ಇಲ್ಲದೆಯೂ ಷೇರುಗಳನ್ನು ಬಿಡುಗಡೆಗೊಳಿಸಿ ಹಣ ಸಂಗ್ರಹಿಸಬಹುದು.

    5. ಅದಾನಿ ಸಾಲ ಮರುಪಾವತಿಸುತ್ತಿದೆಯೇ? ಎಷ್ಟು ಸಾಲ ಇದೆ?

      ಅದಾನಿ ಗ್ರೂಪ್‌ ಇದುವರೆಗೆ ಸಾಲವನ್ನು ಸರಿಯಾಗಿ ಮರು ಪಾವತಿಸುತ್ತಲೇ ಬಂದಿದೆ. ಒಟ್ಟಾರೆಯಾಗಿ 2.26 ಲಕ್ಷ ಕೋಟಿ ರೂ. ಸಾಲವನ್ನು ಅದು ಹೊಂದಿದೆ. 29,754 ಕೋಟಿ ರೂ. ನಗದನ್ನು ಹೊಂದಿದೆ. ಹೀಗಾಗಿ 1.96 ಲಕ್ಷ ಕೋಟಿ ನಿವ್ವಳ ಸಾಲವನ್ನು ಹೊಂದಿದೆ. ಹೀಗಿದ್ದರೂ, ಹಿಂಡೆನ್‌ ಬರ್ಗ್‌ ವರದಿಯಿಂದ ಭವಿಷ್ಯದಲ್ಲಿ ಅದಾನಿ ಗ್ರೂಪ್‌ಗೆ ಹೊಸತಾಗಿ ಸಾಲ ಪಡೆಯಲು ಕಷ್ಟವಾಗಬಹುದು ಎಂದು ಮೂಡೀಸ್‌ ರೇಟಿಂಗ್‌ ಏಜೆನ್ಸಿ ಎಚ್ಚರಿಸಿದೆ. ಮತ್ತೊಂದು ಕಡೆ ಫಿಚ್‌ ರೇಟಿಂಗ್‌ ಸದ್ಯಕ್ಕೆ ಅದಾನಿ ಗ್ರೂಪ್‌ನ ರೇಟಿಂಗ್‌ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಇಲ್ಲ ಎಂದಿದೆ.

      ಎಲ್‌ಐಸಿ ಮತ್ತು ಎಸ್‌ಬಿಐ ಹಾಗೂ ಅದಾನಿ ಸಮೂಹದ ನಡುವಣ ವ್ಯವಹಾರಗಳೇನು? ಅದಾನಿ ಗ್ರೂಪ್‌ ಕಂಪನಿಗಳು ಒಂದು ವೇಳೆ ಸಾಲ ಮರು ಪಾವತಿಸದಿದ್ದರೆ, ಷೇರುಗಳ ದರ ಚೇತರಿಸದಿದ್ದರೆ ಇವುಗಳಿಗೆ ಭವಿಷ್ಯದಲ್ಲಿ ತೊಂದರೆ ಆಗಲಿದೆಯೇ?

      ಎಲ್‌ಐಸಿ ಬಿಡುಗಡೆಗೊಳಿಸಿರುವ ಹೇಳಿಕೆ ಪ್ರಕಾರ 35,917 ಕೋಟಿ ರೂ. ಮೌಲ್ಯದ ಷೇರುಗಳನ್ನು ಅದಾನಿ ಕಂಪನಿಗಳಲ್ಲಿ ಹಲವು ವರ್ಷಗಳಿಂದ ಖರೀದಿಸಿದೆ. ಅವುಗಳ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ. ಎಸ್‌ಬಿಐ 27,000 ಕೋಟಿ ರೂ. ಸಾಲವನ್ನು ಅದಾನಿ ಕಂಪನಿಗೆ ನೀಡಿದೆ.

      ಅದಾನಿ ಗ್ರೂಪ್‌ ಬಿಕ್ಕಟ್ಟಿನ ರಾಜಕೀಯ ಆಯಾಮಗಳೇನು? ಇದರಿಂದ ಮೋದಿ ಸರ್ಕಾರಕ್ಕೆ ಹಿನ್ನಡೆ ಹಾಗೂ ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಗಲಿದೆಯೇ?

      ಅದಾನಿ ಗ್ರೂಪ್‌ ವಿರುದ್ಧ ಜಂಟಿ ಸಂಸದೀಯ ತನಿಖೆ ನಡೆಸಬೇಕು ಹಾಗೂ ಸಂಸತ್ತಿನಲ್ಲಿ ಅದರ ಬಗ್ಗೆ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ ಅದಾನಿ ಬಿಕ್ಕಟ್ಟಿನಿಂದ ಮೋದಿಯವರ ವರ್ಚಸ್ಸಿಗೆ ಧಕ್ಕೆ ಆಗಿಲ್ಲ ಎಂದು ಇತ್ತೀಚಿನ ಸಮೀಕ್ಷೆಗಳು ತಿಳಿಸಿವೆ.

      ಷೇರು ಹೂಡಿಕೆದಾರರು ಅದಾನಿ ಸಮೂಹದ ಷೇರುಗಳ ದಿಢೀರ್‌ ಕುಸಿತದಿಂದ ಕಲಿಯಬೇಕಾದ ಪಾಠವೇನು?

      ಯಾವುದೇ ಕಂಪನಿಯ ಷೇರು ದರ ತೀವ್ರಗತಿಯಲ್ಲಿ ಏರುತ್ತಿದ್ದರೆ, ಅದರಲ್ಲಿ ಹೂಡಿಕೆಗೆ ಮುನ್ನ ಸಾಕಷ್ಟು ಅಧ್ಯಯನ ನಡೆಸಬೇಕು. ಕಂಪನಿಯ ಫಂಡಮೆಂಟಲ್‌ ಬಗ್ಗೆ ತಿಳಿದುಕೊಳ್ಳಬೇಕು. ಎರಡನೆಯದಾಗಿ ಅದಾನಿ ಸಮೂಹದ ಕಂಪನಿಗಳಲ್ಲಿ ರಿಸ್ಕ್‌ ತೆಗೆದುಕೊಂಡು ಹೂಡಿಕೆ ಮಾಡುವವರಿಗೆ ಖರೀದಿಯ ಅವಕಾಶವೂ ಸಿಕ್ಕಿದೆ.

      ಅದಾನಿ ಎಂಟರ್‌ಪ್ರೈಸಸ್‌ ಮತ್ತು ಅದಾನಿ ಪೋರ್ಟ್ಸ ಷೇರು ದರಗಳು ಏರಿಕೆ ದಾಖಲಿಸಿವೆ. ಮ್ಯೂಚುವಲ್‌ ಫಂಡ್‌ ಕಂಪನಿಗಳು ಈ ಎರಡು ಕಂಪನಿಗಳ ಷೇರುಗಳನ್ನು ಖರೀದಿಸುತ್ತಿವೆ. ಹಿಂಡೆನ್‌ ಬರ್ಗ್‌ ವರದಿಯ ಬಳಿಕ ಅದಾನಿ ಸಮೂಹದ 10 ಲಿಸ್ಟೆಡ್‌ ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ 75% ಏರಿಕೆಯಾಗಿದೆ. ಅದಾನಿ ಪೋರ್ಟ್‌, ಅದಾನಿ ಎಂಟರ್‌ಪ್ರೈಸಸ್‌ ಷೇರು ಏರಿದ್ದರೂ, ಇತರ ಕಂಪನಿಗಳ ಷೇರು ದರಗಳು ಇಳಿದಿವೆ.

      ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
      ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
      Continue Reading
      Click to comment

      Leave a Reply

      Your email address will not be published. Required fields are marked *

      Lok Sabha Election 2024

      Lok Sabha Election: ರಾಜಕೀಯ ಕುಟುಂಬಗಳಿಂದ ರಾಜಮನೆತನದವರೆಗೆ; ಬಿಜೆಪಿಯಿಂದ 68 ಮಹಿಳೆಯರು ಕಣಕ್ಕೆ

      Lok Sabha election 2024: ಹಿಂದಿನ ಸಾಲಿಗಿಂತ ಈ ಬಾರಿ ಬಿಜೆಪಿ ಹೆಚ್ಚಿನ ಮಹಿಳೆಯರನ್ನು ಲೋಕಸಭಾ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ. ಆದರೆ ಇವರಲ್ಲಿ ಅರ್ಧಕ್ಕಿಂತ ಹೆಚ್ಚಿನವರು ಕುಟುಂಬ ರಾಜಕಾರಣದಿಂದ ಬಂದವರು. ಇವರಲ್ಲಿ ಪ್ರಮುಖರು ಯಾರಿದ್ದಾರೆ. ಈ ಕುರಿತ ಚಿತ್ರಣ ಇಲ್ಲಿದೆ.

      VISTARANEWS.COM


      on

      By

      Lok Sabha election-2024
      Koo

      ನವದೆಹಲಿ: ಲೋಕಸಭಾ ಚುನಾವಣೆ-2024ರಲ್ಲಿ (Lok Sabha election 2024) ಬಿಜೆಪಿ (bjp) ಈ ಬಾರಿ ಹಿಂದೆಂದಿಗಿಂತ ಹೆಚ್ಚು ಮಹಿಳೆಯರನ್ನು ಕಣಕ್ಕೆ ಇಳಿಸಿದೆ. ಆದರೂ ಈ ಪ್ರಮಾಣ ಶೇ. 16 ಮಾತ್ರ. ಇವರಲ್ಲಿ ಅರ್ಧದಷ್ಟು ಮಂದಿ ರಾಜಕೀಯ ಕುಟುಂಬಗಳ (political families) ಹಿನ್ನೆಲೆಯಿಂದ ಬಂದವರು. ಬಿಜೆಪಿ 417 ಲೋಕಸಭಾ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇವರಲ್ಲಿ ಕೇವಲ 68 ಮಂದಿ ಮಹಿಳೆಯರಿದ್ದಾರೆ. ಬಿಜೆಪಿಯ ಮಹಿಳಾ ಅಭ್ಯರ್ಥಿಗಳ ಪಟ್ಟಿಯಲ್ಲಿ 40 ಮಂದಿ ಆಳವಾಗಿ ಬೇರೂರಿರುವ ರಾಜಕೀಯ ಸಂಪರ್ಕ ಹೊಂದಿರುವ ಕುಟುಂಬಗಳಿಂದ ಬಂದವರಾಗಿದ್ದಾರೆ.

      ಬಿಜೆಪಿಯು 417 ಸಂಸದೀಯ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಅದರಲ್ಲಿ 68 ಮಂದಿ ಶೇ. 16ಕ್ಕಿಂತ ಹೆಚ್ಚು ಮಂದಿ ಮಹಿಳೆಯರಿದ್ದಾರೆ. ಪಕ್ಷವು 2009ರಲ್ಲಿ 45, 2014ರಲ್ಲಿ 38 ಮತ್ತು 2019ರಲ್ಲಿ 55 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು.

      ಇದನ್ನೂ ಓದಿ: Parliament Flashback: 1996ರ ಬಳಿಕ ರಾಜ್ಯದ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

      ಕಣದಲ್ಲಿರುವ ಪ್ರಮುಖ ಮಹಿಳೆಯರು ಯಾರು?

      ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ , ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್, ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಸೊಸೆ ಸೀತಾ ಸೊರೆನ್, ಮಾಜಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರ ಪತ್ನಿ ಗೀತಾ ಕೋಡಾ, ಮಾಜಿ ಸಂಸದ ನಾಥೂರಾಂ ಮಿರ್ಧಾ ಅವರ ಮೊಮ್ಮಗಳು ಜ್ಯೋತಿ ಮಿರ್ಧಾ, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ, ಶಾಸಕ ರವಿ ರಾಣಾ ಅವರ ಪತ್ನಿ ನವನೀತ್ ರಾಣಾ, ಮಾಜಿ ಕಲಹಂಡಿ ಸಂಸದ ಅರ್ಕಾ ಕೇಶರಿ ದೇವ್ ಅವರ ಪತ್ನಿ ಮಾಳವಿಕಾ ದೇವಿ, ತಿಪ್ರಾ ಮೋಥಾ ಪಕ್ಷದ ಸಂಸ್ಥಾಪಕ ಪ್ರದ್ಯೋತ್ ಕಿಶೋರ್ ಮಾಣಿಕ್ಯ ದೆಬ್ಬರ್ಮಾ ಅವರ ಸಹೋದರಿ ಕೃತಿ ಸಿಂಗ್ ದೆಬ್ಬರ್ಮಾ ಅವರು ಈ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ಬಿಜೆಪಿಯ ಪ್ರಮುಖ ಮಹಿಳಾ ಅಭ್ಯರ್ಥಿಗಳು.

      ಕಣದಲ್ಲಿರುವ ಪ್ರಮುಖರು

      ಸೀತಾ ಸೊರೆನ್ ರಾಜಕೀಯ ಕುಟುಂಬದಿಂದ ಬಂದವರಾದರೂ ಒಂದು ಕ್ಷೇತ್ರದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತ ಮಾಡುವ ಕೆಲಸ ಮಾಡುತ್ತಿದ್ದೇನೆ. ಅದೇ ಶಕ್ತಿಯೊಂದಿಗೆ ಕಣಕ್ಕೆ ಇಳಿದಿದ್ದೇನೆ ಎಂದು ತಿಳಿಸಿದ್ದಾರೆ.

      ರಾಜಮಂಡ್ರಿಯ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಕೇಂದ್ರ ಸಚಿವೆ ಮತ್ತು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷೆ ಡಿ. ಪುರಂದೇಶ್ವರಿ ಅವರು ಪ್ರಸಿದ್ಧ ನಟ ಮತ್ತು ಎನ್‌.ಟಿ. ರಾಮರಾವ್ ಅವರ ಪುತ್ರಿ.

      ಮಹಾರಾಷ್ಟ್ರದಲ್ಲಿ ಆರು ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದು ಹಾಲಿ ಸಂಸದೆ ಭಾರತಿ ಪವಾರ್ ಮತ್ತೆ ದಿಂಡೂರಿನಲ್ಲಿ ಸ್ಪರ್ಧಿಸಿದ್ದಾರೆ. ಇವರ ಮಾವ ಎಂಟು ಬಾರಿ ಶಾಸಕರಾಗಿದ್ದರು ಮತ್ತು ಮಹಾರಾಷ್ಟ್ರ ಸಚಿವರಾಗಿದ್ದರು. ಮಗ ಕೂಡ ಶಾಸಕರಾಗಿದ್ದಾರೆ.

      ಬಿಜೆಪಿ ಸಂಸದೆ, ಆರು ಬಾರಿ ಶಾಸಕ ಮತ್ತು ಬುಡಕಟ್ಟು ನಾಯಕರಾಗಿದ್ದ ವಿಜಯ್ ಗವಿತ್ ಅವರ ಪುತ್ರಿ ಹೀನಾ ಗವಿತ್ ಈಗ ನಂದೂರ್ಬಾರ್‌ನಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯ ದಿವಂಗತ ಗೋಪಿನಾಥ್ ಮುಂಡೆ ಅವರ ಪುತ್ರಿ, ಹಿರಿಯ ನಾಯಕಿ ಪಂಕಜಾ ಮುಂಡೆ ಬೀಡಿನಿಂದ ಸ್ಪರ್ಧಿಸುತ್ತಿದ್ದಾರೆ.

      ಸಂಸದೆ ರಕ್ಷಾ ಖಡ್ಸೆ ಮತ್ತೆ ರೇವರ್ ನಿಂದ ಸ್ಪರ್ಧಿಸಿದ್ದಾರೆ. ಇವರ ಮಾವ ಏಕನಾಥ್ ಖಾಡ್ಸೆ 2020ರಲ್ಲಿ ಬಿಜೆಪಿ ತೊರೆದು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯಲ್ಲಿದ್ದಾರೆ.

      ಜಲಗಾಂವ್‌ನಲ್ಲಿ ಎಂಎಲ್ಸಿ ಸ್ಮಿತಾ ವಾಘ್ ಅವರನ್ನು ಕಣಕ್ಕಿಳಿಸಲು ಹಾಲಿ ಸಂಸದ ಉನ್ಮೇಶ್ ಪಾಟೀಲ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಅವರ ಪತಿ ಉದಯ್ ವಾಘ್ ಬಿಜೆಪಿ ಜಲಗಾಂವ್ ಜಿಲ್ಲಾಧ್ಯಕ್ಷರಾಗಿದ್ದಾರೆ. ಅಮರಾವತಿಯಿಂದ ಹಾಲಿ ಸಂಸದ ನವನೀತ್ ರಾಣಾ ಮತ್ತೆ ಸ್ಪರ್ಧಿಸಿದ್ದಾರೆ.

      ಹೊಸ ಮುಖವಾಗಿರುವ ಅನಿತಾ ಅವರ ಪತಿ ಮಧ್ಯಪ್ರದೇಶದ ಅರಣ್ಯ ಸಚಿವ ಮತ್ತು ಮೂರು ಬಾರಿ ಶಾಸಕ ನಗರ್ ಸಿಂಗ್ ಚೌಹಾಣ್. ಮತ್ತೊಂದು ಹೊಸ ಮುಖ ಲತಾ ವಾಂಖೆಡೆ ಸಾಗರ್‌ನಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ. ಅವರ ಪತಿ ನಂದಕಿಶೋರ್ ಅಲಿಯಾಸ್ ಗುಡ್ಡು ವಾಂಖೆಡೆ ಕೂಡ ರಾಜಕೀಯದಲ್ಲಿದ್ದಾರೆ.

      ಬಿಜೆಪಿ ಸಂಸದ ಹಿಮಾದ್ರಿ ಸಿಂಗ್ – ಮಾಜಿ ಸಂಸದರಾದ ದಲ್ವಿರ್ ಸಿಂಗ್ ಮತ್ತು ರಾಜೇಶ್ ನಂದಿನಿ ಸಿಂಗ್ ಅವರ ಪುತ್ರಿ ಶಹದೋಲ್‌ನಿಂದ ಮತ್ತೊಂದು ಅವಧಿಯನ್ನು ನಿರೀಕ್ಷಿಸುತ್ತಿದ್ದಾರೆ. ಅವರ ಪತಿ ನರೇಂದ್ರ ಮರಾವಿ ಕೂಡ ಬಿಜೆಪಿ ನಾಯಕರಾಗಿದ್ದಾರೆ.

      ರಾಜಮನೆತನದವರು

      2019 ರಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಇದುವರೆಗೆ ಐದು ಮಹಿಳಾ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದೆ. ದೇವಿ ಜಾತವ್ (ಧೋಲ್ಪುರ್ ಕರೌಲಿ), ಪ್ರಿಯಾಂಕಾ ಬಾಲನ್ (ಶ್ರೀಗಂಗಾನಗರ), ಮಂಜು ಶರ್ಮಾ (ಜೈಪುರ), ಜ್ಯೋತಿ ಮಿರ್ಧಾ (ನಾಗೌರ್) ಮತ್ತು ಮಹಿಮಾ ವಿಶ್ವರಾಜ್ ಸಿಂಗ್ (ರಾಜಸಮಂದ್). ಮಹಿಮಾ ವಿಶ್ವರಾಜ್ ಸಿಂಗ್ ಮೇವಾರ್‌ನ ರಾಜಮನೆತನಕ್ಕೆ ಸೇರಿದವರಾಗಿದ್ದಾರೆ.

      ಮಾಳವಿಕಾ ಕೇಶರಿ ದೇವ್ ಅವರು ಕಲಹಂಡಿ ಜಿಲ್ಲೆಯ ಹಿಂದಿನ ರಾಜಮನೆತನದ ಸಂಪರ್ಕವನ್ನು ಹೊಂದಿದ್ದಾರೆ. 2019ರಲ್ಲಿ ಅಸ್ಕಾದಿಂದ ಸ್ಪರ್ಧಿಸಿ ಸೋತಿದ್ದ ಅನಿತಾ ಪ್ರಿಯದರ್ಶಿನಿ ಮತ್ತೆ ಅದೇ ಸ್ಥಾನದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

      ರಾಜಕೀಯ ಹಿನ್ನೆಲೆಯುಳ್ಳವರು

      ಜಾರ್ಖಂಡ್ ಮೂರು ಮಹಿಳಾ ಅಭ್ಯರ್ಥಿಗಳಾದ ಸೀತಾ ಸೊರೆನ್, ಗೀತಾ ಕೊಡ ಮತ್ತು ಅನ್ನಪೂರ್ಣ ದೇವಿ ಅವರು ದುಮ್ಕಾ, ಸಿಂಗ್‌ಭೂಮ್ ಮತ್ತು ಕೊಡರ್ಮಾದಿಂದ ಸ್ಪರ್ಧಿಸಿದ್ದಾರೆ. ಈ ಮೂವರೂ ಅಭ್ಯರ್ಥಿಗಳು ರಾಜಕೀಯ ಹಿನ್ನೆಲೆಯುಳ್ಳವರಾಗಿದ್ದಾರೆ.

      ಉತ್ತರ ಪ್ರದೇಶದಲ್ಲಿ ರೇಖಾ ವರ್ಮಾ (ಧಾರುಹರ) ಮತ್ತು ಮೇನಕಾ ಗಾಂಧಿ (ಸುಲ್ತಾನ್‌ಪುರ) ಕೂಡ ರಾಜಕೀಯದಲ್ಲಿ ಕುಟುಂಬ ಸದಸ್ಯರನ್ನು ಹೊಂದಿದ್ದರು. ಹಿಂದಿನವರು 2014 ರಿಂದ ಧರುಹರಾದಿಂದ ಹಾಲಿ ಸಂಸದರಾಗಿದ್ದರೆ, ನಂತರದವರು 1989ರಲ್ಲಿ ಲೋಕಸಭೆಗೆ ಮೊದಲ ಬಾರಿಗೆ ಆಯ್ಕೆಯಾದರು.

      Continue Reading

      ಆಹಾರ/ಅಡುಗೆ

      Food Expired Date: ಅವಧಿ ಮೀರಿದ ಆಹಾರದಿಂದ ಜೀವಕ್ಕೇ ಅಪಾಯ! ಖರೀದಿಸುವಾಗ ಈ ಅಂಶಗಳನ್ನು ಗಮನಿಸಿ

      Food Expired Date: ತಿನ್ನುವ ಆಹಾರ ಎಷ್ಟು ಸುರಕ್ಷಿತ ಮತ್ತು ಗುಣಮಟ್ಟದಲ್ಲಿದೆ ಎಂಬುದನ್ನು ನಾವು ತಿಳಿದುಕೊಂಡಿರಲೇಬೇಕು. ಇಲ್ಲವಾದರೆ ಆರೋಗ್ಯ ಹಾಳಾಗಬಹುದು. ಇವುಗಳನ್ನು ಪರೀಕ್ಷಿಸುವ ಹಲವು ವಿಧಾನಗಳು ಇಲ್ಲಿವೆ.

      VISTARANEWS.COM


      on

      By

      Food products
      Koo

      ಎರಡು ದಿನಗಳ ಹಿಂದೆ ಡೇಟ್ ಎಕ್ಸ್‌ಪೈರ್‌ (Food Expired Date) ಆಗಿದ್ದ ಚಾಕಲೇಟ್ (Chocolate) ಸೇವಿಸಿ ಪಂಜಾಬ್‌ನ (punjab) ಪಟಿಯಾಲದಲ್ಲಿ (patiyala) ಬಾಲಕಿ ಒಬ್ಬಳು ಮೃತಪಟ್ಟಿದ್ದಳು, ವಾರದ ಹಿಂದೆ ಮಂಡ್ಯ (mandya) ಜಿಲ್ಲೆ ಶ್ರೀರಂಗಪಟ್ಟಣ (srirangapattana) ತಾಲೂಕಿನ ಬೆಟ್ಟಹಳ್ಳಿಯಲ್ಲಿ ಐಸ್ ಕ್ರೀಮ್ (icecream) ತಿಂದು ಅವಳಿ ಜವಳಿ ಮಕ್ಕಳಿಬ್ಬರು ಮೃತಪಟ್ಟಿದ್ದರು. ಈ ಎರಡೂ ಘಟನೆಗಳಲ್ಲಿ ಖರೀದಿ ಮಾಡಿದ ಆಹಾರದ (Food products) ಗುಣಮಟ್ಟದ (quality) ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

      ಆಹಾರ ಮತ್ತು ಔಷಧ ಇವೆರಡೂ ನಿರ್ದಿಷ್ಟ ಸಮಯದ ಬಳಿಕ ಹಾಳಾಗುತ್ತದೆ ಮತ್ತು ವಿಷಕಾರಿಯಾಗುತ್ತದೆ. ಹೀಗಾಗಿ ಅರೋಗ್ಯ ಸುರಕ್ಷತೆಯ ದೃಷ್ಟಿಯಲ್ಲಿ ಇವೆರಡನ್ನು ನಿಗದಿತ ಸಮಯದೊಳಗೆ ಸೇವಿಸುವುದು ಉತ್ತಮ.

      ಇವೆರಡರ ನಡುವಿನ ಗಮನಾರ್ಹ ವ್ಯತ್ಯಾಸವೆಂದರೆ ಎಕ್ಸ್‌ಪೈರಿ ಡೇಟ್ ಮುಗಿದ ಮೇಲೆ ಔಷಧಗಳಲ್ಲಿ ಬಳಸುವ ರಾಸಾಯನಿಕ ಮಿಶ್ರಣವು ವಿಷವಾಗುತ್ತದೆ. ಅದಕ್ಕಾಗಿ ಎಕ್ಸ್‌ಪೈರಿ ಡೇಟ್ ಮುಗಿದ ಮೇಲೆ ಔಷಧವನ್ನು ಸೇವಿಸಬಾರದು ಮತ್ತು ಎಸೆಯಬೇಕು. ಇಲ್ಲಿ ಸುರಕ್ಷತೆ ಸಮಸ್ಯೆಯೇ ಹೊರತು ಗುಣಮಟ್ಟ ಅಲ್ಲ.

      ಇದನ್ನೂ ಓದಿ: Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

      ಇದಕ್ಕೆ ವ್ಯತಿರಿಕ್ತವಾಗಿ ಆಹಾರ ಉತ್ಪನ್ನಗಳು ಕ್ರಮೇಣ ಹಾಳಾಗುತ್ತವೆ. ಅಪರೂಪ ಎಂಬಂತೆ ಕೆಲವೊಮ್ಮೆ ವಿಷಕಾರಿಯಾಗುತ್ತವೆ. ಆಹಾರ ವಿಷಕಾರಿ ಆಗುವ ಮೊದಲು ರುಚಿ, ಪರಿಮಳ ಮತ್ತು ಪೌಷ್ಟಿಕಾಂಶವನ್ನು ಕಳೆದುಕೊಳ್ಳುತ್ತದೆ. ಕಾಲಾನಂತರದಲ್ಲಿ ತನ್ನ ಗುಣಮಟ್ಟವನ್ನು ಕಳೆದುಕೊಳ್ಳುತ್ತದೆ. ಹೀಗಾಗಿ ಇಲ್ಲಿ, ಗುಣಮಟ್ಟ ಪ್ರಮುಖ ವಿಚಾರವಾಗಿದೆಯೇ ಹೊರತು ಸುರಕ್ಷತೆ ಅಲ್ಲ. ಹೀಗಾಗಿ ಆಹಾರ ಉತ್ಪನ್ನಗಳಿಗೆ ಎಕ್ಸ್‌ಪೈರಿ ಡೇಟ್ ಈನ್ದು ಇರುವುದಿಲ್ಲ. ಬದಲಾಗಿ ಅವನ್ನು ತಯಾರಿಸಿದ, ಬಳಸಲಾಗುವ ದಿನಾಂಕಗಳನ್ನು ಮಾತ್ರ ಹೇಳಲಾಗುತ್ತದೆ.


      ಆಹಾರ ಪೋಲು

      ಇದರಿಂದಾಗಿ ಪ್ರಪಂಚದಾದ್ಯಂತ ಜನರು ಸೇವಿಸಲು ಯೋಗ್ಯವಾದ ಸಾಕಷ್ಟು ಉತ್ತಮವಾದ ಆಹಾರಗಳು ಕಸದ ಬುಟ್ಟಿ ಸೇರುತ್ತದೆ.

      ಪ್ರಪಂಚದಾದ್ಯಂತ ಲಕ್ಷಾಂತರ ಮಂದಿ ಎರಡು ಹೊತ್ತಿನ ಊಟಕ್ಕಾಗಿ ಪರದಾಡುತ್ತಿದ್ದಾರೆ. ಅಮೆರಿಕ, ಮಲೇಷ್ಯಾ ದೇಶಗಳು ವಿಶ್ವದಲ್ಲೇ ಹೆಚ್ಚು ಆಹಾರ ಪೋಲು ಮಾಡುವ ರಾಷ್ಟ್ರಗಳಾಗಿವೆ. ಇದರಲ್ಲಿ ಭಾರತವೂ ಹಿಂದೆ ಬಿದ್ದಿಲ್ಲ. ನಾವು ಆಹಾರ ವ್ಯರ್ಥವಾಗುವುದನ್ನು ತಡೆಗಟ್ಟುವ ಜೊತೆಗೆ ಅವುಗಳ ಗುಣಮಟ್ಟಕ್ಕೂ ಹೆಚ್ಚಿನ ಆದ್ಯತೆ ನೀಡಬೇಕಿದೆ.

      ಆಹಾರ ಉತ್ಪನ್ನಗಳ ದಿನಾಂಕ

      ಬೇರೆಬೇರೆ ಆಹಾರಗಳು ಬೇರೆಬೇರೆ ಅವಧಿಯವರೆಗೆ ಉತ್ತಮ ಗುಣಮಟ್ಟದಲ್ಲಿ ಇರುತ್ತದೆ. ಅಂದರೆ, ಎಲ್ಲಾ ಆಹಾರ ಪದಾರ್ಥಗಳು ಒಂದೇ ಪ್ರಮಾಣದಲ್ಲಿ, ಒಂದೇ ಸಮಯದಲ್ಲಿ ಹಾಳಾಗುವುದಿಲ್ಲ. ಆಹಾರ ಕಂಪನಿಗಳು ಶೆಲ್ಫ್ ಜೀವನವನ್ನು ಹೆಚ್ಚಿಸಲು ಸಂರಕ್ಷಕಗಳನ್ನು ಬಳಸುತ್ತವೆ. ಇದರ ಆಧಾರದ ಮೇಲೆ ಅವುಗಳ ಗುಣಮಟ್ಟದ ಬಾಳಿಕೆ ಅವಧಿಯನ್ನು ನಿರ್ಧರಿಸಲಾಗುತ್ತದೆ.

      ಆಹಾರದ ಗುಣಮಟ್ಟಕ್ಕೆ ದಿನಾಂಕಗಳನ್ನು ಹೇಗೆ ನಿರ್ಧರಿಸಬೇಕು ಎಂಬುದರ ಕುರಿತು ವಿಶ್ವದ ಯಾವುದೇ ದೇಶದಲ್ಲೂ ಸ್ಪಷ್ಟ ಮಾರ್ಗಸೂಚಿಗಳಿಲ್ಲ. ಹೀಗಾಗಿ ಇದಕ್ಕೆ ಸಂಬಂಧಿಸಿ ಕಠಿಣ ಕಾನೂನುಗಳನ್ನು ಹೊಂದಿಲ್ಲ. ಇದನ್ನು ಅನುಭವದ ಆಧಾರದ ಮೇಲೆ ನಿರ್ಧರಿಸಲು ಆಹಾರ ತಯಾರಕರಿಗೆ ಅನುಮತಿ ನೀಡಲಾಗಿದೆ. ಇದಕ್ಕಾಗಿ ಆಹಾರ ಕಂಪೆನಿಗಳು ಗುಣಮಟ್ಟವನ್ನು ಪರೀಕ್ಷಿಸಲು ಕೆಲವು ಪರೀಕ್ಷೆಗಳನ್ನು ನಡೆಸುತ್ತವೆ.

      ವಿದೇಶಗಳಲ್ಲಿ ಆಹಾರ ಗುಣಮಟ್ಟ ನಿರ್ಧರಿಸುವ ದಿನಾಂಕಗಳನ್ನು ಉಲ್ಲೇಖಿಸಲಾಗುತ್ತದೆ. ಇದರ ಬಗ್ಗೆ ಭಾರತೀಯರು ತಿಳಿದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ವಿದೇಶಕ್ಕೆ ಪ್ರವಾಸ ಮಾಡುವ ಯೋಜನೆ ಇದ್ದರೆ ಇದು ಹೆಚ್ಚು ಉಪಯುಕ್ತವಾಗಿರುತ್ತದೆ.


      ಪ್ಯಾಕ್ಡ್ ಆನ್ / ಕ್ಲೋಸ್ಡ್ ಆನ್

      ಆಹಾರ ಪದಾರ್ಥವನ್ನು ಕಂಟೇನರ್‌ನಲ್ಲಿ ಸೀಲ್ ಮಾಡಿದ ದಿನಾಂಕ ಮತ್ತು ಅದರ ಬಾಳಿಕೆ ಹಾಗೂ ಆಹಾರದ ಗುಣಮಟ್ಟವನ್ನು ನಿರ್ಣಯಿಸಲು ಇದು ಉಪಯುಕ್ತವಾಗಿದೆ.

      ಸೆಲ್ ಬೈ / ಪುಲ್ ಬೈ

      ಈ ಸಂದೇಶವು ತಯಾರಕರಿಂದ ಚಿಲ್ಲರೆ ವ್ಯಾಪಾರಿಗಳಿಗೆ. ನಿರ್ಧಿಷ್ಟ ದಿನಾಂಕದೊಳಗೆ ಉತ್ಪನ್ನವನ್ನು ಮಾರಾಟ ಮಾಡದಿದ್ದರೆ ಅದನ್ನು ಶೆಲ್ಫ್‌ನಿಂದ ತೆಗೆದು ಕಸದ ಬುಟ್ಟಿಗೆ ಹಾಕಬೇಕು.

      ಬೆಸ್ಟ್ ಯೂಸ್ಡ್ ಬಿಫೋರ್/ ಬೆಸ್ಟ್ ಯೂಸ್ಡ್ ಬೈ

      ಇದು ಆಹಾರ ಪದಾರ್ಥಗಳ ಗುಣಮಟ್ಟ ಕಡಿಮೆಯಾಗುವುದನ್ನು ಸೂಚಿಸುವ ದಿನಾಂಕವಾಗಿದೆ. ನಿರ್ದಿಷ್ಟ ದಿನಾಂಕದೊಳಗೆ ಬಳಸದೇ ಇದ್ದರೆ ಆಹಾರದ ರುಚಿ, ಪರಿಮಳ ಮತ್ತು ಪೌಷ್ಟಿಕಾಂಶದ ಮೌಲ್ಯವು ನಂತರ ಬದಲಾಗುತ್ತದೆ. ಈ ದಿನಾಂಕದ ಅನಂತರ ಕೆಲವು ದಿನಗಳವರೆಗೆ ಆಹಾರವು ಸೇವಿಸಲು ಸಾಕಷ್ಟು ಉತ್ತಮವಾಗಿರುತ್ತದೆ.

      ಯೂಸ್ ಬೈ/ ಡು ನಾಟ್ ಯೂಸ್ ಆಫ್ಟರ್

      ನಿಗದಿತ ಅವಧಿ ಮುಗಿದ ಬಳಿಕ ಆಹಾರದ ಗುಣಮಟ್ಟವು ಹದಗೆಟ್ಟಿರುತ್ತದೆ. ಅದನ್ನು ಕಸದ ಬುಟ್ಟಿಗೆ ಹಾಕಲೇ ಬೇಕು ಎಂಬುದನ್ನು ಇದು ಹೇಳುತ್ತದೆ.

      ಇವೆಲ್ಲವೂ ಮುಚ್ಚಿರುವ ಆಹಾರಗಳಿಗೆ ಮಾತ್ರ ಅನ್ವಯಾವಾಗುತ್ತದೆ. ಒಮ್ಮೆ ಪ್ಯಾಕೆಟ್ ತೆರೆದರೆ ಅಥವಾ ಗಾಳಿಗೆ ಒಡ್ಡಿಕೊಂಡರೆ ಅವುಗಳ ಗುಣಮಟ್ಟ ಕ್ಷೀಣಿಸಲು ಪ್ರಾರಂಭವಾಗುತ್ತದೆ.

      ಖರೀದಿ ಮಾಡುವಾಗ ಎಚ್ಚರ

      ಪ್ಯಾಕೆಟ್ ನಲ್ಲಿರುವ ದಿನಾಂಕ ಕೇವಲ ಗುಣಮಟ್ಟಕ್ಕೆ ಸಂಬಂಧಿಸಿರುತ್ತದೆ. ಆದರೆ ಆಹಾರದಲ್ಲಿ ನಾವು ಸುರಕ್ಷತೆ ಬಗ್ಗೆಯೂ ಗಮನ ಹರಿಸಬೇಕು.

      ಪ್ಯಾಕೆಟ್ ಆಹಾರ ಖರೀದಿ ಪ್ಯಾಕೆಟ್ ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಯಾಕೆಂದರೆ ಆಹಾರ ಪ್ಯಾಕೇಜಿಂಗ್, ಸ್ಥಳಾಂತರದ ವೇಳೆ ಅದು ಹಾನಿಗೊಳಾಗಿರಬಹುದು. ಇಂತಹ ಪ್ಯಾಕೆಟ್‌ಗಳು ಇಲಿ, ನೊಣಗಳಿಂದ ಸೋಂಕಿಗೆ ಒಳಗಾಗಿ, ಗಾಳಿಯ ತೇವಾಂಶದಿಂದ ವಿಷಕಾರಿ ಆಗಿರಬಹುದು.

      ಆಹಾರ ಡಬ್ಬಿಯಲ್ಲಿ ಬಿರುಕು ಇದೆಯೇ ಎಂಬುದನ್ನು ಪರಿಶೀಲಿಸಬೇಕು. ಅಲ್ಲದೇ ಕೆಲವೊಂದು ಡಬ್ಬಿಗಳು ಉಬ್ಬಿದ್ದರೆ ಆಹಾರದಲ್ಲಿ ತೀವ್ರವಾದ ಬ್ಯಾಕ್ಟೀರಿಯಾ ಇದ್ದು, ಆಹಾರ ವಿಷಕಾರಿಯಾಗುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು.


      ಮನೆಯಲ್ಲಿ ಸಿದ್ಧಪಡಿಸಿದ ಆಹಾರ

      ಕೆಟ್ಟ ವಾಸನೆ, ಪ್ಯಾಕೆಟ್, ಕ್ಯಾನ್‌ನಲ್ಲಿ ಕಪ್ಪು ಕಲೆಗಳು- ಇದು ಇಲಿಗಳಿಂದ ಆಹಾರ ಹಾಳಾಗಿದೆ ಎಂಬುದನ್ನು ತಿಳಿಸುತ್ತದೆ.

      ಸಾಮಾನ್ಯವಾಗಿ ಆಹಾರದ ಬಣ್ಣ ಬದಲಾಗಿದ್ದರೆ, ಅವುಗಳ ಮೇಲೆ ಹಸಿರು ಅಥವಾ ಕಪ್ಪು ತೇಪೆಗಳು ಕಂಡುಬಂದರೆ ಇದು ಶಿಲೀಂಧ್ರಗಳ ಬೆಳವಣಿಗೆಯಾಗಿದೆ. ಇದು ಹೆಚ್ಚಾಗಿ ಬೇಯಿಸಿದ ಪದಾರ್ಥಗಳಲ್ಲಿ ಕಾಣಿಸುತ್ತದೆ.

      ಆಹಾರವು ತುಂಬಾ ಬಲವಾದ ಅಸಾಮಾನ್ಯ ವಾಸನೆಯನ್ನು ಹೊಂದಿದ್ದರೆ ಆಹಾರವು ಹುಳಿಯಾಗಿರುತ್ತದೆ. ಸಾಮಾನ್ಯವಾಗಿ ದೋಸೆ ಅಥವಾ ಇಡ್ಲಿ ಹಿಟ್ಟು ಮತ್ತು ಮೊಸರಿನಲ್ಲಿ ಹೀಗಾಗುತ್ತದೆ.

      ಆಹಾರ ಪದಾರ್ಥವು ಲೋಳೆ ಅಥವಾ ಜಿಗುಟಾಗಿದ್ದರೆ ಬ್ಯಾಕ್ಟೀರಿಯಾ ಅಥವಾ ವೈರಲ್ ತಗಲಿದೆ ಎಂಬುದರ ಸೂಚಕವಾಗಿದೆ.

      ಆಹಾರ ಸಾಮಾನ್ಯಕ್ಕಿಂತ ಹೆಚ್ಚು ಕಹಿ ಅಥವಾ ಹೆಚ್ಚು ಹುಳಿಯಾಗಿದ್ದಾರೆ ಬ್ಯಾಕ್ಟೀರಿಯಾದ ಚಟುವಟಿಕೆ ನಡೆಯುತ್ತಿದೆ ಎಂದು ತಿಳಿಯಬೇಕು.

      ಯಾವತ್ತೂ ಆಹಾರದ ಮುಚ್ಚಳ ತೆರೆಯುವಾಗ ಸೂಕ್ಷ್ಮವಾಗಿ ಗಮನಿಸಿ. ಒಂದು ವೇಳೆ ಬಳಸಲು ಯೋಗ್ಯವಾಗಿಲ್ಲ ಎಂದು ಅನಿಸಿದರೆ ಕೂಡಲೇ ಅದನ್ನು ಕಸದ ಬುಟ್ಟಿಗೆ ಹಾಕಿ.

      ಗುಣಮಟ್ಟ ಕಾಪಾಡಿ

      ಮಾರುಕಟ್ಟೆಯಿಂದ ಖರೀದಿ ಮಾಡಿ ತಂದ ವಸ್ತುಗಳ ಗುಣಮಟ್ಟ ಕಾಪಾಡುವುದು ನಮ್ಮ ಜವಾಬ್ದಾರಿ. ಹಣ್ಣು ಅಥವಾ ತರಕಾರಿಗಳನ್ನು ತೊಳೆದು ರೆಫ್ರಿಜರೇಟರ್ ನಲ್ಲಿ ಇಡಿ. ಆಹಾರ ಪ್ಯಾಕೆಟ್‌ಗಳ ಮೇಲೆ ಅವುಗಳನ್ನು ಹೇಗೆ ಸಂಗ್ರಹಿಸಿಡಬೇಕು ಎಂದು ಸೂಚಿಸಲಾಗಿರುತ್ತದೆ. ಅದನ್ನು ತಿಳಿದುಕೊಳ್ಳಿ. ಉದಾ- ಬೀಜಗಳನ್ನು ತೆರೆದು ಇಡಬಾರದು ಏಕೆಂದರೆ ಅವುಗಳಲ್ಲಿನ ತೈಲಗಳು ಕಂದುಬಣ್ಣಕ್ಕೆ ತಿರುಗುವುದರಿಂದ ಅವು ಮೃದು ಮತ್ತು ಕಹಿಯಾಗಬಹುದು.
      ಕೆಲವು ಉತ್ಪನ್ನಗಳನ್ನು ತಕ್ಷಣವೇ ಬಳಸಲಾಗುವುದಿಲ್ಲ. ಆದರೆ ಹೆಚ್ಚು ಕಾಲ ಉಳಿಯಬೇಕು. ಆಗ ಅವುಗಳನ್ನು ಫ್ರೀಜರ್ ನಲ್ಲಿ ಇರಿಸಿ.

      ಆಹಾರದ ಪ್ಯಾಕೆಟ್ ಅನ್ನು ತೆರೆದ ಬಳಿಕ ತಕ್ಷಣವೇ ಖಾಲಿ ಮಾಡಿ. ಪದೇಪದೇ ಗಾಳಿಗೆ ಒಡ್ಡುವುದರಿಂದ ಅವುಗಳ ಸತ್ವ ನಾಶವಾಗುತ್ತದೆ.

      Continue Reading

      ರಾಜಕೀಯ

      Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

      Party symbols: ಭಾರತದಲ್ಲಿ ಚುನಾವಣೆ ಆರಂಭದಿಂದಲೂ ವಿವಿಧ ಪಕ್ಷಗಳಿಗೆ ಚುನಾವಣಾ ಚಿಹ್ನೆಯನ್ನು ನೀಡಲಾಗುತ್ತಿದೆ. ಆದರೆ ಈಗ ಇರುವ ಚುನಾವಣೆ ಚಿಹ್ನೆಗಳು ಮೊದಲು ಇರಲಿಲ್ಲ. ಪಕ್ಷ ಹುಟ್ಟಿಕೊಂಡ ಕೆಲವು ವರ್ಷಗಳ ಬಳಿಕ ಬಳಕೆಗೆ ಬಂದವು. ಕೆಲವು ಪಕ್ಷಗಳು ತನ್ನ ಚಿಹ್ನೆಯನ್ನು ಕಳೆದುಕೊಂಡು ಹೊಸ ಗುರುತನ್ನು ಪಡೆದಿದೆ. ಈ ಚಿಹ್ನೆಯ ಮಹತ್ವ ಎಷ್ಟು ಗೊತ್ತೇ? ಈ ಕುರಿತ ಸಂಗ್ರಹಯೋಗ್ಯ ಮಾಹಿತಿ ಇಲ್ಲಿದೆ.

      VISTARANEWS.COM


      on

      By

      Party symbols
      Koo

      ಚುನಾವಣೆ (election) ವೇಳೆ ಎಲ್ಲರ ಗಮನ ಸೆಳೆಯುವುದು ಚುನಾವಣಾ ಚಿಹ್ನೆಗಳು. ಈ ಬಾರಿಯೂ ಲೋಕಸಭಾ ಚುನಾವಣೆ- 2024ರಲ್ಲಿ (loksabha election-2024) ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವು ನೀಡಿದ್ದ ಚುನಾವಣಾ ಚಿಹ್ನೆಗಳು ಎಲ್ಲರ ಗಮನ ಸೆಳೆದಿತ್ತು. ಚುನಾವಣಾ ಚಿಹ್ನೆಯ (Party symbols) ಬಳಕೆ ಹೊಸದೇನಲ್ಲ 1951ರ ಮೊದಲ ಚುನಾವಣೆಯಿಂದಲೇ ಅಭ್ಯರ್ಥಿಯನ್ನು (candidate) ಗುರುತಿಸಲು ಚುನಾವಣಾ ಚಿಹ್ನೆಗಳನ್ನು ಬಳಸಲಾಗುತ್ತಿದೆ.

      ಚುನಾವಣಾ ಪ್ರಚಾರದ ವೇಳೆ ಜನರ ಗಮನಸೆಳೆಯುವ ಚುನಾವಣಾ ಚಿಹ್ನೆಗಳು ಒಂದೇ ಹೆಸರಿನ ಅಭ್ಯರ್ಥಿಗಳು ಕಣದಲ್ಲಿ ಇದ್ದರೆ ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಗುರುತಿಸಲು ಇದು ಸಹಾಯ ಮಾಡುತ್ತದೆ. ಚಿತ್ರಗಳು ಸಾಮಾನ್ಯವಾಗಿ ಎಲ್ಲರಿಗೂ ನೆನಪಿನಲ್ಲಿ ಉಳಿಯುತ್ತದೆ. ದೇಶದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಸಾಕ್ಷರರ ಪ್ರಮಾಣ ಕಡಿಮೆ ಇತ್ತು. ಹೀಗಾಗಿಯೇ ಚುನಾವಣಾ ಆಯೋಗ ಚಿಹ್ನೆಗಳನ್ನು ಬಳಸಲು ಪ್ರಾರಂಭಿಸಿತ್ತು.

      ಅಕ್ಷರಗಳಿಗಿಂತ ಹೆಚ್ಚು ವೇಗವಾಗಿ ಮನ ಮುಟ್ಟುವ ಚುನಾವಣಾ ಚಿಹ್ನೆಗಳು ಮತ್ತು ಅವುಗಳ ಸೃಜನಾತ್ಮಕ ಬಳಕೆಯ ಕುರಿತು ಭಾರತದಲ್ಲಿ ಹಿನ್ನೆಲೆ ಹೇಗಿತ್ತು ಗೊತ್ತೇ ?

      ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

      ಯಾವಾಗ ಆರಂಭ?

      1951ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಸೇರಿ 53 ಪಕ್ಷಗಳ ಅಭ್ಯರ್ಥಿಗಳು ಸುಮಾರು 4,500 ಸ್ಥಾನಗಳಿಗೆ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾ ಆಯೋಗವು ಅಭ್ಯರ್ಥಿಗಳು ಸ್ಪರ್ಧಿಸಬಹುದಾದ ಪಕ್ಷಗಳಿಗೆ ಚಿಹ್ನೆಗಳನ್ನು ನಿಗದಿಪಡಿಸಿತ್ತು. ಈ ಪ್ರಕ್ರಿಯೆಯು ಚುನಾವಣಾ ಚಿಹ್ನೆಗಳ ಮೀಸಲಾತಿ ಮತ್ತು ಹಂಚಿಕೆ ಆದೇಶ 1968ರಲ್ಲಿ ಹೊರಬಂದು ಇದು ಹೆಚ್ಚು ಸುವ್ಯವಸ್ಥಿತವಾಯಿತು. ಇದರ ಪ್ರಕಾರ ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಪಕ್ಷಗಳಿಗೆ ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆಯನ್ನು ಮಾಡಲಾಗುತ್ತದೆ. ಇದು ಎರಡು ಅಥವಾ ಹೆಚ್ಚಿನ ಪಕ್ಷಗಳ ವಿಲೀನದ ಸಂದರ್ಭದಲ್ಲಿ ಅಥವಾ ಪಕ್ಷದಲ್ಲಿ ವಿಭಜನೆಯ ಸಂದರ್ಭದಲ್ಲಿ ಅನ್ವಯಿಸಬಹುದಾದ ನಿಯಮಗಳನ್ನೂ ಹೊಂದಿದೆ.

      ವಿಲೀನ, ವಿಭಜನೆಯಾದ ಸಂದರ್ಭದಲ್ಲಿ ಕೆಲವು ಚಿಹ್ನೆಗಳು ಹೊಸದಾಗಿ ಬರುತ್ತದೆ, ಇನ್ನು ಕೆಲವು ಅಳಿಸಿ ಹೋಗುತ್ತದೆ. ಪ್ರಸ್ತುತ ಇರುವ ಚಿಹ್ನೆಗಳು ಹುಟ್ಟಿಕೊಳ್ಳುವುದರ ಹಿಂದೆ ಬಹು ದೊಡ್ಡ ಕಥೆಯೇ ಇದೆ.


      ಕಾಂಗ್ರೆಸ್ ನ ಕೈ

      ಕಾಂಗ್ರೆಸ್ ಪ್ರಾರಂಭದಲ್ಲಿ ಚುನಾವಣಾ ಚಿಹ್ನೆಯಾಗಿ ನೊಗ ಹಿಡಿದ ಎತ್ತುಗಳನ್ನು ಹೊಂದಿತ್ತು. ಜವಾಹರಲಾಲ್ ನೆಹರು, 1969ರಲ್ಲಿ ಇಂದಿರಾ ಗಾಂಧಿ ಅವರೂ ಜೋಡಿ ಎತ್ತಿನ ಚಿಹ್ನೆಯನ್ನು ಹೊಂದಿದ್ದರು. 1969ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಸ್. ನಿಜಲಿಂಗಪ್ಪ ಅವರು ಪಕ್ಷದಿಂದ ಹೊರಹೋದಾಗ ಕಾಂಗ್ರೆಸ್ ವಿಭಜನೆಯಾಯಿತು. ಈ ಸಂದರ್ಭದಲ್ಲಿ ಚುನಾವಣಾ ಚಿನ್ಹೆಯಾಗಿದ್ದ ಜೋಡಿ ಎತ್ತುಗಳ ಬಗ್ಗೆ ವಿವಾದ ಉಂಟಾಯಿತು. ಇಂದಿರಾ ಗಾಂಧಿಯವರ ಬಣಕ್ಕೆ ಹಸು, ಕರು ಚಿಹ್ನೆಯನ್ನು ನೀಡಲಾಯಿತು. ಇದಕ್ಕೂ ಆಕ್ಷೇಪಣೆ ವ್ಯಕ್ತವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

      ತುರ್ತುಪರಿಸ್ಥಿತಿಯ ಬಳಿಕ ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಪಕ್ಷದ ಕೈಯಲ್ಲಿ ಸೋಲು ಅನುಭವಿಸಿದ ಇಂದಿರಾ ಗಾಂಧಿ ಅವರು ಮರಳಿ ಅಧಿಕಾರಕ್ಕೆ ಬರಲು ಪ್ರಯತ್ನಿಸಿದರು. ತಮ್ಮ ಅಧೀನದಲ್ಲಿರುವ ಪಕ್ಷ ನಿಜವಾದ ಕಾಂಗ್ರೆಸ್ ಎಂದು ಹೇಳಿ ಕಾಂಗ್ರೆಸ್ (ಇಂದಿರಾ) ರಚನೆಯನ್ನು ಘೋಷಿಸಿದರು. 1979ರವರೆಗೆ ಇದ್ದ ಹಸುಕರು ಚಿಹ್ನೆಯನ್ನು ಫ್ರೀಜ್ ಮಾಡಲಾಯಿತು. ಚುನಾವಣಾ ಆಯೋಗವು ಹಲವಾರು ಚಿಹ್ನೆಗಳ ನಡುವೆ ಆಯ್ಕೆಯನ್ನು ನೀಡಿತು. ಅದರಲ್ಲಿ ಕಲ್ಲೇಕುಳಂಗರದ ಕೈಪತಿ ದೇವಸ್ಥಾನ ಅಥವಾ ಕೈ ದೇವಸ್ಥಾನದ ಕಥೆಯು ಇಂದಿರಾ ಗಾಂಧಿಯವರಿಗೆ ‘ಕೈ’ ಚಿಹ್ನೆಯನ್ನು ಪಡೆಯಲು ಪ್ರೇರೇಪಿಸಿತು ಎನ್ನಲಾಗಿದೆ.

      ಭಾರತೀಯ ಜನತಾ ಪಕ್ಷ

      1980ರಲ್ಲಿ ಬಿಜೆಪಿ ಜನಸಂಘದಿಂದ ಹುಟ್ಟಿಕೊಂಡಿತ್ತು. 1977ರಲ್ಲಿ ಜನ ಸಂಘವು ಜನತಾ ಪಕ್ಷದೊಂದಿಗೆ ವಿಲೀನಗೊಂಡು ಕೇಂದ್ರ ಸರ್ಕಾರವನ್ನು ರಚಿಸಿತ್ತು. ಭಾರತದ ಮೊದಲ ಸಾರ್ವತ್ರಿಕ ಚುನಾವಣೆ ವೇಳೆ ಭಾರತೀಯ ಜನಸಂಘದ ಚುನಾವಣಾ ಚಿಹ್ನೆ 1977ರ ತನಕ ಎಣ್ಣೆ ದೀಪವಾಗಿತ್ತು. ಬಳಿಕ ಅದು ನೊಗ ಹಿಡಿದ ರೈತನನ್ನು ತನ್ನ ಚಿಹ್ನೆಯಾಗಿ ಬಳಸಿತ್ತು. 1980ರಲ್ಲಿ ಜನತಾ ಪಕ್ಷ ದಿಂದ ಹೊರಬಂದ ಜನಸಂಘ ನಾಯಕರು ಭಾರತೀಯ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಕಟ್ಟಿ ಅದಕ್ಕೆ ಕಮಲದ ಹೂವು ಚುನಾವಣಾ ಚಿಹ್ನೆಯಾಗಿ ಪಡೆದರು.

      ಇದಕ್ಕೆ ಸ್ಫೂರ್ತಿಯಾಗಿದ್ದು 1980ರಲ್ಲಿ ಅಟಲ್ ಬಿಹಾರಿ ವಾಜಪೇಯಿಯವರು ಮುಂಬಯಿಯಲ್ಲಿ ರ್ಯಾಲಿ ನಡೆಸುತ್ತಿದ್ದಾಗ ಕಾಂಗ್ರೆಸ್ ವಿರುದ್ಧ ಮಾತನಾಡುತ್ತ “ಅಂಧೇರಾ ಚಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ” ಎಂದು ಹೇಳಿದ್ದರು. 1980ರ ಏಪ್ರಿಲ್ 6ರಂದು ಭಾರತೀಯ ಜನತಾ ಪಕ್ಷದ ರಚನೆಯ ವೇಳೆ ವಾಜಪೇಯಿಯವರ ಕಮಲದ ಚಿಹ್ನೆಯ ಆಯ್ಕೆಯು ಹೊಸ ಪಕ್ಷದ ರಾಷ್ಟ್ರೀಯತಾವಾದಿ ಸಿದ್ಧಾಂತಗಳಿಗೆ ಹೊಂದಿಕೆಯಾಯಿತು. ಹೀಗಾಗಿ ಕಮಲ ಬಿಜೆಪಿಯ ಚಿಹ್ನೆಯಾಯಿತು.

      ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

      ಪ್ರಾರಂಭದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯು ಕತ್ತಿ (ಕುಡುಗೋಲು) ಸುತ್ತಿಗೆ ನಕ್ಷತ್ರಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಿಕೊಂಡಿತ್ತು. 1964ರ ಬಳಿಕ ಐದು-ಬಿಂದುಗಳ ನಕ್ಷತ್ರವನ್ನು ಸೇರಿಸಲಾಯಿತು. ಬಳಿಕ ವಿಭಜನೆಯಾಗಿ ಸಿಪಿಐ (ಎಂ), ಸಿಪಿಐ (ಎಡ) ಪಕ್ಷಗಳು ಹುಟ್ಟಿಕೊಂಡವು. ಆಂಧ್ರಪ್ರದೇಶ, ಕೇರಳ ಮತ್ತು ಪಶ್ಚಿಮ ಬಂಗಾಳದ ಲ್ಲಿ ಮಾತ್ರ ಸ್ಥಾನಗಳನ್ನು ಪಡೆದಿರುವ ಸಿಪಿಐ ಪಕ್ಷಕ್ಕೆ 1964ರಲ್ಲಿ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲಾಯಿತು. ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ (ಮಾರ್ಕ್ಸ್‌ವಾದಿ)ಯ ಚುನಾವಣಾ ಚಿಹ್ನೆ ಕತ್ತಿ ಮತ್ತು ಜೋಳದ ತೆನೆಯಾಗಿತ್ತು.


      ಬಹುಜನ ಸಮಾಜ ಪಕ್ಷ

      1984ರಲ್ಲಿ ಹುಟ್ಟಿಕೊಂಡ ಬಹುಜನ ಸಮಾಜ ಪಕ್ಷ (BSP) 1988ರ ಅಲಹಾಬಾದ್ ಉಪ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸಿತ್ತು. ಬಿಎಸ್‌ಪಿಯ ಸಂಸ್ಥಾಪಕ ಕಾನ್ಶಿ ರಾಮ್ ಅವರು ಪ್ರಚಾರದ ವೇಳೆ ಆನೆಯ ಮೇಲೆ ನೀಲಿ ಧ್ವಜದ ಚಿಹ್ನೆಯನ್ನು ಬಳಸಿಕೊಂಡರು. ಹಿಂದೂ ಮತ್ತು ಬೌದ್ಧ ಧರ್ಮದಲ್ಲಿ ಪ್ರಾಮುಖ್ಯತೆಯನ್ನು ಹೊಂದಿರುವ ‘ಆನೆ’ ಚಿಹ್ನೆಯು ಕಾನ್ಶಿರಾಮ್‌ಗೆ ಹೆಚ್ಚಿನ ಬಲ ತುಂಬಿತ್ತು. ಬಿಎಸ್ಪಿಯ ‘ಆನೆ’ ಭಾರತದಲ್ಲಿ ಕೆಲವು ಪ್ರಾಣಿ ಆಧಾರಿತ ಚುನಾವಣಾ ಚಿಹ್ನೆಗಳಲ್ಲಿ ಒಂದಾಗಿದೆ. ಯಾಕೆಂದರೆ ಚುನಾವಣಾ ಆಯೋಗವು ಈಗ ಹೊಸದಾಗಿ ಪ್ರಾಣಿಗಳ ಚಿಹ್ನೆಗಳನ್ನು ನೀಡುವುದನ್ನು ನಿಲ್ಲಿಸಿದೆ.

      ಆಮ್ ಆದ್ಮಿ ಪಕ್ಷ

      2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಹುಟ್ಟಿಕೊಂಡ ಸಂಘಟನೆ ಇದು. ಅರವಿಂದ್ ಕೇಜ್ರಿವಾಲ್ ಅವರು 2012ರಲ್ಲಿ ಆಮ್ ಆದ್ಮಿ ಪಕ್ಷವನ್ನು ರಚಿಸಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರು. ‘ಪೊರಕೆ’ಯ ಇದರ ಚುನಾವಣಾ ಚಿಹ್ನೆಯಾಗಿದೆ. ಚುನಾವಣಾ ಆಯೋಗಕ್ಕೆ ಪಕ್ಷವು ಸಲ್ಲಿಸಿದ ಮೂರು ಚಿಹ್ನೆಗಳಲ್ಲಿ ‘ಮೇಣದಬತ್ತಿ’ ಮತ್ತು ‘ಟ್ಯಾಪ್’ ಕೂಡ ಇತ್ತು.

      ಪೊರಕೆಯ ಚಿಹ್ನೆ ಕಾರ್ಮಿಕರ ಘನತೆಗಾಗಿ ಮಾತ್ರವಲ್ಲ, ನಮ್ಮ ಸರ್ಕಾರ ಮತ್ತು ನಮ್ಮ ಶಾಸಕಾಂಗವನ್ನು ವ್ಯಾಪಿಸಿರುವ ಕೊಳೆಯನ್ನು ಸ್ವಚ್ಛಗೊಳಿಸುವ ಪಕ್ಷದ ಆಶಯವನ್ನು ಪ್ರತಿನಿಧಿಸುತ್ತದೆ ಎನ್ನುತ್ತಾರೆ ಪಕ್ಷದ ಮುಖಂಡರು.

      ನ್ಯಾಷನಲ್ ಪೀಪಲ್ಸ್ ಪಾರ್ಟಿ

      ಭಾರತದಲ್ಲಿನ ಆರು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಅನ್ನು 2013ರಲ್ಲಿ ಸ್ಥಾಪಿಸಲಾಯಿತು. ಅದರ ಸಂಸ್ಥಾಪಕ ಮಾಜಿ ಮೇಘಾಲಯ ಮುಖ್ಯಮಂತ್ರಿ ಪಿ.ಎ. ಸಂಗ್ಮಾ ಅವರನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

      ಪುಸ್ತಕವನ್ನು ಪಕ್ಷದ ಚಿಹ್ನೆಯಾಗಿ ಮಾಡಿಕೊಂಡ ಅವರು ಸಾಕ್ಷರತೆ ಮತ್ತು ಶಿಕ್ಷಣವು ದುರ್ಬಲ ವರ್ಗದವರನ್ನು ಸಬಲೀಕರಣಗೊಳಿಸುತ್ತದೆ ಎಂದು ನಂಬುವುದಾಗಿ ಹೇಳಿ ಶಿಕ್ಷಣಕ್ಕೆ ಒತ್ತು ನೀಡುವ ಭರವಸೆ ನೀಡಿದ್ದರು.

      ವಿವಿಧ ಪಕ್ಷಗಳಿಗೆ ಒಂದೇ ಚಿಹ್ನೆಗಳು

      ಇನ್ನು ರಾಜ್ಯ ಮಟ್ಟದಲ್ಲಿ ಒಂದೇ ಚುನಾವಣಾ ಚಿಹ್ನೆಯನ್ನು ಪಡೆದು ಬೇರೆಬೇರೆ ಪಕ್ಷಗಳಿಂದಲೂ ಅಭ್ಯರ್ಥಿಗಳು ಕಣಕ್ಕೆ ಇಳಿದಿರುವ ಇತಿಹಾಸವೂ ಇದೆ. ಒಂದೇ ಕ್ಷೇತ್ರದಿಂದ ಪರಸ್ಪರರ ವಿರುದ್ಧ ಸ್ಪರ್ಧಿಸುವುದಿಲ್ಲವೋ ಅಲ್ಲಿಯವರೆಗೆ ಅದು ಸಾಮಾನ್ಯವಾಗಿ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. ಆದರೆ ಪಕ್ಷಗಳು ತನ್ನ ಕಾಯ್ದಿರಿಸಿದ ಚಿಹ್ನೆಯಡಿ ಬೇರೆಯವರಿಗೆ ಸ್ಪರ್ಧಿಸಲು ಅನುಮತಿಸುವುದಿಲ್ಲ ಎಂಬ ಷರತ್ತು ವಿಧಿಸುತ್ತದೆ.

      ಬೈಸಿಕಲ್ ಗಾಗಿ ಸ್ಪರ್ಧೆ

      ಭಾರತೀಯ ರಾಜಕೀಯ ಇತಿಹಾಸದಲ್ಲಿ ಬೈಸಿಕಲ್ ತೀವ್ರ ಪೈಪೋಟಿಯ ಸಂಕೇತವಾಗಿದೆ. ಎನ್.ಟಿ. ರಾಮರಾವ್ ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಮುಲಾಯಂ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಡುವೆ ಬೈಸಿಕಲ್ ಗಾಗಿ ಪೈಪೋಟಿ ಏರ್ಪಟ್ಟಿತ್ತು.

      1982ರಲ್ಲಿ ಸ್ಥಾಪನೆಯಾದ ಟಿಡಿಪಿಯಿಂದ 1995ರಲ್ಲಿ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಅಧಿಕಾರ ವಹಿಸಿಕೊಂಡಾಗ ಟಿಡಿಪಿಯನ್ನು ಅದರ ‘ಬೈಸಿಕಲ್ ಚಿಹ್ನೆ’ಯೊಂದಿಗೆ ಪಡೆದರು.
      ಸುಮಾರು ಒಂದು ದಶಕದ ಅನಂತರ ಸಮಾಜವಾದಿ ಪಕ್ಷದ ರಚನೆಯಾಗಿ ಮುಲಾಯಂ ಸಿಂಗ್ ಯಾದವ್ ಅವರ ಮಗ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಮುಲಾಯಂ ಅವರ ಸಹೋದರ ಶಿವಪಾಲ್ ಯಾದವ್ ನಡುವೆ ಕಲಹ ಉಂಟಾಗಿ ಪಕ್ಷ ಮತ್ತು ಅದರ ಚಿಹ್ನೆಯ ಮೇಲೆ ಅಧಿಕಾರವನ್ನು 2017ರಲ್ಲಿ ಅಖಿಲೇಶ್‌ಗೆ ನೀಡಲಾಯಿತು.


      ಬಿಲ್ಲು ಮತ್ತು ಬಾಣ

      ಪ್ರಸ್ತುತ ಸ್ಪರ್ಧೆಯಲ್ಲಿರುವ ಮತ್ತೊಂದು ಚಿಹ್ನೆ ಮಹಾರಾಷ್ಟ್ರದಲ್ಲಿ ‘ಬಿಲ್ಲು ಮತ್ತು ಬಾಣ’. ಏಕನಾಥ್ ಶಿಂಧೆ ನೇತೃತ್ವದ “ನೈಜ” ಶಿವಸೇನೆಗೆ ಹಂಚಲ್ಪಟ್ಟ ಈ ಚಿಹ್ನೆಯನ್ನು ಮೊದಲು 1989ರಲ್ಲಿ ಬಾಳ್ ಠಾಕ್ರೆ ಅವರು ಬಳಸಿದ್ದರು.

      1972ರಲ್ಲಿ ರಚಿಸಲಾದ ಜಾರ್ಖಂಡ್ ಮುಕ್ತಿ ಮೋರ್ಚಾ ಜಾರ್ಖಂಡ್‌ನಲ್ಲಿ ಅದೇ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಬಳಸುತ್ತದೆ. ಬಿಹಾರದ ಜನತಾ ದಳ (ಯುನೈಟೆಡ್) ಪಕ್ಷದ ಚಿಹ್ನೆಯು ‘ಬಾಣ’ವಾಗಿದೆ. 2019 ರಲ್ಲಿ ಚುನಾವಣಾ ಆಯೋಗವು ಮಹಾರಾಷ್ಟ್ರ ಅಥವಾ ಜಾರ್ಖಂಡ್‌ನಲ್ಲಿ ಈ ಚಿಹ್ನೆಯನ್ನು ಬಳಸಲು ಅನುಮತಿಸುವುದಿಲ್ಲ ಎಂದು ಘೋಷಿಸಿತು. .

      Continue Reading

      Lok Sabha Election 2024

      ವಿಸ್ತಾರ explainer: VVPAT Verification: ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

      VVPAT Verification: ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ.

      VISTARANEWS.COM


      on

      evm vvpat verification lok sbha election 2024
      Koo

      ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

      ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

      ಇವಿಎಂ ಕೆಲಸ ಮಾಡುವುದು ಹೇಗೆ?

      EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

      ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

      ಮತದಾನ ಪ್ರಕ್ರಿಯೆ

      ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

      ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

      VVPAT ಎಂದರೇನು?

      VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

      ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

      ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

      ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

      ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

      Continue Reading
      Advertisement
      Pushpa The Rule first single on May 1
      ಟಾಲಿವುಡ್11 mins ago

      Pushpa The Rule: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ʻಪುಷ್ಪ 2ʼ: ಮೇ 1ಕ್ಕೆ ತಂಡದಿಂದ ಗುಡ್‌ ನ್ಯೂಸ್‌!

      actress amulya father in law election officers ride
      ಕ್ರೈಂ17 mins ago

      Election Officer Raid: ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ

      Rahul Gandhi
      ದೇಶ20 mins ago

      Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

      IPL 2024
      ಕ್ರೀಡೆ30 mins ago

      IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

      Amitabh Bachchan, AR Rahman honoured with Deenanath Mangeshkar award
      ಸಿನಿಮಾ41 mins ago

      Amitabh Bachchan: ಅಮಿತಾಭ್‌ ಬಚ್ಚನ್, ಎ ಆರ್ ರೆಹಮಾನ್‌ ಸೇರಿ ಹಲವರಿಗೆ ʻದೀನನಾಥ್ ಮಂಗೇಶ್ಕರ್ ಪ್ರಶಸ್ತಿʼ ಗೌರವ

      Lok Sabha Election
      ಕರ್ನಾಟಕ54 mins ago

      Lok Sabha Election: ಕರ್ನಾಟಕ ಸೇರಿ 13 ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ; ಪಿನ್‌ ಟು ಪಿನ್‌ ಮಾಹಿತಿ ಇಲ್ಲಿದೆ

      Subramanya Dhareshwar
      ಶ್ರದ್ಧಾಂಜಲಿ54 mins ago

      Subramanya Dhareshwar: ಜೇನುದನಿಯ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

      IPL 2024 Points Table
      ಕ್ರೀಡೆ57 mins ago

      IPL 2024 Points Table: ಡೆಲ್ಲಿ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

      road accident tumkur news
      ತುಮಕೂರು1 hour ago

      Road Accident: ದ್ರಾಕ್ಷಿ ತುಂಬಿಕೊಂಡು ಬರುತ್ತಿದ್ದ ಬೊಲೆರೋ ಲಾರಿಗೆ ಡಿಕ್ಕಿ, ಇಬ್ಬರು ಸಾವು

      karnataka CET Exam 2024
      ಪ್ರಮುಖ ಸುದ್ದಿ2 hours ago

      JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

      Sharmitha Gowda in bikini
      ಕಿರುತೆರೆ7 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ6 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ6 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      galipata neetu
      ಕಿರುತೆರೆ5 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ7 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      Kannada Serials
      ಕಿರುತೆರೆ7 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ6 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ4 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      varun
      ಕಿರುತೆರೆ5 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      Kannada Serials
      ಕಿರುತೆರೆ7 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      Dina Bhavishya
      ಭವಿಷ್ಯ1 day ago

      Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

      Dina Bhavishya
      ಭವಿಷ್ಯ2 days ago

      Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

      Bengaluru karaga 2024
      ಬೆಂಗಳೂರು3 days ago

      Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

      Murder Case in yadagiri rakesh and fayas
      ಯಾದಗಿರಿ3 days ago

      Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

      bomb Threat case in Bengaluru
      ಬೆಂಗಳೂರು3 days ago

      Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

      CET Exam 2024
      ಬೆಂಗಳೂರು3 days ago

      CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

      Dina Bhavishya
      ಭವಿಷ್ಯ3 days ago

      Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

      Dina Bhavishya
      ಭವಿಷ್ಯ4 days ago

      Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

      Modi in Karnataka Congress snatches Rs 4000 under Kisan Samman says PM Narendra Modi
      ಪ್ರಮುಖ ಸುದ್ದಿ5 days ago

      Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

      Modi in Karnataka HD Deve Gowda attack on Congess
      Lok Sabha Election 20245 days ago

      Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

      ಟ್ರೆಂಡಿಂಗ್‌